Tag: ಅಪ್ಪು

  • ಮರಾಠಿಗರ ಮನಸ್ಸನ್ನೂ ಗೆದ್ದಿದ್ದ ಅಪ್ಪು- ಅಭಿಮಾನಿಗಳಿಂದ ಶ್ರದ್ಧಾಂಜಲಿ ಫಲಕ

    ಮರಾಠಿಗರ ಮನಸ್ಸನ್ನೂ ಗೆದ್ದಿದ್ದ ಅಪ್ಪು- ಅಭಿಮಾನಿಗಳಿಂದ ಶ್ರದ್ಧಾಂಜಲಿ ಫಲಕ

    ಚಿಕ್ಕೋಡಿ(ಬೆಳಗಾವಿ): ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಎಲ್ಲಾ ಭಾಷೆಯ ಜನ, ನಟರು, ಅಭಿಮಾನಿಗಳು ಸೇರಿದಂತೆ ದೇಶಾದ್ಯಂತ ಕಂಬನಿ ಮಿಡಿಯಲಾಗಿದೆ. ಅಂತೆಯೇ ಮಹಾರಾಷ್ಟ್ರದಲ್ಲೂ ಅಭಿಮಾನಿಗಳು ಪುನೀತ್ ಮೇಲಿನ ಅಭಿಮಾನ ವ್ಯಕ್ತಪಡಿಸಿದ್ದಾರೆ.

    PUNEET

    ಹೌದು. ಕನ್ನಡದ ರಾಜರತ್ನ ಪುನೀತ್ ರಾಜ್‍ಕುಮಾರ್ ಅವರು ಮರಾಠಿಗರ ಮನಸನ್ನೂ ಸಹ ಗೆದ್ದಿದ್ದರು. ಹೀಗಾಗಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೀರಜ್ ನಗರದಲ್ಲಿ ಅಪ್ಪುಗೆ ಭಾವಪೂರ್ವ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ಮರಾಠಿ ಅಭಿಮಾನಿಗಳು ಪ್ಲೆಕ್ಸ್ ಹಾಕಿ ರಾಜರತ್ನನ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ರಸ್ತೆಗೆ ಪುನೀತ್ ರಾಜ್‍ಕುಮಾರ್ ಹೆಸರಿಟ್ಟ ಸ್ಥಳೀಯರು

    ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಭಾವಪೂರ್ವ ಶ್ರದ್ಧಾಂಜಲಿ ಎಂದು ದೊಡ್ಡದಾದ ಫಲಕ ಹಾಕಿದ್ದಾರೆ. ಒಟ್ಟಿನಲ್ಲಿ ತಮ್ಮ ಅಭಿನಯ ಮತ್ತು ಸಮಾಜಿಕ ಕೆಲಸದಿಂದ ಗೆದ್ದಿದ್ದ ಪುನೀತ್, ಮರಾಠಿಗರ ಮನಸ್ಸನ್ನೂ ಸಹ ಗೆದ್ದಿದ್ದಾರೆ. ಇತ್ತ ಶಿವಮೊಗ್ಗದಲ್ಲಿ ರಸ್ತೆಯೊಂದಕ್ಕೆ ಸ್ಥಳೀಯರೇ ಪುನೀತ್ ರಾಜ್ ಕುಮಾರ್ ರಸ್ತೆ ಎಂದು ಹೆಸರಿಟ್ಟಿದ್ದಾರೆ.

  • ಪುನೀತ್ ಅಂತ್ಯಕ್ರಿಯೆಗೆ ಸಹಕರಿಸಿದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಸಿಎಂ ಧನ್ಯವಾದ

    ಪುನೀತ್ ಅಂತ್ಯಕ್ರಿಯೆಗೆ ಸಹಕರಿಸಿದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಸಿಎಂ ಧನ್ಯವಾದ

    – ಅಪ್ಪು ಕುಟುಂಬ, ಅಭಿಮಾನಿಗಳಿಗೂ ಥ್ಯಾಂಕ್ಸ್
    – ಸರ್ಕಾರಕ್ಕೆ ಶಿವಣ್ಣ ಧನ್ಯವಾದ

    ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಸುಸೂತ್ರವಾಗಿ ನಡೆಯುವಂತೆ ಸಹಕರಿಸಿದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧನ್ಯವಾದಗಳನ್ನು ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅನಾನುಕೂಲ ಆಗದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಿ, ಶ್ರದ್ಧೆಯಿಂದ ಕಾರ್ಯನಿರ್ವಹಿಸಿದ ಎಲ್ಲ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದರು.

    ಪುನೀತ್ ರಾಜ್ ಕುಮಾರ್ ನಿಧನ ನಂತರ ಕಳೆದ ಮೂರು ದಿನಗಳಿಂದ ಸಾರ್ವಜನಿಕರ ದರ್ಶನದಿಂದ ಎಲ್ಲ ವ್ಯವಸ್ಥೆ ಬಗ್ಗೆ ಪೊಲೀಸರು, ಅಧಿಕಾರಿಗಳು ಶ್ರಮವಹಿಸಿದ್ದಾರೆ. ಯಾವುದೇ ರೀತಿಯಲ್ಲೂ ಹೆಚ್ಚು ಕಮ್ಮಿ ಆಗಲಿಲ್ಲ. ಅಹಿತಕರ ಘಟನೆ ನಡೆದಿಲ್ಲ. ಪೊಲೀಸರ ಶ್ರಮ, ಶ್ರದ್ಧೆಗೆ ಮೆಚ್ಚುಗೆ ವ್ಯಕ್ತಪಡಿಸ್ತೇನೆ ಎಂದರು. ಇದನ್ನೂ ಓದಿ: ಇಬ್ಬರ ಬಾಳಿಗೆ ಬೆಳಕಾದ ಅಪ್ಪು

    ಪುನೀತ್ ಕುಟುಂಬದವರು ಕೂಡ ಸಂಪೂರ್ಣ ಸಹಕಾರ ನೀಡಿದ್ದಾರೆ. ಹೀಗಾಗಿ ಅವರ ಕುಟುಂಬದವರಿಗೂ ಧನ್ಯವಾದ. ಅಭಿಮಾನಿಗಳು ಶಿಸ್ತು, ಸಂಯಮ, ಶಾಂತಿಯಿಂದ ನಡೆದುಕೊಂಡಿದ್ದಾರೆ. ಅವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಶಿವರಾಜ್ ಕುಮಾರ್ ಸರ್ಕಾರಕ್ಕೆ ಕೃತಜ್ಞತೆ ತಿಳಿಸಿದ್ದಾರೆ. ಎಂಥದ್ದೇ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕರ್ತವ್ಯ. ಹೀಗಾಗಿ ಸರ್ಕಾರ ತನ್ನ ಕರ್ತವ್ಯ ನಿಭಾಯಿಸಿದೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ಮಗುವನ್ನು ಕಳೆದುಕೊಂಡಿದ್ದೇನೆ – ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ

    ಶಿವರಾಜ್ ಕುಮಾರ್ ಅವರ ಕೃತಜ್ಞತೆ ಅವರ ಮತ್ತು ದೊಡ್ಮನೆಯ ದೊಡ್ಡ ಗುಣ. ನಮ್ಮ ಅಧಿಕಾರಿಗಳು ಕೂಡ ಒಳ್ಳೆಯ ರೀತಿಯ ಸಹಕಾರ ಕೊಟ್ಟಿದ್ದಾರೆ. ಇದು ಸರ್ಕಾರ, ಅಧಿಕಾರಿಗಳ ಕರ್ತವ್ಯ ಆಗಿತ್ತು ಎಂದು ಹೇಳುತ್ತಾ ಬಿಬಿಎಂಪಿ, ಕಂದಾಯ ಇಲಾಖೆ ಅಧಿಕಾರಿ, ಸಿಬ್ಬಂದಿ, ಪೊಲೀಸ್ ಇಲಾಖೆಗೆ ಸಿಎಂ ಧನ್ಯವಾದ ಅರ್ಪಿಸಿದರು. ಇದನ್ನೂ ಓದಿ: ಪುನೀತ್ ಅವರಂತೆ ಅಜಾತಶತ್ರು ಮನೋಭಾವ, ಸರಳತೆ ಬೆಳೆಸಿಕೊಳ್ಳಲಿ- ಕಲಾವಿದರಿಗೆ ಡಿಕೆಶಿ ಕರೆ

  • ಪುನೀತ್ ಅವರಂತೆ ಅಜಾತಶತ್ರು ಮನೋಭಾವ, ಸರಳತೆ ಬೆಳೆಸಿಕೊಳ್ಳಲಿ- ಕಲಾವಿದರಿಗೆ ಡಿಕೆಶಿ ಕರೆ

    ಪುನೀತ್ ಅವರಂತೆ ಅಜಾತಶತ್ರು ಮನೋಭಾವ, ಸರಳತೆ ಬೆಳೆಸಿಕೊಳ್ಳಲಿ- ಕಲಾವಿದರಿಗೆ ಡಿಕೆಶಿ ಕರೆ

    – ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಅಭಿನಂದನೆ
    – ಸರ್ಕಾರದ ಕೆಲಸಕ್ಕೆ ಪುನೀತ್ ಹಣ ಪಡೆದಿಲ್ಲ
    – ನಾನು ಅಸೆಂಬ್ಲಿಯಲ್ಲಿ ಮಾತನಾಡುತ್ತೇನೆ

    ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಂತೆ ಅಜಾತಶತ್ರು ಮನೋಭಾವ ಹಾಗೂ ಸರಳತೆ ಬೆಳೆಸಿಕೊಳ್ಳುವಂತೆ ಕಲಾವಿದರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕರೆ ನೀಡಿದರು.

    PUNEET RAJKUMAR

    ಅಪ್ಪುವಿನ ಅಂತ್ಯಸಂಸ್ಕಾರದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದ ಜನ ಸಾಗರ ನಾವು ನೋಡಿದ್ದೇವೆ. ಜನನ ಉಚಿತ ಮರಣ ಖಚಿತ. ಹುಟ್ಟು-ಸಾವಿನ ಮಧ್ಯೆ ನಾವು ಏನು ಮಾಡಿದ್ದೇವೆ ಅನ್ನೋದು ಮುಖ್ಯ. ಪುನೀತ್ ಅವರು ಪವರ್ ಸ್ಟಾರ್ ಆಗಿದ್ದಾರೆ. ಅವರು ಅಜಾತ ಶತ್ರು. ಭಗವಂತ ಕೊನೆ ವಿದಾಯಕ್ಕೆ ಅವಕಾಶ ಕೊಟ್ಟ ಎಂದರು. ಇದನ್ನೂ ಓದಿ: ಅಪ್ಪು ಸಾವಿನ ಬೆನ್ನಲ್ಲೇ ಎಚ್ಚೆತ್ತ ಕೇರಳ ಸರ್ಕಾರ

    ರಾಜ್ಯದ ಜನ ಬಂದು ಗೌರವ ಸಲ್ಲಿಸಿದ್ದಾರೆ. ಗೌರವ ಪೂರ್ವಕವಾಗಿ ಕಳಿಸಿಕೊಟ್ಟಿದ್ದಾರೆ. ನಾನು ವಿರೋಧ ಪಕ್ಷದವನು ಆದರೂ ಕೂಡ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಚೆನ್ನಾಗಿ ವ್ಯವಸ್ಥೆ ಮಾಡಿದ್ದಾರೆ ಎಂದು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: ನನ್ನ ಮಗುವನ್ನು ಕಳೆದುಕೊಂಡಿದ್ದೇನೆ – ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ

    ಪುನೀತ್ ನಿಧನದ ವಿಚಾರವನ್ನು ವಿನಯ್ ಕಾಲ್ ಮಾಡಿ ಹೇಳಿದ್ದರು. ನನಗೆ ನಂಬಲು ಆಗಲಿಲ್ಲ, ಈಗಲೂ ಆಗುತ್ತಿಲ್ಲ. ಕಲಾವಿದನ ಬದುಕು ಮಾತ್ರವಲ್ಲ, ಸೋಷಿಯಲ್ ಕಮಿಟ್ಮೆಂಟ್ ಇತ್ತು. ಸರ್ಕಾರ ಯಾವುದೇ ಕೆಲಸಕ್ಕೆ ಕರೆದರೂ ನಿರಾಕರಿಸುತ್ತಿರಲಿಲ್ಲ. ನಾನು ಲೈಟ್ ವಿಚಾರದಲ್ಲಿ ಕರೆದಿದ್ದೆ. ಸರ್ಕಾರದ ಕೆಲಸಕ್ಕೆ ಹಣ ಪಡೆದಿಲ್ಲ. ಅವರ ಅತ್ತಿಗೆ ಎಲೆಕ್ಷನ್ ಗೆ ನಿಂತಾಗ ಅವರ ಮೇಲೆ ಒತ್ತಡವಿತ್ತು. ಆದರೂ ನಾನು ಅಪ್ಪನ ಹಾದಿಯಲ್ಲಿ ಸಾಗುತ್ತೇನೆ ಎಂದರು ಅಂತ ಪುನೀತ್ ನೆನಪನ್ನು ಮೆಲುಕು ಹಾಕಿಕೊಂಡರು. ಇದನ್ನೂ ಓದಿ: ಬೆಳೆದಿದ್ದು, ಬದುಕಿದ್ದು, ವಿದಾಯ ಹೇಳಿದ್ದೂ ಶ್ರೀಮಂತನಾಗಿ: ಕಿಚ್ಚ

    ತಂದೆ ರಾಜ್ ಕುಮಾರ್ ಮೇಲೆ ಅವರಿಗೆ ಬಹಳ ಗೌರವ. ಅಭಿಮಾನಿ ಅವರ ಮನೆ ಬಳಿಗೆ ಬಂದಾಗ ಎಲ್ಲರನ್ನೂ ಮಾತನಾಡಿಸುತ್ತಿದ್ದರು. ಈ ಮೂಲ ನಾನು ಬೇರೆ ಕಲಾವಿದರನ್ನು ಕೇಳಿಕೊಳ್ಳುತ್ತೇನೆ. ಪುನಿತ್ ಅವರಂತೆ ಅಜಾತಶತ್ರು ಮನೋಭಾವ ಸರಳತೆ ಬೆಳೆಸಿಕೊಳ್ಳಲಿ. ಅವರ ಪತ್ನಿ ಪುನೀತ್ ನಡೆಸಿದ ಸಂಸ್ಥೆಗಳನ್ನು ಮುನ್ನಡೆಸಬಹುದು. ನಾನು ಅಸೆಂಬ್ಲಿಯಲ್ಲಿ ಮಾತನಾಡುತ್ತೇನೆ. ನಮ್ಮ ಸಲಹೆಗಳನ್ನು ಹೇಳ್ತೇವೆ ಎಂದು ಡಿಕೆಶಿ ತಿಳಿಸಿದರು.

  • ಆಯಸ್ಸಲ್ಲಿ 10 ವರ್ಷ ಅಪ್ಪುಗೆ ಕೊಟ್ಟು ನನ್ನ ಆ ರೀತಿ ಮಾಡಿದ್ರೆ ಚೆನ್ನಾಗಿರ್ತಿತ್ತು: ಸೋಮಶೇಖರ್ ರೆಡ್ಡಿ ಕಣ್ಣೀರು

    ಆಯಸ್ಸಲ್ಲಿ 10 ವರ್ಷ ಅಪ್ಪುಗೆ ಕೊಟ್ಟು ನನ್ನ ಆ ರೀತಿ ಮಾಡಿದ್ರೆ ಚೆನ್ನಾಗಿರ್ತಿತ್ತು: ಸೋಮಶೇಖರ್ ರೆಡ್ಡಿ ಕಣ್ಣೀರು

    ಬೆಂಗಳೂರು: ನಮ್ಮ ವಯಸ್ಸಲ್ಲಿ ದೇವರು 10 ವರ್ಷ ಅವರಿಗೆ ಕೊಟ್ಟು ನಮ್ಮನ್ನು ಆ ರೀತಿ ಮಾಡಿದ್ರೆ ಚೆನ್ನಾಗಿರುತ್ತಿತ್ತು ಅನ್ನೋ ಭಾವನೆ ಬರುತ್ತಿದೆ ಎಂದು ಶಾಸಕ ಸೋಮಶೇಖರ್ ರೆಡ್ಡಿ ಕಂಬನಿ ಮಿಡಿದಿದ್ದಾರೆ.

    ಕಂಠೀರವ ಸ್ಟೇಡಿಯಂನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, 46 ವರ್ಷ ವಯಸ್ಸಲ್ಲೇ ಈ ರೀತಿ ಆಯ್ತು. ನಾನು ಕೆಎಂಎಫ್ ಚೇರ್ ಮನ್ ಇದ್ದಾಗ ಎಲ್ಲಾ ಜಾಹೀರಾತುಗಳಿಗೂ ಪುನೀತ್ ರಾಜ್ ಕುಮಾರ್ ಬರುತ್ತಿದ್ದರು. ಹೀಗೆ ಬಂದು ಹೋಗುವಾಗ ಹಣ ತಗೋ ಪುನೀತ್ ಅಂದ್ರೆ ಇಲ್ಲ ಅಣ್ಣ, ನಂದಿನಿ ನಮ್ಮ ಕರ್ನಾಟಕ ರೈತರದ್ದಾಗಿದೆ. ಹೀಗಾಗಿ ಅವರಿಂದ ಹಣ ಪಡೆದುಕೊಳ್ಳಬೇಡ ಸುಮ್ನೆ ಬರಬೇಕು ಎಂದು ಅಪ್ಪಾಜಿ ಹೇಳಿದ್ದಾರೆ ಎಂದು ಹೇಳುತ್ತಾ ಒಂದು ರೂಪಾಯಿನೂ ತೆಗೆದುಕೊಳ್ಳದೇ ಹೋಗುತ್ತಿದ್ದ ದೇವತಾ ಮನಷ್ಯ ಎಂದು ಗದ್ಗದಿತರಾದರು. ಇದನ್ನೂ ಓದಿ: ಪತಿ ನಿಧನದ ಸುದ್ದಿ ಕೇಳ್ತಿದ್ದಂತೆ ಕಣ್ಣೀರಿಡುತ್ತಲೇ ಮೌನಕ್ಕೆ ಶರಣಾದ ಪತ್ನಿ ಅಶ್ವಿನಿ

    ಸಹೋದರನಂತೆ ಇದ್ದ ಪುನೀತ್ ಅವರು ಬಳ್ಳಾರಿಗೆ ಹಲವು ಬಾರಿ ಬಂದಿದ್ದಾರೆ. ರಾಜ್ ಕುಮಾರ್ ಪಾರ್ಕ್ ಉದ್ಘಾಟನೆಗೆ ಬಂದಿದ್ದರು. ನಾನು ಮುನ್ಸಿಪಾಲಿಟಿ ಮೇಯರ್ ಇದ್ದಾಗ ರಾಜ್ ಕುಮಾರ್ ರಸ್ತೆ ಎಂದು ಒಂದು ರಸ್ತೆಗೆ ಹೆಸರಿಟ್ಟಿದ್ದೆ. ಅದಕ್ಕೂ ಅಪ್ಪು ಬಂದಿದ್ದರು. ಹೀಗೆ ಪ್ರತಿಯೊಂದು ಕಾರ್ಯಕ್ರಮಕ್ಕೆ ಬಂದಾಗಲೆಲ್ಲ ಅಣ್ಣಾ.. ಅಣ್ಣಾ ಅಂತಲೇ ಮಾತಾಡಿಸುತ್ತಿದ್ದರು ಎಂದು ಹೇಳುತ್ತಾ ಕಣ್ಣೀರು ಹಾಕಿದರು. ಇದನ್ನೂ ಓದಿ: ಶಿವಣ್ಣ ಆಲ್ ದಿ ಬೆಸ್ಟ್, ಎಲ್ಲರಿಗೂ ದೇವರು ಒಳ್ಳೆದು ಮಾಡ್ಲಿ – ಪುನೀತ್ ಕೊನೆ ಮಾತು

    ನಂದಿನಿ ಹಾಲಿನ ಎಲ್ಲಾ ಕಾರ್ಯಕ್ರಮಕ್ಕೂ ಪುನೀತ್ ಬರುತ್ತಿದ್ದರು. ಪ್ರೀತಿಯಿಂದ ಅಣ್ಣಾ ಎಂದು ಕರೆಯುತ್ತಿದ್ದರು. ದೇವರು ಅವರಿಗೆ ಒಳ್ಳೆಯ ಸಂಸ್ಕೃತಿ ಕೊಟ್ಟಿದ್ದಾರೆ. ತುಂಬಾ ಸಿಂಪ್ಲಿಸಿಟಿ ವ್ಯಕ್ತಿತ್ವ. ದೇವರು ಇಷ್ಟು ಚಿಕ್ಕ ವಯಸ್ಸಲ್ಲಿ ಕರೆದುಕೊಂಡಿದ್ದಾರೆ ಅಂದ್ರೆ ನಂಬೋಕೆ ಆಗ್ತಿಲ್ಲ. ನಮ್ಮ ವಯಸ್ಸಲ್ಲಿ ದೇವರು 10 ವರ್ಷ ಅವರಿಗೆ ಕೊಟ್ಟು ನಮ್ಮನ್ನು ಆ ರೀತಿ ಮಾಡಿದ್ರೆ ಚೆನ್ನಾಗಿರುತ್ತಿತ್ತು ಅನ್ನೋ ಭಾವನೆ ಬರುತ್ತಿದೆ. ನೋಡಿ ತಡೆದುಕೊಳ್ಳಲು ಆಗದಂತಹ ಪರಿಸ್ಥಿತಿ. ಹೀಗಾಗಿ ನಾನು ಸಹೋದರ ಜನಾರ್ದನ ರೆಡ್ಡಿ ಬಂದಿದ್ದೇವೆ ಎಂದರು. ಇದನ್ನೂ ಓದಿ: ತಂದೆಯಂತೆ ಎಡಗೈಯಲ್ಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗ್ಬಾರ್ದು ಅನ್ನೋ ವ್ಯಕ್ತಿತ್ವ ಅಪ್ಪುದು: ವಿ. ಮನೋಹರ್

    ಯಾವುದೇ ಜಾಹಿರಾತು ಮಾಡಿದ್ರೂ 1 ರೂ. ತೆಗೆದುಕೊಳ್ಳುತ್ತಿರಲಿಲ್ಲ. ಅಪ್ಪ ಹೇಳಿದ್ರು ಅಂತ ಅವರು ಹಣ ತೆಗೆದುಕೊಳ್ಳುತ್ತಿರಲಿಲ್ಲ. ಈ ಕಾಲದಲ್ಲಿ ಯಾವ ಮಕ್ಕಳು ಅಪ್ಪನ ಮಾತು ಕೇಳುತ್ತಾರೆ. ಅಂತದ್ರಲ್ಲಿ ಇವರು ಅಪ್ಪನ ಮಾತನ್ನು ನಡೆಸಿಕೊಂಡು ಬಂದ್ರು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಕರಗದ ಅಪ್ಪು ಅಭಿಮಾನಿಗಳ ಸಾಗರ – ನೂಕುನುಗ್ಗಲು, ಬ್ಯಾರಿಕೇಡ್ ತಳ್ಳಿ ಆಕ್ರಂದನ

    ಕಳೆದ ಬಾರಿ ದುರ್ಗಮ್ಮ ಗುಡಿಯತ್ತ ಸಾಂಗ್ ಮಾಡಿದ್ದರು. ದುರ್ಗಮ್ಮ ಗುಡಿ ಬಹಳ ಫೇಮಸ್. ಅಲ್ಲಿ ನಮಗೆ ತುಂಬಾ ಜನ ಅಭಿಮಾನಿಗಳಿದ್ದಾರೆ ಎಂದು ಅಪ್ಪ-ಅಮ್ಮ ಹೇಳುತ್ತಿದ್ದರಂತೆ. ಹೀಗಾಗಿ ಅಲ್ಲಿಗೆ ಬಂದಿದ್ದಾಗ ಭೇಟಿಯಾಗಿದ್ದೆ. ಅದೇ ನಮ್ಮಿಬ್ಬರ ಕೊನೆಯ ಭೇಟಿಯಾಗಿದೆ. ಸದ್ಯ ಏನೂ ಹೇಳೋಕು ಆಗ್ತಿಲ್ಲ ಎಂದು ರೆಡ್ಡಿ ಅತ್ತು ಬಿಟ್ಟರು.

  • ತಂದೆಯಂತೆ ಎಡಗೈಯಲ್ಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗ್ಬಾರ್ದು ಅನ್ನೋ ವ್ಯಕ್ತಿತ್ವ ಅಪ್ಪುದು: ವಿ. ಮನೋಹರ್

    ತಂದೆಯಂತೆ ಎಡಗೈಯಲ್ಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗ್ಬಾರ್ದು ಅನ್ನೋ ವ್ಯಕ್ತಿತ್ವ ಅಪ್ಪುದು: ವಿ. ಮನೋಹರ್

    ಬೆಂಗಳೂರು: ತಂದೆ ದಿ. ಡಾ. ರಾಜ್ ಕುಮಾರ್ ಅವರಂತೆ ಎಡಗೈಯಲ್ಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗಬಾರದು ಅನ್ನೋ ವ್ಯಕ್ತಿತ್ವ ಪುನೀತ್ ಅವರದ್ದಾಗಿದೆ ಎಂದು ಸಂಗೀತ ನಿದೇರ್ಶಕ ವಿ ಮನೋಹರ್ ಹೇಳಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಪುನೀತ್ ಜೊತೆ 25 ವರ್ಷಗಳಿಂದ ಒಡನಾಟ ಇದೆ. ಅಣ್ಣಬಾಂಡ್, ಅಂಜನಿ ಪುತ್ರ ಎರಡು ಸಿನಿಮಾದಲ್ಲಿ ಆಕ್ಟ್ ಮಾಡಿದ್ದೀನಿ. ಸಿಕ್ಕಾಗಲ್ಲೆ ರಿದಮ್ ಬಗ್ಗೆ ಮಾಹಿತಿ ಕೊಡೋರು. ಅವರಿಗೆ ತುಂಬಾ ಪ್ರೀತಿ ಇತ್ತು ಎಂದು ಭಾವುಕರಾದರು. ಇದನ್ನೂ ಓದಿ: ಕರಗದ ಅಪ್ಪು ಅಭಿಮಾನಿಗಳ ಸಾಗರ – ನೂಕುನುಗ್ಗಲು, ಬ್ಯಾರಿಕೇಡ್ ತಳ್ಳಿ ಆಕ್ರಂದನ

    ತಂದೆಯ ರೀತಿಯಲ್ಲಿಯೇ ಎಡಗೈಯಲ್ಲಿ ಕೊಟ್ಟಿದ್ದು ಬಲಗೈಯಲ್ಲಿ ಗೊತ್ತಾಗಬಾರದು ಎನ್ನುವಂತಹ ವ್ಯಕ್ತಿತ್ವ ಅವರದ್ದು. ಸಂಘ ಸಂಸ್ಥೆಗಳಿಗೆ ತುಂಬಾ ಸಹಾಯ ಮಾಡುತ್ತಿದ್ದರು. ತುಂಬಾ ಫಿಟ್ ಆಗಿದ್ದ ಪುನೀತ್‍ಗೆ ಹೀಗೆ ಯಾಕಾಯ್ತು. ಪುನೀತ್ ಹಾಡು ಹಾಡೋಣ ಅಂತ ಒಂದು ಹಾಡು ರೆಡಿ ಮಾಡೋಕೆ ಹೇಳಿದ್ರು. ಅಷ್ಟರಲ್ಲಿ ಪುನೀತ್ ಗೆ ಹೀಗಾಯ್ತು ಎಂದು ಗದ್ಗದಿತರಾದರು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ಬಗ್ಗೆ ಕೊನೆಯದಾಗಿ ವಿಶೇಷ ಪೋಸ್ಟ್ ಮಾಡಿದ್ದ ಅಪ್ಪು

    ನಿನ್ನೆ ಬೆಳಗ್ಗೆ ಅಪ್ಪುಗೆ ಹೃದಯಾಘಾತವಾಗಿತ್ತು. ಕೂಡಲೇ ಅವರು ಸ್ಥಳೀಯ ರಮಣಶ್ರೀ ಕ್ಲಿನಿಕ್ ಗೆ ತೆರಳಿದ್ದಾರೆ. ಅಲ್ಲಿ ಇಸಿಜಿ ಮಾಡಿಸಿಕೊಂಡು ಇನ್ನೇನು ಮನೆ ಕಡೆ ತೆರಳುವಷ್ಟರಲ್ಲಿ ಅಲ್ಲಿಯೇ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ಕಾರಿನಲ್ಲಿಯೇ ವಿಕ್ರಂ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ, ಫಲಕಾರಿಯಾಗದೇ ನಿಧನರಾಗಿದ್ದಾರೆ. ಪುನೀತ್ ಅವರು ಓರ್ವ ಪುತ್ರಿ ಅಮೆರಿಕದಲ್ಲಿದ್ದು, ಅವರ ಬರುವಿಕೆಯ ನಂತರ ಅಂತ್ಯಕ್ರಿಯೆ ನಡೆಯಲಿದೆ.

  • ಕರಗದ ಅಪ್ಪು ಅಭಿಮಾನಿಗಳ ಸಾಗರ – ನೂಕುನುಗ್ಗಲು, ಬ್ಯಾರಿಕೇಡ್ ತಳ್ಳಿ ಆಕ್ರಂದನ

    ಕರಗದ ಅಪ್ಪು ಅಭಿಮಾನಿಗಳ ಸಾಗರ – ನೂಕುನುಗ್ಗಲು, ಬ್ಯಾರಿಕೇಡ್ ತಳ್ಳಿ ಆಕ್ರಂದನ

    – ಕಾಲ್ತುಳಿತಕ್ಕೆ ಮೂವರಿಗೆ ಗಾಯ

    ಬೆಂಗಳೂರು: ಕನ್ನಡ ಚಿತ್ರರಂಗದ ಪ್ರೀತಿಯ ಅಪ್ಪು ಅಕಾಲಿಕ ನಿಧನ ಇಡೀ ಚಿತ್ರರಂಗ, ಅಭಿಮಾನಿಗಳು ಹಾಗೂ ರಾಜ್ಯಕ್ಕೆ ಆಘಾತ ತಂದಿದೆ. ನಗರದ ಕಂಠೀರವ ಸ್ಟೇಡಿಯಂನಲ್ಲಿ ನಟನ ಅಂತಿಮ ದರ್ಶನ ನಡೆಯುತ್ತಿದ್ದು, ಅಭಿಮಾನಿಗಳ ಸಾಗರವೇ ನೆರೆದಿದೆ.

    ರಾಜ್ಯದ ವಿವಿಧ ಜಿಲ್ಲೆಗಳಿಂದ ಪುನೀತ್ ಅಂತಿಮ ದರ್ಶನಕ್ಕೆ ಅಭಿಮಾನಿಗಳು ಬರುತ್ತಿದ್ದಾರೆ. ರಾತ್ರಿಯಿಡೀ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟರೂ ಜನಸಾಗರ ಇನ್ನೂಕರಗಿಲ್ಲ. ಬೆಳಗ್ಗಿನ ಜಾವ ಆಗ್ತಿದ್ರೂ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಪೊಲೀಸರು ಕೂಡ ಜನರನ್ನ ತಾಳ್ಮೆಯಿಂದ ನಿಯಂತ್ರಿಸುತ್ತಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ಬಗ್ಗೆ ಕೊನೆಯದಾಗಿ ವಿಶೇಷ ಪೋಸ್ಟ್ ಮಾಡಿದ್ದ ಅಪ್ಪು

    ಉತ್ತರ ಕರ್ನಾಟಕ ಭಾಗದಿಂದ ಬಸ್ ಗಳನ್ನು ಮಾಡಿಕೊಂಡು ಅಭಿಮಾನಿಗಳು ಅಪ್ಪು ಅಂತಿಮ ದರ್ಶನ ಪಡೆಯಲು ಬಂದಿದ್ದಾರೆ. ಮಕ್ಕಳು, ಯುವಕರು, ವಯೋವೃದ್ಧರು ಕೂಡ ಅಂತಿಮ ದರ್ಶನ ಪಡೆಯುತ್ತಿದ್ದು, ಬೆಳಗ್ಗೆ ಗಂಟೆ ಐದಾದ್ರು ಅಭಿಮಾನಿ ಸಮೂಹ ಮುಗಿಯಲಿಲ್ಲ. ನೆಚ್ಚಿನ ನಾಯಕನ ಅಂತಿಮ ದರ್ಶನಕ್ಕೆ ರಾತ್ರಿಯಿಡೀ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಬ್ಯಾರಿಕೇಡ್ ಗಳನ್ನು ತಳ್ಳಿ ಅಭಿಮಾನಿಗಳ ಆಕ್ರಂದನ ಮುಗಿಲುಮುಟ್ಟಿತ್ತು. ಇನ್ನು ಅಂತಿಮ ದರ್ಶನ ಪಡೆಯುತ್ತಿದ್ದ ಸಂದರ್ಭದಲ್ಲಿ ಕಾಲ್ತುಳಿತದಿಂದ ಮೂವರು ಗಾಯಗೊಂಡಿರುವ ಪ್ರಸಂಗ ಕೂಡ ನಡೆದಿದೆ. ಇದನ್ನೂ ಓದಿ: 2 ಗಂಟೆ ವ್ಯಾಯಾಮ, ಮೂರು ಗಂಟೆ ಐಸಿಯುನಲ್ಲಿ ಚಿಕಿತ್ಸೆ – ಪುನೀತ್ ಕೊನೆಕ್ಷಣ ಹೀಗಿತ್ತು

    ಸಮಯ ಕಳೆದಂತೆ ಅಭಿಮಾನಿಗಳು ಸಂಖ್ಯೆ ಈಗ ಮತ್ತಷ್ಟು ಹೆಚ್ಚಾಗುತ್ತಿದೆ. ಬೆಳಗಾಗುತ್ತಿದ್ದಂತೆ ಮತ್ತಷ್ಟು ಜನ ಕಂಠೀರವ ಸ್ಟೂಡಿಯೋ ನತ್ತ ಆಗಮಿಸುತ್ತಿದ್ದಾರೆ. ರಾಜ್ಯ ಮತ್ತು ಅಂತರಾಜ್ಯಗಳಿಂದ ಜನ ಬರುತ್ತಿದ್ದಾರೆ. ಸೂರ್ಯೋದಯ ಬಳಿಕ ಮತ್ತಷ್ಟು ಜನ ಹೆಚ್ಚಾಗೋ ಸಾಧ್ಯತೆ ಇದ್ದು, ಬೆಳಗಾಗುತ್ತಿದ್ದಂತೆ ಪೊಲೀಸರು ಮತ್ತಷ್ಟು ಅಲರ್ಟ್ ಆಗುತ್ತಿದ್ದಾರೆ. ಇದನ್ನೂ ಓದಿ: ಯುವಕರ ಕಣ್ಮಣಿ, ಯೂತ್ ಐಕಾನ್ ಆಗಿದ್ರು ಪುನೀತ್- ಸಿಎಂ

    ನಿನ್ನೆ ಬೆಳಗ್ಗೆ ಅಪ್ಪುಗೆ ಹೃದಯಾಘಾತವಾಗಿತ್ತು. ಕೂಡಲೇ ಅವರು ಸ್ಥಳೀಯ ರಮಣಶ್ರೀ ಕ್ಲಿನಿಕ್ ಗೆ ತೆರಳಿದ್ದಾರೆ. ಅಲ್ಲಿ ಇಸಿಜಿ ಮಾಡಿಸಿಕೊಂಡು ಇನ್ನೇನು ಮನೆ ಕಡೆ ತೆರಳುವಷ್ಟರಲ್ಲಿ ಅಲ್ಲಿಯೇ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ಕಾರಿನಲ್ಲಿಯೇ ವಿಕ್ರಂ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಪುನೀತ್ ಪುತ್ರಿ ಅಮೆರಿಕದಲ್ಲಿದ್ದು, ಅವರ ಬರುವಿಕೆಯ ನಂತರ ಅಂತ್ಯಕ್ರಿಯೆ ನಡೆಯಲಿದೆ.

  • ಹೊಗಳಿದರೆ ಮಾತು ಬೇರೆ ಟಾಪಿಕ್‌ಗೆ ಹೋಗುತ್ತಿತ್ತು, ಮೂಡಾಫ್ ಆಗಿದ್ದನ್ನು ನೋಡಿಲ್ಲ

    ಹೊಗಳಿದರೆ ಮಾತು ಬೇರೆ ಟಾಪಿಕ್‌ಗೆ ಹೋಗುತ್ತಿತ್ತು, ಮೂಡಾಫ್ ಆಗಿದ್ದನ್ನು ನೋಡಿಲ್ಲ

    – ಎಲ್ಲರೂ ದುಡ್ಡು ಗೆಲ್ಲಬೇಕು, ಎಲ್ಲರೂ ಖುಷಿಯಾಗಿರಬೇಕು
    – ಅಪ್ಪು ವ್ಯಕ್ವಿತ್ವ, ಸರಳತೆಯ ಬಗ್ಗೆ ಪರಮೇಶ್ವರ್‌ ಗುಂಡ್ಕಲ್‌ ಪೋಸ್ಟ್‌

    ಬೆಂಗಳೂರು: “ಕೋಟ್ಯಧಿಪತಿ ಎಪಿಸೋಡ್ ಶೂಟ್ ಆಗುವಾಗ ಪ್ರತೀ ಪ್ರಶ್ನೆಗೂ ಕಂಟೆಸ್ಟೆಂಟುಗಳಿಗಿಂತ ಹೆಚ್ಚು ಒತ್ತಡದಲ್ಲಿ ಇರುತ್ತಿದ್ದುದು ಸ್ವತಃ ಅಪ್ಪು. ಎಲ್ಲರೂ ದುಡ್ಡು ಗೆಲ್ಲಬೇಕು, ಎಲ್ಲರೂ ಖುಷಿಯಾಗಿರಬೇಕು ಎಂದು ಪ್ರಾಮಾಣಿಕವಾಗಿ ಆಸೆಪಡುತ್ತಿದ್ದ ಒಳ್ಳೆ ಮನಸ್ಸು. ಮೂರು ಲಕ್ಷ ಇಪ್ಪತ್ತು ಸಾವಿರದ ನಂತರ ಪ್ರತಿ ಪ್ರಶ್ನೆಯೂ ಅವರನ್ನು ಸಿಕ್ಕಾಪಟ್ಟೆ ನರ್ವಸ್ ಮಾಡುತ್ತಿತ್ತು” – ಇದು ಕಲರ್ಸ್‌ ವಾಹಿನಿಯ ಬಿಸಿನೆಸ್‌ ಹೆಡ್‌ ಪರಮೇಶ್ವರ್‌ ಗುಂಡ್ಕಲ್‌ ಅವರು ಅಪ್ಪು ಬಗ್ಗೆ ಬರೆದ ಸಾಲುಗಳು.

    ಫೇಸ್‌ಬುಕ್‌ನಲ್ಲಿ ಪರಮೇಶ್ವರ್‌ ಗುಂಡ್ಕಲ್‌ ಅವರು ಪುನೀತ್‌ ಅವರ ಜೊತೆಗಿನ ಶೂಟಿಂಗ್‌ ಸಮಯ, ವ್ಯಕ್ವಿತ್ವ, ಸರಳತೆಯ ಬಗ್ಗೆ ಪೋಸ್ಟ್‌ ಮಾಡಿದ್ದು ಅದನ್ನು ಯಥಾವತ್ತಾಗಿ ನೀಡಲಾಗಿದೆ.


    ಪೋಸ್ಟ್‌ನಲ್ಲಿ ಏನಿದೆ?
    ಕೊನೆಯ ಸಲ ಮಾತಾಡಿದ್ದು ಸದಾಶಿವ ನಗರದ ಕಚೇರಿಯಲ್ಲಿ. ಆಫೀಸಿನ ಹೊರಗೆ, ಕೆಳಗಡೆ, ಮೇಲ್ಗಡೆ ಎಲ್ಲಾ ಕಡೆ ಹುಡುಗರು ಓಡಾಡ್ತಾ ಇದ್ದಿದ್ದು ನೋಡಿ ಆಶ್ಚರ್ಯವಾಗಿತ್ತು. “ಅಪ್ಪು ಸರ್‍, ಆಫೀಸೇನು ಇಷ್ಟು ಬ್ಯುಸಿಯಾಗಿದೆ’ ಎಂದು ಕೇಳಿದರೆ ನಕ್ಕರು. ಇದಕ್ಕಿಂತ ನಿಷ್ಕಲ್ಮಶವಾಗಿ ನಗೋದು ಸಾಧ್ಯವೇ ಇಲ್ಲ ಅನ್ನುವ ಹಾಗೆ ಇತ್ತು ಅವರ ನಗು.

    ಮನೆಗೆ ಹೋದರೂ, ಆಫೀಸಿಗೆ ಹೋದರೂ, ಅವರ ಕಾರಾವಾನಲ್ಲಿ ಭೇಟಿಯಾದರೂ ಬಂದೇ ಬರುವ ಫಿಲ್ಟರ್‍ ಕಾಫೀ ಬಂತು. “ಮೂರು ಪ್ರೊಡಕ್ಷನ್ನುಗಳು ನಡೀತೀವೆ. ಅದಕ್ಕೇ ಆಫೀಸು ಇಷ್ಟು ಬ್ಯುಸಿ’ ಎಂದು ಉತ್ಸಾಹದಿಂದ ಮಾತಾಡಿದರು. ಕರ್ನಾಟಕದ ಬಗ್ಗೆ ಸುಮಾರು ದಿನಗಳಿಂದ ಅವರೊಂದು ಡಾಕ್ಯುಮೆಂಟರಿ ಮಾಡುತ್ತಿರುವುದರ ಬಗ್ಗೆ ಮಾತು ಬಂತು. ಇದನ್ನ ಥಿಯೇಟರಲ್ಲಿ ರಿಲೀಸ್ ಮಾಡಿದ್ರೆ ಹೇಗಿರುತ್ತೆ ಅಂತ ಕೇಳುತ್ತಾ ನಾಲ್ಕೈದು ನಿಮಿಷಗಳ ಕ್ಲಿಪ್ಪಿಂಗ್ ತೋರಿಸಿದರು. ರೋಮಾಂಚನ ಆಗುವಂಥ ವಿಷ್ಯುವಲ್ಲುಗಳು ಅದರಲ್ಲಿದ್ದವು. ’ಇದು ಅದ್ಭುತವಾಗಿದೆ” ಎಂದು ಹೇಳಿದಾಗ ಮತ್ತೆ ಅದೇ ನಿಷ್ಕಲ್ಮಷವಾದ ನಗು. ಹೊಗಳಿದರೆ ಸಂಕೋಚದಿಂದ ಅಪ್ಪು ಯಾವಾಗಲೂ ಮಾತು ಬದಲಾಯಿಸಿಬಿಡುತ್ತಿದ್ದರು.

    ಸಣ್ಣ ಸಣ್ಣ ವಿಷಯಗಳಿಗೇ ಸಿಕ್ಕಾಪಟ್ಟೆ ಖುಷಿ ಪಡುತ್ತಿದ್ದ ದೊಡ್ಡ ಮನಸ್ಸು. ಸೆಟ್ಟಲ್ಲಿ ಅವರು ಟೆನ್ಶನ್ ಮಾಡಿಕೊಂಡಿದ್ದನ್ನು ಅಷ್ಟು ದಿನಗಳಲ್ಲಿ ಒಂದು ಸಲವೂ ನೋಡಿಲ್ಲ. ಚೆನ್ನಾಗಿ ಊಟ ಮಾಡಿ ಅಂತ ಯಾವಾಗಲೂ ಹೇಳ್ತಿದ್ರು. ಸೀಸನ್ನಲ್ಲಿ ಒಂದು ಸಲವಾದ್ರೂ ಚಿತ್ರೀಕರಣ ತಂಡದಲ್ಲಿರೋ ಎಲ್ಲರಿಗೂ ಅವರ ಕಡೆಯಿಂದ ಒಂದು ಊಟ ಬರಲೇಬೇಕು. ಎಲ್ಲರಿಗೂ ಅವರ ಕಡೆಯಿಂದ ಒಂದು ಗಿಫ್ಟ್ ಕೊಡಲೇಬೇಕು. ಇದನ್ನೆಲ್ಲಾ ಅವರು ತುಂಬಾ ಸಹಜವಾಗಿ, ಇದೊಂದು ವಿಷಯವೇ ಅಲ್ಲ ಅನ್ನುವ ಹಾಗೆ ಸದ್ದಿಲ್ಲದೇ ಮಾಡುತ್ತಿದ್ದರು. ಆಡಂಬರವೇ ಇಲ್ಲದೇ ಒಬ್ಬ ಸ್ಟಾರ್‍ ಹೇಗೆ ಆಗೋದಕ್ಕೆ ಸಾಧ್ಯ ಎನ್ನುವ ಪ್ರಶ್ನೆಗೆ ಉತ್ತರದ ಥರ ಇದ್ದರು ಅಪ್ಪು.

    ಕೋಟ್ಯಧಿಪತಿ ಎಪಿಸೋಡ್ ಶೂಟ್ ಆಗುವಾಗ ಪ್ರತೀ ಪ್ರಶ್ನೆಗೂ ಕಂಟೆಸ್ಟೆಂಟುಗಳಿಗಿಂತ ಹೆಚ್ಚು ಒತ್ತಡದಲ್ಲಿ ಇರುತ್ತಿದ್ದುದು ಸ್ವತಃ ಅಪ್ಪು. ಎಲ್ಲರೂ ದುಡ್ಡು ಗೆಲ್ಲಬೇಕು, ಎಲ್ಲರೂ ಖುಷಿಯಾಗಿರಬೇಕು ಎಂದು ಪ್ರಾಮಾಣಿಕವಾಗಿ ಆಸೆಪಡುತ್ತಿದ್ದ ಒಳ್ಳೆ ಮನಸ್ಸು. ಮೂರು ಲಕ್ಷ ಇಪ್ಪತ್ತು ಸಾವಿರದ ನಂತರ ಪ್ರತಿ ಪ್ರಶ್ನೆಯೂ ಅವರನ್ನು ಸಿಕ್ಕಾಪಟ್ಟೆ ನರ್ವಸ್ ಮಾಡುತ್ತಿತ್ತು. ತಪ್ಪು ಉತ್ತರ ಕೊಟ್ಟಾಗ ಕಂಟೆಸ್ಟೆಂಟುಗಳಿಗಿಂತ ಹೆಚ್ಚು ನಿರಾಶೆ ಆಗುತ್ತಿದ್ದದ್ದು ಅಪ್ಪುಗೆ. ಸರಿ ಉತ್ತರ ಕೊಟ್ಟಾಗ ಅವರ ದನಿಯಲ್ಲಿ ಸಿಕ್ಕಾಪಟ್ಟೆ ಎಕ್ಸೈಟ್ಮೆಂಟ್. ಯಾರಾದ್ರೂ ಕೋಟಿ ಗೆಲ್ಲಬೇಕು ಎಂದು ಸಾವಿರ ಸಲ ಹೇಳುತ್ತಿದ್ದರು. ತಪ್ಪು ಉತ್ತರ ಕೊಟ್ಟು ಯಾರಾದರೂ ದುಡ್ಡು ಸೋತರೆ ಶೂಟಿಂಗ್ ಮುಗಿದ ಮೇಲೆ ಸಿಕ್ಕಾಪಟ್ಟೆ ಬೇಜಾರು ಮಾಡಿಕೊಳ್ಳುತ್ತಿದ್ದರು. ಗೆಲ್ಲದ ಎಷ್ಟೋ ಜನರಿಗೆ ತಾವೇ ದುಡ್ಡು ಕೊಡುತ್ತಿದ್ದರು ಮತ್ತು ಅದು ಎಲ್ಲೂ ಸುದ್ದಿಯಾಗದ ಹಾಗೆ ನೋಡಿಕೊಳ್ಳುತ್ತಿದ್ದರು. ಎಲ್ಲರಿಗೂ ಸಿಕ್ಕಾಪಟ್ಟೆ ದುಡ್ಡು ಸಿಗಬೇಕು, ಯಶಸ್ಸು ಸಿಗಬೇಕು, ಎಲ್ಲರೂ ದೇಶ ಸುತ್ತಬೇಕು, ಖುಷಿಯಾಗಿರಬೇಕು ಅಂತ ಬಹಳ ಪ್ರಾಮಾಣಿಕವಾಗಿ ಆಸೆ ಪಡುತ್ತಿದ್ದ ವ್ಯಕ್ತಿ.

    ಅಷ್ಟೊಂದು ದಿನಗಳಲ್ಲಿ ಒಂದು ದಿನವೂ ಅವರ ಮೂಡಾಫ್ ಆಗಿದ್ದನ್ನ ನೋಡಲಿಲ್ಲ. ಟೆನ್ಶನ್ ಮಾಡಿಕೊಂಡಿದ್ದನ್ನ ನೋಡಲಿಲ್ಲ. ಬೇರೆಯವರ ಬಗ್ಗೆ ಮಾತಾಡಿದ್ದು ಕೇಳಿಲ್ಲ. ಬೇಡದ್ದನ್ನು ಮಾತಾಡಿದ್ದು ನೆನಪಿಲ್ಲ. ಅವರನ್ನು ಹೊಗಳಿದರೆ ಮಾತು ಬೇರೆ ಟಾಪಿಕ್ಕಿಗೆ ಹೋಗುತ್ತಿತ್ತು. ಬೇರೆ ಬೇರೆ ವೆಬ್ ಸೀಸನ್ನುಗಳ ಬಗ್ಗೆ ಮಾತಾಡುತ್ತಿದ್ದರೆ ಅವರ ಕಣ್ಣುಗಳು ಹೊಳೆಯುತ್ತಿದ್ದವು. ಅವರು ನೋಡಿದ ಅದ್ಭುತವಾದ ಟೆಕ್ನಿಷಿಯನ್ನುಗಳ ಬಗ್ಗೆ, ಬೇರೆ ಬೇರೆ ದೇಶಗಳ ಜಾಗಗಳ ಬಗ್ಗೆ, ಅಲ್ಲಿ ಓಡಿಸಿದ ಸೈಕಲ್ಲುಗಳ ಬಗ್ಗೆ, ತಿಂಡಿ ಬಗ್ಗೆ ಖುಷಿಯಿಂದ ಮಾತಾಡುತ್ತಿದ್ದರೆ ಅವರಿಗೆ ಸುಸ್ತಾಗುತ್ತಲೇ ಇರಲಿಲ್ಲ.

    ಇಂದು ಮಧ್ಯಾಹ್ನ ಸುದ್ದಿ ಬಂದು ಮನಸ್ಸಿಗೆ ಸಿಕ್ಕಾಪಟ್ಟೆ ಕಳವಳ ಆಗಿ ವಿಕ್ರಮ್ ಆಸ್ಪತ್ರೆಗೆ ಹೋದರೆ ಅಲ್ಲಿಯೂ ಅವರು ಅದೇ ನೆಮ್ಮದಿಯಿಂದ ಮಲಗಿದ್ದಾರೆ ಅನಿಸಿತು. ಅವರು ಮಲಗಿದ್ದನ್ನು ಯಾವತ್ತೂ ನೋಡಿರಲಿಲ್ಲ. ಯಾರಿಗೋ ಒಳ್ಳೆಯದಾಗಿದ್ದರ ಬಗ್ಗೆ ಮಾತಾಡಿದರೆ, ಯಾವುದೋ ತಿಂಡಿ ಬಗ್ಗೆ ಮಾತಾಡಿದರೆ ಎದ್ದು ಕುಳಿತುಕೊಳ್ಳುತ್ತಾರೆ ಅನಿಸಿತು. ಯಾರಾದರೂ ಕೋಟಿ ಗೆಲ್ಲಬೇಕು ಎಂದು ಆಸೆಪಟ್ಟು ಮಾತಾಡುತ್ತಾರೆ ಅನಿಸಿತು. ಇತ್ತೀಚೆಗೆ ನೋಡಿದ ಒಂದು ಒಳ್ಳೆಯ ಸಿನಿಮಾ ಅಥವಾ ಕ್ಯಾರೆಕ್ಟರ್‍ ಬಗ್ಗೆ ಚರ್ಚೆ ಮಾಡುತ್ತಾರೆ ಅಂತ ಅನಿಸಿತು. ಇತ್ತೀಚೆಗೆ ಭೇಟಿಯಾದ ಒಳ್ಳೆಯ ಬರಹಗಾರ ಅಥವಾ ಕೇಳಿದ ಸ್ಕ್ರಿಪ್ಟ್ ಬಗ್ಗೆ ಮಾತಾಡುತ್ತಾರೆ ಎಂದು ಸುಮಾರು ನಿಮಿಷ ಕಾದೆ.

    ಮಲಗಿದ್ದ ಅವರು ಏಳಲಿಲ್ಲ
    ಹೊರಗೆ ಅವರ ಸ್ಟಾಫ್ ಬಿಕ್ಕಿಬಿಕ್ಕಿ ಅಳುತ್ತಿರುವುದು ನೋಡಿದಾಗ ಸಂಕಟವಾಯಿತು. ಕರುಳು ಕಿವುಚುವಂತೆ ಸದ್ದು ಮಾಡುತ್ತಾ ಮಿಲ್ಲರ್ಸ್ ರಸ್ತೆಯಲ್ಲಿ ಇವತ್ತು ಹೊರಟ ಆಂಬುಲೆನ್ಸ್ ನೋಡಿದಾಗ ಅದೇ ರಸ್ತೆಯಲ್ಲಿ ಸ್ವತಃ ಅವರೇ ಡ್ರೈವ್ ಮಾಡಿಕೊಂಡು ಬಂದು ನಮ್ಮ ಆಫೀಸಿನ ಮುಂದೆ ಕಾರು ನಿಲ್ಲಿಸಿದ್ದು, ಕೇಳಿದವರಿಗೆಲ್ಲಾ ಸಿಟ್ಟು ಮಾಡಿಕೊಳ್ಳದೇ ಫೋಟೋ ಕೊಟ್ಟಿದ್ದು, ಲಿಫ್ಟಲ್ಲಿ ಸಿಕ್ಕವರ ಕಷ್ಟ ಸುಖ ಕೇಳಿದ್ದು, ಆಫೀಸಿನಲ್ಲಿ ಸಣ್ಣ ಹುಡುಗನ ಬೇಡಿಕೆಗೂ ಸ್ಪಂದಿಸಿದ್ದೆಲ್ಲಾ ನೆನಪಾಗಿ ದೇವರ ಮೇಲೆ ಸಿಟ್ಟು ಬಂತು.

    ತಿರುಪತಿ ಬೆಟ್ಟವನ್ನು ಕೇವಲ 98 ನಿಮಿಷದಲ್ಲಿ ಹತ್ತಿದ್ದರ ಬಗ್ಗೆ ಸಂಭ್ರಮದಿಂದ ಮಾತಾಡುತ್ತಾ ಮುಂದಿನ ಸಲ ಹೋಗುವಾಗ ಖಂಡಿತಾ ಕಾಲ್ ಮಾಡುತ್ತೇನೆ ಎಂದಿದ್ದು ನೆನಪಾಯಿತು. ಪ್ರತಿಕ್ಷಣವನ್ನೂ ಇವರು ಹೇಗೆ ಇಷ್ಟು ಪ್ರೀತಿಯಿಂದ ಬದುಕುತ್ತಾರೆ ಎನ್ನುವುದು ಅಪ್ಪುವನ್ನು ನೋಡಿದ ಎಲ್ಲರಿಗೂ ಕಾಡಿರಬಹುದಾದ ಪ್ರಶ್ನೆ. ಬೇಗ ಹೋಗಬೇಕು ಎಂದು ಗೊತ್ತಿದ್ದರಿಂದಲೇ ಅವರು ಇದ್ದಷ್ಟು ದಿನವನ್ನು ಇಷ್ಟು ಜೀವನಪ್ರೀತಿಯ ಜೊತೆ ಬದುಕಿದರಾ? ಇನ್ನೊಂದಿಷ್ಟು ನಿಮಿಷಗಳು ಇದ್ದಿದ್ದರೆ ಏನೂ ಆಗುತ್ತಿರಲಿಲ್ಲ. ಮೇಲೆ ಹೋಗಲು ಅಷ್ಟೊಂದು ಅವಸರ ಬೇಕಾಗಿರಲಿಲ್ಲ. ಮತ್ತೆ ಬನ್ನಿ!

  • ಏರ್‌ಪೋರ್ಟಲ್ಲಿ ಪವರ್ ಸ್ಟಾರ್ ಅಪ್ಪುಗೆ ಎದುರಾದ ಗೂಗ್ಲಿ!

    ಏರ್‌ಪೋರ್ಟಲ್ಲಿ ಪವರ್ ಸ್ಟಾರ್ ಅಪ್ಪುಗೆ ಎದುರಾದ ಗೂಗ್ಲಿ!

    ಬೆಂಗಳೂರು: ಕೆಲ ಸಂದರ್ಭಗಳಲ್ಲಿ ಸೆಲೆಬ್ರಿಟಿಗಳ ನಡುವೆ ಅನಿರೀಕ್ಷಿತ ಭೇಟಿ ಸಂಭವಿಸುತ್ತೆ. ಹಾಗೆ ಸಿಕ್ಕಾಗ ಯಾವ ಕ್ಷೇತ್ರದವರೇ ಆಗಿದ್ದರೂ ಪರಸ್ಪರ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸುತ್ತಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೂ ಕೂಡಾ ಚೆನ್ನೈ ಏರ್‌ಪೋರ್ಟನಲ್ಲಿ ಅಂಥಾದ್ದೇ ಒಂದು ವಿಶೇಷ ವ್ಯಕ್ತಿತ್ವ ಹಠಾತ್ತನೆ ಎದುರಾಗಿದೆ!

    ಕೆಲಸದ ನಿಮಿತ್ತವಾಗಿ ಚೆನ್ನೈಗೆ ತೆರಳಿದ್ದ ಪುನೀತ್ ವಾಪಾಸಾಗುವಾಗ ಏರ್ ಪೋರ್ಟಿನಲ್ಲಿ ಅನಿಲ್ ಕುಂಬ್ಳೆ ಕಾಣಿಸಿಕೊಂಡಿದ್ದಾರೆ. ಸ್ವತಃ ಪುನೀತ್ ಅವರೇ ಬಳಿ ಸಾಗಿ ಮಾತಾಡಿಸಿದಾಗ ಹೌಹಾರಿದ ಕುಂಬ್ಳೆ ಆಲಿಂಗಿಸಿಕೊಂಡು ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ನಂತರ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದ್ದಾರೆ.

    ನಂತರ ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ಪುನೀತ್ ಅನಿಲ್ ಕುಂಬ್ಳೆಯವರನ್ನು ಭೇಟಿ ಮಾಡಿದ ಬಗ್ಗೆ ಖುಷಿಯಿಂದ ಹೇಳಿಕೊಂಡರೆ, ಅತ್ತ ಕುಂಬ್ಳೆ ಸಹ ಈ ಫೋಟೋ ಜಾಹೀರು ಮಾಡಿ ಪವರ್ ಸ್ಟಾರ್ ಭೇಟಿಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

    ವಿಶೇಷವೆಂದರೆ ಈ ಭೇಟಿ ಅನಿರೀಕ್ಷಿತವಾಗಿದ್ದರೂ ಅನಿಲ್ ಕುಂಬ್ಳೆ ಮತ್ತು ಪುನೀತ್ ರಾಜ್ ಕುಮಾರ್ ಕಪ್ಪು ಬಣ್ಣದ ಡ್ರೆಸ್ ಮೂಲಕ ಕಾಕತಾಳೀಯವೆಂಬಂತೆ ಕಂಗೊಳಿಸಿದ್ದಾರೆ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.instagram.com/p/Bma_EytAeZO/?hl=en&taken-by=puneethrajkumar.official