Tag: ಅಪ್ಪು

  • ದೇವರೊಂದಿಗೆ ದೇವರಾದ ಪುನೀತ್ ರಾಜ್‌ಕುಮಾರ್

    ದೇವರೊಂದಿಗೆ ದೇವರಾದ ಪುನೀತ್ ರಾಜ್‌ಕುಮಾರ್

    ಬೆಳಗಾವಿ: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಅಗಲಿ ಎರಡು ತಿಂಗಳು ಕಳೆದರೂ ಅಭಿಮಾನಿಗಳ ಮನದಲ್ಲಿ ಅಜರಾಮರರಾಗಿದ್ದಾರೆ. ಅಭಿಮಾನಿಗಳು ಒಂದಲ್ಲಾ ಒಂದು ರೀತಿಯಲ್ಲಿ ತಮ್ಮ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎನ್ನುವಂತೆ ಗೋಕಾಕ್‌ನ ಅಂಗಡಿಯೊಂದರಲ್ಲಿ ಅಭಿಮಾನಿಯೊಬ್ಬರು ಅಪ್ಪು ಫೋಟೋ ಫ್ರೇಮ್ ಅನ್ನು ದೇವರ ಫೋಟೋ ಬಳಿ ಇಟ್ಟು ಪೂಜೆ ಸಲ್ಲಿಸಿ ಅಭಿಮಾನ ಮೆರೆದಿದ್ದಾರೆ.

    ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಶನಿವಾರ ಉದ್ಯಮಿ ಆನಂದ ಗೋಟಡಕಿ ಒಡೆತನದ ಕಲ್ಯಾಣಿ ಸ್ವೀಟ್ಸ್ ಉದ್ಘಾಟನೆ ಸಮಾರಂಭ ನಡೆದಿತ್ತು. ಈ ವೇಳೆ ಸತ್ಯಂ ಫೋಟೋ ಫ್ರೇಮ್ ವರ್ಕ್ಸ್ ಸಿಬ್ಬಂದಿ ಅಪ್ಪು ಫೋಟೋ ಫ್ರೇಮ್ ಗಿಫ್ಟ್ ನೀಡಿದ್ದರು. ಇದನ್ನೂ ಓದಿ:  ಬಿಹಾರ್‌ ಸಿಎಂ ಪುತ್ರ ತನ್ನ ತಂದೆಗಿಂತಲೂ 5 ಪಟ್ಟು ಹೆಚ್ಚು ಶ್ರೀಮಂತ

    ಈ ಫೋಟೋ ಫ್ರೇಮ್ ಅನ್ನು ದೇವರ ಬಳಿ ಇಟ್ಟು, ಪೂಜೆ ಸಲ್ಲಿಸಲಾಯಿತು. ಲಕ್ಷ್ಮೀ ದೇವಿ ಪಕ್ಕ ಅಪ್ಪು ಫೋಟೋ ಇಟ್ಟು ನಮನ ಸಲ್ಲಿಸಲಾಯಿತು. ಕಾರ್ಯಕ್ರಮಕ್ಕೆ ಬಂದ ಪ್ರತಿಯೊಬ್ಬರಿಂದ ದೇವರ ಜೊತೆ ಅಪ್ಪುವಿಗೂ ನಮನ ಸಲ್ಲಿಸಿದರು. ಅಭಿಮಾನಿಗಳ ಮನದಲ್ಲಿ ಪವರ್‌ಸ್ಟಾರ್ ದಿವಂಗತ ಪುನೀತ್ ರಾಜಕುಮಾರ್ ದೇವರೊಂದಿಗೆ ದೇವರಾಗಿದ್ದಾರೆ. ಇದನ್ನೂ ಓದಿ: ರಾವತ್ ಇದ್ದ ಹೆಲಿಕಾಪ್ಟರ್ ಪತನದ ತನಿಖಾ ವರದಿ ಮುಂದಿನ ವಾರ ಸಲ್ಲಿಕೆ?

  • ಫಲಪುಷ್ಪ ಪ್ರದರ್ಶನದಲ್ಲಿ ಅರಳಿದ ಹೂ ಮನಸ್ಸಿನ ‘ಅಪ್ಪು’

    ಫಲಪುಷ್ಪ ಪ್ರದರ್ಶನದಲ್ಲಿ ಅರಳಿದ ಹೂ ಮನಸ್ಸಿನ ‘ಅಪ್ಪು’

    ಬಾಗಲಕೋಟೆ: ಜಿಲ್ಲೆಯ ಹೊರವಲಯದಲ್ಲಿ ತೋಟಗಾರಿಕೆ ಮೇಳವನ್ನ ಹಮ್ಮಿಕೊಳ್ಳಲಾಗಿದ್ದು, ಫಲ ಪುಷ್ಪ ಪ್ರದರ್ಶನದಲ್ಲಿ ಪುನೀತ್ ರಾಜ್‍ಕುಮಾರ್ ರಂಗೋಲಿಯಲ್ಲಿ ಅರಳಿದ ಕಲಾಕೃತಿ ಅತ್ಯಾಕರ್ಷಕವಾಗಿ ಎಲ್ಲರ ಗಮನ ಸೆಳೆಯುತ್ತಿದೆ.

    ಹುಬ್ಬಳ್ಳಿಯ ರಂಗೋಲಿ ಕಲಾವಿದ ಶಿವಲಿಂಗಪ್ಪ ಬಡಿಗೇರ್ ಅವರು ತಮ್ಮ ಕೈಚಳಕದಿಂದ ನಾಲ್ಕು ಗಂಟೆ ಕಾಲ ಬಿಡಿಸಿದ ಅಪ್ಪು ಕಲಾಕೃತಿ ಚಿತ್ರ ಎಲ್ಲರ ಆಕರ್ಷಣ ಕೇಂದ್ರ ಬಿಂದುವಾಗಿದೆ. ಯುವಕ, ಯುವತಿಯರು, ಚಿಕ್ಕ-ಚಿಕ್ಕ ಮಕ್ಕಳು ಫಲಪುಷ್ಪ ಪ್ರದರ್ಶನದಲ್ಲಿ ರಂಗೋಲಿಯಲ್ಲಿ ಅರಳಿದ ಅಪ್ಪು ಚಿತ್ರದ ಮುಂದೆ ನಿಂತು ಸೆಲ್ಫಿ ತೆಗೆದುಕೊಂಡು ಸಂಭ್ರಮಿಸುತ್ತಿದ್ದಾರೆ. ಇದನ್ನೂ ಓದಿ: ಪ್ರಕೃತಿ ಸೌಂದರ್ಯ ಸವಿಯಿರಿ: ಬೆಂಗಳೂರು-ಶಿವಮೊಗ್ಗ ರೈಲಿಗೆ ವಿಸ್ಟಾಡಾಮ್ ಕೋಚ್

    ಶಿವಲಿಂಗಪ್ಪ ಬಡಿಗೇರ ಈ ಕುರಿತು ಮಾತನಾಡಿ, ಹಲವಾರು ತೋಟಗಾರಿಕೆ ಮೇಳದಲ್ಲಿ ಕವಿಗಳು, ಸಾಹಿತಿಗಳು ಅನೇಕ ಚಿತ್ರಗಳನ್ನು ರಂಗೋಲಿ ಮೂಲಕ ಬಿಡಿಸಿ ಪ್ರದರ್ಶನ ಮಾಡಿದ್ದೇನೆ. ಈ ನಡುವೆ ನಮ್ಮನ್ನ ಅಗಲಿದ ಪುನೀತ್ ಅವರ ಚಿತ್ರವನ್ನು ಈ ಬಾಗಲಕೋಟೆ ತೋಟಗಾರಿಕೆ ಮೇಳದಲ್ಲಿ ರಂಗೋಲಿಯಲ್ಲಿ ಬಿಡಿಸಿರುವುದು ನನ್ನ ಸೌಭಾಗ್ಯ ಎಂದರು.

    ಹೂ ಮನಸ್ಸಿನ ಮನುಷ್ಯನನ್ನು ತೋಟಗಾರಿಕೆ ಮೇಳದ ಫಲಪುಷ್ಪ ಪ್ರದರ್ಶನದಲ್ಲಿ ಜನಮೆಚ್ಚುಗೆ ಪಡೆದು ಎಲ್ಲರೂ ಅವರ ರಂಗೋಲಿ ಭಾವಚಿತ್ರದ ಮುಂದೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದನ್ನು ನೋಡುತ್ತಿದ್ದರೆ ನನಗೆ ಹೆಮ್ಮೆ ಎನಿಸುತ್ತದೆ. ಜೊತೆಗೆ ಮಹಾನ್ ನಟನನ್ನು ಕಳೆದುಕೊಂಡಿದ್ದಕ್ಕೆ ದುಃಖವೂ ಆಗುತ್ತಿದೆ. ಪುನೀತ್ ಮೃತಪಟ್ಟಿಲ್ಲ ಅವರು ಚಿತ್ರದ ಮೂಲಕ ಜೀವಂತವಾಗಿದ್ದಾರೆ ಎಂದು ನೆನೆದರು. ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ, ಪೀಣ್ಯ ಫ್ಲೈಓವರ್ ಸಂಚಾರ ಬಂದ್ – ಬದಲಿ ಮಾರ್ಗ ಇಲ್ಲಿದೆ

    ಮೂರು ದಿನಗಳ ಕಾಲ ನಡೆಯಲಿರುವ ಈ ಮೇಳದಲ್ಲಿ ವಿವಿಧ ಫಲಪುಷ್ಪ ಪ್ರಾತ್ಯಕ್ಷಿಕೆಗಳು ನಡೆಯಲಿದೆ.

  • ನಿನ್ನ ಕಂಡ ಕ್ಷಣದಿಂದ ಯಾಕೋ ನಾನು ನನ್ನಲಿಲ್ಲ ಅಂತೀರೋ ರಮ್ಯಾ

    ನಿನ್ನ ಕಂಡ ಕ್ಷಣದಿಂದ ಯಾಕೋ ನಾನು ನನ್ನಲಿಲ್ಲ ಅಂತೀರೋ ರಮ್ಯಾ

    ಬೆಂಗಳೂರು: ಸ್ಯಾಂಡಲ್‍ವುಡ್ ಕ್ವೀನ್ ನಟಿ ರಮ್ಯಾ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರನ್ನು ನೆನೆದು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.

    ರಮ್ಯಾ ಅವರು, ಪುನೀತ್ ಜೊತೆ ಅಭಿ ಸಿನಿಮಾದಲ್ಲಿ ನಟಿಸುವ ಮೂಲಕ ಮೊದಲ ಬಾರಿಗೆ ಚಂದನವನಕ್ಕೆ ಕಾಲಿಟ್ಟರು. ಚಿತ್ರರಂಗಕ್ಕೆ ಎಂಟ್ರಿ ಕೊಡುವ ಮುನ್ನ ದಿವ್ಯಾಸ್ಪಂದನ ಆಗಿದ್ದ ಇವರಿಗೆ ಪಾರ್ವತಮ್ಮ ರಾಜ್‍ಕುಮಾರ್ ಅವರು ರಮ್ಯಾ ಎಂದು ಹೆಸರಿಟ್ಟು, ಚಿತ್ರರಂಗಕ್ಕೆ ಪರಿಚಯಿಸಿದ್ರು. ತಮ್ಮ ಮೊದಲ ಸಿನಿಮಾದಲ್ಲಿಯೇ ಅಭಿಮಾನಿಗಳ ದಿಲ್ ಕದ್ದ ರಮ್ಯಾ ನಂತರ ಸಾಕಷ್ಟು ಸೂಪರ್ ಡೂಪರ್ ಹಿಟ್ ಚಿತ್ರಗಳನ್ನು ನೀಡುವ ಮೂಲಕ ಸ್ಯಾಂಡಲ್‍ವುಡ್ ಕ್ವೀನ್ ಪಟ್ಟ ಗಿಟ್ಟಿಸಿಕೊಂಡಿರು. ಇದನ್ನೂ ಓದಿ: ನಾನು ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿಕೊಂಡಿಲ್ಲ: ರಾಜ್ ಕುಂದ್ರಾ

    ಅಪ್ಪು ಜೊತೆ ರಮ್ಯಾ ಇಲ್ಲಿಯವರೆಗೂ ಅಭಿ, ಆಕಾಶ್, ಅರಸು ಎಂಬ ಮೂರು ಚಿತ್ರಗಳಲ್ಲಿ ಅಭಿನಯಿಸಿದ್ದು, ಈ ಮೂರು ಚಿತ್ರಗಳು ಕನ್ನಡದಲ್ಲಿ ಹಿಟ್ ಸಿನಿಮಾಗಳಾಗಿತ್ತು. ಮತ್ತೊಮ್ಮೆ ಪುನೀತ್ ಹಾಗೂ ರಮ್ಯಾ ಕಾಂಬೀನೇಷನ್‍ನ ಮತ್ತೊಂದು ಸಿನಿಮಾದ ನಿರೀಕ್ಷೆ ಹೊಂದಿದ್ದ ಅಭಿಮಾನಿಗಳಿಗೆ ಅಪ್ಪು ಅಗಲಿಕೆ ಬಿಗ್ ಶಾಕ್ ನೀಡಿತ್ತು. ಈ ಸುದ್ದಿ ಅಭಿಮಾನಿಗಳಿಗಷ್ಟೇ ಅಲ್ಲದೇ ಕಲಾವಿದರಿಗೂ ಅಷ್ಟೇ ನೋವುಂಟು ಮಾಡಿತ್ತು. ತಮ್ಮ ಬೆಸ್ಟ್ ಫ್ರೆಂಡ್ ಅಪ್ಪು ಇನ್ನಿಲ್ಲ ಎಂಬ ವಿಚಾರ ರಮ್ಯಾ ಅವರಿಗೂ ಆಘಾತವನ್ನುಂಟು ಮಾಡಿತ್ತು. ಆದರೆ ಅಪ್ಪು ಇಲ್ಲದಿದ್ದರೂ ಅವರ ನೆನಪುಗಳನ್ನು ಎಲ್ಲರೂ ಸದಾ ಮೆಲುಕು ಹಾಕುತ್ತಿರುತ್ತಾರೆ.

    ಇದೀಗ ರಮ್ಯಾ ಅವರು ಅಪ್ಪು ಜೊತೆಗೆ ಅಭಿನಯಿಸಿದ್ದ ಅರಸು ಚಿತ್ರದ ಫೇಮಸ್ ‘ನಿನ್ನ ಕಂಡ ಕ್ಷಣದಿಂದ’ ಸಾಂಗ್‍ಗೆ ಹಲವಾರು ಎಕ್ಸ್‍ಪ್ರೇಶನ್ ಇರುವ ವೀಡಿಯೊಂದನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ವಿಶೇಷವೆಂದರೆ ಈ ವೀಡಿಯೋದಲ್ಲಿ ರಮ್ಯಾ ತಮ್ಮ ಮುಖ ತೋರಿಸದೇ ಬದಲಿಗೆ ಎಮೋಜಿಯಂತಿರುವುದರ ಮೇಲೆ ಭಿನ್ನ, ಭಿನ್ನ ಎಕ್ಸ್‍ಪ್ರೇಶನ್‍ಗಳನ್ನು ಕ್ರಿಯೆಟ್ ಮಾಡಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಈ ಎಕ್ಸ್‍ಪ್ರೆಶನ್‍ಗಳ ಮಧ್ಯೆ ಹಿನ್ನೆಲೆಯಲ್ಲಿ ಅರಸು ಸಿನಿಮಾದ ಹಾಡನ್ನು ಕೇಳಬಹುದಾಗಿದೆ. ಇದನ್ನೂ ಓದಿ: ಮತ್ತೊಮ್ಮೆ ಒಟ್ಟಿಗೆ ಕಾಣಿಸಿಕೊಂಡ ರಶ್ಮಿಕಾ, ವಿಜಯ್ ದೇವರಕೊಂಡ

     

    View this post on Instagram

     

    A post shared by Ramya/Divya Spandana (@divyaspandana)

    ಈ ವೀಡಿಯೋ ಜೊತೆಗೆ ರಮ್ಯಾ ಕ್ಯಾಪ್ಷನ್‍ನಲ್ಲಿ ನಿನ್ನ ಕಂಡ ಕ್ಷಣದಿಂದ ಯಾಕೊ ನಾನು ನನ್ನಲಿಲ್ಲ. ಆ ನಿಮಿಷದಿಂದ ನನಗೇನಾಯ್ತಂತ ಗೊತ್ತೇ ಇಲ್ಲ. ಎಂದು ಕಾಣದ ಹರುಷ ಇಂದು ನಾನು ಕಂಡೆನಲ್ಲ. ಇದು ಪ್ರೀತಿ ಅಂತ ತಿಳಿದ ಮೇಲೆ ನೀನೆ ಎಲ್ಲಾ ಎಂಬ ಸಾಲುಗಳ ಜೊತೆಗೆ ಅಪ್ಪು, ಅರಸು ಎಂದು ಬರೆದುಕೊಂಡಿದ್ದಾರೆ. ಒಟ್ಟಾರೆ ಪುನೀತ್ ಇಲ್ಲದಿದ್ದರೂ ಅವರ ನೆನಪುಗಳು ಮಾತ್ರ ಎಲ್ಲರ ಮನಸ್ಸಿನಲ್ಲಿ ಜೀವಂತವಾಗಿದೆ ಎನ್ನುವುದಕ್ಕೆ ಇದೊಂದು ಮತ್ತೊಂದು ಉದಾಹರಣೆಯಾಗಿದೆ.

  • ಪವರ್ ಸ್ಟಾರ್ ಹೆಸರಲ್ಲಿ ಮಿನಿ ಸ್ಮಾರಕ ನಿರ್ಮಿಸಿದ ಹೊಸೂರು ಗ್ರಾಮಸ್ಥರು

    ಪವರ್ ಸ್ಟಾರ್ ಹೆಸರಲ್ಲಿ ಮಿನಿ ಸ್ಮಾರಕ ನಿರ್ಮಿಸಿದ ಹೊಸೂರು ಗ್ರಾಮಸ್ಥರು

    ಬಾಗಲಕೋಟೆ: ಅಪ್ಪು ಅಗಲಿ ಒಂದೂವರೆ ತಿಂಗಳು ಕಳೆದಿದೆ. ಆದರೂ ಪುನೀತ್ ಫ್ಯಾನ್ಸ್ ಒಂದಿಲ್ಲಾ ಒಂದು ರೀತಿ ತಮ್ಮ ಅಭಿಮಾನವನ್ನು ತೋರಿಸುತ್ತಲೇ ಇದ್ದಾರೆ. ಹೊಸೂರು ಗ್ರಾಮಸ್ಥರು ಪವರ್ ಸ್ಟಾರ್ ಹೆಸರಲ್ಲಿ ಮಿನಿ ಸ್ಮಾರಕ ಕಟ್ಟಿಸಿ ತಮ್ಮ ಅಭಿಮಾನವನ್ನು ಮೆರೆದಿದ್ದಾರೆ.

    ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೊಸೂರು ಗ್ರಾಮದಲ್ಲಿ ಅಪ್ಪು ಮಿನಿಸ್ಮಾರಕ ನಿರ್ಮಾಣವಾಗಿದೆ. ಗ್ರಾಪಂ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರಿಂದ ಸ್ಮಾರಕದಲ್ಲಿ ಸುಂದರ ಮಂಟಪ ನಿರ್ಮಾಣವಾಗಿದೆ. ಮಂಟಪದಲ್ಲಿ ಅಪ್ಪು ಭಾವಚಿತ್ರ ಇಟ್ಟು ಪೂಜೆ ಸಲ್ಲಿಸುತ್ತಿದ್ದಾರೆ. ಅಪ್ಪು ಭಾವಚಿತ್ರದ ಕೆಳಗೆ ಜೊತೆಗಿರದ ಜೀವ ಎಂದೆಂದಿಗೂ ಜೀವಂತ ಪುನೀತ್ ರಾಜ್ ಕುಮಾರ್ ಎಂಬ ಬರಹವನ್ನು ಬರೆದಿದ್ದಾರೆ.

    ಗ್ರಾಮದ ಸಂತೆ ಮಾರುಕಟ್ಟೆ ಜಾಗದಲ್ಲಿ ಸ್ಮಾರಕ ನಿರ್ಮಿಸಿದ ಗ್ರಾಮಸ್ಥರು ಪುನೀತ್ ರಾಜ್‌ಕುಮಾರ್ ಮೇಲಿನ ಅಭಿಮಾನವನ್ನು ಮೆರೆದಿದ್ದಾರೆ. ಅಪ್ಪು ಚಿತ್ರಗಳು, ಸಾಮಾಜಿಕ ಕಾರ್ಯ ನೆನೆದು ಗ್ರಾಮಸ್ಥರಿಂದ ಸ್ಮಾರಕ ಕಟ್ಟಿ ಗೌರವ ಸಲ್ಲಿಸಲಾಯಿತು. ಸ್ಮಾರಕವನ್ನು ಮಾಡಿದ ಗ್ರಾಮಸ್ಥರೆಲ್ಲರೂ ಸೇರಿ ಉದ್ಘಾಟಿಸಿದರು. ಇದನ್ನೂ ಓದಿ: ಅಪ್ಪು ಸಮಾಧಿಗೆ ಧಾರವಾಡದಿಂದ ನಡೆದೇ ಬಂದ ಅಭಿಮಾನಿ

    ಈ ಸ್ಮಾರಕಕ್ಕೆ ಹೂಗಳಿಂದ ಅಲಂಕಾರ ಮಾಡಿ, ಮೇಣದ ದೀಪ ಹಚ್ಚಿ ಗೌರವ ಸಲ್ಲಿಸಿದ್ದಾರೆ. ಶಾಲಾಮಕ್ಕಳಿಂದ ಅಪ್ಪು ಹೆಸರಿನ ಮೇಲೆ ಗಾಯನ ಕಾರ್ಯಕ್ರಮ ನಡೆಯಿತು. ಗ್ರಾಮದಲ್ಲಿ ಪುನೀತ್ ಹೆಸರಲ್ಲಿ ಅನ್ನಸಂತರ್ಪಣೆ ನಡೆಸಿದರು. ಇದನ್ನೂ ಓದಿ: ಕನ್ನಡ ಧ್ವಜಕ್ಕೆ ಬೆಂಕಿ – ಕನ್ನಡ ದ್ರೋಹಿಗಳ ವಿರುದ್ಧ ಕಠಿಣ ಕ್ರಮಕ್ಕೆ ಹೆಚ್‍ಡಿಕೆ ಆಗ್ರಹ

  • ಅಪ್ಪು ಸಮಾಧಿಗೆ ಧಾರವಾಡದಿಂದ ನಡೆದೇ ಬಂದ ಅಭಿಮಾನಿ

    ಅಪ್ಪು ಸಮಾಧಿಗೆ ಧಾರವಾಡದಿಂದ ನಡೆದೇ ಬಂದ ಅಭಿಮಾನಿ

    ಬೆಂಗಳೂರು: ಅಪ್ಪು ನಮ್ಮನ್ನಗಲಿ ಒಂದೂವರೆ ತಿಂಗಳು ಕಳೆದಿದೆ. ಪುನೀತ್ ಮೇಲಿನ ಅಭಿಮಾನವನ್ನು ಫ್ಯಾನ್ಸ್ ತೋರ್ಪಡಿಸ್ತಲೇ ಇದ್ದಾರೆ. ಧಾರವಾಡದ ಅಪ್ಪು ಅಭಿಮಾನಿ ದಾಕ್ಷಾಯಿಣಿ ಎಂಬುವವರು ಬೆಂಗಳೂರಿಗೆ ಕಾಲ್ನಡಿಗೆಯಲ್ಲೇ ಆಗಮಿಸಿದ್ದಾರೆ.

    ಧಾರವಾಡದಿಂದ ಕಾಲ್ನಡಿಗೆಯಲ್ಲಿ ಬಂದ ದಾಕ್ಷಾಯಿಣಿಯವರನ್ನು ದೊಡ್ಮನೆ ಸದಸ್ಯರು ಸ್ವಾಗತ ಮಾಡಿದರು. ಬಳಿಕ ದಾಕ್ಷಾಯಿಣಿ ಅಪ್ಪು ಸಮಾಧಿ ದರ್ಶನ ಪಡೆದರು. 550 ಕಿಮಿ ದೂರದಿಂದ ಆಗಮಿಸಿರುವ ಅಪ್ಪು ಸಮಾಧಿ ದರ್ಶನ ಪಡೆದ್ರು. ಇದನ್ನೂ ಓದಿ: ಓಟದ ಮೂಲಕ ಅಪ್ಪು ಸಮಾಧಿಗೆ ಹೊರಟ ಮಹಿಳೆಯ ಆರೋಗ್ಯ ವಿಚಾರಿಸಿದ್ರು ರಾಘಣ್ಣ

    ದಾಕ್ಷಾಯಿಣಿಯವರಿಗೆ 3 ಮಕ್ಕಳಿದ್ದು, ಕಳೆದ 14 ದಿನಗಳ ಹಿಂದೆ ಓಟ ಆರಂಭ ಮಾಡಿದ್ದರು. ಧಾರವಾಡದ ಅಭಿಮಾನಿ ಜೊತೆ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಕೆಲ ಸಮಯ ಕಳೆದರು. ಇದನ್ನೂ ಓದಿ: ಅಪ್ಪು ಸಮಾಧಿ ನೋಡಲು ಓಡುತ್ತಾ ಹೊರಟ ಮೂರು ಮಕ್ಕಳ ತಾಯಿ

  • ಸಿಎಂ ನಿಮಗೆ ನಾವು ಸದಾ ಆಭಾರಿ: ಅಶ್ವಿನಿ ಪುನೀತ್ ರಾಜ್‍ಕುಮಾರ್

    ಸಿಎಂ ನಿಮಗೆ ನಾವು ಸದಾ ಆಭಾರಿ: ಅಶ್ವಿನಿ ಪುನೀತ್ ರಾಜ್‍ಕುಮಾರ್

    ಬೆಂಗಳೂರು: ಅಪ್ಪು ಕನಸಿನ ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ನಿನ್ನೆ ಬಿಡುಗಡೆಗೊಂಡಿದ್ದು, ಈ ಹಿನ್ನೆಲೆಯಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

    ಟೀಸರ್ ಬಿಡುಗಡೆ ಕುರಿತು ಸಿಎಂ ನಿನ್ನೆ ಟ್ವೀಟ್ ಮಾಡಿದ್ದರು, ಈ ಟ್ವೀಟ್ ಗೆ ಅಶ್ವಿನಿ ಅವರು ರಿಟ್ವೀಟ್ ಮಾಡಿ, ಈ ‘ಗಂಧದ ಗುಡಿ’ಯನ್ನು ನಾಡಿನ ಪ್ರತಿಯೊಬ್ಬರಿಗೂ ತಲುಪಿಸಬೇಕಾದ ಜವಾಬ್ದಾರಿ ನಮ್ಮೆಲ್ಲರದ್ದು. ಈ ನಿಟ್ಟಿನಲ್ಲಿ ನೀವು ನೀಡುತ್ತಿರುವ ಸಹಕಾರ ಮತ್ತು ಪ್ರೋತ್ಸಾಹಕ್ಕೆ ನಾವು ಸದಾ ಆಭಾರಿ ಎಂದು ಹೇಳಿದ್ದಾರೆ.

    ಪ್ರಾಕೃತಿಕ ಸಂಪತ್ತು ರಕ್ಷಿಸುವ ನಿಟ್ಟಿನಲ್ಲಿ ಜನರಿಗೆ ಈ ಚಿತ್ರ ಪ್ರೇರಣೆಯಾಗಲಿ ಎಂದು ಬರೆದುಕೊಳ್ಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಚಿತ್ರಕ್ಕೆ ಶುಭಹಾರೈಸಿದ್ದರು. ಇದನ್ನೂ ಓದಿ: ಟೀಸರ್ ಕೊನೆಯಲ್ಲಿ ಅಪ್ಪು ಸ್ಮೈಲ್ ನೋಡಿ ಕರುಳು ಕಿತ್ತು ಬಂದಂತಾಯ್ತು: ಶಿವಣ್ಣ

    ಟ್ವೀಟ್ ನಲ್ಲೇನಿತ್ತು..?
    ನಮ್ಮೆಲ್ಲರ ಪ್ರೀತಿಯ ಅಪ್ಪು ದಿ. ಪುನೀತ್ ರಾಜಕುಮಾರ್ ಅಭಿನಯದ ಪಿ.ಆರ್.ಕೆ ಪ್ರೊಡಕ್ಷನ್ ನಿರ್ಮಿಸಿರುವ ‘ಗಂಧದ ಗುಡಿ’ ಒಂದು ಅದ್ಭುತ ಕಲಾಕೃತಿ. ನಾಡಿನ ಪ್ರಾಕೃತಿಕ ಶ್ರೀಮಂತಿಕೆ, ಜೀವಸಂಕುಲ, ಬುಡಕಟ್ಟು ಜನರ ಸಂಸ್ಕೃತಿಗಳನ್ನು ಪರಿಚಯಿಸುವ ಮೂಲಕ, ವಿಶಿಷ್ಟ ರೀತಿಯಲ್ಲಿ ಕಥೆಯೊಂದನ್ನು ಹೇಳುತ್ತಿದೆ. ಇದನ್ನೂ ಓದಿ: ಅಪ್ಪುಗೆ ವಿಶೇಷವಾಗಿ ಗೌರವ ಸಲ್ಲಿಸಿದ ಕ್ರಿಕೆಟಿಗ ಡೇವಿಡ್ ವಾರ್ನರ್

    ಈ ಅದ್ಭುತ ದೃಶ್ಯಕಾವ್ಯದ ಸಂದೇಶ ಎಲ್ಲರಿಗೂ ತಲುಪಬೇಕು. ಪ್ರತಿ ಭಾರತೀಯ, ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಕನ್ನಡಿಗ ಕರುನಾಡಿನ ಈ ಕಥಾನಕವನ್ನು ನೋಡುವಂತಾಗಲಿ. ನಮ್ಮ ಅರಣ್ಯ, ನಮ್ಮ ಪರಿಸರ, ವೈವಿಧ್ಯಮಯ ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಚಿತ್ರ ಪ್ರೇರಣೆ ನೀಡಲಿ ಎಂದು ಹಾರೈಸುವುದಾಗಿ ತಿಳಿಸಿದ್ದರು.

    ಸೋಮವಾರ(ಡಿ.6) ಅಪ್ಪು ತಾಯಿ ಪಾರ್ವತಮ್ಮ ರಾಜ್ ಕುಮಾರ್ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಇಂದೇ ಪಿಆರ್‍ಕೆ ಆಡಿಯೋ ಯೂಟ್ಯೂಬ್ ಚಾನೆಲ್‍ನಲ್ಲಿ ಗಂಧದ ಗುಡಿ ಟೈಟಲ್ ಟೀಸರ್ ಬಿಡುಗಡೆ ಮಾಡಲಾಗಿದೆ. ಟೀಸರ್ ನಲ್ಲಿ ದಟ್ಟಕಾಡಿನ ನಡುವೆ ಪುನೀತ್ ಪ್ರಯಾಣಿಸುವುದನ್ನು ಕಾಣಬಹುದಾಗಿದೆ. ಆನೆ, ಹುಲಿ, ಹಾವು ಸೇರಿದಂತೆ ಸುಂದರವಾದ ಪ್ರಕೃತಿ ಸೌಂದರ್ಯದ ದೃಶ್ಯಗಳನ್ನು ಅದ್ಭುತವಾಗಿ ಸೆರೆ ಹಿಡಿಯಲಾಗಿದೆ. ವಿಶೇಷವೆಂದರೆ ಕೊನೆಯಲ್ಲಿ ಡಾ. ರಾಜ್‍ಕುಮಾರ್ ಧ್ವನಿಯಲ್ಲಿ ಅರಣ್ಯವನ್ನು ಉಳಿಸು, ಪ್ರಾಣಿಗಳನ್ನು ಉಳಿಸು ಎಂಬ ಸಂದೇಶ ಸಾರಲಾಗಿದೆ. ಅಮೋಘವರ್ಷ ನಿರ್ದೇಶನದ ಈ ಡಾಕ್ಯುಮೆಂಟರಿ ಸಿನಿಮಾ ಮುಂದಿನ ವರ್ಷ 2022ರಲ್ಲಿ ತೆರೆಕಾಣಲಿದೆ.

  • ಪ್ರಾಕೃತಿಕ ಸಂಪತ್ತು ರಕ್ಷಿಸುವಲ್ಲಿ ಗಂಧದಗುಡಿ ಚಿತ್ರ ಪ್ರೇರಣೆ ನೀಡಲಿ: ಬೊಮ್ಮಾಯಿ

    ಪ್ರಾಕೃತಿಕ ಸಂಪತ್ತು ರಕ್ಷಿಸುವಲ್ಲಿ ಗಂಧದಗುಡಿ ಚಿತ್ರ ಪ್ರೇರಣೆ ನೀಡಲಿ: ಬೊಮ್ಮಾಯಿ

    ಬೆಂಗಳೂರು: ಸ್ಯಾಂಡಲ್‌ವುಡ್ ನಟ ದಿ. ಪುನೀತ್ ರಾಜ್ ಕುಮಾರ್ ಅವರ ಕನಸಿನ ಸಾಕ್ಷ್ಯಚಿತ್ರ ಟೈಟಲ್ ಟೀಸರ್ ಇಂದು ಬಿಡುಗಡೆಗೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಹಾರೈಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಪ್ರಾಕೃತಿಕ ಸಂಪತ್ತು ರಕ್ಷಿಸುವ ನಿಟ್ಟಿನಲ್ಲಿ ಜನರಿಗೆ ಈ ಚಿತ್ರ ಪ್ರೇರಣೆಯಾಗಲಿ ಎಂದು ಬರೆದುಕೊಂಡಿದ್ದಾರೆ.

    ಟ್ವೀಟ್ ನಲ್ಲೇನಿದೆ..?
    ನಮ್ಮೆಲ್ಲರ ಪ್ರೀತಿಯ ಅಪ್ಪು ದಿ. ಪುನೀತ್ ರಾಜ್ ಕುಮಾರ್ ಅಭಿನಯದ ಪಿ.ಆರ್.ಕೆ ಪ್ರೊಡಕ್ಷನ್ ನಿರ್ಮಿಸಿರುವ ‘ಗಂಧದ ಗುಡಿ’ ಒಂದು ಅದ್ಭುತ ಕಲಾಕೃತಿ. ನಾಡಿನ ಪ್ರಾಕೃತಿಕ ಶ್ರೀಮಂತಿಕೆ, ಜೀವಸಂಕುಲ, ಬುಡಕಟ್ಟು ಜನರ ಸಂಸ್ಕೃತಿಗಳನ್ನು ಪರಿಚಯಿಸುವ ಮೂಲಕ, ವಿಶಿಷ್ಟ ರೀತಿಯಲ್ಲಿ ಕಥೆಯೊಂದನ್ನು ಹೇಳುತ್ತಿದೆ.

    ಈ ಅದ್ಭುತ ದೃಶ್ಯಕಾವ್ಯದ ಸಂದೇಶ ಎಲ್ಲರಿಗೂ ತಲುಪಬೇಕು. ಪ್ರತಿ ಭಾರತೀಯ, ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಕನ್ನಡಿಗ ಕರುನಾಡಿನ ಈ ಕಥಾನಕವನ್ನು ನೋಡುವಂತಾಗಲಿ. ನಮ್ಮ ಅರಣ್ಯ, ನಮ್ಮ ಪರಿಸರ, ವೈವಿಧ್ಯಮಯ ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಚಿತ್ರ ಪ್ರೇರಣೆ ನೀಡಲಿ ಎಂದು ಹಾರೈಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ:  ಅಪ್ಪು ಕನಸು ನನಸು- ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಔಟ್

    ಇಂದು ಅಪ್ಪು ತಾಯಿ ಪಾರ್ವತಮ್ಮ ರಾಜ್ ಕುಮಾರ್ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಇಂದೇ ಪಿಆರ್‌ಕೆ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಗಂಧದ ಗುಡಿ ಟೈಟಲ್ ಟೀಸರ್ ಬಿಡುಗಡೆ ಮಾಡಲಾಗಿದೆ. ಟೀಸರ್ ನಲ್ಲಿ ದಟ್ಟಕಾಡಿನ ನಡುವೆ ಪುನೀತ್ ಪ್ರಯಾಣಿಸುವುದನ್ನು ಕಾಣಬಹುದಾಗಿದೆ. ಆನೆ, ಹುಲಿ, ಹಾವು ಸೇರಿದಂತೆ ಸುಂದರವಾದ ಪ್ರಕೃತಿ ಸೌಂದರ್ಯದ ದೃಶ್ಯಗಳನ್ನು ಅದ್ಭುತವಾಗಿ ಸೆರೆ ಹಿಡಿಯಲಾಗಿದೆ. ವಿಶೇಷವೆಂದರೆ ಕೊನೆಯಲ್ಲಿ ಡಾ. ರಾಜ್‌ಕುಮಾರ್ ಧ್ವನಿಯಲ್ಲಿ ಅರಣ್ಯವನ್ನು ಉಳಿಸು, ಪ್ರಾಣಿಗಳನ್ನು ಉಳಿಸು ಎಂಬ ಸಂದೇಶ ಸಾರಲಾಗಿದೆ. ಅಮೋಘವರ್ಷ ನಿರ್ದೇಶನದ ಈ ಡಾಕ್ಯುಮೆಂಟರಿ ಸಿನಿಮಾ ಮುಂದಿನ ವರ್ಷ 2022ರಲ್ಲಿ ತೆರೆಕಾಣಲಿದೆ. ಇದನ್ನೂ ಓದಿ:   ರಾಜ್‌ ಕುಟುಂಬದಿಂದ ಗಂಧದಗುಡಿ‌ಯ 3ನೇ ಪ್ರಯೋಗ

  • ಅಪ್ಪುಗೆ ವಿಶೇಷವಾಗಿ ಗೌರವ ಸಲ್ಲಿಸಿದ ಕ್ರಿಕೆಟಿಗ ಡೇವಿಡ್ ವಾರ್ನರ್

    ಅಪ್ಪುಗೆ ವಿಶೇಷವಾಗಿ ಗೌರವ ಸಲ್ಲಿಸಿದ ಕ್ರಿಕೆಟಿಗ ಡೇವಿಡ್ ವಾರ್ನರ್

    – ವಾರ್ನರ್ ಅಭಿಮಾನಕ್ಕೆ ಅಭಿಮಾನಿಗಳು ಫಿದಾ

    ಸ್ಯಾಂಡಲ್‍ವುಡ್ ಸ್ಟಾರ್ ನಟ ಪುನೀತ್ ರಾಜ್ ಕುಮಾರ್ ಅವರು ನಮ್ಮನೆಲ್ಲಾ ಅಗಲಿ 1 ತಿಂಗಳಾದ್ರೂ ಅವರು ಇಲ್ಲದಿರೋ ಸತ್ಯವನ್ನು ನಮಗೆಲ್ಲಾ ಅರಗಿಸಿಕೊಳ್ಳೋಕೆ ಆಗ್ತಿಲ್ಲ. ಇಡೀ ಕರುನಾಡು ಪ್ರತಿದಿನ ಅಪ್ಪು ನೆನದು ಕೊರಗುತ್ತಿದೆ. ಎಲ್ಲೇ ನೋಡಿದರೂ ಅಪ್ಪು ಫೋಟೋನೇ ಕಾಣಿಸುತ್ತಿದೆ. ಈ ಮಧ್ಯೆ ಆಸ್ಟ್ರೇಲಿಯಾ ಖ್ಯಾತ ಕ್ರಿಕೆಟಿಗ ಡೇವಿಡ್ ವಾರ್ನರ್ ಅವರು ಅಪ್ಪುಗೆ ವಿಭಿನ್ನವಾಗಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

    ಹೌದು. ರಾಜಕುಮಾರ ಚಿತ್ರದ `ಬೊಂಬೆ ಹೇಳುತೈತೆ’ ಹಾಡಿಗೆ ರೀ ಫೇಸ್ ಆ್ಯಪ್ ಮೂಲಕ ಮಾಡಿ ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ ಜೊತೆಗೆ ಹ್ಯಾಶ್ ಟ್ಯಾಗ್ ಬಳಸಿ ರೆಸ್ಪೆಕ್ಟ್ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಅಪ್ಪುಗೆ ವಾರ್ನರ್ ಡಿಫರೆಂಟ್ ಆಗಿ ನಮನ ಸಲ್ಲಿಸಿದ್ದಾರೆ. ವಾರ್ನರ್ ವಿಶೇಷ ಗೌರವಕ್ಕೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ: ‘ಅಪ್ಪುಶ್ರೀ’ ಪ್ರಶಸ್ತಿ ನೀಡುವಂತೆ ಆಗ್ರಹಿಸಿ ಬರಿಗಾಲಲ್ಲಿ ಪಾದಯಾತ್ರೆ

    ವಾರ್ನರ್ ಅವರ ವೀಡಿಯೋ ನೋಡಿ ಅಪ್ಪು ಅಭಿಮಾನಿಗಳು ಧನ್ಯವಾದ ಅರ್ಪಿಸಿದ್ದಾರೆ. ಕನ್ನಡ ಮೇಲಿರುವ ಪ್ರೀತಿ, ಅಪ್ಪು ಮೇಲಿರುವ ಗೌರವಕ್ಕೆ ಧನ್ಯವಾದ ಅಂತ ಕಾಮೆಂಟ್ ಮಾಡುತ್ತಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ಕೂಡ ವಾರ್ನರ್ ಪೋಸ್ಟ್ ಗೆ ಕಾಮೆಂಟ್ ಮಾಡಿದ್ದಾರೆ. ಹೃದಯಂತರಾಳದ ನಮನಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಪ್ಪು ಕನಸಿನ ಯೋಜನೆ, ವನ್ಯಜೀವಿ ಆಧಾರಿತ ಚಿತ್ರ ‘ಗಂಧದ ಗುಡಿ’ಯ ಟೀಸರ್ ಡಿಸೆಂಬರ್ 6ಕ್ಕೆ ರಿಲೀಸ್

    ಇತ್ತ ಪುನೀತ್ ರಾಜ್‍ಕುಮಾರ್ ಅವರ ಕನಸು ಇಂದು ನನಸಾಗ್ತಿದೆ. ಕನ್ನಡ ನಾಡಿನ ಅರಣ್ಯಸಂಪತ್ತು, ವನ್ಯಜೀವಿ ಸಂಪತ್ತಿನ ಬಗ್ಗೆ ಚಿತ್ರಿಸಿರೋ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟೀಸರ್ ಬಿಡುಗಡೆ ಆಗ್ತಿದೆ. ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು `ಹಿಂದೆಂದೂ ಕಾಣದ ಸಿನಿಮಾ ಅನುಭವ. ನಿಮ್ಮ ಮುಂದೆ’ ಅಂತ ಟ್ವೀಟ್ ಮಾಡಿದ್ದಾರೆ. ಪಿಆರ್‍ಕೆ ಆಡಿಯೋ ಯೂಟ್ಯೂಬ್ ಚಾನೆಲ್‍ನಲ್ಲಿ ಬೆಳಗ್ಗೆ 10 ಗಂಟೆಗೆ ಟೈಟಲ್ ಟೀಸರ್ ಬಿಡುಗಡೆ ಆಗಲಿದೆ ಅಂತ ಟ್ವೀಟ್ ಮಾಡಿದ್ದಾರೆ. ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಅಪ್ಪು ಈ ಟೀಸರ್ ಬಿಡುಗಡೆಗೆ ಸಿದ್ಧತೆ ನಡೆಸಿದ್ದರು.

     

    View this post on Instagram

     

    A post shared by David Warner (@davidwarner31)

     

  • ಅಪ್ಪು ಚಿತ್ರದ ದೃಶ್ಯಗಳನ್ನ ವೇದಿಕೆಯಲ್ಲಿ ಮರುಸೃಷ್ಟಿದ ಕಿರುತೆರೆ ಕಲಾವಿದರ ತಂಡ

    ಅಪ್ಪು ಚಿತ್ರದ ದೃಶ್ಯಗಳನ್ನ ವೇದಿಕೆಯಲ್ಲಿ ಮರುಸೃಷ್ಟಿದ ಕಿರುತೆರೆ ಕಲಾವಿದರ ತಂಡ

    -ಕಿರುತೆರೆ ಕಲಾವಿದರಿಂದ ಅಪ್ಪು ಅಮರ ಕಾರ್ಯಕ್ರಮ

    ಬೆಂಗಳೂರು: ದಿ. ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ವತಿಯಿಂದ ಕಿರುತೆರೆ ಕಲಾವಿದರು, ತಂತ್ರಜ್ಞರು ಕಾರ್ಯಕ್ರಮವೊಂದನ್ನು ಆಯೋಜಸಿ ಅಪ್ಪುಗೆ ನಮನ ಸಲ್ಲಿಸಿದ್ದಾರೆ.

    ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ವತಿಯಿಂದ ಅಪ್ಪು ಅಮರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನ್ಯಾಷನಲ್ ಕಾಲೇಜ್‍ನ ಹೆಚ್.ಎನ್ ಕಲಾಕ್ಷೇತ್ರದಲ್ಲಿ ನಡೆಯುತ್ತಿರುವ ಕಾರ್ಯಕ್ರಮವನ್ನು ಕಿರುತೆರೆಯ ಕಲಾವಿದರು, ತಂತ್ರಜ್ಞಾನರು ಆಯೋಜಿಸಿದ್ದಾರೆ. ಬಾಲ ನಟನಾಗಿ ನಟಿಸಿದ ಪುನೀತ್  ರಾಜ್‍ಕುಮಾರ್ ಚಿತ್ರಗಳನ್ನ ದೃಶ್ಯಗಳನ್ನ ವೇದಿಕೆಯಲ್ಲಿ ಮರುಸೃಷ್ಟಿದ ಕಿರುತರೆ ಕಲಾವಿದರ ತಂಡ, ಬೆಟ್ಟದ ಹೂ, ಎರಡು ನಕ್ಷತ್ರ, ಭಕ್ತ ಪ್ರಹ್ಲಾದ ಸೇರಿದಂತೆ ವೇದಿಕೆ ಮೇಲೆ ಹಲವು ಚಿತ್ರಗಳ ದೃಶ್ಯಗಳಿಗೆ ನಟಿಸುವ ಮೂಲಕ ಅಪ್ಪುಗೆ ವಿಶೇಷ ನಮನ ಸಲ್ಲಿಸಲಾಗಿದೆ.

    ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ದೊಡ್ಮನೆ ಸದಸ್ಯರು ಭಾಗಿ ಆಗಿದ್ದಾರೆ. ಲಕ್ಷ್ಮಿ, ಗೋವಿಂದ್ ರಾಜ್ ಕಿರುತೆರೆಯ ಬಹಳಷ್ಟು ಕಲಾವಿದರು, ತಂತ್ರಜ್ಞಾನರು, ಹಿರಿಯ ನಟಿ ಉಮಾಶ್ರೀ, ಆರ್. ಅಶೋಕ್ ಭಾಗಿ ಆಗಿದ್ದಾರೆ.

  • ಪುನೀತ್ ಹಾಡುಗಳಿಂದ್ಲೇ ಬದುಕು ಸುಂದರವಾಗಿಸಿಕೊಂಡಿರೋ ವಿಶೇಷಚೇತನ ಕಲಾವಿದರು!

    ಪುನೀತ್ ಹಾಡುಗಳಿಂದ್ಲೇ ಬದುಕು ಸುಂದರವಾಗಿಸಿಕೊಂಡಿರೋ ವಿಶೇಷಚೇತನ ಕಲಾವಿದರು!

    ಧಾರವಾಡ: ನಟ ದಿ.ಪುನೀತ್ ರಾಜ್‍ಕುಮಾರ್ ಇದ್ದಾಗ ಅದೆಷ್ಟೋ ಜನರಿಗೆ ಸಹಾಯ ಮಾಡಿದ್ದಾರೆ. ಕಷ್ಟ ಅಂತಾ ಬಂದವರಿಗೆ ನೆರವಾಗಿದ್ದಾರೆ. ಈಗ ಅವರು ನಮ್ಮೊಂದಿಗೆ ಇಲ್ಲದೇ ಇದ್ರೂ ಒಂದಷ್ಟು ಜನ ಅವರಿಂದಲೇ ಬದುಕು ಸುಂದರವಾಗಿಸಿಕೊಂಡಿದ್ದಾರೆ.

    ನಮ್ಮ ಪ್ರೀತಿಯ ಅಪ್ಪು, ಅಭಿಮಾನಿಗಳ ಪರಮಾತ್ಮ ಪುನೀತ್ ರಾಜ್‍ಕುಮಾರ್ ನಮ್ಮನ್ನೆಲ್ಲ ಅಗಲಿ 17 ದಿನಗಳೇ ಕಳೆದಿವೆ. ಆದರೆ ರಾಜಕುಮಾರನಿಲ್ಲದ ನೋವು ಅಭಿಮಾನಿಗಳ ಪ್ರತಿಕ್ಷಣವನ್ನೂ ಹಿಂಡಿಹಿಪ್ಪೆ ಮಾಡ್ತಿದೆ. ಅಪ್ಪು ಬದುಕಿದ್ದಾಗ ಅದೆಷ್ಟೋ ಜನರಿಗೆ ಸಹಾಯ ಮಾಡಿದ್ರು. ಎಡಕೈಯಿಂದ ಕೊಟ್ಟಿದ್ದು ಬಲ ಕೈಗೆ ಗೊತ್ತಾಗದಂತೆ ನೂರಾರು ಜನರಿಗೆ ಆಸರೆಯಾಗಿದ್ರು. ಈಗ ಪುನೀತ್ ನಮ್ಮ ನಡುವೆ ಇಲ್ಲದೇ ಇದ್ದರೂ, ಅವರ ಹೆಸರಿನಲ್ಲಿ ಎಷ್ಟೋ ಜನ ತಮ್ಮ ಉಪಜೀವನ ಕಂಡುಕೊಂಡಿದ್ದಾರೆ. ಇದನ್ನೂ ಓದಿ: 13 ದಿನದಲ್ಲಿ 2 ಲಕ್ಷದ 26 ಸಾವಿರ ಮಂದಿಯಿಂದ ಅಪ್ಪು ಸಮಾಧಿ ದರ್ಶನ!

    ಗದಗ ಜಿಲ್ಲೆಯ ನರಗುಂದ ಪಟ್ಟಣದ ದಾದಾಪಿರ ಹಾಗೂ ಇಬ್ರಾಹಿಂ ಎನ್ನುವ ವಿಶೇಷಚೇತನರಿಬ್ಬರು ಪುನೀತ್ ರಾಜ್‍ಕುಮಾರ್ ಅವರ ಹಾಡುಗಳನ್ನ ಹಾಡುತ್ತಾ ಜೀವನ ಸಾಗಿಸುತ್ತಿದ್ದಾರೆ. ಪುಟ್ಟರಾಜ ಗವಾಯಿ ಕ್ಷೇಮಾಭಿವೃದ್ಧಿ ಸಂಘದ ಹೆಸರಿನಲ್ಲಿ ಕೈಯಲ್ಲಿ ಒಂದು ಮೈಕ್ ಹಾಗೂ ಒಂದು ಸ್ಪೀಕರ್ ಇಟ್ಟುಕೊಂಡು ಹಾಡು ಹಾಡ್ತಿದ್ದಾರೆ.

    ಪುನೀತ್ ರಾಜಕುಮಾರ್ ಅವರ ಹಾಡುಗಳು ಎಲ್ಲೇ ಕಿವಿಗೆ ಬಿದ್ದರೂ ಜನ ಥಟ್ ಅಂತಾ ಆ ಕಡೆ ಗಮನ ಕೊಡ್ತಾರೆ. ಅದೇ ರೀತಿ ಈ ಇಬ್ಬರು ಕಲಾವಿದರು ಬೀದಿಯಲ್ಲಿ ಹಾಡುವುದನ್ನು ನೋಡಲು ಎಷ್ಟೋ ಜನ ಬಂದು ನಿಲ್ತಾರೆ. ಅಲ್ಲದೇ ತಮ್ಮದೇ ಹಾಡಿನ ಟ್ರ್ಯಾಕ್‍ನಲ್ಲಿ ‘ಪುನೀತ್ ಅಣ್ಣ ಹುಟ್ಟಿ ಬಾ’ ಎಂಬ ಇವರ ಹಾಡು ಅದೆಷ್ಟೋ ಜನರ ಮನ ತಟ್ಟುತ್ತಿದೆ.

    ಒಟ್ಟಿನಲ್ಲಿ ನೂರಾರು ಜನರಿಗೆ ಸಹಾಯ ಮಾಡ್ತಿದ್ದ ಅಪ್ಪು ನಮ್ಮ ನಡುವೆ ಇಲ್ಲದೇ ಇದ್ದರೂ ಹಲವು ಜೀವಗಳಿಗೆ ದುಡಿದು ತಿನ್ನಲು ದಾರಿ ದೀಪ ಆಗಿದ್ದಾರೆ. ಸದ್ಯ ಇವರ ಹಾಡುಗಳನ್ನೇ ಹಾಡುತ್ತಾ ಈ ಅಂಗವಿಕಲ ಕಲಾವಿದರು ತಮ್ಮ ಜೀವನ ನಡೆಸುತ್ತಿರುವುದು ನಿಜಕ್ಕೂ ಮನ ತಟ್ಟುತ್ತಿದೆ.