Tag: ಅಭ್ಯರ್ಥಿ ಪಟ್ಟಿ

  • 13 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್

    13 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Assembly Election) ಇನ್ನು ಕಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಇದೇ ದಿನ ಜೆಡಿಎಸ್ (JDS) 4ನೇ ಪಟ್ಟಿ ಬಿಡುಗಡೆ ಮಾಡಿದ್ದು, 13 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

    ಜೆಡಿಎಸ್ 4ನೇ ಪಟ್ಟಿ:
    ಗೋಕಾಕ್ – ಚನ್ನಬಸಪ್ಪ ಬಾಳಪ್ಪ ಗಿದ್ದಣ್ಣನವರ
    ಕಿತ್ತೂರು – ಅಶ್ವಿನಿ ಸಿಂಗಯ್ಯ ಪೂಜೆರಾ
    ಯಾದಗಿರಿ – ಎಬಿ ಮಾಲಕರೆಡ್ಡಿ
    ಭಾಲ್ಕಿ – ರೌಫ್ ಪಟೇಲ್
    ಶಿಗ್ಗಾಂವಿ – ಶಶಿಧರ್ ಚನ್ನಬಸಪ್ಪ ಯಲಿಗಾರ
    ಮೊಳಕಾಲ್ಮೂರು – ಮಹಾದೇವಪ್ಪ ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಮೊದಲೇ ಸಿಎಂ ಅಭ್ಯರ್ಥಿ ಘೋಷಣೆ ಮಾಡೋ ಸಂಸ್ಕೃತಿ ಇಲ್ಲ: ಸೋಮಣ್ಣಗೆ ಸಿದ್ದು ತಿರುಗೇಟು

    ಪುಲಕೇಶಿನಗರ – ಅನುರಾಧ
    ಶಿವಾಜಿನಗರ – ಅಬ್ದುಲ್ ಜಫರ್ ಅಲಿ
    ಶಾಂತಿನಗರ – ಮಂಜುನಾಥ್ ಗೌಡ
    ಬೆಳ್ತಂಗಡಿ – ಅಶ್ರಫ್ ಅಲಿ ಕುಂಞ
    ಮಂಗಳೂರು ನಗರ ಉತ್ತರ – ಮೊಹೀನುದ್ದಿನ್ ಬಾವ
    ಮಂಗಳೂರು – ಅಲ್ತಾಪ್ ಕುಂಪಾಲ
    ಬಂಟ್ವಾಳ – ಪ್ರಕಾಶ ರಫಾಯಲ್ ಗೋಮ್ಸ್ ಇದನ್ನೂ ಓದಿ: ದಿಢೀರ್‌ ಬೆಳವಣಿಗೆ – ಕನಕಪುರದಿಂದ ಡಿಕೆ ಸುರೇಶ್‌ ನಾಮಪತ್ರ ಸಲ್ಲಿಕೆ

  • ಗುರುವಾರದೊಳಗೆ ಜೆಡಿಎಸ್ 2ನೇ ಪಟ್ಟಿ: ಹೆಚ್‌ಡಿ ಕುಮಾರಸ್ವಾಮಿ

    ಗುರುವಾರದೊಳಗೆ ಜೆಡಿಎಸ್ 2ನೇ ಪಟ್ಟಿ: ಹೆಚ್‌ಡಿ ಕುಮಾರಸ್ವಾಮಿ

    – ಪಟ್ಟಿಯಲ್ಲಿ ಹಾಸನ ಅಭ್ಯರ್ಥಿ ಹೆಸರು ಇರಲಿದೆ

    ಬೆಂಗಳೂರು: ಜೆಡಿಎಸ್ (JDS) ಅಭ್ಯರ್ಥಿಗಳ 2ನೇ ಪಟ್ಟಿ ಬುಧವಾರ ಅಥವಾ ಗುರುವಾರ ಬಿಡುಗಡೆ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ತಿಳಿಸಿದರು.

    ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇಂದು ಮಂಗಳವಾರ ಆಗಿರುವುದರಿಂದ ಪಟ್ಟಿ ಬಿಡುಗಡೆ ಆಗಿಲ್ಲ. ದೇವೇಗೌಡರು ಬುಧವಾರ ಸಂಜೆ ದೆಹಲಿಯಿಂದ ವಾಪಸ್ ಆಗುತ್ತಾರೆ. ನಂತರ ಪಟ್ಟಿ ಹೊರಬರಲಿದೆ ಎಂದರು.

    ನನಗಿಂತ ನಿಮಗೆ ಹಾಸನ (Hassana) ಟಿಕೆಟ್ ಘೋಷಣೆ ಬಗ್ಗೆ ಕುತೂಹಲವಿದೆ ಎಂದು ಮಾಧ್ಯಮಗಳಿಗೆ ಹೇಳಿದ ಅವರು, ಹಾಸನವನ್ನು ಸೇರಿಸಿ ಪಟ್ಟಿ ಬಿಡುಗಡೆ ಮಾಡುತ್ತೇವೆ. ಅದನ್ನು ಬಿಟ್ಟು ಮಾಡಿದರೆ ಇನ್ನೊಂದು ಕಥೆ ಹುಟ್ಟಿಕೊಳ್ಳುತ್ತದೆ. ಆದ್ದರಿಂದ ಆ ಪಟ್ಟಿಯಲ್ಲಿ ಹಾಸನದ್ದೂ ಒಳಗೊಂಡಂತೆ ತೀರ್ಮಾನ ಮಾಡುತ್ತೇವೆ ಎಂದು ಅವರು ತಿಳಿಸಿದರು.

    ಮೊದಲ ಪಟ್ಟಿ ಬಿಡುಗಡೆಯಾದಾಗಲೂ ಯಾವುದೇ ಸಮಸ್ಯೆ ಇರಲಿಲ್ಲ. 2ನೇ ಪಟ್ಟಿ ವೇಳೆ ಹಾಸನದ್ದು ಹೆಚ್ಚು ಪ್ರಚಾರವಾಗಿದೆ. ಹಾಸನ ವಿಚಾರದಿಂದ ಜನತಾದಳಕ್ಕೂ ಹೆಚ್ಚು ಪ್ರಚಾರವಾಗಿದೆ. ಇದರಿದ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಶೇ.2-3 ರಷ್ಟು ಮತ ಪ್ರಮಾಣ ಹೆಚ್ಚಾಗಲಿದೆ. ನಮ್ಮ ಗುರಿ ಮುಟ್ಟೋದಕ್ಕೆ ನಾವು ಯಾವುದೇ ದುಡುಕಿನ ತೀರ್ಮಾನ ಮಾಡಲ್ಲ. ಕಾರ್ಯಕರ್ತರ ಅಪೇಕ್ಷೆ, ಗೆಲ್ಲುವ ಮಾನದಂಡದಲ್ಲೇ ಟಿಕೆಟ್ ಕೊಡುತ್ತೇವೆ ಎಂದು ಅವರು ಉತ್ತರ ನೀಡಿದರು.

    ಕಾಂಗ್ರೆಸ್ ಪಟ್ಟಿ ರಿಲೀಸ್ ಆಗದ ಹಿನ್ನೆಲೆ ಜೆಡಿಎಸ್ ಪಟ್ಟಿ ವಿಳಂಬ ಆಗುತ್ತಿದೆಯಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಅದರ ಬಗ್ಗೆ ನಾನು ಚಿಂತೆ ಮಾಡಿಲ್ಲ. ನಾವು ನಮ್ಮದೇ ರೀತಿಯಲ್ಲಿ ಅಭ್ಯರ್ಥಿಗಳನ್ನು ತೀರ್ಮಾನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಮೀಸಲಾತಿ ತೆಗೆದವರಿಗೆ ಶಾಪ ತಟ್ಟಲಿದೆ: ಹೆಚ್‌ಡಿ ರೇವಣ್ಣ

    ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂದರ್ಶನ ಒಂದರಲ್ಲಿ ನೀಡಿರುವ ಹೇಳಿಕೆ ಕುರಿತು ಮಾತನಾಡಿದ ಹೆಚ್‌ಡಿಕೆ, ಅದು ಅವರ ಪಕ್ಷಕ್ಕೆ ಸೇರಿದ ವಿಚಾರ. ಅವರ ಆಂತರಿಕ ವಿಚಾರಗಳ ಬಗ್ಗೆ ನಾನೇಕೆ ಪ್ರತಿಕ್ರಿಯೆ ನೀಡಲಿ? ಚುನಾವಣೆಯಲ್ಲಿ ಜನ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಕೊಡ್ತಾರೋ ಅದು ಮುಖ್ಯ. ಎಷ್ಟು ಸ್ಥಾನ ಬಂತು ಎನ್ನುವುದರ ಮೇಲೆ ಎಲ್ಲಾ ನಿರ್ಧಾರ ಆಗುತ್ತದೆ. ಮಗು ಹುಟ್ಟೋಕು ಮುನ್ನ ಕುಲಾವಿ ಹೊಲಿಸಿದರೆ ಆಗುತ್ತಾ? ಮುಗು ಹುಟ್ಟಿದರೆ ಕುಲಾವಿ ಹೊಲಿಸಬಹುದು. ಅದಕ್ಕೂ ಮುನ್ನ ಕುಲಾವಿ ಹಾಕ್ಕೋತ್ತೀನಿ ಅಂದ್ರೆ ಯಾಕೆ ಬೇಡ ಎನ್ನಲಿ ಎಂದರು.

    ಜೆಡಿಎಸ್ ಕುರಿತು ಅನಗತ್ಯ ಹೇಳಿಕೆ ನೀಡಿರುವ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ ವಿಚಾರದ ಬಗ್ಗೆ ಕಿಡಿಕಾರಿದ ಮಾಜಿ ಮುಖ್ಯಮಂತ್ರಿ, ಹೆಚ್ಚು ಕಡಿಮೆ ಆಗಿ ಅವರು ರಾಜಿನಾಮೆ ಕೊಡಬೇಕಾದ ಸಂದರ್ಭ ಬಂದುಬಿಟ್ಟಾಯಿತು. ಆಮೇಲೆ ಶಾಸಕನಾಗೋಕೆ ಆಗಲ್ವಲ್ಲಾ? ಅವರು ಮಾಡಿದ ಅನಾಚಾರ ಜನರಿಗೆ ಗೊತ್ತಿದೆ. ರೆಫ್ರಿಜರೇಟರ್, ಸ್ಟವ್ ಎಲ್ಲಾ ಹಂಚುತ್ತಿದ್ದಾರೆ. ಇಷ್ಟೆಲ್ಲಾ ಕೊಡ್ತಾ ಇದ್ದಾರೆ ಅಂದರೆ, ಇವರು ಇನ್ನೆಷ್ಟು ಶ್ರೀಮಂತರು ಅಂತ ಜನರು ಮನೇಲಿ ಕೂರಿಸಿಬಿಟ್ಟರೆ ಕಷ್ಟ. ಎಚ್ಚರಿಕೆಯಿಂದ ಇದ್ದರೆ ಉತ್ತಮ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಚುನಾವಣಾ ಕಣಕ್ಕಿಳಿಯಲು ಪಿಎಸ್‍ಐ ಹಗರಣದ ಕಿಂಗ್‍ಪಿನ್ ಆರ್‌ಡಿ ಪಾಟೀಲ್ ಸಜ್ಜು

  • ರಾಜ್ಯ ಚುನಾವಣೆಗೆ ಮಾಸ್ಟರ್ ಪ್ಲ್ಯಾನ್ – ರಾಮನ ಮೊರೆಹೋದ ಬಿಜೆಪಿ ಹೈಕಮಾಂಡ್!

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ರಾಮನವಮಿ ದಿನ ಮಾರ್ಚ್ 25ಕ್ಕೆ ಬಿಡುಗಡೆ ಮಾಡಲು ಮುಂದಾಗಿದೆ.

    ಮೊದಲ ಪಟ್ಟಿಯಲ್ಲಿ 110 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

    ಈ ಪಟ್ಟಿಯಲ್ಲಿ ಹಾಲಿ ಶಾಸಕರಾಗಿರುವ ಬಹುತೇಕ ಮಂದಿಗೆ ಟಿಕೆಟ್ ಖಚಿತ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ. ಅಲ್ಲದೇ ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಪರಾಭವಗೊಂಡಿರುವ ಅಭ್ಯರ್ಥಿಗಳಿಗೂ ಮಣೆ ಹಾಕುವ ಸಾಧ್ಯತೆಗಳಿದ್ದು, ಪ್ರಮುಖವಾಗಿ 500 ರಿಂದ 2 ಸಾವಿರ ಮತಗಳ ಅಂತರದಲ್ಲಿ ಪರಾಭವಗೊಂಡ ಅಭ್ಯರ್ಥಿಗಳ ಆಯ್ಕೆಗೆ ಹೆಚ್ಚಿನ ಒಲವು ನೀಡಲಾಗಿದೆ.

    ಅಭ್ಯರ್ಥಿಗಳ ಆಯ್ಕೆಯಲ್ಲಿ ಪ್ರಮುಖವಾಗಿ ಕ್ಷೇತ್ರದ ವಿಸ್ತಾರಕರ ವರದಿ ಮತ್ತು ಅಮಿತ್ ಶಾ ಅವರ ಟೀಂ ನೀಡಿರುವ ವರದಿ ಆಧಾರಿಸಿ ಟಿಕೆಟ್ ಅಂತಿಮ ಮಾಡಲಾಗುತ್ತಿದ್ದು, ಕ್ಷೇತ್ರದವರಲ್ಲದಿದ್ದರೂ ಗೆಲ್ಲುವ ಸಾಮರ್ಥ್ಯವಿದ್ದರೆ ಟಿಕೆಟ್ ನೀಡಲು ಪರಿಗಣನೆ ಮಾಡಲಾಗುತ್ತಿದೆ ಎನ್ನಲಾಗಿದೆ. ಇನ್ನುಳಿದಂತೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಜಾತಿ ಸಮೀಕರಣ ಪ್ರಮುಖ ಅಂಶವಾಗಿದ್ದು, ಕ್ಷೇತ್ರದಲ್ಲಿ ಪಕ್ಷದ ಕಾರ್ಯಚಟುವಟಿಕೆ ಮತ್ತು ವರ್ಚಸ್ಸು ಆಧರಿಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತಿದೆ. ವಿಶೇಷವಾಗಿ ಐದು ಮಂದಿಗಿಂತ ಹೆಚ್ಚು ಟಿಕೆಟ್ ಆಕಾಂಕ್ಷಿಗಳು ಇರುವ ಕ್ಷೇತ್ರಗಳ ಹೆಸರು ಮೊದಲ ಪಟ್ಟಿಯಿಂದ ಕೈಬಿಡಲಾಗಿದೆ.

    ಮಾರ್ಚ್ 10 ರಿಂದ 19 ರವರೆಗೆ ಅಮಿತ್ ಶಾ ತಂಡದ ಸದಸ್ಯರು 224 ಕ್ಷೇತ್ರಗಳ ಪ್ರವಾಸ ನಡೆಸಲಿದ್ದು, ಮಾರ್ಚ್ 20 ರಂದು ಈ ವರದಿ ಸಲ್ಲಿಕೆಯಾಗಲಿದೆ. ಈ ವರದಿಯಲ್ಲಿ ಅಂಶಗಳನ್ನು ಆಧಾರಿಸಿ ರಾಜ್ಯ ಆರ್ ಎಸ್‍ಎಸ್ ನಾಯಕರ ಜೊತೆ ಚರ್ಚಿಸಿ ಅಮಿತ್ ಶಾ ಅಂತಿಮವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ರಾಮನವಮಿ ದಿನ ಟಿಕೆಟ್ ಘೋಷಣೆ ಮಾಡಿ ಹಿಂದೂ ಅಜೆಂಡಾವನ್ನು ಸಾರಲು ಬಿಜೆಪಿ ನಾಯಕರು ಮಾರ್ಚ್ 25 ರಂದೇ ಮೊದಲ ಪಟ್ಟಿ ಬಿಡುಗಡೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.