Tag: ಅಪಹರಣ

  • ಗರ್ಭಿಣಿ ಪತ್ನಿಯನ್ನ ನದಿಗೆ ದೂಡಿ ಕೊಲೆಗೆ ಯತ್ನಿಸಿದ ಪತಿಮಹಾಶಯ!

    ಗರ್ಭಿಣಿ ಪತ್ನಿಯನ್ನ ನದಿಗೆ ದೂಡಿ ಕೊಲೆಗೆ ಯತ್ನಿಸಿದ ಪತಿಮಹಾಶಯ!

    ಹಾವೇರಿ: ಪತಿ ಮಹಾಶಯನೊಬ್ಬ ತನ್ನ ಗರ್ಭಿಣಿ ಪತ್ನಿಯನ್ನು ನದಿಗೆ ತಳ್ಳಿ ಕೊಲೆಗೆ ಯತ್ನಿಸಿದ್ದು, ಅದೃಷ್ಟವಶಾತ್ ಮಹಿಳೆ ಬದುಕುಳಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

    ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕು ಚಿಕ್ಕಕಬ್ಬಾರ ಗ್ರಾಮದ ನಿವಾಸಿ ರೂಪೇಶ್ ಗೌಡ ಕೊಲೆ ಮಾಡಲು ಮುಂದಾದ ವ್ಯಕ್ತಿ. ಈತ ಗುರುವಾರ ತಡರಾತ್ರಿ ಉಕ್ಕಡಗಾತ್ರಿಗೆ ಕರೆದುಕೊಂಡು ಹೋಗುವುದಾಗಿ ಹೇಳಿ ಪತ್ನಿಯ ಕೊಲೆಗೆ ಸಂಚು ರೂಪಿಸಿದ್ದಾನೆ.

    ಏನಿದು ಪ್ರಕರಣ?:
    ಪತ್ನಿ ಕೊಲೆಗೆ ಮೊದಲೇ ಪ್ಲಾನ್ ಮಾಡಿದ್ದ ರೂಪೇಶ್, ಉಕ್ಕಡಗಾತ್ರಿಗೆ ಕರೆದುಕೊಂಡು ಹೋಗುವುದಾಗಿ ಹೇಳಿ ಪತ್ನಿಯನ್ನು ಹೊರಗಡೆ ಕರೆದುಕೊಂಡು ಹೋಗಿದ್ದಾನೆ. ಹೀಗೆ ಹೋಗುತ್ತಿದ್ದಾಗ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ನಂದಿಗುಡಿ ಬಳಿ ಇರುವ ತುಂಗಭದ್ರಾ ನದಿ ಸೇತುವೆ ಮೇಲಿಂದ ಪತ್ನಿಯನ್ನು ತಳ್ಳಿದ್ದಾನೆ. ಈ ಮೂಲಕ ಆಕೆಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ.

    ಆದ್ರೆ ಮಹಿಳೆ ನೀರಿಗೆ ಬಿದ್ದ ತಕ್ಷಣ ಕಲ್ಲುಬಂಡೆ ಹಿಡಿದು ಕುಳಿತು ಜೀವ ಉಳಿಸಿಕೊಂಡಿದ್ದಾರೆ. ಅಲ್ಲದೇ ರಾತ್ರಿಯೆಲ್ಲ ನದಿಯಲ್ಲಿಯೇ ಕಾಲ ಕಳೆದಿದ್ದಾರೆ. ಬಳಿಕ ಬೆಳಗಿನ ಜಾವ ಗ್ರಾಮಸ್ಥರನ್ನ ಕೂಗಿ ಕರೆದು ದಡಕ್ಕೆ ಬಂದಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ರಾಣೆಬೆನ್ನೂರು ತಾಲೂಕಿನ ಪತ್ತೆಪುರ ಗ್ರಾಮಸ್ಥರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

    ಘಟನೆಯಿಂದ ತೀವ್ರ ಅಸ್ವಸ್ಥವಾಗಿದ್ದ ಮಹಿಳೆಗೆ ರಟ್ಟಿಹಳ್ಳಿ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಇದೀಗ ನ್ಯಾಯಕ್ಕಾಗಿ ರಟ್ಟಿಹಳ್ಳಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ, ಪತಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

    ರಟ್ಟಿಹಳ್ಳಿ ತಾಲೂಕಿನ ಗಲಗಿನಕಟ್ಟಿ ಗ್ರಾಮದ ನಿವಾಸಿಯಾಗಿರೋ ಮಹಿಳೆಗೆ 2017 ರಲ್ಲಿ ಬೇರೊಬ್ಬ ಯುವಕನೊಂದಿಗೆ ಮದುವೆ ನಿಶ್ಚಿಯವಾಗಿತ್ತು. ಆದ್ರೆ ಮದುವೆಗೆ ಒಂದು ದಿನ ಇರುವಾಗಲೇ ರೂಪೇಶಗೌಡ ಈಕೆಯನ್ನು ಅಪಹರಣ ಮಾಡಿ ಮದುವೆಯಾಗಿದ್ದನು. ಪ್ರೀತಿಸಿ ಮದುವೆಯಾದ ರೂಪೇಶ್ ಇದೀಗ ಪತ್ನಿಯನ್ನ ನದಿಗೆ ತಳ್ಳಿ ಪರಾರಿಯಾಗಿದ್ದಾನೆ. ಸದ್ಯ ಆರೋಪಿ ರೂಪೇಶಗೌಡನ್ನನ್ನು ಬಂಧಿಸುವಂತೆ ಮಹಿಳೆಯ ಪೋಷಕರುಒತ್ತಾಯ ಮಾಡುತ್ತಿದ್ದಾರೆ.

    ಈ ಸಂಬಂಧ ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮಗನ ಹತೈಗೈದ ಉಗ್ರರನ್ನು 72 ಗಂಟೆಯೊಳಗೆ ಕೊಲ್ಲಿ: ಮೃತ ಸೈನಿಕನ ತಂದೆ ಆಗ್ರಹ

    ಮಗನ ಹತೈಗೈದ ಉಗ್ರರನ್ನು 72 ಗಂಟೆಯೊಳಗೆ ಕೊಲ್ಲಿ: ಮೃತ ಸೈನಿಕನ ತಂದೆ ಆಗ್ರಹ

    ಶ್ರೀನಗರ: ಮಗನನ್ನು ಅಪಹರಿಸಿ ಕೊಂದ ಉಗ್ರರನ್ನು 72ಗಂಟೆಯೊಳಗೆ ಹತ್ಯೆ ಮಾಡಿ ಎಂದು ಮೃತ ಯೋಧ ಔರಂಗಜೇಬ್‍ನ ತಂದೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ಯೋಧನ ಸಾವಿಗೆ ಕಾರಣರಾದವರನ್ನು ಹಿಡಿದು ಶಿಕ್ಷೆಗೆ ಗುರಿಪಡಿಸಲು ಸರ್ಕಾರ ತಡಮಾಡುತ್ತಿದೆ ಯಾಕೆ? 72 ಗಂಟೆಯೊಳಗೆ ಸರ್ಕಾರ ಯಾವ ನಿರ್ಧಾರವನ್ನು ಪ್ರಕಟಿಸದಿದ್ದಲ್ಲಿ ನನ್ನ ಮಗನ ಸಾವಿಗೆ ಕಾರಣರಾದವರ ವಿರುದ್ಧ ನಾನೇ ಸೇಡು ತೀರಿಸಿಕೊಳ್ಳುತ್ತೇನೆ ಎಂದು ನಿವೃತ್ತ ಯೋಧ ಮೃತ ಯೋಧನ ತಂದೆ ಹೇಳಿದ್ದಾರೆ.

    ಜಮ್ಮು ಕಾಶ್ಮೀರದಲ್ಲಿ ಯೋಧರ ಸಾವಲ್ಲಿ ರಾಜಕೀಯ ಮಾಡುವವರ ವಿರುದ್ಧ ಹರಿಹಾಯ್ದಿರುವ ಮೃತ ಯೋಧನ ತಂದೆ ಪಾಕಿಸ್ತಾನದ ಬಗ್ಗೆ ಸಹಾನುಭೂತಿ ತೋರಿಸುವ ಪ್ರತ್ಯೇಕತಾವಾದಿಗಳ ವಿರುದ್ಧ ಕಿಡಿಕಾರಿದ್ದಾರೆ.

    ಔರಂಗಜೇಬ್‍ನ ಹತ್ಯೆ ಕೇವಲ ನಮ್ಮ ಕುಟುಂಬಕ್ಕೆ ಅಷ್ಟೆ ಆಘಾತಕಾರಿಯಲ್ಲ ಸೇನೆಗೂ ಕೂಡ ಹಿನ್ನಡೆಯಾಗಿದೆ. ಜಮ್ಮು ಕಾಶ್ಮೀರಕ್ಕೆ ಸೇರಿದವನಾಗಿ ಇಲ್ಲಿಯೇ ಸೇವೆ ಸಲ್ಲಿಸುತ್ತಿದ್ದ ಎಂದು ಬೇಸರ ವ್ಯಕ್ತಪಡಿಸಿದರು.

    ಜಮ್ಮು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳನ್ನು 2003 ರಿಂದ ತಡೆಯಲು ಏಕೆ ಸಾಧ್ಯವಾಗುತ್ತಿಲ್ಲ. ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಪರಿಸ್ಥಿತಿ ಬದಲಾಗಬಹುದು ಎಂದು ಎಣಿಸಿದ್ದೆವು ಆದರೆ ಎಣಿಸಿದಷ್ಟು ಆಗಿಲ್ಲ. ಈ ವಿಚಾರದಲ್ಲಿ ರಾಜಕಾರಣ ಮಾಡುವವರನ್ನ ಹಾಗೂ ಪ್ರತ್ಯೇಕತಾವಾದಿಗಳನ್ನು ಕಾಶ್ಮೀರದಿಂದ ಓಡಿಸಬೇಕು. ಸೇನೆ ಹಾಗೂ ಇತರ ಭದ್ರತಾ ಸಂಸ್ಥೆಗಳು ಉಗ್ರರ ವಿರುದ್ಧ ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಂಜಾನ್ ಹಬ್ಬವನ್ನು ಔರಂಗಜೇಬ್‍ನ ಜೊತೆ ಆಚರಿಸುವ ಆಸೆ ಆದರೆ ಅವನಿಲ್ಲ ಎಂದು ನೋವನ್ನು ಹಂಚಿಕೊಂಡರು.

    ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಉಗ್ರ ಸಮೀರ್ ಟೈಗರ್ ನನ್ನು ಎನ್ ಕೌಂಟರ್ ಮಾಡಿ ಔರಂಗಜೇಬ್ ಹತ್ಯೆ ಮಾಡಿದ್ದರು. ಇದರ ಸೇಡಿನಲ್ಲೇ ಉಗ್ರರು ಔರಂಗಜೇಬ್‍ನನ್ನು ಅಪಹರಿಸಿ ಹತ್ಯೆಗೈದಿದ್ದಾರೆ.ಇದನ್ನೂ ಓದಿ:ಉಗ್ರ ಸಮೀರ್ ನನ್ನು ಎನ್ ಕೌಂಟರ್ ಮಾಡಿದ್ದ ಯೋಧನ ಅಪಹರಣ

  • ದೇವಾಲಯಕ್ಕೆ ತೆರಳುತ್ತಿದ್ದ ಮಹಿಳೆಯನ್ನ ಅಪಹರಿಸಿ ಗ್ಯಾಂಗ್ ರೇಪ್

    ದೇವಾಲಯಕ್ಕೆ ತೆರಳುತ್ತಿದ್ದ ಮಹಿಳೆಯನ್ನ ಅಪಹರಿಸಿ ಗ್ಯಾಂಗ್ ರೇಪ್

    ಮಂಡ್ಯ: ದೇವಾಲಯಕ್ಕೆ ತೆರಳುತ್ತಿದ್ದ ಗೃಹಿಣಿಯನ್ನು ಕಾರಿನಲ್ಲಿ ಅಪಹರಿಸಿ ಮೂವರು ದುಷ್ಕರ್ಮಿಗಳು ಅತ್ಯಾಚಾರಗೈದಿರುವ ಘಟನೆ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೂನ್ 4ರಂದು ಘಟನೆ ನಡೆದಿದ್ದು, ಬುಧವಾರ ಸಂತ್ರಸ್ತೆ ಮಹಿಳೆ ದೂರು ದಾಖಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ಸಂಜಯ್, ಬಿಡ್ಡಾ ಮತ್ತು ರಮೇಶ್ ಅತ್ಯಾಚಾರ ಪ್ರಕರಣದ ಆರೋಪಿಗಳು. ಎಲ್ಲ ಆರೋಪಿಗಳು ಹಾಗು ಸಂತ್ರಸ್ತ ಮಹಿಳೆ ಒಂದೇ ಗ್ರಾಮದವರಾಗಿದ್ದು, ಹಳೆ ದ್ವೇಷದ ಹಿನ್ನೆಲೆಯಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಜೂನ್ 4ರಂದು ಮಹಿಳೆ ಕರಿಘಟ್ಟ ದೇವಾಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ಮಹಿಳೆಯನ್ನು ಅಡ್ಡಗಟ್ಟಿದ ಕಾಮುಕರು ಅಪಹರಿಸಿ, ಗೌತಮಕ್ಷೇತ್ರದ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸೆಗಿದ್ದಾರೆ. ಅತ್ಯಾಚಾರದ ದೃಶ್ಯಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಇನ್ನೊಮ್ಮೆ ಕರೆದಾಗ ನೀನಾಗಿಯೇ ಬರಬೇಕು, ಇಲ್ಲವಾದ್ರೆ ವಿಡಿಯೋ ತೋರಿಸಿ ಮಾನ ಹರಾಜು ಹಾಕಲಾಗುವುದು. ಒಂದು ವೇಳೆ ವಿಷಯವನ್ನು ಯಾರಿಗಾದ್ರೂ ತಿಳಿಸಿದ್ರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

    ಸಂತ್ರಸ್ತೆ ಬುಧವಾರ ರಾತ್ರಿ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತ ದೂರು ದಾಖಲಾಗುತ್ತಿದ್ದಂತೆ ಮೂವರು ಆರೋಪಿಗಳು ಗ್ರಾಮದಿಂದ ಪರಾರಿಯಾಗಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

  • ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರವೆಸಗಿ ವಿಷವುಣಿಸಿ ಕೊಂದ್ರು!

    ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರವೆಸಗಿ ವಿಷವುಣಿಸಿ ಕೊಂದ್ರು!

    ಚಂಡೀಗಢ: ಆಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಿ ಆಕೆಗೆ ವಿಷವುಣಿಸಿ ಹತ್ಯೆ ಮಾಡಿದ ಅಮಾನವೀಯ ಘಟನೆ ಹರಿಯಾಣ ರಾಜ್ಯದ ಪತೇಹಬಾದ್ ಜಿಲ್ಲೆಯಲ್ಲಿ ನಡೆದಿದೆ.

    10ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ತನ್ನ ಪೋಷಕರೊಂದಿಗೆ ಬಟ್ಟು ಕಾಳನ್ ಬ್ಲಾಕ್‍ನ ಮನೆಯಲ್ಲಿ ವಾಸವಾಗಿದ್ದಳು. ಮಂಗಳವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೂವರು ಯುವಕರು ಆಕೆಯನ್ನು ಮನೆಯಿಂದಲೇ ಅಪಹರಿಸಿದ್ದಾರೆ. ನಂತರ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಬಾಲಕಿಗೆ ವಿಷವುಣಿಸಿದ್ದಾರೆ. ಸಂಜೆ ವೇಳೆ ಆಕೆಯನ್ನು ಮನೆಯ ಹತ್ತಿರ ಬಿಟ್ಟು, ಪೋಷಕರಿಗೆ ಬಾಲಕಿಯು ಹುಷಾರಿಲ್ಲದ ಕಾರಣ ಔಷಧಿಯನ್ನು ಕೊಡಿಸಿದ್ದೇವೆಂದು ತಿಳಿಸಿ ಹೋಗಿದ್ದಾರೆ.

     

    ಬಾಲಕಿಯ ಆರೋಗ್ಯ ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಷ ಹಾಕಿದ್ದಾರೆ ಎಂದು ತಿಳಿಸಿದ್ದಾರೆ. ಈ ವೇಳೆ ಬಾಲಕಿಯು ನಡೆದ ಘಟನೆಯನ್ನು ವಿವರಿಸಿದ್ದಾಳೆ. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಬಾಲಕಿ ಮೃತಪಟ್ಟಿದ್ದಾಳೆ.

    ಈ ಕುರಿತು ಪೋಷಕರು ಮೂವರ ವಿರುದ್ಧ ದೂರನ್ನು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಒಬ್ಬ ಅಪ್ರಾಪ್ತ ಬಾಲಕ ಆರೋಪಿಯು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಅವನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಸದ್ಯ ಆರೋಪಿಯು ಪ್ರಾಣಪಾಯದಿಂದ ಪಾರಾಗಿದ್ದು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಪ್ರಕರಣ ಕುರಿತು ಬುಧವಾರ ಮಾತನಾಡಿದ ಡಿಸಿಪಿ ಗುದ್ರ್ಯಾಲ್ ಸಿಂಗ್‍ರವರು, ಮೂವರು ಆರೋಪಿಗಳು ಸ್ಥಳೀಯ ನಿವಾಸಿಗಳಾಗಿದ್ದು, ಆರೋಪಿಗಳ ಗುರುತು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಮೂವರ ವಿರುದ್ಧ ಪೋಕ್ಸೋ ಕಾಯ್ದೆ ಹಾಗೂ ಕೊಲೆ ಆರೋಪ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದೇವೆ. ಶೀಘ್ರವೇ ಉಳಿದ ಆರೋಪಿಗಳನ್ನು ಬಂಧಿಸುವುದಾಗಿ ಮಾಹಿತಿ ನೀಡಿದ್ದಾರೆ.

  • ಹಾಡಹಗಲೇ ಬಸ್ ನಿಲ್ದಾಣದಲ್ಲಿ ಮಾಂಗಲ್ಯ ಸರ ಎಗರಿಸಿದ ಕಳ್ಳ!

    ಹಾಡಹಗಲೇ ಬಸ್ ನಿಲ್ದಾಣದಲ್ಲಿ ಮಾಂಗಲ್ಯ ಸರ ಎಗರಿಸಿದ ಕಳ್ಳ!

    ಚಿತ್ರದುರ್ಗ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬಳ ಮಾಂಗಲ್ಯ ಸರವನ್ನು ಅಪಹರಿಸಿರುವ ಘಟನೆ ಚಿತ್ರದುರ್ಗದ ಬಸ್ ನಿಲ್ದಾಣದಲ್ಲಿ ನಡೆದಿದೆ.

    ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಗ್ರಾಮದ ನಿರ್ಮಲಾ ಎಂಬ ಮಾಂಗಲ್ಯ ಸರವನ್ನು ಕಳೆದುಕೊಂಡಿದ್ದಾರೆ. ಶನಿವಾರ ಮಧ್ಯಾಹ್ನ ಕೆಎಸ್‍ಆರ್ ಟಿಸಿ ಬಸ್ಸಿನಲ್ಲಿ ರಾಣೆಬೆನ್ನೂರಿಗೆ ಹೊರಟಿದ್ದರು. ಬಸ್ಸು ಚಿತ್ರದುರ್ಗ ನಿಲ್ದಾಣಕ್ಕೆ ತಲುಪಿದ್ದಂತೆ ಕಳ್ಳನೊಬ್ಬ ನಿರ್ಮಲಾ ಅವರ ಮಾಂಗಲ್ಯ ಸರವನ್ನು ಎಗರಿಸಿ ಪರಾರಿಯಾಗಿದ್ದಾನೆ.

    ಬಸ್ ನಿಲ್ದಾಣದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸದ ಕಾರಣ, ಕಳ್ಳನನ್ನು ಗುರುತಿಸಲು ಸಾಧ್ಯವಾಗಿಲ್ಲ. ಅಲ್ಲದೇ ಬಸ್ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೊಸ್ಟ್ ಇದ್ದರೂ ಸಕಾಲಕ್ಕೆ ಪೊಲೀಸರು ಇರಲಿಲ್ಲ. ಹೀಗಾಗಿ ಕಳ್ಳ ಸುಲಭವಾಗಿ ಪರಾರಿಯಾಗಿದ್ದಾನೆ. ನಿರ್ಮಲಾ ಅವರು ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

  • ಕಿಡ್ನಾಪ್ ಮಾಡಿ 15 ಲಕ್ಷಕ್ಕೆ ಬೇಡಿಕೆಯಿಟ್ರು- ಸಿನಿಮೀಯ ರೀತಿಯಲ್ಲಿ ಟೆಕ್ಕಿಯನ್ನು ರಕ್ಷಿಸಿದ ಪೊಲೀಸರು!

    ಕಿಡ್ನಾಪ್ ಮಾಡಿ 15 ಲಕ್ಷಕ್ಕೆ ಬೇಡಿಕೆಯಿಟ್ರು- ಸಿನಿಮೀಯ ರೀತಿಯಲ್ಲಿ ಟೆಕ್ಕಿಯನ್ನು ರಕ್ಷಿಸಿದ ಪೊಲೀಸರು!

    ಗಾಜಿಯಾಬಾದ್: ವಾರಗಳ ಹಿಂದೆ ಅಪಹರಣವಾಗಿ ಬಂಧಿಯಾಗಿದ್ದ ಟೆಕ್ಕಿಯನ್ನು ಕೊನೆಗೂ ರಕ್ಷಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ರಾಜೀವ್ ಕುಮಾರ್ ಅಪಹರಣವಾಗಿರುವ ಟೆಕ್ಕಿಯಾಗಿದ್ದು, ಇವರು ನೊಯ್ಡಾದ ಎಚ್‍ಸಿಇಎಲ್ ಟೆಕ್ನಾಲಜಿಸ್ ಕಂಪೆನಿಯಲ್ಲಿ ಉದ್ಯೋಗ ಮಾಡುತ್ತಿದ್ದರು.

    ಘಟನೆ ವಿವರ:
    ಕಳೆದ ಶುಕ್ರವಾರ ರಾಜೀವ್ ಅವರ ಹುಟ್ಟುಹಬ್ಬವಿದ್ದು, ಈ ಹಿನ್ನೆಲೆಯಲ್ಲಿ ಅವರು ತನ್ನ ಹುಟ್ಟುಹಬ್ಬ ಆಚರಿಸಲೆಂದು ಗುರುವಾರ ಹರಿದ್ವಾರಕ್ಕೆ ತೆರಳುತ್ತಿದ್ದರು. ಆದ್ರೆ ಅವರು ದೆಹಲಿ ಸಮೀಪದ ಗಾಜಿಯಾಬಾದ್ ನ ರಾಜ್ ನಗರದಿಂದ ಕಾಣೆಯಾಗಿದ್ದರು.

    ಜನಸಂದಣಿ ಇರುವ ಪ್ರದೇಶದಲ್ಲಿ ಹರಿದ್ವಾರದ ಕಡೆ ತೆರಳುವ ಬಸ್ ಹತ್ತಲೆಂದು ರಾಜೀವ್ ಅವರು ಕ್ಯಾಬ್ ನಿಂದ ಇಳಿದ ವೇಳೆ ಅವರನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಿದ್ದಾರೆ. ಬಳಿಕ ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಟೆಕ್ಕಿ ಪತ್ನಿಗೆ ಪತಿ ಮೊಬೈಲ್ ನಿಂದಲೇ ಮೆಸೇಜೊಂದು ಬಂದಿದೆ. ಅದರಲ್ಲಿ ರಾಜೀವ್ ನನ್ನು ಕಿಡ್ನಾಪ್ ಮಾಡಲಾಗಿದೆ. 15 ಲಕ್ಷ ರೂ. ಹಣ ನೀಡಿದ್ರೆ ಬಿಡುಗಡೆಗೊಳಿಸುವುದಾಗಿ ತಿಳಿಸಲಾಗಿತ್ತು ಅಂತ ಪೊಲೀಸರು ತಿಳಿಸಿದ್ದಾರೆ.

    ನಂತರ ಸುಮಾರು ಒಂದು ವಾರಗಳ ಕಾಲ ಪೊಲೀಸರು ರಾಜೀವ್ ಗಾಗಿ ಹುಡುಕಾಟ ನಡೆಸಿದ್ದರು. ಒಂದು ವಾರದ ಬಳಿಕ ರಾಜೀವ್ ಅವರು ಗಾಜಿಯಾಬಾದ್ ನ ಇಂದಿರಾಪುರಂ ಎಂಬ ಗ್ರಾಮದಲ್ಲಿ ಇರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಗಾಜಿಯಾಬಾದ್ ಹಾಗೂ ನೊಯ್ಡಾ ಪೊಲೀಸರ ವಿಶೇಷ ತನಿಖಾ ತಂಡವೊಂದು ಧಾವಿಸಿ ರಾಜೀವ್ ಅವರನ್ನು ಅಪಹರಣಕಾರರಿಂದ ರಕ್ಷಿಸಲಾಗಿದ್ದು, ಮೂವರನ್ನು ಬಂಧಿಸಿದ್ದಾರೆ.

    ರಾಜೀವ್ ಅವರನ್ನು ರಕ್ಷಿಸುವ ಮೊದಲು ಅಪಹರಣಕಾರರು ಮತ್ತು ಪೊಲೀಸರ ಮಧ್ಯೆ ಎನ್ ಕೌಂಟರ್ ನಡೆದಿದೆ. ಘಟನೆಯಿಂದ ಇಬ್ಬರು ಕಿಡ್ನಾಪರ್ಸ್ ಹಾಗೂ ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ. ಈ ಅಪಹರಣಕಾರರ ಗುಂಪು ವ್ಯಕ್ತಿಯನ್ನು ಕಿಡ್ನಾಪ್ ಮಾಡುವುದು ಇದು ಮೊದಲೇನಲ್ಲ. ಈ ಹಿಂದೆಯೂ ಈ ಗುಂಪು ಹಲವರನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ವಿಚಾರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

  • ಆಟೋಗಾಗಿ ಕಾಯ್ತಿದ್ದಾಗ ಕಿಡ್ನಾಪ್- ಐವರಿಂದ ಮಹಿಳೆಯ ಮೇಲೆ ಗ್ಯಾಂಗ್‍ರೇಪ್!

    ಆಟೋಗಾಗಿ ಕಾಯ್ತಿದ್ದಾಗ ಕಿಡ್ನಾಪ್- ಐವರಿಂದ ಮಹಿಳೆಯ ಮೇಲೆ ಗ್ಯಾಂಗ್‍ರೇಪ್!

    ನವದೆಹಲಿ: ಮಾಲ್ ಮುಂದೆ ಆಟೋಗಾಗಿ ಕಾಯುತ್ತಿದ್ದ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸೆಗಿರುವ ಘಟನೆ ದಕ್ಷಿಣ ದೆಹಲಿಯ ವಸಂತ್‍ಕುಂಜ್ ಪ್ರದೇಶದಲ್ಲಿ ನಡೆದಿದೆ.

    30 ವರ್ಷದ ಮಹಿಳೆ ಆತ್ಯಾಚಾರ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಐವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮಂಗಳವಾರ ರಾತ್ರಿ ಮಹಿಳೆಯನ್ನು ಅಪಹರಿಸಿದ ಗೆಸ್ಟ್ ಹೌಸ್‍ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸೆಗಲಾಗಿದೆ.

    ಆಗಿದ್ದೇನು?
    ಸೋಮವಾರ ರಾತ್ರಿ 11 ಗಂಟೆಗೆ ಖಾಸಗಿ ಉದ್ಯೋಗಿಯಾದ ಮಹಿಳೆಯು ಗುರುಗಾಂವ್ ಸಹರಾ ಮಾಲ್ ಬಳಿ ಆಟೋಗಾಗಿ ಕಾಯುತ್ತಿದ್ದರು. ಈ ವೇಳೆ ಸ್ಥಳಕ್ಕೆ ಕ್ಯಾಬ್‍ನಲ್ಲಿ ಬಂದ ಕಾಮುಕರು ಡ್ರಾಪ್ ನೀಡುವುದಾಗಿ ಹೇಳಿದ್ದಾರೆ. ಆದ್ರೆ ಮಹಿಳೆ ನಿಮ್ಮ ಡ್ರಾಪ್ ಬೇಡವೆಂದು ತಿರಸ್ಕರಿಸಿದ್ದಾರೆ. ಕೂಡಲೇ ಐವರು ಮಹಿಳೆಯನ್ನು ಬಲವಂತವಾಗಿ ಕ್ಯಾಬ್ ನಲ್ಲಿ ಅಪಹರಿಸಿ ಹತ್ತಿರದ ವಸತಿಗೃಹಕ್ಕೆ ಹೋಗಿದ್ದಾರೆ. ಗೆಸ್ಟ್ ಹೌಸ್‍ನಲ್ಲಿ ಐವರು ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸೆಗಿದ್ದಾರೆ. ಕೊನೆಗೆ ಬೆಳಗಿನ ಜಾವ ಮಹಿಳೆಯನ್ನು ಕೋಣೆಯಲ್ಲಿ ಕೂಡಿ ಹಾಕಿ ಹೋಗಿದ್ದಾರೆ.

    ಸಹಾಯಕ್ಕಾಗಿ ಮಹಿಳೆ ಜೋರಾಗಿ ಕೂಗಿಕೊಳ್ಳುತ್ತಿರುವುದನ್ನು ಕೇಳಿಸಿಕೊಂಡ ವಸತಿಗೃಹದ ಅಡುಗೆ ಸಿಬ್ಬಂದಿ ಬಂದು ಬಾಗಿಲು ತೆಗೆದಿದ್ದಾನೆ. ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಅಲ್ಲೇ ಇದ್ದ ಮತ್ತೊಬ್ಬ ಆರೋಪಿ ಮಹಿಳೆಯನ್ನು ತಡೆಯಲು ಮುಂದಾದಾಗ ಕೈಗೆ ಸಿಕ್ಕ ರಾಡ್‍ನಿಂದ ಹೊಡೆದು ತಪ್ಪಿಸಿಕೊಂಡಿದ್ದಾರೆ. ಗೆಸ್ಟ್ ಹೌಸ್ ನಿಂದ ಬಂದು ಫ್ರೆಂಡ್‍ಗೆ ಕರೆ ಮಾಡಿ ವಿಷಯ ತಿಳಿಸಿ, ಬೆಳಗಿನ ಜಾವ 4.30ಕ್ಕೆ ಐವರ ವಿರುದ್ಧ ವಸಂತ್ ಕುಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಪೊಲೀಸರು ಅಪಹರಣ ಹಾಗೂ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿಕೊಂಡು 5 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ತೆಜ್ವೀರ್ ಸಿಂಗ್, ಗೋಪಾಲ್ ಪ್ರಸಾದ್, ರೂಪ್ ದೇವ್, ಅನ್ಸುಲ್ ಹಾಗೂ ರಾಮಬಾಬು ಹರ್ಯಾಣ ಮೂಲದವರಾಗಿದ್ದು ದೆಹಲಿಯ ಖಾಸಗಿ ಕಂಪೆನಿಯ ಉದ್ಯೋಗಿಗಳೆಂದು ತಿಳಿದುಬಂದಿದೆ.

  • ಶಾಲೆಯಲ್ಲಿ ವರ್ಗಾವಣೆ ಪತ್ರ ತರಲು ಹೋಗಿದ್ದ ವೇಳೆ ಬಾಲಕಿ ಕಿಡ್ನಾಪ್!

    ಶಾಲೆಯಲ್ಲಿ ವರ್ಗಾವಣೆ ಪತ್ರ ತರಲು ಹೋಗಿದ್ದ ವೇಳೆ ಬಾಲಕಿ ಕಿಡ್ನಾಪ್!

    ಮೈಸೂರು: ಸಿನಿಮೀಯ ರೀತಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ಘಟನೆ ಮೈಸೂರು ತಾಲುಕಿನ ಜೆಟ್ಟಿಹುಂಡಿಯಲ್ಲಿ ನಡೆದಿದೆ.

    ಪ್ರಕಾಶ್ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ಯುವಕ. ಬಾಲಕಿ ಹತ್ತನೇ ತರಗತಿ ಓದುತ್ತಿದ್ದು, ಶಾಲೆಯಲ್ಲಿ ವರ್ಗಾವಣೆ ಪತ್ರ ತರಲು ಹೋಗಿದ್ದ ವೇಳೆ ಅಪಹರಣ ನಡೆದಿದೆ. ನಾಲ್ವರು ಯುವಕರ ತಂಡ ಈ ಕೃತ್ಯ ಎಸಗಿದೆ.

    ಮೂರು ದಿನಗಳ ಹಿಂದೆ ಬಾಲಕಿಯ ಅಪಹರಣವಾಗಿದ್ದು, ಇನ್ನೂ ಬಾಲಕಿ ಪತ್ತೆಯಾಗಿಲ್ಲ. ಸದ್ಯ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಇಲವಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಪೊಲೀಸರ ಸೋಗಿನಲ್ಲಿ ಬಂದ ದುಷ್ಕರ್ಮಿಗಳಿಂದ 42 ಪ್ರಯಾಣಿಕರಿದ್ದ ಬಸ್ ಹೈಜಾಕ್!

    ಪೊಲೀಸರ ಸೋಗಿನಲ್ಲಿ ಬಂದ ದುಷ್ಕರ್ಮಿಗಳಿಂದ 42 ಪ್ರಯಾಣಿಕರಿದ್ದ ಬಸ್ ಹೈಜಾಕ್!

    ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು, ಪ್ರಯಾಣಿಕರು ತುಂಬಿದ್ದ ಖಾಸಗಿ ಬಸ್‍ನ್ನು ಹೈಜಾಕ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ತಡರಾತ್ರಿ ನಡೆದಿದೆ.

    ಕೆಎ 01 ಎಜಿ ನಂಬರ್ ನ ಲಾಮಾ ಟ್ರಾವೆಲ್ಸ್ ಗೆ ಸೇರಿದ ಬಸ್ ಸುಮಾರು 42 ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನಿಂದ ಕೇರಳದ ಕಣ್ಣೂರಿಗೆ ಹೊರಟಿತ್ತು. ಈ ವೇಳೆ ಮೈಸೂರು ರಸ್ತೆಯ ಆರ್‍ವಿ ಕಾಲೇಜ್ ಬಳಿ ತಡೆದ ನಾಲ್ವರು ವ್ಯಕ್ತಿಗಳು ನಾವು ಪೊಲೀಸರು ಅಂತಾ ಹೇಳಿ ಬಸ್ ಡ್ರೈವರ್ ನ ಕೆಳಗಿಳಿಸಿ ಬಸ್‍ನ್ನು ಅಪಹರಿಸಿದ್ದರು.

    ಅಪಹರಿಸಿ ಆರ್ ಆರ್ ನಗರದ ಪಟ್ಟಣಗೆರೆಯ ಗೋಡಾನ್‍ವೊಂದರಲ್ಲಿ ಸುಮಾರು ಒಂದು ಗಂಟೆಗಳ ಕಾಲ ಬಂಧನದಲ್ಲಿ ಇಟ್ಟಿದ್ದರು. ಇದರಿಂದ ಗಾಬರಿಗೊಂಡ ಪ್ರಯಾಣಿಕರು, ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ.

    ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದ ಸುಮಾರು 30 ಕ್ಕೂ ಹೆಚ್ಚು ಜನರ ತಂಡ ಗೋಡಾನ್‍ ನಲ್ಲಿದ್ದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಮೂವರು ಪರಾರಿಯಾಗಿದ್ದು, ತನಿಖೆ ಮುಂದುವರೆಸಿದ್ದಾರೆ.

    ಪ್ರಾಥಮಿಕ ಮಾಹಿತಿ ಪ್ರಕಾರ ಫೈನಾನ್ಸ್ ವಿಚಾರವಾಗಿ ಈ ಕಿಡ್ನಾಪ್ ನಡೆದಿದೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಆರ್ ಆರ್ ನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

  • ಆಟವಾಡುತ್ತಿದ್ದಾಗ ಚಾಕು ತೋರಿಸಿ ಬಾಯಿಗೆ ಬಟ್ಟೆಕಟ್ಟಿ ಇಬ್ಬರು ಬಾಲಕಿಯರನ್ನು ಕಾರಿನಲ್ಲಿ ಅಪಹರಿಸಿದ್ರು!

    ಆಟವಾಡುತ್ತಿದ್ದಾಗ ಚಾಕು ತೋರಿಸಿ ಬಾಯಿಗೆ ಬಟ್ಟೆಕಟ್ಟಿ ಇಬ್ಬರು ಬಾಲಕಿಯರನ್ನು ಕಾರಿನಲ್ಲಿ ಅಪಹರಿಸಿದ್ರು!

    ಬೆಂಗಳೂರು: ಶನಿವಾರ ಬೆಂಗಳೂರಿನ ದಾರಸಹಳ್ಳಿಯಲ್ಲಿ ನಾಪತ್ತೆಯಾಗಿದ್ದ ಮಕ್ಕಳು ಇಂದು ಮೈಸೂರಿನ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ.

    ಹರ್ಷಿತ(10) ಮತ್ತು ಮೋನಿಷ(09) ನಾಪತ್ತೆಯಾಗಿದ್ದ ಮಕ್ಕಳು. ಇವರು ಇಂದು ಮೈಸೂರಿನ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ಮನೆ ಮುಂದೆ ಆಟವಾಡುತ್ತಿದ್ದಾಗ ಇಬ್ಬರು ಮುಸುಕುಧಾರಿಗಳು ಅಪಹರಣ ಮಾಡಿದ್ದಾರೆ ಅಂತ ಮಕ್ಕಳು ಹೇಳಿದ್ದಾರೆ.

    ಆಟವಾಡುವಾಗ ಚಾಕು ತೋರಿಸಿ ಬಾಯಿಗೆ ಬಟ್ಟೆ ಕಟ್ಟಿ ಕಾರಿನಲ್ಲಿ ಕರೆದೊಯ್ದಿದ್ದಾರೆ. ಅದಕ್ಕೂ ಮುಂಚೆ ಮನೆಗೆ ಕರೆದುಕೊಂಡು ಹೋಗಿ ಬಟ್ಟೆ ತೆಗೆಸಿಕೊಂಡಿದ್ದಾರೆ. ನಂತರ ಯಶವಂತಪುರದಿಂದ ರೈಲಿನಲ್ಲಿ ಕರೆದುಕೊಂಡು ಹೋಗಿದ್ದಾರೆ ಅಂತ ಅಪಹರಣವಾದ ಮಕ್ಕಳು ತಿಳಿಸಿದ್ದಾರೆ.

    ಮಕ್ಕಳು ಅಪಹರಣಕಾರರಿಂದ ತಪ್ಪಿಸಿಕೊಂಡು ಮೈಸೂರಿನಲ್ಲಿ ಸಿಕಿದ್ದು, ಸದ್ಯ ಮೈಸೂರು ರೈಲ್ವೇ ಪೊಲೀಸರ ವಶದಲ್ಲಿದ್ದಾರೆ. ಇತ್ತ ಮಕ್ಕಳು ಕಾಣೆಯಾದ ಕುರಿತು ಪೋಷಕರು ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.