Tag: ಅರುಣ್ ಸಿಂಗ್

  • ವಿನಾಶದ ಅಂಚಿನಲ್ಲಿ ಕಾಂಗ್ರೆಸ್ – ಪ್ರಿಯಾಂಕಾ, ರಾಹುಲ್ ಗಾಂಧಿ ಹೋದಲ್ಲೆಲ್ಲಾ ಅವರಿಗೆ ಸೋಲೇ: ಅರುಣ್ ಸಿಂಗ್

    ವಿನಾಶದ ಅಂಚಿನಲ್ಲಿ ಕಾಂಗ್ರೆಸ್ – ಪ್ರಿಯಾಂಕಾ, ರಾಹುಲ್ ಗಾಂಧಿ ಹೋದಲ್ಲೆಲ್ಲಾ ಅವರಿಗೆ ಸೋಲೇ: ಅರುಣ್ ಸಿಂಗ್

    – ಕಾಂಗ್ರೆಸ್ ಏನೇ ಗ್ಯಾರಂಟಿ ನೀಡಿದರೂ ಜನ ನಂಬಲ್ಲ

    ಬಾಗಲಕೋಟೆ: ದೇಶದಲ್ಲಿ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿಯವರು ಎಷ್ಟೇ ಚುನಾವಣಾ ಪ್ರಚಾರ ಮಾಡಿದರೂ ಪೂರ್ತಿಯಾಗಿ ಕಾಂಗ್ರೆಸ್ (Congress) ಪಕ್ಷ ವಿನಾಶ ಹೊಂದುತ್ತದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರು ಏನೇ ಮಾಡಿದರೂ ಏನೇ ಸುಳ್ಳಿನ ಗ್ಯಾರಂಟಿಗಳನ್ನು ನೀಡಿದರೂ ಜನರು ನಂಬುವುದಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ (Arun Singh) ಹೇಳಿದರು.

    ಬಾಗಲಕೋಟೆ (Bagalkote) ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರಪ್ರದೇಶ ಚುನಾವಣೆಯ ನೇತೃತ್ವವನ್ನು ವಹಿಸಿದ್ದ ಪ್ರಿಯಾಂಕಾ ಗಾಂಧಿ ಜನರಿಗೆ ಸುಳ್ಳಿನ ಗ್ಯಾರಂಟಿಗಳನ್ನು ನೀಡಿದ್ದರು. ಉತ್ತರಪ್ರದೇಶದ 403 ಸ್ಥಾನಗಳಲ್ಲಿ ಕೇವಲ 2 ಸ್ಥಾನಗಳನ್ನು ಗೆದ್ದಿದ್ದರು. ಇದರಿಂದ ಕಾಂಗ್ರೆಸ್ ಸಾಧನೆ ಎನೆಂದು ತಿಳಿಯುತ್ತದೆ. ಈಗಾಗಲೇ ಕಾಂಗ್ರೆಸ್ ಪಕ್ಷ ಮುಗಿದುಹೋದ ಅಧ್ಯಾಯವಾಗಿದೆ ಎಂದು ಲೇವಡಿ ಮಾಡಿದರು.

    ಕಾಂಗ್ರೆಸ ಪಕ್ಷ ಯಾವುದೇ ಘೋಷಣೆ ಮಾಡಿದರೂ ಅದು ಪೂರ್ಣಗೊಳಿಸುವುದಿಲ್ಲ. ನಾವು ಬಡವರ ಕಲ್ಯಾಣ, ಮಧ್ಯಮ ವರ್ಗಕ್ಕಾಗಿ ಅವರ ಉತ್ತೇಜನಕ್ಕಾಗಿ ಭರವಸೆ ನೀಡುತ್ತೇವೆ. ಈಗ ಅರ್ಧ ಲೀ. ನಂದಿನಿ ಹಾಲು, ಉಚಿತ ಗ್ಯಾಸ್ ಸಿಲಿಂಡರ್ ನೀಡುತ್ತೇವೆ. ಆದರೆ ಕಾಂಗ್ರೆಸ್ ಘೋಷಣೆಗಳು ಬಜೆಟ್‌ಗೆ ವರ್ಕೌಟ್ ಆಗುವುದಿಲ್ಲ. ಈಗಾಗಲೇ ಕಾಂಗ್ರೆಸ್ ಉತ್ತರಾಖಂಡ, ಗೋವಾ, ಅಸ್ಸಾಂ ಉತ್ತರಪ್ರದೇಶದಲ್ಲಿ ಪ್ರತಿ ರಾಜ್ಯದಲ್ಲೂ ಆಗಿದೆ ಎಂದರು.

    ಕಾಮನ್ ಸಿವಿಲ್ ಕೋಡ್ ಸ್ಥಾಪನೆಗೆ ಬಿಜೆಪಿ ಘೋಷಣೆ ಮಾಡುತ್ತದೆ. ಈ ಸಂಬಂಧ ಬಿಜೆಪಿ ಸರ್ಕಾರ ಕಾಮನ್ ಸಿವಿಲ್ ಕೋಡ್ ಸ್ಥಾಪನೆಗೆ ಜಾರಿಗೆ ಕಟಿಬದ್ಧವಾಗಿದೆ. ಈಗಾಗಲೇ ಉತ್ತರಾಖಂಡದಲ್ಲಿ ಸಮಿತಿ ರಚನೆ ಮಾಡಿದೆ. ಈಗಾಗಲೇ ಕೋಡ್ ರಚನೆ ಪ್ರಕ್ರಿಯೆ ನಡೆದಿದೆ. ಯಾವ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುತ್ತದೆ ಅಲ್ಲಿ ಕಾಮನ್ ಸಿವಿಲ್ ಕೋಡ್ ಸ್ಥಾಪನೆಗೆ ರಚನೆ ಮಾಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಅಭಿಮಾನಿ ಬಳಗವೇ ನಮ್ಮ ಆನೆ ಬಲ – ಬಿಜೆಪಿ ಅಭ್ಯರ್ಥಿ ಗೆಲ್ಲಿಸುವಂತೆ ಕಿಚ್ಚ ಸುದೀಪ್‌ ಮನವಿ

    ಸುದ್ದಿಗೋಷ್ಠಿಯಲ್ಲಿ ಬಾಗಲಕೋಟೆ ಜಿಲ್ಲೆಯ 7 ಅಭ್ಯರ್ಥಿಗಳಾದ ಬಾಗಲಕೋಟೆಯ ವೀರಣ್ಣ ಚರಂತಿಮಠ, ಹುನಗುಂದದ ದೊಡ್ಡನಗೌಡ ಪಾಟೀಲ್, ಬೀಳಗಿಯ ಮುರುಗೇಶ್ ನಿರಾಣಿ, ಮುಧೋಳದ ಗೋವಿಂದ ಕಾರಜೋಳ, ಜಮಖಂಡಿ ಜಗದೀಶ್ ಗುಡಗುಂಟಿ, ಬಾದಾಮಿಯ ದೊಡ್ಡನಗೌಡ ಪಾಟೀಲ್, ತೇರದಾಳದ ಸಿದ್ದು ಸವದಿ, ಸಂಸದ ಪಿಸಿ ಗದ್ದಿಗೌಡರ, ವಿಪ ಮಾಜಿ ಸದಸ್ಯ ನಾರಾಯಣ ಸಾ ಬಾಂಢಗೆ ಮತ್ತಿತರರು ಇದ್ದರು. ಇದನ್ನೂ ಓದಿ: ರಾಹುಲ್ ಗಾಂಧಿ ಯಂಗ್‌ಸ್ಟರ್ – ಹೆಚ್.ಡಿ.ದೇವೇಗೌಡ

  • ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನೂ ಮಾಡಿಲ್ಲ, ಪಿಎಫ್‌ಐ ಮಾತ್ರ ಅಭಿವೃದ್ಧಿಯಾಯ್ತು: ಅರುಣ್ ಸಿಂಗ್

    ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನೂ ಮಾಡಿಲ್ಲ, ಪಿಎಫ್‌ಐ ಮಾತ್ರ ಅಭಿವೃದ್ಧಿಯಾಯ್ತು: ಅರುಣ್ ಸಿಂಗ್

    – 40 ಪರ್ಸೆಂಟ್ ಭ್ರಷ್ಟಾಚಾರ ಆಗಿಯೇ ಇಲ್ಲ
    – ಕಾಂಗ್ರೆಸ್ ಮಾಡ್ತಿರೋ ಆಧಾರ ರಹಿತ ಆರೋಪ

    ಮೈಸೂರು: ಸಿದ್ದರಾಮಯ್ಯ (Siddaramaiah) ಸಿಎಂ ಆಗಿದ್ದಾಗ ಅವರು ಏನೂ ಕೆಲಸ ಮಾಡಲಿಲ್ಲ. ಕೇವಲ ಪಿಎಫ್‌ಐ (PFI) ಮಾತ್ರ ಅಭಿವೃದ್ಧಿ ಆಯಿತು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ (Arun Singh) ಆರೋಪಿಸಿದ್ದಾರೆ.

    ಮೈಸೂರಿನಲ್ಲಿ (Mysuru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅರುಣ್ ಸಿಂಗ್, ಜನರ ಹಿತ, ದೇಶದ ಹಿತಕ್ಕೆ ಡಬಲ್ ಎಂಜಿನ್ ಸರ್ಕಾರ ಬರಬೇಕಿದೆ. ಕರ್ನಾಟಕದ ವಿಕಾಸದ ಜೊತೆ ದೇಶದ ವಿಕಾಸ ಸೇರಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಮದಾಸ್ 4 ಬಾರಿ ಶಾಸಕರಾಗಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರು. ಈಗ ಅವರು ಶ್ರೀವತ್ಸ ಅವರಿಗೆ ಸ್ಥಾನ ಬಿಟ್ಟು ಕೊಟ್ಟಿದ್ದಾರೆ. ಇದು ಬಿಜೆಪಿಯಲ್ಲಿ (BJP) ಮಾತ್ರವೇ ಸಾಧ್ಯ ಎಂದು ಅರುಣ್ ಸಿಂಗ್ ಟಿಕೆಟ್ ಕೈತಪ್ಪಿದ ಶಾಸಕ ರಾಮದಾಸ್ ಅವರನ್ನು ಹಾಡಿ ಹೊಗಳಿದರು.

    ಕಾಂಗ್ರೆಸ್ (Congress) ಕಾಲದಲ್ಲಿ ಹಿಂದೂಗಳ ಹತ್ಯೆಯಾಗಿತ್ತು. ಸಿದ್ದರಾಮಯ್ಯ ಸರ್ಕಾರ ಇದ್ದಾಗಲೂ ಅದೇ ಸ್ಥಿತಿ ಇತ್ತು. ಒಂದು ರೀತಿ ನೆಗೆಟಿವ್ ವಾತಾವರಣ ಇತ್ತು. ಪಿಎಫ್‌ಐ ಹಾವಳಿ ಹೆಚ್ಚಾಗಿತ್ತು. ಕಾಂಗ್ರೆಸ್ ಇಷ್ಟು ವರ್ಷ ಸಾಮಾಜಿಕ ನ್ಯಾಯಕ್ಕಾಗಿ ಏನೂ ಮಾಡಿಲ್ಲ. ನೀವು ಅಧಿಕಾರದಲ್ಲಿದ್ದಾಗ ಮೀಸಲಾತಿ ಏಕೆ ಹೆಚ್ಚಿಸಿರಲಿಲ್ಲ? 4% ಅಂಸವಿಧಾನತ್ಮಕವಾಗಿ ಮುಸ್ಲಿಮರಿಗೆ ನೀಡಲಾಗಿತ್ತು. ಅದನ್ನು ಲಿಂಗಾಯತ ಒಕ್ಕಲಿಗರಿಗೆ ತಲಾ 2% ನೀಡಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ವಾಪಸ್ಸು ಪಡೆಯುವುದಾಗಿ ಹೇಳಿದ್ದು, ಅದು ಯಾರಿಂದ ವಾಪಸ್ ಪಡೆಯುತ್ತದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು. ಕಾಂಗ್ರೆಸ್ ಒಡೆದ ಮನೆಯಂತಾಗಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನೂ ಮಾಡಲಿಲ್ಲ. ಕೇವಲ ಪಿಎಫ್‌ಐ ಮಾತ್ರ ಅಭಿವೃದ್ಧಿ ಆಯಿತು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜಗದೀಶ್‌ ಶೆಟ್ಟರ್‌ 100ಕ್ಕೆ ನೂರರಷ್ಟು ಗೆಲ್ತಾರೆ – ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

    ರಾಜ್ಯದಲ್ಲಿ ಭ್ರಷ್ಟಾಚಾರದ ಪ್ರಶ್ನೆಯೇ ಇಲ್ಲ. ಕಾರಣ ರಾಜ್ಯದಲ್ಲಿ ಭ್ರಷ್ಟಾಚಾರ ಆಗಿಯೇ ಇಲ್ಲ. 40% ಆರೋಪ ಸುಳ್ಳು. ಇದು ಕಾಂಗ್ರೆಸ್ ಮಾಡುತ್ತಿರುವ ಆಧಾರ ರಹಿತ ಆರೋಪ. ಇದು ಜನರನ್ನು ದಿಕ್ಕುತಪ್ಪಿಸೋ ಕೆಲಸ. ಜನರಿಗೂ ಗೊತ್ತಿದೆ ಕಾಂಗ್ರೆಸ್‌ನ ಆರೋಪಕ್ಕೆ ಯಾವುದೇ ಆಧಾರ ಇಲ್ಲ ಎಂದು ಅರುಣ್ ಸಿಂಗ್ ಟಾಂಗ್ ನೀಡಿದರು.

    ಬಿಎಲ್ ಸಂತೋಷ್ ವಿರುದ್ಧ ಜಗದೀಶ್ ಶೆಟ್ಟರ್ ಆರೋಪ ಹೊರಿಸಿದ ವಿಚಾರವಾಗಿ ಮಾತನಾಡಿದ ಅರುಣ್ ಸಿಂಗ್, ಬಿಎಲ್ ಸಂತೋಷ್ ಒಬ್ಬ ಸಂತ. ಪಕ್ಷಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ. ಬಿಜೆಪಿಯಿಂದ ಎಲ್ಲವನ್ನು ಪಡೆದು, ಸಿಎಂ ಆಗಿ ಈಗ ಈ ರೀತಿ ಮಾತನಾಡುವುದು ಸರಿಯಲ್ಲ. ಈಗ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದಾರೆ. ಮುಂದೆ ಅವರಿಗೆ ಗೊತ್ತಾಗುತ್ತದೆ, ಮುಂದೆ ಸೋತ ನಂತರ ಅವರಿಗೆ ಅರಿವಾಗುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಟ್ರ್ಯಾಕ್ಟರ್‌ಗೆ ಮಾರುತಿ ಕಾರು ಚಕ್ರ ಹಾಕಿದ್ರೆ ಸರಿಯಾಗಿ ಓಡುತ್ತಾ? – ‘ಡಬಲ್ ಎಂಜಿನ್ ಸರ್ಕಾರ’ ಮುಖ್ಯ ಎಂದ ಮೋದಿ

  • ಕಾಂಗ್ರೆಸ್ ಕಾಲದಲ್ಲಿ ಪಿಎಫ್‍ಐ ಜಾಲ ವ್ಯಾಪಕವಾಗಿ ಹಬ್ಬಿತ್ತು: ಅರುಣ್ ಸಿಂಗ್

    ಕಾಂಗ್ರೆಸ್ ಕಾಲದಲ್ಲಿ ಪಿಎಫ್‍ಐ ಜಾಲ ವ್ಯಾಪಕವಾಗಿ ಹಬ್ಬಿತ್ತು: ಅರುಣ್ ಸಿಂಗ್

    ಬೆಳಗಾವಿ: ಕಾಂಗ್ರೆಸ್ ಕಾಲದಲ್ಲಿ ಪಿಎಫ್‍ಐ (PFI) ಜಾಲ ದೇಶಾದ್ಯಂತ ವ್ಯಾಪಕವಾಗಿ ಹಬ್ಬಿತ್ತು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ (Arun Singh) ಬೆಳಗಾವಿಯಲ್ಲಿ  (Belagavi) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್ (Congress) ನಿರಂತರ ಕೆಲಸ ಮಾಡುತ್ತಿದೆ. ಓಲೈಕೆ ರಾಜಕೀಯ ಮಾಡುವುದು ಕಾಂಗ್ರೆಸ್‍ನ ಗುಣವಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಪುಕ್ಕಲುತನ ಕಾಡ್ತಿರೋದ್ರಿಂದ 18 ವರ್ಷ ತುಂಬದ ಮೊಮ್ಮಗ ಜೊತೆ ಪ್ರಚಾರಕ್ಕೆ ಬರ್ತಿದ್ದಾರೆ – ಸಿಂಹ ಕಿಡಿ

    ಕಾಂಗ್ರೆಸ್ ಸತತವಾಗಿ ಚುನಾವಣೆಗಳಲ್ಲಿ ಸೋಲುತ್ತ, ನಿರಂತರವಾಗಿ ಮುಳುಗುತ್ತಿರುವ ಪಕ್ಷವಾಗಿದೆ. ಆದರೆ ದೇಶಾದ್ಯಂತ ಬಿಜೆಪಿ ಚುನಾವಣೆ ಗೆಲ್ಲುತ್ತಿದೆ. ಉತ್ತರಾಖಂಡ್ ಹಾಗೂ ಗೋವಾ ಸೇರಿ ಹಲವು ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ. ಬಿಜೆಪಿಯಲ್ಲಿ ಟಿಕೆಟ್ ಸಿಗದ ಸಾಮಾನ್ಯ ಕಾರ್ಯಕರ್ತರು ಸಹ ಪಕ್ಷಕ್ಕಾಗಿ ಹಗಲು ರಾತ್ರಿ ದುಡಿಯುತ್ತಾರೆ ಎಂದಿದ್ದಾರೆ.

    ಲಕ್ಷ್ಮಣ್ ಸವದಿ (Laxman Savadi) ಹಾಗೂ ಜಗದೀಶ್ ಶೆಟ್ಟರ್ (Jagadish Shettar) ಪಕ್ಷ ತೊರೆದ ವಿಚಾರವಾಗಿ ಮಾತನಾಡಿದ ಅವರು, ಹಿರಿಯ ನಾಯಕರಾಗಿ ಪಕ್ಷ ತೊರೆಯುವ ಮುನ್ನ ಯೋಚನೆ ಮಾಡಬೇಕಿತ್ತು. ಭಾರತದ ಪ್ರಜಾಪ್ರಭುತ್ವವನ್ನು ತೆಗಳುವ ರಾಹುಲ್ ಗಾಂಧಿಯವರ (Rahul Gandhi) ಪಕ್ಷಕ್ಕೆ ಹೋಗಿರುವುದು ದುರಾದೃಷ್ಟಕರ ವಿಷಯ. ದೇಶಾದ್ಯಂತ ಜನರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಆದರೆ ಕೆಲವರು ಮುಳುಗುತ್ತಿರುವ ಕಾಂಗ್ರೆಸ್ ಕಡೆ ಪ್ರಯಾಣಿಸುತ್ತಿದ್ದಾರೆ ಎಂದು ಕುಟುಕಿದರು.

    ಪಕ್ಷದಲ್ಲಿ ಎಲ್ಲರಿಗೂ ಟಿಕೆಟ್ ನೀಡಲು ಆಗುವುದಿಲ್ಲ. ಟಿಕೆಟ್ ಸಿಗದವರಿಗೆ ನೋವಿದೆ. ಆದರೂ ಬಿಜೆಪಿ ಕಾರ್ಯಕರ್ತರು ಒಂದು ಸಿದ್ಧಾಂತಕ್ಕಾಗಿ ಕೆಲಸ ಮಾಡುತ್ತಾರೆ. ಸಮಾಜಸೇವೆ, ದೇಶ ಸೇವೆ ಅವರಿಗೆ ಮುಖ್ಯವಾಗಿದೆ. ಪ್ರಧಾನಿ ಮೋದಿ (Narendra Modi) ನೇತೃತ್ವದಲ್ಲಿ ಕೆಲಸ ಮಾಡುವುದು ಹೆಮ್ಮೆಯ ವಿಚಾರ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಅವರದ್ದು ಬರೀ ಕುಟುಂಬ ರಾಜಕಾರಣ, ಯಾರು ಪ್ರಶ್ನೆ ಮಾಡಬಾರದು ಅಂದರೆ ಹೇಗೆ: ಎಚ್‌ಡಿಕೆ ವಿರುದ್ಧ ಸುಮಲತಾ ಕಿಡಿ

  • ಬೆಳಗಾವಿಯಲ್ಲಿ ಇರೋದು ಬಿಜೆಪಿ ‌ಬಣ ಮಾತ್ರ: ಅರುಣ್ ಸಿಂಗ್

    ಬೆಳಗಾವಿಯಲ್ಲಿ ಇರೋದು ಬಿಜೆಪಿ ‌ಬಣ ಮಾತ್ರ: ಅರುಣ್ ಸಿಂಗ್

    ಬೆಂಗಳೂರು : ಬೆಳಗಾವಿಯಲ್ಲಿ ಬಿಜೆಪಿ (BJP) ಬಣ ಮಾತ್ರ ಇದೆ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh) ತಿಳಿಸಿದರು.

    ಬೆಳಗಾವಿಯಲ್ಲಿ (Belagavi) ಬಣ ರಾಜಕೀಯದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿಯಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಎಲ್ಲಾ ನಾಯಕರು ಒಟ್ಟಾಗಿ ಇದ್ದಾರೆ. ಬಿಜೆಪಿಯಲ್ಲಿ ಇರುವುದು ಒಂದೇ ಒಂದು ಬಣ ಅದು ಬಿಜೆಪಿ ಬಣವಾಗಿದೆ. ಎಲ್ಲ ನಾಯಕರು ಒಟ್ಟಾಗಿ ಕೆಲಸ ಮಾಡುತ್ತೇವೆ. ಮೋದಿ (Narendra Modi), ನಡ್ಡಾ (JP Nadda), ಯಡಿಯೂರಪ್ಪ (BS Yediyurappa) ಸಿಎಂ ನೇತೃತ್ವದಲ್ಲಿ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

    ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ್ ವಿಚಾರವು ಹಳೆ ವಿಚಾರವಾಗಿದೆ. ಹೊಸದು ಏನಾದರೂ ಇದ್ದರು ಹೇಳಿ ಎಂದು ಯತ್ನಾಳ್‌ಗೆ ನೋಟಿಸ್ ನೀಡಿದ ಬಗ್ಗೆ ಉತ್ತರ ನೀಡಲು ನಿರಾಕರಿಸಿದರು. ಎಲ್ಲ ನಾಯಕರು ಒಂದೇ ಹೇಳುತ್ತಿರೋದು ಬಿಜೆಪಿ ಅಧಿಕಾರಕ್ಕೆ ಬರಬೇಕು ಅಂತ. ಎಲ್ಲರೂ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿ 150 ಸ್ಥಾನ ಪಡೆಯುತ್ತದೆ. ಇದಕ್ಕೆ ಬೇಕಾದ ಕೆಲಸ ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: ಕುಮಾರಸ್ವಾಮಿಯನ್ನು ಬಿಟ್ಟು ನಾನು ಏನೂ ಮಾಡಲ್ಲ – ಟಿಕೆಟ್ ದಂಗಲ್ ಬಗ್ಗೆ ಮೌನ ಮುರಿದ ರೇವಣ್ಣ

    ಮಂಡ್ಯದಲ್ಲಿ ಸಚಿವ ಅಶೋಕ್‌ಗೆ ಗೋ ಬ್ಯಾಕ್ ಅಶೋಕ್ ಎಂಬ ಅಭಿಯಾನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ‌ ಬಗ್ಗೆ ನನಗೆ ಮಾಹಿತಿ ಇಲ್ಲ. ಅಶೋಕ್ ಪಕ್ಷದ ಸಿನಿಯರ್ ಲೀಡರ್. ಅನೇಕ ವರ್ಷಗಳಿಂದ ಪಕ್ಷಕ್ಕೆ ಕೆಲಸ ಮಾಡುತ್ತಿದ್ದಾರೆ. ಏನಾಗಿದೆ ಅದನ್ನು ತಿಳಿದುಕೊಂಡು ಮಾತನಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕದ ಮಹಿಳಾ ಶಕ್ತಿಗೆ ಮತ್ತೊಂದು ಭರವಸೆ ಭವಾನಿ ಅಮ್ಮ – ಸಾಮಾಜಿಕ ಜಾಲತಾಣದಲ್ಲಿ JDS ಬೆಂಬಲಿಗರ ಬ್ಯಾಟಿಂಗ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ: ಅರುಣ್ ಸಿಂಗ್

    ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ: ಅರುಣ್ ಸಿಂಗ್

    ಬೆಂಗಳೂರು: ಈ ಬಾರಿಯ ಚುನಾವಣೆ (Election) ಯಲ್ಲಿ ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್ (Congress) ಪಕ್ಷ ಹೆಸರು ಇಲ್ಲದ ಹಾಗೆ ಆಗುತ್ತಿದೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸೀಟು ಕೂಡ ಗೆದ್ದಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪ್ರವಾಸ ನಡೆಯುತ್ತಿದೆ. ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಚರ್ಚಿಸುತ್ತಿದ್ದೇವೆ. ಬೂತ್ ಮಟ್ಟದ ಕಾರ್ಯಕರ್ತರಿಂದಲೇ ಪಕ್ಷ ಗೆಲ್ಲುತ್ತದೆ ಎಂದರು.

    ಸಂಘಟನೆ ಮತ್ತು ಕಾರ್ಯಕರ್ತರ ಪಕ್ಷ ಬಿಜೆಪಿ. ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್ ಪಕ್ಷ ಹೆಸರು ಇಲ್ಲದ ಹಾಗೆ ಆಗುತ್ತಿದೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸೀಟು ಗೆದ್ದಿಲ್ಲ. ಹಿಮಾಚಲ ಪ್ರದೇಶ ಮತ್ತು ಗುಜರಾತ್ (Gujrat) ನಲ್ಲಿ ಕೂಡ ಕಾಂಗ್ರೆಸ್ ಸೋಲುತ್ತದೆ. ಎಲ್ಲಾ ಕಡೆ ಬಿಜೆಪಿ (BJP) ಗೆದ್ದುಕೊಂಡು ಬರುತ್ತಿದೆ. ಮುಂದಿನ ದಿನದಲ್ಲೂ ಕರ್ನಾಟಕದಲ್ಲಿ ಬಿಜೆಪಿ ವಿಜಯಶಾಲಿಯಾಗುತ್ತದೆ ಎಂದು ಹೇಳಿದರು.

    ಕರ್ನಾಟಕದಲ್ಲಿ ನಾವು ಸಾಕಷ್ಟು ಕೆಲಸ ಮಾಡಿದ್ದೇವೆ. ನಾವು ಮಾಡಿರುವ ಕೆಲಸ ನೋಡಿ ಕರ್ನಾಟಕದಲ್ಲಿ ಸಾಕಷ್ಟು ಇನ್ವೆಸ್ಟ್ ಆಗಿದೆ. ರಾಜ್ಯದ ಎಲ್ಲಾ ಸಚಿವರು ಗ್ರೌಂಡ್ ನಲ್ಲಿ ಇಳಿದು ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕೆಲಸ ರಾಜ್ಯದ ಜನಕ್ಕೆ ಇಷ್ಟ ಆಗಿದೆ. ಹಾಗಾಗಿ ಮುಂದಿನ ಬಾರಿಯೂ ರಾಜ್ಯದಲ್ಲಿ ನಮ್ಮದೇ ಸರ್ಕಾರವಿರುತ್ತದೆ. ಕಾಂಗ್ರೆಸ್‍ನವರ ಬಳಿ ಹೇಳಿಕೊಳ್ಳಲು ಏನೂ ಇಲ್ಲ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಅಲೆಮಾರಿ ರಾಜಕಾರಣಿ, ರಾಜ್ಯದಲ್ಲಿ ಎಲ್ಲಿಯೇ ಸ್ಪರ್ಧಿಸಿದರೂ ಸೋಲುತ್ತಾರೆ : ಈಶ್ವರಪ್ಪ

    ಇದೇ ವೇಳೆ ಹಿಂದೂ ಪದದ ಕುರಿತು ಸತೀಶ್ ಜಾರಕಿಹೊಳಿ (Sathish Jarakiholi) ವಿವಾದಾತ್ಮಕ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಯಾವಾಗಲೂ ನಮ್ಮ ಸಂಸ್ಕೃತಿಯನ್ನು ಹೀಯಾಳಿಸಿಕೊಂಡು ಬರುತ್ತಿದೆ. ರಾಹುಲ್ ಗಾಂಧಿ ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ. ಆದರೆ ಕಾಂಗ್ರೆಸ್ ಪಕ್ಷದ ಶಾಸಕರು ಈಥರ ಹೇಳಿಕೆಗಳನ್ನು ಕೊಡುತ್ತಾರೆ. ಈ ನಿಂದನೆ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದರು.

    ರಾಜ್ಯದ ಜನರು ಇದಕ್ಕೆ ಉತ್ತರ ನೀಡುತ್ತಾರೆ. ಜಾರಕಿಹೊಳಿ ವಿರುದ್ಧ ಕಾಂಗ್ರೆಸ್‍ನವರು ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದರೆ ಡಿಕೆ ಸಿದ್ದರಾಮಯ್ಯ, ರಾಹುಲ್ ಗಾಂಧಿ (Rahul Gandhi) ಮೂರು ಜನ ಇದನ್ನು ಒಪ್ಪಿಕೊಂಡಂತೆ ಆಗುತ್ತದೆ. ಅವರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಇಲ್ಲಿನವರೇ. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಇದರ ಬಗ್ಗೆ ಗಮನ ಹರಿಸಬೇಕು ಎಂದರು.

    ಬಳಿಕ ಅರುಣ್ ಸಿಂಗ್ ಅವರು ಕಲಬುರಗಿಯಲ್ಲಿ ಇಂದು ನಡೆಯಲಿರುವ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ತೆರಳಿದರು. ಇಂದಿನಿಂದ ನಾಲ್ಕು ದಿನಗಳ ಕಾಲ ಜನ ಸಂಕಲ್ಪ ಯಾತ್ರೆ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • ಯತ್ನಾಳ್‍ಗೆ ನೋಟಿಸ್ ನೀಡಿ ಪಕ್ಷದ ಹಿರಿಯ ನಾಯಕರ ವಿರುದ್ಧ ಮಾತನಾಡದಂತೆ ವಾರ್ನ್ ಮಾಡಿದ್ದೇವೆ: ಅರುಣ್ ಸಿಂಗ್

    ಯತ್ನಾಳ್‍ಗೆ ನೋಟಿಸ್ ನೀಡಿ ಪಕ್ಷದ ಹಿರಿಯ ನಾಯಕರ ವಿರುದ್ಧ ಮಾತನಾಡದಂತೆ ವಾರ್ನ್ ಮಾಡಿದ್ದೇವೆ: ಅರುಣ್ ಸಿಂಗ್

    ಬೆಳಗಾವಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (BasanaGowda Patil Yatnal) ಅವರ ಹೇಳಿಕೆಗೆ ನೋಟಿಸ್ ಜಾರಿ ಮಾಡಿದ್ದೇವೆ. ಪಕ್ಷಕ್ಕೆ ಡ್ಯಾಮೇಜ್‌ ಮಾಡದಂತೆ ವಾರ್ನ್ ಮಾಡಿದ್ದೇವೆ. ಪಕ್ಷದ ಹಿರಿಯ ನಾಯಕರ ವಿರುದ್ಧ ಮಾತನಾಡದಂತೆ ವಾರ್ನಿಂಗ್ ಮಾಡಿದ್ದೇವೆ ಎಂದು ಬಿಜೆಪಿ (BJP) ರಾಜ್ಯ ಉಸ್ತುವಾರಿ ಅರುಣ್ ಸಿಂಗ್ (Arun Singh) ಹೇಳಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರನ್ನು ಮಂತ್ರಿ ಮಾಡಿಲ್ಲ. ಅದಕ್ಕಾಗಿ ಹೀಗೆ ಮಾತನಾಡಿದ್ದಾರೆ. ಯಾರೇ ಆದ್ರು ಪಕ್ಷದ ಚೌಕಟ್ಟಿನಲ್ಲಿ ಮಾಡಬೇಕು. ಪಕ್ಷದ ಹಿರಿಯ ನಾಯಕರನ್ನು ಗೌರವಿಸಬೇಕು. ಯತ್ನಾಳ್ ಇಂತಹ ಹೇಳಿಕೆಗೆ ನೋಟಿಸ್ ಜಾರಿ ಮಾಡಿದ್ದೇವೆ. ಪಕ್ಷಕ್ಕೆ ಡ್ಯಾಮೇಜ್‌ ಮಾಡದಂತೆ ವಾರ್ನ್ ಮಾಡಿದ್ದೇವೆ. ಪಕ್ಷದ ಹಿರಿಯ ನಾಯಕರ ವಿರುದ್ಧ ಮಾತನಾಡದಂತೆ ಸೂಚಿಸಿದ್ದೇವೆ. ಈ ಬಗ್ಗೆ ಪಕ್ಷ ಸೂಕ್ತವಾದ ನಿರ್ಧಾರ ಮಾಡಲಿದೆ. ಯಾರು ತಮ್ಮ ಸ್ವಾರ್ಥವನ್ನು ಇಟ್ಟುಕೊಂಡು ಮಾತನಾಡಬಾರದು ಎಂದರು. ಇದನ್ನೂ ಓದಿ: ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ: ಅರುಣ್ ಸಿಂಗ್

    ಬಿಎಸ್‍ವೈ, ಸಿಎಂ ಬೊಮ್ಮಾಯಿ ಒಟ್ಟಾಗಿ ವಿಜಯಸಂಕಲ್ಪ ಯಾತ್ರೆ ಮಾಡಿದ್ರೆ ಬಿಜೆಪಿ ಸೋಲುತ್ತದೆ ಎಂದು ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ್ ಅವರ ಹೇಳಿಕೆಯಿಂದ ಯಾವುದೇ ಪರಿಣಾಮ ಬೀರುವುದಿಲ್ಲ. ಯತ್ನಾಳ್ ಹೇಳಿಕೆಯನ್ನು ಪಕ್ಷದ ಕಾರ್ಯಕರ್ತರು ನಿರ್ಲಕ್ಷ್ಯ ಮಾಡುತ್ತಾರೆ. ಅವರು ನಮ್ಮ ಕೋರ್ ಕಮಿಟಿ ಸದಸ್ಯರೂ ಅಲ್ಲ. ಇಂತಹ ಯತ್ನಾಳ್ ಹೇಳಿಕೆ ಪಕ್ಷದ ಕಾರ್ಯಕರ್ತರಿಗೂ ಇಷ್ಟ ಆಗಲ್ಲ. ಯತ್ನಾಳ್ ಅವರು ಬಿಜೆಪಿಯಿಂದ ಗೆದ್ದಿದ್ದಾರೆ. ಈ ಹಿಂದೆ ಪಕ್ಷದಿಂದ ಹೊರಗೆ ಹೋಗಿದ್ರು. ಬಿಜೆಪಿ ಎಲ್ಲಾ ಸಮಾಜ, ಜನಾಂಗದ ಪರವಾಗಿ ಕೆಲಸ ಮಾಡುತ್ತಿದೆ. ಸಬ್ಕಾ ಸಾಥ್, ಸಬ್ಕಾ ವಿಕಾಸ್‌ ಅಂತಾ ಮೋದಿ (Narendra Modi) ಸರ್ಕಾರ ಕೆಲಸ ಮಾಡುತ್ತಿದೆ. ಮೋದಿಯವರ ಸರ್ಕಾರ ಎಲ್ಲರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಅನೇಕ ಸ್ವಾಮೀಜಿ ಅವರೇ ಮೋದಿಯವರನ್ನು ಬೆಂಬಲಿಸುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಆಧುನಿಕ ಭಗೀರಥ ಖ್ಯಾತಿಯ ಕಾಮೇಗೌಡ ನಿಧನ

    ಪಂಚಮಸಾಲಿ (Panchamasali) ಮೀಸಲಾತಿ ಹೋರಾಟ ವಿಚಾರಕ್ಕೆ, ಎಸ್‍ಸಿ (SC), ಎಸ್‍ಟಿ (ST) ಮೀಸಲಾತಿಯನ್ನು ಬೊಮ್ಮಾಯಿ ಸರ್ಕಾರ ಹೆಚ್ಚಳ ಮಾಡಿದೆ. ಎಸ್‍ಸಿ, ಎಸ್‍ಟಿ ಮೀಸಲಾತಿಗೆ ಬಿಜೆಪಿ ಬೆಂಬಲಿಸಿದೆ. ಕಾಂಗ್ರೆಸ್ (Congress) ಎಂದಿಗೂ ಮೀಸಲಾತಿ ಹೆಚ್ಚಿಸುವ ಕೆಲಸವನ್ನು ಮಾಡಲಿಲ್ಲ. ಪಂಚಮಸಾಲಿ ಸಮುದಾಯದ ಮೂರು ದೊಡ್ಡ ನಾಯಕರೇ ಮಂತ್ರಿಗಳಿದ್ದಾರೆ. ಮುರುಗೇಶ್ ನಿರಾಣಿ, ಸಿ.ಸಿ.ಪಾಟೀಲ್, ಶಂಕರ್ ಗೌಡ ಪಾಟೀಲ್ ಮುನೇನಕೊಪ್ಪ ಅವರೇ ಪಂಚಮಸಾಲಿ ಸಚಿವರು ಇದ್ದಾರೆ. ಆದ್ರು ಪಂಚಮಸಾಲಿ ಸಮುದಾಯದ ಜನರ ಬೇಡಿಕೆ ಬಗ್ಗೆ ಕುಳಿತು ಸಮಾಲೋಚನೆ ಮಾಡಿದ್ದೇವೆ ಎಂದು ಅರುಣ್ ಸಿಂಗ್ ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ: ಅರುಣ್ ಸಿಂಗ್

    ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ: ಅರುಣ್ ಸಿಂಗ್

    ಹುಬ್ಬಳ್ಳಿ : ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ನಮ್ಮ ಪಕ್ಷದ ನಾಯಕರಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ (Arun Singh) ತಿಳಿಸಿದರು.

    ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಬಿಜೆಪಿ (BJP) ಕೋರ್ ಕಮಿಟಿಯಲ್ಲಿ ಇಲ್ಲ. ಅವರ ಹೇಳಿಕೆ ಪಕ್ಷದ ಹೇಳಿಕೆಯಲ್ಲ. ಅಲ್ಪಸಂಖ್ಯಾತ ಮೀಸಲಾತಿ ಬಗ್ಗೆ ಬೆಲ್ಲದ್ ಮತ್ತು ಯತ್ನಾಳ್ ಹೇಳಿದ್ದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ನಾವು ಯತ್ನಾಳ್‍ಗೆ ನೋಟಿಸ್ ಜಾರಿ ಮಾಡಿ ಉತ್ತರ ಪಡೆದಿದ್ದೇವೆ. ಯತ್ನಾಳ್ ಸ್ವಭಾವವೇ ಹಾಗಿದೆ ಏನೂ ಮಾಡಲು ಆಗಲ್ಲ. ನೋಡೋಣ ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಶೆಟ್ಟರ್ ಅವರನ್ನು ಪಕ್ಷ ಸೈಡ್‍ಲೈನ್ ಮಾಡಿಲ್ಲ. ಅವರು ಕೋರ್ ಕಮಿಟಿಯಲ್ಲಿದ್ದಾರೆ ಅವರಿಗೂ ಟಿಕೆಟ್ ಸಿಗಲಿದೆ ಎಂದು ಭರವಸೆ ನೀಡಿದರು.

    ರಾಜ್ಯದಲ್ಲಿ ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. 150 ಸೀಟುಗಳೊಂದಿಗೆ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ಶಕ್ತಿಯೊಂದಿಗೆ ರಾಜ್ಯದ ಪ್ರತಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯಕರ್ತರು ಸಂಕಲ್ಪ ಮಾಡಿದ್ದಾರೆ. ದೇಶದ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಕಚ್ಚಾಡುವ ಸರ್ಕಾರ ನಡೆಸುತ್ತಿದೆ. ದೇಶದಲ್ಲಿ ಬಿಜೆಪಿಯಿಂದ ಪುನಃ ಸರ್ಕಾರ ರಚಿಸುವ ಟ್ರೆಂಡ್ ನಡೆಯುತ್ತಿದೆ. ಬಿಜೆಪಿ ಎಸ್‍ಸಿ, ಎಸ್‍ಟಿ ಕಲ್ಯಾಣಕ್ಕೆ ಸಮರ್ಪಿತವಾಗಿ ಕೆಲಸ ಮಾಡುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ಕೊಡುವಂತಹದ್ದು ಕಾಂಗ್ರೆಸ್‍ನವರು ಏನು ಮಾಡಿದ್ದಾರೆ? ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಏನು ಮಾಡಿದ್ದಾರೆ? ಇದಕ್ಕೆಲ್ಲಾ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿ ಉತ್ತರ ಕೊಡಲಿ ಎಂದ ಸವಾಲು ಹಾಕಿದ ಅವರು, ಕಾಂಗ್ರೆಸ್ ಪಕ್ಷ ಎಸ್‍ಸಿ, ಎಸ್‍ಟಿ ಸಮಾಜವನ್ನು ಭ್ರಮೆಯಲ್ಲಿಟ್ಟಿದೆ. ಕಾಂಗ್ರೆಸ್‍ನವರು (Congress) ಎಸ್‍ಸಿ, ಎಸ್‍ಟಿ ಸಮುದಾಯದ ಅಭಿವೃದ್ಧಿಗೆ ಯಾವುದೇ ಕೆಲಸವನ್ನು ಮಾಡಿಲ್ಲ. ಆದರೆ ರಾಜ್ಯ ಬಿಜೆಪಿ ಸರ್ಕಾರ ಎಸ್‍ಸಿ, ಎಸ್‍ಟಿ ಸಮಾಜಕ್ಕೆ ಮೀಸಲಾತಿ ಹೆಚ್ಚಿಸಿ ನೈಜ ಕಾಳಜಿ ಪ್ರದರ್ಶಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ಆಂಧ್ರ ಸಚಿವೆ ರೋಜಾ ಕಾರಿನ ಮೇಲೆ ಪವನ್ ಕಲ್ಯಾಣ್ ಬೆಂಬಲಿಗರಿಂದ ದಾಳಿ

    ರಾಹುಲ್‌ ಗಾಂಧಿ ನೇತೃತ್ವದ್ದು ಭಾರತ್ ಜೋಡೋ ಯಾತ್ರೆ ಅಲ್ಲ. ಇದು ಕಾಂಗ್ರೆಸ್ ನಾಯಕರ ಜೋಡೋ ಯಾತ್ರೆಯಾಗಿದೆ. ಕಾಂಗ್ರೆಸ್‍ನ ಪಾದಯಾತ್ರೆ ಕೇವಲ ಡಿಕೆಶಿ ಮತ್ತು ಸಿದ್ದರಾಮಯ್ಯನವರನ್ನು ಜೋಡಿಸುವ ಯಾತ್ರೆಯಾಗಿದೆ. ರಾಹುಲ್ ಗಾಂಧಿ ಇಬ್ಬರನ್ನೂ ಬಲವಂತವಾಗಿ ಕೂಡಿಸಲು ಹೊರಟಿದ್ದಾರೆ. ಆದರೆ ಡಿಕೆಶಿ ಮತ್ತು ಸಿದ್ದರಾಮಯ್ಯ ಪರಸ್ಪರ ಐದು ನಿಮಿಷ ಕಣ್ಣಲ್ಲಿ ಕಣ್ಣಿಟ್ಟು ಮಾತನಾಡಲ್ಲ. ಪರಸ್ಪರ ಕಚ್ಚಾಟ ಮಾಡಿಕೊಂಡಿದ್ದಾರೆ. ಇದರಿಂದಾಗಿ ಭಾರತ್ ಜೋಡೋ ಯಾತ್ರೆ ಪ್ಲಾಪ್ ಆಗಿದೆ. ಬದಲಾಗಿ ಭಾರತ್ ಜೋಡೋ ದಿಂದ ರಾಹುಲ್ ಗಾಂಧಿಗೆ ಮುಂಜಾನೆ ಸಂಜೆ ವಾಕಿಂಗ್ ಆಗುತ್ತಿದೆ ಎಂದು ಟೀಕಿಸಿದರು. ಇದನ್ನೂ ಓದಿ: ನೀವು ಒಬ್ಬರನ್ನ ಮದ್ವೆಯಾಗಿ ಮೂವರನ್ನ ಇಟ್ಟುಕೊಳ್ತೀರಾ – ಹಿಂದೂಗಳ ಟೀಕಿಸಿದ್ದ ಶೌಕತ್ ಅಲಿ ವಿರುದ್ಧ ಕೇಸ್

    Live Tv
    [brid partner=56869869 player=32851 video=960834 autoplay=true]

  • ರಾಹುಲ್ ಗಾಂಧಿಗೆ ಯಾವುದೇ ದೂರದೃಷ್ಟಿ ಇಲ್ಲ: ಅರುಣ್‌ ಸಿಂಗ್

    ರಾಹುಲ್ ಗಾಂಧಿಗೆ ಯಾವುದೇ ದೂರದೃಷ್ಟಿ ಇಲ್ಲ: ಅರುಣ್‌ ಸಿಂಗ್

    ಹಾವೇರಿ: ರಾಹುಲ್ ಗಾಂಧಿಯವರಿಗೆ (Rahul Gandhi) ಯಾವುದೇ ದೂರದೃಷ್ಟಿ ಇಲ್ಲ. ಅವರು, ನೋಡಿಕೊಂಡು ಓದೋದನ್ನು ಬಿಟ್ಟು ಸ್ವಂತವಾಗಿ ಮಾತನಾಡಲಿ ಎಂದು ಬಿಜೆಪಿ (BJP) ಉಸ್ತುವಾರಿ ಅರುಣ್‌ ಸಿಂಗ್ (Arun Singh) ತಿಳಿಸಿದರು.

    ಹಾವೇರಿ (Haveri) ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಮಾಸೂರು ಪಟ್ಟಣದಲ್ಲಿ ಸರ್ವಜ್ಞನ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ರಾಹುಲ್ ಗಾಂಧಿ ಬರೆದುಕೊಟ್ಟ ಭಾಷಣವನ್ನು ಓದುತ್ತಾರೆ. ರಾಹುಲ್ ಗಾಂಧಿ ಮೂವತ್ತು ದಿನಗಳ ಕಾಲ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಆದರೆ ರಾಹುಲ್ ಗಾಂಧಿಯನ್ನು ನಾಯಕ ಎಂದು ಜನರು ಒಪ್ಪಿಕೊಳ್ಳುವುದಿಲ್ಲ ಎಂದು ಟೀಕಿಸಿದರು.

    ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ನಮ್ಮ ಸರಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ರಾಜ್ಯದಲ್ಲಿ 2013ರ ಕಾಂಗ್ರೆಸ್ ಇತಿಹಾಸ ಮರುಕಳಿಸಲಿದೆ ಅನ್ನೋದು ಸುಳ್ಳು. ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಹೆಸರಿಲ್ಲದಂತಾಗಿದೆ. 2023ರ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ 150 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು. ಇದನ್ನೂ ಓದಿ: ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಪಾಕಿಸ್ತಾನವೂ ಒಂದು – ಜೋ ಬೈಡೆನ್‌

    ಹಳ್ಳಿ ಹಳ್ಳಿಗಳಲ್ಲಿ ಸಮಾಜ ಜಾಗೃತಿ, ಸಮಾನತೆಯ ಸಂದೇಶ ಸಾರಿದ ಸರ್ವಜ್ಞನ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದು, ನನ್ನ ಸೌಭಾಗ್ಯ ಎಂದು ಇದೇ ವೇಳೆ ನುಡಿದರು. ಇದನ್ನೂ ಓದಿ: ಹಲಾಲ್ ಮುಕ್ತ ದೀಪಾವಳಿ ಅಭಿಯಾನಕ್ಕೆ ಮುತಾಲಿಕ್ ಕರೆ

    Live Tv
    [brid partner=56869869 player=32851 video=960834 autoplay=true]

  • ಉಮೇಶ್ ಕತ್ತಿ ರಾಜಕೀಯ ಜೀವನ ಪುಸ್ತಕವಾಗಬೇಕು: ಅರುಣ್ ಸಿಂಗ್

    ಉಮೇಶ್ ಕತ್ತಿ ರಾಜಕೀಯ ಜೀವನ ಪುಸ್ತಕವಾಗಬೇಕು: ಅರುಣ್ ಸಿಂಗ್

    ಚಿಕ್ಕೋಡಿ: ಉಮೇಶ್ ಕತ್ತಿ ಅವರ ರಾಜಕೀಯ ಜೀವನ ಪುಸ್ತಕವಾಗಬೇಕು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು.

    ಬೆಳಗಾವಿ(Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ದಿವಂಗತ ಉಮೇಶ್ ಕತ್ತಿಯವರ ನಿವಾಸಕ್ಕೆ ಭೇಟಿ ನೀಡಿದ ಅವರು, ಸಚಿವ ಉಮೇಶ್ ಕತ್ತಿ ನನ್ನ ವೈಯಕ್ತಿಕ ಮಿತ್ರ. ಬೆಳಗಾವಿ, ಬೆಂಗಳೂರು(Bengaluru), ದೆಹಲಿಯಲ್ಲಿ ಅನೇಕ ಸಲ ಕುಳಿತು ಮಾತನಾಡಿದ್ದೇವೆ. ರಾಜ್ಯದ ಅಭಿವೃದ್ಧಿ, ಪಕ್ಷ ಕಟ್ಟುವ ಬಗ್ಗೆ ಅನೇಕ ಸಲಹೆ ನೀಡುತ್ತಿದ್ದರು. ಉಮೇಶ್ ಕತ್ತಿ ಬಿಂದಾಸ್ ವ್ಯಕ್ತಿಯಾಗಿದ್ದರು. ಅವರ ಅಗಲಿಕೆಯಿಂದಾಗಿ ಪಕ್ಷ ಹಾಗೂ ರಾಜ್ಯಕ್ಕೆ ನಷ್ಟ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    40 ವರ್ಷಗಳ ಕಾಲದಿಂದ ಜನ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಈ 40 ವರ್ಷಗಳ ರಾಜಕೀಯ ಜೀವನವು ಪುಸ್ತಕದ ರೂಪದಲ್ಲಿ ಹೊರ ಬರಬೇಕು. ಒಬ್ಬ ರಾಜಕೀಯ ನಾಯಕ 40 ವರ್ಷಗಳ ಶಾಸಕನಾಗಿ ಮಾಡಿದ ಕೆಲಸ, ಅವರ ದೂರದೃಷ್ಟಿ, ಅವರ ಆಲೋಚನೆಗಳು ಎಲ್ಲರಿಗೂ ಗೊತ್ತಾಗಬೇಕಿದೆ ಎಂದರು. ಇದನ್ನೂ ಓದಿ: ಉಮೇಶ್‌ ಕತ್ತಿ ಸಮಾಧಿಗೆ ಪುತ್ರ, ಅಳಿಯನಿಂದ ಪೂಜೆ- ಗುಟ್ಕಾ ಪ್ಯಾಕೆಟ್ ಇಟ್ಟು ನಮನ

    ಬಳಿಕ ಮಾತನಾಡಿದ ಸಚಿವ ಕೆ. ಸುಧಾಕರ್(Sudhakar) ಅವರು, ಉಮೇಶ್ ಕತ್ತಿ(Umesh Katti) ಅವರ ಅಕಾಲಿಕ ನಿಧನ ನಮ್ಮೆಲ್ಲರಿಗೂ ನೋವನ್ನುಂಟು ಮಾಡಿದೆ. ಅವರದ್ದು, ನನ್ನದು ದೀರ್ಘ ಕಾಲದ ಸ್ನೇಹ ಸಂಬಂಧ. ಉಮೇಶ್ ಕತ್ತಿ ಇದ್ದಲ್ಲಿ ನಗುವಿಗೆ ಬರ ಇರಲಿಲ್ಲ. ಅವರು ಇಲ್ಲದ ನಷ್ಟವನ್ನು ಎದುರಿಸುವಂತಹ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ತಿಳಿಸಿದರು. ಇದನ್ನೂ ಓದಿ: ಮಣ್ಣಲ್ಲಿ ಮಣ್ಣಾದ ಬಾಗೇವಾಡಿ ಸಾಹುಕಾರ

    ಇದೇ ವೇಳೆ ಉಮೇಶ್ ಕತ್ತಿ ಭಾವಚಿತ್ರಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್(Arun Singh) ಪುಷ್ಪ ನಮನ ಸಲ್ಲಿಸಿದರು. ನಂತರ ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ ಹಾಗೂ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ಸಚಿವ ಡಾ. ಕೆ. ಸುಧಾಕರ್, ಮುನಿರತ್ನ, ಎಂಟಿಬಿ ನಾಗರಾಜ್, ಸಚಿವ ಭೈರತಿ ಬಸವರಾಜ್ ಭಾಗಿಯಾಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದ `ಸಿಎಂ ಬದಲಾವಣೆ’ ವರದಿ

    ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದ `ಸಿಎಂ ಬದಲಾವಣೆ’ ವರದಿ

    ಬೆಂಗಳೂರು: ರಾಜ್ಯ ಬಿಜೆಪಿ ಸಚಿವರ ಮಾತು ಹೈಕಮಾಂಡ್ ಅಂಗಳ ತಲುಪಿದೆ. ಇದರಿಂದ ಸರ್ಕಾರಕ್ಕೆ ತೀವ್ರ ಮುಜುಗರ ಆಗಿದೆ.

    ಸರ್ಕಾರ ನಡೀತಿಲ್ಲ, ಮ್ಯಾನೇಜ್ ಮಾಡ್ತಿದ್ದೀವಿ ಎಂಬ ಸಚಿವ ಮಾಧುಸ್ವಾಮಿ ಹೇಳಿಕೆ ಹಾಗೂ ಸಿದ್ದರಾಮಯ್ಯ ಸಿಎಂ ಆಗಬೇಕೆಂಬ ಸಚಿವ ಶ್ರೀರಾಮುಲು ಹೇಳಿಕೆಗಳಿಂದ ಡ್ಯಾಮೇಜ್ ಆಗಿದೆ. ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಪದಾಧಿಕಾರಿಗಳ ಸಭೆಯಲ್ಲೂ ಸಚಿವರ ಹೇಳಿಕೆಗಳ ಬಗ್ಗೆ ಪ್ರಸ್ತಾಪ ಆಗಿದ್ದು, ಪದಾಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಸಭೆಯಲ್ಲಿ ಭಾಗವಹಿಸಿದ್ದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಹ ಯಾರೂ ಬಹಿರಂಗವಾಗಿ ನಕಾರಾತ್ಮಕ ಹೇಳಿಕೆ ಕೊಡದಂತೆ ತಾಕೀತು ಮಾಡಿದ್ದಾರೆ. ಈ ಸಂಬಂಧ ಹೈಕಮಾಂಡ್‍ಗೆ ವರದಿ ಕೊಡಲಿದ್ದಾರೆ. ಸಿಎಂ ಬದಲಾವಣೆ ಕುರಿತ ಮಾಜಿ ಶಾಸಕ ಸುರೇಶ್ ಗೌಡರ ಹೇಳಿಕೆಯ ಪರಿಣಾಮದ ಜತೆಗೆ ಸಚಿವರಾದ ಮಾಧುಸ್ವಾಮಿ, ಶ್ರೀರಾಮುಲು ಹೇಳಿಕೆಗಳಿಂದಾದ ಮುಜುಗರ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗುತ್ತದೆ ಎನ್ನಲಾಗಿದೆ.

    ಬಿಎಸ್‍ವೈಗೆ ಸ್ಥಾನಮಾನ ಕೊಟ್ಟ ಬಳಿಕ ಪಕ್ಷದ ಒಳಗಿನ & ಹೊರಗಿನ ಚಿತ್ರಣದ ಬಗ್ಗೆಯೂ ವರದಿಯಲ್ಲಿ ಪ್ರಸ್ತಾಪ ಮಾಡಲಾಗುತ್ತದೆ ಎನ್ನಲಾಗ್ತಿದೆ.

    Live Tv
    [brid partner=56869869 player=32851 video=960834 autoplay=true]