Tag: ಅಭಿಷೇಕ್

  • ರಶ್ಮಿಕಾ ಮಂದಣ್ಣ ಅರೆಬೆತ್ತಲೆ ಫೇಕ್ ವಿಡಿಯೋ: ಅಮಿತಾಭ್ ಕಿಡಿಕಿಡಿ

    ರಶ್ಮಿಕಾ ಮಂದಣ್ಣ ಅರೆಬೆತ್ತಲೆ ಫೇಕ್ ವಿಡಿಯೋ: ಅಮಿತಾಭ್ ಕಿಡಿಕಿಡಿ

    ನ್ನಡದ ಹೆಸರಾಂತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರದ್ದು ಎನ್ನಲಾದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಯಿತು. ಎದೆಭಾಗ ಕಾಣಿಸುವಂತೆ ಬಟ್ಟೆ ಹಾಕಿರುವ ವಿಡಿಯೋವನ್ನು ಹಲವರು ಹಂಚಿಕೊಂಡಿದ್ದರು. ರಶ್ಮಿಕಾ ಮಂದಣ್ಣ ಯಾಕೆ ಹೀಗೆ ಎಂದು ಹಲವರು ಪ್ರಶ್ನಿಸಿದ್ದರು. ಆದರೆ, ಅದು ರಶ್ಮಿಕಾ ಅವರ ವಿಡಿಯೋ ಅಲ್ಲವೆಂದು ಗೊತ್ತಾಗಿದೆ. ಅಭಿಷೇಕ್ (Abhishek) ಅನ್ನುವವರು ಮೂಲ ವಿಡಿಯೋವನ್ನು ಪತ್ತೆ ಮಾಡಿ ಎರಡೂ ವಿಡಿಯೋವನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

    ಹೌದು, ರಶ್ಮಿಕಾ ಮಂದಣ್ಣ ಎಂದು ಹೇಳಲಾದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅದು ಅಸಲಿಯಾ ಅಥವಾ ನಕಲಿಯಾ (Fake Video) ಎಂದು ಪತ್ತೆ ಹಚ್ಚುವಲ್ಲಿ ಹಲವರು ನಿರತರಾಗಿದ್ದರು. ಆ ವಿಡಿಯೋ ಖಂಡಿತಾ ರಶ್ಮಿಕಾ ಅವರದ್ದು ಅಲ್ಲ ಎಂದು ಕೆಲವರು ಹೇಳಿದ್ದರು. ಕೊನೆಗೂ ಅಭಿಷೇಕ್ ಅಸಲಿ ಮತ್ತು ನಕಲಿ ಎರಡೂ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

     

    ವೈರಲ್ ಆಗಿರುವ ವಿಡಿಯೋ ಝರಾ ಪಟೀಲ್ (Zara Patel) ಎನ್ನುವವರದ್ದು ಎಂದು ಅಭಿಷೇಕ್ ಬರೆದುಕೊಂಡಿದ್ದಾರೆ. ಝರಾ ಪಟೇಲ್ ಅವರು ಆ ವಿಡಿಯೋವನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದರು. ಆ ವಿಡಿಯೋಗೆ ರಶ್ಮಿಕಾ ತಲೆಯನ್ನು ಮಾಸ್ಕ್ ಮಾಡಿ ಹರಿಬಿಟ್ಟಿದ್ದರು ಕಿಡಿಕೇಡಿಗಳು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.

     

    ಅಭಿಷೇಕ್ ಅವರು ಹಂಚಿಕೊಂಡ ಪೋಸ್ಟ್ ಅನ್ನು ಹೆಸರಾಂತ ಬಾಲಿವುಡ್ ನಟ ಅಮಿತಾಭ್ ಬಚ್ಚನ್ (Amitabh Bachchan) ಕೂಡ ಶೇರ್ ಮಾಡಿದ್ದರು. ಇದು ಮಹಾಪರಾಧ. ತಕ್ಷಣವೇ ತಪ್ಪಿತಸ್ಥರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಅಮಿತಾಭ್ ಹೇಳಿದ್ದಾರೆ. ಈ ರೀತಿ ಯಾರಿಗೂ ಅಪಮಾನ ಮಾಡಬಾರದು ಎಂದು ಅವರು ತಿಳುವಳಿಕೆ ನೀಡಿದ್ದಾರೆ.

  • ತಲಕಾವೇರಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಷೇಕ್, ಅವಿವಾ ದಂಪತಿ

    ತಲಕಾವೇರಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಷೇಕ್, ಅವಿವಾ ದಂಪತಿ

    ಟ ಅಭಿಷೇಕ್-ಅವಿವಾ (Aviva) ಜೋಡಿ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲೆಯ ತಲಕಾವೇರಿಗೆ ಅಭಿಷೇಕ್ ದಂಪತಿ ಭೇಟಿ ನೀಡಿದ್ದಾರೆ. ಈ ಕುರಿತು ನಟಿ, ಸಂಸದೆ ಸುಮಲತಾ (Sumalatha) ಫೋಟೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಅಪ್‌ಡೇಟ್ ಹಂಚಿಕೊಂಡಿದ್ದಾರೆ.

    ಕಾವೇರಿ ಉಗಮ ಸ್ಥಾನ ತಲಕಾವೇರಿ (Tala Cauvery) ಅಭಿಷೇಕ್-ಅವಿವಾ‌ ದಂಪತಿ ತಾಯಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗಿ ಕಾವೇರಿ ಬಗೆಹರಿಯಲೆಂದು ಪ್ರಾರ್ಥಿಸಿದರು ಎಂದು ಸುಮಲತಾ ಬರೆದುಕೊಂಡಿದ್ದಾರೆ. ಅಭಿಷೇಕ್ ದಂಪತಿ ವಿಶೇಷ ಪೂಜೆ ಸಲ್ಲಿಸಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

    ರೈತರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಅಭಿಷೇಕ್ ಹೆಗಲ ಮೇಲೆ ಹಸಿರು ಟಾವೆಲ್ ಹಾಕಿ ಪೂಜೆ ಸಲ್ಲಿಸಿದ್ದಾರೆ. ಅವಿವಾ ಕೆಂಪು ಬಣ್ಣ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಪೂಜೆಯಲ್ಲಿ ಅವಿವಾ ಭಾಗಿಯಾಗಿರುವ ರೀತಿ ನೋಡಿ ಅಂಬಿ ಕುಟುಂಬಕ್ಕೆ ಸರಿಯಾದ ಸೊಸೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ:ದೊಡ್ಮನೆ ಆಟಕ್ಕೆ ಜೊತೆಯಾಗ್ತಾರಾ ಮೇಘಾ ಶೆಟ್ಟಿ? ಕೊನೆಗೂ ಸಿಕ್ತು ಉತ್ತರ

    ಅಭಿಷೇಕ್ ಅಂಬರೀಶ್ (Abhishek Ambareesh) ನಟನೆಯ ‘ಬ್ಯಾಡ್ ಮ್ಯಾನರ್ಸ್’ (Bad Manners) ಸಿನಿಮಾ ರಿಲೀಸ್‌ಗೆ ರೆಡಿಯಿದೆ. ನಿರ್ದೇಶಕ ಮಹೇಶ್ ಕುಮಾರ್ ಜೊತೆಗಿನ ಹೊಸ ಚಿತ್ರಕ್ಕೆ ಸದ್ಯದಲ್ಲೇ ಚಾಲನೆ ಸಿಗಲಿದೆ. ಹೆಬ್ಬುಲಿ ಡೈರೆಕ್ಟರ್ ಜೊತೆಗಿನ ‘ಕಾಳಿ’ ಸಿನಿಮಾದಲ್ಲಿ ಕೂಡ ಅಭಿಷೇಕ್ ಕಾಣಿಸಿಕೊಳ್ಳಲಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೀಗರೂಟದಲ್ಲಿ ರಾಜಕೀಯ ತರಬೇಡಿ : ಅಭಿಷೇಕ್ ಅಂಬರೀಶ್ ಮನವಿ

    ಬೀಗರೂಟದಲ್ಲಿ ರಾಜಕೀಯ ತರಬೇಡಿ : ಅಭಿಷೇಕ್ ಅಂಬರೀಶ್ ಮನವಿ

    ಇಂದು ಮಂಡ್ಯದಲ್ಲಿ ನಡೆದ ಅಭಿಷೇಕ್ ಅಂಬರೀಶ್ (Ambarish) ಮತ್ತು ಅವಿವಾ (Aviva) ಮದುವೆಯ ಬೀಗರೂಟದ ಬಗ್ಗೆ ಕೆಲವರು ಅಪಪ್ರಚಾರ ನಡೆಸುತ್ತಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ಬೀಗರೂಟ (Beegaruta) ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಅಭಿಷೇಕ್ (Abhishek) ಅಂಬರೀಶ್ ಪ್ರತಿಕ್ರಿಯೆ ನೀಡಿದ್ದು, ಇದನ್ನು ರಾಜಕೀಯಕ್ಕೆ ತರಬೇಡಿ ಎಂದು ಹೇಳಿದ್ದಾರೆ.

    ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚು ಪ್ರೀತಿ ತೋರಿಸಿದ್ದಾರೆ. ಊಟಕ್ಕಿಂತ ನಿಮ್ಮನ್ನು ನೋಡಲು ಬಂದೆ ಅನ್ನೋರು ಇದ್ರು. ಊಟ ಮಿಸ್ ಆಗಿದ್ದಕ್ಕೆ ಬೇಜಾರಾಗಿದೆ. ರಾಜಕೀಯ ವಿರೋಧಿಗಳು ಇದನ್ನು ಬಳಸಿಕೊಂಡರೆ ಅವರಿಗೂ ಒಳ್ಳೆಯದು ಆಗಲಿ. ಊಟ ಶಾರ್ಟೇಜ್ ಅನ್ನೋದು ಸುಳ್ಳು. ಊಟ ಬಿದ್ದಿದೆ. ನಮ್ಮ ತಂದೆಯ ಆಸೆಯಂತೆ ಮದುವೆಯಾಗಿದ್ದೇನೆ. ಇಲ್ಲದಿದ್ದರೆ ಸಿಂಪಲ್ ಆಗಿ ಮದುವೆಯಾಗುತ್ತಿದ್ದೆ ಎಂದಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಟೀ ಕುಡಿದ ಅಭಿಷೇಕ್: ಥೇಟ್ ಅಪ್ಪನಂತೆ ಮಗ ಎಂದ ಫ್ಯಾನ್ಸ್

    ಲವ್ ಮಾಡುವಾಗ ಎಷ್ಟು ಈಜಿಯಾಗಿ ನಿಭಾಸಬಹುದೋ, ಮದುವೆಯಾದ ಮೇಲೂ ಈಜಿಯಾಗಿ ನಿಭಾಯಿಸಬಹುದು ಅನ್ನೋ ಉದ್ದೇಶದಿಂದ ಮದುವೆಯಾದೆ. ಮುಂದಿನ ದಿನಗಳಲ್ಲಿ ಅವಿವಾ ನನ್ನ ಮೂವಿ ಪ್ರಮೋಷನ್ ಗೂ ಬರಬಹುದು. ನಮ್ಮ ಮಂಡ್ಯ ಜಿಲ್ಲೆಯ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮಂಡ್ಯ ಜನತೆ ಆರ್ಶೀವಾದ ಮಾಡಿದ್ದಾರೆ. ನಮ್ಮ ತಂದೆ-ತಾಯಿ ಆಸೆಯಂತೆ ಮಂಡ್ಯದಲ್ಲಿ ಬೀಗರ ಊಟ ಏರ್ಪಿಡಿಸಿದ್ದೇವೆ. ತುಂಬಾ ಜನ ಕಷ್ಟಪಟ್ಟು ವ್ಯವಸ್ಥೆ ಮಾಡಿದ್ರು. ಬೀಗರ ಊಟದಲ್ಲಿ ಶಾರ್ಟೇಜ್ ಆಗಿಲ್ಲ. ಯಾರಿಗೂ ದುಡ್ಡು ಕೊಟ್ಟು ಕರೆಸಿಲ್ಲ. ಪ್ರೀತಿ,ಅಭಿಮಾನದಿಂದ ಬಂದಿದ್ದಾರೆ. ಕೆಲವರು ಪ್ರವೋಕ್ ಮಾಡಿದಾಗ ಸಣ್ಣ ಪ್ರವೋಕ್ ಆದಾಗ ಅವ್ಯವಸ್ಥೆ ಆಗಿದೆ. ಅಡುಗೆ ಮನೆಗೆ ಕೆಲವರು ನುಗ್ಗಿದಾಗ ಘಟನೆ ಆಗಿದೆ. ಊಟ ಇಲ್ಲದೇ ಹೋಗಬೇಕು ಅಂತಾ ಕರೆಸಿಲ್ಲ. ದಯವಿಟ್ಟು ಕ್ಷಮಿಸಿ ಬಿಡಿ. ಯಾರು ಬೇಜಾರಾಗಬೇಡಿ ಎಂದು ಕ್ಷಮೆ ಕೇಳಿದ್ದಾರೆ ಅಭಿಷೇಕ್.

    ತಂದೆ ಮೇಲೆ ಪ್ರೀತಿ ಇಟ್ಟುಕೊಂಡು ಬಂದಿದ್ದರು. ಊಟ ಖಾಲಿಯಾಗತ್ತಾ ಬಂದ ಹಾಗೆ ರೆಡಿ ಮಾಡಿ ಅಂತಾ ಹೇಳಿದ್ದೇನೆ. ತುಂಬಾ ಊಟ ಹಾಳಾಗಿದೆ. ಬೀಗರ ಊಟ ಹಾಳು ಮಾಡಿದ್ದು ಯಾರು ಅಂತಾ ಗೊತ್ತಿಲ್ಲ. ಎಲೆಕ್ಷನ್ ಉದ್ದೇಶ ಇಟ್ಟುಕೊಂಡು ಬೀಗರ ಊಟ ಏರ್ಪಡಿಸಿಲ್ಲ. ಇದು ಅಂಬರೀಶ್ ಅಣ್ಣನ ಮಗನ ಸಮಾರಂಭ. ಇದರಲ್ಲಿ ರಾಜಕೀಯ ತರಬೇಡಿ ಎಂದು ಅಭಿಷೇಕ್ ವಿರೋಧಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

  • ‘ಅವಿವಾ ಮುದ್ದೆ ತಿನ್ನಲ್ಲ’: ಪತ್ನಿಯ ಇಷ್ಟದ ಮೆನು ಹಂಚಿಕೊಂಡ ಅಭಿಷೇಕ್

    ‘ಅವಿವಾ ಮುದ್ದೆ ತಿನ್ನಲ್ಲ’: ಪತ್ನಿಯ ಇಷ್ಟದ ಮೆನು ಹಂಚಿಕೊಂಡ ಅಭಿಷೇಕ್

    ದುವೆಯ ನಂತರ ಇದೇ ಮೊದಲ ಬಾರಿಗೆ ಪತ್ನಿ ಅವಿವಾರನ್ನು ಮಂಡ್ಯಕ್ಕೆ ಕರೆದುಕೊಂಡು ಬಂದಿದ್ದರು ನಟ ಅಭಿಷೇಕ್ (Abhishek) ಅಂಬರೀಶ್. ಇಂದು ಮಂಡ್ಯದ ಜನತೆಗಾಗಿ ಅಂಬರೀಶ್ (Ambarish) ಕುಟುಂಬ ಬೀಗರೂಟವನ್ನು ಹಮ್ಮಿಕೊಳ್ಳಲಾಗಿತ್ತು. ಮಂಡ್ಯದ ಜನರೊಂದಿಗೆ ಬೀಗರೂಟ ಸವಿಯುವುದಕ್ಕಾಗಿ ಪತ್ನಿ ಸಮೇತ ಆಗಮಿಸಿದ್ದರು ಅಭಿಷೇಕ್. ಈ ಸಂದರ್ಭದಲ್ಲಿ ಆ ಭಾಗದ ಮುದ್ದೆ (Mudde) ಬಗ್ಗೆ ಮಾತನಾಡಿದರು. ಅವಿವಾಗೆ ಮುದ್ದೆ ತಿನ್ನೋಕೆ ಬರುವುದಿಲ್ಲ. ಮಟನ್, ಚಿಕನ್ ತಿನ್ನುತ್ತಾರೆ ಎಂದು ಹೆಂಡತಿಯ ಮೆನು ಹಂಚಿಕೊಂಡರು.

    ಜೂನ್ 5ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ನವಜೋಡಿ ಮುಂಜಾನೆ ಮಂಡ್ಯದ ಬೀಗರೂಟದಲ್ಲಿ (Beegaroota) ಪಾಲ್ಗೊಂಡಿದ್ದಾರೆ. ನಿರೀಕ್ಷೆಗೂ ಮೀರಿ ಮಂಡ್ಯದಲ್ಲಿ ಅಭಿವಾ ಜೋಡಿಯನ್ನು ನೋಡಲು ಜನ ಸೇರಿದ್ದರು. ಇದನ್ನೂ ಓದಿ:‘ದೇವರ ಆಟ ಬಲ್ಲವರಾರು’ ಎನ್ನುತ್ತಾ 3 ವರ್ಷಗಳ ನಂತರ ಬಣ್ಣ ಹಚ್ಚಿದ ಸಿಂಧೂ ಲೋಕನಾಥ

    ಹಲವು ವರ್ಷಗಳ ಪ್ರೀತಿಗೆ ಜೂನ್ 5ರಂದು ಅಭಿ- ಅವಿವಾ (Aviva) ಜೋಡಿ ಮದುವೆ ಮುದ್ರೆ ಒತ್ತುವ ಮೂಲಕ ಹೊಸ ಬಾಳಿಗೆ ಕಾಲಿಟ್ಟರು. ಜೂನ್ 7ರಂದು ಅಭಿವಾ ಆರತಕ್ಷತೆಯನ್ನ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಕನ್ನಡ ಮಾತ್ರವಲ್ಲದೇ ಸೌತ್, ಬಾಲಿವುಡ್ ಸೂಪರ್ ಸ್ಟಾರ್ಸ್ ಕೂಡ ಆಗಮಿಸಿದ್ದರು. ಅಂಬಿ ಸ್ನೇಹ ವರ್ಗವೇ ಅಭಿಷೇಕ್ ವಿವಾಹ ಸಮಾರಂಭದಲ್ಲಿ ಸಾಕ್ಷಿಯಾದರು.

    ಮಂಡ್ಯಗೆ (Mandya) ಈಗಾಗಲೇ ಅಭಿವಾ ಎಂಟ್ರಿ ಕೊಟ್ಟಿದ್ದಾರೆ. ಮಂಡ್ಯದ ಜನತೆ ಬೀಗರೂಟ ಮಾಡುವ ಮೂಲಕ ನಮ್ಮನ್ನ ಹರಿಸಲಿ ಅಂತಾ ಕೇಳಿಕೊಳ್ತೀನಿ. ಮಂಡ್ಯದೂ ಅಂಬರೀಶ್ ಅವರ ನಂಟು ಹೇಗಿದೆ ಅಂತಾ ಎಲ್ಲರಿಗೂ ಗೊತ್ತು. ಎಲ್ಲರೂ ರಾಜಕಾರಣವನ್ನ ಪಕ್ಕಕ್ಕಿಟ್ಟು ಅಂಬರೀಶ್ ಅವರ ಮೇಲಿನ ಪ್ರೀತಿಗೆ ಇವತ್ತು ಎಲ್ಲರೂ ಬೀಗರೂಟಕ್ಕೆ ಬಂದಿದ್ದಾರೆ. ಮಂಡದ್ಯ ಜನರಿಗೆ ಊಟ ಹಾಕಿಸೋದು ನಮ್ಮ ಭಾಗ್ಯ ಎಂದು ಅಂಬಿ ಪುತ್ರ ಅಭಿಷೇಕ್ ಹೇಳಿದ್ದಾರೆ.

    ಮಂಡ್ಯದ ಜನ ಸೇರಿರೋದು ರೀತಿ ನೋಡಿ ಅವಿವಾಗೆ ಭಯ ಆಗಿದೆ, ಹೆದರಿದ್ದಾಳೆ. ಅವರು ಯಾವತ್ತು ಇಷ್ಟು ಜನನಾ ಒಟ್ಟಿಗೆ ನೋಡಿಲ್ಲ. ಇನ್ನೂ ಅಂಬರೀಶ್ ಅವರಿಗೆ ಇಷ್ಟದ ಊಟವೇ ಇವತ್ತಿನ ಬೀಗರೂಟದ ಮೆನು ಆಗಿದೆ ಎಂದು ಅಭಿಷೇಕ್ ಮಾತನಾಡಿದ್ದಾರೆ. ಅಂಬಿ ಕುಟುಂಬಕ್ಕೂ ಮಂಡ್ಯಗೂ ನಂಟಿದೆ. ಹಾಗಾಗಿ ಮಂಡ್ಯದ ಜನರಿಗೆ ಅಭಿವಾ ಮದುವೆಯ ಬೀಗರೂಟಕ್ಕೆ ಅದ್ದೂರಿಯಾಗಿ ಸಿದ್ಧತೆ ಮಾಡಲಾಗಿದೆ. ಮಂಡ್ಯದಲ್ಲಿ ವಿಶಾಲವಾದ ಜಾಗದಲ್ಲಿ ಬೃಹತ್ ಜರ್ಮನ್ ಟೆಂಟ್ ಹಾಕಿ ಜನರು ಕುಳಿತು ಊಟ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಒಂದೇ ಬಾರಿಗೆ 4500 ಮಂದಿ ಕುಳಿತು ಊಟ ಮಾಡಬಹುದಾಗಿದೆ. ಇಂದು ಬೆಳಗ್ಗೆ 11ರಿಂದ ಔತಣಕೂಟ ಆರಂಭವಾಗಿದೆ.

     

    ಮಂಡ್ಯ ಶೈಲಿಯಲ್ಲಿ ಬಾಡೂಟ ತಯಾರಿಗೊಳ್ಳುತ್ತಿದ್ದು, ಮಂಡ್ಯದ ಪ್ರಖ್ಯಾತ ಬಾಣಸಿಗರ ತಂಡದ 900 ಮಂದಿಯಿಂದ ಅಡುಗೆ ತಯಾರಿ ಕಾರ್ಯಗಳು ಬಿರುಸಿನಿಂದ ನಡೆದಿದೆ. 7 ಟನ್ ಮಟನ್, 8 ಟನ್ ಚಿಕನ್ ಬಳಸಿ ಭರ್ಜರಿ ಬಾಡೂಟವನ್ನು ಸಿದ್ಧಗೊಳಿಸಲಾಗಿದೆ. ರಾಗಿಮುದ್ದೆ, ಮಟನ್ ಬಿರಿಯಾನಿ, ಬೋಟಿ ಗೊಜ್ಜು, ನಾಟಿಕೋಳಿ ಸಾಂಬಾರ್, ಕಬಾಬ್, ಮೊಟ್ಟೆ, ರೈಸ್, ತಿಳಿ ಸಾಂಬಾರ್, ಬಾದುಶಾ, ಪಾಯಸ, ಬೀಡಾ, ಐಸ್‌ಕ್ರೀಂ, ಬಾಳೆಹಣ್ಣು ಇದು ಬೀಗರೂಟದ ಮೆನು ಆಗಿದೆ.

  • ಬೀಗರೂಟ ಕಾರ್ಯಕ್ರಮಕ್ಕೆ ಮಂಡ್ಯಗೆ ಹೊರಟ ಅಭಿಷೇಕ್ ದಂಪತಿ

    ಬೀಗರೂಟ ಕಾರ್ಯಕ್ರಮಕ್ಕೆ ಮಂಡ್ಯಗೆ ಹೊರಟ ಅಭಿಷೇಕ್ ದಂಪತಿ

    ಭಿಷೇಕ್ ಅಂಬರೀಶ್- ಅವಿವಾ (Aviva) ಜೋಡಿ ಮದುವೆಯ ಬೀಗರೂಟ ಕಾರ್ಯಕ್ರಮಕ್ಕೆ ಮಂಡ್ಯಗೆ ಹೊರಟಿದ್ದಾರೆ. ಜೂನ್ 5ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿ ಇದೀಗ ಮಂಡ್ಯದತ್ತ ಪಯಣ ಬೆಳೆಸಿದ್ದಾರೆ. ಈಗಾಗಲೇ ಮಂಡ್ಯದ ಜನರಿಗೆ ವೀಡಿಯೋ ಮೂಲಕ ಬೀಗರೂಟ ಕಾರ್ಯಕ್ರಮಕ್ಕೆ ಸುಮಲತಾ (Sumalatha), ಅಭಿಷೇಕ್ ಜೋಡಿ ಆಮಂತ್ರಣ ನೀಡಿದ್ದಾರೆ.

    ಹಲವು ವರ್ಷಗಳ ಪ್ರೀತಿಗೆ ಜೂನ್ 5ರಂದು ಅಭಿ- ಅವಿವಾ ಜೋಡಿ ಮದುವೆ ಮುದ್ರೆ ಒತ್ತುವ ಮೂಲಕ ಹೊಸ ಬಾಳಿಗೆ ಕಾಲಿಟ್ಟರು. ಜೂನ್ 7ರಂದು ಅಭಿವಾ ಆರತಕ್ಷತೆಯನ್ನ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಕನ್ನಡ ಮಾತ್ರವಲ್ಲದೇ ಸೌತ್, ಬಾಲಿವುಡ್ ಸೂಪರ್ ಸ್ಟಾರ್ಸ್ ಕೂಡ ಆಗಮಿಸಿದ್ದರು. ಅಂಬಿ ಸ್ನೇಹ ವರ್ಗವೇ ಅಭಿಷೇಕ್ ವಿವಾಹ ಸಮಾರಂಭದಲ್ಲಿ ಸಾಕ್ಷಿಯಾದರು.

    ಅಂಬಿ ಕುಟುಂಬಕ್ಕೂ ಮಂಡ್ಯಗೂ ನಂಟಿದೆ. ಹಾಗಾಗಿ ಮಂಡ್ಯದ ಜನರಿಗೆ ಅಭಿವಾ ಮದುವೆಯ ಬೀಗರೂಟಕ್ಕೆ ಅದ್ದೂರಿಯಾಗಿ ಸಿದ್ಧತೆ ನಡೆದಿದೆ. ಅಷ್ಟೇ ಅಲ್ಲ, ಮಂಡದತ್ತ ನವಜೋಡಿ ತಮ್ಮ ಖಾಸಗಿ ಕಾರಿನಲ್ಲಿ ಹೊರಟಿದ್ದಾರೆ. ಇನ್ನೂ ಕೆಂಪು ಸೀರೆಯಲ್ಲಿ ಅವಿವಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಶರ್ಟ್‌- ಪಂಚೆ ಜೊತೆ ಶಲ್ಯ ಧರಿಸಿ ಅಭಿಷೇಕ್‌(Abhishek Ambareesh) ಮಿಂಚಿದ್ದಾರೆ. ಮಂಡ್ಯದಲ್ಲಿ ವಿಶಾಲವಾದ ಜಾಗದಲ್ಲಿ ಬೃಹತ್ ಜರ್ಮನ್ ಟೆಂಟ್ ಹಾಕಿ ಜನರು ಕುಳಿತು ಊಟ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಒಂದೇ ಬಾರಿಗೆ 4500 ಮಂದಿ ಕುಳಿತು ಊಟ ಮಾಡಬಹುದಾಗಿದೆ. ಇಂದು ಬೆಳಗ್ಗೆ 11ರಿಂದ ಔತಣಕೂಟ ಆರಂಭವಾಗಲಿದೆ. ಇದನ್ನೂ ಓದಿ:ಟಾಪ್‌ಲೆಸ್ ಆಗಿ ಕಾಣಿಸಿಕೊಂಡ ತಮನ್ನಾ ಭಾಟಿಯಾ- ಹಾಟ್ ವೀಡಿಯೋ ವೈರಲ್

    ಮಂಡ್ಯ ಶೈಲಿಯಲ್ಲಿ ಬಾಡೂಟ ತಯಾರಿಗೊಳ್ಳುತ್ತಿದ್ದು, ಮಂಡ್ಯದ ಪ್ರಖ್ಯಾತ ಬಾಣಸಿಗರ ತಂಡದ 900 ಮಂದಿಯಿಂದ ಅಡುಗೆ ತಯಾರಿ ಕಾರ್ಯಗಳು ಬಿರುಸಿನಿಂದ ನಡೆಯುತ್ತಿದೆ. 7 ಟನ್ ಮಟನ್, 8 ಟನ್ ಚಿಕನ್ ಬಳಸಿ ಭರ್ಜರಿ ಬಾಡೂಟವನ್ನು ಸಿದ್ಧಗೊಳಿಸಲಾಗುತ್ತಿದೆ. ರಾಗಿಮುದ್ದೆ, ಮಟನ್ ಬಿರಿಯಾನಿ, ಬೋಟಿ ಗೊಜ್ಜು, ನಾಟಿಕೋಳಿ ಸಾಂಬಾರ್, ಕಬಾಬ್, ಮೊಟ್ಟೆ, ರೈಸ್, ತಿಳಿ ಸಾಂಬಾರ್, ಬಾದುಶಾ, ಪಾಯಸ, ಬೀಡಾ, ಐಸ್‌ಕ್ರೀಂ, ಬಾಳೆಹಣ್ಣು ಇದು ಬೀಗರೂಟದ ಮೆನು ಆಗಿದೆ.

  • ಮಂಡ್ಯದಲ್ಲಿ ಟೀ ಕುಡಿದ ಅಭಿಷೇಕ್: ಥೇಟ್ ಅಪ್ಪನಂತೆ ಮಗ ಎಂದ ಫ್ಯಾನ್ಸ್

    ಮಂಡ್ಯದಲ್ಲಿ ಟೀ ಕುಡಿದ ಅಭಿಷೇಕ್: ಥೇಟ್ ಅಪ್ಪನಂತೆ ಮಗ ಎಂದ ಫ್ಯಾನ್ಸ್

    ನಾಳೆ ಮಂಡ್ಯದಲ್ಲಿ (Mandya) ಅಂಬಿ ಕುಟುಂಬ ಬೀಗರೂಟವನ್ನು ಆಯೋಜನೆ ಮಾಡಿದೆ. ಬೀಗರೂಟಕ್ಕೆ ಸಕಲ ಸಿದ್ಧತೆಯನ್ನೂ ಮಾಡಿಕೊಳ್ಳಲಾಗುತ್ತಿದೆ. ಸಿದ್ದತೆಯನ್ನು ಪರಿಶೀಲಿಸಲು ಅಭಿಷೇಕ್ ಅಂಬರೀಶ್ (Abhishek) ಇಂದು ಮಂಡ್ಯಗೆ ಆಗಮಿಸಿದ್ದರು. ಪರಿಶೀಲನೆ ಮುಗಿಸಿ ಮಂಡ್ಯದಲ್ಲಿಯ ಮಹಾವೀರ ವೃತ್ತದಲ್ಲಿರುವ ಟೀ ಅಂಗಡಿಯಲ್ಲಿ ಚಹಾ (Tee) ಕುಡಿದ ಸಂಭ್ರಮಿಸಿದರು ಯಂಗ್ ರೆಬಲ್ ಸ್ಟಾರ್. ತಮ್ಮ ಕುಟುಂಬದ ಅತ್ಯಾಪ್ತ ಇಂಡುವಾಳು ಸಚ್ಚಿದಾನಂದ ಜೊತೆಗೆ ಆಗಮಿಸಿದ್ದ ಅಭಿ, ಕೆಲ ಹೊತ್ತು ಅಂಗಡಿಯಲ್ಲಿ ಕಾಲ ಕಳೆದರು.

    ಅಂಬರೀಶ್ (Ambarish) ಅವರು ಮಂಡ್ಯಗೆ ಬಂದಾಗ ಹೀಗೆಯೇ ಮಾಡುತ್ತಿದ್ದರಂತೆ. ಯಾವುದೋ ಟೀ ಅಂಗಡಿ, ಇನ್ನ್ಯಾವುದೋ ಹೋಟೆಲ್ ಹೊಕ್ಕು ಖುಷಿ ಖುಷಿಯಾಗಿ ತಿಂದು ಹೋಗುತ್ತಿದ್ದರಂತೆ. ಅಭಿಷೇಕ್ ಕೂಡ ತಂದೆಯಂತೆಯೇ ಎಲ್ಲರೊಂದಿಗೆ ಬರೆಯುತ್ತಿದ್ದಾರೆ. ಹಾಗಾಗಿ ಥೇಟ್ ಅಂಬಿಯನ್ನೇ ಅಭಿಷೇಕ್ ಗುಣದಲ್ಲಿ ಹೋಲುತ್ತಿದ್ದಾರೆ ಎನ್ನುತ್ತಾರೆ ಅಭಿಮಾನಿಗಳು. ಇದನ್ನೂ ಓದಿ:ಹೊಸ ಐಷಾರಾಮಿ ಕಾರು ಖರೀದಿಸಿದ ‘ಕೆಜಿಎಫ್’ ಸ್ಟಾರ್ ಯಶ್

    ಮಂಡ್ಯ ಜಿಲ್ಲೆಯ ಮದ್ದೂರು ಸಮೀಪದ ಗೆಜ್ಜಲಗೆರೆ ಕಾಲೋನಿ ಬಳಿಯ 15 ಎಕರೆ ಪ್ರದೇಶದಲ್ಲಿ ಈ ಬೀಗರ ಔತಣಕೂಟ (Beegaruta) ನಡೆಯಲಿದೆ. ಈ ಬೀಗರ ಊಟಕ್ಕೆ ಸುಮಾರು 50 ಸಾವಿರ ಜನರು ಆಗಮಿಸಿವ ನಿರೀಕ್ಷೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಕುಟುಂಬಸ್ಥರು ಇದ್ದಾರೆ. ಹೀಗಾಗಿ ವಿಶಾಲ ಜಾಗದಲ್ಲಿ ಬೃಹತ್ ಜರ್ಮನ್ ಟೆಂಟ್‌ ಹಾಕಿ ಜನರು ಕುಳಿತು ಊಟ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಒಂದೇ ಬಾರಿಗೆ 4500 ಮಂದಿ ಕುಳಿತು ಊಟ ಮಾಡಲು ಆಸನದ ವ್ಯವಸ್ಥೆ ಮಾಡಲಾಗಿದೆ. ಅಭಿಷೇಕ್ ಅವಿವಾ ಅವರ ಮಂಡ್ಯದ ಬೀಗರ ಔತಣಕೂಟಕ್ಕೆ ರಾಜಕೀಯ ಹಾಗೂ ಸಿನಿಮಾ ರಂಗದ ಹಲವು ಗಣ್ಯರು ಭಾಗವಹಿಸುವ ಸಾಧ್ಯತೆ ಇದ್ದು ಹೀಗಾಗಿ ವಿಐಪಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.

    ನಾಳೆ ಬೆಳಿಗ್ಗೆ 11:30ರಿಂದ ಆರಂಭವಾಗಲಿರುವ ಔತಣಕೂಟದಲ್ಲಿ 5-6 ಟನ್ ಮಟನ್, 7 ಟನ್ ಚಿಕನ್ ಬಳಸಿ ಭರ್ಜರಿ ಬಾಡೂಟ ತಯಾರಿ ಮಾಡಲಾಗುತ್ತದೆ. ಮಂಡ್ಯ ಶೈಲಿಯಲ್ಲಿ ಬಾಡೂಟ ತಯಾರಿಯಾಗಲಿದ್ದು ಮಂಡ್ಯದ ಪ್ರಖ್ಯಾತ ಬಾಣಸಿಗರ ತಂಡದಿಂದ ಅಡುಗೆ ತಯಾರಿ ಕಾರ್ಯ ಇಂದು ರಾತ್ರಿಯಿಂದಲೇ ನಡೆಯುತ್ತದೆ. ಬೀಗರ ಔತಣಕೂಟ ಮೆನು ಮುದ್ದೆ, ಮಟನ್ ಬಿರಿಯಾನಿ, ಬೋಟಿ ಗೊಜ್ಜು, ಮಟನ್, ಎರಡು ಬಗೆಯ ಚಿಕನ್, ಮೊಟ್ಟೆ, ರೈಸ್, ತಿಳಿಸಾಂಬಾರ್, ಬೀಡಾ, ಐಸ್ ಕ್ರೀಂ, ಬಾಳೆಹಣ್ಣು ಇರಲಿದೆ.

  • ಬೀಗರೂಟಕ್ಕೆ ಬನ್ನಿ: ಮಂಡ್ಯದ ಜನತೆಗೆ ಆಹ್ವಾನ ನೀಡಿದ ಸುಮಲತಾ ಅಂಬರೀಶ್

    ಬೀಗರೂಟಕ್ಕೆ ಬನ್ನಿ: ಮಂಡ್ಯದ ಜನತೆಗೆ ಆಹ್ವಾನ ನೀಡಿದ ಸುಮಲತಾ ಅಂಬರೀಶ್

    ಭಿಷೇಕ್ (Abhishek) ಅಂಬರೀಶ್-ಅವಿವಾ (Aviva)  ಮದುವೆಯ ಬೀಗರೂಟ ನಾಳೆ ಮಂಡ್ಯದಲ್ಲಿ ನಡೆಯಲಿದೆ. ಮಂಡ್ಯದ ಸರ್ವ ಜನರೂ ಬೀಗರೂಟಕ್ಕೆ (Beegaruta) ಬರುವಂತೆ ಸುಮಲತಾ (Sumalatha) ಅಂಬರೀಶ್ ಆಹ್ವಾನ ನೀಡಿದ್ದಾರೆ. ಸುದೀರ್ಘ ಬರಹವೊಂದನ್ನು ಪೋಸ್ಟ್ ಮಾಡಿರುವ ಸುಮಲತಾ, ಕುಟುಂಬ ಸಮೇತ ಎಲ್ಲರೂ ಬೀಗರೂಟಕ್ಕೆ ಬರುವಂತೆ ವಿನಂತಿಸಿಕೊಂಡಿದ್ದಾರೆ.

    ಸೋಷಿಯಲ್ ಮೀಡಿಯಾದ ಮೂಲಕ ಆಹ್ವಾನ ನೀಡಿರುವ ಸುಮಲತಾ, ‘ಮಂಡ್ಯ ಜಿಲ್ಲೆಯ ಆತ್ಮೀಯ ಜನತೆಗೆ ನಿಮ್ಮ ಸುಮಲತಾ ಅಂಬರೀಶ್ ಮಾಡುವ ನಮಸ್ಕಾರಗಳು. ತಮ್ಮೆಲ್ಲರ ಆಶೀರ್ವಾದ ಮತ್ತು ಶುಭ ಹಾರೈಕೆಗಳೊಂದಿಗೆ  ನನ್ನ ಮಗನಾದ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಮದುವೆಯನ್ನು  ಮತ್ತು  ಆರತಕ್ಷತೆ ಕಾರ್ಯಕ್ರಮವನ್ನು  ಬೆಂಗಳೂರಿನಲ್ಲಿ ನೆರವೇರಿಸಿರುತ್ತೇನೆ. ಮಂಡ್ಯದ  (Mandya) ಸ್ವಾಭಿಮಾನಿ ಜನತೆ  ಅಂಬರೀಶ್ ಕುಟುಂಬದ ಮೇಲೆ  ಇಟ್ಟಿರುವ ಪ್ರೀತಿ ವಾತ್ಸಲ್ಯ ಅಭಿಮಾನಕ್ಕೆ  ನಾವು ಸದಾ ಚಿರಋಣಿಯಾಗಿರುತ್ತೇವೆ. ಅಭಿಷೇಕ್ ಹಾಗೂ ಅವಿವಾ ಮದುವೆಯ  ಸಂಭ್ರಮವನ್ನು  ತಮ್ಮೊಂದಿಗೆ ಹಂಚಿಕೊಳ್ಳುವ  ಉದ್ದೇಶದಿಂದ ಇದೇ ಶುಕ್ರವಾರ,  ದಿನಾಂಕ 16/06/2023 ರಂದು  ಬೆಳಿಗ್ಗೆ 11:30  ರಿಂದ  ಬೀಗರ ಔತಣವನ್ನು ಏರ್ಪಡಿಸಲಾಗಿದೆ.  ಇದಕ್ಕಾಗಿ ಮಂಡ್ಯ ಬಳಿಯ ಗೆಜ್ಜಲಗೆರೆಯಲ್ಲಿ  ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಮದುವೆ ಕಾರ್ಯಕ್ರಮಗಳು ಮತ್ತು  ಇನ್ನಿತರೆ  ಕಾರ್ಯದ  ಒತ್ತಡದಿಂದ  ನಾನು ಖುದ್ದಾಗಿ  ಬಂದು ಬೀಗರ ಔತಣಕ್ಕೆ ತಮ್ಮನ್ನು ಆಹ್ವಾನಿಸಲು ಸಾಧ್ಯವಾಗುತ್ತಿಲ್ಲ.  ಆದ್ದರಿಂದ ತಾವೆಲ್ಲರೂ ಅನ್ಯತಾ ಭಾವಿಸದೆ ತಮ್ಮ ಕುಟುಂಬ ಸಮೇತರಾಗಿ ಬೀಗರ ಔತಣಕ್ಕೆ ಆಗಮಿಸಿ  ನಮ್ಮ ಆತಿಥ್ಯವನ್ನು ಸ್ವೀಕರಿಸಿ,  ವಧು ವರರನ್ನು ಆಶೀರ್ವದಿಸಬೇಕಾಗಿ  ಈ ಮೂಲಕ ಕೋರುತ್ತೇನೆ.  ಈ ಸಂದೇಶವನ್ನು ನನ್ನ ವೈಯಕ್ತಿಕ ಆಹ್ವಾನವೆಂದು ಭಾವಿಸಿ,  ತಮ್ಮ ಕುಟುಂಬ ಸಮೇತರಾಗಿ ಬೀಗರ  ಔತಣಕ್ಕೆ ಆಗಮಿಸಲು  ಮತ್ತೊಮ್ಮೆ ಕೋರುತ್ತೇನೆ. ಅಂಬರೀಶ್ ಅವರ ಕುಟುಂಬಕ್ಕೆ ತಾವು  ಇಲ್ಲಿಯವರೆಗೆ ತೋರಿದ  ಪ್ರೀತಿ ವಿಶ್ವಾಸ ಮತ್ತು ಆಶೀರ್ವಾದವನ್ನು,  ಇನ್ನು ಮುಂದೆಯೂ ಸಹ ನೀಡಲು ತಮ್ಮನ್ನು ಕೋರುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

    ಜನರಿಗೆ ಬೊಂಬಾಟ್ ಬಾಡೂಟ ಹಾಕಿಸಲು ಅಂಬಿ (Ambarish) ಕುಟುಂಬ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಮಂಡ್ಯ ಜಿಲ್ಲೆಯ ಮದ್ದೂರು ಸಮೀಪದ ಗೆಜ್ಜಲಗೆರೆ ಕಾಲೋನಿ ಬಳಿಯ 15 ಎಕರೆ ಪ್ರದೇಶದಲ್ಲಿ ಈ ಬೀಗರ ಔತಣಕೂಟ ನಡೆಯಲಿದೆ. ಈ ಬೀಗರ ಊಟಕ್ಕೆ ಸುಮಾರು 50 ಸಾವಿರ ಜನರು ಆಗಮಿಸಿವ ನಿರೀಕ್ಷೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಕುಟುಂಬಸ್ಥರು ಇದ್ದಾರೆ. ಹೀಗಾಗಿ ವಿಶಾಲ ಜಾಗದಲ್ಲಿ ಬೃಹತ್ ಜರ್ಮನ್ ಟೆಂಟ್‌ ಹಾಕಿ ಜನರು ಕುಳಿತು ಊಟ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಒಂದೇ ಬಾರಿಗೆ 4500 ಮಂದಿ ಕುಳಿತು ಊಟ ಮಾಡಲು ಆಸನದ ವ್ಯವಸ್ಥೆ ಮಾಡಲಾಗಿದೆ. ಅಭಿಷೇಕ್ ಅವಿವಾ ಅವರ ಮಂಡ್ಯದ ಬೀಗರ ಔತಣಕೂಟಕ್ಕೆ ರಾಜಕೀಯ ಹಾಗೂ ಸಿನಿಮಾ ರಂಗದ ಹಲವು ಗಣ್ಯರು ಭಾಗವಹಿಸುವ ಸಾಧ್ಯತೆ ಇದ್ದು ಹೀಗಾಗಿ ವಿಐಪಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.

    ನಾಳೆ ಬೆಳಿಗ್ಗೆ 11:30ರಿಂದ ಆರಂಭವಾಗಲಿರುವ ಔತಣಕೂಟದಲ್ಲಿ 5-6 ಟನ್ ಮಟನ್, 7 ಟನ್ ಚಿಕನ್ ಬಳಸಿ ಭರ್ಜರಿ ಬಾಡೂಟ ತಯಾರಿ ಮಾಡಲಾಗುತ್ತದೆ. ಮಂಡ್ಯ ಶೈಲಿಯಲ್ಲಿ ಬಾಡೂಟ ತಯಾರಿಯಾಗಲಿದ್ದು ಮಂಡ್ಯದ ಪ್ರಖ್ಯಾತ ಬಾಣಸಿಗರ ತಂಡದಿಂದ ಅಡುಗೆ ತಯಾರಿ ಕಾರ್ಯ ಇಂದು ರಾತ್ರಿಯಿಂದಲೇ ನಡೆಯುತ್ತದೆ. ಬೀಗರ ಔತಣಕೂಟ ಮೆನು ಮುದ್ದೆ, ಮಟನ್ ಬಿರಿಯಾನಿ, ಬೋಟಿ ಗೊಜ್ಜು, ಮಟನ್, ಎರಡು ಬಗೆಯ ಚಿಕನ್, ಮೊಟ್ಟೆ, ರೈಸ್, ತಿಳಿಸಾಂಬಾರ್, ಬೀಡಾ, ಐಸ್ ಕ್ರೀಂ, ಬಾಳೆಹಣ್ಣು ಇರಲಿದೆ.

  • ನಾಳೆ ಮಂಡ್ಯದಲ್ಲಿ ಅಭಿಷೇಕ್-ಅವಿವಾ ಮದುವೆ ಬೀಗರ ಊಟ: ಭರ್ಜರಿ ಭೋಜನ

    ನಾಳೆ ಮಂಡ್ಯದಲ್ಲಿ ಅಭಿಷೇಕ್-ಅವಿವಾ ಮದುವೆ ಬೀಗರ ಊಟ: ಭರ್ಜರಿ ಭೋಜನ

    ನಾಳೆ ರೆಬಲ್ ಸ್ಟಾರ್ ಅಂಬರೀಶ್ (Ambarish)  ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ (Abhishek) ಅಂಬರೀಶ್ ಅವರ ಮದುವೆಯ ಬೀಗರ ಔತಣಕೂಟ ಮಂಡ್ಯದಲ್ಲಿ ಜರುಗಲಿದೆ. ಮಂಡ್ಯ ಜನರಿಗೆ ಬೊಂಬಾಟ್ ಬಾಡೂಟ ಹಾಕಿಸಲು ಅಂಬಿ ಕುಟುಂಬ ಭರ್ಜರಿ ತಯಾರಿ ಮಾಡಿಕೊಂಡಿದೆ.

    ಮಂಡ್ಯ (Mandya) ಜಿಲ್ಲೆಯ ಮದ್ದೂರು ಸಮೀಪದ ಗೆಜ್ಜಲಗೆರೆ ಕಾಲೋನಿ ಬಳಿಯ 15 ಎಕರೆ ಪ್ರದೇಶದಲ್ಲಿ ಈ ಬೀಗರ ಔತಣಕೂಟ ನಡೆಯಲಿದೆ. ಈ ಬೀಗರ ಊಟಕ್ಕೆ ಸುಮಾರು 50 ಸಾವಿರ ಜನರು ಆಗಮಿಸಿವ ನಿರೀಕ್ಷೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ (Sumalatha) ಕುಟುಂಬಸ್ಥರು ಇದ್ದಾರೆ. ಹೀಗಾಗಿ ವಿಶಾಲ ಜಾಗದಲ್ಲಿ ಬೃಹತ್ ಜರ್ಮನ್ ಟೆಂಟ್‌ ಹಾಕಿ ಜನರು ಕುಳಿತು ಊಟ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಒಂದೇ ಬಾರಿಗೆ 4500 ಮಂದಿ ಕುಳಿತು ಊಟ ಮಾಡಲು ಆಸನದ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ:ಮಾಡ್ರನ್ ಅವತಾರ ಬದಿಗಿಟ್ಟು ಲೆಹೆಂಗಾದಲ್ಲಿ ಮಿಂಚಿದ ‘ಪುಟ್ಟಗೌರಿ’- ಸೊಂಟ ಸೂಪರ್ ಎಂದ ನೆಟ್ಟಿಗರು

    ಅಭಿಷೇಕ್ – ಅವಿವಾ (Aviva) ಅವರ ಮಂಡ್ಯದ ಬೀಗರ ( Begaruta) ಔತಣಕೂಟಕ್ಕೆ ರಾಜಕೀಯ ಹಾಗೂ ಸಿನಿಮಾ ರಂಗದ ಹಲವು ಗಣ್ಯರು ಭಾಗವಹಿಸುವ ಸಾಧ್ಯತೆ ಇದ್ದು ಹೀಗಾಗಿ ವಿಐಪಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.

    ನಾಳೆ ಬೆಳಿಗ್ಗೆ 11:30ರಿಂದ ಆರಂಭವಾಗಲಿರುವ ಔತಣಕೂಟದಲ್ಲಿ 5-6 ಟನ್ ಮಟನ್, 7 ಟನ್ ಚಿಕನ್ ಬಳಸಿ ಭರ್ಜರಿ ಬಾಡೂಟ ತಯಾರಿ ಮಾಡಲಾಗುತ್ತದೆ. ಮಂಡ್ಯ ಶೈಲಿಯಲ್ಲಿ ಬಾಡೂಟ ತಯಾರಿಯಾಗಲಿದ್ದು ಮಂಡ್ಯದ ಪ್ರಖ್ಯಾತ ಬಾಣಸಿಗರ ತಂಡದಿಂದ ಅಡುಗೆ ತಯಾರಿ ಕಾರ್ಯ ಇಂದು ರಾತ್ರಿಯಿಂದಲೇ ನಡೆಯುತ್ತದೆ. ಬೀಗರ ಔತಣಕೂಟ ಮೆನು ಮುದ್ದೆ, ಮಟನ್ ಬಿರಿಯಾನಿ, ಬೋಟಿ ಗೊಜ್ಜು, ಮಟನ್, ಎರಡು ಬಗೆಯ ಚಿಕನ್, ಮೊಟ್ಟೆ, ರೈಸ್, ತಿಳಿಸಾಂಬಾರ್, ಬೀಡಾ, ಐಸ್ ಕ್ರೀಂ, ಬಾಳೆಹಣ್ಣು ಇರಲಿದೆ.

  • ಮೋದಿ ಕಾರ್ಯಕ್ರಮ ನಡೆದ ಜಾಗದಲ್ಲೇ ಅಭಿಷೇಕ್-ಅವಿವಾ ಬೀಗರೂಟ

    ಮೋದಿ ಕಾರ್ಯಕ್ರಮ ನಡೆದ ಜಾಗದಲ್ಲೇ ಅಭಿಷೇಕ್-ಅವಿವಾ ಬೀಗರೂಟ

    ದುವೆ, ಆರತಕ್ಷತೆ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಮುಗಿಸಿಕೊಂಡಿರುವ ನಟ ಅಭಿಷೇಕ್ (Abhishek), ಮಾಡೆಲ್ ಅವಿವಾ (Aviva) ಜೂನ್ 16 ರಂದು ಮಂಡ್ಯದ ಜನತೆಗೆ ಬೀಗರೂಟ (Beegarota)ಮಾಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮದುವೆ ಮತ್ತು ಆರತಕ್ಷತೆ ಬೆಂಗಳೂರಿನಲ್ಲಿ ನಡೆದಿರುವ ಕಾರಣದಿಂದಾಗಿ ಬೀಗರೂಟವನ್ನು ಮಂಡ್ಯದಲ್ಲಿ ಏರ್ಪಡಿಸಲಾಗಿದೆ.

    ಈ ಹಿಂದೆ ಮಂಡ್ಯಕ್ಕೆ (Mandya) ಪ್ರಧಾನಿ ನರೇಂದ್ರ ಮೋದಿ ಬಂದಾಗ, ಯಾವ ಜಾಗದಲ್ಲಿ ಅವರಿಗೆ ಕಾರ್ಯಕ್ರಮ ಮಾಡಲು ತಯಾರಿ ಮಾಡಿಕೊಳ್ಳಲಾಗಿತ್ತೋ, ಅದೇ ಜಾಗದಲ್ಲೇ ಬೀಗರೂಟವನ್ನು ಹಮ್ಮಿಕೊಳ್ಳಲಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಗೆಜ್ಜಲಗೆರೆ ಕಾಲೋನಿ ಬಳಿ 15 ಎಕರೆ ಪ್ರದೇಶದಲ್ಲಿ ಜರ್ಮನ್ ಟೆಂಟ್ ಹಾಕಲಾಗುತ್ತಿದೆ. ಅಲ್ಲಿಯೇ ಬೀಗರೂಟ ನಡೆಯಲಿದೆ. ಇದನ್ನೂ ಓದಿ:ಚಿತ್ರ ನಿರ್ಮಾಣಕ್ಕೆ ಮುಂದಾದ ಬಾಲಿವುಡ್ ನಟಿ ಕೃತಿ ಸನೋನ್

    ಬೀಗರೂಟಕ್ಕೆ ಕನಿಷ್ಠ 50 ಸಾವಿರಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈಗಾಗಲೇ ಟೆಂಟ್ ಹಾಕುವಂತಹ ಕಾರ್ಯ ನಡೆದಿದ್ದು, ಸುಮಲತಾ ಅಂಬರೀಶ್  ಇಂದು ಅದರ ಪರಿಶೀಲನೆ ಕೂಡ ಮಾಡಿದ್ದಾರೆ. ಬೀಗರೂಟಕ್ಕೆ ಭರ್ಜರಿ ಬಾಡೂಟವೇ ಇರಲಿದ್ದು, ಪಕ್ಕಾ ಮಂಡ್ಯ ಶೈಲಿಯಲ್ಲಿ ಆಹಾರವನ್ನು ಸಿದ್ಧ ಪಡಿಸಲಾಗುತ್ತದೆಯಂತೆ. ಮುದ್ದೆಯೊಂದಿಗೆ ಭರ್ಜರಿ ಮಾಂಸದೂಟ ಕೂಡ ಜೊತೆಯಾಗಲಿದೆ. ಮುದ್ದೆ, ಬೋಟಿ ಗೊಜ್ಜು, ಮೊಟ್ಟೆ, ಮಟನ್, 2 ತರ ಚಿಕನ್, ಗೀ ರೈಸ್, ಅನ್ನ, ತಿಳಿ ಸಾಂಬಾರ್, ಮಜ್ಜಿಗೆ, ಬಾಳೆಹಣ್ಣು, ಬೀಡಾ ನಂದಿನಿ ಐಸ್ ಕ್ರೀಂ ಇರಲಿದೆ.

    ಬೀಗರ ಊಟದ ಸಿದ್ಧತೆಯನ್ನು ಅಂಬರೀಶ್ (Ambareesh) ಕುಟುಂಬದ ಆಪ್ತ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ (RockLine Venkatesh)ಪರಿಶೀಲನೆ ನಡೆಸಿದರು. ಈ ವೇಳೆ ಎಲ್ಲರಿಗೂ ಸಲಹೆ ಸೂಚನೆಯನ್ನು ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ರಾಕ್‌ಲೈನ್ ವೆಂಕಟೇಶ್ ಅಂಬರೀಶ್‌ಗೆ ಪ್ರಿಯವಾದ ಮಂಡ್ಯ ಶೈಲಿಯ ಬಾಡೂಟವನ್ನು ಬೀಗರ ಊಟದ ಮೆನುವಾಗಿ ಮಾಡಲಾಗುತ್ತದೆ. ಎಷ್ಟೇ ಸಾವಿರ ಜನರು ಬಂದರೂ ಊಟದ ವ್ಯವಸ್ಥೆ ಇದ್ದು, ಬೆಳಿಗ್ಗೆ 11ಗಂಟೆಯಿಂದಲೇ ಊಟದ ಆರಂಭವಾಗಲಿದೆ. ಸಿನಿಮಾ ಹಾಗೂ ರಾಜಕೀಯದಲ್ಲಿ ಅಂಬಿ ಕುಟುಂಬ ಪರ ನಿಂತ ಎಲ್ಲರಿಗೂ ಊಟ ಹಾಕಿಸುವುದು ಕುಟುಂಬಸ್ಥರ ಆಸೆ ಇದೆ, ಅದರಂತೆ ಅಭಿಷೇಕ್ ಬೀಗರ ಊಟ ಮಂಡ್ಯದಲ್ಲೇ ಮಾಡಲಾಗ್ತಿದೆ. ಮಂಡ್ಯ ಜಿಲ್ಲೆಯ ಬಾಣಸಿಗರಿಂದಲೇ ಬಾಡೂಟವನ್ನು ತಯಾರು ಮಾಡಿಸಲಾಗುತ್ತದೆ. ಅಂಬರೀಶ್ ಅವರಿಗೆ ಪ್ರಿಯವಾದ ಕೈಮಾ, ಬೋಟಿ ಗೊಜ್ಜು, ಮಟನ್ ಸೇರಿದಂತೆ ಮಂಡ್ಯ ಶೈಲಿಯಲ್ಲೇ ಅಡುಗೆ ಇರಲಿದೆ. ವಧು ವರರಿಗೆ ಕೇಕ್, ಹಾರ – ಬೊಕ್ಕೆ ತರದೆ ಜನರು ಬಂದು ಆಶೀರ್ವಾದ ಮಾಡಿದರೆ ಸಾಕು ಎಂದು ಅಭಿ ಮನವಿ ಮಾಡಿದ್ದಾರೆ ಎಂದು ರಾಕ್‌ಲೈನ್ ಹೇಳಿದರು.

  • ಫೋಟೋ ಆಲ್ಬಂ : ‘ಕ್ಲಬ್ ಅವಿವಾ-ಅಭಿ’ ಪಾರ್ಟಿಯಲ್ಲಿ ಪಾಲ್ಗೊಂಡ ತಾರೆಯರು

    ಫೋಟೋ ಆಲ್ಬಂ : ‘ಕ್ಲಬ್ ಅವಿವಾ-ಅಭಿ’ ಪಾರ್ಟಿಯಲ್ಲಿ ಪಾಲ್ಗೊಂಡ ತಾರೆಯರು

    ಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿಡಪ್ಪ ಮದುವೆ ನಂತರ ಅವರ ಆಪ್ತರಿಗಾಗಿ ಪಾರ್ಟಿಯೊಂದನ್ನು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಆಯೋಜನೆ ಮಾಡಲಾಗಿತ್ತು. ಈ ಪಾರ್ಟಿಯಲ್ಲಿ ಸ್ಯಾಂಡಲ್ ವುಡ್ ಹಲವು ತಾರೆಯರು ಆಗಮಿಸಿದ್ದರು. ಅಂಬರೀಶ್ ಅವರ ಜನಪ್ರಿಯ ಹಾಡಿಗೆ ನೃತ್ಯ ಕೂಡ ಮಾಡಿದರು.

    ಅದರಲ್ಲೂ ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾದ ಫೇಮಸ್ ಸಾಂಗ್ ‘ಹೇ ಜಲೀಲಾ..’ ಹಾಡಿಗೆ ಸುಮಲತಾ (Sumalatha) ಅಂಬರೀಶ್ ಜೊತೆ ಯಶ್ (Yash) ಡಾನ್ಸ್ ಮಾಡಿದರು. ನಂತರ ಇವರಿಗೆ ಅಭಿಷೇಕ್ ಮತ್ತು ಅವಿವಾ ಕೂಡ ಸಾಥ್ ನೀಡಿದ್ದು ವಿಶೇಷವಾಗಿತ್ತು.

    ಕಬ್ಲ್ ಅವಿವಾ (Club Aviva) ಹೆಸರಿನಲ್ಲಿ ಆಯೋಜನೆಯಾಗಿದ್ದ ಪಾರ್ಟಿಯಲ್ಲಿ (Aviva, Party) ಜಯಪ್ರದಾ, ಮಾಲಾಶ್ರೀ, ರಮ್ಯಕೃಷ್ಣ, ಯಶ್, ರಾಕ್ ಲೈನ್ ವೆಂಕಟೇಶ್, ಸೇರಿದಂತೆ ಹಲವು ನಾಯಕಿಯರು ಕೂಡ ಹಾಜರಿದ್ದರು. ಇದನ್ನೂ ಓದಿ:ಮೆಗಾ ಪ್ರಿನ್ಸ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ ಗ್ರ್ಯಾಂಡ್‌ ಎಂಗೇಜ್‌ಮೆಂಟ್

    ಅಭಿಷೇಕ್ ಅಂಬರೀಶ್ (Abhishek Ambarish) ಹಾಗೂ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಅವಿವಾ ಬಿಡಪ್ಪ (Aviva Bidappa) ಮೊನ್ನೆಯಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಗೌಡರ ಸಂಪ್ರದಾಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವಿವಾಗೆ ಮಾಂಗಲ್ಯ ಧಾರಣೆ ಮಾಡುವ ಮೂಲಕ ದೀರ್ಘಕಾಲದ ಗೆಳತಿಯೊಂದಿಗೆ ಹಸೆಮಣೆ ಏರಿದ್ದಾರೆ.

    ಈ ಮದುವೆಗೆ (Marriage) ಅನೇಕ ಗಣ್ಯರು ಸಾಕ್ಷಿಯಾಗಿದ್ದರು ನಟ ರಜನಿಕಾಂತ್, ತೆಲುಗು ನಟ ಚಿರಂಜೀವಿ,  ಕ್ರಿಕೆಟಿಗ ಅನಿಲ್ ಕುಂಬ್ಳೆ, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ತಮಿಳು ನಟ ಮೋಹನ್ ಬಾಬು, ತೆಲುಗು ನಟ ನರೇಶ್, ನಟಿ ಪವಿತ್ರ ಲೋಕೇಶ್, ನಟಿ ಶುಭ್ರ ಅಯ್ಯಪ್ಪ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಗಾಯಕ ವಿಜಯ್ ಪ್ರಕಾಶ್ ಸೇರಿದಂತೆ ಸಾಕಷ್ಟು ಕಲಾವಿದರು ಹಾಗೂ ತಂತ್ರಜ್ಞರು ಆಗಮಿಸಿದ್ದರು.

     

    ಅಭಿಷೇಕ್- ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಶ್ರೀಪ್ರಸಾದ್ ಬಿಡಪ ಅವರ ಪುತ್ರಿ ಅವಿವ ಅವರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಒಪ್ಪಿಗೆಯರ ಮೇರೆಗೆ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ವಾರಗಳಿಂದ ಅಂಬಿ ಮನೆಯಲ್ಲಿ ಸಡಗರ ಮನೆಮಾಡಿತ್ತು. ಅಂಬರೀಷ್ ಅವರ ಮನೆ ಮುಂದೆ ಹಸಿರು ಚಪ್ಪರ ಹಾಕಲಾಗಿತ್ತು. ತಳಿರು ತೋರಣಗಳಿಂದ ಮನೆಯನ್ನು ಸಿಂಗರಿಸಲಾಗಿತ್ತು.