Tag: ಅಪ್ರಾಪ್ತೆ

  • 10 ರೂ. ಆಮಿಷವೊಡ್ಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ – 76ರ ವೃದ್ಧ ಸೇರಿ ಇಬ್ಬರು ಅರೆಸ್ಟ್

    10 ರೂ. ಆಮಿಷವೊಡ್ಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ – 76ರ ವೃದ್ಧ ಸೇರಿ ಇಬ್ಬರು ಅರೆಸ್ಟ್

    ರಾಯ್‌ಪುರ: 10 ರೂ. ಆಮಿಷವೊಡ್ಡಿ 13 ವರ್ಷದ ಬಾಲಕಿಯ ಮೇಲೆ 76 ವರ್ಷ ವೃದ್ಧ ಮತ್ತು ಇನ್ನೊಬ್ಬ ಸೇರಿ ಅನೇಕ ಬಾರಿ ಅತ್ಯಾಚಾರವೆಸಗಿರುವ ಘಟನೆ ಛತ್ತೀಸ್‍ಗಢದಲ್ಲಿ ನಡೆದಿದೆ.

    ಛತ್ತೀಸ್‍ಗಢದ ಬಲೋದಬಜಾರ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಬಾಲಕಿಯ ಮೇಲೆ ಅತ್ಯಾಚಾರ ಶನಿವಾರ ನಡೆದಿದ್ದು, ನೆರೆ ಮನೆಯ ಮಹಿಳೆ ಈ ಕುರಿತು ಬಾಲಕಿ ಪೋಷಕರನ್ನು ಎಚ್ಚರಿಸಿದ ನಂತರ ಬೆಳಕಿಗೆ ಬಂದಿದೆ. ಪೋಷಕರಿಬ್ಬರು ರ್ಯಾಗ್‍ಪಿಕರ್ಸ್ ಕೆಲಸ ಮಾಡುತ್ತಿರುವುದು ತಿಳಿದುಬಂದಿದೆ. ವಿಷಯ ತಿಳಿದ ನಂತರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಹಿಜಬ್ ನಿಷೇಧದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ವಿಳಂಬ: ಸಿಜೆಐ 

    ಬಲೋದಬಜಾರ್ ಕೊತ್ವಾಲಿ ಪೊಲೀಸ್ ಠಾಣಾಧಿಕಾರಿ(ಎಸ್‍ಎಚ್‍ಒ) ಯದುಮಣಿ ಸಿದರ್ ಈ ಕುರಿತು ಮಾಹಿತಿ ನೀಡಿದ್ದು, ಪೋಷಕರು ನೀಡಿದ ದೂರಿನ ಆಧಾರದ ಮೇಲೆ ನಾವು ಆರೋಪಿಗಳಾದ ಕುಂಜ್ರಾಮ್ ವರ್ಮಾ(76) ಮತ್ತು ರಮೇಶ್ ವರ್ಮಾ(47)ನನ್ನು ನಾವು ಬಂಧಿಸಿದ್ದೇವೆ ಎಂದಿದ್ದಾರೆ.

    ದೂರಿನ ಪ್ರಕಾರ, ಬಾಲಕಿ ವಾಸಿಸುವ ಅದೇ ಸ್ಥಳದಲ್ಲಿಯೇ ಕುಂಜ್ರಾಮ್ ಇದ್ದ. ಈ ವೇಳೆ ಬಾಲಕಿಯನ್ನು ನೋಡಿದ ಆತ ಪ್ರತಿ ಬಾರಿ 10 ರೂ. ನೀಡುವುದಾಗಿ ಆಮಿಷವೊಡ್ಡಿ ತನ್ನ ಮನೆಗೆ ಕರೆದು ಅತ್ಯಾಚಾರ ಮಾಡುತ್ತಿದ್ದ. ಕುಂಜ್ರಾಮ್‍ಗೆ ಪರಿಚಿತರಾಗಿರುವ ರಮೇಶ್ ಕೂಡ 10 ರೂ. ಆಮಿಷವೊಡ್ಡಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಾರಂಭಿಸಿದ್ದ ಎಂದು ವಿವರಿಸಿದ್ದಾರೆ. ಇದನ್ನೂ ಓದಿ:  ಸಾವಿನ ದವಡೆಯಿಂದ ಹದ್ದುವನ್ನು ಕಾಪಾಡಿದ ಮೀನುಗಾರ

    ಇಬ್ಬರ ಮನೆಯಿಂದ ಬಾಲಕಿ ಹೊರಗೆ ಬರುತ್ತಿರುವುದನ್ನು ನೆರೆಮನೆಯ ಮಹಿಳೆಯೊಬ್ಬರು ಗಮನಿಸಿದಾಗ, ಆಕೆ ಬಾಲಕಿಯ ತಾಯಿಗೆ ಮಾಹಿತಿ ನೀಡಿದ್ದಾಳೆ. ಬಾಲಕಿ ತನಗಾದ ಕಷ್ಟವನ್ನು ವಿವರಿಸಿದ ನಂತರ, ಆಕೆಯ ಪೋಷಕರು ಪ್ರಕರಣ ದಾಖಲಿಸಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಸುಧಾರಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕಾನ್ಸ್‌ಟೇಬಲ್ ಅರೆಸ್ಟ್

    ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕಾನ್ಸ್‌ಟೇಬಲ್ ಅರೆಸ್ಟ್

    ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಗೋವಿಂದರಾಜನಗರ ಪೊಲೀಸ್ ಕಾನ್ಸ್‌ಟೇಬಲ್‌ನನ್ನು ಬಂಧನ ಮಾಡಲಾಗಿದೆ.

    ಚಾಮರಾಜನಗರ ಮೂಲದ ಬಾಲಕಿ ಮೇಲೆ ಗೋವಿಂದರಾಜನಗರ ಪೊಲೀಸ್ ಕಾನ್ಸ್‌ಟೇಬಲ್‌ ದೌರ್ಜನ್ಯ ಎಸಗಿದ್ದ ಎಂದು ಅಪ್ರಾಪ್ತೆಯ ಪೋಷಕರು ದೂರು ಕೊಟ್ಟಿದ್ದಾರೆ. ಈ ಆರೋಪದ ಆಧಾರ ಮೇಲೆ ಕಾನ್ಸ್‌ಟೇಬಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: 6 ರಿಂದ 7 ಮಂದಿ ಸೇರಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಶಂಕಿತರು ವಶ  

    ನಡೆದಿದ್ದೇನು?
    ಗೋವಿಂದರಾಜನಗರದ ರಸ್ತೆ ಬದಿಯ ಪಾರ್ಕ್‍ನಲ್ಲಿ ಬಾಲಕಿ ಇದ್ದಳು. ಈ ವೇಳೆ ಕಾನ್ಸ್‌ಟೇಬಲ್‌ ಸಹಾಯ ಮಾಡುವ ನೆಪದಲ್ಲಿ ಬಾಲಕಿ ಹತ್ತಿರ ಹೋಗಿದ್ದ. ಬಳಿಕ ಆಕೆಯನ್ನು ತನ್ನ ರೂಂಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ಮರುದಿನ ಬಾಲಕಿಯನ್ನು ವಾಪಸ್ ಊರಿಗೆ ಕಳಿಸಿದ್ದ.

    ಬಾಲಕಿ ಮನೆಗೆ ಹೋದ ಬಳಿಕ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಪರಿಣಾಮ ಪೋಷಕರು ಆಕ್ರೋಶಗೊಂಡಿದ್ದು, ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಈ ಮಾಹಿತಿ ಮೇರೆಗೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದು, ಗೋವಿಂದರಾಜನಗರ ಪೊಲೀಸರು ಕಾನ್ಸ್‌ಟೇಬಲ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಯುವತಿ ಫೋಟೋ ಬಳಸಿ ಯುವಕರಿಂದ 19 ಲಕ್ಷ ರೂ. ಎಗರಿಸಿದ್ದ ಆರೋಪಿ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

  • ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಶಂಕಿತರು ವಶ

    ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಶಂಕಿತರು ವಶ

    ಜೈಪುರ: ರಾಜಸ್ಥಾನದ ಧೋಲ್ಪುರ್ ಜಿಲ್ಲೆಯ ಬರಿ ಎಂಬಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

    ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಮೂವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿಕೊಂಡಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಮುಳುಗಡೆಯಾದ ಶ್ರೀಕೃಷ್ಣದೇವರಾಯ ಸಮಾಧಿ ಮಂಟಪ: ಮತ್ತೆ ಪ್ರವಾಹದ ಭೀತಿ 

    ಬ್ಯಾರಿ ಸರ್ಕಲ್ ಆಫೀಸ್ ಮನೀಶ್ ಶರ್ಮಾ ಅವರು ಈ ಕುರಿತು ಮಾಹಿತಿ ಕೊಟ್ಟಿದ್ದು, 14 ವರ್ಷದ ಬಾಲಕಿ ಮೇಲೆ 6 ರಿಂದ 7 ಜನರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬೈಕಿನಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬ ಅವಳನ್ನು ಹತ್ತಿರದ ಟೋಲ್‍ಗೆ ಕರೆದುಕೊಂಡು ಹೋಗಿದ್ದಾನೆ. ನಂತರ ಆಕೆಯನ್ನು 6 ರಿಂದ 7 ಪುರುಷರು ಕರೆದೊಯ್ದಿದ್ದು, ಅತ್ಯಾಚಾರ ಮಾಡಿದ್ದಾರೆ. ಮೂವರು ಶಂಕಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.

    ಪ್ರಸ್ತುತ ಸಂತ್ರಸ್ತೆಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಾಗಿದೆ. ಘಟನೆಯ ಕುರಿತು ತನಿಖೆ ನಡೆಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

    CRIME 2

    ನಡೆದಿದ್ದೇನು?
    ಘಟನೆಯ ಕುರಿತು ವಿವರಿಸಿದ ಶರ್ಮಾ ಅವರು, ಸಂತ್ರಸ್ತ ಜುಲೈ 26 ರಂದು ಸಂಜೆ ಮಾರುಕಟ್ಟೆಗೆ ಹೋಗಿದ್ದಳು. ಅಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬ ಅವಳನ್ನು ತನ್ನ ಬೈಕ್‍ನಲ್ಲಿ ಕುಳಿತುಕೊಳ್ಳುವಂತೆ ಆಮಿಷವೊಡ್ಡಿದ್ದಾನೆ. ಅದಕ್ಕೆ ಆಕೆ ಬೈಕ್ ಮೇಲೆ ಕುಳಿತುಕೊಂಡಿದ್ದಾಳೆ. ಆದರೆ ಬೆಸರಿ ರಸ್ತೆಯಲ್ಲಿರುವ ಟೋಲ್‍ನಲ್ಲಿ ಅವಳನ್ನು ಬೀಳಿಸಿದ್ದಾನೆ. ತಕ್ಷಣ ಅಲ್ಲಿದ್ದ ಸುಮಾರು ಆರರಿಂದ ಏಳು ಜನರು ಆಕೆಯನ್ನು ತಮ್ಮ ವಾಹನದಲ್ಲಿ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇದನ್ನೂ ಓದಿ:  ಯುವತಿ ಫೋಟೋ ಬಳಸಿ ಯುವಕರಿಂದ 19 ಲಕ್ಷ ರೂ. ಎಗರಿಸಿದ್ದ ಆರೋಪಿ ಅರೆಸ್ಟ್

    ರಾತ್ರಿಯಿಡೀ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಮರುದಿನ ದೇವಸ್ಥಾನದ ಬಳಿ ಬಿಟ್ಟು ಹೋಗಿದ್ದಾರೆ. ಆಕೆಯ ಕುಟುಂಬದವರು ಆಕೆಯನ್ನು ಹುಡುಕಿಕೊಂಡು ಹೋಗುವಾಗ ದೇವಸ್ಥಾನದಲ್ಲಿ ಪತ್ತೆಯಾಗಿದ್ದಾಳೆ. ಘಟನೆಯ ಬಗ್ಗೆ ತನ್ನ ಕುಟುಂಬಕ್ಕೆ ತಿಳಿಸಿದ್ದಾಳೆ. ಈ ಹಿನ್ನೆಲೆ ಕುಟುಂಬದವರು ಆರೋಪಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಸಂತ್ರಸ್ತೆಗೆ ಪೊಲೀಸರೇ ವೈದ್ಯಕೀಯ ಚಿಕಿತ್ಸೆ ಕೊಡಿಸಿದರು ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಪ್ರಾಪ್ತೆ ಮೇಲೆ ಅತ್ಯಾಚಾರ- ಆ್ಯಸಿಡ್ ಕುಡಿಸಿ ಕೊಲೆಗೆ ಯತ್ನ

    ನವದೆಹಲಿ: ಅಪ್ರಾಪ್ತೆ ಮೇಲೆ ಆಕೆ ಕೆಲಸ ಮಾಡುತ್ತಿದ್ದ ಕಾರ್ಖಾನೆಯೊಂದರ ಮ್ಯಾನೇಜರ್ ಅತ್ಯಾಚಾರವೆಸಗಿ ಬಲವಂತವಾಗಿ ಆ್ಯಸಿಡ್ ಕುಡಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ.

    ಕಾರ್ಖಾನೆಯ ಮ್ಯಾನೇಜರ್ ಜೈಪ್ರಕಾಶ್(31) ಬಂಧಿತ ಆರೋಪಿ. 15 ವರ್ಷದ ಬಾಲಕಿಯೊಬ್ಬಳು ಶೂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಳು. ಅಲ್ಲಿನ ಮ್ಯಾನೇಜರ್ ಆಗಿ ಜೈಪ್ರಕಾಶ್ ಕೆಲಸ ಮಾಡುತ್ತಿದ್ದ. ಈತ ಆಕೆಯ ಬಳಿ ಬಂದು ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನು ಭೇಟಿ ಮಾಡಿಸುತ್ತೇನೆ ಎಂದು ನೆಪ ಹೇಳಿದ. ಇದನ್ನು ನಂಬಿದ ಆಕೆಯನ್ನು ತನ್ನ ಮನೆಗೆ ಕರೆದುಕೊಂಡು ಬಂದಿದ್ದಾನೆ. ಅಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಷ್ಟೇ ಅಲ್ಲದೇ ಯಾರಿಗೂ ಹೇಳದಂತೆ ಬೆದರಿಕೆಯನ್ನು ಹಾಕಿದ್ದಾನೆ.

    POLICE JEEP

    ಇದಾದ ಬಳಿಕ ಮನೆಗೆ ಹೋಗುತ್ತಿದ್ದ ರಸ್ತೆಯಲ್ಲಿ ಆಕೆಯನ್ನು ಜೈಪ್ರಕಾಶ್ ತಡೆದಿದ್ದಾನೆ. ರಸ್ತೆಯಲ್ಲೇ ಆಕೆಗೆ ಬಲವಂತವಾಗಿ ಆ್ಯಸಿಡ್‍ನ್ನು ಕುಡಿಸಿದ್ದಾನೆ. ಇದರಿಂದಾಗಿ ಆಕೆ ಮನೆಗೆ ತಲುಪುತ್ತಿದ್ದಂತೆ ಪ್ರಜ್ಞಾಹೀನಳಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಗಂಭೀರ ಸ್ಥಿತಿಯಲ್ಲಿದ್ದರಿಂದ ಎಮ್ಸ್‌ಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಭಾರೀ ಮಳೆಗೆ ಬೆಳಗಾವಿಯ 13 ಸೇತುವೆಗಳು ಜಲಾವೃತ – ಮತ್ತೆ ಪ್ರವಾಹ ಭೀತಿ

    ಈ ಸಂಬಂಧ ದೆಹಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಜೈಪ್ರಕಾಶ್‍ನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – ಇಲಿ ಪಾಷಾಣ ಸೇವಿಸಿ ಗೃಹಿಣಿ ಆತ್ಮಹತ್ಯೆ

    Live Tv
    [brid partner=56869869 player=32851 video=960834 autoplay=true]

  • ಜೈಲಿಗಟ್ಟಿದ್ದ ಮಹಿಳೆಗೆ ಚಾಕು ಇರಿದು, ಅಪ್ರಾಪ್ತ ಮಗಳೊಂದಿಗೆ ಆರೋಪಿ ಪರಾರಿ

    ಜೈಲಿಗಟ್ಟಿದ್ದ ಮಹಿಳೆಗೆ ಚಾಕು ಇರಿದು, ಅಪ್ರಾಪ್ತ ಮಗಳೊಂದಿಗೆ ಆರೋಪಿ ಪರಾರಿ

    ಧಾರವಾಡ: ಪೋಕ್ಸೋ ಕೇಸ್‌ನಲ್ಲಿ ಕಳೆದ ವರ್ಷ ಜೈಲು ಸೇರಿದ್ದ ಆರೋಪಿ ಜಾಮೀನಿನ ಮೇಲೆ ಹೊರ ಬಂದು, ಕೇಸ್ ದಾಖಲಿಸಿದ್ದ ಮಹಿಳೆಗೆ ಚಾಕು ಇರಿದಿದ್ದಾನೆ. ಮಾತ್ರವಲ್ಲದೇ ಮಹಿಳೆಯ ಅಪ್ರಾಪ್ತ ಮಗಳನ್ನೂ ಆತ ಹೊತ್ತೊಯ್ದಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

    ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಪರಶುರಾಮ್ ಲಮಾಣಿ ಕಳೆದ ವರ್ಷ ಪೋಕ್ಸೋ ಕೇಸ್‌ನಲ್ಲಿ ಜೈಲು ಸೇರಿದ್ದ. ಈ ವರ್ಷ ಏಪ್ರಿಲ್‌ನಲ್ಲಿ ಜಾಮೀನಿನ ಮೇಲೆ ಆತ ಹೊರ ಬಂದಿದ್ದ. ಶುಕ್ರವಾರ ರಾತ್ರಿ ಪರಶುರಾಮ್ ತನ್ನ ಮೇಲೆ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಜೀಜಾಬಾಯಿಗೆ ಚಾಕು ಇರಿದಿದ್ದಾನೆ.

    ಕಳೆದ ವರ್ಷ ಪರಶುರಾಮ್ ಜೀಜಾಬಾಯಿಯ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ್ದ. ಹೀಗಾಗಿ ಜೀಜಾಬಾಯಿ ಪರಶುರಾಮ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿದ್ದರು. ಈ ಸೇಡನ್ನು ತೀರಿಸಿಕೊಳ್ಳಲು ಪರಶುರಾಮ್ ಮಹಿಳೆ ಮನೆಗೆ ಹೋಗಿದ್ದು, ಕೃತ್ಯ ಎಸಗಿ ಮಗಳನ್ನೂ ಕರೆದುಕೊಂಡು ಪರಾರಿಯಾಗಿದ್ದಾನೆ. ಇದನ್ನೂ ಓದಿ: ಉತ್ತರ ಪ್ರದೇಶದ ಜೈಲು ನಿಯಮಗಳಲ್ಲಿ ಬದಲಾವಣೆ – ಏನಿದೆ ಹೊಸ ರೂಲ್ಸ್?

    ಪರಶುರಾಮ್ ಹಾಗೂ ಜೀಜಾಬಾಯಿ ಮಗಳ ನಡುವೆ ಪ್ರೇಮವಿತ್ತು. ಮಗಳು ಅಪ್ರಾಪ್ತೆ ಇದ್ದ ಕಾರಣ ಆಕೆಯ ರಕ್ಷಣೆಗೆ ಜೀಜಾಬಾಯಿ ನಿಂತಿದ್ದರು. ಆದರೆ ಜೀಜಾಬಾಯಿಗೆ ಚಾಕು ಇರಿಯಲು ಪರಶುರಾಮ್‌ಗೆ ಮಗಳೂ ಸಾತ್ ನೀಡಿದ್ದಳು ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಎಲ್ಲ ಶಾಸಕರಿಗೆ 50 ಲಕ್ಷ, ಅಡ್ಡ ಮತಕ್ಕೆ ಕಾರಣವೇನು? – ಹಳೇ ಕಥೆ ಬಿಚ್ಚಿಟ್ಟ ಶ್ರೀನಿವಾಸ್ ಗೌಡ

    ಈ ಸಂಬಂಧ ಜೀಜಾಬಾಯಿ ಧಾರವಾಡ ಉಪನಗರ ಠಾಣೆಯಲ್ಲಿ ಪರಶುರಾಮ್ ಮೇಲೆ ದೂರನ್ನು ನೀಡಿದ್ದಾರೆ. ಕೊಲೆ ಪ್ರಯತ್ನ ಹಾಗೂ ಮಗಳನ್ನು ಅಪಹರಣ ಮಾಡಿರುವುದಾಗಿ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 2 ತಂಡಗಳನ್ನು ರಚಿಸಿ, ಆರೋಪಿಯನ್ನು ಶೀಘ್ರವೇ ಪತ್ತೆ ಮಾಡಲಾಗುವುದು ಎಂದು ಪೊಲೀಸ್ ಆಯುಕ್ತ ಲಾಬುರಾಮ್ ತಿಳಿಸಿದ್ದಾರೆ.

  • ಕೋಲ್ಡ್ ಡ್ರಿಂಕ್ಸ್‌ನಲ್ಲಿ ನಿದ್ದೆ ಮಾತ್ರೆ ಬೆರೆಸಿ ಅಪ್ರಾಪ್ತೆ ಮೇಲೆ ರೇಪ್

    ಕೋಲ್ಡ್ ಡ್ರಿಂಕ್ಸ್‌ನಲ್ಲಿ ನಿದ್ದೆ ಮಾತ್ರೆ ಬೆರೆಸಿ ಅಪ್ರಾಪ್ತೆ ಮೇಲೆ ರೇಪ್

    ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿದ್ದ ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

    ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತೆಯ ಸ್ನೇಹ ಬೆಳೆಸಿದ್ದ. ಇದಾದ ಬಳಿಕ ಬಾಲಕಿಯನ್ನು ಭೇಟಿಯಾಗಿದ್ದನು. ಆ ವೇಳೆ ಆಕೆಯ ಮೇಲೆ ಆತ ಅತ್ಯಾಚಾರವೆಸಗಿದ್ದಾನೆ. ಆಕೆಯ ಮೇಲೆ ಅತ್ಯಾಚಾರ ನಡೆಸುವ ಮೊದಲು ಬಾಲಕಿಗೆ ಕೋಲ್ಡ್ ಡ್ರಿಂಕ್ಸ್ ನೀಡಿದ್ದನು. ಆ ಕೋಲ್ಡ್ ಡ್ರಿಂಕ್ಸ್‌ನಲ್ಲಿ ನಿದ್ದೆ ಮಾತ್ರೆಯನ್ನು ಯುವಕ ಬೆದರಿಸಿದ್ದ. ಇದನ್ನೂ ಓದಿ: ಶಾಸಕ ಬಸವರಾಜ್ ದಡೆಸಗೂರುರಿಂದ ಅನ್ಯಾಯ – ನೇಣು ಬಿಗಿದುಕೊಳ್ಳಲು ಮುಂದಾದ ಮಹಿಳಾಧಿಕಾರಿ

    ಇದಾದ ನಂತರ ಪೋಷಕರಿಗೆ ತಿಳಿಸಿದರೆ ವೀಡಿಯೋವನ್ನು ಇಂಟರ್‌ನೆಟ್‍ನಲ್ಲಿ ಅಪ್‍ಲೋಡ್ ಮಾಡುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದಾನೆ. ಈ ರೀತಿ ಬೆದರಿಕೆ ಹಾಕುತ್ತಾ ಕಳೆದ 4 ವರ್ಷದಿಂದ ನಿರಂತರವಾಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ಸಂಬಂಧ ಅಪ್ರಾಪ್ತೆಯು ಪೊಲೀಸರಿಗೆ ದೂರು ನೀಡಿದ್ದು, ಅಪ್ರಾಪ್ತೆಯ ಹೇಳಿಕೆ ಆಧಾರದ ಮೇಲೆ ಪುಣೆ ಭಾರತಿ ವಿದ್ಯಾಪೀಠ ಪೊಲೀಸರು ಶನಿವಾರ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: 21ನೇ ಶತಮಾನದ ಭಾರತವು ಜನಕೇಂದ್ರಿತ ಆಡಳಿತದೊಂದಿಗೆ ಮುನ್ನಡೆಯುತ್ತಿದೆ: ಮೋದಿ

  • ಹೈದರಾಬಾದ್‍ನಲ್ಲಿ ಗ್ಯಾಂಗ್‌ರೇಪ್ ಬೆನ್ನಲ್ಲೆ ಮತ್ತೆರಡು ಅಪ್ರಾಪ್ತೆಯರ ಮೇಲೆ ಅತ್ಯಾಚಾರ

    ಹೈದರಾಬಾದ್‍ನಲ್ಲಿ ಗ್ಯಾಂಗ್‌ರೇಪ್ ಬೆನ್ನಲ್ಲೆ ಮತ್ತೆರಡು ಅಪ್ರಾಪ್ತೆಯರ ಮೇಲೆ ಅತ್ಯಾಚಾರ

    ಹೈದರಾಬಾದ್: ಹೈದರಾಬಾದ್‍ನಲ್ಲಿ ನಡೆದ ಗ್ಯಾಂಗ್ ರೇಪ್ ನಗರವನ್ನೆ ತಲ್ಲಣಗೊಳಿಸಿದೆ. ಇದರ ಬೆನ್ನಲ್ಲೆ ಮತ್ತೆರಡು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆದಿರುವುದು ನಗರವನ್ನೆ ಬೆಚ್ಚಿಬಿಳಿಸಿದೆ.

    ಒಂದು ಪ್ರಕರಣದಲ್ಲಿ, ಹೈದರಾಬಾದ್‍ನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಕೊಂಡೂರ್ಗ್ ಗ್ರಾಮದ ಕ್ಯಾಬ್ ಚಾಲಕನೊಬ್ಬ ತನ್ನ ಮನೆಗೆ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ನಂತರ ಸ್ನೇಹಿತನ ಜೊತೆ ಸೇರಿ ಅತ್ಯಾಚಾರ ಎಸಗಿದ್ದಾರೆ. ಕ್ಯಾಬ್ ಚಾಲಕ ಶೇಕ್ ಕಲೀಂ ಅಲಿ (36) ತನ್ನ ಸ್ನೇಹಿತ ಲುಕ್ಮಾನ್ ಅಹಮದ್ ಯಜ್ದಾನಿ (36) ಬಂಧಿತ ಆರೋಪಿ.

    ಬಾಲಕಿಯೊಬ್ಬಳು ಚಿಕ್ಕಮ್ಮನ ಮನೆಯಿಂದ ತನ್ನ ಮನೆಗೆ ನಡೆದುಕೊಂಡು ಹೋಗುವಾಗ ಅಲ್ಲಿಯೇ ಬರುತ್ತಿದ್ದ ಕ್ಯಾಬ್ ಚಾಲಕ ಡ್ರಾಪ್ ನೀಡುವುದಾಗಿ ಹೇಳಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ಆತ ಹಾಗೂ ಆತನ ಸ್ನೇಹಿತರು ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿ, ಆಕೆಯನ್ನು ಸುಲ್ತಾನ್ ಶಾಹಿ ಪ್ರದೇಶದಲ್ಲಿ ನಡುರಾತ್ರಿ ಬಿಟ್ಟು ಹೋಗಿದ್ದರು.

    ಈ ಸಂಬಂಧ ಆಕೆಯ ಚಿಕ್ಕಮ್ಮ ಬಾಲಕಿ ನಾಪತ್ತೆ ಆಗಿದ್ದಾಳೆ ಎಂದು ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಪೊಲೀಸರು ಹುಡುಕುವಾಗ ಬಾಲಕಿ ಪತ್ತೆಯಾಗಿದ್ದಾಳೆ. ಈ ಸಂಬಂಧ ಬಾಲಕಿಯು ಪೊಲೀಸರಿಗೆ ನಡೆದ ಘಟನೆಯನ್ನು ತಿಳಿಸಿದ್ದು, ಕ್ಯಾಬ್ ಚಾಲಕ ಹಾಗೂ ಆತನ ಸ್ನೇಹಿತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಗೋ ಕಳ್ಳತನದಲ್ಲಿ ಬಂಧಿತನಾದವನಿಗೆ ಕಸ್ಟಡಿಯಲ್ಲಿ ಕರೆಂಟ್ ಶಾಕ್, ಚಿತ್ರಹಿಂಸೆ – ಐವರು ಪೊಲೀಸರ ಅಮಾನತು

    ಮತ್ತೊಂದು ಪ್ರಕರಣದಲ್ಲಿ ಮೊಹಮ್ಮದ್ ಸುಫಿಯಾನ್ (21) ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈತ ಚಾರ್ಮಿನಾರ್ ಬಳಿಯ ಬಟ್ಟೆ ಅಂಗಡಿಯಲ್ಲಿ ಸೇಲ್ಸ್ ಪರ್ಸನ್ ಆಗಿ ಕೆಲಸ ಮಾಡುತ್ತಿದ್ದ. ಬಾಲಕಿ ಮನೆಗೆ ಹಿಂದಿರುಗುತ್ತಿದ್ದಾಗ ಆರೋಪಿಗಳು ಆಕೆಗೆ ತಿಂಡಿ ಆಮಿಷವೊಡ್ಡಿದ್ದಾನೆ. ಈ ಹಿನ್ನೆಲೆಯಲ್ಲಿ ಲಂಗರ್ ಹೌಜ್ ಪ್ರದೇಶದಲ್ಲಿನ ತನ್ನ ಮನೆಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಮರುದಿನ ಅವನು ಅವಳನ್ನು ಅಂಗಡಿ ಬಳಿ ಬಿಟ್ಟಿದ್ದಾನೆ. ಇದನ್ನೂ ಓದಿ: ಮಸೀದಿ ಆಯ್ತು ಈಗ ಈದ್ಗಾ ಮೈದಾನ – ಏನಿದು ವಿವಾದ? ಹಿಂದೂಗಳ ವಾದವೇನು? ಬಿಬಿಎಂಪಿ ದಾಖಲೆಯಲ್ಲಿ ಏನಿದೆ?

    ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದನ್ನು ನೋಡಿದ ಆಕೆಯ ತಾಯಿಯನ್ನು ವಿಚಾರಿಸಿದಾಗ ನಡೆದ ಘಟನೆಯನ್ನೆಲ್ಲಾ ಬಹಿರಂಗ ಪಡಿಸಿದ್ದಾಳೆ. ಸಂತ್ರಸ್ತೆಯ ತಾಯಿ ಕಾಲಾಪತ್ತರ್ ಪೊಲೀಸ್ ಠಾಣೆಗೆ ಬಂದು ಮೊಹಮ್ಮದ್ ಸುಫಿಯಾನ್ ವಿರುದ್ಧ ದೂರು ದಾಖಲಿಸಿದ್ದಾರೆ.

  • ಮಕ್ಕಳ ಅಶ್ಲೀಲ ಚಿತ್ರಗಳು, ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ – ತಪ್ಪೊಪ್ಪಿಕೊಂಡ ಚರ್ಚ್ ಲೀಡರ್

    ಮಕ್ಕಳ ಅಶ್ಲೀಲ ಚಿತ್ರಗಳು, ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ – ತಪ್ಪೊಪ್ಪಿಕೊಂಡ ಚರ್ಚ್ ಲೀಡರ್

    ಮೆಕ್ಸಿಕೋ: ಚರ್ಚ್ ಲೀಡರ್‌ವೊಬ್ಬನ ಮೇಲೆ ಮಕ್ಕಳ ಅಶ್ಲೀಲ ಚಿತ್ರಗಳು ಮತ್ತು ಅಪ್ರಾಪ್ತ ವಯಸ್ಕರ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಗಳು ಕೇಳಿ ಬರುತ್ತಿತ್ತು. ಈ ಹಿನ್ನೆಲೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

    ವಿಶ್ವದಾದ್ಯಂತ ಸುಮಾರು 5 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದೇನೆ ಎಂದು ಹೇಳಿಕೊಳ್ಳುವ ಮೆಕ್ಸಿಕೋ ಮೂಲದ ಇವಾಂಜೆಲಿಕಲ್ ಮೆಗಾಚರ್ಚ್‍ನ ಮುಖ್ಯಸ್ಥ ಮೂರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಮಕ್ಕಳ  ಅಶ್ಲೀಲ ಫೋಟೋಗಳನ್ನು ತೆಗೆಯುತ್ತಿದ್ದಾನೆ ಎಂಬ ಆರೋಪ ಕೇಳಿ ಬರುತ್ತಿತ್ತು. ಈ ಹಿನ್ನೆಲೆ ಪೊಲೀಸರು ಮುಖ್ಯಸ್ಥನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಿದ್ದು, ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಕಾರಿನಲ್ಲೇ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್ – ಓರ್ವ ಅರೆಸ್ಟ್, ಆರೋಪಿಗಳ ಪೈಕಿ ಮೂವರು ಅಪ್ರಾಪ್ತರು

    ಯಾರಿದು?
    ಆರೋಪಿಯನ್ನು ಗ್ವಾಡಲಜಾರಾ ಮೂಲದ ಚರ್ಚ್ ಲಾ ಲುಜ್ ಡೆಲ್ ಮುಂಡೋದ ನಾಯಕ ಮತ್ತು ಧರ್ಮಪ್ರಚಾರಕ ನಾಸನ್ ಜೋಕ್ವಿನ್ ಗಾರ್ಸಿಯಾ ಎಂದು ಗುರುತಿಸಲಾಗಿದೆ. ಗಾರ್ಸಿಯಾನನ್ನು ವಿಚಾರಣೆ ವೇಳೆ, ನಾನು ಅಪ್ರಾಪ್ತ ವಯಸ್ಕ ಬಾಲಕಿಯರ ಜೊತೆ ಅಶ್ಲೀಲವಾಗಿ ವರ್ತಿಸಿರುವುದು ಮತ್ತು ಮಾನವ ಕಳ್ಳಸಾಗಣೆಯನ್ನು ಒಳಗೊಂಡ ಆರೋಪಗಳು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ.

    2019 ರಲ್ಲಿ ಎರಡನೇ ಸಹ-ಪ್ರತಿವಾದಿ ಅಲೋಂಡ್ರಾ ಒಕಾಂಪೊನನ್ನು ಸಹ ಅಪ್ರಾಪ್ತ ಮಕ್ಕಳೊಂದಿಗೆ ಲೈಂಗಿಕ ಸಂಬಂಧವೊಂದಿದ್ದಕ್ಕೆ ಬಂಧಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಕುಡುಕ ತಂದೆಯಿಂದ ಚಿತ್ರಹಿಂಸೆ – ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತೆ

    ಕುಡುಕ ತಂದೆಯಿಂದ ಚಿತ್ರಹಿಂಸೆ – ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತೆ

    ಹೈದರಾಬಾದ್: ಬಾಲಕಿಯೊಬ್ಬಳು ತನ್ನ ಮದ್ಯವ್ಯಸನಿ ತಂದೆಯಿಂದ ದೈಹಿಕ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ನಂದಿಗಾಮ ಗ್ರಾಮದಲ್ಲಿ ನಡೆದಿದೆ.

    ಬಾಲಕಿಯು ಮನೆಯಲ್ಲಿ ಒಬ್ಬಳೇ ಇದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಈಗಾಗಲೇ ಆಕೆಯ ತಂದೆಯನ್ನು ಬಂಧಿಸಿದ್ದಾರೆ. ಆರೋಪಿ ರೈತನಾಗಿದ್ದು, ಆತನ ಪತ್ನಿ ಒಂದು ವರ್ಷದ ಹಿಂದೆಯೇ ಅನಾರೋಗ್ಯದಿಂದ ಮೃತಪಟ್ಟಿದ್ದರು. ಆರೋಪಿಗೆ ಇಬ್ಬರು ಮಕ್ಕಳಿದ್ದು, ಪತ್ನಿಯ ಸಾವಿನ ನಂತರ ಮಕ್ಕಳಿಗೆ ಚಿತ್ರಹಿಂಸೆ ನೀಡಲಾರಂಭಿಸಿದನು. ಅವನ ಹಿರಿಯ ಮಗನೊಬ್ಬನು ಅಂಗಡಿಯೊಂದರಲ್ಲಿ ಕೆಲಸ ಮಾಡಲು ಪಟ್ಟಣಕ್ಕೆ ತೆರಳಿದ್ದು, ಅಪ್ಪನ ಟಾರ್ಚರ್ ತಡೆದುಕೊಳ್ಳಲಾಗದೇ ಅಲ್ಲಿಯೇ ಇರಲು ಪ್ರಾರಂಭಿಸಿದನು. ಇದನ್ನೂ ಓದಿ: ಮಾಟಕ್ಕೆ ಒಳಗಾದ ಮಹಿಳೆಗೆ ಚಾಟಿಯಿಂದ ಹೊಡೆದ ಪೂಜಾರಿ

    POLICE JEEP

    ಆದರೆ ಮೃತ ಬಾಲಕಿಯು ತನ್ನ ಮದ್ಯವ್ಯಸನಿ ತಂದೆಯ ಚಿತ್ರಹಿಂಸೆಗೆ ನೊಂದು ತನ್ನ ಜೀವನವನ್ನು ಕೊನೆಗೊಳಿಸಿಕೊಂಡಿದ್ದಾಳೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಈಗಾಗಲೇ ಬಂಧಿಸಿದ್ದೇವೆ ಎಂದು ಶಾದ್‍ನಗರ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಕುಶಾಲ್ಕರ್ ತಿಳಿಸಿದ್ದಾರೆ. ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿನ ಡಿಸ್ಪ್ಲೆ ಹ್ಯಾಕ್- ಅಶ್ಲೀಲ ವೀಡಿಯೋ ಪ್ರಸಾರ

  • ತನ್ನ ಪ್ರಿಯಕರನಿಗೆ ಮಗಳನ್ನು ಅತ್ಯಾಚಾರ ಮಾಡಲು ಅವಕಾಶ ನೀಡಿದ ಪಾಪಿ ತಾಯಿ

    ತನ್ನ ಪ್ರಿಯಕರನಿಗೆ ಮಗಳನ್ನು ಅತ್ಯಾಚಾರ ಮಾಡಲು ಅವಕಾಶ ನೀಡಿದ ಪಾಪಿ ತಾಯಿ

    ಚೆನ್ನೈ: ತಾಯಿಯೇ ಅಪ್ರಾಪ್ತ ಮಗಳನ್ನು ಅತ್ಯಾಚಾರ ಮಾಡಲು ತನ್ನ ಪ್ರಿಯಕರನಿಗೆ ಅವಕಾಶ ಮಾಡಿಕೊಟ್ಟ ಘಟನೆ ಚೆನ್ನೈನಲ್ಲಿ ನಡೆದಿದೆ.

    38 ವರ್ಷದ ಮಹಿಳೆಯೊಬ್ಬಳು ದಿನಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು. ಆಕೆಗೆ ಒಬ್ಬಳು ಮಗಳಿದ್ದಳು. ಅವಳು ಪಿಯುಸಿಯನ್ನು ಓದುತ್ತಿದ್ದಳು. ಆದರೆ ಮಹಿಳೆಗೆ 50 ವರ್ಷದ ಪುರುಷನೊಂದಿಗೆ ಅಕ್ರಮ ಸಂಬಂಧವಿತ್ತು. ಕಾಲ ನಂತರದಲ್ಲಿ ಆ ವ್ಯಕ್ತಿ ಅಪ್ರಾಪ್ತೆ ಮಗಳನ್ನು ಮದುವೆ ಆಗುವುದಾಗಿ ಭರವಸೆ ನೀಡಿದ್ದ. ಇದರಿಂದಾಗಿ ಮಹಿಳೆಯ ಮುಂದೆ ಹಲವು ಬಾರಿ ಮಗಳನ್ನು ಅತ್ಯಾಚಾರ ಮಾಡಿದ್ದ.

    ಆದರೆ ಆ ಅಪ್ರಾಪ್ತೆಯು ಗರ್ಭಿಣಿಯಾದ್ದರಿಂದ ಮಹಿಳೆಯು ಶಿಕ್ಷಣವನ್ನು ನಿಲ್ಲಿಸಿದಳು. ನೆರೆ ಹೊರೆಯವರಿಗೆ ಅನುಮಾನ ಬಾರದೆಂದು ಅವಳನ್ನು ಮನೆಯಲ್ಲೇ ಕೂಡಿ ಹಾಕಿದ್ದರು. ಇದಾದ ಬಳಿಕ ಅಪ್ರಾಪ್ತೆ ಹೆರಿಗೆ ನೋವಿನಿಂದ ಬಳಲುತ್ತಿದ್ದಾಗ ಆಸ್ಪತ್ರೆಗೆ ಕರೆದುಕೊಂಡು ಹೋದರೆ ಅನುಮಾನ ಬರುತ್ತದೆ ಎಂದು ಮನೆಯಲ್ಲೇ ಹೆರಿಗೆ ಮಾಡಿಸಿದ್ದಳು. ಇದನ್ನೂ ಓದಿ: ನಾನು ಆ್ಯಸಿಡ್ ಹಾಕೋಕೆ ಯುವತಿನೇ ಕಾರಣ – ಕಿರಾತಕ ನಾಗೇಶ್ ಆರೋಪ

    ಮಗು ಅಸ್ವಸ್ಥಗೊಂಡಿದ್ದರಿಂದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಗುವಿನ ಜನ್ಮ ದಾಖಲೆಯನ್ನು ಹಾಗೂ ತಾಯಿಯ ಆಧಾರ್ ಕಾರ್ಡ್‍ನ್ನು ಕೇಳಿದ್ದಾರೆ. ಈ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಈ ಸಂಬಂಧ ಚೆನ್ನೈ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ತನ್ನ ಪುಟ್ಟ ಮಗುವಿನೊಂದಿಗೆ ಪತ್ನಿಗಾಗಿ ಅಲೆದಾಡುತ್ತಿರುವ ಪತಿ