Tag: ಅಮೃತಾ ಅಯ್ಯರ್‌

  • ಗಣೇಶ್‌, ಅಮೃತಾ ಅಯ್ಯರ್‌ ಸಿನಿಮಾಗೆ ಸಿಕ್ತು ಅದ್ಧೂರಿ ಚಾಲನೆ

    ಗಣೇಶ್‌, ಅಮೃತಾ ಅಯ್ಯರ್‌ ಸಿನಿಮಾಗೆ ಸಿಕ್ತು ಅದ್ಧೂರಿ ಚಾಲನೆ

    ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಟನೆಯ ಹೊಸ ಸಿನಿಮಾಗೆ ಇಂದು (ಏ.6) ಅದ್ಧೂರಿಯಾಗಿ ಮುಹೂರ್ತ ಸಮಾರಂಭ ಜರುಗಿದೆ. ರಾಮನವಮಿಯ ದಿನದಂದು ಬೆಂಗಳೂರಿನ ಗಣಪತಿ ಸನ್ನಿಧಿಯಲ್ಲಿ ಈ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇದನ್ನೂ ಓದಿ:ರಾಮ್ ಚರಣ್ ‘ಪೆದ್ದಿ’ ಚಿತ್ರದ ಗ್ಲಿಂಪ್ಸ್ ಔಟ್‌- ನಟನ ಮಾಸ್‌ ಅವತಾರಕ್ಕೆ ಫ್ಯಾನ್ಸ್‌ ಫಿದಾ

    ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಸಕ್ಸಸ್ ಬೆನ್ನಲ್ಲೇ ಹೊಸ ಸಿನಿಮಾವೊಂದನ್ನು ಗಣೇಶ್ ಒಪ್ಪಿಕೊಂಡಿದ್ದಾರೆ. ಇಂದು ಈ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಈ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಗಣೇಶ್, ಅಮೃತಾ ಅಯ್ಯರ್ (Amritha Aiyer), ರವಿ ಶಂಕರ ಗೌಡ, ರಂಗಾಯಣ ರಘು, ನಿರ್ಮಾಪಕ ಉದಯ್ ಮೆಹ್ತಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ. ಇದನ್ನೂ ಓದಿ:ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿ- ಕನ್ನಡಕ್ಕೆ ಬಂದ ‘ಹನುಮಾನ್’ ಖ್ಯಾತಿಯ ಅಮೃತಾ ಅಯ್ಯರ್

    ಅರಸು ಅಂತಾರೆ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಗಣೇಶ್‌ಗೆ ನಾಯಕಿಯಾಗಿ ‘ಜೈ ಹನುಮಾನ್’ (Jai Hanuman) ಖ್ಯಾತಿಯ ಅಮೃತಾ ಅಯ್ಯರ್ (Amritha Aiyer) ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ಕನ್ನಡಕ್ಕೆ ಅವರು ಎಂಟ್ರಿ ಕೊಡುತ್ತಿದ್ದಾರೆ. ಇನ್ನೂ ಹೆಸರಿಡದ ಈ ಸಿನಿಮಾದ ಫಸ್ಟ್ ಶೆಡ್ಯೂಲ್ ಮುಗಿಸಿ ನಂತರ ಟೈಟಲ್ ಅನೌನ್ಸ್ ಮಾಡಲು ಚಿತ್ರತಂಡ ಪ್ಲ್ಯಾನ್‌ ಮಾಡಿಕೊಂಡಿದೆ.

  • ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿ- ಕನ್ನಡಕ್ಕೆ ಬಂದ ‘ಹನುಮಾನ್’ ಖ್ಯಾತಿಯ ಅಮೃತಾ ಅಯ್ಯರ್

    ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿ- ಕನ್ನಡಕ್ಕೆ ಬಂದ ‘ಹನುಮಾನ್’ ಖ್ಯಾತಿಯ ಅಮೃತಾ ಅಯ್ಯರ್

    ಬಿಜಿಲ್, ಹನುಮಾನ್ ಸಿನಿಮಾಗಳ ಮೂಲಕ ಗಮನ ಸೆಳೆದಿರುವ ಸೌತ್ ನಟಿ ಅಮೃತಾ ಅಯ್ಯರ್ (Amritha Aiyer) ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್‌ಗೆ (Golden Star Ganesh) ನಾಯಕಿಯಾಗುವ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶಿಸುತ್ತಿದ್ದಾರೆ.

    ಬೆಂಗಳೂರಿನಲ್ಲೇ ಓದಿ ಬೆಳೆದಿರುವ ಅಮೃತಾ ಅಯ್ಯರ್ ತೆಲುಗು, ತಮಿಳಿನಲ್ಲಿ ಸ್ಟಾರ್ ನಟರ ಸಿನಿಮಾಗಳಲ್ಲಿ ನಟಿಸುವ ಮೂಲಕ ಹೈಪ್ ಕ್ರಿಯೆಟ್ ಮಾಡಿದ್ದಾರೆ. ಈಗ ಗಣೇಶ್‌ಗೆ ನಾಯಕಿಯಾಗಿ ಕನ್ನಡದ ಸಿನಿಮಾಗೆ ಅವರು ಪಾದಾರ್ಪಣೆ ಮಾಡ್ತಿದ್ದಾರೆ. ‘ಲವ್ ಇನ್ ಮಂಡ್ಯ’ ಖ್ಯಾತಿಯ ನಿರ್ದೇಶಕ ಅರಸು ಅಂತಾರೆ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ.

    ಇನ್ನೂ ಗೋಲ್ಡನ್ ಸ್ಟಾರ್ ಗಣೇಶ್ ಕೈಯಲ್ಲೂ ಬಿಗ್ ಬಜೆಟ್ ಸಿನಿಮಾಗಳಿವೆ. ಸಾಲು ಸಾಲು ಸಿನಿಮಾಗಳು ಅವರು ಬ್ಯುಸಿಯಾಗಿದ್ದಾರೆ. ಇದರ ನಡುವೆ ಅರಸು ಅಂತಾರೆ ನಿರ್ದೇಶಕನ ಕಥೆ ಇಷ್ಟವಾಗಿ ಈ ಸಿನಿಮಾಗೂ ಅವರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇದನ್ನೂ ಓದಿ:‘ದಿ ಡೆವಿಲ್’ ಚಿತ್ರದ ಶೂಟಿಂಗ್ ಶುರು- ದರ್ಶನ್ ಭಾಗಿ

    ಫ್ಯಾಮಿಲಿ ಓರಿಯೆಂಟೆಡ್ ಕಥಾಹಂದರವಿರುವ ಚಿತ್ರವಾಗಿದೆ. ಇನ್ನೂ ಏ.6ರಂದು ಬೆಂಗಳೂರಿನಲ್ಲಿ ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ. ಏ.7ರಿಂದ ಮೊದಲ ಹಂತದ ಶೂಟಿಂಗ್ ಶುರುವಾಗಿದೆ. ಬೆಂಗಳೂರು, ಮೈಸೂರು ಸೇರಿದಂತೆ ಹಲವೆಡೆ ಈ ಸಿನಿಮಾದ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಲಾಗಿದೆ.

    ದಕ್ಷಿಣದ ಸಿನಿಮಾಗಳಲ್ಲಿ ಮನೆ ಮಾತಾಗಿರುವ ಅಮೃತಾ ಅವರು ಕನ್ನಡದ ಮೊದಲ ಸಿನಿಮಾದಲ್ಲೇ ಗಣೇಶ್‌ಗೆ ಜೋಡಿಯಾಗಿ ಬರುತ್ತಿರೋದು, ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಇಬ್ಬರ ಕಾಂಬಿನೇಷನ್ ಸಿನಿಮಾ ನೋಡಲು ಎದುರು ನೋಡ್ತಿದ್ದಾರೆ.

  • ಭಾರೀ ಬಜೆಟ್ ನಲ್ಲಿ ನಿರ್ಮಾಣವಾದ ‘ಹನು-ಮಾನ್’ ಚಿತ್ರದ ಟೀಸರ್ ರಿಲೀಸ್

    ಭಾರೀ ಬಜೆಟ್ ನಲ್ಲಿ ನಿರ್ಮಾಣವಾದ ‘ಹನು-ಮಾನ್’ ಚಿತ್ರದ ಟೀಸರ್ ರಿಲೀಸ್

    ಪ್ರಶಾಂತ್ ವರ್ಮಾ ಆಕ್ಷನ್ ಕಟ್ ಹೇಳಿರುವ ತೇಜ ಸಜ್ಜ ನಟನೆಯ ಬಹು ನಿರೀಕ್ಷಿತ ತೆಲುಗು ಸಿನಿಮಾ ‘ಹನು-ಮಾನ್’ ಟೀಸರ್ ಬಿಡುಗಡೆಯಾಗಿದೆ. ಪ್ರೈಮ್ ಶೋ ಎಂಟಟೈನ್ಮೆಂಟ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದೆ. ಟೀಸರ್ ಝಲಕ್ ಮೂಲಕ ಪ್ರೇಕ್ಷಕರೆದುರು ಬಂದಿರುವ ‘ಹನು – ಮಾನ್’ ಎಲ್ಲರ ಗಮನ ಸೆಳೆಯುತ್ತಿದೆ.  ಇದನ್ನೂ ಓದಿ:ಕೇಕ್‌ ಕತ್ತರಿಸಿ ಸಕ್ಸಸ್ ಆಚರಿಸಿದ ‌ʻಗಂಧದ ಗುಡಿʼ ಟೀಮ್

    ನಿರ್ದೇಶಕ ಪ್ರಶಾಂತ್ ವರ್ಮಾ ಭಾರತದ ಮೊದಲ ಸೂಪರ್ ಹೀರೋ ‘ಹನು-ಮಾನ್’ ಬಗ್ಗೆ ಕಥೆ ಹೆಣೆದು ಪ್ಯಾನ್ ಇಂಡಿಯಾ ನಿರ್ದೇಶಕನಾಗಿ ಹೊರ ಹೊಮ್ಮುತ್ತಿದ್ದಾರೆ. ಚಿತ್ರದಲ್ಲಿ ನಾಯಕ ನಟನಾಗಿ ಪ್ರತಿಭಾವಂತ ನಟ ತೇಜ ಸಜ್ಜ ನಟಿಸುತ್ತಿದ್ದು, ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿರೋದು ಟೀಸರ್ ಝಲಕ್ ನೋಡಿದಾಗಲೇ ತಿಳಿದು ಬರುತ್ತೆ. ಚಿತ್ರದಲ್ಲಿ ನಾಯಕಿಯಾಗಿ ಅಮೃತಾ ಐಯ್ಯರ್ ನಟಿಸಿದ್ದಾರೆ. ಬಿಡುಗಡೆಯಾಗಿರುವ ಟೀಸರ್ ಸಖತ್ ಪ್ರಾಮಿಸಿಂಗ್ ಆಗಿದ್ದು, ನಾಯಕ ನಟ ತೇಜ ಸಜ್ಜ ಲುಕ್, ಚಿತ್ರದ ಮೇಕಿಂಗ್, ಕ್ಯಾಮೆರಾ ವರ್ಕ್, ಮ್ಯೂಸಿಕ್ ಎಲ್ಲವೂ ಗಮನ ಸೆಳೆಯುತ್ತಿದೆ.

    ವರಲಕ್ಷಿ ಶರತ್ ಕುಮಾರ್,  ವಿನಯ್ ರೈ, ರಾಜ್ ದೀಪಕ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಗೆಟಪ್ ಶ್ರೀನು, ಸತ್ಯ ಒಳಗೊಂಡ ಸ್ಟಾರ್ ಕಲಾವಿದರ ತಾರಾಬಳಗ ಚಿತ್ರದಲ್ಲಿದೆ. ಯುವ ಹಾಗೂ ಪ್ರತಿಭಾವಂತ ಸಂಗೀತ ನಿರ್ದೇಶಕರಾದ ಗೌರಹರಿ, ಅನುದೀಪ್ ದೇವ್ ಮತ್ತು ಕೃಷ್ಣ ಸೌರಭ್ ಸಂಗೀತ ನಿರ್ದೇಶನ, ದಶರಧಿ ಶಿವೇಂದ್ರ ಕ್ಯಾಮೆರಾ ವರ್ಕ್, ಎಸ್. ಬಿ ರಾಜು ತಲರಿ ಸಂಕಲನ ಚಿತ್ರಕ್ಕಿದೆ. ಕೆ. ನಿರಂಜನ್ ರೆಡ್ಡಿ ಪ್ರೈಮ್ ಶೋ ಎಂಟಟೈನ್ಮೆಂಟ್ ಬ್ಯಾನರ್ ನಡಿ ಅದ್ದೂರಿಯಾಗಿ, ಬಿಗ್ ಬಜೆಟ್ ನಲ್ಲಿ ‘ಹನು-ಮಾನ್’ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಸಿನಿಮಾ ತಂಡ ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ.

    Live Tv
    [brid partner=56869869 player=32851 video=960834 autoplay=true]

  • ಸದ್ದಿಲ್ಲದೆ ಹಸೆಮಣೆ ಏರಿದ್ರಾ ʻಗ್ರಾಮಾಯಣʼ ಚಿತ್ರದ ನಾಯಕಿ ಅಮೃತಾ ಅಯ್ಯರ್

    ಸದ್ದಿಲ್ಲದೆ ಹಸೆಮಣೆ ಏರಿದ್ರಾ ʻಗ್ರಾಮಾಯಣʼ ಚಿತ್ರದ ನಾಯಕಿ ಅಮೃತಾ ಅಯ್ಯರ್

    ಹುಭಾಷಾ ನಟಿ ಅಮೃತಾ ಅಯ್ಯರ್ ದಕ್ಷಿಣದ ಸಿನಿಮಾಗಳ ಮೂಲಕ ಮೋಡಿ ಮಾಡಿದ್ದಾರೆ. ಇದೀಗ `ಗ್ರಾಮಾಯಣ’ ಚಿತ್ರದ ಮೂಲಕ ಈಗಾಗಲೇ ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ಇನ್ನು ಸದಾ ಸಿನಿಮಾ ವಿಷ್ಯವಾಗಿ ಸುದ್ದಿಯಲ್ಲಿರುತ್ತಿದ್ದ ನಟಿ ಈಗ ಸದ್ದಿಲ್ಲದೆ ಹಸೆಮಣೆ ಏರಿದ್ರಾ ಎಂಬ ಪ್ರಶ್ನೆ ಅಭಿಮಾನಿಗಳನ್ನ ಕಾಡುತ್ತಿದೆ.

     

    View this post on Instagram

     

    A post shared by Amritha – Thendral (@amritha_aiyer)

    ಬೆಂಗಳೂರು ಮೂಲದ ನಟಿ ಅಮೃತಾ ಅಯ್ಯರ್ ಕಾಲಿವುಡ್ ಮತ್ತು ಟಾಲಿವುಡ್ ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ್ದಾರೆ. ತಮಿಳಿನ `ಬಿಗಿಲ್’ ಮತ್ತು ಸೂಪರ್ ಸ್ಟಾರ್ ರಜನೀಕಾಂತ್ ಜತೆ ಲಿಂಗಾ ಚಿತ್ರದಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇನ್ನು ಕಳೆದರೆಡು ದಿನಗಳಿಂದ ನಟಿ ಅಮೃತಾಗೆ ಮದುವೆ ಆಗಿದೆ ಎಂದು ಅನ್ನುವ ಗುಸು ಗುಸು ಶುರುವಾಗಿದೆ. ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ವೆಡ್ಡಿಂಗ್ ಫೋಟೋ ಕೂಡ ವೈರಲ್ ಆಗಿದೆ. ಈ ಕುರಿತು ನಟಿ ಸ್ಪಷ್ಟನೆ ನೀಡಿದ್ದಾರೆ.

     

    View this post on Instagram

     

    A post shared by Amritha – Thendral (@amritha_aiyer)

    ದಕ್ಷಿಣ ಭಾರತದ ಚಿತ್ರಗಳಲ್ಲಿ ಗುರುತಿಸಿಕೊಂಡಿರುವ ಕನ್ನಡತಿಗೆ ಇದೀಗ ತಮ್ಮ ಮದುವೆ ವದಂತಿಗೆ ಸ್ಪಷ್ಟನೆ ನೀಡಿದ್ದಾರೆ. ವಣಕಂ ಡಾ ಮಾಪಿಳೈ ಸಿನಿಮಾದ ಫೋಟೋಗಳು ಎಂದು ನಟಿ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ನಟಿಯ ಪೋಸ್ಟ್‌ಗೆ ಫ್ಯಾನ್ಸ್ ಕೂಡ ರಿಯಾಕ್ಟ್ ಮಾಡಿದ್ದು, ಈಗಲೇ ಮದುವೆ ಬೇಡ, ನಟಿಸಿ ಎಂದು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಬುದ್ದಿಮಾಂದ್ಯ ಮಗನ ನೆನೆದು ಕಣ್ಣೀರಿಟ್ಟ ಮಾಳವಿಕಾ ಅವಿನಾಶ್

     

    View this post on Instagram

     

    A post shared by Amritha – Thendral (@amritha_aiyer)

    `ವಣಕಂ ಡಾ ಮಾಪಿಳೈ’ ಚಿತ್ರದಲ್ಲಿ ಅಮೃತಾ ಮದುವೆಯಾಗುವ ಸನ್ನಿವೇಶವೊಂದಿತ್ತು. ಆ ಫೋಟೊದಲ್ಲಿರುವ ವರನ ಫೋಟೋವನ್ನು ಕ್ರಾಪ್ ಮಾಡಿ ಬರೀ ಅಮೃತಾ ಫೊಟೊವನ್ನು ಯಾರೋ ಶೇರ್ ಮಾಡಿದ್ದಾರೆ. ಇದನ್ನು ನೋಡಿ ನಿಜವಾಗಿಯೂ ಅಮೃತಾಗೆ ಮದುವೆ ಆಗಿದೆ ಎಂದು ಫ್ಯಾನ್ಸ್ ಅಂದುಕೊಂಡಿದ್ದರು. ಹಾಗಾಗಿ ಈ ಫೋಟೊಗಳು ಸಖತ್ ವೈರಲ್ ಆಗಿತ್ತು. ಆಕೆಯ ಸ್ನೇಹಿತೆಯರು ಶುಭಾಶಯ ಕೋರಲು ಶುರು ಮಾಡಿದ ಮೇಲೆ ಎಚ್ಚೆತ್ತುಕೊಂಡು ನಟಿ ಮದುವೆ ವದಂತಿಗೆ ಸ್ಪಷ್ಟನೆ ನೀಡಿದ್ದಾರೆ.

    ಇನ್ನು ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾಗಿ, `ಗ್ರಾಮಾಯಣ’ ಚಿತ್ರದಲ್ಲಿ ನಟಿ ಅಮೃತಾ ಅಯ್ಯರ್ ನಟಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]