Tag: ಅಬಕಾರಿ

  • ಬೆಂಗಳೂರಲ್ಲಿ ತಡರಾತ್ರಿ 2 ಗಂಟೆಯವರೆಗೆ ಹೋಟೆಲ್, ಬಾರ್&ರೆಸ್ಟೋರೆಂಟ್ ಓಪನ್‌ಗೆ ಮನವಿ

    ಬೆಂಗಳೂರಲ್ಲಿ ತಡರಾತ್ರಿ 2 ಗಂಟೆಯವರೆಗೆ ಹೋಟೆಲ್, ಬಾರ್&ರೆಸ್ಟೋರೆಂಟ್ ಓಪನ್‌ಗೆ ಮನವಿ

    – ಅಬಕಾರಿ ಸಚಿವರಿಗೆ ಮನವಿ ಸಲ್ಲಿಸಿದ ಹೋಟೆಲ್ ಅಸೋಸಿಯೇಷನ್

    ಬೆಂಗಳೂರು: ತಡರಾತ್ರಿ 2 ಗಂಟೆಯವರೆಗೆ ಬಾರ್, ಪಬ್ ಮತ್ತು ರೆಸ್ಟೋರೆಂಟ್‌ಗಳ (Bar And Restaurant) ಓಪನ್‌ಗೆ ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘವು (Hotel Association) ಅಬಕಾರಿ ಸಚಿವರಿಗೆ ಮನವಿ ಮಾಡಿದೆ.

    ಪಬ್, ಬಾರ್ & ರೆಸ್ಟೋರೆಂಟ್ ಲೈಸೆನ್ಸ್ ನವೀಕರಣಕ್ಕೆ ಆನ್‌ಲೈನ್ ಸಮಸ್ಯೆಯಾಗಿದೆ. ಹೆಚ್ಚುವರಿ ಶುಲ್ಕ ಕಟ್ಟಿದರೂ ಲೈಸೆನ್ಸ್ ನೀಡುತ್ತಿಲ್ಲ ಎಂದು ಹೋಟೆಲ್ ಅಸೋಸಿಯೇಷನ್ ಆರೋಪಿಸಿದೆ. ಇದನ್ನೂ ಓದಿ: ಶಕ್ತಿ ಯೋಜನೆಯಿಂದ ನಷ್ಟದಲ್ಲಿದ್ದೇವೆ, ಬಸ್ ಟಿಕೆಟ್ ದರ ಹೆಚ್ಚಿಸುವ ಚಿಂತನೆ: ರಾಜು ಕಾಗೆ

    ಅಲ್ಲದೇ ಅಬಕಾರಿ ಇಲಾಖೆಯಲ್ಲಿ (Excise Department) ಕಾನೂನು ತೊಡಕಿನ ಆರೋಪವನ್ನೂ ಹೋಟೆಲ್ ಅಸೋಸಿಯೇಷನ್ ಹೊರಿಸಿದೆ. ಕಾನೂನು ಸಬಲೀಕರಣ ಮಾಡದೆ ನಮಗೆ ನೋಟಿಸ್ ಕೊಟ್ಟು ಸಮಸ್ಯೆ ಮಾಡುತ್ತಿದ್ದಾರೆ. ನಗರದಲ್ಲಿ ತಡರಾತ್ರಿ 2 ಗಂಟೆವರೆಗೆ ಹೋಟೆಲ್, ಬಾರ್ & ರೆಸ್ಟೋರೆಂಟ್ ಓಪನ್‌ಗೆ ಅನುಮತಿ ನೀಡುವಂತೆ ಬೃಹತ್ ಬೆಂಗಳೂರು ಹೋಟೆಲ್ ಸಂಘಟನೆಗಳು ಅಬಕಾರಿ ಸಚಿವರಲ್ಲಿ ಮನವಿ ಮಾಡಿದೆ. ಇದನ್ನೂ ಓದಿ: ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ಶಂಕರ್‌ ನಾಗ್‌, ಅಪರ್ಣಾ ಹೆಸರಿಡಿ: ಸರ್ಕಾರಕ್ಕೆ ಯತ್ನಾಳ್‌ ಆಗ್ರಹ

  • ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

    ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

    ನವದೆಹಲಿ: ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣದಲ್ಲಿ (Delhi Liquor Excise Policy) ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರ ನ್ಯಾಯಾಂಗ ಬಂಧನವನ್ನು (Judicial Custody) ಮೇ 31ರವರೆಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಮಂಗಳವಾರ ವಿಸ್ತರಿಸಿದೆ. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಸಿಸೋಡಿಯಾ ಅವರ ಕಸ್ಟಡಿಯನ್ನು ವಿಸ್ತರಿಸಿದರು.

    ನ್ಯಾಯಾಂಗ ಬಂಧನದ ಅವಧಿ ಮುಗಿದಿರುವ ಹಿನ್ನೆಲೆ ಸಿಸೋಡಿಯಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ಹಿಂದೆ ಸಿಸೋಡಿಯ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಜಾ ಮಾಡಿದ್ದ ಹಿನ್ನೆಲೆ ಕೋರ್ಟ್ ಇಂದು ನ್ಯಾಯಾಂಗ ಬಂಧನ ವಿಸ್ತರಿಸಿದೆ. ಇದನ್ನೂ ಓದಿ: ಎಮಿರೇಟ್ಸ್ ವಿಮಾನಕ್ಕೆ‌ ಸಿಲುಕಿ 40 ರಾಜಹಂಸ ಹಕ್ಕಿಗಳು ಸಾವು

    2023ರ ಫೆಬ್ರವರಿ 26 ರಿಂದ ಸಿಬಿಐ ಬಂಧಿಸಿದ ನಂತರ ಸಿಸೋಡಿಯಾ ಬಂಧನದಲ್ಲಿದ್ದಾರೆ. ಬಳಿಕ ಇ.ಡಿ ಅವರನ್ನು ಬಂಧಿಸಿತ್ತು. ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರನ್ನು ಸಹ ಬಂಧಿಸಲಾಗಿದೆ. ಇದನ್ನೂ ಓದಿ: ಅಮಿತ್‌ ಶಾ ಇನ್ನೂ ಪ್ರಧಾನಿಯಾಗಿಲ್ಲ ಆಗಲೇ ದುರಹಂಕಾರಿಯಾಗಿದ್ದಾರೆ: ಕೇಜ್ರಿವಾಲ್ ವಾಗ್ದಾಳಿ

    ಹೊಸ ಅಬಕಾರಿ ನೀತಿಯಲ್ಲಿ ಪರವಾನಗಿದಾರರಿಗೆ ಅನಪೇಕ್ಷಿತ ಅನುಕೂಲಗಳನ್ನು ವಿಸ್ತರಿಸಲಾಗಿದೆ. ಪರವಾನಗಿ ಶುಲ್ಕವನ್ನು ಮನ್ನಾ ಮಾಡಲಾಗಿದೆ ಅಥವಾ ಕಡಿಮೆ ಮಾಡಲಾಗಿದೆ ಮತ್ತು ಸಕ್ಷಮ ಪ್ರಾಧಿಕಾರದ ಅನುಮೋದನೆಯಿಲ್ಲದೆ ಎಲ್ -1 ಪರವಾನಗಿಯನ್ನು ವಿಸ್ತರಿಸಲಾಗಿದೆ ಎಂಬ ಆರೋಪವಿದೆ. ಇದನ್ನೂ ಓದಿ: ಸಂಸದ ಜಯಂತ್ ಸಿನ್ಹಾಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್ ಜಾರಿ

  • ಮೈಸೂರಿನಲ್ಲಿ 98.52 ಕೋಟಿ ರೂ. ಮೊತ್ತದ ಬಿಯರ್ ಜಪ್ತಿ

    ಮೈಸೂರಿನಲ್ಲಿ 98.52 ಕೋಟಿ ರೂ. ಮೊತ್ತದ ಬಿಯರ್ ಜಪ್ತಿ

    ಮೈಸೂರು: ಇಲ್ಲಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ಅಬಕಾರಿ (Excise) ಜಂಟಿ ಆಯುಕ್ತರು ದಾಳಿ ನಡೆಸಿದ್ದು, ಒಟ್ಟು 98.52 ಕೋಟಿ ರೂ. ಮೊತ್ತದ ಬಿಯರ್ ದಾಸ್ತಾನು ಜಪ್ತಿ ಮಾಡಿದ್ದಾರೆ.

    ಮೈಸೂರು (Mysuru) ಜಿಲ್ಲೆಯ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಬಿಯರ್ (Beer) ತಯಾರಿಕಾ ಘಟಕದಲ್ಲಿ ಸರ್ಕಾರಕ್ಕೆ ತೋರಿಸಿರುವ ದಾಸ್ತಾನು ಲೆಕ್ಕಕ್ಕಿಂತ ಅಧಿಕ ದಾಸ್ತಾನು ಸಂಗ್ರಹ ಪತ್ತೆಯಾಗಿದೆ. 7000 ಸಾವಿರ ವಿವಿಧ ಬ್ರಾಂಡಿನ ಪೆಟ್ಟಿಗೆಗಲ್ಲಿ ಬಿಯರ್ ಬಾಟಲಿಗಳು ಪತ್ತೆಯಾಗಿದೆ. ಯುಟಿ ಟ್ಯಾಂಕ್, ಸೈಲೋಸ್ ಟ್ಯಾಂಕ್‌ಗಳಲ್ಲಿರುವ ಕಚ್ಚಾ ವಸ್ತು ಸಮೇತ ಜಪ್ತಿ ಮಾಡಿದ್ದು, ಈ ಸಂಬಂಧ 17 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಮೂರು ವರ್ಷಗಳ ನಂತರ ಬೆಂಗಳೂರಿನಲ್ಲಿ ಶೂನ್ಯ ಮಳೆ ದಾಖಲು

    ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಬಂದ ಅನಾಮಧೇಯ ಕರೆಯ ಮೇರೆಗೆ ಚುನಾವಣಾಧಿಕಾರಿಗಳು ಹಾಗೂ ಅಬಕಾರಿ ಜಂಟಿ ಆಯುಕ್ತರು ಘಟಕಕ್ಕೆ ಭೇಟಿ ನೀಡಿ ದಾಖಲೆ ಪರಿಶೀಲಿಸಿದಾಗ ಲೆಕ್ಕಪುಸ್ತಕದ ದಾಸ್ತಾನಿಗಿಂತ ಹೆಚ್ಚಿನ ಬಿಯರ್ ದಾಸ್ತಾನು ಕಂಡುಬಂದಿದೆ. ಈ ಹಿನ್ನೆಲೆ ಅವುಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ – ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆ

  • ಕಿಕ್‍ ಪ್ರಿಯರಿಗೆ ಶಾಕ್- ಅಬಕಾರಿಗೆ ಬಿಗ್‌ ಟಾರ್ಗೆಟ್‌: ಹಿಂದಿನ ಬಜೆಟ್‌ನಲ್ಲಿ ಗುರಿ ಎಷ್ಟಿತ್ತು?

    ಕಿಕ್‍ ಪ್ರಿಯರಿಗೆ ಶಾಕ್- ಅಬಕಾರಿಗೆ ಬಿಗ್‌ ಟಾರ್ಗೆಟ್‌: ಹಿಂದಿನ ಬಜೆಟ್‌ನಲ್ಲಿ ಗುರಿ ಎಷ್ಟಿತ್ತು?

    ಬೆಂಗಳೂರು: ಮದ್ಯದ ದರ ಏರಿಕೆಯ ಸುಳಿವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಬಜೆಟ್‌ನಲ್ಲಿ (Budget) ನೀಡಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ (Excise Department) ಬರೋಬ್ಬರಿ 38,525 ಕೋಟಿ ರೂ.ಗಳ ತೆರಿಗೆ ಸಂಗ್ರಹದ ಗುರಿಯನ್ನು ನೀಡಲಾಗಿದೆ.

    ಬೊಮ್ಮಾಯಿ (Basavaraj Bommai) ಕಳೆದ ವರ್ಷದ ಫೆಬ್ರವರಿಯಲ್ಲಿ ಮಂಡಿಸಿದ 2023-24ರ ಸಾಲಿನ ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ 35,000 ಕೋಟಿ ರೂ. ತೆರಿಗೆ ಸಂಗ್ರಹದ ಗುರಿಯನ್ನು ನೀಡಲಾಗಿತ್ತು. ಇದನ್ನೂ ಓದಿ: ಹೊಸ ವರ್ಷಕ್ಕೆ ಎಣ್ಣೆ ಶಾಕ್ – ಜನವರಿಯಿಂದ ಮದ್ಯದ ಬೆಲೆಯಲ್ಲಿ ಭಾರೀ ಏರಿಕೆ

    ಸಿದ್ದರಾಮಯ್ಯ ಕಳೆದ ಜುಲೈನಲ್ಲಿ ಮಂಡಿಸಿದ ಪೂರ್ಣ ಪ್ರಮಾಣದ ಬಜೆಟ್‌ನಲ್ಲಿ 36,000 ಕೋಟಿ ರೂ. ತೆರಿಗೆ ಸಂಗ್ರಹದ ಗುರಿಯನ್ನು ನೀಡಿದ್ದರು. ಈ ಬಜೆಟ್‌ಗೆ ಹೋಲಿಸಿದರೆ 2024-25ರ ಸಾಲಿನ ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ ತೆರಿಗೆ ಸಂಗ್ರಹ ಗುರಿ 2,525 ಕೋಟಿ ರೂ. ಏರಿಕೆಯಾಗಿದೆ.

    ಜುಲೈ ಬಜೆಟ್‌ನಲ್ಲಿ ರಾಜ್ಯದ ಅಬಕಾರಿ ತೆರಿಗೆಯಲ್ಲಿ 20%ರಷ್ಟು ಹೆಚ್ಚಳ ಮಾಡಲಾಗಿತ್ತು. ಬಿಯರ್ ಮೇಲಿನ ಅಬಕಾರಿ ತೆರಿಗೆ 10%ರಷ್ಟು ಹೆಚ್ಚಳ ಮಾಡಲಾಗಿತ್ತು. ಈಗ 38,525 ಕೋಟಿ ರೂ. ಸಂಗ್ರಹದ ಬಿಗ್‌ ಟಾರ್ಗೆಟ್‌ ನೀಡಿದ ಪರಿಣಾಮ ಮದ್ಯದ ದರ ಏರಿಕೆಯಾಗುವುದು ಖಚಿತ. ಇದನ್ನೂ ಓದಿ: ಕಿಕ್‍ಪ್ರಿಯರಿಗೆ ಶಾಕ್ ಕೊಟ್ಟ ಸರ್ಕಾರ- 170 ಇದ್ದ ಕಿಂಗ್‍ಫಿಷರ್ ಬೆಲೆ 190 ರೂ.ಗೆ ಏರಿಕೆ

    ಬಜೆಟ್‌ನಲ್ಲಿ ಏನಿದೆ?
    ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML ಹಾಗೂ ಬಿಯರ್‌ನ ಸ್ಲಾಬ್‌ಗಳನ್ನು ಪರಿಷ್ಕರಿಸಲಾಗುವುದು.  ಇದನ್ನೂ ಓದಿ: ಬೆಂಗಳೂರು BIECಯಿಂದ ತುಮಕೂರಿಗೆ, ಏರ್‌ಪೋರ್ಟಿಂದ ದೇವನಹಳ್ಳಿಗೆ ಮೆಟ್ರೋ ರೈಲು!

    ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣಗೊಳಿಸಲಾಗುವುದು. ಇಲಾಖೆಯು ಒದಗಿಸುವ ವಿವಿಧ ಸೇವೆಗಳಿಗೆ ಸಮಯದ ಮಿತಿಯನ್ನು ನಿಗದಿಪಡಿಸಲಾಗುವುದು ಸ್ವಯಂಚಾಲಿತ ಅನುಮೋದನೆಗೂ ಅವಕಾಶ ಕಲ್ಪಿಸಲಾಗುವುದು. 2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ.

     

  • ಹೊಸ ಮದ್ಯದಂಗಡಿಗಳಿಗೆ ಲೈಸೆನ್ಸ್ ನೀಡಲ್ಲ ಅಂತಿದ್ದಾರೆ ಸಿಎಂ-ಉದ್ಯೋಗ ಸೃಷ್ಟಿಯ ಚಿಂತನೆಯಿದೆ ಅಂತಿದ್ದಾರೆ ಡಿಸಿಎಂ

    ಹೊಸ ಮದ್ಯದಂಗಡಿಗಳಿಗೆ ಲೈಸೆನ್ಸ್ ನೀಡಲ್ಲ ಅಂತಿದ್ದಾರೆ ಸಿಎಂ-ಉದ್ಯೋಗ ಸೃಷ್ಟಿಯ ಚಿಂತನೆಯಿದೆ ಅಂತಿದ್ದಾರೆ ಡಿಸಿಎಂ

    ರಾಮನಗರ: ರಾಜ್ಯದಲ್ಲಿ ಮದ್ಯದಂಗಡಿಗಳಿಗೆ (Liquor Shop) ಹೊಸ ಲೈಸೆನ್ಸ್ (License) ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದರೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಈ ವಿಚಾರದಲ್ಲಿ ದಂದ್ವ ಹೇಳಿಕೆ ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ 30 ವರ್ಷದಿಂದ ಯಾವುದೇ ಅಬಕಾರಿ ಲೈಸೆನ್ಸ್ ನೀಡಿಲ್ಲ. ಉದ್ಯೋಗ ಸೃಷ್ಟಿಗೆ ಒಂದಷ್ಟು ಅನುಕೂಲ ಆಗಲಿ ಎಂಬ ಕಾರಣಕ್ಕೆ ಈ ಬಗ್ಗೆ ಚಿಂತನೆ ಮಾಡಲಾಗಿತ್ತು. ಹಳ್ಳಿಹಳ್ಳಿಗಳಲ್ಲಿ ನಾವು ಬಾರ್ ತೆಗೆಯುವುದಿಲ್ಲ ಎಂದು ಹೇಳಿದರು.  ಇದನ್ನೂ ಓದಿ: ರಾಜ್ಯದಲ್ಲಿ ಮದ್ಯದಂಗಡಿಗಳಿಗೆ ಹೊಸ ಲೈಸೆನ್ಸ್ ಇಲ್ಲ: ಪಬ್ಲಿಕ್‌ ಟಿವಿಗೆ ಕೊಟ್ಟ ಮಾತು ಉಳಿಸಿಕೊಂಡ ಸಿಎಂ

    ಸರ್ಕಾರ ಎಲ್ಲರೊಂದಿಗೆ ಚರ್ಚೆ ಮಾಡಿ, ಸೂಕ್ತ ಪ್ರದೇಶಗಳಲ್ಲಿ ಬಾರ್‌ಗಳನ್ನು ತೆರೆಯಲಾಗುವುದು. ಕೆಲವರು 3-4 ಕೋಟಿ ರೂ.ಗೆ ಲೈಸೆನ್ಸ್‌ ಮಾರಾಟ ಮಾಡುತ್ತಿದ್ದಾರೆ. ಕುಡಿಯುವುದನ್ನು ನೀವು ತಪ್ಪಿಸಲು ಸಾಧ್ಯವಿಲ್ಲ, ನಾವು ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.

     

    ಸಿಎಂ ಹೇಳಿದ್ದೇನು?
    ಬೆಳಕು (Belaku) 200ನೇ ಸಂಚಿಕೆಯ ವಿಶೇಷ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಪಬ್ಲಿಕ್ ಟಿವಿ (PUBLiC TV) ಮುಖ್ಯಸ್ಥ ಹೆಚ್.ಆರ್.ರಂಗನಾಥ್ (HR Ranganath) ಅವರು ಯಾವುದೇ ಕಾರಣಕ್ಕೂ ಮದ್ಯದಂಗಡಿಗಳಿಗೆ ಹೊಸ ಲೈಸೆನ್ಸ್ ನೀಡಬೇಡಿ ಎಂದು ಮನವಿ ಮಾಡಿದ್ದರು.

    ಈ ಮನವಿಗೆ ಸ್ಪಂದಿಸಿದ ಅವರು, ಮದ್ಯದಂಗಡಿ ಹೊಸ ಪರವಾನಗಿ ನೀಡುವುದಕ್ಕೆ ಮಹಿಳೆಯರ ವಿರೋಧ ಇದೆ. ಹಣಕಾಸಿನ ಕೊರತೆ ಇದ್ದರೂ ಮದ್ಯದಂಗಡಿ ಹೊಸ ಲೈಸೆನ್ಸ್‌ ನೀಡಲು ನಾನು ಅನುಮತಿ ನೀಡುವುದಿಲ್ಲ ಎಂದು ವಾಗ್ದಾನ ಮಾಡಿದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಐದು ಗ್ಯಾರಂಟಿ ಜಾರಿಗೆ ಅಬಕಾರಿ ಇಲಾಖೆಗೆ ಬಿಗ್‌ ಟಾರ್ಗೆಟ್‌!

    ಐದು ಗ್ಯಾರಂಟಿ ಜಾರಿಗೆ ಅಬಕಾರಿ ಇಲಾಖೆಗೆ ಬಿಗ್‌ ಟಾರ್ಗೆಟ್‌!

    ಬೆಂಗಳೂರು: ಐದು ಗ್ಯಾರಂಟಿಗಳನ್ನು (Congress Guarantee) ಜಾರಿ ಮಾಡುವುದಾಗಿ ಘೋಷಿರುವ ಸಿದ್ದರಾಮಯ್ಯ (Siddaramaiah) ಸರ್ಕಾರ ಈಗ ಆರ್ಥಿಕ ಸಂಪನ್ಮೂಲಗಳನ್ನು ಹೊಂದಿಸಲು ಪ್ರಯತ್ನ ಮಾಡುತ್ತಿದ್ದು, ಅಬಕಾರಿ ಇಲಾಖೆಗೆ (Excise Department) ಈ ಬಾರಿ ಬಿಗ್ ಟಾರ್ಗೆಟ್ ನೀಡಲು ಸರ್ಕಾರ ಮುಂದಾಗಿದೆ.

    ಈ ಹಣಕಾಸು ವರ್ಷದಲ್ಲಿ 40 ಸಾವಿರ ಕೋಟಿ ರೂ.ಆದಾಯ ಸಂಗ್ರಹದ ಟಾರ್ಗೆಟ್ ನೀಡಲು ಸಿದ್ದತೆ ನಡೆಸಿದೆ. ಬಿಜೆಪಿ (BJP) ಸರ್ಕಾರ ಮಂಡಿಸಿದ ಬಜೆಟ್‍ನಲ್ಲಿ ಅಬಕಾರಿ ಇಲಾಖೆಯಿಂದ 35 ಸಾವಿರ ಕೋಟಿ ಗುರಿ ನೀಡಲಾಗಿತ್ತು.

     

    ಇದೇ ವೇಳೆ ಆಸ್ತಿಗಳ ಮಾರ್ಗಸೂಚಿ ದರ ಹೆಚ್ಚಳ ಮಾಡುವ ಸುಳಿವನ್ನು ಕಂದಾಯ ಮಂತ್ರಿ ಕೃಷ್ಣ ಬೈರೇಗೌಡ (Krishna Byre Gowda)ನೀಡಿದ್ದಾರೆ. ಶೀಘ್ರವೇ ಆಸ್ತಿ ಮಾರ್ಗಸೂಚಿ ದರ ಹೆಚ್ಚಳ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಏರ್‌ಬಸ್‌ ಜೊತೆ ಬರೋಬ್ಬರಿ 500 ವಿಮಾನ ಖರೀದಿಗೆ ಡೀಲ್‌ – ವಿಶ್ವದಾಖಲೆ ಬರೆದ ಇಂಡಿಗೋ

    2018 ರಿಂದ ಕರ್ನಾಟಕದಲ್ಲಿ ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಆಗಿಲ್ಲ. ಇದರಿಂದ ರೈತರಿಗೂ, ಮಾರಾಟಗಾರರಿಗೂ ಅನ್ಯಾಯ ಆಗುತ್ತಿದೆ. ಶೀಘ್ರವೇ ಮಾರುಕಟ್ಟೆ ದರಕ್ಕೆ ತಕ್ಕಂತೆ ಮಾರ್ಗಸೂಚಿ ದರ ಬದಲಾವಣೆ ಮಾಡುತ್ತೇವೆ ಎಂದಿದ್ದಾರೆ.

    ಆದಾಯ ಸಂಗ್ರಹದ ಟಾರ್ಗೆಟ್‌ ಯಾವ ಇಲಾಖೆಗೆ ಎಷ್ಟು ಎನ್ನುವುದು ಜುಲೈನಲ್ಲಿ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್‌ನಲ್ಲಿ ತಿಳಿಯಲಿದೆ.

    ಚುನಾವಣಾ ಪ್ರಚಾರದಲ್ಲಿ ಈ ಯೋಜನೆಗಳಿಗೆ ಹಣವನ್ನು ಹೇಗೆ ಹೊಂದಿಸಲಾಗುತ್ತದೆ ಎಂದು ಕೇಳಿದ್ದಕ್ಕೆ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ 40% ಕಮಿಷನ್ ಹಣವನ್ನು ಇದಕ್ಕೆ ವಿನಿಯೋಗಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು.

  • Karnataka Budget – ಟಾರ್ಗೆಟ್‌ ಮೀರಿ ಅಬಕಾರಿ ಆದಾಯ ಭರ್ಜರಿ ಸಂಗ್ರಹ

    Karnataka Budget – ಟಾರ್ಗೆಟ್‌ ಮೀರಿ ಅಬಕಾರಿ ಆದಾಯ ಭರ್ಜರಿ ಸಂಗ್ರಹ

    ಬೆಂಗಳೂರು: ರಾಜ್ಯ ಸರ್ಕಾರದ ಅಬಕಾರಿ ಆದಾಯ (Excise Revenue) ಭರ್ಜರಿ ಏರಿಕೆ ಕಂಡಿದೆ.

    2022-23ರಲ್ಲಿ ಅಬಕಾರಿ ಇಲಾಖೆಗೆ 29 ಸಾವಿರ ಕೋಟಿ ರೂ. ಆದಾಯ ಸಂಗ್ರಹದ ಗುರಿ ನೀಡಲಾಗಿತ್ತು. ಆದರೆ ವರ್ಷಾಂತ್ಯಕ್ಕೆ ಆದಾಯ 32 ಸಾವಿರ ಕೋಟಿ ರೂ. ಗೆ ಏರಿಕೆಯಾಗಲಿದೆ. ಇದು ಬಜೆಟ್‌ (Karnataka Budget) ಅಂದಾಜಿಗಿಂತ ಶೇ.10 ರಷ್ಟು ಹೆಚ್ಚು ಎನ್ನುವುದು ವಿಶೇಷ.

    2023-24 ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ 35 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹದ ಗುರಿಯನ್ನು ನೀಡಲಾಗಿದೆ.

    ಈ ಸಂದರ್ಭದಲ್ಲಿ ಸಾರಾಯಿ/ ಸೇಂದಿಗೆ ಸಂಬಂಧಿಸಿದಂತೆ ಅಬಕಾರಿ ಬಾಕಿಗಳನ್ನು ವಸೂಲು ಮಾಡುವುದಕ್ಕೆ ನೂತನ ಕರಸಮಾಧಾನ ಯೋಜನೆಯನ್ನು ಪ್ರಸ್ತಾಪಿಸಲಾಗಿದೆ. ಈ ಯೋಜನೆ ಅಡಿ ಸಾರಾಯಿ/ ಸೇಂದಿಗೆ ಬಾಡಿಗೆ ಸಂಬಂಧದಲ್ಲಿ ಮೂಲ ಧನವನ್ನ 2023ರ ಜೂನ್‌ 30 ರಂದು ಅಥವಾ ಅದಕ್ಕೂ ಮುಂಚಿತವಾಗಿ ಪಾವತಿಸುವವರಿಗೆ ಬಡ್ಡಿ ಮತ್ತು ದಂಡಬಟ್ಟಿ ಪಾವತಿಯಲ್ಲಿ ಪರಿಹಾರ ನೀಡಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೊಸ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ – ಮಾಜಿ ಲೆಫ್ಟಿನೆಂಟ್ ಗವರ್ನರ್ ಮೇಲೆ ಎಎಪಿ ಆರೋಪ

    ಹೊಸ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ – ಮಾಜಿ ಲೆಫ್ಟಿನೆಂಟ್ ಗವರ್ನರ್ ಮೇಲೆ ಎಎಪಿ ಆರೋಪ

    ನವದೆಹಲಿ: ರಾಷ್ಟ್ರ ರಾಜಧಾನಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಹೊಸ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ದೆಹಲಿ ಸರ್ಕಾರ ಶನಿವಾರ ಆರೋಪಿಸಿದೆ.

    ಹೊಸ ಅಬಕಾರಿ ನೀತಿಯಿಂದ ರಾಜ್ಯಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ. ಅದರ ಅನುಷ್ಠಾನದ ಬಗ್ಗೆ ಸಿಬಿಐ ತನಿಖೆ ನಡೆಸಿದ ಬಳಿಕ ಅದನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಅನಿಲ್ ಬೈಜಾಲ್ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜ್ಯದ ಮುಖ್ಯಮಂತ್ರಿ ಸುಳ್ಳು ಹೇಳಲ್ಲ ಎಂದು ಅಂದುಕೊಂಡಿದ್ದೇವೆ: ಯು.ಟಿ ಖಾದರ್

    ಹೊಸ ಅಬಕಾರಿ ನೀತಿಯಿಂದಾಗಿ ಕೆಲವು ಬಾರ್ ಮಾಲೀಕರು ಸಾವಿರಾರು ಕೋಟಿ ರೂ. ಲಾಭ ಪಡೆದಿದ್ದಾರೆ. ಇದರಿಂದ ಸರ್ಕಾರ ಸಾವಿರಾರು ಕೋಟಿ ರೂ. ಕಳೆದುಕೊಂಡಿದೆ. ದೆಹಲಿ ಸರ್ಕಾರ 2021-22 ರ ಹೊಸ ಅಬಕಾರಿ ನೀತಿಯನ್ನು ಅನುಮತಿಸದ ಕಾರಣ ಕೆಲವು ಜನರಿಗೆ ಪ್ರಯೋಜನವಾಗಿದೆ ಎಂದರು. ಇದನ್ನೂ ಓದಿ: ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್‌ ಶಾ ಬಳಿ ನೆರೆ ಪರಿಹಾರ ಕೇಳಲಿಲ್ಲವೇಕೆ – BJP ಸರ್ಕಾರಕ್ಕೆ ಕಾಂಗ್ರೆಸ್‌ ಪ್ರಶ್ನೆ

    ಅನಿಲ್ ಬೈಜಾಲ್ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿದ್ದಾಗ ಅರವಿಂದ್ ಕೇಜ್ರಿವಾಲ್ ಸರ್ಕಾರ 2021ರ ನವೆಂಬರ್ 17 ರಂದು ಹೊಸ ಅಬಕಾರಿ ನೀತಿಯನ್ನು ಸಿದ್ಧಪಡಿಸಿತ್ತು. 2021ರಲ್ಲಿ ಅಂಗೀಕರಿಸಿದ ಹೊಸ ಅಬಕಾರಿ ನೀತಿಯಲ್ಲಿ ಪ್ರತೀ ಪ್ರದೇಶಗಳಲ್ಲೂ ಸಮಾನ ಸಂಖ್ಯೆಯ ಮದ್ಯದ ಅಂಗಡಿಗಳು ಇರಬೇಕೆಂದು ನಿರ್ಧರಿಸಲಾಗಿದೆ. ಆದರೆ ಈ ಹಿಂದೆ ಒಂದೇ ಸ್ಥಳದಲ್ಲಿ 20 ಬಾರ್‌ಗಳಿದ್ದರೆ, ಇನ್ನೂ ಕೆಲವೆಡೆ ಒಂದೂ ಇರುತ್ತಿರಲಿಲ್ಲ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ದಡೇಸುಗೂರು ಪ್ರಶ್ನೆಗೆ ಉತ್ತರಿಸಲು ಅಬಕಾರಿ ಡಿಸಿ ತಬ್ಬಿಬ್ಬು

    ದಡೇಸುಗೂರು ಪ್ರಶ್ನೆಗೆ ಉತ್ತರಿಸಲು ಅಬಕಾರಿ ಡಿಸಿ ತಬ್ಬಿಬ್ಬು

    ಕೊಪ್ಪಳ: ಜಿಲ್ಲಾದ್ಯಂತ ನಡೆಯುತ್ತಿರುವ ಮದ್ಯ ಅಕ್ರಮ ಮಾರಾಟ ದಂಧೆ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲೂ ಸದ್ದು ಮಾಡಿದೆ. ಸಚಿವ ಆನಂದ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ, ಅಬಕಾರಿ ಡಿಸಿ ಸೆಲೀನಾಗೆ ಶಾಸಕ ಬಸವರಾಜ್ ದಡೇಸುಗೂರು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ.

    ಗ್ರಾಮೀಣ ಭಾಗದಲ್ಲಿ ಹೋಟೆಲ್, ಪಾನ್ ಶಾಪ್‌ನಲ್ಲೂ ಮದ್ಯ ಮಾರಾಟವಾಗುತ್ತಿದೆ. ಯಾವ ಬಾರ್ ಮಾಲೀಕರ ಮೇಲೆ ಎಷ್ಟು ಕೇಸ್ ಮಾಡಿದ್ದೀರಿ? ನೀವು, ನಿಮ್ಮ ಇಲಾಖೆ ಅಧಿಕಾರಿಗಳು ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲ ಎಂಬುದು ನನಗೆ ಗೊತ್ತು. ನೀವು ಕಾನೂನು ಪ್ರಕಾರ ಕೆಲಸ ಮಾಡಿದ್ರೆ ನಾನು ಈ ಸಭೆಯಲ್ಲಿ ಮಾತಾನಾಡುವ ಅಗತ್ಯ ಇರಲಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಡಿಕೆಶಿ ಜೊತೆ ದಿವ್ಯಾ ಹಾಗರಗಿ ಫೋಟೋ ತೆಗೆಸಿಕೊಂಡ ರಹಸ್ಯ ಬಯಲು

    ಬಿಟ್ಟು ಬಿಡದೇ ತರಾಟೆ ತೆಗೆದುಕೊಂಡ ಶಾಸಕ ದಡೇಸುಗೂರು, ನಿಮಗೆ ತಿಂಗಳ ಸೆಟ್ಲ್ಮೆಂಟ್ ಇದೆ ಎನ್ನುವುದು ನನಗೆ ತಿಳಿದಿದೆ ಎಂದು ಗಂಭೀರ ಆರೋಪ ಮಾಡಿದರು. ದಡೇಸುಗೂರು ಪ್ರಶ್ನೆಗೆ ಉತ್ತರಿಸಲು ಅಬಕಾರಿ ಡಿಸಿ ತಬ್ಬಿಬ್ಬಾಗಿದ್ದು ಕಂಡು ಬಂತು. ಇದನ್ನೂ ಓದಿ: 2,500 ಕೋಟಿ ರೂ. ತನಿಖೆಗೆ ಭಾಸ್ಕರ್ ರಾವ್ ಆಗ್ರಹ

    ಈ ವೇಳೆ ಧ್ವನಿಗೂಡಿಸಿದ ಕೆಡಿಪಿ ನಾಮಿನೇಟ್ ಸದಸ್ಯ ಗುರುಗೌಡ, ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟದಿಂದ ಯುವಕರು ಹಾಳಾಗುತ್ತಿದ್ದಾರೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

  • ಗ್ಯಾಸ್ ಸಿಲಿಂಡರ್‌ನಲ್ಲಿ 50 ಲೀಟರ್ ಮದ್ಯ ಸಾಗಿಸುತ್ತಿದ್ದ ಚಾಲಾಕಿ ಬಂಧನ

    ಗ್ಯಾಸ್ ಸಿಲಿಂಡರ್‌ನಲ್ಲಿ 50 ಲೀಟರ್ ಮದ್ಯ ಸಾಗಿಸುತ್ತಿದ್ದ ಚಾಲಾಕಿ ಬಂಧನ

    ಪಾಟ್ನಾ: LPG ಸಿಲಿಂಡರ್‌ನಲ್ಲಿ ಮದ್ಯ ಸಾಗಿಸುತ್ತಿದ್ದ ಚಾಲಾಕಿಯೊಬ್ಬನನ್ನು ಬಿಹಾರದ ಪೊಲೀಸರು ಬಂಧಿಸಿದ್ದಾರೆ.

    ಭೂಷಣ್ ರೈ ಬಂಧಿತ ಆರೋಪಿ. ಮದ್ಯ ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಂದಘಾಟ್ ಸಮೀಪ ದಾಳಿ ನಡೆಸಿ, ಸಿಲಿಂಡರ್‌ನಲ್ಲಿದ್ದ 50 ಲೀ. ಮದ್ಯವನ್ನು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಾಯಿ

    spurious_liquor

    ವ್ಯಕ್ತಿಯು ಬಿಹಾರದ ಅಬಕಾರಿ ತಿದ್ದುಪಡಿ-2022ರ ಅಡಿಯಲ್ಲಿ ದಂಡ ಪಾವತಿಸಲು ನಿರಾಕರಿಸಿದ್ದಾನೆ. ಇದರಿಂದಾಗಿ ನಿಯಮ ಉಲ್ಲಂಘಿಸಿದವರಿಗೆ ಒಂದು ತಿಂಗಳ ಕಾಲ ಜೈಲುಶಿಕ್ಷೆ ವಿಧಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.