Tag: ಅಮೂಲ್ಯ ಜಗದೀಶ್

  • ಅವಳಿ ಮಕ್ಕಳ ಮುದ್ದಾದ ಫೋಟೋ ಹಂಚಿಕೊಂಡ ಅಮೂಲ್ಯ

    ಅವಳಿ ಮಕ್ಕಳ ಮುದ್ದಾದ ಫೋಟೋ ಹಂಚಿಕೊಂಡ ಅಮೂಲ್ಯ

    ಸ್ಯಾಂಡಲ್‌ವುಡ್ (Sandalwood) ನಟಿ ಅಮೂಲ್ಯ (Amulya) ಮದುವೆ, ಸಂಸಾರ, ಅವಳಿ ಮಕ್ಕಳ ಆರೈಕೆ ಅಂತಾ ಬ್ಯುಸಿಯಾಗಿದ್ದಾರೆ. ಈ ನಡುವೆ ಅವಳಿ ಮಕ್ಕಳ ಮುದ್ದಾದ ಫೋಟೋಶೂಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 2ನೇ ಮದುವೆ ಸುದ್ದಿಗೆ ಸ್ಪಷ್ಟನೆ ನೀಡಿದ ಕಿರುತೆರೆ ನಟಿ ಸ್ವಾತಿ

    ಬಾಲನಟಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ, `ಚೆಲುವಿನ ಚಿತ್ತಾರ’ (Cheluvina Chittara) ಸಿನಿಮಾ ಮೂಲಕ ನಾಯಕಿಯಾಗಿ ಎಂಟ್ರಿ ಕೊಟ್ಟರು. ಸ್ಟಾರ್ ನಟರ ಜೊತೆ ನಾಯಕಿಯಾಗಿ ಮಿಂಚಿದರು. ಬೇಡಿಕೆ ಇರುವಾಗಲೇ ಜಗದೀಶ್ ಜೊತೆ ಅಮೂಲ್ಯ ಹಸೆಮಣೆ ಏರಿದ್ದರು.

     

    View this post on Instagram

     

    A post shared by Atharv & Aadhav (@atharv.aadhav)

    ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಇರುವ ಅಮೂಲ್ಯ ಜಗದೀಶ್ ಅವರು ಮುದ್ದು ಮಕ್ಕಳ ಬಗೆ ಬಗೆಯ ರೀತಿಯ ಫೋಟೋಶೂಟ್ ಮಾಡಿಸಿದ್ದಾರೆ. ಅಥರ್ವ್- ಆಧವ್ ಈ ಮುದ್ದು ಮಕ್ಕಳ ಹೊಸ ಫೋಟೋಸ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

     

    View this post on Instagram

     

    A post shared by Atharv & Aadhav (@atharv.aadhav)

    ಪ್ರತಿಭಾನ್ವಿತ ನಟಿ ಅಮೂಲ್ಯ ಸಿನಿಮಾಗೆ ಕಂಬ್ಯಾಕ್ ಮಾಡಲಿ ಅಂತಾ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಸಿನಿಮಾ ಬಗ್ಗೆ ಗುಡ್ ನ್ಯೂಸ್ ಕೊಡುತ್ತಾರಾ? ಎಂಬುದನ್ನ ಕಾದುನೋಡಬೇಕಿದೆ.

  • ಹೊಸ ಫೋಟೋಶೂಟ್‌ನಲ್ಲಿ ಮಹಾಲಕ್ಷ್ಮಿಯಂತೆ ಕಂಗೊಳಿಸಿದ ನಟಿ ಅಮೂಲ್ಯ

    ಹೊಸ ಫೋಟೋಶೂಟ್‌ನಲ್ಲಿ ಮಹಾಲಕ್ಷ್ಮಿಯಂತೆ ಕಂಗೊಳಿಸಿದ ನಟಿ ಅಮೂಲ್ಯ

    ಸ್ಯಾಂಡಲ್‌ವುಡ್ (Sandalwood) ಬ್ಯೂಟಿ ಅಮೂಲ್ಯ (Amulya)  ವೈವಾಹಿಕ ಬದುಕಿನಲ್ಲಿ ಖುಷಿಯಾಗಿದ್ದಾರೆ. ಮದುವೆ, ಸಂಸಾರ ಅಂತಾ ನಟಿ ಬ್ಯುಸಿಯಾಗಿದ್ದಾರೆ. ಇದೀಗ ಟ್ರಡಿಷನಲ್ ಫೋಟೋಶೂಟ್‌ನಿಂದ ಗೋಲ್ಡನ್ ಕ್ವೀನ್ ಅಮೂಲ್ಯ ಮಿಂಚಿದ್ದಾರೆ.

    ಬಾಲನಟಿಯಾಗಿ ಪಾದಾರ್ಪಣೆ ಮಾಡಿ, ಚಂದನವನದಲ್ಲಿ ನಾಯಕಿಯಾಗಿ `ಚೆಲುವಿನ ಚಿತ್ತಾರ’ (Cheluvina Chittara) ಸಿನಿಮಾದಿಂದ ಅಮೂಲ್ಯ ಗಮನ ಸೆಳೆದರು. ಬಳಿಕ ಗಜಕೇಸರಿ, ಮಳೆ, ನಾನು ನನ್ನ ಕನಸು ಹೀಗೆ ಸಾಕಷ್ಟು ಚಿತ್ರದಲ್ಲಿ ನಾಯಕಿಯಾಗಿ ಮಿಂಚಿದ್ದರು. ಇದನ್ನೂ ಓದಿ:ಮೊದಲ ಪ್ಯಾನ್ ಇಂಡಿಯಾ ಮಕ್ಕಳ ಚಿತ್ರಕ್ಕೆ ರಾಗಿಣಿ ದ್ವಿವೇದಿ ಸಾಥ್

     

    View this post on Instagram

     

    A post shared by Amulya (@nimmaamulya)

    ಬೇಡಿಕೆಯಿರುವಾಗಲೇ ಜಗದೀಶ್ (Jagadeesh) ಜೊತೆ ಅಮೂಲ್ಯ ಹಸೆಮಣೆ (Wedding) ಏರಿದ್ದರು. ಈಗ ನಟಿ ಅವಳಿ ಮಕ್ಕಳ ಆರೈಕೆಯತ್ತ ಗಮನ ಕೊಡ್ತಿದ್ದಾರೆ. ಯುಗಾದಿ ಹಬ್ಬದಂದು (ಮಾ.22) ಕೇಸರಿ ಬಣ್ಣದ ಸೀರೆಯುಟ್ಟು ಮುದ್ದಾಗಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಹಬ್ಬದ ದಿನದಂದು ಚೆಂದದ ಫೋಟೋವನ್ನ ಅಪ್‌ಲೋಡ್‌ ಮಾಡಿದ್ದಾರೆ.

    ಇನ್ನೂ ಮತ್ತೆ ಸಿನಿಮಾಗೆ ಅಮೂಲ್ಯ ಬರಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ. ಒಂದೊಳ್ಳೆ ಕಥೆ ಸಿಕ್ಕರೆ ಖಂಡಿತಾ ಮಾಡ್ತೀನಿ ಎಂದು ಅಮೂಲ್ಯ ಕೂಡ ಹಲವು ಕಾರ್ಯಕ್ರಮಗಳಲ್ಲಿ ತಿಳಿಸಿದ್ದಾರೆ.

  • ಘಾಟಿ ಸುಬ್ರಹ್ಮಣ್ಯಕ್ಕೆ ಅಮೂಲ್ಯ ದಂಪತಿ ಭೇಟಿ

    ಘಾಟಿ ಸುಬ್ರಹ್ಮಣ್ಯಕ್ಕೆ ಅಮೂಲ್ಯ ದಂಪತಿ ಭೇಟಿ

    ಚಿತ್ರರಂಗದಲ್ಲಿ (Kannada Films) ಗೋಲ್ಡನ್ ಕ್ವೀನ್ ಆಗಿ ಮಿಂಚಿದ್ದ ಅಮೂಲ್ಯ (Amulya) ಈಗ ಮದುವೆ, ಸಂಸಾರ, ಮಕ್ಕಳು ಅಂತಾ ಬ್ಯುಸಿಯಾಗಿದ್ದಾರೆ. ಸದ್ಯ ಅವಳಿ ಮಕ್ಕಳೊಂದಿಗೆ ಘಾಟಿ ಸುಬ್ರಹ್ಮಣ್ಯಕ್ಕೆ (Ghati Subramanya) ಅಮೂಲ್ಯ ಮತ್ತು ಜಗದೀಶ್ ಭೇಟಿ ನೀಡಿದ್ದಾರೆ.

    ಸ್ಟಾರ್ ನಟಿಯಾಗಿ ಮಿಂಚ್ತಿದ್ದ ಅಮೂಲ್ಯ ಬೇಡಿಕೆಯಿರುವಾಗಲೇ ಜಗದೀಶ್ ಜೊತೆ ಹಸೆಮಣೆ ಏರಿದ್ದರು. ಈಗ ಅವಳಿ ಮಕ್ಕಳ ತಾಯಿಯಾಗಿ ಅವರ ಆರೈಕೆಯಲ್ಲಿ ನಟಿ ಫುಲ್ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೇ ಅವಳಿ ಮಕ್ಕಳಿಗೆ ಅದ್ದೂರಿಯಾಗಿ ನಾಮಕರಣ ಮಾಡಿದ್ದರು. ಇದನ್ನೂ ಓದಿ: `ಧಮಾಕ’ ಸಕ್ಸಸ್ ನಂತರ ಕನ್ನಡತಿ ಶ್ರೀಲೀಲಾಗೆ ತೆಲುಗಿನಲ್ಲಿ ಡಿಮ್ಯಾಂಡ್

    ಅಮೂಲ್ಯ ಅವರು ಕುಟುಂಬದ ಜೊತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಘಾಟಿಗೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದ ವೇಳೆ ಕೆಲ ಸಮಯ ಆವರಣದಲ್ಲಿ ಕುಳಿತುಕೊಂಡಿದ್ದರು. ಬಳಿಕ ಕುಟುಂಬದ ಜೊತೆ ಸೇರಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

    ಅಮೂಲ್ಯ ಅವರನ್ನು ನೋಡಿದ ಸಂತಸದಲ್ಲಿ ಫ್ಯಾನ್ಸ್ ಅವರನ್ನು ಭೇಟಿ ಮಾಡಲು ಮುಗಿಬಿದ್ದಿದ್ದಾರೆ. ಸೆಲ್ಫಿಗಾಗಿ ತೆಗೆದುಕೊಂಡು ನಟಿಯ ಜೊತೆ ಸಂಭ್ರಮಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಮೂಲ್ಯ ಅವಳಿ ಮಕ್ಕಳಿಗೆ ಆಶೀರ್ವದಿಸಿದ ಸಾಲು ಮರದ ತಿಮ್ಮಕ್ಕ

    ಅಮೂಲ್ಯ ಅವಳಿ ಮಕ್ಕಳಿಗೆ ಆಶೀರ್ವದಿಸಿದ ಸಾಲು ಮರದ ತಿಮ್ಮಕ್ಕ

    ಗೋಲ್ಡನ್ ಕ್ವೀನ್ ಅಮೂಲ್ಯ (Amulya) ಇತ್ತೀಚೆಗಷ್ಟೇ ತಮ್ಮ ಅವಳಿ ಮಕ್ಕಳ ನಾಮಕರಣ ಮಾಡಿದ್ದರು. ಇದೀಗ ನಟಿ ಅಮೂಲ್ಯ ಮನೆಗೆ ಸಾಲು ಮರದ ತಿಮ್ಮಕ್ಕ (Salu Marada Thimmakka) ಭೇಟಿ ನೀಡಿ, ಅಮೂಲ್ಯ ಮಕ್ಕಳಿಗೆ ಶುಭಹಾರೈಸಿದ್ದಾರೆ.

    ನಟಿ ಅಮೂಲ್ಯ ಚಿತ್ರರಂಗದಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ಗಮನ ಸೆಳೆದಿದ್ದರು. ಫೇಮ್ ಇರೋವಾಗಲೇ ಜಗದೀಶ್ (Jagadeesh) ಜೊತೆ ಹಸೆಮಣೆ ಏರಿದ್ದರು. ನಟನೆಯಿಂದ ದೂರ ಸರಿದು, ಸಂಸಾರ, ಮಕ್ಕಳ ಆರೈಕೆ ಅಂತಾ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಅವಳಿ ಮಕ್ಕಳಿಗೆ ಅದ್ದೂರಿಯಾಗಿ ನಾಮಕರಣ ಮಾಡಿದ್ದರು. ಅಥರ್ವ್ ಮತ್ತು ಆಧವ್ ಎಂದು ಹೆಸರಿಟ್ಟಿದ್ದಾರೆ.

     

    View this post on Instagram

     

    A post shared by Jagdish R Chandra (@jagdishrchandra)

    ಇದೀಗ ನಟಿ ಅಮೂಲ್ಯ ಸ್ವಗೃಹಕ್ಕೆ ವೃಕ್ಷ ಮಾತೆ ಸಾಲು ಮರ ತಿಮ್ಮಕ್ಕ ಭೇಟಿ ನೀಡಿದ್ದಾರೆ. ಅಮೂಲ್ಯ ಮಕ್ಕಳಿಗೆ ಶುಭಹಾರೈಸಿದ್ದಾರೆ. ಪದ್ಮಶ್ರೀ ಪ್ರಶಸ್ತಿ ವಿಜೇತೆ ತಿಮ್ಮಕ್ಕನವರು ಹಾರೈಸಿದ ಕ್ಷಣದ ತುಣುಕುಗಳನ್ನ ಅಮೂಲ್ಯ ಪತಿ ಜಗದೀಶ್ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಇಬ್ಬರು ಫೈನಲಿಸ್ಟ್ ಹೆಸರು ಘೋಷಿಸಿದ ಕಿಚ್ಚ ಸುದೀಪ್

    ಅವರ ಆಗಮನ ಖುಷಿ ಕೊಟ್ಟಿದೆ ಎಂದು ಕೂಡ ಜಗದೀಶ್ ಬರೆದುಕೊಂಡಿದ್ದಾರೆ. ಈ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರಿನ ಚುಮು ಚುಮು ಚಳಿಗೆ ವಾಟ್ ಎ ವೆದರ್ ಎಂದ ಅಮೂಲ್ಯ

    ಬೆಂಗಳೂರಿನ ಚುಮು ಚುಮು ಚಳಿಗೆ ವಾಟ್ ಎ ವೆದರ್ ಎಂದ ಅಮೂಲ್ಯ

    ಸ್ಯಾಂಡಲ್‌ವುಡ್ (Sandalwood) ನಟಿ ಅಮೂಲ್ಯ (Amulya) ಇತ್ತೀಚೆಗಷ್ಟೇ ಮುದ್ದು ಮಕ್ಕಳ ನಾಮಕರಣ ಮಾಡಿ ಸುದ್ದಿಯಲ್ಲಿದ್ದರು. ಇದೀಗ ಸಿಲಿಕಾನ್ ಸಿಟಿಯ ಚುಮು ಚುಮು ಚಳಿಗೆ ವಾಟ್ ಎ ವೆದರ್ ಎಂದಿದ್ದಾರೆ. ಕೂಲ್ ವೆದರ್‌ನಲ್ಲಿ ನಟಿ ಚೆಂದದ ಫೋಟೋಶೂಟ್‌ ಮಾಡಿಸಿದ್ದಾರೆ. ಈ ಫೋಟೋ ಸೋಷಿಯಲ್‌ ಮೀಡಿಯಾ ಸದ್ದು ಮಾಡ್ತಿದೆ.

    ಗೋಲ್ಡನ್ ಕ್ವೀನ್ ಅಮೂಲ್ಯ (Golden Queen Amulya) ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ. ಸೈಕ್ಲೋನ್ ಎಫೆಕ್ಟ್ ಬೆಂಗಳೂರಿಗೂ ತಟ್ಟಿದೆ. ಸಿಟಿಯಲ್ಲಿ ಸಿಕ್ಕಾಪಟ್ಟೆ ಚಳಿಯಿದೆ. ಜಿಟಿ ಜಿಟಿ ಮಳೆ ಕೂಡ ಆರ್ಭಟಿಸುತ್ತಿದೆ. ಸೂಪರ್ ವಾತಾವರಣ ನಿರ್ಮಾಣವಾಗಿದೆ. ಈ ವೇಳೆ ಕೂಲ್ ಕೂಲ್ ವೆದರ್‌ನಲ್ಲಿ ಅಮೂಲ್ಯ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

     

    View this post on Instagram

     

    A post shared by Amulya (@nimmaamulya)

    ಚಳಿ ಮಳೆಯಿಂದ ಬೆಂಗಳೂರು ಕೂಲ್ ಆಗಿದೆ. ವಾಟ್ ಎ ವೆದರ್ ಸೂಪರ್ ಬೆಂಗಳೂರು ಎಂದು ನಟಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಗಿಳಿ ಹಸಿರು ಚಕ್ಸ್ ಡ್ರೆಸ್‌ನಲ್ಲಿ ನಟಿ ಕ್ಯಾಮೆರಾ ಕಣ್ಣಿಗೆ ಕ್ಯೂಟ್ ಆಗಿ ಪೋಸ್ ನೀಡಿದ್ದಾರೆ. ನಟಿಯ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಇದನ್ನೂ ಓದಿ:ಹಿರಿಯ ನಟ ಶರತ್‌ಕುಮಾರ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

    ಬಂಗಾಳಕೊಲ್ಲಿಯಲ್ಲಿ ಮ್ಯಾಂಡಸ್ ಚಂಡಮಾರುತ ಸೃಷ್ಟಿಯಾಗಿದ್ದು, ಚೆನ್ನೈ ಸೇರಿದಂತೆ ತಮಿಳುನಾಡಿನ  ಹಲವೆಡೆ ಮಳೆ ಆರ್ಭಟಿಸುತ್ತಿದೆ. ಈ ಪರಿಣಾಮ ಕರ್ನಾಟಕದ ಹಲವು ಕಡೆ ಚಳಿ ಮತ್ತು ಮಳೆ ಜೋರಾಗಿದೆ.

    Live Tv
    [brid partner=56869869 player=32851 video=960834 autoplay=true]

  • ತಿರುಪತಿಯಲ್ಲಿ ಅವಳಿ ಮಕ್ಕಳ ಮುಡಿ ಕೊಟ್ಟ ಅಮೂಲ್ಯ ಜಗದೀಶ್ ದಂಪತಿ

    ತಿರುಪತಿಯಲ್ಲಿ ಅವಳಿ ಮಕ್ಕಳ ಮುಡಿ ಕೊಟ್ಟ ಅಮೂಲ್ಯ ಜಗದೀಶ್ ದಂಪತಿ

    ಸ್ಯಾಂಡಲ್‌ವುಡ್(Sandalwood) ಗೋಲ್ಡನ್ ಕ್ವೀನ್ ಅಮೂಲ್ಯ(Actree Amulya) ತಾಯ್ತನದ ಖುಷಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಅವಳಿ ಮಕ್ಕಳ ನಾಮಕರಣವನ್ನ ಅದ್ದೂರಿಯಾಗಿ ಮಾಡಿದ್ದರು. ಈ ಬೆನ್ನಲ್ಲೇ ಅವಳಿ ಮಕ್ಕಳ ಮುಡಿ ಅಮೂಲ್ಯ ಮುಡಿ ಕೊಟ್ಟಿದ್ದಾರೆ.

    `ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ಸಂಚಲನ ಮೂಡಿಸಿದ್ದ ನಟಿ ಅಮೂಲ್ಯ ಇದೀಗ ಸಂಸಾರಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗೆ ಬ್ರೇಕ್ ಹಾಕಿ, ಮದುವೆ, ಪತಿ ಮತ್ತು ಮಕ್ಕಳು ಅಂತಾ ಬ್ಯುಸಿಯಾಗಿದ್ದಾರೆ. ಇದೀಗ ಇಡೀ ಕುಟುಂಬ ಸಮೇತ ತಿರುಪತಿಗೆ ತೆರಳಿದ್ದಾರೆ. ನಾಮಕರಣ ಆಗಿ ಕೆಲವೇ ದಿನಗಳಲ್ಲಿ ಅಮೂಲ್ಯಾ ಮತ್ತು ಜಗದೀಶ್ ದಂಪತಿ ಮಕ್ಕಳ ಮುಡಿ ಕೊಟ್ಟಿದ್ದಾರೆ. ಇದನ್ನೂ ಓದಿ:ಕನ್ನಡತಿ ಅನುಷಾ ಶೆಟ್ಟಿ ಜೊತೆ ಹಸೆಮಣೆ ಏರಿದ ತೆಲುಗು ನಟ ನಾಗಶೌರ್ಯ

    ಹೊಸ ಲುಕ್‌ಲ್ಲಿ ಕಾಣಿಸಿಕೊಂಡಿರುವ ಅಥರ್ವ್ ಮತ್ತು ಆಧವ್ ಜೊತೆ ಇಡೀ ಕುಟುಂಬ ಕ್ಯಾಮರಾಗೆ ಪೋಸ್ ನೀಡಿದೆ. ಅಥರ್ವ ಮತ್ತು ಆಧವ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ತಿರುಪತಿ ದೇವ್ಥಾನದ ಮುಂದೆ ನಿಂತು ಕ್ಯಾಮರಾಗೆ ಪೋಸ್ ನೀಡಿರುವ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅ ಅಕ್ಷರದಿಂದಲೇ ಮಕ್ಕಳಿಗೆ ಮುದ್ದಾದ ಹೆಸರಿಟ್ಟ ಅಮೂಲ್ಯ

    ಅ ಅಕ್ಷರದಿಂದಲೇ ಮಕ್ಕಳಿಗೆ ಮುದ್ದಾದ ಹೆಸರಿಟ್ಟ ಅಮೂಲ್ಯ

    ಗೋಲ್ಡನ್ ಕ್ವೀನ್ ಅಮೂಲ್ಯ(Amulya) ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಇಬ್ಬರು ಮುದ್ದು ಮಕ್ಕಳ ನಾಮಕರಣದ ಸಂಭ್ರಮದಲ್ಲಿದ್ದಾರೆ. ನಟಿ ಅಮೂಲ್ಯ ಜಗದೀಶ್ ಅವರ ಅವಳಿ ಮಕ್ಕಳಿಗೆ ನಾಮಕರಣಕ್ಕೆ ಇಡೀ ಸ್ಯಾಂಡಲ್‌ವುಡ್(Sandalwood) ಸಾಕ್ಷಿಯಾಗಿದೆ.

    ಚಂದನವನದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಯಾಗಿ ಮಿಂಚಿದ ಗೋಲ್ಡನ್ ನಟಿ ಅಮೂಲ್ಯ ಮದುವೆ, ಸಂಸಾರ, ಮಕ್ಕಳು ಎಂದು ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ:ಭಾರತಕ್ಕೆ ಬೈ ಹೇಳಿದ ಬೆನ್ನಲ್ಲೇ ಕ್ರಿಸ್‌ಮಸ್‌ಗೆ ಪ್ರಿಯಾಂಕಾ ಚೋಪ್ರಾ ತಯಾರಿ

    ಕೆಲ ತಿಂಗಳುಗಳ ಹಿಂದೆ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಅಮೂಲ್ಯ ಜಗದೀಶ್(Amulya Jagadeesh) ದಂಪತಿ ಅವಳಿ ಮಕ್ಕಳಿಗೆ (ನ.10) ನಾಮಕರಣ ಶಾಸ್ತ್ರ ಮಾಡಿದ್ದಾರೆ. ಮಕ್ಕಳಿಗೆ ಅಥರ್ವ್ ಮತ್ತು ಆಧವ್ ಎಂದು ಮುದ್ದಾದ ಹೆಸರನ್ನ ಇಟ್ಟಿದ್ದಾರೆ.

    ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್ ಎಂಬ ಭಿನ್ನ ಹೆಸರನ್ನ ಇಟ್ಟಿದ್ದಾರೆ. ಇನ್ನೂ ಈ ಅದ್ದೂರಿ ಕಾರ್ಯಕ್ರಮಕ್ಕೆ ಸ್ಯಾಂಡಲ್‌ವುಡ್ ತಾರೆಯರು, ಆಪ್ತರು ಸಾಕ್ಷಿಯಾಗಿದ್ದಾರೆ. ಮುದ್ದಾದ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಮೂಲಕ ಫ್ಯಾನ್ಸ್ ಶುಭಹಾರೈಸಿದ್ದಾರೆ.

    ಅಮೂಲ್ಯ ಮಕ್ಕಳ ನಾಮಕರಣಕ್ಕೆ ಶಿವರಾಜ್‌ಕುಮಾರ್ ದಂಪತಿ, ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ದಂಪತಿ, ಲವ್ಲೀ ಸ್ಟಾರ್ ಪ್ರೇಮ್ ಕುಟುಂಬ, ಹಿರಿಯ ನಟಿ ತಾರಾ, ಆಲ್ ಓಕೆ, ಅಜಯ್ ರಾವ್, ಧ್ರುವಾ ಸರ್ಜಾ, ಸೋನು ಗೌಡ, ಗೋಲ್ಡನ್‌ ಸ್ಟಾರ್‌ ಗಣೇಶ್‌,  ಹೀಗೆ ಸಾಕಷ್ಟು ತಾರೆಯರು ಈ ಸಂಭ್ರಮಕ್ಕೆ ಸಾಕ್ಷಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅವಳಿ ಮಕ್ಕಳೊಂದಿಗೆ ಅಣ್ಣಮ್ಮ ದೇವಸ್ಥಾನಕ್ಕೆ ನಟಿ ಅಮೂಲ್ಯ ಭೇಟಿ

    ಅವಳಿ ಮಕ್ಕಳೊಂದಿಗೆ ಅಣ್ಣಮ್ಮ ದೇವಸ್ಥಾನಕ್ಕೆ ನಟಿ ಅಮೂಲ್ಯ ಭೇಟಿ

    ಸ್ಯಾಂಡಲ್‌ವುಡ್ ಗೋಲ್ಡನ್ ಕ್ವೀನ್ ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಮೂರು ತಿಂಗಳು ಸಮೀಪಿಸುತ್ತಿದೆ ಎಂದು ಬೆಂಗಳೂರಿನ ಅಣ್ಣಮ್ಮ ದೇಗುಲಕ್ಕೆ ಭೇಟಿ ನೀಡಿ, ದೇವಿದೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    `ಚೆಲುವಿನ ಚಿತ್ತಾರ’ ಚಿತ್ರದ ಮೂಲಕ ನಾಯಕಿಯಾಗಿ ಜನಮನಗೆದ್ದ ನಟಿ ಅಮೂಲ್ಯ, ಸಾಕಷ್ಟು ಚಿತ್ರಗಳ ಮೂಲಕ ಸ್ಟಾರ್‌ಗಳ ಜತೆ ನಟಿಸಿ ಸೈ ಎನಿಸಿಕೊಂಡವರು. ಬೇಡಿಕೆ ಇರುವಾಗಲೇ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡು ಮದುವೆ ಸಂಸಾರ ಅಂತಾ ಬ್ಯುಸಿಯಾಗಿ ಬಿಟ್ಟರು. ಇದೀಗ ಪತಿ ಜಗದೀಶ್ ಚಂದ್ರ ಮತ್ತು ಅವಳಿ ಗಂಡು ಮಕ್ಕಳೊಂದಿಗೆ ಅಣ್ಣಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ರಜನಿಕಾಂತ್ ನನ್ನ ವೈರಿಯಲ್ಲ ಎಂದ ಕಮಲ್ ಹಾಸನ್

    ಇಂದು ನಮ್ಮ ಮಕ್ಕಳಿಗೆ ಮೂರು ತಿಂಗಳು ಸಮೀಪಿಸುತ್ತಿರುವ ಶುಭ ಸಂದರ್ಭದಲ್ಲಿ, ಗಾಂಧಿನಗರದ ಮೆಜೆಸ್ಟಿಕ್‌ನಲ್ಲಿರುವ ನಗರ ದೇವತೆ, ಬೆಂಗಳೂರು ತಾಯಿ ಶ್ರೀ ಅಣ್ಣಮ್ಮ ದೇವಿಯ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ, ಪೂಜೆ ಸಲ್ಲಿಸಿ ದೇವಿಯ ಆರ್ಶೀವಾದ ಪಡೆಯಲಾಯಿತು ಎಂದು ನಟಿ ಅಮೂಲ್ಯ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

  • ಗೋಲ್ಡನ್ ಕ್ವೀನ್ ತಾಯ್ತನದ ಜರ್ನಿಗೆ ಎರಡು ತಿಂಗಳು: ಅಮೂಲ್ಯ ಭಾವನಾತ್ಮಕ ಮಾತು

    ಗೋಲ್ಡನ್ ಕ್ವೀನ್ ತಾಯ್ತನದ ಜರ್ನಿಗೆ ಎರಡು ತಿಂಗಳು: ಅಮೂಲ್ಯ ಭಾವನಾತ್ಮಕ ಮಾತು

    ಸ್ಯಾಂಡಲ್‌ವುಡ್ ಗೋಲ್ಡನ್ ಕ್ವೀನ್ ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ತಾಯಿಯಾಗಿ ತಾಯ್ತನದ ಖುಷಿಯನ್ನು ಅನುಭವಿಸುತ್ತಿದ್ದಾರೆ. ಎರಡು ತಿಂಗಳ ತಾಯ್ತನದ ಖುಷಿಯಲ್ಲಿ ಈ ಹಿಂದಿನ ತಮ್ಮ ಬೇಬಿ ಬಂಪ್ ಫೋಟೋಶೂಟ್‌ನ ಈಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    `ಚೆಲುವಿನ ಚಿತ್ತಾರ’ ಚಿತ್ರದ ಮೂಲಕ ಚಂದನವನಕ್ಕೆ ಪರಿಚಿತರಾದ ನಟಿ ಅಮೂಲ್ಯ, ಸಾಕಷ್ಟು ಸಿನಿಮಾಗಳ ಮೂಲಕ ಛಾಪು ಮೂಡಿಸಿದ್ರು. ಬಳಿಕ ಜಗದೀಶ್ ಆರ್ ಚಂದ್ರ ಅವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ಚಿತ್ರರಂಗದಿಂದ ಅಂತರ ಕಾಯ್ದುಕೊಂಡ್ರು. ಈಗ ಸಂಸಾರ, ತಮ್ಮ ಅವಳಿ ಮಕ್ಕಳ ಜತೆ ಖುಷಿಯಿಂದ ಕಾಲಕಳೆಯುತ್ತದ್ದಾರೆ. ಇದೀಗ ಅಮೂಲ್ಯ ತಮ್ಮ ಬೇಬಿ ಬಂಪ್ ಫೋಟೋಶೂಟ್ ಜತೆಗೆ ತಮ್ಮ ಮಕ್ಕಳ ಕುರಿತು ಎಮೋಷನಲ್ ಆಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

    ಮಾರ್ಚ್ ಒಂದಕ್ಕೆ ಮಹಾಶಿವರಾತ್ರಿಯಂದು ಅವಳಿ ಮಕ್ಕಳಿಗೆ ಅಮೂಲ್ಯ ತಾಯಿಯಾಗಿದ್ದರು. ಇದೀಗ ಪೋಸ್ಟ್‌ನಲ್ಲಿ ತಾಯ್ತನದ ಎರಡು ತಿಂಗಳು ಇಂದಿಗೆ, ಇದು ಖಂಡಿತವಾಗಿ ನನ್ನ ಜೀವನದ ಮುಖ್ಯ ಪ್ರಯಾಣವಾಗಿದೆ. ನಾನು ಅವಳಿ ಮಕ್ಕಳಿಗೆ ತಾಯಿಯಾಗಲಿದ್ದೇನೆ ಎಂದು ಕೇಳಿದಾಗ, ನನ್ನ ಹೃದಯ ಬಡಿತ ತಪ್ಪಿಸಿತು. ನನ್ನ ಗರ್ಭಾವಸ್ಥೆಯ ಎಲ್ಲಾ ಸವಾಲುಗಳನ್ನು ಮರೆತುಬಿಡುವಂತೆ ಮಾಡಿತ್ತು. ಜತೆಗೆ ನಾನು ಈಗಾಗಲೇ ನನ್ನ ಬಂಪ್‌ನ್ನು ಕಳೆದುಕೊಂಡಿದ್ದೇನೆ. ತಾಯಿಯು ಜಗತ್ತಿಗೆ ಕೆಚ್ಚೆದೆಯ ಮುಖವನ್ನು ತೋರಿಸುತ್ತಾಳೆ. ಆಕೆಯ ಕಷ್ಟದ ಹಾದಿ ಅವಳಿಗೆ ಮಾತ್ರ ಗೊತ್ತು. ಇದನ್ನೂ ಓದಿ: ʻಆಕಾಶ್ʼ ಚಿತ್ರಕ್ಕೆ 17 ವರ್ಷ : ಈ ಸಿನಿಮಾದ ಹಿಂದಿದೆ ಇಂಟ್ರಸ್ಟಿಂಗ್ ಸ್ಟೋರಿ

     

    View this post on Instagram

     

    A post shared by Amulya (@nimmaamulya)

    ಕೊನೆಯಲ್ಲಿ ನನ್ನ ಪುಟ್ಟ ಮಕ್ಕಳ ಪಾದಗಳನ್ನು ನೋಡಿ..ಖಂಡಿತಾ ಮಕ್ಕಳಿಗೆ ನನ್ನ ಕೈಲಾದಷ್ಟು ಸೇವೆ ಮಾಡಿದ್ದೇನೆ ಮುಂದೆ ಹೀಗೆ ಮುಂದೆವರೆಸಿಕೊಂಡು ಹೋಗುತ್ತೇನೆ ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ. ಇನ್ನು ಈ ಹಿಂದಯೇ ಮಾಡಲಾಗಿದ್ದ ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಅಮೂಲ್ಯ ಗ್ರೀನ್ ಕಲರ್ ಸೀರೆನಲ್ಲಿ ರಾಣಿಯಂತೆ ಕಾಣಿಸಿಕೊಂಡಿದ್ದಾರೆ. ಸದ್ಯ ಅಮೂಲ್ಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

  • ತಾಯಿಯಾಗ್ತಿದ್ದಾರೆ ನಟಿ ಅಮೂಲ್ಯ ಜಗದೀಶ್

    ತಾಯಿಯಾಗ್ತಿದ್ದಾರೆ ನಟಿ ಅಮೂಲ್ಯ ಜಗದೀಶ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಜಗದೀಶ್ ಅವರು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

    ಹೌದು. ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ವಿಚಾರವನ್ನು ಸ್ವತಃ ‘ಐಶ್’ ಅವರೇ ತಮ್ಮ ಇನ್‍ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಪತಿ ಜಗದೀಶ್ ಜೊತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡು ‘ಸದ್ಯ ನಾವು ಈಗ ಇಬ್ಬರಲ್ಲ. 2022ರಲ್ಲಿ ಮೂವರಾಗುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ. ಅಮೂಲ್ಯ ಈ ರೀತಿ ಬರೆದುಕೊಳ್ಳುತ್ತಿದ್ದಂತೆಯೇ ಅಭಿಮಾನಿಗಳು ವಿಶ್ ಮಾಡಲು ಆರಂಭಿಸಿದ್ದಾರೆ.

    ಬಾಲನಟಿಯಾಗಿಯೇ ಚಿತ್ರರಂಗಕ್ಕೆ ಕಾಲಿಟ್ಟ ಅಮೂಲ್ಯ ಅವರು ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ಹೀರೋಯಿನ್ ಆಗಿ ಚಿರಪರಿಚಿತರಾದರು. ಚಿಕ್ಕ ವಯಸ್ಸಿನಲ್ಲಿಯೇ ಸ್ಟಾರ್ ನಟರೊಂದಿಗೆ ಅಭಿನಯಿಸಿದ ಕೀರ್ತಿ ಇವರದ್ದಾಗಿದೆ. ಇತ್ತ ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ 2017ರಲ್ಲಿ ರಾಜಕೀಯ ಹಿನ್ನೆಲೆ ಇರುವ ಕುಟುಂಬದ ಜಗದೀಶ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸದ್ಯ ಈ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದೆ. ಇದನ್ನೂ ಓದಿ: ಕಡಲೆಕಾಯಿ ಪರಿಷೆಯಲ್ಲಿ ನಕ್ಕುನಲಿದ ವೈಷ್ಣವಿಗೌಡ

    ಕನ್ನಡದ ಹಲವಾರು ಸಿನಿಮಾಗಳಲ್ಲಿ ಅಮೂಲ್ಯ ನಟಿಸಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಯಾವುದೇ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಈ ಮೂಲಕ ಅವರು ಸಂಸಾರದ ಕಡೆಗೆ ಅವರು ಹೆಚ್ಚು ಗಮನ ನೀಡಿದ್ದಾರೆ. ಈಗ ಅವರು ತಾಯಿ ಆಗುತ್ತಿರುವ ಸುದ್ದಿ ಕೇಳಿ ಅಭಿಮಾನಿಳು ಸಂತಸ ವ್ಯಕ್ತಪಡಿಸಿದ್ದಾರೆ.

     

    View this post on Instagram

     

    A post shared by Amulya (@nimmaamulya)