Tag: ಅಪ್ಪಚ್ಚು ರಂಜನ್

  • ನಾಯಕತ್ವ ಬದಲಾವಣೆ, ನಾನು ವ್ಯಕ್ತಿ ಪೂಜೆ ಮಾಡುವವನಲ್ಲ: ಅಪ್ಪಚ್ಚು ರಂಜನ್

    ನಾಯಕತ್ವ ಬದಲಾವಣೆ, ನಾನು ವ್ಯಕ್ತಿ ಪೂಜೆ ಮಾಡುವವನಲ್ಲ: ಅಪ್ಪಚ್ಚು ರಂಜನ್

    – ಶಸಿಕಲಾ ಜೊಲ್ಲೆ ಹೇಳಿದ್ದೇನು..?

    ಮಡಿಕೇರಿ: ಸಿಎಂ ಬದಲಾವಣೆ ವಿಚಾರ ಇನ್ನೂ ಕೂಡ ತಣ್ಣಗೆ ಆಗಿಲ್ಲ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬಂದು ಬಿಜೆಪಿಯ ಭಿನ್ನಭಿಪ್ರಾಯವನ್ನು ಸರಿದೂಗಿಸಲು ಪ್ರಯತ್ನ ಪಡುತ್ತಿದ್ದರು ಕೂಡ ಅತೃಪ್ತಿಯ ಬೆಂಕಿ ಹೊಗೆಯಾಡುತ್ತಲೇ ಇದೆ. ಈ ನಡುವೆ ನಾನು ವ್ಯಕ್ತಿ ಪೂಜೆ ಮಾಡುವವನಲ್ಲ ಎನ್ನುವ ಮೂಲಕ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅವರು ಸಿಎಂ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಆಗಬೇಕು ಎನ್ನೋ ಪರೋಕ್ಷ ಸಂದೇಶ ರವಾನೆ ಮಾಡಿದ್ದಾರೆ.

    ಮಡಿಕೇರಿಯಲ್ಲಿ ಮಾತನಾಡಿದ ಅಪ್ಪಚ್ಚು ರಂಜನ್, ನಾನು ಯಾರ ಪರವೂ ಅಲ್ಲ, ಯಾರ ವಿರುದ್ಧವೂ ಅಲ್ಲ. ನಾನು ಪಕ್ಷದ ಪರವಾಗಿದ್ದೇನೆ, ಪಕ್ಷದ ವಿಚಾರವನ್ನು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಬಳಿ ಮಾತನಾಡಿದ್ದೇನೆ. ಪಕ್ಷ ಎಂದ ಮೇಲೆ ಜಗಳಗಳು ಇದ್ದದ್ದೇ. ಅದನ್ನು ಪಕ್ಷದ ಒಳಗೆ ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಬಹಿರಂಗ ಚರ್ಚೆ ಮಾಡೋದಿಲ್ಲ ಎಂದರು.

    ಶಾಸಕ ಹೆಚ್ ವಿಶ್ವನಾಥ್ ಅವರು ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ ಎಂದು ಹೇಳಿದ ವಿಷಯಕ್ಕಾಗಲಿ, ಅವರ ವಿರುದ್ಧ ರೇಣುಕಾಚಾರ್ಯ ಅವರು ಆಕ್ರೋಶ ವ್ಯಕ್ತಪಡಿಸಿದ ವಿಷಯಕ್ಕಾಗಲಿ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕಾಗಿ ಮತ್ತು ಸಿಎಂ ಬದಲಾವಣೆ ವಿಚಾರದಲ್ಲಿ ಹೊತ್ತಿಕೊಂಡಿರುವ ಬೆಂಕಿ ಇನ್ನೂ ಬೂದಿಮುಚ್ಚಿದ ಕೆಂಡದಂತೆ ಇದೆ. ಇದನ್ನೂ ಓದಿ: ರಾಜ್ಯ ಸರ್ಕಾರ ವಜಾಕ್ಕೆ ರಾಜ್ಯಪಾಲರು ಶಿಫಾರಸ್ಸು ಮಾಡಬೇಕು – ಸಿದ್ದರಾಮಯ್ಯ

    ಹೈಕಮಾಂಡ್ ಸಮರ್ಥವಾಗಿದ್ದು ಎಲ್ಲವನ್ನೂ ನಿಭಾಯಿಸುತ್ತದೆ:
    ರಾಜ್ಯ ನಾಯಕತ್ವ ಬದಲಾವಣೆ ವಿಚಾರವಾಗಿ ಮಡಿಕೇರಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ಒಂದು ಮನೆ ಎಂದ ಮೇಲೆ ವೈಮನಸ್ಸು ಇದ್ದೇ ಇರುತ್ತದೆ. ಅದನ್ನು ಮನೆ ಒಳಗೆ ಬಗೆಹರಿಸಿಕೊಳ್ಳುತ್ತೇವೆ. ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಹೈಕಮಾಂಡ್ ಸಮರ್ಥವಾಗಿದ್ದು ಎಲ್ಲವನ್ನೂ ನಿಭಾಯಿಸುತ್ತದೆ ಎಂದರು.

    ರಾಜ್ಯಕ್ಕೆ ಬಂದಿರುವ ಅರುಣ್ ಸಿಂಗ್ ಅವರೊಂದಿಗೆ ಪ್ರತ್ಯೇಕ ಸಭೆ ವಿಚಾರ ಹಿನ್ನೆಲೆಯಲ್ಲಿ ನಿನ್ನೆ ನನ್ನ ಇಲಾಖೆಯ ಕಾರ್ಯವೈಖರಿ ಅಭಿವೃದ್ಧಿ ಕುರಿತು ವರದಿ ನೀಡಿದ್ದೇನೆ. ಬೇರೆ ರಾಜಕೀಯವಾಗಿ ನಾನು ಯಾವುದೇ ವರದಿ ನೀಡಿಲ್ಲ. ಹೆಚ್ ವಿಶ್ವನಾಥ್ ಅವರು ಬಹಿರಂಗವಾಗಿ ಮುಖ್ಯಮಂತ್ರಿ ಬದಲಾವಣೆ ಮಾಡಬೇಕು ಎನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ನಾನು ವಿಶ್ವನಾಥ್ ವಿರುದ್ಧ ಮಾತನಾಡುವಷ್ಟು ದೊಡ್ಡವಳಲ್ಲ ಹೈಕಮಾಂಡ್ ಎಲ್ಲಾವವನ್ನು ನಿರ್ಧಾರ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು.

  • ಸಿಎಂ ಬದಲಾದರೆ ಸಚಿವ ಸಂಪುಟ ಬದಲಾವಣೆ ಆಗಲೇಬೇಕಲ್ಲ- ಅಪ್ಪಚ್ಚು ರಂಜನ್

    ಸಿಎಂ ಬದಲಾದರೆ ಸಚಿವ ಸಂಪುಟ ಬದಲಾವಣೆ ಆಗಲೇಬೇಕಲ್ಲ- ಅಪ್ಪಚ್ಚು ರಂಜನ್

    – ನಾನು ಸಚಿವ ಸಂಪುಟದ ಆಕಾಂಕ್ಷಿ

    ಮಡಿಕೇರಿ: ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಆಗುತ್ತಿರುವ ಬೆನ್ನಲ್ಲೇ ಕೊಡಗಿನ ಶಾಸಕ ಅಪ್ಪಚ್ಚು ರಂಜನ್ ಸಿಎಂ ಬದಲಾದರೆ ಸಚಿವ ಸಂಪುಟ ಬದಲಾವಣೆ ಆಗಲೇಬೇಕಲ್ಲ. ನಾನು ಸಚಿವ ಸಂಪುಟದ ಆಕಾಂಕ್ಷಿ ಎಂದು ಹೇಳಿಕೆ ನೀಡಿದ್ದಾರೆ.

    ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಪ್ಪಚ್ಚು ರಂಜನ್ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ನಾಯಕತ್ವ ಬದಲಾವಣೆ ಚರ್ಚೆಯಿಂದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಬೇಸರವಾಗಿದೆ. ಸಿಎಂ ಬದಲಾದರೆ ಸಚಿವ ಸಂಪುಟ ಬದಲಾಗಬೇಕಲ್ಲ. ಹಾಗಾದಲ್ಲಿ ನಾನು ಸಚಿವ ಸಂಪುಟದ ಆಕಾಂಕ್ಷಿ ಎಂದಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ ಬಳಿಕ ಉತ್ತರ ಕರ್ನಾಟಕದ ವೀರಶೈವರಿಗೆ ಸಿಎಂ ಸ್ಥಾನ ನೀಡಿದ್ರೆ ಸೂಕ್ತ: ಎಚ್.ವಿಶ್ವನಾಥ್

    ಯಡಿಯೂರಪ್ಪ ಈಗಲೂ ನಮ್ಮ ನಾಯಕರೇ ಅದರೆ ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಗೊತ್ತಿಲ್ಲ. ಸಿಎಂ ಬದಲಾದರೆ ಮತ್ತೆ ಸಚಿವ ಸಂಪುಟ ವಿಸ್ತರಣೆ ಅಗುತ್ತದೆ. ವಿಸ್ತರಣೆ ಅದರೆ ನಾನು ಸಚಿವ ಆಕಾಂಕ್ಷಿನೇ ನಾನು ಐದು ಬಾರಿ ಶಾಸಕನಾಗಿ ಗೆದ್ದಿದ್ದೇನೆ ಎಂದು ಅಭಿಪ್ರಾಯ ಹಂಚಿಕೊಂಡರು. ಇದನ್ನೂ ಓದಿ:ಯಡಿಯೂರಪ್ಪ ರಾಜೀನಾಮೆ ಪ್ರಶ್ನೆಯೇ ಇಲ್ಲ: ರೇಣುಕಾಚಾರ್ಯ

    ಯಡಿಯೂರಪ್ಪ ಅವರು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿ ತಮ್ಮ ಮಗನಿಗೆ ಪಟ್ಟ ಕಟ್ಟಬೇಕೆಂದು ಹೇಳಿದ್ದು ಗೊತ್ತಿಲ್ಲ. ನಾನು ಮಾಧ್ಯಮದಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಏನು ಸೂಚನೆ ಕೊಡುತ್ತದೋ ಅದು ಅಂತಿಮ. ಅವರ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ನಾನು 80ರ ದಶಕದಿಂದಲೂ ಬಿಜೆಪಿಯಲ್ಲಿ ಇದ್ದೇನೆ. ಈ ಹಿಂದಿನಿಂದಲೂ ಸಚಿವ ಆಕಾಂಕ್ಷಿಯಾಗಿದ್ದೇನೆ. ಸಿಎಂ ಬದಲಾದರೆ ಸಚಿವ ಸಂಪುಟ ಬದಲಾಗಬೇಕು ಹೀಗಾಗಿ ನನಗೆ ಸಚಿವ ಸ್ಥಾನ ಕೊಡಲೇ ಬೇಕು ಎಂದು ಹೇಳಿದ್ದಾರೆ.

  • 4.96 ಕೋಟಿ ವೆಚ್ಚದ 5.99 ಕಿ.ಮೀ ರಸ್ತೆ ಗುಣಮಟ್ಟ ಕಳಪೆ- 5 ಗ್ರಾಮಗಳ ಗ್ರಾಮಸ್ಥರ ಆರೋಪ

    4.96 ಕೋಟಿ ವೆಚ್ಚದ 5.99 ಕಿ.ಮೀ ರಸ್ತೆ ಗುಣಮಟ್ಟ ಕಳಪೆ- 5 ಗ್ರಾಮಗಳ ಗ್ರಾಮಸ್ಥರ ಆರೋಪ

    ಮಡಿಕೇರಿ: 4.96 ಕೋಟಿ ವೆಚ್ಚದ 5.99 ಕಿ.ಮೀ ರಸ್ತೆ ಕಳಪೆ ಗುಣಮಟ್ಟದ್ದಾಗಿದೆ ಎಂದು ಸೋಮವಾರಪೇಟೆ ತಾಲೂಕಿನ ಐದು ಗ್ರಾಮಗಳ ಗ್ರಾಮಸ್ಥರು ಆರೋಪಿಸಿದ್ದಾರೆ. ಕೊಡ್ಲೂರ್ ಗ್ರಾಮದಿಂದ ಹಂಡ್ಲಿ ಗ್ರಾಮದವರೆಗೆ 5 ಗ್ರಾಮಗಳನ್ನು ಒಳಗೊಂಡಂತೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ನಿರ್ಮಾಣವಾಗುತ್ತಿದೆ. ರೂ. 4.96 ಕೋಟಿ ವೆಚ್ಚದ 5.99 ಕಿ.ಮೀ ರಸ್ತೆ ಕಳಪೆ ಗುಣಮಟ್ಟದ್ದಾಗಿದೆ ಎಂದು ಗ್ರಾಮ ಪ್ರಮುಖರಾದ ತಾಳೂರು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    2020ರ ಸೆಪೆಂಬರ್ 9 ರಂದು ಭಾರತ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ಅನುದಾನದಲ್ಲಿ ಗುತ್ತಿದೆದಾರ ಶಿವಲೀಲಾ ಸುರೇಶ್ ಸಜ್ಜನ್, ಎಂಜಿನಿಯರ್ ಗಳಾದ ಪ್ರಭು ಹಾಗೂ ಪೂವಯ್ಯ ಅವರಿಂದ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾಗಿತ್ತು. ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಅಪ್ಪಚ್ಚುರಂಜನ್ ಶಂಕುಸ್ಫಾಪನೆ ನೆರವೇರಿಸಿದ್ದರು. ಅಕ್ಟೋಬರ್ ನಿಂದ ಕಾಮಗಾರಿಗೆ ಚಾಲನೆ ನೀಡಲಾಯಿತು.

    ರಸ್ತೆಯ ಎರಡೂ ಕಡೆಯಿಂದ ರಸ್ತೆಗೆ ಅಗತ್ಯವಿರುವ 32 ಅಡಿ ಅಗಲೀಕರಣ ಮಾಡುತ್ತಾ ಕೆಲ ಮನೆಗಳ ಮುಂದೆ ಬೇಕಾದ ಹಾಗೇ ಜಾಗ ಬಿಟ್ಟು ಕಾಮಗಾರಿ ಮುಂದುವರಿಸಿದರು. ನಂತರ ರಸ್ತೆಗೆ 40 ಹಾಗೂ 20 ಎಂಎಂ ಕಲ್ಲುಗಳ ಮಿಶ್ರಣವನ್ನು ಹಾಕಿ ಸಮತಟ್ಟಾದ ಮೇಲ್ಪದರವನ್ನು ರೋಲಿಂಗ್ ಮಾಡಿ ಡಾಂಬರ್ ಹಾಕಿದ್ದಾರೆ. 15 ದಿನಗಳ ನಂತರ ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಸಂಚರಿಸಿದಾಗ ರಸ್ತೆಗೆ ಹಾನಿಯಾಗಿದೆ. ಪ್ರತಿದಿನ ಓಡಾಡುವ ವಾಹನಗಳಿಂದ ರಸ್ತೆಯ ಎರಡೂ ಕಡೆಯಲ್ಲೂ ಹಾಳಾಗುತ್ತಿದೆ. 2021ರ ಆಗಸ್ಟ್ 13ಕ್ಕೆ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಮುಗಿಯಬೇಕಾಗಿರುವುದರಿಂದ ರಸ್ತೆಯ ಎರಡೂ ಕಡೆ ಡ್ರೈನೇಜ್ ಮಾಡದೇ ಶೋಲ್ಡರ್ ಮೇಲೆ ರೋಲಿಂಗ್ ಹಾಗೂ ಅಧಿಕ ವೈಬ್ರೈಟರ್ ರೋಲ್ ಮಾಡದೆ ಡಾಂಬರು ಮಾಡಿರುವುದರಿಂದಲೇ ರಸ್ತೆಯ ಗುಣಮಟ್ಟ ಕಳಪೆಯಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

  • ಜೂನ್ 7ರ ಬಳಿಕ ಕೊಡಗಿನಲ್ಲಿ ಲಾಕ್‍ಡೌನ್ ವಿಸ್ತರಣೆ ಬೇಡ: ಶಾಸಕ ಅಪ್ಪಚ್ಚು ರಂಜನ್

    ಜೂನ್ 7ರ ಬಳಿಕ ಕೊಡಗಿನಲ್ಲಿ ಲಾಕ್‍ಡೌನ್ ವಿಸ್ತರಣೆ ಬೇಡ: ಶಾಸಕ ಅಪ್ಪಚ್ಚು ರಂಜನ್

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡಿರುವ ಪರಿಣಾಮದಿಂದ ಕಳೆದ ಮೂರ್ನಾಲ್ಕು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗುತ್ತಿದ್ದು, ಜೂನ್ 7ರ ನಂತರ ಜಿಲ್ಲೆಯಲ್ಲಿ ಲಾಕ್‍ಡೌನ್ ವಿಸ್ತರಣೆ ಮಾಡುವುದು ಬೇಡ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಸೋಂಕಿನ ಪ್ರಕರಣಗಳು ಕಂಟ್ರೋಲ್ ಗೆ ಬಂದಿದೆ. ಈ ಮೊದಲು ಪ್ರತಿ ದಿನ 800, 900 ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಇದೀಗ 200ರ ಆಸುಪಾಸಿನಲ್ಲಿ ಬರುತ್ತಿವೆ. ಇನ್ನೊಂದು ವಾರದಲ್ಲಿ ಸಂಪೂರ್ಣವಾಗಿ ಕಡಿಮೆಯಾಗುವ ನಂಬಿಕೆ ಇದೆ. ಜೂನ್ 7ರ ನಂತರ ಪರಿಸ್ಥಿತಿ ಅನುಗುಣವಾಗಿ ಲಾಕ್‍ಡೌನ್ ವಿಸ್ತರಣೆ ಮಾಡಬೇಕೇ, ಬೇಡವೇ ಎಂದು ತೀರ್ಮಾನಿಸುತ್ತೇವೆ.

    ಇದೇ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ನಗದು, ಮೊಬೈಲ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತಾನಾಡಿದ ಅವರು, ಈಗಾಗಲೇ ಅಸ್ಪತ್ರೆಯಲ್ಲಿ ಸಾಕಷ್ಟು ಟೈಟ್ ಮಾಡುವ ವ್ಯವಸ್ಥೆಗಳು ಅಗಿದೆ. ಸೇಫ್ ಲಾಕರ್ ಇಡುವಂತೆ ಸಹ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲದೆ ಓರ್ವ ಅರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ. ಆದಷ್ಟು ಬೇಗ ಕಳವು ಪ್ರಕರಣಕ್ಕೆ ತೆರೆ ಬೀಳುತ್ತದೆ ಎಂದು ಅಪ್ಪಚು ರಂಜನ್ ತಿಳಿಸಿದರು.

  • ಸಿಪಿ ಯೋಗೇಶ್ವರ್‌ರನ್ನು ಕಪ್ಪೆಗೆ ಹೋಲಿಸಿದ ಶಾಸಕ ಅಪ್ಪಚ್ಚು ರಂಜನ್

    ಸಿಪಿ ಯೋಗೇಶ್ವರ್‌ರನ್ನು ಕಪ್ಪೆಗೆ ಹೋಲಿಸಿದ ಶಾಸಕ ಅಪ್ಪಚ್ಚು ರಂಜನ್

    ಮಡಿಕೇರಿ: ಸಿಎಂ ಬದಲಾವಣೆಗೆ ಸಿ.ಪಿ ಯೋಗೇಶ್ವರ್ ರಾಷ್ಟ್ರನಾಯಕರಿಗೆ ದೂರು ನೀಡಿರುವ ವಿಚಾರವಾಗಿ, ಯೋಗೇಶ್ವರ್ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಕಪ್ಪೆಯಂತೆ ಹಾರುತ್ತಾರೆ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ವಾಗ್ದಾಳಿ ನಡೆಸಿದ್ದಾರೆ.

    ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಪ್ಪಚ್ಚು ರಂಜನ್, ಸಿ.ಪಿ ಯೋಗೇಶ್ವರ್ ಯಾರವನು? ಯೋಗೇಶ್ವರ್ ದಿನಕ್ಕೊಂದು ಪಾರ್ಟಿಗೆ ಹೋಗುತ್ತಾರೆ. ಅವರನೆಲ್ಲಾ ಕಟ್ಟಿಕೊಂಡು ಅವರ ಹಿಂದೆ ಯಾರಾದ್ರು ಹೋಗುತ್ತಾರಾ. ಅವರ ನಾಯಕತ್ವದಲ್ಲಿ ನಾವ್ಯಾರು ಹೋಗೋದಿಲ್ಲಾ. ಯೋಗೇಶ್ವರ್ ಮೊದಲು ಕಾಂಗ್ರೆಸ್ ಪಕ್ಷದಲ್ಲಿದ್ದು ಸಚಿವರಾಗಿದ್ದರು. ಇದೀಗ ಪುನಃ ಬಿಜೆಪಿಗೆ ಬಂದು ಸಚಿವರಾಗಿದ್ದಾರೆ ಎಂದು ಅಪ್ಪಚ್ಚು ರಂಜನ್ ಕೆಂಡಾಮಂಡಲವಾಗಿದ್ದಾರೆ.

    ಯೋಗೇಶ್ವರ್ ಅಂತವರೆಲ್ಲ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಕಪ್ಪೆಯಂತೆ ಹಾರುತ್ತಾರೆ. ಅವರನ್ನೆಲ್ಲಾ ಪಕ್ಷದಿಂದಲೇ ವಜಾ ಮಾಡಬೇಕು. ಅದಕ್ಕೆ ಬೇಕಾದ್ರೆ ನಾನೂ ಸಹಿ ಮಾಡಿಕೊಡುತ್ತೇನೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ದಿಢೀರ್ ಕೋವಿಡ್ ಅಸ್ಪತ್ರೆಗೆ ಅಪ್ಪಚ್ಚು ರಂಜನ್ ಭೇಟಿ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ದಿಢೀರ್ ಕೋವಿಡ್ ಅಸ್ಪತ್ರೆಗೆ ಅಪ್ಪಚ್ಚು ರಂಜನ್ ಭೇಟಿ

    ಮಡಿಕೇರಿ: ಕೊರೊನಾ ಚಿಕಿತ್ಸೆಗೆಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗಳಿಗೆ ಸರಿಯಾದ ಊಟ ನೀಡದೇ ನಿರ್ಲಕ್ಷ್ಯ ವಹಿಸಿದ್ದ ಕುರಿತು ಪಬ್ಲಿಕ್ ಟಿವಿ ವರದಿ ಬೆನ್ನಲ್ಲೇ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅವರು ದಿಢೀರ್ ಆಗಿ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಕೊರೊನಾ ಮಾಹಾಮಾರಿ ಕೊಡಗಿನಲ್ಲಿ ದಿನ ಕಳೆದಂತೆ ಏರಿಕೆ ಕಾಣುತ್ತಿದೆ. ಸೋಂಕಿತರ ಸಂಖ್ಯೆಯು ಕಳೆದ ಎರಡು ವಾರದಿಂದ ಹೆಚ್ಚಾಗುತ್ತಿದ್ದು, ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದವರನ್ನು ಕೋವಿಡ್ ಅಸ್ಪತ್ರೆಗಳಿಗೆ ದಾಖಲು ಮಾಡಲಾಗುತ್ತಿದೆ. ಆದರೆ ಅಲ್ಲಿ ಸೋಂಕಿತರನ್ನು ಸರಿಯಾಗಿ ಉಪಚರಿಸುತ್ತಿಲ್ಲ ಎಂಬ ಆರೋಪದ ಬೆನ್ನಲ್ಲೇ ಅಸ್ಪತ್ರೆಯ ಕರ್ಮಕಾಂಡವನ್ನು ನಿನ್ನೆ ಪಬ್ಲಿಕ್ ಟಿವಿ ಮುಖಾಂತರ ಸೋಂಕಿತರು ಬಿಚ್ಚಿಟ್ಟಿದ್ದರು.

    ಮಡಿಕೇರಿ ನಗರದಲ್ಲಿ ಇರುವ ಕೋವಿಡ್ ಆಸ್ಪತ್ರೆಯಲ್ಲಿ ರಾತ್ರಿ ಹತ್ತು ಗಂಟೆಯಾದರೂ ಸೋಂಕಿತರಿಗೆ ಸರಿಯಾಗಿ ಊಟ ಸಿಗುತ್ತಿಲ್ಲ. ಹತ್ತು ಗಂಟೆ ಬಳಿಕ ಹಳಸಿದ ಅನ್ನ ಕೊಡುತ್ತಿದ್ದಾರೆಂದು ಊಟ ಕೊಡಲು ಬಂದ ಸಿಬ್ಬಂದಿಯನ್ನು ಪ್ರಶ್ನಿಸಿ ಸೋಂಕಿತರೊಬ್ಬರು ವೀಡಿಯೋ ಮಾಡಿ ಹರಿಬಿಟ್ಟಿದ್ದರು. ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಊಟ ನೀಡುವುದಿಲ್ಲ. ಕೊಟ್ಟರು ಅ ಊಟ ಹಳಸಿಹೋಗಿರುತ್ತದೆ. ಹೀಗಾಗಿ ಅಲ್ಲಿಯ ಸೋಂಕಿತರು ರೋಗಿಗಳು ಊಟ ಕೊಟ್ಟ ಎರಡು ನಿಮಿಷಕ್ಕೆ ಎಲ್ಲರೂ ಊಟ ಎಸೆಯುತ್ತಾರೆಂದು ಮಾಧ್ಯಮದ ಮುಂದೆ ಅಳಲು ತೋಡಿಕೊಂಡಿದ್ದರು.

    ಇಂದು ಸ್ವತಃ ಮಡಿಕೇರಿ ಶಾಸಕ ಅಪ್ಪಚು ರಂಜನ್ ಮಡಿಕೇರಿಯ ಕೋವಿಡ್ ಅಸ್ಪತ್ರೆಗೆ ದಿಢೀರ್ ಬೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದರು. ಕೋವಿಡ್ ಅಸ್ಪತ್ರೆ ರೋಗಿಗಳನ್ನು ಭೇಟಿ ಮಾಡುವ ಮುನ್ನ ಪಿಪಿಇ ಕಿಟ್ ಧರಿಸಿಕೊಂಡು ಪ್ರತಿ ವಾರ್ಡ್‍ನಲ್ಲಿ ಇರುವ ಸೋಂಕಿತರ ಅರೋಗ್ಯ ಮತ್ತು ಅಸ್ಪತ್ರೆಯ ಸಮಸ್ಯೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾನಾತಾನಾಡಿದ ಅಪ್ಪಚ್ಚು ರಂಜನ್, ಪಬ್ಲಿಕ್ ಟಿವಿ ಮೂಲಕ ಅಸ್ಪತ್ರೆಯ ಸಮಸ್ಯೆಯನ್ನು ನಾನು ನೋಡಿದೆ ಆಸ್ಪತ್ರೆಯಲ್ಲಿ ಎಲ್ಲಾ ವ್ಯವಸ್ಥೆಗಳು ಸರಿ ಇದೆ. ಅದರೆ ಊಟದ ವ್ಯವಸ್ಥೆಯಲ್ಲಿ ಸ್ವಲ್ಪ ಏರುಪೇರು ಅಗಿದೆ. ಸೋಂಕಿತರಿಗೆ ಬಿಸಿಬಿಸಿ ಊಟ ಬಿಸಿ ನೀರು ಕೋಡಬೇಕು. ಸಿಬ್ಬಂದಿಗಳ ಕೊರತೆಯಿಂದ ಈ ರೀತಿಯ ಊಟದಲ್ಲಿ ವ್ಯತ್ಯಾಸ ಅಗಿದೆ. ನಾಳೆಯಿಂದಲೇ ಎಲ್ಲಾ ಸೋಂಕಿತರಿಗೂ ಸರಿಯಾದ ಊಟದ ವ್ಯವಸ್ಥೆ ಮಾಡಲು ಅಸ್ಪತ್ರೆಯ ಅಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

  • PPE ಕಿಟ್ ಧರಿಸಿ ಕೋವಿಡ್ ಕೇರ್ ಸೆಂಟರ್ ಗೆ ಅಪ್ಪಚ್ಚು ರಂಜನ್ ಭೇಟಿ

    PPE ಕಿಟ್ ಧರಿಸಿ ಕೋವಿಡ್ ಕೇರ್ ಸೆಂಟರ್ ಗೆ ಅಪ್ಪಚ್ಚು ರಂಜನ್ ಭೇಟಿ

    ಮಡಿಕೇರಿ: ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪಿಪಿಇ ಕಿಟ್ ಧರಿಸಿ ಕೋವಿಡ್ ಕೇರ್ ಸೆಂಟರ್ ಗಳಿಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿ, ಮಾನಸಿಕ ಧೈರ್ಯ ತುಂಬಿದರು.

    ಕೊಡಗಿನ ಗಡಿ ಭಾಗಗಳಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆಯಲ್ಲಿ ಚರ್ಚೆ ನಡೆಸಿ ನಂತರ ಅಗತ್ಯ ಮುನ್ನಚರಿಕೆ ಕ್ರಮಗಳ ಕೈಗೊಳ್ಳುವಂತೆ ಸೂಚನೆ ನೀಡಿದರಿ. ಬಳಿಕ ಕುಶಾಲನಗರದ ಸಮೀಪದ ಕೂಡಿಗೆಯ ಮೊರಾರ್ಜಿ ವಸತಿ ಶಾಲೆಯಲ್ಲಿ ತೆರೆದಿರುವ ಕೋವಿಡ್ ಕೇಂದ್ರಕ್ಕೆ ಭೇಟಿ ನೀಡಿದರು.

    ಈ ಬಾರಿ ಕೊಡಗಿನಲ್ಲಿ ಕೋವಿಡ್ 19 ಅತಿಯಾಗಿದೆ. ಕೆಲಸದ ನಿಮಿತ್ತವಾಗಿ ನಗರದಲ್ಲಿ ವಾಸಿಸುತ್ತಿದ್ದ ಜನರು ಲಾಕ್‍ಡೌನ್ ಘೋಷಣೆ ಆದ ಕೂಡಲೇ ಬಹಳಷ್ಟು ಮಂದಿ ಆಗಮಿಸಿ ಕೊರೊನಾ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ. ಕೊಡಗಿನಲ್ಲಿ ಬಹಳಷ್ಟು ಕೊರೋನ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಲ್ಲಿನ ವೈದ್ಯರು ಉತ್ತಮವಾದ ಚಿಕಿತ್ಸೆ ನೀಡುತ್ತಿದ್ದಾರೆ. ಆಹಾರ ಪದಾರ್ಥಗಳು ಗುಣಮಟ್ಟದಾಗಿದೆ. ಯಾರು ಭಯ ಪಡುವ ಅವಶ್ಯಕತೆ ಇಲ್ಲ. ಸೋಂಕಿತರು ತಮ್ಮ ಮನೆಗಳಲ್ಲಿರುವಂತೆ ಕೇಂದ್ರದಲ್ಲಿಯೂ ಖುಷಿಯಲ್ಲಿ ಇದ್ದಾರೆ. ಎಂದು ತಿಳಿಸಿದ್ರು.

    ಕೊಡಗು ಜಿಲ್ಲೆಯಲ್ಲಿ ಕೊರೊನ ಮಹಾಮಾರಿ ರುದ್ರ ನರ್ತನ ದಿನದಿಂದ ದಿನಕ್ಕೆ ತಾಂಡವವಾಡುತ್ತಿದೆ. ಸಾವು ನೋವಿನ ಸಂಖ್ಯೆ ದಿನ ಕಳೆದಂತೆ ಮಿತಿಮೀರುತ್ತಿದೆ ಇಂದು ಕೋಡ ಜಿಲ್ಲೆಯಲ್ಲಿ 681 ಪಾಸಿಟಿವ್ ಪ್ರಕರಣಗಳು ದಾಖಲಾಗಿದು 24 ಗಂಟೆಗಳಲ್ಲಿ 12 ಜನರು ಮೃತ ಪಟ್ಟಿದ್ದಾರೆ. ಹೀಗಾಗಿ ಕೊರೋನ ಸೋಂಕು ತಡೆಗಟ್ಟಲು ಕೊಡಗು ಜಿಲ್ಲಾಡಳಿತ ಬಿಗಿ ಕ್ರಮದ ಮೊರೆ ಹೋಗಿದೆ. ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 6 ರಿಂದ 12 ರ ತನಕ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಕಲ್ಪಿಸಲಾಗಿದ್ದು, ಬಾಕಿ ದಿನಗಳು ಕೊಡಗು ಜಿಲ್ಲೆ ಸಂಪೂರ್ಣ ಬಂದ್ ಆಗಿದೆ.

  • ಪಿಪಿಇ ಕಿಟ್ ಧರಿಸಿ ಕೋವಿಡ್ ಅಸ್ಪತ್ರೆ ಸಮಸ್ಯೆಗಳನ್ನು ಪರಿಶೀಲಿಸಿದ ಅಪ್ಪಚ್ಚು ರಂಜನ್

    ಪಿಪಿಇ ಕಿಟ್ ಧರಿಸಿ ಕೋವಿಡ್ ಅಸ್ಪತ್ರೆ ಸಮಸ್ಯೆಗಳನ್ನು ಪರಿಶೀಲಿಸಿದ ಅಪ್ಪಚ್ಚು ರಂಜನ್

    ಮಡಿಕೇರಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಅಲ್ಲದೇ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆಯಿಂದ ಪಾಸಿಟಿವ್ ಬಂದ ರೋಗಿಗಳು ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಮಡಿಕೇರಿ ಕ್ಷೇತ್ರದ ಶಾಸಕರಾದ ಅಪ್ಪಚ್ಚು ರಂಜನ್ ಇಂದು ಸೋಮವಾರಪೇಟೆ ಮತ್ತು ಮಡಿಕೇರಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಕೊರೊನ ಸೋಂಕಿತರರನ್ನು ಉಪಚರಿಸಿ ಆಸ್ಪತ್ರೆಯಲ್ಲಿ ಅಗುತ್ತಿರುವ ಸಮಸ್ಯೆಗಳನ್ನು ಪರಿಶೀಲನೆ ಮಾಡಿದರು.

    ಆಸ್ಪತ್ರೆಯಲ್ಲಿ ಇರುವ ಕೋವಿಡ್ ವಾರ್ ಅಲ್ಲದೆ ಇತರೆ ವಾರ್ಡ್ ಗಳನ್ನು ಪರಿಶೀಲಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅಪ್ಪಚ್ಚು ರಂಜನ್, ಕೊರೊನ ಸೋಂಕಿತರು ಆಸ್ಪತ್ರೆಯಲ್ಲಿ ದೊರಕುತ್ತಿರುವ ಚಿಕಿತ್ಸೆ ಮತ್ತು ಸೌಲಭ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಅರೋಗ್ಯ ಇಲಾಖೆಯ ಸಿಬ್ಬಂದಿ ಹಗಲು ರಾತ್ರಿ ಎನ್ನದೆ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ರೀತಿಯಲ್ಲಿ ಚಿಕಿತ್ಸೆಗಳನ್ನು ನೀಡುತ್ತಿದ್ದು ಜನರು ಇಲ್ಲಿಯ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.

    ಸದ್ಯಕ್ಕೆ 250 ಹಾಸಿಗೆಗಳು ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿದೆ. ಬೇರೆ ಕಡೆ ಹೋಲಿಸಿದರೆ ಕೊಡಗಿನ ಕೋವಿಡ್ ಆಸ್ಪತ್ರೆಯಲ್ಲಿ ಉತ್ತಮವಾದ ಚಿಕಿತ್ಸೆ ದೊರಕುತ್ತಿದೆ. ಕೆಲವೊಂದು ಸಣ್ಣಪುಟ್ಟ ಲೋಪಗಳನ್ನೇ ದೊಡ್ಡದು ಮಾಡಿ ಹೇಳುವುದು ಸರಿಯಲ್ಲ. ಅಪಪ್ರಚಾರಗಳಿಗೆ ಕಿವಿಕೊಡದೆ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಆಸ್ಪತ್ರೆಗೆ ಬನ್ನಿ. ದಯವಿಟ್ಟು ಕೊಡಗಿನ ಜನತೆ ಮಾಸ್ಕ್ ಧರಿಸಿಕೊಳ್ಳಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ. ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಬನ್ನಿ. ಕೊರೊನ ನಿರ್ಮೂಲನೆ ಮಾಡಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಸಹಕರಿಸಿ ಎಂದು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ಡಾ.ಲೋಕೇಶ್, ಡಾ.ರೂಪೇಶ್, ಗೋಪಾಲ್, ಮತ್ತು ಆರೋಗ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

  • ಶಾಸಕ ಅಪ್ಪಚ್ಚು ರಂಜನ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಾರಿಗೆ ನೌಕರರು

    ಶಾಸಕ ಅಪ್ಪಚ್ಚು ರಂಜನ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಾರಿಗೆ ನೌಕರರು

    – ಹಲವು ಬೇಡಿಕೆ ಈಡೇರಿಸುವಂತೆ ಪತ್ರದಲ್ಲಿ ಮನವಿ

    ಮಡಿಕೇರಿ: ಆರನೇ ವೇತನ ಜಾರಿಗೊಳಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಕೊಡಗಿನಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಈ ನಡುವೆ ಸಾರಿಗೆ ನೌಕರರು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಪತ್ರ ನೀಡಿದರು.

    ಜಿಲ್ಲೆಯಲ್ಲಿ ಸರ್ಕಾರಿ ಸಾರಿಗೆ ಸಂಪೂರ್ಣ ಸ್ತಬ್ಧವಾಗಿತ್ತು. ಬೆಳಗ್ಗೆಯಿಂದಲೇ ಬಸ್ಸುಗಳು ಮಡಿಕೇರಿಯ ಡಿಪೋ ಬಿಟ್ಟು ರಸ್ತೆಗೆ ಇಳಿಯಲಿಲ್ಲ. ಇದರಿಂದ ಸಾರ್ವಜನಿಕರು ಸಾಕಷ್ಟು ಸಮಸ್ಯೆ ಎದುರಿಸುವ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಖಾಸಗಿ ಬಸ್ ಮತ್ತು ಕ್ಯಾಬ್ ಗಳು ತಮ್ಮ ಸೇವೆ ಆರಂಭಿಸಿದ್ದರಿಂದ ಪ್ರಯಾಣಿಕರು ನಿರಾಳರಾದರು. ಸರ್ಕಾರಿ ಬಸ್ ಒಂದೇ ಒಂದು ಕೂಡ ಡಿಪೋ ಬಿಟ್ಟು ಹೊರಗೆ ಬಾರದಿದ್ದರಿಂದ ಮಡಿಕೇರಿ ಬಸ್ ನಿಲ್ದಾಣ ಸಂಪೂರ್ಣ ಖಾಲಿ ಹೊಡೆಯುತಿತ್ತು. ದೂರ ದೂರದ ಹೊರ ಜಿಲ್ಲೆಗಳಿಗೆ ಹೋಗಬೇಕಾಗಿದ್ದ ಕೆಲವರು ಬಸ್‍ಗಳ ವ್ಯವಸ್ಥೆ ಇಲ್ಲದೆ ಪರದಾಡಿದರು.

    ಸಾರಿಗೆ ನೌಕರರು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲು ಆಗಮಿಸಿದರು. ಈ ವೇಳೆ ಶಾಸಕ ಅಪ್ಪಚ್ಚು ರಂಜನ್ ಮುಷ್ಕರ ನಡೆಸುವ ಮೂಲಕ ನಿಮ್ಮ ಸಂಸ್ಥೆಗೆ ನೀವೇ ನಷ್ಟ ಮಾಡುತ್ತಿದ್ದೀರಿ. ಅನ್ನ ಕೊಡುವ ಸಂಸ್ಥೆಗೆ ಮಣ್ಣು ಹಾಕುತ್ತಿದ್ದೀರಿ ಎಂದು ಗರಂ ಆದರು. ಅಷ್ಟೇ ಅಲ್ಲ ನಿಮ್ಮ ಪ್ರತಿಭಟನೆಯನ್ನು ಕೈಬಿಡಿ, ನಾವು ಕೂಡ ಕಳೆದ ಒಂದು ವರ್ಷದಿಂದ ಅರ್ಧ ಸಂಬಳ ತೆಗೆದುಕೊಳ್ಳುತ್ತಿದ್ದೇವೆ. ಕೋವಿಡ್ ನಿಂದಾಗಿ ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ. ಇದು ಸರಿಯಾದ ಬಳಿಕ ನಿಮ್ಮ ಬೇಡಿಕೆಯನ್ನು ಸರ್ಕಾರ ಈಡೇರಿಸಲಿದೆ ಎಂದರು. ಇದಕ್ಕೆ ನೌಕರರು ಕೂಡ ಸರ್ಕಾರ ಈಗ ಆರನೇ ವೇತನ ಜಾರಿಮಾಡಲಿ, ಆರ್ಥಿಕ ಸಂಕಷ್ಟದಿಂದ ಹೊರಬಂದ ಬಳಿಕವೇ ನಮಗೆ ಸಮಾನ ವೇತನ ನೀಡಲಿ ಎಂದು ಆಗ್ರಹಿಸಿ ಅಪ್ಪಚ್ಚು ರಂಜನ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

  • ಬಕೆಟ್ ಹಿಡಿಯುವವರಿಗೆ ಸಚಿವ ಸ್ಥಾನ ಕೊಡಲಾಗಿದೆ: ಅಪ್ಪಚ್ಚು ರಂಜನ್ ಆಕ್ರೋಶ

    ಬಕೆಟ್ ಹಿಡಿಯುವವರಿಗೆ ಸಚಿವ ಸ್ಥಾನ ಕೊಡಲಾಗಿದೆ: ಅಪ್ಪಚ್ಚು ರಂಜನ್ ಆಕ್ರೋಶ

    ಮಡಿಕೇರಿ: ಸಚಿವ ಸಂಪುಟ ವಿಸ್ತರಣೆ ಸಂದರ್ಭ ಕೊಡಗು ಜಿಲ್ಲೆಯನ್ನು ಕಡೆಗಣಿಸಲಾಗಿದೆ ಎಂದು ಅಸಮಾಧಾನಗೊಂಡಿರುವ ಶಾಸಕ ಅಪ್ಪಚ್ಚು ರಂಜನ್ ಕೊನೆಗೂ ಮೌನ ಮುರಿದಿದ್ದಾರೆ. ಬಕೆಟ್ ಹಿಡಿಯುವವರಿಗೆ ಸಚಿವಸ್ಥಾನ ಕೊಡಲಾಗಿದೆ ಎನ್ನುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಮಡಿಕೇರಿಯಲ್ಲಿ ಕೋವಿಶೀಲ್ಡ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಜಿಲ್ಲಾಸ್ಪತ್ರೆಗೆ ಆಗಮಿಸಿ ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು, ಪ್ರಾಮಾಣಿಕವಾಗಿ ಸಂಘದ ಮಾತು ಕೇಳಿಕೊಂಡು ತಲೆಯಾಡಿಸುತ್ತಾ ಸುಮ್ಮನೆ ಇದ್ದ ನಮ್ಮನ್ನು ಕಡೆಗಣಿಸಲಾಗಿದೆ. ಪಕ್ಷದ ವಿಚಾರ ಬೀದಿಗೆ ಬರಬಾರದು ಎಂದು ಸುಮ್ಮನೆ ಇದ್ದೆವು. ಇನ್ನು ಹತ್ತು ದಿನಗಳು ಕಳೆಯಲಿ ಬಳಿಕ ಕೇಂದ್ರ ನಾಯಕರನ್ನು ಭೇಟಿಯಾಗಿ ಮಾತನಾಡುತ್ತೇನೆ ಎಂದು ಪಕ್ಷದ ವಿರುದ್ಧ ಗುಡುಗಿದ್ದಾರೆ.

    ಹಾಗೆ ಎಂಎಲ್ ಸಿ ವಿಶ್ವನಾಥ್ ಹೇಳಿರುವುದು ಸರಿಯಾಗಿಯೇ ಇದೆ. ಸೈನಿಕನಿಂದಲೇ ವಿಶ್ವನಾಥ್ ಸೋತಿದ್ದಾರೆ. ಚುನಾವಣೆ ಸಂದರ್ಭ ಹುಣಸೂರು ಉಸ್ತುವಾರಿಯನ್ನು ನಾನೇ ಹೊತ್ತಿದ್ದೆ. ಆ ವೇಳೆ ಎಲ್ಲವನ್ನೂ ನಾನು ಚೆನ್ನಾಗಿ ನೋಡಿದ್ದೇನೆ. ಚುನಾವಣೆಗೆ ಎರಡು ದಿನ ಇರುವಾಗ ಏನೆಲ್ಲಾ ನಡೆಯಿತು ಎನ್ನುವುದು ನನಗೆ ಗೊತ್ತಿದೆ. ಸೈನಿಕನಿಂದಾಗಿಯೇ ವಿಶ್ವನಾಥ್ ಸೋತಿರುವುದು ಅವರ ಸೋಲಿಗೆ ಕಾರಣವಾದವರಿಗೆ ಸಚಿವಸ್ಥಾನ ನೀಡಿರುವುದು ದುರಂತ ಎಂದು ಹೇಳುವ ಮೂಲಕ ವಿಶ್ವನಾಥ್ ಪರ ಬ್ಯಾಟಿಂಗ್ ಮಾಡಿದ್ದಲ್ಲದೆ, ಸಚಿವ ಯೋಗೇಶ್ವರ್ ವಿರುದ್ಧ ಕಿಡಿಕಾರಿದ್ದಾರೆ.

    ಬಿಜೆಪಿಯ ಬೆಳವಣಿಗಾಗಿ ದುಡಿದವರನ್ನು ಕಡೆಗಣಿಸಲಾಗುತ್ತಿದೆ. ಇನ್ನು ಶಾಸಕ ಜಮೀರ್ ಅಹ್ಮದ್ ಕ್ಷೇತ್ರಕ್ಕೆ 200 ಕೋಟಿ ರೂಪಾಯಿ ಅನುದಾನ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಕೊಡಗು ಜಿಲ್ಲೆ ಪ್ರಾಕೃತಿಕ ವಿಕೋಪದಿಂದ ನಲುಗಿ ಹೋಗಿದೆ. ಬೇರೆ ಬೇರೆ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಆ ಜಿಲ್ಲೆಗಳಿಗೆ ಹೆಚ್ಚಿನ ಅನುದಾನ ಕೊಡುವ ಬದಲು ಬೆಂಗಳೂರು ನಗರದ ಕ್ಷೇತ್ರಕ್ಕೆ ಅಷ್ಟೊಂದು ಅನುದಾನವನ್ನು ಕೊಡುವ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದ್ದಾರೆ.