Tag: ಅಯೋಧ್ಯೆ ತೀರ್ಪು

  • ಅಯೋಧ್ಯೆ, ಕಾಶ್ಮೀರ ವಿಷಯದಲ್ಲಿ ಮೂಗು ತೂರಿಸಿದ ಪಾಕಿಗೆ ಚಳಿ ಬಿಡಿಸಿದ ಭಾರತದ ಅಧಿಕಾರಿ

    ಅಯೋಧ್ಯೆ, ಕಾಶ್ಮೀರ ವಿಷಯದಲ್ಲಿ ಮೂಗು ತೂರಿಸಿದ ಪಾಕಿಗೆ ಚಳಿ ಬಿಡಿಸಿದ ಭಾರತದ ಅಧಿಕಾರಿ

    – ವಿಶ್ವಸಂಸ್ಥೆಯಲ್ಲಿ ಮುಜುಗರಕ್ಕೀಡಾದ ಪಾಕ್

    ಪ್ಯಾರಿಸ್: ಕಾಶ್ಮೀರ ಮತ್ತು ಅಯೋಧ್ಯೆ ವಿಚಾರದಲ್ಲಿ ಮೂಗು ತೂರಿಸಿದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಭಾರತದ ಅಧಿಕಾರಿ ಚಳಿ ಬಿಡಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಮುಜುಗರಕ್ಕೀಡಾಗಿದೆ.

    ಯುನೆಸ್ಕೋ(UNESCO)ದ 40ನೇ ಸಾಮಾನ್ಯ ಸಭೆ(ಜನರಲ್ ಕಾನ್ಫರೆನ್ಸ್)ಯಲ್ಲಿ ಕಾಶ್ಮೀರ ಮತ್ತು ಅಯೋಧ್ಯೆ ವಿಷಯಗಳನ್ನು ಪಾಕಿಸ್ತಾನ ಪ್ರಸ್ತಾಪ ಮಾಡಿತು. ಈ ಎರಡು ಭಾರತದ ಆಂತರಿಕ ವಿಚಾರಗಳಾಗಿವೆ. ಹಾಗಾಗಿ ಪಾಕಿಸ್ತಾನ ಇದರಲ್ಲಿ ಹಸ್ತಕ್ಷೇಪ ಮಾಡದಿರುವುದೇ ಉತ್ತಮ ಹಾಗೂ ಈ ವಿಷಯಗಳಲ್ಲಿ ನಮ್ಮ ಮೇಲೆ ಯಾವುದೇ ಒತ್ತಡ ಹಾಕುವಂತಿಲ್ಲ ಎಂದು ಭಾರತದ ಪ್ರತಿನಿಧಿ ಖಡಕ್ ಆಗಿ ಯುನೆಸ್ಕೋದಲ್ಲಿ ಹೇಳಿದ್ದಾರೆ.

    ನಾವು ಪಾಕಿಸ್ತಾನದ ದುಷ್ಟಬುದ್ಧಿ ಮತ್ತು ಸುಳ್ಳು ಪ್ರಚಾರವನ್ನು ಬಲವಾಗಿ ಖಂಡಿಸುತ್ತೇವೆ. ಪಾಕಿಸ್ತಾನ ತನ್ನ ಸುಳ್ಳುಗಳಿಂದ ಭಾರತದ ಗೌರವಕ್ಕೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದೆ. ಭಾರತದ ಸವೋಚ್ಛ ನ್ಯಾಯಾಲಯ ನೀಡಿದ ಅಯೋಧ್ಯೆ ತೀರ್ಪನ್ನು ಪಾಕಿಸ್ತಾನ ಟೀಕಿಸುವ ಮೂಲಕ ನ್ಯಾಯಾಂಗ ನಿಂದನೆ ಮಾಡುತ್ತಿದೆ. ಅಯೋಧ್ಯೆ ವಿಷಯ ಸಂಪೂರ್ಣವಾಗಿ ಭಾರತದ ಆಂತರಿಕ ವಿಚಾರವಾಗಿದ್ದು, ಪಾಕಿಸ್ತಾನಕ್ಕೆ ಈ ಬಗ್ಗೆ ಮಾತನಾಡುವ ಯಾವುದೇ ಹಕ್ಕಿಲ್ಲ ಎಂದು ತಿರುಗೇಟು ನೀಡಿದರು.

    ಪಾಕಿಸ್ತಾನದ ಶಿಕ್ಷಣ ಮಂತ್ರಿ ಶಫಾಕತ್ ಮಹಮೂದ್ ಅಯೋಧ್ಯೆಯ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನ ಹೊರಹಾಕುತ್ತಾ, ಯುನೆಸ್ಕೋದ ಧಾರ್ಮಿಕ ಸ್ವಾತಂತ್ರ್ಯದ ಮೌಲ್ಯಗಳಿಗೆ ಅನುಗುಣವಾಗಿ ತೀರ್ಪು ಬಂದಿಲ್ಲ ಎಂದು ಮೂಗು ತೂರಿಸುವ ಪ್ರಯತ್ನ ಮಾಡಿದ್ದರು.

    ಶಫಾಕತ್‍ಗೆ ತಿರುಗೇಟು ನೀಡಿದ ಭಾರತದ ಪ್ರತಿನಿಧಿ, ಜೀವನದ ಅಧಿಕಾರ (Right To life) ದೇಶದ ಮೂಲಭೂತ ಅಧಿಕಾರವಾಗಿದೆ. ವಿಶ್ವಮಟ್ಟದಲ್ಲಿ ಈ ಅಧಿಕಾರಕ್ಕೆ ಭಯೋತ್ಪಾದನೆ ದೊಡ್ಡ ವಿಘ್ನವಾಗಿದೆ. ಪಾಕಿಸ್ತಾನ ಭಯೋತ್ಪಾದನೆಯ ಉತ್ಪಾದಕ ಕೇಂದ್ರ ಮತ್ತು ರಪ್ತು ಮಾಡುವ ದೇಶವಾಗಿದೆ. ಪಾಕಿಸ್ತಾನದ ರಾಜಕಾರಣದಲ್ಲಿ ಭಯೋತ್ಪಾದನೆ ಬೇರೂರಿದೆ. ಪಾಕಿಸ್ತಾನದ ಮೂಲಕವೇ ಭಯೋತ್ಪಾದನೆ ಮುಖ್ಯವಾಹಿನಿಗೆ ಬರುತ್ತಿದೆ ಎಂಬುವುದು ವಿಶ್ವಮಟ್ಟದಲ್ಲಿ ಗೊತ್ತಾಗಿದೆ ಎಂದು ಚಳಿ ಬಿಡಿಸಿದರು.

    ಇದೇ ವೇಳೆ ಪಾಕಿಸ್ತಾನ ಕಾಶ್ಮೀರದ ವಿಚಾರವನ್ನು ಪ್ರಸ್ತಾಪ ಮಾಡಿತು. ಜಮ್ಮು-ಕಾಶ್ಮೀರ ಮತ್ತು ಲಡಾಖ್ ಮೂರು ಭಾರತದ ಅವಿಭಾಜ್ಯ ಅಂಗಗಳಾಗಿವೆ. ಈ ಮೂರು ಭಾಗಗಳು ಯಾವಾಗಲೂ ಭಾರತದ ಅಂಗಗಳಾಗಿಯೇ ಇರಲಿವೆ. ಇದರಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಸಹ ಸೇರಿದೆ. ಪಾಕಿಸ್ತಾನ ಕಾನೂನುಬಾಹಿರ ಮತ್ತು ಬಲವಂತವಾಗಿ ಕಾಶ್ಮೀರದ ಭಾಗವನ್ನು ಆಕ್ರಮಿಸಿಕೊಂಡಿದೆ ಎಂದು ಭಾರತದ ಪ್ರತಿನಿಧಿ ಆರೋಪಿಸಿದರು.

     

  • 27 ವರ್ಷ ಉಪವಾಸ ಮಾಡಿ ಅಯೋಧ್ಯೆ ತೀರ್ಪಿಗೆ ಕಾದ ಆಧುನಿಕ ಶಬರಿ

    27 ವರ್ಷ ಉಪವಾಸ ಮಾಡಿ ಅಯೋಧ್ಯೆ ತೀರ್ಪಿಗೆ ಕಾದ ಆಧುನಿಕ ಶಬರಿ

    ಭೋಪಾಲ್: ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ.

    ಮಧ್ಯಪ್ರದೇಶದ ಜಬಲ್‍ಪುರದ ಊರ್ಮಿಳಾ ಚರ್ತುವೇದಿ(81) ರಾಮ ಜನ್ಮಭೂಮಿ ವಿವಾದ ಬಗೆಹರಿಯಲೆಂದು ಉಪವಾಸ ಮಾಡಿದ್ದಾರೆ. ಊರ್ಮಿಳಾ ಅವರು ಸಂಸ್ಕೃತ ಭಾಷಾ ಶಿಕ್ಷಕಿಯಾಗಿದ್ದು, ಅಯೋಧ್ಯೆ ಜಮೀನು ವಿವಾದ ಪರಿಹಾರಕ್ಕಾಗಿ 1992ರಿಂದ ಅನ್ನ ಆಹಾರ ತ್ಯಜಿಸಿ ಉಪವಾಸ ಮಾಡಿಕೊಂಡು ಬಂದಿದ್ದಾರೆ. ಜಮೀನು ವಿವಾದ ಇತ್ಯರ್ಥವಾಗುವ ತನಕ ಅಂದರೆ 27 ವರ್ಷ ಕಾಲ ಬರೀ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ ಕಾದು ಭಕ್ತಿ ಮೆರೆದಿದ್ದಾರೆ. ಇದನ್ನೂ ಓದಿ:ಅಯೋಧ್ಯೆ ರಾಮನಿಗೆ ಸಿಗಲು ‘ಸ್ಕಂದ’ ಕಾರಣ

    ಈ ಬಗ್ಗೆ ಊರ್ಮಿಳಾ ಮಗ ಅಮಿತ್ ಚರ್ತುವೇದಿ ಮಾತನಾಡಿ, ಶನಿವಾರ ಸುಪ್ರೀಂ ಕೋರ್ಟಿನ ಸಂವಿಧಾನ ಪೀಠ ಅಯೋಧ್ಯೆ ತೀರ್ಪು ಹೊರಡಿಸಿರುವುದನ್ನು ಕೇಳಿ ಅಮ್ಮ ಖುಷಿಪಟ್ಟಿದ್ದಾರೆ. 27 ವರ್ಷದಿಂದ ಊಟ ಬಿಟ್ಟಿದ್ದ ಅವರು ಈಗ ಊಟ ಮಾಡಲು ತೀರ್ಮಾನಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ:ರಾಮ ಮಂದಿರ ನಿರ್ಮಾಣಕ್ಕೆ 5 ವರ್ಷ ಬೇಕು

    ಅಮ್ಮ ಶ್ರೀರಾಮನ ದೊಡ್ಡ ಭಕ್ತೆ, ಅಯೋಧ್ಯೆ ಜಮೀನು ವಿವಾದ ಪರಿಹಾರಕ್ಕಾಗಿ ಎರಡು ದಶಕಗಳಿಂದ ಅವರು ಕಾಯುತ್ತಿದ್ದರು. ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ಸಂಸ್ಕೃತ ಭಾಷಾ ಶಿಕ್ಷಕಿಯಾಗಿ ಅಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿ ಧ್ವಂಸಗೊಂಡು ದೇಶದಾದ್ಯಂತ ಹಿಂಸಾಚಾರ ನಡೆದಾಗ ಅವರು ಬಹಳ ಖಿನ್ನತೆಗೊಳಗಾಗಿದ್ದರು. ತಮ್ಮ 54ನೇ ವಯಸ್ಸಿನಲ್ಲಿ ಅವರು ಉಪವಾಸ ಮಾಡಲು ಆರಂಭಿಸಿದರು. ಅನ್ನ ಸೇವಿಸುವುದನ್ನು ಬಿಟ್ಟು ಕೇವಲ ಹಣ್ಣು ಮತ್ತು ಹಾಲನ್ನು ಮಾತ್ರ ಸೇವನೆ ಮಾಡಿಕೊಂಡು ಬಂದಿದ್ದಾರೆ. ಸಂಬಂಧಿಕರು ಹಲವು ಬಾರಿ ಊಟ ಮಾಡುವಂತೆ ಮನವಿ ಮಾಡಿದರೂ ಅಮ್ಮ ಮಾತ್ರ ತಮ್ಮ ನಿರ್ಧಾರವನ್ನು ಕೈಬಿಡಲಿಲ್ಲ ಎಂದು ಅಮಿತ್ ತಿಳಿಸಿದರು. ಇದನ್ನೂ ಓದಿ:ಅಯೋಧ್ಯೆ ಕೇಸ್ – 92 ವರ್ಷದ ‘ತರುಣ’ ವಕೀಲನ ಸಾಧನೆಗೆ ಪ್ರಶಂಸೆಯ ಸುರಿಮಳೆ

    ಅಯೋಧ್ಯೆ ಜಮೀನು ವಿವಾದ ತೀರ್ಮಾನವಾಗಿ ಅಮ್ಮನ ಆಸೆ ನೆರವೇರಿದೆ. ಶೀಘ್ರದಲ್ಲೇ ನಮ್ಮ ಕುಟುಂಬ ಅಮ್ಮನ ಉಪವಾಸ ಕೈಬಿಡುವ `ಉದ್ಯಾಪನ್’ ಕಾರ್ಯಕ್ರಮವನ್ನು ಆಯೋಜಿಸಲಿದೆ. ಹಾಗೆಯೇ ನನ್ನ ಅಮ್ಮ ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಸಂಬಂಧ ಹೊಂದಿಲ್ಲ ಎಂದು ಅಮಿತ್ ಮಾಹಿತಿ ನೀಡಿದರು.

  • ಬಿಜೆಪಿ, ಆರ್‌ಎಸ್‌ಎಸ್‌ ಕನಸು ನನಸಾಗಿದೆ: ತೇಜಸ್ವಿನಿ ಅನಂತ್ ಕುಮಾರ್

    ಬಿಜೆಪಿ, ಆರ್‌ಎಸ್‌ಎಸ್‌ ಕನಸು ನನಸಾಗಿದೆ: ತೇಜಸ್ವಿನಿ ಅನಂತ್ ಕುಮಾರ್

    ಬೆಂಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಕನಸು ನನಸಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಹೇಳಿದ್ದಾರೆ.

    ಅಯೋಧ್ಯೆ ತೀರ್ಪು ವಿಚಾರವಾಗಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿ ಮಾತನಾಡಿದ ತೇಜಸ್ವಿನಿ ಅನಂತ್ ಕುಮಾರ್, ಅಂದು ಎಲ್.ಕೆ. ಅಡ್ವಾಣೆ ನೇತೃತ್ವದಲ್ಲಿ ರಾಮ ರಥಯಾತ್ರೆ ಮಾಡಿದ್ದು ಇಂದು ಸಾರ್ಥಕವಾಯ್ತು ಎಂದು ಹೇಳಿದರು.

    ಅಡ್ವಾಣಿ ಜೊತೆ ಅನಂತ್ ಕುಮಾರ್ ಕೂಡ ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಭಾರತೀಯ ಜನತಾ ಪಕ್ಷ ಮತ್ತು ಸಂಘ ಪರಿವಾರದ ಕನಸು ನನಸಾಗಿದೆ. ಆದ್ದರಿಂದ ಅಯೋಧ್ಯೆ ತೀರ್ಪು ಸ್ವಾಗತಾರ್ಹ ಎಂದು ಹೇಳಿದರು. ಉಪ ಚುನಾವಣೆಯ ವೇಳೆ ನಾನು ರಾಜಕೀಯದ ಬಗ್ಗೆ ಮಾತನಾಡಲಾರೆ. ಉಪ ಚುನಾವಣೆ ಸ್ಪರ್ಧೆ ಬಗ್ಗೆಯೂ ನಾನು ಏನು ಉತ್ತರಿಸಲಾರೆ ಎಂದು ತಿಳಿಸಿದರು.

  • ಮುಸ್ಲಿಂ ಸಮುದಾಯ ಮೇಲೆ ಮತ್ತಷ್ಟು ಒತ್ತಡ ಹಾಕಲಿದೆ – ಪಾಕ್ ಪ್ರತಿಕ್ರಿಯೆ

    ಮುಸ್ಲಿಂ ಸಮುದಾಯ ಮೇಲೆ ಮತ್ತಷ್ಟು ಒತ್ತಡ ಹಾಕಲಿದೆ – ಪಾಕ್ ಪ್ರತಿಕ್ರಿಯೆ

    ಇಸ್ಲಾಮಾಬಾದ್: ಅಯೋಧ್ಯೆ ತೀರ್ಪಿಗೆ ಪಾಕಿಸ್ತಾನ ವಿದೇಶಾಂಗ ಮಂತ್ರಿ ಶಾ ಮಹಮೂದ್ ಖುರೇಷಿ ಪ್ರತಿಕ್ರಿಯೆ ನೀಡಿದ್ದಾರೆ.

    ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಒತ್ತಡದಲ್ಲಿರುವ ಮುಸ್ಲಿಂ ಸುಮುದಾಯ ಮೇಲೆ ಮತ್ತಷ್ಟು ಒತ್ತಡ ಹಾಕಲಿದೆ. ಪಾಕಿಸ್ತಾನ ವಿದೇಶ ಕಾರ್ಯಾಲಯದಿಂದ ತೀರ್ಪಿನ ಹೆಚ್ಚಿನ ವಿವರಣೆಯನ್ನು ಪಡೆದುಕೊಂಡು ಪ್ರತಿಕ್ರಿಯಿಸುತ್ತೇನೆ ಎಂದು ಖುರೇಶಿ ಹೇಳಿದ್ದಾರೆ.

    ಅಯೋಧ್ಯೆಯ ಜಾಗ ಹಿಂದೂಗಳಿಗೆ ಸೇರಿದ್ದು ಎಂದು ಹೇಳುವ ಮೂಲಕ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಐತಿಹಾಸಿಕ ತೀರ್ಪು ನೀಡಿ, ಸುಮಾರು 5 ಶತಮಾನಗಳ ವಿವಾದಕ್ಕೆ ಷರಾ ಬರೆದಿದೆ. ರಾಮಜನ್ಮಭೂಮಿ ರಾಮನಿಗಷ್ಟೇ. ಸರ್ಕಾರದ ಟ್ರಸ್ಟ್ ಗೆ ಸೇರಬೇಕು. ಈ ಟ್ರಸ್ಟ್ ದೇವಾಲಯ ನಿರ್ಮಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಎಸ್.ಎ. ಬೋಬ್ಡೆ, ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಜೀರ್ ನೇತೃತ್ವದ ಪಂಚ ನ್ಯಾಯಾಧೀಶರ ಪೀಠ ತೀರ್ಪು ನೀಡಿದೆ.

    ಅಖಿಲ ಭಾರತೀಯ ಮುಸ್ಲಿಂ ಮಹಾಸಂಘದ ಅಧ್ಯಕ್ಷರಾಗಿರುವ ಫರ್ಹತ್ ಖಾನ್ ತಮ್ಮ ರಕ್ತದಿಂದ ‘ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ. ಹಿಂದೂಸ್ಥಾನಕ್ಕೆ ತೀರ್ಪನ್ನು ಅರ್ಥೈಸುವ ಕೆಲಸವನ್ನು ಮಾಡುತ್ತೇನೆ. ಇಲ್ಲಿ ಪ್ರೀತಿ, ಬಾಂಧವ್ಯ ಮತ್ತು ಸಹೋದರತೆಗೆ ಗೆಲುವು ಸಿಕ್ಕಿದೆ. ನ್ಯಾಯಾಧೀಶರು ಎಲ್ಲ ಆಂಶಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾಯೋಚಿತವಾದ ತೀರ್ಪನ್ನು ಪ್ರಕಟಿಸಿದ್ದಾರೆ. ಹಾಗಾಗಿ ಅಯೋಧ್ಯೆ ತೀರ್ಪನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಹಿಂದೂಸ್ಥಾನದ ಪ್ರತಿಯೊಂದು ಕಣದಲ್ಲಿ ರಾಮ್ ಮತ್ತು ರಹೀಂ ಇದ್ದಾರೆ ಎಂದು ಫರ್ಹರ್ ಹೇಳಿದ್ದಾರೆ.

    ನಾವು ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಆದ್ರೆ ಈ ತೀರ್ಪು ನಮಗೆ ಸಮಾಧಾನ ತಂದಿಲ್ಲ. 5 ಮಂದಿ ನ್ಯಾಯಾಧೀಶರು ನೀಡಿದ ಸಂವಿಧಾನ ಪೀಠದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಚಿಂತಿಸಲಾಗುತ್ತದೆ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತಿಳಿಸಿದೆ.

  • ರಾಮ, ರಹೀಮನ ಭಕ್ತಿ ಜೊತೆ ದೇಶ ಭಕ್ತಿ ಗಟ್ಟಿಗೊಳಿಸೋಣ: ಮೋದಿ

    ರಾಮ, ರಹೀಮನ ಭಕ್ತಿ ಜೊತೆ ದೇಶ ಭಕ್ತಿ ಗಟ್ಟಿಗೊಳಿಸೋಣ: ಮೋದಿ

    ನವದೆಹಲಿ: ಸುಪ್ರೀಂ ಕೋರ್ಟ್ ಪ್ರಕಟಿಸಿದ ಐತಿಹಾಸಿಕ ಅಯೋಧ್ಯೆ ತೀರ್ಪುಗೆ ದೇಶಾದ್ಯಂತ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೇ ಬೆನ್ನಲ್ಲೆ ರಾಮಜನ್ಮಭೂಮಿ ಪ್ರಕರಣದ ಕುರಿತು ಸುಪ್ರೀಂ ತೀರ್ಪು ನೀಡಿದ್ದು ಸ್ವಾಗತಾರ್ಹ. ರಾಮ ಭಕ್ತರಾಗಲಿ, ರಹೀಮನ ಭಕ್ತರಾಗಲಿ ಎಲ್ಲರೂ ಜೊತೆ ಸೇರಿ ದೇಶ ಭಕ್ತಿ ಗಟ್ಟಿಗೊಳಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

    ಅಯೋಧ್ಯೆ ತೀರ್ಪು ಹೊರಬಿದ್ದ ಬಳಿಕ ಸರಣಿ ಟ್ವೀಟ್ ಮಾಡಿ ನರೇಂದ್ರ ಮೋದಿ ತಮ್ಮ ಪ್ರತಿಕ್ರಿಯೆ ತಿಳಿಸಿದ್ದಾರೆ. ಅಯೋಧ್ಯೆ ತೀರ್ಪನ್ನು ಯಾರೂ ಗೆಲುವು, ಸೋಲಿನ ಭಾವನೆಯಲ್ಲಿ ನೋಡುವುದು ಬೇಡ. ರಾಮನ ಭಕ್ತ ಅಥವಾ ರಹೀಮನ ಭಕ್ತನೆನ್ನುವುದು ಬೇಡ, ಇದು ಎಲ್ಲರೂ ಜೊತೆಗೂಡಿ ದೇಶಭಕ್ತಿಯನ್ನು ಗಟ್ಟಿಗೊಳಿಸುವ ಸಮಯ ಎಂದು ಮೋದಿ ಏಕತೆಯ ಮಂತ್ರ ನುಡಿದಿದ್ದಾರೆ.

    ಇನ್ನೊಂದು ಟ್ವೀಟ್‍ನಲ್ಲಿ ಶಾಂತಿ, ಸಾಮರಸ್ಯ ಹೆಚ್ಚಾಗಲಿ. ಈ ಅಯೋಧ್ಯೆ ತೀರ್ಪು ಹಲವಾರು ವಿಷಯಗಳಲ್ಲಿ ಮಹತ್ವವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಏಕತೆ ಮತ್ತು ಸಹಬಾಳ್ವೆ ಹೆಚ್ಚಾಗಲಿ, ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದ್ದಾರೆ.

    ಹಾಗೆಯೇ ಯಾವುದೇ ವಿವಾದವನ್ನು ಕಾನೂನಿನ ಪ್ರಕಾರ ಇತ್ಯರ್ಥಪಡಿಸಬಹುದು ಎಂಬುದನ್ನು ಈ ತೀರ್ಪು ಸಾಬೀತು ಮಾಡಿದೆ. ದಶಕಗಳಿಂದ ಇತ್ಯರ್ಥವಾಗದೇ ಉಳಿದಿದ್ದ ವಿವಾದವನ್ನು ಸುಪ್ರೀಂ ಕೋರ್ಟ್ ತಿಳಿಗೊಳಿಸಿದೆ. ಈ ತೀರ್ಪಿನ ನಂತರವೂ 130 ಭಾರತೀಯರು ಶಾಂತಿ, ಸಂಯಮ ಕಾಪಾಡಿಕೊಳ್ಳಬೇಕು ಎಂದು ಮೋದಿ ಮನವಿ ಮಾಡಿದ್ದಾರೆ.

    ಸುಪ್ರೀಂ ಕೋರ್ಟ್ ಅಯೋಧ್ಯೆಯಲ್ಲಿನ 2.77 ಎಕ್ರೆ ಭೂಮಿ ಹಕ್ಕು ಹಿಂದೂಗಳಿಗೆ ಸೇರಿದ್ದು, ಮಸೀದಿ ನಿರ್ಮಾಣಕ್ಕೆ 5 ಎಕ್ರೆ ಪ್ರತ್ಯೇಕ ಜಾಗ ನೀಡಬೇಕೆಂದು ಐತಿಹಾಸಿಕ ತೀರ್ಪು ಪ್ರಕಟಿಸಿದೆ.

    ರಂಜನ್ ಗೊಗೋಯ್ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧನಿಕ ಪೀಠ ಸರ್ವ ಸಮ್ಮತದ ತೀರ್ಪು ಪ್ರಕಟಿಸಿದೆ. ಜನರ ಧಾರ್ಮಿಕ ನಂಬಿಕೆಗಳನ್ನು ಗೌರವಿಸ್ತೇವೆ. ಪೂಜೆ ಮಾಡುವವರ ಹಕ್ಕನ್ನು ಮಾನ್ಯ ಮಾಡಿದ್ದೇವೆ ಎಂದು ತಿಳಿಸಿದೆ.

  • ರಕ್ತದಲ್ಲಿ ಬರೆದು ಸುಪ್ರೀಂ ತೀರ್ಪು ಸ್ವಾಗತಿಸಿದ ಮುಸ್ಲಿಂ ವ್ಯಕ್ತಿ

    ರಕ್ತದಲ್ಲಿ ಬರೆದು ಸುಪ್ರೀಂ ತೀರ್ಪು ಸ್ವಾಗತಿಸಿದ ಮುಸ್ಲಿಂ ವ್ಯಕ್ತಿ

    ಲಕ್ನೋ: ಸುಪ್ರೀಂಕೋರ್ಟ್ ತೀರ್ಪನ್ನು ರಾಮಪುರದ ನಿವಾಸಿ ಫರ್ಹತ್ ಖಾನ್ ರಕ್ತದಲ್ಲಿ ಬರೆದು ಸ್ವಾಗತಿಸಿದ್ದಾರೆ.

    ಅಖಿಲ ಭಾರತೀಯ ಮುಸ್ಲಿಂ ಮಹಾಸಂಘದ ಅಧ್ಯಕ್ಷರಾಗಿರುವ ಫರ್ಹತ್ ಖಾನ್ ಸ್ವಾಗತ ಕೋರಿರುವ ಶೈಲಿಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಫರ್ಹತ್ ತಮ್ಮ ರಕ್ತದಿಂದ ‘ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್ ಸರ್ವೋಚ್ಚ, ಆದ್ರೆ ದೋಷಾತೀತ: ಓವೈಸಿ

    ಹಿಂದೂಸ್ಥಾನಕ್ಕೆ ತೀರ್ಪನ್ನು ಅರ್ಥೈಸುವ ಕೆಲಸವನ್ನು ಮಾಡುತ್ತೇನೆ. ಇಲ್ಲಿ ಪ್ರೀತಿ, ಬಾಂಧವ್ಯ ಮತ್ತು ಸಹೋದರತೆಗೆ ಗೆಲುವು ಸಿಕ್ಕಿದೆ. ನ್ಯಾಯಾಧೀಶರು ಎಲ್ಲ ಆಂಶಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾಯೋಚಿತವಾದ ತೀರ್ಪನ್ನು ಪ್ರಕಟಿಸಿದ್ದಾರೆ. ಹಾಗಾಗಿ ಅಯೋಧ್ಯೆ ತೀರ್ಪನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಹಿಂದೂಸ್ಥಾನದ ಪ್ರತಿಯೊಂದು ಕಣದಲ್ಲಿ ರಾಮ್ ಮತ್ತು ರಹೀಂ ಇದ್ದಾರೆ ಎಂದು ಫರ್ಹರ್ ಹೇಳುತ್ತಾರೆ. ಇದನ್ನೂ ಓದಿ: ಶಿಯಾ ಮತ್ತು ನಿರ್ಮೋಹಿ ಅಖಾಡ ಸಲ್ಲಿಸಿದ್ದ ಅರ್ಜಿ ವಜಾ – ಸುಪ್ರೀಂ ಆದೇಶದಲ್ಲಿ ಏನಿದೆ?

    ನಾವು ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಆದ್ರೆ ಈ ತೀರ್ಪು ನಮಗೆ ಸಮಾಧಾನ ತಂದಿಲ್ಲ. 5 ಮಂದಿ ನ್ಯಾಯಾಧೀಶರು ನೀಡಿದ ಸಂವಿಧಾನ ಪೀಠದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಚಿಂತಿಸಲಾಗುತ್ತದೆ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತಿಳಿಸಿದೆ. ಇದನ್ನೂ ಓದಿ: ಸುಪ್ರೀಂ ತೀರ್ಪನ್ನು ಯಾರೂ ಗೆಲುವು, ಸೋಲು ಎಂದು ಭಾವಿಸಬಾರದು – ಮೋಹನ್ ಭಾಗವತ್

  • ಭಾರತ ವಿಕಾಸದ ದಿಕ್ಕಲ್ಲಿ ಓಡುತ್ತಿದೆ, ಹಿಂದೂ-ಮುಸಲ್ಮಾನರು ಒಗ್ಗೂಡಿ ದೇಶ ಕಟ್ಟೋಣ: ಸೂಲಿಬೆಲೆ

    ಭಾರತ ವಿಕಾಸದ ದಿಕ್ಕಲ್ಲಿ ಓಡುತ್ತಿದೆ, ಹಿಂದೂ-ಮುಸಲ್ಮಾನರು ಒಗ್ಗೂಡಿ ದೇಶ ಕಟ್ಟೋಣ: ಸೂಲಿಬೆಲೆ

    ಬೆಂಗಳೂರು: ಶತಮಾನಗಳ ಅಯೋಧ್ಯೆ ವಿವಾದಕ್ಕೆ ಇಂದು ತೆರೆ ಬಿದ್ದಿದ್ದು, ದೇಶ ವಿಕಾಸದತ್ತ ಓಡುತ್ತಿದೆ. ಹಿಂದೂ ಮುಸಲ್ಮಾನರು ಒಗ್ಗೂಡಿ ಭಾರತವನ್ನು ಕಟ್ಟೋಣ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

    ಅಯೋಧ್ಯೆ ತೀರ್ಪಿನ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ. ಈ ಬಗ್ಗೆ ನಾನು ಏನಾದರೂ ಹೇಳಿದರೆ ಕಡಿಮೆಯಾಗಬಹುದು. ಇವತ್ತು ನನ್ನ ಜೀವನದ ಅತ್ಯಂತ ಸಂಭ್ರಮದ ದಿನಗಳಲ್ಲಿ ಒಂದು. ಕಳೆದ 2-3 ದಶಕದಿಂದ ಅಯೋಧ್ಯೆ ತೀರ್ಪು ಹೀಗೆ ಬರಬಹುದು, ಹಾಗೆ ಬರಬಹುದು ಎಂದು ಕನಸು ಕಂಡಿದ್ದೆವು. ಅದು ಇಂದು ನನಸಾಗಿರೋದು ನಮಗೆ ಆಕಾಶದಲ್ಲಿ ತೇಲಾಡುತ್ತಿರುವ ಅನುಭವ ನೀಡಿದೆ. ಅಯೋಧ್ಯೆ ತೀರ್ಪು ಪ್ರಕಟವಾಗುತ್ತಿದ್ದಂತೆ ಭಾವನಾತ್ಮಕ ಪ್ರಸಂಗ ಅನಿಸುತ್ತಿತ್ತು. ನಮ್ಮೆಲ್ಲರಿಗೂ ಮನಸ್ಸಿಗೆ ಮುದಾ ಕೊಡುವಂತಹ ತೀರ್ಪನ್ನು ಸುಪ್ರೀಂ ಕೋರ್ಟ್ ಕೊಟ್ಟಿದೆ. ಆದ್ದರಿಂದ ಸುಪ್ರೀಂ ಕೋರ್ಟಿಗೆ ಅತ್ಯಂತ ಪ್ರೀತಿಪೂರ್ವಕವಾದ ಧನ್ಯವಾಗಳನ್ನು ಸರ್ಮಪಿಸಲು ಇಚ್ಛಿಸುತ್ತೇನೆ ಎಂದು ಖುಷಿಯನ್ನು ಹಂಚಿಕೊಂಡರು. ಇದನ್ನೂ ಓದಿ:ಅಯೋಧ್ಯೆ ಭೂಮಿ ಹಕ್ಕು ಹಿಂದೂಗಳಿಗೆ ಸೇರಿದ್ದು – ಸುಪ್ರೀಂ ಐತಿಹಾಸಿಕ ತೀರ್ಪು

    ಇದು ಭಾರತ ಸಾರ್ವಭೌಮ ರಾಷ್ಟ್ರ ಎನ್ನುವುದನ್ನು ನಿರೂಪಿಸಿದೆ. 370ನೇ ವಿಧಿ ರದ್ಧತಿ ಆದಾಗಲೇ ಭಾರತ ತೋರಿದ ಏಕತೆ ಹಿಂದೂ-ಮುಸಲ್ಮಾನರಲ್ಲಿ ದೇಶ ಗಟ್ಟಿಯಾಯಿತು ಎಂಬ ಭಾವನೆ ಮೂಡಿಸಿತು. ಇವತ್ತು ಬಂದ ತೀರ್ಪು ಭಾರತ ಬಲಾಢ್ಯವಾಗಿರುತ್ತೆ ಎನ್ನುವುದನ್ನ ಮತ್ತೊಮ್ಮೆ ಸಾಭೀತುಗೊಳಿಸಿದೆ. ಭಾರತ ಮತ್ತೆ ತನ್ನ ಪರಂಪರೆಯ ಬೇರಿಗೆ ಮರಳುತ್ತಿದೆ. ದೇಶದ ಘನತೆಯನ್ನ ಜಗತ್ತಿಗೆ ತೋರಿಸುವ ಸಂದರ್ಭ ಬಂದಿದೆ. ಈಗ ಅಯೋಧ್ಯೆ ಜಗಳ ಸರಿಹೋಗದಿದ್ದಿದ್ದರೆ ಇನ್ನೂ 100 ವರ್ಷ ಕಳೆದರೂ ಇದೇ ಜಗಳ ಮುಂದುವರಿಯುತಿತ್ತು. ಎಲ್ಲೋ ಒಂದು ಕಡೆ ಇದಕ್ಕೆ ಪೂರ್ಣವಿರಾಮ ಬೀಳಬೇಕಿತ್ತು. ಅದು ಇವತ್ತು ನಡೆದಿದೆ. ಇನ್ನು ನಾವು ಈ ಮಂದಿರ-ಮಸೀದಿಯ ಜಗಳದಿಂದ ಮೇಲಕ್ಕೆ ಬರುತ್ತಾ ಭಾರತದ ವಿಕಾಸದತ್ತ ಓಡುತ್ತಿದೆ. ಅದರ ದಿಕ್ಕಲ್ಲಿ ನಾವೂ ನಡೆಯೋದು ಒಳಿತೆಂದು ನನಗೆ ಅನಿಸುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಮೊದಲೇ ಮುಸ್ಲಿಮರು ಸಂಧಾನಕ್ಕೆ ಒಪ್ಪಿದ್ದರೆ ಇನ್ನೂ ಸುಂದರವಾಗಿರುತ್ತಿತ್ತು. ಹಿಂದೂಗಳು ಕೂಡ ಅವರು ಪ್ರತ್ಯೇಕ ಜಾಗ ನೀಡಲು ಸಿದ್ಧರಾಗಿದ್ದರು. ಅದಕ್ಕೆ ಒಪ್ಪಿದ್ದರೆ ಮುಸಲ್ಮಾನರು ಪ್ರೀತಿಯಿಂದ ಜಾಗ ಬಿಟ್ಟುಕೊಟ್ಟರು ಎನ್ನುವ ಸೌಹಾರ್ದತೆ ಇರುತ್ತಿತ್ತು. ಇವತ್ತು ಹಾಗಿಲ್ಲ, ಇದು ಕೋರ್ಟಿನಿಂದ ಆಗಿದೆ. ಎಲ್ಲರೂ ಕೋರ್ಟಿಗೆ ತಲೆ ಬಾಗಬೇಕು ಎನ್ನುವ ರೀತಿ ಆಗಿದೆ.

    ದೇಶದ ಬಹುತೇಕ ಮುಸಲ್ಮಾನರು ಸುಪ್ರೀಂ ತೀರ್ಪನ್ನು ಒಪ್ಪಿದ್ದಾರೆ. ಇದು ಬಹಳ ಸಂತೋಷದ ವಿಚಾರವಾಗಿದೆ. ತೀರ್ಪು ಒಪ್ಪಿದ ಎಲ್ಲರನ್ನೂ ನಾನು ಅಭಿನಂದಿಸುತ್ತೇನೆ. ದುರಾದೃಷ್ಟಕರ ಸಂಗತಿಯೆಂದರೆ ಅಲ್ಲಿನ ಸುನ್ನಿ ಬೋರ್ಡ್ ತೀರ್ಪು ಒಪ್ಪದೆ ಮುಂದಕ್ಕೆ ತೆಗದುಕೊಂಡು ಹೋಗುತ್ತೇವೆ ಎಂದಿದ್ದಾರೆ. ಪ್ರಕರಣವನ್ನು ಜೀವಂತವಾಗಿರಿಸಲು ಪ್ರಯತ್ನಿಸುತ್ತಿದೆ. ಆದರೆ ನನ್ನ ಪ್ರಕಾರ ಈ ಪ್ರಕರಣ ಅಂತ್ಯವಾಗಿದೆ. ಮುಖ್ಯನ್ಯಾಯಾಧೀಶರು ಸಂಪೂರ್ಣ ಆಧಾರ ಪರಿಗಣಿಸಿ ಪ್ರಕರಣಕ್ಕೆ ತೆರೆಗಾಣಿಸಿದ್ದಾರೆ. ಹೀಗಾಗಿ ಎಲ್ಲಾ ಮುಸಲ್ಮಾನರಲ್ಲೂ ನಾನು ಕೋರಿಕೊಳ್ಳುತ್ತೇನೆ, ನಾವು ಮತ್ತು ನೀವು ರಾಷ್ಟ್ರವನ್ನ ಕಟ್ಟುವುದಲ್ಲಿ ಜೊತೆಯಾಗಿ ದೀರ್ಘಕಾಲ ನಡೆಯಬೇಕಾದ ಅವಕಾಶವಿದೆ, ಅಗತ್ಯವಿದೆ. ಇಬ್ಬರೂ ಜೊತೆಯಾಗಿ ಸಾಗೋಣ. ಇನ್ನು ಈ ಗಲಾಟೆಯನ್ನು ಮುಂದುವರಿಸುವುದು ಬೇಡ. ಗಲಾಟೆಯನ್ನು ಮುಗಿಸುವುದಕ್ಕೆ ಈ ಹಂತದಲ್ಲಿ ಪ್ರಯತ್ನಿಸೋಣ ಎಂದು ಮನವಿ ಮಾಡಿಕೊಂಡರು.

    ಯಾರು ಈ ಪ್ರಕರಣದ ಪ್ರೊಸಿಡಿಂಗ್ಸ್ ಬಗ್ಗೆ ಕೇಳಿದ್ದರೋ, ನೋಡಿದ್ದರೋ ಅವರಿಗೆ ಅಯೋಧ್ಯೆಯ ಜಾಗ ಹಿಂದೂಗಳಿಗೆ ಸೇರುತ್ತೆ ಎಂದು ಗೊತ್ತಿತ್ತು. ಇದು ಬಹಳ ಸ್ಪಷ್ಟವಾದ ಸಂಗತಿಯಾಗಿತ್ತು. ಯಾಕೆಂದರೆ ಇಡೀ ವಾದದಲ್ಲಿ ಭಾರತದ ಪುರಾತತ್ವ ಸಮೀಕ್ಷೆ ಮಾತ್ರ ವೈಜ್ಞಾನಿಕ ಸಾಕ್ಷ್ಯಗಳನ್ನು ಕೋರ್ಟಿಗೆ ಸಲ್ಲಿಸಿತ್ತು. ಅದನ್ನು ಬಿಟ್ಟು ಬೇರೆ ಸಾಕ್ಷ್ಯಗಳಲ್ಲಿ ಬ್ರಿಟಿಷ್ ಅಧಿಕಾರಿಗಳ ಹೇಳಿಕೆ, ಮುಸ್ಲಿಂ ರಾಜರುಗಳ ಹೇಳಿಕೆ ಮಾತ್ರವಿತ್ತು. ಯಾವುದೇ ಆಯಾಮದಲ್ಲಿ ನೋಡಿದರೂ ಕೂಡ ಪುರಾತತ್ವ ಸಮೀಕ್ಷೆಯ ಸಾಕ್ಷ್ಯಗಳು ಈ ಭೂಮಿಯ ಮೇಲೆ ಮಂದಿರ ಇತ್ತು ಎನ್ನುವುದನ್ನು ಸ್ಪಷ್ಟಪಡಿಸಿದೆ.

    ಮುಸ್ಲಿಮರು ಕೂಡ ಸ್ಪಷ್ಟವಾಗಿ ಇದು ರಾಮನ ಜನ್ಮಭೂಮಿ ಎಂದು ಒಪ್ಪಿಕೊಂಡಿದ್ದರು. ಹಿಂದೂಗಳೂ ಅದನ್ನೇ ಹೇಳುತ್ತಿದ್ದರು. ಹೀಗಾಗಿ ಅದು ವಿವಾದವಿಲ್ಲದ ಜಾಗವಾಗಿತ್ತು. ಆದರೆ ರಾಜಕೀಯ ಕಾರಣಗಳಿಂದ ಹಾಗೂ ಬಂದ ಸರ್ಕಾರಗಳು ಅಯೋಧ್ಯೆ ತೀರ್ಪು ಬಂದರೆ ಮುಸ್ಲಿಮರು ಧಂಗೆ ಏಳುತ್ತಾರೆ ಎನ್ನುವ ಭಯ ಹುಟ್ಟಿಸಿತ್ತು. ಆದ್ದರಿಂದ ಈ ಪ್ರಕರಣದ ತೀರ್ಪು ಬಂದಿರಲಿಲ್ಲ ಅಷ್ಟೇ. ಅದನ್ನು ಬಿಟ್ಟರೆ ಈ ಪ್ರಕರಣ ಹಿಂದೂಗಳ ಪರವಾಗಿಯೇ ಬರುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿತ್ತು. ಅಯೋಧ್ಯೆ ಪ್ರಕರಣವನ್ನು ಕೈಗೆತ್ತಿಕೊಂಡು ಆದಷ್ಟು ಬೇಗ ಇದಕ್ಕೆ ಇತಿಶ್ರೀ ಹಾಡಲು ಮುಂದಾದ ಸುಪ್ರೀಂ ಕೋರ್ಟಿನ ಮುಖ್ಯನ್ಯಾಯಾಮೂರ್ತಿ ರಂಜನ್ ಗೊಗೊಯ್ ಅವರಿಗೆ ಹೃದಯಪೂರ್ವಕ ಅಭಿನಂದನೆಯನ್ನು ಸೂಲಿಬೆಲೆ ಅವರು ತಿಳಿಸಿದರು.

    ಕೇಂದ್ರ ಸರ್ಕಾರ 370ನೇ ವಿಧಿಯನ್ನು ರದ್ದು ಮಾಡಿದಾಗ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಂಡಿತ್ತು. ಇದು ಅಯೋಧ್ಯೆ ತೀರ್ಪನ್ನು ಹೊರಡಿಸಲು ಸಹಾಯವಾಯ್ತು. ಕೇಂದ್ರದಲ್ಲಿ ಸಾರ್ವಭೌಮ ಸರ್ಕಾರವಿದೆ, ಇದು ಪರಿಸ್ಥಿತಿಯನ್ನು ನಿಯಂತ್ರಿಸುತ್ತೆ ಎಂದು ಗೊತ್ತಿತ್ತು. ಹೀಗಾಗಿ ನ್ಯಾಯಾಧೀಶರು ನಾವು ಮಾಡಬೇಕಾದ ಕೆಲಸ ಮಾಡೋಣ ಎಂದು ಅಯೋಧ್ಯೆ ತೀರ್ಪನ್ನು ಹೊರಡಿಸಿದ್ದಾರೆ.

    ಶುಕ್ರವಾರದಂದು ನಾಳೆ ಅಯೋಧ್ಯೆ ತೀರ್ಪು ಹೊರಬೀಳುತ್ತೆ ಎಂದು ತಿಳಿದಾಗಲೇ ಅದು ಹಿಂದೂಗಳ ಪರವಾಗಿಯೇ ಬರುತ್ತೆ ಎಂಬ ನಂಬಿಕೆ ಇತ್ತು. ಆದರೂ ಎಲ್ಲೋ ಒಂದು ಕಡೆ ಸ್ವಲ್ಪ ಆತಂಕ ಕೂಡ ಇತ್ತು. ಅದನ್ನು ಬಿಟ್ಟರೆ ಅಯೋಧ್ಯೆ ತೀರ್ಪು ರಾಮನ ಪರವಾಗಿಯೇ ಬರುತ್ತೆ ಎಂದು ಗೊತ್ತಿತ್ತು ಎಂದು ಹೇಳಿದರು.

    10.30ಕ್ಕೆ ಸುಪ್ರೀಂ ತೀರ್ಪು ಆರಂಭವಾದಾಗಿನಿಂದಲೂ ನಾನು ಸಾಮಾಜಿಕ ಜಾಲತಾಣ ಹಾಗೂ ಎಲ್ಲರೂ ಮಾಡುತ್ತಿದ ಟ್ವೀಟ್‍ಗಳನ್ನು ಗಮನಿಸುತ್ತಿದ್ದೆ. ಮೊದಲು ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು ನಿಜ ಎಂದು ಒಪ್ಪಿಕೊಳ್ಳಬೇಕಾಗುತ್ತೆ ಎಂದಾಗ ಹಿಂದೂಗಳ ಪರವಾಗಿಯೇ ತೀರ್ಪು ಬರತ್ತೆ ಎಂದು ಖುಷಿಯಾಯ್ತು. ಬಳಿಕ ಪುರಾತತ್ವ ಇಲಾಖೆ ನಿಖರವಾಗಿ ತಿಳಿಸಿಲ್ಲ ಎಂದಾಗ ಆತಂಕವಾಯ್ತು. ಕೊನೆಗೆ ಶಿಯಾ ಇದು ತಮ್ಮದೇ ಜಾಗವೆಂದು ಸುಪ್ರೀಂ ಕೋರ್ಟಿನಲ್ಲಿ ಸಾಬೀತುಪಡಿಸಲು ಸಾಧ್ಯವಾಗದ ಹಿನ್ನೆಲೆ ಇದನ್ನ ಹಿಂದೂಗಳಿಗೆ ಕೊಡಬೇಕು. ಮುಸಲ್ಮಾನರಿಗೆ ಪ್ರತ್ಯೇಕ ಜಾಗ ಕೊಡಬೇಕು ಎಂದು ತೀರ್ಪು ನೀಡಿತು. ಇದನ್ನು ನೋಡುತ್ತಿದ್ದಾಗ 20-20 ಕ್ರಿಕೆಟ್ ಮ್ಯಾಚ್ ನೋಡಿದ ಹಾಗೆ ಆಗುತಿತ್ತು ಎಂದರು.

    ರಾಮ ಮಂದಿರ ಹೇಗಿರಬೇಕು ಎನ್ನುವುದರ ಪ್ಲಾನ್ ದಶಕಗಳ ಹಿಂದೆಯೇ ಮಾಡಲಾಗಿದೆ. ಮಂದಿರ ನಿರ್ಮಾಣಕ್ಕೆ ಸಿದ್ಧತೆಗಳು ಕೂಡ ಮಾಡಿಕೊಂಡಾಗಿದೆ. ಕೆಲವೇ ತಿಂಗಳುಗಳಲ್ಲಿ ರಾಮ ಮಂದಿರವನ್ನು ಕಟ್ಟಿ ಮುಗಿಸಬಹುದು. ಆದರೆ ದೇಶದ ದೃಷ್ಟಿಯಲ್ಲಿ ಮಂದಿರವೆಂದರೆ ಅದು ವಿದ್ಯಾ ಕೇಂದ್ರವೂ ಆಗಿರಬೇಕು, ಆರೋಗ್ಯ ಕೇಂದ್ರವೂ ಆಗಿರಬೇಕು, ಜ್ಞಾನ ಪ್ರಸಾದ ಕೇಂದ್ರವೂ ಆಗಿರಬೇಕು ಹಾಗೂ ರಾಮನ ಚಿಂತನೆಗಳನ್ನ, ಮೌಲ್ಯಗಳನ್ನ ಜಗತ್ತಿಗೇ ಸಾರುವ ಕೇಂದ್ರ ಆಗಿರಬೇಕು. ಮತ್ತೊಮ್ಮೆ ಅಯೋಧ್ಯೆ ಭೂಪಟದಲ್ಲಿ ಇಡೀ ಜಗತ್ತೆ ನೋಡುವಂತಹ ಸ್ಥಳವಾಗಬೇಕು ಎಂದು ಹೇಳಿದರು.

    ಸುಪ್ರೀಂ ಕೋರ್ಟ್ ಅಯೋಧ್ಯೆಯಲ್ಲಿನ 2.77 ಎಕ್ರೆ ಭೂಮಿ ಹಕ್ಕು ಹಿಂದೂಗಳಿಗೆ ಸೇರಿದ್ದು, ಮಸೀದಿ ನಿರ್ಮಾಣಕ್ಕೆ 5 ಎಕ್ರೆ ಪ್ರತ್ಯೇಕ ಜಾಗ ನೀಡಬೇಕೆಂದು ಐತಿಹಾಸಿಕ ತೀರ್ಪು ಪ್ರಕಟಿಸಿದೆ.

    ರಂಜನ್ ಗೊಗೋಯ್ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧನಿಕಾ ಪೀಠ ಸರ್ವ ಸಮ್ಮತದ ತೀರ್ಪು ಪ್ರಕಟಿಸಿದೆ. ಜನರ ಧಾರ್ಮಿಕ ನಂಬಿಕೆಗಳನ್ನು ಗೌರವಿಸ್ತೇವೆ. ಪೂಜೆ ಮಾಡುವವರ ಹಕ್ಕನ್ನು ಮಾನ್ಯ ಮಾಡಿದ್ದೇವೆ ಎಂದು ತಿಳಿಸಿದೆ.

  • ಅಯೋಧ್ಯೆ ತೀರ್ಪು ಸಮಾಧಾನ ತಂದಿಲ್ಲ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

    ಅಯೋಧ್ಯೆ ತೀರ್ಪು ಸಮಾಧಾನ ತಂದಿಲ್ಲ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

    ನವದೆಹಲಿ: ನಾವು ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಆದ್ರೆ ಈ ತೀರ್ಪು ನಮಗೆ ಸಮಾಧಾನ ತಂದಿಲ್ಲ. 5 ಮಂದಿ ನ್ಯಾಯಾಧೀಶರು ನೀಡಿದ ಸಂವಿಧಾನ ಪೀಠದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಚಿಂತಿಸಲಾಗುತ್ತದೆ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತಿಳಿಸಿದೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುನ್ನಿ ವಕ್ಫ್ ಬೋರ್ಡ್ ಪರ ವಕೀಲರಾದ ಜಫ್ರಯಾಬ್ ಗಿಲಾನಿ, ನ್ಯಾಯಾಧೀಶರು ಸಂಕ್ಷಿಪ್ತವಾಗಿ ತೀರ್ಪನ್ನು ಓದಿದ್ದರಿಂದ ಸಂಪೂರ್ಣ ಪ್ರತಿಯನ್ನು ಪಡೆದುಕೊಂಡು ಓದಿ ಮುಂದಿನ ನಿರ್ಧಾರವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು. ಇದು ನ್ಯಾಯವಾದ ತೀರ್ಪು ಎಂದು ಒಪ್ಪಿಕೊಳ್ಳಲು ಆಗುತ್ತಿಲ್ಲ. ಷರಿಯಾ ಕಾನೂನಿನ ಪ್ರಕಾರ ಮಸೀದಿಯನ್ನು ಯಾರಿಗೂ ಕೊಡುಗೆಯಾಗಿ ನೀಡಲು ಬರಲ್ಲ. ಆದರೂ ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ವಿವಾದಿತ ಜಮೀನಿನ ಹಕ್ಕು ರಾಮಲಲ್ಲಾಗೆ ನೀಡಿದೆ. ಸುಪ್ರೀಂಕೋರ್ಟ್ ಅದೇ ಮಸೀದಿಯಲ್ಲಿ ನಮಾಜ್ ಮಾಡಿದ್ದರು ಎಂಬುದನ್ನು ತನ್ನ ಆದೇಶದಲ್ಲಿ ಹೇಳುತ್ತದೆ ಎಂದು ತಿಳಿಸಿದರು.

    ನ್ಯಾಯಾಲಯ ನೀಡಿದ ಐತಿಹಾಸಿಕ ತೀಪನ್ನು ಎಲ್ಲರೂ ಸ್ವಾಗತಿಸಬೇಕಿದೆ. ಎಲ್ಲರೂ ಶಾಂತಿ ಕಾಪಾಡಿಕೊಳ್ಳಬೇಕು. ಕಾನೂನಿನ ಪ್ರಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಸಭೆ ನಡೆಸಲಾಗುತ್ತದೆ. ವಿವಾದಿತ ಪ್ರದೇಶದಲ್ಲಿ ನಮಾಜ್ ಮಾಡಲಾಗಿದೆ ಎಂದು ಹೇಳಿದರೂ ಆ ಸ್ಥಳವನ್ನು ಬೇರೆಯವರಿಗೆ ನೀಡಲಾಗಿದೆ. ತೀರ್ಪಿನ ಕೆಲ ಅಂಶಗಳ ಬಗ್ಗೆ ಮಾತ್ರ ನಮಗೆ ಅಸಮಾಧಾನವಿದೆ. ಅದೇ ಸ್ಥಳದಲ್ಲಿ ಹಿಂದೂಗಳು ಪೂಜೆ ಮಾಡಿರುವ ಸಾಕ್ಷ್ಯವನ್ನು ಒಪ್ಪಿಕೊಳ್ಳುವ ಸುಪ್ರೀಂಕೋರ್ಟ್ ನಮಾಜ್ ಮಾಡಿರುವುದನ್ನು ಒಪ್ಪಿಕೊಂಡಿಲ್ಲ. ಈ ರೀತಿಯ ಕೆಲವೊಂದು ಅಂಶಗಳ ಬಗ್ಗೆ ಸಣ್ಣ ಗೊಂದಲಗಳಿವೆ. ತೀರ್ಪಿನ ಪ್ರತಿಯನ್ನು ಓದಿದಾಗಲೇ ಎಲ್ಲವೂ ಬಗೆಹರಿಯಲಿದೆ ಎಂದು ತಿಳಿಸಿದರು.

    ತೀರ್ಪಿನ ಪ್ರಮುಖ ಅಂಶಗಳು:
    ಮುಸ್ಲಿಮರಿಗೆ 5 ಎಕ್ರೆ ಪರ್ಯಾಯ ಭೂಮಿ ನೀಡಬೇಕು. ದೇವಸ್ಥಾನ ನಿರ್ಮಾಣಕ್ಕೆ 3 ತಿಂಗಳಲ್ಲಿ ಸಮಿತಿ ರಚಿಸಬೇಕು. ರಾಮ ಮಂದಿರ ನಿರ್ಮಾಣ ಹೊಣೆ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ದೇವಸ್ಥಾನ ನಿರ್ಮಾಣಕ್ಕೆ ಟ್ರಸ್ಟ್ ಸ್ಥಾಪಿಸಬೇಕು. ವಿವಾದಿತ 2.77 ಎಕರೆಯಲ್ಲಿ ಕೇವಲ ರಾಮಲಲ್ಲಾಗಷ್ಟೇ ಅಧಿಕಾರವಿದೆ.

    ಬಾಬ್ರಿ ಮಸೀದಿ ಭೂಮಿ ಮಾಲೀಕತ್ವ ಶಿಯಾ ವಕ್ಫ್ ಬೋರ್ಡಿಗೆ ಒಳಪಟ್ಟಿದ್ದಲ್ಲ ಮತ್ತು ಹಕ್ಕಿಲ್ಲ. ಬಾಬರ್ ಕಮಾಂಡರ್ ಮೀರ್ ಬಾಕಿ ಬಾಬ್ರಿ ಮಸೀದಿ ನಿರ್ಮಿಸಿದ್ದಾನೆ. ಜನರ ಧಾರ್ಮಿಕ ನಂಬಿಕೆಗಳನ್ನು ಗೌರವಿಸ್ತೇವೆ. ಪೂಜೆ ಮಾಡುವವರ ಹಕ್ಕನ್ನು ಮಾನ್ಯ ಮಾಡಿದ್ದೇವೆ.

    ಹಿಂದೂ ದೇವಾಲಯ ನಾಶದ ಬಗ್ಗೆ ಸಾಕ್ಷ್ಯ ಇಲ್ಲ. 2ನೇ ಶತಮಾನದಲ್ಲಿ ದೇವಸ್ಥಾನ ಇದ್ದ ಬಗ್ಗೆ ಸಾಕ್ಷಿ ಇದೆ. ಕೇವಲ ಪುರಾತತ್ವ ಸಾಕ್ಷ್ಯವನ್ನಷ್ಟೇ ಅವಲಂಬಿಸಲು ಸಾಧ್ಯವಿಲ್ಲ. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದ ಎನ್ನುವ ನಂಬಿಕೆ ಅವಿವಾದಿತ.

    ರಾಮನ ಮೂರ್ತಿ ಇಟ್ಟ ವಿಚಾರದಲ್ಲಿ ಸುನ್ನಿ ವಕ್ಫ್ ಬೋರ್ಡ್ ವಾದವನ್ನು ಮಾನ್ಯ ಮಾಡುತ್ತೇವೆ. 1949ರಲ್ಲಿ ರಾಮನ ಮೂರ್ತಿ ಇಡಲಾಗಿತ್ತು. 1856ರವರೆಗೆ ನಮಾಜ್ ಮಾಡಲಾಗಿತ್ತು ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ.

    ಮಸೀದಿಯ ಕೆಳಗಡೆ ಹಿಂದೂ ರಚನೆ ಇದೆ ಅಂತ ನಂಬಲು ಸಾಧ್ಯವಿಲ್ಲ. ವಿವಾದಿತ ಜಾಗದಲ್ಲಿ ಹಿಂದೂ-ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಬ್ರಿಟೀಷರು ಆ ಜಾಗವನ್ನು ಪ್ರತ್ಯೇಕಿಸಿ ಬೇಲಿ ಹಾಕಿಸಿದ್ದರು. ಮಸೀದಿಯ ಒಳಗೆ ಮುಸ್ಲಿಮರು, ಆವರಣದಲ್ಲಿ ಹಿಂದೂಗಳು ಪ್ರಾರ್ಥನೆ ಮಾಡುತ್ತಿದ್ದರು.

    ಮಸೀದಿಯ ಒಳಭಾಗದ ಬಗ್ಗೆಯೂ ವಿವಾದವಿದೆ. ಭೂ ಮಾಲೀಕತ್ವ ನಂಬಿಕೆ ಮೇಲೆ ಆಗುವುದಿಲ್ಲ. ಬಾಬ್ರಿ ಮಸೀದಿ ಧ್ವಂಸ ಮಾಡಿದ್ದು ಪ್ರಾರ್ಥನೆ ಹಕ್ಕಿನ ಉಲ್ಲಂಘನೆ. ಅಲಹಾಬಾದ್ ಕೋರ್ಟ್ ಮೂವರು ಅರ್ಜಿದಾರರಿಗೆ ಸಮಾನವಾಗಿ ಮೂರು ಭಾಗವಾಗಿ ಹಂಚಿಕೆ ಮಾಡಿ ತೀರ್ಪು ನೀಡಿದ್ದು ತಪ್ಪು. ಸಂವಿಧಾನದ ಮುಂದೆ ಎಲ್ಲಾ ಧರ್ಮಗಳೂ ಒಂದೇ. ಜಡ್ಜ್ ಗಳಿಗೆ ಎಲ್ಲಾ ಧರ್ಮಗಳು ಒಂದೇ. ನಿರ್ಮೋಹಿ ಅಖಾಡದ ಅರ್ಜಿಯನ್ನು ನಾವು ಪರಿಗಣಿಸುವುದಿಲ್ಲ. ಆದರೆ ಕೇಂದ್ರ ಸರ್ಕಾರ ದೇವಾಲಯ ನಿರ್ಮಾಣ ಮಾಡುವ ಟ್ರಸ್ಟ್ ನಲ್ಲಿ ನಿರ್ಮೋಹಿ ಅಖಾಡಕ್ಕೆ ಪ್ರತಿನಿಧ್ಯ ನೀಡಬೇಕು.

  • ಫೇಸ್‍ಬುಕ್‍ನಲ್ಲಿ ಪ್ರಚೋದನಾಕಾರಿ ಪೋಸ್ಟ್ – ಯುವಕ ಅರೆಸ್ಟ್

    ಫೇಸ್‍ಬುಕ್‍ನಲ್ಲಿ ಪ್ರಚೋದನಾಕಾರಿ ಪೋಸ್ಟ್ – ಯುವಕ ಅರೆಸ್ಟ್

    ಮುಂಬೈ: ಇಂದು ಬೆಳಗ್ಗೆ 10:30 ಗಂಟೆಗೆ ಸುಮಾರಿಗೆ ಹೊರಬೀಳಲಿರುವ ಅಯೋಧ್ಯೆ ತೀರ್ಪಿಗಾಗಿ ಇಡೀ ದೇಶವೇ ಕಾದುಕುಳಿತಿದೆ. ಅಲ್ಲದೆ ದೇಶದೆಲ್ಲೆಡೆ ಈ ಹಿನ್ನೆಲೆ ಯಾವುದೇ ಹಿಂಸಾಚಾರ ನಡೆಯಬಾರದೆಂದು ಪೊಲೀಸ್ ಇಲಾಖೆ, ಭದ್ರತಾ ಪಡೆ ಕಟ್ಟೆಚ್ಚರ ವಹಿಸಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್, ಸಂದೇಶ ರವಾನಿಸದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಹೀಗಿದ್ದರೂ ಮಹಾರಾಷ್ಟ್ರದಲ್ಲಿ ಯುವಕನೋರ್ವ ಫೇಸ್‍ಬುಕ್‍ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ.

    ಧೂಳೆ ಓಲ್ಡ್ ಆಗ್ರಾ ರೋಡ್‍ನ ನಿವಾಸಿ ಸಂಜಯ್ ರಾಮೇಶ್ವರ್ ಶರ್ಮಾ ಬಂಧಿತ ಆರೋಪಿ. ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಅಯೋಧ್ಯೆ ತೀರ್ಪಿನ ಬಗ್ಗೆ ಪೋಸ್ಟ್ ಹರಿದಾಡದಂತೆ ನಿಗಾವಹಿಸುತ್ತಿದ್ದಾಗ ಶರ್ಮಾ ಅವರ ಫೇಸ್‍ಬುಕ್ ಪೋಸ್ಟ್ ಬೆಳಕಿಗೆ ಬಂದಿದೆ. ಇದು ಸಾಮಾಜಿಕ ಶಾಂತಿ ಕದಡುವ ಪೋಸ್ಟ್, ಇದನ್ನು ಫೇಸ್‍ಬುಕ್‍ನಲ್ಲಿ ಹರಿಬಿಟ್ಟಿರೋದು ತಪ್ಪು ಎಂದು ಪೊಲೀಸರು ಶರ್ಮಾನನ್ನು ಬಂಧಿಸಿದ್ದಾರೆ. ಇದನ್ನೂ ಓದಿ:ಚಾಮರಾಜನಗರದಲ್ಲಿ 15 ಮಂದಿ ಅರೆಸ್ಟ್

    ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 153(1)(ಬಿ), 188 ವಿಧಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಆತನನ್ನು ಕೋರ್ಟಿಗೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಮತ್ತೆ ಹೀಗೆ ಯಾರಾದರೂ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದರೆ ಅವರನ್ನು ಬಂಧಿಸಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

  • ಚಾಮರಾಜನಗರದಲ್ಲಿ 15 ಮಂದಿ ಅರೆಸ್ಟ್

    ಚಾಮರಾಜನಗರದಲ್ಲಿ 15 ಮಂದಿ ಅರೆಸ್ಟ್

    ಚಾಮರಾಜನಗರ: ಇಂದು ಅಯೋಧ್ಯೆ ತೀರ್ಪು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಚಾಮರಾಜನಗರದಲ್ಲಿ 15 ಮಂದಿ ಬಂಧಿಸಲಾಗಿದೆ.

    ಬೆಳಗ್ಗೆ 10:30ಕ್ಕೆ ಅಯೋಧ್ಯೆ ತೀರ್ಪು ಹೊರಬೀಳಲಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಹಾಗೆಯೇ ರಾಜ್ಯದಲ್ಲಿಯೂ ನಿಗಾ ಇಡಲಾಗಿದ್ದು, ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚೆತ್ತಿರುವ ಚಾಮರಾಜನಗರ ಟೌನ್ ಪೋಲಿಸರು, ಮುಂಜಾಗ್ರತಾ ಕ್ರಮವಾಗಿ 15 ಮಂದಿ ಕಮ್ಯೂನಲ್ ಗೂಂಡಾಗಳನ್ನು ಬಂಧಿಸಿದ್ದಾರೆ.

    ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕೇಂದ್ರದಲ್ಲಿ ಪೊಲೀಸ್ ಬಲ ಪ್ರದರ್ಶನ ನಡೆಯಲಿದೆ. ಚಾಮರಾಜನಗರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಲಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

    ಎಸ್ಪಿ, ಎಎಸ್ಪಿ, ಇಬ್ಬರು ಡಿವೈಎಸ್ಪಿ ಸೇರಿದಂತೆ 2000 ಪೊಲೀಸರಿಂದ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.