Tag: ಅರವಿಂದ ಬೆಲ್ಲದ್

  • ಸದನದಲ್ಲಿ ಟೀ-ಕಾಫಿ ವ್ಯವಸ್ಥೆ; ಸ್ಪೀಕರ್ ಸಮರ್ಥನೆ – ಬಿಜೆಪಿ ಶಾಸಕ ಬೆಲ್ಲದ್ ವಿರೋಧ

    ಸದನದಲ್ಲಿ ಟೀ-ಕಾಫಿ ವ್ಯವಸ್ಥೆ; ಸ್ಪೀಕರ್ ಸಮರ್ಥನೆ – ಬಿಜೆಪಿ ಶಾಸಕ ಬೆಲ್ಲದ್ ವಿರೋಧ

    ಬೆಂಗಳೂರು: ವಿಧಾನಸಭೆ ಸಭಾಂಗಣದೊಳಗೆ ಟೀ ಕಾಫಿ ವ್ಯವಸ್ಥೆ ಮಾಡುವ ವಿಚಾರವಾಗಿ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ (Arvind Bellad) ವಿರೋಧ ವ್ಯಕ್ತಪಡಿಸಿದ್ದಾರೆ.

    ವಿಧಾನಸಭೆಯಲ್ಲಿ ಎದ್ದುನಿಂತು ಆಕ್ಷೇಪ ವ್ಯಕ್ತಪಡಿಸಿದ ಅರವಿಂದ ಬೆಲ್ಲದ್, ಅಧ್ಯಕ್ಷರೇ, ಸದನದ ಒಳಗೆ ಟೀ ಕಾಫಿ ವ್ಯವಸ್ಥೆ ಮಾಡುತ್ತೀರಿ ಎಂದು ವರದಿ ಬರುತ್ತಿದೆ, ಇದು ಬೇಡ, ಸರಿಯಲ್ಲ ಎಂದರು. ಆಗ ಸ್ಪೀಕರ್ (UT Khader) ತಿರುಗೇಟು ನೀಡಿ ಏನ್ರೀ, ಅದನ್ನ ಇಲ್ಲಿ ಚರ್ಚೆ ಮಾಡೋದಾ? ನನ್ನ ಕೊಠಡಿಗೆ ಬಂದು ಮಾತಾಡಿ. ಬೇಡ ಅಂದ್ರೆ ಬೇಡ, ಮುಗೀತು ಬಿಡಿ. ಕುಳಿತುಕೊಳ್ಳಿ ಎಂದು ಸೂಚಿಸಿದರು. ಇದನ್ನೂ ಓದಿ: ಕಮ್ಯೂನಲ್ ಕ್ರಿಮಿನಲ್‌ಗಳಿಗೆ ಸಪೋರ್ಟ್ ಮಾಡುವ ರಾಜನೀತಿ ದೇಶಕ್ಕೆ ಅಪಾಯಕಾರಿ: ಸಿ.ಟಿ.ರವಿ

    ಇನ್ನು ಇದಕ್ಕೂ ಮುನ್ನ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸ್ಪೀಕರ್, ನಾನೊಬ್ಬ ಸಭಾಧ್ಯಕ್ಷನಾಗಿ ಶಾಸಕರಿಗೆ ವ್ಯವಸ್ಥೆ ಮಾಡೋದು ನನ್ನ ಕೆಲಸ. ಶಾಸಕರನ್ನ ವೈರಿಗಳಂತೆ ನೋಡಬೇಡಿ. ಶಾಸಕರು ಎಲ್ಲಾ ವಯಸ್ಸಿನವರು ಇದ್ದಾರೆ. ದೂರದ ಹೊಟೆಲ್, ಶಾಸಕರ ಭವನಕ್ಕೆ ಹೋಗಿ ರೆಸ್ಟ್ ತೆಗೆದುಕೊಳ್ಳುವ ಬದಲು ಇಲ್ಲಿಯೇ ವ್ಯವಸ್ಥೆ ಮಾಡಿದರೆ ಅನುಕೂಲ ಎಂದು ವ್ಯವಸ್ಥೆ ಮಾಡಿದ್ದೇವೆ. ಈ ವ್ಯವಸ್ಥೆಗೆ 4 ಲಕ್ಷ ಮೌಲ್ಯ ಆಗಬಹುದು, ದೊಡ್ಡ ಮಟ್ಟದ ಹಣ ಬೇಕಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ರಾಯರ 430ನೇ ಜನ್ಮದಿನ ಸಂಭ್ರಮ – ನೂರಾರು ಕಲಾವಿದರಿಂದ ನಾದಹಾರ ಸೇವೆ

    224 ಶಾಸಕರ ಅನುಕೂಲಕ್ಕೆ 4 ಲಕ್ಷ ದೊಡ್ಡ ಮಟ್ಟದ ಖರ್ಚಲ್ಲ. ಎಲ್ಲರಿಗೂ ಲೆಕ್ಕ ಹಾಕಿದರೆ 2 ಸಾವಿರ ಬರಲ್ಲ. ಮಸಾಜ್ ಚೇರ್‌ಗೆ ಯಾವುದೇ ಖರ್ಚಿಲ್ಲ. ಬಿಜೆಪಿಯವರು ಕೂಡ ನಮ್ಮ ಸಭಾಂಗಣದಲ್ಲಿ ಹಾಕಿ ಎಂದು ಹೇಳಿದ್ರು. ಸೀಮಿತವಾಗಿ ಹಾಕಿಸಿದ್ದೇವೆ. ಟೀಕೆ ಮಾಡುವವರು ಇರುತ್ತಾರೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸನಾತನ ಧರ್ಮದ ಕುರಿತ ಹೇಳಿಕೆ – ಉದಯನಿಧಿ ಸ್ಟಾಲಿನ್ ವಿರುದ್ಧ ಕೋರ್ಟ್ ಅನುಮತಿಯಿಲ್ಲದೇ ದೂರು ದಾಖಲಿಸುವಂತಿಲ್ಲ: ಸುಪ್ರೀಂ

    ಸದನದಲ್ಲಿ ಹೆಚ್ಚಾಗಿ ಶಾಸಕರು ಪಾಲ್ಗೊಳ್ಳಲಿ ಎಂದು ವ್ಯವಸ್ಥೆ ಮಾಡಿದ್ದೇವೆ. ಈಗಾಗಲೇ ಸದನದ ಒಳಗೆ ಶಾಸಕರಿಗೆ ನೀರಿನ ವ್ಯವಸ್ಥೆ ಮಾಡಿದ್ದೇವೆ. ಟೀ- ಕಾಫಿ ವ್ಯವಸ್ಥೆ ಬಗ್ಗೆಯೂ ಚಿಂತಿಸಿದ್ದೇವೆ. ಶಾಸಕರಿಗೆ ಕ್ಲಬ್ ವ್ಯವಸ್ಥೆ ಬಗ್ಗೆ ಸಿದ್ಧತೆ ಮಾಡುತ್ತಿದ್ದೇವೆ. ಆದಷ್ಟು ಬೇಗ ಕೆಲಸ ಮಾಡುತ್ತೇವೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ನನ್ನನ್ನು ಎಲ್ಲರೂ ಸೇರಿ ಟ್ರ್ಯಾಪ್‌ ಮಾಡಿದ್ರು.. ಅದ್ಕೆ ಈ ರೀತಿ ಕೆಲಸ ಮಾಡಿದ್ದೇನೆ: ನಟಿ ರನ್ಯಾ ಅಳಲು

  • ಗೋ ರಕ್ಷಣೆಗೆ ಹೋದವರ ಮೇಲೆ ಹಲ್ಲೆ ಆರೋಪ; ಹಿಂದೂ – ಮುಸ್ಲಿಂ ಯುವಕರ ನಡುವೆ ಗಲಾಟೆ – ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ!

    ಗೋ ರಕ್ಷಣೆಗೆ ಹೋದವರ ಮೇಲೆ ಹಲ್ಲೆ ಆರೋಪ; ಹಿಂದೂ – ಮುಸ್ಲಿಂ ಯುವಕರ ನಡುವೆ ಗಲಾಟೆ – ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ!

    – ಧಾರವಾಡ ಉಪನಗರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ

    ಧಾರವಾಡ: ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾಗಿದ್ದ ಬಜರಂಗದಳದ ಕಾರ್ಯಕರ್ತ ಸೋಮಶೇಖರ್ ಎಂಬುವವರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಹೇಳಿಬಂದಿದೆ. ಈ ಬೆನ್ನಲ್ಲೇ ಹಿಂದೂ-ಮುಸ್ಲಿಮ್‌ ಯುವಕರ ನಡುವೆ ಗಲಾಟೆಯೂ ನಡೆದಿದ್ದು ಕೆವಲರಿಗೆ ಗಾಯಗಳಾಗಿರುವ ಘಟನೆ ಧಾರವಾಡ ನಗರದ ಎಪಿಎಂಸಿ ಬಳಿ ನಡೆದಿದೆ.

    ಹಲ್ಲೆಯನ್ನು ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸೋಮಶೇಖರ್ ಅವರ ಮೇಲೆ ಹಲ್ಲೆ ಮಾಡಿದ ಅನ್ಯಕೋಮಿನ ಜನರನ್ನು ಬಂಧಿಸುವಂತೆ ಆಗ್ರಹಿಸಿ ಬಜರಂಗದಳ ಕಾರ್ಯಕರ್ತರು ಉಪನಗರ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರಸಂಗವೂ ನಡೆಯಿತು.

    ಇನ್ನು ಪ್ರತಿಭಟನೆಗೆ ಆಗಮಿಸಿದ ಧಾರವಾಡ ಶಾಸಕ ಅರವಿಂದ ಬೆಲ್ಲದ್, ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದವರನ್ನು ನಾಳೆವರೆಗೆ ಬಂಧಿಸದೇ ಇದ್ದರೆ, ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸದ್ಯ ಪ್ರತಿಭಟನೆ ಹಿಂದಕ್ಕೆ ಪಡೆದಿದ್ದೇವೆ, ನಾಳೆ ಬೆಳಗಿನವರೆಗೂ ನಾವು ಕಾದು ನೋಡುತ್ತೇವೆ, ಆ ಬಳಿಕ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಬೆಲ್ಲದ್ ತಿಳಿಸಿದರು.

    ನಂತರ ಮಾತನಾಡಿದ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್, ಜಾನುವಾರುಗಳ ಸಾಗಾಟಕ್ಕೆ ಸಂಬಂಧಿಸಿದಂತೆ ಎರಡು ಕೋಮಿನವರ ಮಧ್ಯೆ ಗಲಾಟೆಯಾಗಿದೆ. ಇಬ್ಬರು ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದೆ, ಈ ಸಂಬಂಧ ಅವರು ದೂರು ದಾಖಲಿಸಿದ್ದಾರೆ. ಆ ಪ್ರಕಾರ ಎಫ್‌ಐಆರ್ ದಾಖಲಿಸಿಕೊಳ್ಳುತ್ತೇವೆ. ದೂರಿನಲ್ಲಿ ಇಬ್ಬರ ಹೆಸರಿನ ಜೊತೆಗೆ ಇನ್ನಷ್ಟು ಜನ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಾದ ಏರಿಯಾದಲ್ಲಿ ಸಿಸಿಟಿವಿ ಕ್ಯಾಮೆರಾಗಳಿವೆ, ಅದನ್ನೆಲ್ಲ ಪರಿಶೀಲಿಸಿ ನಾವು ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

  • ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸರ್ಕಾರ ಅವಕಾಶ ಕೊಡ್ತಿಲ್ಲ: ಅರವಿಂದ ಬೆಲ್ಲದ್

    ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸರ್ಕಾರ ಅವಕಾಶ ಕೊಡ್ತಿಲ್ಲ: ಅರವಿಂದ ಬೆಲ್ಲದ್

    ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ (Hubballi Eidgah Maidan) ಗಣೇಶ ಪ್ರತಿಷ್ಠಾಪನೆಗೆ ಕಳೆದ ಬಾರಿ ಸುಪ್ರೀಂ ಕೋರ್ಟ್ ನಮಗೆ ಅವಕಾಶ ನೀಡಿದೆ. ಈ ಬಾರಿಯೂ ನಾವು ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲು ನಿರ್ಧಾರ ಮಾಡಿದ್ದು, ಕಾಂಗ್ರೆಸ್ (Congress) ಸರ್ಕಾರ ವಿನಾಕಾರಣ ಅಲ್ಪ ಸಂಖ್ಯಾತರ ತುಷ್ಟೀಕರಣಕ್ಕಾಗಿ ಪರ್ಮಿಶನ್ ಕೊಡ್ತಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ (Arvind Bellad) ಆರೋಪಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡುತ್ತಿಲ್ಲ. ಜಗತ್ತಿಗೆ ಬೇಡವಾದ ಟಿಪ್ಪು ಜಯಂತಿಯನ್ನು ಅಲ್ಲಿ ಮಾಡಿದ್ದಾರೆ. ನಮಾಜ್ ಕೂಡಾ ಮಾಡಿದ್ದಾರೆ. ನಾವು ಪ್ರತಿಷ್ಠಾಪನೆಗೆ ಮನವಿ ಕೇಳಿದರೆ ಅವಕಾಶ ಕೊಡುತ್ತಿಲ್ಲ. ಅನುಮತಿ ಕೋರಿ ನಾವು ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇವೆ. ಅನುಮತಿ ಕೊಡಲಿ ಬಿಡಲಿ. ನಾವು ಗಣೇಶ ಪ್ರತಿಷ್ಠಾಪನೆ ಮಾಡುತ್ತೇವೆ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಅಷ್ಟೇ ನಾವು ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುತ್ತೇವೆ ಎಂದರು.

    ಯಾರೂ ಅನುಮತಿ ಕೊಡಬೇಡಿ ಅಂತಾರೆ ಅವರು ದೇಶ ವಿರೋಧಿ ಸಂಘಟನೆಗಳು. ಒಂದು ತಿಂಗಳ ಹಿಂದೆ ಡಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆದರೆ ಸರ್ಕಾರದಿಂದ ಏನೂ ಬಂದಿಲ್ಲ. ಇದು ಪಾಲಿಕೆ ಜಾಗ, ಇದರಲ್ಲಿ ಸರ್ಕಾರದ ಹಸ್ತಕ್ಷೇಪ ಬರಲ್ಲ. ಗಣಪತಿ ಪ್ರಿಯರ ಪರವಾಗಿ ನಾನು ಮಾತಾಡ್ತಿದ್ದೇನೆ. ಜನರ ಭಾವನೆ ನಾನು ಸರ್ಕಾರಕ್ಕೆ ಮುಟ್ಟಿಸುತ್ತೇನೆ. ಪಾಲಿಕೆ ಕಮಿಷನರ್ ಸರ್ಕಾರಕ್ಕೆ ಕೇಳೋ ಅವಶ್ಯಕತೆ ಇಲ್ಲ. ಗಣೇಶ ಹಬ್ಬ ಮಾಡಿದರೆ ಅಲ್ಪ ಸಂಖ್ಯಾತರು ಸಿಟ್ಟಾಗುತ್ತಾರೆ ಎಂದು ಕಾಂಗ್ರೆಸ್ ತಿಳಿದುಕೊಂಡಿದೆ. ಹೀಗಾಗಿ ಅನುಮತಿ ತಡ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ರೈಲು ಪ್ರಯಾಣದ ವೇಳೆ 8 ಯುವಕರಿಗೆ ಮತ್ತು ಬರೋ ಚಾಕ್ಲೇಟ್ ನೀಡಿ ದರೋಡೆ

    ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟೀಕರಣ ಬೇಕು. ಕಳೆದ ಒಂದು ತಿಂಗಳಿಂದ ಇದು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಅಧಿಕೃತವಾಗಿ ಪಾಲಿಕೆ ಲಿಖಿತವಾಗಿ ಅನುಮತಿ ಕೊಟ್ಟಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವ ಕಾರಣ ಅಧಿಕಾರಿಗಳು ಅವರ ಕೈಗೊಂಬೆ ಆಗಿದ್ದಾರೆ. ದೇಶ ವಿರೋಧಿ ಸಂಘಟನೆಗಳಿಗೆ ಕಾಂಗ್ರೆಸ್ ಸರ್ಕಾರ ಬಂದರೆ ಕಾಂಗ್ರೆಸ್ ಕೊಂಬು ಚಿಗುರು ಬರುತ್ತದೆ ಎಂದರು.

    ಎಸ್‌ಡಿಪಿಐ, ಎಐಎಂಐಎಂ ಸಂಘಟನೆಗಳು ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡಬೇಡಿ ಎಂದು ಮನವಿ ಕೊಟ್ಟಿವೆ. ಅವೆರಡು ದೇಶ ವಿರೋಧಿ ಸಂಘಟನೆಗಳು ಎಂದು ಬೆಲ್ಲದ್ ಹೇಳಿದರು. ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ – ಎಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಗುಂಡೂರಾವ್ ಸೂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ಯಾವುದೇ ಡ್ಯಾಮೇಜ್ ಆಗಲ್ಲ: ಅರವಿಂದ ಬೆಲ್ಲದ್

    ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ಯಾವುದೇ ಡ್ಯಾಮೇಜ್ ಆಗಲ್ಲ: ಅರವಿಂದ ಬೆಲ್ಲದ್

    ಧಾರವಾಡ: ರಾಜಕೀಯದ ನಂತರ ಜಗದೀಶ್ ಶೆಟ್ಟರ್ (Jagadish Shettar) ಕಾರ್ಯಕರ್ತರ ಜೊತೆ ಸೇರಿ ಬಿಜೆಪಿ (BJP) ಪಕ್ಷ ಇನ್ನಷ್ಟು ಬಲಪಡಿಸುವ ಕೆಲಸ ಮಾಡುತ್ತಾರೆ ಎಂದುಕೊಂಡಿದ್ದೆವು. ಆದರೆ ಅವರ ರಾಜೀನಾಮೆ (Resignation) ಪಕ್ಷಕ್ಕೆ ಬಹಳ ದುಃಖದ ಸಂಗತಿ. ಹಾಗೆಂದು ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ (Arvind Bellad) ಹೇಳಿದ್ದಾರೆ.

    ಧಾರವಾಡದಲ್ಲಿ (Dharwad) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಬಿಜೆಪಿಯ ಹಿರಿಯ ನಾಯಕರಾಗಿದ್ದರು. ವಕೀಲರಾಗಿದ್ದ ಅವರಿಗೆ ಬಿಜೆಪಿ ಪಕ್ಷ ಕರೆದು ಟಿಕೆಟ್ ನೀಡಿ, ಶಾಸಕರನ್ನಾಗಿ ಮಾಡಿತ್ತು. ಜೊತೆಗೆ ಮುಖ್ಯಮಂತ್ರಿಯನ್ನಾಗಿಯೂ ಮಾಡಿತ್ತು. ಆದರೆ ಅವರು ಬಿಜೆಪಿ ತೊರೆದು ಕಾಂಗ್ರೆಸ್ (Congress) ಪಕ್ಷ ಸೇರುತ್ತಿರುವುದರಿಂದ ನಮಗೆ ಬಹಳ ನೋವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಸಕ್ಕರೆ ನಾಡು ಮೀಸಲು ಕ್ಷೇತ್ರದಲ್ಲಿ ಕೈ, ಕಮಲ, ತೆನೆ ಪೈಪೋಟಿ 

    ನರೇಂದ್ರ ಮೋದಿಯವರ (Narendra Modi) ಸರ್ಕಾರ ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಎನ್ನುವ ರೀತಿಯಲ್ಲಿ ಹೊರಟಿದೆ. ಜಗದೀಶ ಶೆಟ್ಟರ್ ಸಾಮಾನ್ಯ ಕಾರ್ಯಕರ್ತನಾಗಿ ಜೀವನ ಆರಂಭ ಮಾಡಿದರು. ಅಂತಹ ವ್ಯಕ್ತಿಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದು ಬಿಜೆಪಿ. ಎಲ್ಲಾ ಸ್ಥಾನಮಾನಗಳನ್ನು ಅಲಂಕರಿಸಿ ಈಗ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಇದು ನಮ್ಮೆಲ್ಲಾ ಕಾರ್ಯಕರ್ತರಿಗೆ ಬಹಳ ನೋವು ತಂದಿದೆ ಎಂದರು. ಇದನ್ನೂ ಓದಿ: ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆದ್ರೂ ಖಾಲಿ ಸ್ಥಾನ ತುಂಬಲು ಪ್ರಯತ್ನಿಸುತ್ತೇವೆ: ಬೊಮ್ಮಾಯಿ

    ಬಿಜೆಪಿ ಪಕ್ಷ ಇಂದು ದೊಡ್ಡ ಪ್ರಮಾಣದಲ್ಲಿ ಬೆಳೆದಿದೆ. ಹಿರಿಯರೊಬ್ಬರು ಮನೆ ತೊರೆದಿದ್ದಕ್ಕೆ ಬೇಜಾರಾಗಿದೆ. ಕೇಂದ್ರದಲ್ಲಿ ರಾಜ್ಯಸಭಾ ಸದಸ್ಯರನ್ನಾಗಿ ಮಾಡುತ್ತೇವೆ ಎಂದರೂ ಶೆಟ್ಟರ್ ಕೇಳಲಿಲ್ಲ. ಲಿಂಗಾಯತರನ್ನು ಸಿಎಂ ಮಾಡಿದ್ದೇ ಬಿಜೆಪಿ ಪಕ್ಷ. ಬಿಜೆಪಿ 67 ಸೀಟುಗಳನ್ನು ಲಿಂಗಾಯತರಿಗೆ ಕೊಟ್ಟಿದೆ. ಲಿಂಗಾಯತರಿಗೆ ಮಾನ್ಯತೆ ಕೊಟ್ಟಿದ್ದು ಯಾವ ಪಕ್ಷ ಎಂಬುದು ಜನರಿಗೆ ಗೊತ್ತಿದೆ. ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇ ಆದಲ್ಲಿ ಅವರನ್ನು ಮೂಲೆಗುಂಪು ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಜ್ಯ ಸರ್ಕಾರ ಜನರ ಹಣ ಕದ್ದಿದೆ: ರಾಗಾ ಆರೋಪ 

    ನಮ್ಮ ಪಕ್ಷದ ವರಿಷ್ಠರು ಶೆಟ್ಟರ್ ಅವರೊಂದಿಗೆ ಚರ್ಚೆ ಮಾಡಿದ್ದರು. ಈ ಬಾರಿ ಬಿಜೆಪಿ ಸರ್ಕಾರದಲ್ಲಿ ಕಿರಿಯ ವಯಸ್ಸಿನವರು ಮುಖ್ಯಮಂತ್ರಿಯಾಗಲಿದ್ದಾರೆ. ಅವರ ಸಚಿವ ಸಂಪುಟದಲ್ಲಿ ನೀವು ಸಚಿವರಾಗಿರುವುದು ಅಷ್ಟೊಂದು ಸರಿಯಲ್ಲ ಎಂದು ಹೇಳಿದ್ದರು. ಆದರೂ ಶೆಟ್ಟರ್ ಸಮ್ಮತಿ ಸೂಚಿಸಲಿಲ್ಲ ಎಂದರು. ಇದನ್ನೂ ಓದಿ: ಹೋಗುವವರು ಹೋಗಲಿ ಪಕ್ಷ ಸ್ವಚ್ಛವಾಗುತ್ತದೆ: ಶೆಟ್ಟರ್ ವಿರುದ್ಧ ಜಾರಕಿಹೊಳಿ ಕಿಡಿ 

    ಈ ಬಾರಿ ಚಿಕ್ಕ ವಯಸ್ಸಿನವರು ಬಿಜೆಪಿಯಲ್ಲಿ ಸಿಎಂ ಆಗಬಹುದು. ಲಿಂಗಾಯತ ಸಮುದಾಯದ ಚಿಕ್ಕ ವಯಸ್ಸಿನವರೇ ಸಿಎಂ ಆಗಲಿದ್ದಾರೆ ಎಂಬ ಕುತೂಹಲಕಾರಿ ಸಂಗತಿಯನ್ನು ಬಿಚ್ಚಿಟ್ಟಿರುವ ಅವರು, ಈ ಬಾರಿ ಬೊಮ್ಮಾಯಿ ಸಿಎಂ ಆಗಿ ಮುಂದುವರೆಯುವುದಿಲ್ಲ. ಬದಲಿಗೆ ಲಿಂಗಾಯತ ಸಮುದಾಯದ ಚಿಕ್ಕ ವಯಸ್ಸಿನವರೇ ಸಿಎಂ ಆಗಲಿದ್ದಾರೆ ಎಂಬ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಸೋಲಿಲ್ಲದ ಸರದಾರ ಡಿಕೆಶಿಗೆ ಸಾಮ್ರಾಟ್ ಸವಾಲ್..!

  • ಎರಡೇ ಕುಟುಂಬಗಳಿಗೆ ಮಣೆಹಾಕುತ್ತಿರುವ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ

    ಎರಡೇ ಕುಟುಂಬಗಳಿಗೆ ಮಣೆಹಾಕುತ್ತಿರುವ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ

    ಧಾರವಾಡ: ಜಿಲ್ಲೆಯ 7 ಕ್ಷೇತ್ರಗಳಲ್ಲಿ ಹುಬ್ಬಳ್ಳಿ-ಧಾರವಾಡ (Hubballi-Dharwad) ಪಶ್ಚಿಮ ಕ್ಷೇತ್ರ ಬೆಲ್ಲದ್ ಹಾಗೂ ಮೋರೆ ಕುಟುಂಬಗಳಿಗೇ ಮಣೆಹಾಕುತ್ತಾ ಬಂದಿದೆ. ಈ ಪೈಕಿ ಬೆಲ್ಲದ ಕುಟುಂಬವೇ ಹೆಚ್ಚಿನ ಗೆಲುವು ಸಾಧಿಸಿದೆ.

    ಚಂದ್ರಕಾಂತ ಬೆಲ್ಲದ್ ರಾಜಕೀಯ ನಿವೃತ್ತಿ ಪಡೆದ ಮೇಲೆ ಅವರ ಮಗನೇ ಎರಡು ಬಾರಿ ಶಾಸಕರಾಗಿದ್ದಾರೆ. ಹಾಗಾದ್ರೆ ಬೆಲ್ಲದ್ ಹಾಗೂ ಮೋರೆ ಕುಟುಂಬ ಎಷ್ಟು ಬಾರಿ ಇಲ್ಲಿ ಶಾಸಕರಾಗಿ ಆಡಳಿತ ನಡೆಸಿದ್ದಾರೆ ಅನ್ನೋ ಮಾಹಿತಿ ಇಲ್ಲಿದೆ ನೋಡಿ.

    1983 ರಲ್ಲಿ ಮಾಜಿ ಸಚಿವ ಎಸ್.ಆರ್ ಮೋರೆ (SR More) ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಗೆದ್ದು ಶಾಸಕರಾದರು. ನಂತರ 1985ರ ಚುನಾವಣೆಯಲ್ಲಿ (Elections) ಚಂದ್ರಕಾಂತ ಬೆಲ್ಲದ್ ಮೊದಲ ಬಾರಿಗೆ ಪಕ್ಷೇತರರಾಗಿ ಗೆಲುವು ಸಾಧಿಸಿದರು. ಇದೇ ಕ್ಷೇತ್ರದಲ್ಲಿ 1989ರಲ್ಲಿ ನಡೆದ ಚುನಾವಣೆಯಲ್ಲಿ ಚಂದ್ರಕಾಂತ ಬೆಲ್ಲದ್ ಅವರನ್ನ ಸೋಲಿಸಿದ ಎಸ್.ಆರ್ ಮೋರೆ ಕಾಂಗ್ರೆಸ್ ಪಕ್ಷದಿಂದ 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಇದರಿಂದ ಮತ್ತೆ 2ನೇ ಬಾರಿಗೆ ಮೋರೆಗೆ ಮಣಿಸಲು 1994ರಲ್ಲಿ ಚಂದ್ರಕಾಂತ ಬೆಲ್ಲದ್ ಬಿಜೆಪಿ ಸೇರಿ, ಪಕ್ಷದಿಂದ ಗೆದ್ದು ಶಾಸಕರಾದರು.

    ಹೀಗೆ ಪ್ರತಿ ಚುನಾವಣೆಯಲ್ಲಿ ಎಸ್.ಆರ್ ಮೋರೆ ಒಮ್ಮೆ ಗೆದ್ದರೆ, ಚಂದ್ರಕಾಂತ ಬೆಲ್ಲದ್ ಮತ್ತೊಮ್ಮೆ ಗೆದ್ದು ಬರುವ ಮೂಲಕ ಈ ಕ್ಷೇತ್ರ ಎರಡೇ ಕುಟುಂಬದ ಗೆಲುವಿಗೆ ಸೀಮಿತವಾಗಿದೆ. ಚಂದ್ರಕಾಂತ ಬೆಲ್ಲದ್ ಈ ಕ್ಷೇತ್ರದಲ್ಲಿ 4 ಬಾರಿ ಶಾಸಕರಾಗಿದ್ದರೆ, ಎಸ್.ಆರ್ ಮೋರೆ 3 ಬಾರಿ ಶಾಸಕರಾಗಿ ಆಡಳಿತ ನಡೆಸಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಪಕ್ಷ ನಾನು ಬಿಡ್ಲಿಲ್ಲ, ಅವರೇ ನನ್ನ ಹೊರಗೆ ಹಾಕಿದ್ರು: ಎಟಿ ರಾಮಸ್ವಾಮಿ

    ಇದಾದ ಬಳಿಕ 2013ರ ಚುನಾವಣೆಗೆ ಚಂದ್ರಕಾಂತ ಬೆಲ್ಲದ್ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ ನಂತರವೂ ಅದೇ ಕುಟುಂಬದ ಆಡಳಿತ ಮುಂದುವರಿದಿದೆ. ಏಕೆಂದರೆ 2013 ಚುನಾವಣಾ ರಾಜಕಾರಣದಿಂದ ಚಂದ್ರಕಾಂತ ಬೆಲ್ಲದ್ ಹಿಂದೆ ಸರಿದ ನಂತರ, ತನ್ನ ಮಗನಾದ ಅರವಿಂದ ಬೆಲ್ಲದ್ ಅವರಿಗೆ ಬಿಜೆಪಿಯಿಂದ ಟಿಕೆಟ್ ಕೊಡಲಾಯಿತು. ಅರವಿಂದ ಬೆಲ್ಲದ್ ಭರ್ಜರಿ ಗೆಲುವು ಸಾಧಿಸಿದರು. ಚಂದ್ರಕಾಂತ ಬೆಲ್ಲದ್ ಎದುರು ಸೋತಿದ್ದ ಎಸ್.ಆರ್ ಮೋರೆ, 2013 ರಲ್ಲಿ ಮಗ ಅರವಿಂದ ಬೆಲ್ಲದ್ (Arvind Bellad) ವಿರುದ್ಧವೂ ಸೋತರು. ಈ ಬೆಳವಣಿಗೆ ನಂತರ 2018ರಲ್ಲಿ ಕಾಂಗ್ರೆಸ್ ಎಸ್.ಆರ್ ಮೋರೆ ಅವರಿಗೆ ಟಿಕೆಟ್ ನಿರಾಕರಿಸಿತು.

    ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ರಾಜಕೀಯ ಹಿನ್ನೋಟ ನೋಡುತ್ತಾ ಹೋದರೆ, ಈ ಎರಡೇ ಕುಟುಂಬಗಳಿಗೆ ಮಣೆ ಹಾಕುತ್ತಾ ಬಂದಿರುವುದು ಕಾಣುತ್ತದೆ. ಇದನ್ನೂ ಓದಿ: ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆ ಫಿಕ್ಸಾ?

    2023ರ ವಿಧಾನಸಭಾ ಚುನಾವಣೆಯಲ್ಲೂ ಅರವಿಂದ ಬೆಲ್ಲದ್ ಮತ್ತೆ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಭರ್ಜರಿ ತಯಾರಿ ನಡೆಸಿದ್ದಾರೆ. ಇತ್ತ ಪ್ರತಿಸ್ಪರ್ಧಿಯಾಗಿ ಕಣಕ್ಕಿಳಿಯಲು ಎಸ್.ಆರ್ ಮೋರೆ ಅವರ ಮಗಳು ಕೀರ್ತಿ ಮೋರೆ ಸಿದ್ಧತೆ ನಡೆಸುತ್ತಿದ್ದು, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಇಬ್ಬರಿಗೂ ಟಿಕೆಟ್ ಸಿಕ್ಕಿದ್ದೇ ಆದಲ್ಲಿ ಮತ್ತೊಮ್ಮೆ ಈ ಕ್ಷೇತ್ರ ಬೆಲ್ಲದ್ ವರ್ಸಸ್ ಮೋರೆಯಾಗಲಿದೆ.

  • ವಯಸ್ಸಾದ ಶಾಸಕರಿಗೆ ಕೊಕ್ ಕೊಡುತ್ತಾ ಬಿಜೆಪಿ?: ಸುಳಿವು ಕೊಟ್ಟ ಶಾಸಕ ಬೆಲ್ಲದ್

    ವಯಸ್ಸಾದ ಶಾಸಕರಿಗೆ ಕೊಕ್ ಕೊಡುತ್ತಾ ಬಿಜೆಪಿ?: ಸುಳಿವು ಕೊಟ್ಟ ಶಾಸಕ ಬೆಲ್ಲದ್

    ಧಾರವಾಡ: ನಾಲ್ಕೈದು ಜನ ಶಾಸಕರಿಗೆ ಈ ಬಾರಿ ವಿಧಾನಸಭೆ ಚುನಾವಣೆಯ ಟಿಕೆಟ್ ತಪ್ಪಬಹುದು ಎಂಬ ಮಾಜಿ ಸಿಎಂ ಯಡಿಯೂರಪ್ಪ (B S Yediyurappa) ನವರ ಹೇಳಿಕೆಗೆ ಶಾಸಕ ಅರವಿಂದ್ ಬೆಲ್ಲದ್ (Aravind Bellad) ಕೂಡ ಪುಷ್ಠಿ ನೀಡಿದ್ದಾರೆ.

    ಧಾರವಾಡದಲ್ಲಿ ಮಾತನಾಡಿದ ಅವರು, ಹಳೆಯ ಹಾಗೂ ವಯಸ್ಸಾದ ಶಾಸಕರು ಕೂಡ ಇದ್ದಾರೆ. ವಯಸ್ಸಾದ ಕಾರಣ ಅವರು ಟಿಕೆಟ್ (Vidhanasabha Election Ticket) ಬೇಡ ಎನ್ನಬಹುದು ಅಥವಾ ಪಕ್ಷ ಅವರಿಗೆ ಟಿಕೆಟ್ ನೀಡದೇ ಇರಬಹುದು. ಹೀಗಾಗಿ ತಾವಾಗಿಯೇ ಅವರು ಟಿಕೆಟ್ ಬೇಡ ಎನ್ನಬಹುದು. ಅಂತವರು 121 ಕ್ಷೇತ್ರದಲ್ಲಿ ನಾಲ್ಕೈದು ಜನ ಇದ್ದೇ ಇರುತ್ತಾರೆ. ಅದನ್ನೇ ಯಡಿಯೂರಪ್ಪನವರು ಹೇಳಿರಬಹುದು. ಅದರಲ್ಲಿ ತಪ್ಪೇನಿದೆ? ಎಂದರು.

    ಯಾರಿಗೆ ಟಿಕೆಟ್ ಕೊಡಬೇಕು ಎಂಬುದನ್ನು ಪಕ್ಷ ನಿರ್ಧರಿಸುತ್ತದೆ. ಹಳಬರಿಗೆ ಟಿಕೆಟ್ ತಪ್ಪಬಹುದು ಎಂಬರ್ಥದಲ್ಲಿ ಯಡಿಯೂರಪ್ಪನವರು ಹೇಳಿದ್ದಾರೆ ಎಂದು ಬೆಲ್ಲದ್ ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಹರಕೆಯ ಕುರಿ, ಕಾಂಗ್ರೆಸ್‍ಗೆ ದಮ್ಮಿದ್ರೆ ಅವರನ್ನ ಸಿಎಂ ಅಭ್ಯರ್ಥಿಯಾಗಿ ಘೋಷಿಸಲಿ: ಶ್ರೀರಾಮುಲು ಸವಾಲು

  • ಚಿಲುಮೆ ಬಳಿಕ ಧಾರವಾಡದಲ್ಲೂ ವೋಟರ್ ಸ್ಕ್ಯಾಮ್- ಮತದಾರರ ಕ್ಷೇತ್ರ ವರ್ಗಾವಣೆ ಆರೋಪ

    ಚಿಲುಮೆ ಬಳಿಕ ಧಾರವಾಡದಲ್ಲೂ ವೋಟರ್ ಸ್ಕ್ಯಾಮ್- ಮತದಾರರ ಕ್ಷೇತ್ರ ವರ್ಗಾವಣೆ ಆರೋಪ

    ಧಾರವಾಡ: ಬೆಂಗಳೂರಿನಲ್ಲಿ ಕಾಂಗ್ರೆಸ್ (Congress) ನಾಯಕರು ಚಿಲುಮೆ ಸಂಸ್ಥೆಯ ಮೇಲೆ ಮತದಾರರ ಪಟ್ಟಿಯಲ್ಲಿ ಗೋಲ್‍ಮಾಲ್ ಮಾಡಿದ ಆರೋಪದ ಬೆನ್ನಲ್ಲೇ, ಧಾರವಾಡ ಜಿಲ್ಲೆಯಲ್ಲಿ ಕೂಡಾ ಇದೇ ರೀತಿ ಗೋಲ್‍ಮಾಲ್ ನಡೆದ ಆರೋಪ ಕೇಳಿ ಬಂದಿದೆ.

    ಜಿಲ್ಲೆಯ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ ಇರುವ ಅಲ್ಪಸಂಖ್ಯಾತ ಮತದಾರರನ್ನು ಬೇರೆ ಕ್ಷೇತ್ರಕ್ಕೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಆರೋಪ ಮಾಡಿದ್ದು, ಪಾಲಿಕೆಯ ಹಲವು ವಾರ್ಡ್ ಗಳಲ್ಲಿ ಈ ರೀತಿಯ ಮತದಾರರ ಪಟ್ಟಿಯಿಂದ ಹೆಸರು ಗಾಯಬ್ ಮಾಡಲಾಗಿದೆ ಎಂದಿದ್ದಾರೆ. ಈ ಕ್ಷೇತ್ರದ ವಾರ್ಡ್ ನಂಬರ್ 14, 16 ಹಾಗೂ 22ರಲ್ಲಿ ಬೇರೆ ಕಡೆ ಮತದಾರರನ್ನ ವರ್ಗಾವಣೆ ಮಾಡಲಾಗಿದೆ. ಅಲ್ಲದೇ ಧಾರವಾಡ ನಗರದ ಪಿಜಿಯಲ್ಲಿ ಇರುವ ಬೇರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಯಲ್ಲಿ ಹಾಕುವ ಕೆಲಸ ನಡೆದಿದೆ ಆರೋಪಿಸ್ತಿದ್ದಾರೆ.

    ಮತ್ತೊಂದು ಕಡೆ ಈ ಮತದಾರರ ಪಟ್ಟಿ ಹಿಡಿದು ಮನೆಗೆ ಬರುವ ಕೆಲವರು, ಯಾರಿಗೆ ಮತ ಹಾಕ್ತಾರೆ ಎಂದು ಕೇಳ್ತಾರಂತೆ. ಅವರು ಕಾಂಗ್ರೆಸ್‍ಗೆ ಮತ ಹಾಕ್ತೇವೆ ಎಂದ್ರೆ ಆ ಮತದಾರನ್ನ ಪಟ್ಟಿಯಿಂದ ಡಿಲೀಟ್ ಮಾಡುವ ಕೆಲಸ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಆರೋಪಿಸಿದ್ದಾರೆ. ‌ ಇದನ್ನೂ ಓದಿ: ವೋಟರ್ ಲಿಸ್ಟ್ ಹಗರಣ – ಮುಖ್ಯ ಆರೋಪಿ ರವಿಕುಮಾರ್ ಆಪ್ತ ಲೋಕೇಶ್ ಬಂಧನ

    ಪಾಲಿಕೆ ಚುನಾವಣೆಯಲ್ಲಿ ಇದೇ ರೀತಿ ಮಾಡಿ ಬಿಜೆಪಿ ಪಶ್ಚಿಮ ಕ್ಷೇತ್ರದ ನಾಲ್ಕು ವಾರ್ಡ್ ಗೆದ್ದಿದೆ, 80 ಬೂತ್‍ಗಳಲ್ಲಿ ಮತದಾರರನ್ನ ಡಿಲೀಟ್ ಮಾಡುವ ಕೆಲಸ ನಡೆದಿದೆ. ಇದರ ಹಿಂದೆ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್‌ (Aravind Bellad) ಕೈವಾಡ ಇದೆ ಎಂದು ಆರೋಪಿಸಲಾಗ್ತಿದೆ.

    ಒಟ್ಟಿನಲ್ಲಿ ಬೆಂಗಳೂರಿನ ನಂತರ ಅವಳಿ ನಗರವಾದ ಧಾರವಾಡದಲ್ಲೂ ಮತಪಟ್ಟಿ ಗೋಲ್ಮಾಲ್ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಪಾಲಿಕೆ ಆಯುಕ್ತರು ಅಥವಾ ಚುನಾವಣಾ ಆಯೋಗವೇ ಸತ್ಯ ಹೇಳಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಶಾಸಕ ಬೆಲ್ಲದ್‌ ಹೆಸರಿನಲ್ಲಿ ಡೆತ್‌ನೋಟ್‌ ಬರೆದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ಶಾಸಕ ಬೆಲ್ಲದ್‌ ಹೆಸರಿನಲ್ಲಿ ಡೆತ್‌ನೋಟ್‌ ಬರೆದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ಧಾರವಾಡ: ಶಾಸಕ ಅರವಿಂದ ಬೆಲ್ಲದ್‌(Arvind Bellad) ಹೆಸರಲ್ಲಿ ಡೆತನೋಟ್(Death Note) ಬರೆದು ಮಹಿಳೆಯೋರ್ವಳು ಆತ್ಮಹತ್ಯೆಗೆ(Suicide) ಯತ್ನಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.

    ಶಕುಂತಲಾ ಮನಸೂರ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆಗೆಗಾಗಿ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ.

    ಕಳೆದ 20 ವರ್ಷಗಳಿಂದ ಶಕುಂತಲಾ ಕರ್ನಾಟಕ ಮಹರ್ಷಿ ವಾಲ್ಮಿಕಿ ಪಂಗಡದಲ್ಲಿ ಕಿರಿಯ ಸಹಾಯಕಿಯಾಗಿ ಕೆಲಸ ಮಾಡುತಿದ್ದಳು. ಅಧಿಕಾರಿ ರವಿ ಬೆಂತೂರ ನಿರ್ದೇಶಕರಾಗಿ ಬಂದ ಮೇಲೆ ಈಕೆಯ ಮೇಲೆ ಲಂಚ‌(Corruption) ಪಡೆದ ಆರೋಪ ಮಾಡಿ ನಾಲ್ಕು ತಿಂಗಳ‌ ಹಿಂದೆ ಕೆಲಸದಿಂದ ತೆಗೆದಿದ್ದರು. ಇದನ್ನೂ ಓದಿ: ನನ್ನ ಭಾಗವಹಿಸುವಿಕೆ ಬಯಸಿದ್ರೆ ರಾಜಕೀಯಕ್ಕೆ ಬರುವೆ – ಕಂಗನಾ ಬಿಗ್ ಸ್ಟೇಟ್‌ಮೆಂಟ್

    ಶನಿವಾರ ಸಚಿವ ಶ್ರೀರಾಮುಲು ಧಾರವಾಡಕ್ಕೆ ಬಂದಾಗ ಮನವಿ ಕೊಡಲು ಶಕುಂತಲಾ ಬಂದಿದ್ದಳು. ಶ್ರೀರಾಮುಲು ಸಿಗದೇ ಇದ್ದಾಗ ಧಾರವಾಡ ಶಾಸಕ ಅರವಿಂದ ಬೆಲ್ಲದ್‌ ಬಳಿ ಮನವಿ ಕೊಡಲು ಹೋಗಿದ್ದಳು.

    ಈ ವೇಳೆ ಶಾಸಕರು ನನಗೆ ಅಪಮಾನ ಮಾಡಿದ್ದಾರೆ. ಲಂಚ ಪಡೆದಿದ್ದೆನೆ ಎಂದು ಶಾಸಕರೇ ನನ್ನನ್ನು ಕೆಲಸದಿಂದ ತೆಗೆಸಿದ್ದಾರೆ ಎಂದು ಆರೋಪ ಮಾಡಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ. ಜನರು ಇದ್ದಾಗ ಲಂಚ‌ ತೆಗೆದುಕೊಂಡಿದ್ದಿಯಾ ಎಂದು ಶಾಸಕರು ನನಗೆ ಅಪಮಾನ ಮಾಡಿದ್ದಾರೆ. ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ ಎಂದು ದೂರಿದ್ದಾಳೆ.

    ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಆರೋಗ್ಯ ಸ್ವಲ್ಪ ಚೇತರಿಕೆ ಕಂಡಿದ್ದು ಚಿಕಿತ್ಸೆ ಮುಂದುವರೆದಿದೆ.

    Live Tv
    [brid partner=56869869 player=32851 video=960834 autoplay=true]

  • ಬ್ಯಾನರ್ ಎಡವಟ್ಟು – ದೇಶದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂದು ಬರೆಸಿದ ಶಾಸಕರು

    ಬ್ಯಾನರ್ ಎಡವಟ್ಟು – ದೇಶದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂದು ಬರೆಸಿದ ಶಾಸಕರು

    ಧಾರವಾಡ: ದೇಶದ ಮೊದಲ ಮಹಿಳಾ ರಾಷ್ಟ್ರಪತಿ (President) ಯಾರು ಎಂದು ಎಲ್ಲರಿಗೆ ಗೊತ್ತಿರುವ ವಿಚಾರ. ಆದರೆ ಧಾರವಾಡದ ಶಾಸಕರೊಬ್ಬರು ದೇಶದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಸ್ವಾಗತ ಎಂದು ಬ್ಯಾನರ್‌ನಲ್ಲಿ ಹಾಕಿಕೊಂಡು ಎಡವಟ್ಟು ಮಾಡಿದ್ದಾರೆ.

    ನಾಳೆ ಧಾರವಾಡಕ್ಕೆ (Dharwada) ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತಿದ್ದಾರೆ. ಇಡಗಟ್ಟಿ ಹಾಗೂ ತಡಸಿನಕೊಪ್ಪ ಗ್ರಾಮದ ಹತ್ತಿರ ನಿರ್ಮಾಣಗೊಂಡಿರುವ ಐಐಟಿ (IIT) ಉದ್ಘಾಟನಾ ಕಾರ್ಯಕ್ರಮಕ್ಕೆ ದ್ರೌಪದಿ ಮುರ್ಮು ಬರುತ್ತಿದ್ದಾರೆ. ಈ ಹಿನ್ನೆಲೆ ಧಾರವಾಡ ಶಾಸಕ ಅರವಿಂದ ಬೆಲ್ಲದ್ (Arvind Bellad) ರಾಷ್ಟ್ರಪತಿಗೆ ಸ್ವಾಗತ ಕೋರಿ ಬ್ಯಾನರ್ ಹಾಕಿದ್ದು, ಅದರಲ್ಲಿ ಎಡವಟ್ಟು ಮಾಡಿದ್ದಾರೆ. ದೇಶದ ಮೊಲದ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತ ಎಂದು ಬರೆಸಿದ್ದಾರೆ. ಇದನ್ನೂ ಓದಿ: ಆ ಭಾಗ್ಯ ಈ ಭಾಗ್ಯ ಅಂತಾ ರಾಜ್ಯಕ್ಕೆ ದೌರ್ಭಾಗ್ಯ ಕೊಟ್ಟರು: ಸಿದ್ದುಗೆ ಬೊಮ್ಮಾಯಿ ಟಾಂಗ್‌

    ಮುರ್ಮು ಅವರು ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಅಲ್ಲ. ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಪ್ರತಿಭಾ ಪಾಟೀಲ್ (Pratibha Patil). ಇದೀಗ ಬ್ಯಾನರ್‌ನಲ್ಲಿ ತಪ್ಪಾಗಿ ಹಾಕಿರುವುದರಿಂದಾಗಿ ಶಾಸಕರಿಗೆ ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಯಾರೆಂದು ಗೊತ್ತಿಲ್ಲ ಎಂದು ಜನರೇ ವ್ಯಂಗ್ಯವಾಡುತ್ತಿದ್ದಾರೆ. ಇದನ್ನೂ ಓದಿ: ಅವರೆಲ್ಲಾ ಸಿಎಂ ಆಗಿದ್ದಾಗ ಬೀಗರ ಊಟ, ಮದುವೆಗೆ ಬರ್ತಿದ್ರು, ಬೊಮ್ಮಾಯಿ ಅಭಿವೃದ್ಧಿ ಕೆಲಸಕ್ಕೆ ಬರ್ತಿದ್ದಾರೆ: ಪ್ರತಾಪ್ ಸಿಂಹ

    Live Tv
    [brid partner=56869869 player=32851 video=960834 autoplay=true]

  • ಜೀವಂತ ಇದ್ದವ್ರನ್ನೇ ತರೋದು ಕಷ್ಟವಿದ್ದು, ನವೀನ್ ಶವ ತರುವುದು ಇನ್ನೂ ಡಿಫಿಕಲ್ಟ್: ಬೆಲ್ಲದ್

    ಜೀವಂತ ಇದ್ದವ್ರನ್ನೇ ತರೋದು ಕಷ್ಟವಿದ್ದು, ನವೀನ್ ಶವ ತರುವುದು ಇನ್ನೂ ಡಿಫಿಕಲ್ಟ್: ಬೆಲ್ಲದ್

    ಧಾರವಾಡ: ಜೀವಂತವಾಗಿರುವವರನ್ನೇ ಭಾರತಕ್ಕೆ ವಾಪಸ್ ಕರೆತರುವುದು ಕಷ್ಟವಿದೆ. ಹೀಗಿರುವಾಗ ನವೀನ್ ಮೃತದೇಹ ತರುವುದು ಇನ್ನೂ ಕಷ್ಟವಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನದಲ್ಲಿ ಶವ ತರಲು ಹೆಚ್ಚು ಜಾಗಬೇಕು. ಶವ ಇರುವ ಜಾಗದಲ್ಲೇ 8 ಜನ ತರಬಹುದು. ಭಾರತ ಸರ್ಕಾರದ ವಿದೇಶಾಂಗ ಇಲಾಖೆ ಎಂಬಿಬಿಎಸ್ ವಿದ್ಯಾರ್ಥಿ ಶವ ತರಲು ಪ್ರಯತ್ನ ಮಾಡುತ್ತಿದೆ. ಸ್ವತಃ ಪ್ರಧಾನಿ ಮೋದಿ ಅವರೇ ಮುತುವರ್ಜಿ ವಹಿಸಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನು ಕರೆ ತರುವ ಪ್ರಯತ್ನ ನಡೆದಿದೆ. ಅಲ್ಲಿ ಯುದ್ದ ಭೂಮಿ ಇದೆ. ಮಾಧ್ಯಮದವರೇ ಅದನ್ನ ತೊರಿಸುತ್ತಿದ್ದಾರೆ. ಸಾಧ್ಯವಾದರೆ ಮೃತದೇಹ ತರುವ ಕೆಲಸ ಆಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಯುದ್ಧ ನಿಲ್ಲಿಸಿ ಅಂತ ಪುಟಿನ್‌ಗೆ ನಾವು ಹೇಳಬಹುದೇ: ಸಿಜೆಐ ಪ್ರಶ್ನೆ

    ಅಲ್ಲಿ ಇದ್ದವರು ಒತ್ತಡದಲ್ಲಿ ಇದ್ದಾರೆ. ರೊಮೇನಿಯಾಗೆ ಬಂದಿದ್ದಾರೆ ಅಂದರೆ ಸೇಫ್ ಆಗಿದ್ದಾರೆ ಎಂದರ್ಥ. ಅಲ್ಲಿ ನಮ್ಮ ವಿದೇಶಾಂಗ ಇಲಾಖೆ ಅವರಿಗೆ ಊಟ ಹಾಗೂ ವಸತಿ ವ್ಯವಸ್ಥೆ ಮಾಡಿದೆ. ಅವರನ್ನು ತರುವ ಕೆಲಸ ಬೇಗ ಆಗಲಿದೆ. ನಮ್ಮ ವಿದ್ಯಾರ್ಥಿಗಳು ಇಷ್ಟು ದೊಡ್ಡ ಪ್ರಮಾಣದಲ್ಲಿ ಅಲ್ಲಿ ಯಾಕೆ ಎಂಬಿಬಿಎಸ್ ಗೆ ಹೋಗುತ್ತಿದ್ದಾರೆ. ಅದಕ್ಕೆ ಕಾರಣ ನಮ್ಮಲ್ಲಿ ವೈದ್ಯಕೀಯ ಕಲಿಯುವುದು ದೊಡ್ಡ ಖರ್ಚು ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ನವೀನ್ ಸಾವು – ಬಿಜೆಪಿ ನಾಯಕರ ವಿರುದ್ಧ ಸ್ಟಾಲಿನ್ ಕಿಡಿ

    ನಮ್ಮಲ್ಲ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಇದೆ. ಇದೊಂದು ಖಾಸಗಿ ಸಂಸ್ಥೆ. ಇವರು ಎಂಬಿಬಿಎಸ್ ಸಿಟ್ ಅಭಾವ ಸೃಷ್ಟಿ ಮಾಡಿದ್ದಾರೆ. ಹೆಚ್ಚು ಮೆಡಿಕಲ್ ಸಿಟ್ ಕೊಡುವಂತೆ ಇಲ್ಲ. ಅದರಲ್ಲೂ ಭ್ರಷ್ಟಾಚಾರ ಇರುತ್ತೆ. ಈ ಎಂಸಿಐ ಮೇಲೆ ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕಿದೆ. ಇದನ್ನ ಬೈಪಾಸ್ ಮಾಡಬೇಕು. ಅದಕ್ಕೆ ಇರುವ ಅಧಿಕಾರ ಕಟ್ ಮಾಡಬೇಕು. ಬೇರೆ ರಾಷ್ಟ್ರ ದಂತೆಯೇ ನಮ್ಮಲ್ಲಿ ಕಡಿಮೆ ಖರ್ಚಿನಲ್ಲಿ ಮೆಡಿಕಲ್ ಯಾಕೆ ಮಾಡಬಾರದು ಎಂದು ಶಾಸಕರು ಪ್ರಶ್ನಿಸಿದರು. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ಮಾಡಿದ್ದ ಆರೋಪ ನಿರಾಕರಿಸಿದ ಭಾರತ!