Tag: ಅಬಕಾರಿ

  • ರಾಯಚೂರಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ- ಕಲಬೆರಕೆ ಸೇಂದಿ ಜಪ್ತಿ

    ರಾಯಚೂರಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ- ಕಲಬೆರಕೆ ಸೇಂದಿ ಜಪ್ತಿ

    ರಾಯಚೂರು: ನಗರದ ಸಿಯತಲಾಬ್ ಮೇದಾರ್ ಓಣಿಯಲ್ಲಿ ಅಬಕಾರಿ ಪೊಲೀಸರು ದಾಳಿ ನಡೆಸಿ ದೊಡ್ಡ ಪ್ರಮಾಣದ ಸಿ.ಎಚ್ ಪೌಡರ್ ಹಾಗೂ ಸೇಂದಿ ತಯಾರಿಕೆಗೆ ಬಳಸುವ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

    ರಾಯಚೂರು ಅಬಕಾರಿ ಡಿಸಿ ಲಕ್ಷ್ಮಿ ನಾಯಕ, ಡಿಎಸ್‍ಪಿ ಹನುಮಂತ ಗುತ್ತೆದಾರ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಳಿ ವೇಳೆ ಕಲಬೆರಕೆ ಸೇಂದಿ ಸಮೇತ ಆರೋಪಿ ಕಿಶೋಲ್ ಲಾಲ್‍ನನ್ನು ಬಂಧಿಸಲಾಗಿದೆ.

    ಬಂಧಿತ ಆರೋಪಿ ಬಳಿ ಇದ್ದ 32 ಕೆಜಿ ಸಿಎಚ್ ಪೌಡರ್, 4 ಕೆಜಿ ವೈಟ್ ಫೆಸ್ಟ್, 10ಲೀ ಸೇಂದಿ ಸೇರಿ ಕಲಬೆರಿಕೆ ಸೇಂದಿ ತಯಾರಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ಹಾಗೂ ಸಿಎಚ್ ಪೌಡರ್ ಸಾಗಾಟಕ್ಕೆ ಬಳಕೆ ಮಾಡಿದ ಎರಡು ಮೊಪೆಡ್ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ರಾಯಚೂರು ಅಬಕಾರಿ ಉಪ ವಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 3 ದಿನ ಟ್ರಾಫಿಕ್ ಸಮಸ್ಯೆ ತಡ್ಕೊಳ್ಳಿ, 50 ವರ್ಷ ಕುಡಿಯುವ ನೀರಿನ ಸಮಸ್ಯೆ ಇರಲ್ಲ: ಡಿಕೆಶಿ

  • ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಗೆ ದೂರು

    ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಗೆ ದೂರು

    ಬೆಂಗಳೂರು: ಅಬಕಾರಿ ಸಚಿವ ಕೆ. ಗೋಪಾಲಯ್ಯ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಎಸಿಬಿಗೆ ದೂರು ನೀಡಿದೆ.

    ಇತ್ತೀಚೆಗೆ ಕೊಪ್ಪಳ ಅಬಕಾರಿ ಉಪ ಆಯುಕ್ತೆ ಸೆಲೆನಾ, ಮತ್ತು ಅಬಕಾರಿ ನಿರೀಕ್ಷಕ ಅಜಯ್ ಮಧ್ಯೆ ನಡೆದ ಫೋನ್  ಸಂಭಾಷಣೆ ವೈರಲ್ ಆಗಿತ್ತು. ಪ್ರತೀ ಜಿಲ್ಲೆಯಿಂದ 5 ಲಕ್ಷ ಹಣ ಸಂಗ್ರಹಿಸಿ ಸಚಿವರಿಗೆ ಕೊಡಬೇಕು. ಹಿರಿಯ ಅಧಿಕಾರಿಗಳು ಹೇಳಿದ್ದಾರೆ ಹಣ ಸಂಗ್ರಹಿಸಿ ಅಂತಾ ಸೆಲೆನಾ ಫೋನಿನಲ್ಲಿ ಮಾತನಾಡಿದ್ದರು. ಇದನ್ನೂ ಓದಿ: ಲಾಕ್‍ಡೌನ್‍ನಲ್ಲಿ ಅಬಕಾರಿ ಇಲಾಖೆಗೆ ಶೇ.10 ಲಾಭ ಹೆಚ್ಚಳ – ಗೋಪಾಲಯ್ಯ

    ಆಡಿಯೋ ವೈರಲ್ ಆದ ನಂತರ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಮಂತ್ರಿಗಳು ಕೂಡಿ ಮಾಡುತ್ತಿರುವ ಭ್ರಷ್ಟಾಚಾರ ಇದಾಗಿದೆ. ಇಲಾಖೆಯಲ್ಲಿ ಅಕ್ರಮವಾಗಿ ಹಣ ಮಾಡುವ ಕೆಲಸ ಮಾಡಲಾಗುತ್ತಿದೆ. ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ದೂರು ನೀಡಲಾಗಿದೆ.

  • ಸರ್ಕಾರದ ಅಕ್ರಮಗಳನ್ನು ಚರ್ಚೆ ಮಾಡಲು ಅಧಿವೇಶನ ಕರೆಯಿರಿ – ಎಚ್‍ಡಿಕೆ ಸವಾಲ್

    ಸರ್ಕಾರದ ಅಕ್ರಮಗಳನ್ನು ಚರ್ಚೆ ಮಾಡಲು ಅಧಿವೇಶನ ಕರೆಯಿರಿ – ಎಚ್‍ಡಿಕೆ ಸವಾಲ್

    ಬೆಂಗಳೂರು: 5 ಲಕ್ಷ ಸಚಿವರಿಗೆ ಕೊಡಬೇಕು ಎಂಬ ಕೊಪ್ಪಳ ಅಬಕಾರಿ ಡಿಸಿ ಹೇಳಿಕೆ ಕೊಟ್ಟಿದ್ದಾರೆ ಎಂಬ ಆಡಿಯೋ ವೈರಲ್ ಆರೋಪಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಸರ್ಕಾರವನ್ನ ಕಾಲೆಳೆದಿದ್ದಾರೆ. ಸರಣಿ ಟ್ವೀಟ್ ಮಾಡಿದ ಅವರು ಸರ್ಕಾರದ ಅಕ್ರಮಗಳನ್ನು ಚರ್ಚೆ ಮಾಡಲು ಅಧಿವೇಶನ ಕರೆಯಬೇಕು ಎಂದು ಸವಾಲ್ ಹಾಕಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ನೀರಾವರಿ ಇಲಾಖೆಯ 20,000 ಕೋಟಿ ಯೋಜನೆಯಲ್ಲಿ ಶೇ.10 ಕಿಕ್ ಬ್ಯಾಕ್ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ 5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆ. ಇದನ್ನೂ ಓದಿ: 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಿ, ಕಾಲೇಜು ತೆರೆಯಿರಿ – ತಜ್ಞರ ವರದಿಯಲ್ಲಿ ಏನಿದೆ?

    ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ನಿರತವಾಗಿದೆ. ಆಡಿಯೋ ಬಹಿರಂಗವಾಗುತ್ತಲೇ ಅಬಕಾರಿ ಇಲಾಖೆಯ ಮೂವರು ಇನ್ಸ್‍ಪೆಕ್ಟರ್ ಗಳನ್ನು  ಅಮಾನತು ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೊಟ್ಟಿರಬಹುದಾದವರಿಗೆ ಶಿಕ್ಷೆ ಕೊಟ್ಟ ಮೇಲೆ ಈಸ್ಕೋಂಡಿರಬಹುದಾದವರಿಗೆ ಶಿಕ್ಷೆ ಇಲ್ಲ ಏಕೆ? ಅಧಿಕಾರಿಗಳ ಮೇಲಿನ ಕ್ರಮ ಭ್ರಷ್ಟಾಚಾರಕ್ಕಾಗಿಯೋ ಅಥವಾ ಸರ್ಕಾರದ ಬಂಡವಾಳ ಬಯಲು ಮಾಡಿದರು ಎಂಬ ಕಾರಣಕ್ಕೋ?

    2 ಸಾವಿರ ಕೋಟಿ ಕಿಕ್ ಬ್ಯಾಕ್ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಈಗಾಗಲೇ ನಾನು ಆಗ್ರಹಿಸಿದ್ದೇನೆ. ಅದರಲ್ಲಿನ ಯಡಿಯೂರಪ್ಪ ಕುಟುಂಬದ ಪಾತ್ರದ ಬಗ್ಗೆ ತನಿಖೆಯಾಗಲಿ ಎಂದು ಹೇಳಿದ್ದೇನೆ. ಅದರ ಜೊತೆಗೆ ಅಬಕಾರಿ ಇಲಾಖೆಯಲ್ಲಿನ ಈ ಪ್ರಕರಣದ ಬಗ್ಗೆಯೂ ತನಿಖೆಯಾಗಬೇಕು. ಸರ್ಕಾರ ಈ ಪ್ರಕರಣವನ್ನು ಕೂಡಲೇ ಸೂಕ್ತ ತನಿಖಾ ಸಂಸ್ಥೆಗೆ ವಹಿಸಬೇಕು.

    ಕೋವಿಡ್ ಮತ್ತು ಬ್ಲಾಕ್ ಫಂಗಸ್ ಸ್ಥಿತಿಗತಿಗಳು, ಕೈಗೊಂಡ ಕ್ರಮಗಳು, ಕೊಟ್ಟ ಪರಿಹಾರ, ಅಕ್ರಮ ಆರೋಪಗಳ ಕುರಿತು ಚರ್ಚಿಸಲು ಅಧಿವೇಶನ ಕರೆಯಬೇಕೆಂದು ನಾನು ಆಗ್ರಹಿಸಿದ್ದೇನೆ. ಅದರ ಬಗ್ಗೆ ಸಿಎಂ ಈ ವರೆಗೆ ಮಾತನಾಡಿಲ್ಲ. ಪ್ರತಿಪಕ್ಷಗಳ ಮುಂದೆ ನಿಲ್ಲಲು ಅವರಿಗೆ ಭಯವಿದ್ದಂತೆ ಕಾಣುತ್ತಿದೆ. ಭಯವಿಲ್ಲದೇ ಹೋದರೆ ಅಧಿವೇಶನ ಕರೆಯಬೇಕು ಅಂತ ಸವಾಲ್ ಹಾಕಿದ್ದಾರೆ.

  • ಕಳ್ಳಬಟ್ಟಿ ಅಡ್ಡೆ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ

    ಕಳ್ಳಬಟ್ಟಿ ಅಡ್ಡೆ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ

    ಶಿವಮೊಗ್ಗ: ಅಕ್ರಮವಾಗಿ ಕಳ್ಳಬಟ್ಟಿ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಳವಳ್ಳಿ ತಾಂಡದ ಮಲ್ಲಪ್ಪನಕಟ್ಟೆ ಬಳಿ ನಡೆದಿದೆ.

    ಮಲ್ಲಪ್ಪನಕಟ್ಟೆ ಬಳಿಯ ದಡದಲ್ಲಿ ಗುಂಪೊಂದು ಕಳ್ಳಬಟ್ಟಿ ತಯಾರಿಸುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆದಿದೆ. ಅಬಕಾರಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಕಳ್ಳಬಟ್ಟಿ ತಯಾರಿಸುತ್ತಿದ್ದ ತಂಡ ಸ್ಥಳದಿಂದ ಪರಾರಿಯಾಗಿದೆ. ಇದನ್ನು ಓದಿ: ರೈತರಿಂದ ಹಣ್ಣುಗಳನ್ನು ಖರೀದಿಸಿ ಸೋಂಕಿತರಿಗೆ ನೀಡಿದ ಉದ್ಯಮಿ

    ಕಳ್ಳಬಟ್ಟಿ ತಯಾರಿಸುತ್ತಿದ್ದವರಲ್ಲಿ ಮಳವಳ್ಳಿ ತಾಂಡಾದ ಬೀರನಾಯ್ಕ ಹಾಗೂ ಆತನ ತಾಯಿ ಲೋಕಿಬಾಯಿ ಎಂಬವರು ಪ್ರಮುಖರಾಗಿದ್ದು ಅವರು ಸಹ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದಾಳಿ ವೇಳೆ ಕಳ್ಳಬಟ್ಟಿ ತಯಾರಿಸಲು ಇಟ್ಟಿದ್ದ 135 ಲೀಟರ್ ಬೆಲ್ಲದ ಕೊಳೆ ಹಾಗೂ ಪರಿಕರವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ತಯಾರಿಸಿದ್ದ 9 ಲೀಟರ್ ಕಳ್ಳಬಟ್ಟಿಯನ್ನು ಜಪ್ತಿ ಮಾಡಿದ್ದಾರೆ. ದಾಳಿಯಲ್ಲಿ ಅಬಕಾರಿ ನಿರೀಕ್ಷಕ ಡಿ.ಎನ್.ಹನುಮಂತಪ್ಪ, ಉಪ ನಿರೀಕ್ಷಕ ಪಿ.ಜೆ.ಜಾನ್ ಸೇರಿದಂತೆ ಸಿಬ್ಬಂದಿ ಭಾಗಿಯಾಗಿದ್ದರು. ಇದನ್ನು ಓದಿ: ಸೋಂಕು ನಿಯಂತ್ರಣಕ್ಕೆ ಸರ್ಕಾರದಿಂದ ಬೇಕಾದ ಎಲ್ಲಾ ಸಹಕಾರ ಸಿಗುತ್ತದೆ: ಅಶ್ವತ್ ನಾರಾಯಣ್

  • ಅಬಕಾರಿ ಪೊಲೀಸರ ದಾಳಿ – ಲಕ್ಷಾಂತರ ರೂ.ಮೌಲ್ಯದ ಮಾದಕ ವಸ್ತುಗಳು ಜಪ್ತಿ

    ಅಬಕಾರಿ ಪೊಲೀಸರ ದಾಳಿ – ಲಕ್ಷಾಂತರ ರೂ.ಮೌಲ್ಯದ ಮಾದಕ ವಸ್ತುಗಳು ಜಪ್ತಿ

    ರಾಯಚೂರು: ಜಿಲ್ಲೆಯ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತು ಜಪ್ತಿಮಾಡಿ, ಇಬ್ಬರು ಆರೋಪಿಗಳನ್ನ ಬಂಧಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

    ಮೂರು ಪ್ರತ್ಯೇಕ ಪ್ರಕರಣದಲ್ಲಿ ಕಳ್ಳಭಟ್ಟಿ ಸಾರಾಯಿ, ಅಕ್ರಮ ಮದ್ಯ ಹಾಗು ಗಾಂಜಾ ಜಪ್ತಿ ಮಾಡಲಾಗಿದೆ. ದೇವದುರ್ಗ ತಾಲೂಕಿನ ನಾರಬಂಡಿ ತಾಂಡಾದಲ್ಲಿ ಕಳ್ಳಭಟ್ಟಿ ತಯಾರಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಅಬಕಾರಿ ಪೊಲೀಸರು 15 ಲೀಟರ್ ಕಳ್ಳಭಟ್ಟಿ ಸಾರಾಯಿ ಹಾಗೂ ಮೂರು ಬೈಕ್ ಜಪ್ತಿ ಮಾಡಲಾಗಿದೆ. ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

    ರಾಯಚೂರು ನಗರದ ಅಶೋಕ ನಗರದಲ್ಲಿ ಚಿಕ್ಕ ಪ್ಯಾಕೇಟ್‍ಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಗಾಂಜಾ ಸಹಿತ ಬಂಧಿಸಲಾಗಿದೆ. 150 ಪ್ಯಾಕೇಟ್ ನಲ್ಲಿದ್ದ 1 ಕೆಜಿ ಗಾಂಜಾ ಜಪ್ತಿ ಮಾಡಲಾಗಿದ್ದು, ಆರೋಪಿ ಅಹ್ಮದ್ ಹುಸೇನ್‍ನನ್ನು ಬಂಧಿಸಲಾಗಿದೆ.

    ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣದಲ್ಲಿ ಬೈಕ್‍ನಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿ ಗುಂಜಳ್ಳಿ ಕ್ಯಾಂಪ್‍ನ ಹನುಮಂತನನ್ನ ಬಂಧಿಸಲಾಗಿದ್ದು, 13.590 ಲೀಟರ್ ಮದ್ಯ ಜಪ್ತಿಮಾಡಲಾಗಿದೆ. ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

  • ಬಡವರಿಗೆ ಸಬ್ಸಿಡಿ ದರದಲ್ಲಿ ಮದ್ಯ ಕೊಡ್ತೀವಿ – ಅಬಕಾರಿ ಸಚಿವ

    ಬಡವರಿಗೆ ಸಬ್ಸಿಡಿ ದರದಲ್ಲಿ ಮದ್ಯ ಕೊಡ್ತೀವಿ – ಅಬಕಾರಿ ಸಚಿವ

    ಬೆಂಗಳೂರು: ಮನೆ ಬಾಗಿಲಿಗೆ ಮದ್ಯ ಡೆಲಿವರಿ ಮಾಡ್ತೀನಿ ಎಂದು ವಿವಾದಕ್ಕೆ ಗುರಿಯಾಗಿದ್ದ ರಾಜ್ಯದ ಅಬಕಾರಿ ಸಚಿವ ಈಗ ಮತ್ತೊಂದು ವಿವಾದಕ್ಕೆ ಗುರಿಯಾಗ್ತಿದ್ದಾರೆ. ಯಡಿಯೂರಪ್ಪ ಸರ್ಕಾರದಲ್ಲಿರುವ ಅಬಕಾರಿ ಸಚಿವ ನಾಗೇಶ್ ವರ್ಷದ ಕಡೆ ದಿನ ಮತ್ತೊಂದು ವಿವಾದಾತ್ಮಕ ಹೆಜ್ಜೆ ಇಟ್ಟಿದ್ದಾರೆ. ಬಡವರಿಗೆ ಮದ್ಯವನ್ನು ಸಬ್ಸಿಡಿ ದರದಲ್ಲಿ ಸರ್ಕಾರ ಕೊಡಲು ಚಿಂತಿಸಿದೆ ಎಂದು ಹೇಳಿದ್ದಾರೆ.

    ವಿಕಾಸಸೌಧದಲ್ಲಿ ಮಾತನಾಡಿದ ಅವರು, ಬಡ ಜನರು ಹೆಚ್ಚು ಬಳಕೆ ಮಾಡುವ ಕಡಿಮೆ ದರದ ಮದ್ಯವನ್ನು ಸಬ್ಸಿಡಿ ದರದಲ್ಲಿ ಕೊಡಬೇಕಂದು ಸರ್ಕಾರದ ಚಿಂತನೆ ಇದೆ. ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಮದ್ಯ ಸರಬರಾಜು ಮಾಡುವ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.

    ಅಂದಹಾಗೆ ನಾಗೇಶ್ ಹೇಳಿಕೆ ವೈಯಕ್ತಿಕವಾಗಿ ಕೊಟ್ಟಿರೋದಾ? ಸರ್ಕಾರ ಮಟ್ಟದಲ್ಲಿ ನಡೆದಿರುವ ಬೆಳವಣಿಗೆನಾ ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲ. ಏಕೆಂದರೆ ಈ ಹಿಂದೆ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡುತ್ತೇವೆ, ಹೋಮ್ ಡೆಲಿವರಿ ಇದೆ ಎಂದಿದ್ದರು.

    ನಾಗೇಶ್ ಹೋಮ್ ಡೆಲಿವರಿ ಹೇಳಿಕೆ ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾಗಿತ್ತು. ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಮಧ್ಯಪ್ರವೇಶ ಮಾಡಿ ಹೋಮ್ ಡೆಲಿವರಿ ಚಿಂತನೆ ಇಲ್ಲ ಎಂದು ಹೇಳಿ ವಿವಾದ ತಿಳಿಗೊಳಿಸಿದ್ದರು. ಈಗ ಮತ್ತೆ ಸಬ್ಸಿಡಿ ದರದಲ್ಲಿ ಮದ್ಯ ನೀಡುತ್ತೇವೆ ಎನ್ನುವ ಹೇಳಿಕೆ ವಿವಾದಕ್ಕೆ ತಿರುಗಿದ್ದು, ಯಡಿಯೂರಪ್ಪ ಅಬಕಾರಿ ಸಚಿವರ ಚಿಂತನೆಗೆ ಓಕೆ ಅಂತಾರಾ? ತಿರಸ್ಕರಿಸುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

  • ಕೊರಿಯರ್ ಆಫೀಸ್‍ನಲ್ಲಿ ಸಿಕ್ತು 200 ಕೋಟಿ ಮೌಲ್ಯದ ಡ್ರಗ್ಸ್!

    ಕೊರಿಯರ್ ಆಫೀಸ್‍ನಲ್ಲಿ ಸಿಕ್ತು 200 ಕೋಟಿ ಮೌಲ್ಯದ ಡ್ರಗ್ಸ್!

    ತಿರುವನಂತಪುರಂ: ಡ್ರಗ್ಸ್ ನಿಗ್ರಹ ದಳ ಹಾಗೂ ಅಬಕಾರಿ ಇಲಾಖೆಯ ಜಂಟಿ ಕಾರ್ಯಾಚರಣೆ ನಡೆಸಿ ಸುಮಾರು 200 ಕೋಟಿ ರೂಪಾಯಿ ಮೌಲ್ಯದ 32 ಕೆ.ಜಿ. ಡ್ರಗ್ಸ್ ಅನ್ನು ಕೊಚ್ಚಿಯ ಕೊರಿಯರ್ ಸೆಂಟರ್ ನಲ್ಲಿ ವಶಪಡಿಸಿಕೊಂಡಿದೆ.

    ಖಚಿತ ಮಾಹಿತಿ ಆಧರಿಸಿ ಕೇರಳದ ಮಾದಕ ದ್ರವ್ಯ ನಿಗ್ರಹ ಪಡೆ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಶನಿವಾರ ಕೊಚ್ಚಿಯ ಖಾಸಗಿ ಕೊರಿಯರ್ ಸೆಂಟರ್ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಸುಮಾರು 200 ಕೋಟಿ ರೂಪಾಯಿ ಮೌಲ್ಯದ 32 ಕೆಜಿ ಮಾದಕ ದ್ರವ್ಯದ 64 ಪ್ಯಾಕೆಟ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

    ಡ್ರಗ್ಸ್ ದಂಧೆಕೋರರು ಪ್ಯಾಕೆಟ್‍ಗಳನ್ನು ಬಟ್ಟೆಯಲ್ಲಿ ಸುತ್ತಿ ಬಾಕ್ಸ್‍ಗಳಲ್ಲಿ ಬಚ್ಚಿಟ್ಟಿದ್ದರು. ಅಲ್ಲದೇ ಸಾಗಾಣಿಕೆಯ ಹಿಂದೆ ಕೊರಿಯರ್ ಸೆಂಟರ್‍ನ ಸಿಬ್ಬಂದಿಗಳು ಭಾಗಿಯಾಗಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ ಎಂದು ಎರ್ನಾಕುಲಂನ ವಿಭಾಗೀಯ ಉಪ ಅಬಕಾರಿ ಆಯುಕ್ತ ಎ.ಎಸ್.ರಂಜಿತ್ ಹೇಳಿದ್ದಾರೆ.

    ಅಬಕಾರಿ ಆಯುಕ್ತ ರಿಶಿ ರಾಜ್ ಸಿಂಗ್ ಮಾತನಾಡಿ, ಡ್ರಗ್ಸ್ ದಂಧೆಕೋರರು ಅಕ್ರಮವಾಗಿ ಮಾದಕ ವಸ್ತುಗಳನ್ನು ವಿದೇಶಕ್ಕೆ ರಫ್ತು ಮಾಡುವ ಯೋಜನೆಯನ್ನು ಹೊಂದಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ಭಾರೀ ಪ್ರಮಾಣದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದೇವೆ. ಅಲ್ಲದೇ ದಂಧೆಕೋರರು ಯಾವ ರೀತಿ ಇವುಗಳನ್ನು ರಫ್ತು ಮಾಡುತ್ತಿದ್ದರು ಎನ್ನುವುದು ವಿಚಾರಣೆ ವೇಳೆ ತಿಳಿಯಲಿದೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • MRPಯಲ್ಲಿ ಮದ್ಯ ಮಾರಾಟ ಮಾಡದ್ದಕ್ಕೆ ಕೊಪ್ಪಳದಲ್ಲಿ ಬಾರ್ ಮಾಲೀಕರು, ಗ್ರಾಹಕರ ನಡ್ವೆ ಜಗಳ

    MRPಯಲ್ಲಿ ಮದ್ಯ ಮಾರಾಟ ಮಾಡದ್ದಕ್ಕೆ ಕೊಪ್ಪಳದಲ್ಲಿ ಬಾರ್ ಮಾಲೀಕರು, ಗ್ರಾಹಕರ ನಡ್ವೆ ಜಗಳ

    ಕೊಪ್ಪಳ: ಮದ್ಯವನ್ನ ಎಂಆರ್ ಪಿ ಬೆಲೆಯಲ್ಲಿ ಮಾರಾಟ ಮಾಡೋದಕ್ಕೆ ಬಾರ್ ಮಾಲೀಕರು ಹಾಗೂ ಗ್ರಾಹಕರ ನಡುವೆ ವಾಗ್ವಾದ ನಡೆದಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಕೊಪ್ಪಳದ ಗಂಗಾವತಿಯಲ್ಲಿ ಸಿಎಲ್ 2 ಬಾರ್ ನಲ್ಲೇ ಪ್ರತಿ ಮದ್ಯದ ಪೌಚ್ ಮೇಲೆ 20 ರಿಂದ 30 ರೂಪಾಯಿ ಹೆಚ್ಚುವರಿ ಹಣ ಪಡೆಯುತ್ತಿರೋ ಬಾರ್‍ಗಳ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪಬ್ಲಿಕ್ ಟಿವಿ ಕೂಡಾ ಸಾಕಷ್ಟು ವರದಿ ಮಾಡಿದರೂ ಅಬಕಾರಿ ಇಲಾಖೆ ಮಾತ್ರ ಕ್ರಮಕ್ಕೆ ಮುಂದಾಗಿಲ್ಲ.

    ಗಂಗಾವತಿ ತಾಲೂಕಿನಲ್ಲಿ ಶಾಸಕ ಇಕ್ಬಾಲ್ ಅನ್ಸಾರಿ ಅವರ ಸಿಎಲ್ 2 ಅಂಗಡಿಗಳಿವೆ. ಹಗಲುದರೋಡೆ ಮಾಡುತ್ತಿರೋ ಬಾರ್ ಗಳ ವಿರುದ್ಧ ಯಾವೊಬ್ಬ ಅಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ. ಮದ್ಯಪ್ರಿಯರು ಈ ವಿಚಾರವನ್ನು ಸಾಕಷ್ಟು ಬಾರಿ ಹೇಳಿದರೂ ಯಾರು ತಲೆಯೇ ಕೆಡಿಸಿಕೊಂಡಿಲ್ಲ ಗ್ರಾಹಕ ರಮೇಶ್ ತಿಳಿಸಿದ್ದಾರೆ.

    ಲಿಗಲ್ ಮೆಟ್ರೋಲಜಿ ಕಾಯ್ದೆ ಏನು ಹೇಳುತ್ತೆ?
    ಪ್ಯಾಕೇಜ್ಡ್ ಉತ್ಪನ್ನಗಳನ್ನ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಲೀಗಲ್ ಮೆಟ್ರೋಲಜಿ ಕಾಯ್ದೆ ಪ್ರಕಾರ ಅಪರಾಧ. ಯಾವುದೇ ವಸ್ತುವನ್ನು ಪೇಪರ್ ನಲ್ಲಿ ಪ್ಯಾಕ್ ಮಾಡಿದ್ದರೂ ಕಾಯ್ದೆ ವ್ಯಾಪ್ತಿಗೆ ಒಳಪಡುತ್ತದೆ. ಕಡ್ಡಾಯವಾಗಿ ಪೊಟ್ಟಣ ಸಾಮಗ್ರಿ ನಿಯಮಾವಳಿಗಳನ್ನು ಪಾಲಿಸಿರಬೇಕು. ವಸ್ತುಗಳ ದರ ಹಾಗೂ ವಿಳಾಸವನ್ನು ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ. ಇದನ್ನು ಉಲ್ಲಂಘಿಸಿದರೆ ಮಾರಾಟಗಾರರ ಮೇಲೆ ಸ್ಥಳದಲ್ಲೇ ದಂಡ ವಿಧಿಸಲು ಅವಕಾಶವಿದೆ. ಕಾನೂನು ಮಾಪನಶಾಸ್ತ್ರ ಇಲಾಖೆ ವ್ಯಾಪ್ತಿಗೆ ಎಲ್ಲ ಅಂಗಡಿಗಳು, ಪೆಟ್ರೋಲ್ ಬಂಕ್, ಸೀಮೆಎಣ್ಣೆ ಮಾರಾಟಗಾರರು, ಬಟ್ಟೆ ಅಂಗಡಿಗಳು, ಪೊಟ್ಟಣ ತಯಾರಿಕಾ ಉದ್ಯಮಗಳು ಒಳಪಡುತ್ತದೆ.

    ದಂಡ ಎಷ್ಟು?
    ಯಾವುದೇ ಪ್ರೀ ಪ್ಯಾಕೇಜ್ಡ್ ಉತ್ಪನ್ನದ ಮೇಲೆ ನಮೂದಿಸಿರುವುದಕ್ಕೆ ಬದ್ಧವಾಗಿರದೆ ಅದನ್ನ ಮಾರಾಟ, ವಿತರಣೆ ಅಥವಾ ಡೆಲಿವರಿ ಮಾಡುವಾಗ ಸಿಕ್ಕಿಬಿದ್ದರೆ ಮೊದಲನೇ ಅಪರಾಧಕ್ಕಾಗಿ 25 ಸಾವಿರ ರೂ. ದಂಡ ಹಾಕುವ ಮೂಲಕ ಶಿಕ್ಷಿಸಲಾಗುತ್ತದೆ ಎಂದು ಲೀಗಲ್ ಮೆಟ್ರೊಲಜಿ ಕಾಯ್ದೆಯ ಸೆಕ್ಷನ್ 36 ಹೇಳುತ್ತದೆ. ಎರಡನೇ ಅಪರಾಧಕ್ಕೆ 50 ಸಾವಿರ ರೂ. ಹಾಗೂ ನಂತರದ ಅಪರಾಧಗಳಿಗೆ 1 ಲಕ್ಷ ರೂ ದಂಡ ಅಥವಾ 1 ವರ್ಷ ಜೈಲು ಶಿಕ್ಷೆ ಅಥವಾ ಎರಡೂ ಶಿಕ್ಷೆ ವಿಧಿಸಲಾಗುತ್ತದೆ. ಇದನ್ನೂ ಓದಿ: ಕೊಪ್ಪಳದಲ್ಲಿ ಶಾಸಕ ಇಕ್ಬಾಲ್ ಅನ್ಸಾರಿ ಮದ್ಯಕೋಟೆ?- ಇಲ್ಲಿ ಎಂಆರ್‍ಪಿಗಿಂತ ದುಪ್ಪಟ್ಟು ವಸೂಲಿ