Tag: ಅಮೃತಾ ಫಡ್ನವೀಸ್

  • ಹಾವಿನೊಂದಿಗೆ ಆಟವಾಡಿದ ಮಹಾರಾಷ್ಟ್ರ ಡಿಸಿಎಂ ಪತ್ನಿ – ಮಹತ್ವದ ರಾಜಕೀಯ ಬೆಳವಣಿಗೆ ಎಂದ ನೆಟ್ಟಿಗರು!

    ಹಾವಿನೊಂದಿಗೆ ಆಟವಾಡಿದ ಮಹಾರಾಷ್ಟ್ರ ಡಿಸಿಎಂ ಪತ್ನಿ – ಮಹತ್ವದ ರಾಜಕೀಯ ಬೆಳವಣಿಗೆ ಎಂದ ನೆಟ್ಟಿಗರು!

    ಮುಂಬೈ: ನಟಿ, ಗಾಯಕಿ ಹಾಗೂ ಸೋಶಿಯಲ್‌ ಮೀಡಿಯಾ ಸ್ಟಾರ್‌ ಆಗಿರುವ ಮಹರಾಷ್ಟ್ರ (Maharashtra) ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರ ಪತ್ನಿ ಅಮೃತಾ ಫಡ್ನವೀಸ್‌ (Amruta Fadnavis) ಆಗಾಗ್ಗೆ ಜಾಲತಾಣಗಳಲ್ಲಿ ವಿಶೇಷ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಸದ್ದು ಮಾಡ್ತಿದ್ದಾರೆ.

    ಇದೀಗ ಹಾವುಗಳನ್ನ ಕೈಯಲ್ಲಿ ಹಿಡಿದುಕೊಂಡ ಫೋಟೋ ಹಂಚಿಕೊಂಡಿದ್ದು, ಅಭಿಮಾನಿಗಳನ್ನ ಅಚ್ಚರಿಗೊಳಿಸಿದ್ದಾರೆ. ಒಂದು ಫೋಟೋದಲ್ಲಿ ಎರಡು ವಿಭಿನ್ನ ಪ್ರಬೇಧದ ಹಾವುಗಳನ್ನ ಕೈಯಲ್ಲಿ ಹಿಡಿದುಕೊಂಡಿದ್ದಾರೆ. ಮತ್ತೊಂದು ಚಿತ್ರದಲ್ಲಿ ಉಡ ಸರಿಸೃಪವನ್ನು ಕೈಮೇಲೆ ಬಿಟ್ಟುಕೊಂಡಿದ್ದಾರೆ. ಈ ಫೋಟೋವನ್ನು ಟ್ವಿಟ್ಟರ್‌ನಲ್ಲಿ (Twitter) ಹಂಚಿಕೊಂಡಿದ್ದು, ʻಅತ್ಯಂತ ಅಪಾಯಕಾರಿ, ವಿಷಕಾರಿ ಮತ್ತು ಕ್ರೂರ ಪ್ರಾಣಿಗಳು ಮನುಷ್ಯರು ಮಾತ್ರ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಶಿಕ್ಷಣ ಸಚಿವರ ಬೆಂಗಾವಲು ವಾಹನ ಡಿಕ್ಕಿ – ರಸ್ತೆಯಲ್ಲೇ ಅಂಬುಲೆನ್ಸ್ ಪಲ್ಟಿ, ರೋಗಿ ಪಾರು!

    ಇದಕ್ಕೆ ಕೆಲವು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಹುಚ್ಚಾಟ ಎಂದು ಕ್ಲಾಸ್‌ ತೆಗೆದುಕೊಂಡಿದ್ದಾರೆ. ಮತ್ತೊಬ್ಬರು ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಯಲ್ಲಿ ಮಹತ್ತರ ಬದಲಾವಣೆ ಕಂಡುಬಂದಿದೆ ಎಂದು ವ್ಯಂಗ್ಯ ಮಾಡಿದ್ದಾರೆ. ಇದನ್ನೂ ಓದಿ: ಡಿವೋರ್ಸ್ ಹೆಚ್ಚಾಗಲು ಟ್ರಾಫಿಕ್ ಸಮಸ್ಯೆಯೂ ಕಾರಣವಾಗಿದೆ: ಅಮೃತಾ ಫಡ್ನವೀಸ್

    ಈ ಹಿಂದೆ ಸುಲಿಗೆ ಪ್ರಕರಣವೊಂದರಲ್ಲಿ ಮುಂಬೈ ಪೊಲೀಸರ ವಿಶೇಷ ತನಿಖಾ ತಂಡವೊಂದು ಮೂವರು ಆರೋಪಿಗಳ ವಿರುದ್ಧ 700 ಪುಟಗಳ ಚಾರ್ಜ್‌ಶೀಟ್‌ (ದೋಷಾರೋಪ ಪಟ್ಟಿ) ಸಲ್ಲಿಸಿದಾಗ ಅಮೃತಾ ಅವರ ಹೆಸರು ಮುನ್ನೆಲೆಗೆ ಬಂದಿತ್ತು. ಅಮೃತಾ ಫಡ್ನವೀಸ್ ಅವರಿಗೆ ಲಂಚ ನೀಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಮಲಬಾರ್ ಹಿಲ್ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ 385 ಮತ್ತು 120 (B), ಜೊತೆಗೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 8 ಮತ್ತು 12ರ ಅಡಿಯಲ್ಲಿ ಕೇಸ್‌ ದಾಖಲಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಧುನಿಕ ಭಾರತದ ಪಿತಾಮಹ ದೇಶಕ್ಕಾಗಿ ಏನ್ ಮಾಡಿದ್ದಾರೆ – ನಿತೀಶ್ ಕುಮಾರ್ ಪ್ರಶ್ನೆ

    ಆಧುನಿಕ ಭಾರತದ ಪಿತಾಮಹ ದೇಶಕ್ಕಾಗಿ ಏನ್ ಮಾಡಿದ್ದಾರೆ – ನಿತೀಶ್ ಕುಮಾರ್ ಪ್ರಶ್ನೆ

    ಪಾಟ್ನಾ: ಆಧುನಿಕ ಭಾರತದ ಪಿತಾಮಹ (Father of the Nation) ದೇಶಕ್ಕಾಗಿ ಏನು ಮಾಡಿದ್ದಾರೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ (Nitish Kumar) ಪ್ರಶ್ನಿಸಿದ್ದಾರೆ.

    ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ (Amruta Fadnavis) ಇತ್ತೀಚೆಗೆ `ಪ್ರಧಾನಿ ನರೇಂದ್ರ ಮೋದಿ ಆಧುನಿಕ ಭಾರತದ ಪಿತಾಮಹ’ ಎಂದು ಬಣ್ಣಿಸಿದ್ದರು. ಮಹಾತ್ಮ ಗಾಂಧಿ ಅವರು ರಾಷ್ಟ್ರಪಿತರೇ, ಮೋದಿ ಜೀ ಅವರು ನವ ಭಾರತದ ಪಿತಾಮಹ. ಇಬ್ಬರೂ ರಾಷ್ಟ್ರಪಿತಾಮಹರೇ ಎಂದು ಗುಣಗಾನ ಮಾಡಿದ್ದರು.

    ಅಮೃತಾ ಫಡ್ನವೀಸ್ ಹೇಳಿಕೆ ಉಲ್ಲೇಖಿಸಿ ಮಾತನಾಡಿದ ಅವರು, ನರೇಂದ್ರ ಮೋದಿ (Narendra Modi) ಅವರಿಗೂ ಸ್ವಾತಂತ್ರ‍್ಯ ಹೋರಾಟಕ್ಕೂ ಯಾವುದೇ ಸಂಬಂಧವಿಲ್ಲ, ಆರ್‌ಎಸ್‌ಎಸ್ (RSS) ಸ್ವಾತಂತ್ರ‍್ಯ ಹೋರಾಟಕ್ಕೆ ಕೊಡುಗೆ ನೀಡಿಲ್ಲ. ಆದರೂ ನಾವು ಭಾರತದ ಪಿತಾಮಹ ಅನ್ನೋ ಹೇಳಿಕೆಯನ್ನು ನಾವು ಕೇಳಿದ್ದೇವೆ. ಆಧುನಿಕ ಭಾರತದ ಪಿತಾಮಹ ದೇಶಕ್ಕಾಗಿ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೋದಿ ನವಭಾರತದ ಪಿತಾಮಹ – ಪ್ರಧಾನಿ ಗುಣಗಾನ ಮಾಡಿದ ಮಹಾರಾಷ್ಟ್ರ ಡಿಸಿಎಂ ಪತ್ನಿ

    ಮಹಾರಾಷ್ಟ್ರ (Maharashtra) ಕಾಂಗ್ರೆಸ್ (Congress) ಮುಖ್ಯಸ್ಥ ನಾನಾ ಪಟೋಲೆ ಸಹ ಅಮೃತಾ ಫಡ್ನವೀಸ್ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾತ್ಮ ಗಾಂಧಿ ಅವರನ್ನ ಯಾರೊಂದಿಗೂ ಹೋಲಿಸಲು ಸಾಧ್ಯವಿಲ್ಲ. ಏಕೆಂದರೆ ಬಿಜೆಪಿಯ ಆಧುನಿಕ ಭಾರತ ಕೆಲವು ಹಿತೈಷಿಗಳನ್ನು ಶ್ರೀಮಂತರನ್ನಾಗಿ ಮಾಡುವುದು ಹಾಗೂ ದೀನ ದಲಿತರನ್ನ ಹಸಿವಿನಿಂದಲೇ ಉಳಿಯುವಂತೆಯೇ ಮಾಡುತ್ತಿದೆ. ಇಂತಹ ನವಭಾರತ ನಮಗೆ ಬೇಕಿಲ್ಲ ಎಂದಿದ್ದಾರೆ. 

    ಕೆಲವು ಶ್ರೀಮಂತ ಉದ್ಯಮಿಗಳಿಗಾಗಿ ಮೋದಿಜಿಯನ್ನು ನವಭಾರತದ ರಾಷ್ಟ್ರಪಿತರನ್ನಾಗಿ ಮಾಡಲು ಅಮೃತಾ ಅವರು ಬಯಸಿದ್ರೆ, ಅವರು ಮಾಡಿಕೊಳ್ಳಲಿ, ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಹೊಸ ವರ್ಷ ಸಂಭ್ರಮ – ನಂದಿಗಿರಿಧಾಮಕ್ಕೆ ಲಗ್ಗೆ ಇಟ್ಟ ಸಾವಿರಾರು ಪ್ರವಾಸಿಗರು

    ಕಾಂಗ್ರೆಸ್ ಹಿರಿಯ ನಾಯಕ ಪ್ರಮೋದ್ ತಿವಾರಿ ಸಹ ಕಿಡಿ ಕಾರಿದ್ದು, ಬಿಜೆಪಿಯಲ್ಲಿ ಇಬ್ಬರು ಪಿತಾಮಹರು ಇರಬಹುದು, ಆದ್ರೆ ದೇಶದಲ್ಲಿ ಒಬ್ಬರೇ ರಾಷ್ಟ್ರಪಿತ ಎಂದು ತಿರುಗೇಟು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೋದಿ ನವಭಾರತದ ಪಿತಾಮಹ – ಪ್ರಧಾನಿ ಗುಣಗಾನ ಮಾಡಿದ ಮಹಾರಾಷ್ಟ್ರ ಡಿಸಿಎಂ ಪತ್ನಿ

    ಮೋದಿ ನವಭಾರತದ ಪಿತಾಮಹ – ಪ್ರಧಾನಿ ಗುಣಗಾನ ಮಾಡಿದ ಮಹಾರಾಷ್ಟ್ರ ಡಿಸಿಎಂ ಪತ್ನಿ

    ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ (Amruta Fadnavis), ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನ `ರಾಷ್ಟ್ರಪಿತ’ (ನವಭಾರತದ ಪಿತಾಮಹ) (Father of Nation) ಎಂದು ಹೇಳುವ ಮೂಲಕ ಮೋದಿ ಗುಣಗಾನ ಮಾಡಿದ್ದಾರೆ.

    ನಾಗ್ಪುರದಲ್ಲಿ ಬರಹಗಾರರ ಸಂಘವು ಆಯೋಜಿಸಿದ್ದ ಸಂದರ್ಶನ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿಯನ್ನು `ರಾಷ್ಟ್ರಪಿತ’ (Father of Nation) ಅಂದರೆ, ಗಾಂಧಿ ಏನಾಗುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾತ್ಮ ಗಾಂಧಿ ಅವರು ರಾಷ್ಟ್ರಪಿತ, ಮೋದಿ ಜೀ ಅವರು `ನವ ಭಾರತದ ಪಿತಾಮಹ. ಇಬ್ಬರೂ ರಾಷ್ಟ್ರಪಿತಾಮಹರೇ ಎಂದು ಮರಾಠಿಯಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ನಾನು ಅಕ್ರಮವಾಗಿ ಸಂಪಾದನೆ ಮಾಡಿದ್ರೆ, ಅಷ್ಟೂ ಆಸ್ತಿ ದಾನ ಮಾಡ್ತೀನಿ – ಸಿ.ಟಿ ರವಿ

    ಅಮೃತಾ ಫಡ್ನವೀಸ್ 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬಕ್ಕೆ ಶುಭ ಕೋರುವಾಗಲೂ `ನಮ್ಮ ದೇಶದ ಪಿತಾಮಹ ನರೇಂದ್ರ ಮೋದಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ಸಮಾಜದ ಒಳಿತಿಗಾಗಿ ಪಟ್ಟುಬಿಡದೆ ಕೆಲಸ ಮಾಡಲು ನಮ್ಮನ್ನು ಪ್ರೇರೇಪಿಸುತ್ತಾರೆ’ ಎಂದು ಸಂದೇಶ ಹಂಚಿಕೊಂಡಿದ್ದರು. ಇದನ್ನೂ ಓದಿ: ಚೀನಾದಂತೆ ನಾವು ಕರ್ನಾಟಕಕ್ಕೆ ಎಂಟ್ರಿ ಕೊಡ್ತೀವಿ – ಸಂಜಯ್‌ ರಾವತ್‌

    ಆಗಾಗ್ಗೆ ಸುದ್ದಿಯಲ್ಲಿರುವ ಅಮೃತಾ ಫಡ್ನವೀಸ್ ಅವರ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳು ಹಾಗೂ ಹೇಳಿಕೆಗಳು ಈ ವರ್ಷಾರಂಭದಲ್ಲಿ ಮಾಜಿ ಸಿಎಂ ಉದ್ಧವ್ ಠಾಕ್ರೆ (Uddhav Thackeray) ಸರ್ಕಾರ ಉರುಳಿಸಲು ಕಾರಣವಾಯಿತು. ಬಳಿಕ ಏಕನಾಥ್ ಶಿಂಧೆ (Eknath Shinde) ಬಣ ಅಧಿಕಾರಕ್ಕೆ ಬಂದಿತು. ಏಕನಾಥ್ ಶಿಂಧೆ ಮುಖ್ಯಮಂತ್ರಿ ಹಾಗೂ ಅಮೃತಾ ಪತಿ ದೇವೇಂದ್ರ ಫಡ್ನವೀಸ್ ಉಪಮುಖ್ಯಮಂತ್ರಿಯಾದರು.

    Live Tv
    [brid partner=56869869 player=32851 video=960834 autoplay=true]

  • ಟ್ರಾಫಿಕ್‍ನಿಂದ ವಿಚ್ಛೇದನ ಆಗೋದಾದ್ರೆ ಬೆಂಗ್ಳೂರಿಗೆ ಮೊದಲ ಸ್ಥಾನ- ಅಮೃತಾ ಹೇಳಿಕೆಗೆ ನೆಟ್ಟಿಗರು ವ್ಯಂಗ್ಯ

    ಟ್ರಾಫಿಕ್‍ನಿಂದ ವಿಚ್ಛೇದನ ಆಗೋದಾದ್ರೆ ಬೆಂಗ್ಳೂರಿಗೆ ಮೊದಲ ಸ್ಥಾನ- ಅಮೃತಾ ಹೇಳಿಕೆಗೆ ನೆಟ್ಟಿಗರು ವ್ಯಂಗ್ಯ

    ಬೆಂಗಳೂರು: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಅವರೊಂದು ಹೇಳಿಕೆ ನಿಡಿದ್ದು, ಇದೀಗ ಅವರ ಹೇಳಿಕೆಗೆ ಹಲವಾರು ರೀತಿಯ ಮೀಮ್ಸ್ ಗಳು ಹುಟ್ಟಿಕೊಂಡಿವೆ.

    ಅಮೃತಾ ಅವರು ನಿನ್ನೆ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಟ್ರಾಫಿಕ್ ನಿಂದ ನಿಮ್ಮ ಕುಟುಂಬಗಳಿಗೆ ನಿಮಗೆ ಸಮಯ ಕೊಡಲು ಅಸಾಧ್ಯವಾಗುತ್ತೆ. ಹೀಗಾಗಿ ವಿಚ್ಛೇದನಕ್ಕೆ ಇದೂ ಒಂದು ಕಾರಣವಾಗುತ್ತೆ ಎಂದು ಹೇಳಿದ್ದರು. ಅಮೃತಾ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಅಲ್ಲದೆ ಅಮೃತಾ ಹೇಳಿಕೆಗೆ ನೆಟ್ಟಿಗರು ಕೂಡ ವ್ಯಂಗ್ಯವಾಡಿದ್ದು, ಹಲವಾರು ರೀತಿಯ ಮೀಮ್ಸ್ ಗಳು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಸಾಮಾನ್ಯವಾಗಿ ಸಡನ್ ಆಗಿ ಪತಿ ಅಥವಾ ಪತ್ನಿ ಮನೆಗೆ ಬಂದಾಗ ಎಷ್ಟೋ ಅಕ್ರಮ ಸಂಬಂಧಗಳು ಬಯಲಾಗಿ, ಡಿವೋರ್ಸ್ ಆಗಿರುವ ಬಗ್ಗೆ ಕೆಲವೊಂದು ಸ್ಟೋರಿಗಳನ್ನು ಓದಿದ್ದೇನೆ. ಹೀಗಾಗಿ ನೀವು ಉತ್ತಮ ಟ್ರಾಫಿಕ್ ಅನ್ನು ದೂಷಿಸಬೇಕೋ ಹೊರತು ಟ್ರಾಫಿಕ್ ಜಾಮ್ ಅಲ್ಲ ಎಂದು ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್‌ ಹಾಡು ಕೇಳಿ ವೇದಿಕೆಯಲ್ಲಿ ಕಣ್ಣೀರು ಹಾಕಿದ್ರು ಜವಾಹರ್‌ಲಾಲ್‌ ನೆಹರೂ

    ಇನ್ನೊಬ್ಬರು, ವಾವ್..! ಈಗ ಮುಂಬೈನಲ್ಲಿ ಆಗಿರುವ ಒಟ್ಟು ಡಿವೋರ್ಸ್ ಗಳಲ್ಲಿ ಶೇ.3ರಷ್ಟು ಪ್ರಕರಣಕ್ಕೆ ಟ್ರಾಫಿಕ್ ಕಾರಣ ಎಂದು ಹೇಳಲಾಗುತ್ತಿದೆ. ಹಾಗಾದರೆ ಬೆಂಗಳೂರು, ಕೋಲ್ಕತ್ತಾ ಮಂದಿಯ ಕಥೆ ಏನಾಗಬೇಡ ಎಂದು ಪ್ರಶ್ನಿಸಿದ್ದಾರೆ. ಒಂದು ವೇಳೆ ಇದರಿಂದ ವಿಚ್ಛೇದನಗಳಾಗೋದಾದ್ರೆ ಅದಕ್ಕೆ ಟ್ರಾಫಿಕ್ ವಿಚ್ಛೇದನ ಅಥವಾ ಜಾಮ್ ವಿಚ್ಛೇದನ ಅಂತ ಕರೆಯಬಹುದೇ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್‌ರ ಮೊದಲ ಹಾಡನ್ನು ಸಿನಿಮಾದಿಂದ ತೆಗೆಯಲಾಗಿತ್ತು – ನೀವು ತಿಳಿಯಲೇಬೇಕಾದ 10 ಸಂಗತಿಗಳು ಇಲ್ಲಿವೆ!

    ವಿಚ್ಛೇದನಕ್ಕೆ ಟ್ರಾಫಿಕ್ ಕಾರಣ ಎಂಬುದು ತುಂಬಾ ಆಸಕ್ತಿದಾಯಕ ವಿಚಾರವಾಗಿದೆ. ಒಂದು ವೇಳೆ ಟ್ರಾಫಿಕ್ ಕಾರಣವೆಂದಾದರೆ ಬೆಂಗಳೂರಿನಲ್ಲಿ ಶೆ.10 ರಷ್ಟು ವಿಚ್ಛೇದನಗಳಾಗಬಹುದು ಎಂದು ಮತ್ತೊಬ್ಬರು ಟೀಕಿಸಿದ್ದಾರೆ. ಅಲ್ಲದೆ ಅನಿಲಬ್ ಸಿಂಗ್ ಎಂಬವರು, ಟ್ರಾಫಿಕ್ ಕಾರಣವೆಂದಾದರೆ ಸದ್ಯ ಬೆಂಗಳೂರಿನ ಪ್ರತಿಯೊಬ್ಬರು ಇಷ್ಟೊತ್ತಿಗೆ ಸಿಂಗಲ್ ಆಗಿ ಇರುತ್ತಿದ್ದರು ಎಂದಿದ್ದಾರೆ.

    ನಿನ್ನೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಅಮೃತಾ, ನಾನು ಮಾಜಿ ಸಿಎಂ ಪತ್ನಿಯಾಗಿ ಅಲ್ಲ, ಬದಲಿಗೆ ಸಾಮಾನ್ಯ ನಾಗರಿಕಳಾಗಿ ಹೇಳುತ್ತಿದ್ದೇನೆ. ನಾನು ಒಮ್ಮೆ ಹೊರಗೆ ಹೋದಾಗ ಗುಂಡಿಗಳು, ಟ್ರಾಫಿಕ್ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತೇನೆ. ಟ್ರಾಫಿಕ್ ನಿಂದ ಜನ ತಮ್ಮ ಕುಟುಂಬಗಳಿಗೆ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಡಿವೋರ್ಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಮುಂಬೈನಲ್ಲಿ ಶೇ.3ರಷ್ಟು ವಿಚ್ಛೇದನಗಳು ಟ್ರಾಫಿಕ್ ಸಮಸ್ಯೆಯಿಂದಲೇ ಉಂಟಾಗುತ್ತಿವೆ ಎಂದು ಹೇಳಿಕೆ ನೀಡಿದ್ದರು. ಒಟ್ಟಿನಲ್ಲಿ ಅಮೃತಾ ಫಡ್ನವೀಸ್ ಅವರ ಹೇಳಿಕೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

    https://twitter.com/codenamedeb/status/1489961471203151873

  • ಡಿವೋರ್ಸ್ ಹೆಚ್ಚಾಗಲು ಟ್ರಾಫಿಕ್ ಸಮಸ್ಯೆಯೂ ಕಾರಣವಾಗಿದೆ: ಅಮೃತಾ ಫಡ್ನವೀಸ್

    ಡಿವೋರ್ಸ್ ಹೆಚ್ಚಾಗಲು ಟ್ರಾಫಿಕ್ ಸಮಸ್ಯೆಯೂ ಕಾರಣವಾಗಿದೆ: ಅಮೃತಾ ಫಡ್ನವೀಸ್

    ಮುಂಬೈ: ಟ್ರಾಫಿಕ್ ಸಮಸ್ಯೆಯಿಂದ ಕುಟುಂಬಗಳಿಗೆ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿಯೇ ವಿಚ್ಛೇದನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಮಹರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್(Amruta fadnavis) ಹೇಳಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಾಮಾನ್ಯ ನಾಗರಿಕಳಾಗಿ ಹೇಳುತ್ತಿದ್ದೇನೆ, ನಾನು ಒಮ್ಮೆ ಹೊರಗೆ ಹೋದಾಗ ಗುಂಡಿಗಳು, ಟ್ರಾಫಿಕ್ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತೇನೆ. ಟ್ರಾಫಿಕ್ ಕಾರಣ, ಜನರು ತಮ್ಮ ಕುಟುಂಬಗಳಿಗೆ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಪರಿಣಾಮ ವಿಚ್ಛೇದನ ಪ್ರಕರಣಗಳು ಹೆಚ್ಚುತ್ತಿವೆ. ಮುಂಬೈನಲ್ಲಿ ಶೇ.3ರಷ್ಟು ವಿಚ್ಛೇದನಗಳು ಟ್ರಾಫಿಕ್ ಸಮಸ್ಯೆಯಿಂದ ನಡೆಯುತ್ತಿವೆ ಎಂದಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿನೇ ಹಿಜಬ್ ಹಾಕಿದ್ದಾರೆ: ಸಿಎಂ ಇಬ್ರಾಹಿಂ

    ಮುಂಬೈನಲ್ಲಿ ಟ್ರಾಫಿಕ್ ಸಮಸ್ಯೆ ಸಾಮಾನ್ಯವಾಗಿಬಿಟ್ಟಿದೆ. ಇದರಿಂದಾಗಿ ಕುಟುಂಬಸ್ಥರು ಪರಸ್ಪರ ಸಮಯ ಕೊಡಲಾಗುತ್ತಿಲ್ಲ. ಜನಜೀವನದ ಮೇಲೆ ಟ್ರಾಫಿಕ್ ಸಮಸ್ಯೆ ಭಾರಿ ಪರಿಣಾಮ ಬೀರಿದೆ ಎಂದರು. ದನ್ನೂ ಓದಿ: ಆಧಾರ್ ಪೌರತ್ವದ ಪುರಾವೆಯಲ್ಲ: ಸಂಸತ್‌ನಲ್ಲಿ ಕೇಂದ್ರ ಸ್ಪಷ್ಟನೆ