Tag: ಅಭಿನಯ ಶಾರದೆ ಜಯಂತಿ

  • ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ ಕಲಾವಿದೆ ಜಯಂತಿ: ಗಣ್ಯರ ಸಂತಾಪ

    ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ ಕಲಾವಿದೆ ಜಯಂತಿ: ಗಣ್ಯರ ಸಂತಾಪ

    -ನನ್ನ ಇಷ್ಟದ ನಟಿ ಜಯಂತಿಯವರ ನಿಧನ ಅತೀವ ದುಃಖವಾಗಿದೆ

    ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ಕಲಾವಿದೆ ಜಯಂತಿ ಅವರ ನಿಧನಕ್ಕೆ ಗಣ್ಯರು ಟ್ವೀಟ್ ಮಾಡುವ ಮೂಲಕವಾಗಿ ಸಂತಾಪ ಸೂಚಿಸಿದ್ದಾರೆ.

    ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜಯಂತಿ ಅವರ ನಿಧನಕ್ಕೆ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

    ಅಭಿಜಾತ ಪ್ರತಿಭೆಯ ಮೂಲಕ ದಶಕಗಳ ಕಾಲ ಚಿತ್ರಪ್ರೇಮಿಗಳ ಮನಗೆದ್ದಿದ್ದ ನಟಿ ಜಯಂತಿ ಅವರು ನಿಧನರಾಗಿದ್ದರೆ. ನನ್ನ ಇಷ್ಟದ ನಟಿ ಅಭಿನಯ ಶಾರದೆ ಜಯಂತಿಯವರ ನಿಧನದಿಂದ ಅತೀವ ದುಃಖ ವಾಗಿದೆ. ಜಯಂತಿ ಅವರು ತಮ್ಮ ಚಿತ್ರಗಳ ಮೂಲಕ ಸದಾಕಾಲ ನಮ್ಮೆಲ್ಲರ ಮನದಲ್ಲಿ ಅಜರಾಮಾರರಾಗಿ ಇರುತ್ತಾರೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

    ಅಭಿನಯ ಶಾರದೆ ಜಯಂತಿ ಅವರು ನಿಧನರಾದ ಸಂಗತಿ ಬೇಸರ ತರಿಸಿದೆ. ಕನ್ನಡ, ತೆಲಗು, ತಮಿಳು, ಮಲಯಾಳಂ, ಹಿಂದಿಯಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಜಯಂತಿ ಅವರು ದಕ್ಷಿಣ ಭಾರತದ ಪ್ರಖ್ಯಾತ ನಟಿ ಎನಿಸಿಕೊಂಡಿದ್ದರು. ಅವರು ಕನ್ನಡಿಗರೆಂಬುದೇ ನಮ್ಮ ಹೆಮ್ಮೆ. ಅವರಿಗೆ ಸದ್ಗತಿ ದೊರೆಯಲಿ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಟ್ವೀಟ್ ಮಾಡುವ ಮೂಲವಾಗಿ ಎಚ್ ಡಿ ಕುಮಾರಸ್ವಾಮಿಯವರು ಸಂತಾಪ ಸೂಚಿಸಿದ್ದಾರೆ.

    ಹಿರಿಯ ನಟಿ, ಅಭಿನಯ ಶಾರದೆ ಶ್ರೀಮತಿ ಜಯಂತಿ ಅವರ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. 6 ಭಾಷೆಗಳ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಅವರು ಒನಕೆ ಓಬವ್ವ ರೀತಿಯ ಪೌರಾಣಿಕ ಪಾತ್ರ ಸೇರಿದಂತೆ ಅನೇಕ ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ್ದಾರೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಆರೋಗಹ್ಯ ಸಚಿವ ಕೆ ಸುಧಾಕರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

     

  • ಮತ್ತೊಮ್ಮೆ ಹುಟ್ಟಿ ಬಾ ತಾಯಿ.. ಕನ್ನಡ ನೆಲದಲ್ಲಿ: ಉಮಾಶ್ರೀ ಕಂಬನಿ

    ಮತ್ತೊಮ್ಮೆ ಹುಟ್ಟಿ ಬಾ ತಾಯಿ.. ಕನ್ನಡ ನೆಲದಲ್ಲಿ: ಉಮಾಶ್ರೀ ಕಂಬನಿ

    ಬೆಂಗಳೂರು: ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನಕ್ಕೆ ಸ್ಯಾಂಡಲ್‍ವುಡ್‍ನ ಅನೇಕ ಕಲಾವಿದರು, ಗಣ್ಯರು ಕಂಬನಿ ಮೀಡಿದಿದ್ದಾರೆ. ಹಿರಿಯ ಕಲಾವಿದೆ ಉಮಾಶ್ರೀ ಅವರು ಜಯಂತಿ ಅವರನ್ನು ನೆನೆದು ಕಣ್ಣೀರು ಹಾಕಿದ್ದಾರೆ.

    ಹಿರಿಯ ನಟಿ ಉಮಾಶ್ರೀ ಅವರು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿ ಜಯಂತಿಯವರನ್ನು ನೆನೆದು ದುಃಖ ತೃಪ್ತರಾಗಿದ್ದಾರೆ. ಸಹೃದಯಿ, ಮಮತಾಮಯಿ ನಮ್ಮನ್ನು ಅಗಲಿದ್ದಾರೆ. ನನಗೆ ತುಂಬಾ ದುಃಖವಾಗುತ್ತಿದೆ. ಸಣ್ಣವರಿಂದ, ದೊಡ್ಡವರವರೆಗೂ ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದ ಕಲಾವಿದೆ. ಅವರ ಅಭಿನಯಕ್ಕೆ ಅವರೆ ಸಾಟಿಯಾಗಿದ್ದಾರೆ. ಕಮಲ ಕುಮಾರಿ ಎನ್ನವ ಹೆಸರು ಎಷ್ಟೊಂದು ಚಂದ ಇದೆ. ಅವರು ಕಷ್ಟಕಗಳು ಕಮಲದ ಹೂವು ಹೇಗೆ ಕೆಸರಿನಲ್ಲಿ ಅರಳುತ್ತದೆಯೋ ಹಾಗೇ ಇವರು ಕಷ್ಟಗಳ ಮಧ್ಯೆಗೆ ಬಂದವರಾಗಿದ್ದಾರೆ. ವಯಸ್ಸು ಆಗಿದ್ದರು ಅವರ ವರ್ಚಸ್ಸು ಕಡಿಮೆಯಾಗಿರಲಿಲ್ಲ. ಮತ್ತೊಮ್ಮೆ ಹುಟ್ಟಿ ಬಾ ತಾಯಿ… ಕನ್ನಡ ನೆಲದಲ್ಲಿ. ಕನ್ನಡದ ಆಸ್ತಿ ಅವರು ಹೀಗಾಗಿ ಅವರು ಮತ್ತೆ ಕಲಾವಿದೆಯಾಗಿ ಹುಟ್ಟಿಬರಬೇಕು ಎಂದು ಭಗವಂತನಲ್ಲಿ ಬೇಡಿಕೊಳ್ಳುತ್ತೇನೆ ಎಂದು ಹೇಳುತ್ತಾ ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಅಭಿನಯ ಶಾರದೆ, ಹಿರಿಯ ನಟಿ ಜಯಂತಿ ವಿಧಿವಶ

    ಸಿನಿಮಾಕ್ಕೆ ಬರಬೇಕು ಎಂದರೆ ತುಂಬಾ ಕಷ್ಟ ಇತ್ತು. ಡಾನ್ಸ್, ನಟನೆ, ಹಾವಭಾವ, ಧ್ವನಿಯಲ್ಲಿ ಏರಿಳಿತ ಇರಬೇಕಿತ್ತು. ಅವರು ಎಷ್ಟೊಂದು ಬೋಲ್ಡ್ ಮತ್ತು ಬ್ಯೂಟಿಫುಲ್ ಆಗಿದ್ದರು. ಅವರು ಎಷ್ಟೊಂದು ಧೈರ್ಯ ಇತ್ತು ಎಂದರೆ ಈಗ ಕಾಮನ್ ಆಗಿರುವ ಸ್ವಿಮ್ಮಿಂಗ್‍ಸೂಟ್‍ನ್ನು ಅವರು ಆಗಲೇ ಹಾಕಿದ್ದರು. ಅವರಿಂದ ಕಲಿಯಬೇಕಿದ್ದು ತುಂಬಾ ಇತ್ತು. ಗ್ರಂಥಾಲಯದಲ್ಲಿರುವ ದೊಡ್ಡ ಗ್ರಂಥವಾಗಿದ್ದಾರೆ. ಜಯಂತಿ ಅವರ ಅವರ ಮಗ ತಾಯಿಗೋಸ್ಕರನೆ ಬದುಕಿದ್ದರು. ಮಗನಿಗೆ ದೇವರು ಒಳ್ಳೆಯದು ಮಾಡಲಿ ಎಂದು ಹೇಳುತ್ತಾ ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಈಗ ನಾನು ಟ್ರೋಲ್ ಆಗುತ್ತಿರಬಹುದು – ಅರವಿಂದ್, ಚಕ್ರವರ್ತಿ ಚರ್ಚೆ

    ಬನಶಂಕರಿಯ ಸ್ವಗ್ರಹದಲ್ಲಿ ಜಯಂತಿ ಅವರು ನಿನ್ನೆ ರಾತ್ರಿ ಎಂದಿನಂತೆ ಊಟ ಮಾಡಿ ಮಲಗಿದ್ದ ಜಯಂತಿ ಅವರು ಬೆಳಗ್ಗೆ ಎದ್ದೇಳಲೇ ಇಲ್ಲ, ರಾತ್ರಿ ಹೇಗೆ ಈ ಘಟನೆ ಸಂಭವಿಸಿತು ಗೊತ್ತಿಲ್ಲ. ಬೆಳಗ್ಗೆ ಎದ್ದೇಳಿಸೋಕೆ ನೋಡಿದೆವು ನಮಗೆ ಆಗಲೇ ತಿಳಿದಿದ್ದು, ಹೃದಯಾಘಾತವಾಗಿರಬಹುದೇನೋ ಗೊತ್ತಿಲ್ಲ. ಮುಂದಿನ ಕಾರ್ಯಗಳ ಬಗ್ಗೆ ಈಗೇನೂ ಗೊತ್ತಾಗುತ್ತಿಲ್ಲ ಎಂದು ಜಯಂತಿ ಜಯಂತಿ ಪುತ್ರ ಕೃಷ್ಣ ಕುಮಾರ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.