Tag: ಅಪ್ಪು

  • ಮದಗಜ ಚಿತ್ರ ಖ್ಯಾತಿಯ ನಿರ್ದೇಶಕ ಮಹೇಶ್ ಕಂಡಂತೆ ‘ಜೇಮ್ಸ್’ ಸಿನಿಮಾ: ಸೆಲೆಬ್ರಿಟಿ ಫಸ್ಟ್ ರಿವ್ಯೂ

    ಮದಗಜ ಚಿತ್ರ ಖ್ಯಾತಿಯ ನಿರ್ದೇಶಕ ಮಹೇಶ್ ಕಂಡಂತೆ ‘ಜೇಮ್ಸ್’ ಸಿನಿಮಾ: ಸೆಲೆಬ್ರಿಟಿ ಫಸ್ಟ್ ರಿವ್ಯೂ

    ಸಿನಿಮಾ ನೋಡೋಕೆ ಹೋದಾಗ ಯಾವತ್ತೂ ನಾನು ಸಂಕಟದಿಂದ ಚಿತ್ರಮಂದಿರಕ್ಕೆ ಹೆಜ್ಜೆ ಇಟ್ಟವನು ಅಲ್ಲ. ಪುನೀತ್ ರಾಜ್ ಕುಮಾರ್ ಅವರ ‘ಜೇಮ್ಸ್’ ಚಿತ್ರಕ್ಕೆ ಹೋಗುವಾಗ ಅಂಥದ್ದೊಂದು ಸಂಕಟವಿತ್ತು. ಸಿನಿಮಾ ನೋಡುವ ಕುತೂಹಲದ ಜತೆಗೆ ನಾನು ತೆರೆಯ ಮೇಲೆ ಅಪ್ಪು ಸರ್ ನ ನೋಡೋಕೆ ಸಾಧ್ಯವಾ? ಅದು ನನ್ನಿಂದ ಆಗತ್ತಾ ಅನ್ನುವ ನೋವಿತ್ತು. ಆ ಒದ್ದಾಟದಲ್ಲೇ ಥಿಯೇಟರ್ ಗೆ ಹೋದೆ.

    ಸಿನಿಮಾ ಶುರುವಾಗುತ್ತಿದ್ದಂತೆಯೇ ‘ಜೇಮ್ಸ್’ ಅಂತ ಟೈಟಲ್ ಬಂತು. ಎದೆ ಬಡಿತ ಜೋರಾಯಿತು. ಕಾರ್ ಚೇಸ್ ಮಾಡಿಕೊಂಡು ಅಪ್ಪು ಸರ್ ಬರುವಾಗ ಎದ್ದೇ ನಿಂತುಕೊಂಡು ಬಿಟ್ಟೆ. ಆ ರೀತಿಯಲ್ಲಿ ಅಪ್ಪು ಸರ್ ಪಾತ್ರವನ್ನು ಎಂಟ್ರಿ ಕೊಡಿಸಿದ್ದಾರೆ ನಿರ್ದೇಶಕ ಚೇತನ್ ಕುಮಾರ್. ಇದೊಂದು ದೇಶಾಭಿಮಾನ ಇಟ್ಟುಕೊಂಡ ನಾಯಕನ ಕುರಿತಾದ ಚಿತ್ರ. ಅಪ್ಪು ಈವರೆಗೂ ನಾನಾ ರೀತಿಯ ಚಿತ್ರಗಳನ್ನು ಮಾಡಿದ್ದಾರೆ. ಆದರೆ, ಈ ಜಾನರ್ ನ ಚಿತ್ರದಲ್ಲಿ ಅವರು ನಟಿಸಿರಲಿಲ್ಲ. ಆ ಕೊರತೆಯನ್ನು ನೀಗಿಸಿದಂತಹ ಚಿತ್ರ ಇದಾಗಿದೆ. ಇದನ್ನೂ ಓದಿ : ವಿಭಿನ್ನ, ವಿಶಿಷ್ಟ, ಭಾವನಾತ್ಮಕ ಡಿಪಿಗಳಲ್ಲಿ ಪುನೀತ್ ರಾಜ್ ಕುಮಾರ್

    ಸೆಕ್ಯುರಿಟಿ ಏಜೆನ್ಸ್, ಡ್ರಗ್ಸ್ ಮಾಫಿಯಾ, ದೇಶಪ್ರೇಮ, ಗೆಳೆತನ ಹೀಗೆ ಹಲವು ಕವಲುಗಳ ಕಥೆ ಸಿನಿಮಾದಲ್ಲಿದ್ದರೂ, ಅಷ್ಟಕ್ಕೂ ಗೆಲ್ಲುವುದು ಪುನೀತ್ ರಾಜ್ ಕುಮಾರ್ ಎಂಬ ಸಂತೋಷ್ ಪಾತ್ರ. ನಿರ್ದೇಶಕ ಚೇತನ್ ಕುಮಾರ್ ಅವರ ಕಥೆ ಹೇಳುವ ಶೈಲಿಯೇ ಚೆನ್ನಾಗಿದೆ. ಯಾವುದು ಎಷ್ಟಿರಬೇಕೋ, ಯಾವ ಪಾತ್ರಕ್ಕೆ ಎಷ್ಟು ಪ್ರಾಮುಖ್ಯತೆ ಕೊಡಬೇಕೋ ಅಷ್ಟನ್ನೂ ಈ ಚಿತ್ರದಲ್ಲಿ ಕೊಟ್ಟಿದ್ದಾರೆ. ಹಾಗಾಗಿ ಎಲ್ಲಿಯೂ ಬೋರ್ ಅನಿಸದೇ ತಾನಾಗಿಯೇ ಸಿನಿಮಾ ನೋಡಿಸಿಕೊಂಡು ಹೋಗುತ್ತದೆ. ಕಥೆ ಹೇಳುವ ರೀತಿ, ದೃಶ್ಯಗಳನ್ನು ಕಟ್ಟಿದ ರೀತಿ ಮತ್ತು ಹಾಡುಗಳನ್ನು ಜೋಡಿಸಿದ ಪರಿಯೇ ಸೊಗಸಾಗಿದೆ. ಸಿನಿಮಾದ ಮತ್ತೊಂದು ವಿಶೇಷ ಅಂದರೆ, ಗೆಳೆತನಕ್ಕೆ ಮತ್ತೊಂದು ವ್ಯಾಖ್ಯಾನ ಕೊಟ್ಟಿದೆ. ಈವರೆಗೂ ಪುನೀತ್ ರಾಜ್ ಕುಮಾರ್ ಅವರ ಚಿತ್ರಗಳಲ್ಲಿ ಭಾವನಾತ್ಮಕ ಸನ್ನಿವೇಶಗಳು ಬಂದಾಗ ಅಪ್ಪ, ಅಮ್ಮ, ತಂಗಿ ಈ ರೀತಿಯಲ್ಲಿ ದೃಶ್ಯಗಳಾಗಿವೆ. ಈ ಸಿನಿಮಾದಲ್ಲಿ ಗೆಳೆತನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದಾರೆ ನಿರ್ದೇಶಕರು. ಇದನ್ನೂ ಓದಿ : ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ

    ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಜತೆ ಚೈಲ್ಡ್ ವುಡ್ ಎಪಿಸೋಡ್ ಬರುತ್ತದೆ. ಅದನ್ನು ಮನಮುಟ್ಟುವಂತೆ ಚಿತ್ರಿಸಲಾಗಿದೆ. ಈ ಮೂವರು ಸಹೋದರರು ಒಂದೇ ಸಿನಿಮಾದಲ್ಲಿ ತೋರಿಸಿದ ಹೆಗ್ಗಳಿಕೆ ಕೂಡ ಈ ಚಿತ್ರಕ್ಕೆ ಸಲ್ಲಬೇಕು. ಸಿನಿಮಾಟೋಗ್ರಫಿ, ಸಾಹಸ ಸನ್ನಿವೇಶಗಳು ಈ ಸಿನಿಮಾದ ಅಂದವನ್ನು ಮತ್ತಷ್ಟು ಹೆಚ್ಚಿಸಿವೆ. ಪಾತ್ರಗಳು ಮತ್ತು ಪಾತ್ರಗಳಿಗೆ ಹಾಕುವ ಕಾಸ್ಟ್ಯೂಮ್ ಕೂಡ ಅಷ್ಟೇ ಒಪ್ಪಿದೆ. ಹರಿಕೃಷ್ಣ ಅವರ ಹಿನ್ನೆಲೆ ಸಂಗೀತ ಮತ್ತು ಚರಣ್ ರಾಜ್ ಅವರ ಸಂಗೀತ ಸಂಯೋಜನೆ ಸೂಪರ್ಬ್. ಇದನ್ನೂ ಓದಿ : ಜಗ್ಗೇಶ್ ಹುಟ್ಟು ಹಬ್ಬಕ್ಕೆ ಮೂರು ಸಿನಿಮಾಗಳ ಪೋಸ್ಟರ್ ರಿಲೀಸ್

    ಸಿನಿಮಾದ ಬಗ್ಗೆ ಹೇಳಲೇಬೇಕಾದ ಮತ್ತೊಂದು ಅಂಶವೆಂದರೆ, ಕ್ಲೈಮ್ಯಾಕ್ಸ್ ಪಾರ್ಟ್. ಕ್ಲೈಮ್ಯಾಕ್ಸ್ ನೋಡುತ್ತಿದ್ದಂತೆಯೇ ಎಮೋಷನಲ್ ಆಗಿಸುತ್ತದೆ. ಅಪ್ಪು ಸರ್ ಸಾಧನೆಯ ಬಗ್ಗೆ ಕ್ಲೈಮಾಕ್ಸ್ ನಲ್ಲಿ ಅಚ್ಚುಕಟ್ಟಾಗಿ ತೋರಿಸಲಾಗಿದೆ. ‘ಅಪ್ಪ ಅಜರಾಮರ, ಅಪ್ಪುಗೆ ಸಾವಿಲ್ಲ’ ಎಂದು ತೆರೆಯ ಮೇಲೆ ಬಂದಾಗ ಕಣ್ಣೀರು ತಡೆದುಕೊಳ್ಳಲು ಆಗುವುದೇ ಇಲ್ಲ. ಈ ಅಕ್ಷರಗಳು ಬರುತ್ತಿದ್ದಂತೆಯೇ ಇಡೀ ಥಿಯೇಟರ್ ನಲ್ಲಿದ್ದ ಪ್ರೇಕ್ಷಕರು ಎದ್ದು ನಿಂತು ಚೆಪ್ಪಾಳೆ ತಟ್ಟಿ ಗೌರವ ಸೂಚಿಸಿದ್ದು ಇದಕ್ಕೆ ಸಾಕ್ಷಿ.

    -ಮಹೇಶ್ ಕುಮಾರ್, ಮದಗಜ, ಅಯೋಗ್ಯ ಚಿತ್ರ ಖ್ಯಾತಿಯ ನಿರ್ದೇಶಕ

  • ಜೇಮ್ಸ್ ಸಿನಿಮಾ ನೋಡಿದ ಪ್ರತಿಯೊಬ್ಬರೂ ಕಣ್ಣೀರು ಹಾಕ್ತಾರೆ: ಶಿವರಾಜ್ ಕುಮಾರ್

    ಜೇಮ್ಸ್ ಸಿನಿಮಾ ನೋಡಿದ ಪ್ರತಿಯೊಬ್ಬರೂ ಕಣ್ಣೀರು ಹಾಕ್ತಾರೆ: ಶಿವರಾಜ್ ಕುಮಾರ್

    – ಫಿಲ್ಮಸಿಟಿಗೆ ಹೆಸರಿಡುವುದು ದೊಡ್ಡ ವಿಷಯವಲ್ಲ
    – ಅಪ್ಪು ಅಗಲಿಕೆ ನೋವಿದೆ

    ಮೈಸೂರು: ಅಪ್ಪು ನಟನೆ ಬಿಟ್ಟು ಮಾನವೀಯತೆಯಲ್ಲಿ ತುಂಬಾ ಎತ್ತರಕ್ಕೆ ಇದ್ದಾರೆ. ಇದರಿಂದಾಗಿ ಎಲ್ಲಾ ವರ್ಗದ ಜನರು ಸಿನಿಮಾ ನೋಡಲು ಬರುತ್ತಿದ್ದಾರೆ ಎಂದು ನಟ ಶಿವರಾಜ್‍ಕುಮಾರ್ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪ್ಪು ವ್ಯಕ್ತಿತ್ವವನ್ನು ಮೀರಿ ಬದುಕಿದ್ದಾರೆ. ಜೇಮ್ಸ್ ಸಿನಿಮಾ ನೋಡಿದ ಪ್ರತಿಯೊಬ್ಬರು ಕಣ್ಣೀರು ಹಾಕಿ ಹೊರಬರುತ್ತಾರೆ. ಸಿನಿಮಾದಲ್ಲಿ ಸಂತೋಷದ ಜೊತೆ ಎಮೋಷನಲ್ ಸೆಂಟಿಮೆಂಟ್ ಇದೆ. ಸಿನೆಮಾ ನೋಡಲು ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಬಂದಿದ್ದಾರೆ. ಎಲ್ಲರಿಗೂ ಒಂದು ನಮ್ಮ ಉದ್ಯೋಗವನ್ನು ಬಿಟ್ಟು ಬೇರೆಯಾದ್ದೇ ಒಂದು ಸಂಪರ್ಕ ಇದೆ ಎಂದು ತಿಳಿಸಿದರು.

    ಅಪ್ಪು ನಮಗೆ ಸ್ವಂತ ಅಲ್ಲ ಈಗ ಜನರಿಗೆ ಸ್ವಂತ ಆಗ್ಬಿಟ್ಟಿದ್ದಾನೆ. ಅಪ್ಪು ಚಿಕ್ಕವಯಸ್ಸಿನಿಂದ ಜನರ ಜೊತೆ ಬೆರೆತಿದ್ದಾನೆ. ಅವರ ಸಿನಿಮಾ ನೋಡಲು ಕುಟುಂಬದ ಜೊತೆ ಬರುತ್ತಾರೆ ಎನ್ನವುದನ್ನು ಆಶ್ಚರ್ಯ ಪಡುವ ಅಗತ್ಯವಿಲ್ಲ. ಮಾನವೀಯತೆಯ ಮೇಲೆ ಇರುವ ಪ್ರೀತಿಯಿಂದಾಗಿ ಸಿನಿಮಾ ನೋಡದವರೂ ನೋಡುತ್ತಿದ್ದಾರೆ ಎಂದರು.

    ಇದೇ ವೇಳೆ ಡಬ್ ಮಾಡುವಾಗ ಕಷ್ಟವಾಯಿತು. ಬಹಳ ನೋವಾಗಿತ್ತು ಎಂದ ಅವರು, ಸಿನಿಮಾವನ್ನು ಇನ್ನೂ ನೋಡಿಲ್ಲ. ಈಗ ಥಿಯೆಟ್‍ರ್‍ಗಷ್ಟೇ ಭೇಟಿ ನೀಡುತ್ತಿದ್ದೇನೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ:  ಎಂದಿಗೂ ಕಸಿದುಕೊಳ್ಳಲಾಗದ ಎನರ್ಜಿ: ಅಪ್ಪುಗೆ ಯಶ್ ವಿಶ್

    ಅಪ್ಪುಗೆ ಕೊನೆ ಅಂತ ಮಾತನಾಡುವುದು ಬೇಡ. ಅವನಿಲ್ಲದೇ ಹುಟ್ಟುಹಬ್ಬ ಆಚರಿಸುತ್ತಿರುವುದು ನೋವಿದೆ. ಆದರೂ ನೋವಿನ ಜೊತೆಯೇ ಬದುಕುತ್ತೇವೆ. ಎಲ್ಲೂ ಇಲ್ಲ ಎಂದು ಅಂದುಕೊಳ್ಳದೇ ನಮ್ಮ ಮನಸಲ್ಲೇ ಜೀವಂತವಾಗಿಡಬೇಕು ಎಂದು ಮನವಿ ಮಾಡಿದರು.

    ಮೈಸೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಫಿಲ್ಮಸಿಟಿಗೆ ಪುನೀತ್ ಹೆಸರಿಡಬೇಕೆಂಬ ಒತ್ತಾಯಕ್ಕೆ ಪ್ರತಿಕ್ರಿಯಿಸಿ, ಪುನೀತ್ ಹೆಸರು ಎಲ್ಲರ ಆತ್ಮದಲ್ಲೂ ಇದೆ. ಕೆಲವರೂ ಟ್ಯಾಟೂಗಳನ್ನು ಹಾಕೊಂಡಿದ್ದಾರೆ. ಫಿಲ್ಮಸಿಟಿ ನಿರ್ಮಾಣವಾಗುತ್ತಿರುವುದಕ್ಕೆ ಹೆಸರಿಡುವುದು ದೊಡ್ಡ ವಿಷಯ ಇಲ್ಲ. ಪುನೀತ್ ಹೆಸರು ಇಡಲೇ ಬೇಕೆಂದಿಲ್ಲ. ಇಟ್ಟರೇ ಸಂತೋಷ. ಬೇರೆಯವರ ಹೆಸರನ್ನು ಇಟ್ಟರು ಸಂತೋಷ. ಈ ಬಗ್ಗೆ ಮಾತನಾಡಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ವಿಭಿನ್ನ, ವಿಶಿಷ್ಟ, ಭಾವನಾತ್ಮಕ ಡಿಪಿಗಳಲ್ಲಿ ಪುನೀತ್ ರಾಜ್ ಕುಮಾರ್

    ಅಪ್ಪು ಅವರ ಕನಸು ಸ್ಕೂಲ್ ಕಟ್ಟಬೇಕು ಎನ್ನುವುದು. ಇದು ಎಲ್ಲರ ಕನಸಾಗಿತ್ತು. ಅಂತೆಯೇ ಕಲಸ ನಡೆಯುತ್ತಿದೆ. ಸಾಕಷ್ಟು ದಾನಿಗಳು ಸಹಾಯ ಮಾಡಿ ದ್ದಾರೆ ಎಂದ ಅವರು ಇಬ್ಬರಿಗೂ ಉಡುಗೊರೆ ಎಂದರೆ ಇಷ್ಟ. ಅಪ್ಪುಗೆ ಬ್ರ್ಯಾಂಡ್ ಎಂದರೆ ತುಂಬಾ ಇಷ್ಟವಾಗಿತ್ತು ಎಂದು ನೆನಪಿಸಿಕೊಂಡರು.

  • ವಿಭಿನ್ನ, ವಿಶಿಷ್ಟ, ಭಾವನಾತ್ಮಕ ಡಿಪಿಗಳಲ್ಲಿ ಪುನೀತ್ ರಾಜ್ ಕುಮಾರ್

    ವಿಭಿನ್ನ, ವಿಶಿಷ್ಟ, ಭಾವನಾತ್ಮಕ ಡಿಪಿಗಳಲ್ಲಿ ಪುನೀತ್ ರಾಜ್ ಕುಮಾರ್

    ದೇಶದಾದ್ಯಂತ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬವನ್ನು ಅವರ ಅನುಪಸ್ಥಿತಿಯಲ್ಲೇ ಅಭಿಮಾನಿಗಳು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಇಡೀ ಕರುನಾಡೇ ಹಬ್ಬದಂತೆ ಸಿಂಗಾರಗೊಂಡಿದೆ. ಅವರ ನಟನೆಯ  ‘ಜೇಮ್ಸ್’ ಸಿನಿಮಾ ಕೂಡ ಇಂದೇ ಬಿಡುಗಡೆ ಆಗಿದ್ದರಿಂದ ಅಭಿಮಾನಿಗಳಿಗೆ ಡಬಲ್ ಸಂಭ್ರಮ ತಂದಿದೆ. ಹಾಗಾಗಿ ಪುನೀತ್ ಅವರ ಹುಟ್ಟು ಹಬ್ಬ ಮತ್ತಷ್ಟು ಕಲರ್ ಫುಲ್ ಆಗಿದೆ.

    ನೆಚ್ಚಿನ ನಟನ ಹುಟ್ಟು ಹಬ್ಬಕ್ಕೆ ವಿಭಿನ್ನ ರೀತಿಯ ಡಿಪಿಗಳನ್ನು ಅಭಿಮಾನಿಗಳು ಬಿಡುಗಡೆ ಮಾಡಿದ್ದಾರೆ. ಅನೇಕ ಕಲಾವಿದರು ತಮ್ಮದೇ ಆದ ರೀತಿಯಲ್ಲಿ ಫೋಟೋಗಳನ್ನು ತಯಾರಿಸಿ, ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ : ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ

    ಪುನೀತ್ ಅವರ ಬಾಲ್ಯದ ಫೋಟೋ, ಅವರ ಸಿನಿಮಾದ ಸ್ಟಿಲ್ ಹಾಗೂ ಅಪರೂಪದ ಫೋಟೋಗಳನ್ನು ಕೋಲಾಜ್ ಮಾಡಿಕೊಂಡು ಡಿಪಿ ತಯಾರಿಸಿದ್ದಾರೆ. ಕೆಲವರಂತೂ ಅಪರೂಪದ ಸಾಲುಗಳನ್ನು ಫೋಟೋದ ಜತೆ ಬಳಸಿದ್ದಾರೆ.

    ಒಂದು ವಾರದಿಂದಲೇ ಪುನೀತ್ ಅವರ ಹುಟ್ಟು ಹಬ್ಬಕ್ಕೆ ಸಿದ್ಧತೆಯನ್ನು ಮಾಡಿಕೊಳ್ಳಲಾಗಿತ್ತು. ನಾಡಿನ ತುಂಬಾ ಇರುವ ಅವರ ಅಭಿಮಾನಿ ಸಂಘಗಳು ಮತ್ತು ಬೇರೆ ನಾಯಕ ನಟರ ಅಭಿಮಾನಿಗಳು ಕೂಡ ಪುನೀತ್ ಅವರ ಹುಟ್ಟು ಹಬ್ಬವನ್ನು ಆಚರಿಸಲು ಸರ್ವಸಿದ್ಧತೆ ಮಾಡಿಕೊಂಡಿದ್ದರು. ಈಗ ಎಲ್ಲ ನಟ ನಟಿಯರ ಅಭಿಮಾನಿಗಳು ಪುನೀತ್ ಅವರ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್‍ಕುಮಾರ್ ‘ಜೇಮ್ಸ್’ ಸಿನಿಮಾ: ಅಭಿಮಾನಿಗಳ ಫಸ್ಟ್ ರಿಯ್ಯಾಕ್ಷನ್

    ರಾತ್ರಿ 12 ಗಂಟೆಯಿಂದಲೇ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಅಭಿಮಾನಿಗಳು, ತಾವಿರುವ ಕಡೆಯೇ ಅನ್ನ ಸಂತರ್ಪನೆ, ರಕ್ತದಾನ ಶಿಬಿರ, ನೇತ್ರದಾನ ಹಾಗೂ ಅನಾಥಾಶ್ರಮಗಳಿಗೆ ಹೋಗಿ ಅಗತ್ಯ ವಸ್ತುಗಳನ್ನು ಕೊಟ್ಟು ಬರುವ ಕಾರ್ಯವನ್ನು ಮಾಡಿದ್ದಾರೆ.

    ಪುನೀತ್ ರಾಜ್ ಕುಮಾರ್ ಕುಟುಂಬ ಕೂಡ ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ಇರುವ ಪುನೀತ್ ಅವರ ಸಮಾಧಿ ಸ್ಥಳದಲ್ಲಿಯೇ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ.

  • ಅಪ್ಪುಗೆ ಯಾವುದೇ ರೀತಿಯ Attitude ಇರಲಿಲ್ಲ: ಹಿರಿಯ ನಟ ಸುಮನ್

    ಅಪ್ಪುಗೆ ಯಾವುದೇ ರೀತಿಯ Attitude ಇರಲಿಲ್ಲ: ಹಿರಿಯ ನಟ ಸುಮನ್

    ಬೆಂಗಳೂರು: ಸ್ಯಾಂಡಲ್‍ವುಡ್ ಪವರ್ ಸ್ಟಾರ್ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ಯಾವುದೇ ರೀತಿಯ ಆಟಿಟ್ಯೂಡ್ ಇರಲಿಲ್ಲ. ಅವರ ಜೀವನ ಶೈಲಿ ಹಲವರಿಗೆ ಮಾರ್ಗದರ್ಶನ ಎಂದು ತೆಲುಗು ಹಿರಿಯ ನಟ ಸುಮನ್ ಹೇಳಿದರು.

    ಅಪ್ಪು ಹುಟ್ಟುಹಬ್ಬದ ಪ್ರಯುಕ್ತ ಇಂದು ಅವರ ಸಮಾಧಿಗೆ ಬೇಟಿ ಕೊಟ್ಟ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಅಪ್ಪು ಅಗಲಿಕೆ ಸಿನಿಮಾ ಇಂಡಸ್ಟ್ರಿಗೆ ದೊಡ್ಡ ಲಾಸ್ ಆಗಿದೆ. ಇಂದು ಪುನೀತ್ ರಾಜ್ ಕುಮಾರ್ ಅವರ ಜನ್ಮದಿನ. ಅವರ ಸಮಾಜಸೇವೆ ಅವರ ಚಿಂತನೆ ತುಂಬಾ ಮೆಚುರ್ಡ್ ಆಗಿದೆ. ನಟನೆ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಭಾವುಕರಾದರು. ಇದನ್ನೂ ಓದಿ: ಅಪ್ಪು ಸಮಾಧಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‍ಕುಮಾರ್

    ಚಿಕ್ಕ ವಯಸ್ಸಿನಲ್ಲೆ ತುಂಬಾ ಮೆಚುರ್ಡ್ ಥಿಂಕಿಂಗ್ ಅವರಲ್ಲಿತ್ತು. ತುಂಬಾ ಚಿಕ್ಕ ವಯಸ್ಸಿನಲ್ಲಿ ಈ ರೀತಿ ಆಗಿರೋದು ನೋವು ತಂದಿದೆ. ಅಪ್ಪುಗೆ ಯಾವುದೇ ರೀತಿಯ ಆಟ್ಯಿಡ್ಯೂಡ್ ಇರಲಿಲ್ಲ. ಅವರ ಜೀವನ ಶೈಲಿ ಹಲವರಿಗೆ ಮಾರ್ಗದರ್ಶನ ಆಗಿದೆ ಎಂದು ಹೇಳುತ್ತಾ ಇಂದು ಜೇಮ್ಸ್ ರಿಲೀಸ್ ಆಗಿದೆ ಶುಭ ಹಾರೈಸುತ್ತೇವೆ ಅಂದ್ರು. ಇದನ್ನೂ ಓದಿ: ಪುನೀತ್ ರಾಜ್‍ಕುಮಾರ್ ಹುಟ್ಟಹುಬ್ಬ- ಬಿಎಸ್‍ವೈ, ಬೊಮ್ಮಾಯಿ ಹೇಳಿದ್ದೇನು..?

    ಇಂದು ಪುನೀತ್‍ಗೆ 47 ವರ್ಷದ ಹುಟ್ಟುಹಬ್ಬವಾಗಿದ್ದು, ಇಂದೇ ಅಪ್ಪು ನಟನೆಯ ಕೊನೆಯ ಸಿನಿಮಾ ಜೇಮ್ಸ್ ಕೂಡ ರಿಲೀಸ್ ಆಗಿದೆ. ಈ ಮೂಲಕ ಅಭಿಮಾನಿಗಳ ಸಂಭ್ರಮ ಇಮ್ಮಡಿಯಾಗಿದೆ. ಆದರೆ ಈ ನಡುವೆ ಅಪ್ಪು ಇಲ್ಲ ಅನ್ನೋ ನೋವು ಕೂಡ ಅಭಿಮಾನಿಗಳಲ್ಲಿದೆ. ರಾಜ್ಯದ ಥಿಯೇಟರ್ ಗಳ್ಲಿ ಜೇಮ್ಸ್ ಜಾತ್ರೆ ಈಗಾಗಲೇ ಆರಂಭವಾಗಿದ್ದು, ಅಪ್ಪು ಚಿತ್ರ ನೋಡಿ ಕರುನಾಡು ಕಣ್ಣಿರಾಗಿದೆ. ಇದನ್ನೂ ಓದಿ: ಡಾ.ಪುನೀತ್ ರಾಜ್‍ಕುಮಾರ್ 47ನೇ ಜನ್ಮದಿನ – ಸಮಾಧಿ ಬಳಿ ಕೇಕ್ ಕತ್ತರಿಸಿದ ದೊಡ್ಮನೆ ಕುಟುಂಬ

  • ಪುನೀತ್ ಅಭಿಮಾನಿಗಳಿಗೆ ಭಾರೀ ನಿರಾಸೆ : ಮೆರವಣಿಗೆ ಇಲ್ಲ, ಹೆಲಿಕಾಪ್ಟರ್ ಗೆ ಅನುಮತಿ ಕೊಟ್ಟಿಲ್ಲ

    ಪುನೀತ್ ಅಭಿಮಾನಿಗಳಿಗೆ ಭಾರೀ ನಿರಾಸೆ : ಮೆರವಣಿಗೆ ಇಲ್ಲ, ಹೆಲಿಕಾಪ್ಟರ್ ಗೆ ಅನುಮತಿ ಕೊಟ್ಟಿಲ್ಲ

    ಗುರುವಾರ (ಮಾ.17) ಬೆಳಗ್ಗಿನಿಂದಲೇ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧರಾಗಿದ್ದ ಬೆಂಗಳೂರಿನ ಪುನೀತ್ ಅಭಿಮಾನಿಗಳಿಗೆ ನಿರಾಸೆ ಉಂಟಾಗಿದೆ. ಪೊಲೀಸ್ ಇಲಾಖೆಯು ಕೆಲವು ಷರತ್ತುಗಳನ್ನು ಹಾಕಿದ್ದು, ಅದರಾಚೆ ಅಭಿಮಾನಿಗಳು ಏನು ಮಾಡುವಂತಿಲ್ಲವೆಂದು ಹೇಳಿದೆ.

    ನಾಳೆ ಬೆಂಗಳೂರಿನ ಚಾಮರಾಜಪೇಟೆಯಿಂದ ಬೃಹತ್ ಮೆರವಣಿಗೆ ಹೊರಟು, ನಾನಾ ಬೀದಿಗಳ ಮೂಲಕ ವೀರೇಶ್ ಚಿತ್ರಮಂದಿರ ಸೇರುವ ಸಿದ್ಧತೆಯಲ್ಲಿದ್ದು ಅಭಿಮಾನಿಗಳು. ಬೈಕ್ ರಾಲಿ ಸೇರಿದಂತೆ ನಕ್ಷತ್ರ ಮೆರವಣಿಗೆಗಳನ್ನೂ ಆಯೋಜನೆ ಮಾಡಲಾಗಿತ್ತು. ಮೆರವಣಿಗೆಯುದ್ದಕ್ಕೂ ಪುನೀತ್ ರಾಜ್ ಕುಮಾರ್ ಅವರ ಹಾಡುಗಳನ್ನು ಬಳಸಿಕೊಂಡು, ನೃತ್ಯ ಮತ್ತಿತರ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿತ್ತು. ಈಗ ಎಲ್ಲದಕ್ಕೂ ಬ್ರೇಕ್ ಬಿದ್ದಿದೆ. ಮೆರವಣಿಗಾಗಿ ಚಾಮರಾಜಪೇಟೆ ಪೊಲೀಸ್ ಠಾಣೆಗೆ ಅನುಮತಿ ಪಡೆಯಲು ಅಭಿಮಾನಿಗಳು ಪತ್ರವೊಂದನ್ನು ಬರೆದಿದ್ದರು. ಈಗ ಚಾಮರಾಜಪೇಟೆ ಪೊಲೀಸರು ಅನುಮತಿ ಕೊಡಲು ನಿರಾಕರಿಸಿದ್ದಾರೆ. ನಗರದ ಸರಹದ್ದಿಯಲ್ಲಿ ಬೃಹತ್ ಮೆರವಣಿಗೆ ಮತ್ತು ಮುಷ್ಕರ ನಡೆಸದಂತೆ ಉಚ್ಛ ನ್ಯಾಯಾಲಯವು ಆದೇಶಿಸಿರುವ ಹಿನ್ನೆಲೆಯಲ್ಲಿ ಅನುಮತಿಯನ್ನು ಪೊಲೀಸ್ ನವರು ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ನಾಳೆ ಮೆರವಣಿಗೆ ಮಾಡುವಂತಿಲ್ಲವಾಗಿದೆ. ಇದನ್ನೂ ಓದಿ : ದುನಿಯಾ ವಿಜಯ್ ನಟನೆಯ ತೆಲುಗು ಸಿನಿಮಾದ ಫಸ್ಟ್ ಲುಕ್ ರಿಲೀಸ್ : ಯಾರದು ಪ್ರತಾಪ್ ರೆಡ್ಡಿ?

    ಮತ್ತೊಂದು ಕಡೆ ಹೆಲಿಕಾಪ್ಟರ್ ಮೂಲಕ ಮೊದಲು ಪುನೀತ್ ಸಮಾಧಿಗೆ ನಂತರ ವೀರಭದ್ರೇಶ್ವರ ಥಿಯೇಟರ್, ಪ್ರಸನ್ನ ಮತ್ತು ವೀರೇಶ್ ಚಿತ್ರಮಂದಿರಗಳ ಮೇಲೆ ಪುಷ್ಪಮಳೆ ಸುರಿಸಲು ಕೂಡ ಅಭಿಮಾನಿಗಳು ಸಜ್ಜಾಗಿದ್ದರು. ಅದಕ್ಕೂ ಈಗ ಬ್ರೇಕ್ ಬಿದ್ದಿದೆ. ಭದ್ರತಾ ದೃಷ್ಟಿಯಿಂದ ಹೆಲಿಕ್ಯಾಪ್ಟರ್ ಪುಷ್ಪಮಳೆಗೆ ಅನುಮತಿ ನಿರಾಕರಿಸಲಾಗಿದೆ.  ಇದನ್ನೂ ಓದಿ : ಅಂದು ಸುದೀಪ್ ಪುಸ್ತಕ ಬಿಡುಗಡೆ ಮಾಡಿದ್ದ ಪುನೀತ್, ಇಂದು ಪುನೀತ್ ಪುಸ್ತಕ ಬಿಡುಗಡೆ ಮಾಡಿದ ಸುದೀಪ್

    ಹೆಲಿಕಾಪ್ಟರ್ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುತ್ತಾರೆ. ನಾಳೆ ಪುನೀತ್ ಅವರ ಹುಟ್ಟು ಹಬ್ಬ ಮತ್ತು ಸಿನಿಮಾ ಬಿಡುಗಡೆ ಇರುವ ಕಾರಣಕ್ಕಾಗಿ ಸಹಜವಾಗಿ ಭಾರೀ ಸಂಖ್ಯೆಯಲ್ಲಿ ಜನ ಸೇರುತ್ತಾರೆ. ಹೀಗಾಗಿ ಭದ್ರತೆ ನೀಡುವುದು ಕಷ್ಟವಾಗುತ್ತದೆ. ಹೆಚ್ಚಿನ ಜನ ಸೇರುವುದರಿಂದ ಕಾಲ್ತುಳಿತ ಕೂಡ ಸಂಭವಿಸಬಹುದು. ಹೆಲಿಕಾಪ್ಟರ್ ಗೂ ಭದ್ರತೆ ನೀಡುವುದು ಕಷ್ಟ. ಹೆಲಿಕಾಪ್ಟರ್ ಅತೀ ಕೆಳಗೆ ಹಾರುವುದರಿಂದ ಮತ್ತು ಇಳಿಯುವುದರಿಂದ ಟವರ್, ಬಿಲ್ಡಿಂಗ್ ಗಳು ಅಡ್ಡಿಯಾದರೆ ಅನಾಹುತ ಸಂಭವಿಸಬಹುದು. ಈ ಕಾರಣದಿಂದಾಗಿ ಅನುಮತಿಯನ್ನು ಪೊಲೀಸ್ ಇಲಾಖೆ ನಿರಾಕರಿಸಿದೆ.

  • ಆಸ್ಟ್ರೇಲಿಯಾದಲ್ಲಿ ಸೆನ್ಸಾರ್ ಆದ ಕನ್ನಡದ ಮೊದಲ ಸಿನಿಮಾ ‘ಜೇಮ್ಸ್’

    ಆಸ್ಟ್ರೇಲಿಯಾದಲ್ಲಿ ಸೆನ್ಸಾರ್ ಆದ ಕನ್ನಡದ ಮೊದಲ ಸಿನಿಮಾ ‘ಜೇಮ್ಸ್’

    ನ್ನೆರಡು ದಿನಗಳು ಕಳೆದರೆ, ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಜೇಮ್ಸ್ ರಿಲೀಸ್ ಆಗುತ್ತಿದೆ. ಕರ್ನಾಟಕದಲ್ಲೇ 300 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಜಗತ್ತಿನ ವಿವಿಧ ದೇಶಗಳಲ್ಲೂ ಸಿನಿಮಾ ಪ್ರದರ್ಶನಕ್ಕೆ ಏರ್ಪಾಟು ಮಾಡಲಾಗಿದೆ. ಆಸ್ಟ್ರೇಲಿಯಾವೊಂದರಲ್ಲಿ 150ಕ್ಕೂ ಹೆಚ್ಚಿನ ಶೋಗಳು ನಡೆಯುತ್ತಿರುವುದು ಮತ್ತೊಂದು ವಿಶೇಷ.

    ಆಸ್ಟ್ರೇಲಿಯಾದಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿರುವುದರಿಂದ ಅಲ್ಲಿಯೂ ಸಿನಿಮಾವನ್ನು ಸೆನ್ಸಾರ್ ಮಾಡಲಾಗಿದೆ. ಹಾಗಾಗಿ ಆ ದೇಶದಲ್ಲಿ ಸೆನ್ಸಾರ್ ಆದ ಮೊದಲ ಸಿನಿಮಾ ಎಂಬ ಹೆಗ್ಗಳಿಕೆಗೆ ಜೇಮ್ಸ್ ಪಾತ್ರವಾಗಿದೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್

    ಯು.ಎಸ್ ನಲ್ಲೂ ಜೇಮ್ಸ್ ಸಿನಿಮಾವನ್ನು ಬರಮಾಡಿಕೊಳ್ಳಲು 25ಕ್ಕೂ ಹೆಚ್ಚು ಸೇಟ್ಸ್  ರೆಡಿಯಾಗಿವೆಯಂತೆ. ವಾರಂತ್ಯಕ್ಕೆ ಈ ಶೋಗಳ ಸಂಖ್ಯೆಯೂ ಹೆಚ್ಚಾಗಲಿ ಎಂದಿದ್ದಾರೆ ಚಿತ್ರದ ನಿರ್ದೇಶಕ ಚೇತನ್ ಕುಮಾರ್. ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾವೊಂದಕ್ಕೆ ಭಾರೀ ರೆಸ್ಪಾನ್ಸ್ ಸಿಗುತ್ತಿದೆಯಂತೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಅಂಥದ್ದೇನಿದೆ ಸಿನಿಮಾದಲ್ಲಿ? ದಳ್ಳುರಿಯಲ್ಲಿ ದಹನದ ಕಥನ!

     

    ಈಗಾಗಲೇ ಜೇಮ್ಸ್  ಸಿನಿಮಾಗಾಗಿ ರಾಜ್ಯದಲ್ಲಿ ಅನೇಕ ತಯಾರಿ ಮಾಡಿಕೊಳ್ಳಲಾಗಿದೆ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ವಾರದಿಂದಲೇ ಸಿದ್ಧತೆ ಮಾಡಿಕೊಂಡಿದ್ದಾರೆ. ಬಹುತೇಕ ಚಿತ್ರಮಂದಿರಗಳಲ್ಲಿ ಪುನೀತ್ ಅವರ ಕಟೌಟ್ ಹಾಕಲಾಗಿದೆ.

  • ಜೇಮ್ಸ್ ಚಿತ್ರದ ಬೆಳಗ್ಗಿನ 6 ಗಂಟೆಯ  200 ಶೋಗಳ ಟಿಕೆಟ್ ಸೋಲ್ಡ್ ಔಟ್: ಏನೆಲ್ಲ ದಾಖಲೆ?

    ಜೇಮ್ಸ್ ಚಿತ್ರದ ಬೆಳಗ್ಗಿನ 6 ಗಂಟೆಯ 200 ಶೋಗಳ ಟಿಕೆಟ್ ಸೋಲ್ಡ್ ಔಟ್: ಏನೆಲ್ಲ ದಾಖಲೆ?

    ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ‘ಜೇಮ್ಸ್’ ಬಿಡುಗಡೆಗೆ ಕೌಂಟ್ ಡೌನ್ ಶುರುವಾಗಿದೆ. ದೇಶಾದ್ಯಂತ ನಾಲ್ಕು ಸಾವಿರ ಚಿತ್ರಮಂದಿರಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಕರ್ನಾಟಕದಲ್ಲಂತೂ ಭರ್ಜರಿ ಪ್ರಚಾರ ಸಿಗುತ್ತಿದೆ. ಆದರೆ, ಬೇರೆ ಭಾಷೆಗಳಲ್ಲಿ ಚಿತ್ರತಂಡ ಅಷ್ಟೇನೂ ಪ್ರಚಾರ ಮಾಡದ ಕಾರಣ, ಕ್ರೇಜ್ ಕ್ರಿಯೇಟ್ ಆದಂತೆ ಕಾಣುತ್ತಿಲ್ಲ. ಇದನ್ನೂ ಓದಿ : ರಾಮ್ ಗೋಪಾಲ ವರ್ಮಾ ಡೇಂಜರೆಸ್ ಹುಡುಗಿ ಅಂತ ಹೇಳಿದ್ದು ಯಾರಿಗೆ?

    ನಾಲ್ಕು ದಿನಗಳ ಮೊದಲೇ ಟಿಕೆಟ್ ಬುಕ್ಕಿಂಗ್ ಶುರು ಮಾಡಿದೆ ಚಿತ್ರತಂಡ. ಹಲವು ಕಡೆ ಬೆಳಗ್ಗೆ ನಾಲ್ಕರಿಂದಲೇ ಪ್ರದರ್ಶನಕ್ಕೆ ಏರ್ಪಾಟು ಮಾಡಲಾಗಿದೆ. ಸದ್ಯ ಬುಕ್ ಮೈ ಶೋ ಆಪ್ ನಲ್ಲಿ ಬೆಳಗ್ಗೆ 6 ಗಂಟೆಯಿಂದ ಪ್ರದರ್ಶನಕ್ಕೆ ಟಿಕೆಟ್ ಬುಕ್ ಮಾಡಬಹುದು. ಇದನ್ನೂ ಓದಿ : ರಣಬೀರ್ ಮತ್ತು ಆಲಿಯಾ ಮದ್ವೆ ಡೇಟ್ ಮತ್ತೆ ಬದಲು: ಪ್ರಣಯ ಹಕ್ಕಿಗಳ ಪ್ರಲಾಪ

    ಬಾಕ್ಸ್ ಆಫೀಸರ್ ರಿಪೋರ್ಟ್ ಪ್ರಕಾರ ಮಾ.17 ರಂದು ಬೆಳಗ್ಗೆ 6 ಗಂಟೆಗೆ 200 ಶೋಗಳು ಜೆಮ್ಸ್ ಗಾಗಿ ಮೀಸಲಿಟ್ಟಿವೆ. ಅಷ್ಟೂ ಶೋಗಳ ಟಿಕೇಟ್ ಸೋಲ್ಡೌಟ್ ಆಗಿರುವುದು ವಿಶೇಷ. ಫಸ್ಟ್ ಡೇ ಫಸ್ಟ್ ಶೋ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತದ್ದು, ಬೆಳಗಿನ ಪ್ರದರ್ಶನಕ್ಕೆ ಭಾರೀ ಬೇಡಿಕೆ ಬಂದಿದೆ. ಹಾಗಾಗಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಬಹುತೇಕ ಸ್ಕ್ರೀನ್ ಗಳನ್ನು ಜೇಮ್ಸ್ ಪ್ರದರ್ಶನಕ್ಕಾಗಿಯೇ ಮೀಸಲಿಡಲಾಗಿದೆಯಂತೆ. ಇದನ್ನೂ ಓದಿ : ನಟ ಚೇತನ್ ಗಡಿಪಾರು? : ಹೋರಾಟಗಳೇ ನಟನಿಗೆ ಮುಳುವಾಗುತ್ತಾ..?

    ಪುನೀತ್ ರಾಜ್ ಕುಮಾರ್ ಅವರ ಕೊನೆಯ ಸಿನಿಮಾ ಇದಾಗಿದ್ದರಿಂದ, ಅವರಿಗೆ ಗೌರವ ಸಲ್ಲಿಸುವುದಕ್ಕಾಗಿಯೇ ಆ ವಾರ ಯಾವ ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿಲ್ಲ. ಹಾಗಾಗಿ ರಾಜ್ಯ ಶೇ.80ರಷ್ಟು ಚಿತ್ರಮಂದಿರಗಳಲ್ಲಿ ಜೇಮ್ಸ್ ತೆರೆ ಕಾಣುತ್ತಿದೆ. ಕೋವಿಡ್ ಕಾರಣದಿಂದಾಗಿ ಮುಚ್ಚಲಾಗಿದ್ದ ಚಿತ್ರಮಂದಿರಗಳನ್ನೂ ಜೇಮ್ಸ್ ಚಿತ್ರಕ್ಕಾಗಿ ಮತ್ತೆ ತೆರೆದಿರುವುದು ವಿಶೇಷ. ಇದನ್ನೂ ಓದಿ: ಕಂಗನಾಳನ್ನು ಹೀರೋಯಿನ್ ಮಾಡಿದ್ದು ಆ ಜ್ಯೋತಿಷಿ: ಅಸಲಿ ಸತ್ಯ ಬಾಯ್ಬಿಟ್ಟ ನಟ ಪ್ರಭಾಸ್

    ಸಿನಿಮಾ ಬಿಡುಗಡೆಗೂ ನಾಲ್ಕು ದಿನಗಳ ಮುನ್ನ ಸಿಕ್ಕಿರುವ ರೆಸ್ಪಾನ್ಸ್ ನೋಡಿದರೆ, ಒಂದು ವಾರದೊಳಗೆ ಈ ಸಿನಿಮಾ ನೂರು ಕೋಟಿ ಕ್ಲಬ್ ಸೇರುವುದರಲ್ಲಿ ಅಚ್ಚರಿ ಪಡಬೇಕಿಲ್ಲ. ಅಷ್ಟರ ಮಟ್ಟಿಗೆ ಅಭಿಮಾನಿಗಳು ಜೇಮ್ಸ್ ಸಿನಿಮಾವನ್ನು ಅಪ್ಪಿಕೊಂಡಿದ್ದಾಗಿದೆ.

  • ಪುನೀತ್ ಹುಟ್ಟುಹಬ್ಬಕ್ಕೆ ಹೊಸ ಸಾಂಗ್: ಒಂದಾಯಿತು ‘ಗೊಂಬೆ ಹೇಳತೈತೆ’ ಕಾಂಬಿನೇಷನ್

    ಪುನೀತ್ ಹುಟ್ಟುಹಬ್ಬಕ್ಕೆ ಹೊಸ ಸಾಂಗ್: ಒಂದಾಯಿತು ‘ಗೊಂಬೆ ಹೇಳತೈತೆ’ ಕಾಂಬಿನೇಷನ್

    ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬವನ್ನು ನಾನಾ ರೀತಿಯಲ್ಲಿ ಆಚರಿಸಲು ಸ್ಯಾಂಡಲ್‌ವುಡ್‌ ಸಿದ್ಧತೆ ಮಾಡಿಕೊಂಡಿದೆ. ಅಂದೇ ಅವರ ನಟನೆಯ ಜೇಮ್ಸ್ ಸಿನಿಮಾ ಬಿಡುಗಡೆ ಆಗುತ್ತಿರುವುದರಿಂದ ಈಗಾಗಲೇ ಥಿಯೇಟರ್‌ಗಳು ಸಿಂಗಾರಗೊಂಡಿವೆ. ಕೆಲವು ಕಡೆ ಪುನೀತ್ ಹೆಸರಿನಲ್ಲಿ ರಕ್ತದಾನ, ಅಂಗಾಂಗ ದಾನ, ಅನ್ನ ಸಂತರ್ಪಣೆ ಹೀಗೆ ಅನೇಕ ಕೆಲಸಗಳು ನಡೆಯುತ್ತಿವೆ. ಈ ನಡುವೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಹಾಡೊಂದನ್ನು ಬರೆದದ್ದು, ಪುನೀತ್ ವ್ಯಕ್ತಿತ್ವವನ್ನು ಸಾರುವಂತಹ ಗೀತೆ ಅದಾಗಿದೆ. ಆ ಹಾಡನ್ನು ಪುನೀತ್ ಅವರ ಹುಟ್ಟು ಹಬ್ಬದ ದಿನದಂದು (ಮಾ.17) ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ : ಕಿರುತೆರೆಯ ನಟ, ನಿರ್ದೇಶಕ ರವಿಕಿರಣ್ ಪುತ್ರ ಸಿನಿಮಾಗೆ ರಂಗಕ್ಕೆ ಎಂಟ್ರಿ

    ಈ ಗೀತೆಯನ್ನು ವಿಜಯ ಪ್ರಕಾಶ್ ಹಾಡಿದ್ದು, ತಮನ್ನಾ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬರಲಿದೆ. ವಿಜಯ್ ಪ್ರಕಾಶ್ ಮತ್ತು ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿದ್ದ ‘ಗೊಂಬೆ ಹೇಳತೈತೆ’ ಹಾಡು ದಾಖಲೆ ರೀತಿಯಲ್ಲಿ ಕೇಳುಗರನ್ನು ತಲುಪಿತ್ತು. ಈ ಹಾಡು ಕೂಡ ಅದೇ ಮಾದರಿಯಲ್ಲಿಯೇ ಬರಲಿದೆಯಂತೆ. ಇದನ್ನೂ ಓದಿ : ಪೂಜಾ ಹೆಗ್ಡೆ ಅವಕಾಶ ಕಿತ್ತುಕೊಂಡ ರಶ್ಮಿಕಾ ಮಂದಣ್ಣ

    ಸಂತೋಷ್ ಆನಂದ್ ರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಎರಡು ಸಿನಿಮಾಗಳು ಬಂದಿದ್ದು, ಎರಡೂ ಚಿತ್ರಗಳು ಹಿಟ್ ಆಗಿವೆ. ಅಲ್ಲದೇ, ಹಾಡು ಮತ್ತು ಡಾನ್ಸ್ ಮೂಲಕ ಅತೀ ಹೆಚ್ಚು ಜನರನ್ನು ತಲುಪಿವೆ. ಇನ್ನೇನು ಮೂರನೇ ಸಿನಿಮಾ ಕೂಡ ಮೂಡಿ ಬರಬೇಕಿತ್ತು. ಅಷ್ಟರಲ್ಲಿ ಪುನೀತ್ ಅಗಲಿದರು. ಈಗ ಹಾಡಿನ ಮೂಲಕ ಪುನೀತ್ ಅವರನ್ನು ನೆನಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ ಸಂತೋಷ್ ಆನಂದ್ ರಾಮ್ .

  • ಸಲಾಂ ಸೋಲ್ಜರ್ ಬದಲು ಸಲಾಂ ಅಪ್ಪು ಅಂತಿದ್ದಾರೆ ಫ್ಯಾನ್ಸ್ : ಜೇಮ್ಸ್ ಮತ್ತೊಂದು ಹಾಡು ರಿಲೀಸ್

    ಸಲಾಂ ಸೋಲ್ಜರ್ ಬದಲು ಸಲಾಂ ಅಪ್ಪು ಅಂತಿದ್ದಾರೆ ಫ್ಯಾನ್ಸ್ : ಜೇಮ್ಸ್ ಮತ್ತೊಂದು ಹಾಡು ರಿಲೀಸ್

    ದಿನದಿಂದ ದಿನಕ್ಕೆ ಪುನೀತ್ ರಾಜ್ ಕುಮಾರ್ ನಟನೆಯ’ಜೇಮ್ಸ್’ ಸಿನಿಮಾದ ಕ್ರೇಜ್ ಹೆಚ್ಚಾಗುತ್ತಿದೆ. ಅಪ್ಪು ಅಭಿಮಾನಿಗಳು ಈ ಸಿನಿಮಾವನ್ನು ಭಾವನಾತ್ಮಕವಾಗಿ ರಿಸೀವ್ ಮಾಡಿರುವುದರಿಂದ ಒಂದು ರೀತಿಯಲ್ಲಿ ಜಾತ್ರೆಯಂತೆ ಸಿನಿಮಾ ರಿಲೀಸ್ಗೆ ಪ್ಲ್ಯಾನ್ ಮಾಡಿದ್ದಾರೆ. ಇದನ್ನೂ ಓದಿ : Breaking- ಉಪೇಂದ್ರ ಹೊಸ ಚಿತ್ರದ ಪೋಸ್ಟರ್ : ನೀವು ಏನ್ ಬೇಕಾದ್ರೂ ಅಂದ್ಕೊಳ್ಳಿ ಎಂದ ಉಪ್ಪಿದಾದ

    ಈಗಾಗಲೇ ರಾಜ್ಯಾದ್ಯಂತ ಸಿನಿಮಾದ ಪೋಸ್ಟರ್ಸ್ ಗೋಡೆಗಳನ್ನು ಅಲಂಕರಿಸಿವೆ. ಚಿತ್ರಮಂದಿರಗಳಲ್ಲಿ ಕಟೌಟ್ ಎದ್ದು ನಿಂತಿವೆ. ಟೀ ಶರ್ಟ್, ಆಟೋಗಳ ಮೇಲೆ ಅಪ್ಪು ರಾರಾಜಿಸುತ್ತಿದ್ದಾರೆ. ಅಲ್ಲದೇ, ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಅಪ್ಪು ಉತ್ಸವವೇ ನಡೆಯುತ್ತಿದೆ. ಅಷ್ಟರ ಮಟ್ಟಿಗೆ ಪುನೀತ್ ಬರ್ತಡೆ ಮತ್ತು ಜೇಮ್ಸ್ ಸಿನಿಮಾದ ರಿಲೀಸ್ ತಯಾರಿ ನಡೆದಿದೆ. ಇದನ್ನೂ ಓದಿ : ಯಾಕೆ ಆ ವಿಡಿಯೋ ಹಾಕಿದ್ರು ಮೀರಾ ಜಾಸ್ಮಿನ್? ಅಭಿಮಾನಿ ಅಳಲೇನು ಕೇಳಿ

    ಈ ಹೊತ್ತಿನಲ್ಲಿ ಸಿನಿಮಾದ ಮತ್ತೊಂದು ಗೀತೆಯನ್ನು ಬಿಡುಗಡೆ ಮಾಡಿದೆ ಚಿತ್ರತಂಡ. ‘ಸಲಾಂ ಸೋಲ್ಜರ್’ ಲಿರಿಕಲ್ ಸಾಂಗ್ ಅನ್ನು ಇಂದು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ. ಈ ಹಾಡನ್ನು ನಾಡಿನ ಸಮಸ್ತ ಸೈನಿಕರಿಗೆ ಅರ್ಪಿಸಿರುವುದಾಗಿ ನಿರ್ದೇಶಕ ಚೇತನ್ ತಿಳಿಸಿದ್ದಾರೆ. ಈ ಹಾಡಿನಲ್ಲಿ ಪುನೀತ್ ರಾಜ್ ಕುಮಾರ್ ಅವರು ಸೈನಿಕನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ : ಯಾಕೆ ಆ ವಿಡಿಯೋ ಹಾಕಿದ್ರು ಮೀರಾ ಜಾಸ್ಮಿನ್? ಅಭಿಮಾನಿ ಅಳಲೇನು ಕೇಳಿ

    ಗೆಟಪ್ ನೋಡಿದ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ‘ಸಲಾಂ ಅಪ್ಪು’ ಎಂದೇ ಜೈಕಾರ ಹಾಕುತ್ತಿದ್ದಾರೆ. ಈ ಗೀತೆಯನ್ನು ಸ್ವತಃ ನಿರ್ದೇಶಕ ಚೇತನ್ ಕುಮಾರ್ ಅವರೇ ಬರೆದದ್ದು, ಸಂಜಿತ್ ಹೆಗಡೆ ಮತ್ತು ಚರಣ್ ರಾಜ್ ಹಾಡಿದ್ದಾರೆ. ಇದನ್ನೂ ಓದಿ : ಮಾರ್ಚ್ 14ಕ್ಕೆ ಆರ್.ಆರ್.ಆರ್ ‘ಎತ್ತುವ ಜಂಡಾ’ ಸಾಂಗ್ ರಿಲೀಸ್

    ಪುನೀತ್ ರಾಜ್ ಕುಮಾರ್ ಅವರ ಕೊನೆಯ ಸಿನಿಮಾ ಇದಾಗಿದ್ದರಿಂದ, ಪ್ರಿ ರಿಲೀಸ್ ಇವೆಂಟ್ ಕೂಡ ಅದ್ಧೂರಿಯಾಗಿ ನಡೆಲಿದೆ. ಬೆಂಗಳೂರಿನಲ್ಲಿ ಇವೆಂಟ್ ಮಾಡಲು ಅರಮನೆ ಮೈದಾನ ಕೂಡ ಸಿದ್ಧವಾಗಿದೆ. ಮಾ.13 ರಂದು ಇಡೀ ಸಿನಿಮಾ ರಂಗವೇ ಅಂದು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದೆ.

  • ಮಾ.13ಕ್ಕೆ ಅರಮನೆ ಮೈದಾನದಲ್ಲಿ ಜೇಮ್ಸ್ ಪ್ರೀ ಇವೆಂಟ್, ಹೊಸಪೇಟೆಯಲ್ಲಿ ಸಕ್ಸಸ್ ಸಂಭ್ರಮ

    ಮಾ.13ಕ್ಕೆ ಅರಮನೆ ಮೈದಾನದಲ್ಲಿ ಜೇಮ್ಸ್ ಪ್ರೀ ಇವೆಂಟ್, ಹೊಸಪೇಟೆಯಲ್ಲಿ ಸಕ್ಸಸ್ ಸಂಭ್ರಮ

    ಜೇಮ್ಸ್ ಸಿನಿಮಾಗೆ ಸಿಗುತ್ತಿರುವ ಪ್ರತಿಕ್ರಿಯೆಗೆ ಚಿತ್ರತಂಡ ಸಾಕಷ್ಟು ಗೊಂದಲದಲ್ಲಿದೆ. ಭಾರೀ ನಿರೀಕ್ಷೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಯಾವ ಕಾರ್ಯಕ್ರಮ ಎಲ್ಲಿ ಮಾಡಬೇಕು ಎನ್ನುವ ಸಂಕಷ್ಟಕ್ಕೆ ಸಿಲುಕಿದ್ದಾರೆ ಜೇಮ್ಸ್ ನಿರ್ಮಾಪಕರು. ಇದನ್ನೂ ಓದಿ : ಬೆಂಗಳೂರಿನಿಂದ ಗಡಿಭಾಗಕ್ಕೆ ಆರ್.ಆರ್.ಆರ್ ಅದ್ಧೂರಿ ಕಾರ್ಯಕ್ರಮ ಶಿಫ್ಟ್

    ಈ ಹಿಂದೆ ಜೇಮ್ಸ್ ಸಿನಿಮಾದ ಪ್ರೀ ಇವೆಂಟ್ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಹೊಸಪೇಟೆಯಲ್ಲಿ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. ನಂತರ ದಿನಗಳಲ್ಲಿ ಅದು ಮೈಸೂರು ಅಂದಾಯಿತು. ಈಗ ಮೈಸೂರಿನಲ್ಲಿಯೂ ಇವೆಂಟ್ ನಡೆಯುತ್ತಿಲ್ಲ. ಅಲ್ಲಿಂದ ಇದೀಗ ಬೆಂಗಳೂರಿಗೆ ಶಿಫ್ಟ್ ಆಗಿದೆ. ಇದನ್ನೂ ಓದಿ : ದೌರ್ಜನ್ಯ ಖಂಡಿಸಿ, ಭಾವನಾ ಮೆನನ್ ಬೆಂಬಲಕ್ಕೆ ನಿಂತ ತಮಿಳು ನಟ ಸೂರ್ಯ

    ಮಾ.13ರಂದು ಅದ್ಧೂರಿಯಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಅಂದು ಬಹುತೇಕ ಚಿತ್ರರಂಗವೇ ಇದರಲ್ಲಿ ಭಾಗಿಯಾಗಲಿದೆ. ಮೊದಲ ಬಾರಿಗೆ ಬಹುತೇಕ ಕಲಾವಿದರು ಒಂದಾಗಿ ಸೇರುತ್ತಿರುವ ಕಾರ್ಯಕ್ರಮ ಎನ್ನುವ ಹೆಗ್ಗಳಿಕೆಗೂ ಇದು ಪಾತ್ರವಾಗಲಿದೆ. ಇದನ್ನೂ ಓದಿ : ರಕ್ಷಿತ್ ಶೆಟ್ಟಿ ‘777 ಚಾರ್ಲಿ’ ಸಿನಿಮಾ ಏನಾಯ್ತು? ಗುಡ್ ನ್ಯೂಸ್ ಕೊಡುತ್ತಂತೆ ಚಿತ್ರತಂಡ

    ಸಿನಿಮಾ ಬಿಡುಗಡೆಗಾಗಿ ಈಗಾಗಲೇ ಚಿತ್ರತಂಡ ಸರ್ವ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ದೇಶ ಮತ್ತು ವಿದೇಶಗಳಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆಯಂತೆ. ಪುನೀತ್ ನಟನೆಯ ಕೊನೆಯ ಸಿನಿಮಾ ಇದಾಗಿದ್ದರಿಂದ ಅಭಿಮಾನಿಗಳು ಕೂಡ ಈ ಚಿತ್ರವನ್ನು ಭಾವನಾತ್ಮಕವಾಗಿ ತಗೆದುಕೊಂಡಿದ್ದಾರೆ.