Tag: ಅಪಹರಣ

  • ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿ ಕಿಡ್ನ್ಯಾಪ್ – ನಿರ್ದೇಶಕ ನಂದಕಿಶೋರ್‌ಗೆ ಹಣ ಕೊಡಿಸಿದ್ದ ರೌಡಿಶೀಟರ್‌

    ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿ ಕಿಡ್ನ್ಯಾಪ್ – ನಿರ್ದೇಶಕ ನಂದಕಿಶೋರ್‌ಗೆ ಹಣ ಕೊಡಿಸಿದ್ದ ರೌಡಿಶೀಟರ್‌

    ಬೆಂಗಳೂರು: ನಿದೇರ್ಶಕ ನಂದಕಿಶೋರ್‌ಗೆ (Nanda Kishore) ಕೊಟ್ಟಿದ್ದ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯೊಬ್ಬನನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ನಡೆದಿದೆ.

    ಮನೋಜ್ (28) ಕಿಡ್ನ್ಯಾಪ್ ಆದ ಉದ್ಯಮಿ. ಈತನನ್ನು ಕಿಡ್ನ್ಯಾಪ್ ಮಾಡಿ ರೌಡಿಶೀಟರ್‌ಗಳು ಲಕ್ಷಗಟ್ಟಲೆ ಹಣ ಕಿತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಭೋವಿ ನಿಗಮದ ಅಕ್ರಮ; ಕಾಂಗ್ರೆಸ್ ಸರ್ಕಾರದ 60% ಕಮಿಷನ್‌ಗೆ ಸಾಕ್ಷಿ – ಜೆಡಿಎಸ್ ಕಿಡಿ

    ಉದ್ಯಮಿಗೆ ರೌಡಿಶೀಟರ್ ರಾಜೇಶ್ @ ಅಪ್ಪಿ ಪರಿಚಯವಿದ್ದ. ಒಂದು ವರ್ಷದ ಹಿಂದೆ ನಿರ್ದೇಶಕ ನಂದಕಿಶೋರ್‌ಗೆ ರೌಡಿ ರಾಜೇಶ್ ಸಾಲ ಕೊಡಿಸಿದ್ದ. ಮನೋಜ್‌ನಿಂದ ನಂದಕಿಶೋರ್‌ಗೆ 1.20 ಲಕ್ಷ ಸಾಲ ಕೊಡಿಸಿದ್ದ. ನಿರ್ದೇಶಕನಿಂದ ಅಸಲು ಮತ್ತು ಬಡ್ಡಿ ಬರದೇ ಮನೋಜ್ ನೊಂದಿದ್ದ.

    ಹಣ ಕೊಡಿಸಿದ್ದು ನೀನೆ, ಸಾಲ ವಾಪಸ್ ಕೊಡಿಸು ಅಂತಾ ರೌಡಿ ರಾಜೇಶನ ಬೆನ್ನು ಬಿದ್ದಿದ್ದ. ಗೌರಿ ಹಬ್ಬದ ದಿನ ನಂದಕಿಶೋರ್ ಮನೆ ಬಳಿ ಬಾ ಹಣ ಕೊಡಿಸ್ತೀನಿ ಅಂತಾ ಮನೋಜ್‌ನ ರೌಡಿಶೀಟರ್ ಕರೆಸಿದ್ದ. ಹಣ ಕೊಡಿಸೋದಾಗಿ ಕರೆಸಿ ಬಸವೇಶ್ವರನಗರದ ನಂದಕಿಶೋರ್ ಹಳೆಯ ಅಪಾರ್ಟ್ಮೆಂಟ್ ಬಳಿಯಿಂದ ಕಿಡ್ನ್ಯಾಪ್ ಮಾಡಿಸಿದ್ದಾನೆ. ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಅಪಘಾತ – ಕೋಲಾರ ಮೂಲದ ಬಾಡಿ ಬಿಲ್ಡರ್ ದುರ್ಮರಣ

    ರೌಡಿಗಳಾದ ರಾಜೇಶ್, ಬೇಕರಿ ರಘು, ಅಣ್ಣ ಸೀನ @ ಶ್ರೀನಿವಾಸ್, ಲೋಕಿ, ಸೋಮ, ರಾಜೇಶ್ ಮತ್ತು ನವೀನ್ ಸೇರಿಕೊಂಡು ಕಿಡ್ನ್ಯಾಪ್ ಮಾಡಿದ್ದರು. ಅಪಹರಣ ಮಾಡಿ 3 ಲಕ್ಷ ಹಣ ವರ್ಗಾವಣೆ ಮಾಡಿಸಿಕೊಂಡಿದ್ದರು. ಅಲ್ಲದೇ, 10 ಲಕ್ಷ ನೀಡದಿದ್ರೆ ಮನೋಜ್ ಕುಟುಂಬಸ್ಥರ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾರೆ.

    ಹಣ ಹೊಂದಿಸುವುದಾಗಿ ಹೇಳಿ ಬಿಡಿಸಿಕೊಂಡು ಬಂದು ಮನೋಜ್ ದೂರು ನೀಡಿದ್ದಾರೆ. ಮನೋಜ್ ದೂರಿನ ಆಧಾರದ ಸಿಸಿಬಿಯಿಂದ 6 ರೌಡಿಗಳ ಬಂಧನವಾಗಿದೆ.

  • ರಾಜ್‌ಕುಮಾರ್ ಕಿಡ್ನಾಪ್ ವೇಳೆ ಸ್ಯಾಟ್‌ಲೈಟ್ ಫೋನ್‌ನಿಂದ ವೀರಪ್ಪನ್ ಜೊತೆ ಮಾತನಾಡಿದ್ದ ಎಸ್‌ಎಂಕೆ

    ರಾಜ್‌ಕುಮಾರ್ ಕಿಡ್ನಾಪ್ ವೇಳೆ ಸ್ಯಾಟ್‌ಲೈಟ್ ಫೋನ್‌ನಿಂದ ವೀರಪ್ಪನ್ ಜೊತೆ ಮಾತನಾಡಿದ್ದ ಎಸ್‌ಎಂಕೆ

    ಚಾಮರಾಜನಗರ: ಮೇರುನಟ ಡಾ.ರಾಜ್‌ಕುಮಾರ್ (Rajkumar) ಅವರು ಕಾಡುಗಳ್ಳ ವೀರಪ್ಪನ್‌ನಿಂದ ಅಪಹರಣವಾದಾಗ ಎಸ್‌ಎಂ ಕೃಷ್ಣ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ರಾಜ್‌ಕುಮಾರ್ ಬಿಡುಗಡೆಗೊಳಿಸಲು ಸ್ಯಾಟ್‌ಲೈಟ್ ಫೋನ್ ಮೂಲಕ ವೀರಪ್ಪನ್ ಜೊತೆ ಎಸ್‌ಎಂಕೆ (SM Krishna) ಮಾತನಾಡಿದ್ದರು.

    ರಾಜ್‌ಕುಮಾರ್ ಅಪಹರಣ ಪ್ರಕರಣ ಎಸ್‌ಎಂ ಕೃಷ್ಣ ಅವರಿಗೆ ತಮ್ಮ ಅಧಿಕಾರವಧಿಯಲ್ಲಿ 108 ದಿನಗಳ ಕಾಲ ಹೈರಾಣು ಮಾಡಿತ್ತು. ಜೊತೆಗೆ ಇದು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಆದರೂ ಎಸ್‌ಎಂ ಕೃಷ್ಣ ಅವರು ಧೃತಿಗೆಡದೆ ಜಾಣ್ಮೆಯಿಂದ ಪರಿಸ್ಥಿತಿಯನ್ನು ನಿಭಾಯಿಸಿದ್ದರು. ಕಾಡುಗಳ್ಳ ವೀರಪ್ಪನ್ ಜೊತೆ ಸ್ಯಾಟ್‌ಲೈಟ್ ಫೋನ್ ಮೂಲಕ ಮಾತನಾಡಿ ಮನವೊಲಿಸಿ, ಆತನ ಕಪಿಮುಷ್ಟಿಯಿಂದ ರಾಜ್‌ಕುಮಾರ್ ಅವರನ್ನು ಬಿಡಿಸುವಲ್ಲಿ ಯಶಸ್ವಿಯಾಗಿದ್ದರು.ಇದನ್ನೂ ಓದಿ: ಎಸ್‌ಎಂ ಕೃಷ್ಣ ವಿಧಿವಶ – ಬುಧವಾರ ರಾಮನಗರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

    ಹೌದು, 2000ರ ಜು.30 ರಂದು ರಾತ್ರಿ ಸುಮಾರು 9 ಗಂಟೆ ವೇಳೆಗೆ ಚಾಮರಾಜನಗರ ಜಿಲ್ಲೆ ಗಡಿಭಾಗದ ತಮಿಳುನಾಡಿನ ದೊಡ್ಡ ಗಾಜನೂರಿನಿಂದ ಮೇರುನಟ ಡಾ.ರಾಜ್‌ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಣ ಮಾಡಿದ್ದನು. ಈ ವೇಳೆ ಪಾರ್ವತಮ್ಮ ಅವರು ರಾಜ್‌ಕುಮಾರ್ ಜೊತೆಗಿದ್ದರು. ಅಪಹರಣ ಮಾಡುವಾಗ ಆಡಿಯೋ ಕ್ಯಾಸೆಟ್‌ವೊಂದನ್ನು ಕೊಟ್ಟು, ಅದನ್ನು ಎಸ್‌ಎಂ ಕೃಷ್ಣ ಅವರಿಗೆ ತಲುಪಿಸುವಂತೆ ಹೇಳಿದ್ದನು.

    ಅಂದು ರಾತ್ರಿಯೇ ಪಾರ್ವತಮ್ಮ ಚಾಮರಾಜನಗರಕ್ಕೆ ಬಂದು ಎಸ್.ಎಂ.ಕೃಷ್ಣ ಅವರಿಗೆ ದೂರವಾಣಿ ಕರೆ ಮಾಡಿ ಅಪಹರಣದ ಸುದ್ದಿ ತಿಳಿಸಿದ್ದರು. ಜೊತೆಗೆ ಆ ದಿನ ಮಧ್ಯರಾತ್ರಿ ಬೆಂಗಳೂರಿಗೆ ತೆರಳಿ ಎಸ್‌ಎಂಕೆಗೆ ಆಡಿಯೋ ಕ್ಯಾಸೆಟ್‌ನ್ನು ಕೂಡ ನೀಡಿದ್ದರು. ಕ್ಯಾಸೆಟ್‌ನಲ್ಲಿ ತಮಿಳುನಾಡಿಗೆ ಇಂತಿಷ್ಟೇ ಕಾವೇರಿ ನೀರು ಬಿಡುಗಡೆ ಮಾಡಬೇಕು ಹಾಗೂ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ವೀರಪ್ಪನ್ ಒತ್ತಾಯಿಸಿದ್ದನು.

    ಕಾವೇರಿ ವಿವಾದ, ಭೀಕರ ಬರಗಾಲದಂತಹ ಸಮಸ್ಯೆ ಎದುರಿಸುತ್ತಿದ್ದ ಎಸ್.ಎಂ.ಕೃಷ್ಣ ನೇತೃತ್ವದ ಸರ್ಕಾರಕ್ಕೆ ಡಾ.ರಾಜ್‌ಕುಮಾರ್ ಅಪಹರಣ ಪ್ರಕರಣ ಬರಸಿಡಿಲಿನಂತೆ ಎರಗಿತ್ತು. ಒಂದೆಡೆ ಇಡೀ ರಾಜ್ಯ ಹೊತ್ತಿ ಉರಿಯತೊಡಗಿತ್ತು. ಇನ್ನೊಂದೆಡೆ ವೀರಪ್ಪನ್ ಬೇಡಿಕೆಗಳನ್ನು ಈಡೇರಿಸಿ ರಾಜ್‌ಕುಮಾರ್ ಅವರನ್ನು ಜೀವಂತವಾಗಿ ಕರೆತರುವ ಸವಾಲು ಎಸ್‌ಎಂ ಕೃಷ್ಣ ಅವರಿಗೆ ಎದುರಾಗಿತ್ತು.

    ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿದ ಎಸ್‌ಎಂ ಕೃಷ್ಣ ರಾಜ್‌ಕುಮಾರ್ ಬಿಡುಗಡೆಗೆ ಹಲವು ರೀತಿಯಲ್ಲಿ ಪ್ರಯತ್ನಿಸಿದರು. ವೀರಪ್ಪನ್ ಬಳಿಗೆ ಸಂಧಾನಕಾರರನ್ನು ಕಳುಹಿಸಿದ ಎಸ್‌ಎಂ ಕೃಷ್ಣ ವೀರಪ್ಪನ್ ಜೊತೆ ಸ್ಯಾಟ್‌ಲೈಟ್ ಫೋನ್‌ನಲ್ಲಿ ಮಾತನಾಡಿ ವೀರಪ್ಪನ್ ಕಪಿಮುಷ್ಟಿಯಿಂದ ಡಾ.ರಾಜ್‌ಕುಮಾರ್ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದರು. ಆಗ ಇಡೀ ಕರ್ನಾಟಕ ನಿಟ್ಟುಸಿರು ಬಿಟ್ಟಿತ್ತು.ಇದನ್ನೂ ಓದಿ: ಭಾಗ-1 | ಶಾಸಕನಿಂದ ಮುಖ್ಯಮಂತ್ರಿವರೆಗೆ…. ಎಸ್‌ಎಂಕೆ ರಾಜಕೀಯ ಜೀವನದ ಏಳುಬೀಳು!

  • ಕಿಡ್ನ್ಯಾಪ್ ಆಗಿದ್ದ ಇಬ್ಬರಲ್ಲಿ ಓರ್ವ ಯೋಧ ಶವವಾಗಿ ಪತ್ತೆ – ಗುಂಡಿಕ್ಕಿ ಹತ್ಯೆಗೈದಿರುವ ಶಂಕೆ

    ಕಿಡ್ನ್ಯಾಪ್ ಆಗಿದ್ದ ಇಬ್ಬರಲ್ಲಿ ಓರ್ವ ಯೋಧ ಶವವಾಗಿ ಪತ್ತೆ – ಗುಂಡಿಕ್ಕಿ ಹತ್ಯೆಗೈದಿರುವ ಶಂಕೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಅನಂತ್‌ನಾಗ್ (Anantnag) ಜಿಲ್ಲೆಯಲ್ಲಿ ಉಗ್ರರು (Terrorists) ಅಪಹರಿಸಿದ್ದ ಭಾರತೀಯ ಸೇನೆಯ ಇಬ್ಬರು ಯೋಧರಲ್ಲಿ (Indian Soldiers) ಓರ್ವ ಯೋಧ ಶವವಾಗಿ ಪತ್ತೆಯಾಗಿದ್ದಾರೆ. ಯೋಧನ ಮೈಮೇಲೆ ಗುಂಡು ಹಾರಿಸಿರುವ ಗಾಯದ ಗುರುತುಗಳು ಕಂಡುಬಂದಿದ್ದು, ಗುಂಡಿಕ್ಕಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.

    ಮಂಗಳವಾರ ನಾಪತ್ತೆಯಾಗಿದ್ದ ಟೆರಿಟೋರಿಯಲ್ ಆರ್ಮಿ ಜವಾನ್ ಹಿಲಾಲ್ ಅಹ್ಮದ್ ಭಟ್ ಅವರ ದೇಹವನ್ನು ಅನಂತನಾಗ್‌ನ ಉತ್ರಾಸೂ ಪ್ರದೇಶದ ಸಾಂಗ್ಲಾನ್ ಅರಣ್ಯ ಪ್ರದೇಶದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತದೇಹದಲ್ಲಿ ಗುಂಡು ಮತ್ತು ಚಾಕುವಿನಿಂದ ಚುಚ್ಚಿರುವ ಗುರುತುಗಳು ಪತ್ತೆಯಾಗಿವೆ ಎಂದು ಸೇನಾ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಏಕಾಂಗಿಯಾಗಿ ಸ್ಪರ್ಧಿಸಿದ್ದರಿಂದ ಕಾಂಗ್ರೆಸ್‌ಗೆ ಸೋಲು – ಮೈತ್ರಿ ಪಕ್ಷವನ್ನೇ ಟೀಕಿಸಿದ ಶಿವಸೇನೆ

    ಇನ್ನು ಉಗ್ರರಿಂದ ಅಪಹರಣಕ್ಕೆ ಒಳಗಾದ ಇಬ್ಬರು ಸೈನಿಕರ ಪೈಕಿ ಓರ್ವ ಸೈನಿಕ ಉಗ್ರರ ಹಿಡಿತದಿಂದ ಪಾರಾಗಿ ತಪ್ಪಿಸಿಕೊಂಡು ಬಂದಿದ್ದಾರೆ. ಭದ್ರತಾ ಪಡೆಗಳು ಈ ಭಾಗದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ಆರಂಭ ಮಾಡಿತ್ತು. ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ಮಾಲ್ಡೀವ್ಸ್‌ ಅಧ್ಯಕ್ಷರಿಗೆ ಆತ್ಮೀಯ ಸ್ವಾಗತ

    ಈ ಕುರಿತು ಭದ್ರತಾ ಪಡೆಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಅಪಹರಣವಾಗಿದ್ದ ಇಬ್ಬರು ಸೈನಿಕರು ಟೆರಿಟೋರಿಯಲ್ ಆರ್ಮಿಗೆ ಸೇರಿದ ಯೋಧರು ಎಂದು ಖಚಿತಪಡಿಸಿದೆ. ಈ ಪೈಕಿ ಓರ್ವ ಯೋಧ ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ ಎಂದೂ ಭದ್ರತಾ ಪಡೆಗಳು ಮಾಹಿತಿ ನೀಡಿದೆ. ಈ ಭಾಗದಲ್ಲಿ ಸೇನಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ನಾಪತ್ತೆಯಾಗಿದ್ದ ಮತ್ತೋರ್ವ ಯೋಧನಿಗಾಗಿ ಶೋಧಕಾರ್ಯ ನಡೆಸಿತ್ತು. ಇದನ್ನೂ ಓದಿ: ಆಯುಧ ಪೂಜೆಗೂ ದುಡ್ಡಿಲ್ಲದೆ ದಿವಾಳಿ ಆಯ್ತಾ KSRTC – ಒಂದು ಬಸ್ಸಿಗೆ ತಲಾ 100 ರೂ. ಖರ್ಚು ಮಾಡುವಂತೆ ಸೂಚನೆ

    ಇನ್ನು ಉಗ್ರರ ಗುಂಡಿನ ದಾಳಿಗೆ ಬಲಿಯಾದ ಯೋಧನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: RBI ಬಡ್ಡಿ ದರ ಇಳಿಕೆ ಇಲ್ಲ – ಸತತ 10ನೇ ಬಾರಿಗೆ ಯಥಾಸ್ಥಿತಿ ಮುಂದುವರಿಕೆ

  • ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಆರೋಪಿಗಳು ಸಿಂಧನೂರಿನಲ್ಲಿ ಅರೆಸ್ಟ್ – ನಾಲ್ವರ ರಕ್ಷಣೆ

    ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಆರೋಪಿಗಳು ಸಿಂಧನೂರಿನಲ್ಲಿ ಅರೆಸ್ಟ್ – ನಾಲ್ವರ ರಕ್ಷಣೆ

    ರಾಯಚೂರು: ನಾಲ್ವರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಅಂತರರಾಜ್ಯ ಅಪಹರಣಕಾರರನ್ನು ಜಿಲ್ಲೆಯ ಸಿಂಧನೂರಿನ (Sindhanuru) ಕುನ್ನಟಗಿ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.

    ಕಿಡ್ನಾಪ್ (Kidnap) ಆಗಿದ್ದ ನಾಲ್ವರು ಯುವಕರನ್ನು ಮೂಲತಃ ಮಹಾರಾಷ್ಟ್ರದ (Maharashtra) ಪುಣೆ (Pune) ನಿವಾಸಿಗಳಾದ ಸ್ಟಪನ್ ಭಜರಂಗ ಲಾಂಡೆ, ಶುಭಂ ಭಜರಂಗ ಲಾಂಡೆ, ಕೃಷ್ಣ ಗಜಾನನ ಪಾಂಡ್ರೆ ಹಾಗೂ ಓಂಕಾರ ಗಜಾನನ ಪಾಂಡ್ರೆ ಎಂದು ಗುರುತಿಸಲಾಗಿದೆ. ರಾಮು ಅಪ್ಪರಾಜು, ದತ್ತ ಶಿವಾಜಿ, ಹರ್ಷಕ ಸುರೇಶ ಪಾಟೀಲ್ ಬಂಧಿತ ಅಪಹರಣಕಾರರು.ಇದನ್ನೂ ಓದಿ: ದೆಹಲಿ ಪೊಲೀಸರ ಭರ್ಜರಿ ಬೇಟೆ – 2,000 ಕೋಟಿ ಮೌಲ್ಯದ ಕೊಕೇನ್ ವಶ

    ಮಹಾರಾಷ್ಟ್ರದ ಪುಣೆಯಲ್ಲಿ ನಾಲ್ವರನ್ನು ಅಪಹರಿಸಿ, ಜಿಲ್ಲೆಯ ಸಿಂಧನೂರಿನ ಕುನ್ನಟಗಿ ಗ್ರಾಮದ ಮನೆಯೊಂದರಲ್ಲಿ ಕೂಡಿಡಲಾಗಿತ್ತು. ಅಪಹರಣದ ಮುಖ್ಯ ಆರೋಪಿ ರಾಮು ತನ್ನ ಪತ್ನಿಯ ಸಂಬಂಧಿಕನ ಸಹಾಯದಿಂದ ಅವರನ್ನು ಕುನ್ನಟಗಿ ಗ್ರಾಮದ ಮನೆಯಲ್ಲಿ ಬಂಧಿಸಿದ್ದರು. ಬಳಿಕ ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು, ಅವರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮಹಾರಾಷ್ಟ್ರದ ಪುಣೆ ಹಾಗೂ ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮೊಬೈಲ್ ನೆಟ್‌ವರ್ಕ್ ಆಧರಿಸಿ ಕುನ್ನಟಗಿ ಗ್ರಾಮಕ್ಕೆ ಬಂದಿಳಿದಿದ್ದಾರೆ. ಗ್ರಾಮಕ್ಕೆ ಬಂದ ಪೊಲೀಸರನ್ನು ಕಂಡ ಅಪಹರಣಕಾರರು ಗನ್ ತೋರಿಸಿ ಬೆದರಿಕೆ ಹಾಕಿದ್ದರು. ಚಾಣಾಕ್ಷತನದಿಂದ ಮನೆಯೊಳಗೆ ನುಗ್ಗಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಜೊತೆಗೆ ಅಪಹರಣಕ್ಕೊಳಗಾಗಿದ್ದ ನಾಲ್ವರನ್ನು ರಕ್ಷಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಗನ್, ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಸದ್ಯ ಸಿಂಧನೂರು ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ‘ಪ್ರಾಪ್ತಿ’ ಸಿನಿಮಾ: ವರ್ತಮಾನಕ್ಕೆ ಹಿಡಿದ ಕನ್ನಡಿ

  • Manipur | ಸಚಿವರ ಆಪ್ತ ಸಹಾಯಕನೇ ಕಿಡ್ನ್ಯಾಪ್‌ – ದುಷ್ಕರ್ಮಿಗಳ ಗುಂಪಿಗೆ ತೀವ್ರ ಶೋಧ

    Manipur | ಸಚಿವರ ಆಪ್ತ ಸಹಾಯಕನೇ ಕಿಡ್ನ್ಯಾಪ್‌ – ದುಷ್ಕರ್ಮಿಗಳ ಗುಂಪಿಗೆ ತೀವ್ರ ಶೋಧ

    ಇಂಫಾಲ್‌: ಮಣಿಪುರದ (Manipur0 ಗ್ರಾಹಕ ವ್ಯವಹಾರಗಳ ಸಚಿವ ಎಲ್. ಸುಸಿಂದ್ರೋ ಅವರ ಆಪ್ತ ಸಹಾಯಕರನ್ನು ಇಂಫಾಲ್ ಪೂರ್ವ ಜಿಲ್ಲೆಯ ಅವರ ನಿವಾಸದ ಬಳಿಯೇ ದುಷ್ಕರ್ಮಿಗಳ ಗುಂಪೊಂದು ಅಪಹರಿಸಿದೆ ಎಂದು ಪೊಲೀಸರು (Manipur Police) ತಿಳಿಸಿದ್ದಾರೆ.

    ಎಸ್. ಸೊಮೊರೆಂಡ್ರೊ (43) ಅಪಹರಣವಾಗಿರುವ ವ್ಯಕ್ತಿ, ಘಟನೆ ಹಿಂದಿನ ಉದ್ದೇಶವು ಅಸ್ಪಷ್ಟವಾಗಿದೆ. ಘಟನೆಯ ಹೊಣೆಯನ್ನು ಯಾವುದೇ ಗುಂಪು ಹೊತ್ತುಕೊಂಡಿಲ್ಲ. ದುಷ್ಕರ್ಮಿಗಳ ಗುಂಪಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಇದಕ್ಕೂ ಮುನ್ನ ಗುರುವಾರ ರಾತ್ರಿ ಬಿಷ್ಣುಪುರ ಜಿಲ್ಲೆಯ ಮಾಜಿ ಮುಖ್ಯ ಕಾರ್ಯದರ್ಶಿ ಓಯಿನಮ್ ನಬಕಿಶೋರ್ ಅವರ ನಿವಾಸದ ಮೇಲೂ ಶಸ್ತ್ರಸಜ್ಜಿತ ದಾಳಿಕೋರರು ಕನಿಷ್ಠ 5 ಸುತ್ತು ಗುಂಡು ಹಾರಿಸಿದ್ದ ಘಟನೆ ನಡೆದಿತ್ತು. ಅದೃಷ್ಟವಶಾತ್‌ ಯಾರಿಗೂ ಪ್ತಾಣಾಪಾಯ ಸಂಭವಿಸಿರಲಿಲ್ಲ. ಇದಾದ ಮರುದಿನವೇ ಸಚಿವರ ಆಪ್ತರನ್ನು ಕಿಡ್ನ್ಯಾಪ್‌ ಮಾಡಿರುವ ಘಟನೆ ನಡೆದಿದೆ.

    ಘಟನಾ ಸ್ಥಳದಿಂದ ಖಾಲಿ ಕಾಟ್ರಿಡ್ಜ್‌ಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ, ಬಿಷ್ಣುಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Mysuru | ದಸರಾ ಆನೆಗಳ ನಡುವೆ ಗುದ್ದಾಟ – ದಿಕ್ಕಾಪಾಲಾಗಿ ಓಡಿದ ಜನ

    ಎನ್‌ಐಎ ಹೆಗಲಿಗೆ ಕೇಸ್‌:
    ಇನ್ನೂ ಇಲ್ಲಿನ ಥಾಡೌ ಬುಡಕಟ್ಟು ಜನಾಂಗದ ಪ್ರಮುಖ ನಾಯಕ ಹಾಗೂ ಬಿಜೆಪಿ ವಕ್ತಾರನ ಪೂರ್ವಿಕರ ಮನೆ ಮೇಲಿನ ದಾಳಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸುವಂತೆ ಮಣಿಪುರ ಸರ್ಕಾರ ಪೊಲೀಸರಿಗೆ ಸೂಚಿಸಿದೆ. ಇದನ್ನೂ ಓದಿ: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ – ಹರಿದ್ವಾರದಲ್ಲಿ ಸಚಿವ ಚಲುವರಾಯಸ್ವಾಮಿ ನೇತೃತ್ವದ ನಿಯೋಗ

    ಚುರಾಚಂದ್‌ಪುರ ಜಿಲ್ಲೆಯ ಟಿ ಮೈಕೆಲ್‌ ಲಮ್‌ಜತಾಂಗ್‌ ಹಾಕಿಪ್‌ ಅವರ ಪೋಷಕರು ಹಾಗೂ ಇತರರು ವಾಸಿಸುವ ಅವರ ಮನೆಯ ಮೇಲೆ ನಡೆದ ದಾಳಿಯ ಕುರಿತು ದಾಖಲಿಸಲಾದ ಪ್ರಕರಣವನ್ನು ಆದಷ್ಟು ಬೇಗ ಎನ್‌ಐಎಗೆ ರವಾನಿಸಬೇಕು ಎಂದು ರಾಜ್ಯ ಸರ್ಕಾರ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದೆ. ವಿಷಯದ ಗಂಭೀರ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು ತನಿಖೆಯನ್ನು ಎನ್‌ಐಎ ಹೆಗಲಿಗೆ ವಹಿಸುವಂತೆ ಪತ್ರದಲ್ಲಿ ತಿಳಿಸಿದೆ.

    2023ರ ಮೇ ತಿಂಗಳಲ್ಲಿ ಮೈತೆ-ಕುಕಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗಿನಿಂದ ಅವರ ಮನೆ ಮೇಲೆ ನಡೆದಿರುವ 3ನೇ ದಾಳಿ ಇದಾಗಿದೆ. ಕಳೆದ ಆಗಸ್ಟ್‌ 31ರಂದು ಕುಕಿ ಸಮುದಾಯದ ಪ್ರಾಬಲ್ಯವಿರುವ ಚುರಾಚಂದ್‌ಪುರದಲ್ಲಿರುವ ಹಾಕಿಪ್ ಅವರ ಮನೆಯನ್ನು ಧ್ವಂಸಗೊಳಿಸಿ, ಬೆಂಕಿ ಹಚ್ಚಲಾಗಿತ್ತು. ಇದಕ್ಕೂ ಮುನ್ನ ಆಗಸ್ಟ್‌ 25ರಂದು ಸಹ ಶಸ್ತ್ರ ಸಜ್ಜಿತ ಗುಂಪೊಂದು ಹಾಕಿಪ್‌ ಅವರ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿತ್ತು.

  • ಸಿನಿಮಾ ಸ್ಟೈಲ್‌ನಲ್ಲಿ ಕಿಡ್ನಾಪ್‌ಗೈದ ದರ್ಶನ್‌ ಟೀಂ – ರೇಣುಕಾಸ್ವಾಮಿ ಕೊನೆ ಕ್ಷಣ ಹೇಗಿತ್ತು?

    ಸಿನಿಮಾ ಸ್ಟೈಲ್‌ನಲ್ಲಿ ಕಿಡ್ನಾಪ್‌ಗೈದ ದರ್ಶನ್‌ ಟೀಂ – ರೇಣುಕಾಸ್ವಾಮಿ ಕೊನೆ ಕ್ಷಣ ಹೇಗಿತ್ತು?

    ಬೆಂಗಳೂರು/ ಚಿತ್ರದುರ್ಗ: ಸಿನಿಮಾ ರೀತಿಯಲ್ಲಿ ದರ್ಶನ್‌ ಗ್ಯಾಂಗ್‌ (Darshan Gang) ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು (Renukaswamy) ಅಪಹರಣ ಮಾಡಿ ಬೆಂಗಳೂರಿಗೆ ಕರೆ ತಂದು ಹತ್ಯೆ ಮಾಡಿದೆ.

    ದರ್ಶನ್‌ ಗ್ಯಾಂಗ್‌ ಪ್ರತಿಯೊಂದು ಚಟುವಟಿಕೆಗೆಗಳು ಸಿಸಿ ಕ್ಯಾಮೆರಾದಲ್ಲಿ (CCTV Camera) ದಾಖಲಾಗಿದ್ದು ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಗಳು ಪ್ರಮುಖ ಸಾಕ್ಷ್ಯವಾಗಿ ಪರಿಗಣನೆಯಾಗಲಿದೆ.

    ಜೂನ್‌ 8 ರ ಬೆಳಗ್ಗೆ 9:48ರ ವೇಳೆಗೆ ಸ್ಕೂಟಿಯಲ್ಲಿ ರೇಣುಕಾಸ್ವಾಮಿ ತೆರಳಿದ್ದರು. ಈ ವೇಳೆ ಸ್ಕಾರ್ಪಿಯೋ ಕಾರಿನಲ್ಲಿ ದರ್ಶನ್‌ ಅಭಿಮಾನಿ ಸಂಘದ ಅಧ್ಯಕ್ಷ ರಘು ಮತ್ತು ಇತರರು ಆತನನ್ನು ಹಿಂಬಾಲಿಸಿದ್ದಾರೆ. ಚಳ್ಳಕೆರೆ ಗೇಟ್ ಕಡೆಯಿಂದ ಅಪೊಲೋದತ್ತ ತೆರಳುತ್ತಿದ್ದಾಗ ರೇಣುಕಾಸ್ವಾಮಿಯನ್ನು ದರ್ಶನ್‌ ಗ್ಯಾಂಗ್‌ ನಂಬಿಸಿದೆ. ನಂತರ ರಿಕ್ಷಾದಲ್ಲಿ ಕೂರಿಸಿ ಕುಂಚಿಗನಾಳ್ ಬಳಿ ಕಾರ್‌ಗೆ ಶಿಫ್ಟ್ ಮಾಡುವ ಮೂಲಕ ರೇಣುಕಾಸ್ವಾಮಿಯನ್ನು ಅಪಹರಣ ಮಾಡಿದ್ದಾರೆ.

    ಬಾಡಿಗೆಗೆ ಎಂದು ಹೇಳಿ ತಂದಿದ್ದ ರವಿ ಕಾರಿನಲ್ಲಿ ಕಿಡ್ನಾಪ್‌ ಮಾಡಿದ್ದಾರೆ. ಅಂದು ಬೆಳಗ್ಗೆ 11:56ರ ಸುಮಾರಿಗೆ ಕಾರು ಹತ್ತಿಸಿಕೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ದರ್ಶನ್ ಇರೋ ಪೊಲೀಸ್ ಠಾಣೆ ಬಳಿ 144 ಸೆಕ್ಷನ್- ವಾಹನ ಸವಾರರ ಪರದಾಟ

    ರೇಣುಕಾಸ್ವಾಮಿಯ ಕೊನೆ ಕ್ಷಣ ಹೀಗಿತ್ತು
    ಜೂ.8 : ಬೆಳಗ್ಗೆ 9:48 – ಚಿತ್ರದುರ್ಗ ಹೈವೇಗೆ ರೇಣುಕಾ
    ಜೂ.8: ಬೆಳಗ್ಗೆ 10:33 – ರೇಣುಕಾ ಕಿಡ್ನ್ಯಾಪ್ – (ಆಟೋದಲ್ಲಿ ಕರೆದೊಯ್ದ ಆರೋಪಿಗಳು)
    ಜೂ.8: ಬೆಳಗ್ಗೆ 10:56 – ಬೆಂಗಳೂರು ಕಡೆಗೆ ರೇಣುಕಾ – ಕಾರಿನಲ್ಲಿ ಕರೆದೊಯ್ದ ಜಗ್ಗ, ರಾಘು, ಅನು
    ಜೂ.8: ಮಧ್ಯಾಹ್ನ 1:15 – ತುಮಕೂರಿಗೆ ಆಗಮನ – ಆಹಾರ ಸೇವಿಸಿದ ಆರೋಪಿಗಳು
    ಜೂ.8: ಮಧ್ಯಾಹ್ನ 2:30 – ಆರ್.ಆರ್.ನಗರ ಶೆಡ್‌ಗೆ ಬಂದ ಕಾರು
    ಜೂ.8 : ಮಧ್ಯಾಹ್ನ 3:30 – ಶೆಡ್‌ಗೆ ದರ್ಶನ್ ಆಗಮನ
    ಜೂ.8: ಮಧ್ಯಾಹ್ನ 3:45 – ದರ್ಶನ್ ಮತ್ತು ಗ್ಯಾಂಗ್‌ನಿಂದ ಹಲ್ಲೆ
    ಜೂ.8: ಸಂಜೆ 6:00 – ತೀವ್ರ ಅಸ್ವಸ್ಥರಾಗಿ ರೇಣುಕಾ ಸಾವು
    ಜೂ.8 : ರಾತ್ರಿ 8:00 – ಶವ ಸಾಗಾಟಕ್ಕೆ ಯತ್ನ – ಶವ ಸಾಗಾಟಕ್ಕೆ ಒಪ್ಪದ ಎ8 ಆರೋಪಿ ರವಿ
    ಜೂ.9 : ಮುಂಜಾನೆ 3:35 – ಶೆಡ್‌ನಿಂದ ಶವ ಸಾಗಾಟ
    ಜೂ.9 : ಮುಂಜಾನೆ 3:45 – ಸುಮ್ಮನಹಳ್ಳಿ ಬಳಿ ಶವ ಎಸೆದ ಆರೋಪಿಗಳು

    ಜೂನ್ 2ರಂದೇ ಬೆದರಿಕೆ ಕರೆ?
    ಜೂನ್‌ 2 ರಂದು ರೇಣುಕಾಸ್ವಾಮಿ ಅಪೊಲೋ ಫಾರ್ಮಸಿಯಿಂದ ಹೊರಬಂದು ಮಾತಾಡಿದ್ದರು. ಮಧ್ಯಾಹ್ನ 2:15 ರಿಂದ 2:40ರವರೆಗೆ ಸ್ಕೂಟಿಯಲ್ಲಿ ಕುಳಿತುಕೊಂಡೇ ಫೋನಲ್ಲಿ ಮಾತಾಡಿದ್ದರು. ಫೋನ್ ಕರೆ ಬಳಿಕ ರೇಣುಕಾಸ್ವಾಮಿ ಬಹಳ ವಿಚಲಿತನಾದಂತೆ ಕಂಡು ಬಂದಿದ್ದರು. ಫೋನಿನಲ್ಲಿ ಮಾತನಾಡುತ್ತಿದ್ದ ದೃಶ್ಯ ಸಮಿಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

  • ʼಸಂತ್ರಸ್ತೆಗೆ 150 – 200 ಸೀರೆ ಕೊಡಿಸಿʼ – ಭವಾನಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಹೇಗಿತ್ತು? ವಾದ, ಪ್ರತಿವಾದ ಏನಿತ್ತು?

    ʼಸಂತ್ರಸ್ತೆಗೆ 150 – 200 ಸೀರೆ ಕೊಡಿಸಿʼ – ಭವಾನಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಹೇಗಿತ್ತು? ವಾದ, ಪ್ರತಿವಾದ ಏನಿತ್ತು?

    ಬೆಂಗಳೂರು: ಕೆಆರ್‌ನಗರ ಸಂತ್ರಸ್ತೆಯನ್ನು ಅಪಹರಣ (Kidanp Case) ಮಾಡಿದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿಯ ವಿಚಾರಣೆ ಮುಗಿದಿದ್ದು ಕೋರ್ಟ್ ಮೇ 31ಕ್ಕೆ ಆದೇಶ ಕಾಯ್ದಿರಿಸಿದೆ.

    ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡುವುದಕ್ಕೆ ವಿಶೇಷ ತನಿಖಾ ತಂಡ (SIT) ಬಲವಾಗಿ ವಿರೋಧಿಸಿತು. ಅಲ್ಲದೇ ಹಲವು ಗುರುತರ ಆರೋಪಗಳನ್ನು ಭವಾನಿ ರೇವಣ್ಣ ವಿರುದ್ಧ ಎಸ್‌ಐಟಿ ಪರ ವಕೀಲರು ಮಾಡಿದರು. ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿಯ ಮಾಹಿತಿಯನ್ನು ನ್ಯಾಯಾಲಯಕ್ಕೆ ನೀಡಿದರು. ಆದರೆ ಇದಕ್ಕೆ ಭವಾನಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಇದನ್ನೂ ಓದಿ: ಪ್ಯಾಲೆಸ್ತೀನ್‌ ಬೆಂಬಲಿಸಿದ್ದಕ್ಕೆ ಟ್ರೋಲ್‌ ಬೆನ್ನಲ್ಲೇ ಹಿಟ್‌ಮ್ಯಾನ್‌ ಪತ್ನಿ ಪೋಸ್ಟ್‌ ಡಿಲೀಟ್

     

    ಎಸ್‌ಪಿಪಿ ವಾದ ಏನಿತ್ತು?
    ಭವಾನಿಯವರು ಸಂತ್ರಸ್ತೆಯಿಂದ ವೀಡಿಯೋ ಮಾಡಿಸಲು ಎರಡನೇ ಆರೋಪಿಗೆ ತಿಳಿಸಿದ್ದಾರೆ. ಭವಾನಿ ಫೋನ್ ಸಂಭಾಷಣೆಯ ಸಾಕ್ಷ್ಯ ನಮ್ಮ ಬಳಿ ಇದೆ. ಸತೀಶ್ ಬಾಬಣ್ಣ ಮೊಬೈಲ್‌ನಿಂದ ಕಾಲ್ ರೆಕಾರ್ಡ್ ಪಡೆಯಲಾಗಿದೆ.

    ಆ ಸಂಭಾಷಣೆಯಲ್ಲಿ ಮೇಡಂ ಎಂದು ಸಂಭೋದನೆ ಆಗಿದ್ದು ಸಂತ್ರಸ್ತೆಗೆ 150 – 200 ಸೀರೆ ಕೊಡಿಸಿ ಅಂತಾ ಭವಾನಿ ಹೇಳುತ್ತಾರೆ. ಬಾಬಣ್ಣ ಮೇ3 ರಂದು ಸಂತ್ರಸ್ತೆಯಿಂದ ವೀಡಿಯೋ ಮಾಡಿಸಿದ್ದಾರೆ. ಸಂತ್ರಸ್ತೆಯ ಮೊಬೈಲ್ ಕಿತ್ಕೊಂಡು, ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ.

    ಸಂತ್ರಸ್ತೆ ಮಗಳ ಹೇಳಿಕೆ, ಡಾಕ್ಟರ್ ಹೇಳಿಕೆ ಎಲ್ಲಾ ಸಾಕ್ಷಿಗಳು ಇವೆ. ರಾಜಕೀಯ ಪ್ರಭಾವ ಇರುವ ಮಹಿಳೆಯ ವಿಚಾರಣೆ ಬಹಳ ಅಗತ್ಯವಿದೆ. ಯಾವುದೇ ಬೆದರಿಕೆ ಇಲ್ಲದೇ ಇದ್ದರೂ ಓಡಿ ಹೋಗಿದ್ದು ಯಾಕೆ? ಭವಾನಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಬಾರದು.

     

    ಭವಾನಿ ಪರ ವಕೀಲರ ವಾದ ಏನಿತ್ತು?
    ಕೆಆರ್ ನಗರ ಪ್ರಕರಣದಲ್ಲಿ ಭವಾನಿ ರೇವಣ್ಣ ಹೆಸರಿಲ್ಲ ಮತ್ತು ಭವಾನಿ ವಿರುದ್ಧ ಯಾರೊಬ್ಬರೂ ಹೇಳಿಕೆ ನೀಡಿಲ್ಲ. ಫೋನ್ ಸಂಭಾಷಣೆಯನ್ನೇ ಸಾಕ್ಷಿಯಾಗಿ ಪರಿಗಣಿಸಲು ಸಾಧ್ಯವಿಲ್ಲ. ಭವಾನಿ ವಿರುದ್ಧ ನೇರವಾಗಿ ಆರೋಪ ಮಾಡುವ ಸಾಕ್ಷ್ಯಗಳಿಲ್ಲ. ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ ಎಂಬ ನಂಬಿಕೆ ಇಲ್ಲ. ಅಗತ್ಯ ಇದ್ದಲ್ಲಿ ತನಿಖೆಗೆ ಭವಾನಿ ಸಹಕಾರ ನೀಡುತ್ತಾರೆ. ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ.

  • ಕೇಸ್‌ ದಾಖಲಾಗುವ ಮೊದಲೇ A2 ಆರೋಪಿಯನ್ನು ಬಂಧಿಸಿದ್ದು ಅನುಮಾನಾಸ್ಪದ – ರೇವಣ್ಣ ಜಾಮೀನು ಆದೇಶದಲ್ಲಿ ಏನಿದೆ?

    ಕೇಸ್‌ ದಾಖಲಾಗುವ ಮೊದಲೇ A2 ಆರೋಪಿಯನ್ನು ಬಂಧಿಸಿದ್ದು ಅನುಮಾನಾಸ್ಪದ – ರೇವಣ್ಣ ಜಾಮೀನು ಆದೇಶದಲ್ಲಿ ಏನಿದೆ?

    ಬೆಂಗಳೂರು: ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ (Kidnap Case) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ, ಮಾಜಿ ಸಚಿವ ಹೆಚ್‌ಡಿ ರೇವಣ್ಣಗೆ (HD Revanna) ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೋರ್ಟ್‌ ಜಾಮೀನು ಮಂಜೂರು (Bail) ಮಾಡುವ ನಿರ್ಧಾರಕ್ಕೆ ಬಂದಿದ್ದು ಯಾಕೆ ಎನ್ನುವುದನ್ನು ಕೋರ್ಟ್‌ ತನ್ನ ಆದೇಶದಲ್ಲಿ ಹಲವು ಕಾರಣಗಳನ್ನು ನೀಡಿದೆ.

    ಕೋರ್ಟ್‌ ಆದೇಶದಲ್ಲಿ ಏನಿದೆ?
    ಮಹಿಳೆಗೆ ಆರೋಪಿಯಿಂದ ತೊಂದರೆಯಿದೆ, ಜೀವ ಭಯ ಇದೆ ಎಂಬುದಕ್ಕೆ ಸೂಕ್ತ ಸಾಕ್ಷ್ಯಗಳು ಇಲ್ಲ. ಪ್ರಕರಣ ದಾಖಲಾಗುವ ಮೊದಲೇ ಎ2 ಆರೋಪಿ ಸತೀಶ್ ಬಾಬುವನ್ನು ವಶಕ್ಕೆ ಪಡೆದಿದ್ದು ಅನುಮಾನಸ್ಪದವಾಗಿದೆ. ಐಪಿಸಿ ಸೆಕ್ಷನ್‌ 364 ಎ (ಬೆದರಿಸಿ ಅಪಹರಣ) ಅನ್ವಯವಾಗುವ ಪೂರಕವಾದ ಯಾವುದೇ ಸಾಕ್ಷಿಗಳು ಇಲ್ಲ.

     

    ಸಂತ್ರಸ್ತೆಯ 164 ಹೇಳಿಕೆಯನ್ನು (ನ್ಯಾಯಾಧೀಶರ ಮುಂದೆ ನೀಡುವ ಹೇಳಿಕೆ) ಪಡೆಯಬೇಕಿದೆ ಎಂದು ಆರೋಪಿಯ ರಿಮ್ಯಾಂಡ್ ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿತ್ತು. ಆದರೆ 161 ಹೇಳಿಕೆಯನ್ನು (ತನಿಖಾಧಿಕಾರಿ ಮುಂದೆ ಹೇಳಿಕೆ) ಯಾವಾಗ ದಾಖಲು ಮಾಡಿದ್ದಾರೆ ಎಂದು ಉಲ್ಲೇಖ ಮಾಡಿಲ್ಲ

    ಸಂತ್ರಸ್ತೆಯ ಹೇಳಿಕೆ ನೀಡಿದ್ದ ಪೊಲೀಸರ ವರದಿ ಪ್ರಕಾರ ಆರೋಪಿಯ (ರೇವಣ್ಣ) ಮಗನ ವಿರುದ್ಧ ಅತ್ಯಾಚಾರದ ಆರೋಪಗಳು ಮಾತ್ರ ನಮೂದಾಗಿದೆ. ಆದರೆ ರೇವಣ್ಣ ಅಪಹರಣ ಮಾಡಿದ್ದಕ್ಕೆ ಹೇಳಿಕೆ ಉಲ್ಲೇಖ ಮಾಡಿಲ್ಲ.  ಇದನ್ನೂ ಓದಿ: 380ರ ಪೈಕಿ ಈಗಾಗಲೇ ಮೋದಿ 270 ಗೆದ್ದಿದ್ದಾರೆ : ಅಮಿತ್‌ ಶಾ ವಿಶ್ವಾಸ

     

    ಸಂತ್ರಸ್ತೆಯ 164 ಹೇಳಿಕೆ ದಾಖಲು ಮಾಡಲು ತಡವಾಗಿದ್ದು ಯಾಕೆ ಎಂಬುದನ್ನು ತಿಳಿಸಲು ಎಸ್‌ಐಟಿ (SIT) ಸಫಲವಾಗಿಲ್ಲ. ಸಂತ್ರಸ್ತ ಮಹಿಳೆಗೆ ಜೀವ ಬೆದರಿಕೆ ಅಥವಾ ಯಾವುದೇ ಬೇಡಿಕೆ ಕೇಳಿರುವುದಕ್ಕೆ ಪೂರಕ ಸಾಕ್ಷ್ಯಗಳು ಇಲ್ಲ

    ಇಡೀ ಪ್ರಕರಣದಲ್ಲಿ 364 ಎ ಅಳವಡಿಕೆಗೆ ಪೂರಕವಾದ ಸಾಕ್ಷ್ಯಗಳು ಇಲ್ಲ. ಮಗನನ್ನು ರಕ್ಷಣೆ ಮಾಡಿದ್ದಾರೆ. ಅದಕ್ಕೆ ಈ ಕೃತ್ಯವನ್ನು ಮಾಡಿದ್ದಾರೆ ಎನ್ನುವುದಕ್ಕೆ ಸಾಕ್ಷ್ಯಗಳನ್ನು ಎಸ್‌ಐಟಿ ಒದಗಿಸಿಲ್ಲ.

    2019 ರ ಚುನಾವಣಾ ಅಕ್ರಮದ ಬಗ್ಗೆ ಇಲ್ಲಿ ಉಲ್ಲೇಖಸಿದ್ದಾರೆ. ಆದರೆ ಆ ಪ್ರಕರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ತಡೆಯಾಜ್ಞೆ ಇದೆ ಹೀಗಾಗಿ ಆ ವಿಚಾರ ಮಾನ್ಯ ಮಾಡಲು ಸಾಧ್ಯವಿಲ್ಲ. ಇಲ್ಲಿ ಗಂಭೀರವಾದ ಆರೋಪ ಇರುವುದು ಪ್ರಜ್ವಲ್ ರೇವಣ್ಣ ಮೇಲೆ ಹೊರತು ರೇವಣ್ಣ ಮೇಲೆ ಅಲ್ಲ.

     

  • ಮಂಗಳವಾರ ರೇವಣ್ಣ ಬಿಡುಗಡೆ – ಕೋರ್ಟ್‌ನಲ್ಲಿ ವಾದ, ಪ್ರತಿವಾದ ಹೇಗಿತ್ತು? ಜಾಮೀನು ಷರತ್ತು ಏನು?

    ಮಂಗಳವಾರ ರೇವಣ್ಣ ಬಿಡುಗಡೆ – ಕೋರ್ಟ್‌ನಲ್ಲಿ ವಾದ, ಪ್ರತಿವಾದ ಹೇಗಿತ್ತು? ಜಾಮೀನು ಷರತ್ತು ಏನು?

    ಬೆಂಗಳೂರು: ಕೆ.ಆರ್.ನಗರ ಸಂತ್ರಸ್ತೆಯನ್ನು ಅಪಹರಣ (Kidnap Case) ಮಾಡಿಸಿದ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಲ್ಲಿರುವ ಮಾಜಿ ಮಂತ್ರಿ ಹೆಚ್‌ಡಿ ರೇವಣ್ಣಗೆ (HD Revanna) ಕಡೆಗೂ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

    ಬೆಳಗ್ಗೆಯಿಂದ ಸಂಜೆ 4 ಗಂಟೆಯವರೆಗೆ ಜಾಮೀನು (Bail) ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಂಜೆ 6:30ಕ್ಕೆ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಸಂಜೆಯಾದ ಕಾರಣ ಕೋರ್ಟ್ ಷರತ್ತುಗಳನ್ನು ಪೂರೈಸಲು ಆಗಲಿಲ್ಲ. ಹೀಗಾಗಿ ನಾಳೆ ಬೆಳಗ್ಗೆ ಕೋರ್ಟ್ ಕಲಾಪ ಶುರುವಾದ ನಂತರ ಜಾಮೀನು ಷರತ್ತುಗಳನ್ನು ಪೂರೈಸಿದ ನಂತರ ಪರಪ್ಪನ ಅಗ್ರಹಾರ ಜೈಲಿಂದ ಹೆಚ್‌ಡಿ ರೇವಣ್ಣ ರಿಲೀಸ್ ಆಗಲಿದ್ದಾರೆ. ಇದರೊಂದಿಗೆ ರೇವಣ್ಣ ಅವರ ಆರು ದಿನಗಳ ಜೈಲುವಾಸ ಅಂತ್ಯವಾಗಲಿದೆ.

     

    ವಿಚಾರಣೆ ವೇಳೆ ತನಿಖಾ ಪ್ರಗತಿಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯದಲ್ಲಿ ಸಲ್ಲಿಕೆ ಮಾಡಿದ ಕ್ರಮವನ್ನು ರೇವಣ್ಣ ಪರ ವಕೀಲರು ಆಕ್ಷೇಪಿಸಿದರು. ಕೊನೆಗೆ ಜಡ್ಜ್ ಸೂಚನೆ ಮೇರೆಗೆ ತನಿಖಾ ವರದಿಯ ಪ್ರತಿಯನ್ನು ರೇವಣ್ಣ ಪರ ವಕೀಲರಿಗೆ ವಿಶೇಷ ಸಾರ್ವಜನಿಕ ಅಭಿಯೋಜಕ (SPP) ನೀಡಿದರು. ಇದನ್ನೂ ಓದಿ: ಹೇಮಂತ್‌ ಸೊರೆನ್‌ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂ

    ರೇವಣ್ಣಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಎಸ್‌ಪಿಪಿ ಪ್ರಬಲ ವಾದ ಮಂಡಿಸಿದರು. ಯಾಕೆ ಜಾಮೀನು ನೀಡಬಾರದು ಎಂಬುದನ್ನೆಲ್ಲಾ ವಿವರಿಸಿದರು. ಇದಕ್ಕೆ ರೇವಣ್ಣ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ರು. ಯಾವ ಯಾವ ಕಾರಣಕ್ಕೆ ಜಾಮೀನು ನೀಡಬೇಕು ಎಂದು ಪ್ರತಿವಾದ ಮಂಡಿಸಿದರು. ಇದನ್ನೆಲ್ಲಾ ಆಲಿಸಿದ ಜಡ್ಜ್, ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದರು. ಈ ಬೆನ್ನಲ್ಲೇ ಜೈಲ್ ಮುಂದೆ ಕಾದು ನಿಂತಿದ್ದ ರೇವಣ್ಣ ಅಭಿಮಾನಿಗಳು ಸಂಭ್ರಮಿಸಿದರು. ಹೊಳೆನರಸೀಪುರದಲ್ಲೂ ಸಂಭ್ರಮ ಕಂಡುಬಂತು.

     

    ಏನೇನು ಷರತ್ತುಗಳು ಅನ್ವಯ?
    – 5 ಲಕ್ಷ ರೂ. ಮೌಲ್ಯದ ಬಾಂಡ್, ಇಬ್ಬರ ಶ್ಯೂರಿಟಿ
    – ಕೆಆರ್ ನಗರ ಪ್ರವೇಶ ಮಾಡಬಾರದು
    – ಸಾಕ್ಷಿಗಳ ಮೇಲೆ ಒತ್ತಡ ಹೇರಬಾರದು
    – ಎಸ್‌ಐಟಿ ತನಿಖೆಗೆ ಸಹಕಾರ ನೀಡಬೇಕು

    ಎಸ್‌ಐಟಿ ವಾದ ಏನಿತ್ತು?
    ದೂರು ನೀಡುತ್ತಾರೆ ಎಂಬ ಕಾರಣಕ್ಕೆ ಸಂತ್ರಸ್ತೆಯನ್ನು ಅಪಹರಿಸಿದ್ದರು. ಇದು ಇತರೆ ಸಂತ್ರಸ್ತೆಯರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ಸಂತ್ರಸ್ತೆ 164 ಹೇಳಿಕೆ ದಾಖಲು ಮಾಡಿದ್ದಾರೆ. ಈಗಾಗಲೇ ಸಹ ಆರೋಪಿಗಳು ತಪ್ಪೊಪ್ಪಿಗೆ ಮಾಡಿಕೊಂಡಿದ್ದಾರೆ. ಅಪರಾಧ ಕೃತ್ಯದ ಗಂಭೀರತೆ ಪರಿಗಣಿಸಿ ಜಾಮೀನು ನಿರಾಕರಿಸಿ. ಜಾಮೀನು ನೀಡಿದರೆ ಸಾಕ್ಷ್ಯನಾಶ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು.

    ಆರೋಪಿ ಪರ ವಾದ ಏನು?
    ಸಂತ್ರಸ್ತೆಯ ಮೇಲೆ ಯಾವುದೇ ಮಾರಣಾಂತಿಕ ಹಲ್ಲೆ ಆಗಿಲ್ಲ. ಮಹಿಳೆಗೆ ಯಾವುದೇ ತೊಂದರೆ ನೀಡಿಲ್ಲ. ಗಾಯಗೊಳಿಸಿಲ್ಲ. ಈ ಕೇಸಲ್ಲಿ ಯಾರಿಗೆ? ಯಾರು ಬೇಡಿಕೆ ಇಟ್ಟಿದ್ದಾರೆ? ಒಬ್ಬರನ್ನ ತಮ್ಮ ವಶದಲ್ಲಿ ಇಟ್ಟುಕೊಳ್ಳುವುದು ತಪ್ಪಲ್ಲ. ಒತ್ತೆಯಾಳಾಗಿಸಿಕೊಂಡು ದೌರ್ಜನ್ಯ, ಕಿರುಕುಳ ನೀಡುವುದು ಮಾತ್ರ ಅಪರಾಧ. ಇಲ್ಲಿ ಮೇಲ್ನೋಟಕ್ಕೆ ಅಂತಹ ಯಾವುದೇ ಕೃತ್ಯ ನಡೆಸಿದ್ದಕ್ಕೆ ಸಾಕ್ಷಿಗಳಿಲ್ಲದ ಕಾರಣ ಜಾಮೀನು ನೀಡಬಹುದು.

     

  • ಇದು ರಾಜಕೀಯ ಪ್ರೇರಿತ ಕೇಸ್‌, ಪ್ರಾದೇಶಿಕ ಪಕ್ಷದ ಮೇಲೆ ದಾಳಿ – ಕೋರ್ಟ್‌ನಲ್ಲಿ ಇಂದು ವಾದ, ಪ್ರತಿವಾದ ಹೇಗಿತ್ತು?

    ಇದು ರಾಜಕೀಯ ಪ್ರೇರಿತ ಕೇಸ್‌, ಪ್ರಾದೇಶಿಕ ಪಕ್ಷದ ಮೇಲೆ ದಾಳಿ – ಕೋರ್ಟ್‌ನಲ್ಲಿ ಇಂದು ವಾದ, ಪ್ರತಿವಾದ ಹೇಗಿತ್ತು?

    – ರೇವಣ್ಣ ಪರ ವಕೀಲ ಸಿವಿ ನಾಗೇಶ್‌ ವಾದ
    – ಮತ್ತಷ್ಟು ಸಮಯಾವಕಾಶ ಕೇಳಿದ ಎಸ್‌ಪಿಪಿ

    ಬೆಂಗಳೂರು: ಸಂತ್ರಸ್ತೆಯನ್ನು ಕಿಡ್ನಾಪ್ (Kidnap) ಮಾಡಿಸಿದ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ (Judicial Custody) ಮಾಜಿ ಮಂತ್ರಿ ಹೆಚ್‌ಡಿ ರೇವಣ್ಣಗೆ (HD Revanna) ಇಂದು ಕೂಡ ಜಾಮೀನು (Bail) ಸಿಗಲಿಲ್ಲ. ಸುದೀರ್ಘ ವಿಚಾರಣೆ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೋಮವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ.

    ಇಂದು ಬೆಳಗ್ಗೆ ಜಾಮೀನು (Bail) ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ (SIT) ಪರ ವಕೀಲರು ಮತ್ತಷ್ಟು ಸಮಯಾವಕಾಶ ಕೋರಿದರು. ಇದಕ್ಕೆ ಜಡ್ಜ್ ಆಕ್ಷೇಪ ವ್ಯಕ್ತಪಡಿಸಿದರು. ಪ್ರತಿ ದಿನ ಹೊಸ ವಿಶೇಷ ಸಾರ್ವಜನಿಕ ಅಭಿಯೋಜಕರು (SPP) ಬರುತ್ತಾರೆ. ಹಾಗೆಂದ ಮಾತ್ರಕ್ಕೆ ಸಮಯ ನೀಡಲು ಆಗುವುದಿಲ್ಲ. ನಾನು ವಾದ-ಪ್ರತಿವಾದ ಆಲಿಸಲು ರೆಡಿ ಇದ್ದೇನೆ. ನೀವು ಮಧ್ಯಾಹ್ನವೇ ವಾದ ಮಂಡಿಸಿ ಎಂದ ನ್ಯಾಯಾಧೀಶರು ಕೆಲ ಹೊತ್ತು ವಿಚಾರಣೆ ಮುಂದೂಡಿದರು. ಇದನ್ನೂ ಓದಿ: ಕರ್ನಾಟಕ ಬಿಜೆಪಿ ಐಟಿ ಸೆಲ್‌ ಸಂಚಾಲಕ ಪ್ರಶಾಂತ್‌ ಮಾಕನೂರು ಅರೆಸ್ಟ್‌

     

    ಮಧ್ಯಾಹ್ನವೂ ಎಸ್‌ಐಟಿ ಪರ ವಕೀಲರು ಇದೇ ವಿಚಾರ ತಿಳಿಸಿದರೂ ನ್ಯಾಯಾಧೀಶರು ವಾದ-ಪ್ರತಿವಾದಕ್ಕೆ ಅವಕಾಶ ನೀಡಿದರು. ಈ ಸಂದರ್ಭದಲ್ಲಿ ರೇವಣ್ಣ ಪರ ವಕೀಲ ಸಿವಿ ನಾಗೇಶ್, ಕಿಡ್ನಾಪ್ ಪ್ರಕರಣದಲ್ಲಿ ರೇವಣ್ಣ ಪಾತ್ರ ಸಾಬೀತಾಗಿಲ್ಲ. ಪ್ರಕರಣವನ್ನು ಅಗತ್ಯಕ್ಕಿಂತ ಹೆಚ್ಚು ವೈಭವೀಕರಿಸಲಾಗಿದೆ. ಯಾರೋ ಬಂದು ಯಾರದ್ದೋ ಹೆಸರು ಹೇಳಿದ ಮಾತ್ರಕ್ಕೆ ಕಕ್ಷಿದಾರರು ಆರೋಪಿ ಆಗುವುದಿಲ್ಲ. ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದೆ. ಪ್ರಾದೇಶಿಕ ಪಕ್ಷದ ಮೇಲೆ ದಾಳಿ ನಡೆಸಲಾಗ್ತಿದೆ ಎಂದು ವಾದ ಮಂಡಿಸಿದರು. ಇದನ್ನೂ ಓದಿ: ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣಕ್ಕೆ ಟ್ವಿಸ್ಟ್- ಸಂತ್ರಸ್ತೆಗೆ ಮೂವರಿಂದ ಬೆದರಿಕೆ!

    ಸಂತ್ರಸ್ತೆ ಸಿಕ್ಕಿದ್ದಾರೆ ಎನ್ನುತ್ತಿದ್ದಾರೆ. ಆದರೆ ಸಂತ್ರಸ್ತೆಯ ವಿವರ ನೀಡುತ್ತಿಲ್ಲ. ಸಂತ್ರಸ್ತೆ ಪತ್ತೆಯಾದ ಜಾಗದಲ್ಲಿ ಸ್ಥಳ ಮಹಜರು ನಡೆಸಿಲ್ಲ ಎಂದು ಎಸ್‌ಐಟಿ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು. ಇದೊಂದು ಸಾಮಾನ್ಯ ಪ್ರಕರಣ. ವಿಚಾರಣೆಗೂ ರೇವಣ್ಣ ಸಹಕರಿಸಿದ್ದಾರೆ. ಜಾಮೀನು ಮಂಜೂರು ಮಾಡಿ ಎಂದು ಮನವಿ ಮಾಡಿದರು.

     

    ಇದಕ್ಕೆ ಎಸ್‌ಐಟಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಅಪಹರಣ ಪ್ರಕರಣ ಆರೋಪಿಯ ಮೇಲೆ ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಇದು ದೊಡ್ಡ ಅಪರಾಧ. ಅವರು ಹೊರಗೆ ಬಂದರೆ ಸಾಕ್ಷಿ ನಾಶ ಮಾಡುವ ಸಂಭವ ಇದೆ. ತಮಗೆ ವಾದ ಮುಂದುವರೆಸಲು ಸೋಮವಾರದವರೆಗೂ ಅವಕಾಶ ಬೇಕು ಎಂದು ಕೋರಿದರು. ಇದು ಕಾಲಹರಣ ಪ್ರಯತ್ನ ಎಂದು ರೇವಣ್ಣ ಪರ ವಕೀಲರು ದೂರಿದರು. ಕೊನೆಗೆ ವಿಚಾರಣೆಯನ್ನು ನ್ಯಾಯಾಧೀಶರು ಸೋಮವಾರಕ್ಕೆ ಮುಂದೂಡಿದರು.