Tag: ಅಭಿಷೇಕ್ ಅಂಬರೀಷ್

  • ಅಭಿಷೇಕ್ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ಡಿಂಪಲ್ ಕ್ವೀನ್

    ಅಭಿಷೇಕ್ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ಡಿಂಪಲ್ ಕ್ವೀನ್

    ಬೆಂಗಳೂರು: ನಟ ಅಭಿಷೇಕ್ ಅಂಬರೀಷ್ ಎರಡನೇ ಚಿತ್ರ ಬ್ಯಾಡ್ ಮ್ಯಾನರ್ಸ್ ಶೂಟಿಂಗ್ ಭರದಿಂದ ಸಾಗಿದ್ದು, ಇದೀಗ ನಾಯಕ ನಟಿಯನ್ನು ಆಯ್ಕೆ ಮಾಡಿರುವ ಕುರಿತ ಸುದ್ದಿಯನ್ನು ಸಹ ಸಿನಿಮಾ ತಂಡ ರಿವೀಲ್ ಮಾಡಿದೆ.

    ಬ್ಯಾಡ್ ಮ್ಯಾನರ್ಸ್ ಸಿನಿಮಾ ಶುರುವಾಗಿ ಅನೇಕ ದಿನಗಳು ಕಳೆದಿವೆ. ಆದರೆ ಈ ಬಗ್ಗೆ ಹೆಚ್ಚು ಅಪ್‍ಡೇಟ್ ಸಿಕ್ಕಿರಲಿಲ್ಲ. ಇದೀಗ ಸಿನಿಮಾ ತಂಡ ಬಿಗ್ ಸಪ್ರ್ರೈಸ್ ನೀಡಿದೆ. ಬ್ಯಾಡ್ ಮ್ಯಾನರ್ಸ್ ಚಿತ್ರವನ್ನು ದುನಿಯಾ ಸೂರಿ ನಿರ್ದೇಶಿಸುತ್ತಿದ್ದು, ಅಭಿಷೇಕ್ ಅಂಬರೀಷ್ ಅವರ ಬಹುನಿರೀಕ್ಷಿತ ಸಿನಿಮಾ ಆಗಿದೆ. ಸದ್ಯ ಚಿತ್ರತಂಡ ಮಂಡ್ಯದಲ್ಲಿ ಶೂಟಿಂಗ್ ನಡೆಸುತ್ತಿದ್ದು, ಇದೇ ಸಂದರ್ಭದಲ್ಲಿ ಹೀರೋಯಿನ್ ಆಯ್ಕೆ ಕುರಿತು ಸುದ್ದಿ ರಿವೀಲ್ ಆಗಿದೆ.

    ಚಿತ್ರದಲ್ಲಿ ಇಬ್ಬರು ಹೀರೋಯಿನ್‍ಗಳು ಇರಲಿದ್ದು, ಅಭಿಷೇಕ್ ಅಂಬರೀಷ್ ಜೊತೆ ನಟಿ ರಚಿತಾ ರಾಮ್ ಹಾಗೂ ಪ್ರಿಯಾಂಕಾ ರೊಮ್ಯಾನ್ಸ್ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಲವ್ ಯು ರಚ್ಚು ಸಿನಿಮಾದಲ್ಲಿ ರಚಿತಾ ರಾಮ್ ಬ್ಯುಸಿಯಾಗಿದ್ದು, ಇದೇ ವೇಳೆ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ನಟಿಸುತ್ತಿರುವ ಕುರಿತು ಮಾಹಿತಿ ನೀಡಿದ್ದಾರೆ.

    ಚಿತ್ರದಲ್ಲಿ ದೊಡ್ಡ ತಾರಾ ಬಳಗವೇ ಇದ್ದು, ತಾರಾ, ಶರತ್ ಲೋಹಿತಾಶ್ವ ಸಹ ತೆರೆ ಹಂಚಿಕೊಂಡಿದ್ದಾರೆ. ಈಗಾಗಲೇ ಚಿತ್ರೀಕರಣ ಭರದಿಂದ ಸಾಗಿದೆ. ಮೊದಲ ಸಿನಿಮಾದಲ್ಲಿ ರೊಮ್ಯಾಂಟಿಕ್ ಬಾಯ್ ಆಗಿ ಕಾಣಿಸಿಕೊಂಡಿದ್ದ ಅಭಿಷೇಕ್, ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ಯಾವ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಅಭಿಮಾನಿಗಳ ಕುತೂಹಲವಾಗಿದೆ. ಕಳೆದ ವರ್ಷ ಅಂಬರೀಷ್ ಹುಟ್ಟುಹಬ್ಬದಂದು ಸಿನಿಮಾ ಲಾಂಚ್ ಮಾಡಲಾಗಿತ್ತು. ಆದರೆ ಲಾಕ್‍ಡೌನ್ ನಿಂದ ಚಿತ್ರೀಕರಣ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಆರಂಭವಾಗಿದ್ದು, ಭರದಿಂದ ಸಾಗಿದೆ.

    ಚಿತ್ರದಲ್ಲಿ ರಚಿತಾ ರಾಮ್ ಫುಲ್ ಟ್ರೆಡಿಷನಲ್ ಲುಕ್‍ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಇನ್ನು ಪ್ರಿಯಾಂಕ ಅವರ ಪಾತ್ರದ ಬಗ್ಗೆ ಮಾಹಿತಿ ರಿವೀಲ್ ಆಗಿಲ್ಲ. ಒಟ್ಟಿನಲ್ಲಿ ಇಬ್ಬರು ನಟಿಮಣಿಯರ ಜೊತೆ ಅಭಿಷೇಕ್ ಅಂಬರೀಷ್ ರೊಮ್ಯಾನ್ಸ್ ಮಾಡಲಿದ್ದಾರೆ ಎಂಬುದು ಇದೀಗ ತಿಳಿದಿದೆ.

  • ಅಭಿಷೇಕ್ ಹೆಸರನ್ನು ರಾಜಕೀಯಕ್ಕೆ ಎಳೆಯಬೇಡಿ – ಸುಮಲತಾ ಅಂಬರೀಶ್ ಸ್ಪಷ್ಟನೆ

    ಅಭಿಷೇಕ್ ಹೆಸರನ್ನು ರಾಜಕೀಯಕ್ಕೆ ಎಳೆಯಬೇಡಿ – ಸುಮಲತಾ ಅಂಬರೀಶ್ ಸ್ಪಷ್ಟನೆ

    ಬೆಂಗಳೂರು: ಅಭಿಷೇಕ್ ಅಂಬರೀಶ್ ರಾಜಕೀಯಕ್ಕೆ ಪ್ರವೇಶಿಸುತ್ತಾರೆ ಎಂಬ ಊಹಾಪೋಹಗಳಿಗೆ ಸುಮಲತಾ ಅಂಬರೀಶ್ ಅವರು ಸ್ಪಷ್ಟನೆ ನೀಡಿದ್ದು, ಅಭಿಷೇಕ್ ಹೆಸರನ್ನು ರಾಜಕೀಯಕ್ಕೆ ಎಳೆದು ತರಬೇಡಿ ಎಂದು ತಿಳಿಸಿದ್ದಾರೆ.

    ಅಂಬರೀಶ್ ಅವರ 9ನೇ ತಿಂಗಳ ಪುಣ್ಯ ತಿಥಿ ಹಿನ್ನೆಲೆಯಲ್ಲಿ ಸಮಾಧಿಗೆ ಪೂಜೆ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ದೂರಲ್ಲಿ ಅಭಿಷೇಕ್ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂದು ಚರ್ಚೆ ನಡೆಯುತ್ತಿರುವುದರ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದು, ಅಭಿ ಹೆಸರು ರಾಜಕಾರಣಕ್ಕೆ ದಯವಿಟ್ಟು ತರಬೇಡಿ. ಅವನು ಇನ್ನೂ ಸಿನಿಮಾ ಮಾಡಬೇಕು. ಅದಕೆ ಸಮಯವಿದೆ. ಸದ್ಯಕ್ಕೆ ಅವನು ರಾಜಕೀಯ ಪ್ರವೇಶಿಸುವ ಸನ್ನಿವೇಶ ಇಲ್ಲ. ಆತನೇ ಈ ಕುರಿತು ನಿರ್ಧರಿಸಿದರೆ ಮುಂದೆ ನೋಡೋಣ. ಅಲ್ಲಿಯವರೆಗೂ ಅತನನ್ನು ರಾಜಕೀಯಕ್ಕೆ ಎಳೆದು ತರಬೇಡಿ ಎಂದು ತಿಳಿಸಿದರು.

    ಫೋನ್ ಟ್ಯಾಪಿಂಗ್ ಕುರಿತು ಮಾತನಾಡಿದ ಅವರು, ಫೋನ್ ಟ್ಯಾಪಿಂಗ್ ಕುರಿತು ನಾನು ತನಿಖೆಗೆ ಒತ್ತಾಯ ಮಾಡಿಲ್ಲ. ಚುನಾವಣೆ ಸಂದರ್ಭದಲ್ಲಿ ಫೋನ್ ಟ್ಯಾಪಿಂಗ್ ಆಗುತ್ತಿದ್ದ ಅನುಮಾನವಿತ್ತು. ಈಗ ಅದು ಬೆಳಕಿಗೆ ಬಂದಿದೆ. ಸಿಬಿಐ ತನಿಖೆಗೆ ವಹಿಸಿದ್ದಾರೆ, ಏನಾಗುತ್ತದೆಯೋ ಕಾದು ನೋಡೋಣ ಎಂದು ಹೇಳಿದರು.

    ಅಂಬರೀಶ್ ಅವರ ಅವರ 9ನೇ ತಿಂಗಳ ತಿಥಿ ಹಿನ್ನೆಲೆ ಕಂಠೀರವ ಸ್ಟುಡಿಯೋದಲ್ಲಿ ಇರುವ ಅಂಬರೀಶ್ ಸಮಾಧಿಗೆ ಸುಮಲತಾ ಪೂಜೆ ಸಲ್ಲಿಸಿದರು. ಅಂಬರೀಶ್ ಕುಟುಂಬಸ್ಥರು ಭಾಗಿಯಾಗಿದ್ದರು. ಪುತ್ರ ಅಭಿಷೇಕ್, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಮತ್ತು ಇತರ ಗಣ್ಯರು ಭಾಗವಹಿಸಿದ್ದರು.

  • ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಅಭಿಷೇಕ್ ಅಂಬರೀಶ್ ರಕ್ತದಾನ

    ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಅಭಿಷೇಕ್ ಅಂಬರೀಶ್ ರಕ್ತದಾನ

    ಮಂಡ್ಯ: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ರಕ್ತದಾನ ಮಾಡಿದ್ದಾರೆ.

    ಮಂಡ್ಯದ ವಿದ್ಯಾಗಣಪತಿ ದೇವಾಲಯದಲ್ಲಿ ಜೀವಧಾರೆ ಟ್ರಸ್ಟ್ ವತಿಯಿಂದ ಕಾರ್ಗಿಲ್ ವಿಜಯೋತ್ಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರವನ್ನು ಅಯೋಜನೆ ಮಾಡಲಾಗಿತ್ತು.

    ಈ ಕಾರ್ಯಕ್ರಮದಲ್ಲಿ ಹಲವರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುತ್ತಿದ್ದರು. ಕಾರ್ಯಕ್ರಮಕ್ಕೆ ಆಹ್ವಾನಿತರಾಗಿ ಆಗಮಿಸಿದ್ದ ಅಭಿಷೇಕ್  ಅಂಬರೀಶ್ ಈ ವೇಳೆ ತಾವೂ ಕೂಡ ರಕ್ತದಾನ ಮಾಡುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾದರು.