Tag: ಅರ್ಜುನ್‌ ರೆಡ್ಡಿ

  • ‘ಸುಬ್ರಹ್ಮಣ್ಯ’ನಾದ ಆರ್ಮುಗಂ ರವಿಶಂಕರ್ ಪುತ್ರ- ಮಗನ ಚಿತ್ರಕ್ಕೆ ಅಪ್ಪನೇ ಡೈರೆಕ್ಟರ್

    ‘ಸುಬ್ರಹ್ಮಣ್ಯ’ನಾದ ಆರ್ಮುಗಂ ರವಿಶಂಕರ್ ಪುತ್ರ- ಮಗನ ಚಿತ್ರಕ್ಕೆ ಅಪ್ಪನೇ ಡೈರೆಕ್ಟರ್

    ರ್ಮುಗಂ ರವಿಶಂಕರ್ ಆ್ಯಕ್ಟರ್ ಮಾತ್ರವಲ್ಲ ಡೈರೆಕ್ಟರ್, ರೈಟರ್, ಸಿಂಗರ್, ವಾಯ್ಸ್ ಓವರ್ ಆರ್ಟಿಸ್ಟ್ ಕೂಡ ಹೌದು. ಸಿನಿಕೆರಿಯರ್ ಆರಂಭದಲ್ಲಿ ಡಬ್ಬಿಂಗ್ ಆರ್ಟಿಸ್ಟ್ ಆಗಿದ್ದರು. ಅನಂತರ ಒಂದೊಂದೆ ಮೆಟ್ಟಿಲುಗಳನ್ನೇರುತ್ತಾ ನಟನಾಗುವ ತಮ್ಮ ಕನಸನ್ನ ಈಡೇರಿಸಿಕೊಂಡರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Sudeep) ನಟನೆಯ ‘ಕೆಂಪೇಗೌಡ’ (Kempegowda) ಸಿನಿಮಾದಲ್ಲಿ ಆರ್ಮುಗಂ ಪಾತ್ರದಲ್ಲಿ ನಟಿಸುವ ಮೂಲಕ ಜನಪ್ರಿಯತೆ ಗಳಿಸಿದರು. ಅಲ್ಲಿವರೆಗೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು ಕೂಡ ಬಿಗ್ ಬ್ರೇಕ್ ಸಿಕ್ಕಿರಲಿಲ್ಲ. ಆದರೆ, ಕೆಂಪೇಗೌಡ ಸಿನಿಮಾದಿಂದ ರವಿಶಂಕರ್ (Ravishankar) ಕೆರಿಯರ್ ಬದಲಾಯ್ತು. ನೇಮು-ಫೇಮು-ಕ್ರೇಜು-ಕಾಸು ಹೀಗೆ ಎಲ್ಲವೂ ಕೂಡ ಒಟ್ಟೊಟ್ಟಿಗೆ ದಕ್ಕಿತು, ಬೇಡಿಕೆ ಸೃಷ್ಟಿಯಾಯ್ತು. ಈಗಲೂ ಆ ಬೇಡಿಕೆ ತಗ್ಗಿಲ್ಲ, ಸದ್ಯಕ್ಕೆ ತಗ್ಗೋದು ಇಲ್ಲ ಅನ್ನೋದಕ್ಕೆ ಅವರ ಕೈಯಲ್ಲಿರುವ ಸಿನಿಮಾಗಳೇ ಸಾಕ್ಷಿ.

    ದಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಆರ್ಮುಗ‌ಂ ರವಿಶಂಕರ್ ಮತ್ತೆ ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಕಳೆದ 20 ವರ್ಷಗಳ ಹಿಂದೆ ಆ್ಯಕ್ಷನ್ ಕ್ವೀನ್ ಮಾಲಾಶ್ರೀಗೆ ಮೊದಲ ಭಾರಿ ಆ್ಯಕ್ಷನ್ ಕಟ್ ಹೇಳಿದ್ದರು. ‘ದರ‍್ಗಿ’ ಸಿನಿಮಾ ಡೈರೆಕ್ಷನ್ ಮಾಡುವ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದರು. ಅವತ್ತಿಗೆ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿ ತೆಲುಗಿಗೆ ರಿಮೇಕ್ ಕೂಡ ಆಗಿತ್ತು. ರವಿಶಂಕರ್‌ಗೆ ಈ ಚಿತ್ರದಿಂದ ಒಳ್ಳೆಯ ಹೆಸರು ಬಂದಿತ್ತು. ಆದರೆ, ಅದ್ಯಾಕೋ ಏನೋ ಗೊತ್ತಿಲ್ಲ ‘ದರ‍್ಗಿ’ ನಂತರ ಡೈರೆಕ್ಷನ್ ಕಡೆ ಮುಖ ಮಾಡಿರಲಿಲ್ಲ. ಇದೀಗ, 20 ವರ್ಷಗಳು ಉರುಳಿದ್ಮೇಲೆ ಮತ್ತೆ ಡೈರೆಕ್ಟರ್ ಹ್ಯಾಟ್ ತೊಡಲು ರೆಡಿಯಾಗಿದ್ದಾರೆ. ಅದು ಅವರ ಮಗನ ಸಿನಿಮಾಗೆ ಅನ್ನೋದು ವಿಶೇಷ.

    ರವಿಶಂಕರ್ ಅವರ ಮಗ ಅದ್ವಯ್‌ ಶಂಕರ್ (Adhvay Shankar) ವಿದೇಶದಲ್ಲಿ ನಟನಾ ತರಬೇತಿಯನ್ನು ಪಡೆದುಕೊಂಡಿದ್ದಾರೆ. ವಿದ್ಯಾಭ್ಯಾಸವೆಲ್ಲ ಮುಗಿಸಿ ವಾಪಾಸ್ ಹುಟ್ಟೂರಿಗೆ ಮರಳಿರುವ ಮಗನನ್ನು ಬಣ್ಣದ ಜಗತ್ತಿಗೆ ಪರಿಚಯಿಸಿದ್ದಾರೆ. ತಾತನಂತೆ, ಅಪ್ಪ-ಚಿಕ್ಕಪ್ಪರಂತೆ ಕಲೆ ರಕ್ತಗತವಾಗಿ ಬಂದಿರುವುದರಿಂದ ಮುಖಕ್ಕೆ ಬಣ್ಣ ಹಚ್ಚಲು ಅದ್ವಯ್ ಕೂಡ ಓಕೆ ಹೇಳಿದ್ದು, ಪುತ್ರನ ಚೊಚ್ಚಲ ಚಿತ್ರಕ್ಕೆ ತಾವೇ ಆ್ಯಕ್ಷನ್ ಕಟ್ ಹೇಳಲು ಮುಂದಾಗಿದ್ದಾರೆ. ನಟ ಕಮ್ ನಿರ್ದೇಶಕ ರವಿಶಂಕರ್.

    ಇಂದು ಆಯುಧಪೂಜೆ ಅಂಗವಾಗಿ ಅದ್ವಯ್‌ ಚೊಚ್ಚಲ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಈ ಚಿತ್ರಕ್ಕೆ ‘ಸುಬ್ರಹ್ಮಣ್ಯ’ (Subrahmanya Film) ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಪೋಸ್ಟರ್‌ನಲ್ಲಿ ದೈವಿಕ ಅಂಶಗಳು ಹೈಲೆಟ್ ಆಗಿವೆ. ಪೋಸ್ಟರ್‌ನಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನ ಮತ್ತು ಅವರ ವಾಹನ ನವಿಲನ್ನು ತೋರಿಸಲಾಗಿದೆ. ನಾಯಕ ಅದ್ವಯ್‌ ಒಂದು ಕೈಯಲ್ಲಿ ಜ್ವಾಲೆಯನ್ನು ಮತ್ತು ಇನ್ನೊಂದು ಕೈಯಲ್ಲಿ ನಿಗೂಢವಾಗಿ ಕಾಣುವ ಪುಸ್ತಕವನ್ನು ಇಟ್ಟುಕೊಂಡಿದ್ದಾರೆ. ಇದನ್ನೂ ಓದಿ:‘ಮಗ್ಗಿ ಪುಸ್ತಕ’ದ ಫಸ್ಟ್ ಲುಕ್ ಲಾಂಚ್ ಮಾಡಿದ ಯದುವೀರ ಒಡೆಯರ್

    ಅರ್ಜುನ್ ರೆಡ್ಡಿ ಸಿನಿಮಾ ಖ್ಯಾತಿಯ ರಾಜ್ ತೋಟ ಕ್ಯಾಮೆರಾ ಹಿಡಿದಿದ್ದು, ಕೆಜಿಎಫ್ ಸಲಾರ್ ಮ್ಯೂಸಿಕ್ ಮಾಂತ್ರಿಕ ರವಿ ಬಸ್ರೂರ್ ಸಂಗೀತ, ವಿಜಯ್ ಎಂ ಕುಮಾರ್ ಸಂಕಲನ, ಮಾಸ್ತಿ ಸಂಭಾಷಣೆ ಸುಬ್ರಹ್ಮಣ್ಯ ಸಿನಿಮಾಕ್ಕಿದೆ. ಎಸ್ ಜಿ ಮೂವೀ ಮೇಕರ್ಸ್‌ ಬ್ಯಾನರ್ ನಡಿ ತಿರುಮಲ ರೆಡ್ಡಿ ಮತ್ತು ಅನಿಲ್ ಕಡಿಯಾಲ ಬಂಡವಾಳ ಹಾಕಿದ್ದು, ಪ್ರವೀಣಾ ಕಡಿಯಾಲ ಹಾಗೂ ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸುಬ್ರಹ್ಮಣ್ಯ ಸಿನಿಮಾ ತಯಾರಾಗುತ್ತಿದ್ದು, ಡಿಸೆಂಬರ್‌ನಿಂದ ಚಿತ್ರತಂಡದ ಶೂಟಿಂಗ್ ಶುರುವಾಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಅರ್ಜುನ್ ರೆಡ್ಡಿ’ ನಿರ್ದೇಶಕನ ಸಿನಿಮಾದಲ್ಲಿ ವಿಜಯ್ ದೇವರಕೊಂಡ

    ‘ಅರ್ಜುನ್ ರೆಡ್ಡಿ’ ನಿರ್ದೇಶಕನ ಸಿನಿಮಾದಲ್ಲಿ ವಿಜಯ್ ದೇವರಕೊಂಡ

    ಟಾಲಿವುಡ್ ಹೀರೋ ವಿಜಯ್ ದೇವರಕೊಂಡ (Vijay Devarakonda) ಸದ್ಯ ‘ಖುಷಿ’ (Kushi) ಸಿನಿಮಾದ ಸಕ್ಸಸ್ ಖುಷಿಯಲ್ಲಿದ್ದಾರೆ. ಈ ಬೆನ್ನಲ್ಲೇ ಹೊಸ ಸಿನಿಮಾದ ಅಪ್‌ಡೇಟ್‌ವೊಂದು ಹೊರಬಿದ್ದಿದೆ. ಅರ್ಜುನ್ ರೆಡ್ಡಿ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಜೊತೆ ವಿಜಯ್ ಮತ್ತೆ ಸಿನಿಮಾಗಾಗಿ ಕೈಜೋಡಿಸಿದ್ದಾರೆ.

    ಖುಷಿ (Kushi) ಚಿತ್ರದ ಮೂಲಕ ಸಮಂತಾ- ವಿಜಯ್ ಕೆರಿಯರ್‌ಗೆ ಬಿಗ್ ಬ್ರೇಕ್ ಸಿಕ್ಕಿದೆ. ಹೀಗಿರುವಾಗ ಹೊಸ ಪ್ರಾಜೆಕ್ಟ್‌ಗಳತ್ತ ನಟ ಗಮನ ನೀಡುತ್ತಿದ್ದಾರೆ. ಅರ್ಜುನ್ ರೆಡ್ಡಿ ಡೈರೆಕ್ಟರ್- ಹೀರೋ ವಿಜಯ್ ಮತ್ತೆ ಒಂದಾಗುತ್ತಿದ್ದಾರೆ.

    vijaydevarakonda‘ಕಬೀರ್ ಸಿಂಗ್’ ಬಳಿಕ ರಣ್‌ಬೀರ್, ರಶ್ಮಿಕಾ ನಟನೆಯ ‘ಅನಿಮಲ್’ (Animal) ಚಿತ್ರಕ್ಕೆ ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡಿದ್ದಾರೆ. ರಿಲೀಸ್‌ಗೆ ರೆಡಿಯಿರುವ ಸಮಯದಲ್ಲೇ ವಿಜಯ್‌ಗೆ ಹೊಸ ಕಥೆ ಹೇಳಿ, ಸಿನಿಮಾ ಮಾಡುವ ಬಗ್ಗೆ ಒಂದು ಹಂತದ ಮಾತುಕಥೆ ನಡೆಸಿದ್ದಾರೆ. ಸಂದೀಪ್ ಕಥೆಗೆ ವಿಜಯ್ ಕೂಡ ಓಕೆ ಎಂದಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಲಿದೆ. ಇದನ್ನೂ ಓದಿ:ಸಹಾಯಕನ ಮದುವೆಗೆ ರಶ್ಮಿಕಾ ಹಾಜರಿ- ನಟಿಯ ಕಾಲಿಗೆ ಬಿದ್ದ ನವಜೋಡಿ

    ಮೃಣಾಲ್ ಠಾಕೂರ್ (Mrunal Thakur) ಜೊತೆ ಹೊಸ ಚಿತ್ರ, ಶ್ರೀಲೀಲಾ(Sreeleela) ಜೊತೆಗಿನ ಹೊಸ ಸಿನಿಮಾಗೆ ವಿಜಯ್ ದೇವರಕೊಂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಗೀತಾ ಗೋವಿಂದಂ ನಿರ್ದೇಶಕ- ರಶ್ಮಿಕಾ ಮಂದಣ್ಣ ಜೊತೆ ಮತ್ತೆ ಹೊಸ ಸಿನಿಮಾ ಮಾಡುವ ಸುದ್ದಿಯಿದೆ. ಇದೆಲ್ಲದರ ನಡುವೆ ‘ಅರ್ಜುನ್ ರೆಡ್ಡಿ’ ಸಿನಿಮಾಗೂ ವಿಜಯ್ ಓಕೆ ಎಂದಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • `ಅರ್ಜುನ್ ರೆಡ್ಡಿ’ ಚಿತ್ರದ ನಂತರ ಕರಣ್ ಜೋಹರ್ ಚಿತ್ರವನ್ನು ವಿಜಯ್ ತಿರಸ್ಕರಿಸಿದ್ದೇಕೆ?

    `ಅರ್ಜುನ್ ರೆಡ್ಡಿ’ ಚಿತ್ರದ ನಂತರ ಕರಣ್ ಜೋಹರ್ ಚಿತ್ರವನ್ನು ವಿಜಯ್ ತಿರಸ್ಕರಿಸಿದ್ದೇಕೆ?

    ಸ್ಟೈ‌ಲೀಶ್ ಸ್ಟಾರ್ ವಿಜಯ್ ದೇವರಕೊಂಡ `ಲೈಗರ್’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಈ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಸದ್ದು ಮಾಡುತ್ತಿದ್ದಾರೆ. ಈ ಪ್ರಚಾರದ ವೇಳೆ, ಈ ಹಿಂದೆ ಕರಣ್ ಜೋಹರ್ ಚಿತ್ರವನ್ನು ಕೈಬಿಟ್ಟಿದರ ಬಗ್ಗೆ ವಿಜಯ್ ದೇವರಕೊಂಡ ಮಾತನಾಡಿದ್ದಾರೆ.

    vijaydevarakonda

    ಈಗ ಏಲ್ಲೆಲ್ಲೂ `ಲೈಗರ್ ಸಿನಿಮಾ ಪ್ರಚಾರ ಜೋರಾಗಿದೆ ಸೌಂಡ್ ಮಾಡುತ್ತಿದೆ. ವಿಜಯ್ ದೇವರಕೊಂಡ ವೃತ್ತಿ ಜೀವನದ ನಿರೀಕ್ಷಿತ `ಲೈಗರ್’ ಚಿತ್ರ ಟೀಸರ್, ಟ್ರೆöÊಲರ್, ಪೊಸ್ಟರ್ ಲುಕ್‌ನಿಂದ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡುತ್ತಿದೆ. ಇನ್ನು ಈ ಚಿತ್ರದ ಪ್ರಚಾರ ಕಾರ್ಯ ಹೈದರಾಬಾದ್‌ನಲ್ಲಿ ನಡೆಯುತ್ತಿದ್ದು, ಈ ವೇಳೆ ಕರಣ್ ಜೋಹರ್ ಸಿನಿಮಾ ಆಫರ್ ಅನ್ನು ಕೈಬಿಟ್ಟ ವಿಚಾರದ ಬಗ್ಗೆ ವಿಜಯ್ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ:Bigg Boss: ಗರ್ಲ್‌ಫ್ರೆಂಡ್ ವಿಚಾರಕ್ಕೆ ಬಂದ ಸೋನು ಶ್ರೀನಿವಾಸ್ ಗೌಡ ವಿರುದ್ಧ ಕಿಡಿಕಾರಿದ ಜಶ್ವಂತ್

    `ಅರ್ಜುನ್ ರೆಡ್ಡಿ’ ಚಿತ್ರದ ಸಕ್ಸಸ್ ನಂತರ ಕರಣ್ ಜೋಹರ್ ಕಡೆಯಿಂದ ಬಾಲಿವುಡ್ ಸಿನಿಮಾ ಆಫರ್ ಬಂದಿತ್ತು. ಆದರೆ ಆ ಸಮಯದಲ್ಲಿ ನಾನು ಸಿದ್ಧನಾಗಿರಲಿಲ್ಲ. ಈಗ ಪ್ಯಾನ್ ಇಂಡಿಯಾ ಸಿನಿಮಾ ಕಾನ್ಸೆಪ್ಟ್ ಇರುವ ಕಾರಣ ಲೈಗರ್ ಚಿತ್ರ ಒಪ್ಪಿಕೊಂಡೆ ಎಂದು ಮಾತನಾಡಿದ್ದಾರೆ. ಇನ್ನು ಲೈಗರ್ ಚಿತ್ರವು ಸ್ಲಂ ಹುಡುಗರ ಕಥೆಯಾಗಿದ್ದು, ಎಂದೂ ಕಾಣಿಸಿಕೊಂಡಿರದ ಪಾತ್ರದಲ್ಲಿ ವಿಜಯ್ ಮಿಂಚಿದ್ದಾರೆ. ಕರಣ್ ಜೋಹರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಆಗಸ್ಟ್ ೨೫ಕ್ಕೆ ಲೈಗರ್ ಚಿತ್ರ ತೆರೆಗೆ ಅಪ್ಪಳಿಸಲಿದೆ.

    Live Tv
    [brid partner=56869869 player=32851 video=960834 autoplay=true]

  • ಹಾಟ್‌ ಫೋಟೋ ಹರಿಬಿಟ್ಟು ಪಡ್ಡೆ ಹುಡುಗರ ನಿದ್ದೆ ಕದ್ದ `ಅರ್ಜುನ್ ರೆಡ್ಡಿ’ ಚೆಲುವೆ

    ಹಾಟ್‌ ಫೋಟೋ ಹರಿಬಿಟ್ಟು ಪಡ್ಡೆ ಹುಡುಗರ ನಿದ್ದೆ ಕದ್ದ `ಅರ್ಜುನ್ ರೆಡ್ಡಿ’ ಚೆಲುವೆ

    ಟಾಲಿವುಡ್‌ನ `ಅರ್ಜುನ್ ರೆಡ್ಡಿ’ ಚಿತ್ರದ ಮೂಲಕ ಪರಿಚಿತರಾದ ನಟಿ ಶಾಲಿನಿ ಪಾಂಡೆ, ಬಾಲಿವುಡ್‌ಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಇತ್ತೀಚೆಗೆ ರಣ್‌ವೀರ್ ಸಿಂಗ್ ಜೊತೆ ನಟಿಸಿದ ಸಿನಿಮಾ ನೆಲಕಚ್ಚಿದ ಬೆನ್ನಲ್ಲೇ ಮತ್ತೆ ಬೋಲ್ಡ್ ಲುಕ್ಕಿನಲ್ಲಿ ಶಾಲಿನಿ ಪಾಂಡೆ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಫೋಟೋ ಭಾರೀ ವೈರಲ್ ಆಗಿದೆ.

    ವಿಜಯ್ ದೇವರಕೊಂಡಗೆ ನಾಯಕಿಯಾಗುವ ಮೂಲಕ ಬಣ್ಣದ ಲೋಕಕ್ಕೆ ಪರಿಚಿತರಾದ ನಟಿ ಶಾಲಿನಿ ಪಾಂಡೆ, ತಮ್ಮ ಮೊದಲ ಚಿತ್ರದಲ್ಲೇ ಬೋಲ್ಡ್ ದೃಶ್ಯಗಳಲ್ಲಿ ಕಾಣಿಸಿಕೊಂಡು, ಎಲ್ಲರೂ ಹುಬ್ಬೇರುವಂತೆ ಮಾಡಿದ್ರು. ನಂತರ ಸಾಕಷ್ಟು ತೆಲುಗು. ತಮಿಳು ಮತ್ತು ಹಿಂದಿ ಚಿತ್ರಗಳಲ್ಲಿ ಗಮನ ಸೆಳೆದ್ದರು. ಇತ್ತೀಚೆಗೆಷ್ಟೇ ರಣ್‌ವೀರ್ ಸಿಂಗ್‌ಗೆ ನಾಯಕಿಯಾಗಿ ನಟಿಸಿದ್ದ `ಜಯೇಶ್ ಭಾಯ್ ಜೋರ್ದಾರ್’ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಹೀನಾಯ ಸೋಲು ಕಂಡಿತ್ತು. ಆದರೆ ಸೋಲಿಗೆ ಬೇಸರಿಸದೆ ಬೋಲ್ಡ್ ಫೋಟೋಶೂಟ್ ಮೂಲಕ ಬ್ಯೂಟಿ ಕ್ವೀನ್ ಶಾಲಿನಿ ಪಾಂಡೆ ಕಮ್ ಬ್ಯಾಕ್ ಆಗಿದ್ದಾರೆ. ಇದನ್ನೂ ಓದಿ: ಕನ್ನಡ ಚಿತ್ರರಂಗ- ನಟಿಯರ ಬಗ್ಗೆ ತುಚ್ಚವಾಗಿ ಮಾತನಾಡಿದ ತೆಲುಗು ನಿರ್ದೇಶಕ

    ಬಾಲಿವುಡ್‌ನ `ಜಯೇಶ್ ಭಾಯ್ ಜೋರ್ದಾರ್’ ಚಿತ್ರದ ಸೋಲಿನ ನಂತರ `ಮಹಾರಾಜ’ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈಗ ಹಾಟ್ ಹಾಟ್ ಲುಕ್ಕಿನಲ್ಲಿ ಕ್ಯಾಮೆರಾ ಕಣ್ಣಿಗೆ ಪೋಸ್ ಕೊಟ್ಟು ಸೋಷಿಯಲ್ ಮೀಡಿಯಲ್ಲಿ ವೈರಲ್ ಆಗಿದ್ದಾರೆ.