Tag: ಅಭಿನಂದನ್ ವರ್ಥಮಾನ್

  • ವಿಂಗ್ ಕಮಾಂಡರ್ ಅಭಿನಂದನ್‍ಗೆ ನಾಳೆ ವೀರ ಚಕ್ರ ಪ್ರದಾನ

    ವಿಂಗ್ ಕಮಾಂಡರ್ ಅಭಿನಂದನ್‍ಗೆ ನಾಳೆ ವೀರ ಚಕ್ರ ಪ್ರದಾನ

    ನವದೆಹಲಿ: ವಿಂಗ್ ಕಮಾಂಡರ್ ಅಭಿನಂದನ್ ವರ್ಧಮನ್ ಅವರು ನಾಳೆ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ‘ವೀರ್ ಚಕ್ರ’ ಪದಕವನ್ನು ಸ್ವೀಕರಿಸಲಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಪಾಕಿಸ್ತಾನ ಎಫ್-16 ಯುದ್ಧ ವಿಮಾನವನ್ನು ತನ್ನ ಮಿಗ್-21 ಯುದ್ಧ ವಿಮಾನದ ಮೂಲಕ ಹೊಡೆದುರುಳಿಸಿದ ನಂತರ ಅಭಿನಂದನ್ ಅವರು ನ್ಯಾಷನಲ್ ಹೀರೋ ಆಗಿ ಹೊರಹೊಮ್ಮಿದ್ದರು.

    ಬಾಲಾಕೋಟ್ ಏರ್ ಸ್ಟ್ರೈಕ್ ನಂತರ ಪಾಕಿಸ್ತಾನ ತನ್ನ ಎಫ್-16 ಯುದ್ಧ ವಿಮಾನದ ಮೂಲಕ ಭಾರತವನ್ನು ಗುರಿಯಾಗಿಸಿಕೊಂಡು ವಾಯು ದಾಳಿ ನಡೆಸಿದ ಸಂದರ್ಭದಲ್ಲಿ ಅಭಿನಂದನ್ ವರ್ಧಮಾನ್ ತಮ್ಮ ಮಿಗ್-21 ವಿಮಾನದ ಮೂಲಕ ಪಾಕ್ ವಿಮಾನವನ್ನು ಹೊಡೆದುರುಳಿಸಿದ್ದರು. ಈ ವೇಳೆ ಅಭಿನಂದನ್ ಅವರ ಮಿಗ್-21 ವಿಮಾನ ಪಾಕಿಸ್ತಾನದಲ್ಲಿ ಪತನಗೊಂಡಿತ್ತು. ಆಗ ಸುಮಾರು 58 ಗಂಟೆಗಳ ಕಾಲ ಅಭಿನಂದನ್ ಪಾಕಿಸ್ತಾನದ ಕಸ್ಟಡಿಯಲ್ಲೇ ಇದ್ದರು. ನಂತರ ಕೇಂದ್ರ ಸರ್ಕಾರ ಪಾಕ್ ಮೇಲೆ ಒತ್ತಡ ಹೇರಿ ಅಭಿನಂದನ್ ಅವರನ್ನು ಬಿಡಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿತ್ತು.

    ಪಾಕಿಸ್ತಾನದ ಅತ್ಯಾಧುನಿಕ ಯುದ್ಧ ವಿಮಾನ ಎಫ್ 16 ಹೊಡೆದುರುಳಿಸಿದ್ದ ವಿಂಗ್ ಕಮಾಂಡರ್ ಅಭಿನಂದನ್ ಅವರಿಗೆ ಡಿ ಬ್ರೀಫಿಂಗ್ ಪ್ರಕ್ರಿಯೆ ನಡೆಸಿದ ಸಂದರ್ಭದಲ್ಲಿ ರಜೆ ಮೇಲೆ ಮನೆಗೆ ತೆರಳುವಂತೆ ಸೇನೆಯ ಸಂಶೋಧನೆ ಹಾಗೂ ರೆಫರೆಲ್ ಆಸ್ಪತ್ರೆಯ ವೈದ್ಯರು ಸಲಹೆ ನೀಡಿದ್ದರು.

    ಡಿ ಬ್ರೀಫಿಂಗ್ ವೇಳೆ ಅಭಿನಂದನ್ ಅವರು ಪಾಕ್ ಸೆರೆಯಲ್ಲಿದ್ದ ಸಂದರ್ಭದಲ್ಲಿ ನಡೆದ ಅನುಭವಗಳ ಬಗ್ಗೆ ವಿವರಿಸಿದ್ದರು. ಅದರಲ್ಲೂ ಪಾಕಿಸ್ತಾನಿ ಸೇನೆ ನೀಡಿದ ಮಾನಸಿಕ ಹಿಂಸೆಯ ಬಗ್ಗೆ ಮಾಹಿತಿ ನೀಡಿದ್ದರು.

    ಫೆ.14 ರಂದು ಪುಲ್ವಾಮಾದಲ್ಲಿ ನಡೆದ ದಾಳಿಯನ್ನು ಜೈಷ್-ಎ-ಮೊಹಮ್ಮದ್ ಸಂಘಟನೆ ಹೊಣೆ ಹೊತ್ತುಕೊಂಡ ಬಳಿಕ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಏರ್ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಪರಿಣಾಮ ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರ ಬೆನ್ನಲ್ಲೇ ಭಾರತ ನೆಲವನ್ನು ಪ್ರವೇಶಿಸಿದ್ದ ಪಾಕ್ ಯುದ್ಧ ವಿಮಾನಗಳು ದಾಳಿ ನಡೆಸಲು ವಿಫಲವಾಗಿ ಹಿಂದಿರುಗಿತ್ತು. ಈ ಸಂದರ್ಭದಲ್ಲಿ ಪಾಕಿಸ್ತಾನ ಎಫ್-16 ವಿಮಾನವನ್ನು ಚೇಸ್ ಮಾಡುತ್ತಿದ್ದಾಗ ಮಿಗ್ ವಿಮಾನ ಪತನಗೊಂಡು ಅಭಿನಂದನ್ ಪ್ಯಾರಾಚೂಟ್ ಸಹಾಯದಿಂದ ಧುಮುಕಿದ್ದರು.

    ಪಾಕ್ ಅಕ್ರಮಿತ ಪ್ರದೇಶದಲ್ಲಿ ಬಿದ್ದ ವೇಳೆ ಅಭಿನಂದನ್ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪರಿಣಾಮ ಗಾಯಗೊಂಡಿದ್ದರು. ಅದಕ್ಕೂ ಮುನ್ನವೇ ಸೇನೆಗೆ ಸಂಬಂಧಿಸಿದ್ದ ಮುಖ್ಯ ದಾಖಲೆಗಳು ಪಾಕಿಸ್ತಾನದ ಸೇನೆಗೆ ಸಿಗದಂತೆ ಮಾಡಿ ನಾಶ ಪಡಿಸಿದ್ದರು. ಅಲ್ಲದೇ ಕೆಲ ದಾಖಲೆಗಳನ್ನು ತಾವೇ ನುಂಗಿಹಾಕಿದ್ದರು. ಪಾಕಿಸ್ತಾನದಿಂದ ವಾಪಸ್ ಆದ ಬಳಿಕ ಮಾರ್ಚ್ 2 ರಂದು ಅಭಿನಂದನ್ ಅವರನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಆಗಿದ್ದರು. ಆ ಬಳಿಕ ದೆಹಲಿಯ ಸೇನೆಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರು.

    https://www.youtube.com/watch?v=ArvRnqPs81s

  • ಭಾರತೀಯರಿಗೆ ಅಭಿನಂದನ್ ತಂದೆ ಧನ್ಯವಾದ

    ಭಾರತೀಯರಿಗೆ ಅಭಿನಂದನ್ ತಂದೆ ಧನ್ಯವಾದ

    ಮುಂಬೈ: ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರ ತಂದೆ ಭಾರತೀಯರಿಗೆ ಧನ್ಯವಾದ ತಿಳಿಸಿದ್ದಾರೆ.

    ನನ್ನ ಮಗ ನಿಜಕ್ಕೂ ಒಬ್ಬ ಯೋಧ. ಆತನ ಬಗ್ಗೆ ನನಗೆ ಹೆಮ್ಮೆಯಿದ್ದು, ಆತ ಸುರಕ್ಷಿತವಾಗಿ ಭಾರತಕ್ಕೆ ವಾಪಸ್ಸಾಗುವಂತೆ ಪ್ರಾರ್ಥಿಸುತ್ತಿದ್ದೇನೆ. ಅಲ್ಲದೇ ಭಾರತೀಯರು ಕೂಡ ಮಗ ವಾಪಸ್ ಬರುವಂತೆ ಪ್ರಾರ್ಥಿಸುತ್ತಿರುವುದಕ್ಕೆ ಧನ್ಯವಾದ ಅರ್ಪಿಸುತ್ತೇನೆ ಎಂದು ಎಸ್. ವರ್ಥಮಾನ್ ಅವರು ಸಂದೇಶ ರವಾನಿಸಿದ್ದಾರೆ.

    ಸಂದೇಶದಲ್ಲಿ ಏನಿದೆ?:
    ನಿಮ್ಮೆಲ್ಲರ ಪ್ರೀತಿ, ಕಾಳಜಿ ಹಾಗೂ ಪ್ರಾರ್ಥನೆಗೆ ಧನ್ಯವಾದಗಳು. ನಾನು ಈವಾಗಷ್ಟೇ ಪಾಕಿಸ್ತಾನ ಬಿಡುಗಡೆ ಮಾಡಿದೆ ವಿಡಿಯೋ ನೋಡಿದೆ. ಅಭಿನಂದನ್ ಜೀವಂತವಾಗಿದ್ದು, ಸೇನೆ ಕೇಳುತ್ತಿರುವ ಪ್ರಶ್ನೆಗಳಿಗೆಲ್ಲ ಧೈರ್ಯವಾಗಿ ಉತ್ತರಿಸುತ್ತಿದ್ದಾನೆ. ಆತ ನಿಜಕ್ಕೂ ಶುದ್ಧ ಮನಸ್ಸಿನ ಯೋಧ. ದೇವರ ಕೃಪೆ ಅಭಿ ಮೇಲಿದ್ದು, ಆತ ಯಾವುದೇ ಪ್ರಾಣಾಪಾಯವಿಲ್ಲದೇ ಭರತ ಭೂಮಿಗೆ ವಾಪಸ್ ಬರಬೇಕು ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

    ನನಗೆ ಗೊತ್ತು ನಿಮ್ಮೆಲ್ಲರ ಆಶೀರ್ವಾದದ ಕೈಗಳು ಅಭಿನಂದನ್ ಮೇಲಿದೆ. ಆತನ ಸುರಕ್ಷಿತವಾಗಿ ಬಿಡುಗಡೆಯಾಗುವಂತೆ ನೀವೆಲ್ಲ ಪ್ರಾರ್ಥಿಸುತ್ತಿದ್ದೀರಾ. ಆತನಿಗೆ ಅಲ್ಲಿ ಯಾವುದೇ ತೊಂದರೆಯಾಗದಿರಲಿ ಹಾಗೂ ಸುರಕ್ಷಿತವಾಗಿ ಮರಳಲಿ ಎಂದು ನಾನು ಕೂಡ ಪ್ರಾರ್ಥಿಸುತ್ತೇನೆ. ಈ ಸಮಯದಲ್ಲಿ ನಮ್ಮ ಜೊತೆ ನೀವೆಲ್ಲ ಕೈ ಜೋಡಿಸಿರುವುದಕ್ಕೆ ಧನ್ಯವಾದಗಳು ಎಂದಿದ್ದಾರೆ.

    ಅಭಿನಂದನ್ ಪಾಕ್ ವಶವಾಗಿದ್ದು ಹೇಗೆ..?
    ಪಾಕಿಸ್ತಾನ ಮಂಗಳವಾರ ಭಾರತದ ಗಡಿಯೊಳಗೆ ಯುದ್ಧ ವಿಮಾನಗಳನ್ನು ನುಗ್ಗಿಸಿ ದುಸ್ಸಾಹಸ ಮಾಡಿತ್ತು. ಭಾರತದ ಗಡಿ ದಾಟಿದ 3 ವಿಮಾನಗಳ ಪೈಕಿ, ಪಾಕಿಸ್ತಾನದ ಎಫ್-16 ಒಂದು ಯುದ್ಧ ವಿಮಾನವನ್ನು ಭಾರತ ಹೊಡೆದುರುಳಿಸಿದೆ. ಇನ್ನೆರಡು ವಿಮಾನಗಳನ್ನು ಮಿಗ್-21 ವಿಮಾನವನ್ನು ಅಟ್ಟಾಡಿಸಿಕೊಂಡು ಹೋಗಿದೆ. ಪಾಕ್ ನೆಲದಲ್ಲಿ ಮಿಗ್ 22 ನೆಲಕ್ಕುರುಳಿದೆ. ಈ ವೇಳೆ ಅಭಿನಂದನ್ ಪ್ಯಾರಾಚೂಟ್‍ನಿಂದ ಜಿಗಿದು ನೆಲಕ್ಕೆ ಬಿದ್ದಿದ್ದಾರೆ. ತಮ್ಮ ನೆಲದಲ್ಲಿ ಅಭಿನಂದನ್ ಇರುವುದನ್ನು ಗಮನಿಸಿದ ಸ್ಥಳಿಯರು ಪಾಕಿಸ್ತಾನ ಸೇನೆಗೆ ಮಾಹಿತಿ ರವಾನಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪಾಕ್ ಸೈನಿಕರು ಅಭಿನಂದನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಅಭಿನಂದನ್ ಯಾರು..?
    45 ವರ್ಷದ ಅಭಿನಂದನ್ ಅವರು ಮೂಲತಃ ತಮಿಳುನಾಡಿನ ಸಿಂಹಕುಟ್ಟಿಯವರಾಗಿದ್ದಾರೆ. ವಿಂಗ್ ಕಮಾಂಡರ್ ಆಗಿರುವ ಅಭಿನಂದನ್ ಅವರಿಗೆ ಮಿಗ್ 21ನಲ್ಲೇ 3000 ಗಂಟೆ ಹಾರಾಟ ನಡೆಸಿರುವ ಅನುಭವವಿದೆ.

    ಇವರ ತಂದೆಯ ಹೆಸರು ಎಸ್. ವರ್ಥಮಾನ್ ಆಗಿದ್ದು, ಇವರು ನಿವೃತ್ತ ಮಾರ್ಷಲ್ ಆಗಿದ್ದಾರೆ. ಪರಮವಿಶಿಷ್ಟ ಸೇವಾ ಪದಕ ಪಡೆದಿದ್ದ ವರ್ಥಮಾನ್, ಮಣಿರತ್ನಂ ನಿರ್ದೇಶನದ ಚೆಲಿಯಾ ಚಿತ್ರಕ್ಕೆ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. ಚೆಲಿಯಾ – ಕಾರ್ಗಿಲ್ ಯುದ್ಧದ ವೇಳೆ ಪಾಕ್‍ನಲ್ಲಿ ಯುದ್ಧ ಕೈದಿಯಾದ ಸೈನಿಕನ ಕಥೆಯಾಗಿರುವ ಚಿತ್ರವಾಗಿದೆ.

    https://www.youtube.com/watch?v=05fJuSBr4ZE

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv