Tag: ಅಬ್ದುಲ್ ರಜಾಕ್

  • ನಾಯಿ ಸ್ವಲ್ಪ ಟಚ್‌ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ, ಅಂತಹದ್ದರಲ್ಲಿ ಮಾಂಸ ತರೋಕಾಗುತ್ತಾ? – ಅಬ್ದುಲ್‌ ರಜಾಕ್‌

    ನಾಯಿ ಸ್ವಲ್ಪ ಟಚ್‌ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ, ಅಂತಹದ್ದರಲ್ಲಿ ಮಾಂಸ ತರೋಕಾಗುತ್ತಾ? – ಅಬ್ದುಲ್‌ ರಜಾಕ್‌

    ಬೆಂಗಳೂರು: ನಾವು ನಾಯಿಯನ್ನೇ ಮುಟ್ಟಲ್ಲ, ನಾಯಿ ಸ್ವಲ್ಪ ಟಚ್‌ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ. ಸ್ನಾನ ಮಾಡಿಕೊಂಡು ಹೋಗ್ತೀವಿ ಅಂತಹದ್ದರಲ್ಲಿ ನಾಯಿ ಮಾಂಸ (Dog Meat) ತಂದು ತಿನ್ನಿಸುತ್ತಿದ್ದಾರೆ ಅಂತ ಆರೋಪಿಸಿದ್ದಾರೆ ಎಂದು ಮುಸ್ಲಿಂ ಮುಖಂಡ ಅಬ್ದುಲ್‌ ರಜಾಕ್‌ (Abdul Razak) ಆಕ್ರೋಶ ಹೊರಹಾಕಿದ್ದಾರೆ.

    ರಾಜಸ್ಥಾನದ ಜೈಪುರದಿಂದ (Rajasthan Jaipur) ಬೆಂಗಳೂರಿಗೆ ಬಂದ 90 ಬಾಕ್ಸ್‌ಗಳಲ್ಲಿ ನಾಯಿ ಮಾಂಸ ತರಲಾಗಿದೆ. ಜೊತೆಗೆ ಬೆಂಗಳೂರಿನ ಹೋಟೆಲ್‌ಗಳಿಗೆ ನಾಯಿ ಮಾಂಸ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪಗಳ ಕುರಿತು ಮುಸ್ಲಿಂ ಮುಖಂಡ ಅಬ್ದುಲ್‌ ರಜಾಕ್‌ ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದ್ದಾರೆ. ಇದನ್ನೂ ಓದಿ: ರಾಜ್ಯದ ಜನರಿಗೆ ಮತ್ತೊಂದು ಶಾಕ್‌ – ಬಸ್‌ ಪ್ರಯಾಣ ದರ ಹೆಚ್ಚಿಸಲು KSRTCಯಿಂದ ಪ್ರಸ್ತಾವನೆ ಸಲ್ಲಿಕೆ

    ಎರಡು ದಿನಕ್ಕೆ ಒಮ್ಮೆ ಜೈಪುರದಿಂದ ಬೆಂಗಳೂರಿಗೆ ಕುರಿ ಮಾಂಸ ಬರುತ್ತೆ. ಇವತ್ತು 2,000 ಕೆಜಿ ಮಾಂಸ ಬಂದಿದೆ. 10-12 ವರ್ಷಗಳಿಂದ ಈ ವ್ಯವಹಾರ ನಡೆಯುತ್ತಿದೆ. ರಾಜಸ್ಥಾನದ ಕುರಿಗಳಿಗೆ ಬಾಲ ಇದೇ ರೀತಿ ಇರುತ್ತೆ, ಅದನ್ನ ನಾಯಿ ಅನ್ನುತ್ತಿದ್ದಾರೆ. ಈ ವ್ಯವಹಾರವನ್ನ ನಂಬಿಕೊಂಡು ಸಾವಿರಾರು ಜನ ಜೀವನ ನಡೆಸುತ್ತಿದ್ದಾರೆ. ಪುನೀತ್‌ ಕೆರೆಹಳ್ಳಿ ರೋಲ್‌ಕಾಲ್‌ ಸಿಗಲಿಲ್ಲ ಅಂತ ಈ ರೀತಿ ಆರೋಪ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಿಜೆಪಿ ಶಾಸಕರಿಗೆ ಅನುದಾನ ಕೊಟ್ಟಿಲ್ಲ: ಎಸ್.ಆರ್.ವಿಶ್ವನಾಥ್

    ಶಶಿ, ರಿಜ್ವಾನ್‌, ಹಿಲಾಲ್‌ ಅನ್ನುವವರು ಕಳೆದ ಒಂದೂವರೆ ತಿಂಗಳಿನಿಂದ ನಮ್ಮ ಹಿಂದೆ ಬಿದ್ದಿದ್ದರು. ಮಾಂಸ ಸಾಗಿಸುತ್ತಿರುವ ವಿಚಾರವನ್ನ ಪುನೀತ್‌ ಕೆರೆಹಳ್ಳಿಗೆ ತಿಳಿಸಿ, ರೋಲ್‌ಕಾಲ್‌ ಮಾಡೋದಕ್ಕೆ ಮುಂದಾಗಿದ್ದರು. ಈ ಬಗ್ಗೆ ನಾನು ಕಳೆದ ಜೂನ್‌ 26ರಂದೇ ಪೊಲೀಸ್‌ ಠಾಣೆಗೆ ದೂರು ಕೊಟ್ಟಿದ್ದೆ, ಎನ್‌ಸಿಆರ್‌ ಕೂಡ ಆಗಿದೆ. ನಮಗೆ ಹಿಂಸೆ ಕೊಡ್ತಿದ್ದಾರೆ ಅಂತಾ ಪೊಲೀಸರಿಗೆ ದೂರಿನ ಮೂಲಕ ತಿಳಿಸಿದ್ದೆ. ನಾವು ರೋಲ್‌ಕಾಲ್‌ಗೆ ಆಸ್ಪದ ನೀಡದೇ ಇದ್ದಿದ್ದರಿಂದ ಕುರಿ ಮಾಂಸವನ್ನು ನಾಯಿ ಮಾಂಸ ಅಂತ ಸುಳ್ಳು ಹಬ್ಬಿಸಿದ್ದಾರೆ ಎಂದು ದೂರಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ – ಆಹಾರ ಸುರಕ್ಷತಾ ಅಧಿಕಾರಿಗಳಿಂದ ಸ್ಯಾಂಪಲ್ಸ್‌ ಸಂಗ್ರಹ

    ಬೆಂಗಳೂರಲ್ಲಿ ಸುಮಾರು 2 ಕೋಟಿ ಜನ ವಾಸ ಮಾಡ್ತಿದ್ದಾರೆ. ನಮ್ಮ ಬಳಿಕ 2 ಸ್ಲಾಟ್‌ಗಳಿವೆ. ಸುಮಾರು 3 ಸಾವಿರ ಛತ್ರಗಳಿಗೆ ಪ್ರತಿದಿನ ಮಾಂಸ ಬೇಕು. ನಾವು ಎಷ್ಟು ಪೂರೈಸಿದರೂ ಸಾಕಾಗಲ್ಲ. ಅದಕ್ಕಾಗಿ ರಾಜಸ್ಥಾನದ ಜೈಪುರದಿಂದ ಮಾಂಸ ತರಿಸುತ್ತಿದ್ದೇವೆ. ಅಲ್ಲಿನ ಕುರಿಗಳಿಗೆ ಬಾಲ ಉದ್ದವಾಗಿಯೇ ಇರುತ್ತದೆ. ನಾವು ನಾಯಿಯನ್ನೇ ಮುಟ್ಟಲ್ಲ. ಅಪ್ಪಿ ತಪ್ಪಿ ಸ್ವಲ್ಪ ನಾಯಿ ಟಚ್‌ ಆದ್ರೂ ಮಸೀದಿ ಒಳಕ್ಕೇ ಹೋಗಲ್ಲ. ಸ್ನಾನ ಮಾಡಿ, ಬಟ್ಟೆ ಬದಲಿಸಿ ಆಮೇಲೆ ಮಸೀದಿಗೆ ಹೋಗ್ತೀವಿ. ಅಂತಹದ್ದರಲ್ಲಿ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ ಅಂತ ಸುಳ್ಳು ಹಬ್ಬಿಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

    ಈ ವ್ಯವಹಾರವನ್ನು ಸುಮಾರು 20 ಜನ ನಿರ್ವಹಿಸುತ್ತಿದ್ದಾರೆ. ನಾನು ಡಿಸ್ಟ್ರಿಬ್ಯೂಟರ್‌ ಬರುವ ಮಾಂಸವನ್ನ ನಾನು ಆಯಾ ಮಾಲೀಕರಿಗೆ ಡಿಸ್ಟ್ರಿಬ್ಯೂಟ್‌ ಮಾಡ್ತೀನಿ. ರಾಜಸ್ಥಾನದಿಂದ ತರಿಸಿದ್ದ ಮಾಂಸವನ್ನ ಸಂಪೂರ್ಣ ಐಸ್‌ನಲ್ಲಿ ಇಡಲಾಗಿತ್ತು. ಆದ್ರೆ ರೋಲ್‌ಕಾಲ್‌ ಸಿಗಲಿಲ್ಲ ಅಂತ ಇಲ್ಲಿ ಬಂದು ಗಲಾಟೆ ಮಾಡಿದ್ದಾರೆ. ಪುನೀತ್‌ ಕೆರೆಹಳ್ಳಿ ಅಧಿಕಾರಿಯೂ ಅಲ್ಲ. ಈಗ ಅಧಿಕಾರಿಗಳು ಕೇಳಿದ ಪ್ರಶ್ನೆಗೆಲ್ಲಾ ಉತ್ತರ ಕೊಟ್ಟಿದ್ದೇವೆ. ಅಗತ್ಯ ದಾಖಲಾತಿಗಳನ್ನೂ ತೋರಿಸಿದ್ದೇವೆ. ಲ್ಯಾಬ್‌ ವರದಿ ಬಂದ ಬಳಿಕ ಪುನೀತ್‌ ಕೆರೆಹಳ್ಳಿ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಸಿದ್ದಾರೆ.

  • ಒಬ್ಬ ಹೇಡಿ ಮಾಡಿದ ಕೃತ್ಯಕ್ಕೆ ಇಡೀ ಸಮುದಾಯವನ್ನು ವಿರೋಧಿಸುವುದು ಸರಿಯಲ್ಲ: ಅಬ್ದುಲ್ ರಜಾಕ್

    ಒಬ್ಬ ಹೇಡಿ ಮಾಡಿದ ಕೃತ್ಯಕ್ಕೆ ಇಡೀ ಸಮುದಾಯವನ್ನು ವಿರೋಧಿಸುವುದು ಸರಿಯಲ್ಲ: ಅಬ್ದುಲ್ ರಜಾಕ್

    ಬೆಂಗಳೂರು: ಒಬ್ಬ ಹೇಡಿ ಮಾಡಿದ ಕೃತ್ಯದಿಂದ ಇಡೀ ಸಮುದಾಯವನ್ನು ವಿರೋಧಿಸುವುದು ಸರಿಯಲ್ಲ. ನಮ್ಮ ಧರ್ಮದಲ್ಲಿ ಇಂತಹ ಕೃತ್ಯ ಮಾಡಿ ಎಂದು ಎಲ್ಲಿಯೂ ಹೇಳಿಲ್ಲ ಎಂದು ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಹೇಳಿಕೆ ನೀಡಿದ್ದಾರೆ.

    ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದ ಟೈಲರ್‌ನನ್ನು ಬರ್ಬರವಾಗಿ ಹತ್ಯೆಗೈದ ಘಟನೆಗೆ ಜನರು ಮುಸ್ಲಿಂ ಸಮುದಾಯವನ್ನು ದೂಷಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ ರಜಾಕ್, ಈ ಕೃತ್ಯ ಮಾಡಿದವರು ಹೇಡಿಗಳು. ಇವರ ಹಿಂದೆ ಯಾರೋ ಇದ್ದಾರೆ. ಎಲ್ಲಾ ಮುಗಿದು ಸಮಾಧಾನವಾಗಿದ್ದ ಸಂದರ್ಭದಲ್ಲಿ ಇಂತಹ ಘಟನೆ ನಡೆದಿದೆ ಎಂದು ಹೇಳಿದರು. ಇದನ್ನೂ ಓದಿ: ನೂಪುರ್‌ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಮುಸ್ಲಿಂ ಯುವಕರಿಂದ ಟೈಲರ್‌ ಶಿರಚ್ಛೇದ

    ನಾನು ಈ ಘಟನೆಯನ್ನು ಖಂಡಿಸುತ್ತೇನೆ. ಅವರ ಹಿಂದೆ ಯಾರೋ ಇದ್ದಾರೆ ಎನ್ನುವುದು ಸತ್ಯ. ಘಟನೆ ಬಗ್ಗೆ ಸರ್ಕಾರ ತಕ್ಷಣ ತನಿಖೆ ನಡೆಸಿ, ಅವರನ್ನು ಗಲ್ಲಿಗೇರಿಸಬೇಕು. ನೂಪುರ್ ಶರ್ಮಾರನ್ನು ಕೂಡಾ ಬಿಡದೇ ಬಂಧಿಸಬೇಕು. ಅವರನ್ನೂ ಕಾನೂನಿನ ಅಡಿಯಲ್ಲಿ ಶಿಕ್ಷೆಗೆ ಒಳಪಡಿಸಬೇಕು. ಇಂತಹ ಘಟನೆಗಳಿಂದ ಒಂದೇ ಸಮುದಾಯವನ್ನು ಟಾರ್ಗೆಟ್ ಮಾಡಬೇಡಿ ಎಂದು ಅಬ್ದುಲ್ ರಜಾಕ್ ಮನವಿ ಮಾಡಿಕೊಂಡರು. ಇದನ್ನೂ ಓದಿ: ಟೈಲರ್‌ ಶಿರಚ್ಛೇದನ ಮಾಡಿದ ಮುಸ್ಲಿಂ ಯುವಕರು ಕೆಲವೇ ಗಂಟೆಗಳಲ್ಲಿ ಅರೆಸ್ಟ್‌

    Live Tv

  • RSSಗೆ ಗೊತ್ತಾಗಿದೆ ಈ ಹೋರಾಟದಲ್ಲಿ ಸೋಲಾಗುತ್ತೆ ಅಂತಾ ಹಾಗಾಗಿ ಭಾಗವತ್ ಈ ಹೇಳಿಕೆ ನೀಡಿದ್ದಾರೆ: ಅಬ್ದುಲ್ ರಜಾಕ್

    RSSಗೆ ಗೊತ್ತಾಗಿದೆ ಈ ಹೋರಾಟದಲ್ಲಿ ಸೋಲಾಗುತ್ತೆ ಅಂತಾ ಹಾಗಾಗಿ ಭಾಗವತ್ ಈ ಹೇಳಿಕೆ ನೀಡಿದ್ದಾರೆ: ಅಬ್ದುಲ್ ರಜಾಕ್

    ಬೆಂಗಳೂರು: ಆರ್‌ಎಸ್‌ಎಸ್‌ಗೆ ಗೊತ್ತಾಗಿದೆ ಈ ಹೋರಾಟದಲ್ಲಿ ಸೋಲಾಗುತ್ತೆ ಅಂತಾ ಹಾಗಾಗಿ ಆರ್‌ಎಸ್‌ಎಸ್‌ ಮುಖಂಡ ಮೋಹನ್ ಭಾಗವತ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ ಎಂದು ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಲೇವಡಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕೋರ್ಟ್‍ನಲ್ಲಿಯೂ ಜ್ಞಾನವಾಪಿ ವಿಚಾರದಲ್ಲಿ ಸೋಲಾಗುತ್ತೆ ಅಂತಾ ಗೊತ್ತಿದೆ. ಮೋದಿ ಸರ್ಕಾರ ಛೂ ಬಿಟ್ಟು ಈ ಹೇಳಿಕೆ ಕೊಡಿಸಿರೋದು. ರಾಷ್ಟ್ರದ ನೆಮ್ಮದಿ ಹಾಳಾಗಿದೆ ಹಾಗಾಗಿ ಇದು ಕೇಂದ್ರ ಸರ್ಕಾರದ ಪ್ಲಾನ್. ಭಾಗವತ್ ಹೇಳಿಕೆ ಹಿಂದೆ ಇರೋದು ಬ್ಯುಸಿನೆಸ್ ಮೈಂಡ್. ಕುವೈತ್, ಯುಐ, ಸೌದಿಯ ಮುಸ್ಲಿಂ ರಾಷ್ಟ್ರಗಳ ಜೊತೆ ವ್ಯಾವಹಾರಿಕ ಒಪ್ಪಂದ ಇದೆ. ದೇಶದಲ್ಲಿ ಮಸೀದಿ ಒಡೆದು ಹಾಕಿದ್ರೇ ಮುಸ್ಲಿಂ ರಾಷ್ಟ್ರಗಳು ಸುಮ್ಮನಿರುತ್ತಾ? ಬ್ಯುಸಿನೆಸ್ ಮಾಡೋಕೆ ಬರಲ್ಲ. ಹಾಗಾಗಿ ಈ ಹೇಳಿಕೆ ಕೊಟ್ಟಿರೋದು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪ್ರತಿ ಮಸೀದಿಯಲ್ಲಿ ಶಿವಲಿಂಗ ಹುಡುಕಬೇಕಿಲ್ಲ, ಇನ್ಮುಂದೆ ಮಂದಿರ ಹೋರಾಟದಲ್ಲಿ ನಾವಿಲ್ಲ: ಮೋಹನ್‌ ಭಾಗವತ್‌

    ಆರ್‌ಎಸ್‌ಎಸ್‌ ಹೇಳಿಕೆ ಕೊಟ್ರು ಅಂತಾ ನಾವು ಕುಣಿಯೋಕೆ ಆಗಲ್ಲ. ಒಂದೇ ಒಂದು ಮಸೀದಿಯನ್ನು ನಾವು ಬಿಟ್ಟುಕೊಡಲ್ಲ. ಆಯೋಧ್ಯೆ ಬಿಟ್ಟುಕೊಟ್ಟಿದ್ದೇವೆ ಇನ್ನು ಯಾವುದೇ ಮಸೀದಿಯನ್ನು ಬಿಟ್ಟುಕೊಡಲ್ಲ. ಶ್ರೀರಂಗಪಟ್ಟಣಕ್ಕೆ ಹಿಂದೂ ಸಂಘಟನೆ ಚಲೋ ಮಾಡಿದ್ರೇ ಅಲ್ಲಿನ ಜನರೇ ನಿಮ್ಮನ್ನು ಹೊರಗಡೆ ಹಾಕ್ತಾರೆ ಹುಷಾರ್. ಅಲ್ಲಿನ ಹಿಂದೂ ಸಮಾಜ ಎಚ್ಚೆತ್ತುಕೊಂಡಿದೆ. ಸುಮ್ನೆ ಹೋಗಿ ಅರೆಸ್ಟ್ ಯಾಕೆ ಆಗ್ತೀರಾ? ಒಬ್ರೂ ನಾಳೆ ಶ್ರೀರಂಗಪಟ್ಟಣಕ್ಕೆ ಹೋಗೋಕೆ ಆಗಲ್ಲ. ಅಲ್ಲಿ ಏನು ನಡೆಯಲ್ಲ ಎಂದು ಗುಡುಗಿದ್ದಾರೆ.

    ಆರ್‌ಎಸ್‌ಎಸ್‌ ಹಿಂದೂಗಳ ಪ್ರಥಮ ಸಂಘಟನೆ. ಇವ್ರೇ ಈಗ ಈ ಹೋರಾಟದಿಂದ ಹಿಂದೆ ಸರಿದಿದ್ದಾರೆ. ಈಗ ಇನ್ನುಳಿದ ಸಂಘಟನೆ ಏನ್ ಮಾಡ್ತಾರೆ? ಮೋಹನ್ ಭಾಗವತ್ ಹೇಳಿಕೆಗೆ ಗೌರವ ಕೊಟ್ಟು ಸುಮ್ಮನಿರಿ ಸಾಕು. ಹೊಸ ವಿವಾದಗಳು ನಮ್ಮ ರಾಜ್ಯಕ್ಕೂ, ರಾಷ್ಟ್ರಕ್ಕೂ ಬೇಡ. ಮಸೀದಿಯಲ್ಲಿ ಸಿಕ್ಕಿರುವುದು ಕಾರಂಜಿ, ಶಿವಲಿಂಗ ಅಲ್ಲ ಎಂದು ಆರ್‌ಎಸ್‌ಎಸ್‌ಗೆ ಸರಿಯಾಗಿ ಗೊತ್ತಿದೆ. ಕೋರ್ಟ್‍ನಲ್ಲೂ ಕೂಡ ಆರ್‌ಎಸ್‌ಎಸ್‌ಗೆ ಸೋಲಾಗುತ್ತದೆ. ದೇಶದ ಅಭಿವೃದ್ದಿಗೆ ಈ ವಿವಾದ ಒಳ್ಳೆಯದಲ್ಲ. ದೇವಸ್ಥಾನಗಳಲ್ಲಿ ನೀವು ಪೂಜೆ ಮಾಡಿ ನಮ್ಮನ್ನು ಮಸೀದಿಯಲ್ಲಿ ನಮಾಜ್ ಮಾಡಲು ಬಿಟ್ಟಿಬಿಡಿ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಸುಧಾರಣೆ, ಸಾಧನೆ ಮತ್ತು ರೂಪಾಂತರ ಮಂತ್ರದ ಮೇಲೆ ಭಾರತ ಪ್ರಗತಿ ಸಾಧಿಸಿದೆ: ಮೋದಿ

  • ಮುಸ್ಲಿಂ ದೇಶಗಳ ಪೆಟ್ರೋಲ್ ಡೀಸೆಲ್ ಬಳಸಬೇಡಿ, ಗೋಮೂತ್ರ ಹಾಕ್ಕೊಂಡು ವಾಹನ ಓಡಿಸಿ: ಅಬ್ದುಲ್ ರಜಾಕ್ ಕಿಡಿ

    ಮುಸ್ಲಿಂ ದೇಶಗಳ ಪೆಟ್ರೋಲ್ ಡೀಸೆಲ್ ಬಳಸಬೇಡಿ, ಗೋಮೂತ್ರ ಹಾಕ್ಕೊಂಡು ವಾಹನ ಓಡಿಸಿ: ಅಬ್ದುಲ್ ರಜಾಕ್ ಕಿಡಿ

    ಬೆಂಗಳೂರು: ಮುಸ್ಲಿಂ ಅರಬ್ ದೇಶಗಳ ಪೆಟ್ರೋಲ್ ಬಳಸಬೇಡಿ. ಬದಲಿಗೆ ಗೋಮೂತ್ರ ಹಾಕಿಕೊಂಡು ವಾಹನ ಓಡಿಸಿಕೊಂಡು ಹೋಗಿ ಎಂದು ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಕಿಡಿಯಾಗಿದ್ದಾರೆ.

    ದೇವಾಲಯಗಳಿಗೆ ತೆರಳುವ ಹಿಂದೂಗಳು ಹಿಂದೂ ಚಾಲಕರ ವಾಹನಗಳನ್ನು ಬಳಸಬೇಕು ಎಂಬ ಅಭಿಯಾನಕ್ಕೆ ಅವರು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದರು.

    ಇತ್ತೀಚೆಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಹಿಂದೂ-ಮುಸ್ಲಿಂ ವಿವಾದದ ಕುರಿತಾಗಿ ಸಿಡಿದೆದ್ದ ರಜಾಕ್ ಕರ್ನಾಟಕ ಎಲ್ಲಿಗೆ ಹೋಗುತ್ತಿದೆ? ಮುಸ್ಲಿಮರಿಗೆ ನೆಮ್ಮದಿಯಿಂದ ರಂಜಾನ್ ಆಚರಿಸಲು ಬಿಡಿ. ದಿನಬೆಳಗಾದಂತೆ ಟೆನ್ಶನ್ ಕೊಡಬೇಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಕುರಾನ್ ಮೇಲೆ ದೇಶ ನಡೆಯಲ್ಲ, ತಂದೆಯ ಜೊತೆಗೆ ಮುಸ್ಕಾನ್‌ಳನ್ನು ಬಂಧಿಸಬೇಕು: ಮುತಾಲಿಕ್

    ಹಿಂದೂ-ಮುಸ್ಲಿಂ ಎಂದು ವಿವಾದ ಎಬ್ಬಿಸುತ್ತಿರುವವರ ಬಾಯಿ ಮುಚ್ಚಿಸಬೇಕು. ಇವರಿಗೆಲ್ಲ ಬುದ್ದಿ ಇಲ್ವಾ? ಇದರಿಂದಾಗಿ ಕರ್ನಾಟಕದ ಆರ್ಥಿಕ ಸ್ಥಿತಿ ಕುಸಿತವಾಗುತ್ತಿದೆ. ಶ್ರೀಲಂಕಾದಲ್ಲಿ ಆಗುತ್ತಿರುವ ಸ್ಥಿತಿ ಎಂದಿಗೂ ಕರ್ನಾಟಕಕ್ಕೆ ಬರಬಾರದೆಂದು ಬೇಡಿಕೊಳ್ಳುತ್ತೇನೆ ಎಂದರು. ಇದನ್ನೂ ಓದಿ: ಇಂಗ್ಲಿಷ್‌ಗೆ ಪರ್ಯಾಯವಾಗಿ ಹಿಂದಿ ಭಾಷೆ ಬಳಕೆಯಾಗಬೇಕು: ಅಮಿತ್ ಶಾ

    ಇಷ್ಟೆಲ್ಲಾ ರಾಜ್ಯದಲ್ಲಿ ನಡೆಯುತ್ತಿದ್ದರೂ ಸಿಎಂ ಏನು ಮಾಡುತ್ತಿದ್ದಾರೆ? ರಾಜ್ಯದ ಅಭಿವೃದ್ಧಿಗೆ ಇದೆಲ್ಲ ಮಾರಕವಾಗುತ್ತಿದೆ. ಈ ವಿಚಾರದಲ್ಲಿ ಕರ್ನಾಟಕಕ್ಕೆ 5 ಪೈಸೆ ಲಾಭ ಇಲ್ಲ. ಹೀಗೇ ಆದರೆ ಐಟಿ ಬಿಟಿಯವರು ಓಡಿ ಹೋಗುತ್ತಾರೆ. ಸರ್ಕಾರ ಹಿಂದೂ ಜನರ ವಾಹನಕ್ಕೆ ಕೇಸರಿ ಹಾಗೂ ಮುಸ್ಲಿಮರಿಗೆ ಹಸಿರು ನಂಬರ್ ಪ್ಲೇಟ್ ಹಾಕಲಿ ಎಂದು ಆಕ್ರೋಶ ಹೊರ ಹಾಕಿದರು.

  • 2019ರ ವಿಶ್ವಕಪ್‍ನಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್ ವಿರುದ್ಧ ಉದ್ದೇಶ ಪೂರ್ವಕವಾಗಿ ಸೋತಿತ್ತು: ಪಾಕ್ ಕ್ರಿಕೆಟಿಗ

    2019ರ ವಿಶ್ವಕಪ್‍ನಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್ ವಿರುದ್ಧ ಉದ್ದೇಶ ಪೂರ್ವಕವಾಗಿ ಸೋತಿತ್ತು: ಪಾಕ್ ಕ್ರಿಕೆಟಿಗ

    ಇಸ್ಲಾಮಾಬಾದ್: ಇಂಗ್ಲೆಂಡ್ ವಿರುದ್ಧ 2019ರ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಉದ್ದೇಶ ಪೂರ್ವಕವಾಗಿ ಸೋತಿತ್ತು ಎಂಬ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ಪಾಕಿಸ್ತಾನ ಮಾಜಿ ಆಲ್‍ರೌಂಡರ್ ಅಬ್ದುಲ್ ರಜಾಕ್ ಆರೋಪಿಸಿದ್ದಾರೆ.

    ಟೂರ್ನಿಯಲ್ಲಿ ಭಾರತ, ಇಂಗ್ಲೆಂಡ್ ತಂಡವನ್ನು ಸೋಲಿಸಿದ್ದರೆ ಪಾಕಿಸ್ತಾನಕ್ಕೆ ಸೆಮಿ ಫೈನಲ್ ಪ್ರವೇಶಿಸುವ ಅವಕಾಶವಿತ್ತು. ಆದರೆ ಭಾರತ ಸೋಲುವ ಮೂಲಕ ಪಾಕಿಸ್ತಾನ ತಂಡ ಟೂರ್ನಿಯಿಂದ ಹೊರ ನಡೆಯುವಂತೆ ಮಾಡಿತ್ತು ಎಂದು ಅಬ್ದುಲ್ ರಜಾಕ್ ಹೇಳಿದ್ದಾರೆ.

    ಅಂದು ಪಂದ್ಯದ ವೀಕ್ಷಕ ವಿಶ್ಲೇಷಣೆ ಮಾಡುತ್ತಿದ್ದ ಎಲ್ಲರೂ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ನಾನು ಈ ಬಗ್ಗೆ ಐಸಿಸಿಗೂ ಮನವಿ ಸಲ್ಲಿಸಿದ್ದೆ. ಐಸಿಸಿ, ಆಟಗಾರರ ಸ್ಪಾಟ್ ಫಿಕ್ಸಿಂಗ್, ಮ್ಯಾಚ್ ಫಿಕ್ಸಿಂಗ್ ಬಗ್ಗೆ ಎಲ್ಲಾ ಮಾಹಿತಿಯನ್ನು ಸಂಗ್ರಹಿಸುತ್ತಿರುತ್ತದೆ. ಆದರೆ ತಂಡವೊಂದು ಮತ್ತೊಂದು ತಂಡವನ್ನು ಸೆಮಿ ಫೈನಲ್‍ಗೆ ತಲುಪದಂತೆ ಮಾಡಲು ಉದ್ದೇಶ ಪೂರ್ವಕವಾಗಿ ಸೋತರೆ ದಂಡ ತೆರಬೇಕು ಎಂದು ತಿಳಿಸಿದ್ದಾರೆ.

    ಕ್ರಿಕೆಟ್ ಆಡಿದ ಯಾವುದೇ ಆಟಗಾರ ಇಂತಹ ಅಂಶಗಳನ್ನು ಸುಲಭವಾಗಿ ಅರಿತುಕೊಳ್ಳಬಹುದು. ಯಾವುದೇ ಒಬ್ಬ ಉತ್ತಮ ಬೌಲರ್ ಲೈನ್ ಅಂಡ್ ಲೆಂಥ್ ತಪ್ಪಿಸಿ ಬೌಲ್ ಮಾಡಲು ಪ್ರಯತ್ನಿಸುವುದು. ವಿಕೆಟ್ ಪಡೆಯಲು ಯತ್ನಿಸದೆ ಸುಲಭವಾಗಿ ರನ್ ಬಿಟ್ಟುಕೊಡುವುದು ನೋಡಿದರೆ ಅದು ಉದ್ದೇಶ ಪೂರ್ವಕವಾಗಿಯೇ ಮಾಡಿದ್ದಾರೆ ಎಂದು ಹೇಳಬಹುದು. ಇದು ಕೂಡ ಐಸಿಸಿ ನಿಯಮಗಳ ಭಾಗಬೇಕು. ಅಲ್ಲದೇ ಐಸಿಸಿ ಲೆವೆಲ್ 1,2..5ರ ಉಲ್ಲಂಘನೆ ಅಡಿ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದಿದ್ದಾರೆ.

    ಈ ವೇಳೆ ಭಾರತ ಉದ್ದೇಶವಾಗಿ ಪಂದ್ಯದಲ್ಲಿ ಸೋಲುಂಡಿತ್ತಾ ಎಂಬ ಪ್ರಶ್ನೆಗೆ ಉತ್ತರಿಸುವ ಅಬ್ದುಲ್ ರಜಾಕ್, ಖಂಡಿತ ಇದರಲ್ಲಿ ಯಾವುದೇ ಸಂದೇಹವಿಲ್ಲ. ಸಿಕ್ಸರ್ ಸಿಡಿಸುವ ಸಾಮರ್ಥ್ಯವಿರೋ ಆಟಗಾರ, ಬೌಂಡರಿ ಅಥವಾ ಚೆಂಡನ್ನು ಬ್ಲಾಕ್ ಮಾಡುತ್ತಿದ್ದರೆ ಸುಲಭವಾಗಿ ಇದನ್ನು ಆರ್ಥೈಸಬಹುದಾಗಿದೆ. ನಾನು ಮಾತ್ರವಲ್ಲದೇ ಹಲವು ಕ್ರಿಕೆಟ್ ಆಟಗಾರರು ಇದನ್ನೇ ಹೇಳಿದ್ದಾರೆ. ಐಸಿಸಿ ಉದ್ದೇಶ ಪೂರ್ವಕವಾಗಿ ಸೋಲುವವರ ವಿರುದ್ಧ ನಿಯಮಗಳನ್ನು ರೂಪಿಸಬೇಕಿದೆ ಎಂದು ಹೇಳಿದ್ದಾರೆ.

    ಅಂದು ಪಂದ್ಯದಲ್ಲಿ ಗೆಲ್ಲಲು 338 ರನ್ ಗುರಿ ಪಡೆದಿದ್ದ ಟೀಂ ಇಂಡಿಯಾ ಅಂತಿಮ 5 ಓವರ್ ಗಳಲ್ಲಿ 71 ರನ್ ಗಳಿಸುವ ಗುರಿಯನ್ನು ಹೊಂದಿತ್ತು. ಆ ವೇಳೆ ಧೋನಿ ಹಾಗೂ ಕೇಧಾರ್ ಜಾಧವ್ ಬ್ಯಾಟ್ ಬೀಸುತ್ತಿದ್ದರು. ಆದರೆ ಅಂದು ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ 306 ರನ್ ಕಲೆ ಹಾಕಿ 31 ರನ್ ಅಂತರದಲ್ಲಿ ಸೋಲುಂಡಿತ್ತು. ಅಂತಿಮ 5 ಓವರ್ ಗಳಲ್ಲಿ ಟೀಂ ಇಂಡಿಯಾ ಆಟಗಾರರು 39 ರನ್ ಕಲೆ ಹಾಕಲು ಮಾತ್ರ ಸಾಧ್ಯವಾಗಿತ್ತು. ಧೋನಿ 31 ಎಸೆತಗಳಲ್ಲಿ 42 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು. ಟೀಂ ಇಂಡಿಯಾ ಆಟಗಾರರು ಇನ್ನಿಂಗ್ಸ್ ನಲ್ಲಿ ಕೇವಲ 1 ಸಿಕ್ಸರ್ ಸಿಡಿಸಿದ್ದರು. ಇಂಗ್ಲೆಂಡ್ ಆಟಗಾರು 13 ಸಿಕ್ಸರ್ ಸಿಡಿಸಿದ್ದರು. ಪಂದ್ಯದ ಬಳಿಕ ಮಾತನಾಡಿದ್ದ ನಾಯಕ ಕೊಹ್ಲಿ, ಧೋನಿ ನಿಧಾನ ಗತಿ ಬ್ಯಾಟಿಂಗ್ ಶೈಲಿಗೆ ಸ್ಪಷ್ಟನೆ ನೀಡಿದ್ದರು. ಅನುಭವಿ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ಆಗಿದ್ದ ಧೋನಿ ಬೌಂಡರಿ ಸಿಡಿಸಲು ಸಾಕಷ್ಟು ಪ್ರಯತ್ನಿಸಿದ್ದರು ಎಂದಿದ್ದರು.

  • ಬುಮ್ರಾ ‘ಬೇಬಿ ಬೌಲರ್’ ಎಂದು ನಗೆಪಾಟಲಿಗೀಡಾದ ಪಾಕ್ ಮಾಜಿ ಆಟಗಾರ

    ಬುಮ್ರಾ ‘ಬೇಬಿ ಬೌಲರ್’ ಎಂದು ನಗೆಪಾಟಲಿಗೀಡಾದ ಪಾಕ್ ಮಾಜಿ ಆಟಗಾರ

    ನವದೆಹಲಿ: ಟೀಂ ಇಂಡಿಯಾ ವೇಗಿ, ಏಕದಿನದಲ್ಲಿ ವಿಶ್ವದ ನಂ.1 ಬೌಲರ್ ಜಸ್ಪ್ರೀತ್ ಬುಮ್ರಾ ‘ಬೇಬಿ ಬೌಲರ್’ ಎಂದು ಹೇಳಿಕೆ ನೀಡಿದ್ದ ಪಾಕ್ ಮಾಜಿ ಆಟಗಾರ ಅಬ್ದುಲ್ ರಜಾಕ್‍ರನ್ನು ನೆಟ್ಟಿಗರು ಟ್ರೋಲ್ ಮಾಡಿದ್ದು, ಅಬ್ದುಲ್ ರಜಾಕ್‍ರ ಕೆಲ ಮಾಹಿತಿಯನ್ನು ಹಂಚಿಕೊಂಡಿರುವ ಟ್ವಿಟ್ಟಿಗರು ರಜಾಕ್‍ರ ಕಾಲೆಳೆದಿದ್ದಾರೆ.

    ಪಾಕ್‍ನ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ಅಬ್ದುಲ್ ರಜಾಕ್, ನಾನು ಈಗ ಏನಾದರು ಕ್ರಿಕೆಟ್ ಆಡುತ್ತಿದ್ದರೆ ಸುಲಭವಾಗಿ ಬೇಬಿ ಬೌಲರ್ ಬುಮ್ರಾ ಎಸೆತವನ್ನು ದಂಡಿಸುತ್ತಿದೆ ಎಂದಿದ್ದರು.

    ವಿಶ್ವ ಹಲವು ಶ್ರೇಷ್ಠ ಆಟಗಾರರು ಬುಮ್ರಾ ಬೌಲಿಂಗ್ ಕುರಿತು ಮೆಚ್ಚುಗೆ ಸೂಚಿಸಿದ್ದರು ಕೂಡ ರಜಾಕ್ ಮಾತ್ರ ವ್ಯಂಗ್ಯವಾಗಿ ಮಾತನಾಡಿದ್ದರು. ನನ್ನ ವೃತ್ತಿ ಜೀವನದಲ್ಲಿ ವಿಶ್ವದ ಶ್ರೇಷ್ಠ ಬೌಲರ್ ಗಳನ್ನು ಎದುರಿಸಿದ್ದೇನೆ. ವಸೀಂ ಅಕ್ರಂ, ಅಖ್ತರ್, ಮೆಗ್ರಾತ್ ರಂತಹ ಸ್ಟಾರ್ ಬೌಲರ್ ಗಳ ಎದುರು ಆಡಿದ್ದೇನೆ. ಹೀಗಾಗಿ ನನಗೆ ಬುಮ್ರಾ ವಿರುದ್ಧ ಬ್ಯಾಟ್ ಮಾಡುವುದು ಕಷ್ಟ ಎನಿಸುವುದಿಲ್ಲ. ಇವರಿಗೆ ಹೋಲಿಸಿದರೆ ಬುಮ್ರಾ ನನ್ನ ಎದುರು ಇನ್ನು ಬೇಬಿ ಬೌಲರ್ ಎಂದು ರಜಾಕ್ ಸಂದರ್ಶನದಲ್ಲಿ ಹೇಳಿದ್ದರು.

    ರಜಾಕ್ ಅವರ ಈ ಕಾಮೆಂಟ್ ಗಳಿಗೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿದ್ದು, ಮೆಗ್ರಾತ್ ವಿರುದ್ಧ ರಜಾಕ್‍ರ ಬ್ಯಾಟಿಂಗ್ ಸರಾಸರಿಯನ್ನು ಟ್ವೀಟ್ ಮಾಡಿರುವ ಟ್ವಿಟ್ಟಿಗರೊಬ್ಬರು ಅವರ ಕಾಲೆಳೆದಿದ್ದಾರೆ.

    ರಜಾಕ್ ಈ ಹಿಂದೆಯೂ ಕೂಡ ಇಂತಹದ್ದೇ ಹೇಳಿಕೆಯನ್ನು ನೀಡಿದ್ದರು. ತಾವು ಬ್ಯಾಟಿಂಗ್ ದಿಗ್ಗಜರಾದ ಸಚಿನ್, ಸೆಹ್ವಾಗ್ ಅವರಿಗಿಂತಲೂ ಶ್ರೇಷ್ಠ ಆಟಗಾರ ಎಂದು ಹೇಳಿದ್ದರು. ಈ ಮಾತನ್ನು ಟ್ವಿಟ್ಟಿಗರು ಪ್ರಸ್ತಾಪಿಸಿ ವ್ಯಂಗ್ಯ ಮಾಡಿದ್ದಾರೆ. ಅಂದಹಾಗೇ ಅಬ್ದುಲ್ ರಜಾಕ್ ಪಾಕ್ ಪರ 1999ರಿಂದ 2013ರ ವರೆಗೂ ಒಟ್ಟು 265 ಏಕದಿನ, 46 ಟೆಸ್ಟ್ ಹಾಗೂ 32 ಟಿ20 ಪಂದ್ಯಗಳನ್ನು ಆಡಿದ್ದಾರೆ.

    ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ನಂ.1 ಸ್ಥಾನದಲ್ಲಿರುವ ಬುಮ್ರಾ, ಟೆಸ್ಟ್ ಮಾದರಿಯಲ್ಲಿ 5ನೇ ಸ್ಥಾನ ಪಡೆದಿದ್ದಾರೆ. ಟಿ20 ಮಾದರಿಯಲ್ಲಿ ವಿಶ್ವದ ಶ್ರೇಷ್ಠ ಡೇತ್ ಓವರ್ ಬೌಲರ್ ಎಂಬ ಖ್ಯಾತಿಯನ್ನು 26 ವರ್ಷದ ಬುಮ್ರಾ ಪಡೆದಿದ್ದಾರೆ.

  • ವಿವಾಹದ ನಂತರವೂ ಐದಾರು ಮಹಿಳೆಯರ ಜೊತೆ ಸಂಬಂಧ ಹೊಂದಿದ್ದೆ – ಅಬ್ದುಲ್ ರಜಾಕ್

    ವಿವಾಹದ ನಂತರವೂ ಐದಾರು ಮಹಿಳೆಯರ ಜೊತೆ ಸಂಬಂಧ ಹೊಂದಿದ್ದೆ – ಅಬ್ದುಲ್ ರಜಾಕ್

    ನವದೆಹಲಿ: ನಾನು ವಿವಾಹದ ನಂತರವೂ ಐದಾರು ಮಹಿಳೆಯರ ಜೊತೆ ಸಂಬಂಧ ಹೊಂದಿದ್ದೆ ಎಂದು ಪಾಕಿಸ್ತಾನದ ಮಾಜಿ ಆಲ್‍ರೌಂಡರ್ ಅಬ್ದುಲ್ ರಜಾಕ್ ಹೇಳಿದ್ದಾರೆ.

    ಪಾಕ್‍ನ ಸ್ಥಳೀಯ ಟೆಲಿವಿಷನ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಬ್ದುಲ್ ರಜಾಕ್ ತನಗೆ ಐದರಿಂದ ಆರು ವಿವಾಹೇತರ ಸಂಬಂಧಗಳು ಇದ್ದವು ಎಂದು ಹೇಳಿಕೊಂಡಿದ್ದಾರೆ ಮತ್ತು ಅವುಗಳಲ್ಲಿ ಒಂದು ಒಂದೂವರೆ ವರ್ಷಗಳ ಕಾಲ ಇತ್ತು ಎಂದು ಹೇಳಿದ್ದಾರೆ.

    ಈ ಸಮಯದಲ್ಲಿ ಈ ಕಾರ್ಯಕ್ರಮದ ನಿರೂಪಕಿ ಈ ಎಲ್ಲಾ ಸಂಬಂಧಗಳು ವಿವಾಹದ ಮುಂಚೆ ಇದ್ದವೋ ಇಲ್ಲ ವಿವಾಹದ ನಂತರ ಇತ್ತೆ ಎಂದು ಕೇಳಿದ್ದಕ್ಕೆ, ವಿವಾಹದ ನಂತರವೂ ನಾನು ಸಂಬಂಧವನ್ನು ಹೊಂದಿದ್ದೆ ಎಂದು ಉತ್ತರಿಸಿದ್ದಾರೆ.

    ವಿಶ್ವಕಪ್ ವೇಳೆ ಭಾರತದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಬಗ್ಗೆ ಟ್ವೀಟ್ ಮಾಡಿದ್ದ ರಜಾಕ್ ಅವರು, ನಾನು ಹಾರ್ದಿಕ್ ಪಾಂಡ್ಯ ಅವರನ್ನು ವಿಶ್ವದ ಉತ್ತಮ ಆಲ್‍ರೌಂಡರ್ ಆಗಿ ಮಾಡುತ್ತೇನೆ ಎಂದು ಹೇಳಿದ್ದರು.

    ವಿಶ್ವಕಪ್‍ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಪಂದ್ಯದ ನಂತರ ಟ್ವೀಟ್ ಮಾಡಿದ್ದ ರಜಾಕ್ “ನಾನು ಇಂದು ಹಾರ್ದಿಕ್ ಪಾಂಡ್ಯ ಅವರ ಆಟವನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಅವರು ದೊಡ್ಡ ಹೊಡೆತಗಳನ್ನು ಬಾರಿಸುವಾಗ ಅವರ ಬಾಡಿ ಬ್ಯಾಲೆನ್ಸ್ ಆಗುತ್ತಿಲ್ಲ. ನಾನು ಅವರು ಆಡುವಾಗ ಅವರ ಫೂಟ್ ವರ್ಕ್ ಕೂಡ ಗಮನಿಸಿದ್ದೇನೆ. ಅದರಲ್ಲಿ ದೋಷ ಇದೆ ಅದು ಅವರನ್ನು ನಿರಾಸೆಗೊಳಿಸಿದೆ” ಎಂದು ಹೇಳಿದ್ದರು.

    ನಾನು ಹಾರ್ದಿಕ್ ಪಾಂಡ್ಯಗೆ ಕೋಚಿಂಗ್ ನೀಡಲು ಸಾಧ್ಯವಾದರೆ, ನಾನು ಅವರನ್ನು ವಿಶ್ವದಲ್ಲಿ ಅತ್ಯುತ್ತಮ ಆಲ್‍ರೌಂಡರ್ ಗಳಲ್ಲಿ ಒಬ್ಬನನ್ನಾಗಿ ಮಾಡುತ್ತೇನೆ. ಬಿಸಿಸಿಐ ಅವರನ್ನು ಉತ್ತಮ ಆಲ್‍ರೌಂಡರ್ ಮಾಡಲು ಬಯಸಿದರೆ ನಾನು ಕೋಚ್ ನೀಡಲು ಯಾವಾಗಲೂ ಲಭ್ಯವಿರುತ್ತೇನೆ ಎಂದು ತಿಳಿಸಿದ್ದರು.

    ಪಾಕಿಸ್ತಾನ ಪರ 265 ಏಕದಿನ ಪಂದ್ಯಗಳನ್ನು ಆಡಿರುವ ರಜಾಕ್, ಮೂರು ಶತಕ ಮತ್ತು 23 ಅರ್ಧಶತಕಗಳೊಂದಿಗೆ 5,080 ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್‍ನಲ್ಲಿ 269 ವಿಕೆಟ್‍ಗಳನ್ನು ಕಿತ್ತಿರುವ ಅವರು ಒಂದು ಪಂದ್ಯದಲ್ಲಿ 35 ರನ್ ನೀಡಿ 6 ವಿಕೆಟ್ ಪಡೆದಿರುವುದು ಅವರ ಅತ್ಯುತ್ತಮ ಬೌಲಿಂಗ್ ಆಗಿದೆ.

    ಅಬ್ದುಲ್ ರಜಾಕ್ ಅವರು ಪಾಕಿಸ್ತಾನ ಆಯಿಷಾರನ್ನು ಮದುವೆಯಾಗಿದ್ದು ದಂಪತಿಗೆ ಓರ್ವ ಪುತ್ರ, ಪುತ್ರಿ ಇದ್ದಾಳೆ.