Tag: ಅರುಣ್ ಕುಮಾರ್

  • ಚೆನ್ನಯ್ಯನಿಗೆ ಮಂಪರು ಪರೀಕ್ಷೆ ಮೊದಲೇ ನಡೆಸಿದ್ದರೆ ಗುಂಡಿ ತೋಡುವ ನಾಟಕವೇ ನಡೆಯುತ್ತಿರಲಿಲ್ಲ!

    ಚೆನ್ನಯ್ಯನಿಗೆ ಮಂಪರು ಪರೀಕ್ಷೆ ಮೊದಲೇ ನಡೆಸಿದ್ದರೆ ಗುಂಡಿ ತೋಡುವ ನಾಟಕವೇ ನಡೆಯುತ್ತಿರಲಿಲ್ಲ!

    – ಮಂಪರು ಪರೀಕ್ಷೆ ನಡೆಸಲು ಅರ್ಜಿ ಸಲ್ಲಿಸಿದ್ದ ಪೊಲೀಸರು
    – ದಕ್ಷಿಣ ಕನ್ನಡ ಪೊಲೀಸರನ್ನು ತೇಜೋವಧೆ ಮಾಡಿತ್ತು ಬುರುಡೆ ಗ್ಯಾಂಗ್‌

    ಮಂಗಳೂರು: ಬುರುಡೆ ಗ್ಯಾಂಗಿನ ಪಾತ್ರಧಾರಿ ಚಿನ್ನಯ್ಯನಿಗೆ (Chinnayya) ಮೊದಲೇ ಮಂಪರು ಪರೀಕ್ಷೆ ಮಾಡಿದ್ದರೆ ಒಂದು ತಿಂಗಳ ಕಾಲ ಧರ್ಮಸ್ಥಳದಲ್ಲಿ (Dharmasthala) ಈ ಬೃಹತ್‌ ನಾಟಕವೇ ನಡೆಯುತ್ತಿರಲಿಲ್ಲ ಎಂಬ ಮಾತುಗಳು ಈಗ ಕೇಳಿ ಬರುತ್ತಿವೆ.

    ಹೌದು. ಪಾಪ ಪ್ರಜ್ಞೆ ಕಾಡುತ್ತಿರುವ ಹಿನ್ನೆಲೆಯಲ್ಲಿ ನಾನು ಸತ್ಯ ಹೇಳಲು ಮುಂದೆ ಬಂದಿದ್ದೇನೆ ಎಂದಾಗಲೇ ದಕ್ಷಿಣ ಕನ್ನಡದ ಜಿಲ್ಲಾ ಎಸ್ಪಿ ಡಾ. ಅರುಣ್ (Dr. Arun) ಅವರು ಚೆನ್ನಯ್ಯನಿಗೆ ಮಂಪರು ಪರೀಕ್ಷೆ ಮಾಡಲು ಮುಂದಾಗಿದ್ದರು.

     

    ಚೆನ್ನಯ್ಯನ ಬಗ್ಗೆ ಅರುಣ್‌ ಕುಮಾರ್‌ ಮತ್ತು ದಕ್ಷಿಣ ಕನ್ನಡದ ಪೊಲೀಸರಿಗೆ ಕೆಲ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಮಂಪರು ಪರೀಕ್ಷೆ ಮಾಡಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ತಮಿಳುನಾಡಿನಲ್ಲಿ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆಸಿದ್ದರು: ಸತ್ಯ ಕಕ್ಕಿದ ಚಿನ್ನಯ್ಯ

    ಪೊಲೀಸರು ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಅರುಣ್‌ ಕುಮಾರ್‌ ಮತ್ತು ದಕ್ಷಿಣ ಕನ್ನಡದ ಪೊಲೀಸರ ವಿರುದ್ಧವೇ ಈ ಬುರುಡೆ ಗ್ಯಾಂಗ್‌ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಲು ಆರಂಭಿಸಿತ್ತು. ಸಾಕ್ಷಿಯನ್ನು ಕೊಲ್ಲಲು ಮುಂದಾಗಿದ್ದಾರೆ. ವ್ಯವಸ್ಥೆಯೇ ಷಡ್ಯಂತ್ರದ ಭಾಗವಾಗಿದೆ ಎಂದು ದೂರಲು ಆರಂಭಿಸಿತ್ತು. ಈ ಮಧ್ಯೆ ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಆದೇಶಿಸಿತ್ತು.

     

    ಚೆನ್ನಯ್ಯ ತೋರಿಸಿದ 11ನೇ ಜಾಗದ ಮೇಲ್ಭಾಗದ ಗುಡ್ಡದಲ್ಲಿ ಒಂದು ಕಳೇಬರ ಪತ್ತೆಯಾಗಿತ್ತು. ಈ ಕಳೇಬರ ಪತ್ತೆಯಾದ ನಂತರ ಈ ಪ್ರಕರಣವನ್ನು ಎಸ್‌ಐಟಿಗೆ ವರ್ಗಾಯಿಸಬೇಕಾ? ಬೇಡವೇ ಎಂಬುದರ ಬಗ್ಗೆ ದಕ್ಷಿಣ ಕನ್ನಡ ಪೊಲೀಸರಿಗೆ ಮತ್ತು ಎಸ್‌ಐಟಿ ಪೊಲೀಸರ ಮಧ್ಯೆ ಸಣ್ಣ ಗೊಂದಲ ಏರ್ಪಟ್ಟಿತ್ತು. ಇದನ್ನೂ ಓದಿ: ನಂಗೆ ಆರೋಗ್ಯ ಸರಿಯಿಲ್ಲ, ಬೆದರಿಕೆಯಿದೆ ರಕ್ಷಣೆ ಕೊಡಿ ಅಂತಾ ಪೊಲೀಸರಿಗೆ ಸುಜಾತ ಭಟ್ ಮನವಿ

    ದಕ್ಷಿಣ ಕನ್ನಡ ಪೊಲೀಸರು ಈ ಕಳೇಬರದ ತನಿಖೆಯ ವ್ಯಾಪ್ತಿ ನಮಗೆ ಸೇರಬೇಕು. ಎಸ್‌ಐಟಿ ತನಿಖೆ ಹೂತಿದ್ದ ಶವಗಳ ಬಗ್ಗೆ ತನಿಖೆ ನಡೆಸಬೇಕು. ಆದರೆ ಇದು ಆತ್ಮಹತ್ಯೆ ಮಾಡಿಕೊಂಡ ಬಳಿ ನೆಲದ ಮೇಲೆ ಮೂಳೆಗಳು ಬಿದ್ದಿದೆ. ಹೀಗಾಗಿ ಈ ತನಿಖೆ ಎಸ್‌ಐಟಿ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದ್ದರು. ಆದರೆ ಶವ ಶೋಧದ ತನಿಖೆಯ ವೇಳೆ ಈ ಮೂಳೆಗಳು ಪತ್ತೆಯಾಗಿರುವ ಕಾರಣ ಕೊನೆಗೆ ಈ ಪ್ರಕರಣವನ್ನು ಎಸ್‌ಐಟಿಗೆ ವರ್ಗಾಯಿಸಲಾಗಿತ್ತು.

  • ‘ಟಗರು’ ಬ್ಯೂಟಿ ಮಾನ್ವಿತಾ ಮದುವೆಯ ಸುಂದರ ಫೋಟೋಗಳು

    ‘ಟಗರು’ ಬ್ಯೂಟಿ ಮಾನ್ವಿತಾ ಮದುವೆಯ ಸುಂದರ ಫೋಟೋಗಳು

    ಸ್ಯಾಂಡಲ್‌ವುಡ್ (Sandalwood) ನಟಿ ಮಾನ್ವಿತಾ ಕಾಮತ್ (Manvita Kamath) ಮೇ 1ರಂದು ಚಿಕ್ಕಮಗಳೂರಿನ ಕಳಸದ ದೇವಸ್ಥಾನವೊಂದರಲ್ಲಿ ಅದ್ಧೂರಿಯಾಗಿ ಮದುವೆ ಜರುಗಿದೆ. ಟಗರು ನಟಿಯ ಮದುವೆ ಸುಂದರ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿದೆ.

    ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಕೊಂಕಣಿ ಸಾಂಪ್ರದಾಯದಂತೆ ಮಾನ್ವಿತಾ- ಅರುಣ್ ಕುಮಾರ್ (Arun Kumar) ಮದುವೆ ಜರುಗಿದೆ. ಮಾನ್ವಿತಾರ ಕುಟುಂಬಸ್ಥರು ಮತ್ತು ಆಪ್ತರಷ್ಟೇ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ:ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ

    ಮಾನ್ವಿತಾ ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ್ದಾರೆ. ವರ ಅರುಣ್ ಬಿಳಿ ಬಣ್ಣದ ಶೆರ್ವಾನಿಯಲ್ಲಿ ಕಂಗೊಳಿಸಿದ್ದಾರೆ. ಸಿಂಪಲ್ ಮೇಕಪ್‌ನಲ್ಲಿ ನಟಿ ಕಂಗೊಳಿಸಿದ್ದಾರೆ.

    ಮದುವೆ ಸಂಭ್ರಮದಲ್ಲಿ ನಿಧಿ ಸುಬ್ಬಯ್ಯ, ಶ್ರುತಿ ಹರಿಹರನ್, ಅನುಶ್ರೀ, ನಿರಂಜನ್ ದೇಶಪಾಂಡೆ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಇದನ್ನೂ ಓದಿ:‘ರುದ್ರ ಗರುಡ ಪುರಾಣ’ ಫಸ್ಟ್ ಲುಕ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

    ಅಂದಹಾಗೆ, ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನನ್ನೇ ಮಾನ್ವಿತಾ ಮದುವೆಯಾಗುತ್ತಿದ್ದಾರೆ. ನನ್ನ ಮದುವೆ ನೋಡೋದು ಅಮ್ಮನ ಕನಸಾಗಿತ್ತು. ಅದರಂತೆಯೇ ಮದುವೆ ನೆರವೇರುತ್ತಿದೆ ಎನ್ನುತ್ತಾರೆ ಮಾನ್ವಿತಾ. ನನ್ನ ಅಮ್ಮ ನನ್ನ ಮದುವೆ ಪ್ರೊಫೈಲ್ ಅನ್ನು ನಮ್ಮ ಸಮುದಾಯದ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಂಚಿಕೊಳ್ಳುತ್ತಿದ್ದರು.

    ಆಗ ಅರುಣ್ ತಾಯಿಗೆ ನಮ್ಮ ತಾಯಿ ನಿಧನದ ಬಗ್ಗೆ ತಿಳಿದಿರಲಿಲ್ಲ. ಅವರು ನಮ್ಮನ್ನು ತಲುಪಲು ತುಂಬ ಪ್ರಯತ್ನಿಸಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಕೊನೆಗೆ ಅವರು ನನ್ನ ನಂಬರ್ ಪಡೆದುಕೊಂಡು ಕರೆ ಮಾಡಿದ್ದಾರೆ. ಈಗ ಇದೆಲ್ಲವೂ ಸಾಧ್ಯವಾಗಿದೆ ಎಂದು ಖುಷಿಯಿಂದ ಹೇಳಿದ್ದರು ಮಾನ್ವಿತಾ. ಮದುವೆ ಸುದ್ದಿ ಸಂಭ್ರಮದ ನಡುವೆ ಮತ್ತೊಂದು ವಿಶೇಷ ಅಂದರೆ, ಮಾನ್ವಿತಾ ತಾಯಿ ಸುಜಾತಾ ಅವರ ಹುಟ್ಟುಹಬ್ಬ ಅಕ್ಟೋಬರ್ 14 ಅದೇ ದಿನ ಅರುಣ್ ಹುಟ್ಟುಹಬ್ಬವಂತೆ. ಇಲ್ಲಿಂದ ಪಾಸಿಟಿವ್ ಸೂಚನೆ ಸಿಕ್ಕಿದೆ. ಅಂದಹಾಗೆ, ನಿಧನಕ್ಕೂ ಮುನ್ನವೇ ಮಾನ್ವಿತಾ ಅವರ ತಾಯಿ ಸುಜಾತಾ ಅವರು ಅರುಣ್ ತಾಯಿಯೊಂದಿಗೆ ಮಾತನಾಡಿದ್ದರು.

  • ಮಾನ್ವಿತಾ ಮದುವೆ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

    ಮಾನ್ವಿತಾ ಮದುವೆ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

    ಸ್ಯಾಂಡಲ್‌ವುಡ್ ನಟಿ ಮಾನ್ವಿತಾ ಕಾಮತ್ (Manvita Kamath) ಮೇ 1ರಂದು ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸದ್ಯ ನವಜೋಡಿಯ ಅರಿಶಿನ ಶಾಸ್ತ್ರ, ಮೆಹಂದಿ ಮತ್ತು ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿದೆ.

    ಮೈಸೂರಿನ ವರ ಅರುಣ್ ಕುಮಾರ್ (Arun Kumar) ಜೊತೆ ಮಾನ್ವಿತಾ ಮದುವೆಯಾಗುತ್ತಿದ್ದು, ಚಿಕ್ಕಮಗಳೂರಿನ ಕಳಸದಲ್ಲಿ ಮದುವೆಯ ಶಾಸ್ತ್ರಗಳು ನಡೆಯುತ್ತಿವೆ. ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ನವಜೋಡಿ ನೇರಳೆ ಬಣ್ಣದ ಧಿರಿಸಿನಲ್ಲಿ ಮಿಂಚಿದ್ದಾರೆ.

    ಮಾನ್ವಿತಾ ಮದುವೆ ಸಂಭ್ರಮದಲ್ಲಿ ನಿಧಿ ಸುಬ್ಬಯ್ಯ(Nidhi Subbaiah), ಶ್ರುತಿ ಹರಿಹರನ್ (Shruti Hariharan), ರಿಲಾಕ್ಸ್ ಸತ್ಯ ನಟ ಪ್ರಭು ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ನಾಳೆ ನಡೆಯಲಿರುವ ಮದುವೆಯಲ್ಲಿ ಸ್ಟಾರ್‌ ನಟ-ನಟಿಯರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ:ಅವಕಾಶವಿಲ್ಲದ ದಿನಗಳನ್ನು ಸ್ಮರಿಸಿದ ಸನ್ನಿ- ಕಣ್ಣೀರಿಟ್ಟ ಬಾಬಿ ಡಿಯೋಲ್

    ಅಂದಹಾಗೆ, ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನನ್ನೇ ಮಾನ್ವಿತಾ ಮದುವೆಯಾಗುತ್ತಿದ್ದಾರೆ. ನನ್ನ ಮದುವೆ ನೋಡೋದು ಅಮ್ಮನ ಕನಸಾಗಿತ್ತು. ಅದರಂತೆಯೇ ಮದುವೆ ನೆರವೇರುತ್ತಿದೆ ಎನ್ನುತ್ತಾರೆ ಮಾನ್ವಿತಾ. ನನ್ನ ಅಮ್ಮ ನನ್ನ ಮದುವೆ ಪ್ರೊಫೈಲ್ ಅನ್ನು ನಮ್ಮ ಸಮುದಾಯದ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಂಚಿಕೊಳ್ಳುತ್ತಿದ್ದರು.

    ಆಗ ಅರುಣ್ ತಾಯಿಗೆ ನಮ್ಮ ತಾಯಿ ನಿಧನದ ಬಗ್ಗೆ ತಿಳಿದಿರಲಿಲ್ಲ. ಅವರು ನಮ್ಮನ್ನು ತಲುಪಲು ತುಂಬ ಪ್ರಯತ್ನಿಸಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಕೊನೆಗೆ ಅವರು ನನ್ನ ನಂಬರ್ ಪಡೆದುಕೊಂಡು ಕರೆ ಮಾಡಿದ್ದಾರೆ. ಈಗ ಇದೆಲ್ಲವೂ ಸಾಧ್ಯವಾಗಿದೆ ಎಂದು ಖುಷಿಯಿಂದ ಹೇಳಿದ್ದರು ಮಾನ್ವಿತಾ. ಮದುವೆ ಸುದ್ದಿ ಸಂಭ್ರಮದ ನಡುವೆ ಮತ್ತೊಂದು ವಿಶೇಷ ಅಂದರೆ, ಮಾನ್ವಿತಾ ತಾಯಿ ಸುಜಾತಾ ಅವರ ಹುಟ್ಟುಹಬ್ಬ ಅಕ್ಟೋಬರ್ 14 ಅದೇ ದಿನ ಅರುಣ್ ಹುಟ್ಟುಹಬ್ಬವಂತೆ. ಇಲ್ಲಿಂದ ಪಾಸಿಟಿವ್ ಸೂಚನೆ ಸಿಕ್ಕಿದೆ. ಅಂದಹಾಗೆ, ನಿಧನಕ್ಕೂ ಮುನ್ನವೇ ಮಾನ್ವಿತಾ ಅವರ ತಾಯಿ ಸುಜಾತಾ ಅವರು ಅರುಣ್ ತಾಯಿಯೊಂದಿಗೆ ಮಾತನಾಡಿದ್ದರು.

  • ಕೊನೆಗೂ ಮದುವೆಯಾಗುವ ಹುಡುಗನ ಫೋಟೋ ರಿವೀಲ್ ಮಾಡಿದ ಮಾನ್ವಿತಾ

    ಕೊನೆಗೂ ಮದುವೆಯಾಗುವ ಹುಡುಗನ ಫೋಟೋ ರಿವೀಲ್ ಮಾಡಿದ ಮಾನ್ವಿತಾ

    ಸ್ಯಾಂಡಲ್‌ವುಡ್ ನಟಿ ಮಾನ್ವಿತಾ ಕಾಮತ್ (Manvita Kamath) ಮೇ 1ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮ್ಯೂಸಿಕ್ ಡೈರೆಕ್ಟರ್ ಅರುಣ್ ಕುಮಾರ್ (Arun Kumar) ಜೊತೆ ‘ಟಗರು’ ನಟಿ ಮದುವೆಗೆ ರೆಡಿಯಾಗಿದ್ದಾರೆ. ಹಾಗಾದ್ರೆ ಹುಡುಗ ಯಾರು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಮದುವೆಯಾಗುವ ಹುಡುಗನ ಫೋಟೋ ಕೂಡ ನಟಿ ರಿವೀಲ್ ಮಾಡಿದ್ದಾರೆ.

    ಮದುವೆಗೆ ವಿಶೇಷವಾಗಿ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ಗೆ (Ashwini Puneeth Rajkumar) ನಟಿ ಮದುವೆಗೆ ಆಮಂತ್ರಣ ನೀಡಿದ್ದಾರೆ. ಈ ವೇಳೆ, ಮದುವೆಯಾಗುವ ಹುಡುಗ ಅರುಣ್ ಕುಮಾರ್ ಕೂಡ ಹಾಜರಿ ಹಾಕಿದ್ದಾರೆ. ಈ ಮೂಲಕ ನಟಿ ಹುಡುಗನ ಮುಖ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ:ವಿಜಯ್ ಅಭಿಮಾನಿಗಳಿಗೆ ಶಾಕ್ ಕೊಟ್ಟ ನಿರ್ದೇಶಕ ವೆಟ್ರಿಮಾರನ್

    ಮ್ಯೂಸಿಕ್ ಪ್ರೋಡ್ಯೂಸರ್ ಅರುಣ್ ಕುಮಾರ್ ಜೊತೆ ಮಾನ್ವಿತಾ ಮದುವೆ ಕೊಂಕಣಿ ಸಾಂಪ್ರದಾಯದಂತೆ ಮೇ 1ರಂದು ಚಿಕ್ಕಮಗಳೂರಿನ ಕಳಸದಲ್ಲಿ ನಡೆಯಲಿದೆ. ಹಳದಿ ಶಾಸ್ತ್ರವು ಏಪ್ರಿಲ್ 29ರಂದು ನಡೆಯಲಿದೆ ಮತ್ತು ಸಂಗೀತ್ ಶಾಸ್ತ್ರ ಮತ್ತು ಎಂಗೇಜ್‌ಮೆಂಟ್ ಏಪ್ರಿಲ್ 30ರಂದು ನಡೆಯಲಿದೆ. ಮದುವೆಗೆ ಸ್ಯಾಂಡಲ್ವುಡ್ ನಟ, ನಟಿಯರು ಭಾಗಿಯಾಗಲಿದ್ದಾರೆ.

    ಅಂದಹಾಗೆ, ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನನ್ನೇ ಮಾನ್ವಿತಾ ಮದುವೆಯಾಗುತ್ತಿದ್ದಾರೆ. ನನ್ನ ಮದುವೆ ನೋಡೋದು ಅಮ್ಮನ ಕನಸಾಗಿತ್ತು. ಅದರಂತೆಯೇ ಮದುವೆ ನೆರವೇರುತ್ತಿದೆ ಎನ್ನುತ್ತಾರೆ ಮಾನ್ವಿತಾ. ನನ್ನ ಅಮ್ಮ ನನ್ನ ಮದುವೆ ಪ್ರೊಫೈಲ್ ಅನ್ನು ನಮ್ಮ ಸಮುದಾಯದ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಂಚಿಕೊಳ್ಳುತ್ತಿದ್ದರು.

    ಆಗ ಅರುಣ್ ತಾಯಿಗೆ ನಮ್ಮ ತಾಯಿ ನಿಧನದ ಬಗ್ಗೆ ತಿಳಿದಿರಲಿಲ್ಲ. ಅವರು ನಮ್ಮನ್ನು ತಲುಪಲು ತುಂಬ ಪ್ರಯತ್ನಿಸಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಕೊನೆಗೆ ಅವರು ನನ್ನ ನಂಬರ್ ಪಡೆದುಕೊಂಡು ಕರೆ ಮಾಡಿದ್ದಾರೆ. ಈಗ ಇದೆಲ್ಲವೂ ಸಾಧ್ಯವಾಗಿದೆ ಎಂದು ಖುಷಿಯಿಂದ ಹೇಳಿದ್ದರು ಮಾನ್ವಿತಾ. ಮದುವೆ ಸುದ್ದಿ ಸಂಭ್ರಮದ ನಡುವೆ ಮತ್ತೊಂದು ವಿಶೇಷ ಅಂದರೆ, ಮಾನ್ವಿತಾ ತಾಯಿ ಸುಜಾತಾ ಅವರ ಹುಟ್ಟುಹಬ್ಬ ಅಕ್ಟೋಬರ್ 14 ಅದೇ ದಿನ ಅರುಣ್ ಹುಟ್ಟುಹಬ್ಬವಂತೆ. ಇಲ್ಲಿಂದ ಪಾಸಿಟಿವ್ ಸೂಚನೆ ಸಿಕ್ಕಿದೆ. ಅಂದಹಾಗೆ, ನಿಧನಕ್ಕೂ ಮುನ್ನವೇ ಮಾನ್ವಿತಾ ಅವರ ತಾಯಿ ಸುಜಾತಾ ಅವರು ಅರುಣ್ ತಾಯಿಯೊಂದಿಗೆ ಮಾತನಾಡಿದ್ದರು.

  • ‘ಟಗರು’ ಬ್ಯೂಟಿ ಮಾನ್ವಿತಾ ಮದುವೆಯಾಗುತ್ತಿರುವ ಹುಡುಗ ಯಾರು?

    ‘ಟಗರು’ ಬ್ಯೂಟಿ ಮಾನ್ವಿತಾ ಮದುವೆಯಾಗುತ್ತಿರುವ ಹುಡುಗ ಯಾರು?

    ಗರು (Tagaru) ಪುಟ್ಟಿ ಮಾನ್ವಿತಾ ಕಾಮತ್ (Manvitha Kamath) ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಮ್ಯೂಸಿಕ್ ಪ್ರೋಡ್ಯೂಸರ್ ಅರುಣ್ ಕುಮಾರ್ (Arun Kumar) ಜೊತೆ ಮೇ 1ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅಷಕ್ಕೂ ಮಾನ್ವಿತಾ ಮದುವೆ ಆಗುತ್ತಿರುವ ವರ ಯಾರು?

    ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನನ್ನೇ ಮಾನ್ವಿತಾ ಮದುವೆಯಾಗುತ್ತಿದ್ದಾರೆ. ನನ್ನ ಮದುವೆ ನೋಡೋದು ಅಮ್ಮನ ಕನಸಾಗಿತ್ತು. ಅದರಂತೆಯೇ ಮದುವೆ ನೆರವೇರುತ್ತಿದೆ ಎನ್ನುತ್ತಾರೆ ಮಾನ್ವಿತಾ. ನನ್ನ ಅಮ್ಮ ನನ್ನ ಮದುವೆ ಪ್ರೊಫೈಲ್ ಅನ್ನು ನಮ್ಮ ಸಮುದಾಯದ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಂಚಿಕೊಳ್ಳುತ್ತಿದ್ದರು. ಇದನ್ನೂ ಓದಿ:‘ಕಾಂತಾರ’ ಪ್ರೀಕ್ವೆಲ್ ಚಿತ್ರೀಕರಣಕ್ಕೆ 3 ದಿನವಷ್ಟೇ ಬಾಕಿ

    ಆಗ ಅರುಣ್ ತಾಯಿಗೆ ನಮ್ಮ ತಾಯಿ ನಿಧನದ ಬಗ್ಗೆ ತಿಳಿದಿರಲಿಲ್ಲ. ಅವರು ನಮ್ಮನ್ನು ತಲುಪಲು ತುಂಬ ಪ್ರಯತ್ನಿಸಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಕೊನೆಗೆ ಅವರು ನನ್ನ ನಂಬರ್ ಪಡೆದುಕೊಂಡು ಕಾಂಟಾಕ್ಟ್ ಮಾಡಿದ್ದಾರೆ. ಈಗ ಇದೆಲ್ಲವೂ ಸಾಧ್ಯವಾಗಿದೆ ಎಂದು ಖುಷಿಯಿಂದ ಹೇಳಿದ್ದಾರೆ ಮಾನ್ವಿತಾ.

    ಮದುವೆ ಸುದ್ದಿ ಸಂಭ್ರಮದ ನಡುವೆ ಮತ್ತೊಂದು ವಿಶೇಷ ಅಂದರೆ, ಮಾನ್ವಿತಾ ತಾಯಿ ಸುಜಾತಾ ಅವರ ಹುಟ್ಟುಹಬ್ಬ ಅಕ್ಟೋಬರ್ 14 ಅದೇ ದಿನ ಅರುಣ್ ಹುಟ್ಟುಹಬ್ಬವಂತೆ. ಇಲ್ಲಿಂದ ಪಾಸಿಟಿವ್ ಸೂಚನೆ ಸಿಕ್ಕಿದೆ. ಅಂದಹಾಗೆ, ನಿಧನಕ್ಕೂ ಮುನ್ನವೇ ಮಾನ್ವಿತಾ ಅವರ ತಾಯಿ ಸುಜಾತಾ ಅವರು ಅರುಣ್ ತಾಯಿಯೊಂದಿಗೆ ಮಾತನಾಡಿದ್ದರು.

    ಮಾನ್ವಿತಾ ಮತ್ತು ಅವರ ಚಿಕ್ಕಮ್ಮ ಮೈಸೂರಿನಲ್ಲಿರುವ ಅರುಣ್ ಮನೆಗೆ ಭೇಟಿ ನೀಡಿದ್ದಾರೆ. ಅಲ್ಲಿಂದ ಮದುವೆ ಮಾತುಕತೆಯಾಗಿ ಈಗ ಮದುವೆಗೆ ವೇದಿಕೆ ಸಜ್ಜಾಗಿದೆ. ಅರುಣ್ ಕುಟುಂಬದವರು ತುಂಬ ಒಳ್ಳೆಯವರು. ಅರುಣ್ ಕೂಡ ಅದ್ಭುತ ವ್ಯಕ್ತಿ. ನನ್ನ ತಾಯಿ ಹುಡುಕಿದ ಸಂಬಂಧ ಕೂಡಿ ಬಂದಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ಮಾನ್ವಿತಾ ತಿಳಿಸಿದ್ದಾರೆ. ಅಲ್ಲದೆ, ಸಂಗೀತ ಪ್ರೇಮಿಯಾಗಿರುವ ಮಾನ್ವಿತಾಗೆ ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಆಗಿರುವ ಅರುಣ್ ಕುಮಾರ್ ಪತಿಯಾಗಿ ಸಿಗುತ್ತಿರುವುದು ಖುಷಿಯಿದೆ ಎಂದು ಮಾನ್ವಿತಾ ಮಾತನಾಡಿದ್ದಾರೆ.

    ಮ್ಯೂಸಿಕ್ ಪ್ರೋಡ್ಯೂಸರ್ ಅರುಣ್ ಕುಮಾರ್ ಜೊತೆ ನಟಿ ಮಾನ್ವಿತಾ ಮದುವೆ ಕೊಂಕಣಿ ಸಾಂಪ್ರದಾಯದಂತೆ ಮೇ 1ರಂದು ಮಂಗಳೂರಿನಲ್ಲಿ ನಡೆಯಲಿದೆ. ಹಳದಿ ಶಾಸ್ತ್ರವು ಏಪ್ರಿಲ್ 29ರಂದು ನಡೆಯಲಿದೆ ಮತ್ತು ಸಂಗೀತ್ ಶಾಸ್ತ್ರ ಮತ್ತು ಎಂಗೇಜ್‌ಮೆಂಟ್ ಏಪ್ರಿಲ್ 30ರಂದು ನಡೆಯಲಿದೆ. ಮದುವೆಗೆ ಸ್ಯಾಂಡಲ್ವುಡ್ ನಟ, ನಟಿಯರು ಭಾಗಿಯಾಗಲಿದ್ದಾರೆ. ಈಗಾಗಲೇ ಮದುವೆಯ ತಯಾರಿ ಭರದಿಂದ ನಡೆಯುತ್ತಿದೆ.

  • ಮೇ 1ಕ್ಕೆ ಟಗರು ಪುಟ್ಟಿ ಮಾನ್ವಿತಾ ಕಾಮತ್ ಮದುವೆ

    ಮೇ 1ಕ್ಕೆ ಟಗರು ಪುಟ್ಟಿ ಮಾನ್ವಿತಾ ಕಾಮತ್ ಮದುವೆ

    ನ್ನಡದ ಮತ್ತೋರ್ವ ನಟಿ ಹೊಸ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಕೆಂಡ ಸಂಪಿಗೆ ಸಿನಿಮಾ ಮೂಲಕ ಚಿತ್ರೋದ್ಯಮಕ್ಕೆ ಕಾಲಿಟ್ಟ ಮಾನ್ವಿತಾ ಕಾಮತ್ (Manvita Kamat) ಮೇ 1ರಂದು ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ ಕುರಿತಾದ ಡಿಜಿಟೆಲ್ ಆಮಂತ್ರಣ ಪತ್ರಿಕೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಅವರು ಅಪ್ ಲೋಡ್ ಮಾಡಿದ್ದಾರೆ.

    ಅರುಣ್ ಎನ್ನುವವರ ಜೊತೆ ಮಾನ್ವಿತಾ ಮದುವೆ ಆಗುತ್ತಿದ್ದು, ಮೈಸೂರು ಮೂಲದ ಅರುಣ್ ಸಿನಿಮಾ ರಂಗಕ್ಕೆ ಹತ್ತಿರದವರೇ ಎಂದು ಹೇಳಲಾಗುತ್ತಿದೆ. ಏಪ್ರಿಲ್ 30ಕ್ಕೆ ಅರಿಶಿನ ಶಾಸ್ತ್ರ ಮತ್ತು ಮೇ 1ಕ್ಕೆ ಮದುವೆ ನಡೆಯಲಿದೆ.

     

    ಆರ್.ಜೆಯಾಗಿ ವೃತ್ತಿಯನ್ನು ಆರಂಭಿಸಿದ್ದ ಮಾನ್ವಿತಾ ಆನಂತರ ಸಿನಿಮಾ ರಂಗಕ್ಕೆ ಬಂದರು. ಸೂರಿ ನಿರ್ದೇಶನದ ಕೆಂಡ ಸಂಪಿಗೆ ಸಿನಿಮಾ ಅವರಿಗೆ ಹೆಸರು ತಂದುಕೊಟ್ಟಿತು. ಆನಂತರ ಟಗರು ಸಿನಿಮಾದ ಮೂಲಕ ಸಾಕಷ್ಟು ಜನಕ್ಕೆ ಪರಿಚಯವಾದರು. ಅಲ್ಲಿಂದ ಟಗರು ಪುಟ್ಟಿ ಎಂದೇ ಫೇಮಸ್ ಆದರು ಮಾನ್ವಿತಾ.

  • ಮರಿ ಟೈಗರ್ ವಿನೋದ್ ಪ್ರಭಾಕರ್ ಗೆ ಶ್ವೇತಾ ಡಿಸೋಜಾ ನಾಯಕಿ

    ಮರಿ ಟೈಗರ್ ವಿನೋದ್ ಪ್ರಭಾಕರ್ ಗೆ ಶ್ವೇತಾ ಡಿಸೋಜಾ ನಾಯಕಿ

    ಗೊಂಬೆಗಳ ಲವ್ ಸಿನಿಮಾ ಖ್ಯಾತಿಯ ಅರುಣ್ ಕುಮಾರ್ (Arun Kumar) ಮರಿ ಟೈಗರ್ ವಿನೋದ್ ಪ್ರಭಾಕರ್ (Vinod Prabhakar) ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಇವರಿಬ್ಬರ ಕಾಂಬಿನೇಷನ್ ನೆಲ್ಸನ್ ಸಿನಿಮಾದ ಟೀಸರ್ ಧೂಳ್ ಎಬ್ಬಿಸಿದೆ. ಇದೀಗ ಚಿತ್ರತಂಡದಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ನೆಲ್ಸನ್ ಗೆ ನಾಯಕಿ ಸಿಕ್ಕಿದ್ದಾಳೆ. ಮಾಸ್ ಮರಿ ಟೈಗರ್ ವಿನೋದ್ ಗೆ ಜೋಡಿಯಾಗಿ ಶ್ವೇತಾ ಡಿಸೋಜಾ ನಟಿಸಲಿದ್ದಾರೆ.

    ಕರಾವಳಿಯ ಚೆಲುವೆ ಶ್ವೇತಾ ಡಿಸೋಜಾ (Shweta D’Souza) ನೆಲ್ಸನ್ ಬಳಗ ಸೇರಿಕೊಂಡಿದ್ದಾರೆ. ಹಿಂದಿ ಸಿನಿಮಾ Y ಮೂಲಕ ಸಿನಿಮಾ ಜರ್ನಿ ಆರಂಭಿಸಿದ್ದ ಈ ಸುಂದರಿ ಖಾಸಗಿ ಪುಟಗಳು ಹಾಗೂ ಹೆಜ್ಜಾರು ಚಿತ್ರದಲ್ಲಿ ನಟಿಸಿದ್ದಾರೆ. ಹೆಜ್ಜಾರು ಸಿನಿಮಾಗಾಗಿ ಕಾಯ್ತಿರುವ ಶ್ವೇತಾ, ಈಗ ನೆಲ್ಸನ್ ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

    1960-90ರ ದಶಕದಲ್ಲಿ ಚಾಮರಾಜನಗರದಲ್ಲಿ ನಡೆಯುವ ನೈಜ ಘಟನೆಯಾಧಾರಿತ ಚಿತ್ರ ನೆಲ್ಸನ್. ಗ್ಯಾಂಗ್ ಸ್ಟರ್ ಕಥಾಹಂದರ ಹೊಂದಿದ್ದು,  ವಿನೋದ್ ಪ್ರಭಾಕರ್ ಹಿಂದೆಂದೂ ಕಾಣದ ಅವತಾರದಲ್ಲಿ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾದಲ್ಲಿ ನಿಮಗೆ ಕಾಣಸಿಗ್ತಾರೆ.

    ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅರುಣ್ ಕುಮಾರ್ ನೆಲ್ಸನ್ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಅರುಣ್ ಮೊದಲ ಕನಸಿಗೆ ದೀಪ ಫಿಲ್ಮ್ಸ್ ಬ್ಯಾನರ್ ನಲ್ಲಿ ಬಿ.ಎಮ್ ಶ್ರೀರಾಮ್ (ಕೋಲಾರ) ಹಣ ಹಾಕಿದ್ದಾರೆ. ಪ್ರಜ್ವಲ್ ಗೌಡ ಛಾಯಾಗ್ರಹಣ ಮತ್ತು ಭರತ್ ಬಿಜಿ ಸಂಗೀತ, ವಿಜಯ್ ರಾಜ್ ಸಂಕಲನ, ಹರಿ ಸಂಭಾಷಣೆ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾಗಿದೆ.

  • ‘ನೆಲ್ಸನ್’ ಟೀಸರ್ ರಿಲೀಸ್ ಮಾಡಿದ ರಿಯಲ್ ಸ್ಟಾರ್ ಉಪೇಂದ್ರ

    ‘ನೆಲ್ಸನ್’ ಟೀಸರ್ ರಿಲೀಸ್ ಮಾಡಿದ ರಿಯಲ್ ಸ್ಟಾರ್ ಉಪೇಂದ್ರ

    ಗೊಂಬೆಗಳ ಲವ್‌ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಭರವಸೆ ಮೂಡಿಸಿದ್ದ ನಟ ಅರುಣ್‌ ಕುಮಾರ್ (Arun Kumar) ಈಗ ನಿರ್ದೇಶನಕ್ಕಿಳಿದಿದ್ದಾರೆ. ಅವರ ಚೊಚ್ಚಲ ಹೆಜ್ಜೆಗೆ ‘ನೆಲ್ಸನ್’ (Nelson) ಎಂಬ ಶೀರ್ಷಿಕೆ ಇಡಲಾಗಿದ್ದು, ರಕ್ತದಲ್ಲಿ ನೆಂದ ದೇವರಕಾಡು ಎಂಬ ಅಡಿ ಬರಹ ಚಿತ್ರದ ಸಾರಂಶವನ್ನು ವಿವರಿಸ್ತಿದೆ. ಟೀಸರ್ ರಿಲೀಸ್ ಆಗಿದ್ದು, ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಸಖತ್ ಮಾಸ್ ಆಗಿ ಮೂಡಿಬಂದಿರುವ ನೆಲ್ಸನ್ ಟೀಸರ್ ನಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್ (Vinod Prabhakar) ಆಂಗ್ರಿ ಯಂಗ್ ಮ್ಯಾನ್ ಅವತಾರದಲ್ಲಿ ಅಬ್ಬರಿಸಿದ್ದಾರೆ. ಇಂದು ಎಂಎಂ ಲೆಗಸಿಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರು ಟೀಸರ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.

    ಉಪೇಂದ್ರ ಮಾತನಾಡಿ, ಟೈಗರ್ ಹವಾ ಆಗಲೂ ಇತ್ತು ಈಗಲೂ ಇರುತ್ತೇ.. ಮುಂದೆಯೂ ಇರುತ್ತದೆ. ನಿಮ್ಮ ತಂದೆ ಸಿನಿಮಾಗೆ ಡೈಲಾಗ್ ಬರೆದಿದ್ದೆ. ಇವತ್ತು ನಿಮ್ಮ ಟೀಸರ್ ಲಾಂಚ್ ಮಾಡಲು ನಿಮ್ಮ ತಂದೆ ಆಶೀರ್ವಾದ ಮಾಡಿದ್ದಾರೆ. ಟೀಸರ್ ಬಗ್ಗೆ ಏನೂ ಹೇಳೋದು. ಎಲ್ಲವೂ ಎಕ್ಸ್ಟ್ರಾಡಿನರಿಯಾಗಿದೆ. ಮೇಕಿಂಗ್, ಗೆಟಪ್ ಸೂಪರ್. ಸಬ್ಜೆಕ್ಟ್ ಬೇರೆ ತರ ಇದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ.  ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಲಿದೆ ಎಂದರು.  ನಟ ವಿನೋದ್ ಪ್ರಭಾಕರ್ ಮಾತನಾಡಿ, ಉಪೇಂದ್ರ (Upendra) ಅಣ್ಣ ಟೀಸರ್ (Teaser) ನೋಡಿ ತುಂಬಾ ಖುಷಿಪಟ್ಟರು. ದರ್ಶನ್ ಸರ್ ಕೂಡ ಟೀಸರ್ ನೋಡಿದರು. ಈ ತರಹದ ಒಂದು ಸಿನಿಮಾ ಮಾಡಲು ಧೈರ್ಯ ಬೇಕು. ಶ್ರೀರಾಮ್ ಸರ್ ನಿಮಗೆ ಧನ್ಯವಾದ. ನಿಮ್ಮ ಮೇಲೆ ನಮಗೆ ಕಾನ್ಫಿಡೆನ್ಸ್ ಇದೆ. ಅರುಣ್ ಕುಮಾರ್ ಅವರು ಬಹಳಷ್ಟು ಫ್ಯಾಷನ್ ಇರುವ ವ್ಯಕ್ತಿ. ಭರತ್ ಸರ್ ವಂಡರ್ ಫುಲ್ ಮ್ಯೂಸಿಕ್. ಸಿನಿಮಾ ಬಗ್ಗೆ ಮುಂದೆ ಮಾತಾಡ್ತೀನಿ. ತೆರೆಹಿಂದೆ ಬಹಳಷ್ಟು ಜನ ಕೆಲಸ‌ ಮಾಡಿದ್ದೀರಿ ಎಂದರು.

    ನಿರ್ದೇಶಕ ಅರುಣ್ ಕುಮಾರ್ ಮಾತನಾಡಿ, ಲಾಕ್ ಡೌನ್ ಆದ್ಮೇಲೆ ಹಸಿವು, ಅಸಹಾಯಕ ಸಮಯದಲ್ಲಿ ನೆಲ್ಸನ್ ಹುಟ್ಟಿಕೊಂಡಿದ್ದು. ಬರೆಯುತ್ತಾ, ಬರೆಯುತ್ತಾ ತುಂಬಾ ಚೆನ್ನಾಗಿ ಕಥೆ ಬೆಳೆಯಿತು. ಮಲಯಾಳಂ, ತಮಿಳು ಇಂಡಸ್ಟ್ರೀಗೆ ಕಥೆ ತೆಗೆದುಕೊಂಡು. ಆದರೆ ನನಗೆ ತೃಪ್ತಿಯಾಗಲಿಲ್ಲ. ಇಲ್ಲೇ ಏನಾದರೂ ಆಗಬೇಕು ಅದಕ್ಕೆ ಬಂದೆ. ಸ್ನೇಹಿತರ ಮೂಲಕ ನಿರ್ಮಾಪಕರು ಸಿಕ್ಕಿದರು. ನಂಬಿಕೆ ಹುಟ್ಟಿಕೊಳ್ತು. ಇದುವರೆಗೆ ನನ್ನ ನಂಬಿದ್ದು ಶ್ರೀರಾಮ್ ಸರ್. ನಾನು ಟೀಂ ನನ್ನ ಬೆನ್ನೆಲುಬು ಆಗಿ ನಿಂತರು. ಸಿನಿಮಾ ಈ ಹಂತಕ್ಕೆ ಬರಲು ನನ್ನ ಟೆಕ್ನಿಕಲ್ ಟೀಂ ಬೆಂಬಲವಿದೆ. ವಿನೋದ್ ಸರ್ ಡೆಡಿಕೇಷನ್ ನೋಡಿ ಭಯ ಆಯಿತು. ವಿನೋದ್ ಸರ್ ಸಪೋರ್ಟ್ ತುಂಬಾ ದೊಡ್ಡದಿದೆ. 60 ರಿಂದ 90 ಒಳಗಡೆ ಚಾಮರಾಜನಗರದಲ್ಲಿ ನಡೆಯುವ ಕಥೆ ಇದು. ಸ್ಕ್ರೀನ್ ಪ್ಲೇ, ಕಥೆ ತುಂಬಾ ಸ್ಟ್ರಾಂಗ್ ಆಗಿದೆ ಎಂದರು.

    ನಿರ್ಮಾಪಕ ಬಿ.ಎಂ.ಶ್ರೀರಾಮ್ (ಕೋಲಾರ) ಮಾತನಾಡಿ, ಉಪ್ಪಿ ಕಾರ್ಯಕ್ರಮಕ್ಕೆ ಬಂದಿದ್ದು ಬಹಳ ಖುಷಿ ಆಯ್ತು. ನಾವು ತುಂಬ ಬಡತನದಿಂದ ಮೇಲೆ ಬಂದವರು. ನಾವು ಈ ಮಟ್ಟದಲ್ಲಿ ಬೆಳೆಯಲು ಐದು ಜನರನ್ನು ಸ್ಫೂರ್ತಿಯಾಗಿ ತೆಗೆದುಕೊಂಡೆ. ಅದರಲ್ಲಿ ಉಪ್ಪಿ ಸರ್ ಕೂಡ ಒಬ್ಬರು. ತಂದೆ ತಾಯಿ ಆಶೀರ್ವಾದ ಮಾರ್ಗದರ್ಶನದಿಂದ ಈ ಮಟ್ಟಕ್ಕೆ ಇದ್ದೀವಿ. ಅರುಣ್ ಅವರನ್ನು ನನ್ನ ಸ್ನೇಹಿತರು ರೆಫರ್ ಮಾಡಿದ್ದರು. ಇದು ಚಾಮರಾಜನಗ ಆಚಾರ,ವಿಚಾರ ಅಂಶಗಳು ಇರುವುದರಿಂದ ಕಥೆ ಒಪ್ಪಿಕೊಂಡೆ. ವಿನೋದ್ ಸರ್ ಅಪ್ರೋಚ್ ಮಾಡಿದ್ವಿ. ಕಥೆ ಹೇಳಿದ್ವಿ ಒಪ್ಪಿಕೊಂಡರು. ಟೀಸರ್ ಮಾಡಿದ್ಮೇಲೆ ಅರುಣ್ ಟೀ ಮೇಲೆ ಭರವಸೆ ಹೆಚ್ಚಾಯ್ತು ಎಂದರು.

    ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ನೈಜ ಘಟನೆಯ ಕಥಾಹಂದರದ ಸಿನಿಮಾ. ಚಾಮರಾಜನಗರ ಜಿಲ್ಲೆಯಲ್ಲಿ 60ರಿಂದ 90ರ ದಶಕದಲ್ಲಿ ನಡೆಯುವ ಗ್ಯಾಗ್‌ಸ್ಟರ್‌ ಕಥೆ. ಅಲ್ಲಿನ ಭಾಷೆ, ಸಂಸ್ಕೃತಿ, ನೆಲ, ಜಲ, ಬುಡಕಟ್ಟು ಜನಾಂಗದ ಸಂಘರ್ಷ ಸೇರಿದಂತೆ ಒಂದಷ್ಟು ಅಂಶಗಳನ್ನು ಈ ಚಿತ್ರದಲ್ಲಿ ಅರುಣ್ ಕಟ್ಟಿಕೊಡಲಿದ್ದಾರೆ. ವಿಶೇಷ ಅಂದರೆ ವಿನೋದ್ ಪ್ರಭಾಕರ್ ಹಿಂದೆಂದೂ ಕಾಣದ ಅವತಾರದಲ್ಲಿ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾದಲ್ಲಿ ನಿಮಗೆ ಕಾಣಸಿಗ್ತಾರೆ. ಬಹಳ ಇಂಪ್ರೆಸ್ ಎನಿಸುವ ಟೀಸರ್ ಝಲಕ್ ನಲ್ಲಿ ಛಾಯಾಗ್ರಹಣ ಹಾಗೂ ಸಂಗೀತವೂ ಗಮನಸೆಳೆಯುತ್ತಿದೆ.

    ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಅರುಣ್ ಕುಮಾರ್ ಆ ಎಲ್ಲಾ ಕಲೆಯನ್ನು ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಚಿತ್ರಕ್ಕೆ ಧಾರೆ ಎರೆದಿದ್ದಾರೆ. ಅವರ ಮೊದಲ ಕನಸಿಗೆ ದೀಪ ಫಿಲ್ಮ್ಸ್ ಬ್ಯಾನರ್ ನಲ್ಲಿ ಬಿ.ಎಮ್ ಶ್ರೀರಾಮ್ (ಕೋಲಾರ) ಹಣ ಹಾಕಿದ್ದಾರೆ. ಪ್ರಜ್ವಲ್ ಗೌಡ ಛಾಯಾಗ್ರಹಣ ಮತ್ತು ಭರತ್ ಬಿಜಿ ಸಂಗೀತ, ವಿಜಯ್ ರಾಜ್ ಸಂಕಲನ, ಹರಿ ಸಂಭಾಷಣೆ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾಗಿದೆ. ಆಕ್ಷನ್ ಟೀಸರ್ ಧಮಾಕ ಎಬ್ಬಿಸಿರುವ ಚಿತ್ರತಂಡ ನವೆಂಬರ್ ತಿಂಗಳಿಂದ ಶೂಟಿಂಗ್ ಅಖಾಡಕ್ಕೆ ಧುಮುಕಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಸನದಲ್ಲಿ ‘ಕೆಜಿಎಫ್ 2’ ಸಿನಿಮಾ ವೀಕ್ಷಿಸಿದ ಯಶ್ ತಂದೆ

    ಹಾಸನದಲ್ಲಿ ‘ಕೆಜಿಎಫ್ 2’ ಸಿನಿಮಾ ವೀಕ್ಷಿಸಿದ ಯಶ್ ತಂದೆ

    ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ 2 ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಾಲ್ಕು ದಿನಗಳ ಕಾಲ ರಜೆ ಇರುವ ಕಾರಣದಿಂದಾಗಿ ಬಹುತೇಕ ಕಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಅಲ್ಲದೇ, ಒಂದು ವಾರದ ಟಿಕೆಟ್ ಗಳು ಕೂಡ ಸೋಲ್ಡೌಟ್ ಆಗಿವೆ. ಈ ನಡುವೆ ಕೆಲ ಅಚ್ಚರಿಯ ಸಂಗತಿಗಳು ನಡೆದಿವೆ. ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್ : ರಿಲೀಸ್ ಹಿಂದಿನ ಪಕ್ಕಾ ಲೆಕ್ಕಾಚಾರ, ಆರ್.ಆರ್.ಆರ್ ದಾಖಲೆ ಮುರಿದ ಕೆಜಿಎಫ್ 2

    ಚಿತ್ರ ತಂಡದ ಕೆಲ ಕಲಾವಿದರು ಮಧ್ಯೆ ರಾತ್ರಿಯೇ ಕೆಜಿಎಫ್ ಸಿನಿಮಾ ವೀಕ್ಷಿಸಿದ್ದಾರೆ. ಬೆಂಗಳೂರಿನ ಊರ್ವಶಿ ಥಿಯೇಟರ್ ಗೆ ಆಗಮಿಸಿದ್ದ ಶ್ರೀನಿಧಿ ಶೆಟ್ಟಿ, ಅವಿನಾಶ್, ಗರುಡ, ಮೇಘನಾ ಮತ್ತಿತರು ಅಭಿಮಾನಿಗಳ ಮಧ್ಯೆ ಕೂತು ಸಿನಿಮಾ ನೋಡಿದ್ದಾರೆ. ಅಲ್ಲದೇ, ಡಾ.ರಾಜ್ ಕುಟುಂಬದ ಕುಡಿಗಳಾದ ಯುವರಾಜ್ ಕುಮಾರ್ ಮತ್ತು ವಿನಯ್ ರಾಜ್ ಕುಮಾರ್ ಕೂಡ ಮಧ್ಯೆ ರಾತ್ರಿಯೇ ಚಿತ್ರವನ್ನು ವೀಕ್ಷಿಸಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 ಜೊತೆ ನೋಡಬಹುದು ಹೊಂಬಾಳೆ ಫಿಲ್ಮ್ಸ್ ನ ಮತ್ತೆರಡು ಸಿನಿಮಾ ಟೀಸರ್

    ಅಷ್ಟೇ ಅಲ್ಲದೇ, ನಿರ್ದೇಶಕರುಗಳಾದ ಪವನ್ ಒಡೆಯರ್, ಮಹೇಶ್ ಕುಮಾರ್, ಸುನಿ, ರಿಷಭ್ ಶೆಟ್ಟಿ ಸೇರಿದಂತೆ ಸಾಕಷ್ಟು ತಂತ್ರಜ್ಞರು ಕೂಡ ರಾತ್ರಿಯೇ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಕೂಡ ಸಿನಿಮಾ ಮೆಚ್ಚಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಈ ರೀತಿಯಾಗಿ ಸೆಲೆಬ್ರಿಟಿಗಳು, ನಾನಾ ಕ್ಷೇತ್ರದ ಗಣ್ಯರು ಕೂಡ ಸಿನಿಮಾ ನೋಡಿ, ಮೆಚ್ಚಿ ಮಾತನಾಡಿದ್ದಾರೆ. ಹಾಗೆಯೇ ಯಶ್ ತಂದೆ ಅರುಣ್ ಕುಮಾರ್ ಕೂಡ ಸಿನಿಮಾ ನೋಡಲು ಹಾಸನದಲ್ಲಿರುವ ಎಸ್.ಬಿ.ಜಿ ಥಿಯೇಟರ್ ಆಗಮಿಸಿದ್ದರು. ಯಶ್ ತಂದೆ ಇದೀಗ ಹಾಸನ ಸಮೀಪದಲ್ಲಿ ತೋಟ ಮಾಡಿಕೊಂಡು ಅಲ್ಲಿಯೇ ವಾಸವಿದ್ದಾರೆ. ಹಾಗಾಗಿ ಹಾಸನಕ್ಕೆ ಬಂದು, ಅಭಿಮಾನಿಗಳ ಜತೆ ಸಿನಿಮಾ ನೋಡಿದ್ದಾರೆ.

  • ಬಿಜೆಪಿ ಬಿಟ್ಟು ಮತ್ತೆ ಕಾಂಗ್ರೆಸ್ ಸೇರ್ತಾರಾ ಬಾಬುರಾವ್ ಚಿಂಚನಸೂರ್..?

    ಬಿಜೆಪಿ ಬಿಟ್ಟು ಮತ್ತೆ ಕಾಂಗ್ರೆಸ್ ಸೇರ್ತಾರಾ ಬಾಬುರಾವ್ ಚಿಂಚನಸೂರ್..?

    – ಮಾಜಿ ಸಚಿವರ ಹೈಡ್ರಾಮಾದ ಇನ್ ಸೈಡ್ ಸ್ಟೋರಿ ಇಲ್ಲಿದೆ

    ಯಾದಗಿರಿ: ಏಕಲವ್ಯ ಶಾಲೆ ಉದ್ಘಾಟನಾ ಹೈಡ್ರಾಮ ಪ್ರೀ-ಪ್ಲಾನ್ ಎನ್ನುವ ಅನುಮಾನ ಮೂಡಿದೆ. ಬಿಜೆಪಿ ತೊರೆಯಲು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಈ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಶಾಲೆ ಉದ್ಘಾಟನೆಯನ್ನು ಗಾಳವಾಗಿ ಬಳಸಿಕೊಂಡು ಬಿಜೆಪಿ ಬಿಟ್ಟು ಮತ್ತೆ ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದರು. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜೊತೆಗೆ 3-4 ಬಾರಿ ಮಾತುಕತೆ ನಡೆಸಿರುವ ಬಾಬುರಾವ್, ಏಕಲವ್ಯ ಶಾಲೆ ಉದ್ಘಾಟನೆಯಲ್ಲಿ ಕಡಗಣನೆ ಮತ್ತು ಅಗೌರವ ನೆಪ ಮಾಡಿಕೊಂಡು ಜಂಪ್ ಆಗಲು ಪ್ಲಾನ್ ಮಾಡಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಸ್ವಪ್ರತಿಷ್ಠೆಗೋಸ್ಕರ ಬಡ ಮಕ್ಕಳ ಶಿಕ್ಷಣಕ್ಕೆ ಕೊಳ್ಳಿಯಿಟ್ಟ ಬಾಬುರಾವ್ ಚಿಂಚನಸೂರ್

    ಕಾಂಗ್ರೆಸ್ ಬಿಡುವಾಗ ಕೂಡ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕಡಗಣನೆ ಮತ್ತು ಅಗೌರವದ ಕಾರ್ಡನ್ನು ಬಾಬುರಾವ್ ಬಳಸಿದ್ದರು. ಆದರೆ ಈ ವಿಚಾರದಲ್ಲಿ ಬಾಬುರಾವ್ ಗೆ ಆಗಿದ್ದೇ ಬೇರೆ. ಬಿಜೆಪಿ ಬಿಡಲು ಏಕಲವ್ಯ ಶಾಲೆಯನ್ನು ನೆಪ ಮಾಡಿಕೊಳ್ಳಲು ಮುಂದಾಗಿದ್ದ ಬಾಬುರಾವ್ ಚಿಂಚನಸೂರ್‍ಗೆ ಬಿಜೆಪಿ ಮಾಸ್ಟರ್ ಸ್ಟ್ರೋಕ್ ನೀಡಿದೆ. ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಚಿಂಚನಸೂರ್ ಪ್ಲಾನ್ ಉಲ್ಟಾಪಲ್ಟಾ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.  ಇದನ್ನೂ ಓದಿ: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಹೈಡ್ರಾಮ..!

    ಒಂದೇ ಒಂದು ಫೋನ್ ಕಾಲ್ ಇಡೀ ಚಿತ್ರಣವೇ ಬದಲು ಮಾಡಿದೆ. ಆದರೆ ಈ ಪ್ರಕರಣದಲ್ಲಿ ಬಲಿಕಾ ಬಕ್ರಾ ಆಗಿದ್ದು ಸಚಿವ ಶ್ರೀರಾಮುಲು. ಪಬ್ಲಿಕ್ ಟಿವಿಯಲ್ಲಿ ಫೋನ್ ಕಾಲ್ ಎಕ್ಸ್ ಕ್ಲೂಸೀವ್ ದೃಶ್ಯ ಲಭ್ಯವಾಗಿವೆ. ಬಾಬುರಾವ್ ಶಾಲೆ ಉದ್ಘಾಟನೆಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ವಾಲ್ಮೀಕಿ ಸಮುದಾಯದಿಂದ ರಾಮುಲು ಕಾರು ಅಡ್ಡಗಟ್ಟಿ ಪ್ರತಿಭಟನೆ ನಡೆಸಲಾಯಿತು. ಶಾಲೆ ಉದ್ಘಾಟನೆಯನ್ನು ಮಾಡಲೇಬೇಕು ಅಂತ ಪ್ರತಿಭಟನಾಕಾರರು ಹಠಹಿಡಿದರು. ಇದರಿಂದ ಏಕಲವ್ಯ ಶಾಲೆಯನ್ನು ಉದ್ಘಾಟನೆ ಮಾಡುವ ಇಂಗಿತ ವ್ಯಕ್ತಪಡಿಸಿದ ರಾಮುಲು, ಜಿಲ್ಲಾಡಳಿತ ಜೊತೆಗೆ ಚರ್ಚೆ ನಡೆಸಲು ಮುಂದಾದ್ರು.

    ರಾಮುಲುಗೆ ಜಿಲ್ಲಾಡಳಿತ ಮತ್ತು ಪೊಲೀಸರು ಸಹ ಸಾಥ್ ನೀಡಿದರು. ಆದರೆ ಈ ವೇಳೆ ಅರುಣ್ ಕುಮಾರ್ ಗೆ ಕಾಲ್ ಮಾಡಿ ಅನುಮತಿ ಕೇಳಿದ ರಾಮುಲು, ಫೋನ್ ಸಂಭಾಷಣೆ ಮುಗಿದ ಮೇಲೆ ಒಂದು ಕ್ಷಣವೂ ಸ್ಥಳದಲ್ಲಿ ನಿಲ್ಲದೆ, ಸ್ಥಳದಿಂದ ರಾಮುಲು ಜಾಗ ಖಾಲಿ ಮಾಡಿದ್ದಾರೆ. ತಮ್ಮ ವಾಹನ ಸಿಗದ ಹಿನ್ನಲೆ ತರಾತುರಿಯಲ್ಲಿ ಡಿಸಿ ಕಾರ್ ನಲ್ಲಿ ರಾಮುಲು ಎಸ್ಕೇಪ್ ಆದರು. ಬಾಬುರಾವ್ ಬಿಜೆಪಿ ಬಿಡಲು ಕಾರಣವೇ ಇಲ್ಲದಂತೆ ಮಾಡುವುದು ಸಂಘನಾ ಕಾರ್ಯದರ್ಶಿ ಅರುಣ್ ಕುಮಾರ್ ಅವರದಾಗಿತ್ತು ಎನ್ನಲಾಗಿದೆ. ಇದಕ್ಕಾಗಿ ಯಾವುದೇ ಕಾರಣಕ್ಕೂ ಶಾಲೆ ಉದ್ಘಾಟನೆ ಮಾಡದೆ ಅಲ್ಲಿಂದ ಹೊರಡುವಂತೆ ರಾಮುಲುಗೆ ಅರುಣ್ ಕುಮಾರ್ ಫೋನ್ ನಲ್ಲಿ ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.