Tag: ಅಮೂಲ್ಯ

  • ಅವಳಿ ಮಕ್ಕಳ ಜೊತೆ ಅಮೂಲ್ಯ ದೀಪಾವಳಿ ಸೆಲೆಬ್ರೇಶನ್

    ಅವಳಿ ಮಕ್ಕಳ ಜೊತೆ ಅಮೂಲ್ಯ ದೀಪಾವಳಿ ಸೆಲೆಬ್ರೇಶನ್

    ಸ್ಯಾಂಡಲ್‌ವುಡ್ ನಟಿ ಅಮೂಲ್ಯ (Amulya) ಮನೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಅವಳಿ ಮಕ್ಕಳ ಜೊತೆ ಅಮೂಲ್ಯ ಗ್ರ್ಯಾಂಡ್ ಆಗಿ ಹಬ್ಬ ಆಚರಣೆ ಮಾಡಿದ್ದಾರೆ. ಹಬ್ಬದ ಸುಂದರ ಫೋಟೋಗಳನ್ನ ನಟಿ ಶೇರ್ ಮಾಡಿದ್ದಾರೆ.‌ ಇದನ್ನೂ ಓದಿ:ಶರ್ಮಿಳಾ ಮಾಂಡ್ರೆ ಸಾರಥ್ಯದಲ್ಲಿ ನಿರ್ಮಾಣವಾಯ್ತು ತಮಿಳು ಚಿತ್ರ

    ಬೇಡಿಕೆ ಇದ್ದಾಗಲೇ ಹಸೆಮಣೆ ಏರಿದ್ದ ಚೆಲುವೆ ಅಮೂಲ್ಯ ಈಗ ಮದುವೆ, ಮಕ್ಕಳು, ಸಂಸಾರ ಅಂತ ಅಪ್ಪಟ ಗೃಹಿಣಿಯಾಗಿದ್ದಾರೆ. ಯಾವುದೇ ಹಬ್ಬವಿದ್ದರೂ ಕೂಡ ಮನೆಯಲ್ಲಿ ಸೆಲೆಬ್ರೇಶನ್ ಜೋರಾಗಿಯೇ ಇರುತ್ತದೆ. ಜೊತೆಯೇ ಚೆಂದದ ಫೋಟೋಶೂಟ್ ಕೂಡ ನಟಿ ಶೇರ್ ಮಾಡುತ್ತಾರೆ.

    ಬಿಳಿ ಬಣ್ಣದ ಉಡುಗೆಯಲ್ಲಿ ಅಮೂಲ್ಯ ಕಂಗೊಳಿಸಿದ್ರೆ, ಅವರ ಅವಳಿ ಮಕ್ಕಳು ಕೆಂಪು ಬಣ್ಣ ದಿರಿಸಿನಲ್ಲಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಬ್ಯಾಕ್‌ಗ್ರೌಂಡ್‌ನಲ್ಲಿ ಕಲರ್‌ಫುಲ್‌ ಲೈಟ್‌ನಲ್ಲಿ ನಡುವೆ ಅಮೂಲ್ಯ ಮಿಂಚಿದ್ದಾರೆ.

    ‘ಚೆಲುವಿನ ಚಿತ್ತಾರ’ (Cheluvina Chittara) ಸಿನಿಮಾ ಮೂಲಕ ನಾಯಕಿಯಾಗಿ ಪಾದಾರ್ಪಣೆ ಮಾಡಿದ್ದ ಚೆಲುವೆ ಮಳೆ, ಖುಷಿ ಖುಷಿಯಾಗಿ, ರಾಮ್ ಲೀಲಾ, ಗಜಕೇಸರಿ, ಮುಗುಳುನಗೆ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

  • ಅಮೂಲ್ಯ ಮಕ್ಕಳ ಕೊರಳಲ್ಲೂ ಹುಲಿ ಉಗುರು: ನಟಿ ಹೇಳೋದೇನು?

    ಅಮೂಲ್ಯ ಮಕ್ಕಳ ಕೊರಳಲ್ಲೂ ಹುಲಿ ಉಗುರು: ನಟಿ ಹೇಳೋದೇನು?

    ಟಿ ಅಮೂಲ್ಯ (Amulya) ಅವರ ಇಬ್ಬರು ಮಕ್ಕಳ ಕೊರಳಲ್ಲೂ ಹುಲಿ ಉಗುರಿನ (Tiger Claw) ಪೆಂಡೆಂಟ್ ಇದೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅನೇಕರು ಅಮೂಲ್ಯ ಅವರಿಗೆ ಪ್ರಶ್ನೆ ಮಾಡಿದ್ದರು. ಈ ಕುರಿತಂತೆ ಅಮೂಲ್ಯ ಸ್ಪಷ್ಟನೆ ನೀಡಿದ್ದಾರೆ. ಅವುಗಳು ಅಸಲಿ ಉಗುರುಗಳೇ ಅಲ್ಲ ಎಂದು ಹೇಳಿದ್ದಾರೆ.

    ಮಕ್ಕಳ ನಾಮಕರಣದ ವೇಳೆ ಧರಿಸಿದ್ದ ಪೆಂಡೆಂಟ್ ನಲ್ಲಿಯ ಹುಲಿ ಉಗುರು ಅಸಲಿ ಅಲ್ಲ. ಸಿಂಥೆಟಿಕ್ ಹುಲಿ ಉಗುರು ಅವು. ಅಂತಹ ನಕಲಿ ಉಗುರುಗಳು 500-600ಗೆ ಸಿಗುತ್ತವೆ. ಅರಣ್ಯ ಅಧಿಕಾರಿಗಳು ಪರಿಶೀಲನೆಗೆ ಬಂದರೆ ಖಂಡಿತಾ ಅವುಗಳನ್ನು ನೀಡುತ್ತೇನೆ ಎಂದಿದ್ದಾರೆ ನಟಿ ಅಮೂಲ್ಯ. ಉಗುರುಗಳು ಅಸಲಿಯಲ್ಲ ಎನ್ನುವುದನ್ನು ಸ್ಪಷ್ಟ ಪಡಿಸಿದ್ದಾರೆ.

    ವರ್ತೂರ್ ಸಂತೋಷ್ (Varthur Santhosh) ಬಂಧನವಾಗುತ್ತಿದ್ದಂತೆಯೇ ಹುಲಿ ಉಗುರಿನ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಅದರಲ್ಲೂ ಸೆಲೆಬ್ರಿಟಿಗಳ ಮೇಲೆ ಸಾಮಾನ್ಯ ಜನರು ಮುಗಿ ಬಿದ್ದಿದ್ದಾರೆ. ಸಿನಿಮಾ ನಟರು, ಸಂನ್ಯಾಸಿಗಳು, ರಾಜಕಾರಣಿಗಳು ಹೀಗೆ ಅನೇಕರು ಹುಲಿ ಉಗುರು ಧರಿಸಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಎಲ್ಲರೂ ತಮ್ಮದೇ ಆದ ರೀತಿಯಲ್ಲಿ ಸಮರ್ಥನೆಯನ್ನು ಮಾಡುತ್ತಿದ್ದಾರೆ.

     

    ವರ್ತೂರ್ ಸಂತೋಷ್ ಮತ್ತು ಅರಣ್ಯಾಧಿಕಾರಿ ದರ್ಶನ್ ಹಾಗೂ ಇಬ್ಬರು ಅರ್ಚಕರನ್ನು ಈವರೆಗೂ ಬಂಧಿಸಲಾಗಿದೆ. ಸಂತೋಷ್ ಗೆ ನಿನ್ನೆ ಜಾಮೀನು ಮಂಜೂರಾಗಿ ಜೈಲಿನಿಂದ ಹೊರ ಬಂದಿದ್ದಾರೆ. ಉಳಿದಂತೆ ಅರಣ್ಯಾಧಿಕಾರಿಗಳು ತನಿಖೆಯನ್ನು ಮುಂದುವರೆಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೃಷ್ಣ ಜನ್ಮಾಷ್ಠಮಿ ಸಂಭ್ರಮ- ಅವಳಿ ಮಕ್ಕಳ ಮುದ್ದಾದ ಫೋಟೋ ಹಂಚಿಕೊಂಡ ಅಮೂಲ್ಯ

    ಕೃಷ್ಣ ಜನ್ಮಾಷ್ಠಮಿ ಸಂಭ್ರಮ- ಅವಳಿ ಮಕ್ಕಳ ಮುದ್ದಾದ ಫೋಟೋ ಹಂಚಿಕೊಂಡ ಅಮೂಲ್ಯ

    ಸ್ಯಾಂಡಲ್‌ವುಡ್ (Sandalwood) ನಟಿ ಅಮೂಲ್ಯ (Amulya) ಮನೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಅವಳಿ ಮಕ್ಕಳಿಗೆ ಕೃಷ್ಣನ ಅವತಾರ ತೊಡಿಸಿ ಮಸ್ತ್ ಆಗಿ ನಟಿ ಫೋಟೋಶೂಟ್ ಮಾಡಿಸಿದ್ದಾರೆ. ಮಕ್ಕಳ ಮುದ್ದಾದ ಫೋಟೋಗಳನ್ನ ನಟಿ ಸೋಶಿಯಲ್‌ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

    ಅವಳಿ ಮಕ್ಕಳಿಗೆ (Twins) ಬಿಳಿ ಪಂಚೆ ತೊಡಿಸಿ ಕೃಷ್ಣನ ಗೆಟಪ್‌ನಲ್ಲಿ ರೆಡಿ ಮಾಡಿದ್ದರೆ, ನೀಲಿ ಬಣ್ಣದ ಸೀರೆಯುಟ್ಟು ಸಿಂಪಲ್ ಆಭರಣ ಧರಿಸಿ ನಟಿ ಕಂಗೊಳಿದ್ದಾರೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದನ್ನೂ ಓದಿ:ಬೆಂಗಳೂರಿನಲ್ಲಿ ಸಿಗೋಣ ಎಂದ ನಟಿ- ಆರೋಗ್ಯದ ಬಗ್ಗೆ ಖುದ್ದು ರಮ್ಯಾ ಸ್ಪಷ್ಟನೆ

    ಬಾಲನಟಿಯಾಗಿ ಗುರುತಿಸಿಕೊಂಡಿದ್ದ ನಟಿ, ಬಳಿಕ ‘ಚೆಲುವಿನ ಚಿತ್ತಾರ’ದ (Cheluvina Chittara) ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಪರಿಚಿತರಾದರು. ಈಗ ವೈವಾಹಿಕ ಬದುಕಿನಲ್ಲಿ ಬ್ಯುಸಿಯಾಗಿದ್ದಾರೆ. ಅವಳಿ ಮಕ್ಕಳ ಆರೈಕೆಯಲ್ಲಿ ನಟಿ ತೊಡಗಿಸಿಕೊಂಡಿದ್ದಾರೆ.

    ಅಮೂಲ್ಯ ಅವರು ಮಕ್ಕಳಿಗೆ ಅಥರ್ವ್ ಹಾಗೂ ಆಧವ್ ಎಂದು ಹೆಸರು ಇಟ್ಟಿದ್ದಾರೆ. ಇವರ ಕ್ಯೂಟ್ ಫೋಟೋಗಳನ್ನು ಅಮೂಲ್ಯ ಆಗಾಗ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಈಗ ಇವರ ಕೃಷ್ಣನ ಗೆಟಪ್ ಸಾಕಷ್ಟು ಗಮನ ಸೆಳೆದಿದೆ. ಇದನ್ನೂ ಓದಿ:ಬೆಂಗಳೂರಿನಲ್ಲಿ ಸಿಗೋಣ ಎಂದ ನಟಿ- ಆರೋಗ್ಯದ ಬಗ್ಗೆ ಖುದ್ದು ರಮ್ಯಾ ಸ್ಪಷ್ಟನೆ

    ನೆಚ್ಚಿನ ನಟಿ ಅಮೂಲ್ಯ ಮತ್ತೆ ಬಣ್ಣದ ಲೋಕಕ್ಕೆ ಕಮ್‌ಬ್ಯಾಕ್ ಆಗಬೇಕು ಎಂದು ಅಪಾರ ಅಭಿಮಾನಿಗಳ ಆಸೆ. ಅದರಂತೆ ನಟಿ ಕೂಡ, ಒಳ್ಳೆಯ ಕಥೆ ಸಿಕ್ಕರೆ ಖಂಡಿತಾ ನಟಿಸುತ್ತೇನೆ ಎಂದು ಸಿನಿಮಾಗೆ ಕಮ್‌ಬ್ಯಾಕ್ ಆಗುವ ಬಗ್ಗೆ ಮಾತನಾಡಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಕ್ಕ ಅಮೂಲ್ಯ ಬಗ್ಗೆ ‘ಗೀತಾ’ ಸೀರಿಯಲ್‌ ನಟಿ ಹೇಳಿದ್ದೇನು?

    ಅಕ್ಕ ಅಮೂಲ್ಯ ಬಗ್ಗೆ ‘ಗೀತಾ’ ಸೀರಿಯಲ್‌ ನಟಿ ಹೇಳಿದ್ದೇನು?

     

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೆಕೇಷನ್ ಮೂಡ್‌ನಲ್ಲಿ ಅಮೂಲ್ಯ ಫ್ಯಾಮಿಲಿ- ಗೋಲ್ಡನ್‌ ಕ್ವೀನ್‌ ಜೊತೆ ವೈಷ್ಣವಿ

    ವೆಕೇಷನ್ ಮೂಡ್‌ನಲ್ಲಿ ಅಮೂಲ್ಯ ಫ್ಯಾಮಿಲಿ- ಗೋಲ್ಡನ್‌ ಕ್ವೀನ್‌ ಜೊತೆ ವೈಷ್ಣವಿ

    ಸ್ಯಾಂಡಲ್‌ವುಡ್‌ನ (Sandalwood) ಗೋಲ್ಡನ್ ಬ್ಯೂಟಿ ಅಮೂಲ್ಯ (Amulya) ಅವರು ವೆಕೇಷನ್ ಫೋಟೋವನ್ನ ಹಂಚಿಕೊಂಡಿದ್ದಾರೆ. ಮಲೆನಾಡು ಚಿಕ್ಕಮಗಳೂರಿನಲ್ಲಿ ಅಮೂಲ್ಯ ಕುಟುಂಬ ತೆರಳಿದ್ದು, ಪತಿ ಮತ್ತು ಮಕ್ಕಳ ಜೊತೆಗಿನ ಸುಂದರ ಫೋಟೋವನ್ನ ಶೇರ್ ಮಾಡಿದ್ದಾರೆ. ಇದನ್ನೂ ಓದಿ:ಎಲ್ಲವೂ ಗಾಸಿಪ್ : ಐಶ್ವರ್ಯ 2ನೇ ಮದುವೆ, ಅಪ್ಪನೊಂದಿಗೆ ಮುನಿಸು

    ‘ಚೆಲುವಿನ ಚಿತ್ತಾರ’ (Chevina Chittara) ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಿತರಾದ ಅಮೂಲ್ಯ ಅವರು ಮಳೆ, ಗಜಕೇಸರಿ, ರಾಮ್ ಲೀಲಾ, ಕೃಷ್ಣ ರುಕ್ಕು ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಅಮೂಲ್ಯಗೆ ಡಿಮ್ಯಾಂಡ್ ಇರುವಾಗಲೇ ಜಗದೀಶ್ ಅವರನ್ನು ನಟಿ ಮದುವೆಯಾದರು. ಈಗ ಇಬ್ಬರು ಅವಳಿ ಮಕ್ಕಳ ಆರೈಕೆಯಲ್ಲಿ ನಟಿ ಬ್ಯುಸಿಯಿದ್ದಾರೆ.

    ಇತ್ತೀಚಿಗೆ ನಟಿ ಅಮೂಲ್ಯ ಫ್ಯಾಮಿಲಿ ಮತ್ತು ತನ್ನ ಬೆಸ್ಟ್ ಫ್ರೆಂಡ್ ಜೊತೆ ಚಿಕ್ಕಮಗಳೂರಿಗೆ ಹೋಗಿ ಬಂದಿದ್ದಾರೆ. ಸುಂದರ ತಾಣಗಳಿಗೆ ಭೇಟಿ ಕೊಟ್ಟಿದ್ದಾರೆ. ಚಿಕ್ಕಮಗಳೂರಿನ ಬ್ಯೂಟಿಫುಲ್ ಜಾಗವೊಂದರಲ್ಲಿ ಅಮ್ಮು ಫ್ಯಾಮಿಲಿ ಚೆಂದದ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಪತಿ ಜಗದೀಶ್ ಮತ್ತು ಮಕ್ಕಳು ಜೊತೆಗಿದ್ದು, ‘ಸೀತಾರಾಮ’ (Seetharama) ನಟಿ ವೈಷ್ಣವಿ ಗೌಡ (Vaishnavi Gowda) ಕೂಡ ಅಮೂಲ್ಯ ಜೊತೆ ಫೋಟೋ ಪೋಸ್ ಕೊಟ್ಟಿದ್ದಾರೆ.

    ಅಮೂಲ್ಯ ಪಿಂಕ್ ಬಣ್ಣದ ಡ್ರೆಸ್‌ನಲ್ಲಿ ಮಿಂಚಿದ್ರೆ, ವೈಷ್ಣವಿ ಲೈಟ್ ಬಣ್ಣದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ವೈಷ್ಣವಿ ಗೌಡ ಅವರು ‘ಸೀತಾರಾಮ’ ಸೀರಿಯಲ್ ಮೂಲಕ ಮೋಡಿ ಮಾಡ್ತಿದ್ದಾರೆ. ಅಮೂಲ್ಯ ಕಮ್‌ಬ್ಯಾಕ್ ಅಭಿಮಾನಿಗಳು ಎದುರು ನೋಡ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ʻಈ ಸಲ ಕಪ್‌ ನಮ್ದೆʼ ಅಂತಿದ್ದಾರೆ ನಟಿ ಅಮೂಲ್ಯ ಮಕ್ಕಳು – ಪುಟಾಣಿ ಫ್ಯಾನ್ಸ್‌ಗೆ ನೆಟ್ಟಿಗರು ಫಿದಾ

    ʻಈ ಸಲ ಕಪ್‌ ನಮ್ದೆʼ ಅಂತಿದ್ದಾರೆ ನಟಿ ಅಮೂಲ್ಯ ಮಕ್ಕಳು – ಪುಟಾಣಿ ಫ್ಯಾನ್ಸ್‌ಗೆ ನೆಟ್ಟಿಗರು ಫಿದಾ

    ಬೆಂಗಳೂರು: ಐಪಿಎಲ್‌ ಟೂರ್ನಿ (IPL 2023) ಬಂತೆಂದರೆ ಸಾಕು ಪ್ರಮುಖವಾಗಿ ಕೇಳಿಬರುವ ಹೆಸರೇ RCB. ಆರ್‌ಸಿಬಿ ಹೆಸರಲ್ಲೇ ಒಂದು ಹವಾ ಇದೆ, ಎಷ್ಟು ಬಾರಿ ಪಂದ್ಯ ಸೋತರೂ ಉತ್ಸಾಹ ಕಳೆದುಕೊಳ್ಳದೆ ಪ್ರತಿ ಸಲ ʻಈ ಸಲ ಕಪ್‌ ನಮ್ದೆ’ ಎನ್ನುತ್ತಾ ಹೊಸ ಉರುಪಿನೊಂದಿಗೆ ಮತ್ತೆ ಮತ್ತೆ ಕ್ರಿಕೆಟ್‌ ಅಂಗಳದಲ್ಲಿ ರಂಗೇರಿಸುತ್ತಿದೆ.

    ಸೋಮವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ನಡುವಿನ ರಣರೋಚಕ ಪಂದ್ಯದಲ್ಲಿ ಸಿಎಸ್‌ಕೆ 8 ರನ್‌ಗಳ ರೋಚಕ ಜಯ ಸಾಧಿಸಿತು. ಕೊನೆಯವರೆಗೂ ಛಲಬಿಡದೇ ಹೋರಾಡಿದ ಆರ್‌ಸಿಬಿ ವಿರೋಚಿತ ಸೋಲನುಭವಿಸಿತು. ಇದನ್ನೂ ಓದಿ: ಮ್ಯಾಕ್ಸಿ, ಡುಪ್ಲೆಸಿಸ್‌ ಸ್ಫೋಟಕ ಫಿಫ್ಟಿ – ಹೋರಾಡಿ ಕೊನೆಗೆ ಸೋತ ಆರ್‌ಸಿಬಿ

    ಈ ಬೆನ್ನಲ್ಲೇ ನಟಿ ಅಮೂಲ್ಯ (Actress Amulya) ತಮ್ಮ ಅವಳಿ ಮಕ್ಕಳಾದ ಅಥರ್ವ್ ಮತ್ತು ಆಧವ್ ಇಬ್ಬರಿಗೂ ಆರ್​ಸಿಬಿ ಜೆರ್ಸಿ ಧರಿಸಿ ಫೋಟೋಶೂಟ್ ಮಾಡಿಸಿದ್ದಾರೆ. ಈ ವಿಶೇಷ ಫೋಟೋಗಳನ್ನ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಆರ್‌ಸಿಬಿಯನ್ನ ಬೆಂಬಲಿಸಿದ್ದಾರೆ. ಅಲ್ಲದೇ ʻಈ ಸಲ ಕಪ್‌ ನಮ್ದೆʼ ಎಂದು ಮಕ್ಕಳೇ ಹೇಳಿರುವಂತೆ ಬರೆದುಕೊಂಡಿದ್ದಾರೆ. ಪುಟಾಣಿ ಫ್ಯಾನ್ಸ್‌ಗಳನ್ನ ನೋಡಿ ಆರ್‌ಸಿಬಿ ಅಭಿಮಾನಿಗಳು ಫುಲ್‌ ಖುಷ್‌ ಆಗಿದ್ದಾರೆ. ನಟಿ ಅಮೂಲ್ಯ ಪೋಸ್ಟ್‌ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: IPL 2023: ಇಶಾನ್‌ ಕಿಶನ್‌ ಶೈನ್‌, ಅಯ್ಯರ್‌ ಶತಕದಾಟ ವ್ಯರ್ಥ – ಮುಂಬೈಗೆ 5 ವಿಕೆಟ್‌ಗಳ ಜಯ

    ಸೋಮವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು 20 ಓವರ್‌ಗಳಲ್ಲಿ 226 ರನ್‌ ಗಳಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಆರ್‌ಸಿಬಿ ಸಿಕ್ಸರ್‌, ಬೌಂಡರಿಗಳ ಹೊಡಿಬಡಿ ಆಟದ ಹೊರತಾಗಿಯೂ 218 ರನ್‌ಗಳಿಸಿ 8 ರನ್‌ಗಳಿಂದ ವಿರೋಚಿತ ಸೋಲನುಭವಿಸಿತು.

  • ಅವಳಿ ಮಕ್ಕಳ ಮುದ್ದಾದ ಫೋಟೋ ಹಂಚಿಕೊಂಡ ಅಮೂಲ್ಯ

    ಅವಳಿ ಮಕ್ಕಳ ಮುದ್ದಾದ ಫೋಟೋ ಹಂಚಿಕೊಂಡ ಅಮೂಲ್ಯ

    ಸ್ಯಾಂಡಲ್‌ವುಡ್ (Sandalwood) ನಟಿ ಅಮೂಲ್ಯ (Amulya) ಮದುವೆ, ಸಂಸಾರ, ಅವಳಿ ಮಕ್ಕಳ ಆರೈಕೆ ಅಂತಾ ಬ್ಯುಸಿಯಾಗಿದ್ದಾರೆ. ಈ ನಡುವೆ ಅವಳಿ ಮಕ್ಕಳ ಮುದ್ದಾದ ಫೋಟೋಶೂಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 2ನೇ ಮದುವೆ ಸುದ್ದಿಗೆ ಸ್ಪಷ್ಟನೆ ನೀಡಿದ ಕಿರುತೆರೆ ನಟಿ ಸ್ವಾತಿ

    ಬಾಲನಟಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ, `ಚೆಲುವಿನ ಚಿತ್ತಾರ’ (Cheluvina Chittara) ಸಿನಿಮಾ ಮೂಲಕ ನಾಯಕಿಯಾಗಿ ಎಂಟ್ರಿ ಕೊಟ್ಟರು. ಸ್ಟಾರ್ ನಟರ ಜೊತೆ ನಾಯಕಿಯಾಗಿ ಮಿಂಚಿದರು. ಬೇಡಿಕೆ ಇರುವಾಗಲೇ ಜಗದೀಶ್ ಜೊತೆ ಅಮೂಲ್ಯ ಹಸೆಮಣೆ ಏರಿದ್ದರು.

     

    View this post on Instagram

     

    A post shared by Atharv & Aadhav (@atharv.aadhav)

    ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಇರುವ ಅಮೂಲ್ಯ ಜಗದೀಶ್ ಅವರು ಮುದ್ದು ಮಕ್ಕಳ ಬಗೆ ಬಗೆಯ ರೀತಿಯ ಫೋಟೋಶೂಟ್ ಮಾಡಿಸಿದ್ದಾರೆ. ಅಥರ್ವ್- ಆಧವ್ ಈ ಮುದ್ದು ಮಕ್ಕಳ ಹೊಸ ಫೋಟೋಸ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

     

    View this post on Instagram

     

    A post shared by Atharv & Aadhav (@atharv.aadhav)

    ಪ್ರತಿಭಾನ್ವಿತ ನಟಿ ಅಮೂಲ್ಯ ಸಿನಿಮಾಗೆ ಕಂಬ್ಯಾಕ್ ಮಾಡಲಿ ಅಂತಾ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಸಿನಿಮಾ ಬಗ್ಗೆ ಗುಡ್ ನ್ಯೂಸ್ ಕೊಡುತ್ತಾರಾ? ಎಂಬುದನ್ನ ಕಾದುನೋಡಬೇಕಿದೆ.

  • ಅವಳಿ ಮಕ್ಕಳ ಹುಟ್ಟುಹಬ್ಬಕ್ಕೆ ಆದಿಚುಂಚನಗಿರಿ ಮಠಕ್ಕೆ ಅಮೂಲ್ಯ ದಂಪತಿ ಭೇಟಿ

    ಅವಳಿ ಮಕ್ಕಳ ಹುಟ್ಟುಹಬ್ಬಕ್ಕೆ ಆದಿಚುಂಚನಗಿರಿ ಮಠಕ್ಕೆ ಅಮೂಲ್ಯ ದಂಪತಿ ಭೇಟಿ

    ಸ್ಯಾಂಡಲ್‌ವುಡ್‌ನ (Sandalwood) ಗೋಲ್ಡನ್ ಕ್ವೀನ್ ಅಮೂಲ್ಯ (Actress Amulya) ಅವರು ಅವಳಿ ಮಕ್ಕಳ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇದೇ ಖುಷಿಯಲ್ಲಿ ಆದಿಚುಂಚನಗಿರಿ ಮಠಕ್ಕೆ ಅವಳಿ ಮಕ್ಕಳೊಂದಿಗೆ ಅಮೂಲ್ಯ ದಂಪತಿ ಭೇಟಿ ನೀಡಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

    ಚೆಲುವಿನ ಚಿತ್ತಾರ ಬೆಡಗಿ ಅಮೂಲ್ಯ ಮದುವೆ, ಸಂಸಾರ, ಅವಳಿ ಮಕ್ಕಳ ಪಾಲನೆ ಅಂತಾ ಬ್ಯುಸಿಯಾಗಿದ್ದಾರೆ. ಮದುವೆಯಾದ ಮೇಲೆ ಚಿತ್ರರಂಗಕ್ಕೆ ಬೈ ಹೇಳಿ, ವೈಯಕ್ತಿಕ ಬದುಕಿನತ್ತ ಗಮನ ಕೊಡುತ್ತಿದ್ದಾರೆ.

    ಅಮೂಲ್ಯ – ಜಗದೀಶ್ ಮುದ್ದು ಮಕ್ಕಳಾದ ಅಥರ್ವ್ ಮತ್ತು ಅಧವ್ ಹುಟ್ಟುಹಬ್ಬಕ್ಕೆ ಆದಿಚುಂಚನಗಿರಿ ಮಠಕ್ಕೆ ಅಮೂಲ್ಯ ಕುಟುಂಬ ಭೇಟಿ ನೀಡಿ ನಿರ್ಮಲಾನಂದ ಸ್ವಾಮಿ ಅವರ ಆಶೀರ್ವಾದ ಪಡೆದಿದ್ದಾರೆ.

     

    View this post on Instagram

     

    A post shared by Jagdish R Chandra (@jagdishrchandra)

    2017ರಲ್ಲಿ ಜಗದೀಶ್ ಜೊತೆ ಅಮೂಲ್ಯ ಹಸೆಮಣೆ ಏರಿದರು. 5 ವರ್ಷಗಳ ನಂತರ ಅವಳಿ ಮಕ್ಕಳನ್ನ ಈ ಜೋಡಿ ಬರಮಾಡಿಕೊಂಡರು. ಇದೀಗ ತಾವು ಮದುವೆಯಾದ ಸ್ಥಳಕ್ಕೆ ಆದಿಚುಂಚನಗಿರಿ ಭೇಟಿ ಕೊಡುವ ಮೂಲಕ ಅವಳಿ ಮಕ್ಕಳ ಹುಟ್ಟುಹಬ್ಬವನ್ನ ವಿಶೇಷವಾಗಿ ಆಚರಿಸಿದ್ದಾರೆ.

  • ರಾಕೇಶ್ ಅಡಿಗ ಜೊತೆ ‘ಬಿಗ್ ಬಾಸ್’ ಸುಂದರಿಯರ ಸಮ್ಮಿಲನ

    ರಾಕೇಶ್ ಅಡಿಗ ಜೊತೆ ‘ಬಿಗ್ ಬಾಸ್’ ಸುಂದರಿಯರ ಸಮ್ಮಿಲನ

    ಬಿಗ್ ಬಾಸ್ (Big Boss) ಮುಗಿಯುತ್ತಿದ್ದಂತೆಯೇ ಮತ್ತೆ ಮತ್ತೆ ಭೇಟಿಯಾಗುವುದು, ಪಾರ್ಟಿ ಮಾಡುವುದು ಸಾಮಾನ್ಯ. ಕಳೆದ ಕೆಲವು ವರ್ಷಗಳಿಂದ ನಡೆದುಕೊಂಡು ಬಂದಿರುವ ಪದ್ದತಿ. ಈ ಬಾರಿಯೂ ಅಂಥದ್ದೊಂದು ಭೇಟಿ ಸಾಧ್ಯವಾಗಿದೆ. ರಾಕೇಶ್ ಅಡಿಗ (Rakesh Adiga) ಹಾಗೂ ಅಮೂಲ್ಯ (Amulya), ದಿವ್ಯಾ ಉರುಡುಗ (Divya Uruduga), ನೇಹಾ ಗೌಡ (Neha Gowda) ಮತ್ತು ಅನುಪಮಾ ಗೌಡ (Anupama Gowda) ಭೇಟಿ ಮಾಡಿ, ಒಂದಷ್ಟು ಅಮೂಲ್ಯವಾದ ಕ್ಷಣಗಳನ್ನು ಕಳೆದಿದ್ದಾರೆ. ಆ ಸಂಭ್ರಮವನ್ನು ಫೋಟೋ ಮೂಲಕ ಹಂಚಿಕೊಂಡಿದ್ದಾರೆ.

    ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಅಡಿಗ ಎಲ್ಲರ ಡಾರ್ಲಿಂಗ್ ಆಗಿದ್ದರು. ಎಲ್ಲರೊಂದಿಗೂ ಅವರು ಸಲೀಸಾಗಿ ಹೊಂದಿಕೊಳ್ಳುತ್ತಿದ್ದರು. ಹಾಗಾಗಿಯೇ ಗಾಸಿಪ್ ಕೂಡ ಹುಟ್ಟಿಕೊಂಡಿದ್ದವು. ಬಿಗ್ ಬಾಸ್ ಮನೆಯಿಂದ ಆಚೆ ಬಂದ ನಂತರ ಎಲ್ಲ ಗಾಸಿಪ್ ಗಳನ್ನು ಅವರು ನಿರಾಕರಿಸಿದ್ದರು. ನಮ್ಮದು ಕೇವಲ ಫ್ರೆಂಡ್ ಶಿಪ್ ಅದರಾಚೆ ಏನೂ ಇಲ್ಲ ಎಂದು ಸಾರಾಸಗಟಾಗಿ ತಳ್ಳಿ ಹಾಕಿದ್ದರು. ಅದೇ ಪ್ರೀತಿಯನ್ನೇ ಇಟ್ಟುಕೊಂಡು ಮತ್ತೆ ಸ್ನೇಹಿತಿಯರ ಜೊತೆ ರಾಕೇಶ್ ಒಂದಾಗಿದ್ದಾರೆ. ಇದನ್ನೂ ಓದಿ: ರಾಜಮೌಳಿ ಹತ್ಯೆಗೆ ಸ್ಕೆಚ್ ಹಾಕಿದ ಡೈರೆಕ್ಟರ್ಸ್ : ಬಾಯ್ಬಿಟ್ಟ ವರ್ಮಾ

    ಈ ಭೇಟಿಯ ಹಿಂದಿನ ಉದ್ದೇಶ ಏನು? ಯಾರ ಮನೆಯಲ್ಲಿ ಇವರು ಭೇಟಿಯಾಗಿದ್ದರು ಎಂಬಿತ್ಯಾದಿ ವಿವರಗಳು ಲಭ್ಯವಿಲ್ಲವಾದರೂ, ಎಲ್ಲರೂ ಸಂಭ್ರಮಿಸಿದ್ದಕ್ಕೆ ಅವರೇ ಹಾಕಿಕೊಂಡು ಫೋಟೋಗಳು ಸಾಕ್ಷಿಯಾಗಿವೆ. ಮೊನ್ನೆಯಷ್ಟೇ ದಿವ್ಯಾ ಉರುಡುಗ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದರು. ಆ ಸಮಯದಲ್ಲಿ ತಗೆದಿರುವ ಫೋಟೋ ಇರಬಹುದಾ ಎಂದು ಹೇಳಲಾಗುತ್ತಿದೆ. ಅಥವಾ ದಿವ್ಯಾ ಉರುಡುಗ ಹುಟ್ಟುಹಬ್ಬವನ್ನು ಇವರಲ್ಲಿ ಯಾರಾದರೂ ಅರೇಂಜ್ ಮಾಡಿರಬಹುದು ಎಂದು ಹೇಳಲಾಗುತ್ತಿದೆ.

    ಒಟ್ಟಿನಲ್ಲಿ ಬಿಗ್ ಬಾಸ್ ಮನೆಯಲ್ಲೂ ಈ ಜೋಡಿ ಒಂದಾಗಿಯೇ ಆಟವಾಡಿತ್ತು. ಆಚೆ ಬಂದ ನಂತರವೂ ಆ ಸ್ನೇಹವನ್ನು ಮುಂದುವರೆಸಿಕೊಂಡು ಹೋಗುತ್ತಿದೆ ಎನ್ನುವುದಕ್ಕೆ ಈ ಭೇಟಿಯೇ ಸಾಕ್ಷಿ. ಯಾರು ಏನೇ ಹೇಳಲಿ ಇಂತಹ ಸಂಭ್ರಮಗಳು ಅವರ ಬದುಕಲ್ಲಿ ಪ್ರತಿ ದಿನವೂ ಬರಲಿ ಎಂದು ಅವರ ಅಭಿಮಾನಿಗಳು ಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಘಾಟಿ ಸುಬ್ರಹ್ಮಣ್ಯಕ್ಕೆ ಅಮೂಲ್ಯ ದಂಪತಿ ಭೇಟಿ

    ಘಾಟಿ ಸುಬ್ರಹ್ಮಣ್ಯಕ್ಕೆ ಅಮೂಲ್ಯ ದಂಪತಿ ಭೇಟಿ

    ಚಿತ್ರರಂಗದಲ್ಲಿ (Kannada Films) ಗೋಲ್ಡನ್ ಕ್ವೀನ್ ಆಗಿ ಮಿಂಚಿದ್ದ ಅಮೂಲ್ಯ (Amulya) ಈಗ ಮದುವೆ, ಸಂಸಾರ, ಮಕ್ಕಳು ಅಂತಾ ಬ್ಯುಸಿಯಾಗಿದ್ದಾರೆ. ಸದ್ಯ ಅವಳಿ ಮಕ್ಕಳೊಂದಿಗೆ ಘಾಟಿ ಸುಬ್ರಹ್ಮಣ್ಯಕ್ಕೆ (Ghati Subramanya) ಅಮೂಲ್ಯ ಮತ್ತು ಜಗದೀಶ್ ಭೇಟಿ ನೀಡಿದ್ದಾರೆ.

    ಸ್ಟಾರ್ ನಟಿಯಾಗಿ ಮಿಂಚ್ತಿದ್ದ ಅಮೂಲ್ಯ ಬೇಡಿಕೆಯಿರುವಾಗಲೇ ಜಗದೀಶ್ ಜೊತೆ ಹಸೆಮಣೆ ಏರಿದ್ದರು. ಈಗ ಅವಳಿ ಮಕ್ಕಳ ತಾಯಿಯಾಗಿ ಅವರ ಆರೈಕೆಯಲ್ಲಿ ನಟಿ ಫುಲ್ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೇ ಅವಳಿ ಮಕ್ಕಳಿಗೆ ಅದ್ದೂರಿಯಾಗಿ ನಾಮಕರಣ ಮಾಡಿದ್ದರು. ಇದನ್ನೂ ಓದಿ: `ಧಮಾಕ’ ಸಕ್ಸಸ್ ನಂತರ ಕನ್ನಡತಿ ಶ್ರೀಲೀಲಾಗೆ ತೆಲುಗಿನಲ್ಲಿ ಡಿಮ್ಯಾಂಡ್

    ಅಮೂಲ್ಯ ಅವರು ಕುಟುಂಬದ ಜೊತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಘಾಟಿಗೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದ ವೇಳೆ ಕೆಲ ಸಮಯ ಆವರಣದಲ್ಲಿ ಕುಳಿತುಕೊಂಡಿದ್ದರು. ಬಳಿಕ ಕುಟುಂಬದ ಜೊತೆ ಸೇರಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

    ಅಮೂಲ್ಯ ಅವರನ್ನು ನೋಡಿದ ಸಂತಸದಲ್ಲಿ ಫ್ಯಾನ್ಸ್ ಅವರನ್ನು ಭೇಟಿ ಮಾಡಲು ಮುಗಿಬಿದ್ದಿದ್ದಾರೆ. ಸೆಲ್ಫಿಗಾಗಿ ತೆಗೆದುಕೊಂಡು ನಟಿಯ ಜೊತೆ ಸಂಭ್ರಮಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k