ನವದೆಹಲಿ: ದೆಹಲಿಯ ಮೆಹ್ರೌಲಿಯಲ್ಲಿ ಲಿವ್-ಇನ್ ಸಂಗಾತಿಯಿಂದ ಬರ್ಬರವಾಗಿ ಹತ್ಯೆಯಾಗಿದ್ದ ಶ್ರದ್ಧಾ ವಾಕರ್ ಅವರ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ವಿಕಾಸ್ ವಾಕರ್ ಅವರು ಮಹಾರಾಷ್ಟ್ರದ ಪಾಲ್ಘರ್ನ ವಸೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಗಳ ಸಾವಿನ ಬಳಿಕ ಅವರು ಖಿನ್ನತೆಗೆ ಒಳಗಾಗಿದ್ದರು. ತಮ್ಮ ಮಗಳ ಚಿತಾಭಸ್ಮಕ್ಕಾಗಿ ಕಾಯುತ್ತಿದ್ದರು.
ಶ್ರದ್ಧಾ ಪ್ರಕರಣದಲ್ಲಿ ಆಫ್ತಾಬ್ ಜೈಲಿನಲ್ಲಿರುವ ಕೊಲೆ ವಿಚಾರಣೆ ನಡೆಯುತ್ತಿರುವಾಗಲೇ ಈ ಘಟನೆ ನಡೆದಿದೆ. ವಿಕಾಸ್ ಅವರು ತನ್ನ ಮಗನೊಂದಿಗೆ ವಸೈನಲ್ಲಿ ವಾಸಿಸುತ್ತಿದ್ದರು. ಭಾನುವಾರ ಮುಂಜಾನೆ ಅವರ ಆರೋಗ್ಯ ಹದಗೆಟ್ಟಿದೆ. ಮಗ ಅವರನ್ನು ಆಸ್ಪತ್ರೆಗೆ ಸಾಗಿಸಿದರು. ಅಷ್ಟರಲ್ಲಾಗಲೇ ವಿಕಾಸ್ ಮೃತಪಟ್ಟಿದ್ದರು.
ವಸಾಯಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದರು. ಹೃದಯಾಘಾತದಿಂದಲೇ ಅವರು ಮೃತಪಟ್ಟಿದ್ದಾರೆಂದು ವೈದ್ಯರು ಸ್ಪಷ್ಟನೆ ನೀಡಿದ್ದಾರೆ.
ಮಗಳಿಗೆ ನ್ಯಾಯಕ್ಕಾಗಿ 2 ವರ್ಷಗಳಿಗೂ ಹೆಚ್ಚು ಕಾಲ ಹೋರಾಡುತ್ತಿದ್ದರು. ಮೆಹ್ರೌಲಿ ಕಾಡಿನಲ್ಲಿ ಪತ್ತೆಯಾಗಿರುವ ಶ್ರದ್ಧಾ ಅವರ ಮೂಳೆಗಳ ಅವಶೇಷಗಳನ್ನು ದೆಹಲಿ ಪೊಲೀಸರು ಕುಟುಂಬಕ್ಕೆ ಹಸ್ತಾಂತರಿಸಲಿರುವ ಕಾರಣ ಅವರ ಅಂತ್ಯಕ್ರಿಯೆ ಇನ್ನೂ ನಡೆದಿಲ್ಲ.
ನವದೆಹಲಿ: ರಾಷ್ಟ್ರ ರಾಜಧಾನಿಯನ್ನು ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ (Shraddha Walkar) ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಫ್ತಾಬ್ ಪೂನಾವಾಲಾನನ್ನು (Aftab Ameen Poonawala) ಇತ್ತೀಚೆಗಷ್ಟೇ ನಾರ್ಕೋ ಅನಾಲಿಸಿಸ್ ಪರೀಕ್ಷೆ ಮತ್ತು ಪಾಲಿಗ್ರಾಫ್ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದಾದ ಬಳಿಕ ಆತನನ್ನು ತಿಹಾರ್ ಜೈಲಿನಲ್ಲಿ ಇಡಲಾಗಿದೆ. ಈ ವೇಳೆ ಶ್ರದ್ಧಾಳ ಹತ್ಯೆಯ ಬಗ್ಗೆ ಕೆಲವು ಆಘಾತಕಾರಿ ವಿಷಯವನ್ನು ಪೊಲೀಸ್ ಮೂಲಗಳು ತಿಳಿಸಿದೆ.
ಮೇ 17 ರಂದು ಸಂಜೆ ಶ್ರದ್ಧಾ ಡೇಟಿಂಗ್ ಅಪ್ಲಿಕೇಶನ್ ಬಬಲ್ನಲ್ಲಿ ಸಿಕ್ಕ ವ್ಯಕ್ತಿಯೊಂದಿಗೆ ಡೇಟಿಂಗ್ಗೆ ಹೋಗಿದ್ದಳು. ಅದಾದ ಬಳಿಕ ಮೇ 18ರಂದು ತಡರಾತ್ರಿ ಮಹ್ರಾಲಿಯಲ್ಲಿರುವ ಫ್ಲಾಟ್ಗೆ ಮರಳಿದ್ದಳು. ಅದಾದ ಬಳಿಕ ನನ್ನನ್ನು ಬಿಟ್ಟು ಹೋಗುವುದಾಗಿ ಬೆದರಿಕೆ ಹಾಕಿದ್ದಳು. ಅಷ್ಟೇ ಅಲ್ಲದೇ ಆಕೆ ತಾನು ಇನ್ನೊಬ್ಬ ವ್ಯಕ್ತಿಯೊಂದಿಗೆ ಡೇಟಿಂಗ್ಗೆ ಹೋಗುತ್ತಿರುವುದರ ಬಗ್ಗೆ ತಿಳಿಸಿದ್ದಳು. ಇದರಿಂದ ಕೋಪಗೊಂಡು ನಾನು ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಅದಾದ ಬಳಿಕ ಆಕೆಯ ದೇಹವನ್ನು ಕತ್ತರಿಸಿದ್ದೇನೆ ಎಂದಿದ್ದಾನೆ.
ಅದಾದ ಬಳಿಕ ಅಫ್ತಾಬ್ನನ್ನು ವಿಚಾರಣೆ ನಡೆಸುವಾಗ ದೆಹಲಿ ಪೊಲೀಸರು ಮತ್ತು ತನಿಖಾ ಸಂಸ್ಥೆಗಳಿಗೆ ಅಫ್ತಾಬ್ ಕೊಲೆಯ ಆಯುಧ ಮತ್ತು ಶ್ರದ್ಧಾಳ ದೇಹದ ಭಾಗಗಳನ್ನು ಪತ್ತೆ ಮಾಡುವಂತೆ ಸವಾಲು ಹಾಕಿದ್ದ ಎಂಬ ವಿಷಯ ಇದೀಗ ಮೂಲಗಳಿಂದ ತಿಳಿದು ಬಂದಿದೆ.
ಪೊಲೀಸರು (Police) ಅಫ್ತಾಬ್ನನ್ನು ವಿಚಾರಣೆ ನಡೆಸಿದ್ದ ವೇಳೆ, ಆತ ಶ್ರದ್ಧಾಳನ್ನು ಕೊಂದಿರುವ ಬಗ್ಗೆ ಒಪ್ಪಿಕೊಂಡಿದ್ದ. ಅಷ್ಟೇ ಅಲ್ಲದೇ ಶ್ರದ್ಧಾಳ ದೇಹದ ಭಾಗಗಳು ಹಾಗೂ ಕೊಲೆ ಮಾಡಲು ಬಳಸಿದ್ದ ಆಯುಧವನ್ನು ಹುಡುಕಲು ನಾನು ನಿಮಗೆ ಚಾಲೆಂಜ್ ಮಾಡುತ್ತೇನೆ ಎಂದು ಪೊಲೀಸರಿಗೆ ತಿಳಿಸಿದ್ದ. ಅಷ್ಟೇ ಅಲ್ಲದೇ ಅಫ್ತಾಬ್ ಕೊಲೆಯ ಆಯುಧವನ್ನು ತನ್ನ ಗುರುಗ್ರಾಮ್ ಕಚೇರಿಯ ಬಳಿಯ ಪೊದೆಗೆ ಎಸೆದಿದ್ದಾಗಿಯೂ ತಿಳಿಸಿದ್ದ ಎಂಬ ವಿಷಯಗಳು ಇದೀಗ ಬೆಳಕಿಗೆ ಬಂದಿದೆ. ಇದನ್ನೂ ಓದಿ:ಭೀಕರ ಅಪಘಾತ- ಸಿಪಿಐ, ಪತ್ನಿ ಸಾವು
ಶ್ರದ್ಧಾಳನ್ನು ಕೊಂದ ನಂತರ ಅಫ್ತಾಬ್ ಬೇರೊಂದು ಹುಡುಗಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದ. ಅವನ ಹೊಸ ಗೆಳತಿ (Girl friend) ಗುರುಗ್ರಾಮದವಳಾಗಿದ್ದು, ವೈದ್ಯಳಾಗಿದ್ದಳು. ಆಕೆಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾಗ ಕೊಲೆಯ ಬಗ್ಗೆ ಆಕೆ ಆಘಾತವನ್ನು ವ್ಯಕ್ತಪಡಿಸಿದ್ದಳು. ಇದನ್ನೂ ಓದಿ: ಹಾವಿನಿಂದ ಹೆದ್ದಾರಿಯಲ್ಲಿ ಸರಣಿ ಅಪಘಾತ – ಸಂಚಾರಿ ಪೊಲೀಸರ ವಿರುದ್ದ ಆಕ್ರೋಶ
Live Tv
[brid partner=56869869 player=32851 video=960834 autoplay=true]
ನವದೆಹಲಿ: ಶ್ರದ್ದಾ ವಾಕರ್ (Shraddha Walkar) ಹತ್ಯೆಯನ್ನು ನಾನೇ ಮಾಡಿದ್ದು, ಅವಳು ನನ್ನ ಬಿಟ್ಟು ಹೋಗುವ ಭೀತಿಯಲ್ಲಿ ಈ ಹತ್ಯೆ ನಡೆದುಹೋಗಿದೆ ಎಂದು ಅಫ್ತಾಬ್ ಅಮೀನ್ ಪೂನವಾಲಾ (Aftab) ತಪ್ಪೊಪ್ಪಿಕೊಂಡಿದ್ದಾನೆ. ಫಾಲಿಗ್ರಾಫ್ ಪರೀಕ್ಷೆಯಲ್ಲಿ ತಪ್ಪೊಪ್ಪಿಕೊಂಡ ಬಳಿಕ ಈಗ ಮಂಪರು ಪರೀಕ್ಷೆಯಲ್ಲೂ (Narco Test) ಅಫ್ತಾಬ್ ಹತ್ಯೆಯನ್ನು ಒಪ್ಪಿಕೊಂಡಿದ್ದಾನೆ.
ಮುಂಬೈ ಮೂಲದ ಯುವತಿ ಶ್ರದ್ದಾ ವಾಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಆರೋಪಿ ಅಫ್ತಾಬ್ ಅಮೀನ್ ಪೂನವಾಲಾನನ್ನು ಮಂಪರು ಪರೀಕ್ಷೆಗೆ ಒಳಪಡಿಸಲಾಯಿತು. ಬೆಳಗ್ಗೆ 10 ರಿಂದ ಮಧ್ಯಾಹ್ನ 03 ಗಂಟೆವರೆಗೂ ನಡೆದ ಪರೀಕ್ಷೆಯಲ್ಲಿ ಹತ್ಯೆಯ ಬಗೆಗಿನ ಹಲವು ಪ್ರಶ್ನೆಗಳಿಗೆ ಅಫ್ತಾಬ್ ಉತ್ತರಿಸಿದ್ದಾನೆ. ಇದನ್ನೂ ಓದಿ: ಲೂಧಿಯಾನ ಕೋರ್ಟ್ ಸ್ಫೋಟದ ಆರೋಪಿ, ಭಯೋತ್ಪಾದಕ ಹರ್ಪ್ರೀತ್ ಸಿಂಗ್ ಬಂಧನ
ಹಣಕಾಸಿನ ವಿಚಾರಗಳಿಗೆ ನನ್ನ ಮತ್ತು ಶ್ರದ್ಧಾ ನಡುವೆ ಜಗಳಗಳಿತ್ತು. ದೆಹಲಿಗೆ ಬಂದ ಬಳಿಕ ಅವಳು ನನ್ನನ್ನು ಶಾಶ್ವತವಾಗಿ ಬಿಟ್ಟು ಹೋಗುವುದಾಗಿ ಹೇಳಿದಳು. ಡ್ರಗ್ಸ್ ಸೇವಿಸಿದ್ದ ನಾನು ನಶೆಯಲ್ಲಿ ಅವಳನ್ನು ಹತ್ಯೆ ಮಾಡಿದ್ದೇನೆ ಎಂದು ಅಫ್ತಾಬ್ ತಪ್ಪೊಪ್ಪಿಕೊಂಡಿದ್ದಾನೆ. ಶ್ರದ್ಧಾ ಹತ್ಯೆಯ ಬಳಿಕ ಅವಳ ಫೋನ್, ಬಟ್ಟೆ ಹಾಗೂ ದೇಹವನ್ನು ತುಂಡರಿಸಿದ ಗರಗಸವನ್ನು ಎಸೆದಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾನೆ.
ಆದರೆ ಶ್ರದ್ದಾ ತಲೆಯನ್ನು ಎಲ್ಲಿ ಎಸೆಯಲಾಗಿದೆ ಎಂಬುದಕ್ಕೆ ಸ್ಪಷ್ಟ ಉತ್ತರ ಸಿಕ್ಕಿಲ್ಲ ಎನ್ನಲಾಗಿದೆ. ಈ ಬಗ್ಗೆ ಪ್ರಶ್ನಿಸಿದಾಗ ಅಫ್ತಾಬ್ ನಿಖರವಾಗಿ ಸ್ಥಳ ಪತ್ತೆ ಹಚ್ಚುವಲ್ಲಿ ವಿಫಲವಾದ ಎಂದು ಮೂಲಗಳು ಹೇಳಿವೆ. ಮಂಪರು ಪರೀಕ್ಷೆ ವೇಳೆ ನೀಡಿದ ಬಹುತೇಕ ಮಾಹಿತಿ ಭೌತಿಕ ಸಾಕ್ಷ್ಯಗಳೊಂದಿಗೆ ಸಾಮ್ಯತೆ ಹೊಂದುತ್ತಿದ್ದು, ಮತ್ತಷ್ಟು ಮಾಹಿತಿಯನ್ನು ಪರಿಶೀಲಿಸಬೇಕಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: “ಬ್ರಾಹ್ಮಣ ಭಾರತ್ ಛೋಡೋ” – ಜೆಎನ್ಯು ಕ್ಯಾಂಪಸ್ ಗೋಡೆಗಳ ಮೇಲೆ ವಿವಾದಾತ್ಮಕ ಬರಹ
ಫಾಲಿಗ್ರಾಫ್ ಮತ್ತು ಮಂಪರು ಪರೀಕ್ಷೆಯಲ್ಲಿ ನೀಡುವ ಹೇಳಿಕೆಗಳಿಗೆ ಕಾನೂನಿನ ಮಾನ್ಯತೆ ಇಲ್ಲದಿದ್ದರೂ ಸತ್ಯವನ್ನು ಅರಿಯುವ ದೃಷ್ಟಿಯಿಂದ ಈ ಪರೀಕ್ಷೆಗಳನ್ನು ಪೊಲೀಸರು ನಡೆಸಿದ್ದಾರೆ. ಅಫ್ತಾಬ್ ಎರಡು ಪರೀಕ್ಷೆಯಲ್ಲೂ ತಪ್ಪೊಪ್ಪಿಕೊಂಡಿದ್ದು, ಹತ್ಯೆಯ ಬಳಿಕ ನಡೆದ ಹಲವು ಘಟನೆಗಳನ್ನು ವಿವರಿಸಿದ್ದಾನೆ. ಈ ಮಾಹಿತಿ ಆಧಾರದ ಮೇಲೆ ಪೊಲೀಸರು ಭೌತಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಶ್ರದ್ಧಾ ವಾಕರ್ (Shraddha Walker) ಕೊಲೆ ಪ್ರಕರಣವನ್ನು ಧಾರ್ಮಿಕ ಕೋನದಲ್ಲಿ ಬಿಜೆಪಿ ಬಿಂಬಿಸುತ್ತಿದೆ. ಆದರೆ ಇದು ʼಲವ್ ಜಿಹಾದ್ʼ (Love Jihad) ಅಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಹೇಳಿದ್ದಾರೆ.
ಬಿಜೆಪಿ (BJP) ರಾಜಕೀಯ ಸಂಪೂರ್ಣ ತಪ್ಪಾಗಿದೆ. ಇದು ಲವ್ ಜಿಹಾದ್ನ ಸಮಸ್ಯೆಯಲ್ಲ. ಮಹಿಳೆಯ ಮೇಲಿನ ಶೋಷಣೆ ಮತ್ತು ನಿಂದನೆಯ ವಿಷಯವಾಗಿದೆ. ಈ ದೃಷ್ಟಿಕೋನದಲ್ಲಿ ಪ್ರಕರಣವನ್ನು ನೋಡಬೇಕು ಮತ್ತು ಹತ್ಯೆಯನ್ನು ಖಂಡಿಸಬೇಕು ಎಂದು ಓವೈಸಿ ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈನ ವಸತಿ ಪ್ರದೇಶಕ್ಕೆ ನುಗ್ಗಿ, ಕಟ್ಟಡದೊಳಗೆ ಓಡಾಡಿದ ಚಿರತೆ – ಮೂವರ ಮೇಲೆ ದಾಳಿ
ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಸೂಟ್ಕೇಸ್ನಲ್ಲಿ ಇಟ್ಟುಕೊಂಡಿರುವ ಅಜಂಗಢ ಘಟನೆಯನ್ನು ನೆನಪಿಸಿಕೊಂಡ ಓವೈಸಿ, ಇಂತಹ ಘಟನೆಗಳು ದುಃಖಕರವಾಗಿವೆ. ಆದರೆ ಇದನ್ನು ಹಿಂದೂ-ಮುಸ್ಲಿಂ ಕೋನದಲ್ಲಿ ರಾಜಕೀಯಗೊಳಿಸಬಾರದು ಎಂದಿದ್ದಾರೆ.
ಗುಜರಾತ್ ಚುನಾವಣೆ ಕುರಿತು ಮಾತನಾಡಿ, ಚುನಾವಣೆಗೆ ಸ್ಪರ್ಧಿಸಲು ಬೇರೆ ಪಕ್ಷದ ಅನುಮತಿ ಬೇಕಾಗಿಲ್ಲ, ಅದು ನಮ್ಮ ಹಕ್ಕು. ನಾವು ದೇಶದ ಜನರು ಮತ್ತು ಸಂವಿಧಾನವನ್ನು ನಂಬುತ್ತೇವೆ. ನಮ್ಮ ಹೋರಾಟವು ಭಾರತೀಯ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೆಳತಿಯನ್ನು ಮೆಚ್ಚಿಸಲು ಕಾರ್ ಕದ್ದು ಪೊಲೀಸರಿಗೆ ಸಿಕ್ಕಿಬಿದ್ದ
Live Tv
[brid partner=56869869 player=32851 video=960834 autoplay=true]
ಮುಂಬೈ: ಲಿವ್ಇನ್ ರಿಲೇಶನ್ನಲ್ಲಿದ್ದು ತನ್ನ ಬಾಯ್ಫ್ರೆಂಡ್ ಕೈಯಲ್ಲೇ ಕೊಲೆಯಾಗಿ, ತುಂಡು ತುಂಡಾಗಿ ಕತ್ತರಿಸಿ ದೆಹಲಿಯಾದ್ಯಂತ (Delhi) ಕಾಡುಗಳಲ್ಲಿ ಹೂತು ಹೋದ ಯುವತಿ ಶ್ರದ್ಧಾ (Shraddha Walkar) 2 ವರ್ಷಗಳ ಹಿಂದೆಯೇ ಈ ರೀತಿ ಆಗಬಹುದು ಎಂದು ಪೊಲೀಸರಿಗೆ (Cops) ತನಗಾದ ಭೀತಿಯನ್ನು ಪತ್ರದ (Letter) ಮೂಲಕ ತಿಳಿಸಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ.
ಶ್ರದ್ಧಾ 2 ವರ್ಷಗಳ ಹಿಂದೆ ತಮ್ಮ ಹುಟ್ಟೂರಾದ ವಸಾಯಿಯ ತಿಲುಂಜ್ನಲ್ಲಿ ಪೊಲೀಸರಿಗೆ ಈ ಬಗ್ಗೆ ತಿಳಿಸಿದ್ದರು. ಆಕೆ ಅಫ್ತಾಬ್ನೊಂದಿಗೆ (Aftab Poonawala) ಒಂದೇ ಫ್ಲಾಟ್ನಲ್ಲಿ ವಾಸವಿದ್ದು, ಅಫ್ತಾಬ್ ಆಕೆಗೆ ಥಳಿಸಿದ ಕಾರಣಕ್ಕೆ ಪೊಲೀಸರಿಗೆ ಪತ್ರ ಬರೆದಿದ್ದಾಗಿ ಮಹಾರಾಷ್ಟ್ರದ ತನಿಖಾಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
2022ರ ನವೆಂಬರ್ 23ರಂದು ಶ್ರದ್ಧಾ ಬರೆದಿರುವ ಪತ್ರದಲ್ಲಿ, ಅಫ್ತಾಬ್ ಇಂದು ನನ್ನನ್ನು ಉಸಿರುಗಟ್ಟಿಸಿ ಕೊಲ್ಲಲು ಪ್ರಯತ್ನಿಸಿದ್ದಾನೆ. ಆತ ನನಗೆ ಬ್ಲಾಕ್ಮೇಲ್ ಮಾಡುತ್ತಿದ್ದು, ನನ್ನನ್ನು ಕೊಂದು, ತುಂಡು ತುಂಡು ಮಾಡಿ ಎಸೆದು ಹೋಗುತ್ತೇನೆ ಎಂದು ಹೆದರಿಸುತ್ತಿದ್ದಾನೆ. ಕಳೆದ 6 ತಿಂಗಳಿನಿಂದ ಆತ ನನಗೆ ನಿರಂತರವಾಗಿ ಹೊಡೆಯುತ್ತಿದ್ದಾನೆ. ಆದರೆ ನನಗೆ ಈ ಬಗ್ಗೆ ಪೊಲೀಸರ ಬಳಿ ಹೋಗಿ ಹೇಳುವಷ್ಟು ಧೈರ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತನ್ನೆದುರೇ ಸೆಕ್ಸ್ ಮಾಡಲು ಜೋಡಿಯನ್ನು ಒತ್ತಾಯಿಸಿದ ಪೂಜಾರಿ – ಫಾಸ್ಟ್ ಗಂ ಸುರಿದು ಇಬ್ಬರ ಹತ್ಯೆ
ವರದಿಗಳ ಪ್ರಕಾರ ಡೇಟಿಂಗ್ ಅಪ್ಲಿಕೇಶನ್ ಮೂಲಕ ಪರಿಚಯವಾದ ಶ್ರದ್ಧಾ ಹಾಗೂ ಅಫ್ತಾಬ್ 2019ರಲ್ಲಿ ಸಂಬಂಧ ಬೆಳೆಸಿದ್ದರು. ಪತ್ರದಲ್ಲಿ ಆಕೆ 6 ತಿಂಗಳಿನಿಂದ ಹಿಂಸೆಯನ್ನು ಅನುಭವಿಸುತ್ತಿರುವುದಾಗಿ ತಿಳಿಸಿದರೂ ಅವರಿಬ್ಬರ ಸಂಬಂಧ ಮತ್ತೆರಡು ವರ್ಷಗಳ ವರೆಗೂ ಮುರಿದು ಹೋಗಿರಲಿಲ್ಲ. ಈ ವರ್ಷ ಮೇ ತಿಂಗಳಿನಲ್ಲಿ ಅವರಿಬ್ಬರೂ ದೆಹಲಿಗೆ ಸ್ಥಳಾಂತರಗೊಂಡಿದ್ದರು.
ನವದೆಹಲಿ: ಶ್ರದ್ಧಾ ವಾಕರ್ (Shraddha Walker) ಕೊಲೆ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರು ತೀವ್ರಗೊಳಿಸಿದ್ದಾರೆ. ಶ್ರದ್ಧಾ ತಲೆಯ ಶೋಧಕ್ಕಾಗಿ ಮೆಹ್ರೌಲಿ ಅರಣ್ಯ ಪ್ರದೇಶದಲ್ಲಿರುವ ಕೆರೆಯ ನೀರನ್ನೇ ಖಾಲಿ ಮಾಡುವ ಸಾಹಸಕ್ಕೆ ಪೊಲೀಸರು ಕೈ ಹಾಕಿದ್ದಾರೆ.
ಅಫ್ತಾಬ್ ಹೇಳಿಕೆ ಆಧರಿಸಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಸಿಬ್ಬಂದಿಯೊಂದಿಗೆ ದೆಹಲಿ ಪೊಲೀಸ್ ಅಧಿಕಾರಿಗಳ ತಂಡವು ಇಂದು ಮೆಹ್ರೌಲಿ ಕೆರೆಯಿಂದ ನೀರನ್ನು ಖಾಲಿ ಮಾಡಲು ಪ್ರಾರಂಭಿಸಿತು.
ಶ್ರದ್ಧಾ ಮತ್ತು ಅಫ್ತಾಬ್ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದರು. ನಂತರ ಅಫ್ತಾಬ್, ಶ್ರದ್ಧಾಳನ್ನು ಹತ್ಯೆ ಮಾಡಿ ಮೃತದೇಹವನ್ನು 35 ತುಂಡುಗಳಾಗಿಸಿ ವಿವಿಧ ಸ್ಥಳಗಳಿಗೆ ಎಸೆದಿದ್ದ. ಈ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಪ್ರಕರಣ ಸಂಬಂಧ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪ್ರಬಲ ನಾಯಕನಿಲ್ಲದಿದ್ರೆ ಅಫ್ತಾಬ್ನಂಥ ಹಂತಕರು ಪ್ರತಿ ನಗರದಲ್ಲೂ ಹುಟ್ತಾರೆ – ಅಸ್ಸಾಂ ಸಿಎಂ
Live Tv
[brid partner=56869869 player=32851 video=960834 autoplay=true]
ನವದೆಹಲಿ: ದೆಹಲಿಯಲ್ಲಿ ನಡೆದ ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ (Shraddha Walker) ಹತ್ಯೆ ಪ್ರಕರಣದಲ್ಲಿ ಮತ್ತೊಂದು ಸ್ಫೋಟಕ ಮಾಹಿತಿ ಸಿಕ್ಕಿದೆ. ಶ್ರದ್ಧಾ ದೇಹವನ್ನು ತುಂಡರಿದ್ದ ಸೈಕೋ ಪಾತಕಿ ಅಫ್ತಾಬ್ ಬರಿ ದೆಹಲಿಯ ಕಾಡುಗಳಲ್ಲಿ ಮಾತ್ರವಲ್ಲದೇ ಉತ್ತಾರಖಂಡನ ಡೆಹ್ರಾಡೂನ್ ನಲ್ಲೂ ಕೆಲವು ತುಂಡುಗಳನ್ನು ಎಸೆದು ಬಂದಿದ್ದಾನಂತೆ. ಈ ನಡುವೆ ಶ್ರದ್ಧಾ ಸ್ನೇಹಿತರು ಹಂಚಿಕೊಂಡ ಚಾಟ್ಗಳು ವೈರಲ್ ಆಗಿದ್ದು, ಅಫ್ತಾಬ್ ಶ್ರದ್ಧಾಳನ್ನು ವರ್ಷಗಳಿಂದ ಹಿಂಸಿಸುತ್ತಿದ್ದದ್ದು ಬಹಿರಂಗವಾಗಿದೆ.
ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದ ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ಮೊಗೆದಷ್ಟು ಸ್ಪೋಟಕ ಮಾಹಿತಿಗಳು ಹೊರ ಬರುತ್ತಿದೆ. ದೆಹಲಿ ಪೊಲೀಸರ ವಿಚಾರಣೆಯಲ್ಲಿ ಸೈಕೊ ಪಾತಕಿ ಅಫ್ತಾಬ್ (Aftab Amin Poonawala) ಸ್ಫೋಟಕ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದಾನೆ. ಪೊಲೀಸ್ ಕಸ್ಟಡಿ ವಿಸ್ತರಣೆ ಬಳಿಕ ಪೊಲೀಸರು ಅಫ್ತಾಬ್ ವಿಚಾರಣೆ ಮುಂದುವರಿಸಿದ್ದು, ವಿಚಾರಣೆ ವೇಳೆ ಮತ್ತೊಂದು ಸ್ಪೋಟಕ ಸತ್ಯವನ್ನು ಬಾಯಿ ಬಿಟ್ಟಿದ್ದಾನೆ. ಇದನ್ನೂ ಓದಿ: ಹೌದು, ನಾನು ಡ್ರಗ್ಸ್ ಸೇವಿಸುತ್ತಿದ್ದೆ, ನಶೆಯಲ್ಲೇ ಶ್ರದ್ಧಾ ಹತ್ಯೆ ಮಾಡಿದೆ: ಅಫ್ತಾಬ್ ತಪ್ಪೊಪ್ಪಿಗೆ
ಶ್ರದ್ಧಾಳ ದೇಹವನ್ನು 16 ಪೀಸ್ ಮಾಡಿದ್ದೆ ಎಂದು ಹೇಳಿಕೆ ತಿರುಚಿದ್ದ ಅಫ್ತಾಬ್, ಈಗ ದೆಹಲಿಯ ಮೆಹ್ರೋಲಿ ಕಾಡುಗಳು ಮಾತ್ರವಲ್ಲದೇ ಉತ್ತರಾಖಂಡ (Uttarakhand) ರಾಜಧಾನಿ ಡೆಹ್ರಾಡೂನ್ (Dehradun) ನಲ್ಲೂ ಕೆಲವು ತುಂಡುಗಳನ್ನು ಎಸೆದು ಬಂದಿರುವುದಾಗಿ ಹೇಳಿದ್ದಾನೆ. ಶ್ರದ್ಧಾ ದೇಹದ ಯಾವ ಭಾಗವನ್ನು ಎಸೆದು ಬಂದಿದ್ದ ಎನ್ನುವುದು ಇನ್ನೂ ಖಚಿತವಾಗಿಲ್ಲ, ಆದರೆ ಅಫ್ತಾಬ್ ನೀಡಿದ ಹೇಳಿಕೆಗೆ ಪೊಲೀಸರು ಅಚ್ಚರಿಗೊಂಡಿದ್ದಾರೆ. ಇದನ್ನೂ ಓದಿ: ಶ್ರದ್ಧಾ ಕೊಲೆ ಪ್ರಕರಣ – ತಲೆ ಬುರುಡೆ ಸುಟ್ಟು, ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದ ಅಫ್ತಾಬ್
ಸ್ನೇಹಿತೆಗೆ ಶ್ರದ್ಧಾ ಮಾಡಿದ ಮೆಸೇಜ್ ವೈರಲ್: ತನಿಖೆಯ ಭಾಗವಾಗಿ ಪೊಲೀಸರು ಶ್ರದ್ಧಾಳ ಸ್ನೇಹಿತರು ಮತ್ತು ಆಕೆ ಕೆಲಸ ಮಾಡುತ್ತಿದ್ದ ಕಂಪನಿಯ ಮ್ಯಾನೇಜರ್ (Company Manager) ಅನ್ನು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ 2020ರಲ್ಲಿ ಶ್ರದ್ಧಾ ಮಾಡಿದ ಮೆಸೇಜ್ ಗಳನ್ನು ಅವರು ಹಂಚಿಕೊಂಡಿದ್ದಾರೆ. ಶ್ರದ್ಧಾ ತನ್ನ ಮ್ಯಾನೇಜರ್ ಕರಣ್ ಭಕ್ಕಿಗೆ 2020ರ ನವೆಂಬರ್ 26 ರಿಂದ 2020ರ ಡಿಸೆಂಬರ್ 3ರ ನಡುವೆ ಮಾಡಿದ ಮೆಸೇಜ್ನಲ್ಲಿ ಅಫ್ತಾಬ್ ತನ್ನನ್ನು ಕೊಂದುಬಿಡುವ ಬಗ್ಗೆ ಮಸೇಜ್ ಮಾಡಿದ್ದಾಳೆ. ಇದನ್ನೂ ಓದಿ: ಶ್ರದ್ಧಾ ಕೊಲೆ ಪ್ರಕರಣ- ಸಾಕ್ಷಿ ನಾಶಕ್ಕೆ OLXನಲ್ಲಿ ಫೋನ್ ಮಾರಿದ್ದ ಅಫ್ತಾಬ್!
ಶ್ರದ್ಧಾ ಮೆಸೇಜ್ನಲ್ಲಿ ಮಾಡಿದ್ದೇನು..?: ಅಫ್ತಾಬ್ ನಿನ್ನೆ ಹೆಚ್ಚು ಹೊಡೆದಿದ್ದಾನೆ. ದೇಹಕ್ಕೆ ಹೆಚ್ಚು ನೋವಾಗಿದ್ದು ನಾನು ಕೆಲಸ ಮಾಡುವ ಪರಿಸ್ಥಿತಿಯಲ್ಲಿಲ್ಲ. ನನ್ನ ಬಿಪಿ (Blood Pressure) ಕೂಡ ಕಡಿಮೆಯಾಗಿದೆ. ಹಾಸಿಗೆಯಿಂದ ಎದ್ದೇಳುವ ಶಕ್ತಿಯೂ ನನ್ನಗಿಲ್ಲ. ಅವನು ಮನೆಯಿಂದ ಹೊರ ಹೋಗುವುದು ಕಾಯುತ್ತಿದ್ದೇನೆ. ನಾನು ಪೊಲೀಸ್ಗೆ ಕಂಪ್ಲೇಟ್ ಕೊಡಬೇಕು. ಮಹಿಳಾ ಸಂಘಟನೆಯನ್ನು ಸಂಪರ್ಕಿಸಬೇಕು, ನೀವೂ ನನಗೆ ಸಹಾಯ ಮಾಡಿ ಎಂದು ಮೆಸೇಜ್ (Message) ನಲ್ಲಿ ತಿಳಿಸಿದ್ದಾಳೆ. ಅಲ್ಲದೇ ತೀವ್ರ ಗಾಯಗೊಂಡ ಮುಖದ ಪೊಟೋವನ್ನು ತೆಗೆದು ಶ್ರದ್ಧಾ ಮ್ಯಾನೇಜರ್ಗೆ ರಜೆಗೆ ಮನವಿ ಮಾಡಿದ್ದಾರೆ. ಫೋಟೋ ನೋಡಿದ ಮ್ಯಾನೇಜರ್ ಕರಣ್ ಭಕ್ಕಿ ಸಹಾಯ ಮಾಡುವ ಭರವಸೆ ನೀಡಿದ್ದರು.
ಮತ್ತೊಂದು ಮೆಸೆಂಜರ್ (Messanger) ಚಾಟ್ನಲ್ಲಿ ಶ್ರದ್ಧಾ ಅಫ್ತಾಬ್ ಹೊಡೆದ ವಿಚಾರವನ್ನು ಸ್ನೇಹಿತೆಯಿಂದ ಮುಚ್ಚಿಡುವ ಪ್ರಯತ್ನ ಮಾಡಿದ್ದಾಳೆ. ಮೂಗಿನ ಮೇಲಿನ ಗಾಯ ಕಂಡು ಏನಾಯಿತು ಎಂದು ಕೇಳಿದ ಸ್ನೇಹಿತೆಗೆ ಮೆಟ್ಟಿಲು ಹತ್ತುವಾಗ ಜಾರಿ ಬಿದ್ದಿರುವುದಾಗಿ ಬಳಿಕ ಮುರಿದಿದೆ, ಕೆಲವು ವಾರದಲ್ಲಿ ಸರಿಯಾಗಲಿದೆ ಎಂದು ಶ್ರದ್ಧಾ ಹೇಳಿದ್ದಾಳೆ. ಈ ನಡುವೆ ಸ್ನೇಹಿತ ಲಕ್ಷ್ಮಣ್ ನಾಡಾರ್ ಗೆ ವ್ಯಾಟ್ಸಪ್ ಕಾಲ್ (Whatsap Call) ಮಾಡಿದ್ದ ಶ್ರದ್ಧಾ, ಅಫ್ತಾಬ್ನಿಂದ ರಕ್ಷಿಸುವಂತೆ ಕೇಳಿಕೊಂಡಿದ್ದಳು. ರಾತ್ರಿ ಆಫ್ತಾಬ್ನೊಂದಿಗೆ ಉಳಿದುಕೊಂಡರೆ ಅವನು ನನ್ನನ್ನು ಕೊಲ್ಲುತ್ತಾನೆ ಎಂದು ಹೇಳಿಕೊಂಡಿದ್ದಳು. ಇದನ್ನೂ ಓದಿ: ಶ್ರದ್ಧಾ ದೇಹ ತುಂಡರಿಸಿದ್ರೂ ತಲೆಬುರುಡೆಗೆ ಹಾನಿ ಮಾಡಿಲ್ಲ- ಫ್ರಿಡ್ಜ್ನಲ್ಲಿಟ್ಟು ಆಗಾಗ ನೋಡ್ತಿದ್ದ ಅಫ್ತಾಬ್
ಹಲ್ಲೆಯಿಂದ ಖಿನ್ನತೆಗೆ ಒಳಗಾಗಿದ್ದ ಶ್ರದ್ಧಾ: ಅಫ್ತಾಬ್ನ ನಿರಂತರ ಶೋಷಣೆಯಿಂದ ಶ್ರದ್ಧಾ ಖಿನ್ನತೆಗೆ ಒಳಗಾಗಿದ್ದಳು ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಇದಕ್ಕಾಗಿ ಮುಂಬೈ ಮೂಲದ ವೈದ್ಯ ಪ್ರಣವ್ ಕಬ್ರಾ (Pranav Kabra) ಅವರನ್ನು ಶ್ರದ್ಧಾ ಕಳೆದ ವರ್ಷ ಸಂಪರ್ಕಿಸಿದ್ದಳು. ಅವಳು ತನ್ನ ಸಿಟ್ಟು, ಖಿನ್ನತೆ ಬಗ್ಗೆ ಫೋನ್ನಲ್ಲಿ ಹೇಳಿಕೊಂಡಿದ್ದಳು. ನೇರವಾಗಿ ಸಂಪರ್ಕಿಸಲು ವೈದ್ಯರು ಸಲಹೆ ನೀಡಿದ ವೇಳೆ ಕೋವಿಡ್ ಕಾರಣದಿಂದ ನಿರಾಕರಿಸಿದರು ಎಂದು ವೈದ್ಯ ಪ್ರಣವ್ ಕಬ್ರಾ ಹೇಳಿಕೆ ದಾಖಲಿಸಿದ್ದಾರೆ. ಇದನ್ನೂ ಓದಿ: ಶ್ರದ್ಧಾ ಕೇಸ್ನಂತೆಯೇ ಬಾಂಗ್ಲಾದಲ್ಲೂ ಭೀಕರ ಹತ್ಯೆ – ಹಿಂದೂ ಯುವತಿಯನ್ನು ಪೀಸ್ ಪೀಸ್ ಮಾಡಿದ ಹಂತಕ ಪ್ರೇಮಿ
ಪೊಲೀಸರಿಗೆ ಕೋರ್ಟ್ ಸೂಚನೆ: ಅಫ್ತಾಬ್ ಮಂಪರು ಪರೀಕ್ಷೆ ಸಂಬಂಧ ಕೋರ್ಟ್ (Court ಮಹತ್ವದ ಸೂಚನೆ ನೀಡಿದೆ. ಮುಂದಿನ ಐದು ದಿನಗಳಲ್ಲಿ ತಜ್ಞರ ಸಮ್ಮುಖದಲ್ಲಿ ಪರೀಕ್ಷೆ ನಡೆಸಲು ರೋಹಿಣಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಸಾಕೇತ್ ನ್ಯಾಯಾಲಯ ಆದೇಶ ನೀಡಿದೆ. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಜಯಶ್ರೀ ರಾಥೋಡ್ ಅಫ್ತಾಬ್ ಪರಿಸ್ಥಿತಿ ಕಂಡಿ ಯಾವುದೇ ಥರ್ಡ್ ಡಿಗ್ರಿ ಟ್ರಿಂಟ್ಮೆಂಟ್ ನೀಡದಂತೆ ತನಿಖಾಧಿಕಾರಿಗೆ ನಿರ್ದೇಶಿಸಿದ್ದಾರೆ. ಇದನ್ನೂ ಓದಿ: ಲವ್ ಜಿಹಾದ್ಗೆ ಬಲಿಯಾದ್ರೆ ಇದೇ ಗತಿ – ಹೊಸ ಆಯಾಮದಲ್ಲಿ ತನಿಖೆ ನಡೆಸುವಂತೆ VHP ಮನವಿ
ತನಿಖೆಯ ಭಾಗವಾಗಿ ಹಿಮಾಚಲದಲ್ಲಿ ಪರಿಶೀಲನೆ ನಡೆಸುತ್ತಿದ್ದ ದೆಹಲಿ ಪೊಲೀಸರು, ಈಗ ಅಫ್ತಾಬ್ ಹೇಳಿಕೆಯ ಬಳಿಕ ಉತ್ತರಾಖಂಡಗೆ ಪ್ರಯಾಣ ಬೆಳೆಸಿದ್ದು ಡೆಹ್ರಾಡೂನ್ನಲ್ಲಿ ಶ್ರದ್ಧಾ ದೇಹದ ತುಂಡುಗಳಿಗಾಗಿ ಹುಡುಕಾಟ ನಡೆಸಲಿದ್ದಾರೆ. ಈ ನಡುವೆ ಮಂಪರು ಪರೀಕ್ಷೆ ಬಳಿಕ ಮತ್ತಷ್ಟು ಸ್ಫೋಟಕ ಸತ್ಯಗಳು ಹೊರಗೆ ಬರಲಿದೆ.
Live Tv
[brid partner=56869869 player=32851 video=960834 autoplay=true]
-ಶ್ರದ್ಧಾ ಕೂಡಾ ಮದ್ಯ ಸೇವಿಸುತ್ತಿದ್ದಳು – 35 ಅಲ್ಲ 16 ಪೀಸ್ ಮಾಡಿದ್ದೆ
ನವದೆಹಲಿ: ಶ್ರದ್ಧಾ ವಾಕರ್ (Shraddha Walkar) ಹತ್ಯೆ ಪ್ರಕರಣದಲ್ಲಿ ಪ್ರತಿನಿತ್ಯ ಸ್ಫೋಟಕ ಮಾಹಿತಿಗಳು ಹೊರ ಬರುತ್ತಿದೆ. ಪ್ರಕರಣ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು (Delhi) ಮುಂದೆ ಅಫ್ತಾಬ್ ಹೊಸ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾನೆ. ತನಿಖೆ ವೇಳೆ ಅಫ್ತಾಬ್ (Aftab Amin Poonawala) ಡ್ರಗ್ಸ್ಗೆ ಅಡಿಕ್ಟ್ ಆಗಿರುವುದಾಗಿ ಒಪ್ಪಿಕೊಂಡಿದ್ದಾನೆ. ನಿತ್ಯ ಗಾಂಜಾ ಸೇವಿಸುತ್ತಿದ್ದೆ, ನಶೆಯಲ್ಲಿ ತೇಲಾಡುತ್ತಿದ್ದೆ, ಗಾಂಜಾ ಸೇವನೆಯನ್ನು ಶ್ರದ್ಧಾ ವಿರೋಧಿಸಿದ್ದಳು, ಇದೇ ಕಾರಣಕ್ಕೆ ಶ್ರದ್ಧಾ ಜಗಳವಾಡುತ್ತಿದ್ದಳು ಎಂದು ತನಿಖೆ ವೇಳೆ ಅಫ್ತಾಬ್ ಹೇಳಿಕೊಂಡಿದ್ದಾನೆ.
ಮುಂಬೈನಿಂದ (Mumbai) ದೆಹಲಿಗೆ ಶಿಫ್ಟ್ ಆಗಿದ್ದರಿಂದ ಶ್ರದ್ಧಾ ಮತ್ತು ನನ್ನ ನಡುವೆ ಲಗೇಜ್ ತರುವ ವಿಚಾರಕ್ಕೆ ಮೇ 18 ರಂದು ಜಗಳವಾಗಿತ್ತು. ಮುಂಬೈನಲ್ಲಿ ಮನೆ ಬಳಕೆಯ ಲಗೇಜ್ ಇತ್ತು, ಅದನ್ನು ದೆಹಲಿಗೆ ತರುವ ಬಗ್ಗೆ ಇಬ್ಬರ ನಡುವೆ ಜಗಳವಾಗಿತ್ತು. ಇಬ್ಬರು ನಗದು ಹಣದ ಕೊರತೆ ಎದುರಿಸುತ್ತಿದ್ದರಿಂದ ಮುಂಬೈನಿಂದ ಲಗೇಜ್ ತರುವುದು ಯಾರು ಎಂದು ಜಗಳಮಾಡಿಕೊಂಡಿದ್ದೆವು, ಕೊಲೆಯಾದ ದಿನ ತೀವ್ರ ಮಾತಿನ ಜಕಮಕಿ ನಡೆದಿತ್ತು.
ಜಗಳ ನಡುವೆ ಮನೆಯಿಂದ ಹೊರಗೆ ಹೋಗಿ ಗಾಂಜಾ ಸೇವಿಸಿ ಮನೆಗೆ ವಾಪಸ್ ಆಗಿದ್ದೆ, ಈ ವೇಳೆ ಜಗಳ ಮುಂದುವರಿದು ನಶೆಯಲ್ಲಿ ಕತ್ತು ಹಿಸುಕಿ ಹತ್ಯೆ ಮಾಡಿರುವುದಾಗಿ ಅಫ್ತಾಬ್ ಹೇಳಿದ್ದಾನೆ. ಇದು ನಶೆಯಲ್ಲಿ ನಡೆದ ಘಟನೆಯಾಗಿದ್ದು, ಶ್ರದ್ಧಾ ಹತ್ಯೆ ಮಾಡುವ ಉದ್ದೇಶ ಇರಲಿಲ್ಲ ಎಂದು ಸೈಕೋ ಕಿಲ್ಲರ್ ಅಫ್ತಾಬ್ ಹೇಳಿಕೆ ನೀಡಿದ್ದಾನೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾದವಳು ಮತಾಂತರವಾಗಲಿಲ್ಲ – ಪತ್ನಿಯನ್ನೇ ಕೊಲ್ಲಲು ಮುಂದಾದ ಪತಿ
ಶ್ರದ್ಧಾ ಜೊತೆ ಮದ್ಯ ಸೇವಿಸುತ್ತಿದ್ದೆ
ವಿಚಾರಣೆ ವೇಳೆ ಶ್ರದ್ಧಾ ಕೂಡಾ ಮದ್ಯ ಸೇವನೆ ಮಾಡುತ್ತಿದ್ದ ಮಾಹಿತಿಯನ್ನು ಅಫ್ತಾಬ್ ಹಂಚಿಕೊಂಡಿದ್ದಾನೆ. ಹಲವು ಬಾರಿ ಮನೆಯಲ್ಲಿ ಶ್ರದ್ಧಾ ಜೊತೆಯಲ್ಲಿ ಮದ್ಯ ಸೇವನೆ ಮಾಡಿ ಜಗಳ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ.
35 ಅಲ್ಲ 16 ಪೀಸ್ ಮಾಡಿದ್ದೆ
ಇದೇ ವೇಳೆ ಅಫ್ತಾಬ್ ತನ್ನ ಹೇಳಿಕೆಯನ್ನು ಬದಲಿಸಿದ್ದು, ಶ್ರದ್ಧಾ ದೇಹವನ್ನು 35 ಭಾಗವಲ್ಲ ಬದಲಿಗೆ 16 ಭಾಗಗಳಾಗಿ ತುಂಡರಿಸಿ ಫ್ರಿಡ್ಜ್ನಲ್ಲಿ ತುಂಬಿದ್ದೆ ಎಂದು ಅಫ್ತಾಬ್ ಹೇಳಿದ್ದಾನೆ. ಸೊಂಟದ ಕೆಳಭಾಗದಿಂದ ಕಾಲಿನವರೆಗೆ ಮೂರು ಭಾಗಗಳಾಗಿ ಮಾಡಿದರೆ, ಮೇಲಿನ ದೇಹ ಮತ್ತು ಒಳ ಭಾಗಗಳನ್ನು 13 ಭಾಗಗಳಾಗಿ ಕತ್ತರಿಸಿರುವುದಾಗಿ ಹೇಳಿದ್ದಾನೆ, ತಲೆಯನ್ನು ಗುರುತು ಸಿಗದ ಹಾಗೇ ಸುಟ್ಟು ಎಸೆದಿದ್ದು, ಅದನ್ನು ಕತ್ತಿರಿಸುವ ಪ್ರಯತ್ನ ಮಾಡಿಲ್ಲ ಎಂದು ತಿಳಿಸಿದ್ದಾನೆ.
ಮಂಪರು ಪರೀಕ್ಷೆ ನಿರ್ಧಾರದ ಬಳಿಕ ಅಫ್ತಾಬ್ ತನ್ನ ಹೇಳಿಕೆಯಲ್ಲಿ ಮಹತ್ವದ ಹೇಳಿಕೆ ಬದಲಿಸಿದ್ದು ಇದು ತನಿಖೆಯ ದಿಕ್ಕನ್ನು ಮತ್ತೊಂದು ಕಡೆಗೆ ತಿರುಗಿಸಲಿದೆ. ಈಗಾಗಲೇ ಪೊಲೀಸರು 13 ಭಾಗಗಳನ್ನು ಗುರುತಿಸಿದ್ದು, ತಲೆ ಬರುಡೆಯನ್ನು ಪತ್ತೆ ಹಚ್ಚಿ ಡಿಎನ್ಎ ಟೆಸ್ಟ್ಗೆ ಕಳುಹಿಸಿದೆ. ಈ ವರದಿಗಾಗಿಯೂ ಪೊಲೀಸರು ಕಾಯುತ್ತಿದ್ದಾರೆ. ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ – ದಲಿತ ಚಿಂತಕ ಆನಂದ್ ತೇಲ್ತುಂಬ್ಡೆಗೆ ಬಾಂಬೆ ಹೈಕೋರ್ಟ್ ಜಾಮೀನು
2020ರಲ್ಲೇ ಶ್ರದ್ಧಾ ಮೇಲೆ ತೀವ್ರ ಹಲ್ಲೆ ಮಾಡಿದ್ನಾ ಆಫ್ತಾಬ್?
ಶ್ರದ್ಧಾ ಸೋಶಿಯಲ್ ಮೀಡಿಯಾ ಪರಿಶೀಲನೆ ನಡೆಸಿರುವ ಪೊಲೀಸರಿಗೆ ಹೊಸ ಮಾಹಿತಿ ತಿಳಿದು ಬಂದಿದೆ. ಶ್ರದ್ಧಾ ಅಪ್ಲೋಡ್ ಮಾಡಿದ ಹಳೆಯ ಫೋಟೋದಲ್ಲಿ ಮುಖದ ಮೇಲೆ ಗಾಯ ಪತ್ತೆಯಾಗಿದೆ. ಮುಖದ ಮೇಲೆ ಗಾಯ, ಊದಿಕೊಂಡ ಕಣ್ಣುಗಳು, ಮೂಗಿನ ಮೇಲೆಯೂ ಗಾಯದ ಗುರುತು ಹೊಂದಿರುವ ಫೋಟೋಗಳನ್ನು 2020ರಲ್ಲಿ ಶ್ರದ್ಧಾ ಅಪ್ಲೋಡ್ ಮಾಡಿದ್ದಾಳೆ. ಹೀಗಾಗಿ ಅಫ್ತಾಬ್ ಈ ಹಿಂದೆಯೂ ಶ್ರದ್ಧಾ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ನಾ ಎಂಬ ಅನುಮಾನ ಮೂಡಿದೆ.
176 ಪೊಲೀಸ್ ಠಾಣೆಗಳಿಗೆ ನೋಟಿಸ್
ಶ್ರದ್ಧಾ ಮೃತ ದೇಹ ಪತ್ತೆ ಮಾಡುವ ನಿಟ್ಟಿನಲ್ಲಿ ದೆಹಲಿ ಪೊಲೀಸ್ ಮಹಾ ನಿರ್ದೇಶಕರು ಮೆಹ್ರೋಲಿ ಸುತ್ತಲಿನ 176 ಪೊಲೀಸ್ ಠಾಣೆಗಳಿಗೆ ನೋಟಿಸ್ ನೀಡಿದ್ದಾರೆ. ಮೇ 18 ರಿಂದ ಜುಲೈ ಅಂತ್ಯದ ಅವಧಿಯಲ್ಲಿ ದೆಹಲಿಯಲ್ಲಿ ಪತ್ತೆಯಾದ ಗುರುತು ಸಿಗದ ಹೆಣ್ಣು ದೇಹಗಳ ಮಾಹಿತಿಯನ್ನು ತಿಳಿಸುವಂತೆ ಸೂಚನೆ ನೀಡಿದ್ದಾರೆ. ಈ ಮೂಲಕ ಶ್ರದ್ಧಾಳ ಬಾಕಿ ದೇಹಕ್ಕಾಗಿ ಹುಡುಕಾಟ ತೀವ್ರವಾಗಿದೆ.
ಅಫ್ತಾಬ್ ವಿಚಾರಣೆ ವೇಳೆ ಪದೇ ಪದೇ ಹೇಳಿಕೆ ಬದಲಿಸುತ್ತಿರುವ ಹಿನ್ನೆಲೆ ಪೊಲೀಸರು ಸಾಕಷ್ಟು ಗೊಂದಲಕ್ಕೀಡಾಗಿದ್ದಾರೆ. ಈಗಾಗಲೇ ಮಂಪರು ಪರೀಕ್ಷೆ ನಡೆಸಲು ನ್ಯಾಯಲಯ ಅನುಮತಿ ನೀಡಿದ್ದು, ಅಫ್ತಾಬ್ ಕೂಡಾ ಒಪ್ಪಿಗೆ ಸೂಚಿಸಿದ್ದಾನೆ. ತಜ್ಞರ ಸಮ್ಮುಖದಲ್ಲಿ ಪರೀಕ್ಷೆ ನಡೆಸಲು ಪೊಲೀಸರು ತಯಾರಿ ಮಾಡಿಕೊಳುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
ಲಕ್ನೋ: ಲವ್ ಜಿಹಾದ್ಗೆ (love jihad) ಕಠಿಣ ಶಿಕ್ಷೆಯಾಗಬೇಕು. ಘೋರ ಅಪರಾಧಗಳಿಗೆ ಸಂಬಂಧಿಸಿದಂತೆ ರಾಜ್ಯದ ಕಾನೂನುಗಳನ್ನು ತಿದ್ದುಪಡಿ ಮಾಡಬೇಕು ಎಂದು ದೆಹಲಿ ಕೊಲೆ ಪ್ರಕರಣ ಉಲ್ಲೇಖಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರಿಗೆ ಬಿಜೆಪಿ ಶಾಸಕ ರಾಜೇಶ್ವರ್ ಸಿಂಗ್ (Rajeshwar Singh) ಪತ್ರ ಬರೆದಿದ್ದಾರೆ.
ಇಂತಹ ಪ್ರಕರಣಗಳಲ್ಲಿ ತ್ವರಿತ ವಿಚಾರಣೆ, ಆರೋಪಿಗಳಿಗೆ ಯಾವುದೇ ಜಾಮೀನು ನೀಡದಿರುವುದು, ಅತ್ಯಾಚಾರ ಮತ್ತು ಕೊಲೆಗೆ ಮರಣದಂಡನೆ, ಸಾಕ್ಷಿಗಳಿಗೆ ವಿಶೇಷ ರಕ್ಷಣೆ ಮತ್ತು ಅಂತಹ ಪ್ರಕರಣಗಳಲ್ಲಿ ಅತ್ಯಾಚಾರಕ್ಕಾಗಿ ಜೀವಾವಧಿ ಶಿಕ್ಷೆಯಂತಹ ಬದಲಾವಣೆಗಳನ್ನು ಕಾನೂನಿನಲ್ಲಿ ತರಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಶ್ರದ್ಧಾ ಕೊಲೆ ಪ್ರಕರಣ – ತಲೆ ಬುರುಡೆ ಸುಟ್ಟು, ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದ ಅಫ್ತಾಬ್
ಶಾಸಕರ ಪತ್ರದ ಪ್ರತಿಯನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರಿಗೂ ಕಳುಹಿಸಲಾಗಿದೆ. ಕ್ರಿಮಿನಲ್ ಕಾರ್ಯವಿಧಾನದ ಕಾನೂನಿಗೆ ತಿದ್ದುಪಡಿ ತರಬೇಕು ಎಂದು ಶಾಸಕ ಸಿಂಗ್ ಒತ್ತಾಯಿಸಿದ್ದಾರೆ.
ದೆಹಲಿ ನಗರದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಯುವತಿಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಘಟನೆಯು ದೇಶಾದ್ಯಂತ ವರದಿಯಾಗಿದೆ. ಲವ್ ಜಿಹಾದ್ ಅಪರಾಧಗಳನ್ನು ಇದು ಪ್ರತಿಬಿಂಬಿಸುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರದ್ಧಾ ಕೊಲೆ ಪ್ರಕರಣ- ಸಾಕ್ಷಿ ನಾಶಕ್ಕೆ OLXನಲ್ಲಿ ಫೋನ್ ಮಾರಿದ್ದ ಅಫ್ತಾಬ್!
ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಲು ಈ ಹಿಂದೆ ಮಾಡಿದಂತೆ ರಾಜ್ಯ ಶಾಸಕಾಂಗದ ಮೂಲಕ ಶಾಸನಕ್ಕೆ ತಿದ್ದುಪಡಿಗಳನ್ನು ಕೈಗೊಳ್ಳುವುದು ಅವಶ್ಯಕ ಎಂದು ಶಾಸಕರು ಹೇಳಿದ್ದಾರೆ.
ಮುಂಬೈ ಮೂಲದ 27 ವರ್ಷದ ಶ್ರದ್ಧಾ ವಾಕರ್ (Shraddha Walkar) ಅವರನ್ನು ಈ ವರ್ಷದ ಮೇ ತಿಂಗಳಲ್ಲಿ ದೆಹಲಿಯಲ್ಲಿ ಆಕೆಯ ಪ್ರಿಯಕರ ಅಫ್ತಾಬ್ ಪೂನಾವಾಲಾ (Aftab Poonawala) ಕೊಲೆ ಮಾಡಿದ್ದ. ಆಕೆಯ ಕತ್ತು ಹಿಸುಕಿ ಕೊಂದ ನಂತರ, ಅಫ್ತಾಬ್ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯ ವಿವಿಧ ಸ್ಥಳಗಳಲ್ಲಿ ಎಸೆದಿದ್ದ. ಕತ್ತರಿಸಿದ ದೇಹದ ಭಾಗಗಳನ್ನು ಶೇಖರಿಸಿಡಲು ರೆಫ್ರಿಜರೇಟರ್ ಕೂಡ ಬಳಿಸಿದ್ದ. ಇಂತಹ ಭೀಕರ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ಇದನ್ನೂ ಓದಿ: ಶ್ರದ್ಧಾರಂಥ ಹೆಣ್ಣುಮಕ್ಕಳು ಒಳ್ಳೆ ಹುಡುಗರನ್ನ ಆಯ್ಕೆ ಮಾಡ್ಕೋಬೇಕು; ಅಫ್ತಾಬ್ನ ನೇಣಿಗೆ ಹಾಕಿ – ರಾವತ್
Live Tv
[brid partner=56869869 player=32851 video=960834 autoplay=true]
ನವದೆಹಲಿ: ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ (Shraddha) ಹತ್ಯೆ ಪ್ರಕರಣ (Delhi Murder) ತನಿಖೆಯಲ್ಲಿ ಸ್ಫೋಟಕ ಮಾಹಿತಿಗಳು ಹೊರ ಬರುತ್ತಿದ್ದು, ಸಾಕ್ಷ್ಯಗಳ ನಾಶಕ್ಕೆ ನಿರ್ಧರಿಸಿದ್ದ ಆರೋಪಿ ಅಫ್ತಾಬ್ (Aftab) ಯುವತಿಯ ಮುಖ ಸುಟ್ಟು ಹಾಕಿದ್ದ ಎಂದು ತಿಳಿದು ಬಂದಿದೆ.
ಭೌತಿಕ ಸಾಕ್ಷ್ಯಗಳ ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ತಲೆ ಬುರುಡೆ ಮತ್ತು ತುಂಡರಿಸಿದ ಕೈ ಸಿಕ್ಕಿದ್ದು, ತಲೆ ಸುಟ್ಟ ಸ್ಥಿತಿಯಲ್ಲಿತ್ತು ಎಂದು ತಿಳಿದು ಬಂದಿದೆ. ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದ ಅಫ್ತಾಬ್ ನಿತ್ಯ 2 ತುಂಡುಗಳನ್ನು ಎಸೆದು ಬರುತ್ತಿದ್ದ. ಕೊನೆಯವರೆಗೂ ತಲೆ ಬುರುಡೆ ಉಳಿಸಿಕೊಂಡಿದ್ದ ಅಫ್ತಾಬ್ ಅದರ ಗುರುತು ಸಿಗದಂತೆ ಸುಟ್ಟು ಎಸೆದಿದ್ದ ಎಂದು ಮೂಲಗಳು ಹೇಳಿವೆ.