Tag: ಅಯೋಧ್ಯೆ

  • ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ

    ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ

    – ನ.25 ರಂದು ಪ್ರಧಾನಿ ಮೋದಿ ಧ್ವಜಾರೋಹಣ

    ಲಕ್ನೋ: ಅಯೋಧ್ಯೆಯಲ್ಲಿ (Ayodhya) ನಿರ್ಮಾಣವಾಗುತ್ತಿದ್ದ ಶ್ರೀರಾಮ ಮಂದಿರ (Shri Ram Mandir) ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಮುಖ್ಯ ಮಂದಿರ ಮತ್ತು ಆರು ಇತರೆ ಮಂದಿರಗಳ ನಿರ್ಮಾಣ ಕಾರ್ಯ ಪೂರ್ಣವಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.

    ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಟ್ರಸ್ಟ್, ಮಂದಿರದ ನಿರ್ಮಾಣ ಕಾರ್ಯ ಮುಗಿದಿದೆ ಎಂದು ಪ್ರಭು ಶ್ರೀರಾಮನ ಭಕ್ತರಿಗೆ ತಿಳಿಸಲು ಸಂತೋಷವಾಗುತ್ತದೆ. ಮುಖ್ಯಮಂದಿರದ ಜೊತೆಗೆ ಮಹಾದೇವ, ಗಣೇಶ, ಹನುಮಾನ್, ಸೂರ್ಯದೇವ, ಮಾ ಭಗವತಿ ಮತ್ತು ಮಾ ಅನ್ನಪೂರ್ಣ ಜೊತೆಗೆ ಶೇಷಾವತಾರ ಮಂದಿರವೂ ನಿರ್ಮಾಣ ಕಾರ್ಯ ಪೂರ್ಣವಾಗಿದೆ. ಈ ಮಂದಿರಗಳ ಮೇಲೆ ಧ್ವಜಗಳು ಮತ್ತು ಕಲಶವನ್ನು ಸ್ಥಾಪಿಸಲಾಗಿದೆ.

    ಹೆಚ್ಚುವರಿಯಾಗಿ, ಋಷಿ ವಾಲ್ಮೀಕಿ, ಋಷಿ ವಶಿಷ್ಠ, ಋಷಿ ವಿಶ್ವಾಮಿತ್ರ, ಋಷಿ ಅಗಸ್ತ್ಯ, ನಿಷಾದರಾಜಅಯೋ, ಶಬರಿ ಮತ್ತು ದೇವಿ ಅಹಲ್ಯರಿಗೆ ಸಮರ್ಪಿತವಾದ ಏಳು ಮಂಟಪಗಳು ಸಹ ಪೂರ್ಣಗೊಂಡಿವೆ. ಸಂತ ತುಳಸಿದಾಸ ಮಂದಿರವೂ ಪೂರ್ಣಗೊಂಡಿದೆ. ಜಟಾಯು ಮತ್ತು ಅಳಿಲಿನ ಪ್ರತಿಮೆಗಳನ್ನು ನಿರ್ಮಾಣ ಮಾಡಲಾಗಿದೆ.

    ಭಕ್ತರ ಅನುಕೂಲತೆ ಮತ್ತು ವ್ಯವಸ್ಥೆಗಳಿಗೆ ಸಂಬಂಧಿಸಿದ ಎಲ್ಲಾ ಕಾರ್ಯಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲಾಗಿದೆ. ರಸ್ತೆ ನಿರ್ಮಾಣ ಮತ್ತು ಕಲ್ಲಿನ ನೆಲಹಾಸು ಹಾಕುವ ಕೆಲಸವನ್ನು ಎಲ್&ಟಿ ಕಂಪನಿ ನಿರ್ವಹಿಸುತ್ತಿದೆ. ಅಲ್ಲದೇ ಮಂದಿರದ ಸುತ್ತ ಹಸಿರಿನಿಂದ ಕಂಗೊಳಿಸುವಂತೆ ಮಾಡುವ ಮತ್ತು 10 ಎಕ್ರೆಗೂ ಹೆಚ್ಚು ವಿಸ್ತೀರ್ಣದ ‘ಪಂಚವಟಿ’ಯ (ಶ್ರೀರಾಮ, ಸೀತೆ, ಲಕ್ಷ್ಮಣ ವನವಾಸದ ಸಮಯದಲ್ಲಿ ನೆಲೆಸಿದ್ದ ಜಾಗದ ಹೆಸರು) ಅಭಿವೃದ್ಧಿ ಕಾರ್ಯವು ತ್ವರಿತಗತಿಯಲ್ಲಿ ಸಾಗುತ್ತಿದೆ. 3.5 ಕಿ.ಮೀ ಉದ್ದದ ತಡೆಗೋಡೆ, ಟ್ರಸ್ಟ್ ಕಚೇರಿ, ಅತಿಥಿ ಗೃಹ, ಸಭಾಂಗಣ ಮುಂತಾದ ಕಾಮಗಾರಿಗಳು ಮಾತ್ರ ನಡೆಯುತ್ತಿವೆ ಎಂದು ಮಾಹಿತಿ ನೀಡಿದೆ.

    ನವೆಂಬರ್ 25 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಗೆ ಭೇಟಿ ನೀಡಲಿದ್ದು, ಶ್ರೀರಾಮ ಮಂದಿರದ ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ವರ್ಗಗಳನ್ನು ಪ್ರತಿನಿಧಿಸುವ 6,000 ದಿಂದ 8,000 ರಿಂದ ಆಹ್ವಾನಿತರು ಭಾಗವಹಿಸಲಿದ್ದಾರೆ. ರಾಮ ಪರಿವಾರವನ್ನು ದೇವಾಲಯದ ಮೊದಲ ಮಹಡಿಯಲ್ಲಿ ನಿರ್ಮಿಸಿದೆ. ಪ್ರಧಾನಿ ಮೋದಿ ಅವರು ರಾಮ ಪರಿವಾರದಲ್ಲಿ ಆರತಿ ನೆರವೇರಿಸಿ, ದೇವಾಲಯದ ಧ್ವಜಾರೋಹಣ ಮಾಡಲಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.

  • ಶ್ರೀರಾಮನಗರಿಯಲ್ಲಿ ಝಗಮಗಿಸಿದ ದೀಪೋತ್ಸವ – 26 ಲಕ್ಷ ದೀಪಗಳಿಂದ ಕಂಗೊಳಿಸಿದ ಅಯೋಧ್ಯೆ

    ಶ್ರೀರಾಮನಗರಿಯಲ್ಲಿ ಝಗಮಗಿಸಿದ ದೀಪೋತ್ಸವ – 26 ಲಕ್ಷ ದೀಪಗಳಿಂದ ಕಂಗೊಳಿಸಿದ ಅಯೋಧ್ಯೆ

    – ಇಷ್ಟೊಂದು ಖರ್ಚು ಬೇಕಾ ಅಂತ ಅಖಿಲೇಶ್ ಕೊಂಕುನುಡಿ

    ಲಕ್ನೋ: ದೇಶಾದ್ಯಂತ ದೀಪಗಳ ಹಬ್ಬ ದೀಪಾವಳಿ (Diwali) ಸಂಭ್ರಮ ಮನೆ ಮಾಡಲಿದೆ. ಅದರ ಮುನ್ನಾದಿನವೇ ಶ್ರೀರಾಮನಗರಿ ಅಯೋಧ್ಯೆಯಲ್ಲಿ (Ayodhya) ಹಬ್ಬದ ಸಂಭ್ರಮ ಇಮ್ಮಡಿಗೊಂಡಿದೆ.

    ಅಯೋಧ್ಯೆ ನಗರಿ ದೀಪಗಳಿಂದ ಝಗಮಗಿಸುತ್ತಿದೆ. 26 ಲಕ್ಷ ದೀಪಗಳು ಶ್ರೀರಾಮನೂರನ್ನು ಬೆಳಗುತ್ತಿವೆ. ಪ್ರತಿ ವರ್ಷದಂತೆ ಈ ವರ್ಷವೂ ಸರಯೂ ನದಿಯ ತಟದಲ್ಲಿ ದೀಪೋತ್ಸವ ಹಮ್ಮಿಕೊಳ್ಳಲಾಗಿದೆ. ಅಯೋಧ್ಯೆಯ ಪವಿತ್ರ ಸರಯು ನದಿಯ ತೀರದಲ್ಲಿ 26,11,101 ದೀಪಗಳನ್ನು ಬೆಳಗಿಸುವ ಮೂಲಕ ವಿಶ್ವ ದಾಖಲೆ ನಿರ್ಮಾಣವಾಗಿದೆ. ಇದನ್ನೂ ಓದಿ: ದೀಪಾವಳಿ ಹಿನ್ನೆಲೆ ಜಾತಿಗಣತಿ ಸಮೀಕ್ಷೆಗೆ ಅ.23ರವರೆಗೆ ತಾತ್ಕಾಲಿಕ ಬ್ರೇಕ್

    ರಾಮ ಕಿ ಪೌಡಿ ಸೇರಿದಂತೆ 56 ಘಾಟ್‌ಗಳಲ್ಲಿ ದೀಪಗಳು ಪ್ರಜ್ವಲಿಸಿವೆ. 2017ರಲ್ಲಿ ಈ ಉತ್ಸವ ಆರಂಭವಾದಾಗ ಕೇವಲ 1.71 ಲಕ್ಷ ದೀಪಗಳನ್ನು ಬೆಳಗಿಸಲಾಗಿತ್ತು. ಕಳೆದ ವರ್ಷ 25.12 ಲಕ್ಷ ದೀಪಗಳನ್ನ ಹಚ್ಚಲಾಗಿತ್ತು.

    ಅಯೋಧ್ಯೆಯಲ್ಲಿ ದೀಪೋತ್ಸವ ಕುರಿತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿವಾದದ ಕಿಡಿ ಹೊತ್ತಿಸಿದ್ದಾರೆ. ದೀಪಗಳು ಮತ್ತು ಮೇಣದ ಬತ್ತಿಗಳಿಗಾಗಿ ಯೋಗಿ ಸರ್ಕಾರದ ವೆಚ್ಚವನ್ನು ಪ್ರಶ್ನಿಸಿದ್ದಾರೆ. ಆಯೋಧ್ಯೆ ದೀಪೋತ್ಸವಕ್ಕಾಗಿ ಪ್ರತಿ ವರ್ಷ ಖರ್ಚು ಮಾಡುತ್ತಿದ್ದಾರೆ. ದೀಪೋತ್ಸವಕ್ಕೆ ಹಣತೆ ಖರ್ಚು ಯಾಕೆ? ನೀವು ಕ್ರೈಸ್ತರ ಕ್ರಿಸ್ಮಸ್ ಆಚರಣೆ ನೋಡಿ, ಅವರು ಕ್ರಿಸ್ಮಸ್ ವೇಳೆ ಒಂದು ತಿಂಗಳು ಎಲ್ಲಾ ನಗರಗಳನ್ನು ಲೈಟ್ ಮೂಲಕ ಸಿಂಗರಿಸುತ್ತಾರೆ. ನೀವು ಹಣತೆ ಖರೀದಿಸುತ್ತಾ ಖರ್ಚು ಮಾಡುತ್ತಿದ್ದೀರಿ ಎಂದು ಅಖಿಲೇಶ್ ಯಾದವ್ ವಿವಾದಿತ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಆರ್‌ಎಸ್‌ಎಸ್‌ Vs ಸರ್ಕಾರ – ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಒಪ್ಪಿದ ಲಾಯರ್‌ | ಹೈಕೋರ್ಟ್‌ನಲ್ಲಿ ಏನಾಯಿತು?

    ಅಖಿಲೇಶ್ ಹೇಳಿಕೆಯನ್ನು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ತೀವ್ರವಾಗಿ ಟೀಕಿಸಿವೆ. ವ್ಯಾಟಿಕನ್ ಸಿಟಿಗೆ ಹೋಗಿ ಕ್ರಿಸ್‌ಮಸ್ ಆಚರಿಸಿ ಎಂದು ವಿಎಚ್‌ಪಿ ಹೇಳಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲ, ವರ್ಷಗಳ ಕಾಲ ಅಯೋಧ್ಯೆಯನ್ನು ಕತ್ತಲಲ್ಲಿ ಇರಿಸಿದ ಮತ್ತು ರಾಮ ಭಕ್ತರ ಮೇಲೆ ದಾಳಿ ಮಾಡಿದ್ದಕ್ಕೆ ಹೆಮ್ಮೆ ಪಟ್ಟ ಪಕ್ಷವು ಈಗ ದೀಪೋತ್ಸವಕ್ಕಾಗಿ ನಗರದ ಅಲಂಕಾರವನ್ನು ವಿರೋಧಿಸುತ್ತಿದೆ ಎಂದಿದ್ದಾರೆ.

  • ಅಯೋಧ್ಯೆ ರಾಮಮಂದಿರದ ಗರ್ಭಗುಡಿ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜ – ನ.25 ಕ್ಕೆ ಮೋದಿ ಧ್ವಜಾರೋಹಣ

    ಅಯೋಧ್ಯೆ ರಾಮಮಂದಿರದ ಗರ್ಭಗುಡಿ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜ – ನ.25 ಕ್ಕೆ ಮೋದಿ ಧ್ವಜಾರೋಹಣ

    – ಧ್ವಜದ ಮೇಲೆ ಸೂರ್ಯವಂಶಿ & ತ್ರೇತಾಯುಗದ ಚಿಹ್ನೆ

    ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya) ನಿರ್ಮಾಣವಾಗಿರುವ ಭವ್ಯ ರಾಮಮಂದಿರದ (Ram Mandir) ಗರ್ಭಗುಡಿಯ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜವನ್ನು ಹಾರಿಸಲು ತೀರ್ಮಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ (PM Modi) ಅವರು ರಾಮಮಂದಿರದ ಮೇಲ್ಭಾಗದಲ್ಲಿ ಧ್ವಜಾರೋಹಣ ನಡೆಸಲಿದ್ದಾರೆ.

    ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಧಾರ್ಮಿಕ ಸಮಿತಿಯ ಸದಸ್ಯರ ಮಹತ್ವದ ಸಭೆ ಜಾನಕಿ ಘಾಟ್‌ನ ವೈದೇಹಿ ಭವನದಲ್ಲಿ ನಡೆಯಿತು. ನವೆಂಬರ್ 25 ರಂದು ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮದ ರೂಪುರೇಷೆಯನ್ನು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಧಾರ್ಮಿಕ ಸಮಿತಿಯ ಸದಸ್ಯ ಗೋಪಾಲ್ ರಾವ್ ಹೇಳಿದರು. ಇದನ್ನೂ ಓದಿ: ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ನಾಪತ್ತೆ; ತನಿಖೆ ಕೈಗೊಳ್ಳಲು SITಗೆ ಕೇರಳ ಹೈಕೋರ್ಟ್ ಸೂಚನೆ

    191 ಅಡಿ ಎತ್ತರದ ರಾಮಮಂದಿರದ ಮೇಲ್ಭಾಗದಲ್ಲಿ 11 ಅಡಿ ಅಗಲ ಮತ್ತು 22 ಅಡಿ ಉದ್ದದ ತ್ರಿಕೋನಾಕಾರದ ಕೇಸರಿ ಧ್ವಜವನ್ನು ಹಾರಿಸಲು ನಿರ್ಧರಿಸಿದೆ. ಧ್ವಜದ ಮೇಲೆ ಸೂರ್ಯವಂಶಿ ಮತ್ತು ತ್ರೇತಾಯುಗದ ಚಿಹ್ನೆಗಳನ್ನು ಇರಿಸಲು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಸಮಿತಿಯು ಒಮ್ಮತಕ್ಕೆ ಬಂದಿದೆ.

    ದೀಪಾವಳಿ ಬಳಿಕ ಎಲ್ಲಾ ಅತಿಥಿಗಳಿಗೆ ಆಹ್ವಾನ ಪತ್ರಗಳನ್ನು ಕಳುಹಿಸಲಾಗುವುದು. ಎಂಟರಿಂದ ಹತ್ತು ಸಾವಿರ ಅತಿಥಿಗಳು ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅವರ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, ಖಜಾಂಚಿ ಗೋವಿಂದ್ ದೇವಗಿರಿ, ಸದಸ್ಯರಾದ ಡಾ. ಅನಿಲ್ ಮಿಶ್ರಾ, ಗೋಪಾಲ್ ರಾವ್ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ದೆಹಲಿ ಎನ್‌ಸಿಆರ್ ಪ್ರದೇಶದಲ್ಲಿ ಹಸಿರು ಪಟಾಕಿ ಸಿಡಿಸಲು ಅನುಮತಿ ನೀಡುವಂತೆ ಸುಪ್ರೀಂಗೆ ಮನವಿ

    ದೀಪಾವಳಿ ಲಕ್ಷ ದೀಪೋತ್ಸಕ್ಕಾಗಿ ಉತ್ತರ ಪ್ರದೇಶ ಸರ್ಕಾರದ ಪ್ರವಾಸೋದ್ಯಮ ಇಲಾಖೆ ನೇತೃತ್ವದಲ್ಲಿ ಕೆಲಸಗಳು ಶುರುವಾಗಿವೆ. ಭಕ್ತರ ಅನುಕೂಲಕ್ಕಾಗಿ ಆಸನ ವ್ಯವಸ್ಥೆ, ಬೆಳಕು, ವಿಶ್ರಾಂತಿ ಕೊಠಡಿಗಳು, ಬಟ್ಟೆ ಬದಲಾಯಿಸುವ ಕೊಠಡಿಗಳು, ಕುಡಿಯುವ ನೀರು ಮತ್ತು ರ‍್ಯಾಂಪ್‌ಗಳಂತಹ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಉಳಿದ ಕೆಲಸಗಳು ಅ.15 ರೊಳಗೆ ಪೂರ್ಣಗೊಳ್ಳಲಿವೆ.

  • ಮತಾಂತರ ಮಾಸ್ಟರ್‌ಮೈಂಡ್‌ ಛಂಗುರ್ ಬಾಬಾನ 5 ಕೋಟಿ ಮೌಲ್ಯದ ಮನೆ ಉಡೀಸ್‌ – ಬುಲ್ಡೋಜರ್‌ನಿಂದ ನೆಲಸಮ

    ಮತಾಂತರ ಮಾಸ್ಟರ್‌ಮೈಂಡ್‌ ಛಂಗುರ್ ಬಾಬಾನ 5 ಕೋಟಿ ಮೌಲ್ಯದ ಮನೆ ಉಡೀಸ್‌ – ಬುಲ್ಡೋಜರ್‌ನಿಂದ ನೆಲಸಮ

    – ಮುಸ್ಲಿಂ ರಾಷ್ಟ್ರಗಳಿಂದ ಮತಾಂತರಕ್ಕೆ ಬಂದಿತ್ತಂತೆ 500 ಕೋಟಿ ರೂ.

    ಲಕ್ನೋ: ಮತಾಂತರಕ್ಕೆ ಛಂಗುರ್‌ ಬಾಬಾ (Chhangur Baba) ಅಯೋಧ್ಯೆಯಲ್ಲಿ (Ayodhya) ಅತಿ ಹೆಚ್ಚು ಖರ್ಚು ಮಾಡಿರುವುದು ತನಿಖೆ ವೇಳೆ ಬಹಿರಂಗವಾಗಿದೆ.

    ಧಾರ್ಮಿಕ ಮತಾಂತರದ (Religious Conversion) ಮಾಸ್ಟರ್‌ಮೈಂಡ್‌ ಬಾಬಾನಿಗೆ ಮುಸ್ಲಿಂ ರಾಷ್ಟ್ರಗಳಿಂದ ಮತಾಂತರಕ್ಕಾಗಿ 500 ಕೋಟಿ ರೂ. ಹಣ ಬರುತ್ತಿತ್ತು. 200 ಕೋಟಿ ರೂ. ಅಧಿಕೃತವಾಗಿ ಬಂದಿದೆ. ಬಾಕಿ 300 ಕೋಟಿ ಹಣ ಅಕ್ರಮ ಹವಾಲಾ ಮೂಲಕ ಬಂದಿದೆ.

    ಇದರಲ್ಲಿ 200 ಕೋಟಿ ರೂ.ಗಳನ್ನು ಅಧಿಕೃತವಾಗಿ ಮೌಲ್ಯೀಕರಿಸಲಾಗಿದೆ. ಆದರೆ 300 ಕೋಟಿ ರೂ. ಅಕ್ರಮ ಹವಾಲಾ ಮಾರ್ಗಗಳನ್ನು ಬಳಸಿಕೊಂಡು ನೇಪಾಳದ ಮೂಲಕ ರವಾನಿಸಲಾಗಿದೆ. ನೇಪಾಳದ ಗಡಿ ಜಿಲ್ಲೆಗಳಾದ ಕಠ್ಮಂಡು, ನವಲ್ಪರಾಸಿ, ರೂಪಂದೇಹಿ ಮತ್ತು ಬಂಕೆಗಳಲ್ಲಿ 100 ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ. ಈ ಹಣವನ್ನು ಭಾರತದಲ್ಲಿ ಧಾರ್ಮಿಕ ಮತಾಂತರಕ್ಕೆ ಬಳಸಲು ಉದ್ದೇಶಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಆರ್ಥಿಕ ನೆರವು, ವಿವಾಹದ ಭರವಸೆ ನೀಡಿ ಹಿಂದೂಗಳನ್ನ ಇಸ್ಲಾಂಗೆ ಮತಾಂತರ – ಮಾಸ್ಟರ್‌ ಮೈಂಡ್‌ ಸೇರಿ ಇಬ್ಬರು ಅರೆಸ್ಟ್‌

    ಈ ಖಾತೆಗಳಿಗೆ ಪಾಕಿಸ್ತಾನ, ದುಬೈ, ಸೌದಿ ಅರೇಬಿಯಾ ಮತ್ತು ಟರ್ಕಿ ಸೇರಿದಂತೆ ಮುಸ್ಲಿಂ ಬಹುಸಂಖ್ಯಾತ ದೇಶಗಳಿಂದ ಹಣ ಬಂದಿದೆ. ನೇಪಾಳದ ಏಜೆಂಟರು ಈ ಹಣವನ್ನು ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯ ಮಾಧಪುರದ ಛಂಗೂರ್‌ಗೆ ವರ್ಗಾಯಿಸಲು ಸಹಾಯ ಮಾಡಿದ್ದರು. ಅವರು 4-5% ಕಮಿಷನ್ ಪಡೆದರು. ಅನೇಕ ಸಂದರ್ಭಗಳಲ್ಲಿ, ನಗದು ಠೇವಣಿ ಯಂತ್ರಗಳನ್ನು (CDM ಗಳು) ಬಳಸಿ ಹಣವನ್ನು ಠೇವಣಿ ಮಾಡಲಾಗುತ್ತಿತ್ತು.

    ಈ ಹಣವನ್ನು ಬಲರಾಂಪುರ್, ಶ್ರಾವಸ್ತಿ, ಬಹ್ರೈಚ್ ಮತ್ತು ಲಖಿಂಪುರಗಳಿಗೆ ತರಲಾಯಿತು. ಅಲ್ಲಿ ಸ್ಥಳೀಯ ಹಣ ವಿನಿಮಯಕಾರರು ನೇಪಾಳಿ ಕರೆನ್ಸಿಯನ್ನು ಭಾರತೀಯ ರೂಪಾಯಿಗಳಿಗೆ ಪರಿವರ್ತಿಸುತ್ತಿದ್ದರು. ಬಿಹಾರ ಜಿಲ್ಲೆಗಳಾದ ಮಧುಬನಿ, ಸಿತಾಮರ್ಹಿ, ಪುರ್ನಿಯಾ, ಕಿಶನ್‌ಗಂಜ್, ಚಂಪಾರಣ್ ಮತ್ತು ಸುಪೌಲ್‌ನ ಏಜೆಂಟ್‌ಗಳು ನೇಪಾಳದಿಂದ ಹಣವನ್ನು ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಕಂಡುಕೊಂಡಿದ್ದಾರೆ.

    ಅಯೋಧ್ಯಾ ಜಿಲ್ಲೆಗೆ ಅತಿ ಹೆಚ್ಚು ಹಣ ಬಂದಿದ್ದು, ಅಲ್ಲಿ ಹಿಂದೂ ಹುಡುಗಿಯರನ್ನು ಇತರ ಧರ್ಮಗಳಿಗೆ ಮತಾಂತರಿಸಲಾಗಿದೆ ಎಂದು ಆರೋಪಿಸಲಾಗಿದೆ. ಛಂಗೂರ್ ಮತ್ತು ಆತನ ಸಹಾಯಕರಿಗೆ ಸಂಬಂಧಿಸಿದ 40 ಬ್ಯಾಂಕ್ ಖಾತೆಗಳನ್ನು ಅಧಿಕಾರಿಗಳು ಪರಿಶೀಲಿಸಲು ಪ್ರಾರಂಭಿಸಿದ್ದಾರೆ. ಇದನ್ನೂ ಓದಿ: ಸೈಕಲ್‌ನಲ್ಲಿ ತಾಯತ ಮಾರುತ್ತಿದ್ದ ಧಾರ್ಮಿಕ ಮತಾಂತರ ಗ್ಯಾಂಗ್‌ನ ಜಮಾಲುದ್ದೀನ್‌ ಈಗ 106 ಕೋಟಿ ರೂ. ಒಡೆಯ

    ಭಯೋತ್ಪಾದನಾ ನಿಗ್ರಹ ದಳವು 10 ವರ್ಷಗಳ ಆದಾಯ ತೆರಿಗೆ ದಾಖಲೆಗಳನ್ನು ಸಹ ಕೇಳಿದೆ. ತನಿಖಾಧಿಕಾರಿಗಳು ನವೀನ್ ರೋಹ್ರಾ ಎಂಬಾತನ ಆರು ಖಾತೆಗಳಲ್ಲಿ 34.22 ಕೋಟಿ ರೂ. ಮತ್ತು ನಸ್ರೀನ್ ಎಂಬ ಮಹಿಳೆಯ ಖಾತೆಗಳಲ್ಲಿ 13.90 ಕೋಟಿ ರೂ.ಗಳನ್ನು ಪತ್ತೆಹಚ್ಚಿದ್ದಾರೆ. ಶಾರ್ಜಾ, ದುಬೈ ಅಥವಾ ಯುಎಇಯಲ್ಲಿರುವ ಛಂಗೂರ್‌ನ ಶಂಕಿತ ವಿದೇಶಿ ಬ್ಯಾಂಕ್ ಖಾತೆಗಳನ್ನು ಇನ್ನೂ ಪರಿಶೀಲಿಸುತ್ತಿದ್ದೇವೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

    ಬಲರಾಂಪುರದಲ್ಲಿ ಛಂಗೂರ್ ನಿರ್ಮಿಸಿದ 5 ಕೋಟಿ ರೂ. ಮೌಲ್ಯದ ಮಹಲನ್ನು ಸಂಪೂರ್ಣವಾಗಿ ಕೆಡವಲಾಗಿದೆ. ಇದನ್ನು ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ. ಅಮೃತಶಿಲೆಯ ಭದ್ರತಾ ಗೇಟ್ ಹೊಂದಿದ್ದ 40 ಕೋಣೆಗಳ ಬಂಗಲೆಯನ್ನು 10 ಬುಲ್ಡೋಜರ್‌ಗಳನ್ನು ಬಳಸಿ ಮೂರು ದಿನಗಳಲ್ಲಿ ಕೆಡವಲಾಯಿತು.

  • ಜೂ.3ರಂದು ಅಯೋಧ್ಯಾ ರಾಮಮಂದಿರದ ಸ್ವರ್ಣಗೋಪುರ ಉದ್ಘಾಟನೆ

    ಜೂ.3ರಂದು ಅಯೋಧ್ಯಾ ರಾಮಮಂದಿರದ ಸ್ವರ್ಣಗೋಪುರ ಉದ್ಘಾಟನೆ

    ಲಕ್ನೋ: ಅಯೋಧ್ಯೆಯ ರಾಮಮಂದಿರ (Ayodhya Ram Mandir) ಮತ್ತೊಂದು ಕ್ಷಣಕ್ಕೆ ಸಜ್ಜಾಗಿದೆ. 2ನೇ ಬಾರಿ ಪ್ರಾಣ ಪ್ರತಿಷ್ಠೆಗೆ ಮುನ್ನ ಬಂಗಾರದ ಗುಮ್ಮಟ (Gold Plated Shikhara) ಉದ್ಘಾಟನೆ ಆಗಲಿದೆ.

    ಗರ್ಭಗುಡಿಯ ಮೇಲೆ ಇರುವ ಬಂಗಾರದ ಶಿಖರವು ಪಾವಿತ್ರ್ಯತೆ, ಪ್ರಗತಿ ಮತ್ತು ಭಕ್ತಿಯ ಸಂಕೇತವಾಗಿದೆ. ಕಿಮೀಗಳ ದೂರಕ್ಕೆ ಗೋಚರಿಸ್ತಿರುವ ಈ ನಯನಮನೋಹರ ಗುಮ್ಮಟವು ಭಕ್ತರ ಕಣ್ಮನ ತಣಿಸುತ್ತಿದೆ. ಭಕ್ತಿ-ಭಾವವನ್ನು ಇಮ್ಮಡಿಗೊಳಿಸುತ್ತಿದೆ. ಇದನ್ನೂ ಓದಿ: ಪಂಜಾಬ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 113 ಡ್ರಗ್ ಪೆಡ್ಲರ್‌ಗಳು ಅರೆಸ್ಟ್

    ಅಲ್ಲದೇ ಮಂಗಳವಾರದಿಂದ 3 ದಿನ 2ನೇ ಬಾರಿಗೆ ಪ್ರಾಣ ಪ್ರತಿಷ್ಠೆ ನಡೆಯಲಿದ್ದು, ಜೊತೆಗೆ ಮೊದಲ ಮಹಡಿಯಲ್ಲಿ ಇತರೆ ದೇವರ ಮೂರ್ತಿಗಳ ಪ್ರತಿಷ್ಠಾಪನೆ ಆಗಲಿದೆ. ಜೊತೆಗೆ ʻರಾಮ ದರ್ಬಾರ್ʼ ಕೂಡ ನಡೆಯಲಿದೆ. ಇದನ್ನೂ ಓದಿ: ಭ್ರಷ್ಟ ಅಧಿಕಾರಿಯ 3 ರಾಜ್ಯಗಳಲ್ಲಿದ್ದ ಆಸ್ತಿ ಮೇಲೆ ಸಿಬಿಐ ದಾಳಿ – 1 ಕೋಟಿ ನಗದು, 3.5 ಕೆಜಿ ಚಿನ್ನ, 2 ಕೆಜಿ ಬೆಳ್ಳಿ ಪತ್ತೆ

    ಈಗಾಗಲೇ ಸಾವಿರಾರು ಭಕ್ತರು ಅಯೋಧ್ಯೆಯತ್ತ ಮುಖಮಾಡಿದ್ದಾರೆ. ಈ ಮಧ್ಯೆ, ಜಗತ್ತಿನ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ತಂದೆ ಎಲಾನ್‌ ಮಸ್ಕ್ ಭಾರತಕ್ಕೆ ಬಂದಿದ್ದು, ರಾಮಮಂದಿರಕ್ಕೆ ಭೇಟಿ ನೀಡಲಿದ್ದಾರೆ. ಇದನ್ನೂ ಓದಿ:  ಪಂಜಾಬ್‌ ವಿರುದ್ಧ ಫೈನಲ್‌ ಮ್ಯಾಚ್‌ – ಆರ್‌ಸಿಬಿ ಫ್ಯಾನ್ಸ್‌ಗೆ 1 ರೂ.ಗೆ ಆಫರ್‌ ಕೊಟ್ಟ ಸ್ನೂಕರ್‌ ಕ್ಲಬ್

  • ಟೆಸ್ಟ್‌ ನಿವೃತ್ತಿ ಬಳಿಕ ಟೆಂಪಲ್‌ ರನ್‌; ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ವಿರುಷ್ಕಾ ದಂಪತಿ ಭೇಟಿ

    ಟೆಸ್ಟ್‌ ನಿವೃತ್ತಿ ಬಳಿಕ ಟೆಂಪಲ್‌ ರನ್‌; ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ವಿರುಷ್ಕಾ ದಂಪತಿ ಭೇಟಿ

    ಲಕ್ನೋ: ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಳಿಕ ಸ್ಟಾರ್‌ ಕ್ರಿಕೆಟರ್‌ ವಿರಾಟ್‌ ಕೊಹ್ಲಿ (Virat Kohli), ಪತ್ನಿ ಅನುಷ್ಕಾ ಶರ್ಮಾ ಟೆಂಪಲ್‌ ರನ್‌ ಶುರು ಮಾಡಿದ್ದಾರೆ. ಇತ್ತೀಚೆಗೆ ವೃಂದಾವನದಲ್ಲಿ ಪ್ರೇಮಾನಂದ ಮಹಾರಾಜ್ ಅವರನ್ನ ಭೇಟಿಯಾಗಿದ್ದ ವಿರಾಟ್‌ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಇಂದು ಅಯೋಧ್ಯೆಗೆ ಭೇಟಿ ನೀಡಿದ್ದಾರೆ.

    ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನಕ್ಕೆ (Hanuman Garhi Temple) ಭೇಟಿ ನೀಡಿದ್ದಾರೆ. ಇದು ವಿರುಷ್ಕಾ ದಂಪತಿ ಆಧ್ಯಾತ್ಮದಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ. ಇದನ್ನೂ ಓದಿ: ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲ್ಲೋವರೆಗೂ ನಾನು ಮದುವೆಯಾಗಲ್ಲ: ಫಲಕ ಪ್ರದರ್ಶಿಸಿದ ಅಭಿಮಾನಿ

    ಇಂದು ಅಯೋಧ್ಯೆಯ (Ayodhya) ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಆಗಮಿಸಿ ವಿರಾಟ್‌ ಮತ್ತು ಅನುಷ್ಕಾ ಪ್ರಾರ್ಥಿಸಿದರು. ಈ ವೇಳೆ ಅರ್ಚಕರು ಕೊಹ್ಲಿ ದಂಪತಿಗೆ ದೇವರ ಹಾರ ಹಾಕಿದರು. ಜೊತೆಗೆ ಅನುಷ್ಕಾ ಶರ್ಮಾ ಹಣೆಗೆ ತಿಲಕ ಇಟ್ಟರು. ಸ್ಟಾರ್‌ ಜೋಡಿ ದೇವಸ್ಥಾನಕ್ಕೆ ಆಗಮಿಸಿದ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ಗೆ ಟೀಂ ಇಂಡಿಯಾ ಪ್ರಕಟ- ಗಿಲ್‌ಗೆ ನಾಯಕ ಪಟ್ಟ

    ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದೇವಾಲಯ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಸಂಜಯ್ ದಾಸ್ ಜಿ ಮಹಾರಾಜ್ ಮಹಂತ್, ‘ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರಿಗೆ ಆಧ್ಯಾತ್ಮಿಕತೆ, ಸಂಸ್ಕೃತಿ, ದೇವರು ಮತ್ತು ಸನಾತನ ಧರ್ಮದ ಬಗ್ಗೆ ಆಳವಾದ ಪ್ರೀತಿ ಇದೆ. ಅವರು ಭಗವಾನ್ ರಾಮಲಲ್ಲಾ ದೇಗುಲಕ್ಕೆ ಭೇಟಿ ನೀಡಿ ನಂತರ ಭಗವಾನ್ ಹನುಮಂತನಿಂದ ಆಶೀರ್ವಾದ ಪಡೆದರು. ಅವರು ಇಲ್ಲಿ ಆಧ್ಯಾತ್ಮಿಕತೆ ಮತ್ತು ಪೌರಾಣಿಕ ವಿಷಯಗಳನ್ನು ಸಹ ಚರ್ಚಿಸಿದರು ಎಂದು ತಿಳಿಸಿದ್ದಾರೆ.

    2023ರ ಜನವರಿ 22ರಂದು ಬಾಲರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೂ ಕೊಹ್ಲಿ ದಂಪತಿ ಆಗಮಿಸಿದ್ದರು. ಇದನ್ನೂ ಓದಿ: IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

  • ಅಯೋಧ್ಯೆ | ರಾಮಮಂದಿರ ಟ್ರಸ್ಟ್‌ಗೆ ತಮಿಳುನಾಡು ವ್ಯಕ್ತಿಯಿಂದ ಬೆದರಿಕೆ ಇಮೇಲ್

    ಅಯೋಧ್ಯೆ | ರಾಮಮಂದಿರ ಟ್ರಸ್ಟ್‌ಗೆ ತಮಿಳುನಾಡು ವ್ಯಕ್ತಿಯಿಂದ ಬೆದರಿಕೆ ಇಮೇಲ್

    ನವದೆಹಲಿ: ಅಯೋಧ್ಯೆಯ (Ayodhya) ರಾಮಮಂದಿರ (Ram Mandir) ಸ್ಫೋಟಿಸುವುದಾಗಿ ಇಮೇಲ್ ಮೂಲಕ ಬೆದರಿಕೆಯೊಂದು ಬಂದಿದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಇನ್ನೋವಾ ಡಿಕ್ಕಿಯಾಗಿ 10 ಅಡಿ ದೂರ ಹಾರಿ ಬಿದ್ದ ಮಹಿಳೆ – ಮಕ್ಕಳಿಗೆ ಚಾಕ್ಲೇಟ್ ತರಲು ಹೋಗಿ ಅಪಘಾತಕ್ಕೆ ಬಲಿ

    ಮಾಧ್ಯಮದವರೊಂದಿಗೆ ಅಯೋಧ್ಯೆಯ ಪೊಲೀಸ್ ಅಧಿಕಾರಿಯೊಬ್ಬರು ಬೆದರಿಕೆ ವಿಚಾರವಾಗಿ ಮಾತನಾಡಿ, ರಾಮಮಂದಿರ ಟ್ರಸ್ಟ್‌ಗೆ ಭಾನುವಾರ ಮಧ್ಯರಾತ್ರಿ ಅನುಮಾನಾಸ್ಪದ ಇಮೇಲ್ ಬಂದಿದೆ. ತಮಿಳುನಾಡಿನ ವ್ಯಕ್ತಿಯೊಬ್ಬ ಇಂಗ್ಲಿಷ್‌ನಲ್ಲಿ ಇಮೇಲ್ ಕಳುಹಿಸಿದ್ದಾನೆ. ಈ ಕುರಿತು ಸದ್ಯ ತನಿಖೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ. ಇದರ ಹೊರತಾಗಿ ಇನ್ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

    ಇನ್ನೂ ಈ ಕುರಿತು ರಾಮಮಂದಿರ ಟ್ರಸ್ಟ್ ಹಾಗೂ ಭದ್ರತಾ ಸಂಸ್ಥೆಗಳು ಯಾವುದೇ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿಲ್ಲ. ಇದಕ್ಕೂ ಮುನ್ನ ರಾಮಮಂದಿರ ಟ್ರಸ್ಟ್‌ಗೆ ಹಲವು ಬಾರಿ ಬೆದರಿಕೆ ಮೇಲ್‌ಗಳು ಬಂದಿದ್ದವು.ಇದನ್ನೂ ಓದಿ: ಬೆಂಗ್ಳೂರಲ್ಲಿ 5 ಕೋಟಿ ಮೌಲ್ಯದ ಮಾದಕ ವಸ್ತು ವಶ – ಇಬ್ಬರು ಅರೆಸ್ಟ್

  • ಅಯೋಧ್ಯೆಯ ಗೆಸ್ಟ್‌ ಹೌಸ್‌ನಲ್ಲಿ ಮಹಿಳೆ ಸ್ನಾನ ಮಾಡುವ ವೀಡಿಯೋ ಸೆರೆ ಹಿಡಿದವ ಅರೆಸ್ಟ್‌

    ಅಯೋಧ್ಯೆಯ ಗೆಸ್ಟ್‌ ಹೌಸ್‌ನಲ್ಲಿ ಮಹಿಳೆ ಸ್ನಾನ ಮಾಡುವ ವೀಡಿಯೋ ಸೆರೆ ಹಿಡಿದವ ಅರೆಸ್ಟ್‌

    – ಫೋನ್ ಪರಿಶೀಲಿಸಿದಾಗ ಮತ್ತಷ್ಟು ವೀಡಿಯೋಗಳು ಪತ್ತೆ

    ಅಯೋಧ್ಯೆ: ಶ್ರೀ ರಾಮಮಂದಿರ (Ram Mandir) ಸ್ಥಾಪಿತವಾಗಿರುವ ಅಯೋಧ್ಯೆಯಲ್ಲಿ ಪಾಪದ ಕೆಲಸ ನಡೆದಿದೆ. ಹೌದು ಶ್ರೀರಾಮಮಂದಿರದ ಬಳಿಯ ಅತಿಥಿ ಗೃಹದಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದಾಗ ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಿದ್ದ ಹೋಟೆಲ್‌ ಉದ್ಯೋಗಿಯೊಬ್ಬ (Ayodhya Hotel Staff) ರೆಡ್‌ಹ್ಯಾಂಡಾಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

    ರಾಮ ಮಂದಿರದ ಗೇಟ್ ಸಂಖ್ಯೆ 3 ರಿಂದ ಕೇವಲ 50 ಮೀಟರ್ ದೂರದಲ್ಲಿರುವ ರಾಜಾ ಗೆಸ್ಟ್ ಹೌಸ್‌ನಲ್ಲಿ ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಬಹ್ರೈಚ್‌ ಜಿಲ್ಲೆಯ ನಿವಾಸಿ ಸೌರಭ್‌ ತಿವಾರಿ (25) ಬಂಧಿತ ಆರೋಪಿ. ಆತನ ಮೊಬೈಲ್‌ ಪರಿಶೀಲಿಸಿದಾಗ ಅದೇ ರೀತಿ ಇನ್ನಷ್ಟು ಮಹಿಳೆಯರ ವಿಡಿಯೋಗಳು ಪತ್ತೆಯಾಗಿರುವುದನ್ನು ಕಂಡು ಪೊಲೀಸರೇ ಶಾಕ್‌ ಆಗಿದ್ದಾರೆ. ಇದನ್ನೂ ಓದಿ: ಪ್ರಿಯಕರನೊಂದಿಗೆ ಸೇರಿ ಗಂಡನನ್ನ ಕೊಂದು ಡ್ರಮ್‌ಗೆ ತುಂಬಿದ್ದ ಮುಸ್ಕಾನ್‌ ಈಗ ಗರ್ಭಿಣಿ – ಜೈಲಿನಲ್ಲಿ ವಿಶೇಷ ಸೌಲಭ್ಯ

    ರಾಜಾ ಗೆಸ್ಟ್‌ಹೌಸ್‌ನಲ್ಲಿದ್ದ ಅತಿಥಿಗಳ ಪೈಕಿ ಮಹಿಳೆಯೊಬ್ಬರು ಸ್ನಾನಕ್ಕೆ ತೆರಳಿದ್ದರು, ಈ ವೇಳೆ ವ್ಯಕ್ತಿಯೊಬ್ಬರ ನೆರಳನ್ನು ಗಮನಿಸಿದ್ದಾರೆ, ಬಳಿಕ ಟಿನ್‌ ಶೆಡ್‌ ಛಾವಣಿಯಿಂದ ಯಾರೋ ವಿಡಿಯೋ ಮಾಡುತ್ತಿರುವುದು ಕಂಡುಬಂದಿದೆ. ಬಳಿಕ ಆಕೆ ಸಹಾಯಕ್ಕಾಗಿ ಚೀರಿದ್ದಾಳೆ, ಕೂಡಲೇ ಹೋಟೆಲ್‌ನಲ್ಲಿದ್ದ ಪುರುಷರು ಸ್ಥಳಕ್ಕೆ ಧಾವಿಸಿ, ವಿಡಿಯೋ ಮಾಡುತ್ತಿದ್ದವನನ್ನ ಹಿಡಿದು ರಾಮಜನ್ಮಭೂಮಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಪೊಲೀಸರು ಆರೋಪಿಯ ಫೋನ್‌ ಪರಿಶೀಲಿಸಿದಾಗ ಇದೇ ರೀತಿ ಹಲವು ಮಹಿಳೆಯರ ವಿಡಿಯೋಗಳು ಪತ್ತೆಯಾಗಿದೆ. ಸದ್ಯ ಆರೋಪಿಯುನ್ನ ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ರಾಣಾಗೆ 14×14 ಅಡಿಯ ಸೆಲ್ – ದಿನದ 24 ಗಂಟೆಯೂ ನಿಗಾ; ಸೆಲ್‌ನಲ್ಲೇ ಊಟ

    ಗೆಸ್ಟ್‌ ಹೌಸ್‌ಗೆ ಸೀಲ್‌:
    ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ (ADA) ಅತಿಥಿ ಗೃಹಕ್ಕೆ ಸೀಲ್ ಹಾಕಿದೆ. ಇನ್ನೂ ಈ ಕುರಿತು ಮಾತನಾಡಿರುವ ಎಡಿಎ ಕಾರ್ಯದರ್ಶಿ ಸತ್ಯೇಂದ್ರ ಸಿಂಗ್ ಮಾತನಾಡಿ, ರಾಜಾ ಅತಿಥಿ ಗೃಹವನ್ನು ಪ್ರಾಧಿಕಾರದಿಂದ ಅನುಮೋದನೆ ಪಡೆಯದೇ ನಿರ್ಮಿಸಲಾಗಿದೆ. ಆದ್ದರಿಂದ ಸೀಲ್ ಮಾಡಲಾಗಿದೆ. ಅದೇ ಸಂಸ್ಥೆಯಲ್ಲಿ ಇಂತಹ ಇನ್ನಷ್ಟು ಘಟನೆಗಳು ನಡೆದಿವೆಯೇ ಮತ್ತು ವೀಡಿಯೊಗಳನ್ನು ಹಂಚಿಕೊಳ್ಳಲಾಗಿದೆಯೇ ಎನ್ನುವ ಆಯಾಮದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ. ಇದನ್ನೂ ಓದಿ: ತಹವ್ವೂರ್‌ ರಾಣಾ ಹಸ್ತಾಂತರವು ಮುಂಬೈ ದಾಳಿ ಸಂತ್ರಸ್ತರಿಗೆ ನ್ಯಾಯ ಒದಗಿಸುವಲ್ಲಿ ದೊಡ್ಡ ಹೆಜ್ಜೆ : ಜೈಶಂಕರ್‌

  • ರಾಮನವಮಿ| ಅಯೋಧ್ಯೆ ಬಾಲರಾಮನ ಹಣೆ ಮೇಲೆ ಮೂಡಿದ ʼಸೂರ್ಯ ತಿಲಕʼ

    ರಾಮನವಮಿ| ಅಯೋಧ್ಯೆ ಬಾಲರಾಮನ ಹಣೆ ಮೇಲೆ ಮೂಡಿದ ʼಸೂರ್ಯ ತಿಲಕʼ

    ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ರಾಮನವಮಿ (Ram Navami) ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ ಮೂಡಿದೆ.

    ಸೂರ್ಯನ ಕಿರಣವು (Surya Tilak) ನೇರವಾಗಿ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಬಿದ್ದ ದಿವ್ಯ ದೃಶ್ಯ ಕಂಡುಬಂತು. ನಿಖರವಾಗಿ ಮಧ್ಯಾಹ್ನ 12 ಗಂಟೆಗೆ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಬಿದ್ದ ಸೂರ್ಯನ ಕಿರಣ, ದಿವ್ಯ ತಿಲಕವನ್ನು ರೂಪಿಸಿತು. ಇದನ್ನೂ ಓದಿ: ಬೆಂಗಳೂರಿನ ಎಲ್ಲೆಡೆ ರಾಮನವಮಿಯ ಸಂಭ್ರಮ – ಬಾಲರಾಮನ ವೇಷ ತೊಟ್ಟು ಬಂದ ಪುಟಾಣಿಗಳು

    ಸೂರ್ಯ ಕಿರಣವು ದೇವರ ಹಣೆಯನ್ನು ಬೆಳಗಿಸಿ, ಆಚರಣೆಗಳಿಗೆ ಆಧ್ಯಾತ್ಮಿಕ ಹೊಳಪನ್ನು ನೀಡಿತು.

    ದೇಶಾದ್ಯಂತ ರಾಮನವಮಿಯನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತಿದೆ. ಇದು ವಿಷ್ಣುವಿನ ಏಳನೇ ಅವತಾರವಾದ ಭಗವಾನ್ ರಾಮನ ಜನ್ಮ ವಾರ್ಷಿಕೋತ್ಸವದ ದಿನ. ಜನರು ದೇವಾಲಯಗಳಿಗೆ ತೆರಳಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಅಲ್ಲಲ್ಲಿ ಭಜನೆಗಳು, ಮೆರವಣಿಗೆಗಳು ಮತ್ತು ಜಪಗಳು ನಡೆಯುತ್ತಿವೆ. ದೃಕ್ ಪಂಚಾಂಗದ ಪ್ರಕಾರ, ಭಗವಾನ್ ರಾಮನು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿಯಂದು ಜನಿಸಿದ್ದ.

    ರಾಮನವಮಿ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರವು ಹೂವು, ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಲಕ್ಷಾಂತರ ಭಕ್ತರು ರಾಮಮಂದಿರಕ್ಕೆ ತೆರಳಿ ದೇವರ ದರ್ಶನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ರಾಮನವಮಿ | 50 ಲಕ್ಷ ಭಕ್ತರಿಂದ ಅಯೋಧ್ಯೆ ಶ್ರೀರಾಮನ ದರ್ಶನ ಸಾಧ್ಯತೆ

  • ರಾಮನವಮಿ | 50 ಲಕ್ಷ ಭಕ್ತರಿಂದ ಅಯೋಧ್ಯೆ ಶ್ರೀರಾಮನ ದರ್ಶನ ಸಾಧ್ಯತೆ

    ರಾಮನವಮಿ | 50 ಲಕ್ಷ ಭಕ್ತರಿಂದ ಅಯೋಧ್ಯೆ ಶ್ರೀರಾಮನ ದರ್ಶನ ಸಾಧ್ಯತೆ

    ಲಕ್ನೋ: ರಾಮನವಮಿ (Ram Navami) ಹಿನ್ನೆಲೆ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ (Ram Mandir) ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಇಂದು ಒಂದೇ ದಿನ ಐವತ್ತು ಲಕ್ಷ ಭಕ್ತರು ಬಾಲರಾಮನ ದರ್ಶನ ಪಡೆಯುವ ಸಾಧ್ಯತೆಯಿದೆ.

    ಅಯೋಧ್ಯೆಯಲ್ಲಿ (Ayodhya) ಜನದಟ್ಟಣೆ ಹಿನ್ನೆಲೆ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕುಂಭಮೇಳದ ಮಾದರಿಯಲ್ಲಿ ಭದ್ರತೆ, ಡ್ರೋನ್ ಕಣ್ಗಾವಲು ಕಲ್ಪಿಸಲಾಗಿದೆ. ರಾಮನವಮಿ ಹಿನ್ನೆಲೆ ಪ್ರಭು ಶ್ರೀರಾಮನಿಗೆ ವಿಶೇಷ ಪೂಜೆ ನಡೆಯಲಿದೆ. ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ ಇಂದು ಉದ್ಘಾಟನೆ

    ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಎಲ್ಲಾ ವಿಶೇಷ ಪಾಸ್‌ಗಳನ್ನು ರದ್ದುಗೊಳಿಸಲಾಗಿದೆ. ದೇವಸ್ಥಾನ, ಸರಯೂ ನದಿ ಸೇರಿ ಎಲ್ಲ ಕಡೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ದೇಶದ ಜನತೆಗೆ ಶ್ರೀರಾಮನವಮಿ ಶುಭಾಶಯ ತಿಳಿಸಿದ ಮೋದಿ

    ಮಧ್ಯಾಹ್ನದ ವೇಳೆಗೆ ಬಾಲರಾಮನ ವಿಗ್ರಹದ ಹಣೆ ಮೇಲೆ ಸೂರ್ಯ ರಶ್ಮಿ ಬೀಳಲಿದ್ದು, ಅಪರೂಪದ ಕ್ಷಣವನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತರದಿಂದ ಕಾಯುತ್ತಿದ್ದಾರೆ .ಸಂಜೆ ಸರಯೂ ನದಿ ತೀರದ ರಾಮಕೀ ಪೌಡಯಲ್ಲಿ ಎರಡು ಲಕ್ಷ ಹಣತೆಗಳು ಬೆಳಗಲಿದೆ. ಇದನ್ನೂ ಓದಿ: ಶ್ರೀ ರಾಮನವಮಿ ಇತಿಹಾಸ, ಆಚರಣೆಯ ಮಹತ್ವವೇನು?