Tag: ಅರವಿಂದಕೇಜ್ರಿವಾಲ್

  • ಲಾಠಿ ಬಿಟ್ಟು ಪೊರಕೆ ಹಿಡಿದಿರುವುದು ಸ್ವಚ್ಛತೆಗಾಗಿಯೇ: ಭಾಸ್ಕರ್ ರಾವ್

    ಲಾಠಿ ಬಿಟ್ಟು ಪೊರಕೆ ಹಿಡಿದಿರುವುದು ಸ್ವಚ್ಛತೆಗಾಗಿಯೇ: ಭಾಸ್ಕರ್ ರಾವ್

    ನವದೆಹಲಿ: ಮೊದಲು ಲಾಠಿ ಹಿಡಿದು ನಗರವನ್ನು ಸ್ವಚ್ಛ ಮಾಡುತ್ತಿದ್ದೆವು. ಈಗ ಪೊರಕೆ ಹಿಡಿದು ಸ್ವಚ್ಛ ಮಾಡುತ್ತೇವೆ ಅಷ್ಟೇ ಎಂದು ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

    ಕೇಜ್ರಿವಾಲ್ ನೇತೃತ್ವದಲ್ಲಿ ಆಪ್ ಸದಸ್ಯತ್ವ ಸ್ವೀಕರಿಸಿದ ಬಳಿಕ ಮಾತನಾಡಿದ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಎಲ್ಲ ರೀತಿಯ ಸಂಪನ್ಮೂಲ ಇದ್ದರೂ ಸ್ವಚ್ಛ ನಾಯಕತ್ವದ ಕೊರತೆಯಿದೆ. ಜನರೂ ಸಹ ಎಲ್ಲ ಪಕ್ಷಗಳನ್ನು ನೋಡಿ ಜಿಗುಪ್ಸೆಗೊಂಡಿದ್ದಾರೆ. ಆಪ್‌ಗೆ ಕರ್ನಾಟಕದಲ್ಲಿ ಉತ್ತಮವಾದ ನೆಲೆಯಿದೆ. ಚಾಮರಾಜನಗರದಿಂದ ಬೀದರ್ ವರೆಗೂ ಲಕ್ಷಾಂತರ ಮಂದಿ ಸೇರಿಕೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರ ನಾಯಕತ್ವ ಮೆಚ್ಚಿ ನಾನೂ ಆಪ್ ಸೇರಿದ್ದೇನೆ ಎಂದು ಹೇಳಿದ್ದಾರೆ. ಇದನೂ ಓದಿ: ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್ ಸೇರಿದ ಭಾಸ್ಕರ್ ರಾವ್ 

    IPS

    ಆಮ್ ಆದ್ಮಿ ಪಕ್ಷದ ಸಾಧನೆಗೆ ದೇಶದೆಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ. ಕರ್ನಾಟಕದಲ್ಲಿ 3 (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಪಕ್ಷಗಳ ಬಗ್ಗೆ ಜನ ಬೇಸರ ಗೊಂಡಿದ್ದಾರೆ. ಆದರೆ ಅರವಿಂದ ಕೇಜ್ರಿವಾಲ್ ಬಗ್ಗೆ ವಿದೇಶಗಳಲ್ಲೂ ಮೆಚ್ಚುಗೆ ವ್ಯಕ್ತವಾಗಿದೆ ಈ ಹಿನ್ನೆಲೆಯಲ್ಲಿ ಆಪ್ ಸೇರಿದ್ದೇನೆ ಎಂದು ಹೇಳಿದ್ದಾರೆ.

    ರಾಜ್ಯದಲ್ಲಿ ೩ ಪಕ್ಷಗಳು ಅಂದರ್ ಬಾಹರ್ ಆಡುತ್ತಿವೆ. ನಾವೂ 30 ವರ್ಷದಿಂದ ಪಕ್ಷದ ಹೊರಗು, ಒಳಗನ್ನು ನೋಡಿದ್ದೇವೆ. ಹಾಗಾಗಿ, ದೆಹಲಿ, ಪಂಜಾಬ್ ರೀತಿ ಕರ್ನಾಟಕದಲ್ಲೂ ಬದಲಾವಣೆ ಆಗಬೇಕಿದೆ. ಜನರೂ ಅದನ್ನು ಬಯಸಿದ್ದಾರೆ ಎಂದಿದ್ದಾರೆ.  ಇದನೂ ಓದಿ: ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ಅಪಘಾತದಲ್ಲಿ ಸಾವು

    ದುರಾಡಳಿತದಿಂದ ಅಂತಾರಾಷ್ಟ್ರೀಯ ಮಟ್ಟದ ಬೆಂಗಳೂರು ನಗರ ಬೆಳವಣಿಗೆ ಆಗುತ್ತಿಲ್ಲ. ಎಸಿಬಿ, ಲೋಕಾಯುಕ್ತ ಇದ್ದರೂ ಭ್ರಷ್ಟಾಚಾರ ನಿರ್ಮೂಲನೆ ಆಗುತ್ತಿಲ್ಲ. ಶಾಲೆ, ಆಸ್ಪತ್ರೆ, ಕೆರೆ ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧಿಯಾಗುತ್ತಿಲ್ಲ. ನಾವು ಕಾರ್ಯಾಂಗದಲ್ಲಿ ಬದಲಾವಣೆ ತರುತ್ತೇವೆ. ಆದರೆ, ಶಾಸಕಾಂಗದಲ್ಲೂ ಬದಲಾವಣೆ ತರುವುದು ಅವಶ್ಯವಾಗಿದೆ ಎಂದು ಹೇಳಿದ್ದಾರೆ.

     

  • ಮಾನವೀಯತೆ ಇರುವುದು ನಿಜವೇ? – ಸಿಎಂ ಕೇಜ್ರಿವಾಲ್‌ಗೆ ಅಗ್ನಿಹೋತ್ರಿ ಪ್ರಶ್ನೆ

    ಮಾನವೀಯತೆ ಇರುವುದು ನಿಜವೇ? – ಸಿಎಂ ಕೇಜ್ರಿವಾಲ್‌ಗೆ ಅಗ್ನಿಹೋತ್ರಿ ಪ್ರಶ್ನೆ

    ನವದೆಹಲಿ: `ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕೆಂದು ಕೇಳುತ್ತಿದ್ದಾರೆ. ನಿರ್ದೇಶಕರು ಸಿನಿಮಾವನ್ನು ಯೂಟ್ಯೂಬ್‌ಗೆ ನೀಡಲಿ. ಉಚಿತವಾಗಿ ಸಿನಿಮಾ ನೋಡಬಹುದು ಎಂದು ಚಾಟಿ ಬೀಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹೇಳಿಕೆಗೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

    ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಾಡಿರುವ ಟ್ವೀಟ್ ಒಂದನ್ನು ತಮ್ಮ ಖಾತೆಯಲ್ಲಿ ರಿಟ್ವೀಟ್ ಮಾಡುವ ಮೂಲಕ ಆಮ್ ಆದ್ಮಿ ಪಕ್ಷದ ತತ್ವ ಸಿದ್ಧಾಂತಗಳನ್ನೂ ಪ್ರಶ್ನಿಸಿದ್ದಾರೆ. ಅರವಿಂದ ಕೇಜ್ರಿವಾಲ್ ಅವರು ಕಠಿಣ ದೇಶಭಕ್ತಿ, ಪ್ರಾಮಾಣಿಕತೆ, ಮಾನವೀಯತೆ ಆಮ್ ಆದ್ಮಿ ಪಕ್ಷದ ಸಿದ್ಧಾಂತದ ಆಧಾರ ಸ್ತಂಭಗಳು ಎಂದು ಕೆಲದಿನಗಳ ಹಿಂದೆಯಷ್ಟೇ ಟ್ವೀಟ್ ಮಾಡಿದ್ದರು. ಇದಕ್ಕೆ ಟಾಂಗ್ ನೀಡಿರುವ ಅಗ್ನಿಹೋತ್ರಿ ಅವರು ಮಾನವೀಯತೆ ಇರುವುದು ನಿಜವೇ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬೇಕಿದ್ರೆ ʻದಿ ಕಾಶ್ಮೀರ್‌ ಫೈಲ್ಸ್‌ʼನ್ನು ಯೂಟ್ಯೂಬ್‌ಗೆ ಹಾಕಲಿ: ತೆರಿಗೆ ವಿನಾಯಿತಿ ಕೇಳಿದ ಬಿಜೆಪಿಗೆ ಕೇಜ್ರಿವಾಲ್‌ ಟಾಂಗ್

    kashmir

    ನಟ ಅನುಪಮ್ ಖೇರ್ ಕೂಡ ಕೇಜ್ರಿವಾಲ್ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಜ್ರಿವಾಲ್ ಹೇಳಿಕೆಯ ನಂತರ, ಪ್ರತಿಯೊಬ್ಬ ನಿಜವಾದ ಭಾರತೀಯರು ಈ ಚಿತ್ರವನ್ನು ಥಿಯೇಟರ್‌ಗೇ ಹೋಗಿ ನೋಡಬೇಕು ಎಂದು ನಾನು ಭಾವಿಸುತ್ತೇನೆ. ಈಗಾಗಲೇ ಸಿನಿಮಾ ಕಾಶ್ಮೀರದಿಂದ ಹೆಚ್ಚಿನ ಜನರೊಂದಿಗೆ ಸಂಪರ್ಕ ಸಾಧಿಸುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ʼದಿ ಕಾಶ್ಮೀರ್‌ ಫೈಲ್ಸ್‌ʼ ನೋಡಿ, ಆದ್ರೆ ಮುಸ್ಲಿಮರನ್ನು ದ್ವೇಷಿಸಬೇಡಿ: ಮೆಹಬೂಬಾ ಮುಫ್ತಿ

    ಈಚೆಗಷ್ಟೇ ವಿಧಾನ ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್ ಅವರು, ನಿರ್ದೇಶಕರು ಸಿನಿಮಾವನ್ನು ಯೂಟ್ಯೂಬ್‌ಗೆ ನೀಡಲಿ. ಉಚಿತವಾಗಿ ಸಿನಿಮಾ ನೋಡಬಹುದು. ನಮ್ಮನ್ನು ತೆರಿಗೆ ಮುಕ್ತ ಮಾಡಿ ಎಂದು ಏಕೆ ಕೇಳುತ್ತಿದ್ದೀರಿ? ಅಷ್ಟು ಉತ್ಸುಕರಾಗಿದ್ದರೆ ವಿವೇಕ್ ಅಗ್ನಿಹೋತ್ರಿಯವರಿಗೆ ಯೂಟ್ಯೂಬ್‌ನಲ್ಲಿ ಹಾಕಲು ಹೇಳಿ, ಎಲ್ಲಾ ಉಚಿತವಾಗಿರುತ್ತದೆ. ಎಲ್ಲರೂ ಅದನ್ನು ಒಂದು ದಿನದಲ್ಲಿ ನೋಡಬಹುದು. ಆಗ ತೆರಿಗೆ ಮುಕ್ತ ಮಾಡುವ ಅಗತ್ಯವಾದರೂ ಏಕೆ ಬರುತ್ತದೆ? ಎಂದು ಪ್ರಶ್ನಿಸಿದ್ದರು.

    ಕೇಜ್ರಿವಾಲ್ ಅವರು ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಬಗ್ಗೆ ಮಾತನಾಡುವಾಗ ನಗುತ್ತಿದ್ದರು ಮತ್ತು ಆ ಮೂಲಕ ಕಾಶ್ಮೀರಿ ಪಂಡಿತರ ನೋವನ್ನು ಅವಮಾನಿಸಿದ್ದಾರೆ ಎಂಬ ಕಾರಣಕ್ಕೆ ಸಭೆಯಲ್ಲಿದ್ದ ರಾಜ್ಯದ ಮಂತ್ರಿಗಳೇ ತೀವ್ರವಾಗಿ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೇಜ್ರಿವಾಲ್, ನಮಗೆ ಕಾಶ್ಮೀರಿ ಪಂಡಿತರು ಮುಖ್ಯವೇ ಹೊರತು ಚಲನಚಿತ್ರವಲ್ಲ. ಬಿಜೆಪಿಯವರಿಗೆ ಕಾಶ್ಮೀರಿ ಫೈಲ್ಸ್‌ ಮುಖ್ಯವಾಗಬಹುದು, ಆದರೆ ನಮಗೆ ಕಶ್ಮೀರಿ ಪಂಡಿತರು ಮುಖ್ಯ. ನಾನು ಕೇಂದ್ರದಲ್ಲಿ ಇದ್ದಿದ್ದರೆ ಅವರ ಕುರಿತು ಸಿನಿಮಾ ಮಾಡುತ್ತಿರಲಿಲ್ಲ. ಅವರ ಕೈ ಹಿಡಿದು ಕಾಶ್ಮೀರಕ್ಕೆ ಕರೆದೊಯ್ದುತ್ತಿದ್ದೆ ಎಂದು ಕೇಜ್ರಿವಾಲ್ ಹೇಳಿದ್ದರು.