Tag: ಅಮೀತ್ ಶಾ

  • ಅಮಿತ್ ಶಾ ಚುನಾವಣೆ ಇದ್ದಾಗ ರಾಜ್ಯಕ್ಕೆ ಬಂದೇ ಬರ್ತಾರೆ: ಜಿ.ಪರಮೇಶ್ವರ್

    ಅಮಿತ್ ಶಾ ಚುನಾವಣೆ ಇದ್ದಾಗ ರಾಜ್ಯಕ್ಕೆ ಬಂದೇ ಬರ್ತಾರೆ: ಜಿ.ಪರಮೇಶ್ವರ್

    ಬೆಂಗಳೂರು: ಕೇಂದ್ರ ಗೃಹ ಮಂತ್ರಿ ಅಮಿತ್ ಶಾ (Amit shah) ಅವರು ಚುನಾವಣೆ ಇದ್ದಾಗ ರಾಜ್ಯಕ್ಕೆ ಬಂದೇ ಬರುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Parameshwara) ವ್ಯಂಗ್ಯವಾಡಿದ್ದಾರೆ.

    ಅಮಿತ್ ಶಾ ಅವರ ಮೈಸೂರು (Mysuru) ಪ್ರವಾಸ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಮಿತ್ ಶಾ ಚುನಾವಣೆ ಇದ್ದಾಗ ಬಂದೇ ಬರ್ತಾರೆ. ಪ್ರಧಾನಿಯದ್ದು ಇಷ್ಟರಲ್ಲೇ ಟಿಪಿ ಬರುತ್ತೆ. ಅವರು ಏನ್ ಮಾಡಬೇಕೋ ಮಾಡಲಿ, ನಾವೇನ್ ಮಾಡಬೇಕೋ ಮಾಡ್ತೀವಿ. ಸಂದರ್ಭ ಬಂದಾಗ ಅಭ್ಯರ್ಥಿಗಳ ಟಿಕೆಟ್ ಘೋಷಣೆ ಮಾಡ್ತೀವಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ಯೂ ಟರ್ನ್ ಹೊಡೆಯುವ ಗಿರಾಕಿ ಅಲ್ಲ: ನಿಖಿಲ್ ಕುಮಾರಸ್ವಾಮಿ

    ನೂರು ನೋಟಿಸ್ ಕೊಟ್ಟರೂ ಹೆದರುವುದಿಲ್ಲ ಎಂಬ ಈಶ್ವರಪ್ಪ (Eshwarappa) ಹೇಳಿಕೆಗೆ ಪ್ರತಿಕ್ರಿಯಿಸಿ, ಈಶ್ವರಪ್ಪ ಅವರನ್ನು ಹೆದರಿಸಲು ಯಾರೂ ಹೋಗಿಲ್ಲ. ಕಾನೂನಿನ ಪ್ರಕಾರ, ನೋಟೀಸ್ ಕೊಟ್ಟಿದ್ದೀವಿ. ಮೊದಲು ಅದಕ್ಕೆ ಸಮಜಾಯಿಷಿ ಕೊಡಲಿ. ಈಶ್ವರಪ್ಪ ಅವರು ಬಹಳ ದೊಡ್ಡವರು, ಹೆದರಿಸೋಕೆ ಆಗುತ್ತಾ? ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಅಳಿಯ-ಮಗಳ ಜಗಳದಲ್ಲಿ ಹತ್ಯೆಯಾದ ಅತ್ತೆ

    ಕಾರ್ಯಕರ್ತರಿಗೆ ನಿಗಮ ಮಂಡಳಿ ಹಂಚಿಕೆ ವಿಳಂಬ ವಿಚಾರದ ಬಗ್ಗೆ ಮಾತನಾಡಿ, ಆದಷ್ಟು ಬೇಗ ಮಾಡ್ತೀವಿ ಅಂತಾ ಹೇಳಿದ್ದಾರೆ. ನಾವು ಬೇಸರ ಪಟ್ಟಿದ್ದೆಲ್ಲ ಮುಗಿದು ಹೋಯ್ತು. ಸಿಎಂ ಮತ್ತು ಡಿಸಿಎಂ ಚರ್ಚೆ ಮಾಡಿದ್ದಾರೆ. ಅಂತಿಮಗೊಳಿಸಿದ್ದೀವಿ ಅಂತಾ ಸಹ ಹೇಳಿದ್ದಾರೆ. ನಾವು ಯಾರದ್ದೋ ಮನೆಯಲ್ಲಿ ತಿಂಡಿ ತಿನ್ನೋದೇ ತಪ್ಪಾ? ನಾವೆಲ್ಲ ಮುನಿಯಪ್ಪ ಮನೆಗೆ ಹೋಗಿ ತಿಂಡಿ ತಿಂದಿದ್ದೀವಿ. ಅವರ ಮನೆಗೆ ಹೋಗಿ ಲಗ್ನ, ಸಂಬಂಧ ಮಾಡೋಕೆ ಮಾತಾಡ್ತೀವಾ? ನಾಲ್ಕು ಜನ ಸೇರಿದ ಮೇಲೆ ರಾಜಕೀಯ ಮಾತಾಡ್ತೀವಿ. ಹೆಚ್ಚು ಸೀಟು ಗೆಲ್ಲೋಕೆ ನಾವು ಏನ್ ಮಾಡಬಹುದು ಅಂತಾ ಚರ್ಚೆ ಮಾಡಿದ್ದೀವಿ. ಅದಕ್ಕೆ ಬೇರೆ ಬಣ್ಣ ಬಳಿಯೋದು ಬೇಡ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಆಚಾರ್ಯ ಪ್ರಮೋದ್ ಕೃಷ್ಣಂ ಉಚ್ಛಾಟನೆ- ಕೈ ನಾಯಕ ಹೇಳಿದ್ದೇನು?

    ಇದೇ ವೇಳೆ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ರಾಜೀನಾಮೆ ಕೊಟ್ಟಿರೋದು ವೈಯಕ್ತಿಕ ಎಂದು ಅವರು ಹೇಳಿದ್ದಾರೆ. ರಾಜೀನಾಮೆಯಲ್ಲಿ ಯಾವ ಆರೋಪ ಮಾಡಿಲ್ಲ. ಹೀಗಾಗಿ ರಾಜೀನಾಮೆ ಸ್ವೀಕರಿಸಬೇಕಲ್ವಾ?. ಪ್ರತಾಪ್ ಅವರ ರಾಜೀನಾಮೆ ಸ್ವೀಕಾರ ಆಗಿದೆ ಎಂದು ತಿಳಿಸಿದ್ದಾರೆ. ಕಮಿಷನ್ ಆರೋಪಕ್ಕೆ ಸಿಬಿಐ ತನಿಖೆಗೆ ಆರ್.ಅಶೋಕ್  (R.Ashok) ಆಗ್ರಹ ವಿಚಾರಕ್ಕೆ, ಅವರು ಇದ್ದಾಗ ನಾವು ಕೇಳಿದ್ದೀವಿ, ಅವರು ಕೊಟ್ಟಿರಲಿಲ್ಲ. ಅವರ ಕಾಲದಲ್ಲಿ ಪ್ರಧಾನಿಗೇ ಪತ್ರ ಬರೆದಿದ್ರು. ಆದರೂ ಸಿಬಿಐ ತನಿಖೆಗೆ ನೀಡಲಿಲ್ಲ. ಈಗ ಆಗ್ರಹ ಮಾಡುತ್ತಿದ್ದಾರೆ ಎಂದು ಆರ್. ಆಶೋಕ್‌ಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ- ಮೈತ್ರಿ ನಾಯಕರ ಭೇಟಿ ಇಂದೇ ನಡೆಯುತ್ತಾ?

  • ಸಮೀಕ್ಷೆ ಬೆನ್ನಲ್ಲೇ ದೆಹಲಿಯಲ್ಲಿ ಗರಿಗೆದರಿದ ರಾಜಕೀಯ

    ಸಮೀಕ್ಷೆ ಬೆನ್ನಲ್ಲೇ ದೆಹಲಿಯಲ್ಲಿ ಗರಿಗೆದರಿದ ರಾಜಕೀಯ

    ನವದೆಹಲಿ: ಚುನಾವಣೋತ್ತರ ಸಮೀಕ್ಷೆಗಳ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಎನ್‍ಡಿಎಗೆ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯುವ ನಿರೀಕ್ಷೆಗಳಿದ್ದು, ಸಮೀಕ್ಷೆಗಳ ವರದಿ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಭೆ ಕರೆದಿದ್ದಾರೆ.

    ಅಮಿತ್ ಶಾ ನಾಳೆ(ಮಂಗಳವಾರ) ಎನ್‍ಡಿಎ ಒಕ್ಕೂಟದ ನಾಯಕರ ಸಭೆ ಕರೆದಿದ್ದು, ಮುಂದಿನ ರಾಜಕೀಯ ನಡೆಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಅಧಿಕಾರದ ಚುಕ್ಕಾಣಿ ಹಿಡಿಯಲು ಸಿದ್ಧವಾಗಿರುವ ಬಿಜೆಪಿಗೆ ಎನ್‍ಡಿಎ ಒಕ್ಕೂಟದ ಪಕ್ಷಗಳ ಬೆಂಬಲದ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯತಂತ್ರ ಹೆಣೆಯುತ್ತಿದ್ದಾರೆ ಎನ್ನಲಾಗಿದೆ.

    ಇತ್ತ ಇಂದು ಯುಪಿಎ ಒಕ್ಕೂಟದ ಮುಖ್ಯಸ್ಥೆ ಸೋನಿಯಾ ಗಾಂಧಿ ಭೇಟಿಯಾಗಬೇಕಿದ್ದ ಬಿಎಸ್‍ಪಿ ಅಧಿನಾಯಕಿ ಮಾಯಾವತಿ ಎಕ್ಸಿಟ್ ಫೊಲ್ ಸಮೀಕ್ಷೆಗಳ ಬಳಿಕ ಯೂಟರ್ನ್ ಹೊಡೆದಿದ್ದಾರೆ. ಯುಪಿಎ ವಿರುದ್ಧದ ಫಲಿತಾಂಶ ಗೋಚರವಾದ ಬೆನ್ನಲ್ಲೇ ತಮ್ಮ ದೆಹಲಿ ಪ್ರವಾಸ ರದ್ದು ಮಾಡಿದ್ದಾರೆ. ನಿಗದಿಯಂತೆ ಇಂದು ಸೋನಿಯಾ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿ ಚುನಾವಣೊತ್ತರ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಸಬೇಕಿತ್ತು. ಆದರೆ ಇದಕ್ಕೆ ಬ್ರೇಕ್ ಹಾಕಿದ್ದಾರೆ.

    ಫಲಿತಾಂಶದ ದಿನವೇ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ವಿಪಕ್ಷ ನಾಯಕರ ಸಭೆ ಆಯೋಜಿಸಲಾಗಿದ್ದು, ಭಾರೀ ಮಹತ್ವ ಪಡೆದುಕೊಂಡಿದೆ. ಬಿಜೆಪಿಯೇತರ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿರುವ ಪ್ರತಿಪಕ್ಷಗಳ ಪೈಕಿ ಯಾರೆಲ್ಲ ಹಾಜರಾಗಲಿದ್ದಾರೆ ಎಂಬ ಕುತೂಹಲ ಮನೆಮಾಡಿದೆ.

  • ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಧರ್ಮ ಒಡೆಯುವ ಕೆಲಸ ಮುಂದುವರೆಸಲಿ: ಪಾಟೀಲ್ ವಿರುದ್ಧ ಈಶ್ವರಪ್ಪ ವಾಗ್ದಾಳಿ

    ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಧರ್ಮ ಒಡೆಯುವ ಕೆಲಸ ಮುಂದುವರೆಸಲಿ: ಪಾಟೀಲ್ ವಿರುದ್ಧ ಈಶ್ವರಪ್ಪ ವಾಗ್ದಾಳಿ

    ವಿಜಯಪುರ: ಎಂಬಿ ಪಾಟೀಲ್ ಅವರು ತಮ್ಮ ನೀರಾವರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಧರ್ಮ ಒಡೆಯುವ ಕೆಲಸ ಮುಂದುವರೆಸಲಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಎಂಬಿ ಪಾಟೀಲ್ ಅವರು ಜನರ ಕಷ್ಟಕ್ಕೆ ಸ್ಪಂದಿಸೋದು ಬಿಟ್ಟು ಧರ್ಮ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಧರ್ಮಗಳನ್ನು ಒಡೆಯುವ ಕೆಲಸಗಳನ್ನೇ ಮುಂದುವರೆಸಲಿ ಎಂದು ಕಿಡಿಕಾರಿದ್ದಾರೆ.

    ಪ್ರಧಾನಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲ್ಲ ಅನ್ನೋದು ತಪ್ಪು. ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರ ಆಟವನ್ನು ಜನರು ನೋಡಿರುತ್ತಾರೆ. ಪ್ರಧಾನಿ ಕಾರ್ಯಕ್ರಮದಲ್ಲಿ ಭಾಗಿಯಾಗೋದಿಲ್ಲ ಅನ್ನೋದು ಪ್ರಜಾಪ್ರಭುತ್ವ ವಿರೋಧಿ. ಸಿದ್ದರಾಮಯ್ಯನವರ ಉದ್ಧಟತನ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಧಾನಿ ಕಾರ್ಯಕ್ರಮಕ್ಕೆ ಹೋಗಿ ರಾಜ್ಯದ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಬೇಕು. ಈ ವಿಚಾರದಲ್ಲಿ ಸಿಎಂ ರಾಜಕೀಯ ಮಾಡುವುದನ್ನು ಬಿಡಬೇಕು ಎಂದು ಹೇಳಿದರು.

    ಮುಂದಿನ ಸಿಎಂ ಅಭ್ಯರ್ಥಿ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಬಿಜೆಪಿ ಅಧ್ಯಕ್ಷ ಅಮೀತ್ ಶಾ ಈ ಬಗ್ಗೆ ಸ್ಪಷ್ಟನೆಯನ್ನೂ ನೀಡಿದ್ದಾರೆ. ಹಾಗೂ ಅನಂತ ಕುಮಾರ್ ಹೆಗಡೆ ಸಿಎಂ ಅಭ್ಯರ್ಥಿ ಅಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ. ಸಚಿವರು ಹಾಗೂ ಅಧಿಕಾರಿಗಳನ್ನು ರಕ್ಷಣೆ ಮಾಡಲು ಎಸಿಬಿ ರಚನೆ ಮಾಡಲಾಗಿದೆ. ವಿರೋಧಿಗಳ ವಿರುದ್ಧ ಕೇಸ್ ದಾಖಲಿಸಲು ಎಸಿಬಿ ರಚಿಸಲಾಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.