Tag: ಅಮೂಲ್ಯ

  • ಫ್ಯಾಮಿಲಿ ಜೊತೆ ಅಮೂಲ್ಯ ಕ್ಯೂಟ್ ಫೋಟೋಶೂಟ್

    ಫ್ಯಾಮಿಲಿ ಜೊತೆ ಅಮೂಲ್ಯ ಕ್ಯೂಟ್ ಫೋಟೋಶೂಟ್

    ‘ಚೆಲುವಿನ ಚಿತ್ತಾರ’ ಸಿನಿಮಾದ ನಟಿ ಅಮೂಲ್ಯ (Amulya) ಅವರು ಮಕ್ಕಳ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದಿಂದ ಅಂತರ ಕಾಯ್ದುಕೊಂಡಿರುವ ನಟಿ ಈಗ ಫ್ಯಾಮಿಲಿ ಜೊತೆಗಿನ ಕ್ಯೂಟ್ ಆಗಿರೋ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ದೀಕ್ಷಿತ್ ಶೆಟ್ಟಿ ನಿರ್ಮಾಣದ ‘ವಿಡಿಯೋ’ ಚಿತ್ರದ ಟೀಸರ್ ರಿಲೀಸ್

    ಫ್ಯಾಮಿಲಿ ಫಂಕ್ಷನ್‌ವೊಂದರಲ್ಲಿ ನಟಿ ಮಿಂಚಿದ್ದಾರೆ. ಪತಿ ಜಗದೀಶ್ (Jagadeesh) ಮತ್ತು ಅವಳಿ ಮಕ್ಕಳೊಂದಿಗೆ ಫೋಟೋಶೂಟ್ ಮಾಡಿಸಿದ್ದಾರೆ. ರೇಷ್ಮೆ ಸೀರೆಯುಟ್ಟು ಮುದ್ದಾಗಿ ಲಕ್ಷ್ಮಿಯಂತೆ ಕಂಗೊಳಿಸಿದ್ದಾರೆ ಅಮೂಲ್ಯ. ಕುಟುಂಬದ ಜೊತೆ ಹ್ಯಾಪಿ ಮೂಡ್‌ನಲ್ಲಿ ಕ್ಯಾಮೆರಾ ಪೋಸ್ ನೀಡಿದ್ದಾರೆ. ನಟಿಯ ಈ ಫೋಟೋಶೂಟ್ ನೋಡಿ ಯಾರ ಕೆಟ್ಟ ದೃಷ್ಟಿಯೂ ಈ ಕುಟುಂಬದ ಮೇಲೆ ಬೀಳದಿರಲಿ ಎಂದು ಫ್ಯಾನ್ಸ್ ಹಾರೈಸಿದ್ದಾರೆ. ಇದನ್ನೂ ಓದಿ:ಧ್ರುವ ಸರ್ಜಾಗೆ ‘ಭೈರತಿ ರಣಗಲ್’ ಡೈರೆಕ್ಟರ್ ಆ್ಯಕ್ಷನ್ ಕಟ್

    ಮದುವೆಯಾಗಿ ಇಬ್ಬರೂ ಮಕ್ಕಳಿದ್ರೂ ಅಮೂಲ್ಯಗೆ ಚಾರ್ಮ್ ಕಮ್ಮಿಯಾಗಿಲ್ಲ. ಇಂದಿಗೂ ಈ ನಟಿಯ ಮೇಲೆ ಫ್ಯಾನ್ಸ್‌ಗೆ ಕ್ರೇಜ್ ಇದೆ. ಮತ್ತೆ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡಿ ಸಿನಿಮಾ ಮಾಡಲಿ ಎಂಬುದು ಅಭಿಮಾನಿಗಳ ಆಶಯ. ನಟಿಯ ಕಡೆಯಿಂದ ಚಿತ್ರದ ಬಗ್ಗೆ ಗುಡ್ ನ್ಯೂಸ್ ಸಿಗಲಿ ಎಂದು ಕಾಯ್ತಿದ್ದಾರೆ.

     

    View this post on Instagram

     

    A post shared by Amulya (@nimmaamulya)

    ಬಾಲನಟಿಯಾಗಿ ಎಂಟ್ರಿ ಕೊಟ್ಟಿದ್ದ ಅಮೂಲ್ಯ ಅವರು 2007ರಲ್ಲಿ ಗಣೇಶ್ ನಾಯಕಿಯಾಗಿ ‘ಚೆಲುವಿನ ಚಿತ್ತಾರ’ ಚಿತ್ರದಲ್ಲಿ ನಟಿಸಿದ್ದರು. ನಾನು ನನ್ನ ಕನಸು, ಶ್ರಾವಣಿ ಸುಬ್ರಮಣ್ಯ, ಗಜಕೇಸರಿ, ಖುಷಿ ಖುಷಿಯಾಗಿ, ಮಳೆ, ಮಾಸ್ತಿ ಗುಡಿ, ಕೃಷ್ಣ ರುಕ್ಕು ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

  • ಅಮೂಲ್ಯ ಅತ್ತಿಗೆ ಸಖತ್ ಸ್ವೀಟ್- ಹೊಗಳಿದ ಭವ್ಯಾ ಗೌಡ

    ಅಮೂಲ್ಯ ಅತ್ತಿಗೆ ಸಖತ್ ಸ್ವೀಟ್- ಹೊಗಳಿದ ಭವ್ಯಾ ಗೌಡ

    ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ಸ್ಪರ್ಧಿ ಭವ್ಯಾ ಗೌಡ (Bhavya Gowda) ಅವರು ಬಿಗ್ ಬಾಸ್ ಆಟ ಮುಗಿದ್ಮೇಲೆ ಮದುವೆ, ವೃತ್ತಿ ಜೀವನದ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಇನ್ನೂ ‘ಚೆಲುವಿನ ಚಿತ್ತಾರ’ ಖ್ಯಾತಿಯ ನಟಿ ಅಮೂಲ್ಯ ಜೊತೆಗಿನ ಬಾಂಧವ್ಯದ ಬಗ್ಗೆ ಭವ್ಯಾ ಮಾತನಾಡಿದ್ದಾರೆ. ಅಮೂಲ್ಯ (Amulya) ಅತ್ತಿಗೆ ಸಖತ್ ಸ್ವೀಟ್ ಎಂದಿದ್ದಾರೆ.

    ಬಿಗ್ ಬಾಸ್‌ಗೆ ಹೋಗುವಾಗ ಜಗದೀಶ್ ಅಣ್ಣ ಮತ್ತು ಅಮೂಲ್ಯ ಅತ್ತಿಗೆ ಆಲ್ ದಿ ಬೆಸ್ಟ್ ಹೇಳಿದ್ರು. ನಾನ್ ಬಿಗ್ ಬಾಸ್‌ಗೆ ಹೋದ್ಮೇಲೆಯೂ ಅಮೂಲ್ಯ ಅತ್ತಿಗೆ ತುಂಬಾ ಸಪೋರ್ಟ್ ಮಾಡಿದ್ದಾರೆ. 2 ದಿನದಿಂದ ಅಂದುಕೊಳ್ಳುತ್ತೇಲೆ ಇದ್ದೇನೆ. ಅವರ ಮನೆಗೆ ಅಮೂಲ್ಯ ಅತ್ತಿಗೆ ಹಾಗೂ ಅಣ್ಣನ್ನು ಭೇಟಿಯಾಗಬೇಕು ಅಂತ. ಸದ್ಯದಲ್ಲೇ ಅವರನ್ನು ಭೇಟಿಯಾಗುತ್ತೇನೆ ಎಂದಿದ್ದಾರೆ. ಇದನ್ನೂ ಓದಿ:ನಾನೊಬ್ಬರಿಗೆ ಪಾರ್ಟ್ನರ್ ಆಗಿದ್ದೇನೆ: ರಿಲೇಷನ್‌ಶಿಪ್ ಬಗ್ಗೆ ಮಾತನಾಡಿದ ರಶ್ಮಿಕಾ ಮಂದಣ್ಣ

    ಇನ್ನೂ ಅಮೂಲ್ಯ ಅತ್ತಿಗೆ ಯಾವಾತ್ತೂ ಆ್ಯಕ್ಟಿಂಗ್ ಹಾಗೇ ಮಾಡು ಹೀಗೆ ಎಂದು ಸಜೇಷನ್ ಕೊಟ್ಟಿಲ್ಲ. ಆದರೆ ನೀನು ಏನು ಮಾಡುತ್ತಿದ್ದಿಯೋ ಅದು ನಿನಿಗೆ ಗೊತ್ತಿರಬೇಕು. ಕೆಲಸದಲ್ಲಿ 100% ಕೊಡು ಒಂದಿಷ್ಟು ಸಲಹೆ ಕೊಟ್ಟಿದ್ದಾರೆ. ಅಮೂಲ್ಯ ಅತ್ತಿಗೆ ಸಖತ್ ಸ್ವೀಟ್, ಅದು ಎಲ್ಲರಿಗೂ ಗೊತ್ತು. ಅವರು ಸಖತ್ ಹಂಬಲ್, ಯಾರೇ ಮನೆಗೆ ಬಂದ್ರೂ ಖುಷಿಯಿಂದ ಮಾತನಾಡಿಸುತ್ತಾರೆ. ಜಗದೀಶ್ ಅಣ್ಣ ಹೇಳ್ತಾರೆ, ನಿಮಗೆ ಏನು ಹೇಳೋದು. ನಿಮ್ಮ ಮನೆಗೆ ನೀವೇ 4 ಜನ ಗಂಡು ಮಕ್ಕಳು ಅಂತ. ನೀವು ಬೆಳೆಯುತ್ತಿರುವ ರೀತಿ ಖುಷಿಯಿದೆ ಎಂದು ಸಾಕಷ್ಟು ಬಾರಿ ಹೇಳಿದ್ದಾರೆ. ನಮ್ಮ ಒಳ್ಳೆಯದನ್ನೇ ಅವರು ಬಯಸುತ್ತಾರೆ ಎಂದು ಭವ್ಯಾ ಹೇಳಿದ್ದಾರೆ.

    ಇನ್ನೂ ಭವ್ಯಾಗೆ ಸಂಬಂಧದಲ್ಲಿ ಜಗದೀಶ್ ಅವರು ಅಣ್ಣ ಆಗಬೇಕು, ದೊಡ್ಡಪ್ಪನ ಮಗ. ಅಮೂಲ್ಯ ಅವರು ಅತ್ತಿಗೆ ಆಗುತ್ತಾರೆ.

  • ಸುಮ್ಮನಹಳ್ಳಿ ಹಿಂದೂ ರುದ್ರಭೂಮಿಯಲ್ಲಿ ನೆರವೇರಿದ ಅಮೂಲ್ಯ ಅಣ್ಣ ದೀಪಕ್ ಅಂತ್ಯಕ್ರಿಯೆ

    ಸುಮ್ಮನಹಳ್ಳಿ ಹಿಂದೂ ರುದ್ರಭೂಮಿಯಲ್ಲಿ ನೆರವೇರಿದ ಅಮೂಲ್ಯ ಅಣ್ಣ ದೀಪಕ್ ಅಂತ್ಯಕ್ರಿಯೆ

    ಸ್ಯಾಂಡಲ್‌ವುಡ್ ನಟಿ ಅಮೂಲ್ಯ (Amulya) ಸಹೋದರ ದೀಪಕ್ ಅರಸ್ (Deepak Aras) ಅವರ ಅಂತ್ಯಕ್ರಿಯೆ ಇಂದು (ಅ.18) ಸಂಜೆ ಬೆಂಗಳೂರಿನ ಸುಮ್ಮನಹಳ್ಳಿಯ ಹಿಂದೂ ರುದ್ರಭೂಮಿಯಲ್ಲಿ ನಡೆದಿದೆ. ಇದನ್ನೂ ಓದಿ:‘ಶೇರ್ಷಾ’ ಬಳಿಕ ಮತ್ತೊಂದು ಲವ್ ಸ್ಟೋರಿ ಸಿನಿಮಾದಲ್ಲಿ ಸಿದ್ಧಾರ್ಥ್, ಕಿಯಾರಾ?

    ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ಅವರು ಇಂದು (ಅ.18) ಬೆಳಗ್ಗೆ 6:04ಕ್ಕೆ ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಮದುವೆಯಾಗಿ 2 ಮಕ್ಕಳಿದ್ದರು.

    ಅಂದಹಾಗೆ, ರಾಕೇಶ್ ಅಡಿಗ ಮತ್ತು ಅಮೂಲ್ಯ ನಟಿಸಿದ್ದ ‘ಮನಸಾಲಜಿ’ ಮತ್ತು ಡಾರ್ಲಿಂಗ್ ಕೃಷ್ಣ ನಟಿಸಿದ್ದ ‘ಶುಗರ್ ಫ್ಯಾಕ್ಟರಿ’ ಚಿತ್ರಕ್ಕೆ ದೀಪಕ್ ಅರಸ್ ಆ್ಯಕ್ಷನ್ ಕಟ್ ಹೇಳಿದ್ದರು.

  • ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ ಸಹೋದರ ದೀಪಕ್‌ ಅರಸ್‌ ನಿಧನ

    ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ ಸಹೋದರ ದೀಪಕ್‌ ಅರಸ್‌ ನಿಧನ

    ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ ಅವರ ಸಹೋದರ ದೀಪಕ್‌ ಅರಸ್‌ (46) ನಿಧನರಾಗಿದ್ದಾರೆ.

    ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ದೀಪಕ್ ಕೊನೆಯುಸಿರೆಳೆದಿದ್ದಾರೆ. ಇವರು ಮನಸಾಲಜಿ, ಶುಗರ್ ಫ್ಯಾಕ್ಟರಿ ಸಿನಿಮಾಗಳನ್ನು ನಿರ್ದೇಶಿಸಿದ್ದರು.

    ಕಿಡ್ನಿ ವೈಫಲ್ಯದಿಂದ ನಿಧನರಾಗಿದ್ದಾರೆಂದು ತಿಳಿದುಬಂದಿದೆ. ದೀಪಕ್‌ ಅರಸ್‌ ಅವರಿಗೆ ಮದುವೆ ಆಗಿ ಇಬ್ಬರು ಮಕ್ಕಳಿದ್ದರು.

    ವಯಾಲಿ ಕಾವಲ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

  • ಅರ್ಧ ಗಂಟೆ ಕಾದು ವೋಟು ಮಾಡಿದೆ : ನಟಿ ಅಮೂಲ್ಯ

    ಅರ್ಧ ಗಂಟೆ ಕಾದು ವೋಟು ಮಾಡಿದೆ : ನಟಿ ಅಮೂಲ್ಯ

    ಆರ್.ಆರ್ ನಗರ ಮತ ಕೇಂದ್ರಕ್ಕೆ ಪತಿ ಸಮೇತ ಆಗಮಿಸಿದ್ದ ನಟಿ ಅಮೂಲ್ಯ (Amulya), ತಮ್ಮ ಮತದಾನದ (Voting) ಹಕ್ಕನ್ನು ಚಲಾಯಿಸಿದ್ದಾರೆ. ಸರದಿ ಸಾಲಿನಲ್ಲಿ ಅರ್ಧ ಗಂಟೆಗೂ ಹೆಚ್ಚು ನಿಂತಿದ್ದ ಅಮೂಲ್ಯ, ಆ ನಂತರ ಸಾಲಿನಲ್ಲಿ ನಿಂತಿದ್ದವರಿಗೆ ಮನವಿ ಮಾಡಿಕೊಂಡು ಬೇಗ ವೋಟು ಹಾಕಿದ್ದಾರೆ.

    ಮತದಾನದ ನಂತರ ಮಾತನಾಡಿದ ಅಮೂಲ್ಯ, ತುಂಬಾ ಕ್ಯೂ ಇದೆ. ಇಷ್ಟು ಜನ ನೋಡಿ ಖುಷಿಯಾಯ್ತು. ಮಕ್ಕಳಿರೋದ್ರಿಂದ ರಿಕ್ವೆಸ್ಟ್ ಮಾಡಿದೆ, ಬೇಗ ಬಿಟ್ರು. ಆದ್ರೂ ಅರ್ಧ ಗಂಟೆ ಇದ್ದೆ. ಇದು ನಮ್ಮ ಹಕ್ಕು. ನಾವು ವೋಟ್ ಮಾಡಲೇಬೇಕು. ಸಮಯ ವ್ಯರ್ಥ ಮಾಡದೆ, ವೋಟ್ ಮಾಡಬೇಕು. ಈ ಬಾರಿ ಹೆಚ್ಚು ಮತದಾನ ಆಗುತ್ತೆ ಅಂದ್ಕೊಂಡಿದ್ದೇನೆ ಎಂದರು.

    ಕಾಂತಾರ ಚಿತ್ರ ಖ್ಯಾತಿಯ ನಟಿ ಸಪ್ತಮಿ ಗೌಡ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಬೆಂಗಳೂರಿನ ಜೆ.ಪಿ ನಗರದಲ್ಲಿರುವ ಸೇಂಟ್ ಪೌಲ್ ಸ್ಕೂಲ್ ಗೆ ಆಗಮಿಸಿದ್ದ ಸಪ್ತಮಿ ಗೌಡ ಮತದಾನ ಮಾಡಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ಹಕ್ಕು ಚಲಾಯಿಸಿದ್ದೇನೆ. ಎಲ್ಲರೂ ತಪ್ಪದೇ ಮತದಾನ ಮಾಡಿ. ಮತದಾನ ಎಲ್ಲರ ಕರ್ತವ್ಯ ಎಂದರು.

    ಆರ್.ಆರ್ ನಗರದ ಬೂತ್ ಗೆ ಬಂದ ನಟ ಗಣೇಶ್ ಮತ್ತು ನಿರ್ಮಾಪಕಿ ಶಿಲ್ಪಾ ಗಣೇಶ್ ಮತದಾನ ಮಾಡಿ, ಮಾದರಿಯಾದರು. ದಂಪತಿ ಸಮೇತ ಬೆಳಗ್ಗೆ 7.20ಕ್ಕೆ ಆಗಮಿಸಿದ್ದ ಗಣೇಶ್ ಮತದಾನ ಮಾಡಿದರು. ಮತದಾನ ಮಾಡಿ ಮಾತನಾಡಿದ ಗಣೇಶ್, ತಪ್ಪದೇ ಎಲ್ಲರೂ ಮತದಾನದಲ್ಲಿ ಭಾಗಿಯಾಗಿ ಎಂದರು.

     

    ಆರ್.ಆರ್ ನಗರದಲ್ಲಿ ಗಣೇಶ್ ದಂಪತಿ ತಮ್ಮ ಹಕ್ಕು ಚಲಾಯಿಸಿದರೆ, ಜೆಪಿ ನಗರ ಆಕ್ಸ್ ಫರ್ಡ್ ಮತಗಟ್ಟೆಯಲ್ಲಿ ನಟ ಸುದೀಪ್ ತಾಯಿ ಸರೋಜಾ ಅವರು ಮತ ಚಲಾಯಿಸಿದರು. ನಂತರ ಸುದೀಪ್ ಕೂಡ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಲಿದ್ದಾರೆ.

  • ಶೋಲ್ಡರ್ ಲೆಸ್ ಟಾಪ್, ತುಂಡು ಜೀನ್ಸ್‌ನಲ್ಲಿ ‘ಬೃಂದಾವನ’ ನಟಿ- ದಂಗಾದ ಫ್ಯಾನ್ಸ್

    ಶೋಲ್ಡರ್ ಲೆಸ್ ಟಾಪ್, ತುಂಡು ಜೀನ್ಸ್‌ನಲ್ಲಿ ‘ಬೃಂದಾವನ’ ನಟಿ- ದಂಗಾದ ಫ್ಯಾನ್ಸ್

    ಕಿರುತೆರೆಯಲ್ಲಿ ಸಂಪ್ರದಾಯ ಪಾತ್ರಗಳಲ್ಲಿ ನಟಿಸಿದ್ದ ಬೃಂದಾವನ ನಟಿ ಸಖತ್‌ ಬೋಲ್ಡ್‌ ಆಗಿ ಕಾಣಿಸಿಕೊಳ್ಳುವ ಮೂಲಕ ಫ್ಯಾನ್ಸ್‌ಗೆ ಶಾಕ್‌ ಕೊಟ್ಟಿದ್ದಾರೆ. ಪುಷ್ಪ ಪಾತ್ರಧಾರಿ ಅವರೇನಾ ಇವರು ಎಂದು ದಂಗಾಗಿ ನೋಡ್ತಿದ್ದಾರೆ ಅಭಿಮಾನಿಗಳು. ‘ಬೃಂದಾವನ’ (Brundhavan Serial) ಸೀರಿಯಲ್ ಪುಷ್ಪ ನಟಿ ಹಾಟ್‌ ಆಗಿ ಕಾಣಿಸಿಕೊಂಡು ಎಲ್ಲರ ಹುಬ್ಬೇರಿಸಿದ್ದಾರೆ. ಇದನ್ನೂ ಓದಿ:ತಲೆಗೆ ಸೆರಗು ಸುತ್ತಿಕೊಂಡು ಘಾಟಿಗೆ ಹೊರಟ ಅನುಷ್ಕಾ ಶೆಟ್ಟಿ

    ಅಮೂಲ್ಯ ಭಾರಧ್ವಜ್ ಅವರು ಸದ್ಯ ಸೀರಿಯಲ್‌ನಲ್ಲಿ ಮೋಡಿ ಮಾಡುತ್ತಿರುವ ಚೆಲುವೆ. ಸೀರೆಯುಟ್ಟು ಮುಗ್ಧೆಯಾಗಿ ಅಪಾರ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಸೋಷಿಯಲ್ ಮೀಡಿಯಾ ಸ್ಟಾರ್ ವರುಣ್ ಆರಾಧ್ಯಗೆ (Varun Aradhya) ಜೋಡಿಯಾಗಿ ಅಮೂಲ್ಯ ಕಾಣಿಸಿಕೊಂಡಿದ್ದಾರೆ.

    ಸದಾ ಸೀರೆಯುಟ್ಟು ಕ್ಯಾಮೆರಾ ಮುಂದೆ ಬರುವ ಹುಡುಗಿ ‘ಪುಷ್ಪ’ (Pushpa) ಈಗ ಶೋಲ್ಡರ್ ಲೆಸ್ ಟಾಪ್ ಮತ್ತು ತುಂಡು ಜೀನ್ಸ್ ಧರಿಸಿ ಸಖತ್ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ನಟಿಯ ಅವತಾರ ನೋಡಿ ಇದು ಬೃಂದಾವನ ಸೀರಿಯಲ್ ನಟಿ ಪುಷ್ಪನೇನಾ? ಅಂತ ಶಾಕ್ ಆಗಿ ಫೋಟೋ ನೋಡ್ತಿದ್ದಾರೆ. ಅಭಿಮಾನಿಗಳು ಬಗೆ ಬಗೆಯ ಕಾಮೆಂಟ್ ಮಾಡುತ್ತಿದ್ದಾರೆ.

    ರೀಲ್ ಬೇರೆ ರಿಯಲ್ ಬೇರೆ ಅಲ್ಲವೇ? ನಿಜ ಜೀವನದಲ್ಲಿ ನಟಿ ಅಮೂಲ್ಯ (Amulya Bharadwaj) ಸಿಕ್ಕಾಪಟ್ಟೆ ಸ್ಟೈಲೀಶ್ ಆಗಿದ್ದಾರೆ. ರೀಲ್ ಪುಷ್ಪ ಜೊತೆ ಅಮೂಲ್ಯರನ್ನು ಹೋಲಿಕೆ ಮಾಡೋಕೆ ಆಗಲ್ಲ. ಸದ್ಯ ಶೂಟಿಂಗ್‌ಗೆ ಬ್ರೇಕ್ ಹಾಕಿ ಟ್ರಾವೆಲ್ ಮೂಡ್‌ಗೆ ನಟಿ ಜಾರಿದ್ದಾರೆ.

    ಕಡಲ ತೀರದಲ್ಲಿ ಸ್ಟೈಲೀಶ್ ಆಗಿ ನಟಿ ಕಾಣಿಸಿಕೊಂಡಿದ್ದಾರೆ. ಈ ಕುರಿತ ಸುಂದರ ಫೋಟೋಗಳನ್ನು ನಟಿ ಶೇರ್ ಮಾಡಿದ್ದಾರೆ. ಅಮೂಲ್ಯ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.‌ ಇದನ್ನೂ ಓದಿ:ಜಾಹೀರಾತಿನಲ್ಲಿ ನಟಿಸಲು 50 ಸೆಕೆಂಡಿಗೆ 5 ಕೋಟಿ ಸಂಭಾವನೆ ಪಡೆದ ನಯನತಾರಾ

    ಈ ಹಿಂದೆ ‘ದಾಸಪುರಂದರ’ ಎಂಬ ಸೀರಿಯಲ್‌ನಲ್ಲಿ ಮುಖ್ಯ ಪಾತ್ರದಲ್ಲಿ ಅಮೂಲ್ಯ ನಟಿಸಿದ್ದರು. ಈಗ ಬೃಂದಾವನ ಸೀರಿಯಲ್‌ನಲ್ಲಿ ವರುಣ್ ಆರಾಧ್ಯ ಪತ್ನಿಯ ಪಾತ್ರದಲ್ಲಿ ಅಮೂಲ್ಯ ನಟಿಸುತ್ತಿದ್ದಾರೆ.

  • ಫ್ಯಾಮಿಲಿ ಜೊತೆ ಅಮೂಲ್ಯ ಮಸ್ತ್ ಫೋಟೋಶೂಟ್

    ಫ್ಯಾಮಿಲಿ ಜೊತೆ ಅಮೂಲ್ಯ ಮಸ್ತ್ ಫೋಟೋಶೂಟ್

    ಸ್ಯಾಂಡಲ್‌ವುಡ್ ಗೋಲ್ಡನ್ ಕ್ವೀನ್ ಅಮೂಲ್ಯ (Amulya) ಅವರು ಮತ್ತೆ ಚಿತ್ರರಂಗಕ್ಕೆ ರೀ ಎಂಟ್ರಿ ಕೊಡಲು ಸಿದ್ಧರಾಗಿದ್ದಾರೆ. ಇದರ ನಡುವೆ ತಮ್ಮ ಪತಿ ಮತ್ತು ಅವಳಿ ಮಕ್ಕಳೊಂದಿಗೆ ಮಸ್ತ್ ಆಗಿ ಫೋಟೋಶೂಟ್ ಮಾಡಿದ್ದಾರೆ. ‘ಚೆಲುವಿನ ಚಿತ್ತಾರ’ (Cheluvina Chittara) ನಟಿಯ ಕುಟುಂಬದ ಸುಂದರ ಫೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.

    ಇದೀಗ ಪತಿ ಮತ್ತು ಅವಳಿ ಮಕ್ಕಳೊಂದಿಗೆ ನಟಿ ಫೋಟೋಶೂಟ್ ಮಾಡಿಸಿದ್ದಾರೆ. ಅವಳಿ ರಾಜಕುಮಾರರ ಜೊತೆ ರಾಜ ಮತ್ತು ರಾಣಿಯಾಗಿ ಅಮೂಲ್ಯ ದಂಪತಿ ಮಿಂಚಿದ್ದಾರೆ. ಇಬ್ಬರು ಮಕ್ಕಳು ಬಿಳಿ ಬಣ್ಣದ ಉಡುಗೆಯಲ್ಲಿ ಮಿಂಚಿದ್ರೆ, ಅಮೂಲ್ಯ ಕೆಂಪು ಬಣ್ಣದ ಸೀರೆಯಲ್ಲಿ ಕಂಗೊಳಿಸಿದ್ದಾರೆ. ಜಗದೀಶ್ ಬಿಳಿ ಬಣ್ಣ ಶೆರ್ವಾನಿಯಲ್ಲಿ ಕಾಣಿಸಿಕೊಂಡಿದ್ದಾರೆ. ನಟಿಯ ಫೋಟೋಶೂಟ್‌ಗೆ ಅಭಿಮಾನಿಗಳಿಂದ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ.

    ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ ಹಸೆಮಣೆ ಏರಿದ್ದ ನಟಿ ಅಮೂಲ್ಯ ಅವರು ಅಪ್ಪಟ ಗೃಹಿಣಿಯಾಗಿ ಕುಟುಂಬದ ಕಡೆ ಹೆಚ್ಚಿನ ಗಮನ ನೀಡುತ್ತಿದ್ದಾರೆ. ಅದರಲ್ಲೂ ಅವಳಿ ಮಕ್ಕಳು ಆದ್ಮೇಲಂತೂ ಮತ್ತಷ್ಟು ನಟಿ ಬ್ಯುಸಿಯಾದರು. ಈಗ ಮತ್ತೆ ತಮ್ಮ ಕೆರಿಯರ್ ಕಡೆ ನಟಿ ಮುಖ ಮಾಡಿದ್ದಾರೆ. ಇದನ್ನೂ ಓದಿ:ವಿಜಯ್ ಪಕ್ಷಕ್ಕೆ ಸೇರಿಕೊಳ್ತಾರಾ ನಟ ಸಮುದ್ರಕನಿ?

     

    View this post on Instagram

     

    A post shared by Amulya (@nimmaamulya)

    ಸದ್ಯ ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ಮುಂಬರುವ ಸಿನಿಮಾದಲ್ಲಿ ಅಮೂಲ್ಯ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಹೊಸ ಕಥೆ, ಹೊಸ ಬಗೆಯ ಪಾತ್ರದ ಮೂಲಕ ಬರಲು ತಯಾರಿ ಮಾಡಿಕೊಂಡಿದ್ದಾರೆ.

    ಅಭಿಮಾನಿಗಳ ಆಸೆಯಂತೆ ಮತ್ತೆ ನಾಯಕಿಯಾಗಿ ಬರುತ್ತಿರುವ ಅಮೂಲ್ಯ ಜಿಮ್‌ನಲ್ಲಿ ವರ್ಕೌಟ್ ಮಾಡಿ, ಬ್ಯೂಟಿ ಮತ್ತು ಫಿಟ್‌ನೆಸ್ ಹೆಚ್ಚು ಒತ್ತು ಕೊಟ್ಟಿದ್ದಾರೆ. ಮದುವೆಯಾಗಿ 2 ಮಕ್ಕಳ ತಾಯಿಯಾಗಿದ್ದರೂ ಕೂಡ ಸಂತೂರ್ ಮಮ್ಮಿಯಂತೆ ಮಿಂಚ್ತಿದ್ದಾರೆ. ಯಾವ ನಾಯಕಿಯರಿಗೂ ಕಮ್ಮಿಯಿಲ್ಲ ಈ ಅಮೂಲ್ಯ.

  • ಪ್ರಜ್ವಲ್ ದೇವರಾಜ್‌ಗೆ ಅಮೂಲ್ಯ ನಾಯಕಿ- ಯಾವ ಸಿನಿಮಾ?

    ಪ್ರಜ್ವಲ್ ದೇವರಾಜ್‌ಗೆ ಅಮೂಲ್ಯ ನಾಯಕಿ- ಯಾವ ಸಿನಿಮಾ?

    ‘ಚೆಲುವಿನ ಚಿತ್ತಾರ’ದ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿರುವ ನಟಿ ಅಮೂಲ್ಯ, ಮದುವೆ ನಂತರ ಸಿನಿಮಾ ರಂಗದಿಂದ ದೂರ ಉಳಿದಿದ್ದರು. ಇತ್ತೀಚೆಗೆ ಮತ್ತೆ ಅವರು ಸಿನಿಮಾ ರಂಗಕ್ಕೆ ಬರುವ ಕುರಿತು ಸುಳಿವು ನೀಡಿದ್ದರು. ಯಾವ ಸಿನಿಮಾ ಏನು ಎಂಬುದರ ಬಗ್ಗೆ ಇದೀಗ ಅಪ್‌ಡೇಟ್ ಸಿಕ್ಕಿದೆ. ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ಸಿನಿಮಾದಲ್ಲಿ ಗೋಲ್ಡನ್ ಕ್ವೀನ್ ನಟಿಸುತ್ತಿದ್ದಾರೆ.

    ಸಿನಿಮಾ ರಂಗಕ್ಕೆ ಅಮೂಲ್ಯ ಮತ್ತೆ ಮರು ಪ್ರವೇಶ ಮಾಡುತ್ತಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಲೇ ಇತ್ತು. ಆದರೆ, ಅದಕ್ಕೆ ಅಧಿಕೃತ ಮಾಹಿತಿ ಇರಲಿಲ್ಲ. ಕೆಲ ದಿನಗಳ ಹಿಂದೆ ಸ್ವತಃ ಅಮೂಲ್ಯ (Amulya) ಅವರೇ ಸಿನಿಮಾ ರಂಗಕ್ಕೆ ಮತ್ತೆ ಬರುವ ಕುರಿತು ಮಾತನಾಡಿದ್ದರು. ಅಭಿಮಾನಿಗಳಿಗೆ ಈ ಮೂಲಕ ಖುಷಿ ಸುದ್ದಿ ಕೊಟ್ಟಿದ್ದರು.

    ಗುರುದತ್ ಗಾಣಿಗ ನಿರ್ದೇಶನದ ‘ಕರಾವಳಿ’ (Karavali) ಸಿನಿಮಾದಲ್ಲಿ ಅಮೂಲ್ಯ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಹೀರೋಯಿನ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ:ಪ್ರತಾಪ್ ಮತ್ತು ನನ್ನದು ಅಕ್ಕ ತಮ್ಮ ಸಂಬಂಧ: ಸಂದರ್ಶನದಲ್ಲಿ ಸಂಗೀತಾ ಮಾತು

    ಪ್ರಜ್ವಲ್ ದೇವರಾಜ್ ನಟನೆಯ ಈ ಸಿನಿಮಾದಲ್ಲಿ ಅಮೂಲ್ಯಗೆ ವಿಭಿನ್ನವಾದ ಪಾತ್ರವಿದೆಯಂತೆ. ಶೀಘ್ರದಲ್ಲೇ ಅಮೂಲ್ಯ ಆಯ್ಕೆ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಳ್ಳಲಿದೆ. ಒಟ್ನಲ್ಲಿ ಅಭಿಮಾನಿಗಳ ಆಸೆಗೆ ನಿರಾಸೆ ಮಾಡದೇ ಉತ್ತಮ ಕಥೆಯ ಮೂಲಕ ನಟಿ ಸೆಕೆಂಡ್ ಇನ್ಸಿಂಗ್ಸ್ ಶುರು ಮಾಡ್ತಿದ್ದಾರೆ.

  • ಸ್ಕ್ರಿಪ್ಟ್ ಕೇಳಿದ್ದೀನಿ: ಮತ್ತೆ ಚಿತ್ರರಂಗಕ್ಕೆ ಅಮೂಲ್ಯ ಎಂಟ್ರಿ

    ಸ್ಕ್ರಿಪ್ಟ್ ಕೇಳಿದ್ದೀನಿ: ಮತ್ತೆ ಚಿತ್ರರಂಗಕ್ಕೆ ಅಮೂಲ್ಯ ಎಂಟ್ರಿ

    ಚೆಲುವಿನ ಚಿತ್ತಾರದ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ನಟಿ ಅಮೂಲ್ಯ (Amulya), ಮದುವೆ ನಂತರ ಸಿನಿಮಾ ರಂಗದಿಂದ ದೂರ ಉಳಿದಿದ್ದರು. ಇದೀಗ ಮತ್ತೆ ಅವರು ಸಿನಿಮಾ (cinema) ರಂಗಕ್ಕೆ ಬರುವ ಕುರಿತು ಸುಳಿವು ನೀಡಿದ್ದಾರೆ. ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2024ರ ಟ್ರೋಫಿ ಅನಾವರಣ ಕಾರ್ಯಕ್ರಮದಲ್ಲಿ ಈ ಕುರಿತು ಮಾತನಾಡಿದ ಅಮೂಲ್ಯ, ಆಗಲೇ ಎರಡು ಸ್ಕ್ರಿಪ್ಟ್ ಕೇಳಿದ್ದೇನೆ. ಸ್ಕ್ರಿಪ್ಟ್ ಇಷ್ಟವಾದ ತಕ್ಷಣವೇ ತಿಳಿಸುತ್ತೇನೆ ಎಂದಿದ್ದಾರೆ.

    ಸಿನಿಮಾ ರಂಗಕ್ಕೆ ಅಮೂಲ್ಯ ಮತ್ತೆ ಮರು ಪ್ರವೇಶ ಮಾಡುತ್ತಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಲೇ ಇತ್ತು. ಆದರೆ, ಅದಕ್ಕೆ ಅಧಿಕೃತತೆ ಇರಲಿಲ್ಲ. ಇಂದು ಸ್ವತಃ ಅಮೂಲ್ಯ  ಅವರೇ ಸಿನಿಮಾ ರಂಗಕ್ಕೆ ಮತ್ತೆ ಬರುವ ಕುರಿತು ಮಾತನಾಡಿದ್ದಾರೆ. ಅಭಿಮಾನಿಗಳಿಗೆ ಈ ಮೂಲಕ ಖುಷಿ ಸುದ್ದಿ ಕೊಟ್ಟಿದ್ದಾರೆ.

    ಬಾಲ್ಯದಿಂದಲೂ ನಾನು ಸಿನಿಮಾ ರಂಗದ ಜೊತೆನೇ ಬೆಳೆದೋಳು. ನನಗೆ ಸಿನಿಮಾ ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ. ಬ್ಯುಸಿನೆಸ್ ಅರ್ಥವಾಗಲ್ಲ. ಹಾಗಾಗಿ ಸಿನಿಮಾವನ್ನೇ ನಾನು ಮಾಡಬೇಕು. ಕಂಡಿತಾ ಮತ್ತೆ ಸಿನಿಮಾ ರಂಗಕ್ಕೆ ಬರ್ತೀನಿ. ಸಿನಿಮಾಗಳನ್ನು ಮಾಡುತ್ತೇನೆ. ಅತೀ ಶೀಘ್ರದಲ್ಲೇ ಎಲ್ಲವನ್ನೂ ತಿಳಿಸ್ತೀನಿ ಅಂದಿದ್ದಾರೆ ಅಮೂಲ್ಯ.

  • ದಶಕದ ಸಂಭ್ರಮಕ್ಕೆ ಜೊತೆಯಾದ ‘ಒನ್ಸ್ ಮೋರ್ ಶ್ರಾವಣಿ ಸುಬ್ರಮಣ್ಯ’

    ದಶಕದ ಸಂಭ್ರಮಕ್ಕೆ ಜೊತೆಯಾದ ‘ಒನ್ಸ್ ಮೋರ್ ಶ್ರಾವಣಿ ಸುಬ್ರಮಣ್ಯ’

    ಗೋಲ್ಡನ್ ಸ್ಟಾರ್ ಗಣೇಶ್, ಅಮೂಲ್ಯ, ಅನಂತ್ ನಾಗ್, ತಾರಾ ಹಾಗೂ ಸಾಧುಕೋಕಿಲ ಪ್ರಮುಖ ಭೂಮಿಕೆಯಲ್ಲಿದ್ದ ‘ಶ್ರಾವಣಿ ಸುಬ್ರಮಣ್ಯ’ (Shravani Subramanya) ಸಿನಿಮಾ ಬಿಡುಗಡೆಯಾಗಿ ಹತ್ತು ವರ್ಷಗಳನ್ನು ಪೂರೈಸಿದೆ. ದಶಕದ ಸಂಭ್ರಮದ ನೆನಪಿನಲ್ಲಿಯೇ “ಒನ್ಸ್ ಮೋರ್ ಶ್ರಾವಣಿ ಸುಬ್ರಮಣ್ಯ” ಸಿನಿಮಾ ಅನೌನ್ಸ್ ಮಾಡಿದ್ದಾರೆ ನಿರ್ಮಾಪಕ ಕೆ.ಎ.ಸುರೇಶ್.

    27 ಡಿಸೆಂಬರ್ 2013 ರಲ್ಲಿ ತೆರೆಕಂಡಿದ್ದ ಶ್ರಾವಣಿ ಸುಬ್ರಮಣ್ಯ, ಸೂಪರ್ ಹಿಟ್ ಆಗುವ ಮೂಲಕ ಎಲ್ಲರಿಗೂ ಬ್ರೇಕ್ ಕೊಟ್ಟಿತ್ತು. ಗಣೇಶ್ – ಅಮೂಲ್ಯ ಜೋಡಿಯ ಎಲ್ಲರೂ ನೋಡಿ ಮೆಚ್ಚಿಕೊಂಡಿದ್ದರಿಂದ ಸಿನಿಮಾ ಶತಕ ಪೂರೈಸುವಲ್ಲಿ ಯಶಸ್ವಿಯಾಯಿತು. ಇದೀಗ ಸುರೇಶ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಒನ್ಸ್ ಮೋರ್ ಶ್ರಾವಣಿ ಸುಬ್ರಮಣ್ಯ ಅಧಿಕೃತವಾಗಿ ಘೋಷಣೆಯಾಗಿದೆ. ಸದ್ಯ ಹರಿಬಿಟ್ಟಿರುವ ಕಲರ್ ಫುಲ್ ಪೋಸ್ಟರ್ ಸಿನಿಮಾ ಮೇಲೆ ಕೂತುಹಲ ಮಾಡುವಂತಿದೆ. ಶ್ರಾವಣಿ ಸುಬ್ರಮಣ್ಯ ಗೆದ್ದಿರುವುದರಿಂದ ಒನ್ಸ್ ಮೋರ್ ಶ್ರಾವಣಿ ಸುಬ್ರಮಣ್ಯ ಜೋಡಿ ಮೋಡಿ ಮಾಡಲಿದೆ ಎಂಬುದು ಪೋಸ್ಟರ್ ನೋಡಿದವರ ಅನಿಸಿಕೆ.

    ಮಂಜು ಸ್ವರಾಜ್ ಅವರೇ ಹೊಸ ಶ್ರಾವಣಿ ಸುಬ್ರಮಣ್ಯ ಜೋಡಿಗೂ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಉಳಿದಂತೆ ಕಲಾವಿದರ ಆಯ್ಕೆಗಾಗಿ ಆಡಿಷನ್ ಕರೆದಿದೆ ಚಿತ್ರತಂಡ. ಇದೊಂದು ಯೂತ್ ಫುಲ್ ಲವ್ ಕಮ್ ಫ್ಯಾಮಿಲಿ ಸ್ಟೋರಿ ಆಗಿರುವುದರಿಂದ ಚಿತ್ರದ ನಾಯಕ, ನಾಯಕಿ ಪಾತ್ರಕ್ಕೆ ಹುಡುಕಾಟ ಶುರುವಾಗಿದೆ. 20 ವರ್ಷದ ಆಸುಪಾಸು ಇದ್ದವರು ಹೊಸ ಶ್ರಾವಣಿ ಸುಬ್ರಮಣ್ಯ ಜೋಡಿಯಾಗಲು ಅರ್ಜಿ ಸಲ್ಲಿಸಬಹುದು.

     

    ಎಲ್ಲಾ ಅಂದುಕೊಂಡಂತೆ ನಡೆದರೆ ಹೊಸ ವರ್ಷದಲ್ಲಿ ಹೊಸ ಶ್ರಾವಣಿ ಸುಬ್ರಮಣ್ಯ ಲವ್ ಕಹಾನಿ ಶುರುವಾಗಲಿದೆ. ಉಳಿದ ಪಾತ್ರವರ್ಗ ಹಾಗೂ ತಾಂತ್ರಿಕ ವರ್ಗದ ಕುರಿತು ಸದ್ಯದಲ್ಲೇ ಮಾಹಿತಿ ಹಂಚಿಕೊಳ್ಳಲಿದೆ ಚಿತ್ರತಂಡ.