Tag: ಅಫ್ಘಾನಿಸ್ತಾನ್

  • ಏಷ್ಯಾಕಪ್ ಸೋಲು – ಪಾಕಿಸ್ತಾನ ಕಾಲೆಳೆದ ವಾಸಿಮ್ ಜಾಫರ್

    ಏಷ್ಯಾಕಪ್ ಸೋಲು – ಪಾಕಿಸ್ತಾನ ಕಾಲೆಳೆದ ವಾಸಿಮ್ ಜಾಫರ್

    ದುಬೈ: ಏಷ್ಯಾಕಪ್-2022ರ ಟೂರ್ನಿಯಲ್ಲಿ ತನ್ನ ಮೊದಲ ಪಂದ್ಯದಲ್ಲೇ ಭಾರತದ ಎದುರು ಸೋಲನುಭವಿಸಿದ ಪಾಕಿಸ್ತಾನ ತಂಡದ ವಿರುದ್ಧ ಜನ ಹಿಗ್ಗಾಮುಗ್ಗಾ ಟ್ರೋಲ್ ಮಾಡ್ತಿದ್ದಾರೆ.

    ಕಳೆದ ಎರಡು ದಿನಗಳಿಂದಲೂ ಟೀಂ ಇಂಡಿಯಾದ ಗೆಲುವನ್ನು ಇಡೀ ದೇಶದ ಜನ ಸಂಭ್ರಮಿಸುತ್ತಿದ್ದಾರೆ. ಡೆತ್ ಓವರ್‌ನಲ್ಲಿ ಟೀಂ ಇಂಡಿಯಾದ ಪ್ರದರ್ಶನದ ರೋಚಕತೆಯನ್ನೇ ಗುನುಗುತ್ತಾ, ಜಾಲತಾಣಗಳಲ್ಲೂ ನೆಚ್ಚಿನ ಕ್ರಿಕೆಟಿಗರ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಮತ್ತೊಂದೆಡೆ ಟ್ರೋಲಿಗರು ತಮ್ಮ-ತಮ್ಮ ಟ್ರೋಲ್ ಪೇಜ್‌ಗಳಲ್ಲಿ ಕ್ಯಾಪ್ಷನ್‌ಗಳನ್ನು ಹಾಸ್ಯಾಸ್ಪದ ಹೇಳಿಕೆಗಳನ್ನು ದಾಖಲಿಸುವ ಮೂಲಕ ಟ್ರೋಲ್‌ಗೆ ಗುರಿ ಮಾಡುತ್ತಿದ್ದಾರೆ.

    ಅಂತೆಯೇ ಆಗಾಗ್ಗೆ ಹಾಸ್ಯಾಸ್ಪದ ವೀಡಿಯೋಗಳನ್ನು ಹರಿಯಬಿಡುತ್ತಿದ್ದ ಮಾಜಿ ಕ್ರಿಕೆಟಿಗ ವಾಸಿಮ್ ಜಾಫರ್, ಟ್ವಿಟ್ಟರ್‌ನಲ್ಲಿ ವೀಡಿಯೋವೊಂದನ್ನು ಪೋಸ್ಟ್ ಮಾಡುವ ಮೂಲಕ ಪಾಕಿಸ್ತಾನ ತಂಡದ ಕಾಲೆಳೆದಿದ್ದಾರೆ. ಭಾರತದ ಎದುರು ಪಾಕಿಸ್ತಾನ ನೀಡಿದ ಪ್ರದರ್ಶನದ ಬಗ್ಗೆ ಹಾಸ್ಯ ತರಿಸುವ ಈ ವೀಡಿಯೋ ಈಗ ಭಾರೀ ಸದ್ದು ಮಾಡುತ್ತಿದೆ.

    ಜೊತೆಗೆ ಜಾಫರ್ `ಇದು ಟೀಂ ಇಂಡಿಯಾದ ಈ ವಿಶೇಷ ಗೆಲುವು, ಹಾರ್ದಿಕ್ ಪಾಂಡ್ಯ ಆಲ್‌ರೌಂಡರ್ ಆಟ, ಭುವನೇಶ್ವರ್ ಬೌಲಿಂಗ್ ಹಾಗೂ ಜಡೇಜಾ ಬ್ಯಾಟಿಂಗ್ ಎಲ್ಲವೂ ಅದ್ಭುತವಾಗಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ನೀಡಿದ ಪ್ರದರ್ಶನ ಹೇಗಿತ್ತು ಎಂಬುದರ ವೀಡಿಯೋ ಪ್ರತಿ ತುಣುಕು’ ಇಲ್ಲಿದೆ ಎಂದು ಬರೆದುಕೊಂಡಿದ್ದಾರೆ.

    ಏಷ್ಯಾಕಪ್ ಟೂರ್ನಿಯಲ್ಲಿ ಇತ್ತೀಚೆಗೆ ನಡೆದ ಇಂಡೋ-ಪಾಕ್ ಮ್ಯಾಚ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 19.5 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 147 ರನ್‌ಗಳನ್ನು ಗಳಿಸಿತ್ತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಭಾರತ 19.4 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್‌ಗಳಿಸಿ ಗೆಲುವು ಸಾಧಿಸಿತು.

    Live Tv
    [brid partner=56869869 player=32851 video=960834 autoplay=true]

  • ಟಿವಿ ಸ್ಕ್ರೀನ್‌ನಲ್ಲೇ ಹಾರ್ದಿಕ್ ಪಾಂಡ್ಯಾಗೆ ಮುತ್ತಿಟ್ಟ ಅಫ್ಘನ್ ಅಭಿಮಾನಿ

    ಟಿವಿ ಸ್ಕ್ರೀನ್‌ನಲ್ಲೇ ಹಾರ್ದಿಕ್ ಪಾಂಡ್ಯಾಗೆ ಮುತ್ತಿಟ್ಟ ಅಫ್ಘನ್ ಅಭಿಮಾನಿ

    ದುಬೈ/ಕಾಬೂಲ್: ಭಾರತೀಯ ಕ್ರಿಕೆಟಿಗರು ವಿಶ್ವದಾದ್ಯಂತ ಅಭಿಮಾನಿಗಳನ್ನ ಹೊಂದಿದ್ದಾರೆ ಎಂಬುದಕ್ಕೆ ಅಫ್ಘಾನಿಸ್ತಾನದಲ್ಲಿ ನಡೆದ ಘಟನೆಯೊಂದು ಸಾಕ್ಷಿಯಾಗಿದೆ.

    ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಏಷ್ಯಾ ಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ 5 ವಿಕೆಟ್‌ಗಳ ಅಂತರದಲ್ಲಿ ಗೆದ್ದು ಬೀಗಿತು. ಕೊನೆಯ ಕ್ಷಣದ ವರೆಗೂ ರೋಚಕತೆಯಿಂದಲೇ ಕೂಡಿದ ಪಂದ್ಯ ಪ್ರತಿ ಎಸೆತದಲ್ಲೂ ಅಭಿಮಾನಿಗಳ ಮೈ ರೋಮಾಂಚನಗೊಳಿಸುತ್ತಿತ್ತು. ಇದನ್ನೂ ಓದಿ: ಅಂದು ಗಾಯಾಳು, ಇಂದು ಮ್ಯಾಚ್ ವಿನ್ನರ್ – ಹಳೆಯ ಘಟನೆ ಬಿಚ್ಚಿಟ್ಟ ಪಾಂಡ್ಯ

    ಒತ್ತಡದ ನಡುವೆಯೂ ಬದ್ಧ ವೈರಿ ಪಾಕಿಸ್ತಾನವನ್ನು ಮಣಿಸಿದ ಟೀಂ ಇಂಡಿಯಾ ಖುಷಿಯನ್ನು ಇಡೀ ದೇಶವೇ ಸಂಭ್ರಮಿಸುತ್ತಿತ್ತು. ಇದೇ ವೇಳೆ ವಿದೇಶಗಳಲ್ಲೂ ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು. ಈ ನಡುವೆ ಅಫ್ಘಾನಿಸ್ತಾನದ ಅಭಿಮಾನಿಯೊಬ್ಬ ಟಿವಿ ಸ್ಕ್ರೀನ್‌ನಲ್ಲೇ ಹಾರ್ದಿಕ್ ಪಾಂಡ್ಯಾಗೆ ಮುತ್ತಿಡುವ ಮೂಲಕ ತನ್ನ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಹಾರ್ದಿಕ್ ಪಾಂಡ್ಯಗೆ ಮುತ್ತಿಡುತ್ತಿರುವ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ಜನರು ವೀಡಿಯೋ ವೀಕ್ಷಣೆ ಮಾಡಿದ್ದಾರೆ.

    ಅಲ್ಲದೇ ಇದೇ ಏಷ್ಯಾಕಪ್ ಟೂರ್ನಿಯಲ್ಲಿ ಸ್ಪರ್ಧೆಗಿಳಿದಿರುವ ಅಫ್ಘಾನಿಸ್ತಾನ್ ಸಹ ಭಾರತ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದೆ. ಇದನ್ನೂ ಓದಿ: AsiaCup: ಜಡೇಜಾ ಜಾದು, ಪಾಂಡ್ಯ ಪರಾಕ್ರಮ – ಪಾಕಿಸ್ತಾನದ ವಿರುದ್ಧ ಭಾರತಕ್ಕೆ 5 ವಿಕೆಟ್‌ಗಳ ರೋಚಕ ಜಯ

    ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 19.5 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 147 ರನ್‌ಗಳನ್ನು ಗಳಿಸಿತ್ತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಭಾರತ 19.4 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್‌ಗಳಿಸಿ ಗೆಲುವು ಸಾಧಿಸಿತು.

    Live Tv
    [brid partner=56869869 player=32851 video=960834 autoplay=true]

  • ಒಂದು ಯುದ್ಧದಿಂದ ತಪ್ಪಿಸಿಕೊಂಡು ಉಕ್ರೇನ್‍ಗೆ ಬಂದ್ರೆ ಇನ್ನೊಂದು ಯುದ್ಧ ಪ್ರಾರಂಭವಾಗಿದೆ: ಅಫ್ಘಾನ್ ನಿವಾಸಿ

    ಒಂದು ಯುದ್ಧದಿಂದ ತಪ್ಪಿಸಿಕೊಂಡು ಉಕ್ರೇನ್‍ಗೆ ಬಂದ್ರೆ ಇನ್ನೊಂದು ಯುದ್ಧ ಪ್ರಾರಂಭವಾಗಿದೆ: ಅಫ್ಘಾನ್ ನಿವಾಸಿ

    ಕೀವ್: ಅಫ್ಘಾನಿಸ್ತಾನದ ಯುದ್ಧವನ್ನು ತಪ್ಪಿಸಿಕೊಂಡು ಉಕ್ರೇನ್‍ಗೆ ಬಂದಿದ್ದೆ. ಆದರೆ ಇಲ್ಲಿ ಇನ್ನೊಂದು ಯುದ್ಧ ಪ್ರಾರಂಭವಾಗಿದೆ. ಇದು ನನ್ನ ದುರಾದೃಷ್ಟವಾಗಿದೆ ಎಂದು ಸಂತ್ರಸ್ತ ಅಜ್ಮಲ್ ರಹಮಾನಿ ಹೇಳಿದರು.

    ಪೋಲೆಂಡ್‍ಗೆ ದಾಟಿದ ಸ್ವಲ್ಪ ಸಮಯದ ನಂತರ ಮಾತನಾಡಿದ ಅವರು, ಒಂದು ವರ್ಷದ ಹಿಂದೆ ಅಫ್ಘಾನಿಸ್ತಾನವನ್ನು ತೊರೆದು ಉಕ್ರೇನ್‍ನಲ್ಲಿ ನೆಲೆಸಿದ್ದೆವು. ಇಲ್ಲಿ ಶಾಂತಿಯಿಂದ ನೆಲೆಸಿದ್ದೆವು. ಆದರೆ ಇಲ್ಲೂ ಕಳೆದ 5 ದಿನಗಳಿಂದ ಯುದ್ಧ ಪ್ರಾರಂಭವಾಗಿದ್ದು, ನಾನು ಹಾಗೂ ನನ್ನ ಕುಟುಂಬ ಪಲಾಯನ ಮಾಡಬೇಕಾದ ಪರಿಸ್ಥಿತಿ ಬಂದಿದೆ ಎಂದು ಅಳಲುತೊಡಿಕೊಂಡರು.

    ಅಫ್ಘಾನಿಸ್ತಾನದಲ್ಲಿದ್ದಾಗ ನನಗೆ ಸ್ವಂತ ಮನೆ ಕಾರು ಇತ್ತು. ಕುಟುಂಬದ ಜೊತೆ ಉತ್ತಮವಾಗಿ ಜೀವನ ನಡೆಸುತ್ತಿದ್ದೆ. ಆದರೆ ಅಫ್ಘಾನಿಸ್ತಾನದಲ್ಲಿ ಯುದ್ಧ ಪ್ರಾರಂಭವಾದಾಗ ಎಲ್ಲವೂ ಬದಲಾಗಿದೆ. ನಾನು ಎಲ್ಲವನ್ನೂ ಕಳೆದುಕೊಂಡೆ. ಅಲ್ಲಿಂದ ನಾನು ನನ್ನ ಕುಟುಂಬ ಪಾರಾಗಿ ಉಕ್ರೇನ್‍ಗೆ ಬಂದೆವು. ಆದರೆ ಈಗ ಇಲ್ಲೂ ಅದೇ ಸ್ಥಿತಿ ಬಂದೊದಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಟೂತ್‌ ಪೇಸ್ಟ್ ಎಂದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿ ಪ್ರಾಣ ಬಿಟ್ಟಳು

    ರಷ್ಯಾ ದಾಳಿಗೆ ಉಕ್ರೇನ್ ತತ್ತರಿಸಿದೆ. ಉಕ್ರೇನ್‍ನಿಂದ ಜೀವ ಉಳಿಸಿಕೊಳ್ಳಲು ಜನ ಹರಸಾಹಸ ಪಡುತ್ತಿದ್ದಾರೆ. ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಬಂಕರ್‍ಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಇನ್ನೂ ಕೆಲವು ಜನರು ಬೇರೆ ದೇಶಗಳಿಗೆ ತಲುಪಲು ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದಿರೋ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್!

  • ಕಾಬೂಲ್ ಮಸೀದಿ ಬಳಿ ಬಾಂಬ್ ಸ್ಫೋಟ – ಇಬ್ಬರು ಸಾವು, ಹಲವರಿಗೆ ಗಾಯ

    ಕಾಬೂಲ್ ಮಸೀದಿ ಬಳಿ ಬಾಂಬ್ ಸ್ಫೋಟ – ಇಬ್ಬರು ಸಾವು, ಹಲವರಿಗೆ ಗಾಯ

    ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಬಳಿ ಇರುವ ಮಸೀದಿಯ ಪ್ರವೇಶ ದ್ವಾರದಲ್ಲಿ ಬಾಂಬ್ ದಾಳಿ ನಡೆಸಲಾಗಿದ್ದು, ಹಲವಾರು ಮಂದಿ ಮೃತಪಟ್ಟಿದ್ದಾರೆ ಎಂದು ತಾಲಿಬಾನ್ ವಕ್ತಾರ ಝುಬಿಯುಲ್ಲಾ ಮುಜಾಹಿದ್ ಹೇಳಿದ್ದಾರೆ.

    Afghanistan

    ಭಾನುವಾರ ಈದ್ಗಾ ಮಸೀದಿಯಲ್ಲಿ ಸೇರಿದ್ದವರನ್ನು ಗುರಿಯಾಗಿಸಿಕೊಂಡು ಈ ಬಾಂಬ್ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಪಾರ್ಟಿ ಪ್ರಕರಣ – ಇಂದು ಆರ್ಯನ್ ಖಾನ್ ಜಾಮೀನು ಅರ್ಜಿ ಸಲ್ಲಿಕೆ

    ಈ ದಾಳಿಯ ಹೊಣೆಯನ್ನು ಯಾರೂ ಸದ್ಯಕ್ಕೆ ಯಾರು ಒಪ್ಪಿಕೊಂಡಿಲ್ಲ. ಆಗಸ್ಟ್‌ನಲ್ಲಿ  ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ನಂತರ ತಾಲಿಬಾನ್ ವಿರುದ್ಧ ಇಸ್ಲಾಮಿಕ್ ಸ್ಟೇಟ್ ಗುಂಪು ಉಗ್ರರ ದಾಳಿಗಳು ಹೆಚ್ಚಾಗಿದೆ. ಈ ಎರಡು ಉಗ್ರವಾದಿ ಸಂಘಟನೆಗಳ ನಡುವೆ ದಾಳಿ ಹೆಚ್ಚಾಗಿ ನಡೆಯುವ ಸಾಧ್ಯತೆ ಇದೆ. ಇದನ್ನೂ ಓದಿ: ರೈತರ ಮೇಲೆ ಕಾರು ಹತ್ತಿಸಿದ ಕೇಂದ್ರ ಸಚಿವನ ಮಗ – ನಾಲ್ವರು ರೈತರು ಸೇರಿ 8 ಮಂದಿ ಸಾವು

    ನಂಗರ್ ಹಾರ್‍ನ ಪೂರ್ವ ಪ್ರಾಂತ್ಯದಲ್ಲಿ ಐಎಸ್ ತನ್ನ ಪ್ರಬಲ ಅಸ್ತಿತ್ವವನ್ನು ಉಳಿಸಿಕೊಂಡಿದ್ದು, ತಾಲಿಬಾನಿಗರನ್ನು ಶತ್ರು ಎಂದು ಪರಿಗಣಿಸಿದೆ. ಹೀಗಾಗಿ ಈ ದಾಳಿ ಹಿಂದೆ ಐಸಿಸ್ ಉಗ್ರರ ಕೈವಾಡವಿರುವ ಶಂಕೆಯಿದೆ ಎಂದು ತಾಲಿಬಾನ್ ತಿಳಿಸಿದೆ.

  • ಅಫ್ಘಾನ್‍ನಿಂದ ಭಾರತಕ್ಕೆ ಬಂದ 146 ಮಂದಿಯಲ್ಲಿ ಇಬ್ಬರಿಗೆ ಕೊರೊನಾ ಪಾಸಿಟಿವ್

    ಅಫ್ಘಾನ್‍ನಿಂದ ಭಾರತಕ್ಕೆ ಬಂದ 146 ಮಂದಿಯಲ್ಲಿ ಇಬ್ಬರಿಗೆ ಕೊರೊನಾ ಪಾಸಿಟಿವ್

    ನವದೆಹಲಿ: ಅಫ್ಘಾನ್‍ನಿಂದ ಇಂದು ಭಾರತಕ್ಕೆ ಬಂದ 146 ಮಂದಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ.

    ಭಾರತೀಯರನ್ನು ವಾಪಸ್ ದೇಶಕ್ಕೆ ತರುವ ಕಾರ್ಯ ಭರದಿಂದ ಸಾಗುತ್ತಿದೆ. ದಿನಕ್ಕೆ ಎರಡು ವಿಮಾನಗಳು ಕಾಬೂಲ್ ಏರ್​ಪೋರ್ಟ್ ನಿಂದ ಹೊರಟು ಭಾರತ ತಲುಪುತ್ತಿದೆ. ವಿವಿಧ ಬ್ಯಾಚ್‍ಗಳ ಮೂಲಕ ಜನರನ್ನು ಕರೆತರಲಾಗುತ್ತಿದೆ. ಆದರೀಗ ಈ ಸ್ಥಳಾಂತರದ ಮಧ್ಯೆ ಕೊರೊನಾ ಆತಂಕ ಶುರುವಾಗಿದೆ.

    ಇಂದು ಬೆಳಗ್ಗೆ ಅಫ್ಘಾನ್‍ನಿಂದ ದೆಹಲಿಗೆ ಬಂದ 146 ಭಾರತೀಯ ಪ್ರಯಾಣಿಕರಲ್ಲಿ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅವರನ್ನು ಎಲ್‍ಎನ್‍ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ:  ತಾಲಿಬಾನಿಗಳ ಮೇಲೆ ಗುಂಡಿನ ಮಳೆ – ನಾರ್ಥರ್ನ್ ಅಲಯನ್ಸ್‌ಗೆ ತಜಕಿಸ್ತಾನ ಬೆಂಬಲ

    ಇಂದು ದೆಹಲಿಗೆ ಬಂದು ಇಳಿದಿದ್ದು 146 ಜನರ ಎರಡನೇ ಬ್ಯಾಚ್ ಆಗಿದೆ. ಇಷ್ಟೂ ಜನ ಸ್ವಲ್ಪ ದಿನಗಳ ಹಿಂದೆ ಯುಎಸ್ ಮತ್ತು ಉತ್ತರ ಅಟ್ಲಾಂಟಿಕ ಒಪ್ಪಂದ ಸಂಸ್ಥೆಗಳ (NATO) ಯುದ್ಧ ವಿಮಾನದ ಮೂಲಕ ಕಾಬೂಲ್‍ನಿಂದ ದೋಹಾಕ್ಕೆ ಹೋಗಿದ್ದರು. ಅಲ್ಲಿಂದ ನಾಲ್ಕು ವಿವಿಧ ವಿಮಾನಗಳ ಮೂಲಕ ದೆಹಲಿಗೆ ಬಂದಿಳಿದಿದ್ದಾರೆ. ಹಾಗೇ ಭಾನುವಾರ ಸುಮಾರು 400 ಜನರನ್ನು ವಿವಿಧ ವಿಮಾನಗಳ ಮೂಲಕ ಅಪ್ಘಾನ್‍ನಿಂದ ಭಾರತಕ್ಕೆ ಕರೆತರಲಾಗಿದೆ. ಅದರಲ್ಲಿ 329 ಮಂದಿ ಭಾರತೀಯರೇ ಆಗಿದ್ದಾರೆ. ಅಫ್ಘಾನ್‍ನಲ್ಲಿರುವ ಹಿಂದು ಮತ್ತು ಸಿಖ್ ಸಮುದಾಯದವರನ್ನೂ ಭಾರತಕ್ಕೆ ಕರೆತರಲಾಗುತ್ತಿದೆ.

  • ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ರಾಕ್ಷಸಿ ಆಡಳಿತ – ರಸ್ತೆ ರಸ್ತೆಗಳಲ್ಲಿ ಕ್ರೌರ್ಯ, ವಿರೋಧಿಗಳ ಸಂಹಾರ

    ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ರಾಕ್ಷಸಿ ಆಡಳಿತ – ರಸ್ತೆ ರಸ್ತೆಗಳಲ್ಲಿ ಕ್ರೌರ್ಯ, ವಿರೋಧಿಗಳ ಸಂಹಾರ

    – ಸೇನಾಧಿಕಾರಿ ಕಣ್ಣಿಗೆ ಬಟ್ಟೆ ಹಾಕಿ ರಣಭೀಕರ ಹತ್ಯೆ
    – ಉಗ್ರರಿಂದ ಮಕ್ಕಳ ರಕ್ಷಿಸಲು ಪೋಷಕರ ಒದ್ದಾಟ

    ಕಾಬೂಲ್: ನಾವು ಬದಲಾಗಿದ್ದೇವೆ, ನಾವು ಉದಾರವಾದಿಗಳು. ಪ್ರತೀಕಾರ ತೆಗೆದುಕೊಳ್ಳಲ್ಲ, ಎಲ್ಲರನ್ನು ಕ್ಷಮಿಸಿದ್ದೇವೆ ಅಂತ ತಾಲಿಬಾನಿಗಳು ಮೊನ್ನೆಯಷ್ಟೇ ಹೇಳಿದ್ರು. ಆದರೆ ಸೈತಾನರ ಮಾತಿಗೂ ಕೃತಿಗೂ ಅಜಗಜಾಂತರ ವ್ಯತ್ಯಾಸಗಳನ್ನು ಅಫ್ಘಾನಿಸ್ತಾನದಲ್ಲಿ ಕಾಣುತ್ತಿದ್ದೇವೆ. ರಾಕ್ಷಸಿ ಸಂತಾನ ತಾಲಿಬಾನಿಗಳಿಂದ ನರಬೇಟೆ ಶುರುವಾಗಿದೆ.

    ಅಫ್ಘಾನ್ ಧ್ವಜ ಹಾರಿಸಿದ್ರು ಎಂಬ ಕಾರಣಕ್ಕೆ ನಡುಬೀದಿಯಲ್ಲೇ ಬಂದೂಕಿಗೆ ಕೆಲಸ ಕೊಟ್ಟಿದ್ದಾರೆ. ತಮ್ಮ ವಿರೋಧಿಗಳನ್ನು ಹಿಂಸಿಸತೊಡಗಿದ್ದಾರೆ. ಮನೆ ಮನೆಗೆ ಭೇಟಿ ಕೊಟ್ಟು ಶೋಧ ಕಾರ್ಯ ನಡೆಸ್ತಿದ್ದಾರೆ. ವಿರೋಧಿಗಳ ಸುಳಿವು ನೀಡಿ ಎಂದು ಕುಟುಂಬ ಸದಸ್ಯರಿಗೆ ಬೆದರಿಕೆ ಹಾಕ್ತಿದ್ದಾರೆ. ಅವರು ಶರಣಾದ್ರೆ ಏನೂ ಮಾಡಲ್ಲ.. ಇಲ್ಲ ಅಂದ್ರೆ ಕೊಂದು ಹಾಕ್ತೀವಿ ಅಂತಾ ವಾರ್ನಿಂಗ್ ನೀಡತೊಡಗಿದ್ದಾರೆ. ಇದನ್ನೂ ಓದಿ: ಕಾಬೂಲ್ ವಿಮಾನ ನಿಲ್ದಾಣಕ್ಕೆ 5 ಸಾವಿರ ಅಮೆರಿಕ ಸೈನಿಕರ ನಿಯೋಜನೆ

    ಬದ್ಗೀಸ್ ಪ್ರಾಂತ್ಯದಲ್ಲಂತೂ ಓರ್ವ ಸೇನಾಧಿಕಾರಿಯನ್ನು ಅತ್ಯಂತ ಕ್ರೂರವಾಗಿ ಕೊಂದಿದ್ದಾರೆ. ಕೈಕಾಲು ಕಟ್ಟಿ, ಕಣ್ಣಿಗೆ ಬಟ್ಟೆ ಕಟ್ಟಿ ಗುಂಡಿನ ಮಳೆಗೈದಿದ್ದಾರೆ. ಕೆಲವರನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡುತ್ತಿದೆ. ಹೀಗಾಗಿ ಅಫ್ಘನ್ನರು ಆತಂಕದಲ್ಲಿದ್ದಾರೆ. ಪ್ರಾಣ ಉಳಿಸಿಕೊಳ್ಳಲು ಅಫ್ಘನ್‍ನಿಂದ ಎಸ್ಕೇಪ್ ಆಗಲು ನೋಡ್ತಿದ್ದಾರೆ. ಏರ್‍ಪೋರ್ಟ್ ಯಾವಾಗ ಓಪನ್ ಆಗುತ್ತೆ ಅಂತಾ ಕಾಯ್ತಿದ್ದಾರೆ. ಆದರೆ ಆಫ್ಘನ್ನರನ್ನು ವಿದೇಶಕ್ಕೆ ಹೋಗಲು ತಾಲಿಬಾನಿಗಳು ಬಿಡ್ತಿಲ್ಲ. ಏರ್‍ಪೋರ್ಟ್ ಮುಂದೆ ಗುಂಪು ಚದುರಿಸಲು ತಾಲಿಬಾನಿಗಳು ಯದ್ವಾ ತದ್ವಾ ಗುಂಡು ಹಾರಿಸಿದ್ದಾರೆ. ಜನ ಪ್ರಾಣಭಯದಿಂದ ತತ್ತರಿಸಿ ಹೋಗಿದ್ದಾರೆ. ಇದನ್ನೂ ಓದಿ: ನೀನು ಮಹಿಳೆ ಉದ್ಯೋಗ ಮಾಡುವಂತಿಲ್ಲ, ಮನೆಗೆ ತೆರಳು – ಮಹಿಳಾ ಪತ್ರಕರ್ತೆಗೆ ಗೇಟ್‍ಪಾಸ್

    ಮಹಿಳೆಯೊಬ್ಬರ ಆರ್ತನಾದ ಕೇಳಲಾಗದೇ ಏರ್‍ಪೋರ್ಟ್‍ನ ಮುಳ್ಳುತಂತಿ ಗೋಡೆಯ ಮೇಲೆ ಹತ್ತಿದ ಅಮೆರಿಕ ಸೈನಿಕರು, ಆ ಮಹಿಳೆ ಮತ್ತು ಮಗುವೊಂದನ್ನು ಏರ್‍ಪೋರ್ಟ್ ಒಳಗೆ ಎಳೆದುಕೊಂಡಿದ್ದಾರೆ. ಮತ್ತೊಂದು ದೃಶ್ಯದಲ್ಲಿ ಒಂದು ಮಗುವನ್ನು ಅಮೆರಿಕ ಸೈನಿಕರು ಎತ್ತಿಕೊಳ್ಳುತ್ತಾರೆ. ಎಲ್ಲರಿಗೂ ಈ ಅದೃಷ್ಟ ದಕ್ಕಲ್ಲ ನೋಡಿ. ಹೀಗಾಗಿಯೇ ಕೆಲ ಆಫ್ಘನ್ ಪೋಷಕರು, ತಮ್ಮ ಮುಂದಿನ ತಲೆಮಾರಾದ್ರೂ ತಾಲಿಬಾನಿಗಳ ಕ್ರೂರದೃಷ್ಟಿಗೆ ಬೀಳದಿರಲಿ ಎಂದು ಏರ್‍ಪೋರ್ಟ್ ಕಾಂಪೌಂಡ್ ಬಳಿ ನಿಂತು ಮಕ್ಕಳನ್ನು ಒಳಗೆ ಎಸೆಯುತ್ತಿದ್ದಾರೆ. ಹೀಗೆ ಎಸೆಯುವಾಗ ಕೆಲ ಮಕ್ಕಳು ಮುಳ್ಳಿನ ತಂತಿಗೆ ಸಿಲುಕಿ ಒದ್ದಾಡೋದನ್ನು ನೋಡಲು ಆಗ್ತಿಲ್ಲ ಎಂದು ಅಧಿಕಾರಿಯೊಬ್ಬರು ಕಣ್ಣೀರು ಇಟ್ಟಿದ್ದಾರೆ.

    ಈ ಮಧ್ಯೆ ಅಫ್ಘಾನಿಸ್ತಾನದ ಭಾಗ್ಲಾನ್, ಬಾನು ಸೇರಿ ಮೂರು ರಾಜ್ಯಗಳು ತಾಲಿಬಾನ್ ಕೈತಪ್ಪಿದೆ. ಅಲ್ಲಿನ ಸ್ಥಳೀಯರು ತಿರುಗಿಬಿದ್ದಿದ್ದು, ಭೀಕರ ಕಾಳಗದಲ್ಲಿ ಹಲವು ತಾಲಿಬಾನ್ ಉಗ್ರರು ಸಾವನ್ನಪ್ಪಿದ್ದಾರೆ. ತಾಲಿಬಾನ್ – ಪಾಕ್ ಬಾಂಧವ್ಯ ಜಗಜ್ಜಾಹೀರಾಗಿದೆ. ತಾಲಿಬಾನ್ ಆಹ್ವಾನದ ಮೇರೆಗೆ ಪಾಕ್ ವಿದೇಶಾಂಗ ಸಚಿವರು ಭಾನುವಾರ ಕಾಬೂಲ್ ತೆರಳಲಿದ್ದಾರೆ.

  • ಕಂದಹಾರ್ ಏರ್ ಪೋರ್ಟ್ ಮೇಲೆ ರಾಕೆಟ್ ದಾಳಿ – ವಿಮಾನ ಹಾರಾಟ ರದ್ದು

    ಕಂದಹಾರ್ ಏರ್ ಪೋರ್ಟ್ ಮೇಲೆ ರಾಕೆಟ್ ದಾಳಿ – ವಿಮಾನ ಹಾರಾಟ ರದ್ದು

    ಕಾಬೂಲ್: ದಕ್ಷಿಣ ಅಫ್ಘಾನಿಸ್ತಾನದ ಕಂದಹಾರ್ ವಿಮಾನ ನಿಲ್ದಾಣದಲ್ಲಿ ಉಗ್ರರು ಮೂರು ರಾಕೆಟ್‍ಗಳ ದಾಳಿ ನಡೆಸಿದ್ದಾರೆ. ಮೂರರಲ್ಲಿ ಎರಡು ರಾಕೆಟ್‍ಗಳು ರನ್ ವೇ ಮೇಲೆ ಬಿದ್ದು, ಸ್ಫೋಟಗೊಂಡಿವೆ.

    ಶನಿವಾರ ರಾತ್ರಿ ವಿಮಾನ ನಿಲ್ದಾಣದ ಮೇಲೆ ಮೂರು ರಾಕೆಟ್‍ಗಳನ್ನು ಹಾರಿಸಲಾಗಿದ್ದು, ಅವುಗಳಲ್ಲಿ ಎರಡು ರಾಕೆಟ್ ರನ್‍ವೇಗೆ ಹೊಡೆದಿದೆ. ಪರಿಣಾಮ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮುಖ್ಯಸ್ಥ ಮಸೂದ್ ಪಶ್ತುನ್ ತಿಳಿಸಿದ್ದಾರೆ. ಇದೀಗ ರನ್‍ವೇಯನ್ನು ದುರಸ್ತಿ ಮಾಡಿಸುವ ಕೆಲಸ ನಡೆಯುತ್ತಿದ್ದು, ವಿಮಾನಗಳು ಭಾನುವಾರದ ನಂತರ ಕಾರ್ಯನಿರ್ವಹಿಸುವ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.

    ತಾಲಿಬಾನ್ ಕೃತ್ಯ ಶಂಕೆ:
    ಕಳೆದ ಕೆಲ ದಿನಗಳಿಂದಲೂ ಉಗ್ರರು ಸತತ ದಾಳಿ ನಡೆಸುತ್ತಿದ್ದಾರೆ. ನಗರದ ಸುತ್ತಲೂ ತಾಲಿಬಾನ್, ಹೆರಾತ್, ಲಷ್ಕರ್ ಗಾಹಾ ಸಂಘಟನೆಯಯ ಉಗ್ರರು ಆವರಿಸಿದ್ದು, ಕಂದಹಾರ್ ವಶಕ್ಕೆ ಮುಂದಾಗುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿವೆ. ರಾಕೆಟ್ ದಾಳಿ ಸಹ ತಾಲಿಬಾನ್ ನಡೆಸಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದೆ.

    ಕಂದಹಾರ್ ಮೇಲೆ ದಾಳಿ ಏಕೆ?:
    ಕಂದಹಾರ್ ಅಫ್ಘಾನಿಸ್ತಾನದ ಎರಡನೇ ಅತಿ ದೊಡ್ಡ ನಗರವಾಗಿದ್ದು, ಇಲ್ಲಿಯ ವಿಮಾನ ನಿಲ್ದಾಣದಿಂದಲೇ ಸೇನೆಗೆ ಸಶಾಸ್ತ್ರಗಳ ಸರಬರಾಜು ಮಾಡಲಾಗುತ್ತದೆ. ಈ ಹಿನ್ನೆಲೆ ಕಂದಹಾರ್ ಮೇಲೆ ದಾಳಿ ನಡೆದಿರುವ ಸಾಧ್ಯತೆಗಳಿವೆ. ಕಂದಹಾರ್ ವಿಮಾನ ನಿಲ್ದಾಣದ ಮೇಲೆಯೇ ಉಗ್ರರು ಕಣ್ಣಿಟ್ಟಿದ್ದು, ಕಳೆದ ಎರಡ್ಮೂರು ವಾರಗಳಿಂದ ಸೇನೆಯ ಮೇಲೆ ನಿರಂತರವಾಗಿ ದಾಳಿ ನಡೆಸಿಕೊಂಡು ಬರುತ್ತಿದ್ದಾರೆ. ಉಗ್ರರ ವಿರುದ್ಧ ಅಫ್ಘಾನಿಸ್ತಾನ ಸೇನೆ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ.

    ಅಮೆರಿಕದ ಸಹಾಯ: ಅಫ್ಘಾನಿಸ್ತಾನದ ನ್ಯಾಷನಲ್ ಡಿಫೆನ್ಸ್ ಸೆಕ್ಯುರಿಟಿ ಫೋರ್ಸ್ ಅಮೆರಿಕದ ಸಹಾಯ ಪಡೆದು ಉಗ್ರರು ವಶಕ್ಕೆ ಗ್ರಾಮಗಳನ್ನು ಖಾಲಿ ಮಾಡಿಸುವಲ್ಲಿ ಯಶಸ್ವಿಯಾಗಿದೆ. ಪಾಕಿಸ್ತಾನದ ಬೆಂಬಲದಿಂದ ತಾಲಿಬಾನ್ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಕೊಂಡಿರುವ ಬಗ್ಗೆ ವರದಿಯಾಗಿದೆ.

    ಯುದ್ಧದ ಸ್ಥಿತಿ ನಿರ್ಮಾಣ: ಕಂದಹಾರ್ ನಗರ ಪ್ರವೇಶಿಸಿರುವ ತಾಲಿಬಾನ್ ಉಗ್ರರು ಸೇನೆಯ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ಅಫ್ಘಾನಿಸ್ತಾನದಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಾವಿರಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಹಲವು ಇಲಾಖೆಗಳಲ್ಲಿ ಅಡಗಿ ಕುಳಿತಿದ್ದ ಉಗ್ರರನ್ನು ಸೇನೆ ಹೊಡೆದುರಿಳಿಸಿದ್ದು, ಮೃತರಲ್ಲಿ ಪಾಕಿಸ್ತಾನದ ಅಧಿಕಾರಿಗಳು ಸಹ ಇದ್ದಾರೆ. ಮೃತರ ಬಳಿ ಪಾಕಿಸ್ತಾನದ ಗುರುತಿನ ಚೀಟಿಗಳು ಲಭ್ಯವಾಗಿವೆ. ಇದನ್ನೂ ಓದಿ: ಕೇಂದ್ರದ 10 ಕೊರೊನಾ ಹಾಟ್ ಸ್ಪಾಟ್- ರಾಜ್ಯಗಳ ಲಿಸ್ಟ್ ನಲ್ಲಿ ಕರ್ನಾಟಕ

  • 16 ಎಸೆತಗಳಿಗೆ 74 ರನ್ ಚಚ್ಚಿ ದಾಖಲೆ ಬರೆದ ಅಫ್ಘಾನ್ ಆಟಗಾರ

    16 ಎಸೆತಗಳಿಗೆ 74 ರನ್ ಚಚ್ಚಿ ದಾಖಲೆ ಬರೆದ ಅಫ್ಘಾನ್ ಆಟಗಾರ

    ಶಾರ್ಜಾ: ಅಫ್ಘಾನಿಸ್ತಾನ ತಂಡದ ಸ್ಫೋಟಕ ಆರಂಭಿಕ ಆಟಗಾರ ಮೊಹಮ್ಮದ್ ಶಹಜಾದ್ ಟಿ10 ಲೀಗ್ ಆರಂಭದ ಪಂದ್ಯದಲ್ಲೇ ಅಬ್ಬರಿಸಿದ್ದು, ಕೇವಲ 12 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿ ಮಿಂಚಿದ್ದಾರೆ.

    2018ರ ಪ್ರಥಮ ಟಿ10 ಲೀಗ್ ಆರಂಭದ ಪಂದ್ಯದಲ್ಲಿ ರಜಪೂತ್ ತಂಡದ ಪರ ಆಡುತ್ತಿರುವ ಮೊಹಮ್ಮದ್ ಶಹಜಾದ್ 16 ಎಸೆತಗಳಲ್ಲಿ 74 ರನ್ ಸಿಡಿಸಿ ಮಿಂಚಿದರು. ಇದರಲ್ಲಿ ಅಮೋಘ 8 ಸಿಕ್ಸರ್, 6 ಬೌಂಡರಿಗಳು ಸೇರಿದೆ. ಉಳಿದ ಎರಡು ಎಸೆತಗಳಲ್ಲಿ ಸಿಂಗಲ್ ರನ್ ತೆಗೆದಿದ್ದರು. ಈ ಮೂಲಕ ಯಾವುದೇ ಎಸೆತವನ್ನು ವ್ಯರ್ಥ ಮಾಡದೇ ರನ್ ಗಳಿಸಿದ್ದರು.

    ಕೇವಲ 17 ನಿಮಿಷದಲ್ಲಿ 4 ಓವರ್ ಗಳ ಮೂಲಕ 94 ರನ್ ಗಳ ಗುರಿಯನ್ನು ತಲುಪಿದ ರಜಪೂತ್ ತಂಡ ಗೆಲುವಿನ ನಗೆ ಬೀರಿತು. ಇದರೊಂದಿಗೆ ಟಿ10 ಲೀಗ್‍ನಲ್ಲಿ 74 ರನ್ ಸಿಡಿಸಿದ 30 ವರ್ಷದ ಶಹಜಾದ್ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದರು. ಶಹಜಾದ್‍ಗೆ ಸಾಥ್ ನೀಡಿದ ಬ್ರೆಂಡನ್ ಮೆಕಲಮ್ 8 ಎಸೆತಗಳಲ್ಲಿ 21 ರನ್ ಸಿಡಿಸಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್ ನಡೆಸಿದ ಸಿಂಧಿಸ್ ತಂಡ ನಿಗದಿತ 10 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿತ್ತು. ಸಿಂಧಿಸ್ ಪರ ವ್ಯಾಟ್ಸನ್ ಮಾತ್ರ ಎರಡಂಕಿ ದಾಟಿದ್ದರು. ರಜಪೂತ್ ಪರ ಉತ್ತಮ ಬೌಲಿಂಗ್ ದಾಳಿ ನಡೆಸಿದ ಮುನಾಫ್ ಪಟೇಲ್ 20 ರನ್ ನೀಡಿ 3 ವಿಕೆಟ್ ಪಡೆದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಬೆಂಗಳೂರು ಟೆಸ್ಟ್ ವೇಳೆ ದ್ರಾವಿಡ್ ನೆನಪು ಮಾಡ್ಕೊಂಡ ಸೆಹ್ವಾಗ್

    ಬೆಂಗಳೂರು ಟೆಸ್ಟ್ ವೇಳೆ ದ್ರಾವಿಡ್ ನೆನಪು ಮಾಡ್ಕೊಂಡ ಸೆಹ್ವಾಗ್

    ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಫ್ಘಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಕನ್ನಡಿಗ ಕೆಎಲ್ ರಾಹುಲ್ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‍ಗೆ ಇಳಿಯುತ್ತಿದಂತೆ ಸೆಹ್ವಾಗ್ ತಮ್ಮ ಆತ್ಮೀಯ ಗೆಳೆಯ ದ್ರಾವಿಡ್ ಅವರನ್ನು ನೆನಪು ಮಾಡಿಕೊಂಡಿದ್ದಾರೆ.

    ದ್ರಾವಿಡ್ ನಿವೃತ್ತಿಯ ಬಳಿಕ ಮೊದಲ ಬಾರಿಗೆ ಟೆಸ್ಟ್ ಪಂದ್ಯದ ನಂ.3 ರ ಬ್ಯಾಟಿಂಗ್ ಕ್ರಮದಲ್ಲಿ ರಾಹುಲ್ ಹೆಸರನ್ನು ಕಾಣುತ್ತಿರುವುದಾಗಿ ಹೇಳಿದ್ದಾರೆ. ಅಫ್ಘಾನ್ ವಿರುದ್ಧದ ಮೊದಲ ಇನ್ನಿಂಗ್ಸ್ ನಲ್ಲಿ ಧವನ್ ಸ್ಫೋಟಕ ಶತಕ ಸಿಡಿಸಿ ಔಟಾಗುತ್ತಿದಂತೆ ರಾಹುಲ್ ಬ್ಯಾಟಿಂಗ್ ನಡೆಸಿ ಅರ್ಧಶತಕ (54) ಪೂರೈಸಿದರು.

    ಪಂದ್ಯದಲ್ಲಿ ಸೆಹ್ವಾಗ್ ದಾಖಲೆ ಮುರಿದ ಧವನ್ ಮೊದಲ ದಿನ ಭೋಜನ ವಿರಾಮಕ್ಕೂ ಮುನ್ನ ಅತೀ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಪಡೆದರು. ಸೆಹ್ವಾಗ್ 2006 ರಲ್ಲಿ ವೆಸ್ಟ್ ಇಂಡಿಸ್ ವಿರುದ್ಧ 99 ರನ್, 1967 ರಲ್ಲಿ ಫಾರುಖ್ ಎಂಜಿನಿಯರ್ 94 ರನ್ ಗಳಿಸಿದ್ದರು. ಅಲ್ಲದೇ ಪಂದ್ಯದ ವಿರಾಮದ ವೇಳೆ ಶತಕ ಸಿಡಿಸಿದ 6ನೇ ಆಟಗಾರ ಎಂಬ ವಿಶೇಷ ಸಾಧನೆ ಮಾಡಿದರು. ಈ ಹಿಂದೆ ಆಸೀಸ್ ನ ವಿಕ್ಟರ್ ಟ್ರಂಪರ್, ಚಾರ್ಲ್ಸ್ ಮ್ಯಾಕಾರ್ಟ್‍ನಿ, ಡಾನ್ ಬ್ರಾಡ್ ಮನ್, ಡೇವಿಡ್ ವಾರ್ನರ್ ಹಾಗೂ ಪಾಕಿಸ್ತಾನದ ಮಾಜಿ ನಾಯಕ ಮಜೀದ್ ಖಾನ್ ಈ ಸಾಧನೆ ಮಾಡಿದ್ದರು.

  • ಅಫ್ಘಾನ್ ಪ್ರಧಾನಿ ಬಳಿಕ ಹೆಚ್ಚು ಪ್ರಸಿದ್ಧಿ ಪಡೆದಿದ್ದೇನೆ – ರಶೀದ್ ಖಾನ್

    ಅಫ್ಘಾನ್ ಪ್ರಧಾನಿ ಬಳಿಕ ಹೆಚ್ಚು ಪ್ರಸಿದ್ಧಿ ಪಡೆದಿದ್ದೇನೆ – ರಶೀದ್ ಖಾನ್

    ಮುಂಬೈ: 2018 ರ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆ ಗಳಿಸಿರುವ ರಶೀದ್ ಖಾನ್, ತನ್ನ ದೇಶದ ಪ್ರಧಾನಿಯ ಬಳಿಕ ತಾನು ಹೆಚ್ಚು ಪ್ರಸಿದ್ಧಿ ಪಡೆದಿರುವುದಾಗಿ ಹೇಳಿದ್ದಾರೆ.

    ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಅತ್ಯುತ್ತಮ ಆಲೌಂಡರ್ ಪ್ರದರ್ಶನ ನೀಡಿದ ರಶೀದ್ ತಂಡ ಫೈನಲ್ ತಲುಪಲು ಕಾರಣರಾಗಿದ್ದರು. ಈ ವೇಳೆ ಸಚಿನ್ ತೆಂಡೂಲ್ಕರ್ ಸಹ ವಿಶ್ವದ ಉತ್ತಮ ಟಿ20 ಬೌಲರ್ ಎಂದು ಹೊಗಳಿಕೆ ನೀಡಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಖಾನ್ ಮೊದಲು ಸಚಿನ್ ರ ಹೊಗಳಿಕೆ ಟ್ವೀಟ್ ನೋಡಿದ ವೇಳೆ ನಂಬಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ.

    ಸಚಿನ್ ವಿಶ್ವದಲ್ಲೇ ಹೆಚ್ಚು ಅಭಿಮಾನಿಗಳನ್ನು ಪಡೆದ ಆಟಗಾರರು. ಅವರ ಟ್ವೀಟನ್ನು ಅಫ್ಘಾನ್ ನ ಎಲ್ಲರೂ ನೋಡಿರುತ್ತಾರೆ. ಸಚಿನ್ ರ ಹೊಗಳಿಕೆ ತನ್ನಂತಹ ಹಲವು ಯುವ ಆಟಗಾರರಿಗೆ ಹೆಚ್ಚು ಪ್ರೇರಣೆ ನೀಡುತ್ತದೆ ಎಂದು ಹೇಳಿದ್ದಾರೆ.

    ಈ ಬಾರಿಯ ಐಪಿಎಲ್ ನಲ್ಲಿ 21 ವಿಕೆಟ್ ಪಡೆದಿರುವ ಖಾನ್ ಟೂರ್ನಿಯಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ಹೆಗ್ಗಳಿಕೆ ಪಡೆದರು. ವಿಶೇಷವಾಗಿ ಟೂರ್ನಿಯಲ್ಲಿ ಧೋನಿ, ಎಬಿ ಡಿವಿಲಿಯರ್ಸ್, ವಿರಾಟ್ ಕೊಹ್ಲಿ ವಿಕೆಟ್ ಪಡೆದಿರುವುದು ಹೆಚ್ಚು ಹೆಮ್ಮೆ ಎನಿಸುತ್ತದೆ. ಈ ಮೂರು ವಿಕೆಟ್ ಗಳು ತನ್ನ ವೃತ್ತಿ ಜೀವನದ ಪ್ರಮುಖ ಸಾಧನೆ ಎಂದು ತಿಳಿಯುತ್ತೇನೆ ಎಂದು ಹೇಳಿದ್ದಾರೆ.

    ಮುಂದಿನ ಜೂನ್ ನಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಟೆಸ್ಟ್ ಪಂದ್ಯದ ಮೂಲಕ ಅಫ್ಘಾನ್ ತಂಡ ಮೊದಲ ಅಂತರಾಷ್ಟ್ರೀಯ ಟೆಸ್ಟ್ ಗೆ ಪಾದಾರ್ಪಣೆ ಮಾಡಲಿದೆ. ಈ ಪಂದ್ಯ ಅತ್ಯಂತ ಮಹತ್ವದಾಗಿದ್ದು, ಇಡೀ ದೇಶವೇ ಎದುರು ನೋಡುತ್ತಿದೆ. ಈ ಪಂದ್ಯಕ್ಕೆ ಆಯ್ಕೆ ಆಗಿರುವ ಎಲ್ಲರು ಲಕ್ಕಿ ಆಟಗಾರರಾಗಿದ್ದು, ಈ ಮೂಲಕ ಇತಿಹಾಸ ಬರೆಯಲಿದ್ದೇವೆ. ಎಲ್ಲಕ್ಕಿಂತ ಹೆಚ್ಚಾಗಿ ನಾವು ಟೀಂ ಇಂಡಿಯಾ ವಿರುದ್ಧ ಆಡುತ್ತಿದ್ದೇವೆ ಎಂಬುವುದೆ ಹೆಮ್ಮೆ ಸಂಗತಿ ಎಂದು ತಿಳಿಸಿದ್ದಾರೆ.

    ಈ ವೇಳೆ ಭಾರತ ಸ್ಟಾರ್ ಆಟಗಾರರು ಪಡೆಯುವ ಸೌಲಭ್ಯಗಳನ್ನು ಪಡೆದಿರುವ ಕುರಿತ ಪ್ರಶ್ನೆಗೆ ಉತ್ತರಿಸಿ ತಾನು ಅಫ್ಘಾನ್ ದೇಶದ ಪ್ರಧಾನಿ ಬಳಿಕ ಹೆಚ್ಚು ಪ್ರಸಿದ್ಧಿ ಪಡೆದಿದ್ದೇನೆ ಎಂದು ಉತ್ತರಿಸಿದ್ದಾರೆ. ಸದ್ಯ ಅಫ್ಘಾನ್ ನಂತಹ ದೇಶದ ಯುವ ಜನತೆಗೆ ರಶೀದ್ ಖಾನ್ ಈಗ ಸ್ಫೂರ್ತಿಯಾಗಿದ್ದಾರೆ.