ಚಾಮರಾಜನಗರ: 2024ರ ಲೋಕಸಭಾ ಚುನಾವಣೆಗೆ (Lok Sabha Election 2023) ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ನಾನೂ ಬಿಜೆಪಿ ಟಿಕೆಟ್ (BJP Ticket) ಆಕಾಂಕ್ಷಿ ಎಂದು ಕಿರುತೆರೆ, ಚಲನಚಿತ್ರ ನಟ ಆರ್.ಅರ್ಜುನ್ ರಮೇಶ್ (Arjun Ramesh) ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, 12 ವರ್ಷಗಳಿಂದ ಬಿಜೆಪಿ (BJP) ಸಂಘಟನೆಯಲ್ಲಿ ತೊಡಗಿದ್ದೇನೆ. ಟಿ.ನರಸೀಪುರ ಪುರಸಭಾ ಸದಸ್ಯನಾಗಿ ಅತ್ಯಧಿಕ ಮತಗಳಿಂದ ಆಯ್ಕೆಯಾಗಿದ್ದೇನೆ. ನನ್ನ ತಂದೆ ಮಾಜಿ ವಿಧಾನಪರಿಷತ್ತ ಸದಸ್ಯ ಸಿ.ರಮೇಶ್ ಕಳೆದ 20 ವರ್ಷಗಳಿಂದ ಪಕ್ಷದ ಸಂಘಟನೆಗೆ ದುಡಿಯುತ್ತಿದ್ದಾರೆ. ಪಕ್ಷ ನನಗೆ ಈ ಬಾರಿ ಅವಕಾಶ ಮಾಡಿಕೊಡಬೇಕೆಂದು ವರಿಷ್ಠರಲ್ಲಿ ಮನವಿ ಮಾಡಿದ್ದೇನೆ ಎಂದಿದ್ದಾರೆ.

ಬಿಜೆಪಿ ಕಾರ್ಯಕರ್ತರ ಪಕ್ಷ ಅನ್ನೋದನ್ನ ಹಲವು ಬಾರಿ ಸಾಬೀತು ಮಾಡಿದೆ. ನಾನೂ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದೇನೆ. ಜನಸಾಮಾನ್ಯ ಕೇಂದ್ರ ಸ್ಥಾಪಿಸಿ ಸೇವೆ ಸಲ್ಲಿಸುತ್ತಿದ್ದೇನೆ. ಜೊತೆಗೆ ನಟನಾಗಿಯೂ ಗುರುತಿಸಿಕೊಂಡಿದ್ದೇನೆ. ಹಾಗಾಗಿ ರಾಜ್ಯದ ನಾಯಕರು ನನಗೆ ಅವಕಾಶ ಮಾಡಿಕೊಡಬೇಕು ಎಂದು ಕೋರಿದ್ದಾರೆ. ಇದನ್ನೂ ಓದಿ: ಡಿಕೆ ಶಿವಕುಮಾರ್ ಲೂಟಿ ಹೊಡೆಯೋದು ಬಿಟ್ಟರೆ ತಮ್ಮನಾಗಿ ಸ್ವೀಕಾರ ಮಾಡ್ತೀನಿ: ಕುಮಾರಸ್ವಾಮಿ ಷರತ್ತು
ಇಂದಿನ ರಾಜಕೀಯ ವಿದ್ಯಮಾನ ಅನುಭವಿಸಿ, ಪ್ರತಿ ಹಂತದಲ್ಲೂ ರಾಜಕೀಯ ಬಣ್ಣ ಬದಲಾಯಿಸುವುದನ್ನ ನೋಡಿದ್ದೇನೆ. ಆದ್ರೆ ಇದ್ದರೂ, ಸತ್ತರೂ ಬಿಜೆಪಿಯಲ್ಲೇ ಇರುತ್ತೇನೆ, ಅಪ್ಪಟ ಹಿಂದೂ ಕಾರ್ಯಕರ್ತನಾಗಿಯೇ ಸಾಯುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: BJPಯಲ್ಲಿ ಅನಿವಾರ್ಯವಾಗಿ ಹೊಂದಿಕೊಂಡು ಹೋಗ್ತಿದ್ದೀನಿ – ಎಸ್.ಟಿ ಸೋಮಶೇಖರ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]
















ನಟ ಅರ್ಜುನ್ ರಮೇಶ್ ಅವರು ರಾಜಕೀಯ, ನಟನೆ ಎರಡರಲ್ಲೂ ಮುಂಚೂಣಿಯಲ್ಲಿರುವ ನಟ. ಅವರು ಬಿಗ್ ಬಾಸ್ ಮನೆಯಲ್ಲಿ ವೈಯಕ್ತಿಕ ವಿಚಾರದಿಂದ ಸಾಕಷ್ಟು ಚರ್ಚೆ ಆಗುತ್ತಿದ್ದಾರೆ. ತಮ್ಮ ವೈಯಕ್ತಿಕ ಬದುಕಿನ ಅಸಲಿ ಕಥೆಯನ್ನ ಬಿಚ್ಚಿಟ್ಟಿದ್ದಾರೆ. ತಮಗೆ ಎರಡು ಮದುವೆ ಆಗಿದೆ ಎಂದು ಇದನ್ನು ಆರಂಭದಲ್ಲೇ ಹೇಳಿಕೊಂಡಿದ್ದರು. ಈಗ ಅವರು ಒಂದು ಅಚ್ಚರಿಯ ವಿಚಾರ ಹೇಳಿಕೊಂಡಿದ್ದಾರೆ. ಇನ್ನು ಫ್ಲರ್ಟ್ ವಿಚಾರದಲ್ಲಿ ಸಂಜಯ್ ದತ್ ಅವರನ್ನು ಮೀರಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ:
ನಾನು ಎಷ್ಟು ಜನರ ಜತೆ ಫ್ಲರ್ಟ್ ಮಾಡಿದ್ದೇನೆ ಎಂಬುದು ನನಗೇ ಗೊತ್ತಿಲ್ಲ. ಆ ಲೆಕ್ಕವನ್ನು ಇಲ್ಲಿ ಕೊಡೋಕೆ ಹೋಗಲ್ಲ. ಇದರ ಲೆಕ್ಕ ನೀಡೋಕೆ ಹೋದರೆ ಸಂಜಯ್ ದತ್ ಅವರನ್ನು ನಾನು ಹಿಂದಿಕ್ಕುತ್ತೇನೆ ಎಂದಿದ್ದಾರೆ ಅರ್ಜುನ್ ರಮೇಶ್. ಈ ಮೂಲಕ ಅವರು ಸಾಕಷ್ಟು ಜನರ ಜತೆ ರಿಲೇಶನ್ಶಿಪ್ನಲ್ಲಿದ್ದೆ, ಫ್ಲರ್ಟ್ ಮಾಡಿದ್ದೆ ಎಂಬ ವಿಚಾರವನ್ನು ಒಪ್ಪಿಕೊಂಡಿದ್ದಾರೆ.
ನಾನು ಬಿಗ್ ಬಾಸ್ಗೆ ಹೋಗುವ ದಿನ ನನ್ನ ಇಡೀ ಕುಟುಂಬದವರು ಅಳೋಕೆ ಶುರು ಮಾಡಿದರು. ಅವರಿಗೆ ನನ್ನ ಬಿಟ್ಟು ಬೇರೆ ಪ್ರಪಂಚ ಇಲ್ಲ. ಮಿಲನ್ ನನ್ನ ಮೊದಲ ಹೆಂಡತಿ. ಮದುವೆ ಆಗಿದ್ದಾಗಲೇ ರವಿಕಾ ಜತೆ ಪ್ರೀತಿಯಲ್ಲಿದ್ದೆ. ರವಿಕಾಳನ್ನು ಸುಮಾರು ಐದು ವರ್ಷಗಳ ಕಾಲ ಹೊರ ಜಗತ್ತಿನಿಂದ ಬಚ್ಚಿಟ್ಟೆ. ರವಿಕಾಳನ್ನು ಭೇಟಿ ಮಾಡುವ ವಿಚಾರ ಮಿಲನ್ಗೆ ಗೊತ್ತಾದರೆ ಎಂಬ ಭಯ ಸದಾ ಕಾಡುತ್ತಿತ್ತು. ನಿಮ್ಮ ಲೈಫ್ ಅರ್ಥ ಏನು ಎಂದು ರವಿಕಾ ಪಾಲಕರು ಒಂದು ದಿನ ಕೇಳಿದರು ಎಂದು ತಮ್ಮ ಹಳೆಯ ಪ್ಲ್ಯಾಶ್ ಬ್ಯಾಕ್ ಸ್ಟೋರಿ ನೆನಪಿಸಿಕೊಂಡಿದ್ದಾರೆ.