Tag: ಅರ್ಚಕರು

  • ಅರ್ಚಕರನ್ನು ಕೊಂದ ಮೂವರು ಹಂತಕರ ಮೇಲೆ ಪೊಲೀಸರಿಂದ ಶೂಟ್‍ಔಟ್

    ಅರ್ಚಕರನ್ನು ಕೊಂದ ಮೂವರು ಹಂತಕರ ಮೇಲೆ ಪೊಲೀಸರಿಂದ ಶೂಟ್‍ಔಟ್

    ಮಂಡ್ಯ: ಜಿಲ್ಲೆಯ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರನ್ನು ಬರ್ಬರಾಗಿ ಹತ್ಯೆ ಮಾಡಿದ್ದ ಮೂವರು ಹಂತಕರ ಮೇಲೆ ಪೊಲೀಸರು ಶೂಟ್‍ಔಟ್ ಮಾಡಿದ್ದು, ಶೂಟ್‍ಔಟ್‍ನಲ್ಲಿ ಹಂತಕರಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ಮಂಡ್ಯದಲ್ಲಿ ಮೂವರು ಅರ್ಚಕರ ಹತ್ಯೆ – ತಲಾ 5 ಲಕ್ಷ ಪರಿಹಾರ ಘೋಷಣೆ

    ಇಂದು ಬೆಳಗ್ಗೆ ಮದ್ದೂರು ಮಳವಳ್ಳಿ ರಸ್ತೆಯ ಸಾದೊಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಆಂಧ್ರ ಮೂಲದ ವಿಜಿ (25), ಮದ್ದೂರಿನ ಅರೆಕಲ್ ದೊಡ್ಡಿಯ ಗಾಂಧಿ (28) ಮತ್ತು ತೊಪ್ಪನಹಳ್ಳಿಯ ಮಂಜು (30) ಎಂದು ಗುರುತಿಸಲಾಗಿದೆ.

    ಹಂತಕರು ಈ ಸ್ಥಳದಲ್ಲಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಹೋಗಿದ್ದಾರೆ. ಈ ವೇಳೆ ಹಂತಕರು ಪೊಲೀಸರ ಮೇಲೆ ಚಾಕು ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಆಗ ಐಪಿಎಸ್ ಶರತ್‍ಕುಮಾರ್ ಹಾಗೂ ಓರ್ವ ಪೇದೆಗೆ ಗಾಯಗಳಾಗಿವೆ. ಹೀಗಾಗಿ ಪೊಲೀಸರು ತಮ್ಮ ರಕ್ಷಣೆಗಾಗಿ ಎದುರಿನಲ್ಲಿ ಇದ್ದ ಮೂವರು ಹಂತಕರ ಮೇಲೆ ಗುಂಡು ಹಾರಿಸಿದ್ದಾರೆ.

    ಈ ವೇಳೆ ಹಂತರಿಗೂ ತೀವ್ರವಾದ ಗಾಯಗಳಾಗಿವೆ. ಸದ್ಯ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಹಂತಕರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಶುಕ್ರವಾರ ಮಂಡ್ಯದ ಅರ್ಕೇಶ್ವರ ದೇವಸ್ಥಾನಕ್ಕೆ ನುಗ್ಗಿ ಮೂವರು ಅರ್ಚಕರನ್ನು ಬರ್ಬರವಾಗಿ ಕೊಂದು ದೇವಸ್ಥಾನದ ಹುಂಡಿಯನ್ನು ದರೋಡೆ ಮಾಡಿ ಈ ಹಂತಕರು ಪರಾರಿಯಾಗಿದ್ದರು. ಹಂತಕರ ಸೆರೆಗಾಗಿ ಪೊಲೀಸ್ ಇಲಾಖೆ ನಾಲ್ಕು ತಂಡವನ್ನು ರಚನೆ ಮಾಡಲಾಗಿತ್ತು.

    ಏನಿದು ಪ್ರಕರಣ?
    ಸೆಪ್ಟೆಂಬರ್ 11 ರಂದು ಮಂಡ್ಯ ಜಿಲ್ಲೆಯ ಗುತ್ತಲಿನಲ್ಲಿರುವ ಅರ್ಕೇಶ್ವರ ದೇವಾಲಯದ ಆವರಣದಲ್ಲೇ ಕೊಲೆ ನಡೆದಿತ್ತು. ಮಲಗಿದ್ದ ಮೂವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಜೊತೆಗೆ ಹುಂಡಿ ಹೊತ್ತೊಯ್ದು ದೇವಾಲಯದ ಹೊರಗೆ ಬೀಸಾಡಿದ್ದರು. ಕೊಲೆಯಾದ ಮೂವರನ್ನು ಗಣೇಶ್, ಪ್ರಕಾಶ್ ಮತ್ತು ಆನಂದ್ ಎಂದು ಗುರುತಿಸಲಾಗಿದೆ. ಈ ಮೂವರಲ್ಲಿ ದೇವಸ್ಥಾನದಲ್ಲಿ ಅರ್ಚಕರಾಗಿಯೂ ಮತ್ತು ಸೆಕ್ಯೂರಿಟಿಯಾಗಿಯೂ ಕೆಲಸ ಮಾಡುತ್ತಿದ್ದರು.

    ಸಿಎಂ ಯಡಿಯೂರಪ್ಪ ಅವರು ಹತ್ಯೆಯಾದ ಮೂವರು ಅರ್ಚಕರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಿದ್ದರು. “ಮಂಡ್ಯದ ಅರ್ಕೇಶ್ವರ ದೇವಸ್ಥಾನದ ಪೂಜಾರಿಗಳಾಗಿದ್ದ ಗಣೇಶ್, ಪ್ರಕಾಶ್ ಮತ್ತು ಆನಂದ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಿರುವ ವಿಷಯ ತಿಳಿದು ಅತ್ಯಂತ ನೋವಾಗಿದೆ. ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ತಿಳಿಸಿದ್ದರು.

  • ಎಲ್ಲ ಮುಜರಾಯಿ ದೇವಾಲಯಗಳಲ್ಲಿ ತಿಂಗಳಿಗೊಮ್ಮೆ ಹುಂಡಿ ಎಣಿಕೆ – ಕೋಟಾ ಆದೇಶ

    ಎಲ್ಲ ಮುಜರಾಯಿ ದೇವಾಲಯಗಳಲ್ಲಿ ತಿಂಗಳಿಗೊಮ್ಮೆ ಹುಂಡಿ ಎಣಿಕೆ – ಕೋಟಾ ಆದೇಶ

    – ಕೊಲೆಯಾದ ಅರ್ಚಕ ಕುಟುಂಬಕ್ಕೆ 5 ಲಕ್ಷ ಚೆಕ್ ವಿತರಣೆ

    ಮಂಡ್ಯ: ಶುಕ್ರವಾರ ಮಂಡ್ಯದ ಅರ್ಕೇಶ್ವರ ದೇವಸ್ಥಾನಕ್ಕೆ ನುಗ್ಗಿ ಮೂವರು ಅರ್ಚಕರನ್ನು ಬರ್ಬರವಾಗಿ ಹತ್ಯೆ ಮಾಡಿ ಹುಂಡಿ ಹಣ ಕಳವು ಮಾಡಿದ ಹಿನ್ನೆಲೆ ಇಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ದೇವಸ್ಥಾನಕ್ಕೆ ಭೇಟಿ ನೀಡಿದರು.

    ಸಚಿವ ನಾರಾಯಣಗೌಡ ಹಾಗೂ ಮುಜರಾಯಿ ಆಯುಕ್ತೆ ರೋಹಿಣಿ ಸಿಂಧೂರಿ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ ಕೋಟಾ ಶ್ರೀನಿವಾಸ್ ಪೂಜಾರಿ, ದೇವಸ್ಥಾನವನ್ನು ಮೊದಲು ವೀಕ್ಷಣೆ ಮಾಡಿದರು. ನಂತರ ನಿನ್ನೆ ನಡೆದ ಘಟನೆಯ ಕುರಿತು ಮಂಡ್ಯ ಎಸ್‍ಪಿ ಪರಶುರಾಮ್ ಅವರ ಬಳಿ ಮಾಹಿತಿ ಕಲೆ ಹಾಕಿ, ಹಂತಕರನ್ನು ಶ್ರೀಘ್ರದಲ್ಲಿ ಪತ್ತೆ ಹಚ್ಚುವಂತೆ ಸೂಚನೆ ನೀಡಿದರು. ಬಳಿಕ ಕೊಲೆಯಾದ ಮೂವರು ಅರ್ಚಕರ ಕುಟುಂಬಕ್ಕೆ ಸಾಂತ್ವನ ಹೇಳಿ, ತಲಾ ಐದು ಲಕ್ಷ ರೂಪಾಯಿ ಚೆಕ್ ವಿತರಣೆ ಮಾಡಿದ್ದರು.

    ನಂತರ ಮಾತನಾಡಿ ಅವರು, ನಿನ್ನೆ ಮಂಡ್ಯದಲ್ಲಿ ನಡೆದ ಘಟನೆ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು ಆಗಿದೆ. ಇಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಇದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲು ಮುಜರಾಯಿ ಇಲಾಖೆಯ ಆಯುಕ್ತರಿಗೆ ತಿಳಿಸಿದ್ದೇನೆ. ಇನ್ನೂ ಮುಂದೆ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಪ್ರತಿ ತಿಂಗಳು ಹುಂಡಿ ತೆಗೆಯಬೇಕು ಎಂದು ಆದೇಶಿಸಿದರು.

  • ಮಂಡ್ಯದಲ್ಲಿ ಮೂವರು ಅರ್ಚಕರ ಹತ್ಯೆ – ತಲಾ 5 ಲಕ್ಷ ಪರಿಹಾರ ಘೋಷಣೆ

    ಮಂಡ್ಯದಲ್ಲಿ ಮೂವರು ಅರ್ಚಕರ ಹತ್ಯೆ – ತಲಾ 5 ಲಕ್ಷ ಪರಿಹಾರ ಘೋಷಣೆ

    ಬೆಂಗಳೂರು: ಮಂಡ್ಯ ಜಿಲ್ಲೆಯ ಗುತ್ತಲಿನಲ್ಲಿರುವ ಅರ್ಕೇಶ್ವರ ದೇವಾಲಯದಲ್ಲಿ ಹತ್ಯೆಯಾದ ಮೂವರು ಅರ್ಚಕರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಇದನ್ನೂ ಓದಿ: ಮಂಡ್ಯದ ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರ ಬರ್ಬರ ಹತ್ಯೆ

    ದೇವಾಲಯದ ಆವರಣದಲ್ಲೇ ಕೊಲೆ ನಡೆದಿದ್ದು, ಕೊಲೆಯಾದ ಮೂವರನ್ನು ಗಣೇಶ್, ಪ್ರಕಾಶ್ ಮತ್ತು ಆನಂದ್ ಎಂದು ಗುರುತಿಸಲಾಗಿದೆ. ಈ ಮೂವರಲ್ಲಿ ದೇವಸ್ಥಾನದಲ್ಲಿ ಅರ್ಚಕರಾಗಿಯೂ ಮತ್ತು ಸೆಕ್ಯೂರಿಟಿಯಾಗಿಯೂ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇದೀಗ ಈ ಮೂವರ ಕುಟುಂಬದವರಿಗೂ ಪರಿಹಾರ ನೀಡುವುದಾಗಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

    “ಮಂಡ್ಯದ ಅರ್ಕೇಶ್ವರ ದೇವಸ್ಥಾನದ ಪೂಜಾರಿಗಳಾಗಿದ್ದ ಗಣೇಶ್, ಪ್ರಕಾಶ್ ಮತ್ತು ಆನಂದ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಿರುವ ವಿಷಯ ತಿಳಿದು ಅತ್ಯಂತ ನೋವಾಗಿದೆ. ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ತಿಳಿಸಿದ್ದಾರೆ.

    ಮಲಗಿದ್ದ ಮೂವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೊತೆಗೆ ಹುಂಡಿ ಹೊತ್ತೊಯ್ದು ದೇವಾಲಯದ ಹೊರಗೆ ಬೀಸಾಡಿದ್ದಾರೆ. ಹೀಗಾಗಿ ಯಾರೋ ದುಷ್ಕರ್ಮಿಗಳು ಹುಂಡಿ ಹಣಕ್ಕಾಗಿ ಮೂವರನ್ನು ಹತ್ಯೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮಂಡ್ಯದ ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರ ಬರ್ಬರ ಹತ್ಯೆ

    ಮಂಡ್ಯದ ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರ ಬರ್ಬರ ಹತ್ಯೆ

    – ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮರ್ಡರ್

    ಮಂಡ್ಯ: ಜಿಲ್ಲೆಯ ಗುತ್ತಲಿನಲ್ಲಿರುವ ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

    ದೇವಾಲಯದ ಅವರಣದಲ್ಲೇ ಕೊಲೆ ನಡೆದಿದ್ದು, ಕೊಲೆಯಾದ ಮೂವರನ್ನು ಗಣೇಶ, ಪ್ರಕಾಶ ಮತ್ತು ಆನಂದ ಎಂದು ಗುರುತಿಸಲಾಗಿದೆ. ಈ ಮೂವರು ದೇವಸ್ಥಾನದಲ್ಲಿ ಅರ್ಚಕರಾಗಿಯೂ ಮತ್ತು ಸೆಕ್ಯೂರಿಟಿಯಾಗಿಯೂ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

    ಮಲಗಿದ್ದ ಮೂವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೊತೆಗೆ ಹುಂಡಿ ಹೊತ್ತೊಯ್ದು ದೇವಾಲಯದ ಹೊರಗೆ ಬೀಸಾಡಿದ್ದಾರೆ. ಹೀಗಾಗಿ ಯಾರೋ ದುಷ್ಕರ್ಮಿಗಳು ಹುಂಡಿ ಹಣಕ್ಕಾಗಿ ಮೂವರನ್ನು ಹತ್ಯೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅರ್ಚಕರಿಗೆ ಕೊರೊನಾ – ಶ್ರೀಭೋಗನಂದೀಶ್ವರ ದೇವಾಲಯ ಬಂದ್

    ಅರ್ಚಕರಿಗೆ ಕೊರೊನಾ – ಶ್ರೀಭೋಗನಂದೀಶ್ವರ ದೇವಾಲಯ ಬಂದ್

    ಚಿಕ್ಕಬಳ್ಳಾಪುರ: ದಕ್ಷಿಣ ಕಾಶಿ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಶ್ರೀಭೋಗನಂದೀಶ್ವರ ದೇವಾಲಯದ ಅರ್ಚಕರಿಗೆ ಕೊರೊನಾ ಸೋಂಕು ದೃಢವಾಗಿದ್ದು, ದೇವಾಲಯವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದೆ.

    ದೇವಾಲಯದಲ್ಲಿನ ಇಬ್ಬರು ಅರ್ಚಕರಿಗೆ ಕೊರೊನಾ ಸೋಂಕು ದೃಢವಾಗಿದ್ದು, ದೇವಾಲಯವನ್ನು ಇಂದಿನಿಂದ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಅರ್ಚಕರಿಗೆ ಕೊರೊನಾ ಸೋಂಕು ಹಿನ್ನೆಲೆ ದೇವಾಲಯಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

    ದೇವಾಲಯದ ಪ್ರಮಖ ಗೇಟ್‍ನ್ನು ಸಂಪೂರ್ಣ ಮುಚ್ಚಿ ಟೇಪ್ ಮಾಡಲಾಗಿದೆ. ಇಂದು ಸಹ ಜಿಲ್ಲೆಯಲ್ಲಿ 102 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,526 ಕ್ಕೆ ಏರಿಕೆಯಾಗಿದೆ. ಇದುವರೆಗೂ 3624 ಮಂದಿ ಗುಣಮುಖರಾಗಿದ್ದು, ಸದ್ಯ 836 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಕೊರೊನಾದಿಂದ ಇದುವರೆಗೂ 65 ಮಂದಿ ಸಾವನ್ನಪ್ಪಿದ್ದಾರೆ.

  • ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಧಾರ್ಮಿಕ ಕ್ಷೇತ್ರದ ಉಳಿವಿಗೆ ಮುಂದಾಗಬೇಕು: ನಾರಾಯಣ ಆಚಾರ್

    ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಧಾರ್ಮಿಕ ಕ್ಷೇತ್ರದ ಉಳಿವಿಗೆ ಮುಂದಾಗಬೇಕು: ನಾರಾಯಣ ಆಚಾರ್

    ಮಡಿಕೇರಿ: ತಲಕಾವೇರಿ ದೇವಾಲಯಕ್ಕೆ ದಾರಿಗೆ ಬೆಟ್ಟವನ್ನು ಅಗೆದದ್ದು, ಇಲ್ಲಿನ ಮಣ್ಣಿನಲ್ಲಿ ಒಸರುತ್ತಿರುವ ಜಲ ಹಾಗೂ ಜೇಡಿ ಮಣ್ಣಿನಂತಹ ಮಣ್ಣಿರುವುದೇ ಇಲ್ಲಿ ಗುಡ್ಡ ಕುಸಿತಕ್ಕೆ ಕಾರಣ ಎಂದು ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿರುವ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಈ ಹಿಂದೆ ಅಭಿಪ್ರಾಯ ವ್ಯಕ್ತಪಡಿಸಿದ್ದರು.

    ಗುಡ್ಡ ಕುಸಿತದಿಂದ ತಲಕಾವೇರಿಯಲ್ಲಿ ದುರ್ಘಟನೆ ನಡೆದಿದ್ದು, ಇಲ್ಲಿನ ಸ್ಥಿತಿ-ಗತಿಗಳ ಬಗ್ಗೆ 2019ರಲ್ಲೇ ಕಣ್ಮರೆ ಆಗಿರುವವರಲ್ಲಿ ಒಬ್ಬರಾದ ಅರ್ಚಕ ನಾರಾಯಣ ಆಚಾರ್ ಮಾತನಾಡಿದ್ದರು. ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಕಾಣಿಸಿಕೊಂಡ ಬಿರುಕಿನಿಂದ ಆತಂಕಕ್ಕೆ ಒಳಗಾಗಿದ್ದ ಸಂದರ್ಭದಲ್ಲಿ ಮಾತನಾಡಿದ್ದ ಆಚಾರ್, ಇಲ್ಲಿನ ಮಣ್ಣಿನಲ್ಲಿ ಒಸರುತ್ತಿರುವ ಜಲ ಹಾಗೂ ಜೇಡಿ ಮಣ್ಣಿನಂತಹ ಮಣ್ಣು ಇರುವುದೇ ಇಲ್ಲಿ ಗುಡ್ಡ ಕುಸಿತಕ್ಕೆ ಕಾರಣ ಎಂದು ಹೇಳಿದ್ದರು.

    ಜೊತೆಗೆ ಈ ಬಗ್ಗೆ ಜಿಲ್ಲಾಡಳಿತ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಪವಿತ್ರ ಧಾರ್ಮಿಕ ಕ್ಷೇತ್ರದ ರಕ್ಷಣೆಗೆ ಮುಂದಾಗಬೇಕು ಎಂದು ಮನವಿ ಮಾಡಿದ್ದರು. ಕೊಡಗಿನಲ್ಲಿ ಕಳೆದ ಐದು ದಿನದಿಂದ ತುಂಬ ಮಳೆ ಆಗುತ್ತಿದ್ದು, ಗುಡ್ಡಗಳ ಕುಸಿಯುತ್ತಿವೆ. ಗುಡ್ಡ ಕುಸಿತದಿಂದ ತಲಕಾವೇರಿ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಅವರ ಮನೆ ಸಂಪೂರ್ಣ ಮುಚ್ಚಿಹೋಗಿದ್ದು, ಆರ್ಚಕರು ಸೇರಿ ಐವರು ಮಂದಿ ಕಣ್ಮರೆಯಾಗಿದ್ದಾರೆ.

  • ಜೂನ್ 21ರಂದು ಚೂಡಾಮಣಿ ಸೂರ್ಯಗ್ರಹಣ

    ಜೂನ್ 21ರಂದು ಚೂಡಾಮಣಿ ಸೂರ್ಯಗ್ರಹಣ

    – ಗ್ರಹಣದ ನಂತರ ದೇವರ ದರ್ಶನ

    ಬೆಂಗಳೂರು: ಸೌರಮಂಡಲದಲ್ಲಿ ಇದೇ ಭಾನುವಾರ ಆಗಸದಲ್ಲಿ ಮತ್ತೊಂದು ಗ್ರಹಣ ನಡೆಯಲಿದೆ. ಕೊರೊನಾ ಸಮಯದಲ್ಲಿ ನಡೆಯುತ್ತಿರುವ ಗ್ರಹಣದಿಂದಾಗಿ ಸಾಕಷ್ಟು ರಾಶಿಗಳ ಮೇಲೆ ಕೆಟ್ಟ ಫಲಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ.

    ಮುಂದಿನ ಭಾನುವಾರ ಅಂದರೆ ಜೂನ್ 21ರಂದು ಸೂರ್ಯಗ್ರಹಣ ನಡೆಯಲಿದೆ. ಬೆಳಗ್ಗೆ 10.13ರಿಂದ ಮಧ್ಯಾಹ್ನ 1.32ರವರೆಗೆ ಸೂರ್ಯಗ್ರಹಣ ಸಂಭವಿಸಲಿದ್ದು, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಇದನ್ನು ಚೂಡಾಮಣಿ ಸೂರ್ಯಗ್ರಹಣ ಎಂದು ಕರೆಯುತ್ತಾರೆ. ಈ ಚೂಡಾಮಣಿ ಸೂರ್ಯಗ್ರಹಣದ ವೇಳೆ ಮನೆಯಿಂದ ಹೊರಬರಬಾರದು. ಮನೆಯಲ್ಲೇ ಇದ್ದು, ದೇವರ ಜಪ-ತಪ ಮಾಡಿ ಗ್ರಹಣ ಮೋಕ್ಷಕಾಲದ ಬಳಿಕ ಶುಚಿರ್ಭೂತರಾಗಿ ದೇವಾಲಯದಲ್ಲಿ ದೇವರ ದರ್ಶನ ಮಾಡೋದು ಪದ್ಧತಿ ಆಗಿದೆ.

    ಕೊರೊನಾ ವೈರಸ್ ಸಂದರ್ಭದಲ್ಲಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿ ಜನದಟ್ಟಣೆ ಉಂಟಾಗುವ ಸಾಧ್ಯತೆಗಳಿವೆ. ಅದರಲ್ಲೂ ಗ್ರಹಣದ ಸಮಯ ಮುಗಿದ ಮೇಲೆ ದೇವಾಲಯಕ್ಕೆ ಬರುವ ಭಕ್ತರು ಹಚ್ಚಾಗುವ ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೇವಾಲಯದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ದೇವಾಲಯದಲ್ಲಿ ಸರ್ಕಾರಿ ನಿಯಮಗಳನ್ನು ಪಾಲಿಸಲು ಮುಂದಾಗಿರುವ ದೇವಾಲಯದ ಆಡಳಿತ ಮಂಡಳಿಗಳು ಅಭಿಷೇಕಕ್ಕೆ ಅವಕಾಶ ನೀಡಿಲ್ಲ. ಆದರೆ ಗ್ರಹಣದ ದಿನ ನವಗ್ರಹ ಪ್ರದಕ್ಷಿಣೆಗೆ ಅವಕಾಶವಿದ್ದು, 1 ಬಾರಿಗೆ 5 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಕಾಡುಮಲ್ಲೇಶ್ವರ ದೇವಾಲಯದ ಅರ್ಚಕರಾದ ಗಂಗಾಧರ್ ದೀಕ್ಷಿತ್ ಹೇಳಿದ್ದಾರೆ.

    ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಸೂರ್ಯಗ್ರಹಣ ಮಿಥುನ, ಸಿಂಹ ರಾಶಿ ಹಾಗೂ ಮೃಗಶಿರ ನಕ್ಷತ್ರದವರ ಮೇಲೆ ಕೆಟ್ಟ ಪರಿಣಾಮ ಆಗಲಿದೆ. ದೇವಸ್ಥಾನಗಳಿಗೆ ಬರುವ ಭಕ್ತರು ಕೊರೊನಾ ನಿಯಮಗಳನ್ನು ಗಾಳಿಗೆ ತೂರಬಾರದು. ಹಿರಿಯರು, ಮಕ್ಕಳು ದೇವಾಲಯಕ್ಕೆ ಬರುವ ಬದಲು ಮನೆಯಲ್ಲೇ ದೇವರ ಪೂಜೆ ಮಾಡಿದರೆ ಉತ್ತಮ ಎಂದು ಗಾಳಿ ಆಂಜನೇಯ ದೇವಸ್ಥಾನದ ಅರ್ಚಕರಾದ ಡಾ.ಶ್ರೀನಿವಾಸ್ ಭಟ್ಟಾಚಾರ್ಯ ತಿಳಿಸಿದರು.

  • ದೇವಾಲಯಗಳು ಮುಚ್ಚಿರುವುದರಿಂದ ಬೀದಿಗೆ ಬಂದ ಅರ್ಚಕರು

    ದೇವಾಲಯಗಳು ಮುಚ್ಚಿರುವುದರಿಂದ ಬೀದಿಗೆ ಬಂದ ಅರ್ಚಕರು

    – ಆಹಾರ ಕಿಟ್‍ಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ

    ರಾಯಚೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ ರಾಯಚೂರಿನ ಬಹಳಷ್ಟು ದೇವಾಲಯಗಳ ಅರ್ಚಕರು ಅಕ್ಷರಶಃ ಬೀದಿಗೆ ಬಂದಿದ್ದಾರೆ. ದೇವಾಲಯಕ್ಕೆ ಬರುವ ಭಕ್ತರ ಕಾಣಿಕೆಯಿಂದ ಬದುಕುತ್ತಿದ್ದ ಅರ್ಚಕರ ಕುಟುಂಬಗಳು ಈಗ ಕಷ್ಟವನ್ನು ಎದುರಿಸುತ್ತಿವೆ.

    ಹೀಗಾಗಿ ಮುಜರಾಯಿ ಇಲಾಖೆ ಆಯುಕ್ತರು ಸೂಚಿಸಿದಂತೆ ಆಹಾರ ಕಿಟ್‍ಗಳನ್ನು ವಿತರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಅರ್ಚಕರು ಮನವಿ ಸಲ್ಲಿಸಿದ್ದಾರೆ. ಏಪ್ರಿಲ್ ತಿಂಗಳಿನಲ್ಲಿ ಮುಜರಾಯಿ ಇಲಾಖೆ ಆಯುಕ್ತರು ಆಹಾರ ಕಿಟ್ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದು ಇದುವರೆಗೂ ಕಿಟ್ ವಿತರಿಸಿಲ್ಲ ಎಂದು ಅರ್ಚಕರು ಆರೋಪಿಸಿದ್ದಾರೆ.

    ಕಾಣಿಕೆ ತಟ್ಟೆಯಲ್ಲಿ ಬೀಳುವ ಕಾಣಿಕೆಯಿಂದ ಜೀವನ ನಡೆಯುತ್ತಿತ್ತು. ಆದರೆ ಈಗ ದೇವಾಲಯಗಳಿಗೆ ಬೀಗ ಹಾಕಿರುವುದರಿಂದ ಮದುವೆಗಳಿಲ್ಲ, ವಿಶೇಷ ಪೂಜೆಗಳಿಲ್ಲ, ಭಕ್ತರಿಲ್ಲ ಹೀಗಾಗಿ ಕಾಣಿಕೆ ತಟ್ಟೆಯ ಕಾಣಿಕೆಯೂ ನಮಗೆ ಸಿಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯ ಸಿ ವರ್ಗದ ದೇವಾಲಯಗಳ ಅರ್ಚಕರ ಸ್ಥಿತಿಯಂತೂ ತುಂಬಾ ಕಷ್ಟದಾಯಕವಾಗಿದೆ. ಸರ್ಕಾರ ದೇವಾಲಯಗಳನ್ನೇ ನಂಬಿ ಬದುಕುತ್ತಿರುವ ನಮಗೆ ಸಹಾಯಧನ ನೀಡಬೇಕು. ಕಿಟ್ ವಿತರಿಸಬೇಕು ಅಂತ ಅರ್ಚಕರು ಒತ್ತಾಯಿಸಿದ್ದಾರೆ.

  • ರಾಜ್ಯದ 34,000 ಅರ್ಚಕರಿಗೆ ದಿನಸಿ ಕಿಟ್: ಕೋಟ ಶ್ರೀನಿವಾಸ ಪೂಜಾರಿ

    ರಾಜ್ಯದ 34,000 ಅರ್ಚಕರಿಗೆ ದಿನಸಿ ಕಿಟ್: ಕೋಟ ಶ್ರೀನಿವಾಸ ಪೂಜಾರಿ

    ಉಡುಪಿ: ಕೊರೊನಾ ಲಾಕ್‍ಡೌನ್ ಬಿಸಿ ಎಲ್ಲಾ ಕ್ಷೇತ್ರಕ್ಕೆ ತಟ್ಟಿದೆ. ಅದರಲ್ಲೂ ತಟ್ಟೆ ಕಾಣಿಕೆ ನಂಬಿರುವ ಹಳ್ಳಿಯ ದೇವಸ್ಥಾನದ ಅರ್ಚಕರ ಸ್ಥಿತಿ ಕೇಳೋದೇ ಬೇಡ. ರಾಜ್ಯದ ಮುಜರಾಯಿ ಇಲಾಖೆ ಇದೀಗ ರಾಜ್ಯದ ದೇವಸ್ಥಾನಗಳ ಅರ್ಚಕರು ಸಂಕಷ್ಟಕ್ಕೆ ಪರಿಹಾರ ಕೊಡಲು ಮುಂದಾಗಿದೆ.

    ರಾಜ್ಯದ 34,000 ಅರ್ಚಕರಿಗೆ ದಿನಸಿ ಕಿಟ್ ವಿತರಿಸಲು ನಿರ್ಧಾರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಅರ್ಚಕರಿಗೆ ದಿನಸಿ ಕಿಟ್ ವಿತರಣಾ ಜವಾಬ್ದಾರಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಉಡುಪಿ ಜಿಲ್ಲೆಯ ಸಾವಿರ ಅರ್ಚಕರಿಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ದಿನಸಿ ಕಿಟ್ ವಿತರಿಸಲಾಗುವುದು ಎಂದರು.

    ಅರ್ಚಕರಿಗೆ ಪ್ರೋತ್ಸಾಹಧನ ನೀಡುವ ಬಗ್ಗೆ ಸಿಎಂ ಜೊತೆ ಚರ್ಚಿಸಿದ್ದೇನೆ. ಹಣಕಾಸಿನ ವ್ಯವಸ್ಥೆ ಮಾಡಲು ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ನಡುವೆ ರಾಜ್ಯದ 210 ಎ ದರ್ಜೆ ದೇವಸ್ಥಾನಗಳಲ್ಲಿ ಏಳು ಲಕ್ಷ ಜನರಿಗೆ ನಿತ್ಯ ಊಟ ವಿತರಿಸಲಾಗುತ್ತಿದೆ. ದಕ್ಷಿಣ ಕನ್ನಡದ ಕದ್ರಿ ದೇವಸ್ಥಾನದಲ್ಲಿ 12 ಸಾವಿರ ಊಟದ ವ್ಯವಸ್ಥೆ ಪ್ರತಿದಿನ ನಡೆಯುತ್ತಿದೆ. ಕೊರೊನಾ ನಿಯಂತ್ರಿಸಲು ಎಲ್ಲರೂ ಒಟ್ಟಾಗಿ ಒಂದಾಗಿ ಕೆಲಸ ಮಾಡಬೇಕು ಎಂದರು.

    ದೇವಸ್ಥಾನಗಳು ಆಯಾ ವ್ಯಾಪ್ತಿಯ ಬಡ ಜನರ ಆತ್ಮಸ್ಥೈರ್ಯವನ್ನು ಹೆಚ್ಚಿಸಬೇಕು ಎಂದರು. ಕೊರೊನಾ ಲಾಕ್‍ಡೌನ್‍ನಿಂದ ಸ್ಥಗಿತಗೊಂಡಿರುವ ನಿತ್ಯ ಪೂಜೆ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೋಟ ಹೇಳಿದರು.

  • ರಕ್ತದಾನ ಮಾಡಿ ಮಾನವೀಯತೆ ಮೆರೆದ ಪುರೋಹಿತರು

    ರಕ್ತದಾನ ಮಾಡಿ ಮಾನವೀಯತೆ ಮೆರೆದ ಪುರೋಹಿತರು

    – 35 ರಿಂದ 45 ಪುರೋಹಿತರು, ಕುಟುಂಬದವರಿಂದ ರಕ್ತದಾನ

    ಶಿವಮೊಗ್ಗ: ಕೊರೊನಾ ಲಾಕ್‍ಡೌನ್‍ನಿಂದ ಜನರು ತುಂಬಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮಧ್ಯೆ ರೋಗಿಗಳಿಗೆ ರಕ್ತದಾನ ಮಾಡುವವರ ಕೊರತೆ ಸಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೇವಲ ಪ್ರಾರ್ಥನೆ, ಆರಾಧನೆ, ಪೂಜೆ ಪುನಸ್ಕಾರಕ್ಕೆ ಸೀಮಿತವಾಗಿದ್ದ ಪುರೋಹಿತರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

    ಲಾಕ್‍ಡೌನ್ ಸಂದರ್ಭದಲ್ಲಿ ಎಲ್ಲಾ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಶೇಖರಣೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಇರುವ ರೋಗಿಗಳಿಗೆ ರಕ್ತ ಪೂರೈಕೆ ಮಾಡಲು ಕಷ್ಟವಾಗುತ್ತಿದೆ. ಕೊರೊನಾ ಸಮಸ್ಯೆ ಹೊರತುಪಡಿಸಿ, ಇತರೆ ರೋಗಿಗಳಿಗೆ ರಕ್ತದ ತುರ್ತು ಅವಶ್ಯಕತೆ ಎದ್ದು ಕಾಣುತ್ತಿದ್ದು, ಈ ಕಷ್ಟವನ್ನು ಮನಗಂಡ ಪುರೋಹಿತ ಯುವ ಪರಿಷತ್ ಸದಸ್ಯರು ರಕ್ತದಾನ ಮಾಡಿದ್ದಾರೆ.

    ಶಿವಮೊಗ್ಗದ ರೋಟರಿ ರಕ್ತನಿಧಿ ಕೇಂದ್ರದಲ್ಲಿ ಸುಮಾರು 35 ರಿಂದ 45 ಪುರೋಹಿತರು ಹಾಗೂ ಅವರ ಕುಟುಂಬ ವರ್ಗದವರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

    ದಿನೇ ದಿನೇ ಕೊರೊನಾ ದೇಶದಲ್ಲಿ ವ್ಯಾಪಿಸುತ್ತಿದೆ. ಇದರಿಂದ ರಕ್ತದಾನ ಮಾಡಲು ಯಾರೂ ಕೂಡ ಮುಂದೆ ಬರುತ್ತಿಲ್ಲ. ಆದರೆ ಅಗತ್ಯವಿರುವ ರೋಗಿಗಳಿಗೆ ಸರಿಯಾದ ಸಮಯಕ್ಕೆ ರಕ್ತ ಸಿಗದೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲರೂ ರಕ್ತದಾನ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.