Tag: ಅಪೌಷ್ಠಿಕತೆ

  • ರಾಜ್ಯದಲ್ಲಿ 1,89,958 ಮಕ್ಕಳಲ್ಲಿ ಅಪೌಷ್ಠಿಕತೆ ಸಮಸ್ಯೆ

    ರಾಜ್ಯದಲ್ಲಿ 1,89,958 ಮಕ್ಕಳಲ್ಲಿ ಅಪೌಷ್ಠಿಕತೆ ಸಮಸ್ಯೆ

    ಬೆಂಗಳೂರು: ಕಳೆದ 6 ತಿಂಗಳಲ್ಲಿ ರಾಜ್ಯಾದ್ಯಂತ ಅಪೌಷ್ಠಿಕತೆಯಿಂದ (Malnutrition) ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ.

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (Women and Child Welfare Department) ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ 1,89,958 ಮಕ್ಕಳು ಅಪೌಷ್ಠಿಕತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದನ್ನೂ ಓದಿ: ಬೆಂಗ್ಳೂರು ಟ್ರಾಫಿಕ್ ತಪ್ಪಿಸಲು ನಯಾ ಪ್ಲಾನ್- 273 ಕೋಟಿ ವೆಚ್ಚದಲ್ಲಿ ಬರಲಿದೆ ಫ್ರೀ ಕಾರಿಡಾರ್ ರಸ್ತೆ

    1,80,130 ಮಕ್ಕಳು ಮಧ್ಯಮ ಪ್ರಮಾಣದ ಅಪೌಷ್ಠಿಕತೆಯಿಂದ ಬಳಲುತ್ತಿದ್ದರೆ, 9,828 ಮಕ್ಕಳು ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ಇದರಿಂದ ಸರ್ಕಾರ ಮಕ್ಕಳ (Children) ಪೌಷ್ಠಿಕತೆಗಾಗಿ ಕೋಟಿ ಕೋಟಿ ಹಣ ಖರ್ಚು ಮಾಡ್ತಿದ್ದರೂ ಅಪೌಷ್ಠಿಕತೆಯ ಪ್ರಮಾಣ ಮಾತ್ರ ಕಡಿಮೆಯಾಗಿಲ್ಲ ಅನ್ನೋ ಆರೋಪ ಕೇಳಿಬರ್ತಿದೆ. ಇದನ್ನೂ ಓದಿ: 98 ವರ್ಷದ ವೃದ್ಧ ಜೈಲಿನಿಂದ ಬಿಡುಗಡೆ – ಎಸ್ಕಾರ್ಟ್ ನೀಡಿ ಮನೆಗೆ ಕಳುಹಿಸಿದ ಪೊಲೀಸರು

    ಅದರಲ್ಲೂ ಮೈಸೂರು (Mysuru) ಮತ್ತು ಬೀದರ್ ಜಿಲ್ಲೆಗಳಲ್ಲಿ ಅತಿಹೆಚ್ಚಿನ ಅಪೌಷ್ಠಿಕತೆಯಿಂದ ಮಕ್ಕಳು ಬಳಲುತ್ತಿದ್ದಾರೆ. ಇದರಿಂದ ಸರ್ಕಾರ ಮಕ್ಕಳ ಪೌಷ್ಠಿಕತೆ ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ. ಅದಕ್ಕಾಗಿ ಶಾಲೆಯಲ್ಲಿ ಮಕ್ಕಳಿಗೆ ವಾರದಲ್ಲಿ ಎರಡು ಮೊಟ್ಟೆ, 150 ಮಿಲಿ ಹಾಲು ನೀಡಲಾಗುತ್ತೆ ಎಂದು ಸಿಎಂ (Chief Minister) ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೋಲಾರದ ಮಕ್ಕಳಲ್ಲಿ ಹೆಚ್ಚಿದ ಅಪೌಷ್ಠಿಕತೆ

    ಕೋಲಾರದ ಮಕ್ಕಳಲ್ಲಿ ಹೆಚ್ಚಿದ ಅಪೌಷ್ಠಿಕತೆ

    ಕೋಲಾರ: ಇದು ರಾಜ್ಯದಲ್ಲೇ ಹಿಂದುಳಿದ ಹಾಗೂ ಬರಪೀಡಿತ ಜಿಲ್ಲೆ, ಇಲ್ಲಿ ಹನಿ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಇದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹುಟ್ಟುವ ಮಕ್ಕಳು ಕೂಡಾ ಅಪೌಷ್ಠಕತೆಯ ಶಾಪಕ್ಕೆ ತುತ್ತಾಗುತ್ತಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಕುಡಿಯುವ ನೀರು ವಿಷವಾಗಿ ಹೋಗಿದೆ. ಇದರಿಂದ ಇಲ್ಲಿ ಹುಟ್ಟೋ ಮಕ್ಕಳು ಕೂಡಾ ಅಪೌಷ್ಠಿಕತೆಗೆ ತುತ್ತಾಗುತ್ತಿದ್ದಾರೆ.

    ಈವರೆಗೆ 7000 ಮಕ್ಕಳಲ್ಲಿ ಅಪೌಷ್ಠಿಕತೆ ಕಂಡು ಬಂದಿದ್ದು, ಅವರಲ್ಲಿ 130 ಜನ ಮಕ್ಕಳು ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ಇದು ಎಲ್ಲಾ ವರ್ಗದ ಮಕ್ಕಳಲ್ಲೂ ಕಾಣಿಸಿಕೊಂಡಿದ್ದು, ಹೃದಯ ಸಂಬಂಧಿ ಸಮಸ್ಯೆ, ಪೌಷ್ಠಿಕ ಆಹಾರದ ಕೊರತೆ, ಶಾರೀರಿಕ, ಮಾನಸಿಕ ತೊಂದರೆ ಜೊತೆಗೆ ತಾಯಂದಿರು ಸರಿಯಾಗಿ ಎದೆಹಾಲು ಉಣಿಸದಿರೋದೇ ಅಪೌಷ್ಟಿಕತೆಗೆ ಕಾರಣವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೆಪ್ಟಂಬರ್ ತಿಂಗಳನ್ನು ವಿಶೇಷವಾಗಿ ಅಪೌಷ್ಠಿಕ ಮಕ್ಕಳ ಪೋಷಣಾ ಮಾಸ ಎಂದು ಆಚರಿಸುತ್ತಿದೆ. ಈ ಮೂಲಕ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಲಾಗುತ್ತಿದೆ.

    ಜಿಲ್ಲೆಯಲ್ಲಿ ಒಟ್ಟು 2 ಸಾವಿರದ 61 ಅಂಗನವಾಡಿ ಕೇಂದ್ರಗಳಿದ್ದು, ಅದರಲ್ಲಿ 6 ವರ್ಷದ ಒಳಗಿನ 64 ಸಾವಿರದ 344 ಮಕ್ಕಳಿದ್ದಾರೆ. ಈ ಮಕ್ಕಳ ಮೇಲೆ ತೂಕ ಮತ್ತು ಬೆಳವಣಿಗೆ ಆಧಾರದಲ್ಲಿ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿ ಸಮೀಕ್ಷೆ ನಡೆಸಿದೆ. ಈ ಮಕ್ಕಳಲ್ಲಿ ತೀವ್ರ ಕಡಿಮೆ ತೂಕವಿರುವವರನ್ನು ಗುರುತಿಸಿ, 14 ದಿನಗಳ ಕಾಲ ಪುನಶ್ಚೇತನ ಕೇಂದ್ರಕ್ಕೆ ದಾಖಲಿಸಿಕೊಂಡು ಆಹಾರದ ಜೊತೆಗೆ ಚಿಕಿತ್ಸೆ ನೀಡಲಾಗ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv