Tag: ಅಯ್ಯಪ್ಪ ಸ್ವಾಮಿ

  • ಆರೋಪಿ ಉನ್ನಿಕೃಷ್ಣನ್ ಚಿನ್ನ ಕೊಟ್ಟಿದ್ದು ನಿಜ – ಸತ್ಯ ಒಪ್ಪಿಕೊಂಡ ಜ್ಯುವೆಲ್ಲರಿ ಶಾಪ್ ಮಾಲೀಕ ಗೋವರ್ಧನ್

    ಆರೋಪಿ ಉನ್ನಿಕೃಷ್ಣನ್ ಚಿನ್ನ ಕೊಟ್ಟಿದ್ದು ನಿಜ – ಸತ್ಯ ಒಪ್ಪಿಕೊಂಡ ಜ್ಯುವೆಲ್ಲರಿ ಶಾಪ್ ಮಾಲೀಕ ಗೋವರ್ಧನ್

    – 2019ರಲ್ಲಿ ಬಾಗಿಲು ನಿರ್ಮಾಣ ಮಾಡಿಕೊಟ್ಟಿದ್ದು ನಿಜ

    ಬಳ್ಳಾರಿ: ಆರೋಪಿ ಉನ್ನಿಕೃಷ್ಣನ್ ನನಗೆ ಚಿನ್ನ ಕೊಟ್ಟಿದ್ದು ನಿಜ ಎಂದು ಬಳ್ಳಾರಿಯ (Ballari) ರೊದ್ದಂ ಜ್ಯುವೆಲ್ಲರಿ ಶಾಪ್ ಮಾಲೀಕ ಗೋವರ್ಧನ್ ಸತ್ಯ ಒಪ್ಪಿಕೊಂಡಿದ್ದಾರೆ.

    ಶಬರಿಮಲೆಯ ಚಿನ್ನ (Sabarimala Gold Theft Case) ಬಳ್ಳಾರಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಗೋವರ್ಧನ್, ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ಶಿಥಿಲವಾಗಿದೆ, ದೇವಸ್ಥಾನದ ಒಳಗೆ ಸರ್ಪಗಳು ಹೋಗುತ್ತಿವೆ ಅಂತಾ ಉನ್ನಿಕೃಷ್ಣನ್ ಹೇಳಿದ್ದರು. ಬಾಗಿಲನ್ನ ದೇಣಿಗೆ ರೀತಿ ನೀಡಿ ಎಂದು ಉನ್ನಿಕೃಷ್ಣನ್ ನನ್ನ ಬಳಿ ಕೇಳಿದ್ದರು. ಅಯ್ಯಪ್ಪ ಸ್ವಾಮಿ ಭಕ್ತ ಆಗಿದ್ದರಿಂದ ನಾನು ಒಪ್ಪಿಕೊಂಡೆ. ಕೇರಳದಲ್ಲಿ ಕಟ್ಟಿಗೆ ಖರೀದಿ ಮಾಡಿ, ಬೆಂಗಳೂರಿನ ಶ್ರೀರಾಂಪುರ ಐಯಪ್ಪ ಸ್ವಾಮಿ ದೇಗುಲದಲ್ಲಿ ಬಾಗಿಲು ನಿರ್ಮಾಣ ಮಾಡಿದ್ದೆವು. ಅಲ್ಲಿಂದ ಬಳ್ಳಾರಿಗೆ ಕಟ್ಟಿಗೆ ಬಾಗಿಲು ತಂದು ಅದಕ್ಕೆ ಚಿನ್ನದ ಲೇಪನ ಮಾಡಿ ಕೊಟ್ಟಿದ್ದೇವೆ. 2019ರಲ್ಲಿ ಬಾಗಿಲನ್ನ ನಿರ್ಮಾಣ ಮಾಡಿಕೊಟ್ಟಿದ್ದು ನಿಜ. ದ್ವಾರಪಾಲಕದ ಬಗ್ಗೆ 4 ಕೆಜಿ ಚಿನ್ನ ಕಡಿಮೆ ತೂಕ ಬಂದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು. ಇದನ್ನೂ ಓದಿ: ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಬೆಂಗಳೂರು ಲಿಂಕ್‌ – ಬಳ್ಳಾರಿಯಲ್ಲಿ ಚಿನ್ನ ಮಾರಾಟ ಮಾಡಿರೋ ಶಂಕೆ

    ಎಸ್‌ಐಟಿ (SIT) ಅಧಿಕಾರಿಗಳು ತನಿಖೆ ಮಾಡಿದ್ದು ಸತ್ಯ, ಅವರ ತನಿಖೆಗೆ ಸಹಕಾರ ನೀಡುತ್ತೇವೆ. ನಾನು ಅಯ್ಯಪ್ಪ ಸ್ವಾಮಿ ಭಕ್ತ, ನಾನು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದವರು ಯಾರೇ ಇದ್ದರೂ ಅವರಿಗೆ ಶಿಕ್ಷೆ ಆಗುತ್ತದೆ. ಎಸ್‌ಐಟಿ ಅಧಿಕಾರಿಗಳು ನಿನ್ನೆ ಬಳ್ಳಾರಿಗೆ ಬಂದಿದ್ದರು. ನಮ್ಮ ಜ್ಯುವೆಲ್ಲರಿ ಶಾಪ್‌ನಲ್ಲಿ ತನಿಖೆ ಮಾಡಿ ವಿಚಾರಣೆ ಮಾಡಿದರು. 476 ಗ್ರಾಂ ಚಿನ್ನದ ಆರೋಪ ನನ್ನ ಮೇಲೆ ಇದೆ. ಅದು ತನಿಖೆ ನಡಿಯುತ್ತಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಹೇಳಲು ಆಗಲ್ಲ. ಉನ್ನಿಕೃಷ್ಣನ್ ಅವರಿಂದಲೇ ಬಾಗಿಲು ನಿರ್ಮಾಣಕ್ಕೆ ಆರ್ಡರ್ ಬಂದಿತ್ತು. ಉಳಿದ ವಿಚಾರ ತನಿಖೆ ನಡೆಯುತ್ತಿದೆ, ತನಿಖೆಗೆ ನಾನು ಸಹಕರಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಸ್ನೇಹಿತೆಯ ಖಾಸಗಿ ವೀಡಿಯೋ ಕದ್ದು ಹಂಚಿ ಬ್ಲ್ಯಾಕ್‌ಮೇಲ್‌ ಆರೋಪ; ಕಿರುತೆರೆ ನಟಿ ವಿರುದ್ಧ FIR

    ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಈಗ ಕರ್ನಾಟಕದ ಬೆಂಗಳೂರು, ಬಳ್ಳಾರಿಯ ಲಿಂಕ್ ಸಿಕ್ಕಿದೆ. ಪ್ರಮುಖ ಆರೋಪಿ ಬೆಂಗಳೂರಿನ ಉನ್ನಿಕೃಷ್ಣನ್ ಪೊಟ್ಟಿಯನ್ನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಸಾಕ್ಷ್ಯ ಸಂಗ್ರಹಕ್ಕಾಗಿ ಬೆಂಗಳೂರಿಗೆ ಕರೆತಂದಿದ್ದಾರೆ. ಇದನ್ನೂ ಓದಿ: Mysuru | ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು

    ಬೆಂಗಳೂರಿನ ಶ್ರೀರಾಂಪುರದಲ್ಲಿ ಚಿನ್ನಲೇಪಿತ ಕವಚಗಳನ್ನು ಇರಿಸಿ ಈತ ದೇಣಿಗೆ ಸಂಗ್ರಹಿಸಿದ್ದ ಎಂಬ ಆರೋಪವೂ ಇದೆ. ಹೀಗಾಗಿ ಸಾಕ್ಷ್ಯ ಸಂಗ್ರಹಕ್ಕಾಗಿ ಬೆಂಗಳೂರಿಗೆ ಕರೆತರಲಾಗಿದೆ. ಅಲ್ಲದೇ ಕದ್ದ ಚಿನ್ನವನ್ನ ಬಳ್ಳಾರಿಯಲ್ಲಿ ಮಾರಾಟ ಮಾಡಿರುವ ಆರೋಪದ ಹಿನ್ನೆಲೆ ಬಳ್ಳಾರಿಯಲ್ಲು ತಪಾಸಣೆ ನಡೆಸಿದ್ದು, ಒಂದಿಷ್ಟು ಚಿನ್ನವನ್ನ ರಿಕವರಿ ಮಾಡಲಾಗಿದೆ. ಅದಕ್ಕೆ ಪೂರಕವಾದ ದಾಖಲೆಗಳು ಬೆಂಗಳೂರಿನಲ್ಲಿದ್ದ ಕಾರಣ ಇಬ್ಬರು ಅಧಿಕಾರಿಗಳು ಕೋರ್ಟ್ ಅನುಮತಿಯೊಂದಿಗೆ ಬಂದು ದಾಖಲೆ ಕಲೆ ಹಾಕಿದ್ದಾರೆ. ಇದನ್ನೂ ಓದಿ: ಪಾಕ್‌ ಪರಮಾಣು ಶಸ್ತ್ರಾಗಾರದ ಮೇಲೆ ಅಮೆರಿಕ ನಿಯಂತ್ರಣ ಹೊಂದಿತ್ತು – CIA ಮಾಜಿ ಅಧಿಕಾರಿ ಜಾನ್ ಕಿರಿಯಾಕೌ ಆರೋಪ

    ಶಬರಿಮಲೆಯ ಚಿನ್ನ ಬಳ್ಳಾರಿಯಲ್ಲಿ ಪತ್ತೆ
    ಎಸ್‌ಪಿ ಶಶಿಧರನ್ ನೇತೃತ್ವದ ಕೇರಳದ ಎಸ್‌ಐಟಿ ಚಿನ್ನ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿದ್ದು, ನಿನ್ನೆ ರೊದ್ದಂ ಜ್ಯುವೆಲ್ಸ್ ಮಳಿಗೆ ಮೇಲೆ ದಾಳಿ ನಡೆಸಿದೆ. ಈ ವೇಳೆ ನಾಣ್ಯಗಳ ರೂಪದಲ್ಲಿ 476 ಗ್ರಾಂ ಚಿನ್ನ ಪತ್ತೆಯಾಗಿದೆ. ಈ ಚಿನ್ನವನ್ನ ಪೊಟ್ಟಿಯಿಂದ ರೊದ್ದಂ ಗೋಲ್ಡ್ ಮಾಲೀಕ ಗೋವರ್ಧನ್ ಖರೀದಿ ಮಾಡಿದ್ದ. ಚಿನ್ನ ವಶಕ್ಕೆ ಪಡೆದ ಎಸ್‌ಐಟಿ ತಂಡ ಗೋವರ್ಧನ್ ವಿಚಾರಣೆ ನಡೆಸಿದೆ. ಸದ್ಯ ರೊದ್ದಂ ಗೋಲ್ಡ್ ಶಾಪ್ ಬೀಗ ಹಾಕಲಾಗಿದೆ. ಅಲ್ಲದೇ ಬೆಂಗಳೂರಿನ ಉನ್ನಿಕೃಷ್ಣನ್ ಮನೆಯಲ್ಲಿ ಚಿನ್ನದ ಗಟ್ಟಿ ಹಾಗೂ 2 ಲಕ್ಷ ರೂ. ನಗದು ಪತ್ತೆಯಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪಿಓಕೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ – ವಿಶ್ವಸಂಸ್ಥೆಯಲ್ಲಿ ಪಾಕ್ ಕುಟುಕಿದ ಭಾರತ

  • ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕ

    ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕ

    ರಾಯಚೂರು: ಜಿಲ್ಲೆಯ ದೇವದುರ್ಗ (Devadurga) ಪಟ್ಟಣದ ಮುಸ್ಲಿಂ ಸಮುದಾಯದ ವ್ಯಕ್ತಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾನೆ.

    ಅಯ್ಯಪ್ಪ ಮಾಲೆ ಧರಿಸಿದ ವ್ಯಕ್ತಿಯನ್ನು ದೇವದುರ್ಗ ಪಟ್ಟಣದ ಬಾಬು ಗೌರಂಪೇಟ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಹಸೆಮಣೆ ಏರಿದ ‘ಸರಿಯಾಗಿ ನೆನಪಿದೆ ನನಗೆ’ ಗಾಯಕ Armaan Malik

    ಪ್ರತೀ ವರ್ಷ ಮಾಲೆ ಧರಿಸಿ ಅಯ್ಯಪ್ಪನ ದರ್ಶನಕ್ಕೆ ತೆರಳುವ ಬಾಬು ಸರತಿ ಸಾಲಲ್ಲಿ ನಿಂತು ಅಯ್ಯಪ್ಪನ ದರ್ಶನ ಪಡೆದು ಪುನೀತರಾಗಿ ಬಂದಿದ್ದಾರೆ. ಧರ್ಮದ ಬೇಧ ಭಾವವಿಲ್ಲದೆ ಅಯ್ಯಪ್ಪ ಸ್ವಾಮಿಯನ್ನ ಪೂಜಿಸುವ ಬಾಬು ಕಳೆದ 10 ವರ್ಷಗಳಿಂದ ಮಾಲೆ ಧರಿಸಿ ಶಬರಿಮಲೆಗೆ ತೆರಳುತ್ತಿದ್ದಾರೆ.

    ಸ್ಥಳೀಯ ಅಯ್ಯಪ್ಪ ಮಾಲಾಧಾರಿಗಳ ಜೊತೆ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಮುಗಿಸಿ ಬಂದಿದ್ದು, ಬಾಬು ಭಕ್ತಿ ಭಾವಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಸಿಡ್ನಿ ಟೆಸ್ಟ್‌ನಲ್ಲಿ ರೋಹಿತ್‌ ಶರ್ಮಾ ಆಡ್ತಾರಾ? – ಗೌತಮ್‌ ಗಂಭೀರ್‌ ಹೇಳಿದ್ದೇನು?

  • ಚಂದ್ರಯಾನ ಸಾಫ್ಟ್ ಲ್ಯಾಂಡಿಗ್‌ಗಾಗಿ ಅಯ್ಯಪ್ಪಸ್ವಾಮಿ ಮೊರೆಹೋದ ಇಸ್ರೋ ಅಧ್ಯಕ್ಷ

    ಚಂದ್ರಯಾನ ಸಾಫ್ಟ್ ಲ್ಯಾಂಡಿಗ್‌ಗಾಗಿ ಅಯ್ಯಪ್ಪಸ್ವಾಮಿ ಮೊರೆಹೋದ ಇಸ್ರೋ ಅಧ್ಯಕ್ಷ

    ಬೆಂಗಳೂರು: ಚಂದ್ರಯಾನ (Chandrayaan-3) ಸಕ್ಸಸ್‌ಗಾಗಿ ದೇಶಾದ್ಯಂತ ಜನ ಪೂಜೆ ಸಲ್ಲಿಸುತ್ತಿದ್ದಾರೆ. ಅಂತೆಯೇ ಇದೀಗ ಇಸ್ರೋ ಅಧ್ಯಕ್ಷರು ಕೂಡ ಅಯ್ಯಪ್ಪ ಸ್ವಾಮಿ (Ayyappa Swamy) ದೇವರ ಮೊರೆ ಹೋಗಿದ್ದಾರೆ.

    ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ (S Somanth) ಮಂಗಳವಾರ ಸಂಜೆ ಬೆಂಗಳೂರಿನ (Bengaluru) ಜಾಲಹಳ್ಳಿಯ (Jalahalli) ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಂಜೆ 5:30ರ ವೇಳೆಗೆ ಚಂದ್ರಯಾನ ಯಶಸ್ಸಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇವರೊಂದಿಗೆ ಇತರೆ ವಿಜ್ಞಾನಿಗಳು ಸಹಾ ಪೂಜೆ ಸಲ್ಲಿಕೆ ಮಾಡಿದ್ದು, ಚಂದ್ರಯಾನ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಚಂದ್ರನ ಮಣ್ಣಿಗೆ ಹೋಲಿಕೆಯಾಗುತ್ತಂತೆ ತಮಿಳುನಾಡಿನ ಮಣ್ಣು – ಚಂದ್ರಯಾನ-3ಗೂ ಇದೆ ಈ ಮಣ್ಣಿನ ಕೊಡುಗೆ; ಏನಿದರ ವಿಶೇಷತೆ?

    ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ-3 ನೌಕೆಯ ವಿಕ್ರಮ್ ಲ್ಯಾಂಡರ್ (Vikram Lander) ಅನ್ನು ಇಳಿಸುವ ಈ ಮಹತ್ವದ ಕ್ಷಣವನ್ನ ಕಣ್ತುಂಬಿಕೊಳ್ಳಲು ಜನ ಕಾತುರವಾಗಿದ್ದಾರೆ. 2019ರ ಸೆಪ್ಟೆಂಬರ್ 6ರಂದು ಆ ಕ್ಷಣದಲ್ಲಿ ಉಂಟಾದ ಆಘಾತ, ನೋವು ಮತ್ತೆ ಎದುರಾಗದಿರಲಿ ಅನ್ನೋದು ಕೋಟ್ಯಂತರ ಜನರ ಪ್ರಾರ್ಥನೆಯಾಗಿದೆ. ಇದನ್ನೂ ಓದಿ: 146 ಪ್ರಯತ್ನಗಳ ಪೈಕಿ 69 ಚಂದ್ರಯಾನಗಳು ಯಶಸ್ವಿ – ಸಾವಿರಾರು ಕೋಟಿ ಖರ್ಚು ಮಾಡುವ ಯೋಜನೆಯ ಪ್ರಮುಖ ಉದ್ದೇಶವೇನು?

    ಪ್ರಗ್ಯಾನ್ ರೋವರ್ ಅನ್ನು ಹೊತ್ತ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿದ್ದು, ದಕ್ಷಿಣ ಧ್ರುವದ ಮೇಲೆ ಸಂಜೆ 6:04ರ ವೇಳೆಗೆ ಯಾವುದೇ ಅಡೆತಡೆ ಇಲ್ಲದೇ ಚಂದ್ರನ ಅಂಗಳದಲ್ಲಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸುವ ಭರವಸೆ ಮೂಡಿಸಿದೆ. ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ-3 ನೌಕೆಯ ಇಷ್ಟು ದಿನದ ಪಯಣದಂತೆಯೇ ಕೊನೆಯ 20 ನಿಮಿಷಗಳ ಯಾನ ಅತ್ಯಂತ ನಿರ್ಣಾಯಕವಾಗಿದೆ. ಇದನ್ನೂ ಓದಿ: ಚಂದ್ರಯಾನ-3 ಯಶಸ್ಸಿಗೆ ಪ್ರಾರ್ಥಿಸಿ ಬೆಳಗಾವಿ ಕಪಿಲೇಶ್ವರ ಮಂದಿರದಲ್ಲಿ ಮಹಾರುಧ್ರಾಭಿಷೇಕ

    ಕೌತುಕಭರಿತ ಲ್ಯಾಂಡಿಂಗ್ ಆಪರೇಷನ್ ಪ್ರಕ್ರಿಯೆಯನ್ನ ಇಸ್ರೋ ಇಂದು ಸಂಜೆ 5 ಗಂಟೆ 20 ನಿಮಿಷದಿಂದ ಲೈವ್ ಟೆಲಿಕಾಸ್ಟ್ ಮಾಡಲಿದೆ. ನಿಮ್ಮ ಪಬ್ಲಿಕ್ ಟಿವಿ ಕೂಡ ಚಂದ್ರ ಚುಂಬನದ ಕ್ಷಣಕ್ಷಣದ ಮಾಹಿತಿಯನ್ನು ವಿಶ್ಲೇಷಣೆ ಸಹಿತ ನಿಮಗೆ ಒದಗಿಸಲಿದೆ. ಸಾಫ್ಟ್ ಲ್ಯಾಂಡಿಂಗ್ ಪ್ರಕ್ರಿಯೆ ಮುಗಿದ ಬಳಿಕ ಇಸ್ರೋ ವಿಜ್ಞಾನಿಗಳನ್ನು ಜೋಹನ್ಸ್‌ಬರ್ಗ್ ಪ್ರಧಾನಿ ಮೋದಿ ವರ್ಚೂವಲ್ ಆಗಿ ಭೇಟಿ ಮಾಡಲಿದ್ದಾರೆ. ಇದನ್ನೂ ಓದಿ: Chandrayaan-3: ಬಾಹ್ಯಾಕಾಶ ಯೋಜನೆಗಳಿಗೆ ನೂರಾರು ಕೋಟಿ ವ್ಯಯ – ಭಾರತಕ್ಕೇನು ಲಾಭ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೇವೇಗೌಡರ ಫೋಟೋ ಹಿಡಿದು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಅಭಿಮಾನಿಗಳು

    ದೇವೇಗೌಡರ ಫೋಟೋ ಹಿಡಿದು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಅಭಿಮಾನಿಗಳು

    -2023ಕ್ಕೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿ ಎಂದು ವಿಶೇಷ ಪೂಜೆ

    ಹಾಸನ: ಜೆಡಿಎಸ್ (JDS) ಪಕ್ಷದ ಕಾರ್ಯಕರ್ತರು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರ (HD DeveGowda) ಫೋಟೋ ಹಿಡಿದು ಅಯ್ಯಪ್ಪ ಸ್ವಾಮಿ ದರ್ಶನ ಪಡೆದರು.

    ಹಾಸನ (Hassan) ಜಿಲ್ಲೆಯ ಅರಕಲಗೂಡು ತಾಲೂಕಿನ ಕಳ್ಳಿಮುದ್ದನಹಳ್ಳಿ ಗ್ರಾಮದ ಜಾಗ್ವಾರ್ ಬಾಯ್ಸ್‌ನ ಯುವಕರ ತಂಡ ಪಂಪದಿಂದ ಅಯ್ಯಪ್ಪನ ಸನ್ನಿಧಿಯವರೆಗೂ ಹೆಚ್.ಡಿ.ದೇವೇಗೌಡರ ಫೋಟೋ ಹಿಡಿದು ಪಾದಯಾತ್ರೆ ಮಾಡಿದ್ದಾರೆ. ಈ ವೇಳೆ ಕನ್ನಡನಾಡಿನ ಏಕೈಕ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರಿಗೆ ಆರೋಗ್ಯ ಮತ್ತು ಆಯಸ್ಸು ನೀಡಲಿ ಎಂದು ಪ್ರಾರ್ಥಿಸಿದರು. ಇದನ್ನೂ ಓದಿ: ಬೆಂಗ್ಳೂರು ಟ್ರಾಫಿಕ್ ತಪ್ಪಿಸಲು ನಯಾ ಪ್ಲಾನ್- 273 ಕೋಟಿ ವೆಚ್ಚದಲ್ಲಿ ಬರಲಿದೆ ಫ್ರೀ ಕಾರಿಡಾರ್ ರಸ್ತೆ

    ಅಷ್ಟೇ ಅಲ್ಲದೇ 2023ಕ್ಕೆ ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿಯಾಗಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಹೆಚ್.ಡಿ.ದೇವೇಗೌಡರ ಫೋಟೋ ಜೊತೆಗೆ ಕನ್ನಡ ಬಾವುಟ ಕೂಡ ಹಿಡಿದುಕೊಂಡು ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಇದನ್ನೂ ಓದಿ: 98 ವರ್ಷದ ವೃದ್ಧ ಜೈಲಿನಿಂದ ಬಿಡುಗಡೆ – ಎಸ್ಕಾರ್ಟ್ ನೀಡಿ ಮನೆಗೆ ಕಳುಹಿಸಿದ ಪೊಲೀಸರು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ- ವಿಸ್ಮಯ ಕಣ್ತುಂಬಿಕೊಂಡ ಭಕ್ತಗಣ

    ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ- ವಿಸ್ಮಯ ಕಣ್ತುಂಬಿಕೊಂಡ ಭಕ್ತಗಣ

    ತಿರುವನಂತಪುರಂ: ಶಬರಿಮಲೆಯಲ್ಲಿ ಸಾವಿರಾರು ಭಕ್ತರು ಕಾತರದಿಂದ ಕಾಯುತ್ತಿದ್ದ ಮಕರ ಜ್ಯೋತಿ ಗೋಚರವಾಗಿದ್ದು, ಜ್ಯೋತಿಯನ್ನು ಕಣ್ತುಂಬಿಕೊಂಡಿದ್ದಾರೆ.

    ಇಂದು ಸಂಜೆ 6.42ಕ್ಕೆ ಸರಿಯಾಗಿ ಪೊನ್ನಂಬಲಮೇಡು ಗಿರಿಯಲ್ಲಿ ಮಕರ ಜ್ಯೋತಿ ಗೋಚರವಾಗಿದೆ. ಜ್ಯೋತಿ ಕಾಣುತ್ತಿದ್ದಂತೆ ಸಾವಿರಾರು ಭಕ್ತರು ಸಂತಸಗೊಂಡು, ಕಣ್ತುಂಬಿಕೊಂಡಿದ್ದಾರೆ. ಅಯ್ಯಪ್ಪನ ನಾಮಸ್ಮರಣೆ ಹಾಗೂ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಕೊರೊನಾ ಹಿನ್ನೆಲೆ ಕಡಿಮೆ ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಇಂದು ಹಲವರು ಜ್ಯೋತಿಯನ್ನು ನೋಡಿದ್ದಾರೆ.

    ಕೊರೊನಾ ಹಿನ್ನೆಲೆ ಈ ಬಾರಿ ಶಬರಿಮಲೆ ದೇವಸ್ಥಾನದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಕೈಗೊಳ್ಳಲಾಗಿತ್ತು. ಹೀಗಾಗಿ ಮಕರ ಜ್ಯೋತಿ ದರ್ಶನಕ್ಕೆ ಸಹ ಕೇವಲ 5 ಸಾವಿರ ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೆ ಆರ್ ಟಿಪಿಸಿಆರ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದವರಿಗೆ ಮಾತ್ರ ದೇವಾಲಯ ಹಾಗೂ ಜ್ಯೋತಿ ನೋಡಲು ಅವಕಾಶ ಕಲ್ಪಿಸಲಾಗಿತ್ತು.

    ದೇವಸ್ಥಾನದಿಂದ 8 ಕಿ.ಮೀ ದೂರದಲ್ಲಿ ಪೊನ್ನಂಬಲಮೇಡು ಗಿರಿ ಇದ್ದು, ಪ್ರತಿ ವರ್ಷದಂತೆ ಈ ವರ್ಷವೂ ಮಕರ ಜ್ಯೋತಿ ಗೋಚರಿಸಿದೆ. ಈ ವಿಶೇಷ ಘಳಿಗೆಗಾಗಿ ಕಾದಿದ್ದ ಸಾವಿರಾರು ಭಕ್ತರು ಮಕರ ಜ್ಯೋತಿಯ ದರ್ಶನವಾಗುತ್ತಿದ್ದಂತೆ ಗಟ್ಟಿಯಾಗಿ `ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂದು ಹೇಳಿ ಘೋಷಣೆ ಕೂಗಿದರು. ಭಕ್ತಿಯಿಂದ ಮಕರ ಜ್ಯೋತಿಗೆ ನಮಸ್ಕರಿಸಿ ಧನ್ಯರಾದರು.

    ಐತಿಹಾಸಿಕ ಸಾಂಪ್ರದಾಯದಂತೆ ಪಂದಳದಿಂದ ಘೋಷಯಾತ್ರೆಯ ಮೂಲಕ ತಂದ ತಿರುವಾಭರಣಗಳನ್ನು ಅಯ್ಯಪ್ಪನಿಗೆ ತೊಡಿಸಿ ದೀಪಾರಾಧನೆ ನಡೆಸಿದ ಬಳಿಕ ಮಹಾ ಮಂಗಳರಾತಿಯನ್ನು ಮಾಡಲಾಗುತ್ತದೆ. ಮಹಾ ಮಂಗಳಾರತಿ ನಡೆದ ಬಳಿಕ ಪೊನ್ನಂಬಲಮೇಡು ಬೆಟ್ಟದಲ್ಲಿ ಮೂರು ಬಾರಿ ಜ್ಯೋತಿ ಕಾಣಿಸುತ್ತದೆ.

  • ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯನ್ನ ರಕ್ಷಿಸಿದ ಅಯ್ಯಪ್ಪನ ಭಕ್ತರು

    ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯನ್ನ ರಕ್ಷಿಸಿದ ಅಯ್ಯಪ್ಪನ ಭಕ್ತರು

    ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳಲು ಫ್ಲೈಓವರ್ ಹತ್ತಿದ ವ್ಯಕ್ತಿಯೊಬ್ಬನನ್ನು ಅಯ್ಯಪ್ಪ ಸ್ವಾಮಿ ಭಕ್ತರು ರಕ್ಷಣೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ನಗರದ ಹೊಸಕೆರೆಹಳ್ಳಿಯ ನೈಸ್ ರೋಡ್ ಬಳಿ ಈ ಘಟನೆ ನಡೆದಿದ್ದು, 45 ವರ್ಷದ ಅಪರಿಚಿತ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ಗಿರಿನಗರದ ಸುಮಾರು ಮೂವತ್ತುಕ್ಕೂ ಹೆಚ್ಚು ಜನರು ಇಂದು ಶಬರಿಮಲೆಗೆ ಹೊರಟಿದ್ದರು. ಹೊಸಕೆರೆಹಳ್ಳಿ ಮಾರ್ಗವಾಗಿ ನೈಸ್ ರೋಡ್‍ಗೆ ಎಂಟ್ರಿಯಾದ ವೇಳೆ ನೈಸ್ ರೋಡ್‍ನ ಫ್ಲೈಓವರ್ ಮೇಲೆ ವ್ಯಕ್ತಿವೊಬ್ಬ ರಸ್ತೆಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನ ಮಾಡುತ್ತಿರುವುದು ಕಂಡು ಬಂದಿದೆ.

    ತಕ್ಷಣ ವಾಹನ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ ಅಯ್ಯಪ್ಪ ಸ್ವಾಮಿ ಭಕ್ತರು, ರಸ್ತೆಯ ಎರಡು ಕಡೆಯ ವಾಹನಗಳನ್ನು ನಿಲ್ಲಿಸಿ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಭಕ್ತರ ಕೈಗೆ ಸಿಗದೆ ಸುಮಾರು ಅರ್ಧ ಗಂಟೆಗಳ ಕಾಲ ಆತ್ಮಹತ್ಯೆಗೆ ಯತ್ನಿಸಿದ್ದ. ಎರಡು ಕಡೆಗಳಿಂದ ಅಯ್ಯಪ್ಪ ಸ್ವಾಮಿ ಭಕ್ತರು ಆ ವ್ಯಕ್ತಿಯನ್ನು ಸುತ್ತುವರೆದು ಕೊನೆಗೆ ಆತನನ್ನು ಹಿಡಿದು ರಕ್ಷಣೆ ಮಾಡಿದ್ದಾರೆ.

    ಇಷ್ಟೇಲ್ಲಾ ನಡೆಯೋ ಹೊತ್ತಿಗೆ ಹೊಯ್ಸಳ ಪೊಲೀಸರು ಸ್ಥಳಕ್ಕೆ ಬಂದು ಆ ವ್ಯಕ್ತಿಯನ್ನು ವಶಕ್ಕೆ ಪಡೆದು ಕರೆದುಕೊಂಡು ಹೋಗಿದ್ದಾರೆ. ಆತ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ. ಆ ವ್ಯಕ್ತಿ ಯಾರು? ಎನ್ನುವುದು ಪೊಲೀಸರ ತನಿಖೆಯಿಂದ ಬಹಿರಂಗವಾಗಬೇಕಿದೆ.

  • ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ವಿಸ್ಮಯ ಕಣ್ತುಬಿಕೊಂಡ ಭಕ್ತಗಣ

    ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ವಿಸ್ಮಯ ಕಣ್ತುಬಿಕೊಂಡ ಭಕ್ತಗಣ

    ತಿರುವನಂತಪುರಂ: ಪ್ರತಿ ವರ್ಷದಂತೆ ಈ ಬಾರಿ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ದೇವಾಲಯದಿಂದ 8 ಕಿ.ಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ಬುಧವಾರ ಸಂಜೆ 6.45ರ ಸುಮಾರಿಗೆ ಕಾಣಿಸಿಕೊಂಡಿತು.

    ಈ ವಿಶೇಷ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಮಕರ ಜ್ಯೋತಿಯ ದರ್ಶನವಾಗುತ್ತಿದ್ದಂತೆ ಗಟ್ಟಿ ಸ್ವರದಲ್ಲಿ “ಸ್ವಾಮಿಯೇ ಶರಣಂ ಅಯ್ಯಪ್ಪ” ಎಂದು ಹೇಳಿ ಜಯಘೋಷ ಕೂಗಿದರು. ಭಕ್ತಿಯಿಂದ ಮಕರ ಜ್ಯೋತಿಗೆ ನಮಸ್ಕರಿಸಿ ಧನ್ಯರಾದರು.

    ಪ್ರತಿ ವರ್ಷ ಜನವರಿ 14ರ ಸಂಜೆ ಅಯ್ಯಪ್ಪ ಸ್ವಾಮಿಗೆ ಮಹಾಮಂಗಳಾರತಿ ಬಳಿಕ ಮಕರ ಜ್ಯೋತಿ ದರ್ಶನವಾಗುತ್ತದೆ. ಆದರೆ ಈ ಬಾರಿ ಮಕರ ಜ್ಯೋತಿ ಜನವರಿ 15ರಂದು ಕಾಣಿಸಿಕೊಂಡಿದೆ. ದೇಶದ ವಿವಿಧ ಭಾಗಗಳಿಂದ ಜಾತಿ, ಧರ್ಮ ಬೇದಭಾವವಿಲ್ಲದೆ ಶಬರಿಮಲೆಗೆ ಬರುವ ಭಕ್ತರು, ಅಯ್ಯಪ್ಪನ ಸನ್ನಿಧಾನದಲ್ಲಿ ಜ್ಯೋತಿಯ ದರ್ಶನ ಪಡೆಯಲು ಎರಡು ಮೂರು ದಿನಗಳ ಮುಂಚೆಯೇ ಆಗಮಿಸುತ್ತಾರೆ.

    ಐತಿಹಾಸಿಕ ಸಾಂಪ್ರದಾಯದಂತೆ ಪಂದಳದಿಂದ ಘೋಷಯಾತ್ರೆಯ ಮೂಲಕ ತಂದ ತಿರುವಾಭರಣಗಳನ್ನು ಅಯ್ಯಪ್ಪನಿಗೆ ತೊಡಿಸಿ ದೀಪಾರಾಧನೆ ನಡೆಸಿದ ಬಳಿಕ ಮಹಾ ಮಂಗಳರಾತಿಯನ್ನು ಮಾಡಲಾಗುತ್ತದೆ. ಮಹಾ ಮಂಗಳಾರತಿ ನಡೆದ ಬಳಿಕ ಪೊನ್ನಂಬಲಮೇಡು ಬೆಟ್ಟದಲ್ಲಿ ಮೂರು ಬಾರಿ ಜ್ಯೋತಿ ಕಾಣಿಸುತ್ತದೆ.

  • ಹಿಂದೂ-ಮುಸ್ಲಿಂ ಬಾಂಧವರ ಸೌಹಾರ್ದತೆಗೆ ಸಾಕ್ಷಿಯಾದ ಶಿರಡಿ ಸಾಯಿಬಾಬಾ

    ಹಿಂದೂ-ಮುಸ್ಲಿಂ ಬಾಂಧವರ ಸೌಹಾರ್ದತೆಗೆ ಸಾಕ್ಷಿಯಾದ ಶಿರಡಿ ಸಾಯಿಬಾಬಾ

    ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರದ ಶಿರಡಿ ಸಾಯಿಬಾಬಾ ಮಂದಿರ ಹಿಂದೂ-ಮುಸ್ಲಿಂ ಬಾಂಧವರ ಭಾವೈಕ್ಯತೆ ಸೌಹಾರ್ದತೆಗೆ ಸಾಕ್ಷಿಯಾಗಿದೆ.

    ಶಿರಿಡಿ ಸಾಯಿಬಾ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಮಹಾಪೂಜೆಯಲ್ಲಿ ನೂರಾರು ಅಯ್ಯಪ್ಪ ಮಾಲಾಧಾರಿಗಳು ಭಾಗವಹಿಸಿದ್ದರು. ದೇವಾಲಯದಲ್ಲಿ ಅಯ್ಯಪ್ಪ ಸ್ವಾಮಿಯ ವಿಗ್ರಹವನ್ನು ವಿಶೇಷವಾಗಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: ಮಸೀದಿಯಲ್ಲಿ ಅಯ್ಯಪ್ಪಸ್ವಾಮಿ ಮಹಾಪೂಜೆ- ಕೋಮು ಸೌಹಾರ್ದತೆ ಸಾರಿದ ಮುಸ್ಲಿಂ ಬಾಂಧವರು

    ದೇವಸ್ಥಾನದ ಆಡಳಿತ ವತಿಯಿಂದ ಮಾಲಾಧಾರಿಗಳಿಗೆ ಅನ್ನದಾಸೋಹ ಏರ್ಪಡಿಸಲಾಗಿತ್ತು. ವಿಶೇಷವೆಂದರೆ ಈ ಅನ್ನದಾಸೋಹದಲ್ಲಿ ಹಿಂದೂ, ಮುಸ್ಲಿಂ ಎಂಬ ಬೇಧ-ಭಾವ ಬಿಟ್ಟು ಮುಸ್ಲಿಂ ಸಮುದಾಯದ ಯುವಕರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಭಜನೆ ಮಾಡಿದರು. ಮಾಲಾಧಾರಿಗಳಿಗೆ ಮುಸ್ಲಿಂ ಸಮುದಾಯದ ಯುವಕರು ಊಟ ಬಡಿಸುವ ಮೂಲಕ ಹಿಂದೂ-ಮುಸ್ಲಿಂ ಒಂದೇ. ಧರ್ಮ ಧರ್ಮಗಳು ಬೇರೆಯಾದರೂ ದೇವರೊಬ್ಬ ಎಂಬ ಸಾರಾಂಶವನ್ನು ಸಾರಿದರು. ಮುಸ್ಲಿಂ ಯುವಕರ ಈ ಕಾರ್ಯಕ್ರಮಕ್ಕೆ ಪ್ರಶಂಸೆ ಸಹ ವ್ಯಕ್ತವಾಗಿದೆ.

  • ಅಯ್ಯಪ್ಪ ಮಾಲಾಧಾರಿಯಂತೆ ಬಂದು ಬಾಳೆ ತೋಟ ನಾಶ ಮಾಡಿದ್ರು

    ಅಯ್ಯಪ್ಪ ಮಾಲಾಧಾರಿಯಂತೆ ಬಂದು ಬಾಳೆ ತೋಟ ನಾಶ ಮಾಡಿದ್ರು

    ಧಾರವಾಡ: ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ವೇಷದಲ್ಲಿ ಬಂದು ಹಾಡಹಗಲೇ ಬಾಳೆ ತೋಟವನ್ನು ಗಿಡಗಳ ಸಮೇತ ಲೂಟಿ ಮಾಡಿಕೊಂಡು ಹೋಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

    ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದ ರಾಯಪ್ಪ ಸುಳ್ಳದ ಎಂಬವರ ತೋಟದಲ್ಲಿ ಈ ಕಳ್ಳತನ ನಡೆದಿದೆ. ಸುಮಾರು 1 ಲಕ್ಷ ಮೌಲ್ಯದಷ್ಟು 200 ಬಾಳೆಗೊಣೆ ಹಾಗೂ ಅಷ್ಟೇ ಬಾಳೆ ಗಿಡಗಳನ್ನು ಸಹ ಕಡಿದುಕೊಂಡು ಹೋಗಿದ್ದಾರೆ.

    ತೋಟದ ಮಾಲೀಕ ರಾಯಪ್ಪ ಇಲ್ಲದ ಸಂದರ್ಭದಲ್ಲಿ ಕಳ್ಳರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಂತೆ ಬಂದಿದ್ದರು. ಆದರೆ ಅಕ್ಕಪಕ್ಕದ ಜಮೀನನಲ್ಲಿ ಇದ್ದವರು ರಾಯಪ್ಪ ಅವರೇ ಬಾಳೆ ತೆಗೆದುಕೊಳ್ಳಲು ಹೇಳಿರಬಹುದು ಎಂದು ತಿಳಿದುಕೊಂಡು ಸುಮ್ಮನಾಗಿದ್ದಾರೆ.

    ಈ ಕಳ್ಳತನ ನಡೆದಿದ್ದರೂ ಸುಮಾರು ಒಂದೂವರೆ ಗಂಟೆಗಳ ಕಾಲ ಯಾರಿಗೂ ಸಂಶಯ ಬಂದಿಲ್ಲ. ಆದ್ರೆ ಇಂದು ಬೆಳಗ್ಗೆ ಮಾಲೀಕ ರಾಯಪ್ಪ ತೋಟಕ್ಕೆ ಬಂದು ನೋಡಿದಾಗಲೇ ಹಾಡಹಗಲೇ ತಮ್ಮ ತೋಟವನ್ನು ದೋಚಿದ್ದು ತಿಳಿದು ಒಂದು ಕ್ಷಣ ದಂಗಾದ್ರು.

    ಅಯ್ಯಪ್ಪ ಸ್ವಾಮಿ ಪೂಜೆ ಎಲ್ಲೆ ನಡೆದರೂ ರಾಯಪ್ಪ ಅವರು ದೇಣಿಗೆ ರೂಪದಲ್ಲಿ ಬಾಳೆ ಹಣ್ಣು ಕೊಡುತ್ತಾ ಬಂದಿದ್ದಾರೆ. ಆದರೆ ಇಂದು ತನ್ನ ತೋಟವನ್ನು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ವೇಷದಲ್ಲೇ ಬಂದು ಲೂಟಿ ಮಾಡಿದ್ದರಿಂದ ಅವರಿಗೆ ಸಾಕಷ್ಟು ನೋವುಂಟಾಗಿದೆ.

    ಈ ಘಟನೆ ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಮಣಿಕಂಠನ ದರ್ಶನಕ್ಕಾಗಿ ಶಬರಿಮಲೆ ಏರಿದ ಅಣ್ಣಾಮಲೈ

    ಮಣಿಕಂಠನ ದರ್ಶನಕ್ಕಾಗಿ ಶಬರಿಮಲೆ ಏರಿದ ಅಣ್ಣಾಮಲೈ

    ಉಡುಪಿ: ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟಿರುವುದು ಹಳೇ ಸುದ್ದಿಯಾಯ್ತು. ಆದರೆ ಕರ್ತವ್ಯಕ್ಕೆ ರಾಜೀನಾಮೆ ನೀಡಿದ ಬಳಿಕ ಇದೀಗ ಅಣ್ಣಾಮಲೈ ಶಬರಿಮಲೆಯಲ್ಲಿ ಕಾಣಿಸಿಕೊಂಡಿದ್ದಾರೆ.

    ಹೌದು. ಐಪಿಎಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ಕೊಟ್ಟ ಅಣ್ಣಾಮಲೈ ಅವರು ಖಾಕಿ ಕಳಚಿ ಕಪ್ಪು ಯೂನಿಫಾರ್ಮ್ ತೊಟ್ಟಿದ್ದಾರೆ. ಖಾಕಿಗೆ ವಿದಾಯ ಹೇಳಿರುವ ಅಣ್ಣಾಮಲೈ ಅವರು ಕಪ್ಪು ಲುಂಗಿ ತೊಟ್ಟು, ಹೆಗಲಿಗೊಂದು ಕಪ್ಪು ಶಾಲು ಹಾಕಿ 18 ಮೆಟ್ಟಿಲೇರಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದ್ದಾರೆ. ಅಣ್ಣಾಮಲೈ ಅವರು ಸಿನಿಮಾ ನಟರಲ್ಲ. ಆದರೆ ಪೊಲೀಸ್ ಇಲಾಖೆಯಲ್ಲಿದ್ದೇ ಸೆಲೆಬ್ರಿಟಿ ಆಗಿದ್ದರು. ತಮ್ಮ ದಕ್ಷತೆಯಿಂದಲೇ ಸಾರ್ವಜನಿಕರ ಜೊತೆ ಪೊಲೀಸ್ ಅಧಿಕಾರಿಯಾಗಿದ್ದಾಗ ಗೆಳೆತನವೂ ಸಂಪಾದನೆ ಮಾಡಿದ್ದರು. ಹಾಗೂ ಅವರಿಗೆ ಅಭಿಮಾನಿಗಳು ಕೂಡ ಸಾಕಷ್ಟು ಮಂದಿ ಇದ್ದಾರೆ.

    ನೇರ ಮತ್ತು ನಿಷ್ಠುರತೆಗೆ ಹೆಸರುವಾಸಿಯಾಗಿದ್ದ ಅಣ್ಣಾಮಲೈ, ಖಡಕ್ ಅಧಿಕಾರಿ ಎಂದು ಹೆಸರು ಗಳಿಸಿದ್ದರು. ಹಾಗಾಗಿ ಪಂಪಾ ನದಿಯಿಂದ ಶಬರಿಮಲೆ ಹತ್ತಿ ಇಳಿಯುವ ಅಯ್ಯಪ್ಪ ಭಕ್ತರು ಅಣ್ಣಾಮಲೈ ಅವರನ್ನು ಕಂಡು ಅವರೊಂದಿಗೆ ಸೆಲ್ಫೀ ಕ್ಲಿಕ್ಕಿಸಿಕೊಂಡರು. ಸಾರ್ವಜನಿಕರ ಜೊತೆ ಉಭಯ ಕುಶಲೋಪರಿ ಹಂಚಿಕೊಂಡರು.

    ಶಬರಿಮಲೆಗೆ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಭಕ್ತರು ಭೇಟಿ ಕೊಟ್ಟು ದರ್ಶನ ಪಡೆಯುತ್ತಾರೆ. ಕರ್ನಾಟಕದ ನಾಲ್ಕು ಜಿಲ್ಲೆಯಲ್ಲಿ ಮಾತ್ರ ಕೆಲಸ ಮಾಡಿದ್ದರೂ ಮಲೆಗೆ ಬಂದ ಹೆಚ್ಚಿನವರಿಗೆ ಅಣ್ಣಾಮಲೈ ಬಗ್ಗೆ ಗೊತ್ತಿತ್ತು. ಕೇರಳ ರಾಜ್ಯದ ಸ್ಥಳೀಯ ಎಸ್‍ಪಿ ಅವರು ಕೂಡ ಅಣ್ಣಾಮಲೈ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು, ಇತರೆ ಅಧಿಕಾರಿಗಳು ಕೂಡ ಜೊತೆಗಿದ್ದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅಣ್ಣಾಮಲೈ, ಬಹಳ ಸಮಯದಿಂದ ಮಲೆಗೆ ಬರುವ ಸಂಕಲ್ಪ ಮಾಡಿದ್ದೆ. ಕೆಲಸದ ಒತ್ತಡದಲ್ಲಿದ್ದರಿಂದ ಸಾಧ್ಯವಾಗಿರಲಿಲ್ಲ. ಮುಂದೇನು ಎಂದು ಆಮೇಲೆ ಸ್ವಲ್ಪ ಸಮಯ ಬಿಟ್ಟು ಹೇಳುತ್ತೇನೆ. ಸದ್ಯ ಪಂದಳ ಕಂದನ ದರ್ಶನ ಮಾಡಿದ್ದೇನೆ ನೆಮ್ಮದಿಯಾಗಿದ್ದೇನೆ. ನನಗೆ ಜನ ಬಹಳ ಪ್ರೀತಿ ತೋರಿಸುತ್ತಾರೆ ಖುಷಿಯಾಗಿದೆ. ಅಯ್ಯಪ್ಪನ ಸನ್ನಿಧಿಯಲ್ಲಿ ಮನಸ್ಸಿಗೆ ನೆಮ್ಮದಿ ಸಿಕ್ಕಿತು ಎಂದು ತಮ್ಮ ಸಂತಸ ಹಂಚಿಕೊಂಡರು.