Tag: ಅಮೂಲ್

  • ಕಾಂಗ್ರೆಸ್ ಸರ್ಕಾರ ಬಂದ್ರೆ ನಂದಿನಿ ಸಂಸ್ಥೆ ಗಟ್ಟಿಯಾಗುತ್ತೆ: ಪ್ರಿಯಾಂಕಾ ಗಾಂಧಿ

    ಕಾಂಗ್ರೆಸ್ ಸರ್ಕಾರ ಬಂದ್ರೆ ನಂದಿನಿ ಸಂಸ್ಥೆ ಗಟ್ಟಿಯಾಗುತ್ತೆ: ಪ್ರಿಯಾಂಕಾ ಗಾಂಧಿ

    ಮೈಸೂರು: ಬಿಜೆಪಿ (BJP) ನಂದಿನಿ ಮುಗಿಸಲು ಗುಜರಾತಿಯ (Gujarat) ಅಮುಲ್ ತರಲು ಹೊರಟಿದ್ದಾರೆ. ಆದರೆ ನಂದಿನಿ ಸಂಸ್ಥೆಯನ್ನು ಕಾಂಗ್ರೆಸ್ ಸರ್ಕಾರ ಬಂದರೆ ಗಟ್ಟಿಗೊಳ್ಳಿಸುತ್ತದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಭರವಸೆ ನೀಡಿದರು.

    ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಂದಿನಿಯ ಬ್ರಾಂಡ್ ಅನ್ನು ಒಡೆದು ಹಾಕುವ ಸಂಚು ನಡೆಯುತ್ತಿದೆ. ಮೊದಲು 90 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿತ್ತು. ಈಗ ಅದು 70 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಉದ್ದೇಶ ಪೂರ್ವಕವಾಗಿ ಹಾಲು ಉತ್ಪಾದನೆ ಕಡಿಮೆ ಮಾಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅತಿ ಹೆಚ್ಚು ಹಾಲು ಉತ್ಪಾದನೆ ಆಗುತ್ತಿತ್ತು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

    ಕೇಂದ್ರದಿಂದ ರಾಜ್ಯಕ್ಕೆ ಬರುವ ಹಣ ವರ್ಷದಿಂದ ವರ್ಷಕ್ಕೆ ಕಡಿಮೆ ಆಗುತ್ತಿದೆ. ಇಲ್ಲಿ ಪದೇ ಪದೇ ಸಿಎಂಗಳು ಬದಲಾದರು. ದುರ್ಬಲ ಸಿಎಂ ಈ ರಾಜ್ಯಕ್ಕೆ ಸಿಕ್ಕಿರುವುದರ ಪರಿಣಾಮವಾಗಿದೆ. ಸಂಪುಟ ಪೂರ್ಣ ಪ್ರಮಾಣದಲ್ಲಿ ರಚನೆ ಆಗಲಿಲ್ಲ. ಈ ಸರ್ಕಾರ 40% ಹೆಸರಿನಲ್ಲಿ ಈ ರಾಜ್ಯವನ್ನು ಲೂಟಿ ಮಾಡಿದೆ. ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡರು. ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದರೂ ಪ್ರಯೋಜನ ಆಗಲಿಲ್ಲ. ಎಲ್ಲಾ ಸರ್ಕಾರಿ ನೇಮಕಾತಿಯಲ್ಲೂ ಭ್ರಷ್ಟಾಚಾರ ನಡೆಯಿತು. ಕೋವಿಡ್ ರೋಗಿಗಳನ್ನು ಬಿಡಲಿಲ್ಲ. ಮಕ್ಕಳ ಮೊಟ್ಟೆಯಲ್ಲೂ ಬಿಡಲಿಲ್ಲ. ಎಲ್ಲದರಲ್ಲೂ ಭ್ರಷ್ಟಾಚಾರ. ಒಂದುವರೆ ಲಕ್ಷ ಕೋಟಿ ರೂ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.

    ಲಕ್ಷಗಟ್ಟಲೆ ಹುದ್ದೆಗಳು ಸರ್ಕಾರದಲ್ಲಿ ಖಾಲಿ ಇವೆ. ಆದರೂ ನೇಮಕಾತಿ ನಡೆಯಲಿಲ್ಲ. ಈ ಸರ್ಕಾರ ಕೊಟ್ಟ ಎಲ್ಲಾ ಭರವಸೆ ಹುಸಿ ಮಾಡಿದೆ. ರಾಜ್ಯಕ್ಕೆ ಕೊಟ್ಟ ಭರವಸೆ ಯಾಕೆ ಈಡೇರಿಸಲಿಲ್ಲ ಅಂತಾ ಕಾಂಗ್ರೆಸ್ ಕೇಳುತ್ತಿದೆ. ಮೀಸಲಾತಿ ಹೆಚ್ಚಳದಲ್ಲೂ ಮೋಸ, ವಂಚನೆಯನ್ನು ಸರ್ಕಾರ ಮಾಡಿದೆ ಎಂದು ಗುಡುಗಿದರು.

    ಕಾಂಗ್ರೆಸ್ ನಾಯಕರು ತಮ್ಮ ಸಮಾಧಿ ತೊಡಲು ತಯಾರಿ ಮಾಡುತ್ತಿದ್ದಾರೆ ಎಂದು ಪ್ರಧಾನಿ ಹೇಳುತ್ತಾರೆ. ಇದು ಚುನಾವಣಾ ವಿಷಯ ಆಗೋಕೆ ಸಾಧ್ಯನಾ? ಈ ದೇಶದಲ್ಲಿ ಒಬ್ಬ ಪ್ರಧಾನಿ ಬಗ್ಗೆ ಇಷ್ಟು ಕೆಟ್ಟದಾಗಿ ಯೋಚಿಸುವ ಜನ ಇಲ್ಲ. ಪ್ರಧಾನಿಗಳ ಹೇಳಿಕೆಯಲ್ಲಿ ಅರ್ಥವಿಲ್ಲ. ಈ ಚುನಾವಣೆ ಮೋದಿ ಅವರು ಬಗ್ಗೆ ಅಲ್ಲ. ಇದು ಕರ್ನಾಟಕದ ಭವಿಷ್ಯದ ಚುನಾವಣೆ. ಇದು ಕರ್ನಾಟಕದ ಸ್ವಾಭಿಮಾನ, ದಿನನಿತ್ಯದ ಜೀವನ ಆಧಾರಿಸಿದ ಚುನಾವಣೆ ಇದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಯ ತದ್ರೂಪಿ ಪಕ್ಷೇತರವಾಗಿ ಸ್ಪರ್ಧೆ – ಮತದಾರರಲ್ಲಿ ಗೊಂದಲ ಸೃಷ್ಟಿ ಯತ್ನದ ಆರೋಪ

    ಕರ್ನಾಟಕದ ಈ ಸುಂದರ ಜಾಗ ನೋಡಿ ನನಗೆ ಬಹಳ ಖುಷಿಯಾಯಿತು. ಇದು ಸಂಗಮ ಸ್ಥಳ. ಕಾವೇರಿ, ಕಬಿನಿ ನದಿಯ ಸ್ಥಳ. ಇದು ಬಹಳ ಪವಿತ್ರವಾದ ಸ್ಥಳವೆಂದು ಎಲ್ಲರೂ ಹೇಳುತ್ತಾರೆ. ನಾವು ಬಹಳ ಒಳ್ಳೆಯವರು ಬೇರೆಯವರು ಕೆಟ್ಟವರು ಎಂದು ಹೇಳುತ್ತಾರೆ. ಆದರೆ, ಯಾರು ಒಳ್ಳೆಯವರು ಕೆಟ್ಟವರು ಎಂದು ಜನ ತೀರ್ಮಾನ ಮಾಡುತ್ತಾರೆ. ಜನ ಸರಿಯಾದ ದೃಷ್ಟಿಯಿಂದ ಯೋಚನೆ ಮಾಡಿ ಮತ ಹಾಕಬೇಕು. ಕರ್ನಾಟಕಕ್ಕೆ ಬಹಳ ದೊಡ್ಡ ಸಂಸ್ಕೃತಿ ಇದೆ ಎಂದರು.

    ಸೇವೆ ಸರ್ಕಾರದ ಧರ್ಮ. ಪ್ರಾಮಾಣಿಕತೆ ಸರ್ಕಾರದ ತತ್ವ ಆಗಿರಬೇಕು. ಆದರೆ, ಕರ್ನಾಟಕ ಸರ್ಕಾರದ ಸ್ಥಿತಿ ಏನಾಗಿದೆ. ಬಿಜೆಪಿ ತಪ್ಪು ದಾರಿಯಿಂದ ಹಣ ಬಳಸಿ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರ ಬೀಳಿಸಿತು. ಸರ್ಕಾರ ಆರಂಭದಲ್ಲೇ ಜನರಿಗೆ ವಂಚನೆ ಮಾಡಿತು. ದುರಾಸೆ ಅಮಿಷದಿಂದ ಈ ಸರಕಾರ ರಚನೆ ಆಯ್ತು ಎಂದು ಹೇಳಿದರು. ಇದನ್ನೂ ಓದಿ: ಜೆಡಿಎಸ್‌ನಲ್ಲೂ ಸ್ಟಾರ್ ಕ್ಯಾಂಪೇನರ್ ಇದ್ದಾರೆ: ಹೆಚ್‌ಡಿ ದೇವೇಗೌಡ

  • ನಂದಿನಿ ‘ನಮ್ಮವಳು’ ಅಲ್ಲ, ‘ನನ್ನವಳು’ : ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್

    ನಂದಿನಿ ‘ನಮ್ಮವಳು’ ಅಲ್ಲ, ‘ನನ್ನವಳು’ : ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್

    ಮೂಲ್ (Amul) ಮತ್ತು ನಂದಿನಿ (Nandini) ಹಾಲಿನ ಜಟಾಪಟಿ ತಾರಕಕ್ಕೇರಿದೆ. ಕರ್ನಾಟಕದಲ್ಲಿ ತನ್ನ ಉದ್ಯಮವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಅಮೂಲ್ ಹಲವು ರೀತಿಯಲ್ಲಿ ಕಸರತ್ತು ಮಾಡುತ್ತಿದೆ. ಇದಕ್ಕೆ ತೀವ್ರ ವಿರೋಧವು ವ್ಯಕ್ತವಾಗಿದೆ. ವಿರೋಧದ ಕಾವು ಜೋರಾಗುತ್ತಿದ್ದಂತೆಯೇ  ಅಮೂಲ್ ಕಂಪೆನಿಯ ಎಂ.ಡಿ ಸದ್ಯಕ್ಕೆ ಒಂದಷ್ಟು ಕೆಲಸವನ್ನು ಸ್ಥಗಿತಗೊಳಿಸಿದ್ದೇವೆ ಎಂದು ಹೇಳಿದರೂ, ಹೋರಾಟಗಾರರು ಮಾತ್ರ ಸುಮ್ಮನಾಗಿಲ್ಲ.

    ನಂದಿನಿ ಉಳಿವಿಗಾಗಿ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಮಾತನಾಡಿದ್ದು, ನಿರ್ದೇಶಕ ಮಂಸೋರೆ, ಚಿತ್ರಸಾಹಿತಿ ಕವಿರಾಜ್ ಸೇರಿದಂತೆ ಹಲವರು ಗಟ್ಟಿಯಾಗಿ ಧ್ವನಿ ಎತ್ತಿದ್ದಾರೆ. ಇನ್ನೂ ಹಲವರು ಡಾ.ರಾಜ್ ಕುಟುಂಬ ನಂದಿನಿ ಡೈರಿಗೆ ಸಪೋರ್ಟ್ ಮಾಡಿದ್ದನ್ನು ನೆನಪಿಸಿಕೊಂಡಿದ್ದಾರೆ. ಅಲ್ಲದೇ, ರೈತರ ಉಳಿವಿಗಾಗಿ ಎಂತಹ ಹೋರಾಟಕ್ಕೂ ಸಿದ್ಧ ಎಂದು ಕನ್ನಡಪರ ಹೋರಾಟಗಾರರು ಕರೆಕೊಟ್ಟಿದ್ದಾರೆ. ಈ ನಡುವೆ ನಾಗತಿಹಳ್ಳಿ ಚಂದ್ರಶೇಖರ್ (Nagatihalli Chandrasekhar) , ನಂದಿನಿ ಜೊತೆಗಿನ ಸಂಬಂಧವನ್ನು ಹೇಳಿಕೊಂಡಿದ್ದಾರೆ.

    ನಂದಿನಿ ಕುರಿತಾಗಿ ಟ್ವೀಟ್ ಮಾಡಿರುವ ನಾಗತಿಹಳ್ಳಿ, ‘ನಂದಿನಿ ನಮ್ಮವಳು ಅಲ್ಲ, ನನ್ನವಳು. ಆರೋಗ್ಯದಾಯಿನಿ. ನಾನು ಕೆಎಂಎಫ್ ನ ಮೈಸೂರು ಡೈರಿಯಲ್ಲಿ ಆರು ವರ್ಷ ದಿನಗೂಲಿ ಜತೆ ವ್ಯಾಸಂಗ ಮಾಡಿ ಬದುಕು ಕಟ್ಟಿಕೊಂಡವನು. ನಾಗತಿಹಳ್ಳಿಯಲ್ಲಿ ಹೆಣ್ಣು ಮಕ್ಕಳಿಗಾಗಿ ಮಾಡಿಕೊಟ್ಟ ಅಭಿವ್ಯಕ್ತಿ ಹಾಲು ಉತ್ಪಾದಕರ ಸಂಘ ಯಶಸ್ವಿಯಾಗಿ ನಡೆಯುತ್ತಿದೆ. ನಂದಿನಿ ಇಲ್ಲದ ಗ್ರಾಮ್ಯ ಬದುಕನ್ನು ಕಲ್ಪಿಸಿಕೊಳ್ಳುವುದೂ ಕಷ್ಟ’ ಎಂದು ಬರೆದಿದ್ದಾರೆ. ಇದನ್ನೂ ಓದಿ: ಬೋಲ್ಡ್ ಅವತಾರ ತಾಳಿದ ‘ಕಬ್ಜ’ ಸುಂದರಿ ಶ್ರೀಯಾ

    ನಾಗತಿಹಳ್ಳಿ ಮೇಷ್ಟ್ರು ಶಾಲಾ ದಿನಗಳಲ್ಲಿ ನಂದಿನಿ ಡೈರಿಯಲ್ಲಿ ಕೆಲಸ ಮಾಡಿದ್ದನ್ನು ನೆನಪಿಸಿಕೊಂಡಿದ್ದಾರೆ. ಆರು ವರ್ಷಗಳ ಕಾಲ ಡೈರಿಯಲ್ಲಿ ಅವರು ಕೆಲಸ ಮಾಡಿದ್ದಾರಂತೆ. ಹಾಗಾಗಿ ಅದರೊಂದಿಗೆ ತಮ್ಮದು ಭಾವನಾತ್ಮಕ ಸಂಬಂಧವಿದೆ ಎಂದು ಹೇಳಿಕೊಂಡಿದ್ದಾರೆ. ಅದು ಎಲ್ಲರ ಬದುಕನ್ನು ಕಟ್ಟಿಕೊಟ್ಟಿದೆ ಎಂದು ವಿವರಿಸಿದ್ದಾರೆ.

  • KMF ನಷ್ಟದಲ್ಲಿಲ್ಲ, 200 ಕೋಟಿ ಲಾಭದಲ್ಲಿದೆ – ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌

    KMF ನಷ್ಟದಲ್ಲಿಲ್ಲ, 200 ಕೋಟಿ ಲಾಭದಲ್ಲಿದೆ – ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌

    ಬೆಳಗಾವಿ: ರಾಜ್ಯದ ಕೆಎಂಎಫ್ (KMF) ನಷ್ಟದಲ್ಲಿಲ್ಲ, ಈ ವರ್ಷ 200 ಕೋಟಿ ರೂ. ಲಾಭದಲ್ಲಿದೆ. ಹೀಗಾಗಿ ಅಮುಲ್ ಜೊತೆಗೆ ನಂದಿನಿ ಯಾವುದೇ ಕಾರಣಕ್ಕೂ ವಿಲೀನ ಆಗಲ್ಲ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌ (Balachandra Jarkiholi) ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಎಂಎಫ್ ಹಾಗೂ ರಾಜ್ಯದ 15 ಒಕ್ಕೂಟಗಳು ಈ ವರ್ಷ 22 ಸಾವಿರ ಕೋಟಿ ರೂ. ವಹಿವಾಟು ನಡೆಸಿವೆ. ಅದರಲ್ಲಿ ಕೆಎಂಎಫ್‌ಗೆ ‌100 ಕೋಟಿ ರೂ. ಹಾಗೂ ಇತರೇ 15 ಒಕ್ಕೂಟಗಳ ಲಾಭ 100 ಕೋಟಿ ರೂ. ಸೇರಿ 200 ಕೋಟಿ ಲಾಭದಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ದೇವೇಗೌಡರ ತೀರ್ಮಾನವೇ ಅಂತಿಮ, ಅವರು ಹಾಕಿದ ಗೆರೆ ದಾಟಲ್ಲ : ಹೆಚ್.ಡಿ ರೇವಣ್ಣ

    ಯಾವುದೇ ಕಾರಣಕ್ಕೂ ನಂದಿನಿ-ಅಮುಲ್ (Amul) ವಿಲೀನ ಆಗಲ್ಲ. ಬೇಕಾದಷ್ಟು ಕಂಪನಿಗಳು ಬಂದರೂ ನಂದಿನಿಗೆ (Nandini) ಯಾರೂ ಕಾಂಪಿಟೇಷನ್ ಕೊಡಲು ಆಗಲ್ಲ. 10 ಅಮುಲ್ ನಂಥ ಕಂಪನಿಗಳು ಬಂದರೂ ಅದಕ್ಕೆ ಪ್ರತಿಸ್ಪರ್ಧೆ ಒಡ್ಡಲು ನಾವು ಸಿದ್ಧರಿದ್ದೇವೆ. ರಾಜಕೀಯ (Politics) ಕಾರಣಕ್ಕೆ ಕೆಲ ರಾಜಕೀಯ ಪಕ್ಷಗಳು, ಸಂಘಟನೆಗಳು ಈ ರೀತಿ ಮಾಡುತ್ತಿವೆ. ‌ನಮ್ಮ ಗ್ರಾಹಕರು, ರೈತರು ಹಾಗೂ ಉದ್ಯೋಗಿಗಳ ಹಿತ ಕಾಯಲು ನಾವು ಸಿದ್ಧರಿದ್ದೇವೆ. ಒಂದು ವಾರದಿಂದಲೂ ಗೊಂದಲವಿದೆ. ಈ ಗೊಂದಲ ಏಕೆ ಆಗ್ತಿದೆ ಎಂಬುದು ಗೊತ್ತಾಗ್ತಿಲ್ಲ. ನಾನು ರಾಜ್ಯದ ರೈತರು, ಗ್ರಾಹಕರಿಗೆ ಸಂದೇಶ ನೀಡುತ್ತೇನೆ, ಅಮುಲ್ ಜೊತೆಗೆ ನಂದಿನಿ ವಿಲೀನ ಆಗಲ್ಲ ಎಂದು ಬಾಲಚಂದ್ರ ಹೇಳಿದರು. ಇದನ್ನೂ ಓದಿ: ಆಕಾಶದಲ್ಲಿ ಜಾಗ ಸಿಕ್ಕಿಲ್ಲ, ಸಿಕ್ಕಿದ್ರೆ ಅಲ್ಲೂ ಭ್ರಷ್ಟಚಾರ ಮಾಡುತ್ತಿದ್ದರು: ಸಿ.ಟಿ.ರವಿ ವಿರುದ್ಧ ತಮ್ಮಯ್ಯ ವಾಗ್ದಾಳಿ

  • ಅಮುಲ್ ಜೊತೆ ಕೆಎಂಎಫ್‌ ವಿಲೀನ ಇಲ್ಲ: ಸಿಎಂ  ಬೊಮ್ಮಾಯಿ

    ಅಮುಲ್ ಜೊತೆ ಕೆಎಂಎಫ್‌ ವಿಲೀನ ಇಲ್ಲ: ಸಿಎಂ ಬೊಮ್ಮಾಯಿ

    ಬೆಂಗಳೂರು: ಗುಜರಾತ್‌ನ ಅಮುಲ್(Amul) ಜೊತೆ ಕೆಎಂಎಫ್‌(KMF) ವಿಲೀನ ಮಾಡುವುದಿಲ್ಲ ಎಂದು ಸಿಎಂ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ.

    ಗೃಹ ಸಚಿವ ಅಮಿತ್‌ ಶಾ(Amit Shah) ಹೇಳಿಕೆ ಸಂಬಂಧ ವಿರೋಧ ಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಅವರು, ನಾನು ಸಿಎಂ ಆಗಿ ಹೇಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಅಮುಲ್ ಕೆಎಂಎಫ್‌ ವಿಲೀನ ಮಾಡುವುದಿಲ್ಲ. ಅಮಿತ್ ಶಾ ತಮ್ಮ ಭಾಷಣದಲ್ಲಿ ವಿಲೀನ ಮಾಡುತ್ತೇವೆ ಎಂದು ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: `ನಂದಿನಿ’ ಕನ್ನಡಿಗರ ಜೀವನಾಡಿ, ಅದರ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತೆ HDK ಎಚ್ಚರಿಕೆ

    ಯಾರಿಗೂ ತಪ್ಪು ಕಲ್ಪನೆ ‌ಬೇಡ. ಮುಂದೆ 100 ವರ್ಷವಾದರೂ ಕೆಎಂಎಫ್‌ ಹಾಗೆಯೇ ಇರುತ್ತದೆ. ಊಹೆ ಮಾಡಿ ಟೀಕೆ ಮಾಡುವವರಿಗೆ ಏನು ಹೇಳುವುದು? ಒಬ್ಬರಿಗೊಬ್ಬರು ತಾಂತ್ರಿಕ ಸಹಾಯದಿಂದ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಯಾರಿಗೂ ತಪ್ಪು ತಿಳುವಳಿಕೆ ಬೇಡ ಎಂದು ತಿಳಿಸಿದರು.

    ಕೆಲ ಭಾಗದಲ್ಲಿ ತಾಂತ್ರಿಕ, ಆಡಳಿತ ವಿಚಾರಗಳನ್ನು ಹಂಚಿಕೊಂಡು ಕೆಲಸ ಮಾಡಬೇಕು ಎಂದು ಅಮಿತ್‌ ಶಾ ಹೇಳಿದ್ದಾರೆ. ಅದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಿಎಂ ಹೇಳಿದರು.

    ಶಾ ಹೇಳಿದ್ದೇನು?
    ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಮಿಲ್ಕ್ ಡೈರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಮಿತ್ ಶಾ, ಗುಜರಾತ್‌ನ `ಅಮುಲ್’ ಜತೆ ಕರ್ನಾಟಕದ `ನಂದಿನಿ’ಯನ್ನು ಒಂದುಗೂಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

    ಗುಜರಾತ್‌ನಲ್ಲಿ ಸಹಕಾರ ಒಕ್ಕೂಟವು ಪ್ರಗತಿಯ ಹಾದಿಯಲ್ಲಿದೆ. ಹಾಗೆಯೇ 1975 ರಿಂದಲೂ ಕೆಎಂಎಫ್ ಕೂಡ ಅಭಿವೃದ್ಧಿ ಹೊಂದುತ್ತಿದೆ. ಅಮೂಲ್ ಹಾಗೂ ನಂದಿನಿ ಒಂದಾದರೆ ಕರ್ನಾಟಕದ ಹಾಲು ಉತ್ಪಾದಕರಿಗೆ ಇನ್ನಷ್ಟು ಅನುಕೂಲವಾಗುತ್ತದೆ. ಮುಂದಿನ ಮೂರು ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷಕ್ಕೂ ಅಧಿಕ ಪ್ರಾಥಮಿಕ ಡೈರಿಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪನೆ ಮಾಡಲಾಗುವುದು. ಆ ಮೂಲಕ ಹಾಲಿನ ಉತ್ಪನ್ನಗಳನ್ನು ಇತರ ರಾಷ್ಟ್ರಗಳಿಗೆ ರಫ್ತು ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • `ನಂದಿನಿ’ ಕನ್ನಡಿಗರ ಜೀವನಾಡಿ, ಅದರ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತೆ  HDK ಎಚ್ಚರಿಕೆ

    `ನಂದಿನಿ’ ಕನ್ನಡಿಗರ ಜೀವನಾಡಿ, ಅದರ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತೆ HDK ಎಚ್ಚರಿಕೆ

    ಬೆಂಗಳೂರು: `ನಂದಿನಿ’ (Nandini) ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ (BJP) ಭಸ್ಮವಾಗುತ್ತದೆ. ಕರ್ನಾಟಕವನ್ನು ಆಕ್ರಮಣ ಮಾಡಿಕೊಳ್ಳುವ ಹಾಗೂ ಆರ್ಥಿಕ, ಕೈಗಾರಿಕಾ ಕ್ಷೇತ್ರಗಳಲ್ಲಿ ರಾಜ್ಯವನ್ನು ಹತ್ತಿಕ್ಕುವ ಹುನ್ನಾರ ಯಶಸ್ಸು ಕಾಣದು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಎಚ್ಚರಿಕೆ ನೀಡಿದ್ದಾರೆ.

    `ಗುಜರಾತ್‌ನ `ಅಮೂಲ್’ (Amul) ಜತೆ ಕರ್ನಾಟಕದ `ನಂದಿನಿ’ಯನ್ನು (KMF) ಒಂದುಗೂಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿಕೆ ವಿರುದ್ಧ ಸರಣಿ ಟ್ವೀಟ್‌ಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಾಲ ಮಾಡಿ ವಿದೇಶಕ್ಕೆ ಪರಾರಿ – ಫೆಬ್ರವರಿಯಲ್ಲಿ ನೀರವ್‌ ಮೋದಿ ಆಸ್ತಿ ಹರಾಜು

    ಟ್ವೀಟ್ ನಲ್ಲಿ ಏನಿದೆ?
    ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ.

    ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟ ವ್ಯಕ್ತಿ, ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಕಿವಿ ಹಿಂಡದ ವ್ಯಕ್ತಿ ಈಗ ಕನ್ನಡ ನೆಲದ ಮಣ್ಣಿನಮಕ್ಕಳ ಜೀವನಾಡಿ ಕರ್ನಾಟಕ ಹಾಲು ಮಹಾ ಮಂಡಳಿ (KMF – ನಂದಿನಿ) ಯನ್ನು ಗುಜರಾತಿನ ಅಮುಲ್ ನಲ್ಲಿ ವಿಲೀನ ಮಾಡುವ ಹೇಳಿಕೆ ನೀಡಿರುವುದು ಕನ್ನಡಿಗರಿಗೆ ಮಾಡಲು ಹೊರಟಿರುವ ಘೋರ ಅನ್ಯಾಯ.

    ಕರ್ನಾಟಕ (Karnataka) ರಾಜ್ಯವನ್ನು ಗುಜರಾತ್ (Gujarat) ಮಾಡುವ ಧೂರ್ತ ಹುನ್ನಾರ ಇದು. ಅಷ್ಟೇ ಅಲ್ಲ, ಗುಜರಾತ್ ಗೆ ಕರ್ನಾಟಕವೇ ಪ್ರತಿಸ್ಪರ್ಧಿ ಎನ್ನುವ ಕಾರಣಕ್ಕೆ ಅಭಿವೃದ್ಧಿಯಲ್ಲಿ ಕರ್ನಾಟಕವನ್ನು ಮುಗಿಸೇಬೀಡಬೇಕು ಎನ್ನುವ ದುರಾಲೋಚನೆ ಅಮಿತ್ ಶಾ ಅವರಿಗೆ ಸ್ಪಷ್ಟವಾಗಿ ಇದ್ದಂತಿದೆ. ಇದನ್ನೂ ಓದಿ: ಚಲಿಸುತ್ತಿದ್ದ ಬೈಕ್‌ಟ್ಯಾಂಕ್ ಮೇಲೆ ಕುಳಿತು ಪ್ರಿಯಕರನೊಂದಿಗೆ ರೊಮ್ಯಾನ್ಸ್ – ಪೊಲೀಸರು ಕೊಟ್ರು ಶಾಕ್

    ದೇಶದ ಬೇರಾವ ರಾಜ್ಯದ ಮೇಲೆಯೂ ಇಲ್ಲದ ಅಸಹನೆ, ಅಸೂಯೆ, ವೈಷಮ್ಯ ಕರ್ನಾಟಕದ ಮೇಲೇಕೆ ಅಮಿತ್ ಶಾ ಅವರೇ ಎಂದು ನಾನು ಕೇಳುತ್ತಿದ್ದೇನೆ. ಕನ್ನಡಿಗರನ್ನು ಶತ್ರುಗಳಂತೆ ನೋಡುತ್ತಿದ್ದಾರೆ. ಕನ್ನಡಿಗರನ್ನು ಗುಜರಾತಿನ ಗುಲಾಮರನ್ನಾಗಿ ಮಾಡಲು ಶಾ ಅವರು ಷಡ್ಯಂತ್ರ ರೂಪಿಸಿದ್ದಾರೆ ಎನ್ನುವುದು ನನ್ನ ಅನುಮಾನ.

    ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ. ಇಡೀ ದೇಶವನ್ನೇ ಆಳಿದ ಕನ್ನಡಿಗರು ಯಾರೊಬ್ಬರ ಗುಲಾಮರಲ್ಲ. ಕರ್ನಾಟಕವನ್ನು ಆಕ್ರಮಣ ಮಾಡಿಕೊಳ್ಳುವ ಹಾಗೂ ಆರ್ಥಿಕ, ಕೈಗಾರಿಕೆ ಕ್ಷೇತ್ರಗಳಲ್ಲಿ ರಾಜ್ಯವನ್ನು ಹತ್ತಿಕ್ಕುವ ಹುನ್ನಾರ ಯಶಸ್ಸು ಕಾಣದು. ಬಿಜೆಪಿಯ ಬ್ರಹ್ಮರಾಕ್ಷಸ ರೂಪ ಕನ್ನಡಿಗರಿಗೆ ಈಗ ಅರಿವಾಗುತ್ತಿದೆ.

    ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶಕ್ಕೇ ಮಾದರಿಯಾಗಿದ್ದ ಕರ್ನಾಟಕವನ್ನು ಉತ್ತರ ಭಾರತದ ಬ್ಯಾಂಕ್ ಗಳಿಗೆ ಅಡಿಯಾಳನ್ನಾಗಿಸಿ, ಹಿಂದಿ ಭಾಷಿಗರ ಉದ್ಧಾರಕ್ಕಾಗಿ ಕನ್ನಡಿಗರ ಅನ್ನ ಕಸಿದುಕೊಂಡ ಬಿಜೆಪಿ, ಈಗ ನಂದಿನಿಯನ್ನು ಹೊಡೆದುಕೊಂಡು ಹೋಗಲು ಹಿಡನ್ ಅಜೆಂಡಾ ರೂಪಿಸಿದಂತಿದೆ. ಕರ್ನಾಟಕ ಎಂದಿಗೂ ಗುಜರಾತಿನ ವಸಾಹತು ಆಗುವುದಿಲ್ಲ.

    ಅಮುಲ್ ಜತೆ ನಂದಿನಿ ವಿಲೀನ ಸಾಧ್ಯವಿಲ್ಲ. ನಮ್ಮ ರೈತರ ಅನ್ನ ಕಸಿಯುವ ಕೆಲಸವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೆಎಂಎಫ್ ಕನ್ನಡಿಗರ ಜೀವನಾಡಿ ಮಾತ್ರವಲ್ಲ, ಸಮಸ್ತ ಕನ್ನಡಿಗರ ಆಸ್ತಿ ಮತ್ತು ಅಸ್ಮಿತೆ. ಅಮಿತ್ ಶಾ ಅವರು ಇದೆಲ್ಲವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಎಚ್ಚರಿಕೆ ನೀಡಿದ್ದಾರೆ.

    ಶಾ ಹೇಳಿದ್ದೇನು?
    ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಮಿಲ್ಕ್ ಡೈರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಮಿತ್ ಶಾ, ಗುಜರಾತ್‌ನ `ಅಮೂಲ್’ ಜತೆ ಕರ್ನಾಟಕದ `ನಂದಿನಿ’ಯನ್ನು ಒಂದುಗೂಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

    ಗುಜರಾತ್‌ನಲ್ಲಿ ಸಹಕಾರ ಒಕ್ಕೂಟವು ಪ್ರಗತಿಯ ಹಾದಿಯಲ್ಲಿದೆ. ಹಾಗೆಯೇ 1975 ರಿಂದಲೂ ಕೆಎಂಎಫ್ ಕೂಡ ಅಭಿವೃದ್ಧಿ ಹೊಂದುತ್ತಿದೆ. ಅಮೂಲ್ ಹಾಗೂ ನಂದಿನಿ ಒಂದಾದರೆ ಕರ್ನಾಟಕದ ಹಾಲು ಉತ್ಪಾದಕರಿಗೆ ಇನ್ನಷ್ಟು ಅನುಕೂಲವಾಗುತ್ತದೆ. ಮುಂದಿನ ಮೂರು ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷಕ್ಕೂ ಅಧಿಕ ಪ್ರಾಥಮಿಕ ಡೈರಿಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪನೆ ಮಾಡಲಾಗುವುದು. ಆ ಮೂಲಕ ಹಾಲಿನ ಉತ್ಪನ್ನಗಳನ್ನು ಇತರ ರಾಷ್ಟ್ರಗಳಿಗೆ ರಫ್ತು ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕಾರು ಅಪಘಾತ – ಅಮೂಲ್ ಎಂಡಿ ಸೋಧಿಗೆ ಪೆಟ್ಟು, ಆಸ್ಪತ್ರೆಗೆ ದಾಖಲು

    ಕಾರು ಅಪಘಾತ – ಅಮೂಲ್ ಎಂಡಿ ಸೋಧಿಗೆ ಪೆಟ್ಟು, ಆಸ್ಪತ್ರೆಗೆ ದಾಖಲು

    ಗಾಂಧಿನಗರ: ಅಮೂಲ್ ಬ್ರ್ಯಾಂಡ್‌ನ ಅಡಿಯಲ್ಲಿ ಉತ್ಪನ್ನ ತಯಾರಿಸುವ GCMMF ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್.ಸೋಧಿ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ.

    ಗುಜರಾತಿನ ಆನಂದ್ ಪಟ್ಟಣದ ಸಮೀಪ ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಸೋಧಿ ಅವರು ಪ್ರಾಣಾಪಾಯಯದಿಂದ ಪಾರಾಗಿದ್ದು ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ನಡೆದಿದ್ದೇನು?: ಸೋಧಿ ಅವರು ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಆನಂದ್-ಬಕ್ರೋಲ್ ರಸ್ತೆಯಲ್ಲಿ ಚಲಿಸುತ್ತಿದ್ದ ವೇಳೆ ಕಾರು ಚಾಲಕ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಗುದ್ದಿದ ಪರಿಣಾಮ ಉರುಳಿ ಬಿದ್ದಿದೆ. ಕಾರು ನಿಯಂತ್ರಣ ಕಳೆದುಕೊಳ್ಳಲು ನಿಖರ ಕಾರಣ ಏನೆಂಬುದು ಕಂಡುಬಂದಿಲ್ಲ. ಆದರೆ ಸ್ಥಳೀಯ ಮೂಲಗಳು ಹೇಳುವಂತೆ ಚಾಲಕ ದ್ವಿಚಕ್ರ ವಾಹವೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿ, ತಿರುವು ತೆಗೆದುಕೊಂಡಿದ್ದರಿಂದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತ ಸಂಭವಿಸಿದೆ ಎಂಬುದಾಗಿ ತಿಳಿದು ಬಂದಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಬಿಡಿ ಜಡೇಜಾ ತಿಳಿಸಿದ್ದಾರೆ.

    CRIME

    ಅಪಘಾತಕ್ಕೀಡಾದ ಸೋಧಿ ಹಾಗೂ ಚಾಲಕನನ್ನು ಸ್ಥಳೀಯರು ತಕ್ಷಣವೇ ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಮಾಹಿತಿ ನೀಡಿದ್ದಾರೆ.

    ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಸಂಸ್ಥೆ ನಿಯಮಿತವು (GCMMF) ಆನಂದ್ ಪಟ್ಟಣದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದೆ. ಅಮೂಲ್ ಬ್ರ‍್ಯಾಂಡ್ ಹೆಸರಿನ ಅಡಿ ಅದು ತನ್ನ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದೆ. ಸೋಧಿ ಅವರು 2019 ರಿಂದಲೂ ಅದರ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.

    Live Tv

  • ಅಮೂಲ್ ಹಾಲಿನ ದರ 2 ರೂ. ಹೆಚ್ಚಳ

    ಅಮೂಲ್ ಹಾಲಿನ ದರ 2 ರೂ. ಹೆಚ್ಚಳ

    ಗಾಂಧೀನಗರ: ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ (GCMMF) ಅಮೂಲ್ ತನ್ನ ಹಾಲಿನ ದರವನ್ನು 2 ರೂ. ಏರಿಕೆ ಮಾಡಿದೆ.

    ಅಮೂಲ್ ಹಾಲು ಮತ್ತು ಹಾಲಿನ ಇತರ ಉತ್ಪನ್ನಗಳ ಮೂಲಕ ಭಾರತದಲ್ಲಿ ಹೆಸರುವಾಸಿಯಾಗಿದ್ದು, ಇದೀಗ ಹಾಲಿನ ದರವನ್ನು ಮಾತ್ರ ಮಾರ್ಚ್ 1 ರಿಂದ 2 ರೂ. ಏರಿಕೆಗೆ ಮುಂದಾಗಿದೆ. ಇದನ್ನೂ ಓದಿ: ಯುವರತ್ನನಿಗೆ ವಿಶೇಷವಾಗಿ ಗೌರವ ಸಲ್ಲಿಸಿದ ಅಮೂಲ್

    ಅಹಮದಾಬಾದ್ ಮತ್ತು ಸೌರಾಷ್ಟ್ರ ಮಾರುಕಟ್ಟೆಯಲ್ಲಿ ಪ್ರಸ್ತುತ ಅಮೂಲ್ ಗೋಲ್ಡ್ ಹಾಲಿನ ದರ ಅರ್ಧ ಲೀ. 30 ರೂ., ಅಮೂಲ್ ತಾಜಾ 24 ರೂ. ಮತ್ತು ಅಮೂಲ್ ಶಕ್ತಿ 27 ರೂ. ಇದೆ. ಇದೀಗ ಇರುವ ಬೆಲೆಯಲ್ಲಿ 2 ರೂ. ಏರಿಕೆ ಆಗುತ್ತಿದ್ದು, ಈ ಮೂಲಕ MRP ದರದಲ್ಲಿ 4% ಏರಿಕೆ ಆಗಿದೆ ಎಂದು ಅಮೂಲ್ ಸಂಸ್ಥೆ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಸೈಬರ್ ಮೋಸದ ಜಾಲದಕ್ಕೆ ಸಿಕ್ಕಿ 1.48 ಲಕ್ಷ ಕಳೆದುಕೊಂಡ ನಟಿ!

  • ಯುವರತ್ನನಿಗೆ ವಿಶೇಷವಾಗಿ ಗೌರವ ಸಲ್ಲಿಸಿದ ಅಮೂಲ್

    ಯುವರತ್ನನಿಗೆ ವಿಶೇಷವಾಗಿ ಗೌರವ ಸಲ್ಲಿಸಿದ ಅಮೂಲ್

    ನವದೆಹಲಿ: ಚಂದನವನದ ಯುವರತ್ನ ಪುನೀತ್ ರಾಜ್‍ಕುಮಾರ್ ಅವರಿಗೆ ಅಮೂಲ್ ವಿಶೇಷವಾಗಿ ಗೌರವವನ್ನು ಸಲ್ಲಿಸಿದೆ.

    ಶುಕ್ರವಾರದಂದು ಕನ್ನಡದ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನವು ಅವರ ಅಭಿಮಾನಿಗಳು, ಸ್ನೇಹಿತರು ಮತ್ತು ಹಿತೈಷಿಗಳಿಗೆ ಆಘಾತವನ್ನುಂಟು ಮಾಡಿತ್ತು. ಇಂದು ಅವರ ಅಂತ್ಯಸಂಸ್ಕಾರವಾಗಿದ್ದು, ಇದನ್ನು ಇನ್ನೂ ಕೆಲವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಕರ್ನಾಟಕ ಮಾತ್ರವಲ್ಲ ಪುನೀತ್ ಸಾವಿಗೆ ಇಡೀ ಭಾರತವೇ ಶೋಕಚರಣೆಯಲ್ಲಿ ಮುಳುಗಿತ್ತು. ಇದನ್ನೂ ಓದಿ: ಇಂದಿರಾ ಗಾಂಧಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ

    ಇನ್‍ಸ್ಟಾಗ್ರಾಮ್ ನಲ್ಲಿ, ‘ಯುವರತ್ನಾ ಫಾರ್ ಮಿಲಿಯನ್ಸ್’ ಅಂಡ್ ‘ಪುನೀತ್ ರಾಜ್‍ಕುಮಾರ್ 1975-2021’ ಎಂಬ ಪೋಸ್ಟ್ ಹಾಕಿದ್ದು, ಕನ್ನಡದ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಎಂದು ಬರೆದು ಶೇರ್ ಮಾಡಿದೆ. ಈ ಹಿನ್ನೆಲೆ ಅಪ್ಪು ಅಭಿಮಾನಿಗಳು ಈ ಪೋಸ್ಟ್ ಗೆ ಹಾರ್ಟ್ ಎಮೋಜಿಗಳನ್ನು ಕಳುಹಿಸುತ್ತಿದ್ದಾರೆ.

    46ನೇ ವಯಸ್ಸಿಗೆ ಪುನೀತ್ ಶುಕ್ರವಾರ ವಿಕ್ರಂ ಆಸ್ಪತ್ರೆಯಲ್ಲಿ ನಿಧನರಾದರು. ಈ ಹಿನ್ನೆಲೆ ಇವರನ್ನು ನೋಡಲು ಲಕ್ಷಾಂತರ ಅಭಿಮಾನಿ ಬಳಗ ಬಂದಿದ್ದು, ಕನ್ನಡದ ಸ್ಟಾರ್ ನಟರು ಮಾತ್ರವಲ್ಲದೇ ಬೇರೆ ಭಾಷೆಯ ಸ್ಟಾರ್ ನಟರೂ ಸಹ ಅಪ್ಪುನನ್ನು ನೋಡಲು ಬಂದಿದ್ದರು. ಇಂದು ನಮ್ಮ ಚಿತ್ರತಂಡ ಒಬ್ಬ ಯಶಸ್ವಿ ನಟನನ್ನು ಕಳೆದುಕೊಂಡಿದೆ. ಇದನ್ನೂ ಓದಿ: ಪ್ರತಿಭಟನಾಕಾರರನ್ನು ಬಲವಂತವಾಗಿ ಹೊರಹಾಕಲು ಪ್ರಯತ್ನಿಸಿದರೆ ಪರಿಣಾಮ ಎದುರಿಸಬೇಕಾಗುತ್ತೆ: ರಾಕೇಶ್ ಟಿಕಾಯತ್

  • ಜಸ್ಪ್ರೀತ್ ಬುಮ್ರಾ ದಂಪತಿಗೆ ಅಮುಲ್ ಮದುವೆ ಶುಭಾಶಯ ಪೋಸ್ಟ್ ವೈರಲ್

    ಜಸ್ಪ್ರೀತ್ ಬುಮ್ರಾ ದಂಪತಿಗೆ ಅಮುಲ್ ಮದುವೆ ಶುಭಾಶಯ ಪೋಸ್ಟ್ ವೈರಲ್

    ನವದೆಹಲಿ: ಭಾರತ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಕ್ರಿಕೆಟ್ ನಿರೂಪಕಿ ಸಂಜನಾ ಗಣೇಶನ್ ಜೋಡಿ ನಿನ್ನೆ ಗೋವಾದಲ್ಲಿ ವೈವಾಹಿಕ ಬಂಧನಕ್ಕೆ ಕಾಲಿಟ್ಟಿದ್ದರು. ಅವರಿಗೆ ಭಾರತದ ಸಿಹಿತಿಂಡಿ ಕಂಪನಿ ಅಮುಲ್ ವಿಶಿಷ್ಟ ಪೋಸ್ಟ್ ಒಂದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಶುಭಾಶಯ ಕೋರಿತ್ತು ಈ ಪೋಸ್ಟ್ ವೈರಲ್ ಆಗಿದೆ.

    ಬುಮ್ರಾ ಮತ್ತು ಸಂಜನಾ ಗಣೇಶನ್ ಮದುವೆ ಸಮಾರಂಭವು ಗೋವಾದಲ್ಲಿ ಸರಳವಾಗಿ ಎರಡೂ ಕುಟುಂಬದ ಆಪ್ತರ ಸಮ್ಮುಖದಲ್ಲಿ ನಡೆದಿತ್ತು. ಬೂಮ್ರಾ ಇಂದಿನಿಂದ ಹೊಸ ಜೀವನ ಆರಂಭವಾಗಿದೆ. ಇಂದು ಅತ್ಯಂತ ಸಂಭ್ರಮದ ದಿನವಾಗಿದೆ ಎಂದು ಬರೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಮದುವೆ ಸಂಭ್ರಮ ಹಂಚಿಕೊಂಡಿದ್ದರು. ಇದನ್ನು ಗಮನಿಸಿದ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಬೂಮ್ರಾ ದಂಪತಿಗೆ ಶುಭಹಾರೈಕೆ ಮಾಡಿದ್ದರು.

    ಅಮೂಲ್ ಕಂಪನಿ ಕೂಡ ತನ್ನ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಬೂಮ್ರಾ ದಂಪತಿಗೆ ಶುಭಹಾರೈಸಿ ವಿಶೇಷ ಪೋಸ್ಟ್ ಹಾಕಿತ್ತು ಅದರಲ್ಲಿ ಅಮುಲ್ ಜಾಸ್ ಕೋ ಪ್ರೀತ್ ಮಿಲ್ ಗಾಯಿ ಅಂತ ಪೋಸ್ಟ್ ನ ಮೇಲ್ಬಾಗದಲ್ಲಿ ಬರೆದಿದ್ದು, ಬೂಮ್ರಾ ಪಕ್ಕದಲ್ಲಿ ಕುಳಿತಿರುವ ಸಂಜನಾ ಗಣೇಶನ್ ಒಂದು ಕೈಯಲ್ಲಿ ಸಿಹಿತಿಂಡಿಯನ್ನು ಹಿಡಿದುಕೊಂಡು ಇನ್ನೊಂದು ಕೈಯಲ್ಲಿ ಮೈಕ್ ಇಡಿದು ಬೂಮ್ರಾ ಅವರನ್ನು ಮಾತನಾಡಿಸುತ್ತಿದ್ದಾರೆ. ಬೂಮ್ರಾ ಒಂದು ಕೈನಲ್ಲಿ ಸಿಹಿತಿಂಡಿ ಹಿಡಿದುಕೊಂಡಿದ್ದರೆ ಇನ್ನೊಂದು ಕೈಯಲ್ಲಿ ಕ್ರಿಕೆಟ್ ಬಾಲ್ ಮೇಲಕ್ಕೆ ಎಸೆಯುತ್ತಿದ್ದಾರೆ. ನಂತರ ಕೆಳಭಾಗದಲ್ಲಿ ಬೌಲ್ ಯೂ ಒವರ್ ಎಂದು ಬರೆದುಕೊಂಡಿದೆ.

    ಅಮುಲ್ ಈ ರೀತಿಯ ಪೋಸ್ಟ್ ಹಾಕುತ್ತಿದ್ದಂತೆ ಹಲವು ಲೈಕ್ ಗಳು ಮತ್ತು ಕಮೆಂಟ್‍ಗಳನ್ನು ಹಾಕುವ ಮೂಲಕ ಅಭಿಮಾನಿಗಳು ಪೋಸ್ಟ್ ನೋಡಿ ಖುಷಿ ಪಟ್ಟಿದ್ದಾರೆ.

    ಬೂಮ್ರಾ ಅವರ ಮದುವೆ ಸಮಾರಂಭದಲ್ಲಿ ಭಾಗಿಯಾದ ಅತಿಥಿಗಳಿಗೆ ಮೊಬೈಲ್ ಬಳಸದಂತೆ ನಿಷೇಧಿಸಲಾಗಿತ್ತು. ಕೊರೊನಾದಿಂದಾಗಿ ಮದುವೆ ಸಮಾರಂಭದಲ್ಲಿ ಕೇವಲ 20 ಜನರು ಮಾತ್ರ ಭಾಗಿಯಾಗಿದ್ದರು.