Tag: ಅಪ್ಪು

  • ಬರಲಿವೆ ಪುನೀತ್ ನಟನೆಯ ‘ಯುವರತ್ನ’ ಸಿನಿಮಾದ ಅನ್ ಕಟ್ ಸೀನ್ಸ್ : ನಿರ್ದೇಶಕ ಸಂತೋಷ್ ಆನಂದ್

    ಬರಲಿವೆ ಪುನೀತ್ ನಟನೆಯ ‘ಯುವರತ್ನ’ ಸಿನಿಮಾದ ಅನ್ ಕಟ್ ಸೀನ್ಸ್ : ನಿರ್ದೇಶಕ ಸಂತೋಷ್ ಆನಂದ್

    ಪುನೀತ್ ರಾಜ್ ಕುಮಾರ್ ನಟನೆಯ ‘ಯುವರತ್ನ’ ಸಿನಿಮಾ ಕಳೆದ ವರ್ಷ ಬಾಕ್ಸ್ ಆಫೀಸಿನಲ್ಲಿ ಹೇಳಿಕೊಳ್ಳುವಂತೆ ದುಡ್ಡು ತಂದು ಕೊಡದೇ ಇದ್ದರೂ, ಆ ಸಿನಿಮಾದ ಆಶಯದಿಂದಾಗಿ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಸರಕಾರಿ ಕಾಲೇಜುಗಳ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನಿಟ್ಟುಕೊಂಡು ಮಾಡಿರುವ ಚಿತ್ರದಲ್ಲಿ ಸಮಾಜದ ಕಾಳಜಿ ಎದ್ದು ಕಾಣುತ್ತಿತ್ತು. ಹೀಗಾಗಿ ಯುವರತ್ನ ಸಿನಿಮಾ ಪುನೀತ್ ಅಭಿಮಾನಿಗಳಿಗೆ ಇಷ್ಟವಾಗಿತ್ತು. ಇದನ್ನೂ ಓದಿ : ತಮಿಳಲ್ಲ, ಬಾಲಿವುಡ್ ಗೆ ಹಾರಿದ ರಜನಿಕಾಂತ್ ಪುತ್ರಿ ಐಶ್ವರ್ಯಾ

    ಡಾ.ರಾಜ್ ಕುಮಾರ್ ಈ ಹಿಂದೆ ಕಾಲೇಜು ವಿದ್ಯಾರ್ಥಿಗಳಿಗೆ ಸಪ್ಲೈ ಆಗುತ್ತಿದ್ದ ಡ್ರಗ್ಸ್ ಕುರಿತಾದ ಚಿತ್ರವೊಂದನ್ನು ಮಾಡಿದ್ದರು. ಯುವರತ್ನ ಸಿನಿಮಾದಲ್ಲೂ ಅಂತಹ ದೃಶ್ಯಗಳಿದ್ದವು. ಆ ಎರಡೂ ಸಿನಿಮಾಗಳನ್ನು ಅಭಿಮಾನಿಗಳು ಹೋಲಿಕೆ ಮಾಡಿದ್ದರು. ಆ ಸಿನಿಮಾ ಕೆಲವು ದೃಶ್ಯಗಳನ್ನು ತೆರೆಗೆ ತಂದಿರಲಿಲ್ಲ ನಿರ್ದೇಶಕರು. ಈಗ ಆ ದೃಶ್ಯಗಳನ್ನು ತರುವ ಆಲೋಚನೆ ಮಾಡಿದ್ದಾರೆ. ಇದನ್ನೂ ಓದಿ : ಎಳನೀರಿನಲ್ಲಿ ಮದ್ಯ ಹಾಕಿ ಕೊಟ್ಟಿದ್ದೇ ಈ ನಟಿ ಸಾವಿಗೆ ಕಾರಣವಾಯ್ತಾ?

    ಪುನೀತ್ ಅಭಿಮಾನಿಯೊಬ್ಬ ಟ್ವಿಟರ್ ಮೂಲಕ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರಿಗೆ ‘ಸಂತು ಅಣ್ಣ ನಿಮ್ಮಿಂದ ನಾವು ಇನ್ನೇನು ಕೇಳೋಕೆ ಆಗಲ್ಲ. ಆದರೆ, ಯುವರತ್ನ ಚಿತ್ರದ ಡಿಲಿಟೆಡ್ ಸೀನ್ಸ್ ಹಾಗೂ ಬಿಜಿಎಂ ಮಾತ್ರ ಕೇಳ್ತೀವಿ. ದಯವಿಟ್ಟು ಬಿಡಿ ಅಣ್ಣ’ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ : ಮಿಲ್ಕಿ ಬ್ಯೂಟಿಗೆ ಬಿಕಿನಿನೂ ಒಪ್ಪತ್ತೆ ಅಂದ್ರು ಫ್ಯಾನ್ಸ್ : ಖುಷ್ ಅಂದ ತಮನ್ನಾ

    ಚಂದು ಎಂಬ ಅಭಿಮಾನಿಯ ಈ ಕೋರಿಕೆಗೆ ಪ್ರತಿಕ್ರಿಯೆ ನೀಡಿರುವ ಸಂತೋಷ್ ಆನಂದ್ ರಾಮ್ “ಈಗಲೇ ಎಲ್ಲವನ್ನೂ ರಿಲೀಸ್ ಮಾಡುವುದಕ್ಕೆ ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಖಂಡಿತಾ ಎಲ್ಲವನ್ನೂ ಅಭಿಮಾನಿಗಳಿಗೆ ಕೊಡುತ್ತೇವೆ. ನಮ್ ಪವರ್ ಸ್ಟಾರ್ ಯಾವತ್ತಿಗೂ ತೆರೆಯ ಮೇಲೆ ಇರಬೇಕು’ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಈ ಮೂಲಕ ಯುವರತ್ನ ಸಿನಿಮಾದ ಅನ್ ಕಟ್ ದೃಶ್ಯಗಳನ್ನು ನೋಡುವಂತಹ ಭಾಗ್ಯವನ್ನು ಅವರು ಅಭಿಮಾನಿಗಳಿಗೆ ಕಲ್ಪಿಸಲಿದ್ದಾರೆ.

  • ಅಮೆರಿಕದಲ್ಲಿ ಅಪ್ಪು ಬರ್ತ್ ಡೇ, ಪುನೀತ್ ರಾಜ್ ಕುಮಾರ್ ಮಗಳೇ ಅತಿಥಿ

    ಅಮೆರಿಕದಲ್ಲಿ ಅಪ್ಪು ಬರ್ತ್ ಡೇ, ಪುನೀತ್ ರಾಜ್ ಕುಮಾರ್ ಮಗಳೇ ಅತಿಥಿ

    ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬವನ್ನು ಅಮೆರಿಕಾದ ನ್ಯೂ ಜೆರ್ಸಿಯಲ್ಲಿ ವಿಶೇಷವಾಗಿ ಆಚರಿಸಿದ್ದಾರೆ. ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯರಲ್ಲೂ ಒಟ್ಟಾಗಿ ಜೇಮ್ಸ್ ಜಾತ್ರೆ ಮತ್ತು ಅಪ್ಪು ಹುಟ್ಟುವನ್ನು ಅದ್ಧೂರಿಯಾಗಿ ನೆರವೇರಿಸಿದ್ದಾರೆ. ಮಾರ್ಚ್ 19 ರಂದು ನ್ಯೂಜೆರ್ಸಿ ನಾರ್ಥ್ ಬ್ರನ್ಸ್ವಿಕ್ ಉದ್ಯಾನವನದಲ್ಲಿ ಜರುಗಿದ ಅಪ್ಪು ಅಭಿಮಾನಿ ಸಂಘದ ಈ ಕಾರ್ಯಕ್ರಮಕ್ಕೆ ಪುನೀತ್ ಅವರ ಹಿರಿಯ ಪುತ್ರ ದ್ರಿತಿ ಮುಖ್ಯ ಅಥಿಯಾಗಿ ಆಗಮಿಸಿದ್ದರು. ದೀಪ ಬೆಳಗುವ ಮೂಲಕ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಮೆರಿಕಾದ ನಾನಾ ಭಾಗಗಳಿಂದ ಈ ಕಾರ್ಯಕ್ರಮಕ್ಕೆ ಅಪ್ಪು ಅಭಿಮಾನಿಗಳು ಆಗಮಿಸಿದ್ದರು. ಇದನ್ನೂ ಓದಿ : ಕನ್ನಡದ ‘ದಸರಾ’ ವರ್ಸಸ್ ತೆಲುಗಿನ ‘ದಸರಾ’: ಯಾರಿಗೆ ಸಿಗತ್ತೆ ದಸರಾ ಟೈಟಲ್?

    ಅಪ್ಪು ಅವರ ಭಾವಚಿತ್ರ, ಅವರ ಹಾಡಿಗೆ ಅಲ್ಲಿನ ಮಕ್ಕಳ ನೃತ್ಯ ಮಾಡಿದರು. ನಾಗೇಶ್ ಕೆಂಪಯ್ಯನವರ ನೇತೃತ್ವದಲ್ಲಿ ಡೊಳ್ಳು ವಾದ್ಯ, ಹಲವು ಬಗೆಯ ಜಾನಪದ ಕುಣಿತ ಹೀಗೇ ಊರಿಗೆ ಹಬ್ಬ, ಜಾತ್ರೆಗಳಂತೆಯೇ ಹುಟ್ಟು ಹಬ್ಬವನ್ನು ಸಡಗರದಿಂದ ಅಲ್ಲಿನ ಅಭಿಮಾನಿಗಳು ಆಚರಿಸಿದರು.

    ಅಪ್ಪು ಅಮೆರಿಕಾಗೆ ಹೋದಾಗಲೆಲ್ಲ ಹಲವರನ್ನು ಭೇಟಿ ಮಾಡುತ್ತಿದ್ದರು. ಅಲ್ಲದೇ, ಮೊರ್ಗನ್ವಿಲ್ಲೆಯಲ್ಲಿರುವ ಕೃಷ್ಣ ದೇವಸ್ಥಾನದಲ್ಲಿ ಕೊಡುವ ಬಾದುಷಾ ಅಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಅಪ್ಪು ಅಮೆರಿಕಾಗೆ ಬಂದಿದ್ದಾರೆ ಅಂದರೆ, ದೇವಸ್ಥಾನದ ರಂಗಾ ಭಟ್ಟರು ಬಾದುಷಾ ಮಾಡಿ ಕೊಡುತ್ತಿದ್ದರು. ಹಾಗಾಗಿ ಈ ಹುಟ್ಟು ಹಬ್ಬದಂದು ರಂಗಾ ಭಟ್ಟರು ಬಾದುಷಾ ಮಾಡಿ ಕಳುಹಿಸಿದ್ದರು. ಅದೇ ತಿಂಡಿಯನ್ನೇ ಅಲ್ಲಿ ಎಲ್ಲರಿಗೂ ಹಂಚಲಾಯಿತು. ಇದನ್ನೂ ಓದಿ : ಸುದೀಪ್, ಉಪ್ಪಿ ಕಾಂಬಿನೇಷನ್ ‘ಕಬ್ಜ’ ಚಿತ್ರಕ್ಕೆ ಇಬ್ಬರು ದಕ್ಷಿಣ ತಾರೆಯರ ಎಂಟ್ರಿ

    ನಂತರ ನೂರೈವತ್ತಕ್ಕೂ ಹೆಚ್ಚು ಕಾರುಗಳ ಮೆರವಣಿಗೆ ಕೂಡ ನಡೆಯಿತು. ರಸ್ತೆಯುದ್ದಕ್ಕೂ ಕಾರು ಚಲಾಯಿಸಿಕೊಂಡು ಅಪ್ಪುಗೆ ಗೌರವ ಸೂಚಿಸಿದರು. ಕೇವಲ ಅಮೆರಿಕಾದಲ್ಲಿರುವ ಭಾರತೀಯರು ಮಾತ್ರ ವಲ್ಲ, ಅಮೆರಿಕಾ ಪ್ರಜೆಗಳು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

  • ಜೇಮ್ಸ್ ಸಿನಿಮಾ ನೋಡಿಲ್ಲ, ನೋಡ್ತೀನಿ: ಜ್ಯೂ.ಎನ್.ಟಿ.ಆರ್

    ಜೇಮ್ಸ್ ಸಿನಿಮಾ ನೋಡಿಲ್ಲ, ನೋಡ್ತೀನಿ: ಜ್ಯೂ.ಎನ್.ಟಿ.ಆರ್

    ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ತಮ್ಮ ಆರ್.ಆರ್.ಆರ್ ಸಿನಿಮಾದ ಕಾರ್ಯಕ್ರಮಕ್ಕಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಆತ್ಮೀಯ ಸ್ನೇಹಿತರಾದ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ನೋಡುವುದಕ್ಕೆ ಆಗಿಲ್ಲ. ಆರ್.ಆರ್.ಆರ್ ಸಿನಿಮಾದ ಬಿಡುಗಡೆಯ ಬ್ಯುಸಿಯಲ್ಲಿರುವೆ. ಇದು ಸಿನಿಮಾ ರಿಲೀಸ್ ಆದ ತಕ್ಷಣವೇ ಜೇಮ್ಸ್ ಸಿನಿಮಾ ನೋಡುವೆ’ ಎಂದಿದ್ದಾರೆ ಜ್ಯೂನಿಯರ್.

    ಜ್ಯೂ.ಎನ್ಟಿಆರ್ ಮತ್ತು ಪುನೀತ್ ರಾಜ್ ಕುಮಾರ್ ಸ್ನೇಹ ಗಾಢವಾದದ್ದು. ಗೆಳೆತನದ ಕಾರಣಕ್ಕಾಗಿ ಪುನೀತ್ ಅವರ ಚಿತ್ರಕ್ಕೆ ಜೂ.ಎನ್.ಟಿ.ಆರ್ ಹಾಡು ಹೇಳಿದ್ದರು. ಇವರ ಕಾರ್ಯಕ್ರಮಕ್ಕಾಗಿ ಹಲವು ಬಾರಿ ಪುನೀತ್ ರಾಜ್ ಕುಮಾರ್ ಹೈದರಾಬಾದ್ ಗೆ ಹೋಗಿದ್ದಾರೆ. ಅಷ್ಟೊಂದು ಸ್ನೇಹ ಇವರಲ್ಲಿತ್ತು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ

    ಪುನೀತ್ ಸಿನಿಮಾ ಬಿಡುಗಡೆಯ ಬೆನ್ನಲ್ಲೇ ಜ್ಯೂನಿಯರ್ ಚಿತ್ರವೂ ರಿಲೀಸ್ ಆಗುತ್ತಿದೆ. ಜೇಮ್ಸ್ ಒಳ್ಳೆಯ ಓಪನಿಂಗ್ ಪಡೆದಿದೆ. ಆರ್.ಆರ್.ಆರ್. ಸಿನಿಮಾದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ ಸಾವಿರಾರು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆಯಂತೆ. ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ಇದನ್ನೂ ಓದಿ : ನವೀನ್ ಸಜ್ಜು ಹೀರೋ: ಯಾರಿವ ಮುತ್ತು ವಿತ್? Exclusive Photos

    ರಾಮ್ ಚರಣ್ ತೇಜ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಆಲಿಯಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಎಂ.ಎಂ.ಕೀರವಾಣಿ ಸಂಗೀತ  ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಹಿಟ್ ಆಗಿವೆ. ಟ್ರೇಲರ್ ಕೂಡ ಭರವಸೆ ಮೂಡಿಸಿದೆ. ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

  • ಪುನೀತ್ ಹುಟ್ಟು ಹಬ್ಬಕ್ಕೆ ವಿಶ್ ಮಾಡದ ರಶ್ಮಿಕಾ ಮಂದಣ್ಣ- ಮತ್ತೆ ನೆಟ್ಟಿಗರು ಗರಂ

    ಪುನೀತ್ ಹುಟ್ಟು ಹಬ್ಬಕ್ಕೆ ವಿಶ್ ಮಾಡದ ರಶ್ಮಿಕಾ ಮಂದಣ್ಣ- ಮತ್ತೆ ನೆಟ್ಟಿಗರು ಗರಂ

    ನ್ನಡದ ಕಾರ್ಯಕ್ರಮಗಳಲ್ಲೂ ಇಂಗ್ಲಿಷ್ ಮಾತನಾಡಿ ಕನ್ನಡಿಗರ ಕಂಗೆಣ್ಣಿಗೆ ಗುರಿಯಾಗುತ್ತಿರುವ ರಶ್ಮಿಕಾ ಮಂದಣ್ಣ ಈಗ ಮತ್ತೆ ಟ್ರೋಲ್ ಪೇಜ್ ಗಳಿಗೆ ಆಹಾರವಾಗಿದ್ದಾರೆ. ಅಲ್ಲದೇ, ಅಪ್ಪು ಅಭಿಮಾನಿಗಳು ಕೂಡ ಕರ್ನಾಟಕದಿಂದ ‘ಬೈಕಾಟ್ ರಶ್ಮಿಕಾ’ ಎಂದು ಹ್ಯಾಷ್ ಟ್ಯಾಗ್ ಹಾಕಿ ವಿರೋಧ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ : ದಾಖಲೆ ಬರೆದ ಜೇಮ್ಸ್ – ಎರಡೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿದ ಪುನೀತ್ ಚಿತ್ರ

    ಕನ್ನಡದಿಂದ ನೆರೆ ರಾಜ್ಯಕ್ಕೆ ಹೋದ ರಶ್ಮಿಕಾಗೆ ಬ್ರೇಕ್ ನೀಡಿದ್ದು ಕನ್ನಡ ಚಿತ್ರರಂಗ. ಪುನೀತ್ ಅವರ ಜತೆ ಅಂಜನೀಪುತ್ರ ಸಿನಿಮಾದಲ್ಲೂ ರಶ್ಮಿಕಾ ನಟಿಸಿದ್ದಾರೆ. ಮಾರ್ಚ್ 17 ರಂದು ಕೇವಲ ಕನ್ನಡ ಚಿತ್ರರಂಗದ ನಟ ನಟಿಯರು ಮಾತ್ರವಲ್ಲ, ನೆರೆಯ ತಮಿಳುನಾಡು, ಆಂಧ್ರ ಮತ್ತು ಕೇರಳ ಚಿತ್ರರಂಗದ ದಿಗ್ಗಜರು ಕೂಡ ಪುನೀತ್ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಕನ್ನಡದವರೇ ಆದ ರಶ್ಮಿಕಾ ಮಾತ್ರ ಸೋಷಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ. ಹಾಗಾಗಿ ಸಹಜವಾಗಿಯೇ ಅಪ್ಪು ಇಷ್ಟಪಡುವವರು ರಶ್ಮಿಕಾ ಅವರಿಗೆ ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಪುನೀತ್ ಗೆ ಮರಣೋತ್ತರ ‘ ಸಹಕಾರ ರತ್ನ’ ಪ್ರಶಸ್ತಿ: ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ

    ರಶ್ಮಿಕಾ ಮಂದಣ್ಣ ಈ ರೀತಿ ಮಾಡುತ್ತಿರುವುದು ಮೊದಲೇನೂ ಅಲ್ಲ. ಕನ್ನಡ ಸಿನಿಮಾಗಳ ಪ್ರಮೋಷನ್ ಗೆ ಸಿಗಲ್ಲ ಎಂದು ವಿವಾದ ಮಾಡಿಕೊಂಡಿದ್ದರು. ಕನ್ನಡದಲ್ಲಿ ಮಾತನಾಡಿಸಿದರೂ, ಅವರು ಕೊಡುವ ಉತ್ತರ ಇಂಗ್ಲಿಷಿನಲ್ಲಿ ಇರುತ್ತೆ ಎಂದು ಕನ್ನಡ ಪರ ಸಂಘಟನೆಗಳು ಕೂಡ ವಿರೋಧ ವ್ಯಕ್ತ ಪಡಿಸಿದ್ದರು. ಇದೀಗ ಅಪ್ಪು ಅಭಿಮಾನಿಗಳ ಕಣ್ಣಿಗೆ ಬಿದ್ದಿದ್ದಾರೆ ರಶ್ಮಿಕಾ.

  • ಜೇಮ್ಸ್ ರಿಲೀಸ್ ಬಳಿಕ ಅಪ್ಪು ನೆನೆದು ಕಣ್ಣೀರಿಟ್ಟ ಶಿವಣ್ಣ

    ಜೇಮ್ಸ್ ರಿಲೀಸ್ ಬಳಿಕ ಅಪ್ಪು ನೆನೆದು ಕಣ್ಣೀರಿಟ್ಟ ಶಿವಣ್ಣ

    ಮೈಸೂರು: ಪ್ರತಿಯೊಂದು ಸಿನಿಮಾ ಬಿಡುಗಡೆಯಾದಾಗಲೂ ಅಪ್ಪು ಕರೆ ಮಾಡಿ ಸಿನಿಮಾ ಹೇಗಿತ್ತು ಎಂದು ಕೇಳುತ್ತಿದ್ದ. ಆದರೆ ಈ ಬಾರಿ ಜೇಮ್ಸ್ ಚಿತ್ರ ವೀಕ್ಷಿಸಿದ ಬಳಿಕ ಚಿತ್ರ ಹೇಗಿತ್ತು ಎಂದು ಕೇಳಲು ಅಪ್ಪುವಿನ ಕಾಲ್ ಬರಲ್ಲ. ಈ ವಿಷಯ ಮನಸ್ಸಿಗೆ ತುಂಬಾ ನೋವು ತರುತ್ತಿದೆ ಎಂದು ಪುನೀತ್ ರಾಜ್ ಕುಮಾರ್ ಅಣ್ಣ ನಟ ಶಿವ್ ರಾಜ್‌ಕುಮಾರ್ ಸುದ್ದಿಗೋಷ್ಟಿಯಲ್ಲಿ ಅಪ್ಪು ನೆನೆದು ಕಣ್ಣೀರಿಟ್ಟರು.

    ಪುನೀತ್ ಅಭಿನಯದ ಸಿನಿಮಾ ಜೇಮ್ಸ್ ಬಿಡುಗಡೆ ಬಳಿಕ ಮಾತನಾಡಿದ ಶಿವಣ್ಣ ಅಪ್ಪು ಟ್ಯಾಲೆಂಟ್ ಬಗ್ಗೆ ಮಾತಾಡಲು ಸಾಧ್ಯವೇ ಇಲ್ಲ. ಅವನ ಪ್ರತಿಯೊಂದು ಸಿನಿಮಾವನ್ನೂ ನಾನು ಎಂಜಾಯ್ ಮಾಡಿಕೊಂಡು ನೋಡುತ್ತಿದ್ದೆ. ಆಕ್ಷನ್, ಆಕ್ಟಿಂಗ್ ಎಲ್ಲವನ್ನೂ ಆತ ಚಿಕ್ಕ ವಯಸ್ಸಿನಲ್ಲೇ ಮೀರಿ ಬೆಳೆದಿದ್ದ. ಈ ಮೂಲಕ ಎಲ್ಲರಿಗೂ ಹತ್ತಿರವಾದಾತ ನಮ್ಮೊಂದಿಗೆ ಇಲ್ಲ ಎಂಬುದನ್ನು ಊಹಿಸಿಕೊಳ್ಳಲೂ ಸಾಧ್ಯವಾಗುತ್ತಿಲ್ಲ ಎಂದು ಕಂಬನಿ ಮಿಡಿದರು. ಇದನ್ನೂ ಓದಿ: ನಾನು ಜೇಮ್ಸ್ ಸಿನಿಮಾ ನೋಡಲಾರೆ : ಅಶ್ವಿನಿ ಪುನೀತ್ ರಾಜ್ ಕುಮಾರ್

    ಪುನೀತ್ ಪುಟ್ಟ ಮಗುವಿದ್ದಾಗದಿಂದ ಹಿಡಿದು ದೊಡ್ಡವನಾಗುವವರೆಗೂ ನೋಡಿದ್ದೇನೆ. ಕೇವಲ ನಟನೆಯಲ್ಲಿ ಮಾತ್ರವಲ್ಲ. ನಿಜ ಜೀವನದಲ್ಲೂ ಆತನ ಹೃದಯ ಶುದ್ಧ, ನಿಷ್ಕಲ್ಮಶವಾಗಿತ್ತು. ಈ ವಿಷಯವನ್ನೇ ಎಲ್ಲರೂ ಮೆಚ್ಚಿರುವುದು ಎಂದರು.

    ಜೇಮ್ಸ್ ಚಿತ್ರವನ್ನು ತುಂಬಾ ಚೆನ್ನಾಗಿ ತೆರೆ ಮೇಲೆ ತಂದಿದ್ದಾರೆ. ಅದರ ಹಿಂದಿನ ಶ್ರಮ ಮೇಕಿಂಗ್‌ನಲ್ಲಿಯೇ ತಿಳಿಯುತ್ತದೆ. ಇಂದು ಜೇಮ್ಸ್ ಚಿತ್ರವನ್ನು ಒಬ್ಬ ಅಭಿಮಾನಿಯಾಗಿ ನೋಡಿದ್ದೇನೆ, ಎಂಜಾಯ್ ಮಾಡಿದ್ದೇನೆ. ಆದರೆ ಅಲ್ಲಲ್ಲಿ ಅಪ್ಪು ಇಲ್ಲ ಎಂಬುದು ನೆನೆಪಿಗೆ ಬರುತ್ತಿತ್ತು, ಕಣ್ಣಲ್ಲಿ ನೀರು ತರುತ್ತಿತ್ತು. ಅಪ್ಪು ಇಲ್ಲದೇ ಈ ಸಿನಿಮಾ ತೆರೆ ಮೇಲೆ ಬಂದಿರುವುದು ತುಂಬಾ ದುಃಖದ ವಿಷಯ ಎಂದರು. ಇದನ್ನೂ ಓದಿ: 80 ಕೋಟಿಗೆ ಜೇಮ್ಸ್ ಟಿವಿ ರೈಟ್ಸ್ ಸೇಲಾಯ್ತಾ? ಡಿಮಾಂಡಪ್ಪೋ ಡಿಮಾಂಡ್

    ಈ ಸಿನಿಮಾ ಇಷ್ಟು ದೊಡ್ಡ ಮಟ್ಟದಲ್ಲಿ ಬಿಡುಗಡೆ ಹೊಂದಿದೆ ಎಂದರೆ ಹೆಮ್ಮೆ ಎನಿಸುತ್ತದೆ. ಒಂದು ಕಡೆ ದುಃಖ ಆದರೆ ಇನ್ನೊಂದು ಕಡೆ ಸಂತೋಷವೂ ಇದೆ. ಅಪ್ಪು ಅಭಿಮಾನಿಗಳ ಮನಸ್ಸಲ್ಲಿ ಬೆರೆತಿದ್ದಾನೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ಭಾರತದಲ್ಲೂ ಸಿನಿಮಾ ಬಗ್ಗೆ ಒಳ್ಳೆ ಪ್ರತಿಕ್ರಿಯೆ ಬರುತ್ತಿದೆ ಎಂದು ಹೇಳಿದರು.

    ಅಪ್ಪು ಸಿನಿಮಾದಲ್ಲಿ ಹೇಳಿರುವುದು ಕೇವಲ ಡೈಲಾಗ್ ಅಲ್ಲ. ಅವನ ವ್ಯಕ್ತಿತ್ವದಂತೆಯೇ ಡೈಲಾಗ್‌ಗಳನ್ನು ಬರೆಯಲಾಗಿದೆ. ಅಪ್ಪು ಸಿನಿಮಾಗೆ ನಾನು ಧ್ವನಿ ಕೊಟ್ಟಿರುವುದು ನನ್ನ ಭಾಗ್ಯ. ನಾನು ಸಿನಿಮಾ ನೋಡುತ್ತಿರುವಾಗ ತೆರೆ ಮೇಲೆ ಕೇವಲ ಅಪ್ಪು ಕಾಣಿಸುತ್ತಿದ್ದ. ನನ್ನ ಧ್ವನಿ ಅಲ್ಲ. ಇದನ್ನು ಅಭಿಮಾನಿಗಳು ಇಷ್ಟ ಪಟ್ಟರೆ ಅಷ್ಟೇ ನನಗೆ ಸಂತೋಷ ಎಂದು ಭಾವುಕರಾದರು.

  • ನಾನು ಜೇಮ್ಸ್ ಸಿನಿಮಾ ನೋಡಲಾರೆ : ಅಶ್ವಿನಿ ಪುನೀತ್ ರಾಜ್ ಕುಮಾರ್

    ನಾನು ಜೇಮ್ಸ್ ಸಿನಿಮಾ ನೋಡಲಾರೆ : ಅಶ್ವಿನಿ ಪುನೀತ್ ರಾಜ್ ಕುಮಾರ್

    ಪುನೀತ್ ರಾಜ್ ಕುಮಾರ್ ಅಗಲಿಕೆಯ ನೋವಿನಿಂದ ಇನ್ನೂ ಆಚೆ ಬಾರದ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇಂದು ಬಿಡುಗಡೆ ಆಗಿರುವ ಜೇಮ್ಸ್ ಸಿನಿಮಾವನ್ನು ನೋಡಲಾರೆ ಎಂದಿದ್ದಾರೆ. ಆಂಗ್ಲ ದೈನಿಕದೊಂದಿಗೆ ಮಾತನಾಡಿರುವ ಅವರು, “ನನ್ನ ಮತ್ತು ಪುನೀತ್ ಅವರ ಬದುಕಿನ ಜರ್ನಿ 21 ವರ್ಷಗಳದ್ದು. ಸಡನ್ನಾಗಿ ಅವರು ಹೀಗೆ ಬಿಟ್ಟು ಹೋಗುತ್ತಾರೆ ಎಂದು ಭಾವಿಸಿರಲಿಲ್ಲ. ಅವರ ಅಗಲಿಕೆಯ ನೋವನ್ನು ಇಂದಿಗೂ ಅರಗಿಸಿಕೊಳ್ಳಲು ಆಗುತ್ತಿಲ್ಲ. ನಾನೂ ಆ ನೋವಿನಿಂದ ಇನ್ನೂ ಆಚೆ ಬಂದಿಲ್ಲ. ಹಾಗಾಗಿ ತೆರೆಯ ಮೇಲೆ ಅವರನ್ನು ನಾನು ನೋಡಲಾರೆ’ ಎಂದು ತಮ್ಮ ನೋವಿನ ಮಾತುಗಳನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮಿಸ್ ವರ್ಲ್ಡ್ 2021: ಭಾರತೀಯ ಮೂಲದ ಶ್ರೀಸೈನಿ ರನ್ನರ್ ಅಪ್, ಕರೋಲಿನಾ ಬಿಲಾವ್ಸ್ಕಾಗೆ ‘ವಿಶ್ವ ಸುಂದರಿ’ ಕಿರೀಟ

    ಹೊಸ ಹೊಸ ಕಲಾವಿದರಿಗೆ, ನಿರ್ದೇಶಕರಿಗೆ, ತಾಂತ್ರಿಕ ವರ್ಗಕ್ಕೆ ಸೂಕ್ತ ವೇದಿಕೆ ಕಲ್ಪಿಸಬೇಕು ಎನ್ನುವುದು ಪುನೀತ್ ಅವರ ಆಸೆಯಾಗಿತ್ತು. ಹಾಗಾಗಿಯೇ ನಾವು ಪಿ.ಆರ್.ಕೆ ಪ್ರೊಡಕ್ಷನ್ ಶುರು ಮಾಡಿದ್ದೆವು. ಅವರ ಕನಸನ್ನು ಮುಂದುವರೆಸಿಕೊಂಡು ಹೋಗಬೇಕು. ಅಂದುಕೊಂಡಂತೆ ಹೊಸ ಹೊಸ ಪ್ರತಿಭೆಗಳಿಗೆ ಪಿ.ಆರ್.ಕೆ ಪ್ರೊಡಕ್ಷನ್ ಅವಕಾಶ ನೀಡಲಿದೆ ಎಂದಿದ್ದಾರೆ ಅಶ್ವಿನಿ ಪುನೀತ್ ರಾಜ್ ಕುಮಾರ್.  ಇದನ್ನೂ ಓದಿ: ಜೇಮ್ಸ್ ಸಿನಿಮಾ ನೋಡೋಕೆ 10 ಅಲ್ಲ, 100 ಕಾರಣ

    ಅಭಿಮಾನಿಗಳು ತೋರುತ್ತಿರುವ ಪ್ರೀತಿಯ ಬಗ್ಗೆಯೂ ಮಾತನಾಡಿರುವ ಅಶ್ವಿನಿ, “ಅಭಿಮಾನಿಗಳು ಸ್ವಯಂ ಪ್ರೇರಿತರಾಗಿ ಅನ್ನದಾನ, ನೇತ್ರದಾನದಂತಹ ಪುಣ್ಯದ ಕೆಲಸಗಳನ್ನು ಮಾಡುತ್ತಿದ್ದಾರೆ. ಅದಕ್ಕೆ ಪುನೀತ್ ಅವರೇ ಪ್ರೇರಣೆ ಎಂದು ಹೇಳುತ್ತಿದ್ದಾರೆ. ಇಂತಹ ಅಭಿಮಾನಿಗಳನ್ನು ಅವರು ಪಡೆದಿದ್ದರು. ಈಗ ಅಭಿಮಾನಿಗಳ ಮೂಲಕ ಅವರು ಸದಾ ನಮ್ಮೊಂದಿಗೆ ಇರುತ್ತಾರೆ” ಎಂದಿದ್ದಾರೆ.

  • ಜೇಮ್ಸ್ ಸಿನಿಮಾ ನೋಡೋಕೆ 10 ಅಲ್ಲ, 100 ಕಾರಣ

    ಜೇಮ್ಸ್ ಸಿನಿಮಾ ನೋಡೋಕೆ 10 ಅಲ್ಲ, 100 ಕಾರಣ

    ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ಸಿನಿಮಾ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಮಧ್ಯೆ ರಾತ್ರಿಯಿಂದಲೇ ತೆರೆಯ ಮೇಲೆ ಅಪ್ಪು ರಾರಾಜಿಸುತ್ತಾ ಇದ್ದಾರೆ. ಇಂದು ಅವರ ಹುಟ್ಟುಹಬ್ಬವೂ ಆಗಿರುವುದರಿಂದ ಒಂದು ರೀತಿಯಲ್ಲಿ ಜಾತ್ರೆಯ ವಾತಾವರಣವೇ ಥಿಯೇಟರ್ ಮುಂದಿದೆ. ಆದರೆ, ಅಪ್ಪು ಇಲ್ಲ ಎನ್ನುವ ಕೊರಗು ಸದಾ ಇದ್ದೇ ಇರುತ್ತದೆ.

    ಜೇಮ್ಸ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾ. ಖಂಡಿತಾ ಈ ಸೆಂಟಿಮೆಂಟ್ ಸಿನಿಮಾಗೆ ಬಂದ ಮೇಲೆ ವರ್ಕ್ ಆಗಲ್ಲ. ಸೆಂಟಿಮೆಂಟ್ ಆಚೆಯೂ ಸಿನಿಮಾ ಗೆದ್ದು ನಿಲ್ಲುತ್ತದೆ. ಕಾರಣ ‘ಪವರ್ ಸ್ಟಾರ್’. ಸಾಮಾನ್ಯವಾಗಿ ಕಥೆಯೇ ಇಲ್ಲದೇ ಸ್ಟಾರ್ ನಟರು ಚಿತ್ರ ಮಾಡುತ್ತಾರೆ ಎನ್ನುವ ಆರೋಪವಿದೆ. ಆದರೆ, ಜೇಮ್ಸ್ ಸಿನಿಮಾದಲ್ಲಿ ಭರ್ಜರಿ ಕಥೆಯಿದೆ. ಅದು ಕೇವಲ ನಮ್ಮ ನೆಲದ ಕಥೆ ಮಾತ್ರವಲ್ಲ, ವಿದೇಶಿ ನೆಲದಲ್ಲೂ ಬೇರೂರಿರುವಂತಹ ಕಥಾವಸ್ತುವನ್ನು ಅದು ಹೊಂದಿದೆ. ಇದನ್ನೂ ಓದಿ : ಮದಗಜ ಚಿತ್ರ ಖ್ಯಾತಿಯ ನಿರ್ದೇಶಕ ಮಹೇಶ್ ಕಂಡಂತೆ ‘ಜೇಮ್ಸ್’ ಸಿನಿಮಾ: ಸೆಲೆಬ್ರಿಟಿ ಫಸ್ಟ್ ರಿವ್ಯೂ

    ಅಪ್ಪು ಎಂಟ್ರಿನೇ ಮೈ ಜುಮ್ಮೆನಿಸುತ್ತದೆ. ಅದರಲ್ಲೂ ಕಾರ್ ಚೇಸಿಂಗ್ ದೃಶ್ಯ ನೋಡುಗರ ಎದೆ ನಡುಗಿಸುತ್ತದೆ. ಹೇಳಿ ಕೇಳಿ ಪುನೀತ್ ರಾಜ್ ಕುಮಾರ್ ಆಕ್ಷನ್ ಕಿಂಗ್. ಅವರಿಗೆ ಹೇಳಿ ಮಾಡಿಸಿದಂತೆಯೆ ಸಾಹಸ ದೃಶ್ಯಗಳ ಸಂಯೋಜನೆ. ರವಿವರ್ಮಾ ಅದ್ಭುತವಾಗಿ ಸ್ಟಂಟ್ ಕೊರಿಯೋಗ್ರಫಿ ಮಾಡಿದ್ದಾರೆ. ಅಪ್ಪು ಕಾಲುಗಳು ಬೆಳೆದದ್ದೇ ಡಾನ್ಸ್ ಮಾಡಲು. ಪುನೀತ್ ರಾಜ್ ಕುಮಾರ್ ಸಿನಿಮಾಗಳೆಂದರೆ, ಅಲ್ಲಿ ಹಾಡಿಗೆ ಹೆಚ್ಚು ಮಹತ್ವ ನೀಡಲಾಗುತ್ತದೆ. ಯಾಕೆಂದರೆ, ಹಾಡಿಗೂ ಮತ್ತು ಇವರು ಹಾಕುವ ಸ್ಟೆಪ್ ಗೂ ಒಂದು ರೀತಿಯಲ್ಲಿ ಜುಗಲ್ಬಂದಿಯೇ ಏರ್ಪಾಟಾಗುತ್ತದೆ. ಈ ಸಿನಿಮಾದಲ್ಲಿ ಹಾಡುಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗದೇ ಇದ್ದರೂ, ಇರೋ ಹಾಡಿಗೆ ಅದ್ಭುತವಾಗಿ ಹೆಜ್ಜೆ ಹಾಕಿದ್ದಾರೆ ಪುನೀತ್ ರಾಜ್ ಕುಮಾರ್. ಚರಣ್ ರಾಜ್ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಹಾಡುಗಳು ಕೂಡ ಕಾಡುತ್ತವೆ. ಹಿನ್ನೆಲೆ ಸಂಗೀತ ಸಂಯೋಜನೆ ಚಿತ್ರಕ್ಕೆ ಹೇಳಿ ಮಾಡಿಸಿದಂತಿದೆ.

    ಪುನೀತ್ ರಾಜ್ ಕುಮಾರ್ ಈ ಸಿನಿಮಾದಲ್ಲಿ ಎರಡು ಶೇಡ್ ಇರುವಂತಹ ಪಾತ್ರ ಮಾಡಿದ್ದಾರೆ. ಒಂದು ಸೈನಿಕನಾಗಿ ಮತ್ತೊಂದು ಸೆಕ್ಯುರಿಟಿ ಏಜೆನ್ಸಿ ನಡೆಸುವ ಮುಖ್ಯಸ್ಥನಾಗಿ. ಮೇಜರ್ ಪಾತ್ರಕ್ಕೆ ಪುನೀತ್ ಅವರು ಜೀವ ತುಂಬಿದ್ದಾರೆ. ಫ್ಲ್ಯಾಶ್ ಬ್ಯಾಕ್ ಗೆ ಹೊರಳುವ ಕಥೆಯಲ್ಲಿ ಇನ್ನೂ ಸಖತ್ ಆಗಿ ಕಾಣುತ್ತಾರೆ. ಇದನ್ನೂ ಓದಿ : ವಿಭಿನ್ನ, ವಿಶಿಷ್ಟ, ಭಾವನಾತ್ಮಕ ಡಿಪಿಗಳಲ್ಲಿ ಪುನೀತ್ ರಾಜ್ ಕುಮಾರ್

    ಮೇಲ್ನೊಟಕ್ಕೆ ಇದೊಂದು ಸೇಡಿನ ಕಥೆ ಅಂತ ಅನಿಸಿದರೂ, ಇಲ್ಲೊಂದು ದೇಶಪ್ರೇಮದ ಟಿಸಿಲಿದೆ. ಗೆಳೆತನದ ಮಹತ್ವ ಸಾರುವ ಸಾಲಿದೆ. ಜಗತ್ತನ್ನೇ ಆತಂಕಕ್ಕೆ ದೂಡಿದ ಡ್ರಗ್ಸ್ ಮಾಫಿಯಾ ಕೂಡ ಕಥೆಯಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಅದಕ್ಕೊಂದು ತಾರ್ಕಿಕ ಅಂತ್ಯ ಕೊಡುವ ದೃಶ್ಯವೇ ಹೊಸದೆನಿಸುತ್ತದೆ.

    ಮೂವರು ಸಹೋದರರು ಒಂದೇ ಸಿನಿಮಾದಲ್ಲಿ ನಟಿಸಬೇಕು ಎನ್ನುವುದು ಪಾರ್ವತಮ್ಮ ರಾಜ್ ಕುಮಾರ್ ಆಸೆ ಆಗಿತ್ತು. ಆ ಆಸೆಯು ಈ ಸಿನಿಮಾದಲ್ಲಿ ಈಡೇರಿದೆ. ಬಾಲ್ಯದ ಸನ್ನಿವೇಶಕ್ಕೆ ಕಥೆ ತಿರುಗಿದಾಗ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಕಾಣಿಸುತ್ತಾರೆ. ಇದನ್ನೂ ಓದಿ : ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ

    ಪುನೀತ್ ಅವರ ಜತೆ ನಟಿಸಿದ ತಾರಾಬಳಗ ಕೂಡ ದೊಡ್ಡದಿದೆ. ಶರತ್ ಕುಮಾರ್, ಪ್ರಿಯಾ ಆನಂದ್, ಸಾಧು ಕೋಕಿಲಾ, ಶ್ರೀಕಾಂತ್, ಆದಿತ್ಯ ಮೆನನ್ ಹೀಗೆ ಅನುಭವಿ ಕಲಾವಿದರ ಬಳಗವೇ ಸಿನಿಮಾದಲ್ಲಿದೆ. ಹೀಗೆ ಸಿನಿಮಾ ನೋಡಲು ನೂರಾರು ಕಾರಣಗಳನ್ನು ಕೊಡಬಹುದು.

  • ಹ್ಯಾಪಿ ಬರ್ತ್‌ಡೇ ಪವರ್ ಸ್ಟಾರ್ ಬ್ಯಾನರ್ ಹೊತ್ತ ವಿಮಾನ : ಯಾವೆಲ್ಲ ಸ್ಥಳದಲ್ಲಿ ಹಾರಾಟ, ವೇಳಾಪಟ್ಟಿ ಡಿಟೇಲ್ಸ್

    ಹ್ಯಾಪಿ ಬರ್ತ್‌ಡೇ ಪವರ್ ಸ್ಟಾರ್ ಬ್ಯಾನರ್ ಹೊತ್ತ ವಿಮಾನ : ಯಾವೆಲ್ಲ ಸ್ಥಳದಲ್ಲಿ ಹಾರಾಟ, ವೇಳಾಪಟ್ಟಿ ಡಿಟೇಲ್ಸ್

    ಪುನೀತ್ ರಾಜ್ ಕುಮಾರ್ ಜನ್ಮದಿನದ ನಿಮಿತ್ತ ಮತ್ತು ಜೇಮ್ಸ್ ಸಿನಿಮಾ ಬಿಡುಗಡೆ ಹೊತ್ತಿನಲ್ಲಿ ಹೆಲಿಕ್ಯಾಪ್ಟರ್ ಮೂಲಕ ಹೂಗಳನ್ನು ಸುರಿಸುವ ಅಭಿಮಾನಿಗಳ ಆಸೆಗೆ ಪೊಲೀಸ್ ಇಲಾಖೆ ತಣ್ಣೀರೆರಚಿತ್ತು. ಮಾಡಿಕೊಂಡಿದ್ದ ಪ್ಲ್ಯಾನ್ ಎಲ್ಲವೂ ಉಲ್ಟಾ ಆಗಿತ್ತು. ಆದರೂ, ಪುಟ್ಟ ವಿಮಾನವೊಂದು ಬಾನಂಗಳದಿಂದಲೇ ‘ಹ್ಯಾಪಿ ಬರ್ತಡೇ ಪವರ್ ಸ್ಟಾರ್’ ಎಂಬ ಬ್ಯಾನರ್ ಹೊತ್ತು, ಶುಭಾಶಯ ಕೋರಿದೆ.

    ಬೆಳಗ್ಗೆ 9.30ಕ್ಕೆ ಬಾನಂಗಳಕ್ಕೆ ಹಾರಿದ ವಿಮಾನ ಕಂಡು ಪುನೀತ್ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಎರಡು ಗಂಟೆಗಳ ಕಾಲ ಈ ಬ್ಯಾನರ್ ಹೊತ್ತ ಮಿನಿ ವಿಮಾನ ಆಗಸದಲ್ಲಿ ಹಾರಾಡಿದೆ. ಜಕ್ಕೂರು ವಿಮಾನ ನಿಲ್ದಾಣದಿಂದ ಹೊರಟ ಈ ಪುಟ್ಟ ವಿಮಾನವು ಮೊದಲು ಪುನೀತ್ ರಾಜ್ ಕುಮಾರ್ ಅವರ  ಸಮಾಧಿ ಸ್ಥಳದ ಮೇಲೆ ಹಾರಾಟ ನಡೆಸಿತು. ಈ ಸ್ಥಳದಲ್ಲಿಯೇ ಸುಮಾರು 25ಕ್ಕೂ ಹೆಚ್ಚು ನಿಮಿಷ ಹಾರಾಟ ಮಾಡಿ, ಅಭಿಮಾನಿಗಳ ಹರ್ಷೋದ್ಘಾರಕ್ಕೆ ಸಾಕ್ಷಿ ಆಯಿತು. ನಂತರ ಸದಾಶಿವ ನಗರ, ಒರಾಯನ್ ಮಾಲ್, ರಾಜಾಜಿನಗರ, ಮಲ್ಲೇಶ್ವರಂ, ಗಾಂಧಿನಗರ ಸುತ್ತಮುತ್ತ ಒಂದು ಗಂಟೆಗೂ ಹೆಚ್ಚು ಕಾಲ ಹಾರಾಡಿದೆ. 9.30 ರಿಂದ ಶುರುವಾದ ಈ ಪುಟ್ಟ ವಿಮಾನದ ಹಾರಾಟ, 11.30ಕ್ಕೆ ಮತ್ತೆ ಜಕ್ಕೂರು ವಿಮಾನ ನಿಲ್ದಾಣ ತಲುಪಿದ ನಂತರ ಮುಕ್ತಾಯವಾಯಿತು. ಇದನ್ನೂ ಓದಿ : ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ

    ಸಂಜೆ ಮತ್ತೊಂದು ಸುತ್ತಿನ ಹಾರಾಟಕ್ಕೆ ಈ ವಿಮಾನ ಸಜ್ಜಾಗಿದೆ.  ಸಂಜೆ 4 ಗಂಟೆಗೆ ಶುರುವಾಗುವ ಹಾರಾಟ ಎರಡು ಗಂಟೆಗಳ ಕಾಲ ಅದು ವಿವಿಧ ಸ್ಥಳಗಳ ಮೇಲೆ ಹಾರಾಡಲಿದೆ. ಶಿವರಾಜ್ ಕುಮಾರ್ ನಿವಾಸವಿರುವ ಮಾನ್ಯತಾ ಟೆಕ್ ಪಾರ್ಕ್, ಮೈಸೂರು ರಸ್ತೆ, ಬನಶಂಕರಿ, ಜೆ.ಪಿ. ನಗರ, ಗೋಪಾಲ್ ಮಹಲ್, ಕೆ.ಆರ್. ಮಾರ್ಕೆಟ್, ಬಾಣಸವಾಡಿ, ಕೆ.ಆರ್. ಪುರಂ, ಸಿಲ್ಕ್ ಬೋರ್ಡ್, ದೊಮ್ಮಲೂರು ಹೀಗೆ ಇತರ ಸ್ಥಳಗಳ ಮೇಲೆ ಈ ಮಿನಿ ಹಕ್ಕಿ ಹಾರಾಟ ಮಾಡಲಿದೆ.

  • ರಾಜಕುಮಾರನ ಜೇಮ್ಸ್ ಜಾತ್ರೆ – ಸಿನಿಮಾದಲ್ಲಿ ಸಾವು ಗೆದ್ದ ಅಪ್ಪು ಬದುಕಲ್ಲಿ ಗೆಲ್ಲಬಾರದಿತ್ತೇ..!

    ರಾಜಕುಮಾರನ ಜೇಮ್ಸ್ ಜಾತ್ರೆ – ಸಿನಿಮಾದಲ್ಲಿ ಸಾವು ಗೆದ್ದ ಅಪ್ಪು ಬದುಕಲ್ಲಿ ಗೆಲ್ಲಬಾರದಿತ್ತೇ..!

    * ಪವಿತ್ರ ಕಡ್ತಲ, ಮೆಟ್ರೋ ಬ್ಯೂರೋ ಚೀಫ್, ಪಬ್ಲಿಕ್ ಟಿವಿ

    ಶಿಳ್ಳೆ , ಚಪ್ಪಾಳೆ, ಹರ್ಷೋದ್ಘಾರ, ಪಟಾಕಿಯ ಸದ್ದು, ಹಾಲಿನ ಅಭಿಷೇಕ ಇಡೀ ಬೆಂಗಳೂರಿನಲ್ಲಿ ಇಂದು ಪುನೀತೋತ್ಸವ. ಆದ್ರೇ ಇವೆಲ್ಲವನ್ನೂ ಮೀರಿ ಪ್ರತಿಯೊಬ್ಬರ ಮನದಲ್ಲಿ ದುಃಖದ ಕಾರ್ಮೋಡವಿತ್ತು. ಜೇಮ್ಸ್ ಸಿನಿಮಾದಲ್ಲಿ ಅಪ್ಪು ಖಡಕ್ ಲುಕ್, ಫಿಟ್ ಆಂಡ್ ಫೈನ್ ಆಗಿ ರಾಯಲ್ ಆಗಿ ಕಾಣ್ತಿರುವ ಅಪ್ಪು ನಿಜವಾಗಲೂ ಇನ್ನಿಲ್ವಾ… ಸಿನಿಮಾದಲ್ಲಿ ಅಬ್ಬರಿಸ್ತಾ ಇರುವ ಈ ರಾಜ ನಮ್ಮನ್ನು ಹೀಗೆ ಬಿಟ್ಟು ಹೋಗೇಬಿಟ್ರಾ ಎನ್ನುವ ನೋವಿನ ಭಾವ ಪ್ರತಿ ಕ್ಷಣದಲ್ಲಿ ಮತ್ತೆ ಮತ್ತೆ ಕಾಡಿ ಎದೆ ಭಾರವೆನಿಸುವ ಕ್ಷಣವದು.

    ಅಪ್ಪುವಿನ ಫುಲ್ ಪ್ರೇಮ್ ಥಿಯೇಟರ್ ಪರದೆಯಲ್ಲಿ ಬಂದಾಗೆಲ್ಲ ದುಃಖ ತಡೆಯಲಾರದೇ ಅದೆಷ್ಟೋ ಜನ ಸ್ಕ್ರೀನ್ ತಬ್ಬಿ ಹಿಡಿದು ಅಪ್ಪು ಅಪ್ಪು ಅಂತಾ ಮೌನವಾಗಿ ಕಣ್ಣೀರಾದ್ರು. ಹೀಗೆ ನಡುನೀರಿನಲ್ಲಿ ತಾನು ಕೋಟ್ಯಂತರ ಅಭಿಮಾನಿಗಳನ್ನು ಬಿಟ್ಟು ಹೋಗುತ್ತೇನೆ, ಇವರೆಲ್ಲ ನನ್ನ ಸಾವನ್ನು ಅರಗಿಸಿಕೊಳ್ಳಲಾರರು ಅಂತಾ ಅಪ್ಪುವಿಗೆ ಮೊದಲೇ ಗೊತ್ತಿದ್ದು, ಆ ನೋವಿಗೆ ಮುಲಾಮು ಹಚ್ಚೋಕೆ ಜೇಮ್ಸ್ ಸಿನಿಮಾ ಮಾಡಿದ್ರಾ ಅನ್ನೋವಷ್ಟು ಕಾಡಿಬಿಡುತ್ತೆ ಸಿನಿಮಾ. ಇದನ್ನೂ ಓದಿ: ಗುರುವಾರಕ್ಕೂ ಪುನೀತ್ ಸಿನಿಮಾ ರಿಲೀಸಿಗೂ ಏನದು ನಂಟು?

    ಜೇಮ್ಸ್ ಇಡೀ ಸಿನಿಮಾದ ಕಥೆ, ಸಂದೇಶ, ಡ್ಯಾನ್ಸು ಸಾಂಗ್ಸ್.. ಊಹೂ ಅದ್ಯಾವುದೂ ಅಭಿಮಾನಿಗಳ ಪಾಲಿಗೆ ಮುಖ್ಯವಾಗಲೇ ಇಲ್ಲ. ಕೇವಲ ಅಪ್ಪು ಜಪ. ಅಪ್ಪುವನ್ನು ಕಣ್ಣುತುಂಬಿಸಿಕೊಳ್ಳುವ ತವಕ. ಮತ್ತೆ ಎಂದೂ ತೆರೆಯ ಮೇಲೆ ಈ ‘ರಾಜಕುಮಾರ’ನ ನೋಡಲಾರೆವು ಎನ್ನುವ ಕಹಿ ಸತ್ಯ ಪದೇ ಪದೇ ಕಣ್ಣೀರಾಗಿಸುವ ಸಂದರ್ಭದಲ್ಲಿಯೂ ಜೇಮ್ಸ್ ಕೋಟಿ ಕಂಗಳ ಕಣ್ಣೀರು ಒರೆಸುವ ಪುಟ್ಟ ಕರ್ಚೀಫಿನಂತೆ, ಥೇಟು ಅಪ್ಪುವಿನ ನಿಷ್ಕಲ್ಮಷ ನಗೆಯಂತೆ ಕಾಣಿಸಿದೆ.

    ಅಪ್ಪು ಕೊನೆಯ ಸಿನಿಮಾ ಹೇಗಿದೆ..!?: ಚೇತನ್ ಕುಮಾರ್ ನಿರ್ದೇಶನದ ಜೇಮ್ಸ್ ನಲ್ಲಿ ಅಪ್ಪುವಿನದ್ದು ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಹಾಗೂ ಸೈನಿಕನಾಗಿ ಡಬಲ್ ಶೇಡ್ ಇರುವ ಪಾತ್ರ. ಇಡೀ ಸಮಾಜವನ್ನು ಡ್ರಗ್ಸ್ ಮಾಫಿಯವನ್ನು ಕಿತ್ತೊಗೆಯಲು ನಾಯಕನ ಶ್ರಮ ಸಿನಿಮಾದ ಹೈಲೈಟ್ಸ್. ಇದನ್ನೂ ಓದಿ: ಮದಗಜ ಚಿತ್ರ ಖ್ಯಾತಿಯ ನಿರ್ದೇಶಕ ಮಹೇಶ್ ಕಂಡಂತೆ ‘ಜೇಮ್ಸ್’ ಸಿನಿಮಾ: ಸೆಲೆಬ್ರಿಟಿ ಫಸ್ಟ್ ರಿವ್ಯೂ

    ಸೈನಿಕ ಹಾಗೂ ಏಜೆನ್ಸಿ ಸೆಕ್ಯೂರಿಟಿ ಆಗಿ ಡಬಲ್ ಶೇಡ್‍ನಲ್ಲಿ ಪಾತ್ರ ನಿರ್ವಹಿಸಿದ ಪುನೀತ್‍ಗೆ ಗೆ ಪ್ರಿಯಾ ಆನಂದ್ ಜೋಡಿಯಾಗಿದ್ದಾರೆ. ಆರಂಭದಲ್ಲಿಯೇ ಕಾರ್ ಚೇಸಿಂಗ್ ನಲ್ಲಿ ಪವರ್ ಸ್ಟಾರ್ ಮಾಸ್ ಎಂಟ್ರಿ ಅಭಿಮಾನಿಗಳ ಮೈಯಲ್ಲಿ ಮಿಂಚು ಹರಿಸುತ್ತೆ. ಇನ್ನು ಅಪ್ಪು ಫೈಟಿಂಗ್, ಯಾರೂ ಬೀಟ್ ಮಾಡಲು ಆಗದ ಸಕತ್ ಡ್ಯಾನ್ಸ್, ಜೇಮ್ಸ್ ಸಿನಿಮಾದ ಸೆಂಟರ್ ಆಫ್ ಅಟ್ರ್ಯಾಕ್ಷನ್. ಅಪ್ಪುವಿನ ಧ್ವನಿಯನ್ನು ಕೊಂಚ ಮಿಸ್ ಮಾಡಿಕೊಳ್ಳುವ ಅಭಿಮಾನಿಗಳಿಗೆ ಶಿವಣ್ಣನ ಧ್ವನಿ ಕೊಂಚ ಸಮಾಧಾನ ಕೊಡುತ್ತೆ.

    ಸಿನಿಮಾದಲ್ಲಿ ಸಾವು ಗೆದ್ದ ಅಪ್ಪು..! ರಿಯಲ್ ಲೈಫ್ ನಲ್ಲಿ ಚಾನ್ಸ್ ಕೊಡದ ವಿಧಿ.!: ರಿಯಲ್ ಲೈಫ್ ನಲ್ಲಿ ಕೊಂಚವೂ ವಿನಾಯಿತಿ ತೋರದಂತೆ ಅಪ್ಪುವನ್ನು ವಿಧಿ ಕಿತ್ತುಕೊಂಡಿತ್ತು. ಆದ್ರೆ ಸಿನಿಮಾದಲ್ಲಿ ಅಪ್ಪು ಇಪ್ಪತ್ತು ದಿನಗಳ ಕಾಲ ಐಸಿಯುನಲ್ಲಿದ್ದು ಸಾವು ಬದುಕಿನ ಮಧ್ಯೆ ಹೋರಾಡಿ ಸಾವು ಗೆಲ್ಲುವ ಸೀನ್ ಅಭಿಮಾನಿಗಳನ್ನು ಕಣ್ಣೀರಗಾಗಿಸಿತು. ನಿಜ ಜೀವನದಲ್ಲೂ ಹೀಗಾಗಬಾರದಾಗಿತ್ತೇ.., ಅಪ್ಪು ಒಂದು ಬಾರಿ ಎದ್ದು ಬರಬಾರದಿತ್ತೇ ಅಂತಾ ಅನಿಸುವಂತಿತ್ತು. ಅಭಿಮಾನಿಗಳ ಕಣ್ಮನ ತಣಿಸುವ ಪುನೀತ್ ಸಂಭ್ರಮ ಜೇಮ್ಸ್ ಜಾತ್ರೆಯನ್ನು ತಡಮಾಡದೇ ಕಣ್ತುಂಬಿಸಿಕೊಳ್ಳಿ. ಇದನ್ನೂ ಓದಿ: ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ

  • ಟಿವಿಯಲ್ಲಿ ಬಂದಾಗ ಜೇಮ್ಸ್ ಚಿತ್ರ ನೋಡ್ತೀನಿ: ಸಿದ್ದರಾಮಯ್ಯ

    ಟಿವಿಯಲ್ಲಿ ಬಂದಾಗ ಜೇಮ್ಸ್ ಚಿತ್ರ ನೋಡ್ತೀನಿ: ಸಿದ್ದರಾಮಯ್ಯ

    ಬೆಂಗಳೂರು: ಟಿವಿಯಲ್ಲಿ ಬಂದಾಗ ಜೇಮ್ಸ್ ಚಿತ್ರ ನೋಡ್ತೀನಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ಆತ್ಮಕ್ಕೆ ಚಿರ ಶಾಂತಿ ಸಿಗಲಿ. ಎಲ್ಲಾರು ಜೇಮ್ಸ್ ಚಿತ್ರ ನೋಡಿ. ನಾನು ಸಾಮಾನ್ಯವಾಗಿ ಚಲಚಿತ್ರ ನೋಡಲು ಥಿಯೇಟರ್ ಗೆ ಹೋಗಲ್ಲ. ಯಾರಾದರೂ ಒತ್ತಾಯ ಮಾಡಿ ಕರೆದಾಗ ಹೋಗಿದ್ದೇನೆ. ಸ್ವಲ್ಪ ನೋಡಿ ಎದ್ದು ಬಂದಿದ್ದು ಇದೆ. ಜೇಮ್ಸ್ ಚಿತ್ರ ನೋಡ್ತೀನಿ ಟಿವಿಯಲ್ಲಿ ಬಂದಾಗ ಎಂದರು. ಇದನ್ನೂ ಓದಿ: ಮದಗಜ ಚಿತ್ರ ಖ್ಯಾತಿಯ ನಿರ್ದೇಶಕ ಮಹೇಶ್ ಕಂಡಂತೆ ‘ಜೇಮ್ಸ್’ ಸಿನಿಮಾ: ಸೆಲೆಬ್ರಿಟಿ ಫಸ್ಟ್ ರಿವ್ಯೂ

    ಜೇಮ್ಸ್ ಸಿನಿಮಾಗೆ ಟ್ಯಾಕ್ಸ್ ವಿನಾಯಿತಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ. ಬೊಮ್ಮಾಯಿಗೆ ಅವರ ಮೇಲೆ ಪ್ರೀತಿ ಇದೆ. ಪುನೀತ್ ಗೆ ಪದ್ಮಶ್ರೀ ಪ್ರಶಸ್ತಿ ಕೊಡಬೇಕು. ಇದರ ಬಗ್ಗೆ ಒತ್ತಾಯ ಮಾಡಿದ್ದೇನೆ. ಪುನೀತ್ ಜನಪ್ರಿಯ ನಾಯಕ. ರಾಜ್ ಕುಮಾರ್ ಇದ್ದಾಗ ನನ್ನನ್ನು ನಮ್ಮ ಕಾಡಿನವರು ಅಂತ ಹೇಳುತ್ತಿದ್ರು ಎಂದು ಹಳೆಯ ನೆನಪನ್ನು ಮೆಲುಕು ಹಾಕಿಕೊಂಡರು.