ಜುಲೈ 15ರಿಂದ ಆಗಸ್ಟ್ 5ರವರೆಗೂ ನಡೆದ ಮಾರಣಹೋಮ ಮತ್ತು ಇತರೆ ಅಪರಾಧಗಳ ಆರೋಪ ಸಂಬಂಧ ಶೇಖ್ ಹಸೀನಾ ವಿರುದ್ಧ ಐಸಿಟಿಗೆ 60 ದೂರು ಸಲ್ಲಿಕೆ ಆಗಿತ್ತು. ಈ ಅರ್ಜಿಗಳ ವಿಚಾರಣೆ ನಡೆಸಿರುವ ಕೋರ್ಟ್ ಇದೀಗ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರೆಂಟ್ ಹೊರಡಿಸಿದೆ. ಇದನ್ನೂ ಓದಿ:ಹಮಾಸ್ ಮುಖ್ಯಸ್ಥ ಹತ್ಯೆ – ನಮ್ಮ ಮಿಲಿಟರಿಗೆ ಸಿಕ್ಕಿದ ಜಯ ಎಂದ ಇಸ್ರೇಲ್
ಶೇಖ್ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿರುವುದನ್ನು ಅಲ್ಲಿನ ವಿದ್ಯಾರ್ಥಿ ಸಂಘಟನೆಗಳು ತೀವ್ರವಾಗಿ ವಿರೋಧಿಸುತ್ತಿವೆ. ಆಕೆಯನ್ನು ನಮ್ಮ ದೇಶಕ್ಕೆ ಒಪ್ಪಿಸಿ ಎಂದು ಭಾರತವನ್ನು ಬಿಎನ್ಪಿ ಒತ್ತಾಯಿಸಿತ್ತು.
ಬೆಂಗಳೂರು: ಪೆನ್ಡ್ರೈವ್ ಕೇಸಲ್ಲಿ (Pendrive Case) ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna) ಅತಿದೊಡ್ಡ ಶಾಕ್ ಎದುರಾಗಿದೆ. ಹೊಳೆನರಸೀಪುರ (Holenarasipura) ಕೇಸಲ್ಲಿ ಪಾಸ್ಪೋರ್ಟ್ (Passport) ರದ್ದು ಮಾಡಲು ಕೋರ್ಟ್ ಅನುಮತಿ ನೀಡಿದೆ. ಅಲ್ಲದೆ, ಅರೆಸ್ಟ್ ವಾರೆಂಟ್ಗೆ (Arrrest Warrant) ಎಸ್ಐಟಿ (SIT) ಪರ್ಮಿಷನ್ ಪಡೆದಿದೆ.
ಎಸ್ಐಟಿಗೂ ಸಿಗದೇ ತಲೆಮರೆಸಿಕೊಂಡಿರುವ ಪ್ರಜ್ವಲ್ ವಿದೇಶದಲ್ಲೇ ವಾಸ್ತವ್ಯ ಹೂಡಿದ್ದಾರೆ. ಭೂಗತವಾಗೇ ಇದ್ದು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಹಾಗಾಗಿ ಏನೇ ಆಗಲಿ ಪ್ರಜ್ವಲ್ನನ್ನು ಬಂಧಿಸಲೇಬೇಕು ಎಂದು ಎಸ್ಐಟಿ ಪಣ ತೊಟ್ಟಿದೆ. ಅದರಂತೆ 42ನೇ ಎಸಿಎಂಎಂ ಕೋರ್ಟ್, ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಹೊರಡಿಸಿದ್ದ ನೋಟಿಸ್ಗಳ ಬಗ್ಗೆ ಕೋರ್ಟ್ ಮಾಹಿತಿ ಕೇಳಿತ್ತು. ಈ ವೇಳೆ ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ನೀಡಿರುವ ಬಗ್ಗೆ ಎಸ್ಐಟಿ ಮಾಹಿತಿ ನೀಡಿದೆ. ಇದೀಗ ಕೋರ್ಟ್ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಇದನ್ನೂ ಓದಿ: ರಥೋತ್ಸವದ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸಾವು
ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎಸ್ಐಟಿ ಲುಕ್ಔಟ್ ನೋಟಿಸ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ನೀಡಿತ್ತು. ಇದೀಗ ಅರೆಸ್ಟ್ ವಾರೆಂಟ್ ಲಭಿಸಿರುವುದರಿಂದ ಸಿಬಿಐ ಮೂಲಕ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಎಸ್ಐಟಿ ಸಿದ್ಧತೆ ನಡೆಸುತ್ತಿದೆ. ರೆಡ್ ಕಾರ್ನರ್ ನೋಟಿಸ್ ಬಳಿಕ ಪ್ರಜ್ವಲ್ ಪಾಸ್ಪೋರ್ಟ್ ರದ್ದು ಆಗಲಿದ್ದು, ಇದರಿಂದ ಬಂಧನಕ್ಕೆ ಸಹಕಾರಿಯಾಗಲಿದೆ. ಇದನ್ನೂ ಓದಿ: RCB vs CSK ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ – ಸಿಎಂಗೆ ಸಚಿವರ ಸಾಥ್
ಇನ್ನು ದೋಷಾರೋಪ ಪಟ್ಟಿ ಸಲ್ಲಿಕೆಗೆ ಮುಂದಾದ ಎಸ್ಐಟಿ, ಈಗ ಮತ್ತೊಂದು ಪ್ರಬಲ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಪ್ರಜ್ವಲ್ ರೇವಣ್ಣ ಅಕೌಂಟ್ಗಳನ್ನೇ ಈಗ ಫ್ರೀಜ್ ಮಾಡಲು ಹೊರಟಿದೆ. ಬೆಂಗಳೂರಿನಿಂದಲೇ ಪ್ರಜ್ವಲ್ ಅಕೌಂಟ್ಗೆ ಲಕ್ಷಾಂತರ ರೂ. ಹಣ ಸಂದಾಯವಾಗಿದೆ. ಹೀಗಾಗಿ ವಿದೇಶದಲ್ಲಿ ಇರೋ ಪ್ರಜ್ವಲ್ನನ್ನು ಆರ್ಥಿಕವಾಗಿ ಕಟ್ಟಿಹಾಕಲು ಅಕೌಂಟ್ ಫ್ರೀಜ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಎಸ್ಐಟಿ ಮೂಲಗಳ ಮಾಹಿತಿಯ ಪ್ರಕಾರ ಪ್ರಜ್ವಲ್ 7 ಬ್ಯಾಂಕ್ ಅಕೌಂಟ್ಗಳನ್ನು ಹೊಂದಿದ್ದು, ಆ ಬ್ಯಾಂಕ್ಗಳ ಸಂಪೂರ್ಣ ಮಾಹಿತಿಯನ್ನು ಎಸ್ಐಟಿ ಪಡೆದುಕೊಂಡಿದೆ. ಇದನ್ನೂ ಓದಿ: ನಿಮ್ಮ ಸೇವೆಗೆ ದೇವರು ನನ್ನ ಕಳುಹಿಸಿದ್ದಾನೆ: ಮೋದಿ
ಒಟ್ಟಿನಲ್ಲಿ ವಿದೇಶದಲ್ಲಿ ಭೂಗತರಾಗಿರುವ ಪ್ರಜ್ವಲ್ ರೇವಣ್ಣಗೆ ಅಸಲಿ ಬಿಗ್ ಶಾಕ್ ಈಗ ಕಾದಿದೆ. ಯಾವ ಕಾರ್ನರ್ ನೋಟಿಸ್ಗೂ ಜಗ್ಗದ ಪ್ರಜ್ವಲ್ಗೆ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿ, ಪಾಸ್ಪೋರ್ಟ್ ರದ್ದುಪಡಿಸಿ, ಅರೆಸ್ಟ್ ವಾರೆಂಟ್ ಮೂಲಕ ಪ್ರಜ್ವಲ್ ಬಂಧನಕ್ಕೆ ಎಸ್ಐಟಿ ಬಲೆ ಬೀಸಿದೆ. ಇದನ್ನೂ ಓದಿ: ಬರ ಪರಿಹಾರ ಹಣ ಬಿಡುಗಡೆ – ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ
ಚಿತ್ರದುರ್ಗ: ಜಾಮೀನಿನ ಮೇಲೆ ಬಿಡುಗಡೆ ಹೊಂದಿರುವ ಮುರುಘಾಶ್ರೀಗಳಿಗೆ (Murugha Shree) ಮತ್ತೆ ಬಂಧನದ ಭೀತಿ ಎದುರಾಗಿದೆ.
ಪೋಕ್ಸೋ ಕೇಸಿನಲ್ಲಿ ಶ್ರೀಗಳಿಗೆ ಅರೆಸ್ಟ್ ವಾರೆಂಟ್ (Arrest Warrant) ಜಾರಿಯಾಗಿದೆ. ಶ್ರೀಗಳು ಮೊದಲನೇ ಕೇಸಿನಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು. ಇದೀಗ 2ನೇ ಕೇಸಿನಲ್ಲಿ ಬಂಧಿಸುವಂತೆ ಚಿತ್ರದುರ್ಗ (Chitradurga) ಜಿಲ್ಲಾ ನ್ಯಾಯಾಲಯ ಆದೇಶ ಮಾಡಿದೆ. ಈ ಮೂಲಕ ಕೇವಲ ನಾಲ್ಕೇ ದಿನಕ್ಕೆ ಶ್ರೀಗಳಿಗೆ ಮತ್ತೆ ಬಂಧನದ ಭೀತಿ ಶುರುವಾಗಿದೆ. ಇದನ್ನೂ ಓದಿ: ಪೋಕ್ಸೋ ಕೇಸ್ – ಜೈಲಿನಿಂದ ಮುರುಘಾ ಶ್ರೀ ಬಿಡುಗಡೆ
ಇತ್ತೀಚೆಗೆ ಪ್ರಕರಣವೊಂದಕ್ಕೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಶ್ರೀಗಳು ಜೈಲಿನಿಂದ ಹೊರಬಂದಿದ್ದರು. ಆದರೆ ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. 2ನೇ ಪೋಕ್ಸೋ ಕೇಸಲ್ಲಿ ಬಂಧನ ವಾರೆಂಟ್ ಕೋರಿ ಸರ್ಕಾರಿ ವಕೀಲ ಜಗದೀಶ್ ಕೋರ್ಟ್ ಗೆ ಮನವಿ ಮಾಡಿದ್ದರು. ಇದಕ್ಕೆ ಮುರುಘಾ ಶ್ರೀ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಈ ಸಂದರ್ಭದಲ್ಲಿ ನಾವು ಮೌನವಾಗಿರುತ್ತೇವೆ; ಭಕ್ತರಿಗೆ ಮೌನವೇ ದೊಡ್ಡ ಸಂದೇಶ: ಜೈಲಿಂದ ಬಂದ ಮುರುಘಾ ಶ್ರೀ
1ನೇ ಪೊಕ್ಸೋ ಕೇಸಲ್ಲಿ ಹೈಕೋರ್ಟ್ ನಿಂದ (HighCourt) ಷರತ್ತುಬದ್ಧ ಜಾಮೀನು ಹಿನ್ನೆಲೆಯಲ್ಲಿ ಮುರುಘಾಶ್ರೀ ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ. ಮುರುಘಾಶ್ರೀ ಮತ್ತೆ ಬಂಧನದ ಅಗತ್ಯವಿಲ್ಲ. ಬಂಧನ ವಾರೆಂಟ್ ಹೈಕೋರ್ಟ್ ಆದೇಶ ಉಲ್ಲಂಘನೆ ಆಗುತ್ತದೆಂದು ಮುರುಘಾಶ್ರೀ ಪರ ವಕೀಲ ಉಮೇಶ್ ವಾದಿಸಿದ್ದಾರೆ. ಸದ್ಯ ಎರಡೂ ಕಡೆಯ ವಾದ ಆಲಿಸಿರುವ ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಇಂದು ಆದೇಶ ನೀಡಿದೆ. ಈ ಮೂಲಕ 2ನೇ ಪ್ರಕರಣದಲ್ಲಿ ನಿರ್ಧಾರ ಪ್ರಕಟಿಸಿದೆ.
ಕೇರಳದ ಪ್ರಕರಣವೊಂದರ ಉಲ್ಲೇಖದನ್ವಯ ಅರೆಸ್ಟ್ ವಾರೆಂಟ್ ಜಾರಿ ಮಾಡುವಂತೆ ಕೋರ್ಟ್ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರಿಗೆ ಖಡಕ್ ಸೂಚನೆ ನೀಡಿದೆ.
ಇಸ್ಲಾಮಾಬಾದ್: ಮಹಿಳಾ ನ್ಯಾಯಾಧೀಶರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ವಿರುದ್ಧ ಇಸ್ಲಾಮಾಬಾದ್ನ ಮ್ಯಾಜಿಸ್ಟ್ರೇಟ್ ಬಂಧನ ವಾರಂಟ್ ಹೊರಡಿಸಿದ್ದಾರೆ.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಝೆಬಾ ಚೌಧರಿ ಅವರಿಗೆ ಬೆದರಿಕೆ ಹಾಕಿದ್ದಕ್ಕಾಗಿ ಇಮ್ರಾನ್ ಖಾನ್ ವಿರುದ್ಧ ಆಗಸ್ಟ್ 20 ರಂದು ದಾಖಲಾದ ಪ್ರಕರಣದಲ್ಲಿ ಇಸ್ಲಾಮಾಬಾದ್ನ ಮರ್ಗಲ್ಲಾ ಪೊಲೀಸ್ ಠಾಣೆಯ ಮ್ಯಾಜಿಸ್ಟ್ರೇಟ್ ವಾರಂಟ್ ಹೊರಡಿಸಿದ್ದಾರೆ. ಇದನ್ನೂ ಓದಿ: ಸೂಕ್ತ ಒಳಉಡುಪು ಧರಿಸಲೇಬೇಕು – ಪಾಕ್ ವಿಮಾನಯಾನ ಸಂಸ್ಥೆ ಆದೇಶ
ಇಮ್ರಾನ್ ಖಾನ್ ಅಫಿಡವಿಟ್ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಈ ಬಂಧನ ವಾರಂಟ್ ಬಂದಿದೆ. ಯಾವುದೇ ನ್ಯಾಯಾಲಯ ಮತ್ತು ನ್ಯಾಯಾಂಗದ ಅದರಲ್ಲೂ ಕೆಳಮಟ್ಟದ ನ್ಯಾಯಾಂಗದ ಘನತೆಗೆ ಧಕ್ಕೆ ತರುವಂತಹ ಯಾವುದೇ ಕಾರ್ಯವನ್ನು ಭವಿಷ್ಯದಲ್ಲಿ ಮಾಡುವುದಿಲ್ಲ ಎಂದು ಇಮ್ರಾನ್ ಖಾನ್ ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ ಎಂದು ಅಫಿಡವಿಟ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ.
ಆ.20 ರಂದು ಇಸ್ಲಾಮಾಬಾದ್ನಲ್ಲಿ ನಡೆದ ರ್ಯಾಲಿಯಲ್ಲಿ, ದೇಶದ್ರೋಹದ ಆರೋಪದ ಮೇಲೆ ತನ್ನ ಸಹಾಯಕ ಶಹಬಾಜ್ ಗಿಲ್ರನ್ನು ಬಂಧಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಅವರು, ಈ ಬಗ್ಗೆ ಉನ್ನತ ಪೊಲೀಸ್ ಅಧಿಕಾರಿಗಳು, ಚುನಾವಣಾ ಆಯೋಗ ಮತ್ತು ರಾಜಕೀಯ ವಿರೋಧಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಗುಂಡಿನ ದಾಳಿ -ಚೀನಾ ಪ್ರಜೆ ಬಲಿ
Live Tv
[brid partner=56869869 player=32851 video=960834 autoplay=true]
– ಕೇಸ್ಗಳಿಗೆ ಸ್ವಾಗತ, ಕಾಂಗ್ರೆಸ್ಗೆ ಧನ್ಯವಾದ ಅಂದ್ರು ಅನಂತ್ ಕುಮಾರ್ ಹೆಗ್ಡೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಕೌಶಲ್ಯಾಭಿರುದ್ಧಿ ಸಚಿವ ಅನಂತಕುಮಾರ್ ಹೆಗ್ಡೆ ಅವರ ವಿರುದ್ಧ ಮಂಕಿ ಠಾಣೆ ಪೊಲೀಸರು ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದಾರೆ.
ಈ ವಿಚಾರವಾಗಿ ಶಿರಸಿ ತಾಲೂಕಿನ ಮಾರುಕಟ್ಟೆ ಪೊಲೀಸ್ ಠಾಣೆಗೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹಾಜರಾಗಿದ್ದರು. ಈ ವೇಳೆ ಕಾರವಾರದ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಗೆ ಹಾಜರುಪಡಿಸಿದರು. 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಚೋದನಾಕಾರಿ ಭಾಷಣ ಹಿನ್ನಲೆಯಲ್ಲಿ ಅನಂತ್ ಕುಮಾರ್ ಹೆಗ್ಡೆ ವಿರುದ್ದ ಅಂದಿನ ಚುನಾವಣಾಧಿಕಾರಿಯಾಗಿದ್ದ ಭಟ್ಕಳದ ಉಪವಿಭಾಗಾಧಿಕಾರಿ ದೂರನ್ನ ದಾಖಲಿಸಿದ್ದರು.
ಈ ಪ್ರಕರಣ ಕುರಿತು ಮಾತನಾಡಿದ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ, ಭಾಷಣವನ್ನು ಮುಂದಿಟ್ಟು ನನ್ನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ, ಎಂದೋ ಮಾಡಿದ ಭಾಷಣಕ್ಕೆ ಇನ್ಯಾವಾಗಲೋ ಕೇಸ್ ಹಾಕುವ ಸರ್ಕಾರ ಪೂರ್ವಾಗ್ರಹ ಪೀಡಿತವಾದದ್ದು. ಇಂದಿನ ಸರ್ಕಾರ ಮತ್ತೊಮ್ಮೆ ನನ್ನ ಗುರಿ ಮಾಡಿ ಷಡ್ಯಂತ್ರ ರೂಪಿಸುತ್ತಿದೆ. ನಮ್ಮ ಚುನಾವಣೆಯನ್ನೂ ಬಹುಶಃ ಕಾಂಗ್ರೆಸ್ ಸರ್ಕಾರವೇ ಮಾಡಿ ಮುಗಿಸುವ ಸ್ಥಿತಿಯನ್ನು ಅವರೇ ತಂದುಕೊಟ್ಟಿದ್ದಾರೆ. ನನ್ನ ಮೇಲೆ ದಾಖಲಾಗುವ ಕೇಸ್ಗಳಿಗೆ ಸ್ವಾಗತ ಮತ್ತು ಕಾಂಗ್ರೆಸ್ಗೆ ಧನ್ಯವಾದ ಎಂದು ವ್ಯಂಗ್ಯವಾಡಿದ್ದಾರೆ.
ಬೆಳಗಾವಿ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಎಚ್ಚರಿಕೆಯನ್ನು ನೀಡಿದ್ದರೂ ಅವರು ಮಾತನ್ನು ತಿರಸ್ಕರಿಸಿ ಕೋಲ್ಕತ್ತಾದ ಕೋರ್ಟ್ ರೈತರ ಮನೆ ಬಾಗಿಲಿಗೆ ಅರೆಸ್ಟ್ ವಾರೆಂಟ್ ಕಳುಹಿಸಿದೆ.
ಬೆಳಗಾವಿಯ ಬೈಲಹೊಂಗಲ ನಗರದ ಅಕ್ಸಿಸ್ ಬ್ಯಾಂಕ್ನಲ್ಲಿ ಸಾಲ ಪಡೆದ 180 ಕ್ಕೂ ಹೆಚ್ಚು ರೈತರ ವಿರುದ್ಧ ಅರೆಸ್ಟ್ ವಾರೆಂಟ್ ಬಂದಿದೆ. ರೈತರಿಗೆ ಯಾವುದೇ ನೋಟಿಸ್, ಅರೆಸ್ಟ್ ವಾರೆಂಟ್ ಕಳಿಸೋದಿಲ್ಲ ಎಂದು ಮೊಸಳೆ ಕಣ್ಣಿರು ಹಾಕಿದ್ದ ಅಕ್ಸಿಸ್ ಬ್ಯಾಂಕ್ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ವಚನ ನೀಡಿದ್ದು ಇದೀಗ ಮತ್ತೆ ಉಡಾಫೆ ವರ್ತನೆಯನ್ನು ತೋರಿದೆ.
ಕಳೆದ ತಿಂಗಳ ಕೋರ್ಟ್ ಕೇಸಿಗೆ ಹಾಜರಿರದ ಸವದತ್ತಿ ತಾಲೂಕಿನ ಏಣಗಿ ಗ್ರಾಮದ ರೈತರಿಗೆ ಸವದತ್ತಿ ಠಾಣೆಯಿಂದ ಅರೆಸ್ಟ್ ವಾರೆಂಟ್ ಬಂದಿತ್ತು. ಗ್ರಾಮದಲ್ಲಿ ರೈತರಿಗಾಗಿ ಹುಡುಕಾಟ ನಡೆಯುತ್ತಿದ್ದು, ಸರ್ಕಾರದ ಆದೇಶಕ್ಕೆ ಅಕ್ಸಿಸ್ ಬ್ಯಾಂಕ್ ಅಧಿಕಾರಿಗಳು ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಪೊಲೀಸ್ ಜಿಲ್ಲಾ ವರಷ್ಠಾಧಿಕಾರಿಗಳು ನೀಡಿದ ಎಚ್ಚರಿಕೆಯನ್ನು ಮರೆತು ಅವರ ಕಚೇರಿಯಿಂದ ಅ.9 ಕ್ಕೆ ಅರೆಸ್ಟ್ ವಾರೆಂಟ್ ಹೊರಬಂದಿದೆ. ಸದ್ಯಕ್ಕೆ ಅನ್ನದಾತರಲ್ಲಿ ಬಂಧನದ ಭೀತಿ ಉಂಟಾಗಿದೆ.