Tag: ಅಫ್ತಾಬ್

  • ಶ್ರದ್ಧಾ ಕೊಲೆ ಪ್ರಕರಣ- ಸಾಕ್ಷಿ ನಾಶಕ್ಕೆ OLXನಲ್ಲಿ ಫೋನ್ ಮಾರಿದ್ದ ಅಫ್ತಾಬ್!

    ಶ್ರದ್ಧಾ ಕೊಲೆ ಪ್ರಕರಣ- ಸಾಕ್ಷಿ ನಾಶಕ್ಕೆ OLXನಲ್ಲಿ ಫೋನ್ ಮಾರಿದ್ದ ಅಫ್ತಾಬ್!

    – ತುಂಡರಿಸಿದ ಕೈ, ತಲೆ, ಕಸದ ಲಾರಿಗೆ ಎಸೆದಿದ್ದ ಬಟ್ಟೆ ಪತ್ತೆ
    – ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಡಿಎನ್‍ಎ ಪರೀಕ್ಷೆ

    ನವದೆಹಲಿ: ರಾಷ್ಟ್ರ ರಾಜ್ಯಧಾನಿಯಲ್ಲಿ ಲೀವ್ ಇನ್ ರಿಲೇಶನ್ ಶಿಪ್‍ನಲ್ಲಿದ್ದ ಗೆಳತಿಯನ್ನು ಭೀಕರವಾಗಿ ಹತ್ಯೆಗೈದು 35 ಪೀಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಭಯಾನಕ ವಿಷಯಗಳು ಹೊರಬರುತ್ತಿವೆ. ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಹತ್ಯೆ ಬಳಿಕ ಡೇಟಿಂಗ್ ಆ್ಯಪ್ ಮೂಲಕ ಹಲವು ಯುವತಿಯರ ಜೊತೆ ಮಾತನಾಡುತ್ತಿದ್ದ. ಅದಾದ ಬಳಿಕ ಕೊಲೆ ಮಾಡಿದ್ದಕ್ಕೆ ಸಾಕ್ಷಿ ಸಿಗಬಾರದು ಎಂದು ತನ್ನ ಫೋನ್‍ನನ್ನು ಒಎಲ್‍ಎಕ್ಸ್‌ನಲ್ಲಿ ಮಾಡಿದ್ದಾನೆ.

    ಪೊಲೀಸ್ ಮೂಲಗಳ ಪ್ರಕಾರ ಅಫ್ತಾಬ್ (Aaftab Ameen Poonawala) ಮತ್ತು ಶ್ರದ್ಧಾ (Shraddha) ಡೇಟಿಂಗ್ ಅಪ್ಲಿಕೇಶನ್ ಬಂಬಲ್ ಮೂಲಕ ಪರಸ್ಪರ ಭೇಟಿಯಾಗಿದ್ದರು. ಅದಾದ ಬಳಿಕ ಕಳೆದ 3 ವರ್ಷಗಳ ಕಾಲ ಒಟ್ಟಿಗೆ ಇದ್ದರು. ಆದರೆ ಮದುವೆ ವಿಚಾರಕ್ಕೆ ಜಗಳವಾಗಿ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ. ಅದಾದ ಬಳಿಕ ಶ್ರದ್ಧಾಳ ದೇಹವನ್ನು 35 ಪೀಸ್ ಮಾಡಿ ಅದನ್ನು ಫ್ರಿಡ್ಜ್‌ನಲ್ಲಿ ಇಟ್ಟು ಆ ಬಳಿಕ ಆ ಎಲ್ಲ ದೇಹದ ಪೀಸ್‍ನ್ನು ಕಾಡಿನಲ್ಲಿ (Forest) ವಿಲೇವಾರಿ ಮಾಡಿದ್ದ.

    ಇನ್ನೂ ಶ್ರದ್ಧಾಳನ್ನು ಕೊಲೆ ಮಾಡಿದ ನಂತರ ಅಫ್ತಾಬ್ ಡೇಟಿಂಗ್ ಅಪ್ಲಿಕೇಶನ್‍ಗಳಲ್ಲಿ ಸಕ್ರಿಯರಾಗಿದ್ದ. ಕಳೆದ ಆರು ತಿಂಗಳಲ್ಲಿ ಅನೇಕ ಯುವತಿಯರನ್ನು ಭೇಟಿಯಾಗಿ, ಅವರ ಜೊತೆ ಸಂಬಂಧವನ್ನು ಹೊಂದಿದ್ದ. ಅದಾದ ಬಳಿಕ ಅಫ್ತಾಬ್ ಯಾರಿಗೂ ಸಂಶಯ ಬರಬಾರದು ಎಂದು ತನ್ನ ಫೋನ್‍ನನ್ನು ಒಎಲ್‍ಎಕ್ಸ್‌ನಲ್ಲಿ ಮಾರಾಟ ಮಾಡಿದ್ದಾನೆ ಎನ್ನುವ ವಿಷಯ ಇದೀಗ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಹೊಂಬಾಳೆ ಸಂಸ್ಥೆಗೂ ಚಿಲುಮೆಗೂ ಸಂಬಂಧ ಇಲ್ಲ: ಕೈ ಆರೋಪಕ್ಕೆ ಅಶ್ವಥ್ ನಾರಾಯಣ್ ತಿರುಗೇಟು

    ಇನ್ನೂ ಶ್ರದ್ಧಾ ವಾಕರ್ ಹತ್ಯೆ ಬಳಿಕ ಅಫ್ತಾಬ್ ಆಕೆಯ ಬಟ್ಟೆಗಳನ್ನು ಕಸದ ವಾಹನಕ್ಕೆ ಎಸೆದಿದ್ದ ಬಟ್ಟೆಗಳನ್ನು ಪತ್ತೆ ಹಚ್ಚುವಲ್ಲಿ ಪೆÇಲೀಸರು ಯಶಸ್ವಿಯಾಗಿದ್ದಾರೆ. ದೆಹಲಿ ಹೊರವಲಯದಲ್ಲಿರುವ ಡಪ್ಪಿಂಗ್ ಯಾರ್ಡ್‍ನಲ್ಲಿ ತೀವ್ರ ಹುಡುಕಾಟದ ನಂತರ ರಕ್ತದ ಕಲೆಗಳಿರುವ ಬಟ್ಟೆಗಳು ದೊರೆತಿದ್ದು ಅವುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

    ಪೂರ್ವ ದೆಹಲಿ ಭಾಗದಲ್ಲಿ ತುಂಡರಿಸಿ ಕೈ ಮೂಳೆಗಳು ಮತ್ತು ತಲೆ ಭಾಗ ಪತ್ತೆಯಾಗಿದ್ದು, ಇವುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಡಿಎನ್‍ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಏಮ್ಸ್ ಆಸ್ಪತ್ರೆಯಲ್ಲಿ ಡಿಎನ್‍ಎ ಪರೀಕ್ಷೆ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಶ್ರದ್ಧಾ ತಂದೆ ವಿಕಾಸ್ ವಾಕರ್ ಡಿಎನ್‍ಎ ಸ್ಯಾಂಪಲ್ಸ್ ಪಡೆಯಲಾಗಿದೆ. ಇದನ್ನೂ ಓದಿ: ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಆಟೋದಿಂದ ಜಂಪ್ – ಬಾಲಕಿ ತಲೆಗೆ ಗಂಭೀರ ಗಾಯ

    ಮನೆಯಲ್ಲಿ ರಕ್ತದ ಕಲೆಗಳನ್ನು ಅಳಿಸಲು ಬಳಸಿದ ಕೆಮಿಕಲ್ ಮತ್ತು ಗೋಡೆಯ ಮೇಲಿರುವ ರಕ್ತದ ಕಲೆಯೂ ಪತ್ತೆಯಾಗಿದ್ದು ಎಫ್‍ಎಸ್‍ಎಲ್ ತಂಡ ಪರಿಶೀಲನೆ ನಡೆಸುತ್ತಿದೆ. ಇದರ ಜೊತೆಗೆ ಶ್ರದ್ಧಾ ಹತ್ಯೆ ಬಳಿಕ ಆಕೆಯ ಮೂಬೈಲ್ ನಿಂದ ಹಣ ವರ್ಗಾವಣೆ ಮತ್ತು ಲೋಕೆಷನ್ ಮೇಲೆ ಹತ್ಯೆಯನ್ನು ನಿರೂಪಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರದ್ಧಾರಂಥ ಹೆಣ್ಣುಮಕ್ಕಳು ಒಳ್ಳೆ ಹುಡುಗರನ್ನ ಆಯ್ಕೆ ಮಾಡ್ಕೋಬೇಕು; ಅಫ್ತಾಬ್‌ನ ನೇಣಿಗೆ ಹಾಕಿ – ರಾವತ್‌

    ಶ್ರದ್ಧಾರಂಥ ಹೆಣ್ಣುಮಕ್ಕಳು ಒಳ್ಳೆ ಹುಡುಗರನ್ನ ಆಯ್ಕೆ ಮಾಡ್ಕೋಬೇಕು; ಅಫ್ತಾಬ್‌ನ ನೇಣಿಗೆ ಹಾಕಿ – ರಾವತ್‌

    ಮುಂಬೈ: ಶ್ರದ್ಧಾ ವಾಕರ್ (Shraddha Walkar) ಅವರಂತಹ ವಿದ್ಯಾವಂತ ಮತ್ತು ಪ್ರಗತಿಪರ ಹೆಣ್ಣುಮಕ್ಕಳು ಸಂಬಂಧಗಳನ್ನು ಬೆಳೆಸುವ ಬಗ್ಗೆ ಜಾಗರೂಕರಾಗಿರಬೇಕು ಎಂದು ಶಿವಸೇನಾ (Shiv Sena) ಸಂಸದ ಸಂಜಯ್ ರಾವತ್ (Sanjay Raut) ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್, ಅಫ್ತಾಬ್ (Aftab) ಜೊತೆ ಸಂಬಂಧ ಹೊಂದಲು ತನ್ನ ತಂದೆ ಪದೇ ಪದೇ ಆಕ್ಷೇಪಿಸಿದರೂ, ಅವಳು ಅವರ ಮಾತನ್ನು ಕೇಳಲು ನಿರಾಕರಿಸಿದಳು. ಶ್ರದ್ಧಾರಂತಹ ಹೆಣ್ಣುಮಕ್ಕಳು ಒಳ್ಳೆ ಹುಡುಗರನ್ನ ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಫ್ತಾಬ್‌ಗೆ ಮಂಪರು ಪರೀಕ್ಷೆ – ಪೊಲೀಸರಿಗೆ ಕೋರ್ಟ್‌ ಅನುಮತಿ

    ಆರೋಪಿ ಅಫ್ತಾಬ್‌ ಕುರಿತು ಮಾತನಾಡಿ, ಅವನಿಗೆ ಕರುಣೆ ಇಲ್ಲ. ಸಾರ್ವಜನಿಕವಾಗಿ ಅವನನ್ನು ಗಲ್ಲಿಗೇರಿಸಬೇಕು. ಸಾಕ್ಷ್ಯಗಳು ನಮ್ಮ ಮುಂದೆ ಇವೆ, ಕಾಯುವ ಅಗತ್ಯವಿಲ್ಲ. ಕೆಲವು ವಿಷಯಗಳಲ್ಲಿ ನಾವು ಕಾನೂನನ್ನು ಕೈಗೆ ತೆಗೆದುಕೊಳ್ಳಬೇಕು ಎಂದಿದ್ದಾರೆ.

    ಮುಂಬೈ ಮೂಲದ 27 ವರ್ಷದ ಶ್ರದ್ಧಾ ವಾಲ್ಕರ್ ಅವರನ್ನು ಈ ವರ್ಷದ ಮೇ ತಿಂಗಳಲ್ಲಿ ದೆಹಲಿಯಲ್ಲಿ ಆಕೆಯ ಪ್ರಿಯಕರ ಅಫ್ತಾಬ್ ಪೂನಾವಾಲಾ ಕೊಲೆ ಮಾಡಿದ್ದ. ಆಕೆಯ ಕತ್ತು ಹಿಸುಕಿ ಕೊಂದ ನಂತರ, ಅಫ್ತಾಬ್ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯ ವಿವಿಧ ಸ್ಥಳಗಳಲ್ಲಿ ಎಸೆದಿದ್ದ. ಕತ್ತರಿಸಿದ ದೇಹದ ಭಾಗಗಳನ್ನು ಶೇಖರಿಸಿಡಲು ರೆಫ್ರಿಜರೇಟರ್ ಕೂಡ ಬಳಿಸಿದ್ದ. ಇಂತಹ ಭೀಕರ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ಇದನ್ನೂ ಓದಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ಸಿಬಿಐಗೆ ವರ್ಗಾವಣೆ ಸಾಧ್ಯತೆ

    Live Tv
    [brid partner=56869869 player=32851 video=960834 autoplay=true]

  • ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ್ದಕ್ಕೆ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಹತ್ಯೆಗೈದ

    ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ್ದಕ್ಕೆ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಹತ್ಯೆಗೈದ

    ಲಕ್ನೋ: ತನ್ನನ್ನು ಮದುವೆಯಾಗುವಂತೆ (Marriage) ಕೇಳಿದ್ದಕ್ಕೆ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ (Live In Relationship) ಗೆಳತಿಯನ್ನ ಭೀಕರವಾಗಿ ಹತ್ಯೆ ಮಾಡಿದ ದೆಹಲಿಯ (Delhi Murder) ಘಟನೆ ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಇದೀಗ ಉತ್ತರ ಪ್ರದೇಶದಲ್ಲಿ (UttarPradesh) ಅಂತಹದ್ದೇ ಘಟನೆಯೊಂದು ನಡೆದಿರುವುದು ಪೊಲೀಸರ ನಿದ್ದೆಗೆಡಿಸಿದೆ.

    ಮುಸ್ಲಿಂ (Muslim) ಯುವಕನೊಬ್ಬ ತನ್ನ 19 ವರ್ಷದ ಹಿಂದೂ ಗೆಳತಿ ಮತಾಂತರಗೊಳ್ಳಲು ನಿರಾಕರಿಸಿದ್ದರಿಂದ ಆಕೆಯನ್ನು ಕಟ್ಟಡದ 4ನೇ ಮಹಡಿಯಿಂದ ಎಸೆದು ಕೊಂದಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ. ಇದನ್ನೂ ಓದಿ: ರಾಜೀವ್‌ಗಾಂಧಿ ಹತ್ಯೆ ಕೇಸ್ – ರೀಲಿಸ್ ಆದ 6 ಮಂದಿಯಲ್ಲಿ ನಾಲ್ವರು ಗಡಿಪಾರು

    ಆರೋಪಿ ಸೂಫಿಯಾನ್ ಹಾಗೂ ನಿಧಿ ಗುಪ್ತ (19) ದುಬಗ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ವಾಸಿಸುತ್ತಿದ್ದರು. ನಿಧಿ ಬ್ಯೂಟಿಷಿಯನ್ (Beautician) ತರಬೇತಿ ಪಡೆದಿದ್ದಳು. ಕಳೆದ ಎರಡು ತಿಂಗಳಿನಿಂದ ಇಬ್ಬರು ಸಂಬಂಧ ಹೊಂದಿದ್ದರು. ಇದನ್ನೂ ಓದಿ: ಭಾರತ-ಕಿವೀಸ್ ಸರಣಿ ಆರಂಭಕ್ಕೂ ಮುನ್ನ ಕಪ್ ಹಿಡಿದು ಹೊರಟ ವಿಲಿಯಮ್ಸನ್

    ಸೂಫಿಯಾನ್ ನಿಧಿಗೆ ಮೊಬೈಲ್ (Mobile) ಸಹ ಕೊಡಿಸಿದ್ದ. ಕರೆ ಮಾಡಿದಾಗೆಲ್ಲಾ, ಸಂದೇಶಗಳನ್ನು ಕಳಿಸುವಾಗ ಆಕೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಬ್ರೈನ್‌ವಾಶ್ ಮಾಡುತ್ತಿದ್ದ. ಈ ವಿಷಯ ತಿಳಿದ ನಿಧಿ ಪೋಷಕರು ಸೂಫಿಯಾನ್ ಮತ್ತು ಅವನ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು. ಬಲವಂತವಾಗಿ ಮತಾಂತಗೊಳಿಸಲು ಪ್ರಯತ್ನಿಸುತ್ತಿದ್ದರಿಂದ ನಿಧಿಯನ್ನು ಅಜ್ಜಿ ಮನೆಗೆ ಕಳುಹಿಸಿದ್ದರು. ಇದರಿಂದ ಕೆಲ ದಿನಗಳಿಂದ ಸೂಫಿಯಾನ್‌ನೊಂದಿಗೆ ಮಾತನಾಡುವುದು ನಿಂತಿತ್ತು. ಆದಾಗ್ಯೂ ಸೂಫಿಯಾನ್ ದುರ್ವರ್ತನೆಯಿಂದ ಪೋಷಕರು ದೂರು ನೀಡಿದ್ದರು. ಬಳಿಕ ರಾಜಿ ಮಾಡಿಕೊಳ್ಳಲಾಗಿತ್ತು. ಆದರೆ ಭಾನುವಾರ ನಿಧಿ ತನ್ನ ಮನೆಯ ನಾಲ್ಕನೇ ಮಹಡಿಗೆ ಬಂದಾಗ ಬಾಲ್ಕನಿಯಿಂದ ಎಸೆದಿದ್ದಾನೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.

    ಬಳಿಕ ರಕ್ತದ ಮಡುವಿನಲ್ಲಿದ್ದ ನಿಧಿಯನ್ನು ಇಲ್ಲಿನ ಕಿಂಗ್‌ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಗಂಭೀರ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ.

    ಲಕ್ನೋ ಪೊಲೀಸರು (Lucknow Police) ಕೊಲೆ ಮತ್ತು ಬಲವಂತದ ಮತಾಂತರಕ್ಕೆ ಸಂಬಂಧಿಸಿದಂತೆ ಐಪಿಸಿಯ (IPC) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ (FIR) ದಾಖಲಿಸಿದ್ದಾರೆ. ಭಾನುವಾರದಿಂದ ಸುಫಿಯಾನ್ ಮತ್ತು ಕುಟುಂಬ ಪರಾರಿಯಾಗಿದೆ. ಕುಟುಂಬವನ್ನು ಪತ್ತೆಹಚ್ಚಲು ಪೊಲೀಸರು (Police) ಬಲೆ ಬೀಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಫ್ತಾಬ್‌ಗೆ ಮಂಪರು ಪರೀಕ್ಷೆ – ಪೊಲೀಸರಿಗೆ ಕೋರ್ಟ್‌ ಅನುಮತಿ

    ಅಫ್ತಾಬ್‌ಗೆ ಮಂಪರು ಪರೀಕ್ಷೆ – ಪೊಲೀಸರಿಗೆ ಕೋರ್ಟ್‌ ಅನುಮತಿ

    ನವದೆಹಲಿ: ಯುವತಿ ಶ್ರದ್ಧಾ ವಾಕರ್ (Shraddha Walker) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಫ್ತಾಬ್‌ನನ್ನು (Aftab) ಮಂಪರು ಪರೀಕ್ಷೆಗೆ ಒಳಪಡಿಸಲು ದೆಹಲಿಯ ಸಾಕೇತ್ ಕೋರ್ಟ್‌ ಅನುಮತಿ ನೀಡಿದೆ. ಪರೀಕ್ಷೆಗೆ ಅನುಮತಿ ಕೋರಿ ದೆಹಲಿ ಪೊಲೀಸರು (Delhi Police) ಕೋರ್ಟ್‌ಗೆ ಮನವಿ ಮಾಡಿದ್ದರು.

    ಪ್ರಕರಣದಲ್ಲಿ ಅಫ್ತಾಬ್ ಕೆಲವು ಸಂಗತಿಗಳನ್ನು ಮುಚ್ಚಿಡುತ್ತಿರುವ ಅನುಮಾನಗಳು ಪೊಲೀಸರಿಗೆ ವ್ಯಕ್ತವಾಗಿದೆ. ಪದೇ ಪದೇ ಅಫ್ತಾಬ್ ತನ್ನ ಹೇಳಿಕೆಗಳನ್ನು ಬದಲಾಯಿಸುತ್ತಿದ್ದಾನೆ. ಈ ಹಿನ್ನೆಲೆ ನಿಖರ ಮಾಹಿತಿ ಪಡೆಯುವ ಉದ್ದೇಶದಿಂದ ಮಂಪರು ಪರೀಕ್ಷೆಗೆ ಒಳಪಡಿಸುವ ನಿರ್ಧಾರ ಮಾಡಲಾಗಿದೆ. ಇದನ್ನೂ ಓದಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ಸಿಬಿಐಗೆ ವರ್ಗಾವಣೆ ಸಾಧ್ಯತೆ

    ಅಫ್ತಾಬ್ ಮಾನಸಿಕ ಸ್ಥಿತಿ, ಶ್ರದ್ಧಾ ಜೊತೆಗಿನ ಸಂಬಂಧ, ಹತ್ಯೆಯ ಹಿಂದಿನ ನಿರ್ದಿಷ್ಟ ಉದ್ದೇಶ ಎಲ್ಲವನ್ನು ಖಚಿತಪಡಿಸಿಕೊಳ್ಳುವುದು ಮಂಪರು ಪರೀಕ್ಷೆಯ ಮತ್ತೊಂದು ಉದ್ದೇಶವಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ಹೇಳಿವೆ. ಈ ಪರೀಕ್ಷೆಯು ನ್ಯಾಯಾಲಯದಲ್ಲಿ ಸಾಕ್ಷಿಯಾಗಿ ಸ್ವೀಕಾರಾರ್ಹವಲ್ಲದಿದ್ದರೂ ಸಾಕ್ಷಿಗಳನ್ನು ಬೆಂಬಲಿಸುವ ದೃಷ್ಟಿಯಿಂದ ಪರೀಕ್ಷೆ ಅಗತ್ಯ ಎನ್ನಲಾಗುತ್ತಿದೆ.

    ಮಂಪರು ಪರೀಕ್ಷೆಯಲ್ಲಿ ಅಪರಾಧಿಗೆ ತಜ್ಞರು ಸೋಡಿಯಂ ಪೆಂಟೋಥಾಲ್ ಅಥವಾ ಸೋಡಿಯಂ ಅಮಿಟಾಲ್ನೊಂದಿಗೆ ಇಂಜೆಕ್ಷನ್ ನೀಡಲಾಗುತ್ತೆ. ಇಂಜೆಕ್ಷನ್ ಬಳಿಕ ಅರೆ ಪ್ರಜ್ಞಾಸ್ಥಿತಿಗೆ ತೆರಳಲಿದ್ದು, ಬಳಿಕ ಅವರಿಂದ ಮಾಹಿತಿ ಪಡೆದುಕೊಳ್ಳುವ ಪ್ರಯತ್ನ ಮಾಡಲಾಗುತ್ತೆ. ಅರೆಪ್ರಜ್ಞೆ ಸ್ಥಿತಿಯಲ್ಲಿ ಅಪರಾಧಿ ಸುಳ್ಳು ಹೇಳಲು ಕಷ್ಟ ಆಗಬಹುದು. ಪೊಲೀಸರಿಗೆ ಕೋರ್ಟ್‌ನಿಂದ ಅನುಮತಿ ಸಿಕ್ಕಿದೆಯಾದರೂ, ನಿಯಮಗಳ ಪ್ರಕಾರ ಆರೋಪಿ ಅಫ್ತಾಬ್‌ ಅನುಮತಿಯನ್ನು ಪೊಲೀಸರು ಪಡೆಯಬೇಕಾಗಿದೆ. ಇದನ್ನೂ ಓದಿ: ಶ್ರದ್ಧಾ ದೇಹ ತುಂಡರಿಸಿದ್ರೂ ತಲೆಬುರುಡೆಗೆ ಹಾನಿ ಮಾಡಿಲ್ಲ- ಫ್ರಿಡ್ಜ್‌ನಲ್ಲಿಟ್ಟು ಆಗಾಗ ನೋಡ್ತಿದ್ದ ಅಫ್ತಾಬ್

    Live Tv
    [brid partner=56869869 player=32851 video=960834 autoplay=true]

  • ಶ್ರದ್ಧಾ ಭೀಕರ ಹತ್ಯೆ ಪ್ರಕರಣ – ಪೊಲೀಸರ ಮುಂದೆ ಸತ್ಯ ಬಾಯ್ಬಿಟ್ಟ ಕಿರಾತಕ

    ಶ್ರದ್ಧಾ ಭೀಕರ ಹತ್ಯೆ ಪ್ರಕರಣ – ಪೊಲೀಸರ ಮುಂದೆ ಸತ್ಯ ಬಾಯ್ಬಿಟ್ಟ ಕಿರಾತಕ

    ನವದೆಹಲಿ: ಪ್ರಿಯಕರ ಅಫ್ತಾಬ್‍ನಿಂದಲೇ ಶ್ರದ್ಧಾ (Shraddha Walkar) ಭೀಕರ ಹತ್ಯೆ ಪ್ರಕರಣವು ದಿನೇ ದಿನೇ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಅಫ್ತಾಬ್ (Aftab Poonawala) ತನ್ನ ನಂಬಿ ಬಂದವಳ ಹತ್ಯೆ ಮಾಡಿದ್ದು ಹೇಗೆ ಎಂಬುದನ್ನು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಖಾಕಿ ಎದುರು ಎಳೆಎಳೆಯಾಗಿ ಹತ್ಯೆ ಕಥನವನ್ನು ಕಿರಾತಕ ಬಿಚ್ಚಿಟ್ಟಿದ್ದು, ಅಫ್ತಾಬ್ ಹೇಳಿದ ಕಥೆ ಕೇಳಿ ಪೊಲೀಸರೇ ದಂಗಾಗಿದ್ದಾರೆ.

    ಪೊಲೀಸರ ಮುಂದೆ ಹೇಳಿದ್ದೇನು..?: ನಾನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈ ಮೂಲದವ. ಡೇಟಿಂಗ್ ಆ್ಯಪ್‍ (Dating App) ನಲ್ಲಿ ಶ್ರದ್ಧಾ ಪರಿಚಯವಾಗಿತ್ತು. ಬಳಿಕ ಮುಂಬೈನ ಕಾಲ್ ಸೆಂಟರ್‍ನಲ್ಲಿ ಇಬ್ಬರು ಒಟ್ಟಿಗೆ ಕೆಲಸಕ್ಕೆ ಸೇರಿದೆವು. ನಮ್ಮ ಆತ್ಮೀಯತೆ ಹೆಚ್ಚಿ ಪ್ರೀತಿಸಲು ಪ್ರಾರಂಭಿಸಿದೆವು. 2019ರಲ್ಲಿ ಕೆಲಸ ಆರಂಭಿಸಿದ ನಮಗೆ ಎಲ್ಲವೂ ಸರಿಯಾಗಿತ್ತು. ನಮ್ಮ ಮದುವೆ (Marriage) ಬಗ್ಗೆ ಶ್ರದ್ಧಾ ಅವಳ ಮನೆಯಲ್ಲಿ ಪ್ರಸ್ತಾಪಿಸಿದಳು. ಅದಕ್ಕೆ ವಿರೋಧ ವ್ಯಕ್ತವಾಯಿತು. ವಿರೋಧ ಬಳಿಕ ನಾವು ಮುಂಬೈನ ನೈಗಾಂವ್‍ನಲ್ಲಿ ವಾಸಿಸಲು ಪ್ರಾರಂಭಿಸಿದೆವು. ಇದನ್ನೂ ಓದಿ: ಲವ್ ಜಿಹಾದ್‌ಗೆ ಬಲಿಯಾದ್ರೆ ಇದೇ ಗತಿ – ಹೊಸ ಆಯಾಮದಲ್ಲಿ ತನಿಖೆ ನಡೆಸುವಂತೆ VHP ಮನವಿ

    ಕೆಲವು ದಿನಗಳ ಬಳಿಕ ದೆಹಲಿಗೆ ಶಿಫ್ಟ್ ಆದೆವು. ದೆಹಲಿಯಿಂದ ಹಿಮಾಚಲ ಪ್ರದೇಶ 9Himachal Pradesh) ಕ್ಕೆ ಭೇಟಿ ನೀಡಿ ಮತ್ತೆ ದೆಹಲಿಗೆ ಮರಳಿದೆವು. ದೆಹಲಿಯ ಪಹರ್‍ಗಂಜ್‍ನ ಹೋಟೆಲ್‍ನಲ್ಲಿ ಒಂದು ದಿನ ಉಳಿದುಕೊಂಡೆವು. ನಂತರ ದಕ್ಷಿಣ ದೆಹಲಿಯ ಸೈದುಲಾಜಾಬ್‍ನಲ್ಲಿರುವ ಹಾಸ್ಟೆಲ್‍ನಲ್ಲಿ ತಂಗಿದ್ದೆವು. ಮೇ 15ರಂದು ಮೆಹ್ರೋಲಿ (Mehroli) ಯ ಛತ್ತರಪುರ ಪಹಾಡಿಯಲ್ಲಿ ಮನೆಯೊಂದನ್ನು ಬಾಡಿಗೆ ಪಡೆದು ಒಟ್ಟಿಗೆ ಇದ್ದೆವು. ಮೇ 18ರಂದು ಮದುವೆ ವಿಚಾರಕ್ಕೆ ಜಗಳ ಆರಂಭವಾಯಿತು. ನಾನು ಅವಳ ಬಾಯಿ ಮುಚ್ಚುವ ಪ್ರಯತ್ನ ಮಾಡಿದೆ. ಬಳಿಕ ಕತ್ತು ಹಿಸುಕಿದೆ ಅವಳು ಸಾವನ್ನಪ್ಪಿದಳು. ಇದನ್ನೂ ಓದಿ: ಅಫ್ತಾಬ್‍ನನ್ನು ನೇಣಿಗೆ ಹಾಕಿ: ಲವ್ ಜಿಹಾದ್ ಶಂಕೆ ವ್ಯಕ್ತಪಡಿಸಿದ ಶ್ರದ್ಧಾಳ ತಂದೆ

    ಮೇ 19ರಂದು ದೇಹದ ವಿಲೇವಾರಿ ಮಾಡುವ ಬಗ್ಗೆ ಚಿಂತಿಸಿದೆ. ಬಳಿಕ ಮಾರ್ಕೆಟ್‍ನಿಂದ 23,500 ರೂಪಾಯಿ ನೀಡಿ ಫ್ರಿಡ್ಜ್ (Fridge) ಖರೀದಿಸಿದೆ. ಸಣ್ಣ ಹರಿತವಾದ ಗರಗಸ ಖರೀದಿಸಿದೆ. ಮೇ 20ರಂದು ಅವಳ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿ ತುಂಬಿದೆ. ನಿತ್ಯ ರಾತ್ರಿ ಒಂದು ಗಂಟೆಯ ಬಳಿಕ ಕವರ್ ಗಳನ್ನು ಕಾಡಿನ ಮಧ್ಯಕ್ಕೆ ಹೋಗಿ ಎಸೆದು ಬರ್ತಿದ್ದೆ. ಯಾರಿಗೂ ಸಂಶಯ ಬಾರದಿರಲು ಅದೇ ಏರಿಯಾದಲ್ಲಿ ಓಡಾಡುತ್ತಿದ್ದೆ, ರಾತ್ರಿ ಹೆಚ್ಚು ಸದ್ದು ಆಗದಂತೆ ನೋಡಿಕೊಳ್ಳಲು ನೀರಿನ ಮೋಟರ್ (Motor) ಆನ್ ಮಾಡುತ್ತಿದ್ದೆ. ವಾಸನೆ ತಡೆಯಲು ಅಗರಬತ್ತಿ ಬಳಸುತ್ತಿದ್ದೆ. ಕೊಲೆಯ ಬಳಿಕ ದೇಹ ವೀಲೆವಾರಿ ಮಾಡಲು ಟೆಲಿವಿಷನ್ ಅಪರಾಧ ಸರಣಿ ‘ಡೆಕ್ಸ್ಟರ್’ ನೆರವಾಯಿತು. ಗೂಗಲ್‍ನಿಂದಲೂ ನಾನು ಮಾಹಿತಿ ಕಲೆ ಹಾಕಿ ಕೆಲಸ ಮಾಡಿ ಮುಗಿಸಿದೆ ಎಂಬುದಾಗಿ ತಿಳಿಸಿದ್ದಾನೆ.

    Live Tv
    [brid partner=56869869 player=32851 video=960834 autoplay=true]