Tag: ಅಬಕಾರಿ ಸುಂಕ

  • ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ – ಇಂದಿನಿಂದ ಮದ್ಯದ ದರ ಇಳಿಕೆ

    ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ – ಇಂದಿನಿಂದ ಮದ್ಯದ ದರ ಇಳಿಕೆ

    ಬೆಂಗಳೂರು: ರಾಜ್ಯದ ಮದ್ಯಪ್ರಿಯರಿಗೆ ಗುಡ್ ಇದು ನ್ಯೂಸ್. ಇಂದಿನಿಂದ ಮದ್ಯ ದರ (Liquor Price) ಇಳಿಕೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರ್ಯಾಂಡ್‌ಗಳ (Premium Brand) ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ.

    ಭಾರತದಲ್ಲಿ (India) ತಯಾರಿಸಿರುವ ಮದ್ಯದ ಅಬಕಾರಿ ಸುಂಕದ (Excise Duty) ಸ್ಲ್ಯಾಬ್‌ಗಳ ಸಂಖ್ಯೆಯನ್ನು ಇತರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರಿಂದ ರಾಜ್ಯದಲ್ಲಿ ಮದ್ಯದ ದರದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಾಸವಾಗಲಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಇದನ್ನೂ ಓದಿ: 1 ವರ್ಷದಿಂದ ಸವಾಲಿನ ಮೇಲೆ ಸವಾಲು – ಪರಮೇಶ್ವರ್ ಇಮೇಜ್‌ಗೆ ಧಕ್ಕೆ ಮತ್ತೆ ಮುಜುಗರ

    ಈಗಾಗಲೇ ಕರಡು ಅಧಿಸೂಚನೆ ಹೊರಡಿಸಿ ಒಂದೂವರೆ ತಿಂಗಳಾದರೂ ಅಂತಿಮಗೊಳಿಸದ ಕಾರಣ ಮಾರುಕಟ್ಟೆಯಲ್ಲಿ ಪ್ರೀಮಿಯಂ ಬ್ರಾಂಡ್‌ಗಳ ಮದ್ಯಕ್ಕೆ ಭಾರಿ ಕೊರತೆ ಉಂಟಾಗಿತ್ತು. ಇದೀಗ ಅಂತಿಮ ಅಧಿಸೂಚನೆಯಂತೆ ಸ್ಲ್ಯಾಬ್‌ಗಳ (Slab) ಸಂಖ್ಯೆ 18 ರಿಂದ 16ಕ್ಕೆ ಇಳಿಸಲಾಗಿದೆ. ಆದರೆ ಮೊದಲ ಮೂರು ಸ್ಲ್ಯಾಬ್ ಗಳಲ್ಲಿ ದರದ ವ್ಯತ್ಯಾಸ ಆಗುವುದಿಲ್ಲ. ನಾಲ್ಕನೇ ಸ್ಲ್ಯಾಬ್ ನಲ್ಲಿ ಮದ್ಯದ ದರ ಸ್ವಲ್ಪ ಏರಿಕೆಯಾಗಲಿದೆ. ಉಳಿದಂತೆ ಐದನೇ ಸ್ಲಾಬ್ ಬಳಿಕ 16ನೇ ಸ್ಲ್ಯಾಬ್‌ವರೆಗೆ ದರ ಕಡಿಮೆಯಾಗಲಿದೆ. ಆ ಸ್ಲ್ಯಾಬ್ ಗಳಲ್ಲಿನ ವಿಸ್ಕಿ, ರಮ್, ಬ್ರಾಂಡಿಗಳ ಬೆಲೆ ಸಹಜವಾಗಿಯೇ ಕಡಿಮೆಯಾಗಲಿದೆ.

    ರಾಜ್ಯದಲ್ಲಿ ಈವರೆಗೆ 18 ಸ್ಲ್ಯಾಬ್ ಗಳಲ್ಲಿ ಮದ್ಯದ ಮೇಲೆ ಅಬಕಾರಿ ತೆರಿಗೆ ವಿಧಿಸಲಾಗುತ್ತಿತ್ತು. ಈಗ ಸ್ಲ್ಯಾಬ್‌ಗಳ ಸಂಖ್ಯೆಯನ್ನು 16ಕ್ಕೆ ಇಳಿಕೆ ಮಾಡಲಾಗಿದೆ. ಪ್ರತಿ ಬಲ್ಕ್ ಲೀಟರ್ ಮದ್ಯದ ಘೋಷಿತ ಉತ್ಪಾದನಾ ದರ 449 ರೂ. ಮೊದಲ ಸ್ಲ್ಯಾಬ್‌ನಲ್ಲಿದ್ದರೆ 15 ಸಾವಿರ ರೂ.ನಿಂದ ಮೇಲಿನ ಘೋಷಿತ ದರದ ಎಲ್ಲ ಮದ್ಯಗಳನ್ನು 18ನೇ ಸ್ಲ್ಯಾಬ್‌ನಲ್ಲಿಡಲಾಗಿತ್ತು.

    ಪರಿಷ್ಕೃತ ಪಟ್ಟಿಯ ಪ್ರಕಾರ, ಪ್ರತಿ ಬಲ್ಕ್ ಲೀಟರ್‌ನ ಘೋಷಿತ ಉತ್ಪಾದನಾ ದರ 450 ರೂ. ಹೊಂದಿರುವ ಮದ್ಯ ಮೊದಲ ಸ್ಲ್ಯಾಬ್‌ನಲ್ಲಿದ್ದರೆ 20 ಸಾವಿರ ರೂ. ಮತ್ತು ಅದಕ್ಕಿಂತ ಹೆಚ್ಚಿನ ಘೋಷಿತ ಉತ್ಪಾದನಾ ದರ ಹೊಂದಿರುವ ಮದ್ಯವನ್ನು 16ನೇ ಸ್ಲ್ಯಾಬ್‌ಗೆ ಸೇರಿಸಲಾಗಿದೆ.

     

  • ಹೊಸ ವರ್ಷಕ್ಕೆ ಎಣ್ಣೆ ಶಾಕ್ ಫಿಕ್ಸ್ – ಜನವರಿಯಿಂದ ಮದ್ಯದ ಬೆಲೆಯಲ್ಲಿ ಭಾರೀ ಏರಿಕೆ

    ಹೊಸ ವರ್ಷಕ್ಕೆ ಎಣ್ಣೆ ಶಾಕ್ ಫಿಕ್ಸ್ – ಜನವರಿಯಿಂದ ಮದ್ಯದ ಬೆಲೆಯಲ್ಲಿ ಭಾರೀ ಏರಿಕೆ

    – ಕೆಳ ವರ್ಗದ ಜನ ಅತೀ ಹೆಚ್ಚು ಸೇವಿಸುವ ಮದ್ಯದ ದರ ಹೆಚ್ಚಳ

    ಬೆಂಗಳೂರು: ಹೊಸ ವರ್ಷದ (New Year) ಹೊಸ್ತಿಲಲ್ಲಿ ಮದ್ಯಪ್ರಿಯರಿಗೆ ಶಾಕ್ ಎದುರಾಗಿದೆ. ನ್ಯೂ ಇಯರ್ ಜೋಶ್ ನಲ್ಲಿದ್ದವರಿಗೆ ಖುದ್ದು ಮದ್ಯದ ಕಂಪನಿಗಳೇ (Liquor Company) ರಿವರ್ಸ್ ಕಿಕ್ ಕೊಡಲು ರೆಡಿಯಾಗಿದೆ.

    ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ (Congress Government Guarantee) ಗುಂಗಲ್ಲಿದ್ದ ಜನರಿಗೆ ಬೆಲೆ ಏರಿಕೆ ಶಾಕ್ ಬ್ಯಾಕ್ ಟು ಬ್ಯಾಕ್ ಎದುರಾಗುತ್ತಿದೆ. ದಿನನಿತ್ಯ ಬಳಕೆ ವಸ್ತುಗಳು ಈಗಾಗಲೇ ಗಗನಕ್ಕೇರಿವೆ. ಒಂದು ಕಡೆ ಸರ್ಕಾರ ಜನರ ಮೂಗಿಗೆ ತುಪ್ಪ ಸವರಿದಂತೆ, ಈ ಕಡೆ ಉಚಿತ ಭಾಗ್ಯ ಕೊಟ್ಟು ಮತ್ತೊಂದು ಕಡೆ ದರ ಏರಿಸಿ ಹೊರೆಯನ್ನು ಜನರ ಮೇಲೆಯೇ ಹಾಕುತ್ತಿದೆ. ಇದನ್ನೂ ಓದಿ: ಪಿಓಕೆ ಸಮಸ್ಯೆ ಕುರಿತ ಅಮಿತ್ ಶಾ ಹೇಳಿಕೆಗೆ ರಾಗಾ ಆಕ್ಷೇಪ

    ಸರ್ಕಾರದ ಖಜಾನೆಗೆ ಬೂಸ್ಟರ್ ಡೋಸ್ ಕೊಟ್ಟಿದ್ದ ಮದ್ಯಪ್ರಿಯರಿಗೆ ಇದೀಗ ಮತ್ತೊಮ್ಮೆ ರೇಟ್ ಹೈಕ್ ಬಿಸಿ ತಟ್ಟಲಿದೆ. ಆರಂಭದಲ್ಲೇ ಸರ್ಕಾರ ಆರ್ಥಿಕ ಮೂಲವಾದ ಅಬಕಾರಿ ಸುಂಕದ (Excise Duty) ದರವನ್ನು 20% ಹೆಚ್ಚಳ ಮಾಡಿತ್ತು. ಈಗ ಹೊಸ ವರ್ಷದ ಪಾರ್ಟಿ ಮೂಡ್‌ನಲ್ಲಿದ್ದವರಿಗೆ ಮತ್ತೆ ಮದ್ಯದ ಕಂಪನಿಗಳು ಶಾಕ್ ನೀಡುವ ಮೂಲಕ ಕಿಕ್ ಇಳಿಸಿವೆ. ಇದನ್ನೂ ಓದಿ: ಕೃಷಿ ಉಪಕರಣಗಳ ಬೆಲೆ ದುಪ್ಪಟ್ಟು – ಅಂದು 30 ಪೈಪ್‌, 5 ಸ್ಪ್ರಿಂಕ್ಲರ್‌ಗೆ 1,876 ರೂ. – ಈಗ 4,667 ರೂ.ಗೆ ಏರಿಕೆ

    ಎಷ್ಟು ದುಬಾರಿ?
    ಜನವರಿ 1ರಿಂದ ಮದ್ಯ ದರ ಏರಿಕೆಗೆ ಸೂಚನೆ ನೀಡಲಾಗಿದೆ. ಹಾಲಿ ಓಟಿ 180 ಎಂಎಲ್‌ಗೆ 100 ರೂಪಾಯಿ ಇದ್ದು, ಜ.1 ರಿಂದ ಓಟಿ ಬೆಲೆ 123 ರೂ.ಗೆ ಏರಿಕೆಯಾಗಲಿದೆ. ಬಿಪಿ ದರ ಹಾಲಿ 123 ರೂ. ಇದ್ದು ಜನವರಿಯಿಂದ 159 ರೂ. ಆಗಲಿದೆ. 8ಪಿಎಂ ದರ ಹಾಲಿ 100 ರೂ. ಇದ್ದು 123 ರೂ.ಗೆ ಏರಲಿದೆ. ಇದನ್ನೂ ಓದಿ: ಐದು ಗ್ಯಾರಂಟಿ ಜಾರಿಗೆ ಅಬಕಾರಿ ಇಲಾಖೆಗೆ ಬಿಗ್‌ ಟಾರ್ಗೆಟ್‌!

     

    ರಾಜ್ಯದ ಕೆಳ ವರ್ಗದ ಜನ ಅತೀ ಹೆಚ್ಚು ಸೇವಿಸುವ ಮದ್ಯದ ದರ ಏರಿಕೆಗೆ ಚಿಂತನೆ ನಡೆದಿದೆ. ಜನವರಿ 1ರಿಂದ ದರ ಏರಿಕೆ ಮಾಡುವಂತೆ ಬಾರ್ (Bar) ಮಾಲೀಕರಿಗೆ ಕಂಪನಿಗಳಿಂದ ಸೂಚನೆ ನೀಡಿದೆ. ಕಂಪನಿಗಳ ಉತ್ಪಾದನಾ ವೆಚ್ಚ, ಸರಕು ಸಾಗಣೆ ವೆಚ್ಚಗಳು ಹೆಚ್ಚಾಗಿರುವ ಕಾರಣ ದರ ಏರಿಕೆ ಅಗತ್ಯವಾಗಿದ್ದು, ಈ ಕಾರಣ ಗ್ರಾಹಕರ ಮೇಲೆ ಹೊರೆ ಹಾಕಲೇಬೇಕಾದ ಹಿನ್ನೆಲೆ ದರ ಏರಿಕೆಗೆ ಕಂಪನಿಗಳು ನಿರ್ಧಾರ ಮಾಡಿವೆ.

    ಈ ಸಂಬಂಧ ಬಾರ್ ಮಾಲೀಕರಿಗೆ ಅಂದರೆ ಎಂಆರ್‌ಪಿ ಬಾರ್ ಮಾಲೀಕರಿಗೆ ಮೆಸೇಜ್ ಮೂಲಕ ಕಂಪನಿಗಳು ಮಾಹಿತಿ ರವಾನೆ ಮಾಡಿದ್ದು, ಸೂಚನೆಯಂತೆ ದರ ನಿಗದಿಯಂತೆ ಸಹಕರಿಸುವಂತೆ ಮನವಿ ಮಾಡಿವೆ.

    ಬಿಜೆಪಿ (BJP) ಸರ್ಕಾರ ಮಂಡಿಸಿದ ಬಜೆಟ್‍ನಲ್ಲಿ ಅಬಕಾರಿ ಇಲಾಖೆಯಿಂದ 35,000 ಕೋಟಿ ರೂ. ಗುರಿ ನೀಡಲಾಗಿತ್ತು. ಆದರೆ ಸಿದ್ದರಾಮಯ್ಯ ಅವರು ಜುಲೈನಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ 36,000 ಕೋಟಿ ರೂ. ತೆರಿಗೆ ಸಂಗ್ರಹದ ಗುರಿಯನ್ನು ನೀಡಿದ್ದಾರೆ.

  • ತೆರಿಗೆ ಇಳಿಸಿ ಇಲ್ಲಾಂದ್ರೆ ಬೆಳಗ್ಗೆ ನೈಂಟಿ, ಸಂಜೆ ನೈಂಟಿ ಎಣ್ಣೆ ಕೊಡಿ: ಕೂಲಿ ಕಾರ್ಮಿಕರಿಂದ ಪ್ರತಿಭಟನೆ

    ತೆರಿಗೆ ಇಳಿಸಿ ಇಲ್ಲಾಂದ್ರೆ ಬೆಳಗ್ಗೆ ನೈಂಟಿ, ಸಂಜೆ ನೈಂಟಿ ಎಣ್ಣೆ ಕೊಡಿ: ಕೂಲಿ ಕಾರ್ಮಿಕರಿಂದ ಪ್ರತಿಭಟನೆ

    ಉಡುಪಿ: ಸರ್ಕಾರ ಮದ್ಯದ (Liquor) ಮೇಲಿನ ತೆರಿಗೆ (Tax) ಇಳಿಕೆ ಮಾಡಿ ಇಲ್ಲವೇ, ಬೆಳಗ್ಗೆ ನೈಂಟಿ, ಸಂಜೆ ನೈಂಟಿ ಎಣ್ಣೆ ಉಚಿತವಾಗಿ ಕೊಡಿ ಎಂದು ಆಗ್ರಹಿಸಿ ಉಡುಪಿಯಲ್ಲಿ ಕೂಲಿ ಕಾರ್ಮಿಕರು ಪ್ರತಿಭಟನೆ (Protest) ನಡೆಸಿದ್ದಾರೆ.

    ಉಡುಪಿ ಜಿಲ್ಲಾ ನಾಗರಿಕ ಸಮಿತಿ, ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ಇಲ್ಲಿನ ಚಿತ್ತರಂಜನ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕೂಲಿ ಕಾರ್ಮಿಕರು ವಿನೂತನ ರೀತಿಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು. ಪ್ರತಿಭಟನೆಗೂ ಮುನ್ನ ಕುಡುಕರಿಗೆ ಹಾರ ಹಾಕಿ ಸನ್ಮಾನಿಸಿ, ಆರತಿಯೊಂದಿಗೆ ಗೌರವಿಸಲಾಯಿತು. ಇದನ್ನೂ ಓದಿ: 5 ಗ್ಯಾರಂಟಿ ಜಾರಿಗೆ ತೆರಿಗೆ ಏರಿಕೆ, 85ಸಾವಿರ ಕೋಟಿ ಸಾಲಕ್ಕೆ ನಿರ್ಧಾರ – ಯಾವ ತೆರಿಗೆ ಎಷ್ಟು ಏರಿಕೆ?

    ರಾಜ್ಯ ಸರ್ಕಾರ ಇತ್ತೀಚಿನ ಬಜೆಟ್‌ನಲ್ಲಿ (Karnataka Budget) ಮದ್ಯದ ಬೆಲೆ 20% ಏರಿಕೆ ಮಾಡಿದೆ. ಸರ್ಕಾರದ ಉಚಿತ ಯೋಜನೆಗಳಿಗೆ ನಮ್ಮಿಂದಲೇ ಹಣ ಬರುತ್ತದೆ. ನಮಗೆ ಮಧ್ಯದ ಬೆಲೆ ಇಳಿಕೆ ಮಾಡಿ ಇಲ್ಲವೇ ಬೆಳಗ್ಗೆ ನೈಂಟಿ, ಸಂಜೆ ನೈಂಟಿ ಉಚಿತವಾಗಿ ಕೊಡಿ. ಅದೂ ಆಗಲಿಲ್ಲ ಅಂದ್ರೆ ಎಣ್ಣೆಯನ್ನೇ ಬಂದ್ ಮಾಡಿ ಎಂದು ಆಗ್ರಹಿಸಿದ್ದಾರೆ.

    ಎಣ್ಣೆ ಬಂದ್ ಮಾಡಿದ್ರೆ, ಆ ಹಣವನ್ನ ನಮ್ಮ ಹೆಂಡತಿ, ಮಕ್ಕಳಿಗೆ ಕೊಡುತ್ತೇವೆ. ನಮ್ಮ ಹೆಂಡತಿ, ಮಕ್ಕಳನ್ನು ನಾವೇ ಹಣ ಕೊಟ್ಟು ದೇವಸ್ಥಾನಗಳಿಗೆ ಕರೆದುಕೊಂಡು ಹೋಗುತ್ತೆವೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ರಾಜ್ಯದಲ್ಲಿ ಡಿಸಿ, ಸಿಇಓ, ಕಮಿಷನರ್‌ಗಳಿಗೆ ರೇಟ್ ಫಿಕ್ಸ್ ಆಗಿದೆ: ಕಟೀಲ್ ಗಂಭೀರ ಆರೋಪ

    5 ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಅಬಕಾರಿ ಸುಂಕವನ್ನ ಭಾರೀ ಏರಿಕೆ ಮಾಡಿದೆ. ಹಾಲಿ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‌ಗಳ ಮೇಲೆ ಹೆಚ್ಚುವರಿ 20% ಅಬಕಾರಿ ಸುಂಕ ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ರೊಚ್ಚಿಗೆದ್ದಿರುವ ಮಧ್ಯಪ್ರಿಯರು ಅಲ್ಲಲ್ಲಿ ಪ್ರತಿಭಟನೆಗೆ ಇಳಿದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2 ತಿಂಗಳು ನಾವು ಬಾರ್‌ಗೆ ಹೋಗದಿದ್ರೆ ಸರ್ಕಾರವೇ ಬಿದ್ದು ಹೋಗುತ್ತೆ – ಮದ್ಯಪಾನಪ್ರಿಯರ ಸಂಘದ ರಾಜ್ಯಾಧ್ಯಕ್ಷ

    2 ತಿಂಗಳು ನಾವು ಬಾರ್‌ಗೆ ಹೋಗದಿದ್ರೆ ಸರ್ಕಾರವೇ ಬಿದ್ದು ಹೋಗುತ್ತೆ – ಮದ್ಯಪಾನಪ್ರಿಯರ ಸಂಘದ ರಾಜ್ಯಾಧ್ಯಕ್ಷ

    – ಅಬಕಾರಿ ಸುಂಕ ಇಳಿಸದಿದ್ದರೆ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ

    ಹಾಸನ: 2 ತಿಂಗಳು ಮದ್ಯಪ್ರಿಯರು ಬಾರ್‌ಗಳ ಬಳಿ ಹೋಗದಿದ್ದರೆ ಸರ್ಕಾರವೇ ಬಿದ್ದು ಹೋಗುತ್ತದೆ. ಸರ್ಕಾರ ನಡೆಯುತ್ತಿರುವುದೇ ಮದ್ಯಪ್ರಿಯರಿಂದ  (Alcohol) ಎಂದು ಕರ್ನಾಟಕ ಮದ್ಯಪಾನಪ್ರಿಯರ ಹೋರಾಟ ಸಂಘದ ರಾಜ್ಯಾಧ್ಯಕ್ಷ ವೆಂಕಟೇಶ್‍ಗೌಡ ಹೇಳಿದ್ದಾರೆ.

    ಹಾಸನದಲ್ಲಿ (Hassan) `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, 20% ಅಬಕಾರಿ ಸುಂಕ (Excise) ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆ. ರಾಜ್ಯ ಸರ್ಕಾರ ಮದ್ಯಪ್ರಿಯರಿಂದ ಸುಲಿಗೆ ಮಾಡುತ್ತಿದೆ. ಹಿಂದಿನ ಬಿಜೆಪಿ ಸರ್ಕಾರ ಬೆಳಗಾವಿ ಅಧಿವೇಶನದ ನಂತರ 30% ಅಬಕಾರಿ ಸುಂಕ ಹೆಚ್ಚಳ ಮಾಡಿತ್ತು. ಇದೇ ಕಾಣರಕ್ಕೆ 90% ರಷ್ಟು ಮದ್ಯಪ್ರಿಯರು ಕಾಂಗ್ರೆಸ್‍ಗೆ ಮತ ಹಾಕಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಐದು ಗ್ಯಾರಂಟಿಗಳನ್ನು ಈಡೇರಿಸಲು 20% ಅಬಕಾರಿ ಸುಂಕ ಹೆಚ್ಚಳ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 108 ಅಂಬುಲೆನ್ಸ್‌ ಸಿಬ್ಬಂದಿ ಬಾಕಿ ವೇತನ ಪಾವತಿಗೆ ಕ್ರಮ – ಮುಷ್ಕರ ನಡೆಸದಂತೆ ಸಚಿವ ದಿನೇಶ್ ಗುಂಡೂರಾವ್ ಕರೆ

    ಗಂಡನಿಂದ ತಿಂಗಳಿಗೆ 10,000 ರೂ. ಸುಂಕದ ರೂಪದಲ್ಲಿ ಹಣ ವಸೂಲಿ ಮಾಡಿ ಪತ್ನಿಗೆ 2,000 ರೂ. ನೀಡಲು ಮುಂದಾಗಿದ್ದಾರೆ. ಕೂಡಲೇ ಹೆಚ್ಚಳ ಮಾಡಿರುವ ಅಬಕಾರಿ ಸುಂಕವನ್ನು ಹಿಂಪಡೆಯಬೇಕು. ಹಿಂದಿನ ಬಿಜೆಪಿ ಸರ್ಕಾರ ಹೆಚ್ಚಳ ಮಾಡಿದ್ದ 30% ಅಬಕಾರಿ ಸುಂಕವನ್ನು ರದ್ದು ಮಾಡಿ 10% ಸುಂಕ ಇಳಿಕೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡುವುದಾಗಿ ಎಚ್ಚರಿಸಿದ್ದಾರೆ.

    ವಿರೋಧ ಪಕ್ಷದ ಶಾಸಕರು ಕೂಡ ನಮ್ಮ ಪರ ಧ್ವನಿ ಎತ್ತುತ್ತಿಲ್ಲ. ಅವರನ್ನು ಎಚ್ಚರಿಸುವ ಕೆಲಸವನ್ನೂ ಮಾಡಬೇಕಾಗಿದೆ. ಈಗಾಗಲೇ ಮದ್ಯಪ್ರಿಯರ 20 ಬೇಡಿಕೆಗಳ ಮನವಿಯನ್ನು ಹಿಂದೆ ಅಬಕಾರಿ ಸಚಿವರಾಗಿದ್ದ ಕೆ.ಗೋಪಾಲಯ್ಯ ಅವರಿಗೆ ಮನವಿ ಸಲ್ಲಿಸಿದ್ದೇನೆ. ಆ ಬೇಡಿಕೆಗಳಲ್ಲಿ ಒಂದನ್ನು ಕೂಡ ಈಡೇರಿಸಿಲ್ಲ. ನಾವು ಯಾರಿಗೂ ಮದ್ಯ ಕುಡಿಯುವಂತೆ ಪ್ರಚೋದನೆ ನೀಡುತ್ತಿಲ್ಲ. ‘ನಿತ್ಯ ದುಡಿ ಸತ್ಯ ನುಡಿ ಸ್ವಲ್ಪ ಕುಡಿ ಮನೆಗೆ ನಡಿ’ ಎಂಬ ಧ್ಯೇಯವಾಕ್ಯ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

    ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡಿದರೆ ಡ್ರಂಕ್ ಅಂಡ್ ಡ್ರೈವ್ ಕೇಸ್ ಹಾಕಿ 10,000 ರೂ. ದಂಡ ಹಾಕುತ್ತಾರೆ. ಎಲ್ಲಾ ರೀತಿಯಿಂದಲೂ ಮದ್ಯಪ್ರಿಯರನ್ನು ಶೋಷಣೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ರಾಜ್ಯಾದ್ಯಂತ ಇರುವ ನಮ್ಮ ಸಂಘದ ಎಲ್ಲಾ ಸದಸ್ಯರ ಸಭೆ ಕರೆದು ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಅಬಕಾರಿ ಸುಂಕ ಇಳಿಸದಿದ್ದರೆ ಫ್ರೀಡಂಪಾರ್ಕ್‍ನಲ್ಲಿ ಅನಿರ್ಧಿಷ್ಠಾವಧಿ ಧರಣಿ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಡಿವೋರ್ಸ್‍ಗಾಗಿ ಕೋರ್ಟ್ ಮೆಟ್ಟಿಲೇರಿದ್ದ 15 ಜೋಡಿ ಒಂದಾಗಿಸಿದ ನ್ಯಾಯಾಧೀಶರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇಂದ್ರದ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಇಳಿಸಿದ ಮಹಾರಾಷ್ಟ್ರ ಸರ್ಕಾರ

    ಕೇಂದ್ರದ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಇಳಿಸಿದ ಮಹಾರಾಷ್ಟ್ರ ಸರ್ಕಾರ

    ಮುಂಬೈ: ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದ ಬೆನ್ನಲ್ಲೇ, ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಭಾನುವಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್‍ನ್ನು ಕಡಿತಗೊಳಿಸಿದೆ.

    ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಲೀಟರ್‌ಗೆ 2.08 ರೂ. ಮತ್ತು ಡೀಸೆಲ್‍ಗೆ ಲೀಟರ್‌ಗೆ 1.44 ರೂ.ಗೆ ಇಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ರಾಷ್ಟ್ರಧ್ವಜದ ಮೇಲೆ ನಿಂತು ನಮಾಜ್- ವ್ಯಕ್ತಿಯ ಬಂಧನ

    ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ 2,500 ಕೋಟಿ ರೂಪಾಯಿ ನಷ್ಟ ಉಂಟಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿದ ನಂತರ, ಪೆಟ್ರೋಲ್‍ನಿಂದ ತಿಂಗಳ ಆದಾಯವು 80 ಕೋಟಿ ರೂ.ಗಳಷ್ಟು ಕಡಿಮೆಯಾದರೆ, ಡೀಸೆಲ್‍ನಿಂದ 125 ಕೋಟಿ ರೂ. ಕಡಿಮೆಯಾಗಲಿದೆ ಎಂದು ರಾಜ್ಯ ಸರ್ಕಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: 12 ಜ್ಯೋತಿರ್ಲಿಂಗಗಳಲ್ಲಿ ಜ್ಞಾನವಾಪಿಯಲ್ಲಿ ಸಿಕ್ಕ ಶಿವಲಿಂಗವೂ ಒಂದು: ವಿಹೆಚ್‌ಪಿ

    ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ ಕ್ರಮವಾಗಿ ರೂ. 8 ಮತ್ತು 6 ರೂ. ಕಡಿತ ಮಾಡಿ ಶನಿವಾರ ಆದೇಶ ಹೊರಡಿಸಿತ್ತು.

  • ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಇಳಿಕೆ – ಹೀಗಿದೆ ಇಂದಿನ ದರ

    ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಇಳಿಕೆ – ಹೀಗಿದೆ ಇಂದಿನ ದರ

    ನವದೆಹಲಿ: ಕೇಂದ್ರ ಸರ್ಕಾರವು ತೈಲದ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದ ಬಳಿಕ ಇಂದಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ದೇಶಾದ್ಯಂತ ಇಳಿಕೆಯಾಗಿದೆ.

    ಅಬಕಾರಿ ಸುಂಕವು ಪೆಟ್ರೋಲ್ ದರದ ಪ್ರತಿ ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್ ದರದ ಪ್ರತಿ ಲೀಟರ್ ಮೇಲೆ 6 ರೂಪಾಯಿ ಕಡಿಮೆಯಾಗಲಿದೆ ಎಂದು ಕೇಂದ್ರ ನೇರ ತೆರಿಗೆ ಮತ್ತು ಸುಂಕ ಮಂಡಳಿ (CBIC) ತಿಳಿಸಿದೆ. ಇದನ್ನೂ ಓದಿ: ದೆಹಲಿಗೆ ರೊಬೋಟಿಕ್ ಅಗ್ನಿಶಾಮಕ ವಾಹನ ಎಂಟ್ರಿ – ಏನೆಲ್ಲಾ ಇದೆ ವಿಶೇಷ?

    ಏಪ್ರಿಲ್ ತಿಂಗಳಲ್ಲಿ ಹಣದುಬ್ಬರ ಕಳೆದ 8 ವರ್ಷಗಳಲ್ಲಿಯೇ ಅತ್ಯಧಿಕ ಮಟ್ಟಕ್ಕೆ ಏರಿಕೆಯಾಗಿರುವ ನಡುವೆ, ಗ್ರಾಹಕರಿಗೆ ಕೊಂಚ ನಿರಾಳತೆ ನೀಡಿದಂತಾಗಿದೆ. ನಿನ್ನೆ ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಪ್ರತಿ ಲೀಟರ್‌ಗೆ 2.48 ರೂ. ಮತ್ತು ಡೀಸೆಲ್‌ಗೆ 1.16 ರಷ್ಟು ಕಡಿಮೆ ಮಾಡಿದೆ. ಇದನ್ನೂ ಓದಿ: ಬ್ರಿಗೇಡ್ ರೋಡ್‍ನಲ್ಲಿ ಕಟ್ಟಡದ ಮೇಲಿಂದ ಬಿದ್ದು ಯುವತಿ ಸಾವು

    ಈ ಕುರಿತು ಟ್ವೀಟ್ ಮಾಡಿರುವ ಗೆಹ್ಲೋಟ್, ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕಡಿತಗೊಳಿಸಿರುವುದರಿಂದ ರಾಜ್ಯ ಸರ್ಕಾರವೂ ದರ ಇಳಿಕೆ ಮಾಡಿದೆ. ಇದರಿಂದ ರಾಜ್ಯದಲ್ಲಿ ಪ್ರತಿ ಲೀಟರ್‌ಗೆ ಪೆಟ್ರೋಲ್ 10.48 ರೂ. ಮತ್ತು ಡೀಸೆಲ್ 7.16 ರೂ.ಗಳಷ್ಟು ಕಡಿತವಾಗಲಿದೆ. ಅದರಂತೆ ದೇಶದ ಪ್ರಮುಖ ನಗರಗಳಲ್ಲಿನ ದರಗಳನ್ನು ನೋಡಬಹುದು.

    PETROL

    ಎಲ್ಲಿ – ಎಷ್ಟು ದರ?
    * ಮುಂಬೈ: ಪೆಟ್ರೋಲ್ 113.33 ರೂ., ಡೀಸೆಲ್ 97.26 ರೂ.
    * ಕೋಲ್ಕತ್ತಾ: ಪೆಟ್ರೋಲ್ 106.01 ರೂ., ಡೀಸೆಲ್ 92 ರೂ.
    * ಚೆನ್ನೈ: ಪೆಟ್ರೋಲ್ 102.62 ರೂ., ಡೀಸೆಲ್ 94.22 ರೂ.
    * ಬೆಂಗಳೂರು: ಪೆಟ್ರೋಲ್ 101.92 ರೂ., ಡೀಸೆಲ್ 87 ರೂ.
    * ಗುರುಗ್ರಾಮ್: ಪೆಟ್ರೋಲ್ 97.17 ರೂ., ಡೀಸೆಲ್ 90 ರೂ..
    * ಒಡಿಶಾ: ಪೆಟ್ರೋಲ್ 102 ರೂ., ಡೀಸೆಲ್ 94.86 ರೂ.
    * ದಕ್ಷಿಣ ಕನ್ನಡ: ಪೆಟ್ರೋಲ್ 101.13 ರೂ., ಡೀಸೆಲ್ 87.13 ರೂ.

  • ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಅಬಕಾರಿ ಸುಂಕ ಇಳಿಕೆ

    ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಅಬಕಾರಿ ಸುಂಕ ಇಳಿಕೆ

    ನವದೆಹಲಿ: ವಾಹನ ಸವಾರರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ.

    ಕೇಂದ್ರ ಅಬಕಾರಿ ಸುಂಕವನ್ನು ಲೀಟರ್‌ ಪೆಟ್ರೋಲ್‌ಗೆ 9.50 ರೂಪಾಯಿ ಮತ್ತು ಪ್ರತಿ ಲೀಟರ್‌ ಡೀಸೆಲ್‌ಗೆ 6 ರೂಪಾಯಿ ಕಡಿತಗೊಳಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಟ್ವೀಟ್‌ ಮಾಡಿ ತಿಳಿಸಿದ್ದಾರೆ. ಇದನ್ನೂ ಓದಿ: 12 ಜ್ಯೋತಿರ್ಲಿಂಗಗಳಲ್ಲಿ ಜ್ಞಾನವಾಪಿಯಲ್ಲಿ ಸಿಕ್ಕ ಶಿವಲಿಂಗವೂ ಒಂದು: ವಿಹೆಚ್‌ಪಿ

    ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ. ಅಲ್ಲದೇ ಅಡುಗೆ ಸಿಲಿಂಡರ್‌ ದರ 200 ರೂ. ಕಡಿತ ಮಾಡಲಾಗಿದೆ.

    ಕೇಂದ್ರ ಸರ್ಕಾರ ಕಳೆದ ವರ್ಷ ನವೆಂಬರ್ 5 ರಂದು ಪೆಟ್ರೋಲ್ ಮೇಲೆ 5 ರೂ. ಡಿಸೇಲ್ ಮೇಲೆ 10 ರೂಪಾಯಿ ಇಳಿಕೆ ಮಾಡಿತ್ತು. ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಬೆಲೆ ಇಳಿಕೆ ಮಾಡಿತ್ತು. ಈಗ ಹಿಮಾಚಲ ಪ್ರದೇಶ ಮತ್ತು ಗುಜರಾತ್ ಚುನಾವಣೆ ಮುನ್ನ ಬೆಲೆ ಇಳಿಕೆ ಮಾಡಿದೆ. ಈ ಬಾರಿ ಎಲ್‌ಪಿಜಿಗೂ ಸಬ್ಸಿಡಿ ನೀಡಿದೆ. ಇದನ್ನೂ ಓದಿ: ರಾಷ್ಟ್ರಧ್ವಜದ ಮೇಲೆ ನಿಂತು ನಮಾಜ್- ವ್ಯಕ್ತಿಯ ಬಂಧನ

    LPG

    ಪ್ಲಾಸ್ಟಿಕ್ ಉತ್ಪನ್ನಗಳಿಗೆ ಬೇಕಾಗುವ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನೂ ಇಳಿಕೆ ಮಾಡಲಾಗಿದೆ. ಉಕ್ಕಿನ ಕೆಲವು ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡಿದೆ. ಕೆಲವು ಉಕ್ಕಿನ ಉತ್ಪನ್ನಗಳ ಮೇಲೆ ರಫ್ತು ಸುಂಕವನ್ನು ವಿಧಿಸಲು ಸರ್ಕಾರ ನಿರ್ಧರಿಸಿದೆ.

    ರಾಜ್ಯ ಸರ್ಕಾರ ಕೂಡ ಅಬಕಾರಿ ಸುಂಕ ಕಡಿಮೆ ಮಾಡಿದರೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಮತ್ತಷ್ಟು ಕಡಿಮೆ ಆಗುತ್ತೆ. ಆದರೆ ರಾಜ್ಯ ಸರ್ಕಾರ ಯಾವಾಗ ಕಡಿಮೆ ಮಾಡುವ ನಿರ್ಧಾರ ಮಾಡುತ್ತೋ ಕಾದು ನೋಡಬೇಕಿದೆ.

    ಇವತ್ತು ಬೆಂಗಳೂರಿನಲ್ಲಿ ಎಷ್ಟು ಲೀಟರ್ ಬೆಲೆ ಎಷ್ಟಿದೆ?: ಪೆಟ್ರೋಲ್ ಬೆಲೆ – 111.09 ಪೈಸೆ ಹಾಗೂ ಡಿಸೇಲ್ ಬೆಲೆ – 94.79 ಪೈಸೆ ಇದೆ. ಅಬಕಾರಿ ಸುಂಕ ಕಡಿಮೆ ಮಾಡಿದರೆ ಪೆಟ್ರೋಲ್ ಬೆಲೆ – 102.09 ಪೈಸೆ ಹಾಗೂ ಡಿಸೇಲ್ ಬೆಲೆ – 87.79 ಪೈಸೆ ಆಗಬಹುದು.

  • ವಿಮಾನದ ಇಂಧನಕ್ಕಿಂತಲೂ ದುಬಾರಿ ಆಯ್ತು ಪೆಟ್ರೋಲ್‌ ಬೆಲೆ

    ವಿಮಾನದ ಇಂಧನಕ್ಕಿಂತಲೂ ದುಬಾರಿ ಆಯ್ತು ಪೆಟ್ರೋಲ್‌ ಬೆಲೆ

    ನವದೆಹಲಿ: ಪೆಟ್ರೋಲ್‌ ಮತ್ತು ಡೀಸೆಲ್‌ ದರ ಈಗ ವಿಮಾನಗಳ ಇಂಧನ ದರಕ್ಕಿಂತಲೂ ಹೆಚ್ಚಾಗಿದೆ.

    ಒಂದು ಲೀಟರ್‌ ಏವಿಯೇಷನ್‌ ಟರ್ಬೈನ್‌ ಇಂಧನ (ಎಟಿಎಫ್‌) ಬೆಲೆ 79 ರೂ. ಇದ್ದರೆ, ದೇಶಾದ್ಯಂತ ಪೆಟ್ರೋಲ್‌ ದರ 100ರ ಗಡಿ ದಾಟಿ 110ರ ಅಸುಪಾಸಿನಲ್ಲಿದೆ. ಪೆಟ್ರೋಲ್‌ ದರವು ವೈಮಾ​ನಿಕ ಇಂಧ​ನ​ಕ್ಕಿಂತಲೂ ಶೇ.33ರಷ್ಟು ಹೆಚ್ಚು ದುಬಾ​ರಿಯಾಗಿದೆ.

    ಸೋಮವಾರ ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಾಗಿಲ್ಲ. ಭಾನುವಾರ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು 35 ಪೈಸೆ ಏರಿಕೆ ಮಾಡಿತ್ತು.  ಇದನ್ನೂ ಓದಿ: ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌ ಅರೆಸ್ಟ್‌, ಬಿಡುಗಡೆ 

    ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 109.53 ರೂ. ಇದ್ದರೆ ಡೀಸೆಲ್‌ ದರ 100.37 ರೂ.ಗೆ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್‌ಗೆ 105.84 ರೂ. ಮತ್ತು ಡೀಸೆಲ್‌ಗೆ 94.57 ರೂ. ಇದೆ. ಮುಂಬೈನಲ್ಲಿ ಪೆಟ್ರೋಲ್‌ 111.77 ರೂ. ಡೀಸೆಲ್‌ 102.52 ರೂ.ಗೆ ಏರಿದೆ.

    ದೇಶ​ದಲ್ಲೇ ಅತಿ ದುಬಾರಿ ದರ ರಾಜಸ್ಥಾನದ ಗಂಗಾನಗರದಲ್ಲಿದೆ. ಇಲ್ಲಿ ಪೆಟ್ರೋಲ್‌ 117.86 ರೂ. ಮತ್ತು ಡೀಸೆಲ್‌ಗೆ 105.95 ರೂ. ಇದೆ.

    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ 7 ವರ್ಷದ ಬಳಿಕ ಭಾರೀ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆ ಒಂದು ಬ್ಯಾರೆಲ್‌ (158 ಲೀಟರ್‌) ಬ್ರೆಂಟ್‌ ತೈಲದ ಬೆಲೆ 73.51 ಡಾಲರ್‌(5,533 ರೂ.) ಇದ್ದರೆ ಈಗ ಇದು 84.8 ಡಾಲರ್‌ಗೆ 6,329 ರೂ.)  ಏರಿಕೆಯಾಗಿದೆ. ವಿಶ್ವದಲ್ಲಿ ಕೋವಿಡ್‌ ಕಡಿಮೆಯಾಗಿ ಆರ್ಥಿಕ ಚಟುವಟಿಕೆಗಳು ಆರಂಭಗೊಂಡಿದ್ದರೂ ಒಪೆಕ್‌ ರಾಷ್ಟ್ರಗಳು ತೈಲ ಉತ್ಪಾದನೆ ಹೆಚ್ಚಿಸದ ಪರಿಣಾಮ ಬೇಡಿಕೆ ಜಾಸ್ತಿಯಾಗಿ ಬೆಲೆ ಏರಿಕೆಯಾಗುತ್ತಿದೆ.  ಇದನ್ನೂ ಓದಿ: ಮುದ್ದೆಯಲ್ಲಿ ವಿಷ ಹಾಕಿದ ಬಾಲಕಿ – ತಂದೆ, ತಾಯಿ ಸೇರಿ ನಾಲ್ವರ ಹತ್ಯೆ

    ಒಂದು ಲೀಟರ್‌ ಪೆಟ್ರೋಲ್‌ ಮೇಲೆ 1 ವರ್ಷದ ಹಿಂದೆ 19.98 ರೂ. ಇದ್ದ ಅಬಕಾರಿ ಸುಂಕ 32.90 ರೂ.ಗೆ ಏರಿಕೆಯಾಗಿದೆ. ಡೀಸೆಲ್‌ ಮೇಲಿದ್ದ 15.83 ರೂ. ಅಬಕಾರಿ ಸುಂಕ 31.8 ರೂ.ಗೆ ಹೆಚ್ಚಳವಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಈ ಹಿಂದೆ ತಿಳಿಸಿದ್ದರು.

  • ಕೊರೊನಾ ಇದ್ದರೂ ಅಬಕಾರಿ ಇಲಾಖೆಯ ಟಾರ್ಗೆಟ್‌ ರೀಚ್‌!

    ಕೊರೊನಾ ಇದ್ದರೂ ಅಬಕಾರಿ ಇಲಾಖೆಯ ಟಾರ್ಗೆಟ್‌ ರೀಚ್‌!

    ಬೆಂಗಳೂರು: ಕೋವಿಡ್‌ 19 ನಿಂದ ಹಲವು ಸಮಸ್ಯೆ ಸೃಷ್ಟಿಯಾಗಿ ಆದಾಯಕ್ಕೆ ಸಮಸ್ಯೆ ಆಗಿದ್ದರೂ ಮದ್ಯ ಸರ್ಕಾರದ ಕೈ ಹಿಡಿದಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ನಿರೀಕ್ಷಿತ ಗುರಿಯನ್ನು ಸಾಧಿಸುವ ವಿಶ್ವಾಸವನ್ನು ಹೊಂದಿದೆ.

    ಹೌದು. 2020-21ರ ಸಾಲಿನಲ್ಲಿ ಅಬಕಾರಿ ಇಲಾಖೆಗೆ 22,700 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆಯ ಗುರಿಯನ್ನು ನಿಗದಿ ಪಡಿಸಲಾಗಿತ್ತು. ಈ ಪೈಕಿ ಫೆಬ್ರವರಿ ಅಂತ್ಯಕ್ಕೆ 20,900 ಕೋಟಿ ರಾಜಸ್ವ ಸಂಗ್ರಹವಾಗಿದ್ದು, ನಿಗದಿತ ಗುರಿಯನ್ನು ಸಾಧಿಸಬಹುದು ಎಂಬ ನಿರೀಕ್ಷೆಯನ್ನು ನಾವು ಹೊಂದಿದ್ದೇವೆ ಎಂದು ಯಡಿಯರೂಪ್ಪ ತಮ್ಮ ಬಜೆಟ್‌ ಭಾಷಣದಲ್ಲಿ ಹೇಳಿದ್ದಾರೆ.

    2021-22ನೇ ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ 24,580 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿ ಪಡಿಸಲಾಗಿದೆ.

  • ಮಾರ್ಚ್‌ ಮಧ್ಯದಲ್ಲಿ ತೈಲ ಬೆಲೆ ಇಳಿಕೆ ಸಾಧ್ಯತೆ

    ಮಾರ್ಚ್‌ ಮಧ್ಯದಲ್ಲಿ ತೈಲ ಬೆಲೆ ಇಳಿಕೆ ಸಾಧ್ಯತೆ

    ನವದೆಹಲಿ: ತೈಲ ಬೆಲೆ ದಿನೇ ದಿನೇ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಲು ಹಣಕಾಸು ಸಚಿವಾಲಯವು ಚಿಂತನೆ ನಡೆಸಿದ್ದು, ಮಾರ್ಚ್‌ ಮಧ್ಯದಲ್ಲಿ ಬೆಲೆ ಇಳಿಕೆಯ ಸಿಹಿ ಸುದ್ದಿ ಸಿಗಬಹುದು ಎಂದು ವರದಿಯಾಗಿದೆ.

    ತೈಲ ಬೆಲೆ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆಯೂ ಏರತೊಡಗಿದೆ. ಹೀಗಾಗಿ ಅಬಕಾರಿ ಸುಂಕವನ್ನು ಕಡಿತಗೊಳಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮೂವರು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ವಿಶ್ವದ ಮೂರನೇ ಅತಿದೊಡ್ಡ ಕಚ್ಚಾ ತೈಲ ಗ್ರಾಹಕ ದೇಶವಾಗಿರುವ ಭಾರತದಲ್ಲಿ ಪೆಟ್ರೋಲ್‌, ಡೀಸೆಲ್‌ ಮೇಲೆ ಶೇ.60 ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಕಳೆದ ವರ್ಷ ಕೋವಿಡ್‌ ಹಿನ್ನೆಲೆಯಲ್ಲಿ ತೈಲ ಬೆಲೆ ವಿಶ್ವಾದ್ಯಂತ ಇಳಿಕೆಯಾಗಿತ್ತು. ಆದರೆ ಭಾರತದಲ್ಲಿ ಅಬಕಾರಿ ಸುಂಕ ಹೆಚ್ಚಳ ಮಾಡಿದ್ದರಿಂದ ಬೆಲೆ ಇಳಿಕೆಯ ಲಾಭ ಗ್ರಾಹಕರಿಗೆ ಸಿಕ್ಕಿರಲಿಲ್ಲ. ಇದನ್ನೂ ಓದಿ: ನಾಗಾಲ್ಯಾಂಡ್‌ನಲ್ಲಿ ತೈಲದ ಮೇಲಿನ ತೆರಿಗೆ ಕಡಿತ – ಯಾವ ರಾಜ್ಯಗಳಲ್ಲಿ ಎಷ್ಟು ರೂ. ಇಳಿಕೆಯಾಗಿದೆ?

    ಈಗ ಒಪೆಕ್‌ ರಾಷ್ಟ್ರಗಳು ತೈಲ ಉತ್ಪಾದನೆ ಕಡಿತ ಮಾಡಿರುವ ಕಾರಣ ಬೇಡಿಕೆ ಹೆಚ್ಚಾಗಿದ್ದರೂ ಪೊರೈಕೆ ಕಡಿಮೆಯಾಗಿದೆ. ಈ ಕಾರಣದಿಂದ ತೈಲಗಳ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ ಆಗುತ್ತಿದೆ. ದೇಶದಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವಾಲಯ ಈಗ ಬೆಲೆ ಇಳಿಕೆ ಮಾಡುವ ನಿಟ್ಟಿನಲ್ಲಿ ಕೆಲವು ರಾಜ್ಯಗಳು, ತೈಲ ಕಂಪನಿಗಳು ಮತ್ತು ತೈಲ ಸಚಿವಾಲಯದೊಂದಿಗೆ ಸಮಾಲೋಚನೆ ಪ್ರಾರಂಭಿಸಿದೆ ಎಂದು ಮೂಲಗಳು ತಿಳಿಸಿವೆ.

    ತೈಲ ಬೆಲೆಗಳನ್ನು ಸ್ಥಿರವಾಗಿ ಇರಿಸಬಹುದಾದ ಮಾರ್ಗಗಳನ್ನು ನಾವು ಚರ್ಚಿಸುತ್ತಿದ್ದೇವೆ. ಮಾರ್ಚ್ ಮಧ್ಯದ ವೇಳೆಗೆ ಈ ಸಮಸ್ಯೆಯನ್ನು ಪರಿಹಾರವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

    ತೆರಿಗೆಗಳನ್ನು ಕಡಿತಗೊಳಿಸುವ ಮೊದಲು ತೈಲ ಬೆಲೆಗಳು ಸ್ಥಿರವಾಗಬೇಕು ಎಂದು ಸರ್ಕಾರ ಬಯಸಿದೆ. ಯಾಕೆಂದರೆ ಒಂದು ಬಾರಿ ಕಡಿತ ಮಾಡಿದ ಬಳಿಕ ಮತ್ತೆ ತೈಲ ಬೆಲೆ ಹೆಚ್ಚಾದರೆ ಮತ್ತೆ ತೆರಿಗೆ ಏರಿಕೆ ಮಾಡಲು ಸಾಧ್ಯವಿಲ್ಲ.

    ತೈಲ ಉತ್ಪಾದನೆ ಮಾಡುತ್ತಿರುವ ದೇಶಗಳ ಸಂಘಟನೆಯಾದ ಓಪೆಕ್‌ ಸಭೆ ಮಾರ್ಚ್‌ 4 ರಂದು ನಡೆಯಲಿದೆ. ಈ ವೇಳೆ ತೈಲ ಉತ್ಪಾದನೆ ಕುರಿತಂತೆ ಮಹತ್ವದ ನಿರ್ಧಾರ ಪ್ರಕಟವಾಗಲಿದೆ. ಒಪೆಕ್‌ ರಾಷ್ಟ್ರಗಳು ತೆಗೆದುಕೊಳ್ಳುವ ನಿರ್ಧಾರದ ಆಧಾರದ ಮೇಲೆ ಸರ್ಕಾರ ತೆರಿಗೆ ಕಡಿತ ಮಾಡುವ ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆಯಿದೆ.

    ಸರ್ಕಾರ ಮತ್ತು ರಾಜ್ಯಗಳು ಒಟ್ಟಾಗಿ ಸರ್ಕಾರದ ಅಂಕಿಅಂಶಗಳ ಪ್ರಕಾರ 2020 ರ ಮಾರ್ಚ್ 31ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಪೆಟ್ರೋಲಿಯಂ ವಲಯದಿಂದ ಸುಮಾರು 5.56 ಟ್ರಿಲಿಯನ್ ರೂ. ಆದಾಯವನ್ನು ಸಂಗ್ರಹಿಸಿವೆ.

    ಈ ಹಣಕಾಸು ವರ್ಷದ ಒಂಬತ್ತು ತಿಂಗಳು (ಏಪ್ರಿಲ್-ಡಿಸೆಂಬರ್ 2020) ಇಂಧನ ಬೇಡಿಕೆಯಲ್ಲಿ ಗಮನಾರ್ಹ ಕುಸಿತದ ಹೊರತಾಗಿಯೂ, ಸುಮಾರು 4.21 ಟ್ರಿಲಿಯನ್ ರೂ. ಆದಾಯ ಪೆಟ್ರೋಲಿಯಂ ವಲಯದಿಂದ ಸರ್ಕಾರಕ್ಕೆ ಬಂದಿದೆ.

    ಕೃಷಿ ಕಾಯ್ದೆ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಈಗ ತೈಲ ಬೆಲೆ ಏರಿಕೆ ವಿಚಾರದಲ್ಲೂ ಪ್ರತಿಭಟನೆ ಜೋರಾಗಿದೆ. ಈ ನಡುವೆ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಒಂದು ವೇಳೆ ಸರ್ಕಾರ ತೈಲದ ಮೇಲಿನ ತೆರಿಗೆ ಇಳಿಕೆ ಮಾಡದೇ ಇದ್ದರೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಹಿನ್ನಡೆಯಾಗುವ ಸಾಧ್ಯತೆಯಿದೆ.

    ಬೆಲೆ ಏರಿಕೆ ಯಾಕೆ?
    ಕೋವಿಡ್ 19 ಹಿನ್ನೆಲೆಯಲ್ಲಿ ಕಚ್ಚಾ ತೈಲ ರಫ್ತು ದೇಶಗಳ ಸಂಘಟನೆ(ಒಪೆಕ್) ರಾಷ್ಟ್ರಗಳು 2020ರಲ್ಲಿ ತೈಲ ಉತ್ಪಾದನೆಯನ್ನು ಕಡಿತಗೊಳಿಸಿತ್ತು. ಈಗ ವಿಶ್ವದ ಆರ್ಥಿಕತೆ ಮರಳುತ್ತಿದ್ದು ತೈಲ ಬೇಡಿಕೆ ಹೆಚ್ಚಾಗುತ್ತಿದೆ. ಆದರೆ ಒಪೆಕ್ ರಾಷ್ಟ್ರಗಳು ಈ ಹಿಂದೆ ಮಾಡಿಕೊಂಡ ಮತುಕತೆಯಂತೆಯೇ ಉತ್ಪಾದನೆ ಮಾಡುತ್ತಿದೆ. ಆದರಲ್ಲೂ ವಿಶ್ವದಲ್ಲಿ ಅತಿ ಹೆಚ್ಚು ತೈಲ ಉತ್ಪಾದಿಸುತ್ತಿರುವ ಸೌದಿ ಅರೆಬಿಯಾ ಪ್ರತಿ ದಿನ 1 ದಶಲಕ್ಷ ಬ್ಯಾರೆಲ್ ಕಚ್ಚಾ ತೈಲ ಉತ್ಪಾದನೆಯನ್ನು ಕಡಿಮೆ ಮಾಡಿದೆ. ಉತ್ಪಾದನೆ ಕಡಿಮೆ ಇರುವ ಕಾರಣ ಪೂರೈಕೆಯೂ ಕಡಿಮೆ ಆಗುತ್ತಿದೆ. ಆದರೆ ವಿವಿಧ ದೇಶಗಳಿಂದ ತೈಲ ಬೇಡಿಕೆ ಹೆಚ್ಚಾಗುತ್ತಿದೆ. ಪರಿಣಾಮ ಬ್ರೆಂಟ್ ಕಚ್ಚಾ ತೈಲದ ದರ ಏರಿಕೆ ಆಗುತ್ತಿದೆ.

     

    ರಾಜ್ಯ ಕೇಂದ್ರದ ಪಾಲು ಎಷ್ಟು?
    ತೈಲದಿಂದಲೇ ರಾಜ್ಯಗಳಿಗೆ ಹೆಚ್ಚಿನ ಆದಾಯ ಬರುತ್ತದೆ. ಈ ಕಾರಣಕ್ಕೆ ತೈಲವನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ರಾಜ್ಯಗಳು ಒಪ್ಪಿಗೆ ನೀಡುತ್ತಿಲ್ಲ. ಹೀಗಾಗಿ ಪೆಟ್ರೋಲ್‌-ಡೀಸೆಲ್‌ನ ತೆರಿಗೆ ಪಾಲಿನಲ್ಲಿ ಅಧಿಕ ಪಾಲು ರಾಜ್ಯಗಳಿಗೆ ಹೋಗುತ್ತದೆ.

    ಉದಾಹರಣೆಗೆ ಒಂದು ಲೀಟರ್‌ ಪೆಟ್ರೋಲ್‌ ಬೆಲೆ 90 ರೂ. ಇದ್ದರೆ ಇದರಲ್ಲಿ ಕೇಂದ್ರ ಸರಕಾರಕ್ಕೆ 32 ರೂ. ಅಬಕಾರಿ ಸುಂಕದ ರೂಪದಲ್ಲಿ ಸಿಗುತ್ತದೆ. ಸಿಕ್ಕಿದ ಹಣದಲ್ಲಿ ಶೇ.70ರಷ್ಟು ರಾಜ್ಯಗಳಿಗೆ ಮರು ಹಂಚಿಕೆಯಾಗುತ್ತದೆ. ಇದರಿಂದಾಗಿ ಕೇಂದ್ರ ಕೇಂದ್ರ ಸರ್ಕಾರಕ್ಕೆ 10 ರಿಂದ 13 ರೂ. ಮಾತ್ರ ಸಿಗುತ್ತದೆ. ರಾಜ್ಯಗಳಿಗೆ ವ್ಯಾಟ್‌ ಮತ್ತು ಕೇಂದ್ರೀಯ ಅಬಕಾರಿ ಸುಂಕದ ಪಾಲು ಸೇರಿ ಒಟ್ಟು 40-42 ರೂ. ತೆರಿಗೆ ಆದಾಯ ಸಿಗುತ್ತದೆ.