Tag: ಅರವಿಂದ ಬೆಲ್ಲದ್

  • ಮತಾಂತರ ಯತ್ನ ಪ್ರಕರಣ – ಹಿಂದೂ ಪರ ಸಂಘಟನೆ ಕಾರ್ಯಕರ್ತರ ವಿರುದ್ಧ FIR ದಾಖಲು

    ಮತಾಂತರ ಯತ್ನ ಪ್ರಕರಣ – ಹಿಂದೂ ಪರ ಸಂಘಟನೆ ಕಾರ್ಯಕರ್ತರ ವಿರುದ್ಧ FIR ದಾಖಲು

    ಹುಬ್ಬಳ್ಳಿ: ಮತಾಂತರಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಅಕ್ಟೋಬರ್ 17 ರಂದು ಹುಬ್ಬಳ್ಳಿಯ ನವನಗರದಲ್ಲಿ ಪ್ರತಿಭಟನೆ ನಡೆಸಿದ್ದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

    ಭೈರಿದೇವರಕೊಪ್ಪ ಪ್ರಾರ್ಥನಾ ಮಂದಿರದ ಗಂಗಾ ಎಂಬುವರು 70 ಕ್ಕೂ ಹೆಚ್ಚು ಪ್ರತಿಭಟನಾಕಾರರ ವಿರುದ್ಧ ದೂರು ನೀಡಿದ್ದಾರೆ. 70ಕ್ಕೂ ಹೆಚ್ಚು ಜನರು ಪ್ರಾರ್ಥನಾ ಸ್ಥಳಕ್ಕೆ ಬಂದು ಗಲಾಟೆ ಮಾಡಿದ್ದಾರೆ. ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಆಮಿಷ ಒಡ್ಡಿ ಮತಾಂತರ – ಹುಬ್ಬಳ್ಳಿಯಲ್ಲಿ ರಾತ್ರಿ ಪ್ರತಿಭಟನೆ

    ಘಟನೆ ಹಿನ್ನೆಲೆ: ಮತಾಂತರಕ್ಕೆ ಮುಂದಾಗಿದ್ದ ಆರೋಪದ ಮೇಲೆ ಸುತಗಟ್ಟಿಯ ಸೋಮು ಅವರಾದಿ ಎಂಬ ವ್ಯಕ್ತಿಯನ್ನು ಅಕ್ಟೋಬರ್ 17 ರಂದು ಹಿಂದೂ ಪರ ಸಂಘಟನೆಯವರು ಎಪಿಎಂಸಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದರು. ಈತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳದೇ ಹಾಗೇ ಬಿಟ್ಟು ಕಳುಹಿಸಿದ್ದಾರೆಂದು ಆರೋಪಿಸಿ ಅಂದು ಸಂಜೆ ಹಿಂದೂಪರ ಸಂಘಟನೆಯವರು ನವನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಮತಾಂತರ ಮಾಡುತ್ತಿರುವವರನ್ನು ಒದ್ದು ಓಡಿಸಬೇಕು: ಪ್ರಮೋದ್ ಮುತಾಲಿಕ್

    ಶಾಸಕ ಅರವಿಂದ ಬೆಲ್ಲದ್ ಅವರೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಬಳಿಕ ಪೊಲೀಸರು ಆರೋಪಿ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದರು. ಆದರೆ ಆರೋಪಿಯನ್ನು ಬಂಧಿಸದ ಪರಿಣಾಮ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಸ್ವತಃ ಪೊಲೀಸ್ ಆಯುಕ್ತರು ಸ್ಥಳಕ್ಕೆ ಬಂದು ಆರೋಪಿಯನ್ನು ಬಂಧಿಸುವ ಭರವಸೆ ನೀಡಿದ್ದರು. ಪ್ರತಿಭಟನೆ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ನಿಂದಿಸಿದ್ದಾರೆಂದು ಆರೋಪಿಸಿ ಡಿಸಿಪಿ ಕೆ. ರಾಮರಾಜನ್ ಎಪಿಎಂಸಿ- ನವನಗರ ಠಾಣೆಯಲ್ಲಿ ಅಶೋಕ್ ಅನ್ವೇಕರ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದೀಗ ಮತ್ತೊಂದು ಪ್ರಕರಣ ಹಿಂದೂ ಪರ ಕಾರ್ಯಕರ್ತರ ಮೇಲೆ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

  • ಕಾಂಗ್ರೆಸ್ ಸೇರಲ್ಲ, ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಾನೂನು ಕ್ರಮ: ಬೆಲ್ಲದ್

    ಕಾಂಗ್ರೆಸ್ ಸೇರಲ್ಲ, ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಾನೂನು ಕ್ರಮ: ಬೆಲ್ಲದ್

    ಹುಬ್ಬಳ್ಳಿ: ಬಿಜೆಪಿಯ ಕೆಲ ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ ಎನ್ನುವ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಪೂರಕವಾಗಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ನಾನು ಕಾಂಗ್ರೆಸ್ ಸೇರಲ್ಲ. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಬೆಲ್ಲದ್ ಸ್ಪಷ್ಟನೆ ನೀಡಿದ್ದಾರೆ.

    ಬಿಜೆಪಿ ಪಕ್ಷದಿಂದ ಸಿಎಂ ಅಭ್ಯರ್ಥಿಯಾಗಿ ಬಿಂಬಿತವಾಗಿದ್ದ ಅರವಿಂದ್ ಬೆಲ್ಲದ್‍ಗೆ ಸಿಎಂ ಸ್ಥಾನ ಕೈತಪ್ಪಿ ಸಚಿವ ಸ್ಥಾನವೂ ಸಿಗದ ಪರಿಣಾಮ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ, ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಬೆಲ್ಲದ್, ನಾನು ಕಾಂಗ್ರೆಸ್ ಸೇರುತ್ತೇನೆ ಎಂಬುದು ಸುಳ್ಳು ಸುದ್ದಿ. ನಾನು ಪಕ್ಷ ತೊರೆಯುತ್ತೆನೆಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸುವ ಪ್ರಯತ್ನ ನಡೆಯುತ್ತಿದೆ. ಸುಳ್ಳುಗಳನ್ನೇ ನಿಜವೆಂದು ಪ್ರತಿಷ್ಠಾಪಿಸುವ ಕಾಲಘಟ್ಟದಲ್ಲಿ ನಾವು ಇದ್ದೇವೆ. ಇಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿದ್ಧತೆ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿ ಹಿಂದೊಮ್ಮೆ ಕಾಂಗ್ರೆಸ್ ಕದ ತಟ್ಟಿದ್ದರು: ವಿನಯ್ ಕುಮಾರ್ ಸೊರಕೆ

    ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಆದರೆ, ನಾನು ಬಿಜೆಪಿ ನಿಷ್ಠಾವಂತ ಕಾರ್ಯಕರ್ತ, ಆರ್‌ಎಸ್‌ಎಸ್‌ ಸೇರಿ ಪರಿವಾರದ ಬಗೆಗಿನ ನನ್ನ ನಿಷ್ಠೆ ಅಚಲವಾಗಿದ್ದು, ನಾನೆಂದೂ ಭಾರತೀಯ ಜನತಾ ಪಕ್ಷವನ್ನು ಬಿಟ್ಟು ಎಲ್ಲಿಯೂ ಹೋಗುವುದಿಲ್ಲವೆಂದು ಅರವಿಂದ್ ಬೆಲ್ಲದ್ ತಮ್ಮ ನಿಲುವನ್ನು ಪ್ರಟಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನ ಹಲವು ಶಾಸಕರು ಬಿಜೆಪಿಗೆ ಬರ್ತಾರೆ: ಬಿಎಸ್‍ವೈ

  • ನಿರಾಣಿ ಬೆನ್ನಲ್ಲೇ ಅರವಿಂದ ಬೆಲ್ಲದ್ ವಾರಾಣಸಿ ಭೇಟಿ

    ನಿರಾಣಿ ಬೆನ್ನಲ್ಲೇ ಅರವಿಂದ ಬೆಲ್ಲದ್ ವಾರಾಣಸಿ ಭೇಟಿ

    ಬೆಂಗಳೂರು: ಜುಲೈ 26ಕ್ಕೆ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನಿಡುತ್ತಿದ್ದಾರೆ ಎಂದು ಸುದ್ದಿ ಹೊರಬಿದ್ದ ಬೆನ್ನಲ್ಲೇ ಇದೀಗ ಸಿಎಂ ಆಕಾಂಕ್ಷಿಗಳು ಕ್ಷೇತ್ರ ಭೇಟಿಯಲ್ಲಿ ಬ್ಯುಸಿಯಾಗಿದ್ದಾರೆ.

    ಹೌದು. ಇತ್ತೀಚೆಗಷ್ಟೇ ಗಣಿ ಸಚಿವ ಮುರುಗೇಶ್ ನಿರಾಣಿಯವರು ವಾರಾಣಸಿಗೆ ಹೋಗಿ ಬಂದಿದ್ದರು. ಇದೀಗ ಈ ಬೆನ್ನಲ್ಲೇ ಶಾಸಕ ಅರವಿಂದ್ ಬೆಲ್ಲದ್ ಅವರು ವಾರಾಣಸಿಗೆ ಭೇಟಿ ನೀಡಿದ್ದಾರೆ.

    ಸಿಎಂ ನಿರ್ಗಮನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಮುಖ್ಯಮಂತ್ರಿ ಆಗಿ ಯಡಿಯೂರಪ್ಪ ಇನ್ನು 6 ದಿನ ಮಾತ್ರ ಇರಲಿದ್ದಾರೆ. ಇತ್ತ ಸಿಎಂ ಹುದ್ದೆ ಆಕಾಂಕ್ಷಿಗಳ ಪಟ್ಟಿಯಲ್ಲಿ ಬೆಲ್ಲದ್ ಹೆಸರು ಕುಡ ಕೇಳಿ ಬಂದಿದೆ. ಹೀಗಾಗಿ ಬೆಲ್ಲದ್ ಕಾಶಿಯಾತ್ರೆ ಕೈಗೊಂಡಿದ್ದಾರೆ. ಒಟ್ಟಿನಲ್ಲಿ ಇದೀಗ ನಿರಾಣಿ ಬಳಿಕ ಬೆಲ್ಲದ್ ‘ಕಾಶಿ’ ಯಾತ್ರೆ ಮಾಡಿರುವುದು ಕುತೂಹಲ ಹುಟ್ಟಿಸಿದೆ. ಇದನ್ನೂ ಓದಿ: ಯಡಿಯೂರಪ್ಪ ಸರ್ಕಾರವನ್ನು ಕೆಳಗಿಳಿಸಿದರೆ ಬಿಜೆಪಿ ಸರ್ವನಾಶ: ಶ್ರೀ ಕಾರದವೀರಬಸವ ಸ್ವಾಮೀಜಿ

    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹಾ ನಿರ್ಗಮನಕ್ಕೆ ವೇದಿಕೆ ಸಜ್ಜಾಗಿದೆ. ಮುಂದಿನ ಸೋಮವಾರದಿಂದ ಇದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ಶುರುವಾಗೋದು ನಿಶ್ಚಿತವಾಗುತ್ತಿದ್ದಂತೆ ಮಠಾಧೀಶರು ಎಂಟ್ರಿಯಾಗಿದ್ದಾರೆ. 35ಕ್ಕೂ ಹೆಚ್ಚು ಸ್ವಾಮೀಜಿಗಳು ಸಿಎಂ ಭೇಟಿಯಾಗಿ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡದಂತೆ ಒತ್ತಡ ಹೇರಿದ್ದಾರೆ.

    ಲಿಂಗಾಯತ ಪ್ರಬಲ ನಾಯಕನನ್ನು ಅಧಿಕಾರದಿಂದ ಕೆಳಗಿಳಿಸಿದ್ರೆ, ಪಕ್ಷ ಸರ್ವನಾಶ ಆಗೋದು ಖಚಿತ ಅಂತ ಹೈಕಮಾಂಡ್‍ಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಇದರ ನಡುವೆ ಯಡಿಯೂರಪ್ಪ ಪರವಾಗಿ ಒಂದೆರಡು ದಿನಗಳಲ್ಲಿ 500ಕ್ಕೂ ಹೆಚ್ಚು ಮಠಾಧೀಶರು ಬೆಂಗಳೂರಲ್ಲಿ ಸಭೆ ಸೇರಲು ತೀರ್ಮಾನಿಸಿದ್ದಾರೆ.

  • ಸಿಎಂ ಬದಲಾವಣೆ ವಿಚಾರ ಎದೆ ಮೇಲೆ ಬೋರ್ಡ್ ಹಾಕಿಕೊಂಡು ಓಡಾಡುವ ಸ್ಥಿತಿ ಬಂದಿದೆ: ಶೆಟ್ಟರ್

    ಸಿಎಂ ಬದಲಾವಣೆ ವಿಚಾರ ಎದೆ ಮೇಲೆ ಬೋರ್ಡ್ ಹಾಕಿಕೊಂಡು ಓಡಾಡುವ ಸ್ಥಿತಿ ಬಂದಿದೆ: ಶೆಟ್ಟರ್

    ಹುಬ್ಬಳ್ಳಿ: ರಾಜ್ಯದಲ್ಲಿ ಒಂದೆಡೆ ನಾಯಕತ್ವ ಬದಲಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಇನ್ನೊಂದೆಡೆ ಸಿಎಂ ಬದಲಾಣೆ ಇಲ್ಲವೆಂದು ಸಚಿವರು ಮತ್ತು ಹೈಕಮಾಂಡ್ ಸ್ಪಷ್ಟನೆ ನೀಡಿದೆ. ಆದರು ಸಿಎಂ ಬದಲಾವಣೆ ಪ್ರಶ್ನೆ ಪದೇ ಪದೇ ಕೇಳಿ ಬರುತ್ತಿದೆ. ಹಾಗಾಗಿ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಎದೆ ಮೇಲೆ ಬೋರ್ಡ್ ಹಾಕಿಕೊಂಡು ಓಡಾಡುವ ಸ್ಥಿತಿ ಬಂದಿದೆ ಎಂದು ಸಚಿವರಾದ ಜಗದೀಶ್ ಶೆಟ್ಟರ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ್ ಸಿಎಂ ಆಗುವ ವಿಚಾರವಾಗಿ ನಾನು ಏನು ಹೇಳುವುದಿಲ್ಲ. ಹಾಗೆ ಸಿಎಂ ಸ್ಥಾನ ಬದಲಾವಣೆಗೆ ಬಗ್ಗೆಯು ನಾನು ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಅಂತಾ ಬೋರ್ಡ್ ಹಾಕಿಕೊಂಡು ಅಡ್ಡಾಡುವ ಪರಿಸ್ಥಿತಿ ಬಂದಿದೆ. ಈ ವಿಷಯವಾಗಿ ಪಕ್ಷದಲ್ಲಿ ಯಾರಾದರು ಕೆಮ್ಮಿದ್ರೆ ಅದಕ್ಕೆ ನಾನು ಹೊಣೆ ಆಗಬೇಕಾದ ಪರಿಸ್ಥಿತಿ ಬಂದಿದೆ ಎಂದರು. ಇದನ್ನೂ ಓದಿ: ಕೊರೊನಾ 3ನೇ ಅಲೆಗೆ ಸಿದ್ಧತೆ ಮಾಡಿಕೊಳ್ಳಿ: ಸಿಎಂಗೆ ವಿನಯ್ ಗುರೂಜಿ ಸಲಹೆ

    ಅರವಿಂದ ಬೆಲ್ಲದ್ ಮುಂದಿನ ಸಿಎಂ ವಿಚಾರ ರಾಜ್ಯಮಟ್ಟದಲ್ಲಿ ಚರ್ಚೆಯಾಗಿದೆ. ಯಾರ ಯಾರ ಹಣೆಯಲ್ಲಿ ಏನು ಇರುತ್ತದೋ ಅದು ಆಗುತ್ತದೆ. ಹೈಕಮಾಂಡ್ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಿದೆ. ಅರವಿಂದ ಬೆಲ್ಲದ್ ನಿಮ್ಮನ್ನು ಓವರ್ ಟೇಕ್ ಮಾಡುತ್ತಿದ್ದಾರ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶೆಟ್ಟರ್, ಬೆಲ್ಲದ್ ಅವರ ಸ್ವಭಾವ ಆಗಿದೆ ಎನ್ನುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ಯಡಿಯೂರಪ್ಪನವರಿಗೆ ಆತ್ಮವಂಚನೆಯಾಗಿದೆ: ಮಾಜಿ ಶಾಸಕ ಚಂದ್ರಕಾಂತ್ ಬೆಲ್ಲದ್

    ಯಡಿಯೂರಪ್ಪನವರಿಗೆ ಆತ್ಮವಂಚನೆಯಾಗಿದೆ: ಮಾಜಿ ಶಾಸಕ ಚಂದ್ರಕಾಂತ್ ಬೆಲ್ಲದ್

    ಧಾರವಾಡ: ಯಡಿಯೂರಪ್ಪನವರು ಹೈಕಮಾಂಡ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೇಳಿದರೆ ನೀಡುತ್ತೇನೆ ಎಂದು ಅವರೇ ಹೇಳಿಕೊಂಡಿದ್ದಾರೆ. ಪಕ್ಷ ಇಷ್ಟು ದಿನ ಅವಕಾಶ ಮಾಡಿ ಕೊಟ್ಟಿದೆ. ಅದನ್ನು ಅವರು ತಿಳಿದುಕೊಂಡು ನ್ಯಾಯವಾಗಿ ಜನಪ್ರತಿನಿಧಿಯಾಗಿ ನಡೆದುಕೊಳ್ಳಬೇಕು. ಅವರಿಗೆ ಆತ್ಮವಂಚನೆಯಾಗಿದೆ ಎಂಬಂತೆ ನನಗೆ ಅನಿಸುತ್ತಿದೆ ಎಂದು ಮಾಜಿ ಶಾಸಕ ಚಂದ್ರಕಾಂತ್ ಬೆಲ್ಲದ್ ಹೇಳಿಕೆ ನೀಡಿದ್ದಾರೆ.

    ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಂದ್ರಕಾಂತ್ ಬೆಲ್ಲದ್, ರಾಜೀನಾಮೆ ಕೊಡುವುದು, ಬಿಡುವುದು ಅದು ಅವರಿಗೆ ಬಿಟ್ಟ ವಿಚಾರ, ನ್ಯಾಯಯುತವಾಗಿ ನಡೆದುಕೊಳ್ಳುವುದು ಅವರ ಧರ್ಮ. ನನಗೆ ಆತ್ಮವಂಚನೆಯಾದರೆ ನಾನು ನಿರ್ಣಯ ತೆಗೆದುಕೊಳ್ಳಬೇಕು. ಯಡಿಯೂರಪ್ಪನವರಿಗೆ ಆತ್ಮವಂಚನೆಯಾಗಿದೆ ಎಂದು ನನಗೆ ಅನಿಸುತ್ತಿದೆ ಹಾಗಾಗಿ ಅವರು ರಾಜೀನಾಮೆ ಬಗ್ಗೆ ಮಾತನಾಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿಎಂ ವಿರುದ್ಧ ಸಿಪಿವೈ, ಬೆಲ್ಲದ್, ಯತ್ನಾಳ್ ಚಾರ್ಜ್‍ಶೀಟ್ ಏನು?

    ನಾನು ಸಚಿವನಾಗಬೇಕು ಎಂದು ರಾಜಕೀಯಕ್ಕೆ ಬಂದಿರಲಿಲ್ಲ, ಆದರೆ ನನ್ನನ್ನು ಸಚಿವನಾಗಿ ಮಾಡಬೇಕಾಗಿದ್ದು ಯಡಿಯೂರಪ್ಪನವರ ಕರ್ತವ್ಯವಾಗಿತ್ತು. ಅದನ್ನು ಅವರು ಮಾಡಲಿಲ್ಲ, ಸದ್ಯ ನಾನು ರಾಜಕೀಯ ಬಿಟ್ಟಿದ್ದೇನೆ. ಈಗ ನನ್ನ ಮಗ ರಾಜಕೀಯ ಪ್ರವೇಶ ಮಾಡಿದ್ದಾನೆ. ಜನ ಅವನನ್ನು ಆಯ್ಕೆ ಮಾಡಿ ಕರೆತಂದಿದ್ದಾರೆ. ರಾಜ್ಯದ ಜನರಿಗೆ ಅವನ ಬಗ್ಗೆ ಸಾಕಷ್ಟು ಗೊತ್ತಿದೆ, ರಾಷ್ಟ್ರದಲ್ಲೂ ಗೊತ್ತಿದೆ. ಅರವಿಂದ ಬೆಲ್ಲದ್ ನನಗೆ ಒಬ್ಬ ಒಳ್ಳೆಯ ಮಗ ಎಂದು ಅಭಿಪ್ರಾಯಪಟ್ಟರು.

  • ಬಿಜೆಪಿಗೆ ಬಂದ ಶಾಸಕರು ಸೊಸೆಯಂದಿರಿದ್ದಂತೆ, ಅವರು ಚೆನ್ನಾಗಿದ್ರೆ ಪಕ್ಷ ಚೆನ್ನಾಗಿರುತ್ತೆ: ಬೆಲ್ಲದ್

    ಬಿಜೆಪಿಗೆ ಬಂದ ಶಾಸಕರು ಸೊಸೆಯಂದಿರಿದ್ದಂತೆ, ಅವರು ಚೆನ್ನಾಗಿದ್ರೆ ಪಕ್ಷ ಚೆನ್ನಾಗಿರುತ್ತೆ: ಬೆಲ್ಲದ್

    ಹುಬ್ಬಳ್ಳಿ: ಬಿಜೆಪಿಯ 105 ಶಾಸಕರು ಹಾಗೂ ಬೇರೆ ಪಕ್ಷದ 17 ಶಾಸಕರಿಂದಲೇ ಇಂದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿದೆ. ಬಿಜೆಪಿಗೆ ಬಂದ ಶಾಸಕರು ಹೊಸದಾಗಿ ಬಂದ ಸೊಸೆಯಂದಿರು ಇದ್ದಂತೆ. ಅವರು ಚೆನ್ನಾಗಿದ್ದರೆ ಮನೆ ಚೆನ್ನಾಗಿರುತ್ತೆ. ಅವರನ್ನು ಚೆನ್ನಾಗಿ ನೋಡಿಕೊಳ್ಳುವುದು ಅಹ ಧರ್ಮವಾಗಿದೆ ಎಂದು ಹೇಳುವ ಮೂಲಕ ವಲಸಿಗ ಶಾಸಕರಿಗೆ ಸೂಕ್ತ ಸ್ಥಾನಮಾನ ಕೊಡುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ ಅಭಿಪ್ರಾಯಪಟ್ಟಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕರಾದವರಿಗೆ ಸಚಿವರಾಗಬೇಕೆಂಬ ಆಸೆ ಇದ್ದೇ ಇರುತ್ತದೆ. ಹೀಗಾಗಿ ಎಲ್ಲರೂ ಸಚಿವ ಸ್ಥಾನಕ್ಕಾಗಿ ಪೈಪೋಟಿ ಮಾಡುವರೇ. ಸಚಿವ ಸಂಪುಟ ವಿಸ್ತರಣೆ ವಿಚಾರ ಬಂದಾಗ ಈ ರೀತಿ ಆಗುವುದು ಸಹಜ. ಸಚಿವ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ತಿಕ್ಕಾಟ ಇಲ್ಲ, ಮೂಲ ಬಿಜೆಪಿ ಮತ್ತು ವಲಸಿಗರ ನಡುವೆ ಭಿನ್ನಾಭಿಪ್ರಾಯವಿಲ್ಲ. ಸಚಿವ ಸ್ಥಾನಕ್ಕಾಗಿ ಬೇರೆ ಬೇರೆ ರೀತಿಯ ಸ್ವರ ಬರುವುದು ಸಹಜ ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

    ಸಚಿವ ಸ್ಥಾನಕ್ಕಾಗಿ ಎಲ್ಲ ಶಾಸಕರಲ್ಲೂ ಆಸೆ ಇರುತ್ತದೆ. ಆದರೆ ನಮ್ಮ ಪಕ್ಷದಲ್ಲಿ ಲಾಬಿ ಮಾಡಬೇಕು ಎನ್ನುವ ಪರಿಸ್ಥಿತಿ ಇಲ್ಲ. ಪಕ್ಷದ ಹಿರಿಯರು ರಾಜ್ಯದ ಹಿತ ಕಾಪಾಡುವಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

    ಕನ್ನಡ ಪರ ಸಂಘಟನೆ ಕಾರ್ಯಕರ್ತರು ವಸೂಲಿಗೆ ಇಳಿದಿದ್ದಾರೆ ಎಂಬ ಹೇಳಿಗೆ ನಾನು ಈಗಲೂ ಬದ್ಧ. ಅದನ್ನು ನಾನು ಸಾಬೀತು ಮಾಡುವ ಅವಶ್ಯಕತೆ ಇಲ್ಲ. ಅಂತವರು ಯಾರು ಎಂದು ಎಲ್ಲರಿಗೂ ಗೊತ್ತಿದೆ ಎಂದರು.

  • ಲಿಂಗಾಯತ ಭವನದಲ್ಲಿದ್ದ ಶಾಸಕ ಬೆಲ್ಲದ್ ತಂದೆ-ತಾಯಿ, ಕುಟುಂಬಸ್ಥರ ಹೆಸರು ಔಟ್!

    ಲಿಂಗಾಯತ ಭವನದಲ್ಲಿದ್ದ ಶಾಸಕ ಬೆಲ್ಲದ್ ತಂದೆ-ತಾಯಿ, ಕುಟುಂಬಸ್ಥರ ಹೆಸರು ಔಟ್!

    ಧಾರವಾಡ: ನಗರದ ಸಪ್ತಾಪೂರ ಬಳಿಯ ಲಿಂಗಾಯತ ಭವನಕ್ಕೆ ಶಾಸಕ ಅರವಿಂದ ಬೆಲ್ಲದ್ ಅವರ ತಂದೆ ತಾಯಿ ಹಾಗೂ ಚಿಕ್ಕಪ್ಪ ಚಿಕ್ಕಮ್ಮರ ಹೆಸರನ್ನ ಇಡಲಾಗಿತ್ತು. ಭವನದ ಹೊರಗೆ ಲೀಲಾವತಿ ಚಂದ್ರಕಾಂತ ಬೆಲ್ಲದ್ ಹಾಗೂ ಭವನದ ಒಳಗೆ ಶಿವಪುತ್ರ ಅವರ ಹೆಸರನ್ನ ಹಾಕಲಾಗಿತ್ತು. ಇದು ವಿವಾದಕ್ಕೆ ಎಡೆ ಮಾಡಿದ್ದರಿಂದ ಸದ್ಯ ಹೆಸರುಗಳನ್ನ ತೆಗೆಯಲಾಗಿದೆ.

    ಶಾಸಕ ಬೆಲ್ಲದ ಅವರ ಚಿಕ್ಕಪ್ಪ ಶಿವಪ್ಪ ಎಂಬವರು ಲಿಂಗಾಯತ ಭವನದ ಅಧ್ಯಕ್ಷರಾಗಿದ್ದರು. ಇದೀಗ ಲಿಂಗಾಯತ ಭವನದ ಕಾರ್ಯಕಾರಿಣಿ ಸದಸ್ಯರು ನಿರ್ಣಯದಂತೆ ಶಿವಣ್ಣ ಬೆಲ್ಲದ ಅವರನ್ನ ಅಧ್ಯಕ್ಷ ಸ್ಥಾನದಿಂದ ತೆಗೆಯಲಾಗಿದೆ. ಇಂದು ನಾನು ಒಬ್ಬನೇ ಇರುವುದರಿಂದ ನನ್ನನ್ನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ, ಆದರೆ ನಾವು ಇದರ ವಿರುದ್ಧ ಕೋರ್ಟ್ ಮೇಟ್ಟಲೆರುತ್ತೆನೆ ಎಂದು ಶಿವಣ್ಣ ಬೆಲ್ಲದ ಹೇಳಿದ್ದಾರೆ.

    ಇದನ್ನೂ ಓದಿ: ಲಿಂಗಾಯತ ಭವನದಲ್ಲಿ ಶಾಸಕ ಬೆಲ್ಲದ್ ಕಾರುಬಾರು: ಒಳಗೂ-ಹೊರಗೂ ಕುಟುಂಬಸ್ಥರದ್ದೇ ಹೆಸರು

    ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಅವರನ್ನ ಪ್ರಭಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ವೀರಶೈವ ಲಿಂಗಾಯತ ಸಮಾಜದ ರಾಷ್ಟ್ರೀಯ ಅಧ್ಯಕ್ಷ ಶಾಮನೂರ ಶಿವಶಂಕರಪ್ಪ ಬೆಲ್ಲದ ಅವರ ಕುಟುಂಬದ 30 ಸದಸ್ಯರ ಸದಸ್ಯತ್ವವನ್ನ ರದ್ದು ಮಾಡಿದ್ದಾರೆ. ಅದರಲ್ಲಿ ಅಧ್ಯಕ್ಷರಾಗಿದ್ದ ಶಿವಣ್ಣ ಬೆಲ್ಲದ ಅವರ ಸದಸ್ಯತ್ವ ಕೂಡಾ ರದ್ದು ಮಾಡಿದ್ದಾರೆ. ಸದ್ಯ ಶಾಸಕ ಬೆಲ್ಲದ ಅವರ ತಂದೆ ತಾಯಿಯ ಹೆಸರನ್ನ ಭವನದಿಂದ ತೆಗೆದು ಹಾಕಲಾಗಿದ್ದು, ಮುಂದೆ ಈ ಭವನಕ್ಕೆ ವೀರಶೈವ ಲಿಂಗಾಯತ ಭವನ ಎಂದು ಹೆಸರು ಇಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

    ಒಟ್ಟಿನಲ್ಲಿ ತೆರೆಮೆರೆಯಲ್ಲಿ ಬೆಲ್ಲದ ಅವರ ಹೆಸರನ್ನ ಭವನದಿಂದ ತೆಗೆದು ಹಾಕಲಾಗಿದೆ. ಆದರೆ ಮುಂದೆ ಈ ಭವನದ ವಿವಾದ ಇಷ್ಟಕ್ಕೆ ಮುಗಿದಿಲ್ಲ ಎಂಬ ಸುಳಿವು ಕುರ್ಚಿಯಿಂದ ಇಳಿದ ಅಧ್ಯಕ್ಷರು ಕೊಟ್ಟಿದ್ದಾರೆ. ಸದ್ಯ ಶಾಸಕ ಬೆಲ್ಲದ್ ಕೂಡಾ ವಿದೇಶ ಪ್ರವಾಸದಲ್ಲಿದ್ದು, ಅವರು ಬಂದ ಮೇಲೆ ಏನು ಬದಲಾವಣೆ ಆಗುತ್ತೋ ನೋಡಬೇಕಿದೆ.

    ಇದನ್ನೂ ಓದಿ: ಲಂಡನ್‍ಗೆ ಕಾರಲ್ಲೇ ಟೂರ್ ಹೊರಟ ಧಾರವಾಡ ಶಾಸಕ!

     

     

  • ಲಂಡನ್‍ಗೆ ಕಾರಲ್ಲೇ ಟೂರ್ ಹೊರಟ ಧಾರವಾಡ ಶಾಸಕ!

    ಲಂಡನ್‍ಗೆ ಕಾರಲ್ಲೇ ಟೂರ್ ಹೊರಟ ಧಾರವಾಡ ಶಾಸಕ!

    ಧಾರವಾಡ: ರಾಜ್ಯದಲ್ಲಿ ಈ ಬಾರಿ ಭೀಕರ ಬರಗಾಲ. ಅದೇ ರೀತಿ ಧಾರವಾಡ ಜಿಲ್ಲೆಗೂ ಅದು ಹೊರತಾಗಿಲ್ಲ. ಆದ್ರೆ ಈ ಮಧ್ಯೆ ನಮ್ಮ ಜನಪ್ರತಿನಿಧಿಗಳು ಜನರ ಸೇವೆ ಮಾಡುವುದನ್ನ ಬಿಟ್ಟು ಪ್ರವಾಸಕ್ಕೆ ಹೊರಟಿದ್ದಾರೆ.


    ಹೌದು. ಜಿಲ್ಲೆಯ ಶಾಸಕ ಅರವಿಂದ ಬೆಲ್ಲದ್ ತಮ್ಮ ಕ್ಷೇತ್ರದ ಬಗ್ಗೆ ವಿಚಾರ ಮಾಡೊದನ್ನ ಬಿಟ್ಟು ಯುರೋಪ್ ಪ್ರವಾಸಕ್ಕೆ ಹೋಗಿದ್ದಾರೆ. ಇದೀಗ ಜನರ ಕೆಂಗಣ್ಣಿಗೂ ಗುರಿಯಾಗುವಂತೆ ಆಗಿದೆ. ಆದ್ರೆ ಅರವಿಂದ್ ಬೆಲ್ಲದ್ ಪುತ್ರ ವಿದೇಶದಲ್ಲಿ ಓದುತ್ತಿದ್ದು ಅವರ ಫೀಸ್ ಕಟ್ಟಲು ಹೋಗಿದ್ದಾರೆ ಎನ್ನಲಾಗಿದೆ.

    ಶಾಸಕರು ತಮ್ಮ ರೆಂಜ್ ರೋವರ್ ಕಾರಿನಲ್ಲಿ ಧಾರವಾಡದ ಶಾಲ್ಮಲಾ ನದಿ ತೀರದಿಂದ ಥೇಮ್ಸ್ ನದಿವರೆಗೆ 40 ದಿನದ ಲಂಡನ್ ಟೂರ್ ಆರಂಭಿಸಿದ್ದಾರೆ. ಬರ ಪರಿಸ್ಥಿತಿಯಲ್ಲಿ ಜನರ ಸಮಸ್ಯೆ ಕೇಳಿ ಅಂತಾ ಪ್ರಧಾನಿ ಮೋದಿ ಹೇಳಿದ್ರೆ, ಅವರದೇ ಪಕ್ಷದ ಶಾಸಕರೊಬ್ಬರು ಜಾಮ್‍ಜೂಮ್ ಅಂತಾ ಟೂರ್ ಮಾಡ್ತಿದ್ದಾರೆ. ಇವರು ಇಲ್ಲಿವರೆಗೂ ಸುಮಾರು 130 ಕ್ಕೂ ಹೆಚ್ಚು ಬಾರಿ ವ್ಯವಹಾರ ಉದ್ದೇಶದಿಂದ ವಿದೇಶ ಪ್ರವಾಸ ಕೈಗೊಂಡಿದ್ದಾರೆ ಅಂತ ಜೆಡಿಎಸ್ ಮುಖಂಡ ಗುರುರಾಜ್ ಹುಣಶಿಮರದ ಆರೋಪಿಸಿದ್ದಾರೆ.

    ಧಾರವಾಡ ಪಶ್ಚಿಮದಿಂದ ಆರಿಸಿ ಬಂದ ಇವರು ಹುಬ್ಬಳ್ಳಿಯಲ್ಲಿ ವಾಸ ಮಾಡಿಕೊಂಡು ಜನರ ಕಷ್ಟ ಕೇಳೋದನ್ನೇ ಮರೆತಿದ್ದಾರೆ ಅಂತಾ ಜನ ಕಿಡಿಕಾರಿದ್ದಾರೆ. ಒಟ್ಟಿನಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ಈ ರೀತಿ ಪ್ರವಾಸ ಮಾಡ್ತಿರೋದು ನಿಜಕ್ಕೂ ವಿಷಾದನೀಯ.