Tag: ಅಮೃತಾ

  • ಸಾರ್ವಜನಿಕರಲ್ಲಿ ವಿನಂತಿ: ಮೈನವಿರೇಳಿಸೋ ಟ್ರೈಲರ್ ಲಾಂಚ್ ಆಗಿದೆ!

    ಸಾರ್ವಜನಿಕರಲ್ಲಿ ವಿನಂತಿ: ಮೈನವಿರೇಳಿಸೋ ಟ್ರೈಲರ್ ಲಾಂಚ್ ಆಗಿದೆ!

    ಕೃಪಾ ಸಾಗರ್ ನಿರ್ದೇಶನದ ‘ಸಾರ್ವಜನಿಕರಲ್ಲಿ ವಿನಂತಿ’ ಚಿತ್ರ ಟೀಸರ್ ಮೂಲಕವೇ ಸಂಚಲನ ಸೃಷ್ಟಿಸಿತ್ತು. ಈ ಕಾರಣದಿಂದಲೇ ಎಲ್ಲ ವರ್ಗದ ಪ್ರೇಕ್ಷಕರೂ ಈ ಸಿನಿಮಾದ ಮೇಲೆ ಕುತೂಹಲದ ಕಣ್ಣಿಟ್ಟಿರುವ ಈ ಹೊತ್ತಿನಲ್ಲಿ, ಥೇಟರಿಗೆ ಆಗಮಿಸಲು ದಿನಗಳಷ್ಟೇ ಬಾಕಿ ಇರುವಾಗ ಟ್ರೈಲರ್ ಲಾಂಚ್ ಮಾಡಲಾಗಿದೆ.

    ಮದನ್ ರಾಜ್ ಮತ್ತು ಅಮೃತಾ ನಾಯಕ ನಾಯಕಿಯರಾಗಿ ನಟಿಸಿರೋ ಈ ಚಿತ್ರ ಕ್ರೈಂ ಥ್ರಿಲ್ಲರ್ ಜಾನರಿನ ಪ್ರಯೋಗಾತ್ಮಕ ಚಿತ್ರ ಎಂಬುದು ಈ ಹಿಂದೆಯೇ ಬಯಲಾಗಿತ್ತು. ಆದರೆ ಅದರ ನಿಜವಾದ ರೂಪುರೇಷೆ ಏನಿರಬಹುದೆಂಬುದರ ಅಂದಾಜು ಈ ಟ್ರೈಲರ್ ಮೂಲಕ ಅನಾವರಣಗೊಂಡಿದೆ. ಚಿತ್ರ ವಿಚಿತ್ರ ಅಪರಾಧ ಪ್ರಕರಣಗಳು, ವಿಕ್ಷಿಪ್ತ ಆಸಾಮಿಗಳು, ಒಂದು ಕೊಲೆ ಮತ್ತು ಪ್ರೀತಿ… ಇಷ್ಟನ್ನಿಟ್ಟುಕೊಂಡು ನಿರ್ದೇಶಕರು ಕಮಾಲ್ ಸೃಷ್ಟಿಸಲು ಹೊರಟಿರೋ ಸ್ಪಷ್ಟ ಸೂಚನೆಯನ್ನು ಈ ಟ್ರೈಲರ್ ರವಾನಿಸಿದೆ.

    ಸಾಮಾನ್ಯವಾಗಿ ತುರ್ತು ಪರಿಸ್ಥಿತಿಗಳ ಸಂದರ್ಭದಲ್ಲಿ ಪ್ರಕಟಣೆಗಳನ್ನು ಹೊರಡಿಸುವಾಗ ಪೊಲೀಸ್ ಇಲಾಖೆ ಹೆಚ್ಚಿನದಾಗಿ ಸಾರ್ವಜನಿಕರಲ್ಲಿ ವಿನಂತಿ ಎಂಬ ಸ್ಲೋಗನ್ ಬಳಸುತ್ತಾ ಬಂದಿದೆ. ಈ ಚಿತ್ರವನ್ನು ಪೊಲೀಸರಿಗೇ ಅರ್ಪಿಸಿ ಚಿತ್ರತಂಡ ಗಮನ ಸೆಳೆದಿತ್ತು. ಇದೀಗ ಹೊರ ಬಂದಿರೋ ಟ್ರೈಲರ್ ಒಟ್ಟಾರೆ ಚಿತ್ರದಲ್ಲಿ ಪೊಲೀಸರದ್ದೆಷ್ಟು ಮಹತ್ವದ ಪಾತ್ರವಿದೆ ಎಂಬುದರ ಸೂಚನೆಯನ್ನೂ ನೀಡಿದೆ.

    ಒಟ್ಟಾರೆಯಾಗಿ ಈ ಹಿಂದೆ ಬಿಡುಗಡೆಯಾದ ಟೀಸರ್ ಮೂಲಕ ಸಾರ್ವಜನಿಕರಲ್ಲಿ ವಿನಂತಿಯತ್ತ ಕುತೂಹಲ ಕಾವೇರಿತ್ತು. ಈಗ ಲಾಂಚ್ ಆಗಿರುವ ಟ್ರೈಲರ್ ಅದನ್ನು ಮತ್ತಷ್ಟು ಕಾವೇರುವಂತೆ ಮಾಡಿ ಬಿಟ್ಟಿದೆ. ಪ್ರಯೋಗಾತ್ಮಕವಾದ ಪಕ್ಕಾ ಕಮರ್ಶಿಯಲ್ ಜಾಡಿನ ಈ ಚಿತ್ರ ಇದೇ 21ನೇ ತಾರೀಕಿನಂದು ಬಿಡುಗಡೆಯಾಗುತ್ತಿದೆ.

  • ಸಾರ್ವಜನಿಕರಲ್ಲಿ ವಿನಂತಿ: ಸೆನ್ಸಾರ್ ಮುಗಿಸಿಕೊಂಡು ಥೇಟರಿಗೆ ಬರಲು ರೆಡಿ!

    ಸಾರ್ವಜನಿಕರಲ್ಲಿ ವಿನಂತಿ: ಸೆನ್ಸಾರ್ ಮುಗಿಸಿಕೊಂಡು ಥೇಟರಿಗೆ ಬರಲು ರೆಡಿ!

    ಬೆಂಗಳೂರು: ಟೀಸರ್ ಮೂಲಕವೇ ವ್ಯಾಪಕ ಚರ್ಚೆ, ಕುತೂಹಲ ಹುಟ್ಟು ಹಾಕಿರೋ ಚಿತ್ರ `ಸಾರ್ವಜನಿಕರಲ್ಲಿ ವಿನಂತಿ’. ಯಾವ ಸದ್ದುಗದ್ದಲವೂ ಇಲ್ಲದೇ ಚಿತ್ರೀಕರಣ ಮುಗಿಸಿಕೊಂಡು ಆ ನಂತರ ಕೆಲಸ ಕಾರ್ಯಗಳ ಮೂಲಕವೇ ಸೆನ್ಸೇಷನ್ ಕ್ರಿಯೇಟ್ ಮಾಡುತ್ತವಲ್ಲಾ? ಅಂಥಾ ಚಿತ್ರಗಳನ್ನು ಪ್ರೇಕ್ಷಕರು ಗಂಭೀರವಾಗಿ ಪರಿಗಣಿಸುತ್ತಾರೆ. ಈ ವೆರೈಟಿಯ ಚಿತ್ರಗಳಿಗೆ ಗೆಲುವು ಗ್ಯಾರೆಂಟಿ ಎಂಬಂಥಾ ನಂಬಿಕೆಯೂ ಇದೆ. ಇಂಥಾ ನಂಬಿಕೆ ಹುಟ್ಟು ಹಾಕಿರೋ ಸಾರ್ವಜನಿಕರಲ್ಲಿ ವಿನಂತಿ ಸೆನ್ಸಾರ್ ಮುಗಿಸಿಕೊಂಡು ಥೇಟರಿನತ್ತ ಮುಖ ಮಾಡಿದೆ.

    ಕೃಪಾ ಸಾಗರ್ ನಿರ್ದೇಶನದ ಈ ಚಿತ್ರಕ್ಕೆ ಸೆನ್ಸಾರ್ ಕಡೆಯಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ. ಇದೇ ಖುಷಿಯಲ್ಲಿ ಚಿತ್ರತಂಡ ಬಿಡುಗಡೆಯ ದಿನಾಂಕವನ್ನೂ ಘೋಷಿಸಿದೆ. ಈ ನಿಟ್ಟಿನಲ್ಲಿ ಹೇಳೋದಾದರೆ ಇದೇ ತಿಂಗಳ 21ರಂದು ತೆರೆಗಾಣಲಿದೆ.

    ಈಗಾಗಲೇ ಒಂದಷ್ಟು ವರ್ಷಗಳಿಂದ ಯೋಗರಾಜ ಭಟ್ ಸೇರಿದಂತೆ ಅನೇಕ ನಿರ್ದೇಶಕರ ಗರಡಿಯಲ್ಲಿ ಪಳಗಿಕೊಂಡಿರುವವರು ಕೃಪಾ ಸಾಗರ್. ಈ ಅವಧಿಯ ತುಂಬಾ ಪ್ರೇಕ್ಷಕರ ನಾಡಿ ಮಿಡಿತವನ್ನು ಅರ್ಥ ಮಾಡಿಕೊಂಡಿರೋ ಅವರು ಸಾಮಾಜಿಕ ಕಾಳಜಿ ಇರೋ ಕಥಾ ಹಂದರವನ್ನು ಈ ಮೂಲಕ ಪಕ್ಕಾ ಕಮರ್ಶಿಯಲ್ ವೇನಲ್ಲಿ ಹೇಳಿದ್ದಾರಂತೆ.

    ಈ ಚಿತ್ರದಲ್ಲಿ ಮದನ್ ರಾಜ್ ಮತ್ತು ಅಮೃತಾ ನಾಯಕ ನಾಯಕಿಯರಾಗಿ ನಟಿಸಿದ್ದಾರೆ. ಮಂಡ್ಯ ರಮೇಶ್, ರಮೇಶ್ ಪಂಡಿತ್ ಮುಂತಾದವರ ಅದ್ಧೂರಿ ತಾರಾಗಣ ಈ ಚಿತ್ರಕ್ಕಿದೆ. ಈ ಸಮಾಜದಲ್ಲಿ ಮೇಲು ನೋಟಕ್ಕೆ ಗೊತ್ತಾಗುವಂಥಾ ಅದೆಷ್ಟೋ ಬಗೆಯ ಅಪರಾಧ ಪ್ರಕರಣಗಳಿವೆ. ಆದರೆ ನಮ್ಮೆಲ್ಲರ ಬೆನ್ನ ಹಿಂದೆ ನಡೆಯೋ ನಿಗೂಢ ಕ್ರೈಮುಗಳದ್ದೊಂದು ಜಗತ್ತಿದೆ. ಅಂಥಾ ವಿರಳ ಸನ್ನಿವೇಶಗಳನ್ನು ಸೇರಿಸಿಕೊಂಡು ಸಾರ್ವಜನಿಕರೆಲ್ಲ ಗಮನಹರಿಸಲೇ ಬೇಕಾದ ಕಥೆಯನ್ನು ಥ್ರಿಲ್ಲರ್ ಶೈಲಿಯಲ್ಲಿ ಹೇಳಲಾಗಿದೆಯಂತೆ.

  • ಸಾರ್ವಜನಿಕರಲ್ಲಿ ವಿನಂತಿ: ಟೀಸರ್ ಸೃಷ್ಟಿಸಿದ ಸೌಂಡು ಸೂಪರ್!

    ಸಾರ್ವಜನಿಕರಲ್ಲಿ ವಿನಂತಿ: ಟೀಸರ್ ಸೃಷ್ಟಿಸಿದ ಸೌಂಡು ಸೂಪರ್!

    ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಯುವ ಮನಸುಗಳ ಆಗಮನವಾಗಿ ಹೊಸ ಆಲೋಚನೆಗಳ ಹರಿವು ಶುರುವಾಗಿದೆ. ಈ ಕಾರಣದಿಂದಲೇ ಭಿನ್ನವಾದ ಒಂದಷ್ಟು ಚಿತ್ರಗಳು ಪ್ರೇಕ್ಷಕರ ಮುಂದೆ ಅನಾವರಣಗೊಳ್ಳುತ್ತಿವೆ. ಈ ಸಾಲಿನಲ್ಲಿ ದಾಖಲಾಗುತ್ತಲೇ ಗೆಲುವಿನ ಛಾಪು ಮೂಡಿಸಬಲ್ಲ ಚಿತ್ರವೊಂದರ ಟೀಸರ್ ಈಗ ಪ್ರೇಕ್ಷಕರ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಇಂಥಾದ್ದೊಂದು ಟೀಸರ್ ಹವಾ ಸೃಷ್ಟಿಸಿರೋ ಸಿನಿಮಾ ‘ಸಾರ್ವಜನಿಕರಲ್ಲಿ ವಿನಂತಿ’!

    ಇದು ಹೊಸಬರೇ ಸೇರಿಕೊಂಡು ಮಾಡಿರೋ ಚಿತ್ರ. ಕೃಪಾ ಸಾಗರ್ ಕಮರ್ಶಿಯಲ್ ವೇನಲ್ಲಿಯೇ ಸಾಮಾಜಿಕ ಸಂದೇಶ ಇರುವ ಕಥೆಯೊಂದನ್ನು ಈ ಸಿನಿಮಾ ಮೂಲಕ ಹೇಳಲು ಮುಂದಾಗಿದ್ದಾರಂತೆ. ತಿಂಗಳ ಹಿಂದೆ ಬಿಡುಗಡೆಯಾಗಿದ್ದ ಈ ಚಿತ್ರದ ಟೀಸರ್ ಮಾತ್ರ ತುಂಬು ಭರವಸೆ ಹುಟ್ಟಿಸುವಂತಿದೆ. ಸೂಕ್ಷ್ಮವಂತಿಕೆಯ ಮನಸುಗಳಿಗೆಲ್ಲ ಗತ ಕಾಲದ ಪರಿಮಳವನ್ನು ಪರಿಚಯಿಸುತ್ತಲೇ ಆರಂಭವಾಗೋ ಈ ಸಿನಿಮಾ ಕ್ರೈಂ ಥ್ರಿಲ್ಲರ್ ಜಾನರಿನದ್ದೆಂಬ ಹೊಳಹೂ ಸಿಕ್ಕಿದೆ. ಇದಲ್ಲದೆ ಇಡೀ ಚಿತ್ರ ಹೊಸತೇನನ್ನೋ ಒಡಲಲ್ಲಿಟ್ಟುಕೊಂಡಿದೆ ಎಂಬ ಸುಳಿವೂ ಪ್ರೇಕ್ಷಕರಿಗೆ ಸಿಕ್ಕಿ ಬಿಟ್ಟಿದೆ.

    ಸಾರ್ವಜನಿಕರಲ್ಲಿ ವಿನಂತಿ ಚಿತ್ರವನ್ನು ಕೃಪಾ ಸಾಗರ್ ನಮ್ಮ ನಡುವೆಯೇ ನಡೆಯೋ ಘಾತುಕ ಘಟನಾವಳಿಗಳ ಸ್ಫೂರ್ತಿಯಿಂದ ಕಥೆ ಹೊಸೆದು ನಿರ್ದೇಶನ ಮಾಡಿದ್ದಾರೆ. ವಿಶೇಷವೆಂದರೆ ಈ ಚಿತ್ರವನ್ನು ಸದಾ ಸಾರ್ವಜನಿಕರ ರಕ್ಷಣೆಗೆ ಟೊಂಕ ಕಟ್ಟಿ ನಿಂತಿರೋ ಪೊಲೀಸರಿಗೆ ಅರ್ಪಿಸಲಾಗಿದೆ. ಕಥೆಯ ವಿಚಾರಕ್ಕೆ ಬಂದರೆ ಪೊಲೀಸರ ಪಾತ್ರ ಪ್ರಧಾನವಾಗಿದೆಯಂತೆ. ಪೊಲೀಸರಿಗೆಂದೇ ವಿಶೇಷ ಹಾಡೊಂದನ್ನು ಚಿತ್ರತಂಡ ರೆಡಿ ಮಾಡಿದೆ. ಅದನ್ನು ವಿಜಯ್ ಪ್ರಕಾಶ್ ಹಾಡಿದ್ದಾರಂತೆ.

    ಮದನ್ ರಾಜ್ ಮತ್ತು ಅಮೃತಾ ಈ ಮೂಲಕ ನಾಯಕ ನಾಯಕಿಯರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಮಂಡ್ಯ ರಮೇಶ್, ರಮೇಶ್ ಪಂಡಿತ್ ಸೇರಿದಂತೆ ಅದ್ಧೂರಿ ತಾರಾಗಣ ಈ ಚಿತ್ರಕ್ಕಿದೆ. ಈಗಾಗಲೇ ಟೀಸರ್‍ಗೆ ಸಿಗುತ್ತಿರೋ ಭಾರೀ ಮೆಚ್ಚುಗೆ ಚಿತ್ರತಂಡಕ್ಕೆ ಹೊಸ ಹುರುಪು ತುಂಬಿದೆ. ಅದೇ ಜೋಶ್ ನಲ್ಲಿ ಆದಷ್ಟು ಬೇಗನೆ ತೆರೆಗೆ ಬರಲು ಸಿದ್ಧತೆ ನಡೆಯುತ್ತಿದೆ.

  • ರಿಯಲ್ ಲೈಫಿನಲ್ಲೂ ಮಿ. ಆ್ಯಂಡ್ ಮಿಸಸ್ ಆದ ಅಮೃತಾ-ರಘು

    ರಿಯಲ್ ಲೈಫಿನಲ್ಲೂ ಮಿ. ಆ್ಯಂಡ್ ಮಿಸಸ್ ಆದ ಅಮೃತಾ-ರಘು

    ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕಿರುತೆರೆ ಮತ್ತು ಬೆಳ್ಳಿತೆರೆಯ ನಟ-ನಟಿಯರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ‘ಕುಲವಧು’ ಧಾರಾವಾಹಿಯ ವಚನಾ ಖ್ಯಾತಿಯ ಅಮೃತಾ ರೀಲ್ ಹುಡುಗ ಜೊತೆ ರಿಯಲ್ ಆಗಿ ಮದುವೆಯಾಗಿದ್ದಾರೆ.

    ನಟಿ ಅಮೃತಾ ತಮ್ಮ ಬಹುದಿನಗಳ ಗೆಳೆಯ ಹಾಗೂ ಕಿರುತೆರೆ ನಟ ರಘು ಅವರ ಜೊತೆ ಸಪ್ತಪದಿ ತುಳಿದಿದ್ದಾರೆ. ಇವರಿಬ್ಬರ ಮದುವೆ ಬೆಂಗಳೂರಿನಲ್ಲಿ ಮೇ 12 ಮತ್ತು 13 ರಂದು ಅಂದರೆ ಭಾನುವಾರ ಮತ್ತು ಸೋಮವಾರ ಅದ್ಧೂರಿಯಾಗಿ ನಡೆದಿದೆ. ಇದನ್ನೂ ಓದಿ: ರೀಲ್ ಹುಡ್ಗನ ಜೊತೆಗೆ ರಿಯಲ್ ಆಗಿ ಸಪ್ತಪದಿ ತುಳಿಯಲಿದ್ದಾರೆ ಕುಲವಧು ಖ್ಯಾತಿಯ ವಚನಾ

    ಭಾನುವಾರ ರಂದು ಅಮೃತಾ ಮತ್ತು ರಘು ಅವರ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು, ಕಿರುತೆರೆ ನಟ-ನಟಿಯರು, ಆಪ್ತರು ಮತ್ತು ಸ್ನೇಹಿತರು ಆರತಕ್ಷತೆಗೆ ಬಂದು ನವಜೋಡಿಗೆ ಶುಭಾಶಯ ತಿಳಿಸಿದ್ದಾರೆ. ಆರತಕ್ಷತೆಯಲ್ಲಿ ಅಮೃತಾ ನೀಲಿ ಬಣ್ಣದ ಗೌನ್ ಧರಿಸಿದ್ದು, ರಘು ಬಿಳಿ ಬಣ್ಣದ ಕುರ್ತಾ ಧರಿಸಿದ್ದರು. ಇಬ್ಬರು ಮುದ್ದಾಗಿ ಕಾಣಿಸುತ್ತಿದ್ದರು.

    ಸೋಮವಾರ ಗುರುಹಿರಿಯರ ನಿಶ್ಚಯಿಸಿದ್ದ ಮುಹೂರ್ತದಲ್ಲಿ ಅಮೃತಾ-ರಘು ಬ್ರಾಹ್ಮಿಣ್ ಮತ್ತು ಗೌಡರ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ರಘು ಮತ್ತು ಅಮೃತಾ ಅವರು ಪ್ರೀತಿಸಿ ಮದುವೆಯಾಗಿದ್ದಾರೆ. ಇವರಿಬ್ಬರು ಈ ಹಿಂದೆ ಒಟ್ಟಿಗೆ `ಮಿ. ಆ್ಯಂಡ್ ಮಿಸಸ್ ರಂಗೇಗೌಡ’ ಧಾರಾವಾಹಿಯಲ್ಲಿ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿ ಪ್ರೇಕ್ಷಕರ ಮನೆ ಗೆದ್ದಿದ್ದರು. ಜೋಡಿ ಐಶ್ವರ್ಯ ಮತ್ತು ರಂಗೇಗೌಡ ಪಾತ್ರವನ್ನು ಮಾಡುತ್ತಿದ್ದರು. ಅಷ್ಟೇ ಅಲ್ಲದೇ ಇವರಿಬ್ಬರಿಗೆ `ಬೆಸ್ಟ್ ಜೋಡಿ’ ಅವಾರ್ಡ್ ಕೂಡ ಬಂದಿತ್ತು.

  • ರೀಲ್ ಹುಡ್ಗನ ಜೊತೆಗೆ ರಿಯಲ್ ಆಗಿ ಸಪ್ತಪದಿ ತುಳಿಯಲಿದ್ದಾರೆ ಕುಲವಧು ಖ್ಯಾತಿಯ ವಚನಾ

    ರೀಲ್ ಹುಡ್ಗನ ಜೊತೆಗೆ ರಿಯಲ್ ಆಗಿ ಸಪ್ತಪದಿ ತುಳಿಯಲಿದ್ದಾರೆ ಕುಲವಧು ಖ್ಯಾತಿಯ ವಚನಾ

    ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕಿರುತೆರೆ ಮತ್ತು ಬೆಳ್ಳಿತೆರೆಯ ನಟ-ನಟಿಯರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ‘ಕುಲವಧು’ ಧಾರಾವಾಹಿಯ ವಚನಾ ಖ್ಯಾತಿಯ ಅಮೃತಾ ಸೀರಿಯಲ್ ಹುಡುಗನ ಜೊತೆಗೆ ಮದುವೆಯಾಗುತ್ತಿದ್ದಾರೆ.

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಅಮೃತಾ ಅವರು, ವಚನಾ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಈಗ ಕಿರುತೆರೆಯಲ್ಲಿ ಅಭಿನಯಿಸಿದ್ದ ನಟ ರಘು ಜೊತೆ ಸಪ್ತಪದಿ ತುಳಿಯುತ್ತಿದ್ದಾರೆ. ರಘು ಮತ್ತು ಅಮೃತಾ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಇದೇ ವರ್ಷ ಮೇ 12 ಮತ್ತು 13 ರಂದು ಮದುವೆಯಾಗುವ ಸಾಧ್ಯತೆ ಇದೆ. ಮದುವೆಯ ಬಗ್ಗೆ ರಘು ಅವರೇ ತಮ್ಮ ಫೇಸ್‍ಬುಕ್ ನಲ್ಲಿ ತಿಳಿಸಿದ್ದಾರೆ.

    ರಘು ಮತ್ತು ಅಮೃತಾ ಅವರು ಪ್ರೀತಿಸಿ ಮದುವೆಯಾಗುತ್ತಿದ್ದಾರೆ. ಇವರಿಬ್ಬರು ಈ ಹಿಂದೆ ಒಟ್ಟಿಗೆ ‘ಮಿ. ಆ್ಯಂಡ್ ಮಿಸಸ್ ರಂಗೇಗೌಡ’ ಧಾರಾವಾಹಿಯಲ್ಲಿ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿ ಪ್ರೇಕ್ಷಕರ ಮನೆ ಗೆದ್ದಿದ್ದರು. ಜೋಡಿ ಐಶ್ವರ್ಯ ಮತ್ತು ರಂಗೇಗೌಡ ಪಾತ್ರವನ್ನು ಮಾಡುತ್ತಿದ್ದರು. ಅಷ್ಟೇ ಅಲ್ಲದೇ ಇವರಿಬ್ಬರಿಗೆ ‘ಬೆಸ್ಟ್ ಜೋಡಿ’ ಅವಾರ್ಡ್ ಕೂಡ ಬಂದಿತ್ತು.

    ನಾವಿಬ್ಬರು ಒಟ್ಟಿಗೆ ‘ಮಿ. ಆ್ಯಂಡ್ ಮಿಸಸ್ ರಂಗೇಗೌಡ’ ಧಾರಾವಾಹಿಯಲ್ಲಿ ಕೆಲಸ ಮಾಡಿದ್ದು, ದಂಪತಿಯ ಪಾತ್ರ ಮಾಡಿದ್ದೇವೆ. ಶೂಟಿಂಗ್ ವೇಳೆ ಸಮಯ ಸಿಕ್ಕಾಗ ಮಾತನಾಡುತ್ತಿದ್ದೇವು. ನಾವು ಹಲವು ವರ್ಷಗಳ ಕಾಲ ತುಂಬಾ ಒಳ್ಳೆಯ ಸ್ನೇಹಿತರಾಗಿದ್ದೆವು. ಆದರೆ ಧಾರಾವಾಹಿ ಮುಗಿದ ಬಳಿಕ ಇಬ್ಬರು ಬೇರೆ ಬೇರೆ ಪ್ರಾಜೆಕ್ಟ್ ನಲ್ಲಿ ಬ್ಯುಸಿಯಾಗಿದ್ದೆವು. ಕೊನೆಗೆ ಒಂದು ದಿನ ಇಬ್ಬರು ಭೇಟಿಯಾಗಿ ಪರಸ್ಪರ ನಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೆವು ಎಂದು ರಘು ಹೇಳಿದ್ದಾರೆ.

    ನನ್ನ ಜೀವನದಲ್ಲಿ ಅಮೃತಾ ಬರುತ್ತಾರೆ ಎಂದುಕೊಂಡಿರಲಿಲ್ಲ. ಅವರು ವೃತ್ತಿ ಜೀವನದಲ್ಲಿ, ವೈಯಕ್ತಿಕ ಜೀವನದಲ್ಲೂ ಸದಾ ನನ್ನ ಬೆಂಬಲಕ್ಕೆ ನಿಂತಿದ್ದರು. ನಾವಿಬ್ಬರು ಪರಸ್ಪರ ಒಬ್ಬೊಬ್ಬರನ್ನು ಅರ್ಥ ಮಾಡಿಕೊಂಡ ಬಳಿಕ ಮದುವೆಯಾಗಬೇಕು ಎಂದು ನಿರ್ಧಾರ ಮಾಡಿದ್ದೆವು. ಕೊನೆಗೆ ನಮ್ಮ ಕುಟುಂಬಕ್ಕೆ ಪ್ರೀತಿ ವಿಚಾರವನ್ನು ತಿಳಿಸಿ ಅವರಿಂದ ಒಪ್ಪಿಗೆ ಪಡೆದು ಗುರು-ಹಿರಿಯ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದೇವೆ ಎಂದು ರಘು ತಮ್ಮ ಪ್ರೀತಿ ಪಯಣದ ಬಗ್ಗೆ ತಿಳಿಸಿದ್ದಾರೆ.

    ಸದ್ಯಕ್ಕೆ ಇಬ್ಬರು ಕಿರುತೆರೆಯಲ್ಲಿ ಬ್ಯುಸಿಯಾಗಿದ್ದಾರೆ. ಒಂದು ವೇಳೆ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿರೆ ನಟನೆ ಮಾಡುವುದಾಗಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • Dad My Forever Hero- ಮಗನಿಂದ ಪ್ರಣಯ್‍ಗೆ ಭಾವನಾತ್ಮಕ ವಿಶ್

    Dad My Forever Hero- ಮಗನಿಂದ ಪ್ರಣಯ್‍ಗೆ ಭಾವನಾತ್ಮಕ ವಿಶ್

    ಹೈದರಾಬಾದ್: ತೆಲಂಗಾಣದಲ್ಲಿ ಮರ್ಯಾದಾ ಹತ್ಯೆಗೆ ಬಲಿಯಾಗಿದ್ದ ಪ್ರಣಯ್ ಹುಟ್ಟುಹಬ್ಬದ ಪ್ರಯುಕ್ತ ಪತ್ನಿ ಅಮೃತಾ ಅವರು ಭಾವನಾತ್ಮಕವಾಗಿ ಶುಭಾಶಯ ಕೋರಿದ್ದು, ಮಗನಿಂದಲೂ ವಿಶ್ ಮಾಡಿಸಿದ್ದಾರೆ.

    ಅಮೃತಾ ಅವರು ಜನವರಿ 25 ಶುಕ್ರವಾರ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮೃತ ಪ್ರಣಯ್ ಬರ್ತ್ ಡೇ ಫೆಬ್ರವರಿ 1 ರಂದು ಇತ್ತು. ಆದ್ದರಿಂದ ಅಮೃತಾ ಪ್ರೀತಿಯಿಂದ ಪತಿ ಪ್ರಣಯ್ ಗೆ ಫೇಸ್ ಬುಕ್ ನಲ್ಲಿ ಶುಭಾಶಯ ಕೋರಿದ್ದಾರೆ. ಬಳಿಕ ಅವರು ತನ್ನ ಮಗುವನ್ನು ಎತ್ತಿಕೊಂಡಿರುವ ಫೋಟೋ ಹಾಕಿ ಮಗನಿಂದಲೂ ಶುಭಾಶಯ ತಿಳಿಸಿದ್ದಾರೆ.

    ಮೊದಲಿಗೆ ಅಮೃತಾ, “ಗಂಟೆ, ದಿನ, ತಿಂಗಳು, ವರ್ಷ ಹಾಗೂ ದಶಕಗಳು ಉರುಳಬಹುದು. ಆದರೆ ನಾನು ನಿಮ್ಮ ಬರ್ತ್ ಡೇ ದಿನವನ್ನು ಎಂದಿಗೂ ಮರೆಯುವುದಿಲ್ಲ. ನೀವು ನಿಮ್ಮ ತೋಳುಗಳಿಂದ ನನ್ನನ್ನು ಹಿಡಿದು, ನನ್ನ ಕಣ್ಣುಗಳನ್ನು ನೋಡುತ್ತಾ ‘ಐ ಲವ್ ಯು’ ಎಂದು ನನ್ನ ಕಣ್ಣುಗಳಿಗೆ ಪಿಸುಗುಟ್ಟಿದ್ದೀರಿ. ಹ್ಯಾಪಿ ಬರ್ತ್ ಡೇ. ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೀನಿ” ಎಂದು ಬರೆದು ಪ್ರಣಯ್ ಅಮೃತಾ ಕಣ್ಣುಗಳನ್ನು ನೋಡುತ್ತಿರುವ ಫೋಟೋ ಹಾಕಿ ಶುಭಾಶಯ ತಿಳಿಸಿದ್ದರು.

    “ನಿಮ್ಮ ಆತ್ಮ ತುಂಬಾ ಪರಿಶುದ್ಧವಾಗಿದೆ. ನಿಮ್ಮ ಅತ್ಯಮೂಲ್ಯವಾದ ಬುದ್ಧಿವಂತಿಕೆ ಬೆರಗುಗೊಳಿಸುತ್ತದೆ. ಹ್ಯಾಪಿ ಬರ್ತ್ ಡೇ ಡ್ಯಾಡಿ.. ನಿಮ್ಮನ್ನು ತುಂಬಾ ಪ್ರೀತಿಸುತ್ತೇನೆ” ಎಂದು ಬರೆದು ಮಗನ ಜೊತೆಗಿರುವ ಫೋಟೋ ಹಾಕಿ ಮಗನಿಂದ ಅಪ್ಪನಿಗೆ ಶುಭಾಶಯ ತಿಳಿಸಿದ್ದಾರೆ.

    ಅಮೃತಾ ವಿಶ್ ಮಾಡಿದ ರೀತಿ ಮತ್ತು ಫೋಟೋ ಎಲ್ಲರ ಮನಕಲಕುವಂತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಮೃತಾ ಅವರು ಈ ಪೋಸ್ಟ್ ಮಾಡಿದ ತಕ್ಷಣ ಅನೇಕ ಮಂದಿ ಲೈಕ್ಸ್ ಮಾಡಿದ್ದು, ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ ಫೋಟೋವನ್ನು 2.6 ಸಾವಿರ ಮಂದಿ ಶೇರ್ ಮಾಡಿದ್ದು, 21 ಸಾವಿರ ಜನರು ಲೈಕ್ಸ್ ಮಾಡಿದ್ದಾರೆ. ಜೊತೆಗೆ ಪ್ರಣಯ್ ಮತ್ತು ಅಮೃತಾ ಜೀವನದ ಪಯಣದ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ.

    ಪ್ರಣಯ್ ಮತ್ತು ಅಮೃತಾ ಇಬ್ಬರು ಪ್ರೀತಿಸಿದ್ದು, ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಅಮೃತಾ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದ್ರೂ ಯುವ ಜೋಡಿ ಮನೆಯವರ ವಿರೋಧದ ನಡುವೆಯೂ ಮದುವೆ ಆಗಿದ್ದರು. ಆದರೆ 2018 ಸೆಪ್ಟೆಂಬರ್ 14ರಂದು ಪ್ರಣಯ್ ಮತ್ತು ಅಮೃತಾ ಆಸ್ಪತ್ರೆ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮಚ್ಚಿನಿಂದ ಪ್ರಣಯ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದನು. ಆದರೆ ಪ್ರಣಯ್ ಕೊಲೆಗೆ ಆತನ ಮಾವ ಮಾರುತಿ ರಾವ್ ಬರೋಬ್ಬರಿ ಒಂದು ಕೋಟಿ ಹಣವನ್ನು ಹಂತಕರಿಗೆ ನೀಡಿದ್ದಾರೆ ಎಂಬ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಂದೆಯಿಂದ ಪತಿಯನ್ನು ಕಳೆದುಕೊಂಡಿದ್ದ ಅಮೃತಾಗೆ ಗಂಡು ಮಗು ಜನನ

    ತಂದೆಯಿಂದ ಪತಿಯನ್ನು ಕಳೆದುಕೊಂಡಿದ್ದ ಅಮೃತಾಗೆ ಗಂಡು ಮಗು ಜನನ

    ಹೈದರಾಬಾದ್: ತೆಲಂಗಾಣದಲ್ಲಿ ಮರ್ಯಾದಾ ಹತ್ಯೆಗೆ ಬಲಿಯಾಗಿದ್ದ ಪ್ರಣಯ್ ಪತ್ನಿ ಅಮೃತಾ ಅವರು ಗಂಡು ಮಗುವಿಗೆ ಗುರುವಾರ ಜನ್ಮ ನೀಡಿದ್ದಾರೆ.

    ಅಮೃತಾ ಅವರನ್ನು ಅತ್ತೆ ಆಸ್ಪತ್ರೆಗೆ ದಾಖಲಿಸಿ, ಕಾಳಜಿಯಿಂದ ನೋಡಿಕೊಳ್ಳುತ್ತಿದ್ದಾರೆ. ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ. ಇದನ್ನು ಓದಿ:  ಪ್ರಣಯ್ ಕೊಲೆ: ಆರೋಪಿಗಳ ಜಾಮೀನು ತಿರಸ್ಕಾರ 

    ಪ್ರಣಯ್ ಮತ್ತು ಅಮೃತಾ ಇಬ್ಬರು ಪ್ರೀತಿಸಿದ್ದು, ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಅಮೃತಾ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರು ಯುವ ಜೋಡಿ ಮನೆಯವರ ವಿರೋಧದ ನಡುವೆಯೂ ಮದುವೆ ಆಗಿದ್ದರು. ಆದರೆ 2018 ಸೆಪ್ಟಂಬರ್ 14ರಂದು ಪ್ರಣಯ್ ಮತ್ತು ಅಮೃತಾ ಆಸ್ಪತ್ರೆ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮಚ್ಚಿನಿಂದ ಪ್ರಣಯ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದನು. ಆದರೆ ಪ್ರಣಯ್ ಕೊಲೆಗೆ ಆತನ ಮಾವ ಮಾರುತಿ ರಾವ್ ಬರೋಬ್ಬರಿ ಒಂದು ಕೋಟಿ ಹಣವನ್ನು ಹಂತಕರಿಗೆ ನೀಡಿದ್ದ ವಿಚಾರ ಎಂದು ತನಿಖೆ ವೇಳೆ ಬೆಳಕಿಗೆ ಬಂದಿತ್ತು.

    ಮರ್ಯಾದಾ ಹತ್ಯೆಗೆ ಬಲಿಯಾದ ಪ್ರಣಯ್ ಕುಟುಂಬದವರಿಗೆ ರಾಜ್ಯ ಸರ್ಕಾರವೂ ಪರಿಹಾರ ಧನವನ್ನು ಫೋಷಿಸಿತ್ತು. ಕೆಲವು ದಿನಗಳ ಬಳಿಕ ಮೃತ ಪ್ರಣಯ್ ಪತ್ನಿ ಅಮೃತಾಗೆ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಕೂಡ ಭರವಸೆ ನೀಡಿತ್ತು.

    ತೆಲಂಗಾಣ ಪರಿಶಿಷ್ಟ ಜಾತಿ ಅಭಿವೃದ್ಧಿ ಸಚಿವ ಜಿ. ಜಗದೀಶ್ ರೆಡ್ಡಿ ಅವರು ನಲ್ಗೊಂಡ ಜಿಲ್ಲೆಯ ಮಿರಿಯಾಲಗುಡದಲ್ಲಿ ಮೃತ ಪ್ರಣಯ್ ಕುಟುಂಬದವರನ್ನು ಭೇಟಿ ಮಾಡಿ ಸಂತಾಪ ವ್ಯಕ್ತಪಡಿಸಿದ್ದರು. ಮೃತ ಪ್ರಣಯ್ ಪತ್ನಿ ಅಮೃತ ವರ್ಶಿನಿ ಅವರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು. ಜೊತೆಗೆ ಕೃಷಿ ಭೂಮಿ ಮತ್ತು ಡಬಲ್ ಬೆಡ್ ರೂಮ್ ಮನೆಯನ್ನು ಅವರ ಕುಟುಂಬಕ್ಕೆ ನೀಡುತ್ತೇವೆ. ಈಗಾಗಲೇ ಪ್ರಣಯ್ ಕುಟುಂಬದವರಿಗೆ ತಕ್ಷಣದ ವೆಚ್ಚಕ್ಕಾಗಿ ಸರ್ಕಾರ 8.25 ಲಕ್ಷ ರೂ. ಅನುಮೋದಿಸಿದೆ. ಇದರ ಜೊತೆ ನಾನು ವೈಯಕ್ತಿಕವಾಗಿ ಅಮೃತಾಗೆ 4.12 ಲಕ್ಷ ರೂ. ಚೆಕ್ ನೀಡಿದ್ದೇನೆ ಎಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾನು ಜಯಲಲಿತಾ ಮಗಳು, ಡಿಎನ್‍ಎ ಟೆಸ್ಟ್ ಆಗ್ಲಿ ಎಂದು ಅಮೃತಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ನಾನು ಜಯಲಲಿತಾ ಮಗಳು, ಡಿಎನ್‍ಎ ಟೆಸ್ಟ್ ಆಗ್ಲಿ ಎಂದು ಅಮೃತಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬೆಂಗಳೂರು: ತಾನು ಜಯಲಲಿತಾ ಮಗಳು, ಇದನ್ನ ಸಾಬೀತುಪಡಿಸಲು ಡಿಎನ್‍ಎ ಪರೀಕ್ಷೆ ಆಗಲಿ ಎಂದು ಬೆಂಗಳೂರಿನ ಅಮೃತಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ತಾನೇ ಜಯಲಲಿತಾ ಉತ್ತರಾಧಿಕಾರಿ ಎಂದು ಅರ್ಜಿ ಹಾಕಿದ್ದ ಅಮೃತಾ, ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದ್ದರು. ಡಿಎನ್‍ಎ ಪರೀಕ್ಷೆಗೂ ಸಿದ್ಧ ಎಂದಿದ್ದರು. ಆದ್ರೆ ಜಯಾ ಸತ್ತು ಸುಮಾರು ಒಂದು ವರ್ಷ ಕಳೆದ ನಂತರ ಬಂದ ಹಿನ್ನೆಲೆಯಲ್ಲಿ ಅಮೃತಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.

    ನಿಜಕ್ಕೂ ವಿಚಾರಣೆ ಆಗಲೇಬೇಕು ಎನ್ನುವುದಾದರೆ ಹೈಕೋರ್ಟಿಗೆ ಹೋಗಿ. ಮೊದಲು ಕರ್ನಾಟಕ ಹೈಕೋರ್ಟ್ ವಿಚಾರಣೆ ಮಾಡಲಿ ಅಂತ ಅಮೃತಾ ಪರ ವಕೀಲರಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

    ಈ ಹಿಂದೆಯೇ ಅಮೃತಾ ತಾನು ಜಯಲಲಿತಾ ಅವರು ಮಗಳು ಎಂದು ಹೇಳಿ ರಾಷ್ಟ್ರಪತಿಯಿಂದ ಹಿಡಿದು ಸುಪ್ರೀಂ ಕೋರ್ಟ್, ಪ್ರಧಾನಿ, ಮಾನವ ಹಕ್ಕುಗಳ ಆಯೋಗ ಹೀಗೆ ನಾನಾ ಕಡೆ ಮನವಿ ಪತ್ರ ಸಲ್ಲಿಸಿದ್ದರು.

    ಜನ್ಮ ರಹಸ್ಯ: ಸಂಧ್ಯಾ ಮತ್ತು ಜಯರಾಂ ದಂಪತಿಗೆ ಜಯಲಲಿತಾ ಸೇರಿ ಒಟ್ಟು ಮೂವರು ಮಕ್ಕಳು. ಅವರೇ ಜಯಕುಮಾರ್, ಜಯಲಲಿತಾ ಅಲಿಯಾಸ್ ಕೋಮಲವಲ್ಲಿ ಹಾಗು ಶೈಲಜಾ. ಇದೇ ಶೈಲಜಾ ಅವರ ಮಗಳಾಗಿ ಅಮೃತಾ ಬೆಳೆದಿದ್ದರು.

    ನನ್ನಪ್ಪ ಶೋಭನ್ ಬಾಬು: ಅಮೃತ ತನ್ನ ತಂದೆ ತೆಲಗು ನಟ ಶೋಭನ್ ಬಾಬು ಎಂಬ ಸತ್ಯವನ್ನು ಹೊರಹಾಕಿದ್ದರು. ಜಯಲಲಿತಾ ಅವರು ತೀರ ಸಂಕಷ್ಟದಲ್ಲಿದ್ದಾಗ ಶೋಭನ್ ಬಾಬು ಸಾಂತ್ವನ ಹೇಳಲು ಬಂದಿದ್ದರು. ಮುಂದೆ ಸಾಂತ್ವನ, ಗೆಳತನಕ್ಕೆ ತಿರುಗುತ್ತದೆ. ಗೆಳತನ ಪ್ರೀತಿ-ಪ್ರೇಮಕ್ಕೆ ಬದಲಾಗಿದೆ. ಆ ಇಬ್ಬರ ಪ್ರೀತಿಯ ಕುಡಿಯಾಗಿ ಹುಟ್ಟಿದವಳು ನಾನು ಎನ್ನುವುದು ಅಮೃತಾ ಅವರ ವಾದವಾಗಿದೆ.

    ಶೋಭನ್ ಬಾಬು ಅವರ ಮೊದಲ ಪತ್ನಿಯಿಂದಾಗಿ ಜಯಲಲಿತಾರ ಮದುವೆಗೆ ತೀವ್ರ ಅಡ್ಡಿಯುಂಟಾಗಿತ್ತು. ನಾನಾ ಕಾರಣಗಳಿಂದ ಕೊನೆ ಕ್ಷಣದಲ್ಲಿ ಇಬ್ಬರ ಮದುವೆ ಮುರಿದು ಬಿದ್ದಿತ್ತು. ಆ ಹೊತ್ತಿಗೆ ಜಯಲಲಿತಾರ ಗರ್ಭದಲ್ಲಿ ಅಮೃತ ಇದ್ದರು. ಕೊನೆಗೆ ಚೆನ್ನೈನ ಮೈಲಾಪುರದಲ್ಲಿ ಅಮೃತಾರ ಜನನವಾಯ್ತು ಎಂದು ಹೇಳಿದ್ದಾರೆ.

    ಆ ಇಬ್ಬರೇ ಸಾಕ್ಷಿ: ಜಯಲಲಿತಾರ ಸಂಬಂಧಿ ರಜಿನಿ ರವೀಂದ್ರನಾಥ್ ಮತ್ತು ಎಲ್.ಎಸ್.ಲಲಿತಾರನ್ನು ಕರೆಸಿಕೊಂಡಿದ್ದರು. ಆ ಇಬ್ಬರು ನನ್ನ ಜನನದ ಕಾರ್ಯವನ್ನು ನೋಡಿಕೊಂಡಿದ್ದಾರೆ. ಅವತ್ತು ಎಲ್ಲರೂ ಸೇರಿ ದೇವರ ಮುಂದೆ ಪ್ರಮಾಣ ಮಾಡಿದ್ದ ಕಾರಣಕ್ಕೆ ಗುಟ್ಟು ರಟ್ಟಾಗಿಲ್ಲ. ನಾನು ಹತ್ತಾರು ಬಾರಿ ಜಯಾಲಲಿತಾರ ಪೋಯಸ್ ಗಾರ್ಡನ್ ಭೇಟಿ ಕೊಟ್ಟಿದ್ದೇನೆ. ಅಮ್ಮ ನನ್ನನ್ನು ತುಂಬಾ ಅಕ್ಕರೆಯಿಂದ ನೋಡಿಕೊಂಡ್ರು. ಬೇಕಿದ್ದಕ್ಕಿಂತ ಹೆಚ್ಚಾಗಿ ನನ್ನ ಜೋಪಾನ ಮಾಡಿದ್ದಾರೆ. ನನ್ನ ಹೆಸರಿನಲ್ಲಿ ಜಯಲಿಲಿತಾ ಚಿನ್ನ ಮತ್ತು ಡೈಮಂಡ್ ಆಭರಣಗಳನ್ನು ಖರೀದಿ ಮಾಡಿದ್ದಾರೆ. ಹಲವು ಕಡೆ ಆಸ್ತಿಗಳನ್ನು ನನಗೆ ಖರೀದಿ ಮಾಡಿರೋ ಬಗ್ಗೆ ಹತ್ತಾರು ಬಾರಿ ಹೇಳಿದ್ದಾರೆ ಎಂದು ಅಮೃತಾ ಹೇಳಿದ್ದಾರೆ.

    https://www.youtube.com/watch?v=n_5kQ-hV6eY

    https://www.youtube.com/watch?v=hg7er083YCg

  • ನಾನೇ ಜಯಲಲಿತಾ ಮಗಳು, ಬೇಕಿದ್ರೆ ಡಿಎನ್‍ಎ ಟೆಸ್ಟ್ ಆಗ್ಲಿ- ಸುಪ್ರೀಂ ಮೆಟ್ಟಿಲೇರಿದ ಬೆಂಗ್ಳೂರಿನ ಅಮೃತ

    ನಾನೇ ಜಯಲಲಿತಾ ಮಗಳು, ಬೇಕಿದ್ರೆ ಡಿಎನ್‍ಎ ಟೆಸ್ಟ್ ಆಗ್ಲಿ- ಸುಪ್ರೀಂ ಮೆಟ್ಟಿಲೇರಿದ ಬೆಂಗ್ಳೂರಿನ ಅಮೃತ

    ಬೆಂಗಳೂರು: ನಾನು ಜಯಲಲಿತಾ ಅವರ ಮಗಳು. ಇದ್ರಲ್ಲಿ ಡೌಟೇ ಬೇಡ. ಬೇಕಿದ್ರೆ ಡಿಎನ್‍ಎ ಟೆಸ್ಟ್ ಆಗಿ ಹೋಗ್ಲಿ. ನಾನು ಎಲ್ಲದಕ್ಕೂ ರೆಡಿ ಅಂತ ಬೆಂಗಳೂರು ಮೂಲದ ಅಮೃತ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

    ಜಯಲಲಿತಾ ಅವರ ಸೋದರ ಸಂಬಂಧಿ ಮನೆಯಲ್ಲಿ ಬೆಳೆದಿದ್ದ 37 ವರ್ಷದ ಅಮೃತ ಇದೇ 22ರಂದು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. 1980ರಲ್ಲಿ ಜಯಲಲಿತಾ ಅವರಿಗೆ ನಾನು ಜನಿಸಿದ್ದೇನೆ. ಈ ಬಗ್ಗೆ ದಾಖಲೆಗಳಿವೆ. ಆಗಿನ ಸನ್ನಿವೇಶಗಳನ್ನು ಎದುರಿಸಲಾಗದೇ ಜಯಲಲಿತಾ ನನ್ನನ್ನು ಗೌಪ್ಯವಾಗಿ ಬೆಳೆಸಿದ್ರು ಎಂದು ಸುಪ್ರೀಂಕೋರ್ಟ್‍ಗೆ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಅಮೃತ ಉಲ್ಲೇಖ ಮಾಡಿದ್ದಾರೆ.

    ಈ ಹಿಂದೆಯೇ ಅಮೃತಾ ತಾನು ಜಯಲಲಿತಾ ಅವರು ಮಗಳು ಎಂದು ಹೇಳಿ ರಾಷ್ಟ್ರಪತಿಯಿಂದ ಹಿಡಿದು ಸುಪ್ರೀಂ ಕೋರ್ಟ್, ಪ್ರಧಾನಿ, ಮಾನವ ಹಕ್ಕುಗಳ ಆಯೋಗ ಹೀಗೆ ನಾನಾ ಕಡೆ ಮನವಿ ಪತ್ರ ಸಲ್ಲಿಸಿದ್ದರು.

    ಜನ್ಮ ರಹಸ್ಯ: ಸಂಧ್ಯಾ ಮತ್ತು ಜಯರಾಂ ದಂಪತಿಗೆ ಜಯಲಲಿತಾ ಸೇರಿ ಒಟ್ಟು ಮೂವರು ಮಕ್ಕಳು. ಅವರೇ ಜಯಕುಮಾರ್, ಜಯಲಲಿತಾ ಅಲಿಯಾಸ್ ಕೋಮಲವಲ್ಲಿ ಹಾಗು ಶೈಲಜಾ. ಇದೇ ಶೈಲಜಾ ಅವರ ಮಗಳಾಗಿ ಅಮೃತಾ ಬೆಳೆದಿದ್ದರು.

    ನನ್ನಪ್ಪ ಶೋಭನ್ ಬಾಬು: ಅಮೃತ ತನ್ನ ತಂದೆ ತೆಲಗು ನಟ ಶೋಭನ್ ಬಾಬು ಎಂಬ ಸತ್ಯವನ್ನು ಹೊರಹಾಕಿದ್ದರು. ಜಯಲಲಿತಾ ಅವರು ತೀರ ಸಂಕಷ್ಟದಲ್ಲಿದ್ದಾಗ ಶೋಭನ್ ಬಾಬು ಸಾಂತ್ವನ ಹೇಳಲು ಬಂದಿದ್ದರು. ಮುಂದೆ ಸಾಂತ್ವನ, ಗೆಳತನಕ್ಕೆ ತಿರುಗುತ್ತದೆ. ಗೆಳತನ ಪ್ರೀತಿ-ಪ್ರೇಮಕ್ಕೆ ಬದಲಾಗಿದೆ. ಆ ಇಬ್ಬರ ಪ್ರೀತಿಯ ಕುಡಿಯಾಗಿ ಹುಟ್ಟಿದವಳು ನಾನು ಎನ್ನುವುದು ಅಮೃತಾ ಅವರ ವಾದವಾಗಿದೆ.

    ಶೋಭನ್ ಬಾಬು ಅವರ ಮೊದಲ ಪತ್ನಿಯಿಂದಾಗಿ ಜಯಲಲಿತಾರ ಮದುವೆಗೆ ತೀವ್ರ ಅಡ್ಡಿಯುಂಟಾಗಿತ್ತು. ನಾನಾ ಕಾರಣಗಳಿಂದ ಕೊನೆ ಕ್ಷಣದಲ್ಲಿ ಇಬ್ಬರ ಮದುವೆ ಮುರಿದು ಬಿದ್ದಿತ್ತು. ಆ ಹೊತ್ತಿಗೆ ಜಯಲಲಿತಾರ ಗರ್ಭದಲ್ಲಿ ಅಮೃತ ಇದ್ದರು. ಕೊನೆಗೆ ಚೆನ್ನೈನ ಮೈಲಾಪುರದಲ್ಲಿ ಅಮೃತಾರ ಜನನವಾಯ್ತು ಎಂದು ಹೇಳಿದ್ದಾರೆ.

    ಆ ಇಬ್ಬರೇ ಸಾಕ್ಷಿ: ಜಯಲಲಿತಾರ ಸಂಬಂಧಿ ರಜಿನಿ ರವೀಂದ್ರನಾಥ್ ಮತ್ತು ಎಲ್.ಎಸ್.ಲಲಿತಾರನ್ನು ಕರೆಸಿಕೊಂಡಿದ್ದರು. ಆ ಇಬ್ಬರು ನನ್ನ ಜನನದ ಕಾರ್ಯವನ್ನು ನೋಡಿಕೊಂಡಿದ್ದಾರೆ. ಅವತ್ತು ಎಲ್ಲರೂ ಸೇರಿ ದೇವರ ಮುಂದೆ ಪ್ರಮಾಣ ಮಾಡಿದ್ದ ಕಾರಣಕ್ಕೆ ಗುಟ್ಟು ರಟ್ಟಾಗಿಲ್ಲ. ನಾನು ಹತ್ತಾರು ಬಾರಿ ಜಯಾಲಲಿತಾರ ಪೋಯಸ್ ಗಾರ್ಡನ್ ಭೇಟಿ ಕೊಟ್ಟಿದ್ದೇನೆ. ಅಮ್ಮ ನನ್ನನ್ನು ತುಂಬಾ ಅಕ್ಕರೆಯಿಂದ ನೋಡಿಕೊಂಡ್ರು. ಬೇಕಿದ್ದಕ್ಕಿಂತ ಹೆಚ್ಚಾಗಿ ನನ್ನ ಜೋಪಾನ ಮಾಡಿದ್ದಾರೆ. ನನ್ನ ಹೆಸರಿನಲ್ಲಿ ಜಯಲಿಲಿತಾ ಚಿನ್ನ ಮತ್ತು ಡೈಮಂಡ್ ಆಭರಣಗಳನ್ನು ಖರೀದಿ ಮಾಡಿದ್ದಾರೆ. ಹಲವು ಕಡೆ ಆಸ್ತಿಗಳನ್ನು ನನಗೆ ಖರೀದಿ ಮಾಡಿರೋ ಬಗ್ಗೆ ಹತ್ತಾರು ಬಾರಿ ಹೇಳಿದ್ದಾರೆ ಎಂದು ಅಮೃತಾ ಹೇಳಿದ್ದಾರೆ.

    https://www.youtube.com/watch?v=n_5kQ-hV6eY

    https://www.youtube.com/watch?v=hg7er083YCg

     

  • ದೊಡ್ಡಮ್ಮನ ಕೊಲೆ ಮಾಡಿರೋ ಪ್ರಕರಣದಲ್ಲಿ ಶಶಿಕಲಾಗೆ ಶಿಕ್ಷೆಯಾಗಿದ್ರೆ ಖುಷಿಯಾಗ್ತಿತ್ತು- ಜಯಾ ತಂಗಿ ಮಗಳ ಹೇಳಿಕೆ

    ದೊಡ್ಡಮ್ಮನ ಕೊಲೆ ಮಾಡಿರೋ ಪ್ರಕರಣದಲ್ಲಿ ಶಶಿಕಲಾಗೆ ಶಿಕ್ಷೆಯಾಗಿದ್ರೆ ಖುಷಿಯಾಗ್ತಿತ್ತು- ಜಯಾ ತಂಗಿ ಮಗಳ ಹೇಳಿಕೆ

    ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಶಶಿಕಲಾಗೆ ಶಿಕ್ಷೆಯಾಗೋಕಿಂತ ದೊಡ್ಡಮ್ಮನನ್ನ ಕೊಲೆ ಮಾಡಿರೋ ಪ್ರಕರಣದಲ್ಲಿ ಶಿಕ್ಷೆಯಾಗಿದ್ದಿದ್ರೆ ಖುಷಿಯಾಗ್ತಿತ್ತು. ಹೀಗಂತ ದಿವಂಗತ ಜಯಲಲಿತಾ ಅವರ ತಂಗಿ ಶೈಲಜಾ ಅವರ ಮಗಳು ಅಮೃತಾ ಪಬ್ಲಿಕ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

    ಕೊಲೆ ಅಂತ ಸಾಬೀತಾಗಿ ಶಶಿಕಲಾಗೆ ಶಿಕ್ಷೆಯಾದ ಬಳಿಕವೇ ನಾನು ದೊಡ್ಡಮ್ಮನ ಸಮಾಧಿಗೆ ಹೋಗಿ ಅವರ ಶವ ತೆಗೆದು ಅಯ್ಯಂಗಾರ್ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸುತ್ತೇನೆ ಅಂತಾ ಪ್ರತಿಜ್ಞೆ ಮಾಡಿದ್ದಾರೆ.

    ಇಷ್ಟು ದಿನ ದೊಡ್ಡಮ್ಮನ ಮುಂದೆ ಮುಖವಾಡ ಹಾಕಿಕೊಂಡಿದ್ದವರ ನಿಜ ಮುಖ ಈಗ ಗೊತ್ತಾಗ್ತಿದೆ. ಅಜಿತ್ ಬಗ್ಗೆ ದೊಡ್ಡಮ್ಮನಿಗೆ ಅಭಿಮಾನವಿತ್ತು ಅಷ್ಟೆ. ಅವರನ್ನ ಸಿಎಂ ಮಾಡೋ ಆಸೆ ಇರಲಿಲ್ಲ ಅಂದಿದ್ದಾರೆ. ಶಶಿಕಲಾಗಿಂತಲೂ ದೀಪಾ ತುಂಬಾ ಡೇಂಜರ್. ಶಶಿಕಲಾ ನೇರವಾಗಿ ಚೂರಿ ಹಾಕಿದ್ರೆ, ದೀಪಾ ಬೆನ್ನಿಗೆ ಚೂರಿ ಹಾಕ್ತಾಳೆ ಅಂತ ಅಮೃತಾ ಹೇಳಿದ್ರು.