Tag: ಅಬ್ದುಲ್ ಜಬ್ಬಾರ್

  • ವಿಧಾನಪರಿಷತ್‍ಗೆ ಕಾಂಗ್ರೆಸ್‍ನಿಂದ ಅಚ್ಚರಿಯ ಆಯ್ಕೆ – ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಕಣಕ್ಕೆ

    ವಿಧಾನಪರಿಷತ್‍ಗೆ ಕಾಂಗ್ರೆಸ್‍ನಿಂದ ಅಚ್ಚರಿಯ ಆಯ್ಕೆ – ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಕಣಕ್ಕೆ

    ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

    ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ಹಾಗೂ ಕೆಪಿಸಿಸಿ ವಕ್ತಾರ ನಾಗಾರಾಜ್ ಯಾದವ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಈ ಮೂಲಕ ನಾಳೆ ನಡೆಯಲಿರುವ ನಾಮಪತ್ರ ಸಲ್ಲಿಕೆ ಕುತೂಹಲಕ್ಕೆ ತೆರೆ ಎಳೆದಿದೆ. ಇದನ್ನೂ ಓದಿ: ಪಠ್ಯ ಪುಸ್ತಕ ಪರಿಷ್ಕರಣೆಯ ಗೊಂದಲಗಳಿಗೆ ಸಚಿವ ಬಿ.ಸಿ.ನಾಗೇಶ್ ತೆರೆ – ಏನಿರುತ್ತೆ, ಏನಿರಲ್ಲ?

    ಹಲವು ದಿನಗಳಿಂದ ಕಾಂಗ್ರೆಸ್‍ನ ಹಿರಿಯ ನಾಯಕರು ಟಿಕೆಟ್‍ಗಾಗಿ ಹೈಕಮಾಂಡ್ ಕದತಟ್ಟಿದ್ದರು. ಆದರೆ ಹೈಕಮಾಂಡ್ ಪಕ್ಷ ನಿಷ್ಠರನ್ನು ಹುಡುಕಿ ಮಣೆ ಹಾಕಿದೆ. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಘಟಾನುಘಟಿ ನಾಯಕರು ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಲು ಒಂದು ಸುತ್ತಿನ ಮಾತುಕತೆ ನಡೆಸಿದ್ದರು. ಆದರೆ ಹೈಕಮಾಂಡ್ ಯಾರ ಪ್ರಯತ್ನಕ್ಕೂ ಕೇರ್ ಮಾಡದೇ ತನ್ನದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

    ಜಾತಿ ಸಮೀಕರಣದಲ್ಲಿ ಯಾದವ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ನಾಗರಾಜ್ ಯಾದವ್‍ಗೆ ಅವಕಾಶ ನೀಡಿದೆ. ಜೊತೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಮೇಶ್ ಜಾರಕಿಹೊಳಿ ಬೆಂಬಲಿಗ ಸಹಾ ಆಗಿರುವ ನಾಗರಾಜ್ ಯಾದವ್‍ಗೆ ಅವಕಾಶ ಸಿಕ್ಕಿದೆ. ಅಲ್ಲದೇ ಯಾದವ್ ಯಾವುದೇ ಬಣದಲ್ಲಿ ಗುರುತಿಸಿಕೊಳ್ಳದೆ ಇರುವುದು ಪ್ಲಸ್ ಪಾಯಿಂಟ್ ಆಗಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ – ಜಿಲ್ಲಾ ನ್ಯಾಯಾಲಯದಿಂದ ನಾಳೆ ಮಹತ್ವದ ಆದೇಶ

    ಈ ಹಿಂದೆ ಒಂದು ಬಾರಿ ಸಿದ್ದರಾಮಯ್ಯ ಅಧಿಕಾರವಧಿಯಲ್ಲಿ ಪರಿಷತ್‍ಗೆ ನಾಮನಿರ್ದೇಶನಗೊಂಡಿದ್ದ ಅಬ್ದುಲ್ ಜಬ್ಬಾರ್‌ಗೆ ಹೈಕಮಾಂಡ್ ಮಣೆ ಹಾಕಿದೆ. ಪ್ರಸ್ತುತ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜಾಧ್ಯಕ್ಷರಾಗಿರುವ ಅಬ್ದುಲ್ ಜಬ್ಬಾರ್ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

  • ಕೆಪಿಸಿಸಿ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಸಾರಥಿ – ನವೆಂಬರ್ 16ಕ್ಕೆ ಪದಗ್ರಹಣ

    ಕೆಪಿಸಿಸಿ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಸಾರಥಿ – ನವೆಂಬರ್ 16ಕ್ಕೆ ಪದಗ್ರಹಣ

    ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಅಬ್ದುಲ್ ಜಬ್ಬಾರ್ ಅವರನ್ನು ನೇಮಕ ಮಾಡಲಾಗಿದೆ.

    ಜಬ್ಬಾರ್ ಅವರು 10 ವರ್ಷಗಳ ಕಾಲ ದಾವಣಗೆರೆ ಜಿಲ್ಲಾ ಅಧ್ಯಕ್ಷರಾಗಿ, ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಷ್ಟ್ರೀಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಇಮ್ರನ್ ಪ್ರತಪ್ಗರ್ಹಿ ಅವರು ಜಬ್ಬಾರ್ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಇದನ್ನೂ ಓದಿ: ಆಲೂಗೆಡ್ಡೆ ಹೊರುವುದಕ್ಕೂ ರೆಡಿ, ಬೆಡ್ ಶೀಟ್ ಹೊದ್ಕಂಡ್ ಮಲಗೋಕೂ ರೆಡಿ: ಹೆಚ್.ಡಿ.ರೇವಣ್ಣ

    ಜಬ್ಬಾರ್ ಅವರು ಇದೇ 16 ರಂದು ಅರಮನೆ ಮೈದಾನದ ನಲಪಾಡ್ ಪೆವಿಲಿಯನ್‍ನಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದು, ಈ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ಪಕ್ಷದ ನಾಯಕರು, ಕಾರ್ಯಕರ್ತರು ಆಗಮಿಸಲಿದ್ದಾರೆ ಈ ಸಂಬಂಧ ಶಾಸಕ ಹ್ಯಾರಿಸ್ ಹಾಗೂ ಅಬ್ದುಲ್ ಜಬ್ಬರ್ ಜಂಟಿಯಾಗಿ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಘೋಷ್ಠಿ ನಡೆಸಿ ಮಾತನಾಡಿದರು.ಸದ್ಯ ಜಾತಿ ಹಾಗೂ ಧರ್ಮದ ಮೇಲೆ ಯಾವ ರೀತಿಯ ರಾಜಕಾರಣ ನಡೆಯುತ್ತಿದೆ ಎಂದು ನಾವು ನೋಡುತ್ತಿದ್ದೇವೆ. ಜಾತ್ಯಾತೀತ ರಾಜಕಾರಣಕ್ಕಾಗಿ ಎಲ್ಲ ಸಮಾಜಕ್ಕೆ ಆದ್ಯತೆ ನೀಡಲು ಕಾಂಗ್ರೆಸ್ ಪಕ್ಷ ಈ ಘಟಕವನ್ನು ಸ್ಥಾಪಿಸಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಅಲ್ಪಸಂಖ್ಯಾತ ಘಟಕವನ್ನು ಮತ್ತಷ್ಟು ಬಲಪಡಿಸಲು ಕಾರ್ಯಕ್ರಮ ರೂಪಿಸುತ್ತೇವೆ. ಕಾಂಗ್ರೆಸ್ ಅಲ್ಪಸಂಖ್ಯಾತರು, ದಲಿತರು, ಕೆಳ ಹಂತದಲ್ಲಿರುವ ಸಮಾಜದವರನ್ನು ಕೈ ಹಿಡಿದು ಮೇಲೆತ್ತಲು ಶ್ರಮಿಸುತ್ತಲೇ ಬಂದಿದೆ. ಕಾಂಗ್ರೆಸ್ ಪಕ್ಷ ಈ ಸಮುದಾಯದ ಪರವಾಗಿ ಹೋರಾಡುತ್ತಿದೆ. ಈ ಸಮುದಾಯವನ್ನು ನಿರ್ಲಕ್ಷಿಸುತ್ತಿರುವ ಸರ್ಕಾರದ ವಿರುದ್ಧ ದೊಡ್ಡ ಹೋರಾಟದ ಮೂಲಕ ಜಾತ್ಯಾತೀತವಾಗಿ ಎಲ್ಲರನ್ನು ಒಟ್ಟಾಗಿ ಸೇರಿಸಿ ಪಕ್ಷ ಬಲಪಡಿಸಲು ಶ್ರಮಿಸುತ್ತೇವೆ ಎಂದರು. ಇದನ್ನೂ ಓದಿ: ಹೆಚ್.ಡಿ ರೇವಣ್ಣ ಕುಟುಂಬಸ್ಥರು ಜನರ ಪ್ರಾಣ ಹಿಂಡ್ತಿದ್ದಾರೆ – ಹಾಸನಾಂಬೆಗೆ ಪತ್ರ

    ಅಬ್ದುಲ್ ಜಬ್ಬಾರ್ ಮಾತನಾಡಿ, ಸೋನಿಯಾ ಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರ ಆಶೀರ್ವಾದದಿಂದ ನಾನು ರಾಜ್ಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷನಾಗಿ ನೇಮಕಗೊಂಡಿದ್ದೇನೆ. ನವೆಂಬರ್ 16 ರಂದು ಬೆಳಗ್ಗೆ 10.30ಕ್ಕೆ ಅರಮನೆ ಮೈದಾನದ ನಲಪಾಡ್ ಪೆವಿಲಿಯನ್‍ನಲ್ಲಿ ಅಧಿಕಾರ ಸ್ವೀಕರಿಸುತ್ತಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ, ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್ ಮುನಿಯಪ್ಪ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಎಸ್.ಆರ್ ಪಾಟೀಲ್, ಎಐಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಇಮ್ರನ್ ಪ್ರತಪ್ಗರ್ಹಿ ಹಾಗೂ ರಾಜ್ಯದ ಮತ್ತಿತರ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ. ನಾನು ಅಧಿಕಾರ ಸ್ವೀಕರಿಸಿದ ನಂತರ ರಾಜ್ಯಾದ್ಯಂತ ಅಲ್ಪಸಂಖ್ಯಾತರು ಕೇವಲ 7 ಕಡೆಗಳಲ್ಲಿ ಮಾತ್ರ ಆಯ್ಕೆಯಾಗಿದ್ದು, ಇಬ್ಬರು ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಹೀಗಾಗಿ 224 ಕ್ಷೇತ್ರಗಳ ಇತರ ಕಡೆಗಳಲ್ಲೂ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರುವ ಕ್ರೈಸ್ತರು, ಸಿಖ್ಖರು, ಬುದ್ಧರು ಹಾಗೂ ಇತರೆ ಸಮುದಾಯದವರು ಕೂಡ ಆಯ್ಕೆಯಾಗುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಎಲ್ಲೆಲ್ಲಿ ನ್ಯೂನ್ಯತೆ ಇದೆಯೋ ಅದನ್ನು ಸರಿಪಡಿಸಲು ಶ್ರಮಿಸುತ್ತೇನೆ. ಆಮೂಲಕ ಪಕ್ಷ ಸಂಘಟನೆ ಮಾಡುತ್ತೇನೆ ಎಂದಿದ್ದಾರೆ.