Tag: ಅರ್ಜುನ್ ಸಿಂಗ್

  • 3 ವರ್ಷಗಳ ಬಳಿಕ ಟಿಎಂಸಿ ಪಕ್ಷಕ್ಕೆ ಬಿಜೆಪಿ ಎಂಪಿ ವಾಪಸ್

    3 ವರ್ಷಗಳ ಬಳಿಕ ಟಿಎಂಸಿ ಪಕ್ಷಕ್ಕೆ ಬಿಜೆಪಿ ಎಂಪಿ ವಾಪಸ್

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಮಾಜಿ ಉಪಾಧ್ಯಕ್ಷ, ಬಂಕಾಪುರದ ಸಂಸದ ಅರ್ಜುನ್ ಸಿಂಗ್ ಭಾನುವಾರ ಬಿಜೆಪಿ ತೊರೆದು, ಅಖಿಲ ಭಾರತ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

    ಅರ್ಜುನ್ ಸಿಂಗ್ 2019ರಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಟಿಎಂಸಿ ತೊರೆದು, ಬಿಜೆಪಿ ಸೇರಿದ್ದರು. ಇದೀಗ 3 ವರ್ಷಗಳ ಬಳಿಕ ಮತ್ತೆ ಟಿಎಂಸಿ ಪಕ್ಷಕ್ಕೆ ಮರಳಿದ್ದಾರೆ. ಅವರು ಇಂದು ಮಧ್ಯಾಹ್ನ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದರು. ಇದನ್ನೂ ಓದಿ: ಕುತುಬ್ ಮಿನಾರ್ ವಿವಾದ – ಸದ್ಯಕ್ಕಿಲ್ಲ ಉತ್ಖನನ

    ಟಿಎಂಸಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ತಿಳಿಸಿದ್ದು, ಪಶ್ಚಿಮ ಬಂಗಾಳ ಬಿಜೆಪಿಯ ಮಾಜಿ ಉಪಾಧ್ಯಕ್ಷ ಹಾಗೂ ಬಂಕಾಪುರದ ಸಂಸದ ಅರ್ಜುನ್ ಸಿಂಗ್ ಅವರನ್ನು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಆತ್ಮೀಯವಾಗಿ ಸ್ವಾಗತಿಸುತ್ತಿದೆ. ಅವರು ಇಂದು ನಮ್ಮ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿ ಸೇರಿದ್ದಾರೆ ಎಂದು ಬರೆಯಲಾಗಿದೆ. ಇದನ್ನೂ ಓದಿ: ಸಾವಿರ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಡೇಟಾ ಸಾಕ್ಷರತೆಗೆ ಐಒಎ ಆಸಕ್ತಿ: ಅಶ್ವಥ್ ನಾರಾಯಣ್

    ಕಳೆದ ವರ್ಷ ಸಪ್ಟೆಂಬರ್‌ನಲ್ಲಿ ಬಾಬುಲ್ ಸುಪ್ರಿಯೋ ಬಿಜೆಪಿಯಿಂದ ಟಿಎಂಸಿಗೆ ಸೇರ್ಪಡೆಗೊಂಡಿದ್ದರು. ಇದೀಗ ಅರ್ಜುನ್ ಸಿಂಗ್ ಬಿಜೆಪಿ ತೊರೆದಿದ್ದು, ಪಶ್ಚಿಮ ಬಂಗಾಳದ ಬಿಜೆಪಿ ಸಂಸದರ ಸಂಖ್ಯೆ 18ರಿಂದ 16ಕ್ಕೆ ಇಳಿದಿದೆ.

    ಅರ್ಜುನ್ ಸಿಂಗ್ ಇತ್ತೀಚೆಗೆ ಬಿಜೆಪಿ ಪಕ್ಷದಲ್ಲಿ ಹಿರಿಯ ಸ್ಥಾನವನ್ನು ಪಡೆದಿದ್ದರೂ ಸರಿಯಾಗಿ ಕೆಲಸ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

  • ದೀದಿ ಹಿರಣ್ಯ ಕಶಿಪು ವಂಶಸ್ಥೆ: ಸಾಕ್ಷಿ ಮಹಾರಾಜ್

    ದೀದಿ ಹಿರಣ್ಯ ಕಶಿಪು ವಂಶಸ್ಥೆ: ಸಾಕ್ಷಿ ಮಹಾರಾಜ್

    ನವದೆಹಲಿ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಹಿರಣ್ಯ ಕಶಿಪು ವಂಶಸ್ಥೆ ಎಂದು ಉನ್ನಾವೋ ಸಂಸದ ಸಾಕ್ಷಿ ಮಹಾರಾಜ್ ಹೇಳಿದ್ದಾರೆ.

    ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಸಂಸದ ಸಾಕ್ಷಿ ಮಹಾರಾಜ್, ಈ ಹಿಂದೆ ಹಿರಣ್ಯ ಕಶಿಪು ಎಂಬ ರಾಕ್ಷಸನಿದ್ದ. ಜೈ ಶ್ರೀರಾಮ್ ಎಂದು ಜಪಿಸುತ್ತಿದ್ದ ಪುತ್ರನನ್ನು ಜೈಲಿನಲ್ಲಿ ಇರಿಸಿದ್ದ. ಇಂದು ಪಶ್ಚಿಮ ಬಂಗಾಳದಲ್ಲಿ ಜೈ ಶ್ರೀರಾಮ್ ಎಂದು ಹೇಳುವವರನ್ನು ಜೈಲಿಗೆ ಕಳುಹಿಸಲಾಗುತ್ತಿದೆ. ಮಮತಾ ಬ್ಯಾನರ್ಜಿ ಅವರು ಹಿರಣ್ಯ ಕಶಿಪುವಿನ ವಂಶಸ್ಥರು ಇರಬಹುದು ಎನ್ನುವುದು ನನ್ನ ಅನಿಸಿಕೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಕೆಲವು ದಿನಗಳ ಸಿಎಂ ಮಮತಾ ಬ್ಯಾನರ್ಜಿ ಮಾರ್ಗ ಮಧ್ಯೆ ಕೆಲ ಯುವಕರು ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದರು. ಈ ವೇಳೆ ಕಾರಿನಿಂದ ಹೊರ ಬಂದ ಸಿಎಂ, ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

    ತೃಣಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಶಾಸಕ ಅರ್ಜುನ್ ಸಿಂಗ್, ಟಿಎಂಸಿಯ ಸಭೆಯ ವೇಳೆ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಈ ಘಟನೆ ಖಂಡಿಸಿ ದೀದಿ ನಿವಾಸಕ್ಕೆ ಜೈ ಶ್ರೀರಾಮ್ ಎಂದು ಬರೆದಿರುವ 10 ಲಕ್ಷ ಅಂಚೆ ಕಾರ್ಡುಗಳನ್ನು ಬಿಜೆಪಿ ನಾಯಕರು ಕಳುಹಿಸಲಿದ್ದೇನೆ ಎಂದು ಹೇಳಿದ್ದಾರೆ.

    ಹಿರಣ್ಯ ಕಶಿಪು ಯಾರು?
    ವಿಷ್ಣು ಪುರಾಣದಲ್ಲಿ ಬರುವ ಹಿರಣ್ಯ ಕಶಿಪು ಹಿರಣ್ಯಾಕ್ಷನ ಅಣ್ಣ. ಪ್ರಹ್ಲಾದನ ತಂದೆ, ಕಯಾದುವಿ ಪತಿ. ತಪಸ್ಸು ಮಾಡಿದ್ದ ಈತ ಅಮರತ್ವ ವರವನ್ನು ಕೊಡುವಂತೆ ಬ್ರಹ್ಮನಲ್ಲಿ ಕೇಳಿದ್ದ. ಅಮರತ್ವದ ವರ ನೀಡಲು ಸಾಧ್ಯವಿಲ್ಲ ಎಂದು ಬ್ರಹ್ಮ ಹೇಳಿದ್ದಕ್ಕೆ, ನನಗೆ ಮನುಷ್ಯನಿಂದ, ಪ್ರಾಣಿಗಳಿಂದ, ದೇವತೆಗಳಿಂದ, ಭೂ, ಜಲ, ವಾಯು ಮತ್ತು ಯಾವುದೇ ಆಯುಧಗಳಿಂದಲೂ ಮರಣ ಸಂಭವಿಸದೇ ಇರುವ ವರವನ್ನು ಕೇಳಿ ಪಡೆದುಕೊಂಡಿದ್ದ. ಕೊನೆಗೆ ವಿಷ್ಣು ಅರ್ಧ ಮಾನವ ಅರ್ಧ ಸಿಂಹ ಹೀಗೆ ನರಸಿಂಹ ಅವತಾರದಲ್ಲಿ ಬಂದು ಶಿವನ ಆರಾಧಕನಾಗಿದ್ದ ಹಿರಣ್ಯ ಕಶಿಪುವನ್ನು ಸಂಹಾರ ಮಾಡಿದ್ದ.

  • ದೀದಿಗೆ 10 ಲಕ್ಷ ‘ಜೈ ಶ್ರೀರಾಮ್’ ಕಾರ್ಡ್

    ದೀದಿಗೆ 10 ಲಕ್ಷ ‘ಜೈ ಶ್ರೀರಾಮ್’ ಕಾರ್ಡ್

    ಕೋಲ್ಕತ್ತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಜೈ ಶ್ರೀರಾಮ್ ಎಂದು ಬರೆದಿರುವ 10 ಲಕ್ಷ ಪೋಸ್ಟ್ ಕಾರ್ಡುಗಳನ್ನು ಕಳುಹಿಸಲಾಗುವುದು ಎಂದು ಬಿಜೆಪಿ ನಾಯಕ ಅರ್ಜುನ್ ಸಿಂಗ್ ದೀದಿಗೆ ತಿರುಗೇಟು ನೀಡಿದ್ದಾರೆ.

    ತೃಣಮೂಲ ಕಾಂಗ್ರೆಸ್ಸಿನ ಶಾಸಕರಾಗಿದ್ದ ಅರ್ಜುನ್ ಸಿಂಗ್ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಸೇರ್ಪಡೆಯಾಗಿದ್ದರು. ಕೋಲ್ಕತ್ತಾದಲ್ಲಿ ಕೆಲ ದಿನಗಳ ಹಿಂದೆ ಟಿಎಂಸಿಯ ಸಭೆಯ ವೇಳೆ `ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಈ ಘಟನೆ ಖಂಡಿಸಿ ದೀದಿ ನಿವಾಸಕ್ಕೆ ಜೈ ಶ್ರೀರಾಮ್ ಎಂದು ಬರೆದಿರುವ 10 ಲಕ್ಷ ಅಂಚೆ ಕಾರ್ಡುಗಳನ್ನು ಬಿಜೆಪಿ ನಾಯಕರು ಕಳುಹಿಸಲಿದ್ದಾರೆ ಎನ್ನಲಾಗಿದೆ.

    ಅರ್ಜುನ್ ಸಿಂಗ್ ಹಾಗೂ ಬಿಜೆಪಿ ಮುಖಂಡ ಮುಕುಲ್ ರಾಯ್ ಮಗ ಸುಬ್ರಂಗ್ಶು ರಾಯ್ ಟಿಎಂಸಿ ತೊರೆದು ಬಿಜೆಪಿಗೆ ಸೇರಿದ ಬಳಿಕ ಈ ಪ್ರದೇಶದಲ್ಲಿ ತುಂಬಾ ತೊಂದರೆ ನೀಡುತ್ತಿದ್ದಾರೆ ಎಂದು ಟಿಎಂಸಿ ಮುಖಂಡ ಜ್ಯೋತಿಪ್ರಿಯಾ ಮಲಿಕ್ ಆರೋಪಿಸಿದ್ದಾರೆ. ಮಲ್ಲಿಕ್ ಮತ್ತಿತರು ಸಭೆ ನಡೆಸುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದಾಗ ಪರಿಸ್ಥಿತಿ ಕೈ ಮೀರಿದ್ದು, ಪೊಲೀಸರು ಲಾಠಿ ಚಾರ್ಚ್ ನಡೆಸಿರುವುದಾಗಿ ತಿಳಿದುಬಂದಿದೆ.

    ಬಂಗಾಳದಲ್ಲಿ ಇಂತಹ ಸಂಸ್ಕೃತಿಯನ್ನು ನೋಡಿರಲಿಲ್ಲ, ಇದು ಬಿಜೆಪಿಯ ಸಂಸ್ಕೃತಿಯಾಗಿದೆ ಎಂದು ಮಲಿಕ್ ಹೇಳಿದ್ದು, ಪ್ರತಿಭಟನಾಕಾರರು ತಮ್ಮ ಕಾರಿನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ಮಲಿಕ್ ಆರೋಪಿಸಿದರು.