Tag: ಅಬು ಸಲೇಂ

  • ಪೋರ್ಚುಗಲ್‌ಗೆ ನೀಡಿದ ವಾಗ್ದಾನದಂತೆ ಅಬು ಸಲೇಂನನ್ನು ಬಿಡುಗಡೆ ಮಾಡಿ – ಕೇಂದ್ರಕ್ಕೆ ಸುಪ್ರೀಂ

    ಪೋರ್ಚುಗಲ್‌ಗೆ ನೀಡಿದ ವಾಗ್ದಾನದಂತೆ ಅಬು ಸಲೇಂನನ್ನು ಬಿಡುಗಡೆ ಮಾಡಿ – ಕೇಂದ್ರಕ್ಕೆ ಸುಪ್ರೀಂ

    ನವದೆಹಲಿ: 1993ರ ಮುಂಬೈ ಬಾಂಬ್‌ ಸ್ಫೋಟ ಪ್ರಕರಣದ ದೋಷಿ ಗ್ಯಾಂಗ್‌ಸ್ಟರ್‌ ಅಬು ಸಲೇಂ 25 ವರ್ಷ ಜೈಲು ಶಿಕ್ಷೆ ಪೂರ್ಣಗೊಂಡ ಬಳಿಕ ಬಿಡುಗಡೆ ಮಾಡಬೇಕು ಎಂದು ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಹೇಳಿದೆ.

    2002 ರಲ್ಲಿ ಪೋರ್ಚುಗಲ್‌ ಸರ್ಕಾರಕ್ಕೆ ನೀಡಿದ ವಾಗ್ಧಾನಕ್ಕೆ ಗೌರವ ನೀಡಬೇಕು. ವಾಗ್ದಾನ ನೀಡಿದಂತೆ 25 ವರ್ಷಗಳ ಜೈಲು ಶಿಕ್ಷೆಯ ಅವಧಿ ಪೂರ್ಣಗೊಂಡ ಬಳಿಕ ಬಿಡುಗಡೆ ಮಾಡಬೇಕು ಎಂದು ನ್ಯಾ. ಎಸ್‌.ಕೆ.ಕೌಲ್‌ ಮತ್ತು ಎಂಎಂ ಸುಂದರೇಶ್‌ ಅವರಿದ್ದ ಪೀಠ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

    ಶಿಕ್ಷೆ ಮುಗಿದ 1ತಿಂಗಳ ಒಳಗಡೆ ಸಂಬಂಧಿಸಿದ ದಾಖಲೆಗಳನ್ನು ಕಳುಹಿಸಬೇಕು ಎಂದು ಕೋರ್ಟ್‌ ಹೇಳಿದೆ.

    ತನ್ನ ಕಕ್ಷಿದಾರರ ಶಿಕ್ಷೆ ಅವಧಿಯನ್ನು ಯಾವುದೇ ಕಾರಣಕ್ಕೂ ವಿಸ್ತರಿಸಬಾರದು ಎಂದು ಸಲೇಂ ಪರ ವಕೀಲರು ಕೋರ್ಟ್‌ನಲ್ಲಿ ವಾದಿಸಿದ್ದರು. ಈ ವಾದವನ್ನು ಕೋರ್ಟ್‌ ಪುರಸ್ಕರಿಸಿದೆ. ಆದರೆ ತನ್ನ ಹಸ್ತಾಂತರವನ್ನು ರದ್ದುಗೊಳಿಸುವಂತೆ ಕೋರಿ ಸಲೇಂ ಮಾಡಿದ ಮನವಿಯನ್ನು ಕೋರ್ಟ್‌ ವಜಾಗೊಳಿಸಿದೆ.

    ಮುಂಬೈ ಮೂಲದ ಬಿಲ್ಡರ್‌ ಪ್ರದೀಪ್‌ ಜೈನ್‌ ಮತ್ತು ಚಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಟಾಡಾ ನ್ಯಾಯಾಲಯ 2015ರ ಫೆ. 25 ರಂದು ಸಲೇಂಗೆ ಜೀವಾವಾಧಿ ಶಿಕ್ಷೆ ವಿಧಿಸಿತ್ತು. ಇದನ್ನೂ ಓದಿ: ಒಂದೇ ಆಟೋದಲ್ಲಿ 27 ಮಂದಿ ಪ್ರಯಾಣ- ದಿಗ್ಭ್ರಮೆಗೊಂಡ ಪೊಲೀಸರು

    ಭಾರತಕ್ಕೆ ಹಸ್ತಾಂತರಿಸುವಾಗ ತನ್ನ ಶಿಕ್ಷೆಯ ಅವಧಿಯು 25 ವರ್ಷ ಮೀರುವುದಿಲ್ಲ ಎಂದು ಕೇಂದ್ರ ಸರ್ಕಾರ ಪೋರ್ಚುಗಲ್‌ಗೆ ತಿಳಿಸಿತ್ತು. ಈ ವಾಗ್ದಾನವನ್ನು ಅಂದಿನ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ನೀಡಿದ್ದರು ಎಂದು ಸಲೇಂ ವಾದಿಸಿದ್ದ.

    2002ರಲ್ಲಿ ಗೆಳತಿ ಚಿತ್ರನಟಿ ಮೋನಿಕಾ ಬೇಡಿ ಜೊತೆ ಪೋರ್ಚುಗಲ್‌ನ ಲಿಸ್ಬನ್‌ನಲ್ಲಿ ಅಬು ಸಲೇಂನನ್ನು ಬಂಧಿಸಲಾಗಿತ್ತು. ಹಲವು ಸುತ್ತಿನ ಕಾನೂನು ಸಮರದ ಬಳಿಕ ಅಬು ಸಲೇಂನನ್ನು ಪೋರ್ಚುಗಲ್‌ 2005ರಲ್ಲಿ ಭಾರತಕ್ಕೆ ಹಸ್ತಾಂತರಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ನ್ಯಾಯಾಂಗಕ್ಕೆ ಉಪದೇಶ ಮಾಡಲು ಬರಬೇಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

    ನ್ಯಾಯಾಂಗಕ್ಕೆ ಉಪದೇಶ ಮಾಡಲು ಬರಬೇಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

    ನವದೆಹಲಿ: ತನಗೆ ವಿಧಿಸಿರುವ ಜೈಲು ಶಿಕ್ಷೆ ವಿರುದ್ಧ ಪಾತಕಿ ಅಬು ಸಲೇಂ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ಕೇಂದ್ರ ಗೃಹ ಸಚಿವಾಲಯ ತಳೆದಿರುವ ನಿಲುವಿಗೆ ಸುಪ್ರೀಂ ಕೋರ್ಟ್‌ ತೀಕ್ಷ್ಣ ಪದಗಳಿಂದ ತಿರುಗೇಟು ನೀಡಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಿರುವ ಕೇಂದ್ರದ ವಿರುದ್ಧ ಸುಪ್ರೀಂ ಹರಿಹಾಯ್ದಿದೆ. ಇದನ್ನೂ ಓದಿ: ಬುಲ್ಡೋಜರ್‌ ಕಾರ್ಯಾಚರಣೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ಸುಪ್ರೀಂ ಕೋರ್ಟ್

    ನ್ಯಾಯಾಂಗಕ್ಕೆ ಉಪನ್ಯಾಸ ನೀಡಬೇಡಿ. ನೀವು ನಿರ್ಧರಿಸಬೇಕಾದ ಯಾವುದೇ ಪ್ರಕರಣದ ಬಗ್ಗೆ ನಿರ್ಧಾರ ಕೈಗೊಳ್ಳಲು ನಮಗೆ ಹೇಳಿದಾಗ ನಾವು ಅದನ್ನು ದಯೆಯಿಂದ ತೆಗೆದುಕೊಳ್ಳಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಎಸ್‌.ಕೆ.ಕೌಲ್‌ ಅವರು ಕೇಂದ್ರ ಗೃಹ ಸಚಿವಾಲಯವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಲು ನಮಗೆ ಹೇಳಲು ಗೃಹ ಸಚಿವಾಲಯದ ಕಾರ್ಯದರ್ಶಿ ಯಾರು ಎಂದು ನ್ಯಾಯಮೂರ್ತಿ ಖಾರವಾಗಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 30 ಲಕ್ಷದ ಚಿನ್ನವನ್ನು ಗುದನಾಳ, ವಿಗ್‌ನಲ್ಲಿ ಬಚ್ಚಿಟ್ಟುಕೊಂಡಿದ್ದ ಕಿಲಾಡಿ ಕಳ್ಳನ ಬಂಧನ

    ಗೃಹ ಸಚಿವಾಲಯದ ಅಫಿಡವಿಟ್‌ನಲ್ಲಿರುವ ‘ಸೂಕ್ತ ಸಮಯದಲ್ಲಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂಬ ಮಾತನ್ನು ನಾವು ಒಪ್ಪುವುದಿಲ್ಲ ಎಂದು ತಿಳಿಸಿದ್ದಾರೆ. ಗೃಹ ಸಚಿವಾಲಯವು ತನ್ನ ಅಫಿಡವಿಟ್‌ನಲ್ಲಿ, ಸರ್ಕಾರವು ನಿರ್ಧಾರ ತೆಗೆದುಕೊಳ್ಳಲು ಇದು ಸೂಕ್ತ ಸಮಯವಲ್ಲ. ಸುಪ್ರೀಂ ಕೋರ್ಟ್ ನಿರ್ಧರಿಸಬಹುದು ಎಂದು ಹೇಳಿದೆ.

    ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ.ಎಂ.ಸುಂದ್ರೇಶ್ ಅವರು 1993ರ ಬಾಂಬೆ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿರುವ ಅಬು ಸಲೇಂ ಅರ್ಜಿ ವಿಚಾರಣೆ ನಡೆಸಿದರು.

  • ಭೂಗತ ಪಾತಕಿ ಅಬುಸಲೇಂನಿಂದ ಸಂಜು ಚಿತ್ರಕ್ಕೆ ಲೀಗಲ್ ನೋಟಿಸ್!

    ಭೂಗತ ಪಾತಕಿ ಅಬುಸಲೇಂನಿಂದ ಸಂಜು ಚಿತ್ರಕ್ಕೆ ಲೀಗಲ್ ನೋಟಿಸ್!

    ಮುಂಬೈ: ಸಂಜು ಸಿನೆಮಾದಲ್ಲಿ ಅಕ್ರಮ ಶಸ್ತ್ರಾಸ್ತ್ರ ಪೂರೈಕೆ ದೃಶ್ಯದಲ್ಲಿ ಕುಖ್ಯಾತ ಭೂಗತ ಪಾತಕಿ ಅಬು ಸಲೇಂನನ್ನು ತೋರಿಸಿದ್ದಕ್ಕಾಗಿ, ಅಬು ಸಲೇಂ ಪರ ವಕೀಲರು ಬಾಲಿವುಡ್ ಸಂಜು ಸಿನೆಮಾದ ನಿರ್ಮಾಣ ವಿಭಾಗದ ಮುಖ್ಯಸ್ಥರಿಗೆ ಲೀಗಲ್ ನೋಟಿಸ್ ನೀಡಿದ್ದಾರೆ.

    ಸಂಜು ಚಿತ್ರದಲ್ಲಿ ತನ್ನ ಕಕ್ಷಿದಾರರ ಪರವಾಗಿ ತಪ್ಪು ಮಾಹಿತಿಯನ್ನು ನೀಡಲಾಗಿದೆ ಎಂದು ಆರೋಪಿಸಿ ಸಲೇಂ ಪರ ವಕೀಲರು ನಿರ್ದೇಶಕ ರಾಜ್‍ಕುಮಾರ್ ಹಿರಾನಿ, ವಿಧು ವಿನೋದ್ ಚೋಪ್ರಾ, ವಿತರಕ ಮತ್ತು ನಿರ್ಮಾಪಕರಿಗೆ ನೋಟಿಸ್ ಕಳುಹಿಸಿದ್ದಾರೆ. ಮಾನಹಾನಿ ಉಂಟುಮಾಡುವ ದೃಶ್ಯಗಳನ್ನು ತೆಗೆಯಬೇಕು ಹಾಗೂ 15 ದಿನಗಳಲ್ಲಿ ಚಿತ್ರದಲ್ಲಿರುವ ದೃಶ್ಯಗಳಿಗೆ ಕತ್ತರಿ ಹಾಕದೇ ಇದ್ದಲ್ಲಿ ಮಾನ ನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ನೋಟಿಸ್‍ನಲ್ಲಿ ಸಂಜು ಚಿತ್ರದ ದೃಶ್ಯವೊಂದರಲ್ಲಿ ಸಂಜಯ್ ಪಾತ್ರಧಾರಿ ತಪ್ಪೊಪ್ಪಿಗೆ ನೀಡುವಾಗ 1993 ರಲ್ಲಿ ಅಕ್ರಮ ಶಸ್ತ್ರಾಸ್ತ್ರ ಮತ್ತು ಯುದ್ಧ ಸಾಮಗ್ರಿಗಳನ್ನು ಪೂರೈಸಿರುವ ಕುರಿತು ನನ್ನ ಕಕ್ಷಿದಾರನ ವಿರುದ್ಧ ಆರೋಪಿಸಲಾಗಿದೆ. ಅಬು ಸಲೇಂ ಯಾವುದೇ ಶಸ್ತ್ರಾಸ್ತ್ರಗಳನ್ನು ಪೂರೈಸಿಲ್ಲ ಎಂದು ವಕೀಲರು ತಿಳಿಸಿದ್ದಾರೆ

    ಜೂ. 29ರಂದು ಬಿಡುಗಡೆಯಾಗಿರುವ ಸಂಜು ಸಿನಿಮಾ ಬಾಲಿವುಡ್ ನಟ ಸಂಜಯ್ ದತ್ ಅವರ ಜೀವನಾಧರಿತ ಚಿತ್ರವಾಗಿದ್ದು, ಬಾಕ್ಸ್ ಆಫೀಸ್ ನಲ್ಲಿ ಭಾರೀ ಸದ್ದು ಮಾಡುವ ಮೂಲಕ 339 ಕೋಟಿ ರೂ. ಸಂಗ್ರಹಿಸಿತ್ತು. ಸಂಜು ಸಿನಿಮಾದ ಮುಖ್ಯ ಪಾತ್ರದಲ್ಲಿ ರಣಬೀರ್ ಸಂಜಯ್ ಅವರ ಪಾತ್ರವನ್ನು ನಿರ್ವಹಿಸಿದ್ದಾರೆ.

  • ಮುಂಬೈ ಜೈಲಿನಲ್ಲಿ ತನಗೆ ಚಿಕನ್ ನೀಡ್ತಿಲ್ಲ – ಪೋರ್ಚುಗೀಸ್ ಅಧಿಕಾರಿಗಳಿಗೆ ಗ್ಯಾಂಗ್‍ಸ್ಟರ್ ಅಬು ಸಲೇಂ ದೂರು

    ಮುಂಬೈ ಜೈಲಿನಲ್ಲಿ ತನಗೆ ಚಿಕನ್ ನೀಡ್ತಿಲ್ಲ – ಪೋರ್ಚುಗೀಸ್ ಅಧಿಕಾರಿಗಳಿಗೆ ಗ್ಯಾಂಗ್‍ಸ್ಟರ್ ಅಬು ಸಲೇಂ ದೂರು

    ಮುಂಬೈ: ಕುಖ್ಯಾತ ಗ್ಯಾಂಗ್‍ಸ್ಟರ್ ಅಬು ಸಲೇಂ ತನಗೆ ಮುಂಬೈ ಜೈಲಿನಲ್ಲಿ ಚಿಕನ್ ನೀಡುತ್ತಿಲ್ಲ ಎಂದು ಪೋರ್ಚುಗೀಸ್ ವಿದೇಶಾಂಗ ಅಧಿಕಾರಿಗಳಿಗೆ ದೂರು ನೀಡಿದ್ದು, ಮಂಗಳವಾರ ಅಧಿಕಾರಿಗಳು ಮುಂಬೈನ ಜೈಲಿಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    ಸದ್ಯ ಮುಂಬೈನ ತಲೋಜ ಜೈಲಿನಲ್ಲಿ ಇರುವ ಸಲೀಂ ತಮಗೇ ಉತ್ತಮ ಊಟ ಹಾಗೂ ಸರಿಯಾದ ವ್ಯವಸ್ಥೆ ಕಲ್ಪಿಸುತ್ತಿಲ್ಲ ಎಂದು ತನ್ನ ವಕೀಲರ ಮೂಲಕ ದೂರು ನೀಡಿದ್ದ. ಈ ದೂರಿನ ಅನ್ವಯ ಅಧಿಕಾರಿಗಳು ಹಾಗೂ ವೈದ್ಯರ ತಂಡ ಪರಿಶೀಲನೆ ನಡೆಸಿದ್ದು, ಸಲೀಂ ನನ್ನು ಸಸ್ಯಾಹಾರಿ ಊಟ ಸೇವಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

    ಅಬು ಸಲೇಂ ನೀಡುತ್ತಿರುವ ವ್ಯವಸ್ಥೆ ಕುರಿತು ಮಾಹಿತಿ ನೀಡಿದರುವ ಸಲೇಂ ಪರ ವಕೀಲ ಸಬ ಖುರೇಷಿ, ಸಲೇಂಗೆ ನೀಡುತ್ತಿರುವ ಆಹಾರ ಗುಣಮಟ್ಟ ತೀರ ಕೆಟ್ಟದಾಗಿದೆ. ಅವರು ಸಸ್ಯಾಹಾರ ಸೇವನೆ ಮಾಡುವುದಿಲ್ಲ. ಅಲ್ಲದೇ ಆತನ ಕೋಣೆಗೆ ಸರಿಯಾಗಿ ಸೂರ್ಯನ ಬೆಳಕು ಬರುವುದಿಲ್ಲ. ಕೋಣೆಯ ಶೌಚಾಲಯ ಚಿಕ್ಕದಾಗಿದ್ದು, ಉತ್ತಮ ಸ್ಥಿತಿಯಲ್ಲಿ ಇಲ್ಲ. ಇಂತಹ ಸ್ಥಿತಿಯಲ್ಲಿ ಅವರಿಗೆ ಅನಾರೋಗ್ಯ ಕಾಡುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

    ಸಲೇಂ ಈಗಾಗಲೇ ಕಣ್ಣಿನ ದೃಷ್ಟಿ ಹಾಗೂ ಮಂಡಿ ನೋವಿನ ಸಮಸ್ಯೆ ಎದುರಿಸುತ್ತಿದ್ದಾರೆ. ಅವರಿಗೆ ವೈದ್ಯಕೀಯ ಸೇವೆ ಅವಶ್ಯಕತೆ ಇದ್ದು, ಪೊಲೀಸರು ಸೂಕ್ತ ರಕ್ಷಣೆ ನೀಡುತ್ತಿಲ್ಲ ಎಂದು ತಿಳಿಸಿದ್ದಾರೆ.

    ಈ ಪ್ರತಿಕ್ರಿಯೆ ನೀಡಿರುವ ಜೈಲು ಅಧಿಕಾರಿ ಎಸ್ಪಿ ಸದಾನಂದ್ ಗೈಕ್ವಾಡ್, ಅಪರಾಧಿಗೆ ಮಾಂಸಹಾರ ಪೂರೈಸಲು ಸಾಧ್ಯವಿಲ್ಲ. ವೈದ್ಯರು ಕೇವಲ ಮೊಟ್ಟೆ ನೀಡಲು ತಿಳಿಸಿದ್ದಾರೆ. ಅದನ್ನು ನೀಡಿದ್ದೇವೆ. ಅಲದೇ ಜೈಲಿನ ಕ್ಯಾಂಟೀನ್ ನಲ್ಲಿ ಆತ ಮೊಟ್ಟೆ ಖರೀಸಬಹುದು. ಇನ್ನು ಎಲ್ಲ ಕೈದಿಗಳು ಸಹ ಅಂತಹ ಕೋಣೆಗಳಲ್ಲೇ ಇದ್ದು, ಪ್ರತ್ಯೇಕ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ. ಆತ ಯಾವಾಗಲು ಆರೋಗ್ಯ ಕುರಿತು ದೂರು ನೀಡುತ್ತಾನೆ, ಆದರೆ ವೈದ್ಯರು ಯಾವುದೇ ಸಮಸ್ಯೆ ಇಲ್ಲ ಎಎಂದು ತಿಳಿಸಿದ್ದಾರೆ. ಆತನ ಆಧಾರ ರಹಿತ ಮಾಡುತ್ತಾನೆ ಎಂದು ಹೇಳಿದ್ದಾರೆ.

    ವಕೀಲ ಖುರೇಷಿ ಅವರ ಪ್ರಕಾರ ಸಲೇಂ ಜೀವಾವಾಧಿ ಶಿಕ್ಷೆ ಯನ್ನು ಪಡೆದಿದ್ದು, ಭಾರತ ಪೋರ್ಚುಗಿಸ್‍ನೊಂದಿಗೆ ಮಾಡಿಕೊಂಡಿರುವ ಒಪ್ಪಂದವನು ಉಲ್ಲಂಘಿಸಿದೆ. ನಿಯಮಗಳ ಅನ್ವಯ ಸಲೇಂ ಪೋರ್ಚುಗೀಸ್ ದೇಶದ ಪ್ರಜೆಯಾಗಿದ್ದು, ಇಂತಹ ಅವರಿಗೆ 25 ವರ್ಷ ಮೇಲ್ಪಟ್ಟು ಶಿಕ್ಷೆ ನೀಡುವಂತಿಲ್ಲ ಎಂದು ಹೇಳಿದ್ದಾರೆ.

    ಭೂಗತ ಪಾತಕಿ ಮುಂಬೈ ಬಾಂಬ್ ಸ್ಫೋಟಕ ಸಂಚುಕೋರ ದಾವೂದ್ ಡಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಬು ಸಲೇಂ 2002 ರಲ್ಲಿ ದೆಹಲಿ ಮೂಲದ ಉದ್ಯಮಿಯೊಬ್ಬರಿಗೆ 5 ಕೋಟಿ ರೂ. ಬೇಡಿಕೆ ಇಟ್ಟ ಆರೋಪದಲ್ಲಿ 7 ವರ್ಷ ಶಿಕ್ಷೆಗೆ ಗುರಿಯಾಗಿದ್ದ.