Tag: ಅಮೃತಧಾರೆ

  • ದುಬೈ ಮರಳುಗಾಡಿನಲ್ಲಿ ನಟಿ ಫೋಟೋಶೂಟ್- ಬಾಲಿವುಡ್ ಬ್ಯೂಟಿಯಂತೆ ಮಿಂಚಿದ ಇಶಿತಾ

    ದುಬೈ ಮರಳುಗಾಡಿನಲ್ಲಿ ನಟಿ ಫೋಟೋಶೂಟ್- ಬಾಲಿವುಡ್ ಬ್ಯೂಟಿಯಂತೆ ಮಿಂಚಿದ ಇಶಿತಾ

    ನಪ್ರಿಯ ‘ಅಮೃತಧಾರೆ’ (Amruthadaare) ಸೀರಿಯಲ್ ನಟಿ ಇಶಿತಾ ವರ್ಷ (Ishita Varsha) ದುಬೈ ಮರಳುಗಾಡಿನಲ್ಲಿ ಅದ್ಧೂರಿಯಾಗಿ ಫೋಟೋಶೂಟ್ ಮಾಡಿಸಿದ್ದಾರೆ. ಬಾಲಿವುಡ್ ಬ್ಯೂಟಿಯಂತೆ ಕಂಗೊಳಿಸಿದ ನಟಿಯ ಕಂಡು ಫ್ಯಾನ್ಸ್ ಬೆರಗಾಗಿದ್ದಾರೆ. ಇದನ್ನೂ ಓದಿ:ರೀಲ್ಸ್ ವಿವಾದ: ನಮಗೆ ಪೊಲೀಸರ ದಿಕ್ಕು ತಪ್ಪಿಸೋ ಉದ್ದೇಶವಿಲ್ಲ ಎಂದ ವಿನಯ್ ಗೌಡ

    ಸದಾ ಒಂದಲ್ಲಾ ಒಂದು ಶೈಲಿಯಲ್ಲಿ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸೋ ಇಶಿತಾ ಇದೀಗ ದುಬೈಗೆ (Dubai) ಹಾರಿದ್ದಾರೆ. ಅಲ್ಲಿ ಮರುಳುಗಾಡಿನಲ್ಲಿ ನಿಂತು ವಿವಿಧ ಭಂಗಿಯಲ್ಲಿ ಫೋಟೋಶೂಟ್‌ ಮಾಡಿಸಿದ್ದಾರೆ. ರೆಡ್ ಕಲರ್ ಡ್ರೆಸ್ ಧರಿಸಿ ಬಾಲಿವುಡ್ ಬ್ಯೂಟಿಯಂತೆ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.

    ಸ್ಟಾರ್ ನಟಿಯರನ್ನೇ ಸೆಡ್ಡು ಹೊಡೆಯುವಂತೆ ಇಶಿತಾ ನಯಾ ಫೋಟೋಶೂಟ್ ಮಾಡಿಸಿ ಗಮನ ಸೆಳೆದಿದ್ದಾರೆ. ಬಳುವ ಬಳ್ಳಿಯಂತೆ ಮಿಂಚಿರೋ ಇಶಿತಾರನ್ನು ಕಂಡು ಪಡ್ಡೆಹುಡುಗರು ಖುಷಿಪಟ್ಟಿದ್ದಾರೆ. ಇದನ್ನೂ ಓದಿ:ರೀಲ್ಸ್ ಮಾಡಿದ ಜಾಗದಲ್ಲಿ ವಿನಯ್‌, ರಜತ್‌ರನ್ನು ಸ್ಥಳ ಮಹಜರಿಗೆ ಕರೆತಂದ ಪೊಲೀಸರು

    ‘ಅಗ್ನಿಸಾಕ್ಷಿ’ ಸೀರಿಯಲ್‌ನಲ್ಲಿ ಮಾಯಾ ಪಾತ್ರಧಾರಿಯಾಗಿ ಸತತ 7 ವರ್ಷಗಳ ಕಾಲ ರಂಜಿಸಿದರು. ಇಂದಿಗೂ ಅವರ ಪಾತ್ರವನ್ನು ಜನರು ಸ್ಮರಿಸುತ್ತಾರೆ. ಅಷ್ಟರ ಮಟ್ಟಿಗೆ ಈ ಸೀರಿಯಲ್ ಸೂಪರ್ ಹಿಟ್ ಆಗಿತ್ತು.

    ಪ್ರಸ್ತುತ ‘ಅಮೃತಧಾರೆ’ ಸೀರಿಯಲ್‌ನಲ್ಲಿ ಗೌತಮ್ ದಿವಾನ್ ತಂಗಿಯಾಗಿ ಇಶಿತಾ ನಟಿಸುತ್ತಿದ್ದಾರೆ. ರೀಪ್ಲೇಸ್‌ಮೆಂಟ್ ಪಾತ್ರಕ್ಕೆ ಅವರು ಎಂಟ್ರಿ ಕೊಟ್ಟಿದ್ರೂ ಕೂಡ ಅದ್ಭುತವಾಗಿ ನಟಿಸುತ್ತಿದ್ದಾರೆ. ಅವರ ನಟನೆ ಮತ್ತೆ ಪ್ರೇಕ್ಷಕರ ಮನಗೆದ್ದಿದೆ.

    ನೃತ್ಯ ಸಂಯೋಜಕ ಮುರುಗಾನಂದ ಜೊತೆ ಇಶಿತಾ ಮದುವೆ ಆಗಿದ್ದಾರೆ. ಅವರ ಕೂಡ ಬಣ್ಣದ ಲೋಕದಲ್ಲಿ ಸ್ಟಾರ್ ನಟರ ಸಿನಿಮಾಗಳಿಗೆ ಕೆಲಸ ಮಾಡ್ತಿರೋದ್ರಿಂದ ಪತ್ನಿಯ ಕೆರಿಯರ್‌ಗೆ ಪ್ರೋತ್ಸಾಹಿಸುತ್ತಿದ್ದಾರೆ.

  • ಎದೆಯ ಗೀಟು ಕಾಣುವಂತೆ ಹಾಟ್ ಆಗಿ ಕಾಣಿಸಿಕೊಂಡ ಸಾರಾ ಅಣ್ಣಯ್ಯ

    ಎದೆಯ ಗೀಟು ಕಾಣುವಂತೆ ಹಾಟ್ ಆಗಿ ಕಾಣಿಸಿಕೊಂಡ ಸಾರಾ ಅಣ್ಣಯ್ಯ

    ನ್ನಡತಿ, ನಮ್ಮ ಲಚ್ಚಿ, ಅಮೃತಧಾರೆ (Amruthadaare) ಸೀರಿಯಲ್ ಮೂಲಕ ಗಮನ ಸೆಳೆದ ಸಾರಾ ಅಣ್ಣಯ್ಯ (Sara Annaiah) ಅವರು ಸದ್ಯ ಹಾಟ್ ಫೋಟೋಶೂಟ್ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ. ಎದೆಯ ಗೀಟು ಕಾಣುವಂತೆ ಸಖತ್ ಬೋಲ್ಡ್ ಆಗಿ ಸಾರಾ ಕಾಣಿಸಿಕೊಂಡಿದ್ದಾರೆ.

    ಸಾರಾ ಸದ್ಯ ವೆಕೇಷನ್ ಮೂಡ್‌ನಲ್ಲಿದ್ದಾರೆ. ಕಡಲ ತೀರದ ರೆಸಾರ್ಟ್‌ವೊಂದರಲ್ಲಿ ಬಿಕಿನಿ ಧರಿಸಿ ಸಖತ್ ಹಾಟ್ ಆಗಿ ನಟಿ ಕಾಣಿಸಿಕೊಂಡಿದ್ದಾರೆ. ‘ನಾನು ದಾಲ್ಚಿನ್ನಿಯಂತೆ ಸ್ವೀಟ್’ ಅಂತ ಕ್ಯಾಪ್ಷನ್ ನೀಡಿ, ಸಾರಾ ಸೋಷಿಯಲ್‌ ಮೀಡಿಯಾದಲ್ಲಿ ಫೋಟೋ ಶೇರ್ ಮಾಡಿದ್ದಾರೆ. ಸಾರಾ ಲುಕ್ ನೋಡಿ ಹಾಟ್, ಕ್ಯೂಟ್, ಸೆಕ್ಸಿ ಅಂತೆಲ್ಲಾ ನೆಟ್ಟಿಗರು ಬಗೆ ಬಗೆಯ ಕಾಮೆಂಟ್‌ಗಳನ್ನು ಹಾಕಿದ್ದಾರೆ.

    ‘ನಮ್ಮೂರ ಹೈಕ್ಳು’ ಚಿತ್ರದ ಮೂಲಕ ನಾಯಕಿಯಾಗಿ ಸಾರಾ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಆದರೆ ಮೊದಲ ಸಿನಿಮಾ ಅವರ ಕೈಹಿಡಿಯಲಿಲ್ಲ. ಚಿತ್ರರಂಗದಿಂದ ಈಗ ಹೇಳಿಕೊಳ್ಳುವಂತಹ ಅವಕಾಶ ಕೂಡ ಸಿಗುತ್ತಿಲ್ಲ. ಹಾಗಾಗಿ ಕಿರುತೆರೆಯಲ್ಲಿ ನಟಿ ಗುರುತಿಸಿಕೊಳ್ತಿದ್ದಾರೆ.

    ರಂಜನಿ ರಾಘವನ್- ಕಿರಣ್ ನಟನೆ ‘ಕನ್ನಡತಿ’ ಸೀರಿಯಲ್ ವರೂಧಿನಿ ಪಾತ್ರದಲ್ಲಿ ಸಾರಾ ನಟಿಸಿದ್ದರು. ಇದು ಕೂಡ ಲೀಡ್ ಪಾತ್ರವೇ ಆಗಿತ್ತು. ಹೀರೋ ಹಿಂದೆ ಬೀಳುವ ಪಾತ್ರ ಇದಾಗಿದೆ. ಇದನ್ನೂ ಓದಿ:ಅಬ್ಬಬ್ಬಾ! ಗೋಲ್ಡ್ ಕೇಕ್ ಕಟ್ ಮಾಡಿ ಸಂಭ್ರಮಿಸಿದ ‘ಐರಾವತ’ ನಟಿ

    ಈಗ ಜನಪ್ರಿಯ ‘ಅಮೃತಧಾರೆ’ ಸೀರಿಯಲ್‌ನಲ್ಲಿ ಹೀರೋ ಗೌತಮ್ ತಂಗಿ ಮಹಿಮಾ ಪಾತ್ರದ ಮೂಲಕ ಸಾರಾ ಗುರುತಿಸಿಕೊಳ್ತಿದ್ದಾರೆ. ಸಾರಾ ಪಾತ್ರಕ್ಕೆ ಪ್ರಾಮುಖ್ಯತೆ ಇದ್ದು, ಸೀರಿಯಲ್‌ನಲ್ಲಿ ಹಲವು ಟ್ವಿಸ್ಟ್‌ಗಳನ್ನು ಪಡೆದು ಮುನ್ನುಗ್ಗುತ್ತಿದೆ. ಇದನ್ನೂ ಓದಿ:ಸಕ್ಸಸ್‌ಗಾಗಿ ಮತ್ತೆ ಮರಾಠಿ ಸಿನಿಮಾಗಳತ್ತ ರಿತೇಶ್ ದೇಶ್‌ಮುಖ್

    ಅಂದಹಾಗೆ, ಅಮೃತಧಾರೆ ಸೀರಿಯಲ್‌ಗೆ ಎಂಟ್ರಿ ಕೊಡುವ ಮೂಲಕ ‘ನಮ್ಮ ಲಚ್ಚಿ’ ಸೀರಿಯಲ್‌ನಲ್ಲಿ ಸಾರಾ ನಟಿಸುತ್ತಿದ್ದರು. ನೆಗೆಟಿವ್ ಶೇಡ್‌ನಲ್ಲಿದ್ದ ಈ ಪಾತ್ರವನ್ನು ಕೆಲ ತಿಂಗಳುಗಳ ಹಿಂದೆ ಬಿಟ್ಟು `ಅಮೃತಧಾರೆ’ ತಂಡ ಸೇರಿಕೊಂಡರು ನಟಿ ಸಾರಾ.

  • ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೃತಧಾರೆ’ ರಿಲೀಸ್ ಆಗಿ ಇಂದಿಗೆ 18 ವರ್ಷ

    ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೃತಧಾರೆ’ ರಿಲೀಸ್ ಆಗಿ ಇಂದಿಗೆ 18 ವರ್ಷ

    ನಾಗತಿಹಳ್ಳಿ ಚಂದ್ರಶೇಖರ್ (Nagatihalli Chandrasekhar) ನಿರ್ದೇಶನದಲ್ಲಿ ಮೂಡಿ ಬಂದ ‘ಅಮೃತಧಾರೆ’ (Amruthadhare) ಸಿನಿಮಾ ರಿಲೀಸ್ ಆಗಿ ಇಂದಿಗೆ 18 ವರ್ಷಗಳಾಗಿವೆ. ಈ ಸಿಹಿ ನೆನಪುಗಳನ್ನು ನಿರ್ದೇಶಕರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಜೊತೆಗೆ ಆ ಸಿನಿಮಾದ ಫೋಟೋವೊಂದನ್ನು ಹಂಚಿಕೊಂಡು, ಅದರ ದಾಖಲೆಯನ್ನು ನೆನಪಿಸಿಕೊಂಡಿದ್ದಾರೆ.

    16ನೇ ಸೆಪ್ಟೆಂಬರ್ 2005ರಲ್ಲಿ ಈ ಸಿನಿಮಾ ರಾಜ್ಯಾದ್ಯಂತ ರಿಲೀಸ್ ಆಗಿತ್ತು. ಬೆಂಗಳೂರಿನ ಸಾಗರ ಚಿತ್ರಮಂದಿರದಲ್ಲೇ ಬರೋಬ್ಬರಿ 40 ವಾರಗಳ ಭರ್ಜರಿ ಪ್ರದರ್ಶನವನ್ನು ಕಂಡು ದಾಖಲೆ ಬರೆದಿತ್ತು. ಈ ಸಿನಿಮಾದ ಮೂಲಕ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ (Amitabh Bachchan) ಅವರು ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರದ ಹೆಗ್ಗಳಿಕೆಗಳಲ್ಲಿ ಇದು ಕೂಡ ಒಂದಾಗಿತ್ತು. ಇದನ್ನೂ ಓದಿ:ಬಾಲಿವುಡ್‌ನಲ್ಲಿ ಬಂಪರ್ ಆಫರ್ ಗಿಟ್ಟಿಸಿಕೊಂಡ ‘ಸೀತಾರಾಮಂ’ ಬೆಡಗಿ

    ಮೋಹಕ ತಾರೆ ರಮ್ಯಾ (Ramya) ಮತ್ತು ಧ್ಯಾನ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ಸಿನಿಮಾದಲ್ಲಿ ಉತ್ಕಟ ಪ್ರೇಮವಿತ್ತು. ಕಥಾ ನಾಯಕ ಮತ್ತು ನಾಯಕಿ ಈ ಯುವ ಜೋಡಿ ಮದುವೆಯಾದರೂ, ಗಂಡ ಹೆಂಡತಿ ರೀತಿಯಲ್ಲಿ ಬದುಕುವುದು ಬೇಡ, ಸ್ನೇಹಿತರಾಗಿ ಇರೋಣ ಎಂದುಕೊಂಡು ಜೀವನ ನಡೆಸುತ್ತಿರುವಾಗ, ಈ ಜೋಡಿಯಲ್ಲಿ ಸಮಸ್ಯೆಯೊಂದು ಕಾಣಿಸುತ್ತದೆ. ಆಗ ಅದನ್ನು ಅವರು ಹೇಗೆ ದಾಟಿಕೊಳ್ಳುತ್ತಾರೆ ಎನ್ನುವುದೇ ಸಿನಿಮಾವಾಗಿತ್ತು.

     

    ನಾಗತಿಹಳ್ಳಿ ಚಂದ್ರಶೇಖರ್ ಬರಹದಲ್ಲಿ ಮೂಡಿ ಬಂದಿದ್ದ ಈ ಸಿನಿಮಾವನ್ನು ಅನೇಕ ಪ್ರೇಮಿಗಳು ಮೆಚ್ಚಿದ್ದರು. ಆದರೆ, ದುರಂತದ ಕಥನವನ್ನು ನೋಡಿ ಕಣ್ಣೀರಿಟ್ಟಿದ್ದರು. ಧ್ಯಾನ್ ಮತ್ತು ರಮ್ಯಾ ಜೋಡಿಯ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿ ಬಂದಿದ್ದವು. ಇದೀಗ ಆ ಸಿನಿಮಾಗೆ 18ರ ಹರೆಯ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಟೈಲೀಶ್‌ ಆಗಿ ಕಾಣಿಸಿಕೊಂಡ ‘ಅಮೃತಧಾರೆ’ ಸಾರಾ- ಕಾವ್ಯಾ ಗೌಡ

    ಸ್ಟೈಲೀಶ್‌ ಆಗಿ ಕಾಣಿಸಿಕೊಂಡ ‘ಅಮೃತಧಾರೆ’ ಸಾರಾ- ಕಾವ್ಯಾ ಗೌಡ

    ಕಿರುತೆರೆಯ ಜನಪ್ರಿಯ ಅಮೃತಧಾರೆ (Amruthadaare) ಮತ್ತು ಭಾಗ್ಯಲಕ್ಷಿ (Bhagyalakshmi) ಸೀರಿಯಲ್ ನಟಿಯರು ಸಾರಾ ಅಣ್ಣಯ್ಯ- ಕಾವ್ಯಾ ಗೌಡ ಅವರು ಒಟ್ಟಿಗೆ ಗೋವಾಗೆ ಜಾಲಿ ಟ್ರಿಪ್ ಮಾಡ್ತಿದ್ದಾರೆ. ಶ್ರೇಷ್ಠಾ ಮತ್ತು ಮಹಿಮಾ ಹಾಟ್ ಫೋಟೋಸ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:ಅಮೆರಿಕಾದಲ್ಲಿ ಅವಳಿ ಮಕ್ಕಳಿಗೆ ಕೇಶ ಮುಂಡನ ಮಾಡಿಸಿದ ಪ್ರೀತಿ ಜಿಂಟಾ

    ಕನ್ನಡತಿ, ನಮ್ಮ ಲಚ್ಚಿ ಸೀರಿಯಲ್ ಮೂಲಕ ಗಮನ ಸೆಳೆದ ಕೂರ್ಗ್ ಬ್ಯೂಟಿ ಸಾರಾ ಅಣ್ಣಯ್ಯ (Sara Annaiah) ಅವರು ಸದ್ಯ ಅಮೃತಧಾರೆ ಸೀರಿಯಲ್‌ನ ಮಹಿಮಾ ರೋಲ್‌ನಲ್ಲಿ ಮಿಂಚಿದ್ದಾರೆ. ಉದ್ಯಮಿ ಗೌತಮ್ ದಿವಾನ್ ಸಹೋದರಿ ಪಾತ್ರಕ್ಕೆ ಸಾರಾ ಜೀವ ತುಂಬುತ್ತಿದ್ದಾರೆ. ಜೀವಾ ಎಂಬ ಹುಡುಗನನ್ನು ಹುಚ್ಚಿಯಂತೆ ಪ್ರೀತಿಸೋ ಹುಡುಗಿಯಾಗಿ ಸಾರಾ ಕಾಣಿಸಿಕೊಂಡಿದ್ದಾರೆ. ಸದ್ಯ ಅಮೃತಧಾರೆ ಸೀರಿಯಲ್ ಒಳ್ಳೆಯ ಟಾಕ್‌ನಲ್ಲಿದೆ. ಸಖತ್ ಹೈಪ್ ಕ್ರಿಯೆಟ್ ಮಾಡಿದೆ.

    ಸಾರಾ ಅವರ ಫ್ರೆಂಡ್ ಕಾವ್ಯಾ ಗೌಡ (Kavya Gowda) , ಕೂಡ ಶ್ರೇಷ್ಠಾ ಎಂಬ ಪಾತ್ರದಲ್ಲಿ ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ಮಿಂಚ್ತಿದ್ದಾರೆ. ಮದುವೆಯಾಗಿರುವ ಹೀರೋ ತಾಂಡವ್ ಹಿಂದೆ ಬೀಳುವ ಯುವತಿಯಾಗಿ ಕಾವ್ಯಾ ಕಾಣಿಸಿಕೊಂಡಿದ್ದಾರೆ.

    ಬಡವ ರಾಸ್ಕಲ್ (Badava Rascal) ನಟಿ ಅಮೃತಾ ಐಯ್ಯಂಗಾರ್ ಅವರ ಸ್ನೇಹಿತೆ ಈ ಕಾವ್ಯಾ ಗೌಡ. ಅಲ್ಲದೇ ರಿಂಗಾ ರಿಂಗಾ ರೋಸಸ್ ಸಿನಿಮಾದಲ್ಲೂ ಕಾವ್ಯ ನಟಿಸಿದ್ದಾರೆ. ಮತ್ತಷ್ಟು ಸಿನಿಮಾದಲ್ಲಿ ನಟಿಸುವ ಆಸೆ ಹೊಂದಿದ್ದಾರೆ. ಕಾವ್ಯಾ ಗೌಡ ಅವರು ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ನೆಗೆಟಿವ್ ಶೇಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

    ಸಾರಾ ಅಣ್ಣಯ್ಯ- ಕಾವ್ಯಾ ಗೌಡ ಅವರು ಹಲವು ವರ್ಷಗಳಿಂದ ಸ್ನೇಹಿತರು. ಇಬ್ಬರು ಸೀರಿಯಲ್, ಸಿನಿಮಾ ಅಂತಾ ಬ್ಯುಸಿಯಿದ್ದರು. ಈಗ ಶೂಟಿಂಗ್ ಬ್ರೇಕ್ ಹಾಕಿ ಗೋವಾಗೆ ಹಾರಿದ್ದಾರೆ. ಅಲ್ಲಿ ಬೋಲ್ಡ್ ಲುಕ್‌ನಲ್ಲಿ ಸಾರಾ- ಕಾವ್ಯಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇಬ್ಬರ ಫೋಟೋ ಇಂಟರ್‌ನೆಟ್‌ನಲ್ಲಿ ಬೆಂಕಿ ಹಚ್ಚಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂತ್ರಾಲಯಕ್ಕೆ ಭೇಟಿ ನೀಡಿದ ‘ಅಮೃತಧಾರೆ’ ನಟಿ ಸಾರಾ ಅಣ್ಣಯ್ಯ

    ಮಂತ್ರಾಲಯಕ್ಕೆ ಭೇಟಿ ನೀಡಿದ ‘ಅಮೃತಧಾರೆ’ ನಟಿ ಸಾರಾ ಅಣ್ಣಯ್ಯ

    ಕಿರುತೆರೆಯ ಜನಪ್ರಿಯ ‘ಕನ್ನಡತಿ’ (Kannadati) ಸೀರಿಯಲ್ ಮೂಲಕ ಗಮನ ಸೆಳೆದ ನಟಿ ಸಾರಾ ಅಣ್ಣಯ್ಯ (Sara Annaiah) ಅವರು ಮಂತ್ರಾಲಯಕ್ಕೆ (Mantralaya)  ಭೇಟಿ ನೀಡಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ, ರಾಯರ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ:ಮೈಸೂರಿಗೆ ಬಂದಿಳಿದ ನಟ ಉಸ್ತಾದ್ ರಾಮ್ ಪೋತಿನೇನಿ

    ‘ಕನ್ನಡತಿ’ ಸೀರಿಯಲ್‌ನ ವರುಧಿನಿ ಆಗಿ ಸೈ ಎನಿಸಿಕೊಂಡಿದ್ದ ನಟಿ ಸಾರಾ ಅವರು ಇತ್ತೀಚಿಗೆ ‘ನಮ್ಮ ಲಚ್ಚಿ’ (Namma Lacchi) ಎಂಬ ಸೀರಿಯಲ್‌ನಲ್ಲಿ ಖಳನಾಯಕಿಯಾಗಿ ನಟಿಸುತ್ತಿದ್ದರು. ಆದರೆ ಸಡನ್ ಆಗಿ ಈ ಸೀರಿಯಲ್‌ನಿಂದ ಹೊರಬಂದರು. ಈ ಬೆನ್ನಲ್ಲೇ ಹೊಸ ಧಾರಾವಾಹಿ ‘ಅಮೃತಧಾರೆ’ಯ (Amruthadaare) ಮಹಿಮ ಪಾತ್ರಕ್ಕೆ ಸಾರಾ ಜೀವ ತುಂಬುತ್ತಿದ್ದಾರೆ.

    ಸದ್ಯ ವೆಸ್ಟರ್ನ್ ಉಡುಗೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೂರ್ಗ್ ಬ್ಯೂಟಿ ಸಾರಾ ಅಣ್ಣಯ್ಯ ಅವರು ಇದೀಗ ಟ್ರೆಡಿಷನಲ್ ಆಗಿ ಸೀರೆಯುಟ್ಟು ಮಂತ್ರಾಲಯಕ್ಕೆ ಭೇಟಿ ನೀಡಿ, ರಾಯರ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಸದಾ ತುಂಡು ಬಟ್ಟೆಗಳನ್ನ ತೊಡುತ್ತಿದ್ದ ನಟಿ ಸಾರಾ ಈಗೀನ ಲುಕ್‌ಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಹೀಗೆ ಟ್ರೆಡಿಷನಲ್ ಬಟ್ಟೆಗಳನ್ನ ಧರಿಸಿ ಎಷ್ಟು ಚೆಂದ ಕಾಣ್ತೀರಾ ಅಂತಾ ಮನವಿ ಮಾಡಿದ್ದಾರೆ.

     

  • ʻಅಮೃತಧಾರೆʼ ಶೂಟಿಂಗ್‌ನಲ್ಲಿ ಯೋಧರಿಂದ ಜೀವದಾನ ಸಿಕ್ಕಿದನ್ನ ಸ್ಮರಿಸಿದ ರಮ್ಯಾ

    ʻಅಮೃತಧಾರೆʼ ಶೂಟಿಂಗ್‌ನಲ್ಲಿ ಯೋಧರಿಂದ ಜೀವದಾನ ಸಿಕ್ಕಿದನ್ನ ಸ್ಮರಿಸಿದ ರಮ್ಯಾ

    ಕಿರುತೆರೆ ಜನಪ್ರಿಯ Weekend With Ramesh 5 ಶೋನಲ್ಲಿ ಸಾಧಕರ ಸೀಟ್ ಅನ್ನ ರಮ್ಯಾ ಅಲಂಕರಿಸಿದ್ದಾರೆ. ರಮ್ಯಾ ಬಗ್ಗೆ ತಿಳಿದುಕೊಳ್ಳಬೇಕು ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಅನೇಕ ವಿಚಾರಗಳು ಈ ಶೋ ಮೂಲಕ ತಿಳಿದು ಬಂದಿದೆ. ಸಿನಿಮಾ-ರಾಜಕೀಯ ಹೀಗೆ ಸಾಕಷ್ಟು ವಿಚಾರಗಳನ್ನು ನಟಿ ಹಂಚಿಕೊಂಡಿದ್ದಾರೆ. `ಅಮೃತಧಾರೆ’ (Amruthadaare) ಚಿತ್ರದಲ್ಲಿ ಬಿಗ್ ಬಿ ಜೊತೆ ನಟಿಸಿದ ಅನುಭವವನ್ನ ನಟಿ ಹೇಳಿದ್ದಾರೆ. ಇದನ್ನೂ ಓದಿ: ನನ್ನ ಜೀವನದ 3ನೇ ಪ್ರಭಾವಶಾಲಿ ವ್ಯಕ್ತಿ ರಾಹುಲ್‌ ಗಾಂಧಿ – ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ರಮ್ಯಾ ಮಾತು

    2015ರ `ಅಮೃತಧಾರೆ’ ಚಿತ್ರದಲ್ಲಿ ಧ್ಯಾನ್‌ಗೆ ನಾಯಕಿಯಾಗಿ ರಮ್ಯಾ (Ramya)  ನಟಿಸಿದ್ದರು. ಈ ಸಿನಿಮಾ ಜನರಿಗೆ ತಲುಪುವಲ್ಲಿ ಯಶಸ್ವಿಯಾಗಿತ್ತು. ವೀಕೆಂಡ್ ಟೆಂಟ್‌ನಲ್ಲಿ ರಮ್ಯಾ ಅಮಿತಾಬ್ ಬಚ್ಚನ್ (Amithab Bacchan) ಜೊತೆ ನಟಿಸಿದ್ದನ್ನು ಖುಷಿಯಿಂದ ನೆನಪಿಸಿಕೊಂದ್ದಾರೆ. ಹುಡುಗ-ಹುಡುಗ ಹಾಡಿನ ಚಿತ್ರೀಕರಣದ ವೇಳೆ ರಮ್ಯಾ ಆಮ್ಲಜನಕದ ಕೊರತೆಯಿಂದ ಪ್ರಜ್ಞೆತಪ್ಪಿ ಬಿದ್ದಿದ್ದು, ಯೋಧರಿಂದ ತಮಗೆ ಜೀವದಾನ ಸಿಕ್ಕ ಘಟನೆಗಳನ್ನು ನೆನಪಿಸಿಕೊಂಡರು. ಧ್ಯಾನ್ ಅಲಿಯಾಸ್ ಸಮೀರ್ ಅವರಿಂದ ಬಿಗ್ ಬಿ `ಅಮೃತಧಾರೆ’ ಚಿತ್ರದಲ್ಲಿ ನಟಿಸಲು ಒಪ್ಪಿದ್ದರು ಎಂದು ರಮ್ಯಾ ಹಂಚಿಕೊಂಡರು.

    ಬಳಿಕ `ಅಮೃತಧಾರೆ’ ಸಿನಿಮಾದ ನಾಯಕ ಧ್ಯಾನ್ ಹಾಗೂ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರುಗಳು ವಿಡಿಯೋ ಮೂಲಕ ರಮ್ಯಾರ ಸ್ನೇಹವನ್ನು ಕೊಂಡಾಡಿದರು. ರಮ್ಯಾರ ಸಿನಿಮಾಗಳನ್ನು ನಿರ್ದೇಶಿಸಿರುವ ಹಲವು ನಿರ್ದೇಶಕರು ರಮ್ಯಾರ ಸ್ನೇಹವನ್ನು, ಕೆಲಸದ ಬಗೆಗಿದ್ದ ಶ್ರದ್ಧೆಯನ್ನು ಕೊಂಡಾಡಿದರು.

    ಸ್ಯಾಂಡಲ್‌ವುಡ್ ಯುವನಟಿಯರಾದ ಅಮೃತಾ ಅಯ್ಯಂಗಾರ್, `ದಿಯಾ’ ಸಿನಿಮಾದ ಖುಷಿ ಇನ್ನು ಕೆಲವರು ವೀಕೆಂಡ್ ವಿತ್ ರಮೇಶ್ ವೇದಿಕೆಗೆ ಆಗಮಿಸಿ ರಮ್ಯಾ ಅವರು ತಮಗೆ ಸ್ಪೂರ್ತಿ, ಆದರ್ಶ ಎಂದರು. ಬಳಿಕ ನೆರೆಯ ತಮಿಳುನಾಡು ಚಿತ್ರರಂಗದ ದೊಡ್ಡ ನಿರ್ದೇಶಕ ವೆಟ್ರಿಮಾರನ್ ಸಹ ವಿಡಿಯೋ ಕಳಿಸಿ ರಮ್ಯಾ ಅದ್ಭುತ ನಟಿ, ಬಹಳ ಸ್ನೇಹಜೀವಿ ಎಂದು ಕೊಂಡಾಡಿದರು.