Tag: ಅಪಹರಣ

  • ಸಹಾಯ ಮಾಡೋ ನೆಪದಲ್ಲಿ ಅಂಧ ದಂಪತಿಯ ಮಗುವನ್ನು ಕಿಡ್ನಾಪ್‍ಗೈದ ಮಹಿಳೆ

    ಸಹಾಯ ಮಾಡೋ ನೆಪದಲ್ಲಿ ಅಂಧ ದಂಪತಿಯ ಮಗುವನ್ನು ಕಿಡ್ನಾಪ್‍ಗೈದ ಮಹಿಳೆ

    ಬೆಂಗಳೂರು: ಮಗುವಿಗೆ ನೀರು ಕುಡಿಸಲು ಸಹಾಯ ಮಾಡುವಂತೆ ಅಂಧ ದಂಪತಿಯ ಸಹಾಯಕ್ಕೆ ಬಂದ ಮಹಿಳೆ ಮಗುವಿನೊಂದಿಗೆ ಪರಾರಿಯಾಗಿರುವ ಘಟನೆ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

    ರಾಯಚೂರು ಮೂಲದ ಅಂಧ ದಂಪತಿಯಾದ ಚಿನ್ನು ಮತ್ತು ಬಸವರಾಜು ಅವರ ಮಗುವನ್ನು ಅಪಹರಣ ಮಾಡಿದ್ದು, ಶನಿವಾರ ಬೆಳಗ್ಗೆ 7:30ರ ಸಮಯದಲ್ಲಿ ಘಟನೆ ನಡೆದಿದೆ.

    ಬಸ್ ನಿಲ್ದಾಣಕ್ಕೆ ಆಗಮಿಸಿದ್ದ ದಂಪತಿ ತಮ್ಮ 8 ತಿಂಗಳ ಮಗುವಿಗೆ ನೀರು ಕುಡಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಅನಾಮಿಕ ಮಹಿಳೆ ಸಹಾಯ ನೆಪದಲ್ಲಿ ಧಾವಿಸಿದ್ದು, ಮಗುವಿನೊಂದಿಗೆ ಎಸ್ಕೇಪ್ ಆಗಿದ್ದಾಳೆ. ಘಟನೆ ಬಗ್ಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದ್ದು, ಮಗುವಿನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

  • ಪುತ್ರಿಯನ್ನು ಕಿಡ್ನಾಪ್ ಮಾಡ್ತೀವಿ – ಕೇಜ್ರಿವಾಲ್‍ಗೆ ಬೆದರಿಕೆ

    ಪುತ್ರಿಯನ್ನು ಕಿಡ್ನಾಪ್ ಮಾಡ್ತೀವಿ – ಕೇಜ್ರಿವಾಲ್‍ಗೆ ಬೆದರಿಕೆ

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪುತ್ರಿಯನ್ನು ಅಪಹರಣ ಮಾಡುವುದಾಗಿ ದುಷ್ಕರ್ಮಿಗಳು ಇಮೇಲ್ ಮಾಡಿದ್ದಾರೆ.

    ಅಪಹರಣ ಬೆದರಿಕೆ ಬಂದ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಅವರ 23 ವರ್ಷದ ಪುತ್ರಿ ಹರ್ಷಿತಾಗೆ ಭದ್ರತೆ ಒದಗಿಸಲಾಗಿದೆ. ದುಷ್ಕರ್ಮಿಗಳು ದೆಹಲಿ ಮುಖ್ಯಮಂತ್ರಿ ಕಾರ್ಯಾಲಯಕ್ಕೆ ಬುಧವಾರ (ಜನವರಿ 9)ರಂದು ಇಮೇಲ್ ಕಳುಹಿಸಿ, ನಿಮ್ಮ ಪುತ್ರಿಯನ್ನು ನಾವು ಅಪಹರಿಸುತ್ತೇವೆ. ನಿಮಗೆ ರಕ್ಷಿಸಿಕೊಳ್ಳಲು ಸಾಧ್ಯವೇ ಎಂದು ಸವಾಲು ಹಾಕಿದ್ದಾರೆ.

    ಇಮೇಲ್ ಕಳುಹಿಸಿದ್ದು ಯಾರು? ಎಲ್ಲಿಂದ ಕಳುಹಿಸಿದ್ದಾರೆ? ಅವರ ಬೇಡಿಕೆ ಏನು ಎನ್ನುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ ಎಂದು ದೆಹಲಿ ಸೈಬರ್ ಕ್ರೈಮ್ ಪೊಲೀಸರು ತಿಳಿಸಿದ್ದಾರೆ.

    ಸಿಎಂ ಅರವಿಂದ್ ಕೇಜ್ರಿವಾಲ್, ಸುನಿತಾ ದಂಪತಿಗೆ ಪುತ್ರಿ ಹರ್ಷಿತಾ ಹಾಗೂ ಪುತ್ರ ಪುಲ್ಕಿಟ್ ಇದ್ದಾರೆ. ಹರ್ಷಿತಾ 2014ರಲ್ಲಿ ಐಐಟಿಯ ಅರ್ಹತಾ ಪರೀಕ್ಷೆಯಲ್ಲಿ ಉರ್ತೀಣಗೊಂಡಿದ್ದು ಎಂಜಿನಿಯರಿಂಗ್ ವ್ಯಾಸಂಗ ಓದುತ್ತಿದ್ದಾಳೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾಪತ್ತೆಯಾಗಿ 10 ದಿನ ಕಳೆದ್ರೂ ಪತ್ತೆಯಾಗಿಲ್ಲ ಮೀನುಗಾರರು- ಕಡಲಿನಿಂದ್ಲೇ ಅಪಹರಣ ಮಾಡಿದ್ರಾ ಉಗ್ರರು!

    ನಾಪತ್ತೆಯಾಗಿ 10 ದಿನ ಕಳೆದ್ರೂ ಪತ್ತೆಯಾಗಿಲ್ಲ ಮೀನುಗಾರರು- ಕಡಲಿನಿಂದ್ಲೇ ಅಪಹರಣ ಮಾಡಿದ್ರಾ ಉಗ್ರರು!

    ಉಡುಪಿ: ಇಲ್ಲಿನ ಮಲ್ಪೆ ಬಂದರಿನಿಂದ ಆಳಸಮುದ್ರಕ್ಕೆ ಮೀನುಗಾರಿಕೆಗೆ ಹೊರಟಿದ್ದ ಬೋಟ್ ನಾಪತ್ತೆಯಾಗಿ ಇಂದಿಗೆ 10 ದಿನ ಕಳೆದರೂ ಮೀನುಗಾರರು ಪತ್ತೆಯಾಗಿಲ್ಲ. ಅರಬ್ಬೀ ಸಮುದ್ರದ ನಡುವಿನಿಂದ ಬೋಟ್ ಸಮೇತ ಮೀನುಗಾರರನ್ನು ಪಾಕಿಸ್ತಾನದ ಉಗ್ರರು ಅಪಹರಣ ಮಾಡಿರಬಹುದು ಎಂಬ ಗುಮಾನಿ ಶುರುವಾಗಿದೆ.

    ಮಲ್ಪೆಯ ಸರ್ವ ಋತು ಬಂದರಿನಲ್ಲಿ ಕಣ್ಣು ಹಾಯಿಸಿದಷ್ಟೂ ಮೀನುಗಾರಿಕಾ ಬೋಟ್‍ಗಳೇ ಕಾಣುತ್ತವೆ. ಆದರೆ ಕಳೆದ ವಾರದಿಂದ ಇಲ್ಲಿ ನೀರವ ಮೌನ ಆವರಿಸಿದೆ. ಇದಕ್ಕೆ ಕಾರಣ ಮಲ್ಪೆ ಬಂದರಿನಿಂದ ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಎಂಟು ಮಂದಿ ಮೀನುಗಾರರು ಬೋಟು ಸಮೇತ ನಾಪತ್ತೆಯಾಗಿರುವುದು. ಈ ಸಂಬಂಧ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.

    ನಾಪತ್ತೆಯಾದವರಿಗೆ ಮಂಗಳೂರು, ಗೋವಾದ ಕರಾವಳಿ ಕಾವಲು ಪಡೆ ತೀವ್ರ ಶೋಧ ನಡೆಸುತ್ತಿದ್ದರೂ ಮೀನುಗಾರರು ಮಾತ್ರ ಪತ್ತೆಯಾಗಿಲ್ಲ. ಮೀನುಗಾರಿಕೆಗೆ ತೆರೆಳಿದ್ದ ಬೋಟ್ ಗೆ ಅಳವಡಿಸಿದ್ದ ಜಿಪಿಎಸ್ ಸಂಪರ್ಕಕ್ಕೆ ಸಿಗುತ್ತಿಲ್ಲ. 8 ಮೀನುಗಾರರ ಫೋನ್ ಗಳು ಸ್ವಿಚ್ ಆಫ್ ಆಗಿದ್ದು, ಎಲ್ಲಿ ಏನಾಗಿದೆ ಎಂಬ ಮಾಹಿತಿ ಸಿಗುತ್ತಿಲ್ಲ. ಇದರ ನಡುವೆ ಈಗ ಮೀನುಗಾರರನ್ನು ಪಾಕಿಸ್ತಾನದ ಉಗ್ರರು ಅಪಹರಿಸಿರಬಹುದು ಎಂಬ ಅನುಮಾನ ಸೃಷ್ಟಿಯಾಗಿದೆ.

    ಸಾಮಾನ್ಯವಾಗಿ ಆಳಸಮುದ್ರದ ಮೀನುಗಾರಿಕೆಗೆ ತೆರಳುವ ಬೋಟ್‍ಗಳು ಎರಡು ವಾರಗಳ ಕಾಲ ಸಮುದ್ರದಲ್ಲಿರುತ್ತವೆ. ಸುವರ್ಣ ತ್ರಿಭುಜ ಎಂಬ ಬೋಟಿನಲ್ಲಿ ಡಿಸೆಂಬರ್ 13 ರಂದು ರಾತ್ರಿ 11 ಗಂಟೆ ಸುಮಾರಿಗೆ ಹೊರಟ 8 ಮಂದಿ ಡಿಸೆಂಬರ್ 15ರ ರಾತ್ರಿ ಒಂದು ಗಂಟೆಯವರೆಗೆ ಸಂಪರ್ಕದಲ್ಲಿದ್ದರು. ನಂತರ ಸಂಪರ್ಕ ಸಿಗದೆ ನಾಪತ್ತೆಯಾಗಿದ್ದಾರೆ. ಮೀನುಗಾರರ ಮುಖಂಡರ ಪ್ರಕಾರ ಒಂದೋ ನಾಪತ್ತೆಯಾದ ಬೋಟ್ ದರೋಡೆಗೆ ಒಳಗಾಗಿರಬಹುದು. ಇಲ್ಲವೇ ಪಾಕಿಸ್ತಾನ ಗಡಿಯ ಭಯೋತ್ಪಾದಕರು ಬೋಟನ್ನು ಹೈಜಾಕ್ ಮಾಡಿರಬಹುದು ಎಂದು ಶಂಕಿಸಲಾಗಿದೆ.

    ಈ ಹಿಂದೆ ಇಂತಹ ಅವಘಡ ಸಂಭವಿಸಿದಾಗ ಮೀನುಗಾರರು ಮೊಬೈಲ್ ಮೂಲಕ ಸಂಪರ್ಕ ಮಾಡಿ ಮಾಹಿತಿ ನೀಡುತ್ತಿದ್ದರು. ಈ ಬಾರಿ ಅಂತಹ ಯಾವುದೇ ಸುಳಿವೂ ಇಲ್ಲದೇ ಇರುವುದು ಮೀನುಗಾರರನ್ನು ಆತಂಕಕ್ಕೆ ತಳ್ಳುವಂತೆ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆರೋಪಿಯನ್ನೇ ಅಪಹರಿಸಿ 1.5 ಕೋಟಿ ರೂ. ಬೇಡಿಕೆ ಇಟ್ಟ ಖತರ್ನಾಕ್ ಪೊಲೀಸರು

    ಆರೋಪಿಯನ್ನೇ ಅಪಹರಿಸಿ 1.5 ಕೋಟಿ ರೂ. ಬೇಡಿಕೆ ಇಟ್ಟ ಖತರ್ನಾಕ್ ಪೊಲೀಸರು

    ನವದೆಹಲಿ: ವಂಚನೆ ಆರೋಪದ ಮೇಲೆ ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸಲು ಹೋದ ಪೊಲೀಸರೇ ಆತನನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟ ವಿಚಿತ್ರ ಪ್ರಕರಣವೊಂದು ದೆಹಲಿಯಲ್ಲಿ ಬುಧವಾರದಂದು ಬೆಳಕಿಗೆ ಬಂದಿದೆ.

    ನಗರದ ರಣಹೋಲಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌  ಸುಬೆ ಸಿಂಗ್, ಮುಖ್ಯ ಪೇದೆ ಇಂಧು ಪಾವಟ್, ಪೇದೆ ಅಜಯ್ ಕುಮಾರ್ ಅಪಹರಣ ಮಾಡಿದ ಪೊಲೀಸರು. ಚಂಡೀಗಢದಲ್ಲಿ ಆರು ಜನರ ಮೇಲೆ ವಂಚನೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದರು. ಆದರೆ ಪ್ರಧಾನ್ ಎಂಬ ಆರೋಪಿ ಪರಾರಿಯಾಗಿದ್ದನು.

    ದೆಹಲಿಯಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಪ್ರಧಾನ್‍ನನ್ನು ಪತ್ತೆ ಹಚ್ಚಿದ ರಣಹೋಲಾ ಠಾಣೆಯ ಮೂವರು ಪೊಲೀಸರು, ಆತನನ್ನು ಬಂಧಿಸುವ ಬದಲು ಅಪಹರಿಸಿ ಉತ್ತಮ್‍ನಗರದ ಮನೆಯೊಂದರಲ್ಲಿ ಕೂಡಿ ಹಾಕಿದ್ದರು. ಬಳಿಕ ಆರೋಪಿಯ ಪತ್ನಿಗೆ ಕರೆ ಮಾಡಿ 1.5 ಕೋಟಿ ರೂ. ಹಣವನ್ನು ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಹಣ ಕೊಡಲು ನಿರಾಕರಿಸಿದರೆ ಪ್ರಧಾನ್ ಮೇಲೆ ಈಗಾಗಲೇ ಇರುವ ವಂಚನೆ ಪ್ರಕರಣದ ಜೊತೆಗೆ ಸುಳ್ಳು ಕೇಸ್‍ಗಳನ್ನು ಹಾಕುವುದಾಗಿ ಬೆದರಿಸಿದ್ದಾರೆ.

    ಪೊಲೀಸರು ಆರೋಪಿಯನ್ನು ಅಪಹರಿಸಿರುವ ಮಾಹಿತಿ ಹಿರಿಯಾ ಪೊಲೀಸ್ ಅಧಿಕಾರಿಗಳಿಗೆ ತಿಳಿಯುತ್ತಿದ್ದಂತೆ ಅಪಹರಣದಲ್ಲಿ ಭಾಗಿಯಾಗಿದ್ದ ಮೂವರು ಪೊಲೀಸರನ್ನು ಕರ್ತವ್ಯದಿಂದ ವಜಾಗೊಳಿಸಿ ಬಂಧಿಸಿದ್ದಾರೆ.

    ಈ ಘಟನೆ ಕುರಿತು ದೆಹಲಿಯ ರಣಹೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗ್ಳೂರು ಹಾರರ್ – ಓಲಾ ಚಾಲಕನನ್ನು ಅಪಹರಿಸಿ ಬಿಡುಗಡೆಗಾಗಿ ಪತ್ನಿಯನ್ನು ಬೆತ್ತಲೆಗೊಳಿಸಿದ ಕಾಮುಕರು!

    ಬೆಂಗ್ಳೂರು ಹಾರರ್ – ಓಲಾ ಚಾಲಕನನ್ನು ಅಪಹರಿಸಿ ಬಿಡುಗಡೆಗಾಗಿ ಪತ್ನಿಯನ್ನು ಬೆತ್ತಲೆಗೊಳಿಸಿದ ಕಾಮುಕರು!

    ಸಾಂಧರ್ಬಿಕ ಚಿತ್ರ

    ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದ ಕಾಮುಕರು ಓಲಾ ಚಾಲಕನನ್ನು ಅಪಹರಿಸಿ ಬಿಡುಗಡೆಗಾಗಿ ಆತನ ಪತ್ನಿಯ ಬೆತ್ತಲೆ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ಅಮಾನವೀಯ ಘಟನೆ ರಾಜಧಾನಿಯಲ್ಲಿ ನಡೆದಿದೆ.

    ಹೌದು, ನಗರದ ಬೊಮ್ಮಸಂದ್ರ ಏರಿಯಾದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಓಲಾ ಕ್ಯಾಬ್ ಚಾಲಕನನ್ನು ಅಪಹರಿಸಿ, ಚಿತ್ರಹಿಂಸೆ ನೀಡಿದ್ದಾರೆ. ಬಳಿಕ ಆತನ ಹೆಂಡತಿಗೆ ಕರೆ ಮಾಡಿ ಹೆದರಿಸಿ, ಆಕೆಯ ಬೆತ್ತಲೆ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದಾರೆ.

    ಏನಿದು ಪ್ರಕರಣ?
    ಕಳೆದ ಶುಕ್ರವಾರ ರಾತ್ರಿ ಬೊಮ್ಮಸಂದ್ರದಿಂದ ಕ್ಯಾಬ್ ಚಾಲಕನಿಗೆ ಪ್ರಯಾಣಿಕರನ್ನು ಪಿಕ್‍ಅಪ್ ಮಾಡಿಕೊಳ್ಳಲು ಕರೆ ಬಂದಿತ್ತು. ಕೂಡಲೇ ಚಾಲಕ ನಿಗಧಿತ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಕ್ಯಾಬ್‍ಗಾಗಿ ಕಾಯುತ್ತಿದ್ದ 4 ಮಂದಿ, ಕಾರು ಬರುತ್ತಿದ್ದಂತೆ ಹತ್ತಿ ಕುಳಿತಿದ್ದಾರೆ. ಈ ವೇಳೆ ಚಾಲಕ ಎಲ್ಲಿಗೆ ಹೋಗಬೇಕು ಎಂದು ಕೇಳಿದಾಗ, ಏಕಾಏಕಿ ನಾಲ್ವರು ಹಲ್ಲೆ ಮಾಡಿದ್ದಾರೆ. ಅಲ್ಲದೇ ಬಲವಂತವಾಗಿ ಚಾಲಕನ್ನು ಹಿಂಬದಿ ಸೀಟಿಗೆ ಹಾಕಿ, ಮತ್ತೊಬ್ಬ ಕಾರು ಚಾಲನೆಗೆ ಮುಂದಾಗಿದ್ದನು.

    ಈ ವೇಳೆ ಕಾರನ್ನು ರಾಮನಗರ ಕಡೆ ಚಲಾಯಿಸಿದ್ದರು. ಅಲ್ಲದೇ ಕಾರು ಚಾಲಕನ ವಾಲೆಟ್ ನಲ್ಲಿದ್ದ 9 ಸಾವಿರ ರೂಪಾಯಿಯನ್ನು ನೋಡಿ ಹೆಚ್ಚಿನ ಹಣಕ್ಕಾಗಿ ಚಾಲಕನಿಗೆ ಚಿತ್ರಹಿಂಸೆ ನೀಡಿದ್ದಾರೆ. ಈ ವೇಳೆ ಚಾಲಕ ತನ್ನ ಅಳಿಯನಿಗೆ ಕರೆಮಾಡಿ 22 ಸಾವಿರ ರೂಪಾಯಿಯನ್ನು ತನ್ನ ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಖಾತೆಗೆ ಹಣ ಬರುತ್ತಿದ್ದಂತೆ ದುಷ್ಕರ್ಮಿಗಳು ಹತ್ತಿರದ ಎಟಿಎಂನಲ್ಲಿ ಹಣ ಡ್ರಾ ಮಾಡಿಸಿದ್ದಾರೆ. ನಂತರ ಮೈಸೂರು ಮಾರ್ಗವಾಗಿ ತೆರಳಿ, ಚನ್ನಪಟ್ಟಣದ ಹೋಟೆಲ್ ನಲ್ಲಿ ರೂಂ ಬುಕ್ ಮಾಡಿ ಚಾಲಕನನ್ನು ಕೂಡಿ ಹಾಕಿದ್ದಾರೆ.

    ಇಷ್ಟಕ್ಕೆ ಸುಮ್ಮನಾಗದ ದುಷ್ಕರ್ಮಿಗಳು, ಚಾಲಕನ ಫೋನ್ ಪಡೆದು ಪತ್ನಿಗೆ ವಿಡಿಯೋ ಕಾಲ್ ಮಾಡಿ ಬೆತ್ತಲೆಯಾಗಿ ನಿಲ್ಲುವಂತೆ ಹೆದರಿಸಿದ್ದಾರೆ. ಅಲ್ಲದೇ ನಮ್ಮ ಬೇಡಿಕೆಯನ್ನು ಈಡೇರಿಸದೇ ಇದ್ದರೆ ನಿನ್ನ ಪತಿಯನ್ನು ಕೊಲ್ಲುವುದಾಗಿ ಬೆದರಿಸಿದ್ದಾರೆ. ಪತಿಯ ಪ್ರಾಣಕ್ಕಾಗಿ ಪತ್ನಿ ಬೆತ್ತಲಾಗಿದ್ದಾಳೆ. ಬಳಿಕ ಈ ವಿಡಿಯೋವನ್ನು ಇಟ್ಟುಕೊಂಡು ನಮಗೆ ಹಣ ಬೇಕು ಇಲ್ಲದಿದ್ದರೇ, ನಿನ್ನ ಹೆಂಡತಿಯ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ದುಷ್ಕರ್ಮಿಗಳ ಕೈಗೆ ಸಿಕ್ಕು ನಲುಗಿದ್ದ ಚಾಲಕ ಶನಿವಾರ ಮಧ್ಯಾಹ್ನ ಶೌಚಾಲಯದ ಕಿಟಕಿ ಒಡೆದು ಅವರಿಂದ ತಪ್ಪಿಸಿಕೊಂಡು ಬಂದಿದ್ದಾನೆ. ಚಾಲಕ ತಪ್ಪಿಸಿಕೊಳ್ಳುತ್ತಿದ್ದಂತೆ ಹೆದರಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

    ದುಷ್ಕರ್ಮಿಗಳಿಂದ ತಪ್ಪಿಸಿಕೊಂಡ ಚಾಲಕ ನೇರವಾಗಿ ಚನ್ನಪಟ್ಟಣ ಪೊಲೀಸರ ಬಳಿ ಹೋಗಿದ್ದಾನೆ. ಆದರೆ ದೂರು ದಾಖಲಿಸಿಕೊಳ್ಳುವ ಬದಲು ಪೊಲೀಸರು, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ನೀನು ಬೆಂಗಳೂರಿಗೆ ಹೋಗಿ ದೂರು ನೀಡೆಂದು ಪೊಲೀಸರೊಂದಿಗೆ ಕಳುಹಿಸಿಕೊಟ್ಟಿದ್ದಾರೆ. ಬಳಿಕ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾಗಿದ್ದರು. ಈ ವೇಳೆ ನಡೆದ ಎಲ್ಲಾ ಘಟನೆಯನ್ನು ಪೊಲೀಸರ ಮುಂದೆ ಚಾಲಕ ತೋಡಿಕೊಂಡಿದ್ದಾನೆ.

    ಆಡಗೋಡಿ ಪೊಲೀಸರ ಆರೋಪಿಗಳ ವಿರುದ್ಧ ಅಪಹರಣ, ದರೋಡೆ ಮತ್ತು ಬೆದರಿಕೆ ದೂರನ್ನು ದಾಖಲಿಸಿಕೊಂಡಿದ್ದಾರೆ. ಕೂಡಲೇ ಕಾರ್ಯಪ್ರವೃತರಾಗಿ ರಾಬಿನ್ ಮತ್ತು ಅರುಣ್ ಬೆತ್ನಿ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇನ್ನುಳಿದ ಇಬ್ಬರು ತಲೆಮರೆಸಿಕೊಂಡಿದ್ದಾರೆ. ಇವರಿಬ್ಬರ ಪತ್ತೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ.

    ಈ ಕುರಿತು ಮಾಧ್ಯಮಕ್ಕೆ ಪತ್ರಿಕ್ರಿಯಿಸಿರುವ ಚಾಲಕ, ಪತ್ನಿಯ ಬೆತ್ತಲೆ ವಿಡಿಯೋ ಮಾಡಿರುವುದು ಕುಟುಂಬದ ಮಾನದ ಪ್ರಶ್ನೆ ಎಂದು ಪೊಲೀಸರು ಹೇಳಿದ್ದರು. ಹೀಗಾಗಿ ನಾನು ಆರೋಪಿಗಳ ವಿರುದ್ಧ ಅಪಹರಣ, ದರೋಡೆ ಮತ್ತು ಬೆದರಿಕೆಯ ದೂರನ್ನು ದಾಖಲಿಸಿದ್ದೇನೆಂದು ಹೇಳಿದ್ದಾರೆ.

    ಘಟನೆ ಬಗ್ಗೆ ಒಲಾ ವಕ್ತಾರು ಪ್ರತಿಕ್ರಿಯಿಸಿ, ಇದೊಂದು ದುರದೃಷ್ಟಕರ ಘಟನೆ, ಚಾಲಕ ಮತ್ತು ಅವರ ಕುಟುಂಬದವರು ಎದುರಿಸಿದ ಪರಿಸ್ಥಿತಿ ನಿಜಕ್ಕೂ ಆಘಾತಕಾರಿ. ಇಂತಹ ಕೃತ್ಯವನ್ನು ನಾವು ಖಂಡಿಸುತ್ತೇವೆ. ಘಟನೆ ಬೆಳಕಿಗೆ ಬಂದ ಕೂಡಲೇ ಆ ಪ್ರಯಾಣಿಕರ ಒಲಾ ಖಾತೆಯನ್ನು ಕಪ್ಪು ಪಟ್ಟಿಗೆ ಸೇರಿಸಿದ್ದೇವೆ. ಈ ಮಧ್ಯೆ ಚಾಲಕನಿಗೆ ಮುಂದಿನ ತನಿಖೆ ವೇಳೆ ಎಲ್ಲಾ ರೀತಿಯಲ್ಲಿಯೂ ಸಹಕರಿಸುವುದಾಗಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 9 ಬಾಲಕಿಯರನ್ನು ರೇಪ್‍ಗೈದು ಕೊಲೆ ಮಾಡಿದ್ದ ಆರೋಪಿಯ ಬಂಧನ

    9 ಬಾಲಕಿಯರನ್ನು ರೇಪ್‍ಗೈದು ಕೊಲೆ ಮಾಡಿದ್ದ ಆರೋಪಿಯ ಬಂಧನ

    -ವಿಚಾರಣೆಯಲ್ಲಿ ಬಿಚ್ಚಿಟ್ಟಿದ್ದು ಭಯಾನಕ ರಹಸ್ಯ

    ದೆಹಲಿ: ಗುರುಗ್ರಾಮ ನಗರದ ಸೆಕ್ಟೇರ್ 66ರಲ್ಲಿ ಮೂರು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಭಯಾನಕ ಸತ್ಯವನ್ನು ಬಿಚ್ಚಿಟ್ಟಿದ್ದಾನೆ.

    ಪೊಲೀಸ್ ವಿಚಾರಣೆಯಲ್ಲಿ ಬಂಧಿತ ಆರೋಪಿ, ಇದೂವರೆಗೂ 9 ಬಾಲಕಿಯರನ್ನು ಅತ್ಯಾಚಾರಗೊಳಿಸಿ ಕೊಲೆ ಮಾಡಿದ್ದೇನೆ ಎಂಬ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ 3 ರಿಂದ 8 ವರ್ಷದ ಬಾಲಕಿಯರನ್ನು ಟಾರ್ಗೆಟ್ ಮಾಡುತ್ತಿದ್ದನು ಎಂಬುವುದು ತಿಳಿದು ಬಂದಿದೆ. ಗುರುಗ್ರಾಮದಲ್ಲಿ 3, ಗ್ವಾಲಿಯರ್ 1, ಝಾನ್ಸಿ 1 ಮತ್ತು ದೆಹಲಿಯಲ್ಲಿ 4 ಪ್ರಕರಣಗಳು ಈತನ ಮೇಲೆ ದಾಖಲಾಗಿವೆ. ಈಗಾಗಲೇ ದೆಹಲಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಠಾಣೆಗಳಿಗೆ ಮಾಹಿತಿ ರವಾನಿಸಿದ್ದಾರೆ.

    ನವೆಂಬರ್ 12ರಂದು ಸೆಕ್ಟರ್ 66ರಲ್ಲಿ ಮೂರು ವರ್ಷದ ಬಾಲಕಿಯ ಶವ ಪತ್ತೆಯಾಗಿತ್ತು. ಈ ಬಾಲಕಿ ನವೆಂಬರ್ 11ರಂದು ಮನೆಯಿಂದ ಕಾಣೆಯಾಗಿದ್ದಳು. ಬಾಲಕಿಯನ್ನು ಅತ್ಯಾಚಾರಗೊಳಿಸಿ ಬರ್ಬರವಾಗಿ ಹತ್ಯೆ ಮಾಡಿ ಶವವನ್ನು ಬಿಸಾಡಲಾಗಿತ್ತು. ಬಾಲಕಿಯ ಪೋಷಕರು ಝುಗ್ಗಿ ಏರಿಯಾದಲ್ಲಿ ವಾಸವಾಗಿರುವ ಸುನಿಲ್ ಎಂಬವನೇ ಈ ಕೃತ್ಯ ಎಸಗಿದ್ದಾನೆ ಎಂದು ಶಂಕೆ ವ್ಯಕ್ತಪಡಿಸಿದ್ದರು. ಪ್ರಕರಣ ಸಂಬಂಧ ಪೊಲೀಸರು ಸುನೀಲ್ ನ ತಾಯಿ ಮತ್ತು ಸೋದರಿ ಇಂದ ಮಾಹಿತಿ ಕಲೆ ಹಾಕಿದ್ದಾರೆ. ಕೊನೆಗೆ ಪೊಲೀಸರು ಝಾಂಸಿಯ ಮಗರಪುರ ಎಂಬ ಗ್ರಾಮದಲ್ಲಿ ಆರೋಪಿ ಸುನೀಲನ ಬಂಧನವಾಗಿದೆ.

    ಸತ್ಯ ಕಕ್ಕಿದ ಕಾಮುಕ:
    ಅನುಮಾನಾಸ್ಪದವಾಗಿ ಬಂಧಿತನಾಗಿದ್ದ ಸುನೀಲ್ ನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ತಾನು ಹಿಂದೆ ಮಾಡಿದ್ದ ಕೃತ್ಯಗಳ ಬಗ್ಗೆಯೂ ಮಾಹಿತಿಯನ್ನು ಹೊರ ಹಾಕಿದ್ದಾನೆ. ಬಾಲಕಿಯರಿಗೆ ಚಾಕಲೇಟ್ ನೀಡುತ್ತೇನೆ ಎಂದು ಕರೆದುಕೊಂಡು ಹೋಗಿ ಮೊದಲಿಗೆ ಅವರ ಕಾಲುಗಳನ್ನು ಊನಗೊಳಿಸುತ್ತಿದ್ದ. ಬಾಲಕಿಯರು ಓಡಿ ಹೋಗಲು ನಿಸ್ಸಾಹಾಯಕರಾದ ಅತ್ಯಾಚಾರ ಎಸಗುತ್ತಿದ್ದನು. ನಂತರ ಕಲ್ಲಿನಿಂದ ಮುಖವನ್ನು ಜಜ್ಜಿ ಕೊಲೆಗೈದು ಶವವನ್ನು ನಿರ್ಜನ ಪ್ರದೇಶದಲ್ಲಿ ಎಸೆದು ಪರಾರಿಯಾಗುತ್ತಿದ್ದನು. ಕೊನೆಗೆ ಮದ್ಯ ಸೇವಿಸಿ ಎಂಜಾಯ್ ಮಾಡುತ್ತಿದ್ದನು.

    ಯಾರಿವನು ಸುನಿಲ್?
    8 ವರ್ಷಗಳ ಹಿಂದೆ ಸುನಿಲ್ ತಂದೆ ಸಾವನ್ನಪ್ಪುತ್ತಾರೆ. ಇದಾದ ಬಳಿಕ ಮನೆಯಿಂದ ಹೊರ ಉಳಿದ ಗುರುದ್ವಾರ, ಮಂದಿರ, ಮಠಗಳಲ್ಲಿ ಊಟ ಮಾಡಿಕೊಂಡು ಜೀವನ ಸಾಗಿಸುತ್ತಿದ್ದನು. ಹೆಚ್ಚಾಗಿ ಮನೆಯಿಂದ ಹೊರಗೆ ಉಳಿದುಕೊಳ್ಳುತ್ತಿದ್ದ ಸುನಿಲ್ ಹಣದ ಅವಶ್ಯಕತೆಯಿದ್ದಾಗ ಮಾತ್ರ ನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದನು. ಕಳೆದ ಎರಡು ವರ್ಷಗಳಲ್ಲಿ ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ ಎಸೆಗಿ ಕೊಲೆ ಮಾಡಲು ಆರಂಭಿಸಿದ್ದ ಎಂಬುವುದು ಪೊಲೀಸ್ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

    ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ದೆಹಲಿ ಅಪರಾಧ ವಿಭಾಗದ ಡಿಸಿಪಿ ಸುಮಿತ್ ಕುಮಾರ್, ನವೆಂಬರ್ 11ರನ್ನು ಬಾಲಕಿತಯನ್ನು ಕೊಲೆಗೈದ ಬಳಿಕ ಆರೋಪಿ ಸುನಿಲ್, ಗುರುಗ್ರಾಮದಲ್ಲಿರುವ ಗುರುದ್ವಾರದಲ್ಲಿ ಊಟ ಮಾಡಿ, ಕಮಲಾ ನೆಹರು ಪಾರ್ಕ್ ನಲ್ಲಿ ಮಲಗಿದ್ದಾನೆ. ನವೆಂಬರ್ 12ರ ಬೆಳಗ್ಗೆ ರೈಲಿನ ಮುಖಾಂತರ ದೆಹಲಿ ತಲುಪಿದ್ದಾನೆ. ನವೆಂಬರ್ 13ರವರೆಗೆ ದೆಹಲಿ ಸುತ್ತಾಡಿ, ನಿಜಾಮುದ್ದೀನ್ ರೈಲ್ವೇ ನಿಲ್ದಾಣದ ಸೇತುವೆಯ ಕೆಳಗೆ ಮಲಗಿದ್ದಾನೆ. ನವೆಂಬರ್ 14 ಝಾನ್ಸಿ ನಗರಕ್ಕೆ ತೆರಳುವ ರೈಲನ್ನು ಹತ್ತಿದ್ದಾನೆ. ಆ ಒಂದು ದಿನ ಝಾನ್ಸಿಯಲ್ಲಿ ತಿರುಗಾಡಿದ್ದಾನೆ. ಖಚಿತ ಮಾಹಿತಿ ಆಧಾರದ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಕೊಲೆಗಳಲ್ಲಿ ಸಾಮ್ಯತೆ:
    ಸುನಿಲ್ ಮಾಡಿದ ಒಂಭತ್ತು ಕೊಲೆಗಳಲ್ಲಿ ಒಂದು ಅಂಶ ಸಾಮ್ಯತೆ ಎಲ್ಲ ಪ್ರಕರಣಗಳಲ್ಲಿ ದಾಖಲಾಗಿತ್ತು. ಬಾಲಕಿಯರನ್ನು ಅಪಹರಿಸಿದ ಬಳಿಕ ಓಡಿ ಹೋಗಬಾರದೆಂದು ಮೊದಲಿಗೆ ಪುಟ್ಟ ಕಂದಮ್ಮಗಳ ಕಾಲುಗಳನ್ನೇ ಊನಗೊಳಿಸುತ್ತಿದ್ದನು. 2016ರಲ್ಲಿ ಮೊದಲ ಬಾರಿಗೆ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆಗೈದಿದ್ದ. ಬಳಿಕ ಬಾಲಕಿಯ ದೇಹವನ್ನು ನಗರದ ಓಮ್ಯಾಕ್ಸ್ ಮಾಲ್ ಹಿಂದೆ ಎಸೆದಿದ್ದನು. ಮೊದಲ ಘಟನೆಯ ಎರಡು ತಿಂಗಳ ನಂತರ ಅಂದ್ರೆ 2017 ಜನವರಿಯಲ್ಲಿ 5 ವರ್ಷದ ಬಾಲಕಿಯನ್ನು ಕೊಲೆ ಮಾಡಿದ್ದನು. ಹೀಗೆಯೇ ತನ್ನ ಕ್ರೌರ್ಯವನ್ನು ಮೆರೆಯುತ್ತಾ, ಗುರುಗ್ರಾಮದಲ್ಲಿ 3, ಗ್ವಾಲಿಯರ್ 1, ಝಾನ್ಸಿ 1 ಮತ್ತು ದೆಹಲಿಯಲ್ಲಿ 4, ಒಟ್ಟು 9 ಕಂದಮ್ಮಗಳ ಸಾವಿಗೆ ಕಾರಣನಾಗಿದ್ದಾನೆ.

    ಪೊಲೀಸರಿಂದ ನಾನಾ ಕಸರತ್ತು:
    ಸುನಿಲ್ ಕುಟುಂಬಸ್ಥರ ಹೇಳಿಕೆ ಪಡೆದಿದ್ದ, ಪೊಲೀಸರ ಆತನ ನಡವಳಿಕೆ ಮತ್ತು ವರ್ತನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದರು. ಆತ ಹೆಚ್ಚಾಗಿ ಮಠ, ಮಂದಿರಗಳಲ್ಲಿ ನೀಡಲಾಗುವ ಉಚಿತ ಊಟವನ್ನು ಸೇವಿಸುತ್ತಾನೆ ಎಂಬ ವಿಚಾರ ತಿಳಿದಿತ್ತು. ಸುನಿಲ್ ಬಂಧನಕ್ಕಾಗಿಯೇ ಪೊಲೀಸರು ಗುರುಗ್ರಾಮದಲ್ಲಿ ಮಂಗಳವಾರ ಹನುಮಾನ್ ಮಂದಿರ, ಗುರುವಾರ ಸಾಯಿ ಮಂದಿರ ಮತ್ತು ಶನಿವಾರ ಶನಿ ದೇವಸ್ಥಾನದಲ್ಲಿ ಉಚಿತ ಊಟವನ್ನು ಏರ್ಪಡಿಸಿದ್ದರು. ಈ ಮೂರು ದಿನ ಪೊಲೀಸರು ಬರೋಬ್ಬರಿ 2 ಸಾವಿರಕ್ಕೂ ಅಧಿಕ ಜನರನ್ನು ಪರಿಶೀಲನೆ ನಡೆಸಿದ್ದರು. ಆದರೆ ಸುನಿಲ್ ಯಾವ ಊಟದ ಕಾರ್ಯಕ್ರಮಕ್ಕೂ ಹಾಜರಾಗಿರಲಿಲ್ಲ.

    ಆರೋಪಿ ಪತ್ತೆಯಾಗಿದ್ದು ಹೇಗೆ?
    ಎಂಟು ಪ್ರಕರಣದಿಂದ ತಪ್ಪಿಸಿಕೊಂಡಿದ್ದ ಸುನಿಲ್ ನವೆಂಬರ್ 12ರಂದು ನಡೆದ ಕೊಲೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಆರೋಪಿ ಬಾಲಕಿಯನ್ನು ಕರೆದುಕೊಂಡು ಹೋಗುತ್ತಿದ್ದಾಗ, ಕೆಲ ಕೂಲಿ ಕಾರ್ಮಿಕರು ಗಮನಿಸಿದ್ದರು. ಈ ಕೂಲಿ ಕಾರ್ಮಿಕರು ಸುನಿಲ್ ಕುಟುಂಬಸ್ಥರು ವಾಸವಾಗಿದ್ದ ಸ್ಲಂನಲ್ಲಿಯೇ ಇದ್ದರು. ಹೀಗಾಗಿ ಕೆಲವರು ಆರೋಪಿಯನ್ನು ಮುಖ ಚಹರೆಯನ್ನು ಗುರುತು ಹಿಡಿದಿದ್ದರು. ಬಾಲಕಿ ಕಾಣೆಯಾಗಿದ್ದ ದಿನ ಆರೋಪಿ ಸೆಕ್ಟರ್ 66ರಲ್ಲಿ ಅನುಮಾನಾಸ್ಪದವಾಗಿ ತಿರುಗಾಡಿದ್ದು ಕೆಲ ಸಿಸಿಟಿವಿಗಳಲ್ಲಿ ಸೆರೆಯಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸೋದರಿಯರನ್ನ ಕೂಡಿ ಹಾಕಿ 2 ದಿನ ಮೂವರಿಂದ ನಿರಂತರ ಗ್ಯಾಂಗ್‍ರೇಪ್

    ಸೋದರಿಯರನ್ನ ಕೂಡಿ ಹಾಕಿ 2 ದಿನ ಮೂವರಿಂದ ನಿರಂತರ ಗ್ಯಾಂಗ್‍ರೇಪ್

    ಅಗರ್ತಲಾ: 13 ವರ್ಷದ ಅಪ್ರಾಪ್ತೆ ಮತ್ತು ಆಕೆಯ ಸಹೋದರಿಯನ್ನು ಅಪಹರಿಸಿ ಎರಡು ದಿನಗಳ ಕಾಲ ಕೂಡಿ ಹಾಕಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ತ್ರಿಪುರಾದ ಉನಾಕೋಟಿ ಜಿಲ್ಲೆಯಲ್ಲಿ ನಡೆದಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷದ ಆಟೋರಿಕ್ಷಾ ಚಾಲಕನನ್ನು ಬಂಧಿಸಲಾಗಿದೆ. ಆಟೋ ಚಾಲಕ ಸೇರಿ ಮೂವರು ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮೂವರಲ್ಲಿ ಈತನೇ ಮುಖ್ಯ ಆರೋಪಿ ಎಂದು ತಿಳಿದುಬಂದಿದೆ ಅಂತ ಪೊಲೀಸರು ತಿಳಿಸಿದ್ದಾರೆ.

    ಘಟನೆ ವಿವರ:
    ಸಂತ್ರಸ್ತ ಸಹೋದರಿಯರು ಮನೆಗೆ ಹೋಗಲು ಕೈಲಾಶಹಾರ್ ಪಟ್ಟಣದ ಸೇತುವೆ ಬಳಿ ವಾಹನಕ್ಕಾಗಿ ಕಾಯುತ್ತಿದ್ದರು. ಸ್ವಲ್ಪ ಸಮಯದ ಬಳಿಕ ಆಟೋರಿಕ್ಷಾ ಬಂದಿದೆ. ಇಬ್ಬರು ಸಹೋದರಿಯರು ಆ ಆಟೋ ರಿಕ್ಷಾವನ್ನು ಹತ್ತಿದ್ದಾರೆ. ಆದರೆ ದಾರಿ ಮಧ್ಯೆ ಆಟೋ ಚಾಲಕ ಇಬ್ಬರು ಪುರುಷ ಪ್ರಯಾಣಿಕರನ್ನು ಆಟೋಗೆ ಹತ್ತಿಸಿಕೊಂಡಿದ್ದಾನೆ. ಆಟೋ ಚಾಲಕನು ಅವರನ್ನು ಮನೆಗೆ ಬಿಡುವ ಬದಲು ಇಬ್ಬರ ಜೊತೆ ಸೇರಿ ಅವರಿಗೆ ಟವೆಲ್ ಹೊದಿಸಿ ಖೌವಾ ಜಿಲ್ಲೆಯ ತೆಲಿಯಮುರಾ ಪಟ್ಟಣಕ್ಕೆ ಕರೆದುಕೊಂಡು ಹೋಗಿದ್ದಾರೆ ಅಂತ ಸಂತ್ರಸ್ತೆಯರು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

    ಇಬ್ಬರನ್ನು ಒಂದು ರೂಮಿನಲ್ಲಿ ಕೂಡಿ ಹಾಕಿ ನಿರಂತರವಾಗಿ ಮೂವರು ಕಾಮುಕರು ಎರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಎರಡು ದಿನಗಳ ನಂತರ ಸಂತ್ರಸ್ತೆಯರನ್ನು ಟೆಲಿಮೂರ ರೈಲು ನಿಲ್ದಾಣದಲ್ಲಿ ಬಳಿ ಬಿಟ್ಟಿದ್ದಾರೆ. ಅಲ್ಲಿ ಅವರು ಸರ್ಕಾರಿ ರೈಲ್ವೆ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಮಹಿಳಾ ಪೊಲೀಸ್ ಅಧಿಕಾರಿ ಸಂಪಾ ದಾಸ್ ತಿಳಿಸಿದ್ದಾರೆ.

    ನಾವು ಸಂತ್ರಸ್ತೆಯರನ್ನು ನಮ್ಮ ವಶದಲ್ಲಿರಿಸಿಕೊಂಡು ಪೋಷಕರಿಗೆ ಮಾಹಿತಿ ತಿಳಿಸಿದ್ದೆವು. ಬಳಿಕ ಅವರು ಬಂದು ಕರೆದುಕೊಂಡು ಹೋಗಿದ್ದಾರೆ. ಸದ್ಯಕ್ಕೆ ಸಂತ್ರಸ್ತೆಯ ತಾಯಿ ಸಲ್ಲಿಸಿದ ದೂರಿನ ಆಧಾರದ ಮೇರೆಗೆ ಆಟೋರಿಕ್ಷಾ ಚಾಲಕನ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಆತನನ್ನು ಬಂಧಿಸಲಾಗಿದೆ. ಇತರ ಇಬ್ಬರು ಆರೋಪಿಗಳಿಗಾಗಿ ಬಲೆ ಬೀಸಿದ್ದೇವೆ ಎಂದು ಪೊಲೀಸ್ ಅಧಿಕಾರಿ ಸ್ವಪನ್ ದೇಬ್ಬರ್ಮಾ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕಿಡ್ನ್ಯಾಪರ್ ಮಹಿಳೆಯಿಂದ ತಮ್ಮನನ್ನು ಬಚಾವ್ ಮಾಡಿದ 10ರ ಪೋರ

    ಕಿಡ್ನ್ಯಾಪರ್ ಮಹಿಳೆಯಿಂದ ತಮ್ಮನನ್ನು ಬಚಾವ್ ಮಾಡಿದ 10ರ ಪೋರ

    ಮುಂಬೈ: ಬುರ್ಖಾ ಧರಿಸಿದ್ದ ಕಿಡ್ನ್ಯಾಪರ್ ಮಹಿಳೆಯಿಂದ ತನ್ನ ತಮ್ಮನ್ನನ್ನು 10 ವರ್ಷದ ಬಾಲಕ ಬೆನ್ನತ್ತಿ, ರಕ್ಷಿಸಿರುವ ಘಟನೆ ಮಹಾರಾಷ್ಟ್ರ ರಾಜಧಾನಿಯ ಥಾಣೆ ಪ್ರದೇಶದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಶುಕ್ರವಾರ ಮಧ್ಯಾಹ್ನ ಮುಂಬ್ರಾದ ಜರಿನಾ ಅಪಾರ್ಟ್‍ಮೆಂಟಿನ ಹೊರಗೆ ಮೂವರು ಮಕ್ಕಳು ಆಟವಾಡುತ್ತಿದ್ದರು. ಈ ವೇಳೆ ಎರಡೂವರೆ ವರ್ಷದ ಮಗುವನ್ನು ಬುರ್ಖಾ ಧರಿಸಿದ್ದ ಅಪರಿಚಿತ ಮಹಿಳೆಯೊಬ್ಬಳು ಪುಸಲಾಯಿಸಿ ಎತ್ತಿಕೊಂಡಿದ್ದಾಳೆ. ನಂತರ ಮಗುವಿನೊಂದಿಗೆ ತೆರಳಿದ್ದಾಳೆ. ಇದನ್ನು ಕಂಡ 10 ವರ್ಷದ ಬಾಲಕ ಆಕೆಯನ್ನು ಹಿಂಬಾಲಿಸಿಕೊಂಡು ಹೋಗಿದ್ದಾನೆ.

    ಬಾಲಕ ಮಹಿಳೆಯನ್ನು ವಿಚಾರಿಸಿದಾಗ ಮಗುವಿಗೆ ಚಾಕೊಲೆಟ್ ಕೊಡಿಸಲು ಕರೆದುಕೊಂಡು ಬಂದಿರುವುದಾಗಿ ಹೇಳಿದ್ದಾಳೆ. ನಂತರ ಮಗುವಿನೊಂದಿಗೆ ಓಡಿ ಹೋಗಲು ಯತ್ನಿಸಿದ್ದಾಳೆ. ಇದರಿಂದ ಅನುಮಾನಗೊಂಡ ಬಾಲಕ ಓಡಿಹೋಗಿ ಮನೆಗೆ ವಿಷಯ ಮುಟ್ಟಿಸಿದ್ದಾನೆ. ಬಾಲಕನ ಮಾತನ್ನು ಕೇಳಿದ ಪೋಷಕರು ಹಾಗೂ ಅಕ್ಕ-ಪಕ್ಕದ ಜನರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಜನರು ತನ್ನತ್ತ ಓಡಿ ಬರುತ್ತಿರುವುದನ್ನು ಗಮನಿಸಿದ ಮಹಿಳೆ, ಕೂಡಲೇ ಮಗುವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾಳೆ.

    ಈ ಕುರಿತು ಬಾಲಕನ ಚಿಕ್ಕಪ್ಪ ಮಾತನಾಡಿ, ಮದುವೆಯ ನಿಮಿತ್ತ ಬಾಲಕರು ತಮ್ಮ ಪೋಷಕರೊಂದಿಗೆ ಬಂದಿದ್ದರು. ಮನೆಯಲ್ಲಿ ಮದುವೆಯ ಸಿದ್ಧತೆಯಲ್ಲಿ ತೊಡಗಿದ್ದರಿಂದ ಮಕ್ಕಳ ಕಡೆ ಗಮನಹರಿಸಿರಲಿಲ್ಲ. ಶುಕ್ರವಾರ ಮಧ್ಯಾಹ್ನ 1.30ರ ಸುಮಾರಿಗೆ ಅಪರಿಚಿತ ಮಹಿಳೆಯೊಬ್ಬಳು ಮಗುವನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ ಎಂದು ತಿಳಿಸಿದ್ದಾರೆ.

    ಕಿಡ್ನ್ಯಾಪ್ ಕುರಿತು ಪ್ರತಿಕ್ರಿಯಿಸಿರುವ ಮುಂಬ್ರಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಕಿಶೋರ್ ಪಸಾಲ್ಕರ್, ಅಪರಿಚಿತ ಮಹಿಳೆಯೊಬ್ಬಳು ಮಗುವನ್ನು ಅಪಹರಿಸುವ ವಿಫಲ ಯತ್ನ ನಡೆಸಿದ್ದರ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಗುವಿನ ಪೋಷಕರು ಯಾವುದೇ ದೂರು ನೀಡಿಲ್ಲ. ಆದರೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅತಿಥಿ ಶಿಕ್ಷಕನಿಂದ ವಿದ್ಯಾರ್ಥಿನಿ ಅಪಹರಣ: ಪೊಲೀಸರಿಂದ ಬಾಲಕಿ ರಕ್ಷಣೆ

    ಅತಿಥಿ ಶಿಕ್ಷಕನಿಂದ ವಿದ್ಯಾರ್ಥಿನಿ ಅಪಹರಣ: ಪೊಲೀಸರಿಂದ ಬಾಲಕಿ ರಕ್ಷಣೆ

    ಚಿಕ್ಕೋಡಿ: ಪ್ರೌಢಶಾಲಾ ಅತಿಥಿ ಶಿಕ್ಷಕ ಅಪಹರಿಸಿದ್ದ ವಿದ್ಯಾರ್ಥಿನಿಯನ್ನು ಯಮಕನಮರಡಿ ಪೊಲೀಸರು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಗುಟಗುದ್ದಿ ಗ್ರಾಮದ ಹೈಸ್ಕೂಲ್ ವಿದ್ಯಾರ್ಥಿನಿ ಅಪಹರಣ ಪ್ರಕರಣ ಸುಖಾಂತ್ಯಗೊಂಡಿದ್ದು, ಖಾನಾಪೂರ ತಾಲೂಕಿನ ಕಾಟಗಳ್ಳಿ ಗ್ರಾಮದಲ್ಲಿ ಅಪಹರಣಗೊಂಡಿದ್ದ 9ನೇ ತರಗತಿ ವಿದ್ಯಾರ್ಥಿ ಆರತಿ(ಹೆಸರು ಬದಲಾಯಿಸಲಾಗಿದೆ)ಯನ್ನು ಪೊಲೀಸರು ರಕ್ಷಿಸಿದ್ದಾರೆ. ಅಲ್ಲದೇ ಅಪಹರಣ ಮಾಡಿದ್ದ ಅತಿಥಿ ಶಿಕ್ಷಕ ಸಿದ್ರಾಯ ಲಕ್ಷ್ಮಣ ನಿಂಗರಾಯಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಏನಿದು ಪ್ರಕರಣ?
    ಗುಟಗುದ್ದಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದ ಸಿದ್ರಾಯ ಲಕ್ಷ್ಮಣ ನಿಂಗರಾಯಿ (34), ಅದೇ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಆರತಿಯನ್ನು ಅಕ್ಟೋಬರ್ 30 ರಂದು ಕಿಡ್ನಾಪ್ ಮಾಡಿದ್ದ. ಈ ಸಂಬಂಧ ವಿದ್ಯಾರ್ಥಿನಿ ತಂದೆ ಪೊಲೀಸರಿಗೆ ದೂರು ನೀಡಿದ್ದರು.

    ದೂರಿನಲ್ಲಿ ಏನಿತ್ತು?
    ಅಕ್ಟೋಬರ್ 30 ರಂದು ನನ್ನ ಮಗಳು ಶಾಲೆಯಲ್ಲಿ ಪರೀಕ್ಷೆ ಇದೆ ಎಂದು ಹೇಳಿ ಹೋಗಿದ್ದು, ಸಂಜೆಯಾದವರೂ ವಾಪಸ್ ಬರಲಿಲ್ಲ. ಬಳಿಕ ನಾನು ಗ್ರಾಮದ ಸುತ್ತಮುತ್ತ ಮತ್ತು ಸಂಬಂಧಿಕರ ಮನೆಗೆ ಹೋಗಿ ಹುಡುಕಿದೆವು. ಆದರೆ ನನ್ನ ಮಗಳು ಎಲ್ಲೂ ಪತ್ತೆಯಾಗಿಲ್ಲ. ಬಳಿಕ ನಮ್ಮ ಊರಿನ ಜನರು ಸಿದ್ರಾಮ ಲಕ್ಷ್ಮಣ ನಿಂಗರಾಯ ಜೊತೆಗೆ ಬೇರೆ ಊರಿಗೆ ಹೋಗುತ್ತಿದ್ದನ್ನು ನೋಡಿರುವುದಾಗಿ ಹೇಳಿದ್ದರು. ಈ ಬಗ್ಗೆ ತಿಳಿದ ತಕ್ಷಣ ಆತನ ಮನೆಗೆ ಹೋಗಿ ವಿಚಾರಿಸಿದೆ. ಆದರೆ ಆತ ಮನೆಯಲ್ಲಿ ಇರಲಿಲ್ಲ. ಸಿದ್ರಾಮ ನನ್ನ ಮಗಳ ಜೊತೆ ಪ್ರೀತಿಯ ನಾಟಕವಾಡಿ, ಮನೆ ಬಿಟ್ಟು ಬರುವಂತೆ ಆಕೆಯ ತಲೆ ಕೆಡಿಸಿ ಅಪಹರಿಸಿಕೊಂಡು ಹೋಗಿದ್ದಾನೆ. ದಯವಿಟ್ಟು ನನ್ನ ಮಗಳನ್ನು ಹುಡುಕಿಕೊಡಿ ಎಂದು ವಿದ್ಯಾರ್ಥಿನಿಯ ತಂದೆ ಯಮಕನಮರಡಿ ಪೊಲೀಸರಿಗೆ ದೂರು ಕೊಟ್ಟಿದ್ದರು.

    ಪತ್ತೆಯಾಗಿದ್ದು ಹೇಗೆ?
    ಪೊಲೀಸರು ವಿದ್ಯಾರ್ಥಿನಿ ಅಪಹರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ವಿದ್ಯಾರ್ಥಿನಿ ತಂದೆಯ ದೂರಿನ ಹಿನ್ನೆಲೆಯಲ್ಲಿ, ಅತಿಥಿ ಶಿಕ್ಷಕ ಸಿದ್ರಾಯಿ ಸಂಬಂಧಿಕರು ಹಾಗೂ ಸ್ನೇಹಿತರನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಸಿದ್ರಾಯಿಯ ಫೋನ್ ನಂಬರ್ ಚೆಕ್ ಮಾಡಿದ್ದಾರೆ. ಟವರ್ ಪರಿಶೀಲನೆ ವೇಳೆ ಲೋಕೇಶನ್ ಖಾನಾಪೂರ ತಾಲೂಕಿನ ಕಾಟಗಳ್ಳಿ ಗ್ರಾಮದಲ್ಲಿರುವುದು ತಿಳಿದು ಬಂದಿದೆ. ಕೂಡಲೇ ಎಚ್ಚೆತ್ತ ಪೊಲೀಸರು ಕಾಟಹಳ್ಳಿ ಗ್ರಾಮಕ್ಕೆ ತೆರಳಿ, ವಿದ್ಯಾರ್ಥಿನಿಯನ್ನು ರಕ್ಷಿಸಿದ್ದಾರೆ. ಅಲ್ಲದೇ ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರೌಢ ಶಾಲಾ ಅತಿಥಿ ಶಿಕ್ಷಕನಿಂದ ವಿದ್ಯಾರ್ಥಿನಿ ಅಪಹರಣ

    ಪ್ರೌಢ ಶಾಲಾ ಅತಿಥಿ ಶಿಕ್ಷಕನಿಂದ ವಿದ್ಯಾರ್ಥಿನಿ ಅಪಹರಣ

    ಬೆಳಗಾವಿ: ಪ್ರೌಢಶಾಲಾ ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಯನ್ನು ಅಪಹರಣ ಮಾಡಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ.

    ಸಿದ್ರಾಮ ಲಕ್ಷ್ಮಣ ನಿಂಗರಾಯ(28) ವಿದ್ಯಾರ್ಥಿನಿಯನ್ನು ಅಪಹರಿಸಿದ ಶಿಕ್ಷಕ. 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿ ಶಿಕ್ಷಕ ಪರಾರಿಯಾಗಿದ್ದಾನೆ. ಈ ಬಗ್ಗೆ ವಿದ್ಯಾರ್ಥಿನಿ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

    ದೂರಿನಲ್ಲಿ ಏನಿದೆ?
    ಅಕ್ಟೋಬರ್ 30 ರಂದು ನನ್ನ ಮಗಳು ಶಾಲೆಯಲ್ಲಿ ಪರೀಕ್ಷೆ ಇದೆ ಎಂದು ಹೇಳಿ ಹೋಗಿದ್ದು, ಸಂಜೆಯಾದವರೂ ವಾಪಸ್ ಬರಲಿಲ್ಲ. ಬಳಿಕ ನಾನು ಗ್ರಾಮದ ಸುತ್ತಮುತ್ತ ಮತ್ತು ಸಂಬಂಧಿಕರ ಮನೆಗೆ ಹೋಗಿ ಹುಡುಕಿದೆವು. ಆದರೆ ನನ್ನ ಮಗಳು ಎಲ್ಲೂ ಪತ್ತೆಯಾಗಿಲ್ಲ. ಬಳಿಕ ನಮ್ಮ ಊರಿನ ಜನರು ಸಿದ್ರಾಮ ಲಕ್ಷ್ಮಣ ನಿಂಗರಾಯ ಅವರ ಜೊತೆಗೆ ಬೇರೆ ಊರಿಗೆ ಹೋಗುತ್ತಿದ್ದನ್ನು ನೋಡಿರುವುದಾಗಿ ಹೇಳಿದ್ದಾರೆ.

    ಸಿದ್ರಾಮ ನನ್ನ ಮಗಳ ಜೊತೆ ಪ್ರೀತಿಯ ನಾಟಕವಾಡಿ, ಮನೆ ಬಿಟ್ಟು ಬರುವಂತೆ ಆಕೆಯ ತಲೆ ಕೆಡಿಸಿ ಅಪಹರಿಸಿಕೊಂಡು ಹೋಗಿದ್ದಾನೆ. ಈ ಬಗ್ಗೆ ತಿಳಿದ ತಕ್ಷಣ ಆತನ ಮನೆಗೂ ಹೋಗಿ ವಿಚಾರಿಸಿದೆ. ಆದರೆ ಆತ ಮನೆಯಲ್ಲಿ ಇರಲಿಲ್ಲ. ಕೊನೆಗೆ ಯಮಕನಮರಡಿ ಪೊಲೀಸರಿಗೆ ದೂರು ಕೊಟ್ಟಿದ್ದೇನೆ. ದಯವಿಟ್ಟು ನನ್ನ ಮಗಳನ್ನು ಹುಡುಕಿಕೊಡಿ ಎಂದು ದೂರಿನಲ್ಲಿ ವಿದ್ಯಾರ್ಥಿನಿಯ ತಂದೆ ಮನವಿ ಮಾಡಿಕೊಂಡಿದ್ದಾರೆ.

    ಈ ಘಟನೆ ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv