Tag: ಅಪ್ಪು

  • ಜೀ ಕನ್ನಡ ವಾಹಿನಿಯಿಂದ ಅಭಿಮಾನದ ‘ಅಪ್ಪು’ ಪುತ್ಥಳಿ

    ಜೀ ಕನ್ನಡ ವಾಹಿನಿಯಿಂದ ಅಭಿಮಾನದ ‘ಅಪ್ಪು’ ಪುತ್ಥಳಿ

    ಪುನೀತ್ ರಾಜ್ ಕುಮಾರ್  (Puneeth), ಇದು ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ಉಳಿದುಕೊಳ್ಳುವ ಹೆಸರು. ನಟನೆ , ವ್ಯಕ್ತಿತ್ವ ಮತ್ತು ನಿಸ್ವಾರ್ಥ ಸಮಾಜಮುಖಿ ಸೇವೆಗಳಿಂದ ಜನಮಾನಸದಲ್ಲಿ ಅಚ್ಚಳಿಯದೆ ನೆಲೆಸಿರುವ ಈ ಹಸನ್ಮುಖಿ ನಮ್ಮಲ್ಲೆರನ್ನು ಅಗಲಿ ಇಂದಿಗೆ ಒಂದು ವರ್ಷವೇ ಆಗಿದೆ. ಇಡೀ ಭಾರತೀಯ ಚಿತ್ರರಂಗಕ್ಕೆ ಮರೆಯಲಾಗದಂತ ದುಃಖವಾಗಿ ಪರಿಣಮಿಸಿ ಕಣ್ಣೀರಾಗಿಸಿರುವ ಈ ದೊಡ್ಮನೆ ಕಂದ ಇಂದಿಗೂ ಎಲ್ಲರ ಮನಸಿನಲ್ಲಿ ಮುದ್ದಿನ ಮಗುವಾಗಿದ್ದಾರೆ.

    ಜೀ ಕನ್ನಡ ವಾಹಿನಿಯೊಟ್ಟಿಗೆ ವಿಶೇಷ ನಂಟು ಹೊಂದಿದ್ದ ಅಪ್ಪು ಅವರು ಎಲ್ಲಾ ಕಾರ್ಯಕ್ರಮಗಳಿಗೂ ಪ್ರೀತಿಯಿಂದ ಆಗಮಿಸಿ ಬೆಂಬಲ ಸೂಚಿಸುತ್ತಿದ್ದರು ಮತ್ತು ಮನಸಾರೆ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿದ್ದರು. ಅದಕ್ಕೆ ಸಾಕ್ಷಿ ಎನ್ನುವಂತೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ , ಸರಿಗಮಪ  ಕಾರ್ಯಕ್ರಮದ ವಿಶೇಷ ಸ್ಪರ್ಧಿಗಳ ಕೋರಿಕೆಯನ್ನು ಈಡೇರಿಸಲು ಖುದ್ದು ಅವರೇ ವೇದಿಕೆಗೆ ಆಗಮಿಸಿ ಅವರ ಬೆನ್ನು ತಟ್ಟಿ ಪ್ರೀತಿಯಿಂದ ಪ್ರೋತ್ಸಾಹ ನೀಡಿದ್ದು ಇತರರಿಗೆ ಮಾದರಿಯಾಗಿತ್ತು. ಇದನ್ನೂ ಓದಿ: ಯಾರ ಹೊಟ್ಟೆಯಲ್ಲಾದ್ರೂ ಮತ್ತೊಮ್ಮೆ ಹುಟ್ಟಿ ಬಾರಪ್ಪ- ವೃದ್ಧೆ ಕಣ್ಣೀರು

    ಪುನೀತ್ (Puneeth Rajkumar) ಅವರ ಮೇಲೆ ವಿಶೇಷ ಅಭಿಮಾನ ಹೊಂದಿರುವ ಜೀ ಕನ್ನಡ ವಾಹಿನಿ ಅವರ ಪುಣ್ಯ ಸ್ಮರಣೆಯಂದು ಸಿನಿಮಾ ಮತ್ತು ಧಾರಾವಾಹಿಗಳ ಚಿತ್ರೀಕರಣಗಳಿಗೆಂದೇ ಹೆಸರುವಾಸಿಯಾಗಿರುವ ಅಬ್ಬಯ್ಯ ನಾಯ್ಡು ಸ್ಟುಡಿಯೋ ನಲ್ಲಿ ಪುತ್ಥಳಿಯೊಂದನ್ನು (statue) ಅನಾವರಣಗೊಳಿಸುತ್ತಿದೆ. ಈ ಮೂಲಕ ಹೆಜ್ಜೆ ಹಾಕಿದ ಸ್ಥಳವನ್ನು ನೆನಪುಗಳಿಂದ ಪುಣ್ಯ ಭೂಮಿಯಾಗಿಸುವ ಆಶಯ ಇದಾಗಿದೆ. ಈ ಮೂಲಕ ಮುಂದಿನ ಪೀಳಿಗೆಯ ಪ್ರತಿಭೆಗಳಿಗೆ ಅಪ್ಪು ಅವರ ಆಶೀರ್ವಾದ ಸಿಗಲಿದೆ ಎನ್ನುತ್ತದೆ ಜೀ ವಾಹಿನಿ.

    ತನ್ನ ಇಡೀ ಬದುಕನ್ನು ಸಿನಿಮಾಗೆಂದೇ ಮೀಸಲಿಟ್ಟಿದ್ದ ಅಪ್ಪು ಅವರ ವಿಶೇಷ ಪುತ್ಥಳಿ ಹಿರಿತೆರೆ ಮತ್ತು ಕಿರುತೆರೆಗೆ ಜೊತೆಗೆ ಅಪರೂಪದ ಸಂಬಂಧ ಹೊಂದಿರುವಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಅನಾವರಣಗೊಳಿಸುತ್ತಿರುವ ಜೀ ಕನ್ನಡ ವಾಹಿನಿಯ ಕಾರ್ಯಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮತ್ತೊಂದು ವಿಶೇಷವೆಂದರೆ , ಅಬ್ಬಯ್ಯ ನಾಯ್ಡು ಸ್ಟುಡಿಯೋ ಜೀ ಕನ್ನಡ ವಾಹಿನಿ ಕಾರ್ಯಕ್ರಮಗಳ ಭಾಗವಾಗಿದೆ.  ಈ ಒಂದು ಅಭಿಮಾನದ ಅಪರೂಪದ ಕಾರ್ಯಕ್ಕೆ ಅಪ್ಪು ಅವರ ಅಭಿಮಾನಿಗಳೆಲ್ಲರೂ ಭಾಗಿಯಾಗಬೇಕೆಂದು ವಾಹಿನಿ ಈ ಮೂಲಕ ವಿನಯಪೂರ್ವಕವಾಗಿ ಮನವಿ ಮಾಡಿಕೊಳ್ಳುತ್ತಿದೆ.ಅಷ್ಟೇ ಅಲ್ಲದೆ ವಾಹಿನಿ ಇಡೀ ದಿನವನ್ನು ಅಪ್ಪು ಅವರಿಗೆ ಅರ್ಪಿಸಿ ವಿಶೇಷ ಕಾರ್ಯಕ್ರಮಗಳನ್ನು ಪ್ರಸಾರಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಇವತ್ತು ನಾನು ನಿರ್ದೇಶಕನಾಗಿರಲು ಅಪ್ಪುನೇ ಕಾರಣ: ಜೇಮ್ಸ್‌ ಡೈರೆಕ್ಟರ್

    ಇವತ್ತು ನಾನು ನಿರ್ದೇಶಕನಾಗಿರಲು ಅಪ್ಪುನೇ ಕಾರಣ: ಜೇಮ್ಸ್‌ ಡೈರೆಕ್ಟರ್

    ಬೆಂಗಳೂರು: ಇವತ್ತು ನಾನು ನಿರ್ದೇಶಕನಾಗಿರಲು ಅವರೇ ಕಾರಣ. ಒಂದು ವರ್ಷ ಹೇಗೆ ಕಳೆದಿದೆ ಅನ್ನೋದೆ ಗೊತ್ತಾಗುತ್ತಿಲ್ಲ ಎಂದು ಜೇಮ್ಸ್ ನಿರ್ದೇಶಕ (James Director) ಮಹೇಶ್ ಬಾಬು (Mahesh Babu) ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಪುನೀತ್ (Puneeth Raj Kumar) ಸರ್ ಇಲ್ಲ ಅನ್ನೋದನ್ನ ಇನ್ನೂ ನಂಬೋಕೆ ಆಗುತ್ತಿಲ್ಲ. ನಾನು ಕೂಡ ಸಾಕಷ್ಟು ಚಿತ್ರಗಳಲ್ಲಿ ಅವರ ಜೊತೆ ಕೆಲಸ ಮಾಡಿದೆ. ಇವತ್ತು ನಾನು ನಿರ್ದೇಶಕನಾಗಿರಲು ಅವರೇ ಕಾರಣ. ಒಂದು ವರ್ಷ ಹೇಗೆ ಕಳೆದಿದೆ ಅನ್ನೋದೆ ಗೊತ್ತಾಗುತ್ತಿಲ್ಲ. ಅವರು ಇದ್ದಗಲೂ ಸಾಕಷ್ಟು ಜನರಿಗೆ ಮಾದರಿಯಾಗಿದ್ರು, ಅಗಲಿದ ಬಳಿಕವು ಸಾಕಷ್ಟು ಜನರಿಗೆ ಮಾದರಿಯಾಗಿದ್ದಾರೆ. ಗಂಧದಗುಡಿ ಮೂಲಕವು ಸಾಕಷ್ಟು ಜನರಿಗೆ ಪ್ರೇರೇಪಿತರಾಗಿದ್ದಾರೆ ಎಂದರು.

    ಇದೇ ವೇಳೆ ನಿರ್ದೇಶಕ ಚೇತನ್ (Director Chetan) ಮಾತನಾಡಿ, ಕೊನೆಯ ಚಿತ್ರ ನಿರ್ದೇಶನ ಸಂದರ್ಭದಲ್ಲಿ ಅಪ್ಪು ಸರ್ ಕೊನೆಯ ದಿನಗಳಲ್ಲಿ ನಾನು ಜೊತೆಗಿದ್ದೆ. ಅಗಲಿಕೆಗೂ ಮೂರು ದಿನ ಮುನ್ನ ಅವರ ಮನೆಯಲ್ಲೇ ಫೋಟೋಶೂಟ್ ಮಾಡಿದ್ದೆವು. ಒಂದು ವರ್ಷ ಆಗಿದ್ದೆ ಗೊತ್ತಾಗಲಿಲ್ಲ. ಅಪ್ಪು ಸರ್ ಎಲ್ಲೂ ಹೋಗಿಲ್ಲ. ನಮ್ಮ ಮನದಲ್ಲೇ ಇದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಯಾರ ಹೊಟ್ಟೆಯಲ್ಲಾದ್ರೂ ಮತ್ತೊಮ್ಮೆ ಹುಟ್ಟಿ ಬಾರಪ್ಪ- ವೃದ್ಧೆ ಕಣ್ಣೀರು

    ಅಪ್ಪು ನಮ್ಮನ್ನು ಅಗಲಿ ಇಂದಿಗೆ ಒಂದು ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಅಪ್ಪು ಸಮಾಧಿಯತ್ತ ಅಭಿಮಾನಿಗಳ ದಂಡೇ ಹರಿದುಬರುತ್ತಿದೆ. ಕಳೆದ ವರ್ಷ ಅಕ್ಟೋಬರ್ 29ರಂದು ಹೃದಯ ಸ್ತಂಭನಕ್ಕೆ ಒಳಗಾಗಿ ಅಪ್ಪು ಅವರು ನಗರದ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

    Live Tv
    [brid partner=56869869 player=32851 video=960834 autoplay=true]

  • ಯಾರ ಹೊಟ್ಟೆಯಲ್ಲಾದ್ರೂ ಮತ್ತೊಮ್ಮೆ ಹುಟ್ಟಿ ಬಾರಪ್ಪ- ವೃದ್ಧೆ ಕಣ್ಣೀರು

    ಯಾರ ಹೊಟ್ಟೆಯಲ್ಲಾದ್ರೂ ಮತ್ತೊಮ್ಮೆ ಹುಟ್ಟಿ ಬಾರಪ್ಪ- ವೃದ್ಧೆ ಕಣ್ಣೀರು

    ಟ ಪುನೀತ್ ರಾಜ್ ಕುಮಾರ್ (Puneeth Raj Kumar) ಅರು ನಮ್ಮನ್ನಗಲಿ ಇಂದಿಗೆ ಭರ್ತಿ ಒಂದು ವರ್ಷವಾಗಿದೆ. ಅಂದಿನಿಂದಲೂ ಇಂದಿನವರೆಗೂ ಅಭಿಮಾನಿಗಳು ಮಾತ್ರ ಒಂದಲ್ಲ ಒಂದು ರೀತಿಯಲ್ಲಿ ಪ್ರೀತಿಯ ಅಪ್ಪುವನ್ನು ನೆನಪಿಸಿಕೊಳ್ಳುತ್ತಲೇ ಇದ್ದಾರೆ. ಇಂದು ಕೂಡ ಅಭಿಮಾನಿಗಳ ದಂಡು ಸಮಾಧಿಯತ್ತ ಹರಿದುಬರುತ್ತಿದ್ದು, ಕಣ್ಣೀರಾಕುತ್ತಿದ್ದಾರೆ.

    ಕಂಠೀರವ ಸ್ಟುಡಿಯೋ (Kanteerava Studio) ಮುಂಭಾಗದಲ್ಲಿ ಅಭಿಮಾನಿಗಳು ನೆರೆದಿದ್ದು, ಅಪ್ಪು ಫೋಟೋ ನೋಡಿಕೊಂಡು ಮಹಿಳಾ ಅಭಿಮಾನಿಗಳು ಕಣ್ಣೀರು ಸುರಿಸುತ್ತಿದ್ದಾರೆ. ಅಂತೆಯೇ ಶಿವಮೊಗ್ಗದಿಂದ ಬಂದಿರುವ ವೃದ್ಧೆಯೊಬ್ಬರು ಮತ್ತೊಮ್ಮೆ ಹುಟ್ಟಿ ಬನ್ನಿ. ಯಾರ ಹೊಟ್ಟೆಯಲ್ಲಾದರೂ ಸರಿ ಮತ್ತೊಮ್ಮೆ ಹುಟ್ಟಿ ಬಾರಪ್ಪ ಅಂತ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪು `ಗಂಧದಗುಡಿ’ ತೊರೆದು 1 ವರ್ಷ- ನೋವು, ಕಣ್ಣೀರಿನ ಮಧ್ಯೆ ಪುಣ್ಯಸ್ಮರಣೆ

    ಇತ್ತ ಗುಬ್ಬಿಯಿಂದ ಬಂದಿರುವ ವೃದ್ಧೆ ಸುಮಿತ್ರಾ ಬಾಯಿ ಕಡ್ಲೆಪುರಿ ಹಾಗೂ ಬತ್ತಾಸು ಹಾರ ತಂದಿದ್ದಾರೆ. 20 ದಿನಗಳ ಕಾಲ ಸೂಕ್ಷ್ಮವಾಗಿ ಕಡ್ಲೆಪುರಿಗಳನ್ನು ಪೋಣಿಸಿ ಇದರ ಮಧ್ಯೆ ಬತ್ತಾಸು ಸೇರಿಸಿ ಅಜ್ಜಿ ಹಾರ ತಯಾರಿಸಿದ್ದಾರೆ. ಇದೀಗ ಈ ಹಾರದೊಂದಿಗೆ ಅಪ್ಪು ಸಮಾಧಿಗೆ ಭೇಟಿ ನೀಡಿದ್ದು, ಅಶ್ವಿನ್ ಪುನೀತ್ ರಾಜ್ ಕುಮಾರ್ ಅವರಿಂದ ಸಮಾಧಿಗೆ ಹಾಕಲು ನಿರ್ಧರಿಸಿದ್ದಾರೆ. ಹೀಗಾಗಿ ಅಸೌಇನಿ ಅವರ ಬರುವಿಕೆಗಾಗಿ ಅಜ್ಜಿ ಕಾಯುತ್ತಾ ಕುಳಿತಿದ್ದಾರೆ.

    ಇನ್ನೊಂದೆಡೆ ಬೆಣ್ಣೆಯಲ್ಲಿ ಅಪ್ಪು ಪುತ್ಥಳಿ ಕೆತ್ತನೆ ಮಾಡಿ ಕಲಾವಿದರು ಸಮಾಧಿ ಬಳಿ ತಂದಿದ್ದಾರೆ. ಬೆಂಗಳೂರಿನ ಚೆನ್ನೈಸ್ ಅಮೃತಾ ಕಲಾ ಸಂಸ್ಥೆಯ ಕಲಾವಿದರ ಕೈ ಚಳಕದಿಂದ 46 ಕೆಜಿ ಬೆಣ್ಣೆಯಲ್ಲಿ ಪುನೀತ್ ಫೋಟೋ ಅರಳಿದೆ. ಬೆಣ್ಣೆಯ ಪುತ್ಥಳಿಗೆ ಅಪ್ಪು ಅಭಿಮಾನಿಗಳು ಫಿದಾ ಆಗಿದ್ದಾರೆ. ಹೀಗೆ ಅಭಿಮಾನಿಗಳು ವಿವಿಧ ರೀತಿಯಲ್ಲಿ ಇಂದು ಕರ್ನಾಟಕ ರತ್ನಿಗೆ ಗೌರವ ಸಲ್ಲಿಸುತ್ತಿದ್ದಾರೆ.

    ಕಳೆದ ವರ್ಷ ಅಕ್ಟೋಬರ್ 29ರಂದು ಹೃದಯ ಸ್ತಂಭನಕ್ಕೆ ಒಳಗಾಗಿ ಅಪ್ಪು ಅವರು ನಗರದ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

    Live Tv
    [brid partner=56869869 player=32851 video=960834 autoplay=true]

  • ಅಪ್ಪು `ಗಂಧದಗುಡಿ’ ತೊರೆದು 1 ವರ್ಷ- ನೋವು, ಕಣ್ಣೀರಿನ ಮಧ್ಯೆ ಪುಣ್ಯಸ್ಮರಣೆ

    ಅಪ್ಪು `ಗಂಧದಗುಡಿ’ ತೊರೆದು 1 ವರ್ಷ- ನೋವು, ಕಣ್ಣೀರಿನ ಮಧ್ಯೆ ಪುಣ್ಯಸ್ಮರಣೆ

    ಬೆಂಗಳೂರು: ಅಪ್ಪು ‘ಗಂಧದಗುಡಿ’ ತೊರೆದು ಇಂದಿಗೆ 1 ವರ್ಷ. ನೋವು, ಕಣ್ಣೀರು, ಆಕ್ರಂದನದ ಮಧ್ಯೆ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯುತ್ತದೆ.

    ಪುಣ್ಯಸ್ಮರಣೆಗೆ ಕಂಠೀರವ ಸ್ಟುಡಿಯೋ ಸಂಪೂರ್ಣ ಸಿದ್ಧವಾಗಿದೆ. ಅಪ್ಪು (Appu) ಸಮಾಧಿಗೆ ಬಗೆ ಬಗೆಯ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ. ರಾತ್ರಿಯಿಡೀ ಜಾಗರಣೆ, ಪ್ರೀತಿಯ ಅಪ್ಪುಗೆ ಗೀತನಮನ ಅರ್ಪಿಸಲಾಗಿದೆ. ಇದನ್ನೂ ಓದಿ: ‘ಹೆಂಡ್ತಿ ಮಕ್ಳನ್ನು ಬಿಟ್ ಬಂದಿದ್ದೀನಿ, ಸೇಫ್ ಆಗಿ ಮನೆಗೆ ಹೋಗ್ತೀನಾ?’: ಗಂಧದ ಗುಡಿಯಲ್ಲಿ ಕಣ್ಣೀರು ತರಿಸುತ್ತೆ ಅಪ್ಪು ಡೈಲಾಗ್

    ಪುಣ್ಯಭೂಮಿಗೆ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ಇತ್ತ ಅನ್ನಸಂತರ್ಪಣೆ, ರಕ್ತದಾನ ಶಿಬಿರಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಇದನ್ನೂ ಓದಿ: ವರ್ಷದ ಬಳಿಕ ಪುನೀತ್ ಟ್ವಿಟ್ಟರ್ ಖಾತೆ ಆಕ್ವೀವ್ : ಗಂಧದಗುಡಿಗೆ ಬನ್ನಿ ಸಂದೇಶ

    ನಟ ಪುನೀತ್ ರಾಜ್‍ಕುಮಾರ್ (Puneethraj Kumar) ಅವರು ಹೃದಯ ಸ್ತಂಭನದಿಂದಾಗಿ 2021 ರ ಅಕ್ಟೋಬರ್ 29ರಂದು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಆ ದಿನದಿಂದ ಈ ದಿನದವರೆಗೂ ಅಭಿಮಾನಿಗಳ ಹೃದಯದಲ್ಲಿ ಅಪ್ಪು ಸದಾ ಜೀವಂತವಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವರ್ಷದ ಬಳಿಕ ಪುನೀತ್ ಟ್ವಿಟ್ಟರ್ ಖಾತೆ ಆಕ್ವೀವ್ : ಗಂಧದಗುಡಿಗೆ ಬನ್ನಿ ಸಂದೇಶ

    ವರ್ಷದ ಬಳಿಕ ಪುನೀತ್ ಟ್ವಿಟ್ಟರ್ ಖಾತೆ ಆಕ್ವೀವ್ : ಗಂಧದಗುಡಿಗೆ ಬನ್ನಿ ಸಂದೇಶ

    ಪುನೀತ್ ರಾಜ್ ಕುಮಾರ್ (Puneeth Rajkumar) ಕನಸಿನ ಗಂಧದ ಗುಡಿ (Gandhad Gudi) ಚಿತ್ರ ಬಿಡುಗಡೆಯ ಹೊತ್ತಲ್ಲಿ ಅಪ್ಪು ಬಳಸುತ್ತಿದ್ದ ಅವರ ಅಧಿಕೃತ ಟ್ವಿಟ್ಟರ್ (Twitter) ಖಾತೆ ಮತ್ತೆ ಆಕ್ಟೀವ್ ಆಗಿದೆ. ವರ್ಷದಿಂದ ಈ ಖಾತೆಯನ್ನೂ ಯಾರೂ, ಯಾವುದೇ ಕಾರಣಕ್ಕೂ ಬಳಸುತ್ತಿರಲಿಲ್ಲ. ವರ್ಷದ ನಂತರ, ಅದರಲ್ಲೂ ಅವರ ಡ್ರೀಮ್ ‍ಪ್ರಾಜೆಕ್ಟ್ ಗಂಧದ ಗುಡಿ ಬಿಡುಗಡೆ ಆಗುತ್ತಿರುವ ಸಂದರ್ಭದಲ್ಲಿ ಅದು ಮತ್ತೆ ಆಕ್ಟೀವ್ ಆಗಿದೆ.

    ಇದೇ ತಿಂಗಳು ಅಪ್ಪು (Appu) ಇದೇ ಖಾತೆಯಲ್ಲಿ ಗಂಧದ ಗುಡಿ ಬಗ್ಗೆ ಟ್ವಿಟ್ ಮಾಡಿದ್ದರು. ಕೆಲ ಸಂಗತಿಗಳನ್ನು ಹಂಚಿಕೊಂಡಿದ್ದರು. ಆನಂತರ ಅಪ್ಪು ನಿಧನರಾದರು. ವರ್ಷದ ನಂತರ ಆ ಖಾತೆಯಲ್ಲಿ ಗಂಧದ ಗುಡಿ ಬಗ್ಗೆಯೇ ಅಪ್ ಡೇಟ್ ಬಂದಿದ್ದು, ‘ನಿಮ್ಮನ್ನೆಲ್ಲ ನೋಡುವ ಕಾತರದಲ್ಲಿ’ ಎಂದು ಬರೆಯಲಾಗಿದೆ. ಅಪ್ಪು ಮತ್ತೆ ಹುಟ್ಟಿ ಬಂದರು ಎನ್ನುವಷ್ಟರ ಮಟ್ಟಿಗೆ ಅಭಿಮಾನಿಗಳು ಟ್ವಿಟ್ ನೋಡಿ ಭಾವುಕರಾಗಿದ್ದಾರೆ.

    ಗಂಧದ ಗುಡಿ ಡಾಕ್ಯುಡ್ರಾಮಾ ಸಿನಿಮಾ ಇಂದು ಬಿಡುಗಡೆ ಆಗಿ, ಬೆಳಗ್ಗೆಯೇ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸ್ಪೆಷಲ್ ಶೋ ಆಯೋಜನೆಗೊಂಡಿದ್ದವು. ಮೊದಲ ಪ್ರದರ್ಶನದಲ್ಲೇ ನೆಚ್ಚಿನ ನಟನ ಚಿತ್ರವನ್ನು ಕಣ್ತುಂಬಿಕೊಂಡ ಅಭಿಮಾನಿಗಳು ಭಾವುಕರಾದರು. ಅಭಿಮಾನಿಗಳ ಜೊತೆಯೇ ಡಾ.ರಾಜ್ ಕುಟುಂಬ ಕೂಡ ಸಿನಿಮಾ ವೀಕ್ಷಿಸಿದೆ.

    ಇಂದು ಬೆಳಗ್ಗೆ ಹತ್ತು ಗಂಟೆಯೊಳಗೆ ಬೆಂಗಳೂರಿನಲ್ಲೇ 50ಕ್ಕೂ ಹೆಚ್ಚು ಪ್ರದರ್ಶನಗಳನ್ನು ಆಯೋಜನೆ ಮಾಡಿದ್ದು, ಬೆಳಗಿನ ಜಾವವೇ 50 ಬಾರಿ ಈ ಸಿನಿಮಾ ಬೆಂಗಳೂರಿನ ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ ಎಂದು ವಿತರಕ ಕಾರ್ತಿಕ್ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ. ಇದೊಂದು ನೂತನ ದಾಖಲೆ ಎಂದೂ ಅವರು ತಿಳಿಸಿದ್ದಾರೆ. ಬೆಳಗಿನ ಜಾವ 6 ಗಂಟೆಯಿಂದಲೇ ಸಿನಿಮಾ ಪ್ರದರ್ಶನ ಶುರುವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ‘ಗಂಧದ ಗುಡಿ’ ನೋಡಿ ಗರ್ವ ಬಂತು: ಸುಧಾಮೂರ್ತಿ ಫಸ್ಟ್ ರಿಯಾಕ್ಷನ್

    ‘ಗಂಧದ ಗುಡಿ’ ನೋಡಿ ಗರ್ವ ಬಂತು: ಸುಧಾಮೂರ್ತಿ ಫಸ್ಟ್ ರಿಯಾಕ್ಷನ್

    ಸಿಲೆಬ್ರಿಟಿಗಾಗಿ ನಿನ್ನೆ ಗಂಧದ ಗುಡಿ (Gandhad Gudi) ಸ್ಪೆಷಲ್ ಶೋ ಆಯೋಜನೆ ಮಾಡಲಾಗಿತ್ತು. ಕನ್ನಡದ ಬಹುತೇಕ ನಟ, ನಟಿಯರು ಹಾಗೂ ತಂತ್ರಜ್ಞರ ಜೊತೆ ಲೇಖಕಿ, ಇನ್ಫೋಸಿಸ್ (Infosys) ನ ಸುಧಾಮೂರ್ತಿ ಕೂಡ ಆಗಮಿಸಿದ್ದರು. ಸಿನಿಮಾ ನೋಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಕನ್ನಡದಲ್ಲಿ ಇಂಥದ್ದೊಂದು ಸಿನಿಮಾ ಬಂದಿರುವುದು ನೋಡಿ ಗರ್ವ ಬಂತು. ಅವರ ಈ ಪ್ರಯತ್ನಕ್ಕೆ ಫುಲ್ ಮಾರ್ಕ್ಸ್ ಕೊಡುತ್ತೇನೆ’ ಎಂದು ಹೆಮ್ಮೆಯಿಂದ ಮಾತನಾಡಿದರು.

    ಈ ಗಂಧದ ಗುಡಿಯಲ್ಲಿ ಯುವಕರು ನೋಡಿ ತಿಳಿದುಕೊಳ‍್ಳಬಹುದಾದ ಸಾಕಷ್ಟು ವಿಷಯಗಳು ಇವೆ. ಅದರಲ್ಲೂ ನನ್ನ ಉತ್ತರ ಕರ್ನಾಟಕದ ಬಗ್ಗೆ ತೋರಿಸಿದಾಗ ಮತ್ತು ಪುನೀತ್ (Puneeth Rajkumar) ಅವರು ಉತ್ತರ ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತನಾಡಿದಾಗ ನಾನೂ ಭಾವುಕಳಾದೆ. ನಮ್ಮ ನೆಲದ ಚಿತ್ರ ಇದಾಗಿದ್ದರಿಂದ ಹೆಚ್ಚು ಆಪ್ತತೆ ಅನಿಸಿತು ಎಂದು ಸುಧಾಮೂರ್ತಿ (Sudhamurthy) ಮಾತನಾಡಿದರು. ಇದನ್ನೂ ಓದಿ: ಗಂಧದಗುಡಿ ಸಿನಿಮಾ ಅಲ್ಲವೇ ಅಲ್ಲ, ಅದೊಂದು ಅನುಭೂತಿ

    ಗಂಧದ ಗುಡಿ ಡಾಕ್ಯುಡ್ರಾಮಾ ಸಿನಿಮಾ ಇಂದು ಬಿಡುಗಡೆ ಆಗಿ, ಬೆಳಗ್ಗೆಯೇ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸ್ಪೆಷಲ್ ಶೋ ಆಯೋಜನೆಗೊಂಡಿದ್ದವು. ಮೊದಲ ಪ್ರದರ್ಶನದಲ್ಲೇ ನೆಚ್ಚಿನ ನಟನ ಚಿತ್ರವನ್ನು ಕಣ್ತುಂಬಿಕೊಂಡ ಅಭಿಮಾನಿಗಳು ಭಾವುಕರಾದರು. ಅಭಿಮಾನಿಗಳ ಜೊತೆಯೇ ಡಾ.ರಾಜ್ ಕುಟುಂಬ ಕೂಡ ಸಿನಿಮಾ ವೀಕ್ಷಿಸಿದೆ.

    ಇಂದು ಬೆಳಗ್ಗೆ ಹತ್ತು ಗಂಟೆಯೊಳಗೆ ಬೆಂಗಳೂರಿನಲ್ಲೇ 50ಕ್ಕೂ ಹೆಚ್ಚು ಪ್ರದರ್ಶನಗಳನ್ನು ಆಯೋಜನೆ ಮಾಡಿದ್ದು, ಬೆಳಗಿನ ಜಾವವೇ 50 ಬಾರಿ ಈ ಸಿನಿಮಾ ಬೆಂಗಳೂರಿನ ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ ಎಂದು ವಿತರಕ ಕಾರ್ತಿಕ್ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ. ಇದೊಂದು ನೂತನ ದಾಖಲೆ ಎಂದೂ ಅವರು ತಿಳಿಸಿದ್ದಾರೆ. ಬೆಳಗಿನ ಜಾವ 6 ಗಂಟೆಯಿಂದಲೇ ಸಿನಿಮಾ ಪ್ರದರ್ಶನ ಶುರುವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ‘ಗಂಧದ ಗುಡಿ’ ಚಿತ್ರದಲ್ಲಿ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕೂಡ ಇದ್ದಾರೆ

    ‘ಗಂಧದ ಗುಡಿ’ ಚಿತ್ರದಲ್ಲಿ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕೂಡ ಇದ್ದಾರೆ

    ಇಂದು ರಾಜ್ಯಾದ್ಯಂತ ಬಿಡುಗಡೆ ಆಗಿರುವ ಪುನೀತ್ ರಾಜ್ ಕುಮಾರ್ ಕನಸಿನ ಗಂಧದ ಗುಡಿ (Gandhad Gudi) ಚಿತ್ರದಲ್ಲಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth) ಕೂಡ ಇದ್ದಾರೆ. ಚಿತ್ರ ಶುರುವಾಗುವುದು ಅಶ್ವಿನಿ ಅವರ ಮಾತಿನ ಮೂಲಕ. ಅವರು ಅಪ್ಪುವನ್ನು ಬಣ್ಣಿಸುವ ರೀತಿಯೇ ಸೊಗಸು. ಒಂದಷ್ಟು ಅಚ್ಚರಿ, ಒಂದಷ್ಟು ಭಾವುಕತೆ ಮತ್ತಷ್ಟು ಚಿತ್ರ ನೋಡುವ ಕುತೂಹಲವನ್ನು ಅಶ್ವಿನಿ ಹುಟ್ಟು ಹಾಕುತ್ತಾರೆ. ಆನಂತರ ಪುನೀತ್ ಹೊಸ ಲೋಕಕ್ಕೆ ನೋಡುಗರನ್ನು ಕರೆದುಕೊಂಡು ಹೋಗುತ್ತಾರೆ.

    ಪುನೀತ್ ರಾಜ್ ಕುಮಾರ್ (Puneeth Rajkumar) ನಟನೆಯ ಗಂಧದ ಗುಡಿ ಡಾಕ್ಯುಡ್ರಾಮಾ ಚಿತ್ರ ಇಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಈ ಚಿತ್ರದ ವಿಶೇಷ ಅಂದರೆ, ಅಪ್ಪು ಅಪ್ಪು ಆಗಿಯೇ ಕಾಣಿಸಿಕೊಂಡಿದ್ದಾರೆ. ಯಾವುದೇ ಮೇಕಪ್ ಇಲ್ಲದೇ, ಡೈಲಾಗ್ ಹೊಡೆಯದೇ ಸರಳವಾಗಿ ಹಾಗೂ ಸಹಜವಾಗಿದ್ದಾರೆ. ಹಾಗಾಗಿ ಪುನೀತ್ ಮತ್ತಷ್ಟು ಹತ್ತಿರವಾಗುತ್ತಾರೆ. ಈ ಚಿತ್ರದಲ್ಲಿ ಪುನೀತ್ ಕಾಡಿನ ಮಧ್ಯೆ ಹೋದಾಗ, ವಿಷ ಸರ್ಪಗಳನ್ನು ಕಾಣುತ್ತಾರೆ. ಹುಲಿ, ಚಿರತೆಗಳನ್ನು ನೋಡುತ್ತಾರೆ. ಈ ಸಂದರ್ಭದಲ್ಲಿ ಅವರು ಮಾತೊಂದನ್ನು ಆಡುತ್ತಾರೆ. ಆ ಮಾತು ನೋಡುಗನನ್ನು ಭಾವುಕನಾಗಿಸುತ್ತದೆ. ಇದನ್ನೂ ಓದಿ: ಗಂಧದಗುಡಿ ಸಿನಿಮಾ ಅಲ್ಲವೇ ಅಲ್ಲ, ಅದೊಂದು ಅನುಭೂತಿ

    ಕಾಡಿನೊಳಗೆ ವಿಷದ ಹಾವು ಕಾಣುತ್ತಾ, ನಿರ್ದೇಶಕ ಅಮೋಘ ವರ್ಷ (Amogha Varsha) ಜೊತೆ ತಮಾಷೆಯಾಗಿ ಮಾತನಾಡಿದರೂ ಅದೀಗ ಪ್ರೇಕ್ಷಕರನ್ನು ಕಣ್ಣೀರು ಹಾಕಿಸುತ್ತದೆ. ಹಾವು ನೋಡುತ್ತಾ, ‘ಹೆಂಡ್ತಿ ಮಕ್ಕಳನ್ನು ಮನೇಲಿ ಬಿಟ್ಟು ಬಂದಿದ್ದೀನಿ. ಸೇಫ್ ಆಗಿ ಮನೆ ಸೇರ್ತೀನಿ ತಾನೆ?’ ಎಂದು ಪ್ರಶ್ನೆ ಮಾಡುತ್ತಾರೆ. ಅಂದು ಸೇಫ್ ಆಗಿಯೇ ಮನೆಗೆ ಬಂದ ಪುನೀತ್ ರಾಜ್ ಕುಮಾರ್, ಆ ನಂತರ ಆಸ್ಪತ್ರೆಗೆ ಹೋದವರು ಮತ್ತೆ ಸೇಫ್ ಆಗಿ ಬರಲಿಲ್ಲ ಎನ್ನುವುದು ನೋವಿನ ಸಂಗತಿ. ಈ ಮಾತು ಕೇಳುತ್ತಿದ್ದಂತೆಯೇ ಕಣ್ಣೀರು ಬರುವುದು ಸತ್ಯ.

    ಗಂಧದ ಗುಡಿ ಡಾಕ್ಯುಡ್ರಾಮಾ ಸಿನಿಮಾ ಇಂದು ಬಿಡುಗಡೆ ಆಗಿ, ಬೆಳಗ್ಗೆಯೇ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸ್ಪೆಷಲ್ ಶೋ ಆಯೋಜನೆಗೊಂಡಿದ್ದವು. ಮೊದಲ ಪ್ರದರ್ಶನದಲ್ಲೇ ನೆಚ್ಚಿನ ನಟನ ಚಿತ್ರವನ್ನು ಕಣ್ತುಂಬಿಕೊಂಡ ಅಭಿಮಾನಿಗಳು ಭಾವುಕರಾದರು. ಅಭಿಮಾನಿಗಳ ಜೊತೆಯೇ ಡಾ.ರಾಜ್ ಕುಟುಂಬ ಕೂಡ ಸಿನಿಮಾ ವೀಕ್ಷಿಸಿದೆ.

    ಇಂದು ಬೆಳಗ್ಗೆ ಹತ್ತು ಗಂಟೆಯೊಳಗೆ ಬೆಂಗಳೂರಿನಲ್ಲೇ 50ಕ್ಕೂ ಹೆಚ್ಚು ಪ್ರದರ್ಶನಗಳನ್ನು ಆಯೋಜನೆ ಮಾಡಿದ್ದು, ಬೆಳಗಿನ ಜಾವವೇ 50 ಬಾರಿ ಈ ಸಿನಿಮಾ ಬೆಂಗಳೂರಿನ ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ ಎಂದು ವಿತರಕ ಕಾರ್ತಿಕ್ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ. ಇದೊಂದು ನೂತನ ದಾಖಲೆ ಎಂದೂ ಅವರು ತಿಳಿಸಿದ್ದಾರೆ. ಬೆಳಗಿನ ಜಾವ 6 ಗಂಟೆಯಿಂದಲೇ ಸಿನಿಮಾ ಪ್ರದರ್ಶನ ಶುರುವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ‘ಹೆಂಡ್ತಿ ಮಕ್ಳನ್ನು ಬಿಟ್ ಬಂದಿದ್ದೀನಿ, ಸೇಫ್ ಆಗಿ ಮನೆಗೆ ಹೋಗ್ತೀನಾ?’: ಗಂಧದ ಗುಡಿಯಲ್ಲಿ ಕಣ್ಣೀರು ತರಿಸುತ್ತೆ ಅಪ್ಪು ಡೈಲಾಗ್

    ‘ಹೆಂಡ್ತಿ ಮಕ್ಳನ್ನು ಬಿಟ್ ಬಂದಿದ್ದೀನಿ, ಸೇಫ್ ಆಗಿ ಮನೆಗೆ ಹೋಗ್ತೀನಾ?’: ಗಂಧದ ಗುಡಿಯಲ್ಲಿ ಕಣ್ಣೀರು ತರಿಸುತ್ತೆ ಅಪ್ಪು ಡೈಲಾಗ್

    ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ (Gandhad Gudi) ಡಾಕ್ಯುಡ್ರಾಮಾ ಚಿತ್ರ ಇಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಈ ಚಿತ್ರದ ವಿಶೇಷ ಅಂದರೆ, ಅಪ್ಪು (Appu) ಅಪ್ಪು ಆಗಿಯೇ ಕಾಣಿಸಿಕೊಂಡಿದ್ದಾರೆ. ಯಾವುದೇ ಮೇಕಪ್ ಇಲ್ಲದೇ, ಡೈಲಾಗ್ ಹೊಡೆಯದೇ ಸರಳವಾಗಿ ಹಾಗೂ ಸಹಜವಾಗಿದ್ದಾರೆ. ಹಾಗಾಗಿ ಪುನೀತ್ ಮತ್ತಷ್ಟು ಹತ್ತಿರವಾಗುತ್ತಾರೆ. ಈ ಚಿತ್ರದಲ್ಲಿ ಪುನೀತ್ ಕಾಡಿನ ಮಧ್ಯೆ ಹೋದಾಗ, ವಿಷ ಸರ್ಪಗಳನ್ನು ಕಾಣುತ್ತಾರೆ. ಹುಲಿ, ಚಿರತೆಗಳನ್ನು ನೋಡುತ್ತಾರೆ. ಈ ಸಂದರ್ಭದಲ್ಲಿ ಅವರು ಮಾತೊಂದನ್ನು ಆಡುತ್ತಾರೆ. ಆ ಮಾತು ನೋಡುಗನನ್ನು ಭಾವುಕನಾಗಿಸುತ್ತದೆ.

    ಕಾಡಿನೊಳಗೆ ವಿಷದ ಹಾವು ಕಾಣುತ್ತಾ, ನಿರ್ದೇಶಕ ಅಮೋಘ ವರ್ಷ (Amogha Varsha) ಜೊತೆ ತಮಾಷೆಯಾಗಿ ಮಾತನಾಡಿದರೂ ಅದೀಗ ಪ್ರೇಕ್ಷಕರನ್ನು ಕಣ್ಣೀರು ಹಾಕಿಸುತ್ತದೆ. ಹಾವು ನೋಡುತ್ತಾ, ‘ಹೆಂಡ್ತಿ ಮಕ್ಕಳನ್ನು ಮನೇಲಿ ಬಿಟ್ಟು ಬಂದಿದ್ದೀನಿ. ಸೇಫ್ ಆಗಿ ಮನೆ ಸೇರ್ತೀನಿ ತಾನೆ?’ ಎಂದು ಪ್ರಶ್ನೆ ಮಾಡುತ್ತಾರೆ. ಅಂದು ಸೇಫ್ ಆಗಿಯೇ ಮನೆಗೆ ಬಂದ ಪುನೀತ್ ರಾಜ್ ಕುಮಾರ್, ಆ ನಂತರ ಆಸ್ಪತ್ರೆಗೆ ಹೋದವರು ಮತ್ತೆ ಸೇಫ್ ಆಗಿ ಬರಲಿಲ್ಲ ಎನ್ನುವುದು ನೋವಿನ ಸಂಗತಿ. ಈ ಮಾತು ಕೇಳುತ್ತಿದ್ದಂತೆಯೇ ಕಣ್ಣೀರು ಬರುವುದು ಸತ್ಯ. ಇದನ್ನೂ ಓದಿ: ಗಂಧದಗುಡಿ ಸಿನಿಮಾ ಅಲ್ಲವೇ ಅಲ್ಲ, ಅದೊಂದು ಅನುಭೂತಿ

    ಡಾಕ್ಯುಮೆಂಟರಿ ಮಾದರಿಯ ಈ ಚಿತ್ರ ನಿಜಕ್ಕೂ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಪುನೀತ್ ರಾಜ್‍ಕುಮಾರ್ (Puneeth Rajkumar) ಗಂಧದ ಗುಡಿ ಹೆಸರಿನಲ್ಲಿ ಡಾಕ್ಯುಮೆಂಟರಿ ಮಾಡಿದ್ದಾರೆ ಅಂದಾಗ, ಕುತೂಹಲಕ್ಕಿಂತ ಅನುಮಾನಿಸಿದವರೆ ಹೆಚ್ಚು. ಓಟಿಟಿ ಮೂಲಕ ಜಗತ್ತಿನ ಸಿನಿಮಾಗಳು ನಮ್ಮುಂದಿರುವಾಗ, ಡಿಸ್ಕವರಿ ಚಾನೆಲ್ ಗಳು ನಮ್ಮ ಬೆರಳ ತುದಿಯಲ್ಲೇ ನಲಿಯುತ್ತಿರುವಾಗ, ಅದಕ್ಕಿಂತ ಅಪ್ಪು ಇನ್ನೇನು ಮಾಡುವುದಕ್ಕೆ ಸಾಧ್ಯ? ಅಂತ ಅನಿಸಿದ್ದೂ ಇದೆ. ಪುನೀತ್ ಡ್ಯಾನ್ಸ್, ಪುನೀತ್ ಡೈಲಾಗ್, ಪುನೀತ್ ನಟನೆ, ಪುನೀತ್ ನಗುವನ್ನು ಬೆಳ್ಳಿ ಪರದೆಯಲ್ಲಿ ನೋಡಿ, ಕಣ್ತುಂಬಿಕೊಂಡಿರುವ ಅಭಿಮಾನಿಗಳು, ಇದ್ಯಾವುದೂ ಇಲ್ಲದ ಕಾಡು ಮೇಡುಗಳನ್ನು ನೋಡುವುದಕ್ಕೆ ಇಷ್ಟ ಪಡುತ್ತಾರಾ ಅಂತ ಚರ್ಚೆ ಮಾಡಿದ್ದೂ ಇದೆ. ಆದರೆ, ಅದೆಲ್ಲದರ ಆಚೆ ಗಂಧದ ಗುಡಿ ಹೊಸ ಅನುಭವವನ್ನು ನೀಡುತ್ತದೆ.

    ಸಿನಿಮಾ ಕೊಡುವ ಥ್ರಿಲ್ ಗಿಂತ ಅಪ್ಪು ಇಲ್ಲಿ ಹೊಸ ಅನುಭೂತಿಯನ್ನು ಕಟ್ಟಿ ಕೊಡ ಯತಿ ಡೆತ್ ಕಟ್ಟಿ ಕೊಡುತ್ತಾರೆ. ಅವರು ಬೆಟ್ಟ ಹತ್ತಿದರೇ ನಾವೇ ಬೆಟ್ಟ ಹತ್ತಿದಷ್ಟು ಖುಷಿ, ಅವರು ಕಾಡಲ್ಲಿ ನಡೆದು ಹೊರಟರೇ ಅವರನ್ನು ನಾವೇ ಹಿಂಬಾಲಿಸುವಂತಹ ಅನುಭವ, ನಡು ನಡುವೆ ಅಪ್ಪು ಮಾತು, ತಮಾಷೆ, ಭಯ ಎಲ್ಲವೂ ಇಷ್ಟ ಇಷ್ಟ.

    ಆನೆ, ಹುಲಿ, ಕರಡಿ, ಚಿರತೆ, ಕಪ್ಪೆ, ಹಾವು, ಚೇಳು, ಜಿಂಕೆ, ಪಾತರಗಿತ್ತಿ, ಮೀನು, ಮೊಸಳೆ ಅಬ್ಬಬ್ಬಾ ಎಷ್ಟೊಂದು ಪಾತ್ರಗಳು? ಅವಕ್ಕೆ ನಟನೆ ಕಲಿಸಿದವರಾರು, ಹಾಡು ಹೇಳಿಕೊಟ್ಟವರು ಯಾರು? ಅವು ಏಕೆ ಹಾಗೆ ಜೀವಿಸುತ್ತವೆ? ಇವೆಲ್ಲ ಪ್ರಶ್ನೆಗಳು ಪುನೀತ್ ಉತ್ತರ ಕೊಡುತ್ತಾ, ಕೊಡಿಸುತ್ತಾ ಸಾಗುತ್ತಾರೆ. ಇದೇ ಗಂಧದ ಗುಡಿಯ ಬ್ಯುಟಿ.

    ಕರ್ನಾಟಕ ಸಂಸ್ಕೃತಿಗಳ ತವರು. ಕಾಡು ಮೇಡುಗಳ ನಾಡು, ಆರಾಧನೆಗಳ ಬೀಡು. ಎಲ್ಲವನ್ನೂ 96 ನಿಮಿಷಗಳಲ್ಲಿ ಹಿಡಿದಿಟ್ಟು ನಮ್ಮನ್ನು ಹೊಸ ಲೋಕಕ್ಕೆ ಕರೆದುಕೊಂಡು ಹೋಗುತ್ತಾರೆ. ನಿರ್ದೇಶಕ ಅಮೋಘ ವರ್ಷ, ಕ್ಯಾಮರಾ ಟೀಮ್, ಹಿನ್ನೆಲೆ ಸಂಗೀತ ಈ ಗಂಧದ ಗುಡಿಯ ಘಮವನ್ನು ಮತ್ತಷ್ಟು ಹೆಚ್ಚಿಸಿದೆ.

    Live Tv
    [brid partner=56869869 player=32851 video=960834 autoplay=true]

  • ‘ಗಂಧದ ಗುಡಿ’ ಬೆಳ್ಳಂ ಬೆಳಗ್ಗೆಯೇ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸ್ಪೆಷಲ್ ಶೋ

    ‘ಗಂಧದ ಗುಡಿ’ ಬೆಳ್ಳಂ ಬೆಳಗ್ಗೆಯೇ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸ್ಪೆಷಲ್ ಶೋ

    ಪುನೀತ್ ರಾಜ್ ಕುಮಾರ್ (Puneeth Raj Kumar) ಕನಸಿನ ಗಂಧದ ಗುಡಿ ಡಾಕ್ಯುಡ್ರಾಮಾ ಸಿನಿಮಾ ಇಂದು ಬಿಡುಗಡೆ ಆಗಿದೆ. ಬೆಳಗ್ಗೆಯೇ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸ್ಪೆಷಲ್ ಶೋ ಆಯೋಜನೆಗೊಂಡಿದ್ದವು. ಮೊದಲ ಪ್ರದರ್ಶನದಲ್ಲೇ ನೆಚ್ಚಿನ ನಟನ ಚಿತ್ರವನ್ನು ಕಣ್ತುಂಬಿಕೊಂಡ ಅಭಿಮಾನಿಗಳು ಭಾವುಕರಾದರು. ಅಭಿಮಾನಿಗಳ ಜೊತೆಯೇ ಡಾ.ರಾಜ್ ಕುಟುಂಬ ಕೂಡ ಸಿನಿಮಾ ವೀಕ್ಷಿಸಿತು.

    ಇಂದು ಬೆಳಗ್ಗೆ ಹತ್ತು ಗಂಟೆಯೊಳಗೆ ಬೆಂಗಳೂರಿನಲ್ಲೇ 50ಕ್ಕೂ ಹೆಚ್ಚು ಪ್ರದರ್ಶನಗಳನ್ನು ಆಯೋಜನೆ ಮಾಡಿದ್ದು, ಬೆಳಗಿನ ಜಾವವೇ 50 ಬಾರಿ ಈ ಸಿನಿಮಾ ಬೆಂಗಳೂರಿನ ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ ಎಂದು ವಿತರಕ ಕಾರ್ತಿಕ್ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ. ಇದೊಂದು ನೂತನ ದಾಖಲೆ ಎಂದೂ ಅವರು ತಿಳಿಸಿದ್ದಾರೆ. ಬೆಳಗಿನ ಜಾವ 6 ಗಂಟೆಯಿಂದಲೇ ಸಿನಿಮಾ ಪ್ರದರ್ಶನ ಶುರುವಾಗಿದೆ. ಇದನ್ನೂ ಓದಿ: ಗಂಧದಗುಡಿ ಸಿನಿಮಾ ಅಲ್ಲವೇ ಅಲ್ಲ, ಅದೊಂದು ಅನುಭೂತಿ

    ನಿನ್ನೆ ರಾತ್ರಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಪೇಯ್ಡ್ ಪ್ರೀಮಿಯರ್ (Special Show) ಆಯೋಜನೆ ಮಾಡಲಾಗಿತ್ತು. ನಲವತ್ತಕ್ಕೂ ಹೆಚ್ಚು ಪೇಯ್ಡ್ ಪ್ರೀಮಿಯರ್ ಪ್ರದರ್ಶನ ನಡೆದಿರುವುದು ವಿಶೇಷ. ಪೇಯ್ಡ್ ಪ್ರೀಮಿಯರ್ ಶೋ ಆಯೋಜನೆ ಆಗುತ್ತಿದ್ದಂತೆಯೇ ಅಭಿಮಾನಿಗಳು ಟಿಕೆಟ್ ಅನ್ನು ಮುಗಿಬಿದ್ದು ಖರೀದಿಸಿದ್ದರು. ಬಹುತೇಕ ಚಿತ್ರಮಂದಿರಗಳ ಮುಂದೆ ಹೌಸ್ ಫುಲ್ ಬೋರ್ಡ್ ಹಾಕಲಾಗಿತ್ತು. ಪೇಯ್ಡ್ ಪ್ರೀಮಿಯರ್ ಮೂಲಕವೇ 25 ಲಕ್ಷ ರೂಪಾಯಿಗೂ ಅಧಿಕ ಹಣ ಬಾಕ್ಸ್ ಆಫೀಸ್ ಕಲೆಕ್ಷನ್ ಆಗಿದೆ ಎನ್ನುವ ಮಾಹಿತಿಯೂ ಇದೆ.

    ಪುನೀತ್ ರಾಜ್‍ಕುಮಾರ್ ಗಂಧದ ಗುಡಿ (Gandhad Gudi) ಹೆಸರಿನಲ್ಲಿ ಡಾಕ್ಯುಮೆಂಟರಿ ಮಾಡಿದ್ದಾರೆ ಅಂದಾಗ, ಕುತೂಹಲಕ್ಕಿಂತ ಅನುಮಾನಿಸಿದವರೆ ಹೆಚ್ಚು. ಓಟಿಟಿ ಮೂಲಕ ಜಗತ್ತಿನ ಸಿನಿಮಾಗಳು ನಮ್ಮುಂದಿರುವಾಗ, ಡಿಸ್ಕವರಿ ಚಾನೆಲ್ ಗಳು ನಮ್ಮ ಬೆರಳ ತುದಿಯಲ್ಲೇ ನಲಿಯುತ್ತಿರುವಾಗ, ಅದಕ್ಕಿಂತ ಅಪ್ಪು ಇನ್ನೇನು ಮಾಡುವುದಕ್ಕೆ ಸಾಧ್ಯ? ಅಂತ ಅನಿಸಿದ್ದೂ ಇದೆ. ಪುನೀತ್ ಡ್ಯಾನ್ಸ್, ಪುನೀತ್ ಡೈಲಾಗ್, ಪುನೀತ್ ನಟನೆ, ಪುನೀತ್ ನಗುವನ್ನು ಬೆಳ್ಳಿ ಪರದೆಯಲ್ಲಿ ನೋಡಿ, ಕಣ್ತುಂಬಿಕೊಂಡಿರುವ ಅಭಿಮಾನಿಗಳು, ಇದ್ಯಾವುದೂ ಇಲ್ಲದ ಕಾಡು ಮೇಡುಗಳನ್ನು ನೋಡುವುದಕ್ಕೆ ಇಷ್ಟ ಪಡುತ್ತಾರಾ ಅಂತ ಚರ್ಚೆ ಮಾಡಿದ್ದೂ ಇದೆ. ಆದರೆ, ಅದೆಲ್ಲದರ ಆಚೆ ಗಂಧದ ಗುಡಿ ಹೊಸ ಅನುಭವವನ್ನು ನೀಡುತ್ತದೆ. ಸಿನಿಮಾ ಕೊಡುವ ಥ್ರಿಲ್ ಗಿಂತ ಅಪ್ಪು ಇಲ್ಲಿ ಹೊಸ ಅನುಭೂತಿಯನ್ನು ಕಟ್ಟಿ ಕೊಡ ಯತಿ ಡೆತ್ ಕಟ್ಟಿ ಕೊಡುತ್ತಾರೆ. ಅವರು ಬೆಟ್ಟ ಹತ್ತಿದರೇ ನಾವೇ ಬೆಟ್ಟ ಹತ್ತಿದಷ್ಟು ಖುಷಿ, ಅವರು ಕಾಡಲ್ಲಿ ನಡೆದು ಹೊರಟರೇ ಅವರನ್ನು ನಾವೇ ಹಿಂಬಾಲಿಸುವಂತಹ ಅನುಭವ, ನಡು ನಡುವೆ ಅಪ್ಪು ಮಾತು, ತಮಾಷೆ, ಭಯ ಎಲ್ಲವೂ ಇಷ್ಟ ಇಷ್ಟ.

    Live Tv
    [brid partner=56869869 player=32851 video=960834 autoplay=true]

  • ಗಂಧದಗುಡಿ ಅಪ್ಪು ಕೊನೆಯ ಚಿತ್ರವಲ್ಲ: ಶಿವರಾಜ್ ಕುಮಾರ್

    ಗಂಧದಗುಡಿ ಅಪ್ಪು ಕೊನೆಯ ಚಿತ್ರವಲ್ಲ: ಶಿವರಾಜ್ ಕುಮಾರ್

    ಟ ದಿ.ಪುನೀತ್ ರಾಜ್ ಕುಮಾರ್ ಅವರ ಕನಸಿನ ಕೂಸು ಗಂಧದ ಗುಡಿ ಸಾಕ್ಷ್ಯ ಚಿತ್ರ ತೆರೆಕಂಡಿದೆ. ಈ ಸಂಬಂಧ ನಟ ಶಿವರಾಜ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದು, ಗಂಧದ ಗುಡಿ ಅಪ್ಪು ಕೊನೆಯ ಚಿತ್ರವಲ್ಲ ಎಂದು ಹೇಳಿದ್ದಾರೆ.

    ಚಿತ್ರ ವೀಕ್ಷಣೆಗೂ ಮುನ್ನ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಾನು ಇಂದು ಸಂಜೆ ಸಿನಿಮಾ ವೀಕ್ಷಣೆ ಮಾಡುತ್ತೇನೆ. ಗಂಧದಗುಡಿ ಅಪ್ಪು ಅವರ ಕೊನೆಯ ಚಿತ್ರ ಅಲ್ಲ. ಇದು ಆರಂಭ, ಅಪ್ಪು ಯಾವಾಗಲೂ ನಮ್ಮ ಜೊತೆ ಇರುತ್ತಾರೆ ಎಂದು ಭಾವುಕರಾದರು.

    ಪ್ರಕೃತಿಯ ಬಗ್ಗೆ ಗಂಧದಗುಡಿಯಲ್ಲಿ ಅಪ್ಪಾಜಿ ತಿಳಿಸಿದ್ರು. ಅದರಿಂದ ಅದೆಷ್ಟೋ ಜನ ಪ್ರೇರಣೆಯಾಗಿದ್ರು, ನನ್ನ ಅದೃಷ್ಟ ನಾನು ಗಂಧದಗುಡಿ ಪಾರ್ಟ್ 2 ಮಾಡಿದ್ದೆ. ಇಂದು ಅತಿವೃಷ್ಠಿ ಆಗ್ತಿದೆ. ಪ್ರಕೃತಿಯಲ್ಲಿ ಏರೇಪೇರು ಆಗುತ್ತಿದೆ ಎಂದರು. ಇದನ್ನೂ ಓದಿ: ಅಪ್ಪು ಕನಸಿನ ಗಂಧದಗುಡಿ ದರ್ಶನ- ಥಿಯೇಟರ್ ಅಂಗಳದಲ್ಲಿ ಅಭಿಮಾನಿಗಳ ಸಂಭ್ರಮ

    ಕಾಡಿನ ಮಹತ್ವದ ಬಗ್ಗೆ ಅಪ್ಪು ತಿಳಿಸಿದ್ದಾರೆ. ಅಭಿಮಾನಿಗಳು ಅಪ್ಪುವನ್ನ ನೋಡಲು ಬರಬೇಕು. ಅವರಿಗೆ ಈ ಮೂಲಕ ಗೌರವ ಕೊಡಬೇಕು ಎಂದು ಶಿವಣ್ಣ ಮನವಿ ಮಾಡಿಕೊಂಡರು.

    Live Tv
    [brid partner=56869869 player=32851 video=960834 autoplay=true]