Tag: ಅಭಿಯಾನ

  • ಗೋ ಬ್ಯಾಕ್ ಅಭಿಯಾನ – ನನ್ನನ್ನು ಸುಳ್ಳುಗಾರ ಅಂತಾ ಕರೆಯೋದು ಎಷ್ಟು ಸರಿ?: ಸೋಮಣ್ಣ ಭಾವುಕ

    ಗೋ ಬ್ಯಾಕ್ ಅಭಿಯಾನ – ನನ್ನನ್ನು ಸುಳ್ಳುಗಾರ ಅಂತಾ ಕರೆಯೋದು ಎಷ್ಟು ಸರಿ?: ಸೋಮಣ್ಣ ಭಾವುಕ

    ಚಾಮರಾಜನಗರ: ನಗರದಲ್ಲಿ ನಡೆಸಲಾದ ಗೋ ಬ್ಯಾಕ್ ಸೋಮಣ್ಣ ಅಭಿಯಾನದ ಹಿಂದೆ ರಾಜಕೀಯ ಪಿತೂರಿ ಇದೆ. ನನ್ನನ್ನು ಸುಳ್ಳುಗಾರ ಎಂದು ಕರೆಯುವುದು ಎಷ್ಟು ಸರಿ? ಬೆಂಗಳೂರಿನಿಂದ ಫ್ಲೆಕ್ಸ್ ಬೋರ್ಡ್ ತಂದು ಹಾಕಿ ತೇಜೋವಧೆ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ? ಎಂದು ಸಚಿವ ವಿ ಸೋಮಣ್ಣ (V Somanna) ಭಾವುಕರಾಗಿ ಪ್ರಶ್ನಿಸಿದ್ದಾರೆ.

    ಮುರಿದ ರಥ ಹಾಗೂ ದೇವಸ್ಥಾನ ಜೀರ್ಣೋದ್ಧಾರ ಮಾಡಿಕೊಡುವುದಾಗಿ ಭರವಸೆ ನೀಡಿದ್ದ ಸೋಮಣ್ಣ ಕೊಟ್ಟ ಮಾತಿಗೆ ತಪ್ಪಿದ್ದಾರೆಂದು ಗೋಬ್ಯಾಕ್ ಸೋಮಣ್ಣ ಅಭಿಯಾನ ಆರಂಭಿಸಿದ್ದ ಚಾಮರಾಜನಗರ (Chamarajanagar) ತಾಲೂಕಿನ ಚನ್ನಪ್ಪನಪುರ ಅಮಚವಾಡಿ ಮತ್ತಿತರ ಗ್ರಾಮಸ್ಥರೊಂದಿಗೆ ಸೋಮಣ್ಣ ಸಭೆ ನಡೆಸಿದರು.

    ಈ ಅಭಿಯಾನದ ಹಿಂದೆ ರಾಜಕೀಯ ಪಿತೂರಿ ಇರುವ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪಿಸಿದ ಸೋಮಣ್ಣ ನಾನೇನು ತಪ್ಪು ಮಾಡಿದ್ದೇನೆ? ನನ್ನನ್ನು ಖಳನಾಯಕನನ್ನಾಗಿ ಮಾಡಿದ್ದೀರಿ. ಯಾರೋ ಸೃಷ್ಟಿ ಮಾಡಿ ಕಳಿಸುತ್ತಾರೆ. ಯಾರದ್ದೋ ಮಾತು ಕೇಳಿ ಕೆಟ್ಟದಾಗಿ ನಡೆದುಕೊಂಡರೆ ಹೇಗೆ? ಇನ್ನೊಬ್ಬರ ಮುಲಾಜಿಗೋಸ್ಕರ, ಇನ್ನೊಬ್ಬರನ್ನು ತೃಪ್ತಿಪಡಿಸಲು ನನ್ನನ್ನು ಕೆಟ್ಟದಾಗಿ ಬಿಂಬಿಸಿ ಹರಾಜು ಹಾಕಿದ್ದೀರಿ ಎಂದು ತೀವ್ರ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಮುಸ್ಲಿಮರು 3 ಕಡೆ ಲಾಭ ಪಡೆಯುತ್ತಿದ್ದಾರೆ; ಮೀಸಲಾತಿ ಇವರಪ್ಪನ ಮನೆಯದ್ದಾ – ಯತ್ನಾಳ್‌ ಪ್ರಶ್ನೆ

    ದೇವರ ಹತ್ರ ಪಾಲಿಟಿಕ್ಸ್, ಚಿಲ್ಲರೆ ಕೆಲಸ ಮಾಡಬಾರದು, ಕಳೆದು ಹೋಗ್ತೀರಿ ಎಂದಂತಹ ಅವರು ತಮ್ಮ ರಾಜಕೀಯ ವಿರೋಧಿಗಳಿಗೆ ಎಚ್ಚರಿಕೆ ನೀಡಿದರು. ದೇವಸ್ಥಾನ ಸ್ವಚ್ಛವಾಗಿ ಇಟ್ಟುಕೊಳ್ಳಿ ಎನ್ನುವುದೇ ತಪ್ಪಾ? ತಪ್ಪಾಗಿದ್ದರೆ ಕ್ಷಮಿಸಿ. ನನ್ನ ತೇಜೋವಧೆ ಮಾಡಿದ್ದಕ್ಕೆ ದೇವಸ್ಥಾನ ಹೇಗೆ ಅಭಿವೃದ್ಧಿ ಮಾಡುತ್ತೇನೆ ನೋಡ್ತಾ ಇರಿ. ರಥ ನಿರ್ಮಾಣ ಹಾಗೂ ದೇವಸ್ಥಾನ ಅಭಿವೃದ್ಧಿಗೆ ಕ್ರಮ ವಹಿಸುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಮೈಸೂರಿನ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೊರಟಾಗ ದೊಡ್ಡಗೌಡ್ರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಪತ್ನಿ

  • 9 ದಿನದ ಬ್ರೇಕ್ ಬಳಿಕ ಜೋಡೋ ಯಾತ್ರೆ ಪುನರಾರಂಭ

    9 ದಿನದ ಬ್ರೇಕ್ ಬಳಿಕ ಜೋಡೋ ಯಾತ್ರೆ ಪುನರಾರಂಭ

    ಲಕ್ನೋ: ಕಾಂಗ್ರೆಸ್‌ನ (Congress) ಭಾರತ್ ಜೋಡೋ ಯಾತ್ರೆ (Bharat Jodo Yatra) ಉತ್ತರ ಪ್ರದೇಶದಲ್ಲಿ 9 ದಿನಗಳ ಚಳಿಗಾಲದ ವಿರಾಮ ಪಡೆದು ಇಂದು ಮತ್ತೆ ಪುನರಾರಂಭವಾಗುತ್ತಿದೆ.

    ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಜೋಡೋ ಯಾತ್ರೆ 110 ದಿಗಳಿಗಿಂತಲೂ ಹೆಚ್ಚು ಕಳೆದಿದ್ದು, ಸುಮಾರು 2,000 ಕಿ.ಮೀ ಕ್ರಮಿಸಿದೆ. ದಕ್ಷಿಣದ ರಾಜ್ಯದಿಂದ ಪ್ರಾರಂಭವಾದ ಪಾದಯಾತ್ರೆ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಹೊರಟು ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಸಂಚರಿಸಿದೆ.

    ಯಾತ್ರೆ ಜಮ್ಮು ಕಾಶ್ಮೀರದಲ್ಲಿ ಅಂತ್ಯಗೊಳ್ಳಲಿದೆ. ಇದು ಭಾರತದ ಇತಿಹಾಸದಲ್ಲೇ ಯಾವುದೇ ಭಾರತೀಯ ರಾಜಕಾರಣಿ ನಡೆಸಿರುವ ಅತಿ ಉದ್ದದ ಮೆರವಣಿಗೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಜನವರಿ 26 ರಂದು ಯಾತ್ರೆ ಶ್ರೀನಗರ ತಲುಪಲಿದ್ದು, ಅಲ್ಲಿ ಕೊನೆಗೊಳ್ಳಲಿದೆ.

    ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯನ್ನು ಕೊನೆಗೊಳಿಸಿದ ಬಳಿಕ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಗುರಿಯನ್ನು ರಾಹುಲ್ ಗಾಂಧಿ ಹೊಂದಿದ್ದಾರೆ. ದೇಶಾದ್ಯಂತ ಯಾತ್ರೆಯ ಸಂದೇಶವನ್ನು ಹರಡುವ ಉದ್ದೇಶದಿಂದ ‘ಹಾಥ್ ಸೆ ಹಾಥ್ ಜೋಡೋ’ (Haath Se Haath Jodo) ಅಭಿಯಾನವನ್ನು (Campaign) ಪ್ರಾರಂಭಿಸಲು ಕಾಂಗ್ರೆಸ್ ಯೋಜಿಸಿದೆ. ಇದನ್ನೂ ಓದಿ: ಸಿದ್ಧೇಶ್ವರ ಶ್ರೀ ಲಿಂಗೈಕ್ಯ – ಕನ್ನಡದಲ್ಲೇ ಟ್ವೀಟ್‌ ಮಾಡಿ ಪ್ರಧಾನಿ ಮೋದಿ ಸಂತಾಪ

    ಮೂಲಗಳ ಪ್ರಕಾರ ರಾಹುಲ್ ಸಹೋದರಿ, ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ದೇಶಾದ್ಯಂತ ‘ಹಾಥ್ ಸೆ ಹಾಥ್ ಜೋಡೋ’ ಅಭಿಯಾನವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಲಾಗಿದೆ. ಮುಖ್ಯವಾಗಿ ಮಹಿಳೆಯರನ್ನು ಕೇಂದ್ರೀಕರಿಸುವುದು ಇದರ ಉದ್ದೇಶವಾಗಿದೆ.

    ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಾತನಾಡಿ, ಭಾರತ್ ಜೋಡೋ ಯಾತ್ರೆಯ ಬಳಿಕ ಕಾಂಗ್ರೆಸ್ 2 ತಿಂಗಳ `ಹಾಥ್ ಸೆ ಹಾಥ್’ ಜೋಡೋ ಅಭಿಯಾನ ಆರಂಭಿಸಲಿದೆ ಎಂದು ತಿಳಿಸಿದ್ದಾರೆ.

    ಮಹಿಳೆಯರಿಗೆ ಸಂಬಂಧಿಸಿದ ಇತರ ಸಮಸ್ಯೆಗಳು ಕೂಡ ಅಭಿಯಾನದಲ್ಲಿ ಪ್ರಮುಖ ವಿಷಯವಾಗಿರಲಿದೆ. ದೇಶದ ಜನಸಂಖ್ಯೆಯ ಸರಿಸುಮಾರು ಅರ್ಧದಷ್ಟು ಭಾಗವನ್ನು ಒಳಗೊಂಡಿರುವ ಮಹಿಳಾ ಮತದಾರರನ್ನು ಓಲೈಸುವ ಗುರಿಯನ್ನು ಪಕ್ಷ ಹೊಂದಿದೆ ಎನ್ನಲಾಗಿದೆ. ಇದನ್ನೂ ಓದಿ: ವಿಜಯಪುರ: ಸಿದ್ಧೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯತ್ತ ಭಕ್ತಸಾಗರ

    Live Tv
    [brid partner=56869869 player=32851 video=960834 autoplay=true]

  • ಬಿಗ್ ಬಾಸ್ ಟ್ರೋಫಿಯನ್ನು ರಾಕೇಶ್ ಅಡಿಗ ಗೆಲ್ಲಬೇಕಿತ್ತು: ಹೀಗೊಂದು ಅಭಿಯಾನ

    ಬಿಗ್ ಬಾಸ್ ಟ್ರೋಫಿಯನ್ನು ರಾಕೇಶ್ ಅಡಿಗ ಗೆಲ್ಲಬೇಕಿತ್ತು: ಹೀಗೊಂದು ಅಭಿಯಾನ

    ನ್ನಡದ ಬಿಗ್ ಬಾಸ್ ಸೀಸನ್ 9ರ ಟ್ರೋಫಿ ರೂಪೇಶ್ ಶೆಟ್ಟಿ ಪಾಲಾಗಿದೆ. ಆ ಟ್ರೋಫಿಯ ಜೊತೆಗೆ ಅವರು ಸಂಭ್ರಮಿಸುತ್ತಿದ್ದಾರೆ. ಆದರೆ, ಈ ಟ್ರೋಫಿ ರಾಕೇಶ್ ಅಡಿಗ ಕೈಯಲ್ಲಿ ಇರಬೇಕಿತ್ತು ಎನ್ನುವ ಅಭಿಯಾನ ಸೋಷಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಈ ಟ್ರೋಫಿಗೆ ರಾಕೇಶ್ ಅರ್ಹವಾದ ಸ್ಪರ್ಧಿ. ಅವರು 99 ದಿನಗಳ ಕಾಲವೂ ಮನರಂಜಿಸುತ್ತಾ, ಎಲ್ಲರೊಂದಿಗೆ ಬೆರೆಯುತ್ತಾ ಕೋಪ ಮಾಡಿಕೊಳ್ಳದೇ ಆಡಿದ್ದಾರೆ. ಹಾಗಾಗಿ ಟ್ರೋಫಿಗೆ ಅವರು ಅರ್ಹರು ಎಂದು ಸಾಕಷ್ಟು ಜನ ಪೋಸ್ಟ್ ಮಾಡುತ್ತಿದ್ದಾರೆ.

    ಹಾಗಂತ ರೂಪೇಶ್ ಶೆಟ್ಟಿ ಆಟ ಕಳಪೆಯೇನೂ ಇರಲಿಲ್ಲ. ಅವರೂ ಈ ಟ್ರೋಫಿಗೆ ಅರ್ಹರೇ ಆಗಿದ್ದಾರೆ. ಮನೆಯಲ್ಲಿ ಇದ್ದಷ್ಟು ದಿನವೂ ಒಳ್ಳೆಯ ರೀತಿಯಲ್ಲೇ ಆಟವಾಡಿದ್ದಾರೆ. ಪ್ರತಿ ಟಾಸ್ಕ್ ನಲ್ಲೂ ಉತ್ತಮ ಪ್ರದರ್ಶನ ಮಾಡಿದ್ದಾರೆ. ಆದರೆ, ರಾಕೇಶ್ ಗೆ ಇದ್ದ ತಾಳ್ಮೆ ಮತ್ತು ಜಾಣನಡೆ ರೂಪೇಶ್ ಅವರಲಿಲ್ಲ ಇರಲಿಲ್ಲ ಎನ್ನುವುದು ಕೆಲವರ ವಾದ. ಒಂದು ಕಡೆ ರಾಕೇಶ್ ಬೆಂಬಲಿಗರು ಈ ಟ್ರೋಫಿ ರಾಕೇಶ್ ಗೆ ಬರಬೇಕಿತ್ತು ಎಂದರೆ, ಇನ್ನೂ ಹಲವರು ರೂಪೇಶ್ ಗೆಲುವಲ್ಲಿ ಯಾವುದೇ ಅನುಮಾನವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ರೂಪೇಶ್ ಶೆಟ್ಟಿ ಸೂಕ್ತ ಸ್ಪರ್ಧಿ ಆಗಿದ್ದರು. ಅವರಿಗೆ ಜನರ ಬೆಂಬಲವೂ ಇತ್ತು. ಸಾಕಷ್ಟು ವೋಟುಗಳನ್ನು ಕೂಡ ಪಡೆದಿದ್ದಾರೆ. ಜನಪ್ರಿಯ ವ್ಯಕ್ತಿ ಕೂಡ ಅವರಿಗಿದ್ದಾರೆ. ಈ ಆಯ್ಕೆಯಲ್ಲಿ ಯಾವುದೇ ಮೋಸ ಅಥವಾ ಅನುಮಾನವಿಲ್ಲ ಎಂದು ರೂಪೇಶ್ ಬೆಂಬಲಿಗರು ಉತ್ತರಿಸುತ್ತಿದ್ದಾರೆ. ಈ ಪರ ಮತ್ತು ವಿರೋಧದ ಪೋಸ್ಟ್ ಗಳು ಸೋಷಿಯಲ್ ಮೀಡಿಯಾದಲ್ಲಿ ತುಂಬಿ ಹೋಗಿವೆ. ಪರಸ್ಪರರು ಪಾಸಿಟಿವ್ ಮತ್ತು ನೆಗೆಟಿವ್ ಕಾಮೆಂಟ್ ಗಳನ್ನು ಹಾಕುತ್ತಾ ವೈರಲ್ ಮಾಡುತ್ತಿದ್ದಾರೆ.

    ರೂಪೇಶ್ ಮತ್ತು ರಾಕೇಶ್ ಇಬ್ಬರೂ ಈ ಟ್ರೋಫಿಗೆ ಅರ್ಹರೇ ಆಗಿದ್ದಾರೆ. ಆದರೆ, ಟ್ರೋಫಿ ಒಬ್ಬರಿಗೆ ಸಿಗಬೇಕು. ಯಾರಿಗೆ ಟ್ರೋಫಿ ಹೋಗಬೇಕು ಎನ್ನುವುದಕ್ಕೆ ಬಿಗ್ ಬಾಸ್ ಗೆ ಅದರದ್ದೇ ಆದ ನಿಯಮಾವಳಿಗಳು ಇರುತ್ತವೆ. ಹೀಗಾಗಿ ರೂಪೇಶ್ ಕೈಯಲ್ಲಿ ಬಿಗ್ ಬಾಸ್ ಗೆಲುವಿನ ಟ್ರೋಫಿ ಇದೆ. ಚರ್ಚೆ ಕೂಡ ಮುಂದುವರೆದಿದೆ.

    Live Tv
    [brid partner=56869869 player=32851 video=960834 autoplay=true]

  • ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿ ಎಂದು ಹೆಸರು ಉಲ್ಟಾ ಹಾಕಿದ ರಶ್ಮಿಕಾ ಮಂದಣ್ಣ

    ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿ ಎಂದು ಹೆಸರು ಉಲ್ಟಾ ಹಾಕಿದ ರಶ್ಮಿಕಾ ಮಂದಣ್ಣ

    ನ್ಯಾಷಿನಲ್ ಕ್ರಶ್ ರಶ್ಮಿಕಾ ಮಂದಣ್ಣ ಇನ್ಸ್ಟಾಗ್ರಾಮ್ ಪೇಜ್ ನೋಡಿದವರು ಅಚ್ಚರಿ ಮತ್ತು ಕುತೂಹಲದಿಂದ ಆ ಪೋಸ್ಟ್ ಅನ್ನು ನೋಡಿದ್ದರು. ರಶ್ಮಿಕಾ ತಮ್ಮ ಹೆಸರನ್ನು ಉಲ್ಟಾ ಬರೆಯುವುದರ ಮೂಲಕ ಎಲ್ಲರಲ್ಲೂ ಪ್ರಶ್ನೆ ಮೂಡಿಸಿದ್ದರು. ಈ ರೀತಿ ಪೋಸ್ಟ್ ಮಾಡಲು ಕಾರಣ ಏನಿರಬಹುದು ಎನ್ನುವ ಚರ್ಚೆ ಕೂಡ ನಡೆಯಿತು. ಒಪ್ಪಿಕೊಂಡ ಸಿನಿಮಾಗಳು ದಬ್ಬಾಕಿಕೊಂಡವು ಅಂತ ಹಾಗೆ ಮಾಡಿದ್ರಾ ಎನ್ನುವ ಪ್ರಶ್ನೆ ಕೂಡ ಮೂಡಿತ್ತು. ಇನ್ನೂ ಕೆಲವರು ಟ್ರೋಲ್‍ ಗೆ ವ್ಯಂಗ್ಯ ಮಾಡಲು ಆ ರೀತಿ ಮಾಡಿದ್ರಾ ಎಂದು ಹೇಳಲಾಗಿತ್ತು.

    ಆದರೆ, ರಶ್ಮಿಕಾ ತಮ್ಮ ಹೆಸರನ್ನು ಉಲ್ಟಾ ನೇತು ಹಾಕಿದ್ದಕ್ಕೆ ಕಾರಣ ಬೇರೆ ಇದೆ. ಅವರು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿ ಎಂದು ಹೇಳುವ ಅಭಿಯಾನವನ್ನು ಆರಂಭಿಸಿದ್ದು. ಅಕ್ಷರ ಬಾರದ ಹೆಣ್ಣುಮಕ್ಕಳಿಗೆ ಅಕ್ಷರಗಳು ಉಲ್ಟಾ ಕಾಣುತ್ತವೆ ಎಂದು ಹೇಳುವುದಕ್ಕಾಗಿ ಅವರು ತಮ್ಮ ಹೆಸರನ್ನು ಉಲ್ಟಾ ಬರೆದಿದ್ದರು. ಈ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಶ್ಮಿಕಾ ಬಗ್ಗೆ ಟ್ರೋಲ್ ಮಾಡುತ್ತಿದ್ದವರೂ ಈಗ ಮೆಚ್ಚಿಕೊಂಡಿದ್ದಾರೆ.

    ಹೌದು, ಓದು ಬಾರದ ಹೆಣ್ಣು ಮಕ್ಕಳ ಪರ ರಶ್ಮಿಕಾ ಅಭಿಯಾನ ಶುರು ಮಾಡಿದ್ದಾರೆ. ಪ್ರತಿ ಹೆಣ್ಣು ಮಗುವಿಗೂ ಶಿಕ್ಷಣ ಕೊಡಿ ಎಂದು ಸಾರುತ್ತಾರೆ. ಈ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ. ರಶ್ಮಿಕಾ ಅವರ ಈ ಅಭಿಯಾನಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇಂತಹ ಕೆಲಸಗಳಿಗಾಗಿ ನಾವು ನಿಮ್ಮನ್ನು ಮೆಚ್ಚಿಕೊಳ್ಳುತ್ತೇವೆ ಎಂದು ವಿರೋಧಿಗಳು ಕೂಡ ಕಾಮೆಂಟ್ ಮಾಡಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಸಲ್ಲದ ಕಾರಣಕ್ಕಾಗಿ ಟ್ರೋಲ್ ಆಗುತ್ತಿದ್ದರು. ಕಳೆದೊಂದು ತಿಂಗಳಿನಿಂದ ಸಿನಿಮಾ ರಂಗದಿಂದ ಬ್ಯಾನ್ ಮಾಡಿ ಅನ್ನುವ ಒತ್ತಾಯವೂ ಕೇಳಿ ಬಂತು. ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ತಮ್ಮ ಪಾಡಿಗೆ ತಾವು ಕೆಲಸ ಮಾಡುತ್ತಿದ್ದರು ರಶ್ಮಿಕಾ. ಇದೀಗ ಹೆಣ್ಣು ಮಕ್ಕಳ ಶಿಕ್ಷಣ ಅಭಿಯಾನದ ಮೂಲಕ ಎಲ್ಲರ ಮೆಚ್ಚಿಗೆಗೂ ಪಾತ್ರರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸತೀಶ್ ಜಾರಕಿಹೊಳಿ ವಿರುದ್ಧ ಕೆರಳಿದ ಕೇಸರಿಪಡೆ- ಸುನಿಲ್ ಕುಮಾರ್‌ರಿಂದ ಸ್ವಾಭಿಮಾನಿ ಹಿಂದು ಅಭಿಯಾನ

    ಸತೀಶ್ ಜಾರಕಿಹೊಳಿ ವಿರುದ್ಧ ಕೆರಳಿದ ಕೇಸರಿಪಡೆ- ಸುನಿಲ್ ಕುಮಾರ್‌ರಿಂದ ಸ್ವಾಭಿಮಾನಿ ಹಿಂದು ಅಭಿಯಾನ

    ಬೆಂಗಳೂರು: ಸತೀಶ್ ಜಾರಕಿಹೊಳಿ (Satish Jarakiholi) ಹೇಳಿಕೆ ವಿರುದ್ಧ ಕೇಸರಿಪಡೆ ಸಿಡಿದೆದ್ದಿದ್ದು, ಸಚಿವ ಸುನೀಲ್ ಕುಮಾರ್ (Sunil Kumar) ‘ಸ್ವಾಭಿಮಾನಿ ಹಿಂದು’ ಅಭಿಯಾನ ಆರಂಭಿಸಿದ್ದಾರೆ.

    ಈ ಸಂಬಂಧ ಟ್ವೀಟ್ (Tweet) ಮಾಡಿರುವ ಅವರು, ಕಾಂಗ್ರೆಸ್ (Congress) ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನನ್ನು ಹಿಂದು ಎಂದು ಕರೆಯಬೇಡಿ ಎಂದು ಹೇಳಿದ್ದ ಜವಾಹರ್ ಲಾಲ್ ನೆಹರು (Jawaharlal Nehru) ಅವರ ಹಾದಿಯಲ್ಲೇ ಕಾಂಗ್ರೆಸ್ ಇಷ್ಟು ವರ್ಷ ನಡೆದುಕೊಂಡಿದೆ. ಹಿಂದು, ಹಿಂದುತ್ವ ಹಾಗೂ ಹಿಂದು ರಾಷ್ಟ್ರೀಯ ವಿಚಾರಧಾರೆಯನ್ನು ಅವಕಾಶ ಸಿಕ್ಕಾಗಲೆಲ್ಲ ಹತ್ತಿಕ್ಕಲು ಕಾಂಗ್ರೆಸ್ ಯತ್ನಿಸುತ್ತಲೆ ಬಂದಿದೆ. ಸತೀಶ್ ಜಾರಕಿಹೊಳಿ ಈ ಪರಂಪರೆಯ ಭಾಗ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: `ಹಿಂದೂ’ ಭಾರತೀಯ ಪದವೇ ಅಲ್ಲ, ನಾನು ಹೇಳಿದ್ದರಲ್ಲಿ ತಪ್ಪಿಲ್ಲ: ಸತೀಶ್ ಜಾರಕಿಹೊಳಿ

    – ಸತೀಶ್ ಜಾರಕಿಹೊಳಿಗೆ ಹಿಂದು ಶಬ್ದ ಅಶ್ಲೀಲ.
    – ಸಿದ್ದರಾಮಯ್ಯ ಅವರಿಗೆ ಕೇಸರಿ-ತಿಲಕ ಕಂಡರೆ ಭಯ
    – ದೈವಾರಾಧನೆ ಹಾಗೂ ತೀರ್ಥ ಬಿ.ಟಿ.ಲಲಿತಾನಾಯಕರಿಗೆ ವಾಕರಿ ತರಿಸುತ್ತದೆ
    – ಡಿ.ಕೆ.ಶಿವಕುಮಾರ್ ಗೆ ಮುಸ್ಲಿಂರು ಸೋದರರು
    – ಎಂ.ಬಿ.ಪಾಟೀಲರಿಗೆ ಹಿಂದು ಧರ್ಮದ ಅಖಂಡತೆ ಒಡೆಯುವ ಯೋಚನೆ
    – ಕೇಂದ್ರದ ಮಾಜಿ ಸಚಿವ ಶಿವರಾಜ್ ಪಾಟೀಲ್ ಗೆ ಭಗವದ್ಗೀತೆ ಜಿಹಾದ್ ಆಗಿ ಕಾಣುತ್ತದೆ

    ಇವೆಲ್ಲವೂ ಕಾಂಗ್ರೆಸ್ ಒಳಮನಸಿನಲ್ಲಿರುವ ಹಿಂದು ವಿರೋಧಿ ಭಾವಗಳು ಎಂದು ಟೀಕೆ ಮಾಡಿದ್ದಾರೆ. ಭಾರತ್ ಜೋಡೊ ಯಾತ್ರೆ ಹೆಸರಿನಲ್ಲಿ ರಾಹುಲ್ ಗಾಂಧಿ ನಡೆಸಿದ ಪಾದಯಾತ್ರೆಯ ಬಳಿಕ ಕಾಂಗ್ರೆಸ್ ನಾಯಕರ ಹಿಂದು ವಿರೋಧಿ ಹೇಳಿಕೆಗಳು ಮಿತಿಮೀರಿದೆ. ಕಾಂಗ್ರೆಸ್ ನಡೆಸುವ ಎಲ್ಲ ಯಾತ್ರೆ, ಅಭಿಯಾನದ ಹಿಂದಿರುವುದು ಹಿಂದು ದ್ವೇಷ. ಕಾಂಗ್ರೆಸ್ ಅಧಿನಾಯಕರ ಭಾವನೆಗಳಿಗೆ ಸತೀಶ್ ಜಾರಕಿಹೊಳಿ ಮಾತಿನ ರೂಪ ಕೊಟ್ಟಿದ್ದಾರೆ ಎಂದು ಆರೋಪ ಮಾಡಿದರು. ಇದನ್ನೂ ಓದಿ: ‘ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದ – ಅರ್ಥ ಬಹಳ ಅಶ್ಲೀಲವಾಗಿದೆ: ಸತೀಶ್ ಜಾರಕಿಹೊಳಿ

    ಹಿಂದುತ್ವ ಎಂಬ ಜೀವನ ಪದ್ಧತಿಯನ್ನೇ ಟೀಕಿಸಿದ ಸತೀಶ್ ಜಾರಕಿಹೊಳಿ ಪರವಾಗಿ ಕಾಂಗ್ರೆಸ್ ಇಡಿ ರಾಷ್ಟ್ರದ ಕ್ಷಮೆ ಯಾಚಿಸಬೇಕು. ಇದು ವೈಯಕ್ತಿಕ ಅಭಿಪ್ರಾಯ ಎಂದು ಕೈ ತೊಳೆದುಕೊಳ್ಳುವ ನಾಟಕ ಬೇಡ ಮಾನ್ಯ ಸುರ್ಜೇವಾಲಾ ಅವರೇ, ಭಾರತೀಯತೆಗೆ ಅಪಮಾನ ಮಾಡುವ ನಿಮ್ಮ ನಾಟಕಕ್ಕೆ ಕ್ಷಮೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನಾನು ಸ್ವಾಭಿಮಾನಿ ಹಿಂದು….
    – ಹಿಂದುತ್ವದ ಅವಹೇಳನವಾದಾಗ ನಾನು ಪ್ರತಿರೋಧಿಸುತ್ತೇನೆ.
    – ರಾಷ್ಟ್ರೀಯತೆಗೆ ಧಕ್ಕೆಯಾದಾಗ ನಾನು ಸೆಟೆದು ನಿಲ್ಲುತ್ತೇನೆ.
    – ಭಾರತೀಯ ಪರಂಪರೆಯ ನಿಂದನೆಯಾದಾಗ ನಾನು ಹೋರಾಡುತ್ತೇನೆ.

    ಸ್ವಧರ್ಮ, ಸ್ವದೇಶ, ಸ್ವಭಾಷೆ ನನ್ನ ಅಸ್ಮಿತೆ..

    ನಾನು ಸ್ವಾಭಿಮಾನಿ ಹಿಂದು…..
    – ನನ್ನೊಡಲೊಳಗೆ ದೇಶಭಕ್ತಿಯ ಕೆಚ್ಚಿದೆ.
    – ನನ್ನ ಹೃದಯದಲ್ಲಿ ಹಿಂದು ರಾಷ್ಟ್ರ ಪ್ರೀತಿ ಇದೆ.
    – ನನ್ನ ಮನಸಿನಲ್ಲಿ ಹಿಂದುತ್ವದ ಸಂಸ್ಕಾರವಿದೆ.
    – ನನ್ನ ಉಸಿರಿನಲ್ಲಿ ರಾಷ್ಟ್ರ ವಿರೋಧಿಗಳ ವಿರುದ್ಧ ದ್ವೇಷವಿದೆ.
    – ನನ್ನ ರಕ್ತದಲ್ಲಿ ಶಿವಾಜಿಯ ಸ್ವಾಭಿಮಾನವಿದೆ.

    ಹಿಂದುತ್ವಕ್ಕೆ ಅಪಮಾನವಾದಾಗ ನಾ ಮೌನಿಯಾಗಲಾರೆ..

    ಸತೀಶ್ ಜಾರಕಿಹೊಳಿ ಹೇಳಿದ್ದೇನು..? :ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಎನ್ನುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ, ಭಾರತಕ್ಕೂ, ಪರ್ಷಿಯನ್‍ಗೂ ಏನ್ ಸಂಬಂಧ? ಹಿಂದೂ ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ ಪದ. ಹಿಂದೂ ನಮ್ಮದು ಹೇಗೆ ಆಯಿತು ಅನ್ನೋದು ಚರ್ಚೆ ಆಗಬೇಕಿದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಿಮಗೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರೋ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]

  • ಯುವಕರಿಗೆ ಮದ್ಯ ಸೇವಿಸಲು ಉತ್ತೇಜನ ನೀಡುತ್ತಿದೆ ಜಪಾನ್- ಕಾರಣ ಏನು ಗೊತ್ತಾ?

    ಯುವಕರಿಗೆ ಮದ್ಯ ಸೇವಿಸಲು ಉತ್ತೇಜನ ನೀಡುತ್ತಿದೆ ಜಪಾನ್- ಕಾರಣ ಏನು ಗೊತ್ತಾ?

    ಟೋಕಿಯೋ: ಕೋವಿಡ್‌ನಿಂದ ತೀವ್ರ ಆರ್ಥಿಕ ಸಂಕಷ್ಟ, ಜನಸಂಖ್ಯೆ ಸಮಸ್ಯೆಯನ್ನು ಎದುರಿಸುತ್ತಿರುವ ಜಪಾನ್ ಸರ್ಕಾರ ತನ್ನ ಆದಾಯ ಹೆಚ್ಚಿಸಲು ಹೊಸ ಅಭಿಯಾನ ಆರಂಭಿಸಿದೆ. ಯುವ ವಯಸ್ಕರಿಗೆ ಹೆಚ್ಚು ಮದ್ಯಪಾನ ಮಾಡಲು ಕರೆ ಕೊಟ್ಟಿದ್ದು, “ಸೇಕ್ ವಿವಾ” ಎನ್ನುವ ಸ್ಪರ್ಧೆಯನ್ನು ಆರಂಭಿಸಿದೆ.

    ರಾಷ್ಟ್ರೀಯ ತೆರಿಗೆ ಏಜೆನ್ಸಿ (NTA) “ಸೇಕ್ ವಿವಾ!” ಎಂಬ ರಾಷ್ಟ್ರೀಯ ವ್ಯಾಪಾರ ಸ್ಪರ್ಧೆಯನ್ನು ಘೋಷಿಸಿದ್ದು, ದೇಶದ ಕಿರಿಯ ಜನಸಂಖ್ಯೆಯಲ್ಲಿ ಮದ್ಯಪಾನವನ್ನು ಉತ್ತೇಜಿಸಲು ಈ ಅಭಿಯಾನ ಪ್ರೋತ್ಸಾಹಿಸುತ್ತದೆ. ಹೊಸ ವ್ಯಾಪಾರ ಕಲ್ಪನೆಗಳೊಂದಿಗೆ ಬರುವುದು, ಸೇಕ್, ಶೋಚು, ಅವಮೊರಿ, ಬಿಯರ್, ವಿಸ್ಕಿ ಮತ್ತು ವೈನ್ ನಂತಹ ಜಪಾನಿನ ಆಲ್ಕೊಹಾಲ್‌ಯುಕ್ತ ಪಾನೀಯಗಳಿಗೆ ಬೇಡಿಕೆಯನ್ನು ಹೆಚ್ಚಿಸಲು ಅಭಿಯಾನ ಸಹಾಯ ಮಾಡಲಿದೆ.

    ಈ ಅಭಿಯಾನ ಮದ್ಯದ ಉದ್ಯಮವನ್ನು ಪುನಶ್ಚೇತನಗೊಳಿಸಲು ಮತ್ತು ಇತರೆ ಸಮಸ್ಯೆಗಳನ್ನು ಪರಿಹರಿಸಲು ಕೊಡುಗೆ ನೀಡಲಿದೆ ಎಂದು ಜಪಾನಿನ ತೆರಿಗೆ ಏಜೆನ್ಸಿ ಯೋಜನೆಯನ್ನು ವಿವರಿಸಿದೆ. “ಸೇಕ್ ವಿವಾ!” ಆಲ್ಕೊಹಾಲ್‌ಯುಕ್ತ ಪಾನೀಯಗಳ ಆಕರ್ಷಣೆಯನ್ನು ಪುನರುಜ್ಜೀವನಗೊಳಿಸಲಿದ್ದು, ಅಭಿಯಾನದಲ್ಲಿ ಪಾಲ್ಗೊಳ್ಳಲು 20 ಮತ್ತು 39ರ ನಡುವಿನ ವಯಸ್ಸಿನ ಜನರನ್ನು ಆಹ್ವಾನಿಸಲಾಗುತ್ತಿದೆ. ಇದನ್ನೂ ಓದಿ: 10 ಮಕ್ಕಳನ್ನು ಹೆರಿ, ಹಣ ಪಡೆಯಿರಿ- ರಷ್ಯಾ ಮಹಿಳೆಯರಿಗೆ ಬಂಪರ್‌ ಆಫರ್‌

    ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಯಾವುದೇ ಪ್ರವೇಶ ಶುಲ್ಕವಿಲ್ಲ, ಇದು ಕೃತಕ ಬುದ್ಧಿಮತ್ತೆ, ಮೆಟಾವರ್ಸ್ ಮತ್ತು ಭೌಗೋಳಿಕ ಸೂಚನೆಗಳನ್ನು (ಉತ್ಪನ್ನಗಳ ಭೌಗೋಳಿಕ ಮೂಲವನ್ನು ಸೂಚಿಸಲು ಬಳಸುವ ಚಿಹ್ನೆ) ಬಳಸುವ ಹೊಸ ಮಾರಾಟ ವಿಧಾನಗಳನ್ನು ಸೂಚಿಸಲು ಜನರನ್ನು ಕೇಳುತ್ತದೆ. ಇದಕ್ಕೆ ಸ್ಪರ್ಧಿಗಳು ಹೊಸ ಯೋಚನೆಗಳನ್ನು ನೀಡಬೇಕು.

    ಸ್ಪರ್ಧೆಯಲ್ಲಿ ಫೈನಲಿಸ್ಟ್‌ಗಳನ್ನು ಸೆಪ್ಟೆಂಬರ್ 27 ರೊಳಗೆ ಆಯ್ಕೆ ಮಾಡಲಾಗುವುದು. ನಂತರ ಅಕ್ಟೋಬರ್‌ನಲ್ಲಿ ಮತ್ತೊಂದು ಸುತ್ತು ನಡೆಯಲಿದ್ದು, ಈ ವಿಶಿಷ್ಟ ಸ್ಪರ್ಧೆಯ ಫಲಿತಾಂಶಗಳನ್ನು ನವೆಂಬರ್ 10 ರಂದು ಟೋಕಿಯೊದಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: 21 ಯುದ್ಧವಿಮಾನ, 5 ರಕ್ಷಣಾ ಹಡಗುಗಳಿಂದ ತೈವಾನ್ ಸುತ್ತುವರಿದ ಚೀನಾ

    NTA ಪ್ರಕಾರ, 1995 ಕ್ಕೆ ಹೋಲಿಸಿದರೆ ದೇಶವು ಕೋವಿಡ್-19 ಸಾಂಕ್ರಾಮಿಕ ರೋಗದ ನಂತರ 2020 ರಲ್ಲಿ ಜಪಾನಿಯರು ಕಡಿಮೆ ಮದ್ಯ ಸೇವನೆ ಮಾಡುತ್ತಿದ್ದಾರೆ. 1995 ರಲ್ಲಿ ಜನರು 100 ಲೀಟರ್ (22 ಗ್ಯಾಲನ್) ಆಲ್ಕೋಹಾಲ್ ಅನ್ನು ಸೇವಿಸುತ್ತಿದ್ದರು. ಸದ್ಯ ಕುಡಿಯುವಿಕೆಯು 75 ಲೀಟರ್‌ಗಳಿಗೆ (16 ಗ್ಯಾಲನ್‌ಗಳು) ಕಡಿಮೆಯಾಗಿದೆ  ಎಂದು ವರದಿಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • ಸಿಬಿಐ ದಾಳಿ ಬೆನ್ನಲ್ಲೇ ಹೊಸ ಮಿಸ್ಡ್‌ಕಾಲ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್

    ಸಿಬಿಐ ದಾಳಿ ಬೆನ್ನಲ್ಲೇ ಹೊಸ ಮಿಸ್ಡ್‌ಕಾಲ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷದ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಸಿಬಿಐ ದಾಳಿ ನಡೆಸಿದ ಕೆಲವೇ ಗಂಟೆಗಳ ಬಳಿಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ದೇಶದ 130 ಕೋಟಿ ಜನರಿಗೆ “ಭಾರತವನ್ನು ವಿಶ್ವದ ಬಲಿಷ್ಠ ರಾಷ್ಟ್ರವನ್ನಾಗಿ ಮಾಡಲು” ಒತ್ತಾಯಿಸಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ರಾಷ್ಟ್ರವನ್ನು ಪ್ರಗತಿ ಮಾಡಲು ಅವರು ಬಿಡುವುದಿಲ್ಲ” ಎಂದು ಬಿಜೆಪಿಯನ್ನು ಹೆಸರಿಸದೇ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರ ನಮಗೆ ಕೆಲಸ ಮಾಡಲು ಬಿಡುವುದಿಲ್ಲ, ನಮ್ಮ ರಸ್ತೆಗಳಿಗೆ ಅಡ್ಡಲಾಗುತ್ತಿದ್ದಾರೆ. ಇದರ ಭಾಗವಾಗಿ ಈಗ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಟಾರ್ಗೆಟ್ ಮಾಡಲಾಗಿದೆ ಎಂದರು.

    ಕಳೆದ 7 ವರ್ಷಗಳಲ್ಲಿ ಅವರು, ನನ್ನ, ಕೈಲಾಶ್ ಗೆಹ್ಲೋಟ್ ಮತ್ತು ಎಎಪಿ ನಾಯಕರ ವಿರುದ್ಧ ಅನೇಕ ದಾಳಿಗಳು ಮತ್ತು ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ. ಆದರೆ ಏನೇ ಅಡ್ಡಿವುಂಟು ಮಾಡಿದರೂ ನಾವು ದೇಶದ ಅಭಿವೃದ್ಧಿಯನ್ನು ಕೈಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಹತ್ಯೆಗೆ RSS, ಬಿಜೆಪಿ ಸಂಚು ಮಾಡಿದೆ: ಶಿವರಾಮ್ ಗಂಭೀರ ಆರೋಪ

    ಬಿಜೆಪಿ ನಡುವಿನ ಉದ್ವಿಗ್ನತೆಯ ನಡುವೆ ಅವರು ಅಮೆರಿಕದ ಅತಿದೊಡ್ಡ ಪತ್ರಿಕೆಯಾದ ನ್ಯೂಯಾರ್ಕ್‌ ಟೈಮ್ಸ್‌ನಲ್ಲಿ  ದೆಹಲಿ ಶಿಕ್ಷಣ ಮಾದರಿಯ ವರದಿಯನ್ನು ಪ್ರಕಟಿಸಿರುವ ಬಗ್ಗೆ ಮಾಹಿತಿ ನೀಡಿದರು. ಈ ವರದಿ ದೆಹಲಿ ಸರ್ಕಾರಿ ಶಾಲೆಗಳಲ್ಲಿ ಕ್ರಾಂತಿಯ ಬಗ್ಗೆ ಮಾತನಾಡಿದೆ. ಇದು ಪ್ರತಿಯೊಬ್ಬ ಭಾರತೀಯನಿಗೆ ಹೆಮ್ಮೆ ತರುವ ವಿಷಯವಾಗಿದೆ. ನಾನು ಎಲ್ಲರಿಗೂ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ ಎಂದರು.

    MANISH SISODIA

    ವಿಶ್ವದ ಎಲ್ಲಾ ನಾಯಕರು ವರದಿ ಮಾಡಲು ಬಯಸುವ ಪತ್ರಿಕೆಯಲ್ಲಿ ಮನೀಷ್ ಸಿಸೋಡಿಯಾ ಅವರ ಫೋಟೋದೊಂದಿಗೆ ವರದಿ ಪ್ರಕಟವಾಗಿದೆ. ಇದರರ್ಥ ಸಿಸೋಡಿಯಾ ಒಂದು ರೀತಿಯಲ್ಲಿ ಅತ್ಯುತ್ತಮ ಶಿಕ್ಷಣ ಸಚಿವ ಎಂದು ಗುರುತಿಸಲ್ಪಟ್ಟಿದ್ದಾರೆ. ಆದರೆ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ – 20 ಕಡೆಗಳಲ್ಲಿ ಶೋಧ

    ನಾವು ಅವರಿಗೆ ದೇಶವನ್ನು ಬಿಟ್ಟರೆ, ಅವರು ದೇಶವನ್ನು ಎಂದಿಗೂ ಪ್ರಗತಿಯಾಗಲು ಬಿಡುವುದಿಲ್ಲ. ನಾವೆಲ್ಲರೂ ಒಟ್ಟಾಗಿ ಸೇರಬೇಕು. ನಾನು ಮಿಸ್ಡ್‌ಕಾಲ್‌ಗಾಗಿ ನಂಬರ್ ನೀಡುತ್ತಿದ್ದೇನೆ. 95100100 ಯಾರು ಬೇಕಾದರೂ ಮಿಸ್ಡ್‌ಕಾಲ್ ಮಾಡಬಹುದು. ಭಾರತ ಬಲಿಷ್ಠ ರಾಷ್ಟ್ರ ಮಿಷನ್‌ಗೆ ಸೇರಿಕೊಳ್ಳಬಹುದು, ನಾವೇಲ್ಲರು ಸೇರಿ ಭಾರತವನ್ನು ವಿಶ್ವದ ಬಲಿಷ್ಠ ರಾಷ್ಟ್ರವನ್ನಾಗಿ ಮಾಡಬೇಕು ಎಂದು ಕೇಜ್ರಿವಾಲ್ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಾಲಿಬಾನ್ ಬ್ಯಾನ್ ಮಾಡಿ: ಅಫ್ಘನ್ ಜನರಿಂದ ಟ್ವಿಟ್ಟರ್ ಅಭಿಯಾನ

    ತಾಲಿಬಾನ್ ಬ್ಯಾನ್ ಮಾಡಿ: ಅಫ್ಘನ್ ಜನರಿಂದ ಟ್ವಿಟ್ಟರ್ ಅಭಿಯಾನ

    ಕಾಬೂಲ್: ಅಫ್ಘಾನಿಸ್ತಾನದ ತಾಲಿಬಾನ್ ಸಂಬಂಧಿತ ಫೇಸ್‌ಬುಕ್‌ನಂತಹ ಪುಟಗಳನ್ನು ಮೆಟಾ ಬ್ಯಾನ್ ಮಾಡಿದ ಬಳಿಕ ಇದೀಗ ಅಫ್ಘನ್ ಜನರು ಟ್ವಿಟ್ಟರ್‌ನಲ್ಲಿ ಹೊಸ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ತಾಲಿಬಾನ್ ಅನ್ನು ಬ್ಯಾನ್ ಮಾಡಿ ಎಂಬ ಕರೆಯೊಂದಿಗೆ ಅಫ್ಘನ್ನರು ಸಾವಿರಾರು ಟ್ವೀಟ್‌ಗಳನ್ನು ಮಾಡಿದ್ದಾರೆ.

    BanTaliban ಹ್ಯಾಶ್ ಟ್ಯಾಗ್ ಬಳಸಿ ಅಫ್ಘಾನಿಸ್ತಾನ ಮಾತ್ರವಲ್ಲದೇ ಪಾಕಿಸ್ತಾನ, ಯುನೈಟೆಡ್ ಅರಬ್ ಎಮಿರೇಟ್ಸ್, ಜರ್ಮನಿ, ಯುರೋಪ್, ಭಾರತ ಹಾಗೂ ಅಮೆರಿಕದಲ್ಲೂ ಜನರು ಟ್ವೀಟ್ ಮಾಡಿ, ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ಭಾರತದ ಗಡಿಯಲ್ಲಿ ಮತ್ತೆ ಪಾಕ್ ಡ್ರೋನ್ ಹಾರಾಟ

    ವರದಿಗಳ ಪ್ರಕಾರ ಅಫ್ಘಾನಿಸ್ತಾನದ ಪತ್ರಕರ್ತರು, ನಾಗರಿಕ ಕಾರ್ಯಕರ್ತರು, ವಕೀಲರು ಟ್ವಿಟ್ಟರ್ ಬಳಸುವ ಎಲ್ಲಾ ತಾಲಿಬಾನ್ ಸದಸ್ಯರಿಗೂ ಪ್ರವೇಶ ನಿಷೇಧಿಸುವಂತೆ ಟ್ವಿಟ್ಟರ್ ಅನ್ನು ಒತ್ತಾಯಿಸಿದ್ದಾರೆ. ತಾಲಿಬಾನ್ ತಪ್ಪು ಮಾಹಿತಿ ಹರಡುವಿಕೆ, ಹಿಂಸಾಚಾರ, ಶಿರಚ್ಛೇದದ ಕರೆಗಳು, ಭಯೋತ್ಪಾದಕರಿಗೆ ಬೆಂಬಲ ನೀಡುವುದು ಸೇರಿದಂತೆ ಹಲವು ಆಘಾತಕರ ವಿಷಯಗಳನ್ನು ಈ ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಳ್ಳುತ್ತದೆ ಎಂಬ ಕಾರಣಕ್ಕೆ ಜನರು ಈ ಅಭಿಯಾನಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ದೇಶದಲ್ಲಿ 4 ಕೋಟಿಗೂ ಅಧಿಕ ಜನ ಮೊದಲ ಡೋಸ್ ಲಸಿಕೆ ಪಡೆದಿಲ್ಲ!

    ಬುಧವಾರ ಫೇಸ್‌ಬುಕ್ ಆರ್‌ಟಿಎ ಟಿವಿ ಚಾನೆಲ್ ಹಾಗೂ ಬಕ್ತರ್ ನ್ಯೂಸ್ ಏಜೆನ್ಸಿ ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ತಾಲಿಬಾನ್ ಸಂಬಂಧಿತ ವಿಷಯಗಳನ್ನು ಹಾಗೂ ಪುಟಗಳನ್ನು ನಿಷೇಧಿಸಿತ್ತು. ಮೆಟಾದ ಈ ನಿರ್ಧಾರವನ್ನು ಅಫ್ಘನ್ ಜನರು ಸ್ವಾಗತಿಸಿದ್ದಾರೆ. ಮೆಟಾದ ಕ್ರಮದ ಬೆನ್ನಲ್ಲೇ ಟ್ವಿಟ್ಟರ್‌ನಲ್ಲೂ ತಾಲಿಬಾನ್‌ಗೆ ನಿಷೇಧ ಹೇರುವಂತೆ ಒತ್ತಾಯಿಸಿ ಜನರು ಅಭಿಯಾನ ಪ್ರಾರಂಭಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸರ್ಕಾರಿ ಶಾಲಾ-ಕಾಲೇಜುಗಳ ಆಸ್ತಿ ರಕ್ಷಣೆಗೆ ಶಿಕ್ಷಣ ಇಲಾಖೆಯಿಂದ ವಿಶೇಷ ಅಭಿಯಾನ

    ಸರ್ಕಾರಿ ಶಾಲಾ-ಕಾಲೇಜುಗಳ ಆಸ್ತಿ ರಕ್ಷಣೆಗೆ ಶಿಕ್ಷಣ ಇಲಾಖೆಯಿಂದ ವಿಶೇಷ ಅಭಿಯಾನ

    ಬೆಂಗಳೂರು: 1 ರಿಂದ 12ನೇ ತರಗತಿಯ ಸರ್ಕಾರಿ ಶಾಲೆ-ಕಾಲೇಜುಗಳ ಆಸ್ತಿ ಸಂರಕ್ಷಣೆಗೆ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಶಾಲಾ-ಕಾಲೇಜುಗಳ ಆಸ್ತಿ ಒತ್ತುವರಿ ತೆರವಿಗೆ ವಿಶೇಷ ಅಭಿಯಾನ ಶುರು ಮಾಡಲು ನಿರ್ಧಾರ ಮಾಡಲಾಗಿದೆ.

    ಇದರ ಜೊತೆಗೆ ಸರ್ಕಾರಿ ಶಾಲಾ-ಕಾಲೇಜುಗಳಿಗೆ ದಾನದ ರೂಪದಲ್ಲಿ ಬಂದಿರೋ ಜಮೀನುಗಳ ರಕ್ಷಣೆಗೂ ವಿಶೇಷ ಡ್ರೈವ್ ಶುರು ಮಾಡಲು ನಿರ್ಧಾರ ಮಾಡಿದೆ. ಸರ್ಕಾರಿ ಶಾಲಾ-ಕಾಲೇಜುಗಳಿಗೆ ಅನೇಕ ದಾನಿಗಳು ಹಿಂದೆ ಜಮೀನು ನೀಡಿದ್ದಾರೆ. ಆ ಜಮೀನುಗಳಿಗೆ ಈವರೆಗೂ ಯಾವುದೇ ದಾಖಲೆಗಳನ್ನು ಶಾಲೆಗಳ ಹೆಸರಿಗೆ ಮಾಡಿಕೊಂಡಿಲ್ಲ. ಇದನ್ನೂ ಓದಿ: ಒಕ್ಕೂಟದ ಪತನದ ನಂತರ ರಾಜೀನಾಮೆ ನೀಡಲು ಮುಂದಾದ ಇಟಲಿ ಪಿಎಂ

    ಹೀಗಾಗಿ ಈಗ ವಿಶೇಷ ಅಭಿಯಾನ ಮಾಡಿ ದಾನವಾಗಿ ನೀಡಿರೋ ಜಮೀನುಗಳನ್ನು ಶಾಲೆ ಹೆಸರಿಗೆ ದಾಖಲೆ ಮಾಡಿಕೊಳ್ಳಲು ಸರ್ಕಾರ ಪ್ರತಿ ಶಾಲೆಯ ಮುಖ್ಯಸ್ಥರಿಗೆ ಟಾಸ್ಕ್ ನೀಡಿದೆ. ಆಗಸ್ಟ್‌ನಿಂದ ಅಭಿಯಾನ ಪ್ರಾರಂಭವಾಗಿ 3 ತಿಂಗಳ ಕಾಲ ಈ ವಿಶೇಷ ಆಸ್ತಿ ಉಳಿಸಿ ಅಭಿಯಾನ ನಡೆಯಲಿದೆ.

    ಕೇವಲ ದಾನ ಮಾತ್ರ ಅಲ್ಲ. ಸರ್ಕಾರಿ ಶಾಲೆ-ಕಾಲೇಜುಗಳ ಜಾಗವನ್ನ ಅನೇಕ ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಜಾಗವನ್ನು ಬಿಡಿಸಿಕೊಂಡು ಶಾಲೆ-ಕಾಲೇಜು ಹೆಸರಿಗೆ ಆಸ್ತಿ ಮಾಡಲು ಸರ್ಕಾರ ಶಾಲೆಗಳಿಗೆ ಸೂಚನೆ ನೀಡಿವೆ. ಒಂದು ವೇಳೆ ಒತ್ತುವರಿ ಮಾಡಿಕೊಂಡಿರುವವರು ಮಾತು ಕೇಳದೆ ಹೋದರೆ ಕಾನೂನು ಅಡಿಯಲ್ಲಿ ಕ್ರಮ ತೆಗೆದುಕೊಳ್ಳುವಂತೆ ಶಿಕ್ಷಣ ಇಲಾಖೆ ಶಾಲಾ-ಕಾಲೇಜುಗಳ ಮುಖ್ಯಸ್ಥರಿಗೆ ಫುಲ್ ಪವರ್ ನೀಡಿದೆ.

    ಕಂದಾಯ ಇಲಾಖೆ ಜೊತೆಗೂಡಿ ಸರ್ಕಾರಿ ಶಾಲಾ-ಕಾಲೇಜುಗಳ ಆಸ್ತಿ ರಕ್ಷಣೆ ಮತ್ತು ದಾಖಲಾತಿ ರಕ್ಷಣೆಗೆ ವಿಶೇಷ ಕ್ರಮವನ್ನ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಇದನ್ನೂ ಓದಿ:  ಜೇಮ್ಸ್ ವೆಬ್ ಟೆಲಿಸ್ಕೋಪ್‍ನಲ್ಲಿ ಸೆರೆ ಸಿಕ್ಕ ಗುರು-ಚಂದ್ರನ ಬೆರಗುಗೊಳಿಸುವ ಫೋಟೋ 

    ರಾಜ್ಯದಲ್ಲಿ ಸುಮಾರು 44 ಸಾವಿರ ಪ್ರಾಥಮಿಕ ಶಾಲೆಗಳು, 4.5 ಸಾವಿರ ಪ್ರೌಢಶಾಲೆಗಳು ಸುಮಾರು 1,200ಕ್ಕೂ ಹೆಚ್ಚು ಪಿಯುಸಿ ಕಾಲೇಜು ಸೇರಿ ಒಟ್ಟು 50 ಸಾವಿರಕ್ಕೂ ಹೆಚ್ಚು ಶಾಲಾ-ಕಾಲೇಜುಗಳು ಇವೆ. ಇವುಗಳಲ್ಲಿ ಶಾಲಾ-ಕಾಲೇಜುಗಳ ಜಮೀನಿನ ಒತ್ತುವರಿ ಮಾಡಿಕೊಂಡಿರೋ ಪ್ರಕರಣ ಹೆಚ್ಚಾಗಿವೆ. ಹೀಗಾಗಿ ಶಾಲಾ-ಕಾಲೇಜುಗಳ ಆಸ್ತಿ ಸಂರಕ್ಷಣೆಗೆ ಶಿಕ್ಷಣ ಇಲಾಖೆ ಮುಂದಾಗಿದ್ದು, ಒತ್ತುವರಿ ತೆರವು ಮಾಡದವರ ವಿರುದ್ಧ ದಂಡಂ ದಶಗುಣಂ ನಿಯಮ ಪಾಲನೆಗೆ ಮುಂದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಉದಯಪುರ ಟೈಲರ್‌ ಹತ್ಯೆ ಖಂಡಿಸಿ ರಾಜ್ಯದಲ್ಲಿ ಶುರುವಾಯ್ತು ನನ್ನ ಕತ್ತು ಸೀಳಬೇಡಿ ಅಭಿಯಾನ

    ಉದಯಪುರ ಟೈಲರ್‌ ಹತ್ಯೆ ಖಂಡಿಸಿ ರಾಜ್ಯದಲ್ಲಿ ಶುರುವಾಯ್ತು ನನ್ನ ಕತ್ತು ಸೀಳಬೇಡಿ ಅಭಿಯಾನ

    ಬೆಂಗಳೂರು: ಉದಯಪುರ ಟೈಲರ್‌ ಕನ್ಹಯ್ಯಲಾಲ್‌ ಹತ್ಯೆ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಹತ್ಯೆ ಖಂಡಿಸಿ ರಾಜ್ಯದ ಹಲವು ಕಡೆ ʼನನ್ನ ಕತ್ತು ಸೀಳಬೇಡಿʼ ಎಂಬ ಅಭಿಯಾನ ನಡೆಯುತ್ತಿದೆ.

    ಹೌದು, ಕನ್ಹಯ್ಯಲಾಲ್‌ ಹತ್ಯೆ ವಿರೋಧಿಸಿ ರಾಜ್ಯದಲ್ಲಿ ʼನನ್ನ ಕತ್ತು ಸೀಳಬೇಡಿʼ ಅಭಿಯಾನ ಶುರುವಾಗಿದೆ. ನಂಜನಗೂಡು ವ್ಯಾಪಾರಿಗಳು ವಿಭಿನ್ನ ಅಭಿಯಾನ ನಡೆಸುತ್ತಿದ್ದಾರೆ. ಅಭಿಯಾನಕ್ಕೆ ಹಿಂದೂಪರ ಸಂಘಟನೆಗಳು ಸಾಥ್‌ ನೀಡಿವೆ. ಇದನ್ನೂ ಓದಿ: ನನ್ನ ಪತಿಯನ್ನು ಕೊಂದವರನ್ನು ಗಲ್ಲಿಗೇರಿಸಿ: ಉದಯಪುರ ಟೈಲರ್‌ ಪತ್ನಿ ಒತ್ತಾಯ

    ʼನಾನು ಸತ್ಯ ಹೇಳಲ್ಲ, ಹೇಳಿದವರ ಪರ ನಿಲ್ಲುವುದೂ ಇಲ್ಲ. ನನ್ನ ಕುಟುಂಬ ನನ್ನನ್ನೇ ನಂಬಿಕೊಂಡಿದೆ. ನನ್ನ ಕತ್ತನ್ನು ಸೀಳಬೇಡಿʼ ಎಂದು ಬರೆದಿರುವ ಪೋಸ್ಟರ್‌ ಹಿಡಿದು ಹಲವರು ಟೈಲರ್‌ ಹತ್ಯೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

    ತರಕಾರಿ, ದಿನಸಿ, ಬೇಕರಿ ತಿನಿಸು ವ್ಯಾಪಾರಿಗಳು, ಹೂ ಮಾರಾಟಗಾರರು ಈ ಅಭಿಯಾನ ಆರಂಭಿಸಿದ್ದಾರೆ. ಇದಕ್ಕೆ ಅನೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇದನ್ನೂ ಓದಿ: ಉದಯ್‌ಪುರ ಬರ್ಬರ ಹತ್ಯೆ ಎನ್‌ಐಎ ಹೆಗಲಿಗೆ – ಪಾತಕಿಗಳಿಗೆ ಐಸಿಸ್‌ ಲಿಂಕ್‌?

    ಪ್ರವಾದಿ ಮೊಹಮ್ಮದ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್‌ ಶರ್ಮಾರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್‌ ಕನ್ಹಯ್ಯ ಲಾಲ್‌ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ಮಂಗಳವಾರ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ. ಈ ಘಟನೆಯಿಂದ ರಾಜಸ್ಥಾನದ ಜತೆಗೆ ದೇಶದ ವಿವಿಧೆಡೆ ಪ್ರತಿಭಟನೆ ಆರಂಭವಾಗಿದೆ.

    Live Tv