Tag: ಅಭಿಷೇಕ್ ದಾಸ್

  • ಬೆಂಗಳೂರು ಬಾಯ್ಸ್ ಕೊಟ್ಟ ನಾಲ್ಕು ಐಕಾನಿಕ್ಸ್ ಕ್ಯಾರೆಕ್ಟರ್ ಝಲಕ್

    ಬೆಂಗಳೂರು ಬಾಯ್ಸ್ ಕೊಟ್ಟ ನಾಲ್ಕು ಐಕಾನಿಕ್ಸ್ ಕ್ಯಾರೆಕ್ಟರ್ ಝಲಕ್

    ವಿ.ಮೇಕರ್ಸ್ ನಿರ್ಮಾಣದಲ್ಲಿ ಮೂಡಿ ಬಂದಿರುವ ‘ಬೆಂಗಳೂರು ಬಾಯ್ಸ್’  (Bangalore Boys) ಸಿನಿಮಾದ ಮೊದಲ ನೋಟ ಬಿಡುಗಡೆಯಾಗಿದೆ. ಎರಡು ನಿಮಿಷ ಐವತ್ತೈದು ಸೆಕೆಂಡ್ ಇರುವ ಟ್ರೈಲರ್ ಫನ್-ಎಮೋಷನ್, ಸೆಂಟಿಮೆಂಟ್, ರೋಮ್ಯಾನ್ಸ್, ಮೋಜು-ಮಸ್ತಿ, ಪಂಚಿಂಗ್ ಡೈಲಾಗ್ ಕಿಕ್ ಗಳಿಂದ ಕೂಡಿದೆ.

    ವೇಸ್ಟ್ ಎನಿಸಿಕೊಳ್ಳುವ ಲಾಸ್ಟ್ ಬೆಂಚ್ ಸ್ಟೂಡೆಂಟ್ ಬದುಕಿನಲ್ಲಿ ಸಾಧನೆಯ ಗುರಿಮುಟ್ಟಿದ ಸಾಕಷ್ಟು ಉದಾಹರಣೆಗಳಿವೆ. ಅಂತಹದ್ದೇ ಕಥಾಹಂದರ ಹೊಂದಿರುವ ಸಿನಿಮಾ ಬೆಂಗಳೂರು ಬಾಯ್ಸ್. ತೊಂಬತ್ತರ ದಶಕದಲ್ಲಿ ಸೂಪರ್ ಹಿಟ್ ಸಿನಿಮಾಗಳಾದ ರಣಧೀರ, ಅಂತ , ಓಂ ಹಾಗೂ ಎ ಚಿತ್ರಗಳ ಪಾತ್ರದಲ್ಲಿ ಅಭಿಷೇಕ್ ದಾಸ್, ಸಚಿನ್ ಚೆಲುವರಾಯಸ್ವಾಮಿ (Sachin Cheluvarayaswamy), ಚಂದನ್ ಆಚಾರ್ (Chandan Achar), ರೋಹಿತ್ ಮಿಂಚಿದ್ದಾರೆ. ಇವರಿಗೆ ಜೋಡಿಯಾಗಿ ಪ್ರಗ್ಯ ನಯನ, ವೈನಿಧಿ ಜಗದೀಶ್, ಜಯಶ್ರೀ ಆಚಾರ್ ಹಾಗೂ ಸೋನಿ ನಟಿಸಿದ್ದಾರೆ. ಇದನ್ನೂ ಓದಿ:ಅಂಬಿ ಪುತ್ರನ ಅದ್ದೂರಿ ಕಲ್ಯಾಣ- ಮದುವೆಯ ಕಲರ್‌ಫುಲ್ ಫೋಟೋಸ್

    ಕಾಮಿಡಿ ಕಿಂಗ್ ಚಿಕ್ಕಣ ಪ್ರಮುಖ ಪಾತ್ರವೊಂದ್ರಲ್ಲಿ ನಟಿಸಿದ್ದು, ಐಟಿಬಿಟಿ ಉದ್ಯೋಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಅರಸು ಸಾಹಿತ್ಯದ ಹಾಡಿಗೆ ಕಂಠ ಕೂಡ ಕುಣಿಸಿದ್ದಾರೆ.  ಉಮೇಶ್, ಪಿಡಿ ಸತೀಶ್, ಮೋಹನ್ ಜೂನೇಜಾ ಸೇರಿದಂತೆ ಹಿರಿಯ ಕಲಾವಿದರ ದಂಡು ಚಿತ್ರದಲ್ಲಿದೆ. ಶೂಟಿಂಗ್ ಮುಗಿಸಿ ಬಿಡುಗಡೆ ರೆಡಿಯಾಗಿರೋ ಬೆಂಗಳೂರು ಬಾಯ್ಸ್ ಸಿನಿಮಾಗೆ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾ ಖ್ಯಾತಿಯ ಗುರುದತ್‌ ಗಾಣಿಗ  (Gurudutt Ganiga)ಕ್ರಿಯೇಟಿವ್‌ ನಿರ್ದೇಶಕರಾಗಿ ಕೆಲಸ ಮಾಡಿದ್ದು, ರವಿ ಶ್ರೀರಾಮ್ ಕೋ ಡೈರೆಕ್ಟರ್ ಆಗಿ ದುಡಿದಿದ್ದಾರೆ.

    ರಿಜೋ ಪಿ ಜಾನ್ ಛಾಯಾಗ್ರಹಣ, ಧರ್ಮ ವಿಶ್ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. . ಸಿನಿಮಾ ಆಸಕ್ತಿ ಹೊಂದಿರುವ ತೆಲುಗು ಮೂಲದ ವಿಕ್ರಮ್‌ ಕೆ.ವೈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಪ್ರಶಾಂತ್ ರಾವ್ ಪುರಂ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಸದ್ಯ ಟ್ರೇಲರ್ ಮೂಲಕ ಕಿಕ್ ಕೊಟ್ಟಿರುವ ಬೆಂಗಳೂರು ಬಾಯ್ಸ್ ಆದಷ್ಟು ಬೆಳ್ಳಿತೆರೆಮೇಲೆ ಅಬ್ಬರಿಸಲಿದೆ.

  • ‘ಬ್ರಹ್ಮಗಂಟು’ ಗೀತಾ, ‘ಗಟ್ಟಿಮೇಳ’ ವಿಕ್ರಾಂತ್ ವಿಚಾರಣೆಗೆ ಹಾಜರ್

    ‘ಬ್ರಹ್ಮಗಂಟು’ ಗೀತಾ, ‘ಗಟ್ಟಿಮೇಳ’ ವಿಕ್ರಾಂತ್ ವಿಚಾರಣೆಗೆ ಹಾಜರ್

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂತರಿಕ ಭದ್ರತಾ ವಿಭಾಗ (ಐಎಸ್‍ಡಿ) ಸೀರಿಯಲ್ ನಟ, ನಟಿಯರಿಗೂ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಕಿರುತೆರೆ ನಟಿ ಗೀತಾಭಾರತಿ ಭಟ್ ಮತ್ತು ನಟ ಅಭಿಷೇಕ್ ದಾಸ್ ವಿಚಾರಣೆಗೆ ಹಾಜರಾಗಿದ್ದಾರೆ. ಇದನ್ನೂ ಓದಿ: ನಟ ಲೂಸ್ ಮಾದ ಯೋಗಿಯಿಂದ ಮತ್ತೊಂದು ಎಡವಟ್ಟು

    ವಿಚಾರಣೆಗೆ ಹೋಗುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅಭಿಷೇಕ್ ದಾಸ್, ಸೋಮವಾರ ರಾತ್ರಿ ನನಗೆ ನೋಟಿಸ್ ಬಂದಿದೆ. ಹೀಗಾಗಿ ವಿಚಾರಣೆಗೆ ಬಂದಿದ್ದೇನೆ. ನನ್ನ ಪ್ರಕಾರ ಡ್ರಗ್ಸ್ ಕೇಸಿನಲ್ಲಿ ಬಂಧಿತರಾಗಿರುವ ವ್ಯಕ್ತಿಗಳ ಬಗ್ಗೆ ಕೇಳಲು ಕರೆದಿರಬಹುದು ಅಥವಾ ಆ ವ್ಯಕ್ತಿಗಳನ್ನು ಮುಂಚೆ ಎಲ್ಲಾದರೂ ಭೇಟಿಯಾಗಿದ್ದೀರಾ, ಯಾವುದಾದರೂ ಪಾರ್ಟಿಗೆ ಹೋಗಿದ್ದೀರ ಎಂದು ಕೇಳಲು ಕರೆದಿರಬಹುದು ಎಂದರು. ಇದನ್ನೂ ಓದಿ: ನಮಗೆ ಆಗದವರು ನಮ್ಮ ಹೆಸರು ಹೇಳಿರ್ಬೋದು: ಗೀತಾಭಾರತಿ ಭಟ್‍

    ಕಿರುತೆರೆಯಲ್ಲಿ ಇದಿಯೋ ಇಲ್ಲವೋ ಗೊತ್ತಿಲ್ಲ. ಆದರೆ ನಮ್ಮ ಸರ್ಕಲ್‍ನಲ್ಲಿ ಡ್ರಗ್ಸ್ ಇಲ್ಲ. ನಾನು ಓಡಾಡಿರುವ ಸ್ನೇಹಿತರು ಕೂಡ ಡ್ರಗ್ಸ್ ತೆಗೆದುಕೊಳ್ಳುವುದನ್ನು ನಾನು ನೋಡಿಲ್ಲ. ಕೆಲವು ವ್ಯಕ್ತಿಗಳ ಬಗ್ಗೆ ವಿಚಾರಣೆ ಮಾಡಬೇಕು. ಅವರ ಬಗ್ಗೆ ನಿಮಗೆ ಗೊತ್ತಿರುವ ಮಾಹಿತಿ ಕೊಟ್ಟು ಹೋಗಿ ಎಂದು ಫೋನ್ ಮಾಡಿ ಕರೆದಿದ್ದಾರೆ. ಹೀಗಾಗಿ ಬಂದಿದ್ದೇನೆ. ಈಗಾಗಲೇ ಮೂವರು ಕಿರುತೆರೆ ನಟರು ಬಂದಿದ್ದಾರೆ. ಇನ್ನೂ ಕೆಲವರು ಬರುತ್ತಾರೆ, ನಾಳೆನೂ ಕೆಲ ನಟರು ಬರುತ್ತಾರೆ. ನನಗೆ ಗೊತ್ತಿರುವುದನ್ನು ನಾನು ಹೇಳುತ್ತೇನೆ ಎಂದು ನಟ ಅಭಿಷೇಕ್ ಹೇಳಿದರು.

    ಇದೇ ವೇಳೆ ಗೀತಾಭಾರತಿ ಭಟ್ ಮಾತನಾಡಿದ್ದು, ಸೆ.19ರಂದು ನನಗೆ ನೋಟಿಸ್ ಕೊಟ್ಟಿದ್ದಾರೆ. ಹೀಗಾಗಿ ಸಂಪೂರ್ಣವಾಗಿ ಐಎಸ್‍ಡಿಗೆ ನಾನು ಸಪೋರ್ಟ್ ಮಾಡುತ್ತೇನೆ. ಅವರು ಕೇಳುವ ಎಲ್ಲಾ ಪ್ರಶ್ನೆಗಳಿಗೂ ನಾನು ಉತ್ತರಿಸುವ ಮೂಲಕ ಸಹಕಾರ ನೀಡುತ್ತೇನೆ. ಅವರು ನಮ್ಮನ್ನು ವಿಚಾರಣೆಗೆ ಕರೆದಿದ್ದಾರೆ. ಆದರೆ ಅವರು ನಮ್ಮನ್ನು ಆರೋಪಿಯನ್ನಾಗಿ ಮಾಡುತ್ತಿಲ್ಲ ಎಂದರು.

    ನಟಿ ಗೀತಾಭಾರತಿ ಭಟ್ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಬ್ರಹ್ಮಗಂಟು’ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದು, ಗೀತಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಇನ್ನೂ ನಟ ಅಭಿಷೇಕ್ ದಾಸ್ ‘ಗಟ್ಟಿಮೇಳ’ ಸೀರಿಯಲ್ಲಿ ನಟಿಸುತ್ತಿದ್ದು, ವಿಕ್ರಾಂತ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಬ್ಬರು ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.