Tag: ಅಮಿತಾಭ್‌

  • ಕೋರ್ಟ್ ಮೆಟ್ಟಿಲು ಏರಿದ್ದ ಅಮಿತಾಭ್ ಮೊಮ್ಮಗಳಿಗೆ ಗೆಲುವು

    ಕೋರ್ಟ್ ಮೆಟ್ಟಿಲು ಏರಿದ್ದ ಅಮಿತಾಭ್ ಮೊಮ್ಮಗಳಿಗೆ ಗೆಲುವು

    ಮ್ಮ ಆರೋಗ್ಯದ ಕುರಿತಾಗಿ ಹಲವಾರು ಯೂಟ್ಯೂಬ್ ಚಾನೆಲ್ ಗಳು ತಪ್ಪಾದ ಸುದ್ದಿಗಳನ್ನು ಪ್ರಸಾರ ಮಾಡುತ್ತಿವೆ. ಆರಾಧ್ಯ ಅಸ್ವಸ್ಥ, ಆರಾಧ್ಯ (Aaradhya Bachchan) ಇನ್ನಿಲ್ಲ ರೀತಿಯ ವರದಿಗಳನ್ನು ಪ್ರಸಾರ ಮಾಡುವ ಮೂಲಕ ತಪ್ಪಾದ ಮಾಹಿತಿಯನ್ನು ನೀಡುತ್ತಿವೆ. ಇಂತಹ ಯೂಟ್ಯೂಬ್ ಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ದೆಹಲಿ (Delhi) ಹೈಕೋರ್ಟಿಗೆ (Court) ಆರಾಧ್ಯ ಬಚ್ಚನ್ ಮೊರೆ ಹೋಗಿದ್ದರು. ಈ ಪ್ರಕರಣವನ್ನು ಕೋರ್ಟ್ ಗಂಭೀರವಾಗಿ ತಗೆದುಕೊಂಡಿದೆ.

    ಅಮಿತಾಭ್ (Amitabh) ಮೊಮ್ಮಗಳು ನೀಡಿದ್ದ ದೂರಿನನ್ವಯ ದೆಹಲಿ ಹೈಕೋರ್ಟ್ ಹಲವಾರು ಯೂಟ್ಯೂಬ್ ಚಾಲನೆಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಆರಾಧ್ಯ ಕುರಿತಾಗಿ ತಪ್ಪಾದ ಮಾಹಿತಿ ಹಂಚಿಕೊಂಡ ಯೂಟ್ಯೂಬ್ ವರದಿಗಳನ್ನು ಗೂಗಲ್ ನಿಂದ ತೆಗೆದು ಹಾಕಬೇಕು ಎಂದು ಗೂಗಲ್ ಗೆ ನಿರ್ದೇಶಿಸಿದೆ. ಪ್ರತಿಯೊಂದು ಮಗುವಿನ ಘನತೆಯನ್ನು ಎತ್ತಿ ಹಿಡಿಯಬೇಕು ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ:ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ‘ಬ್ರಹ್ಮಕಮಲ’ ಚಿತ್ರ

    ನಟ ಅಭಿಷೇಕ್- ಐಶ್ವರ್ಯ ರೈ (Aishwarya Rai) ಪುತ್ರಿ ಆರಾಧ್ಯಗೆ (Aradhya) ಈಗಿನ್ನೂ 11 ವರ್ಷ. ಬಚ್ಚನ್ ಕುಟುಂಬದ ಕುಡಿ ಎನ್ನುವ ಕಾರಣಕ್ಕೆ ಹೆಚ್ಚು ಹೈಲೈಟ್ ಆಗುತ್ತಿದ್ದಾರೆ. ಆರಾಧ್ಯ ಹೆಸರಲ್ಲಿ ಅನೇಕ ಫ್ಯಾನ್‌ಪೇಜ್‌ಗಳು ಸಿದ್ಧಗೊಂಡಿವೆ. ಇದರ ಜೊತೆ ಕೆಲವು ಯೂಟ್ಯೂಬ್ ಚಾನೆಲ್‌ಗಳು ವೀವ್ಸ್ ಗಿಟ್ಟಿಸಿಕೊಳ್ಳಲು ಆರಾಧ್ಯ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದವು. ಅವುಗಳ ವಿರುದ್ಧ ಆರಾಧ್ಯ ಕ್ರಮಕ್ಕೆ ಮುಂದಾಗಿದ್ದರು.

    ದೆಹಲಿ ಹೈಕೋರ್ಟ್‌ನಲ್ಲಿ ತಮ್ಮ ಬಗ್ಗೆ ಈ ರೀತಿ ಸುದ್ದಿ ಪ್ರಕಟ ಆಗದಂತೆ ತಡೆ ನೀಡಬೇಕು ಎಂದು ಆರಾಧ್ಯ ಮನವಿ ಮಾಡಿದ್ದಳು. ಈ ಪ್ರಕರಣದ ವಿಚಾರಣೆ ಇಂದು  ನಡೆಯಿತು. ಸೆಲೆಬ್ರಿಟಿಗಳ ಬಗ್ಗೆ ಅನೇಕ ವದಂತಿಗಳ ಬಗ್ಗೆ ಸುದ್ದಿಯಾಗುತ್ತಲೇ ಇರುತ್ತದೆ. ಆದರೆ, ಅವರ ಮಕ್ಕಳ ಬಗ್ಗೆ ಈ ರೀತಿ ಸುಳ್ಳು ಸುದ್ದಿ ಹುಟ್ಟಿಕೊಂಡಾಗ ಅದನ್ನು ಒಪ್ಪಿಕೊಳ್ಳೋಕೆ ಬಚ್ಚನ್ ಕುಟುಂಬಕ್ಕೆ ಹಾಗೂ ಆರಾಧ್ಯಗೆ ಸಾಧ್ಯವಾಗಿಲ್ಲ. ಇಲ್ಲಸಲ್ಲದ ಸುಳ್ಳು ಸುದ್ದಿ ಬಿತ್ತರಿಸುವ ಖಾಸಗಿ ಯೂಟ್ಯೂಬರ್‌ಗಳಿಗೆ ಇದು ಎಚ್ಚರಿಕೆಯ ಗಂಟೆಯಾಗಲಿ ಎನ್ನುವ ಕಾರಣಕ್ಕೆ ಕೋರ್ಟ್ ಮೆಟ್ಟಿಲು ಏರಿದ್ದರು.

  • ಈ ನಟನ ಜೊತೆ ಆನ್‌ಸ್ಕ್ರೀನ್ ರೊಮ್ಯಾನ್ಸ್ ಮಾಡಲು ಇಷ್ಟ: ಖುಷ್ಬೂ ಸುಂದರ್

    ಈ ನಟನ ಜೊತೆ ಆನ್‌ಸ್ಕ್ರೀನ್ ರೊಮ್ಯಾನ್ಸ್ ಮಾಡಲು ಇಷ್ಟ: ಖುಷ್ಬೂ ಸುಂದರ್

    ಟಿ ಖುಷ್ಬೂ (Kushboo Sundar) ಅವರು ಸಿನಿಮಾ (Film)- ರಾಜಕೀಯ (Politics) ಎರಡು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಸಾಕಷ್ಟು ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡಿರುವ ಖುಷ್ಬೂ ಸಂದರ್ಶನವೊಂದರಲ್ಲಿ ನೆಚ್ಚಿನ ನಟನ ಬಗ್ಗೆ ಅಚ್ಚರಿಯ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ‘ಬ್ರಹ್ಮಕಮಲ’ ಚಿತ್ರ

    ಕನ್ನಡದ ರಣಧೀರ, ಅಂಜದ ಗಂಡು, ಯುಗಪುರುಷ, ಸೇರಿದಂತೆ ಪರಭಾಷೆಗಳಲ್ಲೂ ನಟಿಸಿರುವ ಖುಷ್ಬೂ ಸುಂದರ್, ಬಿಗ್ ಮೇಲಿನ ಕ್ರೇಜ್ ಬಗ್ಗೆ ಮಾತನಾಡಿದ್ದಾರೆ. ತನ್ನ ಬೆಡ್‌ರೂಮ್‌ನಲ್ಲಿ ಬಿಗ್ ಬಿ ಫೋಟೋ ಅಂಟಿಸಿರೋದನ್ನ ನಟಿ ಖುಷ್ಬೂ ರಿವೀಲ್ ಮಾಡಿದ್ದಾರೆ.

    ‘ಸ್ಟಾಲಿನ್’ ಎಂಬ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ ಸಹೋದರಿಯ ಪಾತ್ರದಲ್ಲಿ ಖುಷ್ಬೂ ನಟಿಸಿದ್ದರು. ಬಾಲಯ್ಯ ಜೊತೆ ನಟಿಸುವ ಅವಕಾಶ ಒಲಿದು ಬರಲಿಲ್ಲ ಎಂಬ ಕೊರಗಿದೆ. ಈ ವಿಚಾರವನ್ನು ಸ್ವತಃ ಖುಷ್ಬೂ ಸಂದರ್ಶನದಲ್ಲಿ ಹೇಳಿದ್ದಾರೆ. ಇವರ ಜೊತೆ ನಟಿಸೋಕೆ ಇವತ್ತಿಗೂ ಇಷ್ಟಪಡ್ತೀನಿ. ಅಂತಹ ಅವಕಾಶಕ್ಕಾಗಿ ಕಾಯುತ್ತಿದ್ದೇನೆ ಎಂದಿದ್ದಾರೆ. ನಟ ಅಮಿತಾಬ್ ಬಚ್ಚನ್ ಅಂದ್ರೆ ಬಹಳ ಇಷ್ಟ. ಅವರ ದೊಡ್ಡ ಅಭಿಮಾನಿ ನಾನು ಎಂದು ನಟಿ ವಿವರಿಸಿದ್ದಾರೆ.

    ಅಮಿತಾಬ್ ಬಚ್ಚನ್ (Amitabh Bachchan) ಫೋಟೊಗಳನ್ನು ಇವತ್ತಿಗೂ ನನ್ನ ಬೆಡ್ ರೂಮ್‌ನಲ್ಲಿ ಅಂಟಿಸಿಕೊಂಡಿದ್ದೇನೆ. ಅವರೊಟ್ಟಿಗೆ ಬಾಲನಟಿಯಾಗಿ ನಟಿಸಿದ್ದೇನೆ. ಆದರೆ ಹೀರೊಯಿನ್ ಆಗಿ ನಟಿಸೋ ಅವಕಾಶ ಸಿಗಲಿಲ್ಲ. ಅವರ ಜೊತೆ ರೊಮ್ಯಾನ್ಸ್ ಮಾಡೋ ಆಸೆ ಇದೆ.‌ ಸಾಕಷ್ಟು ವರ್ಷಗಳ ಹಿಂದೆ  ‘ಚೀನಿ ಕಮ್’ ಚಿತ್ರದಲ್ಲಿ ಅಮಿತಾಬ್ ಜೊತೆ ಟಬು ನಟಿಸಿದ್ದರು. ಈ ವಿಚಾರ ಗೊತ್ತಾಗಿ ಆಕೆಗೆ ಫೋನ್ ಮಾಡಿ ಬೈದಿದ್ದೆ, ಅವರೊಟ್ಟಿಗೆ ಹೇಗೆ ನಟಿಸಿದೆ ಎಂದು ಸರಿಯಾಗಿ ಕ್ಲಾಸ್ ತಗೊಂಡೆ ಎಂದು ನಗುತ್ತಾ ಮಾತನಾಡಿದ್ದಾರೆ. ಈ ಮೂಲಕ ಬಿಗ್ ಬಿ ನನ್ನ ನೆಚ್ಚಿನ ನಟ ಎಂದು ಖುಷ್ಬೂ ಮಾತನಾಡಿದ್ದಾರೆ.